Ajit Pawar: ಎನ್​ಸಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಪೋಸ್ಟರ್​​ನಲ್ಲೂ ಇಲ್ಲ ಅಜಿತ್​ ಪವಾರ್ ಫೋಟೊ! - Vistara News

ದೇಶ

Ajit Pawar: ಎನ್​ಸಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಪೋಸ್ಟರ್​​ನಲ್ಲೂ ಇಲ್ಲ ಅಜಿತ್​ ಪವಾರ್ ಫೋಟೊ!

ಅಜಿತ್ ಪವಾರ್​ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿದ್ದಾರೆ. ಆದರೆ ಅವರು ತಮಗೆ ಈ ಪ್ರತಿಪಕ್ಷ ನಾಯಕನ ಸ್ಥಾನ ಬೇಡ ಎನ್ನುತ್ತಿದ್ದಾರೆ.

VISTARANEWS.COM


on

NCP Meet and Poster
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಎನ್​ಸಿಪಿ ಪಕ್ಷದಲ್ಲಿ ಅಜಿತ್ ಪವಾರ್​ಗೆ ಸ್ಥಾನವೇ ಇಲ್ಲವೇ?-ಈಗಾಗಲೇ ಎನ್​ಸಿಪಿಯಲ್ಲಿ ಅಜಿತ್​ ಪವಾರ್​ (Ajit Pawar) ಬಂಡಾಯದ ಹೊಗೆ ಎದ್ದಿದೆ. ಇತ್ತೀಚೆಗೆ ಶರದ್ ಪವಾರ್ (Sharad Pawar) ಅವರು ಎನ್​ಸಿಪಿ ಕಾರ್ಯಾಧ್ಯಕ್ಷರನ್ನಾಗಿ (NCP Working President) ತಮ್ಮ ಪುತ್ರಿ ಸುಪ್ರಿಯಾ ಸುಳೆ ಮತ್ತು ಪ್ರಫುಲ್ ಪಟೇಲ್​​ ಅವರನ್ನು ನೇಮಕ ಮಾಡಿದ್ದರು. ಆದರೆ ಅಜಿತ್ ಪವಾರ್​ಗೆ ಯಾವುದೇ ಸಂಘಟನಾತ್ಮಕ ಹುದ್ದೆಯನ್ನೂ ಕೊಟ್ಟಿರಲಿಲ್ಲ. ಆಗಲೇ ಹಲವು ಬಗೆಯ ಚರ್ಚೆಗಳು ಎದ್ದಿದ್ದವು. ಅದಕ್ಕೀಗ ಮತ್ತಷ್ಟು ತುಪ್ಪ ಸುರಿಯುವಂತೆ ಇನ್ನೊಂದು ಘಟನೆಯಾಗಿದೆ. ಇಂದು ದೆಹಲಿಯಲ್ಲಿ ನಡೆದ ಎನ್​ಸಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ (NCP National Executive)ಯಲ್ಲಿ ಹಾಕಲಾಗಿದ್ದ ಪೋಸ್ಟರ್​​ನಲ್ಲಿ ಪಕ್ಷದ ಅಧ್ಯಕ್ಷ ಶರದ್ ಪವಾರ್, ಕಾರ್ಯಾಧ್ಯಕ್ಷರಾದ ಸುಪ್ರಿಯಾ ಸುಳೆ ಮತ್ತು ಪ್ರಫುಲ್ ಪಟೇಲ್​ ಫೋಟೋ ಮಾತ್ರ ಇತ್ತು. ಪಕ್ಷದ ಪ್ರಮುಖರಾದ ಅಜಿತ್​ ಪವಾರ್​ ಫೋಟೋ ಇರಲಿಲ್ಲ. ಈ ವಿಷಯವೂ ಈಗ ಮುನ್ನೆಲೆಗೆ ಬಂದಿದೆ.

ಎನ್​ಸಿಪಿ ನಾಯಕ ಅಜಿತ್ ಪವಾರ್ ಅವರು ಶರದ್​ ಪವಾರ್​​ ಸೋದರಳಿಯನೇ ಆಗಬೇಕು. ಕಳೆದ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್ ಪಕ್ಷಗಳು ಒಟ್ಟಾಗಿ ಸರ್ಕಾರ ರಚನೆ ಮಾಡಲು ಯತ್ನಿಸುತ್ತಿದ್ದರೆ, ಇತ್ತ ಅಜಿತ್ ಪವಾರ್ ಮೌನವಾಗಿ, ಒಬ್ಬಂಟಿಯಾಗಿ ಹೋಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರು. ರಾತ್ರಿ ಬೆಳಗು ಆಗುವುದರೊಳಗೆ ಅಜಿತ್ ಪವಾರ್​ ಉಪಮುಖ್ಯಮಂತ್ರಿ, ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿದ್ದರು. ಆದರೆ ಒಂದೇ ದಿನ ಈ ಮೈತ್ರಿ ಕಳಚಿಬಿದ್ದು, ಅಜಿತ್ ಪವಾರ್​ ವಾಪಸ್​ ಎನ್​ಸಿಪಿ ಗೂಡು ಸೇರಿಕೊಂಡದ್ದರು. ಅಲ್ಲಿಂದ ಶುರುವಾದ ಗೊಂದಲ ಪದೇಪದೆ ಹೊಸಹೊಸ ಸ್ವೂರಪದಲ್ಲಿ ಹೊರಬೀಳುತ್ತಿದೆ.

ಇದನ್ನೂ ಓದಿ: Ajit Pawar: ಪಕ್ಷದ ಹುದ್ದೆಗೆ ಅಜಿತ್ ಪವಾರ್ ಪಟ್ಟು, ಇಲ್ಲದಿದ್ದರೆ ಎನ್‌ಸಿಪಿಗೆ ಪೆಟ್ಟು?

ಸದ್ಯ ಅಜಿತ್ ಪವಾರ್​ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿದ್ದಾರೆ. ಆದರೆ ಅವರು ತಮಗೆ ಈ ಪ್ರತಿಪಕ್ಷ ನಾಯಕನ ಸ್ಥಾನ ಬೇಡ ಎನ್ನುತ್ತಿದ್ದಾರೆ. ’ಈ ಪ್ರತಿಪಕ್ಷನ ನಾಯಕನ ಸ್ಥಾನದಿಂದ ನನ್ನನ್ನು ತೆರವುಗೊಳಿಸುವಂತೆ ಪಕ್ಷದ ನಾಯಕರ ಬಳಿ ಕೇಳಿದ್ದೇನೆ. ಇದರ ಹೊರತುಪಡಿಸಿ ಪಕ್ಷದಲ್ಲಿ ಯಾವುದೇ ಸಂಘಟನಾತ್ಮಕ ಹುದ್ದೆಯನ್ನು ನನಗೆ ಕೊಡಲಿ’ ಎಂದು ಇತ್ತೀಚೆಗಷ್ಟೇ ಹೇಳಿದ್ದರು. ಹೀಗೆಲ್ಲ ಇರುವಾಗ ಪೋಸ್ಟರ್​ನಲ್ಲಿ ಕೂಡ ಅವರ ಫೋಟೋ ಕೈಬಿಟ್ಟಿದ್ದು ಚರ್ಚೆಗೆ ಗ್ರಾಸವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Amol Kale: ಭಾರತ-ಪಾಕ್‌ ಪಂದ್ಯ ವೀಕ್ಷಿಸಲು ಅಮೆರಿಕಕ್ಕೆ ತೆರಳಿದ್ದ ಎಂಸಿಎ ಅಧ್ಯಕ್ಷ ಅಮೋಲ್‌ ಕಾಳೆ ನಿಧನ

Amol Kale: ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ ಅಧ್ಯಕ್ಷ ಅಮೋಲ್‌ ಕಾಳೆ ಅವರು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಭಾನುವಾರ ನಡೆದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಿಸಲು ತೆರಳಿದ್ದರು. ಎಂಸಿಎ ಕಾರ್ಯದರ್ಶಿ ಅಜಿಂಕ್ಯ ರಹಾನೆ ಸೇರಿ ಹಲವರ ಜತೆ ತೆರಳಿದ್ದ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪಂದ್ಯ ಮುಗಿದ ಬಳಿಕ ಕ್ರೀಡಾಂಗಣದಿಂದ ತೆರಳುವಾಗ ಅವರಿಗೆ ಹೃದಯ ಸ್ತಂಭನ ಉಂಟಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Amol Kale
Koo

ವಾಷಿಂಗ್ಟನ್:‌ ಅಮೆರಿಕದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ (T20 World Cup 2024)​ ಟೂರ್ನಿಯ ಭಾರತ ಹಾಗೂ ಪಾಕಿಸ್ತಾನ (India vs Pakistan Match) ನಡುವಿನ ರೋಚಕ ಪಂದ್ಯವನ್ನು ವೀಕ್ಷಿಸಲು ಅಮೆರಿಕಕ್ಕೆ ತೆರಳಿದ್ದ ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ (MCA) ಅಧ್ಯಕ್ಷ ಅಮೋಲ್‌ ಕಾಳೆ (Amol Kale) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ನಡೆದ ಭಾನುವಾರವೇ (ಜೂನ್‌ 9) ಅಮೋಲ್‌ ಕಾಳೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಿನ ರೋಚಕ ಪಂದ್ಯವನ್ನು ವೀಕ್ಷಿಸಲು ಅಮೋಲ್‌ ಕಾಳೆ ಅವರು ನ್ಯೂಯಾರ್ಕ್‌ಗೆ ತೆರಳಿದ್ದರು. ಪಂದ್ಯ ವೀಕ್ಷಿಸಿದ ಬಳಿಕ ಅವರು ಸಹೋದ್ಯೋಗಿಗಳೊಂದಿಗೆ ಕ್ರೀಡಾಂಗಣದಿಂದ ವಾಪಸಾಗುವಾಗ ಹೃದಯ ಸ್ತಂಭನದಿಂದ (Cardiac Arrest) ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೋಲ್‌ ಕಾಳೆ ಅವರ ನಿಧನವನ್ನು ಮಹಾರಾಷ್ಟ್ರ ಪ್ರತಿಪಕ್ಷದ ಉಪ ನಾಯಕ ಜಿತೇಂದ್ರ ಅಹ್ವಾದ್‌ ಅವರು ಖಚಿತಪಡಿಸಿದ್ದಾರೆ. “ಎಂಸಿಎ ಅಧ್ಯಕ್ಷ ಅಮೋಲ್‌ ಕಾಳೆ ಅವರು ಉತ್ತಮ ಸಂಘಟಕರಾಗಿದ್ದರು. ಅವರ ಅಗಲಿಕೆಯಿಂದ ನನಗೆ ವೈಯಕ್ತಿಕ ನಷ್ಟವಾಗಿದೆ” ಎಂದು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಮೋಲ್‌ ಕಾಳೆ ನಿಧನಕ್ಕೆ ಹಲವರು ಸಂತಾಪ ಸೂಚಿಸಿದ್ದಾರೆ.

47 ವರ್ಷದ ಅಮೋಲ್‌ ಕಾಳೆ ಅವರು 2022ರ ಅಕ್ಟೋಬರ್‌ನಿಂದಲೂ ಎಂಸಿಎ ಅಧ್ಯಕ್ಷರಾಗಿದ್ದರು. 2022ರ ಅಕ್ಟೋಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಕಾಳೆ ಅವರು ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಸಂದೀಪ್‌ ಪಾಟೀಲ್‌ ಅವರನ್ನು ಸೋಲಿಸಿದ್ದರು. ನಾಗ್ಪುರ ಮೂಲದವರಾದ ಅಮೋಲ್‌ ಕಾಳೆ ಅವರು ಉದ್ಯಮಿಯೂ ಆಗಿದ್ದಾರೆ. ಇವರು ಜೆ ಕೆ ಸೊಲ್ಯೂಷನ್ಸ್‌ ಪ್ರೈವೇಟ್‌ ಲಿಮಿಟೆಡ್‌ ಹಾಗೂ ಅರ್ಪಿತಾ ಎಂಟರ್‌ಪ್ರೈಸಸ್‌ನ ಸಂಸ್ಥಾಪಕರೂ ಆಗಿದ್ದಾರೆ.

ಭಾರತ ಹಾಗೂ ಪಾಕಿಸ್ತಾನದ ಪಂದ್ಯವು ಕಡಿಮೆ ಸ್ಕೋರಿಂಗ್ ಥ್ರಿಲ್ಲರ್ ಆಗಿತ್ತು. 2 ನೇ ಇನ್ನಿಂಗ್ಸ್ ನ ಅಂತಿಮ ಎಸೆತದವರೆಗೂ ಸಂಪೂರ್ಣವಾಗಿ ಸಾಗಿತು. ಪಾಕಿಸ್ತಾನಕ್ಕೆ 120 ಎಸೆತಗಳಲ್ಲಿ ಕೇವಲ 120 ರನ್​ಗಳ ಅಗತ್ಯವಿತ್ತು. ಈ ಸಮೀಕರಣ ಬರೆಯಲು ಸರಳವಾಗಿ ಕಂಡರೂ, ಅನುಷ್ಠಾನವು ಅತ್ಯಂತ ಕಳಪೆಯಾಗಿತ್ತು. ಕೊನೆಯಲ್ಲಿ ಗ್ರೀನ್ ಆರ್ಮಿ 6 ರನ್​ಗಳಿಂದ ಸೋತಿತು.

ಸದ್ಯ ‘ಎ’ ಗುಂಪಿನಲ್ಲಿ ಭಾರತ ಮತ್ತು ಆತಿಥೇಯ ಅಮೆರಿಕ ಆಡಿದ ಎರಡೂ ಪಂದ್ಯಗಳನ್ನು ಗೆದ್ದು ತಲಾ 4 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನಗಳನ್ನು ಪಡೆದುಕೊಂಡಿದೆ. ಒಂದು ಪಂದ್ಯ ಗೆದ್ದ ಕೆನಾಡ ಮೂರನೇ ಸ್ಥಾನದಲ್ಲಿದೆ. ಗೆಲುವೇ ಕಾಣದ ಪಾಕಿಸ್ತಾನ 4ನೇ ಸ್ಥಾನಿಯಾಗಿದೆ. ಪಾಕ್​ ಮುಂದಿನ ಪಂದ್ಯದಲ್ಲಿ ಐರ್ಲೆಂಡ್​ ಮತ್ತು ಕೆನಡಾ ವಿರುದ್ಧ ಆಡಲಿದೆ. ಒಂದು ಗುಂಪಿನಿಂದ ಎರಡು ತಂಡಗಳು ಮಾತ್ರ ಸೂಪರ್ 8ಗೆ ಪ್ರವೇಶ ಪಡೆಯಲಿದೆ.

ಇದನ್ನೂ ಓದಿ: T20 World Cup 2024: ಪಾಕ್​ಗೆ ಇನ್ನೂ ಇದೆ ಸೂಪರ್-8 ಅವಕಾಶ? ಇಲ್ಲಿದೆ ಲೆಕ್ಕಾಚಾರ

Continue Reading

Lok Sabha Election 2024

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಮಾಜಿ ಪ್ರಧಾನಿಗಳಾದ ಮನಮೋಹನ ಸಿಂಗ್‌, ದೇವೇಗೌಡ ಅವರ ಆಶೀರ್ವಾದ ಪಡೆದ ಮೋದಿ

Narendra Modi: ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಮರಳಿ ಬಂದಿದ್ದು, ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಕೂಡಲೇ ಸೋಮವಾರ ಅವರು ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್‌ ಸಿಂಗ್‌ ಮತ್ತು ಎಚ್‌.ಡಿ.ದೇವೇಗೌಡ ಅವರಿಗೆ ಕರೆ ಮಾಡಿ ಆಶೀರ್ವಾದ ಪಡೆದುಕೊಂಡರು.

VISTARANEWS.COM


on

Narenda Modi
Koo

ನವದೆಹಲಿ: ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ (Narendra Modi) ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಕೂಡಲೇ ಅವರು ಸೋಮವಾರ (ಜೂನ್‌ 10) ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ (Pratibha Patil) ಮತ್ತು ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್‌ ಸಿಂಗ್‌ (Manmohan Singh) ಮತ್ತು ಎಚ್‌.ಡಿ.ದೇವೇಗೌಡ (HD Devegowda) ಅವರಿಗೆ ಕರೆ ಮಾಡಿ ಆಶೀರ್ವಾದ ಪಡೆದುಕೊಂಡರು.

ಜೂನ್‌ 9ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು 30 ಕ್ಯಾಬಿನೆಟ್ ದರ್ಜೆಯ ಸಚಿವರು ಸೇರಿದಂತೆ ಇತರ 71 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರತಿಭಾ ಪಾಟೀಲ್‌ ಮತ್ತು ಮನಮೋಹನ್‌ ಸಿಂಗ್ ಇಬ್ಬರೂ ಯುಪಿಎ ಸರ್ಕಾರದ ಅವಧಿಯಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಿಯಾಗಿದ್ದರು. ಕಾಂಗ್ರೆಸ್ ಬೆಂಬಲಿತ ಯುನೈಟೆಡ್ ಫ್ರಂಟ್ ಸರ್ಕಾರದ ಅವಧಿಯಲ್ಲಿ ದೇವೇಗೌಡ ಅವರು ಪ್ರಧಾನಿಯಾಗಿದ್ದರು.

ಸದ್ಯ ಬಿಜೆಪಿ ನೇತೃತ್ವದ ಎನ್‌ಡಿಎಗೆ ದೇವೇಗೌಡ ಅವರ ಜೆಡಿಎಸ್‌ ಬೆಂಬಲ ನೀಡಿದೆ. ಕರ್ನಾಟಕದಲ್ಲಿ ಮೂರು ಕಡೆ ಸ್ಪರ್ಧಿಸಿದ್ದ ಜೆಡಿಎಸ್‌ ಅಭ್ಯರ್ಥಿಗಳ ಪೈಕಿ ಇಬ್ಬರು ಜಯ ಗಳಿಸಿದ್ದಾರೆ. ಈ ಪೈಕಿ ದೇವೇಗೌಡ ಅವರ ಪುತ್ರ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮೋದಿ ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ (ಸಂಪುಟ ದರ್ಜೆ)ಯ ಸಚಿವರಾಗಿ ಅವರು ನಿಯುಕ್ತಿಗೊಂಡಿದ್ದಾರೆ.

ರಾಜ್ಯಕ್ಕೆ 5 ಸಚಿವ ಸ್ಥಾನ

ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ (Modi 3.0 Cabinet) ರಾಜ್ಯದ ಐವರಿಗೆ ಸಚಿವ ಸ್ಥಾನ ಸಿಕ್ಕಿದೆ. ಪ್ರಲ್ಹಾದ್‌ ಜೋಶಿ, ಎಚ್‌.ಡಿ.ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್‌ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ಸಿಕ್ಕಿದ್ದರೆ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಖಾತೆ ನೀಡಲಾಗಿದೆ. ಕರ್ನಾಟಕದ ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮತ್ತೆ ಹಣಕಾಸು ಖಾತೆ ನೀಡಲಾಗಿದ್ದು, ಕಳೆದ ಬಾರಿ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಪ್ರಲ್ಹಾದ್‌ ಜೋಶಿ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ರಕ್ಷಣೆ, ಮರು ಬಳಕೆ ಇಂಧನ ಖಾತೆ ನೀಡಲಾಗಿದೆ. ಇನ್ನು ಮಂಡ್ಯ ಸಂಸದ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಿಕ್ಕಿದೆ. ಕಳೆದ ಬಾರಿ ಕೃಷಿ ಖಾತೆ ರಾಜ್ಯ ಸಚಿವರಾಗಿದ್ದ ಬೆಂ.ಉತ್ತರ ಕ್ಷೇತ್ರ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಖಾತೆ, ತುಮಕೂರು ಸಂಸದ ವಿ.ಸೋಮಣ್ಣ ಅವರಿಗೆ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಹಂಚಿಕೆ ಮಾಡಲಾಗಿದೆ.

ಇದನ್ನೂ ಓದಿ: Tshering Tobgay: ಮೋದಿ ನನ್ನ ಗುರು, ದೊಡ್ಡಣ್ಣ;‌ ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೋಬ್ಗೆ ಬಹುಪರಾಕ್!

ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಸೋಮವಾರ (ಜೂನ್‌ 10) ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನವನ್ನು ಮೊದಲ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ.

Continue Reading

ದೇಶ

Rashtrapati Bhavan: ಮೋದಿ ಪ್ರಮಾಣ ವಚನ ಸಮಾರಂಭದ ವೇಳೆ ಕಾಣಿಸಿಕೊಂಡಿದ್ದು ಚಿರತೆಯಲ್ಲ; ಪೊಲೀಸರ ಸ್ಪಷ್ಟನೆ

Rashtrapati Bhavan: ಜೂನ್‌ 9ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇಳೆ ಚಿರತೆಯೊಂದು ಕಾಣಿಸಿಕೊಂಡಿತ್ತು ಎನ್ನುವ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಬಗ್ಗೆ ಅನೇಕರು ಆತಂಕವನ್ನೂ ವ್ಯಕ್ತಪಡಿಸಿದ್ದಾರೆ. ಆದರೆ ಇದೀಗ ದೆಹಲಿ ಪೊಲೀಸರು ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಅವರೇನು ಹೇಳಿದ್ದಾರೆ? ನಿಜವಾಗಿಯೂ ಅಲ್ಲಿ ಚಿರತೆ ಓಡಾಡಿತ್ತೆ? ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

Rashtrapati Bhavan
Koo

ನವದೆಹಲಿ: ಎನ್‌ಡಿಎ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸಹಿತ ಸಚಿವರು ಜೂನ್‌ 9ರಂದು ದೆಹಲಿಯ ರಾಷ್ಟ್ರಪತಿ ಭವನ (Rashtrapati Bhavan)ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೀಗ ಈ ಪ್ರಮಾಣ ವಚನ ಸಮಾರಂಭದ ತುಣುಕೊಂದು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಕಾರ್ಯಕ್ರಮ ನಡೆಯುತ್ತಿರುವಾಗ ರಾಷ್ಟ್ರಪತಿ ಭವನದಲ್ಲಿ ನಿಗೂಢ ಪ್ರಾಣಿಯೊಂದು ಅಡ್ಡಾಡುತ್ತಿರುವುದು ಕಂಡು ಬಂದಿರುವುದೇ ಇದಕ್ಕೆ ಪ್ರಮುಖ ಕಾರಣ. ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಅದನ್ನು ಚಿರತೆ ಎಂದು ಕರೆದಿದ್ದರು. ಈ ಮೂಲಕ ವ್ಯಾಪಕ ಚರ್ಚೆ ನಡೆದಿತ್ತು. ಇದೀಗ ದೆಹಲಿ ಪೊಲೀಸರು ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದು, ಕೇವಲ ಬೆಕ್ಕು ಮತ್ತು ಯಾವುದೇ ಚಿರತೆ ಅಲ್ಲ ಎಂದು ಹೇಳುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ (Viral News).

ಬಿಜೆಪಿಯ ದುರ್ಗಾ ದಾಸ್ ಉಯಿಕೆ ಅವರು ಕೇಂದ್ರ ಸಚಿವರಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸುವ ಸಮಯದಲ್ಲಿ, ವೇದಿಕೆಯ ಹಿನ್ನೆಲೆಯಲ್ಲಿ ಪ್ರಾಣಿಯೊಂದು ಓಡಾಡಿತ್ತು. ಹೆಚ್ಚಿನವರು ಇದನ್ನು ಆಗ ಗಮನಿಸಿರಲಿಲ್ಲ. ಬಳಿಕ ಇದನ್ನು ವಿಡಿಯೊದಲ್ಲಿ ಗುರುತಿಸಿದ ನೆಟ್ಟಿಗರು ಇದನ್ನು ಚಿರತೆ ಎಂದು ಕರೆದಿದ್ದರು. ಹೀಗಾಗಿ ಈ ಬಗ್ಗೆ ದೇಶಾದ್ಯಂತ ವ್ಯಾಪಕ ಚರ್ಚೆ ನಡೆದಿತ್ತು.

ಭಾರತದ ಪ್ರಧಾನ ಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸಹಜವಾಗಿ ಬಿಗಿ ಭದ್ರತೆಯ ಕಾರ್ಯಕ್ರಮವಾಗಿದ್ದು, ರಾಷ್ಟ್ರದ ಮುಖಂಡರು, ರಾಜಕೀಯ ನಾಯಕರು, ಉದ್ಯಮಿಗಳು, ಪ್ರಮುಖ ಚಲನಚಿತ್ರ ನಟರು ಸಾಕ್ಷಿಗಳಾಗಿದ್ದರು. ಇಷ್ಟೆಲ್ಲ ಭದ್ರತೆ ನಡುವೆಯೂ ಚಿರತೆ ಕಾಣಿಸಿಕೊಂಡಿದೆ ಎಂಬ ವಿಚಾರವೇ ಅನೇಕರಲ್ಲಿ ಭಯ ಹುಟ್ಟಿಸಿತ್ತು.

ಪೊಲೀಸರ ಸ್ಪಷ್ಟನೆ

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ದೆಹಲಿ ಪೊಲೀಸರು, ʼʼರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರದ ವೇಳೆ ಸೆರೆಯಾದ ಪ್ರಾಣಿಯ ಚಿತ್ರವನ್ನು ಕೆಲವು ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳು ಚಿರತೆ ಎಂದು ಕರೆದಿವೆ. ಆದರೆ ಇದು ನಿಜವಲ್ಲ. ಕ್ಯಾಮೆರಾದಲ್ಲಿ ಸೆರೆಯಾದ ಪ್ರಾಣಿ ಸಾಮಾನ್ಯ ಮನೆಯ ಬೆಕ್ಕು. ದಯವಿಟ್ಟು ಇಂತಹ ಕ್ಷುಲ್ಲಕ ವದಂತಿಗಳಿಗೆ ಕಿವಿಗೋಡಬೇಡಿ” ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ಕವಿದಿದ್ದ ಆತಂಕದ ಕಾರ್ಮೋಡವನ್ನು ನಿವಾರಿಸಿದ್ದಾರೆ.

ಇದನ್ನೂ ಓದಿ: PM Narendra Modi: ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ! ವಿಡಿಯೋ ಇದೆ ನೋಡಿ

ನೆಟ್ಟಿಗರ ಚರ್ಚೆ

ರಾಷ್ಟ್ರಪತಿ ಭವನದಲ್ಲಿ ಚಿರತೆ ಕಾಣಿಸಿಕೊಂಡಿದೆ ಎನ್ನುವಾಗಲೇ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದ್ದವು. ಅನೇಕರು ಇದನ್ನು ನಂಬಿರಲಿಲ್ಲ. ಇನ್ನು ಕೆಲವರು, ವಿಸ್ತಾರವಾದ ರಾಜಪಥ ಹಾಗೂ ರಾಷ್ಟ್ರಪತಿ ಭವನದ ಆವರಣದಲ್ಲಿ ಚಿರತೆ ಬಂದು ಹುದುಗಿಕೊಂಡಿರುವ ಸಾಧ್ಯತೆಯನ್ನು ಅಲ್ಲಗೆಳೆಯಲಾಗುವುದಿಲ್ಲ. ʼಅಮೃತ್ ಉದ್ಯಾನ್ʼ ಎಂದು ಕರೆಯಲಾಗುವ ಉದ್ಯಾನ 15 ಎಕರೆಗಳಷ್ಟು ಹರಡಿದ್ದು, ಹಲವು ಕಡೆ ದಟ್ಟವಾದ ಕಾಡು ಇದೆ. ಈಸ್ಟ್ ಲಾನ್, ಸೆಂಟ್ರಲ್ ಲಾನ್, ಲಾಂಗ್ ಗಾರ್ಡನ್ ಮತ್ತು ಸರ್ಕ್ಯುಲರ್ ಗಾರ್ಡನ್ ಇದರ ಮೂಲ ಆಕರ್ಷಣೆಗಳಾಗಿವೆ. ಹರ್ಬಲ್ ಗಾರ್ಡನ್, ಟ್ಯಾಕ್ಟೈಲ್ ಗಾರ್ಡನ್, ಬೋನ್ಸಾಯ್ ಗಾರ್ಡನ್ ಮತ್ತು ಆರೋಗ್ಯ ವನಗಳು ಇಲ್ಲಿವೆ. ಹೀಗಾಗಿ ಇಲ್ಲಿಂದ ಚಿರತೆ ಕಣ್ತಪ್ಪಿಸಿ ಬಂದಿರುವ ಸಾಧ್ಯತೆ ಇದೆ ಎಂದು ಅಭಿಪ್ರಾಯ ಪಟ್ಟಿದ್ದರು. ಸದ್ಯ ಗೊಂದಲ ನಿವಾರಣೆಯಾಗಿದೆ.

Continue Reading

ಪ್ರಮುಖ ಸುದ್ದಿ

salaries of prime minister: ರಾಷ್ಟ್ರಪತಿ, ಪ್ರಧಾನಿಗೆ ಸಂಬಳ, ಸೌಲಭ್ಯ ಎಷ್ಟಿರುತ್ತವೆ ಗೊತ್ತೆ?

salaries of prime minister ಸಂಬಳದ ವಿಷಯಕ್ಕೆ ಬಂದಾಗ ಎಲ್ಲರ ತಲೆಯಲ್ಲಿಯೂ ಒಂದು ಯೋಚನೆ ಇರುತ್ತದೆ. ಈ ದೇಶದ ಆಡಳಿತವನ್ನು ನಡೆಸುವ ಪ್ರಧಾನ ಮಂತ್ರಿಗಳು, ರಾಷ್ಟ್ರಪತಿಗಳಿಗೆ ಸಂಬಳ ಎಷ್ಟಿರಬಹುದು ಎಂದು. ಅವರ ಸಂಬಳ, ಸಿಗುವ ಸವಲತ್ತುಗಳ ಕುರಿತು ಒಂದಷ್ಟು ಮಾಹಿತಿಗಳು ಇಲ್ಲಿವೆ ನೋಡಿ. ಪ್ರಧಾನಿ ಮತ್ತು ರಾಷ್ಟ್ರಪತಿಗೆ ಇರುವ ಸೌಕರ್ಯದ ಮಾಹಿತಿಯನ್ನು ತಿಳಿದುಕೊಂಡಿರಿ.

VISTARANEWS.COM


on

salaries of prime minister
Koo

ದೆಹಲಿ: ನೀವು ಯಾವುದಾದರೂ ಕೆಲಸದಲ್ಲಿ ಇದ್ದರೆ ನಿಮಗೆಷ್ಟು ಸಂಬಳ ಕೊಡುತ್ತಾರೆ ಎಂದು ಯಾರಾದರೂ ಕೇಳಿಯೇ ಕೇಳುತ್ತಾರೆ. ಕೆಲಸಕ್ಕಿಂತ ಹೆಚ್ಚಾಗಿ ಸಂಬಳವೇ ಎಲ್ಲರ ಕಣ್ಣನ್ನು ಸೆಳೆಯುತ್ತದೆ. ಇನ್ನು ಕೆಲವರಿಗೆ ಹೀಗೆ ಕೇಳುವುದು ಒಂದು ಕುತೂಹಲವಾಗಿರುತ್ತದೆ. ಸಣ್ಣಪುಟ್ಟ ಕಂಪನಿಯಲ್ಲಿ ಕೆಲಸ ಮಾಡುವವರನ್ನು ಬಿಡದವರು ಇನ್ನು ದೇಶದ ಆಡಳಿತದ ಚುಕ್ಕಾಣಿ ಹಿಡಿದವರನ್ನು ಬಿಡುತ್ತಾರಾ….? ದೇಶದಲ್ಲಿ ಹಲವಾರು ಉನ್ನತ ಹುದ್ದೆಗಳಿವೆ. ಅದರಲ್ಲಿ ದೇಶದ ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿ ಬಹಳ ಮುಖ್ಯವಾದ ಹುದ್ದೆಗಳಾಗಿವೆ. ಸಾಮಾನ್ಯ ಹುದ್ದೆಗಳನ್ನು ಪಡೆದಿರುವವರಿಗೆ ತಿಂಗಳಿಗೆ ಕೈತುಂಬಾ ಸಂಬಳ ಬರುತ್ತದೆ. ಹಾಗಾದ್ರೆ ದೇಶದ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಹುದ್ದೆಗೆ ಎಷ್ಟು ಸಂಬಳವಿರಬಹುದು (salaries of prime minister) ಎಂಬ ಕುತೂಹಲ ಎಲ್ಲರಲ್ಲೂ ಇರುತ್ತದೆ. ಅದರ ವಿವರ ಇಲ್ಲಿದೆ ನೋಡಿ.

ರಾಷ್ಟ್ರಪತಿ

ದೇಶದ ಮೂರು ಉನ್ನತ ಹುದ್ದೆಗಳಲ್ಲಿ ರಾಷ್ಟ್ರಪತಿ ಹುದ್ದೆ ಒಂದು. 2018ರಲ್ಲಿ ಭಾರತದ ರಾಷ್ಟ್ರಪತಿಗಳ ವೇತನವನ್ನು ತಿಂಗಳಿಗೆ 1.50 ಲಕ್ಷದಿಂದ 5 ಲಕ್ಷಕ್ಕೆ ಪರಿಷ್ಕರಿಸಲಾಯಿತು.  ಹಾಗೇ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ತಮ್ಮ ಬಜೆಟ್ ನಲ್ಲಿ ಭಾರತೀಯ ರಾಷ್ಟ್ರಪತಿಗಳ ಗೌರವಧನವನ್ನು ಜನವರಿ 2006ರಿಂದ ಜಾರಿಗೆ ಬರುವಂತೆ ಕೊನೆಯ ಬಾರಿಗೆ ಪರಿಷ್ಕರಿಸಲಾಗಿರುವುದಾಗಿ ತಿಳಿಸಿದ್ದರು. ಹಾಗಾಗಿ ಗೃಹ ವ್ಯವಹಾರ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ  ರಾಷ್ಟ್ರಪತಿಗಳ ಸವಲತ್ತಿನ ವಿವರ ಹೀಗಿದೆ:

-ರಾಷ್ಟ್ರಪತಿ ವಿಮಾನ, ರೈಲು ಅಥವಾ ಸ್ಟೀಮರ್ ಗಳ ಮೂಲಕ ದೇಶದ ಯಾವ ಪ್ರದೇಶಕ್ಕೂ ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದು. ಹಾಗೇ ಅವರ ಜೊತೆ ಸಹಾಯಕ್ಕಾಗಿ ಒಬ್ಬ ವ್ಯಕ್ತಿಯನ್ನು ಕರೆತರಬಹುದಾಗಿದೆ. ಅವರ ಖರ್ಚನ್ನು ಸರ್ಕಾರವೇ ಭರಿಸುತ್ತದೆ.

-ರಾಷ್ಟ್ರಪತಿ ವೈದ್ಯಕೀಯ ಸೇವೆಗಳನ್ನು ಉಚಿತವಾಗಿ ಪಡೆಯಬಹುದಾಗಿದೆ.

-ಸುಸಜ್ಜಿತ ಬಾಡಿಗೆ ಮುಕ್ತ ಮನೆ, ಎರಡು ಉಚಿತ ಲ್ಯಾಂಡ್ ಲೈನ್ ಗಳು ( ಇದರಲ್ಲಿ ಒಂದು ಇಂಟರ್ ನೆಟ್ ಸಂಪರ್ಕಕ್ಕಾಗಿ ), ಮೊಬೈಲ್ ಫೋನ್, ಮನೆಯ ನಿರ್ವಹಣೆಯ ಜೊತೆಗೆ ಐದು ವೈಯಕ್ತಿಕ ಸಿಬ್ಬಂದಿಗಳನ್ನು ನೀಡಲಾಗುತ್ತದೆ.

-ಒಂದು ವೇಳೆ ರಾಷ್ಟ್ರಪತಿ, ಹುದ್ದೆಯಲ್ಲಿರುವಾಗಲೇ ಮರಣ ಹೊಂದಿದರೆ ಅವರ ಸಂಗಾತಿಗೆ ನಿವೃತ್ತಿಯ ವೇಳೆ ರಾಷ್ಟ್ರಪತಿಗೆ ನೀಡಲಾಗುವಂತಹ ಕುಟುಂಬ ಪಿಂಚಣಿಯನ್ನು ಐವತ್ತು ಪ್ರತಿಶತ ಪಿಂಚಣಿ ದರದಲ್ಲಿ ಜೀವಮಾನವಿಡೀ ನೀಡಲಾಗುವುದು.

-ಹಾಗೇ ರಾಷ್ಟ್ರಪತಿಯ ಸಂಗಾತಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಸಹ ನೀಡಲಾಗುವುದು.

ಉಪರಾಷ್ಟ್ರಪತಿ

ಬಜೆಟ್ ನಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಉಪರಾಷ್ಟ್ರಪತಿಯ ಗೌರವಧನವನ್ನು ತಿಂಗಳಿಗೆ 1.25 ಲಕ್ಷದಿಂದ 4 ಲಕ್ಷಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ್ದರು. ಅದಕ್ಕೆ ಸಂಬಂಧಿಸಿದ ಸವಲತ್ತುಗಳ ವಿವರ ಇಲ್ಲಿದೆ:

– ಉಪರಾಷ್ಟ್ರಪತಿಯು ಉಚಿತ ವಸತಿ, ವೈಯಕ್ತಿಕ ಭದ್ರತೆ, ವೈದ್ಯಕೀಯ ಆರೈಕೆ, ರೈಲು ಮತ್ತು ವಿಮಾನ ಪ್ರಯಾಣ, ಸ್ಥಿರ ದೂರವಾಣಿ ಸಂಪರ್ಕ, ಮೊಬೈಲ್ ಫೋನ್ ಸೇವೆ ಮತ್ತು ಸಿಬ್ಬಂದಿಯನ್ನು ಪಡೆಯಬಹುದಾಗಿದೆ.

-ನಿವೃತ್ತಿಯ ನಂತರ ಅವರು ಖಾಸಗಿ ಕಾರ್ಯದರ್ಶಿ, ಹೆಚ್ಚುವರಿ ಖಾಸಗಿ ಕಾರ್ಯದರ್ಶಿ, ವೈಯಕ್ತಿಕ ಸಹಾಯಕ ಮತ್ತು ಇಬ್ಬರು ಪ್ಯೂನ್ ಗಳನ್ನು ಒಳಗೊಂಡಿರುವ ಕಾರ್ಯದರ್ಶಿ ಸಿಬ್ಬಂದಿಯನ್ನು ಹೊಂದಬಹುದಾಗಿದೆ. ಮತ್ತು ಅಂತಹ ಕಾರ್ಯದರ್ಶಿ ಸಿಬ್ಬಂದಿಗಳ ನಿರ್ವಹಣೆಗಾಗಿ ಅವರು ಸಂಬಳವನ್ನು ನೀಡಬೇಕಾಗುತ್ತದೆಯಂತೆ.

ಇದನ್ನೂ ಓದಿ:Assault Case: ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ತಡೆಗಟ್ಟಿ ಹಲ್ಲೆ ಮಾಡಿದ ಕ್ರೂರಿಗಳು!

ಪ್ರಧಾನ ಮಂತ್ರಿ

ಭಾರತದ ಪ್ರಧಾನ ಮಂತ್ರಿಗಳು ತಿಂಗಳಿಗೆ 1.66 ಲಕ್ಷ ರೂ. ಸಂಬಳವನ್ನು ಪಡೆಯುತ್ತಾರೆ. ಇತರ ಭತ್ಯೆಗಳು ಬೇರೆ ಇರುತ್ತವೆ. ಅವರಿಗೆ ನೀಡಲಾದ ಸವಲತ್ತುಗಳ ವಿವರ ಇಲ್ಲಿದೆ:

-ಅವರ ಭದ್ರತೆಗೆ ವೈಯಕ್ತಿಕ ಸಿಬ್ಬಂದಿಗಳ ವಿಶೇಷ ರಕ್ಷಣಾ ತಡವನ್ನು ನಿಯೋಜಿಸಲಾಗುತ್ತದೆ.

-ಪ್ರಧಾನಿಯವರು ಪ್ರಯಾಣಿಸಲು ಒಂದು ವಿಶೇಷವಾದ ವಿಮಾನ –ಏರ್ ಇಂಡಿಯಾ ಒನ್ ಅನ್ನು ನೀಡಲಾಗುತ್ತದೆ.

– ರೇಸ್ ಕೋರ್ಸ್ ರಸ್ತೆಯ 7 ರಲ್ಲಿ ಅವರಿಗೆ ಅಧಿಕೃತ ನಿವಾಸವನ್ನು ನೀಡಲಾಗುತ್ತದೆ.

  • – ಉಚಿತ ವೈದ್ಯಕೀಯ ಸೌಲಭ್ಯ, ಉಚಿತ ಸಾರಿಗೆ ಸೌಲಭ್ಯ ಇತ್ಯಾದಿ ಸೌಕರ್ಯಗಳು ಪ್ರಧಾನಿಗಿರುತ್ತವೆ.
  • – ನಿವೃತ್ತಿಯ ಬಳಿಕವೂ ಪ್ರಧಾನಿಯಾಗಿದ್ದವರು ಮತ್ತು ಅವರ ಕುಟುಂಬಕ್ಕೆ ಉಚಿತ ಸೌಕರ್ಯ ಮುಂದುವರಿಯುತ್ತವೆ.
Continue Reading
Advertisement
Virat Kohli
ಕ್ರೀಡೆ29 mins ago

Virat Kohli: ಸಾರ್ವಜನಿಕವಾಗಿ ಕಾಣಿಸಿಕೊಂಡರೂ ಕೊಹ್ಲಿಯನ್ನು ಗುರುತಿಸದ ನ್ಯೂಯಾರ್ಕ್​ ಜನತೆ; ವಿಡಿಯೊ ವೈರಲ್​

Cashless Health Claim
ಮನಿ ಗೈಡ್42 mins ago

Cashless Health Claim: ಸಂಪೂರ್ಣ ನಗದು ರಹಿತ ಆರೋಗ್ಯ ವಿಮೆ ಕ್ಲೈಮ್; ಆಗಸ್ಟ್ 1ರಿಂದ ಜಾರಿ

Shatrughan Sinha
ಸಿನಿಮಾ43 mins ago

Shatrughan Sinha: ಮುಸ್ಲಿಂ ಯುವಕನ ಜತೆ ಮಗಳ ವಿವಾಹ; ನಟ ಶತ್ರುಘ್ನ ಸಿನ್ಹಾ ಪ್ರತಿಕ್ರಿಯೆ ಏನು?

Amol Kale
ಪ್ರಮುಖ ಸುದ್ದಿ45 mins ago

Amol Kale: ಭಾರತ-ಪಾಕ್‌ ಪಂದ್ಯ ವೀಕ್ಷಿಸಲು ಅಮೆರಿಕಕ್ಕೆ ತೆರಳಿದ್ದ ಎಂಸಿಎ ಅಧ್ಯಕ್ಷ ಅಮೋಲ್‌ ಕಾಳೆ ನಿಧನ

T20 World Cup 2024
ಕ್ರಿಕೆಟ್1 hour ago

T20 World Cup 2024: ಪಾಕ್​ಗೆ ಇನ್ನೂ ಇದೆ ಸೂಪರ್-8 ಅವಕಾಶ? ಇಲ್ಲಿದೆ ಲೆಕ್ಕಾಚಾರ

Narenda Modi
Lok Sabha Election 20241 hour ago

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಮಾಜಿ ಪ್ರಧಾನಿಗಳಾದ ಮನಮೋಹನ ಸಿಂಗ್‌, ದೇವೇಗೌಡ ಅವರ ಆಶೀರ್ವಾದ ಪಡೆದ ಮೋದಿ

Smartphone Charging Tips
ತಂತ್ರಜ್ಞಾನ2 hours ago

Smartphone Charging Tips: ನಿಮ್ಮ ಸ್ಮಾರ್ಟ್ ಪೋನ್ ಬ್ಯಾಟರಿ ಹೆಚ್ಚು ಬಾಳಿಕೆ ಬರಲು ಹೀಗೆ ಮಾಡಿ

Bengaluru Crime News
ಬೆಂಗಳೂರು2 hours ago

ಬೈಕ್‌ ಮರೆತು ಬಂದಿದ್ದನ್ನು ಪ್ರಶ್ನಿಸಿದ ಮಗನನ್ನೇ ಕೊಂದ ತಂದೆ; ಕುಡಿದ ಮತ್ತಲ್ಲಿ ನಡೆಯಿತು ದುರಂತ!

RSA vs BAN
ಕ್ರೀಡೆ2 hours ago

RSA vs BAN: ಹ್ಯಾಟ್ರಿಕ್​ ಗೆಲುವು ಸಾಧಿಸಿ ಸೂಪರ್​-8 ಹಂತಕ್ಕೆ ಲಗ್ಗೆಯಿಟ್ಟ ದಕ್ಷಿಣ ಆಫ್ರಿಕಾ

Delhi Tour
ಲೈಫ್‌ಸ್ಟೈಲ್2 hours ago

Delhi Tour: ದೆಹಲಿಗೆ ಪ್ರವಾಸಕ್ಕೆ ಹೋದಾಗ ಮಿಸ್ ಮಾಡದೇ ಈ ಅದ್ಭುತ ಸ್ಥಳಗಳಿಗೆ ಭೇಟಿ ನೀಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌