ಎನ್​ಎಸ್​ಎ ಅಜಿತ್​ ದೋವಲ್​ಗೆ ಭದ್ರತೆ ನೀಡುತ್ತಿದ್ದ ಮೂವರು ಕಮಾಂಡೋಗಳು ವಜಾ - Vistara News

ದೇಶ

ಎನ್​ಎಸ್​ಎ ಅಜಿತ್​ ದೋವಲ್​ಗೆ ಭದ್ರತೆ ನೀಡುತ್ತಿದ್ದ ಮೂವರು ಕಮಾಂಡೋಗಳು ವಜಾ

ಅಜಿತ್​ ದೋವಲ್​​ರಿಗೆ ಝಡ್​ ಪ್ಲಸ್​ ಕೆಟೆಗರಿ ಭದ್ರತೆ ಇದೆ. ಹಾಗಿದ್ದಾಗ್ಯೂ ಫೆಬ್ರವರಿಯಲ್ಲಿ ಅದೊಂದು ಘಟನೆ ನಡೆದಿತ್ತು. ಈಗ ಅದೇ ಪ್ರಕರಣದಲ್ಲಿ ಮೂವರು ಸಿಐಎಸ್​ಎಫ್ ಕಮಾಂಡೋಗಳು ವಜಾಗೊಂಡಿದ್ದಾರೆ.

VISTARANEWS.COM


on

Ajit Doval
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್​ಗೆ (NSA Ajit Doval) ಭದ್ರತೆ ಒದಗಿಸುತ್ತಿದ್ದ ಮೂವರು ಸಿಐಎಸ್​ಎಫ್​​ (Central Industrial Security Force)ಕಮಾಂಡೋಗಳನ್ನು ವಜಾಗೊಳಿಸಲಾಗಿದ್ದು, ಒಬ್ಬನನ್ನು ವರ್ಗಾವಣೆ ಮಾಡಿದ್ದಾಗಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇದೇ ವರ್ಷ ಫೆಬ್ರವರಿಯಲ್ಲಿ ಆಗಿದ್ದ ಭದ್ರತಾ ಉಲ್ಲಂಘನೆಗೆ ಸಂಬಂಧಪಟ್ಟಂತೆ ಈ ಕ್ರಮ ಕೈಗೊಂಡಿದ್ದಾಗಿ ವರದಿಯಾಗಿದೆ. 2022ರ ಫೆಬ್ರವರಿಯಲ್ಲಿ ವ್ಯಕ್ತಿಯೊಬ್ಬರ ಅಜಿತ್​ ದೋವಲ್​ ಮನೆಗೆ ನುಗ್ಗಲು ಪ್ರಯತ್ನಿಸಿದ್ದ. ಮನೆಯ ಆವರಣಕ್ಕೂ ಪ್ರವೇಶಿಸಿಬಿಟ್ಟದ್ದ. ಅವನನ್ನು ಮನೆಯೊಳಕ್ಕೆ ಹೋಗದಂತೆ ತಡೆಯಲಾಗಿತ್ತು ಮತ್ತು ನಂತರ ದೆಹಲಿ ಪೊಲೀಸರು ಬಂಧಿಸಿದ್ದರು. ಅಂದಿನ ಭದ್ರತಾ ಲೋಪದ ಕಾರಣಕ್ಕೆ ಈಗ ಮೂವರು ಕಮಾಂಡೋಗಳನ್ನು ಕೆಲಸದಿಂದ ತೆಗೆಯಲಾಗಿದೆ.

ಅಂದು ಅಜಿತ್ ದೋವಲ್​ ಮನೆಗೆ ನುಗ್ಗಲು ಯತ್ನಿಸಿದ ವ್ಯಕ್ತಿ ತುಂಬ ನಿಗೂಢವಾಗಿ ಮಾತನಾಡಿದ್ದ. ನನ್ನ ತಲೆಯಲ್ಲಿ ಒಂದು ಚಿಪ್​ ಇದೆ. ನನ್ನನ್ನು ಬಾಹ್ಯವಾಗಿ ಯಾರೋ ನಿಯಂತ್ರಿಸುತ್ತಿದ್ದಾರೆ. ಅವರು ಸೂಚನೆಕೊಟ್ಟಂತೆ ನಾನು ಕೆಲಸ ಮಾಡುತ್ತೇನೆ ಎಂದಿದ್ದ. ಬಳಿಕ ಅವನನ್ನು ಎಂಆರ್​ಐ ಸ್ಕ್ಯಾನ್​ಗೆ ಒಳಪಡಿಸಲಾಗಿತ್ತು. ಆದರೆ ಅಂಥ ಯಾವುದೇ ಚಿಪ್​ ಕಂಡುಬಂದಿರಲಿಲ್ಲ. ಈತ ಅಜಿತ್ ದೋವಲ್ ಮನೆಗೆ ಬರುವಾಗ ಕೆಂಪು ಬಣ್ಣದ ಎಸ್​ಯುವಿಯನ್ನು ಚಾಲನೆ ಮಾಡಿಕೊಂಡು ಬಂದಿದ್ದ. ದೋವಲ್ ಮನೆ ಸುತ್ತ ಬಿಗಿ ಭದ್ರತೆಯಿದ್ದಾಗ್ಯೂ ಗೇಟ್​ ದಾಟಿದ್ದ.

ಆ ವ್ಯಕ್ತಿಯನ್ನು ಶಂತನು ರೆಡ್ಡಿ ಎಂದು ಗುರುತಿಸಲಾಗಿದ್ದು, ಅಂದು ಆತ ದೋವಲ್​ ನಿವಾಸಕ್ಕೆ ನುಗ್ಗಲು ಪ್ರಯತ್ನಿಸಿದಾಗ ಅಜಿತ್​ ದೋವಲ್​ ಮನೆಯಲ್ಲೇ ಇದ್ದರು. ಆಮೇಲೆ ಅವನನ್ನು ಸಂಪೂರ್ಣವಾಗಿ ವಿಚಾರಿಸಿದಾಗ ಗೊತ್ತಾಗಿದ್ದು, ಆತನೊಬ್ಬ ಮಾನಸಿಕ ರೋಗಿ ಎಂದು ಗೊತ್ತಾಗಿತ್ತು. ಕಾರನ್ನು ನೊಯ್ಡಾದಿಂದ ತಂದಿದ್ದಾಗಿಯೂ ಅವನು ಹೇಳಿಕೊಂಡಿದ್ದ. ಆದರೆ Z ಪ್ಲಸ್​ ಭದ್ರತೆ ಇದ್ದೂ ಅಂದು ಭದ್ರತೆಯಲ್ಲಿ ಲೋಪ ಆಗಿದ್ದರಿಂದ ಕ್ರಮ ಕೈಗೊಳ್ಳಲಾಗಿದೆ ಎಂದೂ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಅಜಿತ್‌ ದೋವಲ್‌ರಿಂದ ಎಚ್ಚರಿಕೆಯ ಮಾತು; ಪಿಎಫ್‌ಐ ನಿಷೇಧಿಸಲು ಮುಸ್ಲಿಂ ಪ್ರಮುಖರ ಆಗ್ರಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hindenburg: ಹಿಂಡನ್‌ಬರ್ಗ್‌ ಸ್ಫೋಟಕ ವರದಿ: ಆರೋಪ ತಳ್ಳಿ ಹಾಕಿದ ಅದಾನಿ ಗ್ರೂಪ್‌

Hindenburg: ಶನಿವಾರ ರಾತ್ರಿ ಈ ಕುರಿತು 106 ಪುಟಗಳ ವರದಿ ಬಿಡುಗಡೆ ಮಾಡಿರುವ ಹಿಂಡನ್ಬರ್ಗ್‌, ಅದಾನಿಯ ಬೇನಾಮಿ ಕಂಪೆನಿಗಳಲ್ಲಿ ತಾವೇ ಷೇರುಗಳನ್ನು ಹೊಂದಿರುವ ಕಾರಣಕ್ಕೆ ಸೆಬಿ ಮುಖ್ಯಸ್ಥೆಯಾಗಿರುವ ಮಾಧವಿ ಬುಚ್, ಅದಾನಿ ಗ್ರೂಪ್ ವಿರುದ್ಧದ ಷೇರು ಅವ್ಯವಹಾರ ಕುರಿತು ಸರಿಯಾಗಿ ತನಿಖೆ ಮಾಡಿಲ್ಲ ಎಂದು ಆಪಾದಿಸಿದೆ.

VISTARANEWS.COM


on

Hindenburg
Koo

ನವದೆಹಲಿ: ವಿದೇಶದಲ್ಲಿರುವ ಗೌತಮ್‌ ಅದಾನಿ (Gautam Adani) ನೇತೃತ್ವದ ಅದಾನಿ ಗ್ರೂಪ್‌ ಕಂಪನಿಗಳಲ್ಲಿ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ (SEBI) ಮುಖ್ಯಸ್ಥೆ ಮಾಧಬಿ ಪುರಿ ಬುಚ್‌ ಅವರ ಪಾಲಿದೆ ಎಂದು ಸ್ಫೋಟಕ ವರದಿ ಬಹಿರಂಗಗೊಂಡಿರುವ ಬೆನ್ನಲ್ಲೇ ಕಂಪನಿಗೆ ಪ್ರತಿಕ್ರಿಯಿಸಿದೆ. ಅದಾನಿ ಗ್ರೂಪ್‌ ಅಮೆರಿಕದ ಶಾರ್ಟ್‌ಸೆಲ್ಲರ್ ಸಂಸ್ಥೆ ಹಿಂಡನ್‌ಬರ್ಗ್‌(Hindenburg) ರಿಸರ್ಚ್‌ ವರದಿಯನ್ನು ತಳ್ಳಿ ಹಾಕಿದೆ.

ಶನಿವಾರ ರಾತ್ರಿ ಈ ಕುರಿತು 106 ಪುಟಗಳ ವರದಿ ಬಿಡುಗಡೆ ಮಾಡಿರುವ ಹಿಂಡನ್ಬರ್ಗ್‌, ಅದಾನಿಯ ಬೇನಾಮಿ ಕಂಪೆನಿಗಳಲ್ಲಿ ತಾವೇ ಷೇರುಗಳನ್ನು ಹೊಂದಿರುವ ಕಾರಣಕ್ಕೆ ಸೆಬಿ ಮುಖ್ಯಸ್ಥೆಯಾಗಿರುವ ಮಾಧವಿ ಬುಚ್, ಅದಾನಿ ಗ್ರೂಪ್ ವಿರುದ್ಧದ ಷೇರು ಅವ್ಯವಹಾರ ಕುರಿತು ಸರಿಯಾಗಿ ತನಿಖೆ ಮಾಡಿಲ್ಲ ಎಂದು ಆಪಾದಿಸಿದೆ. ಮಾಧವಿ ಬುಚ್ ಮತ್ತು ಅವರ ಪತಿ ಬರ್ಮುಡಾ ಮತ್ತು ಮಾರಿಷಸ್ನಲ್ಲಿರುವ ನಕಲಿ ಕಂಪೆನಿಗಳಲ್ಲಿ ಹೂಡಿಕೆಗಳನ್ನು ಹೊಂದಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿತ್ತು.

ಈ ಬಗ್ಗೆ ಅದಾನಿ ಗ್ರೂಪ್‌ ಪ್ರಕಟಣೆ ಹೊರಡಿಸಿದ್ದು, ಸಾಗರೋತ್ತರದ ವ್ಯವಹಾರಗಳು ಸಂಪೂರ್ಣವಾಗಿ ಪಾರದರ್ಶಕವಾಗಿದೆ. ನಾವು ಅದಾನಿ ಗ್ರೂಪ್ ವಿರುದ್ಧದ ಈ ಆರೋಪಗಳನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತೇವೆ, ಇವುಗಳನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗಿದೆ, ಆಧಾರರಹಿತವೆಂದು ಸಾಬೀತುಪಡಿಸಲಾಗಿದೆ ಮತ್ತು ಜನವರಿ 2024 ರಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್ ಈಗಾಗಲೇ ವಜಾಗೊಳಿಸಿದೆ ಎಂದು ಅದಾನಿ ಗ್ರೂಪ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

2023ರ ಹಿಂಡನ್‌ಬರ್ಗ್‌ ವರದಿಯಲ್ಲಿ ಏನಿತ್ತು?

ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯು 2023ರ ಜನವರಿಯಲ್ಲಿ ಪ್ರಕಟಿಸಿದ ವರದಿಯು ದೇಶದಲ್ಲಿ ವ್ಯಾಪಕ ಚರ್ಚೆ ಹುಟ್ಟು ಹಾಕಿತ್ತು. “ಹೂಡಿಕೆದಾರರಿಗೆ ಅದಾನಿ ಗ್ರೂಪ್‌ ವಂಚನೆ ಮಾಡದೆ. ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್‌ ಷೇರು ಮೌಲ್ಯಗಳನ್ನು ಹೆಚ್ಚು ತೋರಿಸಿರುವುದು ವಂಚನೆಯಾಗಿದೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದಾದ ಬಳಿಕ ಅದಾನಿ ಗ್ರೂಪ್‌ ಷೇರು ಮೌಲ್ಯವು ದಿಢೀರನೆ ಕುಸಿದು ಭಾರಿ ನಷ್ಟವಾಗಿತ್ತು. ಅಲ್ಲದೆ ಅದಾನಿ ಗ್ರೂಪ್‌ ದಿವಾಳಿಯಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು.

ಹಿಂಡನ್‌ಬರ್ಗ್‌ ವರದಿ ಕುರಿತು ತನಿಖೆಯಾಗಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಹಲವರು ಮೊರೆ ಹೋಗಿದ್ದರು. ಅಲ್ಲದೆ ಅದಾನಿ ಗ್ರೂಪ್‌ ಅಕ್ರಮ ಪತ್ತೆಹಚ್ಚುವಲ್ಲಿ ಸೆಬಿ ವಿಫಲವಾಗಿದೆ. ಹಾಗಾಗಿ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು. ಹಾಗಾಗಿ ಸರ್ವೋಚ್ಚ ನ್ಯಾಯಾಲಯವು 2023ರ ಮಾರ್ಚ್‌ನಲ್ಲಿ ಸೆಬಿ ತನಿಖೆ ಮೇಲೆ ನಿಗಾ ಇರಿಸಲು, ತನಿಖೆಯಲ್ಲಿ ದೋಷ ಪತ್ತೆಹಚ್ಚಲು ಆರು ಸದಸ್ಯರ ತನಿಖಾ ಸಮಿತಿ ರಚಿಸಿತ್ತು. ಇದಾದ ಎರಡು ತಿಂಗಳ ಬಳಿಕ ಸೆಬಿಯು ಸುಪ್ರೀಂ ಕೋರ್ಟ್‌ಗೆ ತನಿಖಾ ವರದಿ ಸಲ್ಲಿಸಿತ್ತು. “ಅದಾನಿ ಗ್ರೂಪ್‌ ವಂಚನೆ ಮಾಡಿದೆ ಎಂಬುದನ್ನು ಸಾಬೀತುಪಡಿಸಲು ಈ ಹಂತದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ” ಎಂದು ಉಲ್ಲೇಖಿಸಿತ್ತು.

ಅದಾನಿ ಗ್ರೂಪ್‌, ವಿದೇಶಗಳಲ್ಲಿ ನಕಲಿ ಕಂಪನಿಗಳ ಮೂಲಕ ತನ್ನ ಕಂಪನಿಗಳ ಷೇರು ದರವನ್ನು ಕೃತಕವಾಗಿ ಏರಿಸಿದೆ ಎಂದು ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್ ಹಿಂಡೆನ್‌ ಬರ್ಗ್‌ ತನ್ನ ವರದಿಯಲ್ಲಿ ಆರೋಪಿಸಿತ್ತು. ಆದರೆ ಅದಾನಿ ಗ್ರೂಪ್‌ ಮಾರುಕಟ್ಟೆ ನಿಯಮಗಳನ್ನು ಉಲ್ಲಂಘಿಸಿರುವುದು ಹಾಗೂ ಮಾರುಕಟ್ಟೆ ನಿಯಂತ್ರಜ ಸೆಬಿ ಅದನ್ನು ಪತ್ತೆಹಚ್ಚುವಲ್ಲಿ ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿಲ್ಲ ಎಂದು ಸಮಿತಿಯ ವರದಿ ತಿಳಿಸಿದೆ.

ಗೌತಮ್‌ ಅದಾನಿ-ಹಿಂಡನ್‌ಬರ್ಗ್‌ ವರದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಬಿ ನಡೆಸುತ್ತಿರುವ ತನಿಖೆಯ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿತ್ತು. “ಸೆಬಿಯು ತನಿಖೆ ಹಾಗೂ ನಿಯಂತ್ರಕ ಸಂಸ್ಥೆಯಾಗಿರುವುದರಿಂದ ಅದರ ತನಿಖೆಯಲ್ಲಿ ಸುಪ್ರೀಂ ಕೋರ್ಟ್‌ ಹಸ್ತಕ್ಷೇಪ ಮಾಡಲು ಆಗುವುದಿಲ್ಲ” ಎಂದು ಸುಪ್ರೀಂ ಕೋರ್ಟ್‌ ತಿಳಿಸಿತ್ತು. ಇದರಿಂದಾಗಿ ಗೌತಮ್‌ ಅದಾನಿ ನೇತೃತ್ವದ ಗ್ರೂಪ್‌ಗೆ ರಿಲೀಫ್‌ ಸಿಕ್ಕಿತ್ತು.

ಇದನ್ನೂ ಓದಿ: Hindenburg: ಶೀಘ್ರದಲ್ಲೇ ಭಾರತದಲ್ಲಿ ಬಹುದೊಡ್ಡ ಸಂಚಲನ ಸೃಷ್ಟಿಯಾಗಲಿದೆ; ಹೊಸದೊಂದು ಬಾಂಬ್‌ ಸಿಡಿಸಿದ ಹಿಂಡನ್‌ಬರ್ಗ್‌

Continue Reading

ದೇಶ

Serial Killer: ಚಿಕ್ಕಮ್ಮನ ಮೇಲಿನ ದ್ವೇಷಕ್ಕೆ 9 ಅಮಾಯಕ ಮಹಿಳೆಯರನ್ನು ಕೊಂದ! ಇಲ್ಲಿದೆ ವಿಲಕ್ಷಣ ಹಂತಕನ unusual story!

Serial Killer: ಹಂತಕ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿದ ಬಳಿಕ ಅವರ ಬಳಿಯಿಂದ ಬಿಂದಿ ಮತ್ತು ಲಿಪ್‌ಸ್ಟಿಕ್‌ ಅನ್ನು ಎತ್ತಿಡುತ್ತಿದ್ದ ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಇದೀಗ ಆತನ ಹೆಡೆಮುರಿ ಕಟ್ಟಿರುವ ಪೊಲೀಸರು ಈ ಎಲ್ಲಾ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Serial Killer
Koo

ಲಖನೌ: ಉತ್ತರಪ್ರದೇಶ(Uttar Pradesh)ದಲ್ಲಿ ಅರೆಸ್ಟ್‌ ಆಗಿರುವ ಸೀರಿಯಲ್‌ ಕಿಲ್ಲರ್‌(Serial Killer)ಬಗ್ಗೆ ಅನೇಕ ವಿಚಾರಗಳು ಬಯಲಾಗುತ್ತಿದೆ. ಈತನ ಪತ್ತೆಗಾಗಿ 22 ಪೊಲೀಸರ ತಂಡ ಬಲೆ ಬೀಸಿತ್ತು. ಮತ್ತು ಬರೋಬ್ಬರಿ 1.50 ಲಕ್ಷ ಮೊಬೈಲ್‌ ಫೋನ್‌ ನಂಬರ್‌ಗಳನ್ನು ಟ್ರ್ಯಾಕ್‌ ಮಾಡಲಾಗಿದೆ. ಇನ್ನು ಕಿರುಕುಳ ನೀಡುತ್ತಿದ್ದ ಚಿಕ್ಕಮ್ಮನ ಮೇಲಿನ ದ್ವೇಷಕ್ಕೆ 9 ಅಮಾಯಕ ಮಹಿಳೆಯರನ್ನು ಕೊಂದಿದ್ದಾನೆ ಎಂಬ ವಿಚಾರ ತನಿಖೆ ವೇಳೆ ಬಯಲಾಗಿದೆ.

ಜೂನ್ 2023 ಮತ್ತು ಜುಲೈ 2024 ರ ನಡುವೆ ಬರೇಲಿ ಶಾಹಿ ಮತ್ತು ಶಿಶ್‌ಗಢ ಪೊಲೀಸ್ ವೃತ್ತದ ಅಡಿಯಲ್ಲಿ ಸುಮಾರು ಒಂಬತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡು ಸೈಕೋ ಕಿಲ್ಲರ್ ಅನ್ನು ನಾವು ಬಂಧಿಸಿದ್ದೇವೆ. ನಾವು 22 ತಂಡಗಳನ್ನು ರಚಿಸಿದ್ದೇವೆ ಮತ್ತು ಆತನನ್ನು ಪತ್ತೆಹಚ್ಚಲು ‘ತಲಾಶ್’ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೆವು ಎಂದು ಬರೇಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಹೇಳಿದ್ದಾರೆ. ಬಂಧಿತನನ್ನು 38 ವರ್ಷದ ಕುಲದೀಪ್‌ ಕುಮಾರ್‌ ಗಂಗ್ವಾರ್‌ ಎಂದು ಗುರುತಿಸಲಾಗಿದೆ.

ಕೊಲೆ ಮಾಡಿ ಬಿಂದಿ, ಲಿಪ್‌ಸ್ಟಿಕ್‌ ಎತ್ತಿಡುತ್ತಿದ್ದ

ಇನ್ನು ಕೊಲೆಗಾರ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿದ ಬಳಿಕ ಅವರ ಬಳಿಯಿಂದ ಬಿಂದಿ ಮತ್ತು ಲಿಪ್‌ಸ್ಟಿಕ್‌ ಅನ್ನು ಎತ್ತಿಡುತ್ತಿದ್ದ ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಇದೀಗ ಆತನ ಹೆಡೆಮುರಿ ಕಟ್ಟಿರುವ ಪೊಲೀಸರು ಈ ಎಲ್ಲಾ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಕುಲದೀಪ್‌ ಬಾಲ್ಯ ಅಷ್ಟೊಂದು ಸುಖಮಯವಾಗಿರಲಿಲ್ಲ. ತಾಯಿ ಬಾಲ್ಯದಲ್ಲೇ ಸಾವನ್ನಪ್ಪಿದ ಬಳಿಕ ತಂದೆ ಇನ್ನೊಂದು ಮದುವೆಯಾಗಿದ್ದ. ಮಲತಾಯಿಯ ಕಿರುಕುಳದಿಂದ ಬೇಸತ್ತಿದ್ದ ಕುಲದೀಪ್‌ಗೆ ಮಹಿಳೆಯರ ಮೇಲೆ ಒಂದು ರೀತಿಯ ದ್ವೇಷ ಬೆಳೆದಿತ್ತು ಎಂಬುದು ಪೊಲೀಸ್‌ ತನಿಖೆ ವೇಳೆ ಬಯಲಾಗಿದೆ. ಸದ್ಯ ಆತನನ್ನು ವೈದ್ಯಕೀಯ ಚಿಕಿತ್ಸೆಗೊಳಪಡಿಸಲಾಗಿದೆ.

ಇದನ್ನೂ ಓದಿ: Serial Killer: 9 ಮಹಿಳೆಯರ ಕೊಂದ ಸರಣಿ ಹಂತಕ ಸೆರೆ; ಆತ ಹೇಗೆ ಕೊಲೆ ಮಾಡುತ್ತಿದ್ದ? ವಿಡಿಯೊ ಇಲ್ಲಿದೆ

Continue Reading

ಉದ್ಯೋಗ

Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ 391 ಹುದ್ದೆ; ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ

Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜೂನಿಯರ್‌ ಎಂಜಿನಿಯರ್‌, ಫಾರ್‌ಮ್ಯಾನ್‌, ಜೂನಿಯರ್‌ ಸೂಪರಿಟೆಂಡೆಂಟ್‌ ಸೇರಿ ಒಟ್ಟು 391 ಹುದ್ದೆಗಳಿವೆ. ದ್ವಿತೀಯ ಪಿಯುಸಿ, ಡಿಪ್ಲೊಮಾ, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 7.

VISTARANEWS.COM


on

Job Alert
Koo

ಬೆಂಗಳೂರು: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ (Gas Authority of India Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜೂನಿಯರ್‌ ಎಂಜಿನಿಯರ್‌, ಫಾರ್‌ಮ್ಯಾನ್‌, ಜೂನಿಯರ್‌ ಸೂಪರಿಟೆಂಡೆಂಟ್‌ ಸೇರಿ ಒಟ್ಟು 391 ಹುದ್ದೆಗಳಿವೆ (GAIL Recruitment 2024). ದ್ವಿತೀಯ ಪಿಯುಸಿ, ಡಿಪ್ಲೊಮಾ, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 7 (Job Alert).

ಹುದ್ದೆಗಳ ವಿವರ

ಜೂನಿಯರ್ ಎಂಜಿನಿಯರ್ (ಕೆಮಿಕಲ್)- 2 ಹುದ್ದೆ, ವಿದ್ಯಾರ್ಹತೆ: ಕೆಮಿಕಲ್ / ಪೆಟ್ರೋಕೆಮಿಕಲ್/ ಕೆಮಿಕಲ್ ಟೆಕ್ನಾಲಜಿ/ ಪೆಟ್ರೋಕೆಮಿಕಲ್ ಟೆಕ್ನಾಲಜಿ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ
ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)- 1 ಹುದ್ದೆ, ವಿದ್ಯಾರ್ಹತೆ: ಮೆಕ್ಯಾನಿಕಲ್/ ಪ್ರೊಡಕ್ಷನ್/ ಪ್ರೊಡಕ್ಷನ್ & ಇಂಡಸ್ಟ್ರಿಯಲ್/ ಮ್ಯಾನುಫ್ಯಾಕ್ಚರಿಂಗ್/ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ
ಫಾರ್‌ಮ್ಯಾನ್‌ (ಎಲೆಕ್ಟ್ರಿಕಲ್) 1 ಹುದ್ದೆ, ವಿದ್ಯಾರ್ಹತೆ: ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಫಾರ್‌ಮ್ಯಾನ್‌ (ಇನ್‌ಸ್ಟ್ರುಮೆಂಟೇಶನ್) 14 ಹುದ್ದೆ, ವಿದ್ಯಾರ್ಹತೆ: ಇನ್‌ಸ್ಟ್ರುಮೆಂಟೇಶನ್ / ಇನ್‌ಸ್ಟ್ರುಮೆಂಟೇಶನ್ & ಕಂಟ್ರೋಲ್/ ಎಲೆಕ್ಟ್ರಾನಿಕ್ಸ್ & ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಿಕಲ್ & ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಫಾರ್‌ಮ್ಯಾನ್‌ (ಸಿವಿಲ್) 6 ಹುದ್ದೆ, ವಿದ್ಯಾರ್ಹತೆ: ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಜೂನಿಯರ್‌ ಸೂಪರಿಟೆಂಡೆಂಟ್‌ 5 ಹುದ್ದೆ, ವಿದ್ಯಾರ್ಹತೆ: ಪದವಿ
ಜೂನಿಯರ್ ಕೆಮಿಸ್ಟ್ 8 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ, ಎಂ.ಎಸ್‌ಸಿ
ಜೂನಿಯರ್ ಅಕೌಂಟೆಂಟ್ 14 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ (ಇಂಟರ್), ಸ್ನಾತಕೋತ್ತರ ಪದವಿ, ಎಂ.ಕಾಂ
ಟೆಕ್ನಿಕಲ್ ಅಸಿಸ್ಟೆಂಟ್ (ಲ್ಯಾಬೊರೇಟರಿ) 3 ಹುದ್ದೆ, ವಿದ್ಯಾರ್ಹತೆ: ಪದವಿ, ಬಿ.ಎಸ್‌ಸಿ
ಆಪರೇಟರ್ (ಕೆಮಿಕಲ್) 73 ಹುದ್ದೆ, ವಿದ್ಯಾರ್ಹತೆ: ಪದವಿ, ಬಿ.ಎಸ್‌ಸಿ
ಟೆಕ್ನಿಷಿಯನ್ (ಎಲೆಕ್ಟ್ರಿಕಲ್) 44 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಟೆಕ್ನಿಷಿಯನ್ (ಇನ್‌ಸ್ಟ್ರುಮೆಂಟೇಶನ್) 45 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಟೆಕ್ನಿಷಿಯನ್ (ಮೆಕ್ಯಾನಿಕಲ್) 39 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಟೆಕ್ನಿಷಿಯನ್ (ಟೆಲಿಕಾಂ ಮತ್ತು ಟೆಲಿಮೆಟ್ರಿ) 11 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಆಪರೇಟರ್ (ಫೈರ್) 39 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಆಪರೇಟರ್ (ಬಾಯ್ಲರ್) 8 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಅಕೌಂಟ್ಸ್ ಅಸಿಸ್ಟೆಂಟ್ 13 ಹುದ್ದೆ, ವಿದ್ಯಾರ್ಹತೆ: ಕಾಮರ್ಸ್‌ನಲ್ಲಿ ಪದವಿ, ಬಿ.ಕಾಂ
ಬಿಸಿನೆಸ್ ಅಸಿಸ್ಟೆಂಟ್ 65 ಹುದ್ದೆ, ವಿದ್ಯಾರ್ಹತೆ: ಬಿಬಿಎ, ಬಿಬಿಎಸ್, ಬಿಬಿಎಂ, ಪದವಿ

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 26ರಿಂದ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಸಾಮಾನ್ಯ, ಇಡಬ್ಲ್ಯುಎಸ್‌ ಮತ್ತು ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 50 ರೂ. ಪಾವತಿಸಬೇಕು. ಉಳಿದ ವಿಭಾಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಲಿಖಿತ ಪರೀಕ್ಷೆ, ಕಂಪ್ಯೂಟರ್‌ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://gailonline.com/CRApplyingGail.html)
  • ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲೊಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

Continue Reading

ದೇಶ

Serial Killer: 9 ಮಹಿಳೆಯರ ಕೊಂದ ಸರಣಿ ಹಂತಕ ಸೆರೆ; ಆತ ಹೇಗೆ ಕೊಲೆ ಮಾಡುತ್ತಿದ್ದ? ವಿಡಿಯೊ ಇಲ್ಲಿದೆ

Serial Killer: ಬಂಧಿತನನ್ನು ಕುಲದೀಪ್‌ ಎಂದು ಗುರುತಿಸಲಾಗಿದ್ದು, ಈ ಪೊಲೀಸರ ಎದುರು ತಾನು ಹೇಗೆ ಕೊಲೆ ಮಾಡುತ್ತಿದೆ ಎಂಬುದನ್ನು ವಿವರಿಸಿದ್ದಾನೆ. ಶಾಹಿ-ಶೀಶ್‌ಗಢ ಪ್ರದೇಶದಲ್ಲಿ 25 ಕಿ.ಮೀ ವ್ಯಾಪ್ತಿಯಲ್ಲಿ ಈ ಕೊಲೆಗಳು ನಡೆದಿದ್ದು, 45 ರಿಂದ 55 ವರ್ಷ ವಯಸ್ಸಿನ ಒಂಬತ್ತು ಮಹಿಳೆಯರನ್ನು ತಮ್ಮ ಸೀರೆಯಿಂದ ಕತ್ತು ಹಿಸುಕಿ ಹಂತಕ ಕೊಲೆಗೈದಿದ್ದಾನೆ.

VISTARANEWS.COM


on

Serial Killer
Koo

ಲಖನೌ: ಕಳೆದೊಂದು ವರ್ಷದಲ್ಲಿ ಬರೋಬ್ಬರಿ 9 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆಗೈದ ಪಾತಕಿಯನ್ನು(Serial Killer) ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಉತ್ತರ ಪ್ರದೇಶ(Uttar Pradesh)ದ ಬರೇಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಈತ ಸರಣಿ ಕೊಲೆ ಹೇಗೆ ಮಾಡುತ್ತಿದ್ದ ಎಂಬುದನ್ನು ಪೊಲೀಸರ ಎದುರು ಪ್ರಾತ್ಯಕ್ಷಿಕೆ ಸಮೇತ ವಿವರಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌(Viral Video) ಆಗುತ್ತಿದೆ.

ಬಂಧಿತನನ್ನು ಕುಲದೀಪ್‌ ಎಂದು ಗುರುತಿಸಲಾಗಿದ್ದು, ಈ ಪೊಲೀಸರ ಎದುರು ತಾನು ಹೇಗೆ ಕೊಲೆ ಮಾಡುತ್ತಿದೆ ಎಂಬುದನ್ನು ವಿವರಿಸಿದ್ದಾನೆ.. ಶಾಹಿ-ಶೀಶ್‌ಗಢ ಪ್ರದೇಶದಲ್ಲಿ 25 ಕಿ.ಮೀ ವ್ಯಾಪ್ತಿಯಲ್ಲಿ ಈ ಕೊಲೆಗಳು ನಡೆದಿದ್ದು, 45 ರಿಂದ 55 ವರ್ಷ ವಯಸ್ಸಿನ ಒಂಬತ್ತು ಮಹಿಳೆಯರನ್ನು ತಮ್ಮ ಸೀರೆಯಿಂದ ಕತ್ತು ಹಿಸುಕಿ ಹಂತಕ ಕೊಲೆಗೈದಿದ್ದಾನೆ. ಕೊಲೆಯಾದ ಮಹಿಳೆಯರ ಶವಗಳು ಬಹುತೇಕ ಹೊಲಗಳಲ್ಲಿ ಪತ್ತೆ ಮಾಡಲಾಗಿವೆ. ಸಾಮಾನ್ಯವಾಗಿ ಮಧ್ಯಾಹ್ನದ ಸುಮಾರಿಗೇ ಈತ ಕೃತ್ಯ ಎಸಗುತ್ತಿದ್ದ. ಇದಕ್ಕೂ ಮುನ್ನ ಅವರನ್ನು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡುತ್ತಿದ್ದ ಎಂಬುದನ್ನು ಕುಲದೀಪ್‌ ಪೊಲೀಸರ ಎದುರು ಒಪ್ಪಿಕೊಂಡಿದ್ದಾನೆ.

ಇನ್ನು ಕೊಲೆಗಳು ಎರಡು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಕೈಗೆತ್ತಿಕೊಂಡಿದೆ. ಈ ಭಯಾನಕ ಘಟನೆಗಳು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.

ಕೆಲವು ತಿಂಗಳ ಹಿಂದೆ ಸರಣಿ ಅತ್ಯಾಚಾರಿ, ಹಂತಕ ರವೀಂದರ್​ ಕುಮಾರ್ ಎಂಬಾತ​​ನಿಗೆ, ಎಂಟು ವರ್ಷಗಳ ಹಿಂದಿನ ಕೇಸ್​ವೊಂದರಲ್ಲಿ ದೆಹಲಿ ನ್ಯಾಯಾಲಯ (Delhi Court) ಈಗ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ರವೀಂದರ್ ಕುಮಾರ್​ನ ಭಯಾನಕ ಸ್ಟೋರಿಯನ್ನು ಇತ್ತೀಚೆಗೆಷ್ಟೇ ಮಾಧ್ಯಮಗಳು ವರದಿ ಮಾಡಿದ್ದವು. 2008ರಿಂದ 2015ರವರೆಗೆ ಸುಮಾರು 30 ಮಕ್ಕಳ ಮೇಲೆ ಅತ್ಯಾಚಾರ ಮಾಡಿ, ಕೊಂದಿದ್ದ. ಅವನಿಗೆ ಹೆಣ್ಣು-ಗಂಡು ಎಂಬ ಭೇದವಿರಲಿಲ್ಲ. 2015ರಲ್ಲಿ, ದೆಹಲಿಯ ಬೇಗಂಪುರ ಎಂಬಲ್ಲಿ, 6 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿ ಕೊಂದಿದ್ದ. ಆ ಕೇಸ್​​ನಡಿ ರವೀಂದರ್​ ಅರೆಸ್ಟ್ ಆಗಿದ್ದ. ಇದೀಗ ಅದೇ ಕೇಸ್​​ನಲ್ಲಿ ದೆಹಲಿ ನ್ಯಾಯಾಲಯ ಅವನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: Serial Killer | ಕೆಜಿಎಫ್ ಸಿನಿಮಾ ಪ್ರೇರಿತ ಯುವಕ ಆದ ಸೀರಿಯಲ್ ಕಿಲ್ಲರ್, ಕಲ್ಲಿನಿಂದ ಜಜ್ಜಿ ಐವರನ್ನು ಕೊಂದೇ ಬಿಟ್ಟ!

Continue Reading
Advertisement
Sarabjot Singh
ಕ್ರೀಡೆ16 mins ago

Sarabjot Singh : ಹರಿಯಾಣ ಸರ್ಕಾರದ ಉದ್ಯೋಗದ ಆಫರ್​ ತಿರಸ್ಕರಿಸಿದ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸರಬ್ಜೋತ್​ ಸಿಂಗ್​​

Hindenburg
ದೇಶ44 mins ago

Hindenburg: ಹಿಂಡನ್‌ಬರ್ಗ್‌ ಸ್ಫೋಟಕ ವರದಿ: ಆರೋಪ ತಳ್ಳಿ ಹಾಕಿದ ಅದಾನಿ ಗ್ರೂಪ್‌

Money Guide
ಮನಿ-ಗೈಡ್45 mins ago

Money Guide: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ತಿಳಿದಿರಲೇಬೇಕಾದ ಅಂಶಗಳಿವು

Mohammed Siraj
ಕ್ರೀಡೆ46 mins ago

Mohammed Siraj: ಕ್ರಿಕೆಟಿಗ ಸಿರಾಜ್‌, ಬಾಕ್ಸರ್​ ನಿಖತ್ ಜರೀನ್‌, ಶೂಟರ್​ ಇಶಾ ಸಿಂಗ್​ಗೆ ನಿವೇಶನ ಮಂಜೂರು ಮಾಡಿದ ತೆಲಂಗಾಣ ಸರ್ಕಾರ

Tungabhadra Dam
ಕರ್ನಾಟಕ1 hour ago

Tungabhadra Dam: ಒಂದು ವಾರದಲ್ಲಿ ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿಯಾಗಲಿದೆ ಎಂದ ಡಿ.ಕೆ.ಶಿವಕುಮಾರ್‌

Viral Video
ವೈರಲ್ ನ್ಯೂಸ್2 hours ago

Viral Video: ಹುಡುಗ ಬೇಡವೆಂದು ಗಲ್ಲ ಒರೆಸಿಕೊಳ್ಳುತ್ತಿದ್ದರೂ ಬಿಡದೆ ಚುಂಬಿಸಿದ ವಿದ್ಯಾರ್ಥಿನಿ! ತರಗತಿಯಲ್ಲೇ ಪ್ರಣಯ! ವಿಡಿಯೊ ನೋಡಿ

building collpase
ದಾವಣಗೆರೆ2 hours ago

Building Collapsed: ನಿರ್ಮಾಣ ಹಂತದ ಶಾಲಾ ಕಟ್ಟಡ ಧ್ವಂಸ ಮಾಡಿದ ಕಿಡಿಗೇಡಿಗಳು

Shakib Al Hasan
ಕ್ರೀಡೆ2 hours ago

Shakib Al Hasan: ಸೂಪರ್‌ ಓವರ್‌ ಆಡಲು ನಿರಾಕರಿಸಿದ ಶಕಿಬ್; ಟೂನಿಯಿಂದಲೇ ಹೊರಬಿದ್ದ ತಂಡ

Tungabhadra Dam
ವಿಜಯನಗರ2 hours ago

Tungabhadra Dam: ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; ಅಧಿಕಾರಿಗಳ ಜತೆ ಸಭೆ

assault case
ಧಾರವಾಡ3 hours ago

Assault Case : ಅಂಜುಮನ್ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಅಪರಿಚಿತರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌