ವಿಮಲ್‌ಗಾಗಿ ಫ್ಯಾನ್ಸ್‌ ಕ್ಷಮೆ ಯಾಚಿಸಿದ ಅಕ್ಷಯ್‌ ಕುಮಾರ್ - Vistara News

ದೇಶ

ವಿಮಲ್‌ಗಾಗಿ ಫ್ಯಾನ್ಸ್‌ ಕ್ಷಮೆ ಯಾಚಿಸಿದ ಅಕ್ಷಯ್‌ ಕುಮಾರ್

ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ವಿಮಲ್‌ ಬ್ರಾಂಡ್‌ ಪ್ರಚಾರ ರಾಯಭಾರಿಯಿಂದ ಹಿಂದೆ ಸರಿದಿದ್ದಾರೆ. ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ವಿಮಲ್‌ ಬ್ರಾಂಡ್‌ ರಾಯಭಾರಿ ಸ್ಥಾನದಿಂದ ಕೆಳಗಿಳಿಯುವುದಾಗಿ ತಿಳಿಸಿದ್ದಾರೆ. ಅಲ್ಲದೆ, ವಿಮಲ್‌ ಬ್ರಾಂಡ್‌ ರಾಯಭಾರಿಯಾಗಿ ಜಾಹಿರಾತಿನಲ್ಲಿ ಪ್ರಚಾರ ಮಾಡಿದ್ದಕ್ಕೆ ಫ್ಯಾನ್ಸ್‌ಗೆ ತಮ್ಮ ಇನ್ಸ್‌ಟಾಗ್ರಾಂ, ಟ್ವಿಟರ್ ಖಾತೆಯಲ್ಲಿ ಪೋಸ್ಟ್‌‌ ಮೂಲಕ ಕ್ಷಮೆಯಾಚಿಸಿದ್ದಾರೆ.

ವಿಮಲ್‌ ಎಂಬ ಬ್ರಾಂಡ್‌ ಗುಟ್ಕಾ ತಯಾರಿಸುವ ಕಂಪೆನಿಯಾಗಿದ್ದು, ತಂಬಾಕು ಕೂಡ ತಯಾರಿಸುತ್ತದೆ. ಈ ರೀತಿಯ ತಂಬಾಕು ತಯಾರಿಕಾ ಸಂಸ್ಥೆಗೆ ಅಕ್ಷಯ್‌ ಕುಮಾರ್‌ ಬ್ರಾಂಡ್‌ ಪ್ರಚಾರ ರಾಯಭಾರಿಗಿದ್ದು, ನಟ ಅಕ್ಷಯ್‌ ಕುಮಾರ್‌ ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಗಿತ್ತು. ನಟ ಅಕ್ಷಯ್‌ ಕುಮಾರ್‌ ಅವರ ಈ ನಡೆಗೆ ಅಭಿಮಾನಿಗಳು ತೀವ್ರ ವಿರೊಧ ವ್ಯಕ್ತಪಡಿಸಿದ್ದರು. ಸಮಾಜಿಕ ಜಾಲತಾಣದಲ್ಲಿ ನಟ ಅಕ್ಷಯ್‌ ಅವರ ಈ ನಿರ್ಧಾರವನ್ನು ಅನೇಕರು ಪ್ರಶ್ನಿಸಿದ್ದರು. ಈ ಹಿಂದೆ ಅಕ್ಚಯ್‌ ಕುಮಾರ್‌ ಮದ್ಯಪಾನ, ಧೂಮಪಾನ ಹಾಗೂ ತಂಬಾಕು ಸೇವನೆಯಿಂದ ಉಂಟಾಗುವ ಹಾನಿಯ ಬಗ್ಗೆ ಮಾತನಾಡಿದ್ದರು. ಅಲ್ಲದೆ, ತಂಬಾಕು ಸೇವನೆಯನ್ನು ವಿರೋಧಿಸಿ ಮಾತನಾಡಿದ್ದರು. ಅದೇ ಅಕ್ಷಯ್‌ ಕುಮಾರ್‌ ವಿಮಲ್‌ ಪಾನ್‌ಮಸಾಲಾವನ್ನು ಪ್ರಚಾರ ಮಾಡುತ್ತಿದ್ದರು. ಈಗ ಅಕ್ಷಯ್‌ ಕುಮಾರ್‌ ಅಭಿಮಾನಿಗಳು ಮತ್ತೊಮ್ಮೆ ಆ ವೀಡಿಯೋಗಳನ್ನು ವೈರಲ್‌ ಮಾಡುವ ಜತೆಗೆ ಅಕ್ಷಯ್‌ ಅವರಿಗೆ ತಾವು ಹಿಂದೆ ಹೇಳಿದ ಮಾತುಗಳನ್ನು ನೆನಪಿಸಿದ್ದಾರೆ.

ಅಭಿಮಾನಿಗಳ ಪ್ರಶ್ನೆ ಪ್ರತಿಕ್ರಿಯಿಸಿ ಅಕ್ಷಯ್‌ ಕುಮಾರ ಕ್ಷಮೆಯಾಚಿಸಿದ್ದು ಅಲ್ಲದೆ, ವಿಮಲ್‌ ಬ್ರಾಂಡ್‌ ಪ್ರಚಾರ ರಾಯಭಾರಿ ಸ್ಥಾನದಿಂದ ಕೆಳಿಗಿಳಿಯುವುದಾಗಿ ಹೇಳಿದ್ದಾರೆ.

ನಟ ಅಕ್ಷಯ್‌ ತಮ್ಮ ಪೋಸ್ಟ್‌ನಲ್ಲಿ ಹೀಗೆ ಹೇಳಿದ್ದಾರೆ

ʼನಾನು ನನ್ನ ಅಭಿಮಾನಿಗಳು ಹಾಗೂ ಹಿತೈಷಿಗಳಲ್ಲಿ ಕ್ಷಮೆಯಾಚಿಸುತ್ತೇನೆ. ನನ್ನನ್ನು ಕ್ಷಮಿಸಿ. ನಾನು ವಿಮಲ್‌ ಬ್ರಾಂಡ್‌ನ ರಾಯಭಾರಿಯಾಗಿರುವ ನಿರ್ಧಾರದಿಂದ ನನ್ನ ಅಭಿಮಾನಿಗಳಿಗೆ ನೋವುಂಟಾಗಿರುವುದು ನನಗೂ ಬೇಸರಮೂಡಿಸಿದೆ. ಅವರೆಲ್ಲರ ಪ್ರತಿಕ್ರಿಯೆಯನ್ನು ನಾನು ಗೌರವಿಸುತ್ತೇನೆ. ಹಾಗಾಗಿ ನಾನು ವಿಮಲ್‌ ಬ್ರಾಂಡ್‌ ರಾಯಭಾರಿಯ ಸ್ಥಾನದಿಂದ ಕೆಳಗಿಳಿಯುತ್ತಿದ್ದೇನೆ. ಅಲ್ಲದೆ, ನಾನು ಪಡೆದ ಸಂಪೂರ್ಣ ವೇತನವನ್ನು ಸತ್ಕಾರ್ಯಕ್ಕೆ ಉಪಯೋಗಿಸುತ್ತೇನೆ. ಈಗಾಗಲೆ, ವಿಮಲ್‌ ವಿಮಲ್‌ ಸಂಸ್ಥೆ ಹಾಗೂ ನನ್ನ ನಡುವೆ ಕಾನೂನು ಬದ್ಧ ಒಪ್ಪಂದ ಇರುವ ಕಾರಣದಿಂದ ಜಾಹಿರಾತು ಕೆಲ ಕಾಲ ಪ್ರಸಾರವಾಗುತ್ತದೆ. ಮುಂದಿನ ದಿನಗಳಲ್ಲಿ ನಾನು ನಿರ್ಧಾರವನ್ನು ಜವಾಬ್ದಾರಿಯುತವಾಗಿ ಮಾಡುವುದಾಗಿ ಮಾತು ನೀಡುತ್ತೇನೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ನನ್ನ ಮೇಲೆ ಹೀಗೆಯೇ ಇರಲಿ.ʼ

ಈಗಾಗಲೇ, ವಿಮಲ್‌ ಪಾನ್‌ ಮಸಾಲ ಜಾಹಿರಾತಿನಲ್ಲಿ ಅಜಯ್‌ ದೇವಗನ್‌ ಹಾಗೂ ಶಾರೂಖ್‌ ಖಾನ್‌ ಭಾಗಿಯಾಗಿದ್ದರು. ಇತ್ತೀಚೆಗೆ ಅಜಯ್‌‌ ದೇವಗನ್ ಹಾಗೂ ಶಾರೂಖ್‌ ಖಾನ್‌ ಸೇರಿ ಅಕ್ಷಯ್‌ ಕುಮಾರ್‌ ಅವರನ್ನು ತಮ್ಮ್‌ ಗುಂಪಿಗೆ ಸ್ವಾಗಿತಿಸುವ ವೀಡಿಯೋ ವೈರಲ್‌ ಅಗಿತ್ತು.

ಹೆಚ್ಚಿನ ಓದಿಗಾಗಿ:

ಹೆಚ್ಚಿನ ಓದಿಗಾಗಿ: ಈಜಿ ಚಿನ್ನ ಗೆದ್ದ ಮಾಧವನ್‌ ಪುತ್ರ: ವೇದಾಂತ್‌ ಸಾಧನೆಗೆ ಮೆಚ್ಚುಗೆಯ ಸುರಿಮಳೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

UPSC Results 2023: ಯುಪಿಎಸ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ್‌ ಅವರು ದೇಶಕ್ಕೇ ಮೊದಲ ರ‍್ಯಾಂಕ್‌ ಗಳಿಸಿದ್ದಾರೆ. ಐಐಟಿ ಕಾನ್ಪುರದಲ್ಲಿ ಅಧ್ಯಯನ ಮಾಡಿರುವ ಇವರು ಯುಪಿಎಸ್‌ಸಿಗೆ ತಯಾರಿ ನಡೆಸಲು ಎಂಎನ್‌ಸಿ ಕೆಲಸವನ್ನೇ ಬಿಟ್ಟಿದ್ದರು. ಸತತ ಪ್ರಯತ್ನದ ಬಳಕ ಇವರೀಗ ಮೊದಲ ರ‍್ಯಾಂಕ್‌ ಪಡೆದಿದ್ದಾರೆ. ಇವರು ಯಾರು? ಹಿನ್ನೆಲೆ ಏನು ಎಂಬುದರ ಕುರಿತ ಮಾಹಿತಿ ಹೀಗಿದೆ…

VISTARANEWS.COM


on

Aditya Srivastava
Koo

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) ನಡೆಸಿದ ನಾಗರಿಕ ಸೇವೆಗಳ ಪರೀಕ್ಷೆಯ (UPSC Results 2023) ಫಲಿತಾಂಶ ಪ್ರಕಟವಾಗಿದ್ದು, ಆದಿತ್ಯ ಶ್ರೀವಾಸ್ತವ್‌ (Aditya Srivastava) ಅವರು ದೇಶದಲ್ಲೇ ಮೊದಲ ರ‍್ಯಾಂಕ್‌ ಗಳಿಸಿದ್ದಾರೆ. ಆ ಮೂಲಕ ಇವರು ಮಹತ್ವದ ಸಾಧನೆ ಮಾಡಿದ್ದಾರೆ. ಯುಪಿಎಸ್‌ಸಿ ಪರೀಕ್ಷೆಗೆ ತಯಾರಾಗುತ್ತಿರುವ ಯಾರಿಗೇ ಆಗಲಿ ಆದಿತ್ಯ ಶ್ರೀವಾಸ್ತವ್‌ ಅವರು ಮಾದರಿಯಾಗಿದ್ದಾರೆ. ಹಾಗಾದರೆ, ಯಾರಿವರು ಆದಿತ್ಯ ಶ್ರೀವಾಸ್ತವ್?‌ ಇವರ ಹಿನ್ನೆಲೆ ಏನು ಎಂಬುದರ ಮಾಹಿತಿ ಇಲ್ಲಿದೆ.

ಆದಿತ್ಯ ಶ್ರೀವಾಸ್ತವ್‌ ಅವರು ಉತ್ತರ ಪ್ರದೇಶದ ಲಖನೌ ಮೂಲದವರು. ಇವರು ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣವನ್ನು ಲಖನೌನಲ್ಲಿಯೇ ಮುಗಿಸಿದ್ದಾರೆ. ಐಐಟಿ ಕಾನ್ಪುರದಲ್ಲಿ ಎಂ.ಟೆಕ್‌ ಸ್ನಾತಕೋತ್ತರ ಪದವಿ ಪಡೆದ ಇವರು 15 ತಿಂಗಳು ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡಿದ್ದರು. ಆದರೆ, ಐಎಎಸ್‌ ಅಧಿಕಾರಿಯಾಗಬೇಕು ಎಂಬ ಕನಸು ಹೊತ್ತ ಇವರು ಎಲೆಕ್ಟ್ರಿಕಲ್‌ ಎಂಜಿನಿಯರ್ ಉದ್ಯೋಗ ಬಿಟ್ಟು ಐಎಎಸ್‌ಗೆ ಅಧ್ಯಯನ ಮಾಡಲು ಆರಂಭಿಸಿದರು.

2017ರಿಂದಲೂ ಸತತ ಪ್ರಯತ್ನ

ಹಣಕಾಸು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎಂಎನ್‌ಸಿಯಲ್ಲಿ ಕೆಲಸ ಮಾಡಿದ ಆದಿತ್ಯ ಶ್ರೀವಾಸ್ತವ್‌ ಅವರು ನಾಗರಿಕ ಸೇವೆಯ ಕಾರಣಕ್ಕಾಗಿ 2017ರಲ್ಲಿ ಉದ್ಯೋಗ ತೊರೆದು, ಐಎಎಸ್‌ಗೆ ತಯಾರಿ ನಡೆಸಿದರು. ಸತತ ಪ್ರಯತ್ನದ ಮೂಲಕ ಇವರು ಈಗ ಯುಪಿಎಸ್‌ಸಿಯಲ್ಲಿ ಮೊದಲ ರ‍್ಯಾಂಕ್‌ ಗಳಿಸಿದ್ದಾರೆ.

ಆದಿತ್ಯ ಶ್ರೀವಾಸ್ತವ್‌ ಸಂದರ್ಶನ‌ (ಅಣಕು ಸಂದರ್ಶನ)

2023ರ ಸೆಪ್ಟೆಂಬರ್ 15, 16, 17, 23 ಮತ್ತು 24ರಂದು ನಡೆದ ಪರೀಕ್ಷೆಗಳಲ್ಲಿ ನಾಗರಿಕ ಸೇವೆಗಳ ಮುಖ್ಯ ಸಂದರ್ಶನ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸೇವಾ ಆಯೋಗವು 2024ರ ಮೊದಲ ಎರಡು ತಿಂಗಳಲ್ಲಿ ಸಂದರ್ಶಿಸಿತು. 2023ರ ಸೆಪ್ಟೆಂಬರ್‌ನಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ನಾಗರಿಕ ಸೇವೆಗಳ ಲಿಖಿತ ಪರೀಕ್ಷೆಯ ಫಲಿತಾಂಶ ಮತ್ತು 2024ರ ಜನವರಿ- ಏಪ್ರಿಲ್‌ಲ್ಲಿ ನಡೆದ ವ್ಯಕ್ತಿತ್ವ ಪರೀಕ್ಷೆಯ ಸಂದರ್ಶನಗಳ ಆಧಾರದ ಮೇಲೆ ಒಟ್ಟು 1,016 ಅಭ್ಯರ್ಥಿಗಳನ್ನು ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್ ಸೇವೆ ಮತ್ತು ಕೇಂದ್ರ ಸೇವೆಗಳಲ್ಲಿ ಗುಂಪು ʼಎʼ ಮತ್ತು ಗುಂಪು ʼಬಿʼ ಹುದ್ದೆಗಳಿಗೆ ಇವರು ನಿಯುಕ್ತರಾಗುತ್ತಾರೆ.

ಫಲಿತಾಂಶವನ್ನು ಪರಿಶೀಲಿಸಲು ಹೀಗೆ ಮಾಡಿ:

1) ನಿಮ್ಮ ಬ್ರೌಸರ್‌ನಲ್ಲಿ upsc.gov.in ತೆರೆಯಿರಿ

2) What’s New ಸೆಕ್ಷನ್‌ನ ಅಡಿಯಲ್ಲಿ ‘UPSC Civil Services Examination 2023 Final Results’ ಎಂಬುದರ ಮೇಲೆ ಕ್ಲಿಕ್ ಮಾಡಿ.

3) ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಹೆಸರನ್ನು ಪಿಡಿಎಫ್ ಮೂಲಕ ನೀಡಲಾಗಿರುವುದು ತೆರೆಯುತ್ತದೆ.

ಇದನ್ನೂ ಓದಿ: UPSC CSE 2024: ಯುಪಿಎಸ್‌ಸಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ನಿಯಮದಲ್ಲಿದೆ ಕೆಲವು ಬದಲಾವಣೆ; ಇಲ್ಲಿದೆ ಮಾಹಿತಿ

Continue Reading

ಪ್ರಮುಖ ಸುದ್ದಿ

UPSC Result 2024: ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಆದಿತ್ಯ ಶ್ರೀವಾಸ್ತವ ಪ್ರಥಮ ರ್‍ಯಾಂಕ್

UPSC Result 2024: ಅಗ್ರಸ್ಥಾನ ಗಳಿಸಿದವರ ಟಾಪ್‌ 10 ಪಟ್ಟಿಯಲ್ಲಿ ಅನಿಮೇಶ್ ಪ್ರಧಾನ್, ಡೋಣೂರು ಅನನ್ಯಾ ರೆಡ್ಡಿ, ಪಿಕೆ ಸಿದ್ಧಾರ್ಥ್ ರಾಮ್‌ಕುಮಾರ್ ಮತ್ತು ರುಹಾನಿ ಅವರು ಪಟ್ಟಿಯಲ್ಲಿ ಅಗ್ರ ಐದು ಅಭ್ಯರ್ಥಿಗಳಾಗಿದ್ದರೆ, ಸೃಷ್ಟಿ ದಾಬಾಸ್, ಅನ್ಮೋಲ್ ರಾಥೋಡ್, ಆಶಿಶ್ ಕುಮಾರ್, ನೌಶೀನ್ ಮತ್ತು ಆಸಿಹ್ವರಾಯಮ್ ಪ್ರಜಾಪತಿ ನಂತರದ ಸ್ಥಾನಗಳಲ್ಲಿದ್ದಾರೆ.

VISTARANEWS.COM


on

UPSC Result 2024:
Koo

ಹೊಸದಿಲ್ಲಿ: ಕೇಂದ್ರ ಸಾರ್ವಜನಿಕ ಸೇವಾ ಆಯೋಗ (Union Public Service Commission – UPSC) ನಡೆಸಿದ ಈ ವರ್ಷದ ಪರೀಕ್ಷೆಯ ಫಲಿತಾಂಶಗಳನ್ನು (UPSC Result 2024) ಪ್ರಕಟಿಸಿದೆ. ಆದಿತ್ಯ ಶ್ರೀವಾಸ್ತವ (Aditya Srivastava) ಅವರು ಈ ಪ್ರತಿಷ್ಠಿತ ಪರೀಕ್ಷೆಯಲ್ಲಿ ಅಗ್ರಸ್ಥಾನ (UPSC Result 2024 topper) ಗಳಿಸಿದ್ದಾರೆ.

ಅಗ್ರಸ್ಥಾನ ಗಳಿಸಿದವರ ಟಾಪ್‌ 10 ಪಟ್ಟಿಯಲ್ಲಿ ಅನಿಮೇಶ್ ಪ್ರಧಾನ್, ಡೋಣೂರು ಅನನ್ಯಾ ರೆಡ್ಡಿ, ಪಿಕೆ ಸಿದ್ಧಾರ್ಥ್ ರಾಮ್‌ಕುಮಾರ್ ಮತ್ತು ರುಹಾನಿ ಅವರು ಪಟ್ಟಿಯಲ್ಲಿ ಅಗ್ರ ಐದು ಅಭ್ಯರ್ಥಿಗಳಾಗಿದ್ದರೆ, ಸೃಷ್ಟಿ ದಾಬಾಸ್, ಅನ್ಮೋಲ್ ರಾಥೋಡ್, ಆಶಿಶ್ ಕುಮಾರ್, ನೌಶೀನ್ ಮತ್ತು ಆಸಿಹ್ವರಾಯಮ್ ಪ್ರಜಾಪತಿ ನಂತರದ ಸ್ಥಾನಗಳಲ್ಲಿದ್ದಾರೆ.

2023ರ ಸೆಪ್ಟೆಂಬರ್ 15, 16, 17, 23 ಮತ್ತು 24ರಂದು ನಡೆದ ಪರೀಕ್ಷೆಗಳಲ್ಲಿ ನಾಗರಿಕ ಸೇವೆಗಳ ಮುಖ್ಯ ಸಂದರ್ಶನ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸೇವಾ ಆಯೋಗವು 2024ರ ಮೊದಲ ಎರಡು ತಿಂಗಳುಗಳಲ್ಲಿ ಸಂದರ್ಶಿಸಿತು.

2023ರ ಸೆಪ್ಟೆಂಬರ್‌ನಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ನಾಗರಿಕ ಸೇವೆಗಳ ಲಿಖಿತ ಪರೀಕ್ಷೆಯ ಫಲಿತಾಂಶ ಮತ್ತು 2024ರ ಜನವರಿ- ಏಪ್ರಿಲ್‌ಲ್ಲಿ ನಡೆದ ವ್ಯಕ್ತಿತ್ವ ಪರೀಕ್ಷೆಯ ಸಂದರ್ಶನಗಳ ಆಧಾರದ ಮೇಲೆ ಒಟ್ಟು 1,016 ಅಭ್ಯರ್ಥಿಗಳನ್ನು ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್ ಸೇವೆ ಮತ್ತು ಕೇಂದ್ರ ಸೇವೆಗಳಲ್ಲಿ ಗುಂಪು ʼಎʼ ಮತ್ತು ಗುಂಪು ʼಬಿʼ ಹುದ್ದೆಗಳಿಗೆ ಇವರು ನಿಯುಕ್ತರಾಗುತ್ತಾರೆ.

ಶಿಫಾರಸು ಮಾಡಿದ 355 ಅಭ್ಯರ್ಥಿಗಳ ಉಮೇದುವಾರಿಕೆಯನ್ನು ತಾತ್ಕಾಲಿಕವಾಗಿ ಇಟ್ಟುಕೊಳ್ಳಲಾಗಿದೆ. UPSC ತನ್ನ ಕ್ಯಾಂಪಸ್‌ನಲ್ಲಿರುವ ಪರೀಕ್ಷಾ ಹಾಲ್‌ನ ಬಳಿ “ಸಂಪರ್ಕ ಕೌಂಟರ್” ಅನ್ನು ತೆರೆದಿದೆ. ಅಭ್ಯರ್ಥಿಗಳು ತಮ್ಮ ಪರೀಕ್ಷೆಗಳು/ನೇಮಕಾತಿಗಳ ಕುರಿತು ಯಾವುದೇ ಮಾಹಿತಿ/ಸ್ಪಷ್ಟೀಕರಣವನ್ನು ಕೆಲಸದ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 23385271/23381125/23098543 ಮೂಲಕ ಪಡೆಯಬಹುದು.

ಫಲಿತಾಂಶ ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗೆ ಯುಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳ ಅಂಕಗಳನ್ನು ಪ್ರಕಟಿಸಲಾಗುತ್ತದೆ. ವ್ಯಕ್ತಿತ್ವ ಪರೀಕ್ಷೆಯಲ್ಲಿ ಕಾಣಿಸಿಕೊಂಡ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು UPSC ಅಧಿಕೃತ ವೆಬ್‌ಸೈಟ್ upsc.gov.in ನಲ್ಲಿ ಪರಿಶೀಲಿಸಬಹುದು.

ಫಲಿತಾಂಶವನ್ನು ಪರಿಶೀಲಿಸಲು ಹೀಗೆ ಮಾಡಿ:

1) ನಿಮ್ಮ ಬ್ರೌಸರ್‌ನಲ್ಲಿ upsc.gov.in ತೆರೆಯಿರಿ

2) What’s New ಸೆಕ್ಷನ್‌ನ ಅಡಿಯಲ್ಲಿ ‘UPSC Civil Services Examination 2023 Final Results’ ಎಂಬುದರ ಮೇಲೆ ಕ್ಲಿಕ್ ಮಾಡಿ.

3) ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಹೆಸರನ್ನು ಪಿಡಿಎಫ್ ಮೂಲಕ ನೀಡಲಾಗಿರುವುದು ತೆರೆಯುತ್ತದೆ.

ಇದನ್ನೂ ಓದಿ: UPSC CSE 2024: ಯುಪಿಎಸ್‌ಸಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ನಿಯಮದಲ್ಲಿದೆ ಕೆಲವು ಬದಲಾವಣೆ; ಇಲ್ಲಿದೆ ಮಾಹಿತಿ

Continue Reading

Lok Sabha Election 2024

Lok Sabha Election 2024: ಬೆಂಗಳೂರಿನಲ್ಲಿ ದೊರೆಯಲಿದೆ ಕ್ಯುಆರ್‌ ಕೋಡ್ ಸಹಿತ ವೋಟರ್‌ ಸ್ಲಿಪ್‌:‌ ಏನಿದರ ಉಪಯೋಗ?

Lok Sabha Election 2024: ಇದೇ ಮೊದಲ ಬಾರಿಗೆ ಇಂಥದೊಂದು ಉಪಕ್ರಮವನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಕ್ಯೂಆರ್ ಕೋಡ್‌ಗಳಿಂದ ಕೂಡಿರುವ ವೋಟರ್ ಸ್ಲಿಪ್‌ಗಳು, ನಗರದ ನಿವಾಸಿಗಳಿಗೆ ಮತದಾನಕ್ಕಾಗಿ ಮತಗಟ್ಟೆಗಳನ್ನು ಹುಡುಕಾಡುತ್ತ ಹೋಗುವ ಕಷ್ಟವನ್ನು ತಪ್ಪಿಸುತ್ತವೆ.

VISTARANEWS.COM


on

lok sabha Election 2024 digital QR code voter slip
Koo

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ (Election commission) ಈ ಸಲ ಲೋಕಸಭೆ ಚುನಾವಣೆ (Lok Sabha Election 2024) ಮತದಾನದ (voting) ಮೊದಲ ಪರಿಚಯಿಸುತ್ತಿರುವ ಕೆಲವು ನೂತನ ಉಪಕ್ರಮಗಳಲ್ಲಿ ಒಂದು, ಕ್ಯುಆರ್‌ ಕೋಡ್‌ ಇರುವ ವೋಟರ್‌ ಸ್ಲಿಪ್ (digital QR code voter slip).‌ ಇದು ಬೆಂಗಳೂರಿನಲ್ಲಿ ಹಾಗೂ ರಾಜ್ಯದ ಕಲವು ಮಹಾನಗರ ಪಾಲಿಕೆಗಳಲ್ಲಿ ಮನೆ-ಮನೆಗೆ ವಿತರಿಸುವ ವೋಟರ್ ಸ್ಲಿಪ್‌ಗಳಲ್ಲಿ ಕ್ಯೂಆರ್ ಕೋಡ್‌ಗಳನ್ನು ಹೊಂದಿದೆ.

ಇದರ ಉದ್ದೇಶವೇನು? ಈ ಮುಂದಾಲೋಚನೆಯ ಉಪಕ್ರಮವು ನಗರ ಪ್ರದೇಶಗಳಲ್ಲಿ, ವಿಶೇಷವಾಗಿ ಬೆಂಗಳೂರಿನಂತಹ ಜನಜಂಗುಳಿಯ ನಗರಗಳಲ್ಲಿ ಮತಗಟ್ಟೆಗಳನ್ನು ಪತ್ತೆಹಚ್ಚುವ ಪ್ರಕ್ರಿಯೆಯನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ.

ಇದೇ ಮೊದಲ ಬಾರಿಗೆ ಇಂಥದೊಂದು ಉಪಕ್ರಮವನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಕ್ಯೂಆರ್ ಕೋಡ್‌ಗಳಿಂದ ಕೂಡಿರುವ ವೋಟರ್ ಸ್ಲಿಪ್‌ಗಳು, ನಗರದ ನಿವಾಸಿಗಳಿಗೆ ಮತದಾನಕ್ಕಾಗಿ ಮತಗಟ್ಟೆಗಳನ್ನು ಹುಡುಕಾಡುತ್ತ ಹೋಗುವ ಕಷ್ಟವನ್ನು ತಪ್ಪಿಸುತ್ತವೆ. ಅವರು ತಮಗಾಗಿ ಗೊತ್ತುಪಡಿಸಿದ ಮತದಾನ ಕೇಂದ್ರಗಳಿಗೆ ಹೋಗುವ ದಾರಿಯನ್ನು ಸೂಚಿಸುತ್ತದೆ.

ವೋಟರ್ ಸ್ಲಿಪ್‌ಗಳಲ್ಲಿ ಸಂಯೋಜಿಸಲಾದ QR ಕೋಡ್‌ಗಳು ಮತದಾನ ಕೇಂದ್ರದ ವಿವರಗಳು, ಚುನಾವಣಾ ದಿನಾಂಕ ಮತ್ತು ಸಮಯದಂತಹ ಪ್ರಮುಖ ಮಾಹಿತಿಯನ್ನು ಒಳಗೊಂಡಿರುತ್ತವೆ. ಆದರೆ ಈ ಸ್ಲಿಪ್‌ಗಳು ಮತದಾರರ ಭಾವಚಿತ್ರಗಳನ್ನು ಒಳಗೊಂಡಿಲ್ಲ. ಮತಗಟ್ಟೆ ಮಟ್ಟದ ಅಧಿಕಾರಿಗಳು ಮತದಾರರ ಮಾಹಿತಿ ಕಾರ್ಡ್ ಅನ್ನು ಎಲ್ಲಾ ನೋಂದಾಯಿತ ಮತದಾರರಿಗೆ ಒದಗಿಸುತ್ತಾರೆ. ಆದರೆ ಈ ಕಾರ್ಡ್ ಮತದಾರರ ಗುರುತಿನ ಪುರಾವೆ ಅಥವಾ ಐಡಿ ಕಾರ್ಡ್‌ ಆಗಿ ಕಾರ್ಯನಿರ್ವಹಿಸುವುದಿಲ್ಲ.

ತಮ್ಮ ಗುರುತನ್ನು ಮತಗಟ್ಟೆಯಲ್ಲಿ ಖಚಿತಪಡಿಸಲು, ಮತದಾರರು ಕೇಂದ್ರ ಚುನಾವಣಾ ಆಯೋಗವು ನೀಡಿದ ಮತದಾರರ ಗುರುತಿನ ಚೀಟಿ ಅಥವಾ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ನೀಡಲಾದ ಯಾವುದೇ ಮಾನ್ಯತೆಯುಳ್ಳ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕು.

ಈ ಪ್ರಗತಿಪರ ಉಪಕ್ರಮವು ಮತದಾನ ಪ್ರಕ್ರಿಯೆಯನ್ನು ಸುವ್ಯವಸ್ಥಿತಗೊಳಿಸುವುದಲ್ಲದೆ, ವಿಶೇಷವಾಗಿ ಬೆಂಗಳೂರಿನಂತಹ ಜನನಿಬಿಡ ನಗರ ಪ್ರದೇಶಗಳಲ್ಲಿ ಮತದಾರರಿಗೆ ಸುಗಮತೆಯನ್ನು ಉಂಟುಮಾಡಲಿದೆ. QR ಕೋಡ್-ಸಕ್ರಿಯಗೊಳಿಸಿದ ವೋಟರ್ ಸ್ಲಿಪ್‌ಗಳ ಪರಿಚಯದೊಂದಿಗೆ, ಚುನಾವಣಾ ಪ್ರಕ್ರಿಯೆಯು ಹೆಚ್ಚು ಪರಿಣಾಮಕಾರಿ ಮತ್ತು ಬಳಕೆದಾರ ಸ್ನೇಹಿಯಾಗಲು ಸಿದ್ಧವಾಗಿದೆ. ನಾಗರಿಕರಿಗೆ ಸುಗಮ ಮತದಾನದ ಅನುಭವವನ್ನು ನೀಡಲಿದೆ.

ಇದನ್ನೂ ಓದಿ: Lok Sabha Election 2024: ನಾಳೆ ರಾಜ್ಯಕ್ಕೆ ರಾಹುಲ್‌ ಗಾಂಧಿ, ಪವನ್‌ ಕಲ್ಯಾಣ್‌ ಎಂಟ್ರಿ

Continue Reading

ದೇಶ

Baba Ramdev: ನೀವೇನು ಅಮಾಯಕರಲ್ಲ, ಕ್ಷಮಿಸಲ್ಲ; ಬಾಬಾ ರಾಮದೇವ್‌ಗೆ ಸುಪ್ರೀಂ ಚಾಟಿ!

Baba Ramdev: ಜನರ ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರು ಕ್ಷಮೆಯಾಚಿಸಿದ್ದನ್ನು ಏಪ್ರಿಲ್‌ 10ರಂದು ಸುಪ್ರೀಂ ಕೋರ್ಟ್‌ ತಿರಸ್ಕರಿಸಿತ್ತು. ಈಗ ಮಂಗಳವಾರ ಇಬ್ಬರೂ ಕ್ಷಮೆಯಾಚಿಸಿದ್ದಾರೆ. ಆದರೆ, ಕ್ಷಮಿಸುವ ಕುರಿತು ಯೋಚನೆ ಮಾಡಬೇಕಾಗುತ್ತದೆ ಎಂದು ನ್ಯಾಯಪೀಠವು ತಪರಾಕಿ ನೀಡಿದೆ.

VISTARANEWS.COM


on

Baba Ramdev
Koo

ನವದೆಹಲಿ: ಜನರ ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಸಂಸ್ಥೆ (Patanjali Ayurved) ಮುಖ್ಯಸ್ಥ ಬಾಬಾ ರಾಮದೇವ್‌ (Baba Ramdev) ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ (Acharya Balkrishna) ಅವರು ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಮತ್ತೆ ಕ್ಷಮೆಯಾಚಿಸಿದ್ದಾರೆ. ಇವರ ಕ್ಷಮೆಯಾಚನೆಯನ್ನು ಒಪ್ಪಿಕೊಳ್ಳದ ನ್ಯಾಯಾಲಯವು, “ನೀವು ಕೋರ್ಟ್‌ ಆದೇಶದ ಬಗ್ಗೆ ತಿಳಿಯದಿರುವಷ್ಟು ಅಮಾಯಕರಲ್ಲ. ಹಾಗಾಗಿ, ನಿಮ್ಮನ್ನು ಕ್ಷಮಿಸುವ ಕುರಿತು ನಾವಿನ್ನೂ ತೀರ್ಮಾನ ತೆಗೆದುಕೊಂಡಿಲ್ಲ” ಎಂದು ಚಾಟಿ ಬೀಸಿದೆ.

ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಹಾಜರಾದರು. “ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ನಿಮ್ಮೆದುರು ಕ್ಷಮೆಯಾಚಿಸಿದ್ದಾರೆ. ಅಷ್ಟೇ ಅಲ್ಲ, ಪಶ್ಚಾತ್ತಾಪದ ರೂಪದಲ್ಲಿ ಸಾರ್ವಜನಿಕವಾಗಿಯೂ ಅವರು ಕ್ಷಮೆಯಾಚಿಸಲು ಸಿದ್ಧರಿದ್ದಾರೆ” ಎಂದು ಪತಂಜಲಿ ಸಂಸ್ಥೆ ಪರ ವಕೀಲ ಮುಕುಲ್‌ ರೋಹಟಗಿ ಕೋರ್ಟ್‌ಗೆ ತಿಳಿಸಿದರು. ಆದರೆ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಅಹ್ಸಾದ್ದೀನ್‌ ಅಮಾನುಲ್ಲಾ ಅವರು, “ಇವರು ಅಮಾಯಕರಲ್ಲ” ಎಂದು ಹೇಳಿದರು. ಅಷ್ಟೇ ಅಲ್ಲ, ಏಪ್ರಿಲ್‌ 23ಕ್ಕೆ ವಿಚಾರಣೆ ಮುಂದೂಡಿದರು.

“ನಾವು ನಿಮ್ಮನ್ನು ಕ್ಷಮಿಸುತ್ತೇವೆ ಎಂದು ಹೇಳಿಲ್ಲ. ಇದುವರೆಗಿನ ನಿಮ್ಮ ಇತಿಹಾಸ ನೋಡಿದರೆ, ನಾವು ಸುಮ್ಮನಿರಲು ಸಾಧ್ಯವಿಲ್ಲ. ನಾವು ನಿಮ್ಮನ್ನು ಕ್ಷಮಿಸಬೇಕೋ, ಬೇಡವೋ ಎಂಬುದರ ಕುರಿತು ಯೋಚನೆ ಮಾಡುತ್ತೇವೆ. ನ್ಯಾಯಾಲಯದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ತಿಳಿಯದಷ್ಟು ನೀವು ಮುಗ್ಧರಲ್ಲ” ಎಂದು ನ್ಯಾಯಮೂರ್ತಿಗಳು ಚಾಟಿ ಬೀಸಿದರು

ರೋಗಗಳ ನಿವಾರಣೆ ಕುರಿತು ಪತಂಜಲಿ ಸಂಸ್ಥೆಯು ಜನರ ದಾರಿತಪ್ಪಿಸುವ ರೀತಿ ಜಾಹೀರಾತು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಸಂಸ್ಥೆ ಸಹ ಸಂಸ್ಥಾಪಕ ಬಾಬಾ ರಾಮದೇವ್‌ ಹಾಗೂ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ, ಬಾಬಾ ರಾಮದೇವ್‌ ಆಪ್ತ ಆಚಾರ್ಯ ಬಾಲಕೃಷ್ಣ ಅವರ ವಿರುದ್ಧ ಸುಪ್ರೀಂ ಕೋರ್ಟ್‌ ನ್ಯಾಯಾಂಗ ನಿಂದನೆ ನೋಟಿಸ್‌ ಹೊರಡಿಸಿತ್ತು. ಇಷ್ಟಾದರೂ, ಬಾಬಾ ರಾಮದೇವ್‌ ಆಗಲಿ, ಆಚಾರ ಬಾಲಕೃಷ್ಣ ಆಗಲಿ ನ್ಯಾಯಾಲಯಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಕೆಂಡಾಮಂಡಲವಾದ ಸುಪ್ರೀಂ ಕೋರ್ಟ್‌, ಏಪ್ರಿಲ್‌ 2ರಂದು ಇಬ್ಬರೂ ಕೋರ್ಟ್‌ಗೆ ಖುದ್ದಾಗಿ ಹಾಜರಾಗಬೇಕು ಎಂದು ಸೂಚಿಸಿತ್ತು. ಹಾಗೆಯೇ, ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಯನ್ನೇಕೆ ಆರಂಭಿಸಬಾರದು ಎಂದು ಕುಟುಕಿತ್ತು. ಇದಾದ ಬಳಿಕ ಇಬ್ಬರೂ ಸುಪ್ರೀಂ ಕೋರ್ಟ್‌ಗೆ ಬೇಷರತ್‌ ಕ್ಷಮೆಯಾಚಿಸಿದ್ದರು.

ಏನಿದು ಪ್ರಕರಣ?

ಪತಂಜಲಿ ಸಂಸ್ಥೆ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು (IMA) ಅರ್ಜಿ ಸಲ್ಲಿಸಿದೆ. ಪತಂಜಲಿ ಸಂಸ್ಥೆಯು ಕೊರೊನಾ ನಿರೋಧಕ ಲಸಿಕೆ ಹಾಗೂ ಆಧುನಿಕ ಔಷಧ ಪದ್ಧತಿ ಬಗ್ಗೆ ಸುಳ್ಳು ಅಭಿಯಾನ ಆರಂಭಿಸಿದೆ. ಅಷ್ಟೇ ಅಲ್ಲ, ಅಲೋಪಥಿ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಜನರ ದಾರಿ ತಪ್ಪಿಸುವ ರೀತಿ ಪತಂಜಲಿ ಸಂಸ್ಥೆಯು ಜಾಹೀರಾತುಗಳನ್ನು ನೀಡುತ್ತಿದೆ. ಇದು ಡ್ರಗ್ಸ್‌ ಆ್ಯಂಡ್‌ ಮ್ಯಾಜಿಕ್‌ ರೆಮೆಡೀಸ್‌ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಐಎಂಎ ಅರ್ಜಿ ಸಲ್ಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಅಹ್ಸಾನುದ್ದೀನ್‌ ಅಮಾನುಲ್ಲಾ ಅವರು ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Baba Ramdev: ನಾನು ಟೀಕಿಸಿದ್ದು ಓವೈಸಿಯನ್ನು, ಒಬಿಸಿಗಳನ್ನಲ್ಲ ಎಂದ ಬಾಬಾ ರಾಮದೇವ್

Continue Reading
Advertisement
Actor Dwarakish
ಸಿನಿಮಾ2 mins ago

‌Actor Dwarakish: ಚಿತ್ರರಂಗದಲ್ಲಿ ಮಾತ್ರವಲ್ಲ ರಾಜಕೀಯವಾಗಿಯೂ ಗುರುತಿಸಿಕೊಂಡಿದ್ದ ದ್ವಾರಕೀಶ್!

Uttarakaanda Movie
ಸ್ಯಾಂಡಲ್ ವುಡ್8 mins ago

Uttarakaanda Movie: ಶಿವಣ್ಣ- ಧನಂಜಯ್‌ ಅಭಿನಯದ ʼಉತ್ತರಕಾಂಡʼ ಚಿತ್ರಕ್ಕೆ ಚೈತ್ರಾ ಆಚಾರ್‌ ಎಂಟ್ರಿ

IND vs BNG
ಕ್ರೀಡೆ30 mins ago

IND vs BNG: ಬಾಂಗ್ಲಾ ಟಿ20 ಸರಣಿಗೆ ಆಯ್ಕೆಯಾದ ಕನ್ನಡತಿ ಶ್ರೇಯಾಂಕಾ ಪಾಟೀಲ್

Aditya Srivastava
ಪ್ರಮುಖ ಸುದ್ದಿ39 mins ago

UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

Robbery Case In Bengaluru
ಬೆಂಗಳೂರು49 mins ago

Robbery case : ಎಎಸ್‌ಐ ಬೈಕ್‌ ಎಗರಿಸಿ ಹೆದ್ದಾರಿಯಲ್ಲಿ ರಾಬರಿ; ಖತರ್ನಾಕ್‌ ಗ್ಯಾಂಗ್‌ ಅರೆಸ್ಟ್‌

Arun Yogiraj
ಕಿರುತೆರೆ50 mins ago

Arun Yogiraj: ಕಿರುತೆರೆಗೆ ಕಾಲಿಟ್ಟ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್‌; ಯಾವ ಕಾರ್ಯಕ್ರಮ?

UPSC Result 2024:
ಪ್ರಮುಖ ಸುದ್ದಿ1 hour ago

UPSC Result 2024: ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಆದಿತ್ಯ ಶ್ರೀವಾಸ್ತವ ಪ್ರಥಮ ರ್‍ಯಾಂಕ್

mohammed shami
ಕ್ರೀಡೆ1 hour ago

Mohammed Shami: ‘ಕ್ರಿಕೆಟ್​ಗೆ ಮರಳುವ ಹಸಿವು ಹೆಚ್ಚಾಗಿದೆ’; ಚೇತರಿಕೆಯ ಅಪ್‌ಡೇಟ್‌ ನೀಡಿದ ಶಮಿ

lok sabha Election 2024 digital QR code voter slip
Lok Sabha Election 20241 hour ago

Lok Sabha Election 2024: ಬೆಂಗಳೂರಿನಲ್ಲಿ ದೊರೆಯಲಿದೆ ಕ್ಯುಆರ್‌ ಕೋಡ್ ಸಹಿತ ವೋಟರ್‌ ಸ್ಲಿಪ್‌:‌ ಏನಿದರ ಉಪಯೋಗ?

Silence 2
ಸಿನಿಮಾ2 hours ago

Silence 2 review: ಕುತೂಹಲ ಕೆರಳಿಸುವ ಕತೆ; ಮನೋಜ್ ಬಾಜಪೇಯಿ ಮನೋಜ್ಞ ಅಭಿನಯ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ11 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ2 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ3 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ4 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌