Raja Singh | ರಾಜಾ ಸಿಂಗ್‌ ರುಂಡ ಚೆಂಡಾಡಿ ಎಂಬ ಘೋಷಣೆಗೆ ಎಐಎಂಐಎಂ ಖಂಡನೆ - Vistara News

ದೇಶ

Raja Singh | ರಾಜಾ ಸಿಂಗ್‌ ರುಂಡ ಚೆಂಡಾಡಿ ಎಂಬ ಘೋಷಣೆಗೆ ಎಐಎಂಐಎಂ ಖಂಡನೆ

ಪ್ರವಾದಿ ಮೊಹಮ್ಮದ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿರುವ ಬಿಜೆಪಿ ಶಾಸಕ ರಾಜಾ ಸಿಂಗ್‌‌ (Raja Singh) ಅವರ ರುಂಡ ಚೆಂಡಾಡಿ ಎಂದು ಪ್ರತಿಭಟನೆ ವೇಳೆ ಘೋಷಣೆ ಕೂಗಿರುವುದನ್ನು ಎಐಎಂಐಎಂ ಖಂಡಿಸಿದೆ.

VISTARANEWS.COM


on

Raja Singh
ರಾಜಾ ಸಿಂಗ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: ಪ್ರವಾದಿ ಮೊಹಮ್ಮದ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿರುವ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್‌ ಅವರ ರುಂಡ ಚೆಂಡಾಡಿ ಎಂದು ಪ್ರತಿಭಟನೆ ವೇಳೆ ಘೋಷಣೆ ಕೂಗಿರುವುದನ್ನು ಎಐಎಂಐಎಂ ಖಂಡಿಸಿದೆ. ನೂಪುರ್‌ ಶರ್ಮಾ ಬಳಿಕ ಪ್ರವಾದಿ ಕುರಿತು ರಾಜಾ ಸಿಂಗ್‌ (Raja Singh) ಹೇಳಿಕೆ ನೀಡಿದ ಕಾರಣ ಹೈದರಾಬಾದ್‌ನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಹಲವೆಡೆ ಹೆಚ್ಚುವರಿಯಾಗಿ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಳೆದ ಸೋಮವಾರ ದಕ್ಷಿಣ ವಲಯದ ಡಿಸಿಪಿ ಕಚೇರಿ ಎದುರು ಪ್ರತಿಭಟನೆ ನಡೆಸುವ ವೇಳೆ ರುಂಡ ಚೆಂಡಾಡಿ (ಸರ್‌ ತರ್‌ ಸೆ ಜುಡಾ) ಘೋಷಣೆ ಕೂಗಲಾಗಿತ್ತು.

ಅದರಲ್ಲೂ, ಎಐಎಂಐಎಂ ಐಟಿ ಸೆಲ್‌ನ ಮಾಜಿ ಮುಖ್ಯಸ್ಥ ಸೈಯದ್‌ ಅಬ್ದಾಹು ಕಶಫ್‌ ಅವರೇ ಘೋಷಣೆ ಕೂಗಿದ ಕಾರಣ ರಾಜಾ ಸಿಂಗ್‌ ಬೆಂಬಲಿಗರಿಂದಲೂ ಆಕ್ರೋಶ ವ್ಯಕ್ತವಾಗಿದೆ. ಹಾಗಾಗಿ, ರುಂಡ ಚೆಂಡಾಡಿ ಎಂಬ ಘೋಷಣೆ ಕೂಗಿದ್ದನ್ನು ಎಐಎಂಐಎಂ ಕಾರ್ಪೊರೇಟರ್‌ ಮುಸ್ತಫಾ ಅಲಿ ಮುಜಾಫರ್‌ ಖಂಡಿಸಿದ್ದಾರೆ.

ಕಳೆದ ಎರಡು ದಿನಗಳಿಂದ ರಾಜಾ ಸಿಂಗ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈದರಾಬಾದ್‌ನಲ್ಲಿ ಹೆಚ್ಚಿನ ಒತ್ತಾಯ ಕೇಳಿಬರುತ್ತಿದೆ. ಅದರಲ್ಲೂ, ರಾಜಾ ಸಿಂಗ್‌ ಅವರನ್ನು ಬಂಧಿಸಿದ ದಿನವೇ ಅವರಿಗೆ ಜಾಮೀನು ಸಿಕ್ಕಿರುವುದನ್ನು ಸಾವಿರಾರು ಜನ ಖಂಡಿಸಿದ್ದಾರೆ. ಹಾಗಾಗಿ, ಬುಧವಾರವೂ ಪ್ರತಿಭಟನೆ ಮುಂದುವರಿದಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ | ವಿವಾದಗಳ ರಾಜ; ಬಿಜೆಪಿಯಿಂದ ಅಮಾನತುಗೊಂಡ ರಾಜಾ ಸಿಂಗ್ ವಿರುದ್ಧ ಇವೆ 72 ಕೇಸ್​​ಗಳು !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Terror attack: ಮಗುವಿಗಾಗಿ ಪ್ರಾರ್ಥಿಸಲು ಹೋಗಿದ್ದ ದಂಪತಿ; ಪತ್ನಿ ಎದುರೇ ಉಗ್ರರ ಗುಂಡಿಗೆ ಬಲಿಯಾದ ಪತಿ

Terror attack: ಸೌರವ್ ಗುಪ್ತಾ (21 ವರ್ಷ) ಉಗ್ರರ ಗುಂಡಿಗೆ ಬಲಿಯಾದವರಲ್ಲಿ ಒಬ್ಬರು. ಸೌರವ್ ಕಿಟಕಿಯ ಸೀಟಿನಲ್ಲಿ ಚಾಲಕನ ಹಿಂದೆಯೇ ಕುಳಿತಿದ್ದ. ಗುಂಡಿನ ಸದ್ದು ಕೇಳಿ ಹಾರಿಸಿದರೂ ಹೆದರದ ಸೌರವ್ ದಾಳಿಯ ಬಗ್ಗೆ ಇತರರಿಗೆ ತಿಳಿಸಲು ಎದ್ದು ನಿಂತಾಗ ಆತನ ಕತ್ತಿನ ಭಾಗಕ್ಕೆ ಗುಂಡು ಬಿದ್ದಿತ್ತು. ಆಗ ಅವರು ಜೀವ ತೆತ್ತಿದ್ದರು. ಗಂಡ ಕಣ್ಣೆದುರೇ ಬಲಿಯಾಗಿದ್ದನ್ನು ಕಂಡು ಪತ್ನಿ ಆಘಾತಗೊಂಡಿದ್ದರು.

VISTARANEWS.COM


on

Terror attack
Koo

ದೆಹಲಿ: ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾಕರು ಭಾನುವಾರ ಗುಂಡಿನ ದಾಳಿ ನಡೆಸಿದ ಘಟನೆಗೆ ಸಂಬಂಧಿಸಿ ಮತ್ತಷ್ಟು ಹೃದಯಸ್ಪರ್ಶಿ ಕತೆಗಳು ಹೊರ ಬರುತ್ತಿವೆ. ಉಗ್ರರು ಗುಂಡಿನ ದಾಳಿ ನಡೆಸಿದ ಬಳಿಕ ಬಸ್‌ ಕಮರಿಗೆ ಉರುಳಿತ್ತು. ಗುಂಡೇಟು ಮತ್ತು ಅಪಘಾತದಿಂದಾಗಿ 9 ಮಂದಿ ಹಿಂದೂ ಪ್ರಯಾಣಿಕರು ಬಲಿಯಾಗಿದ್ದರು.

ಸೌರವ್ ಗುಪ್ತಾ (21 ವರ್ಷ) ಉಗ್ರರ ಗುಂಡಿಗೆ ಬಲಿಯಾದವರಲ್ಲಿ ಒಬ್ಬರು. ಸೌರವ್ ಕಿಟಕಿಯ ಸೀಟಿನಲ್ಲಿ ಚಾಲಕನ ಹಿಂದೆಯೇ ಕುಳಿತಿದ್ದ. ಗುಂಡಿನ ಸದ್ದು ಕೇಳಿ ಹಾರಿಸಿದರೂ ಹೆದರದ ಸೌರವ್ ದಾಳಿಯ ಬಗ್ಗೆ ಇತರರಿಗೆ ತಿಳಿಸಲು ಎದ್ದು ನಿಂತಾಗ ಆತನ ಕತ್ತಿನ ಭಾಗಕ್ಕೆ ಗುಂಡು ಬಿದ್ದಿತ್ತು. ಆಗ ಅವರು ಜೀವ ತೆತ್ತಿದ್ದರು. ಗಂಡ ಕಣ್ಣೆದುರೇ ಬಲಿಯಾಗಿದ್ದನ್ನು ಕಂಡು ಪತ್ನಿ ಆಘಾತಗೊಂಡಿದ್ದರು.

ಸೌರವ್ ಗುಪ್ತಾ ಅವರು ಪತ್ನಿ ಶಿವಾನಿ ಗುಪ್ತಾ ಜೊತೆ ವೈಷ್ಣೋದೇವಿ ದೇಗುಲ ತೀರ್ಥಯಾತ್ರೆಗಾಗಿ ಜಮ್ಮುವಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಈ ದಾಳಿಯಲ್ಲಿ ಸೌರವ್ ಪತ್ನಿ ಸುರಕ್ಷಿತವಾಗಿ ಪಾರಾಗಿದ್ದಾಳೆ. ಆದರೆ ಬಸ್ಸು ಕಮರಿಗೆ ಬಿದ್ದ ಕಾರಣ ಶಿವಾನಿ ಗುಪ್ತಾ ಅವರ ಕಾಲುಗಳು ಮತ್ತು ಮುಖಕ್ಕೆ ಗಂಭೀರವಾದ ಪೆಟ್ಟಾಗಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ಶಿವಾನಿ ಕಣ್ಮುಂದೆಯೇ ಪತಿ ಗುಂಡಿಗೆ ಬಲಿಯಾಗಿದ್ದಾರೆ. ಆಕೆ, ಪತಿ ಪ್ರಾಣ ಬಿಡುವುದನ್ನು ತನ್ನ ಕಣ್ಣುಗಳಿಂದ ನೋಡಿ ಶಾಕ್ ಆಗಿದ್ದಾಳೆ. ಈ ದಂಪತಿಗೆ ಮದುವೆಯಾಗಿ 2 ವರ್ಷಗಳಾಗಿವೆಯಂತೆ. ಆದರೂ ಇನ್ನೂ ಮಕ್ಕಳಾಗದ ಕಾರಣ ಮಗುವಿಗಾಗಿ ಪ್ರಾರ್ಥನೆ ಸಲ್ಲಿಸಲು ದೇಗುಲಕ್ಕೆ ಭೇಟಿ ನೀಡಲು ಬಂದಿದ್ದರು ಎಂಬುದಾಗಿ ತಿಳಿದುಬಂದಿದೆ.

ಸೌರವ್ 3 ವರ್ಷದ ಮಗುವಿದ್ದಾಗ ತನ್ನ ತಾಯಿಯನ್ನು ಕಳೆದುಕೊಂಡಿದ್ದಾನೆ. ಈಗ ಆತ ತನ್ನ ಹೆಂಡತಿ ಹಾಗೂ ಕಾಲೇಜಿನಲ್ಲಿ ಓದುತ್ತಿರುವ ಸಹೋದರ ಮತ್ತು ತಂದೆಯನ್ನು ಅಗಲಿದ್ದಾನೆ. ಸೌರವ್ ಮತ್ತು ಆತನ ತಂದೆ ರಫ್ತು ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು ಎಂಬುದಾಗಿ ತಿಳಿದುಬಂದಿದೆ. ಸೌರವ್ ದೇಹವನ್ನು ಅವರ ತಂದೆ ಕುಲದೀಪ್ ಗುಪ್ತಾ ಮತ್ತು ಇತರ ಕುಟುಂಬ ಸದಸ್ಯರು ದೆಹಲಿಗೆ ಸಾಗಿಸಿ, ಈಶಾನ್ಯ ದೆಹಲಿಯ ಮಂಡೋಲಿಯಲ್ಲಿರುವ ಮನೆಯ ಬಳಿ ಮಂಗಳವಾರ ಅಂತ್ಯಕ್ರಿಯೆ ನಡೆಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: Fraud case: ಡಾಕ್ಟರ್ ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳಲು ಹೋಗಿ ಬ್ಯಾಂಕ್ ಖಾತೆಯಿಂದ ಹಣ ಕಳೆದುಕೊಂಡ ನಟ!

ಈ ದಾಳಿಯಲ್ಲಿ ಒಟ್ಟು ಒಂಬತ್ತು ಜನರು ಸಾವನಪ್ಪಿದ್ದು, 42 ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯ ಹಿಂದೆ ಭಯೋತ್ಪಾದಕರ ಗುಂಪು ಲಷ್ಕರ್-ಎ-ತೊಯ್ಬಾ ಕೈವಾಡವಿದೆ ಎಂದು ನಂಬಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ. ದಾಳಿಯ ಬಗ್ಗೆ ತನಿಖೆ ನಡೆಸಲು ಪೊಲೀಸರು 11 ತಂಡಗಳನ್ನು ರಚಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಆರು ಜನರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

Continue Reading

ವಿದೇಶ

Kuwait Fire: ಕುವೈತ್‌ನಲ್ಲಿ ಭೀಕರ ಅಗ್ನಿ ದುರಂತಕ್ಕೆ 41 ಭಾರತೀಯರ ಬಲಿ; ದಕ್ಷಿಣ ಭಾರತದವರೇ ಹೆಚ್ಚು!

Kuwait Fire: ಕುವೈತ್ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಗಂಭೀರ ಸ್ಥಿತಿಯಲ್ಲಿರುವ ಕೆಲವರು ಸೇರಿದಂತೆ ಗಾಯಗೊಂಡ ಎಲ್ಲರನ್ನು ಅಗತ್ಯ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಹಲವಾರು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಕಟ್ಟಡದ ಬೆಂಕಿಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಆರೈಕೆ ಒದಗಿಸಲು ವೈದ್ಯಕೀಯ ತಂಡಗಳು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿವೆ ಎಂದು ಸಚಿವಾಲಯ ತಿಳಿಸಿದೆ.

VISTARANEWS.COM


on

Kuwait Fire
Koo

ಕುವೈತ್‌ ಸಿಟಿ: ಕುವೈತ್‌ನ ಮಂಗಾಫ್ ನಗರದಲ್ಲಿರುವ ಆರು ಮಹಡಿಯ ಬೃಹತ್‌ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ (Kuwait Fire) ಮೃತಪಟ್ಟ ಎಲ್ಲ 41 ಮಂದಿಯೂ ಭಾರತೀಯರೇ ಎಂಬ ಮಾಹಿತಿ ಲಭ್ಯವಾಗಿದೆ. ಆರು ಮಹಡಿಯ ಕಟ್ಟಡದ ಅಡುಗೆ ಮನೆಯಲ್ಲಿ ಬೆಂಕಿ (Fire Accident In Kuwait) ಹೊತ್ತಿಕೊಂಡಿದ್ದು, ಬಳಿಕ ಇಡೀ ಕಟ್ಟಡಕ್ಕೆ ಆವರಿಸಿದೆ. ಇದರಿಂದಾಗಿ 41 ಭಾರತೀಯರು (Indians) ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ದುರ್ಘಟನೆ ಸಂಭವಿಸುತ್ತಲೇ ಕುವೈತ್‌ ಪ್ರಧಾನಿ ಶೇಖ್‌ ಫಹಾದ್‌ ಯುಸುಫ್‌ ಸೌದ್‌ ಅಲ್‌-ಸಬಾಹ್‌ ಭೇಟಿ ನೀಡಿದ್ದು, ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ದುರಂತ ಸಂಭವಿಸಿದ ಕೆಲವೇ ನಿಮಿಷಗಳಲ್ಲಿ ಕುವೈತ್‌ನಲ್ಲಿ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. ಸುಮಾರು 11 ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಅಷ್ಟೇ ಅಲ್ಲ, ಅಗತ್ಯ ನೆರವು ನೀಡಲು ಕೂಡ ಕ್ರಮ ತೆಗೆದುಕೊಂಡಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್‌ ಅವರು ಕೂಡ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರ ಎಂದು ತಿಳಿದುಬಂದಿದೆ.

ವರದಿಯ ಪ್ರಕಾರ, ಬುಧವಾರ ಮುಂಜಾನೆ 4.30ಕ್ಕೆ ಕಾರ್ಮಿಕ ಶಿಬಿರದ ಅಡುಗೆಮನೆಯಲ್ಲಿ ಬೆಂಕಿ ಪ್ರಾರಂಭಗೊಂಡಿತ್ತು. ಬೆಂಕಿಯನ್ನು ನೋಡಿದ ನಂತರ ಕೆಲವರು ಅಪಾರ್ಟ್​ಮೆಂಟ್​ನಿಂದ ಜಿಗಿದು ಮೃತಪಟ್ಟಿದ್ದರೆ ಇತರರು ಸುಟ್ಟಗಾಯಗಳು ಮತ್ತು ಹೊಗೆ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮತಪಟ್ಟವರಲ್ಲಿ ಹೆಚ್ಚಿನವರು ಕೇರಳ ಹಾಗೂ ತಮಿಳುನಾಡಿನವರಾದರೆ, ಉಳಿದವರು ಉತ್ತರ ಭಾರತದವರಾಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಸಂತಾಪ ಸೂಚಿಸಿದ ಜೈಶಂಕರ್‌

ಕುವೈತ್‌ನಲ್ಲಿ ಸಂಭವಿಸಿದ ಅಗ್ನಿದುರಂತದಲ್ಲಿ ಭಾರತೀಯರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಅವರು ಸಂತಾಪ ಸೂಚಿಸಿದ್ದಾರೆ. “ಅಗ್ನಿದುರಂತದ ಸುದ್ದಿ ತಿಳಿದು ಶಾಕ್‌ ಆಯಿತು. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಶಿಬಿರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಜೈಶಂಕರ್‌ ಪೋಸ್ಟ್‌ ಮಾಡಿದ್ದಾರೆ.

ಭಾರತೀಯ ಉದ್ಯಮಿಯ ಒಡೆತನದ ಕಟ್ಟಡ: ವರದಿ

ಒನ್​ಮನೋರಮಾ ವರದಿಯ ಪ್ರಕಾರ, ಹತ್ತಿರದ ವಾಣಿಜ್ಯ ಪ್ರದೇಶದ ಸುಮಾರು 195 ಕಾರ್ಮಿಕರು ಮತ್ತು ಹಲವಾರು ಮಲಯಾಳಿಗಳನ್ನು ವಾಸಿಸುತ್ತಿದ್ದ ಈ ಈ ಕಟ್ಟಡವು ಎನ್​ಬಿಟಿಸಿ ಗ್ರೂಪ್ ಗೆ ಸೇರಿದ್ದು. ಕೇರಳದ ಉದ್ಯಮಿ ಕೆಜಿ ಅಬ್ರಹಾಂ ಅವರ ಒಡೆತನದಲ್ಲಿರುವ ಈ ಕಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲಾಗಿದ್ದರೂ, ಇನ್ನೂ ಹಲವಾರು ಮಂದಿ ಒಳಗೆ ಸಿಲುಕಿರುವ ವರದಿಗಳಿವೆ.

ಇದನ್ನೂ ಓದಿ: Firecracker Explosion: ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

Continue Reading

ದೇಶ

Rahul Gandhi: ನನ್ನ ಮೇಲೆ ಮೋದಿಗಿರುವಷ್ಟು ದೇವರ ಕೃಪೆ ಇಲ್ಲ ಎಂದ ರಾಹುಲ್‌ ಗಾಂಧಿ; ಏಕಿಂಥ ಮಾತು?

Rahul Gandhi: ವಯನಾಡು ಸಂಸದನಾಗಿಯೇ ಮುಂದುವರಿಯಬೇಕೋ ಅಥವಾ ತಾಯಿ ಸೋನಿಯಾ ಗಾಂಧಿ ಕ್ಷೇತ್ರವಾಗಿದ್ದ ರಾಯ್‌ಬರೇಲಿ ಸಂಸದನಾಗಿ ಪ್ರಮಾಣವಚನ ಸ್ವೀಕರಿಸಬೇಕೋ ಎಂಬ ಪ್ರಶ್ನೆ ನನ್ನ ಮುಂದಿವೆ. ಆದರೆ, ಇದನ್ನು ಜನರೇ ತೀರ್ಮಾನ ಮಾಡಲಿದ್ದಾರೆ. ಏಕೆಂದರೆ, ನಾನು ನರೇಂದ್ರ ಮೋದಿ ಅವರಷ್ಟು ದೈವಾಂಶ ಸಂಭೂತನಲ್ಲ ಎಂಬುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ.

VISTARANEWS.COM


on

Rahul Gandhi
Koo

ತಿರುವನಂತಪುರಂ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಸ್ಪರ್ಧಿಸಿದ ವಯನಾಡು ಹಾಗೂ ರಾಯ್‌ಬರೇಲಿ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರೀಗ ಉಭಯ ಸಂಕಟಕ್ಕೆ ಸಿಲುಕಿದ್ದಾರೆ. ವಯನಾಡು ಸಂಸದನಾಗಿಯೇ ಮುಂದುವರಿಯಬೇಕೋ ಅಥವಾ ತಾಯಿ ಸೋನಿಯಾ ಗಾಂಧಿ ಕ್ಷೇತ್ರವಾಗಿದ್ದ ರಾಯ್‌ಬರೇಲಿ ಸಂಸದನಾಗಿ ಪ್ರಮಾಣವಚನ ಸ್ವೀಕರಿಸಬೇಕೋ ಎಂಬ ಗೊಂದಲ ಕಾಡುತ್ತಿದೆ. ಇದರ ಬಗ್ಗೆಯೇ ಕೇರಳದಲ್ಲಿ ಮಾತನಾಡಿದ ಅವರು, “ನರೇಂದ್ರ ಮೋದಿ ಅವರಂತೆ ನಾನು ದೈವಾಂಶ ಸಂಭೂತನಲ್ಲ. ನನಗೆ ಜನರೇ ದೇವರು, ಅವರೇ ತೀರ್ಮಾನಿಸುತ್ತಾರೆ” ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

“ನನ್ನ ಮುಂದೆ ಎರಡು ಆಯ್ಕೆಗಳಿವೆ. ನಾನು ವಯನಾಡು ಸಂಸದನಾಗಿ ಮುಂದುವರಿಯಬೇಕೋ, ರಾಯ್‌ಬರೇಲಿ ಸಂಸದನಾಗಬೇಕೋ ಎಂಬ ಪ್ರಶ್ನೆ ಇದೆ. ಆದರೆ, ಪ್ರಧಾನಿಯವರಂತೆ ನನಗೆ ದೇವರು ಮಾರ್ಗದರ್ಶನ ನೀಡುವುದಿಲ್ಲ. ನಾನೊಬ್ಬ ಸಾಮಾನ್ಯ ಮನುಷ್ಯನಾಗಿದ್ದು, ದೇಶದ ಬಡವರೇ ನನಗೆ ದೇವರಾಗಿದ್ದಾರೆ. ನಾನು ಯಾವ ಕ್ಷೇತ್ರದ ಸಂಸದನಾಗಿ ಮುಂದುವರಿಯಬೇಕೋ ಎಂಬುದನ್ನು ದೇಶದ ಜನರೇ ತೀರ್ಮಾನಿಸುತ್ತಾರೆ” ಎಂಬುದಾಗಿ ಕೇರಳದ ಮಲಪ್ಪುರಂನಲ್ಲಿ ರಾಹುಲ್‌ ಗಾಂಧಿ ಹೇಳಿದರು.

“400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದರು. ಇದಾದ ಬಳಿಕ ಮಾಯವಾದ ಅವರು 300ಕ್ಕೂ ಅಧಿಕ ಕ್ಷೇತ್ರ ಅಂದರು. ಇದಾದ ನಂತರ, ನಾನೇನೂ ತೀರ್ಮಾನ ತೆಗೆದುಕೊಳ್ಳುವುದಿಲ್ಲ. ಎಲ್ಲ ತೀರ್ಮಾನಗಳೂ ದೇವರದ್ದೇ ಎಂದರು. ಆದರೆ, ನರೇಂದ್ರ ಮೋದಿ ಅವರಿಗೆ ಪರಮಾತ್ಮನೇ ಮುಂಬೈ ಏರ್‌ಪೋರ್ಟ್‌ ಬಿಟ್ಟುಕೊಡು, ಲಖನೌ ಏರ್‌ಪೋರ್ಟ್‌ ಬಿಟ್ಟುಕೊಡು, ಅಂಬಾನಿ ಹಾಗೂ ಅದಾನಿ ಅವರ ಪರವಾಗಿ ಕೆಲಸ ಮಾಡು ಎಂಬುದಾಗಿ ಸೂಚಿಸುತ್ತಿದ್ದಾನೆ” ಎಂದು ಕುಟುಕಿದರು.

ದೇವರ ಬಗ್ಗೆ ಮೋದಿ ಹೇಳಿದ್ದೇನು?

“ನನ್ನ ತಾಯಿ ಇರುವವರೆಗೆ ನನ್ನ ಭಾವನೆ ಬೇರೆಯೇ ಆಗಿತ್ತು. ಆದರೆ, ನನ್ನ ತಾಯಿ ಅಗಲಿದ ಮೇಲೆ ನನಗೆ ಹಲವು ವಿಚಿತ್ರ ಅನುಭವಗಳು ಆದವು. ನಾನು ಇಷ್ಟೊಂದು ಕೆಲಸ ಮಾಡಲಿ ಎಂಬುದಾಗಿ ದೇವರೇ ಕಳುಹಿಸಿದ್ದಾನೆ ಎಂದು ನನಗೆ ಅನಿಸುತ್ತದೆ. ಇದರಿಂದಾಗಿಯೇ ನಾನು ಹೆಚ್ಚು ಕೆಲಸ ಮಾಡಲು, ನಿಮ್ಮ ಸೇವೆ ಮಾಡಲು, ನಿಷ್ಕಲ್ಮಶವಾಗಿ ದುಡಿಯಲು ಸಾಧ್ಯವಾಗಿದೆ” ಎಂಬುದಾಗಿ ಚುನಾವಣೆ ಪ್ರಚಾರದ ವೇಳೆ ನರೇಂದ್ರ ಮೋದಿ ಅವರು ಹೇಳಿದ್ದರು.

ಇದನ್ನೂ ಓದಿ: Priyanka Gandhi : ವಾರಾಣಸಿಯಲ್ಲಿ ಪ್ರಿಯಾಂಕ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು; ರಾಹುಲ್​ ಗಾಂಧಿ

Continue Reading

ದೇಶ

Narendra Modi: ಜೂನ್‌ 21ರ ಯೋಗ ದಿನದಂದು ವಿಶೇಷ ಸ್ಥಳದಲ್ಲಿ ಮೋದಿ ಯೋಗ; ಯಾವುದದು?

Narendra Modi: ಶ್ರೀನಗರದಲ್ಲಿರುವ ದಾಲ್‌ ಸರೋವರದ ತೀರದಲ್ಲಿನ ಶೇರ್-ಐ-ಕಾಶ್ಮೀರ ಇಂಟರ್‌ನ್ಯಾಷನಲ್‌ ಕಾನ್ಫರೆನ್ಸ್‌ ಸೆಂಟರ್‌ನಲ್ಲಿ ನರೇಂದ್ರ ಮೋದಿ ಅವರು ಯೋಗ ಮಾಡುವ ಮೂಲಕ ಯೋಗ ದಿನವನ್ನು ಆಚರಿಸಲಿದ್ದಾರೆ ಎಂದು ತಿಳಿದುಬಂದಿದೆ. ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ಬಳಿಕ ಶಾಂತಿ ನೆಲೆಸುತ್ತಿದ್ದು, ಜಿ-20 ಶೃಂಗಸಭೆಯನ್ನೂ ಆಯೋಜಿಸಲಾಗಿತ್ತು.

VISTARANEWS.COM


on

Narendra Modi
Koo

ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗದ ಮಹತ್ವವನ್ನು ಸಾರಿ, ಜೂನ್‌ 21ರಂದು ಜಾಗತಿಕವಾಗಿ ಯೋಗ ದಿನವನ್ನಾಗಿ ಆಚರಿಸುವಲ್ಲಿ ನರೇಂದ್ರ ಮೋದಿ ಅವರ ಯೋಗದಾನ ದೊಡ್ಡದು. ಅದರಂತೆ, ಈ ಬಾರಿಯ ಜೂನ್‌ 21ರಂದು ಜಗತ್ತಿನಾದ್ಯಂತ ಯೋಗ ದಿನ (International Yoga Day 2024) ಆಚರಿಸಲಾಗುತ್ತಿದೆ. ನರೇಂದ್ರ ಮೋದಿ (Narendra Modi) ಅವರು ಈ ಬಾರಿ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ (Srinagar) ಯೋಗ ದಿನವನ್ನು ಆಚರಿಸಲು ತೀರ್ಮಾನಿಸಿದ್ದಾರೆ. ಜೂನ್‌ 20ರಂದು ಶ್ರೀನಗರಕ್ಕೆ ತೆರಳಲಿರುವ ಮೋದಿ ಅವರು ಜೂನ್‌ 21ರಂದು ಯೋಗ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಶ್ರೀನಗರದಲ್ಲಿರುವ ದಾಲ್‌ ಸರೋವರದ ತೀರದಲ್ಲಿನ ಶೇರ್-ಐ-ಕಾಶ್ಮೀರ ಇಂಟರ್‌ನ್ಯಾಷನಲ್‌ ಕಾನ್ಫರೆನ್ಸ್‌ ಸೆಂಟರ್‌ನಲ್ಲಿ ನರೇಂದ್ರ ಮೋದಿ ಅವರು ಯೋಗ ಮಾಡುವ ಮೂಲಕ ಯೋಗ ದಿನವನ್ನು ಆಚರಿಸಲಿದ್ದಾರೆ ಎಂದು ತಿಳಿದುಬಂದಿದೆ. ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ಬಳಿಕ ಶಾಂತಿ ನೆಲೆಸುತ್ತಿದ್ದು, ಜಿ-20 ಶೃಂಗಸಭೆಯನ್ನೂ ಆಯೋಜಿಸಲಾಗಿತ್ತು. ಯೋಗ ದಿನವನ್ನು ಆಚರಿಸುವ ಮೂಲಕ ಮೋದಿ ಅವರು ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ ಎಂಬ ಸಂದೇಶ ಸಾರಲಿದ್ದಾರೆ ಎಂದು ತಿಳಿದುಬಂದಿದೆ.

modi yoga

ಕಳೆದ ವರ್ಷ ಅಮೆರಿಕದಲ್ಲಿ ಯೋಗ

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಯೋಗ ಸೆಷನ್‌ ನಡೆದಿತ್ತು. ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯಲ್ಲಿ ಯೋಗ ದಿನವನ್ನು ಆಚರಿಸಿದ್ದರು. ವಿಶ್ವದ ಹಲವು ನಾಯಕರು ಕೂಡ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದರು. ಅಮೆರಿಕ ನೆಲದಲ್ಲಿ ನಿಂತು ಮೋದಿ ಅವರು ಯೋಗದ ಮಹತ್ವವನ್ನು ಸಾರಿದ್ದರು.

ಪ್ರಧಾನಿ ಮೋದಿಯವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ ಪ್ರಸ್ತಾಪವನ್ನು ಇಟ್ಟರು. ಯಾಕಾಗಿ ಇದನ್ನ ಅಂತಾರಾಷ್ಟ್ರೀಯ ದಿನವನ್ನಾಗಿ ಆಚರಿಸಬೇಕು ಎಂಬುದಕ್ಕೆ ಸಮರ್ಥ ವಿವರಣೆಯನ್ನೂ ಭಾರತ ಕೊಟ್ಟಿತ್ತು. ಅದನ್ನು ವಿಶ್ವ ಸಂಸ್ಥೆ ಒಪ್ಪಿಕೊಂಡು, ಸದಸ್ಯ ರಾಷ್ಟ್ರಗಳು 2015ರಲ್ಲಿ ಅನುಮೋದಿಸಿವೆ. ಆಗಿನಿಂದ ಇಲ್ಲಿಯವರೆಗೆ ಭಾರತ, ಯೋಗಕ್ಕೆ ಸಂಬಂಧಪಟ್ಟ ಹಲವು ಕಾರ್ಯಕ್ರಗಳನ್ನು ಆಯೋಜಿಸುತ್ತಿದೆ. ವಿದೇಶಗಳಲ್ಲೂ ಯೋಗದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಅದರ ಮಹತ್ವವನ್ನು ಸಾರುತ್ತಿದೆ.

ಯೋಗದಲ್ಲಿರುವ ಬಗೆಗಳನ್ನು, ಇದು ಮನುಷ್ಯನ ಮನಸು, ದೇಹವನ್ನು ಆರೋಗ್ಯವನ್ನಾಗಿಸುವ ರೀತಿಯನ್ನು ಮನಮುಟ್ಟುವಂತೆ ಹೇಳುತ್ತಿದೆ. ಹೀಗಾಗಿ ಯೋಗದ ಪ್ರಸಿದ್ಧಿ ದಿನೇದಿನೇ ಪ್ರಖರಿಸುತ್ತಲೇ ಇದೆ. ಹೆಚ್ಚೆಚ್ಚು ರಾಷ್ಟ್ರಗಳು ಒಪ್ಪಿಕೊಳ್ಳುತ್ತಿವೆ. ಕೊವಿಡ್ 19 ಕಾಲದಲ್ಲೂ ಕೂಡ ಜಗತ್ತಿನಾದ್ಯಂತ ಯೋಗ ಅನೇಕರ ಕೈ ಹಿಡಿದಿದೆ. ಈ ವರ್ಷ ಜೂ.21ಕ್ಕೂ ಕೂಡ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲು ಅತ್ಯುತ್ಸಾಹದಿಂದ ಕಾಯುತ್ತಿವೆ.

ಇದನ್ನೂ ಓದಿ: Modi Ka Parivar : ಸೋಶಿಯಲ್​ ಮೀಡಿಯಾ ಹ್ಯಾಂಡಲ್​​ಗಳಿಂದ ‘ಮೋದಿ ಕಾ ಪರಿವಾರ್​’ ತೆಗೆಯಲು ಸೂಚನೆ

Continue Reading
Advertisement
Actor Darshan
ಪ್ರಮುಖ ಸುದ್ದಿ9 mins ago

Actor Darshan: ಡೆವಿಲ್‌ ಗ್ಯಾಂಗ್‌ ಜತೆ ಸ್ಥಳ ಮಹಜರು; ಅಮಾಯಕನಂತೆ ಕೈಕಟ್ಟಿ ನಿಂತ ದರ್ಶನ್‌

FIFA World Cup
ಕ್ರೀಡೆ15 mins ago

FIFA World Cup: ವಿವಾದಾತ್ಮಕ ಗೋಲಿನಿಂದಾಗಿ ಭಾರತಕ್ಕೆ ಸೋಲು; ತನಿಖೆಗೆ ಕೋರಿದ ಎಐಎಫ್‌ಎಫ್‌

Terror attack
ದೇಶ17 mins ago

Terror attack: ಮಗುವಿಗಾಗಿ ಪ್ರಾರ್ಥಿಸಲು ಹೋಗಿದ್ದ ದಂಪತಿ; ಪತ್ನಿ ಎದುರೇ ಉಗ್ರರ ಗುಂಡಿಗೆ ಬಲಿಯಾದ ಪತಿ

Actor Darshan wife Vijayalakshmi will get divorce
ಸ್ಯಾಂಡಲ್ ವುಡ್29 mins ago

Actor Darshan: ಕೊಲೆ ಆರೋಪಿ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಡಿವೋರ್ಸ್‌?

Fish Spa awareness
ಫ್ಯಾಷನ್30 mins ago

Fish Spa Awareness: ಫಿಶ್‌ ಸ್ಪಾಗೂ ಮುನ್ನ ನೂರು ಬಾರಿ ಯೋಚಿಸಿ!

Kuwait Fire
ವಿದೇಶ34 mins ago

Kuwait Fire: ಕುವೈತ್‌ನಲ್ಲಿ ಭೀಕರ ಅಗ್ನಿ ದುರಂತಕ್ಕೆ 41 ಭಾರತೀಯರ ಬಲಿ; ದಕ್ಷಿಣ ಭಾರತದವರೇ ಹೆಚ್ಚು!

Money Guide
ಮನಿ-ಗೈಡ್42 mins ago

Money Guide: ಪಿಎಫ್‌ ಅಕೌಂಟ್‌ಗೆ ಹೊಸ ಮೊಬೈಲ್‌ ನಂಬರ್‌ ಸೇರಿಸಿಬೇಕೆ? ಜಸ್ಟ್‌ ಹೀಗೆ ಮಾಡಿ ಸಾಕು

Harbhajan Singh
ಕ್ರೀಡೆ53 mins ago

Harbhajan Singh: ಪಾಕ್​ ಆಟಗಾರನಿಗೆ ‘ನಾಲಾಯಕ್’ ಎಂದ ಹರ್ಭಜನ್​ ಸಿಂಗ್

Actor Darshan
ಕರ್ನಾಟಕ1 hour ago

Actor Darshan: ದರ್ಶನ್ ಮೇಲೆ ಮತ್ತೊಂದು ಗಂಭೀರ ಆರೋಪ; ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ, ಬಾಡೂಟ, ಎಣ್ಣೆ ಪಾರ್ಟಿ!

Kiran Bedi announces her biopic by director Kushaal Chawla
ಬಾಲಿವುಡ್2 hours ago

Kiran Bedi: ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಬಯೋಪಿಕ್ ಅನೌನ್ಸ್‌: ಕುಶಾಲ್ ಚಾವ್ಲಾ ಆ್ಯಕ್ಷನ್‌ ಕಟ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ1 day ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌