Air India: ನಿಯಮ ಉಲ್ಲಂಘನೆ: ಏರ್‌ ಇಂಡಿಯಾಕ್ಕೆ ಬಿತ್ತು ಬರೋಬ್ಬರಿ 90 ಲಕ್ಷ ರೂ. ದಂಡ - Vistara News

ದೇಶ

Air India: ನಿಯಮ ಉಲ್ಲಂಘನೆ: ಏರ್‌ ಇಂಡಿಯಾಕ್ಕೆ ಬಿತ್ತು ಬರೋಬ್ಬರಿ 90 ಲಕ್ಷ ರೂ. ದಂಡ

Air India: ನಾಗರಿಕ ವಿಮಾನಯಾನ ನಿರ್ದೇಶನಾಲಯವು ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಗೆ ಬರೋಬ್ಬರಿ 90 ಲಕ್ಷ ರೂ. ದಂಡ ವಿಧಿಸಿದೆ. ಅರ್ಹತೆ ಹೊಂದಿರದ ಸಿಬ್ಬಂದಿಯೊಂದಿಗೆ ವಿಮಾನಗಳನ್ನು ನಿರ್ವಹಿಸಿದ್ದಕ್ಕಾಗಿ ಈ ದಂಡ ವಿಧಿಸಲಾಗಿದೆ. ಜತೆಗೆ ಏರ್ ಇಂಡಿಯಾದ ನಿರ್ದೇಶಕರ ಕಾರ್ಯಾಚರಣೆ ಮತ್ತು ನಿರ್ದೇಶಕರ ತರಬೇತಿ ಸಂಸ್ಥೆಗೂ ನಾಗರಿಕ ವಿಮಾನಯಾನ ನಿಯಂತ್ರಕ ಕ್ರಮವಾಗಿ 6 ಲಕ್ಷ ರೂ. ಮತ್ತು 3 ಲಕ್ಷ ರೂ. ದಂಡ ವಿಧಿಸಿದೆ.

VISTARANEWS.COM


on

Air India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯವು (Directorate General of Civil Aviation-DGCA) ಏರ್‌ ಇಂಡಿಯಾ (Air India) ವಿಮಾನಯಾನ ಸಂಸ್ಥೆಗೆ ಬರೋಬ್ಬರಿ 90 ಲಕ್ಷ ರೂ. ದಂಡ ವಿಧಿಸಿದೆ. ಅರ್ಹತೆ ಹೊಂದಿರದ ಸಿಬ್ಬಂದಿಯೊಂದಿಗೆ ವಿಮಾನಗಳನ್ನು ನಿರ್ವಹಿಸಿದ್ದಕ್ಕಾಗಿ ಈ ದಂಡ ವಿಧಿಸಲಾಗಿದೆ. ಜತೆಗೆ ಏರ್ ಇಂಡಿಯಾದ ನಿರ್ದೇಶಕರ ಕಾರ್ಯಾಚರಣೆ ಮತ್ತು ನಿರ್ದೇಶಕರ ತರಬೇತಿ ಸಂಸ್ಥೆಗೂ ನಾಗರಿಕ ವಿಮಾನಯಾನ ನಿಯಂತ್ರಕ ಕ್ರಮವಾಗಿ 6 ಲಕ್ಷ ರೂ. ಮತ್ತು 3 ಲಕ್ಷ ರೂ. ದಂಡ ವಿಧಿಸಿದೆ.

ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಸಂಬಂಧಪಟ್ಟ ಪೈಲಟ್‌ಗೆ ಸೂಚಿಸಲಾಗಿದೆ ಎಂದು ಡಿಜಿಸಿಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ. “ಏರ್ ಇಂಡಿಯಾ ವಿಮಾನ ತರಬೇತಿ ಹೊಂದಿರದ ಲೈನ್ ಕ್ಯಾಪ್ಟನ್ ಮತ್ತು ನಾನ್-ಲೈನ್-ರಿಲೀಸ್ಡ್‌ ಫಸ್ಟ್‌ ಆಫೀಸರ್‌ಗಳೊಂದಿಗೆ ಕಾರ್ಯ ನಿರ್ವಹಿಸಿದೆ. ಇದು ಸ್ಪಷ್ಟವಾದ ಸುರಕ್ಷತಾ ಮಾನದಂಡದ ಉಲ್ಲಂಘನೆ ಎನ್ನುವುದು ಗಮನಕ್ಕೆ ಬಂದಿದೆ. ಹೀಗಾಗಿ ದಂಡ ವಿಧಿಸಲಾಗಿದೆʼʼ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ವಿವರಿಸಿದೆ.

ಜುಲೈ 10ರಂದು ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆ ಸಲ್ಲಿಸಿದ ಸ್ವಯಂಪ್ರೇರಿತ ವರದಿಯ ಮೂಲಕ ಈ ಘಟನೆ ಗಮನಕ್ಕೆ ಬಂದ ನಂತರ ಸಂಬಂಧಪಟ್ಟ ಅಧಿಕಾರಿಗಳು ದಾಖಲೆಗಳು ಮತ್ತು ವೇಳಾಪಟ್ಟಿ ಸೌಲಭ್ಯದ ಸ್ಥಳ ಪರಿಶೀಲನೆ ಸೇರಿದಂತೆ ಕಾರ್ಯಾಚರಣೆಗಳ ತನಿಖೆ ನಡೆಸಿತು. “ತನಿಖೆಯ ಆಧಾರದ ಮೇಲೆ, ಹಲವಾರು ಪೋಸ್ಟ್ ಹೋಲ್ಡರ್‌ಗಳು ಮತ್ತು ಸಿಬ್ಬಂದಿಯಿಂದ ನಿಯಂತ್ರಕದ ಅನೇಕ ನಿಬಂಧನೆಗಳ ಉಲ್ಲಂಘನೆಯಾಗಿದೆ ಎನ್ನುವುದು ತಿಳಿದು ಬಂತು. ಈ ನಿರ್ಲಕ್ಷ್ಯ ಸುರಕ್ಷತೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ” ಎಂದು ಪ್ರಕಟಣೆ ತಿಳಿಸಿದೆ.

ಜುಲೈ 22ರಂದು ನೀಡಲಾದ ಶೋಕಾಸ್ ನೋಟಿಸ್‌ಗಳ ಮೂಲಕ ತಮ್ಮ ನಿಲುವನ್ನು ವಿವರಿಸಲು ವಿಮಾನದ ಕಮಾಂಡರ್ ಮತ್ತು ಏರ್‌ಲೈನ್‌ನ ಪೋಸ್ಟ್ ಹೋಲ್ಡರ್‌ಗಳಿಗೆ ಅವಕಾಶ ನೀಡಲಾಗಿತ್ತು ಎಂದು ಡಿಜಿಸಿಎ ತಿಳಿಸಿದೆ. ಅದಾಗ್ಯೂ ಅವರು ನೀಡಿದ ಉತ್ತರ ತೃಪ್ತಿಕರವಾಗಿರಲಿಲ್ಲ. ಹೀಗಾಗಿ ಡಿಜಿಸಿಎ ಅಸ್ತಿತ್ವದಲ್ಲಿರುವ ನಿಯಮಗಳು / ನಿಬಂಧನೆಗಳ ಪ್ರಕಾರ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಅದರ ಭಾಗವಾಗಿ 99 ಲಕ್ಷ ರೂ. ದಂಡವನ್ನು ವಿಧಿಸಿದೆ. ನಿಯಮ ಉಲ್ಲಂಘನೆಗಾಗಿ ಡಿಜಿಸಿಎ ಏರ್ ಇಂಡಿಯಾಗೆ 90 ಲಕ್ಷ ರೂ., ವಿಮಾನಯಾನ ಕಾರ್ಯಾಚರಣೆ ನಿರ್ದೇಶಕರಿಗೆ 6 ಲಕ್ಷ ರೂ., ವಾಹಕದ ತರಬೇತಿ ನಿರ್ದೇಶಕರಿಗೆ 3 ಲಕ್ಷ ರೂ.ಗಳ ದಂಡ ವಿಧಿಸಿದೆ.

ಇದನ್ನೂ ಓದಿ: Air India: 180 ಉದ್ಯೋಗಿಗಳನ್ನು ವಜಾಗೊಳಿಸಿದ ಏರ್‌ ಇಂಡಿಯಾ; ನೀಡಿದ ಕಾರಣ ಇಲ್ಲಿವೆ

ಏರ್‌ ಇಂಡಿಯಾಕ್ಕೆ 1.10 ಕೋಟಿ ರೂ. ದಂಡ

ನವದೆಹಲಿ: ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಏರ್‌ ಇಂಡಿಯಾ ಕಂಪನಿಗೆ ಕೆಲವು ತಿಂಗಳ ಹಿಂದೆಯಷ್ಟೇ ಬರೋಬ್ಬರಿ 1.10 ಕೋಟಿ ರೂ. ದಂಡ ವಿಧಿಸಲಾಗಿತ್ತು. ಬೋಯಿಂಗ್ ಬಿ 777 ವಿಮಾನಗಳ ಕಾರ್ಯಾಚರಣೆ ವೇಳೆ ಆಮ್ಲಜನಕಕ್ಕೆ ಸಂಬಂಧಿಸಿದ ನಿಯಮಗಳು ಮತ್ತು ಸುರಕ್ಷತಾ ಕೈಪಿಡಿಗಳನ್ನು ಅನುಸರಿಸದ ಕಾರಣ ಈ ದಂಡ ವಿಧಿಸಲಾಗಿತ್ತು. ಮುಂಬೈ / ಬೆಂಗಳೂರು-ಸ್ಯಾನ್ ಫ್ರಾನ್ಸಿಸ್ಕೋ ಮಧ್ಯೆ ಸಂಚರಿಸುವ ಬೋಯಿಂಗ್ ಬಿ 777 ವಿಮಾನದಲ್ಲಿ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಲಾಗಿದೆ ಎಂದು ಮೇಲೆ ಏರ್ ಇಂಡಿಯಾ ವಿರುದ್ಧ ವಿಮಾನಯಾನ ಸಂಸ್ಥೆಯ ಉದ್ಯೋಗಿಯಿಂದ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಹಾರ/ಅಡುಗೆ

Non Vegetarian Population: ಜಗತ್ತಿನಲ್ಲಿ ಕುಸಿಯುತ್ತಿದೆ ಮಾಂಸಾಹಾರಿಗಳ ಸಂಖ್ಯೆ! ಕಡಿಮೆ ಮಾಂಸಾಹಾರದ ದೇಶಗಳಲ್ಲಿ ಭಾರತವೇ ನಂ.1

ಆರೋಗ್ಯದ ಕಾಳಜಿಯಿಂದ, ಧರ್ಮ ಮತ್ತು ಸಂಸ್ಕೃತಿಯ ಕಾರಣದಿಂದ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಸಸ್ಯಾಹಾರಿ ಆಹಾರವನ್ನು ಅನುಸರಿಸುತ್ತಾರೆ. ವಿಶ್ವದಲ್ಲಿ ಹಲವು ದೇಶಗಳಲ್ಲಿ ಮಾಂಸಾಹಾರಿಗಳು ಕಡಿಮೆಯಾಗುತ್ತಿದ್ದಾರೆ. ಅದರಲ್ಲೂ ಈ ಪ್ರಮುಖ ಏಳು ದೇಶಗಳು ಕಡಿಮೆ ಮಾಂಸಾಹಾರಿ ಜನರನ್ನು (Non Vegetarian Population) ಹೊಂದಿದೆ.

VISTARANEWS.COM


on

By

Non Vegetarian Population
Koo

ಆರೋಗ್ಯಕರ ಜೀವನಶೈಲಿಗಾಗಿ ಅನೇಕರು ಮಾಂಸಾಹಾರವನ್ನು (Non Vegetarian Population) ತ್ಯಜಿಸಿ ಸಸ್ಯಾಹಾರವನ್ನು (vegetarian) ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಜನರು ಪ್ರಾಣಿಗಳ ಬಗ್ಗೆ ವಿಶೇಷ ಪ್ರೀತಿ ಮತ್ತು ಕಾಳಜಿಯಿಂದಾಗಿ ಸಸ್ಯಾಹಾರವನ್ನೇ ಆಹಾರದಲ್ಲಿ (food) ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.

ಕೆಲವು ಸಂದರ್ಭಗಳಲ್ಲಿ ಜನರು ಧರ್ಮ ಮತ್ತು ಸಂಸ್ಕೃತಿಯ ಕಾರಣದಿಂದ ಸಸ್ಯಾಹಾರಿ ಆಹಾರವನ್ನು ಅನುಸರಿಸುತ್ತಾರೆ. ವಿಶ್ವದಲ್ಲಿ ಹಲವು ದೇಶಗಳಲ್ಲಿ ಮಾಂಸಾಹಾರಿಗಳು ಕಡಿಮೆಯಾಗುತ್ತಿದ್ದಾರೆ. ಅದರಲ್ಲೂ ಈ ಪ್ರಮುಖ ಏಳು ದೇಶಗಳು ಕಡಿಮೆ ಮಾಂಸಾಹಾರಿ ಜನರನ್ನು ಹೊಂದಿದೆ.


ಭಾರತ

ಭಾರತವು ವಿಶ್ವದಲ್ಲೇ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಮಾಂಸಾಹಾರ ಸೇವಿಸುವ ಜನರನ್ನು ಹೊಂದಿರುವ ದೇಶವಾಗಿದೆ. ʼವರ್ಲ್ಡ್‌ ಅಟ್ಲಾಸ್ʼ ಪ್ರಕಾರ ಪ್ರತಿ ವರ್ಷಕ್ಕೆ ತಲಾ ಒಬ್ಬರು ಕೇವಲ 3 ಕೆಜಿ ಮಾಂಸವನ್ನು ಮಾತ್ರ ಸೇವಿಸುತ್ತಾರೆ. ಇದಕ್ಕೆ ಹಲವಾರು ಅಂಶಗಳು ಕೊಡುಗೆ ನೀಡುತ್ತದೆ. ಇದರಲ್ಲಿ ಧರ್ಮವು ಅತ್ಯಂತ ಪ್ರಮುಖವಾದದ್ದು.


ಮೆಕ್ಸಿಕೋ

ಮೆಕ್ಸಿಕೋದಲ್ಲಿ ಸುಮಾರು ಶೇ. 19ರಷ್ಟು ಜನರು ಸಸ್ಯಾಹಾರಿಗಳು. ಅಲ್ಲಿನ ಜನರು ಆರೋಗ್ಯ ಕಾಳಜಿ, ಪ್ರಾಣಿ ಹಕ್ಕುಗಳು ಮತ್ತು ಪರಿಸರ ಸಮಸ್ಯೆಗಳಿಂದಾಗಿ ಸಸ್ಯ ಆಧಾರಿತ ಆಹಾರಕ್ಕೆ ಬದಲಾಗುತ್ತಿದ್ದಾರೆ. ಪ್ರಮುಖ ನಗರಗಳಲ್ಲಿ ಹೆಚ್ಚು ಸಸ್ಯಾಹಾರಿ ರೆಸ್ಟೋರೆಂಟ್‌ಗಳೇ ಇವೆ.

ಇಸ್ರೇಲ್

ಮಾಂಸಾಹಾರ ಸೇವನೆಯನ್ನು ನಿರ್ಬಂಧಿಸುವ ಜುದಾಯಿಸಂನಿಂದಾಗಿ ಇಸ್ರೇಲ್ ಕಡಿಮೆ ಮಾಂಸಾಹಾರಿ ಜನಸಂಖ್ಯೆಯನ್ನು ಹೊಂದಿದೆ. ದೇಶವು ವೇಗವಾಗಿ ಸಸ್ಯಾಹಾರಿಗಳಿಗೆ ಸ್ವರ್ಗವಾಗಿ ಮಾರ್ಪಡುತ್ತಿದೆ. ನೂರಾರು ರೆಸ್ಟೋರೆಂಟ್‌ಗಳು ಇಲ್ಲಿ ಸಸ್ಯಾಹಾರಿ ಊಟವನ್ನೇ ನೀಡುತ್ತಿವೆ. 2014 ರಲ್ಲಿ ವಿಶ್ವದ ಅತಿದೊಡ್ಡ ಸಸ್ಯಾಹಾರಿ ಉತ್ಸವವನ್ನು ಟೆಲ್ ಅವಿವ್‌ನಲ್ಲಿ ಆಯೋಜಿಸಲಾಯಿತು.

ಇಥಿಯೋಪಿಯಾ

ಆಫ್ರಿಕನ್ ದೇಶವು ಮಾಂಸ ಸೇವನೆಯ ಪ್ರಮಾಣವನ್ನು ಬಹಳ ಕಡಿಮೆ ಹೊಂದಿದೆ. ಬಡತನದ ಪ್ರಮಾಣ ಹೆಚ್ಚಿರುವುದರಿಂದ ಹೆಚ್ಚಿನ ಜನರಿಗೆ ಮಾಂಸಾಹಾರ ಇಲ್ಲಿ ದೊರೆಯುತ್ತಿಲ್ಲ. ಸರಾಸರಿಯಾಗಿ ದೇಶದ ಜನರು ತಲಾ 2.58 ಕೆ.ಜಿ. ಗೋಮಾಂಸ ಮತ್ತು ಕರುವಿನ ಮಾಂಸವನ್ನು ಸೇವಿಸುತ್ತಾರೆ. ಕೇವಲ 0.45 ಕೆ.ಜಿ. ಕೋಳಿ ಮಾಂಸಗಳನ್ನು ಸೇವಿಸುತ್ತಾರೆ.

ತೈವಾನ್

ಬೌದ್ಧಧರ್ಮದ ಕಾರಣದಿಂದಾಗಿ ತೈವಾನ್ ಗಣನೀಯ ಪ್ರಮಾಣದ ಸಸ್ಯಾಹಾರಿ ಜನಸಂಖ್ಯೆಯನ್ನು ಹೊಂದಿದೆ. ಯಾಕೆಂದರೆ ಧರ್ಮವು ಮಾಂಸ ಮುಕ್ತ ಆಹಾರಕ್ಕಾಗಿ ಪ್ರತಿಪಾದಿಸುತ್ತದೆ. ಅಲ್ಲದೇ ದೇಶದಲ್ಲಿ ಹಲವಾರು ಬಾಯಲ್ಲಿ ನೀರೂರಿಸುವಂತ ಸಸ್ಯಾಹಾರಿ ಪಾಕಪದ್ಧತಿಗಳಿವೆ. ಸರ್ಕಾರವು ಶಾಲೆಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಸಸ್ಯಾಹಾರಿ ಆಯ್ಕೆಗಳನ್ನೇ ಒದಗಿಸುತ್ತದೆ.


ಜರ್ಮನಿ

ಜರ್ಮನಿಯಲ್ಲಿ ಹೆಚ್ಚು ಜನರು ಮಾಂಸಾಹಾರಿ ಜೀವನಶೈಲಿಯನ್ನು ಬಿಟ್ಟು ಸಸ್ಯಾಹಾರಿ ಆಹಾರವನ್ನು ಆರಿಸಿಕೊಳ್ಳುತ್ತಿದ್ದಾರೆ. ಇಲ್ಲಿ ಬಲವಾದ ಪ್ರಾಣಿ ಹಕ್ಕುಗಳ ಆಂದೋಲನವನ್ನು ಹೊಂದಿದೆ. ಇದು ಮಾಂಸಾಹಾರಿ ಜನಸಂಖ್ಯೆಯ ಕುಸಿತಕ್ಕೆ ಕಾರಣವಾಗಿದೆ. ಬರ್ಲಿನ್‌ನಂತಹ ಪ್ರಮುಖ ನಗರಗಳು ಹೆಚ್ಚು ಸಸ್ಯಾಹಾರಿ ರೆಸ್ಟೊರೆಂಟ್‌ಗಳನ್ನು ಹೊಂದಿದ್ದು ಅವು ಸೌರ್‌ಕ್ರಾಟ್ ಮತ್ತು ಪ್ರಿಟ್ಜೆಲ್‌ಗಳಂತಹ ಸಾಂಪ್ರದಾಯಿಕ ಭಕ್ಷ್ಯಗಳನ್ನು ನೀಡುತ್ತವೆ.

ಇದನ್ನೂ ಓದಿ: Indian Dessert 2024: ವಿಶ್ವದ ಪ್ರಸಿದ್ಧ ʼಸಿಹಿತಿಂಡಿ ತಾಣʼಗಳ ಪಟ್ಟಿಯಲ್ಲಿ ಸ್ಥಾನ ಪಡೆದ 10 ಭಾರತೀಯ ಸ್ವೀಟ್‌ ಸ್ಟಾಲ್‌ಗಳಿವು

ಮೊಜಾಂಬಿಕ್

ಪೂರ್ವ ಆಫ್ರಿಕಾದ ದೇಶವು ವಿಶ್ವದ ಅತ್ಯಂತ ಬಡ ದೇಶಗಳಲ್ಲಿ ಒಂದಾಗಿದೆ. ಪರಿಣಾಮವಾಗಿ, ಸರಾಸರಿ ಮಾಂಸ ಸೇವನೆಯು ಅಲ್ಲಿ ಕಡಿಮೆಯಾಗಿದೆ. ಮೊಜಾಂಬಿಕ್‌ನಲ್ಲಿರುವ ಜನರು ಹೆಚ್ಚಾಗಿ ಆಮದು ಮಾಡಿಕೊಂಡ ಮಾಂಸವನ್ನು ಸೇವಿಸುತ್ತಾರೆ.

Continue Reading

ವಾಣಿಜ್ಯ

Cheapest Currency: ವಿಶ್ವದಲ್ಲೇ ಅಗ್ಗದ ಕರೆನ್ಸಿ ಹೊಂದಿರುವ ದೇಶಗಳಲ್ಲಿ ಭಾರತದ 1 ರೂ.ನ ಮೌಲ್ಯ ಎಷ್ಟಾಗುತ್ತೆ ನೋಡಿ!

ವಿಶ್ವದ ಬಹುತೇಕ ಕರೆನ್ಸಿಗಳ ಬಗ್ಗೆ ನಾವು ಪರಿಚಿತರಾಗಿದ್ದೇವೆ. ಕೆಲವೊಂದು ದೇಶಗಳ ಕರೆನ್ಸಿಗಳು ಹೆಚ್ಚು ಮೌಲ್ಯ, ಇನ್ನು ಕೆಲವು ದೇಶದ ಕರೆನ್ಸಿಗಳು ಕಡಿಮೆ ಮೌಲ್ಯವನ್ನು (Cheapest Currency) ಹೊಂದಿದೆ. ಅದರಲ್ಲೂ ಕೆಲವು ದೇಶಗಳ ಕರೆನ್ಸಿಗಳು ಅತ್ಯಂತ ಕಡಿಮೆ ಮೌಲ್ಯವನ್ನು ಹೊಂದಿದೆ. ಅಂತಹ ಕರೆನ್ಸಿಗಳು ಯಾವುದು, ಯಾವ ದೇಶದ್ದು ಎಂಬುದು ಗೊತ್ತಿದೆಯೇ? ಈ ಕುರಿತ ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

By

Cheapest Currency
Koo

ವಿಶ್ವದಲ್ಲೇ ಅತ್ಯಂತ ಪ್ರಬಲ ಮತ್ತು ಪ್ರಭಾವಶಾಲಿ ಕರೆನ್ಸಿಗಳ (currency) ಬಗ್ಗೆ ನಮಗೆ ತಿಳಿದಿದೆ. ಆದರೆ ಅತ್ಯಂತ ಕಡಿಮೆ ಮೌಲ್ಯವಿರುವ ಕರೆನ್ಸಿ (Cheapest Currency) ಬಗ್ಗೆ ಎಷ್ಟು ಮಂದಿಗೆ ಗೊತ್ತು? ಕೆಲವು ದೇಶಗಳ ಕರೆನ್ಸಿಗಳು ತೀರಾ ಕಡಿಮೆ ಮೌಲ್ಯವನ್ನು ಹೊಂದಿದೆ. ಒಂದಲ್ಲ ಒಂದು ರೀತಿಯ ವ್ಯವಹಾರ ನಡೆಸುವ ನಾವು ಈ ಅಗ್ಗದ ಕರೆನ್ಸಿಗಳ ಬಗ್ಗೆ ತಿಳಿದುಕೊಳ್ಳಬೇಕಿದೆ.

ಬ್ರಿಟಿಷ್ ಪೌಂಡ್ ಸ್ಟರ್ಲಿಂಗ್ (British Pound Sterling), ಸ್ವಿಸ್ ಫ್ರಾಂಕ್ (Swiss Franc) ಮತ್ತು ಯುಎಸ್ ಡಾಲರ್‌ (US Dollar) ವಿಶ್ವದಲ್ಲೇ ಎಲ್ಲರಿಗೂ ಪರಿಚಿತ ದುಬಾರಿ ಮೌಲ್ಯ ಹೊಂದಿರುವ ಕರೆನ್ಸಿಗಳಾಗಿವೆ. ಆದರೆ ವಿಶ್ವದ ಅತ್ಯಂತ ಕಡಿಮೆ ಬೆಲೆಬಾಳುವ ಕರೆನ್ಸಿಗಳ ಪಟ್ಟಿ ಮಾಡುವುದು ತುಸು ಕಷ್ಟ. ಯಾಕೆಂದರೆ ಆರ್ಥಿಕ ಪರಿಸ್ಥಿಗಳು ಅತ್ಯಂತ ವೇಗವಾಗಿ ಬದಲಾಗುತ್ತದೆ. ಇದು ಒಂದು ರೀತಿಯಲ್ಲಿ ಎಲ್ಲರಿಗೂ ಸವಾಲಾಗಿರುತ್ತದೆ.

ಇತ್ತೀಚೆಗೆ ಗಮನಾರ್ಹವಾದ ಅಪಮೌಲ್ಯೀಕರಣವನ್ನು ಅನುಭವಿಸಿದ ನಿರ್ದಿಷ್ಟ ರಾಷ್ಟ್ರೀಯ ಕರೆನ್ಸಿಗಳನ್ನು ಗುರುತಿಸಲಾಗಿದೆ. ಇದರಲ್ಲಿ ಯುಎಸ್ ಡಾಲರ್ ಮತ್ತು ಭಾರತೀಯ ರೂಪಾಯಿಗೆ ಹೋಲಿಸಿದರೆ ವಿಶ್ವದ ಹತ್ತು ದೇಶಗಳ ಕರೆನ್ಸಿಗಳು ಅತ್ಯಂತ ಕಡಿಮೆ ಮೌಲ್ಯ ಹೊಂದಿದೆ. ಇದರಲ್ಲಿ ಇರಾನಿನ ರಿಯಾಲ್, ವಿಯೆಟ್ನಾಮೀಸ್ ಡಾಂಗ್, ಸಿಯೆರಾ ಲಿಯೋನಿಯನ್ ಲಿಯೋನ್, ಲಾವೊ/ಲಾವೋಟಿಯನ್ ಕಿಪ್, ಇಂಡೋನೇಷಿಯನ್ ರುಪಿಯಾ, ಉಜ್ಬೇಕಿಸ್ತಾನಿ ಸೋಮ್, ಗಿನಿಯನ್ ಫ್ರಾಂಕ್, ಪರಾಗ್ವೆಯ ಗೌರಾನಿ, ಕಾಂಬೋಡಿಯನ್ ರಿಯಲ್, ಉಗಾಂಡಾದ ಶಿಲ್ಲಿಂಗ್ ಸೇರಿದೆ.

Cheapest Currency
Cheapest Currency


ಇರಾನಿನ ರಿಯಾಲ್ (IRR)

ಪ್ರಸ್ತುತ 1 ಭಾರತೀಯ ರೂಪಾಯಿಯು 501.73 ಐಆರ್‌ಆರ್‌ಗೆ ಸಮನಾಗಿದೆ. ಇರಾನಿನ ರಿಯಾಲ್ ಅನ್ನು ವಿಶ್ವದ ಅತ್ಯಂತ ಕಡಿಮೆ ಮೌಲ್ಯಯುತ ಕರೆನ್ಸಿ ಎಂದು ಗುರುತಿಸಲಾಗಿದೆ. ಇದಕ್ಕೆ ದೇಶದಲ್ಲಿ ನಡೆಯುವ ರಾಜಕೀಯ ಅಶಾಂತಿ, ಇರಾನ್-ಇರಾಕ್ ಯುದ್ಧ ಮತ್ತು ಪರಮಾಣು ಕಾರ್ಯಕ್ರಮದಂತಹ ಅಂಶಗಳು ಕಾರಣ ಎನ್ನಲಾಗುತ್ತದೆ.


ವಿಯೆಟ್ನಾಮೀಸ್ ಡಾಂಗ್ (VND)

ವಿಯೆಟ್ನಾಂ ಐತಿಹಾಸಿಕವಾಗಿ ಕೇಂದ್ರೀಕೃತ ಆರ್ಥಿಕತೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಮಾರುಕಟ್ಟೆ ಆರ್ಥಿಕತೆಯನ್ನು ಸ್ಥಾಪಿಸಲು ಪ್ರಯತ್ನಗಳನ್ನು ಮಾಡಲಾಗಿದ್ದರೂ ಇನ್ನೂ ಬಹಳ ದೂರ ಹೋಗಬೇಕಾಗಿದೆ. ಪ್ರಸ್ತುತ, ವಿಯೆಟ್ನಾಮೀಸ್ ಡಾಂಗ್ ಗಣನೀಯ ಅಪಮೌಲ್ಯವನ್ನು ಅನುಭವಿಸುತ್ತಿದೆ. ಇಲ್ಲಿ 1 ಭಾರತೀಯ ರೂಪಾಯಿಯು 297.72ವಿಎನ್ ಡಿಗೆ ಸಮನಾಗಿದೆ.


ಲಾವೋ/ಲಾವೋಟಿಯನ್ ಕಿಪ್ (LAK)

1952ರಲ್ಲಿ ಸ್ಥಾಪನೆಯಾದಾಗಿನಿಂದ ಲಾವೊ ಕರೆನ್ಸಿಯ ಮೌಲ್ಯವು ತುಲನಾತ್ಮಕವಾಗಿ ಕಡಿಮೆಯಾಗಿದೆ. ಇಲ್ಲಿ ಪ್ರಸ್ತುತ 1 ಭಾರತೀಯ ರೂಪಾಯಿಯು 263.00 ಎಲ್‌ಎಕೆಗೆ ಸಮವಾಗಿದೆ.


ಸಿಯೆರಾ ಲಿಯೋನಿಯನ್ ಲಿಯೋನ್ (SLL)

ಆಫ್ರಿಕನ್ ರಾಷ್ಟ್ರವಾದ ಸಿಯೆರಾ ಲಿಯೋನ್ ತೀವ್ರ ಬಡತನವನ್ನು ಎದುರಿಸುತ್ತಿದೆ. ವಿನಾಶಕಾರಿ ಅಂತರ್ಯುದ್ಧ ಸೇರಿದಂತೆ ಪಶ್ಚಿಮ ಆಫ್ರಿಕಾದಲ್ಲಿ ಹಗರಣಗಳು, ಭ್ರಷ್ಟಾಚಾರ ಮತ್ತು ಯುದ್ಧಗಳ ಇತಿಹಾಸವನ್ನು ದೇಶ ಹೊಂದಿದೆ. ಇದರಿಂದಾಗಿ ಕರೆನ್ಸಿ ಮೌಲ್ಯ ಮತ್ತು ದೇಶದ ಆರ್ಥಿಕತೆ ಎರಡೂ ಕುಸಿದಿದೆ. ಇಲ್ಲಿ ಭಾರತೀಯ 1 ರೂಪಾಯಿಯು 267.39 ಎಸ್ ಎಲ್ ಎಲ್‌ಗೆ ಸಮವಾಗಿದೆ.


ಇಂಡೋನೇಷಿಯನ್ ರುಪಿಯಾ (IDR)

ಕಳೆದ ಏಳು ವರ್ಷಗಳಿಂದ ಇಂಡೋನೇಷ್ಯಾದ ರೂಪಾಯಿ ಯಾವುದೇ ಸುಧಾರಣೆಯನ್ನು ತೋರಿಸಿಲ್ಲ. ವಿದೇಶಿ ವಿನಿಮಯ ಮೀಸಲು ಕಡಿಮೆಯಾಗುವುದು, ಕರೆನ್ಸಿಯನ್ನು ರಕ್ಷಿಸುವಲ್ಲಿ ಕೇಂದ್ರೀಯ ಬ್ಯಾಂಕ್ ವಿಫಲತೆ ಮತ್ತು ಸರಕು ರಫ್ತಿನ ಮೇಲೆ ದೇಶದ ಭಾರೀ ಅವಲಂಬನೆ ಸೇರಿದಂತೆ ವಿವಿಧ ಅಂಶಗಳು ಇದಕ್ಕೆ ಕಾರಣ. ಇದಲ್ಲದೆ, ಸರಕುಗಳ ಬೆಲೆಗಳಲ್ಲಿನ ಕುಸಿತವು ಕರೆನ್ಸಿಯ ಮೌಲ್ಯದಲ್ಲಿನ ಇಳಿಕೆಗೆ ಮತ್ತಷ್ಟು ಕೊಡುಗೆ ನೀಡಿದೆ. ರೂಪಾಯಿಯ ಸಾರ್ವಭೌಮ ಬಾಂಡ್‌ಗಳ ಗಮನಾರ್ಹ ಭಾಗವನ್ನು ಹೊಂದಿರುವ ವಿದೇಶಿ ಹೂಡಿಕೆದಾರರ ಉಪಸ್ಥಿತಿಯು ಬಂಡವಾಳದ ಹರಿವಿಗೆ ಅಪಾಯವನ್ನುಂಟು ಮಾಡುತ್ತದೆ. ಇಲ್ಲಿ ಪ್ರಸ್ತುತ ಭಾರತೀಯ 1 ರೂಪಾಯಿಯು 185.66 ಐಡಿಆರ್‌ಗೆ ಸಮವಾಗಿದೆ.


ಉಜ್ಬೇಕಿಸ್ತಾನಿ ಸೋಮ್ (UZS)

ಉಜ್ಬೇಕಿಸ್ತಾನ್‌ನ ಆರ್ಥಿಕತೆಯು ದುರ್ಬಲವಾಗಿದೆ. ಇದು ದುರ್ಬಲ ಕರೆನ್ಸಿಗೆ ಕಾರಣವಾಗಿದೆ. ಸಾಂಕ್ರಾಮಿಕ ರೋಗವು ರಾಷ್ಟ್ರದ ಆರ್ಥಿಕತೆಯ ಮೇಲೆ ಪ್ರಭಾವ ಬೀರಿದ್ದರೂ, 2022ರ ಮೂರನೇ ತ್ರೈಮಾಸಿಕದಲ್ಲಿ ಆಂತರಿಕ ಕಾರ್ಯಾಚರಣೆಗಳು ಪುನರಾರಂಭಗೊಂಡಿದೆ. ಆದರೂ ಕೈಗಾರಿಕಾ ಉತ್ಪಾದನೆಯಲ್ಲಿನ ಕುಸಿತವು ಕರೆನ್ಸಿಯ ಭವಿಷ್ಯದ ಬಗ್ಗೆ ಅನಿಶ್ಚಿತತೆಯನ್ನು ಸೃಷ್ಟಿಸಿದೆ. ಇಲ್ಲಿ ಪ್ರಸ್ತುತ ಭಾರತೀಯ 1 ರೂಪಾಯಿಯು 150.24 ಯುಝೆಡ್‌ಎಸ್‌ಗೆ ಸಮವಾಗಿದೆ.


ಗಿನಿಯನ್ ಫ್ರಾಂಕ್ (GNF)

ಗಿನಿಯನ್ ಫ್ರಾಂಕ್ ಗಿನಿಯಾದ ಅಧಿಕೃತ ಕರೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ. ರಾಷ್ಟ್ರವು ವ್ಯಾಪಕ ಭ್ರಷ್ಟಾಚಾರ ಮತ್ತು ರಾಜಕೀಯ ಅಶಾಂತಿಯಿಂದ ಬಳಲುತ್ತಿದೆ. ಇದು ಅದರ ಕರೆನ್ಸಿಯನ್ನು ದುರ್ಬಲಗೊಳಿಸಿದೆ. ವರ್ಷದಿಂದ ವರ್ಷಕ್ಕೆ, ರಾಷ್ಟ್ರದ ಕರೆನ್ಸಿಯ ಮೌಲ್ಯವು ಕಡಿಮೆಯಾಗುತ್ತಲೇ ಇದೆ.ಇಲ್ಲಿ ಪ್ರಸ್ತುತ ಭಾರತೀಯ 1 ರೂಪಾಯಿಯು 102.41 ಜಿಎನ್ ಎಫ್ ಗೆ ಸಮವಾಗಿದೆ.


ಪರಗ್ವೆಯ ಗೌರಾನಿ (PYG)

ಹೆಚ್ಚಿನ ಹಣದುಬ್ಬರ, ಭ್ರಷ್ಟಾಚಾರ, ಹೆಚ್ಚಿನ ನಿರುದ್ಯೋಗ ಮತ್ತು ಹೆಚ್ಚಿದ ಬಡತನದ ಪರಿಣಾಮವಾಗಿ ದೇಶವು ವಿನಾಶಕಾರಿ ಆರ್ಥಿಕ ಕುಸಿತವನ್ನು ಅನುಭವಿಸಿತು. ಈ ಪ್ರತಿಯೊಂದು ಅಂಶಗಳು ಕರೆನ್ಸಿಯ ಮೇಲೆ ಹಾನಿಕಾರಕ ಪರಿಣಾಮವನ್ನು ಬೀರಿವೆ. ಇಲ್ಲಿ ಪ್ರಸ್ತುತ ಭಾರತೀಯ 1 ರೂಪಾಯಿಯು 89.88 ಪಿವೈಜಿಗೆ ಸಮವಾಗಿದೆ.


ಕಾಂಬೋಡಿಯನ್ ರಿಯಲ್ (KHR)

ದುರ್ಬಲವಾದ ಕಾಂಬೋಡಿಯನ್ ರಿಯಲ್ ಹಿಂದಿನ ಪ್ರಮುಖ ಕಾರಣವೆಂದರೆ ದೇಶದ ಹೆಚ್ಚಿನ ಡಾಲರೀಕರಣ. 80ರ ದಶಕದ ಉತ್ತರಾರ್ಧ ಮತ್ತು 90ರ ದಶಕದ ಆರಂಭದಲ್ಲಿ ರಾಜಕೀಯ ಅಸಾಮರ್ಥ್ಯಗಳಿಂದಾಗಿ ದೇಶದ ರಿಯಲ್‌ನಲ್ಲಿ ವಿದೇಶಿ ಹೂಡಿಕೆಯನ್ನು ನಡೆಸಿ ಸಾರ್ವಜನಿಕ ವಿಶ್ವಾಸವನ್ನು ಗಳಿಸಲಾಯಿತು. 90 ರ ದಶಕದಲ್ಲಿ ಯುಎಸ್ ಡಾಲರ್ ಜನರಿಗೆ ಅನುಕೂಲಕರವಾಯಿತು. ಅತ್ಯಧಿಕ ಮಟ್ಟದಲ್ಲಿ ಯುಎಸ್ ಡಾಲರ್ ದೇಶದಲ್ಲಿ ಚಲಾವಣೆಯಾಯಿತು. ಹೀಗಾಗಿ ಶೇ. 90 ರಷ್ಟು ರಿಯಲ್ ಡಾಲರ್ ರೂಪದಲ್ಲಿದೆ. ಕಳೆದ ಎರಡು ದಶಕಗಳಲ್ಲಿ ನ್ಯಾಷನಲ್ ಬ್ಯಾಂಕ್ ಆಫ್ ಕಾಂಬೋಡಿಯಾ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಇದು ರಿಯಲ್ ಚಲಾವಣೆಯಲ್ಲಿ ಶೇ. 80ರಷ್ಟು ಹೆಚ್ಚಳಕ್ಕೆ ಕಾರಣವಾಯಿತು. ಆದರೂ ಇದು ಇನ್ನೂ ಹೆಚ್ಚು ಯುಎಸ್ ಡಾಲರ್ ಅನ್ನು ಅವಲಂಬಿಸಿದೆ. ಇಲ್ಲಿ ಪ್ರಸ್ತುತ ಭಾರತೀಯ 1 ರೂಪಾಯಿಯು 48.62 ರಿಯಲ್ ಗೆ ಸಮವಾಗಿದೆ.

ಇದನ್ನೂ ಓದಿ: Richest Village: ಗುಜರಾತ್‌ನಲ್ಲಿದೆ ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ! ಇಲ್ಲಿಯ ಜನ ಇಟ್ಟಿರುವ ಫಿಕ್ಸೆಡ್‌ ಡಿಪಾಸಿಟ್‌ ಮೌಲ್ಯ 7,000 ಕೋಟಿ ರೂ!


ಉಗಾಂಡಾ ಶಿಲ್ಲಿಂಗ್ (UGX)

1966ರಲ್ಲಿ ಉಗಾಂಡಾದ ಶಿಲ್ಲಿಂಗ್ ಪೂರ್ವ ಆಫ್ರಿಕಾದ ಶಿಲ್ಲಿಂಗ್ ಅನ್ನು ಬದಲಿಸಿತು. ಪ್ರಸ್ತುತ ಉಗಾಂಡಾದ ಶಿಲ್ಲಿಂಗ್ ಅತ್ಯಂತ ಕಡಿಮೆ ಬೆಲೆಬಾಳುವ ಕರೆನ್ಸಿಗಳಲ್ಲಿ ಒಂದಾಗಿದೆ. ಇದಿ ಅಮೀನ್ ಆಳ್ವಿಕೆಯ ಅಡಿಯಲ್ಲಿ ಉಗಾಂಡಾವು ರಾಷ್ಟ್ರದ ಆರ್ಥಿಕತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ವಲಸೆ ಕಾನೂನುಗಳಂತಹ ಕ್ರಮಗಳಿಂದ ಗಮನಾರ್ಹ ಹಿನ್ನಡೆ ಅನುಭವಿಸಿತು. ಅಧ್ಯಕ್ಷರ ಆರ್ಥಿಕ ಕುಸಿತದ ಪರಿಣಾಮಗಳು ದೇಶದ ಪ್ರಗತಿಗೆ ಅಡ್ಡಿಯಾಗುತ್ತಲೇ ಇವೆ. ಆದರೂ ಇತ್ತೀಚಿನ ವರ್ಷಗಳಲ್ಲಿ ಕರೆನ್ಸಿಯ ಮೌಲ್ಯವು ಹೆಚ್ಚಿದೆ. ಇಲ್ಲಿ ಪ್ರಸ್ತುತ ಭಾರತೀಯ 1 ರೂಪಾಯಿಯು 44.22 ಯುಜಿಎಕ್ಸ್ ಆಗಿದೆ.

ಈ ಹತ್ತು ಅಗ್ಗದ ದೇಶಗಳ ಕರೆನ್ಸಿಯೊಂದಿಗೆ ಭಾರತೀಯ ರೂಪಾಯಿ ಮೌಲ್ಯದ ಹೋಲಿಕೆಯು 2024ರ ಆಗಸ್ಟ್ 19ರ ಅಂಕಿ ಅಂಶಗಳನ್ನು ಆಧರಿಸಿ ನೀಡಲಾಗಿದೆ. ಇದು ಕೆಲವೊಮ್ಮೆ ಕೊಂಚ ಏರಿಳಿತ ಕಾಣಬಹುದು.

Continue Reading

ದೇಶ

Goodbye to black Robes: ಘಟಿಕೋತ್ಸವದಲ್ಲಿ ಧರಿಸುವ ಕಪ್ಪು ನಿಲುವಂಗಿ, ಟೋಪಿಗೆ ಗುಡ್‌ಬೈ- ಕೇಂದ್ರದಿಂದ ಮಹತ್ವದ ಘೋಷಣೆ

Goodbye to black robes: ಕಪ್ಪು ನಿಲುವಂಗಿ ಧರಿಸುವುದು ವಸಾಹತುಶಾಹಿ ಪರಂಪರೆಯಾಗಿದ್ದು ಅದನ್ನು ಬದಲಾಯಿಸಬೇಕಾಗಿದೆ. ಅದಕ್ಕೆ ಅನುಗುಣವಾಗಿ ವೈದ್ಯಕೀಯ ಶಿಕ್ಷಣವನ್ನು ನೀಡುವಲ್ಲಿ ತೊಡಗಿರುವ AIIMS / INIS ಸೇರಿದಂತೆ ಸಚಿವಾಲಯದ ವಿವಿಧ ಸಂಸ್ಥೆಗಳು ತಮ್ಮ ಸಂಸ್ಥೆಯ ಘಟಿಕೋತ್ಸವ ಸಮಾರಂಭಕ್ಕೆ ಸೂಕ್ತವಾದ ಭಾರತೀಯ ಡ್ರೆಸ್ ಕೋಡ್ ಅನ್ನು ವಿನ್ಯಾಸಗೊಳಿಸಲು ಸಚಿವಾಲಯವು ನಿರ್ಧರಿಸಿದೆ. ಹೊಸ ಡ್ರೆಸ್ ಕೋಡ್‌ನ ಪ್ರಸ್ತಾವನೆಗಳನ್ನು ಅನುಮೋದನೆಗಾಗಿ ಸಚಿವಾಲಯಕ್ಕೆ ಸಲ್ಲಿಸುವಂತೆ ಸರ್ಕಾರ ಕೇಳಿದೆ.

VISTARANEWS.COM


on

Goodbye to black robes
Koo

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಶುಕ್ರವಾರ ಏಮ್ಸ್‌(AIIMS)ನಂತಹ ಪ್ರತಿಷ್ಠಿತ ಸಂಸ್ಥೆಗಳು ಸೇರಿದಂತೆ ಕೇಂದ್ರ ಸರ್ಕಾರದ ಎಲ್ಲಾ ವೈದ್ಯಕೀಯ ಬೋಧನಾ ಸಂಸ್ಥೆಗಳಿಗೆ ತಮ್ಮ ಘಟಿಕೋತ್ಸವ ಸಮಾರಂಭಗಳಲ್ಲಿ ಧರಿಸುವ ವಸ್ತ್ರ ಸಂಹಿತೆ(Goodbye to black robes)ಯನ್ನು ಇನ್ನು ಮುಂದೆ ಬದಲಿಸುವಂತೆ ನಿರ್ದೇಶನ ನೀಡಿದೆ. ವಸಾಹತುಶಾಹಿ ಪರಂಪರೆಗಳನ್ನು ತೊಡೆದುಹಾಕಲು ಮತ್ತು ಭಾರತೀಯ ಸಂಪ್ರದಾಯಗಳನ್ನು ಅಳವಡಿಸಿಕೊಳ್ಳುವ ಗುರಿಯನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸರ್ಕಾರ ಮಹತ್ವದ ಘೋಷಣೆ ಹೊರಡಿಸಿದೆ.

ಆಗಸ್ಟ್ 23 ರ ಪತ್ರದಲ್ಲಿ ಸಚಿವಾಲಯವು ಘಟಿಕೋತ್ಸವದ ಸಮಯದಲ್ಲಿ ಕಪ್ಪು ನಿಲುವಂಗಿ ಮತ್ತು ಟೋಪಿಗಳನ್ನು ಧರಿಸುವ ಪ್ರಸ್ತುತ ಅಭ್ಯಾಸವು ಮಧ್ಯಯುಗದಲ್ಲಿ ಯುರೋಪಿನಿಂದ ಹುಟ್ಟಿಕೊಂಡಿತು ಮತ್ತು ಬ್ರಿಟಿಷ್ ವಸಾಹತು ಆಳ್ವಿಕೆಯಲ್ಲಿ ಭಾರತದಲ್ಲಿ ಪರಿಚಯಿಸಲಾಯಿತು. ಪ್ರತಿ ಸಂಸ್ಥೆಯು ನೆಲೆಗೊಂಡಿರುವ ರಾಜ್ಯದ ಸ್ಥಳೀಯ ಸಂಪ್ರದಾಯಗಳು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಹೊಸ ಘಟಿಕೋತ್ಸವದ ಉಡುಪನ್ನು ವಿನ್ಯಾಸಗೊಳಿಸಲು ಸಚಿವಾಲಯವು ಸಂಸ್ಥೆಗಳನ್ನು ಒತ್ತಾಯಿಸಿತು.

ಕಪ್ಪು ನಿಲುವಂಗಿ ಧರಿಸುವುದು ವಸಾಹತುಶಾಹಿ ಪರಂಪರೆಯಾಗಿದ್ದು ಅದನ್ನು ಬದಲಾಯಿಸಬೇಕಾಗಿದೆ. ಅದಕ್ಕೆ ಅನುಗುಣವಾಗಿ ವೈದ್ಯಕೀಯ ಶಿಕ್ಷಣವನ್ನು ನೀಡುವಲ್ಲಿ ತೊಡಗಿರುವ AIIMS / INIS ಸೇರಿದಂತೆ ಸಚಿವಾಲಯದ ವಿವಿಧ ಸಂಸ್ಥೆಗಳು ತಮ್ಮ ಸಂಸ್ಥೆಯ ಘಟಿಕೋತ್ಸವ ಸಮಾರಂಭಕ್ಕೆ ಸೂಕ್ತವಾದ ಭಾರತೀಯ ಡ್ರೆಸ್ ಕೋಡ್ ಅನ್ನು ವಿನ್ಯಾಸಗೊಳಿಸಲು ಸಚಿವಾಲಯವು ನಿರ್ಧರಿಸಿದೆ. ಹೊಸ ಡ್ರೆಸ್ ಕೋಡ್‌ನ ಪ್ರಸ್ತಾವನೆಗಳನ್ನು ಅನುಮೋದನೆಗಾಗಿ ಸಚಿವಾಲಯಕ್ಕೆ ಸಲ್ಲಿಸುವಂತೆ ಸರ್ಕಾರ ಕೇಳಿದೆ.

ಪಂಚಪ್ರಾಣ ಎಂದರೇನು?

2022 ರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಿ ಮೋದಿ ಅವರು ಮುಂದಿನ 25 ವರ್ಷಗಳಲ್ಲಿ ಭಾರತದ ಪ್ರಗತಿಗೆ ಮಾರ್ಗದರ್ಶನ ನೀಡಲು ಪಂಚ ಪ್ರಾಣ್ ಅಥವಾ “ಐದು ನಿರ್ಣಯಗಳನ್ನು” ಪ್ರಸ್ತಾಪಿಸಿದ್ದರು. ಶಿಕ್ಷಣ ಮತ್ತು ಸಾಂಸ್ಕೃತಿಕ ಆಚರಣೆಗಳು ಸೇರಿದಂತೆ ಜೀವನದ ವಿವಿಧ ಅಂಶಗಳಿಂದ ವಸಾಹತುಶಾಹಿ ಪ್ರಭಾವಗಳನ್ನು ತೊಡೆದುಹಾಕಲು ಮತ್ತು ಭಾರತೀಯ ಸಂಸ್ಕೃತಿ ಬಗ್ಗೆ ಹೆಮ್ಮೆ ಪಡುವುದು ಪ್ರಮುಖ ನಿರ್ಣಯಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: Narendra Modi: ಉಕ್ರೇನ್‌ಗೆ ಬಂದಿಳಿದ ಪ್ರಧಾನಿ ಮೋದಿ; ರಷ್ಯಾ ಜತೆಗಿನ ಸಂಘರ್ಷದ ಚರ್ಚೆ ಸಾಧ್ಯತೆ

Continue Reading

ಕ್ರೈಂ

Kolkata Doctor Murder Case: ಕೋಲ್ಕತಾ ವೈದ್ಯೆಯ ಹಂತಕನಲ್ಲಿ ಕ್ರೂರ ಮೃಗದ ಲಕ್ಷಣ! ಪಶ್ಚಾತ್ತಾಪವೇ ಇಲ್ಲ

ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾದ ಕೋಲ್ಕತಾ ವೈದ್ಯೆಯ ಕೊಲೆ (Kolkata Doctor Murder Case) ಆರೋಪಿ ಸಂಜಯ್ ರಾಯ್ ವಿಚಾರಣೆ ವೇಳೆ ಯಾವುದೇ ಪಶ್ಚಾತ್ತಾಪವನ್ನು ತೋರಿಸಿಲ್ಲ. ಯಾವುದೇ ಹಿಂಜರಿಕೆಯನ್ನು ಪ್ರದರ್ಶಿಸದೆ ಆತ ಸಂಪೂರ್ಣ ಅಪರಾಧವನ್ನು ತನಿಖಾ ಸಂಸ್ಥೆಗೆ ವಿವರಿಸಿದ್ದಾನೆ. ಆತ ಮಹಾ ಕ್ರೂರಿ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

VISTARANEWS.COM


on

By

Kolkata Doctor Murder Case
Koo

ಕೋಲ್ಕತ್ತಾದ ವೈದ್ಯೆಯ ಅತ್ಯಾಚಾರ, ಕೊಲೆ (Kolkata Doctor Murder Case) ಪ್ರಕರಣದ ಆರೋಪಿಯಾಗಿ ಬಂಧಿಸಲ್ಪಟ್ಟಿರುವ ಸಂಜಯ್ ರಾಯ್‌ಗೆ (Sanjay Roy) ತಾನು ಎಸಗಿದ ಈ ಕ್ರೂರ ಕೃತ್ಯದ ಬಗ್ಗೆ ಒಂದಿಷ್ಟೂ ಪಶ್ಚಾತ್ತಾಪವಿಲ್ಲ ಎಂದು ಸಿಬಿಐ (CBI) ಅಧಿಕಾರಿಯೊಬ್ಬರು ಹೇಳಿದ್ದಾರೆ. ಆತನ ಮನಸ್ಥಿತಿಯ ಪರೀಕ್ಷೆ ನಡೆಸಲಾಗಿದ್ದು, ಆತ ವಿಕೃತ ಮತ್ತು ಅಶ್ಲೀಲತೆಯ ತೀವ್ರ ವ್ಯಸನಿ ಎಂಬುದು ತಿಳಿದು ಬಂದಿದೆ ಎಂದು ಅವರು ಹೇಳಿದ್ದಾರೆ.

ಅತ್ಯಾಚಾರಿ ಸಂಜಯ್‌ನಲ್ಲಿ ಕ್ರೂರ ಪ್ರಾಣಿಯ ಪ್ರವೃತ್ತಿ ಇದೆ. ವಿಚಾರಣೆಯ ಸಮಯದಲ್ಲಿ ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯೊಳಗೆ ನಡೆದ ಭೀಕರ ಹತ್ಯೆಗೆ ಅವನು ಯಾವುದೇ ಪಶ್ಚಾತ್ತಾಪವನ್ನು ತೋರಿಸಲಿಲ್ಲ ಎಂದು ಅವರು ಹೇಳಿದ್ದಾರೆ. ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾದ ಅಪರಾಧಕ್ಕಾಗಿ ಸಂಜಯ್ ರಾಯ್ ಯಾವುದೇ ಪಶ್ಚಾತ್ತಾಪವನ್ನು ತೋರಿಸಿಲ್ಲ. ಯಾವುದೇ ಹಿಂಜರಿಕೆಯನ್ನು ಪ್ರದರ್ಶಿಸದೆ ಆತ ಸಂಪೂರ್ಣ ಅಪರಾಧವನ್ನು ತನಿಖಾ ಸಂಸ್ಥೆಗೆ ವಿವರಿಸಿದ್ದಾನೆ. ಆ ವ್ಯಕ್ತಿ ಯಾವುದೇ ಪಶ್ಚಾತ್ತಾಪವನ್ನು ತೋರಿಸಲಿಲ್ಲ. ಪ್ರತಿ ನಿಮಿಷದ ವಿವರವನ್ನು ಯಾವುದೇ ಟೆನ್ಶನ್‌ ಇಲ್ಲದೆ ಸಂಪೂರ್ಣ ಘಟನೆಯನ್ನು ವಿವರಿಸಿದ್ದಾನೆ. ಅವನಿಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ತೋರುತ್ತಿದೆ ಎಂದು ಸಿಬಿಐ ಅಧಿಕಾರಿ ತಿಳಿಸಿದ್ದಾರೆ.

ಕೋಲ್ಕತ್ತಾ ಆಸ್ಪತ್ರೆಯ ವೈದ್ಯೆ ತಮ್ಮ 36 ಗಂಟೆಗಳ ಸುದೀರ್ಘ ಪಾಳಿಯ ಬಳಿಕ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ವಿಶ್ರಮಿಸಲು ಹೋಗಿದ್ದರು. ಮರಣೋತ್ತರ ಪರೀಕ್ಷೆಯ ವರದಿಯು ಆಕೆಯ ಮೇಲೆ ಅತ್ಯಾಚಾರವೆಸಗಲಾಗಿದೆ ಮತ್ತು ತೀವ್ರವಾಗಿ ಥಳಿಸಲಾಗಿದೆ ಎಂದು ಸೂಚಿಸಿದೆ. ಸಂತ್ರಸ್ತೆಯ ಮೇಲೆ 16 ಬಾಹ್ಯ ಮತ್ತು ಒಂಬತ್ತು ಆಂತರಿಕ ಗಾಯವಾಗಿತ್ತು. ಕತ್ತು ಹಿಸುಕಿದ್ದರಿಂದ ಆಕೆ ಸಾವನ್ನಪ್ಪಿದ್ದಳು.

Kolkata Doctor Murder Case
Kolkata Doctor Murder Case


ಅಪರಾಧ ನಡೆದ ಒಂದು ದಿನದ ಅನಂತರ ಸಂಜಯ್ ರಾಯ್‌ನನ್ನು ಬಂಧಿಸಲಾಗಿದೆ. ಆತ ಅಪರಾಧ ನಡೆದ ಸಮಯದಲ್ಲಿ ಕಟ್ಟಡವನ್ನು ಪ್ರವೇಶಿಸುವುದನ್ನು ಕೆಲವರು ನೋಡಿದ್ದಾರೆ. ಅಲ್ಲದೇ ಆತನ ಬ್ಲೂಟೂತ್ ಹೆಡ್‌ಫೋನ್‌ಗಳು ಅಪರಾಧದ ಸ್ಥಳದ ಬಳಿ ಪತ್ತೆಯಾಗಿದ್ದವು. ಸಂಜಯ್ ರಾಯ್‌ನ ಮೊಬೈಲ್ ಫೋನ್‌ನಲ್ಲಿ ಹಲವಾರು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಅಪರಾಧದ ಸ್ಥಳದಲ್ಲಿ ಆರೋಪಿಯ ಉಪಸ್ಥಿತಿಯನ್ನು ತಾಂತ್ರಿಕ ಮತ್ತು ವೈಜ್ಞಾನಿಕ ಪುರಾವೆಗಳು ಸೂಚಿಸುತ್ತವೆ ಎಂದು ಅಧಿಕಾರಿ ಹೇಳಿದರು.

ಆಗಸ್ಟ್ 8ರಂದು ಬೆಳಗ್ಗೆ 11 ಗಂಟೆಗೆ ಆತ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡು ಬಂದಿದ್ದಾನೆ. ಆಗಸ್ಟ್ 9ರಂದು ಬೆಳಗ್ಗೆ 4 ಗಂಟೆಗೆ ಆತ ಕಟ್ಟಡಕ್ಕೆ ಪ್ರವೇಶಿಸಿರುವುದು ಕೆಮೆರಾದಲ್ಲಿ ಸೆರೆಯಾಗಿದೆ. ಆಗಸ್ಟ್ 9ರಂದು ಬೆಳಗ್ಗೆ 3ರಿಂದ 5 ಗಂಟೆಯ ನಡುವೆ ವೈದ್ಯೆಯನ್ನು ಕೊಲೆ ಮಾಡಲಾಗಿದ್ದು, ಸಂತ್ರಸ್ತೆಯ ಕೊಲೆಗೆ ದೊಡ್ಡ ಸಂಚು ಕಾರಣವೇ ಎಂದು ಸಿಬಿಐ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: Kolkata Doctor Murder Case: ಮಮತಾ ಬ್ಯಾನರ್ಜಿ ಆಡಳಿತದ ಕರಾಳ ಅಧ್ಯಾಯ ತೆರೆದಿಟ್ಟಿದೆ ಕೋಲ್ಕತಾ ವೈದ್ಯೆ ಕೊಲೆ ಪ್ರಕರಣ

ಆರ್‌ ಜಿ ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ. ಸಂದೀಪ್ ಘೋಷ್ ಅವರನ್ನು ಹಲವು ದಿನಗಳಿಂದ ವಿಚಾರಣೆ ನಡೆಸಲಾಗಿದೆ. ಕೋಲ್ಕತ್ತಾ ಪೊಲೀಸರು ಡಾ. ಸಂದೀಪ್ ಘೋಷ್ ವಿರುದ್ಧದ ಹಣಕಾಸಿನ ಅವ್ಯವಹಾರದ ಆರೋಪಗಳ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಸಂದೀಪ್ ಘೋಷ್ ಅವರ ಮಾಜಿ ಸಹೋದ್ಯೋಗಿ ಅಖ್ತರ್ ಅಲಿ “ಮೃತ ದೇಹಗಳ ವ್ಯವಹಾರ”ದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪವೂ ಕೇಳಿ ಬಂದಿದೆ.

Continue Reading
Advertisement
Non Vegetarian Population
ಆಹಾರ/ಅಡುಗೆ3 mins ago

Non Vegetarian Population: ಜಗತ್ತಿನಲ್ಲಿ ಕುಸಿಯುತ್ತಿದೆ ಮಾಂಸಾಹಾರಿಗಳ ಸಂಖ್ಯೆ! ಕಡಿಮೆ ಮಾಂಸಾಹಾರದ ದೇಶಗಳಲ್ಲಿ ಭಾರತವೇ ನಂ.1

Cheapest Currency
ವಾಣಿಜ್ಯ18 mins ago

Cheapest Currency: ವಿಶ್ವದಲ್ಲೇ ಅಗ್ಗದ ಕರೆನ್ಸಿ ಹೊಂದಿರುವ ದೇಶಗಳಲ್ಲಿ ಭಾರತದ 1 ರೂ.ನ ಮೌಲ್ಯ ಎಷ್ಟಾಗುತ್ತೆ ನೋಡಿ!

ಪ್ರಮುಖ ಸುದ್ದಿ26 mins ago

Vande Bharat Express: ಇನ್ನು ಮುಂದೆ ತುಮಕೂರಿನಲ್ಲೂ ನಿಲ್ಲಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು; ಟಿಕೆಟ್‌ ದರ ಎಷ್ಟು?

Health Tips
ಆರೋಗ್ಯ27 mins ago

Health Tips: ಮಲಗುವ ಮುನ್ನ ಹಾಲು, ಬೆಲ್ಲ ಸೇವಿಸಿದರೆ ಹಲವು ಸಮಸ್ಯೆಗಳಿಗೆ ಪರಿಹಾರ

Goodbye to black robes
ದೇಶ42 mins ago

Goodbye to black Robes: ಘಟಿಕೋತ್ಸವದಲ್ಲಿ ಧರಿಸುವ ಕಪ್ಪು ನಿಲುವಂಗಿ, ಟೋಪಿಗೆ ಗುಡ್‌ಬೈ- ಕೇಂದ್ರದಿಂದ ಮಹತ್ವದ ಘೋಷಣೆ

Kolkata Doctor Murder Case
ಕ್ರೈಂ45 mins ago

Kolkata Doctor Murder Case: ಕೋಲ್ಕತಾ ವೈದ್ಯೆಯ ಹಂತಕನಲ್ಲಿ ಕ್ರೂರ ಮೃಗದ ಲಕ್ಷಣ! ಪಶ್ಚಾತ್ತಾಪವೇ ಇಲ್ಲ

Kannada New Movie
ಬೆಂಗಳೂರು54 mins ago

Kannada New Movie: ʼಪೆನ್ ಡ್ರೈವ್ʼ ಚಿತ್ರದಲ್ಲಿ ಮಾಲಾಶ್ರೀ; ಇದು ತನಿಷಾ ಕುಪ್ಪಂಡ ಅಭಿನಯದ ಚಿತ್ರ

Viral Video
Latest1 hour ago

Viral Video: ಹೆದ್ದಾರಿ ಅಪಘಾತದಲ್ಲಿ ಕೆಳಗೆ ಬಿದ್ದ ತಂದೆ, ತಾಯಿ; ಮಗುವಿನೊಂದಿಗೆ ಬಹುದೂರ ಚಲಿಸಿದ ಬೈಕ್! ಹಳೆಯ ವಿಡಿಯೊ ಮತ್ತೆ ವೈರಲ್‌

Shreyas Patel
ಕರ್ನಾಟಕ1 hour ago

Shreyas Patel: ಸಂಸದ ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧು ಕೋರಿ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್‌

karnataka weather forecast
ಮಳೆ1 hour ago

Karnataka Weather : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ-ಕೊಳ್ಳಗಳು; ಹಳ್ಳ ದಾಟಲು ಗ್ರಾಮಸ್ಥರ ಪರದಾಟ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌