Rajasthan Exit Poll: ರಾಜಸ್ಥಾನದಲ್ಲಿ ಹಿಸ್ಟರಿ ರಿಪೀಟ್! ಬಿಜೆಪಿಗೆ ಅಧಿಕಾರ, ಕಾಂಗ್ರೆಸ್‌ಗೆ ತಿರಸ್ಕಾರ! - Vistara News

ದೇಶ

Rajasthan Exit Poll: ರಾಜಸ್ಥಾನದಲ್ಲಿ ಹಿಸ್ಟರಿ ರಿಪೀಟ್! ಬಿಜೆಪಿಗೆ ಅಧಿಕಾರ, ಕಾಂಗ್ರೆಸ್‌ಗೆ ತಿರಸ್ಕಾರ!

Rajasthan Exit Poll: ರಾಜಸ್ಥಾನದಲ್ಲಿ ಭಾರತೀಯ ಜನತಾ ಪಾರ್ಟಿಯೇ ಅಧಿಕಾರಕ್ಕೇರಲಿದೆ ಎಂದು ಬಹುತೇಕ ಎಕ್ಸಿಟ್ ಪೋಲ್‌ಗಳು ಹೇಳಿವೆ.

VISTARANEWS.COM


on

Assembly Election Results 2023 Live
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 200 ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ (Rajasthan Exit Poll) ಅಧಿಕಾರಕ್ಕೆ ಏರಲು 100 ಕ್ಷೇತ್ರಗಳನ್ನು ಗೆಲ್ಲಬೇಕು. ರಾಜಸ್ಥಾನದ ವಿಷಯದಲ್ಲಿ ರಾಜಕಾರಣ ಬೇರೆಯದ್ದೇ ರೀತಿಯಲ್ಲಿ ನಡೆಯುತ್ತಿದೆ. ಇಲ್ಲಿ ಒಂದು ಅವಧಿಗೆ ಆಯ್ಕೆಯಾದವರು ಮತ್ತೊಂದು ಅವಧಿಗೆ ಆಯ್ಕೆಯಾಗುವುದಿಲ್ಲ. ಹಾಗಾಗಿ, ಈಗ ಪ್ರಕಟವಾಗಿರುವ ಎಕ್ಸಿಟ್‌ ಪೋಲ್‌ಗಳು ಕೂಡ ಇದೇ ಟ್ರೆಂಡ್ ಊಹಿಸಿವೆ. ಕಾಂಗ್ರೆಸ್ ಪಕ್ಷಕ್ಕೆ (Congress Party) ಅಧಿಕಾರ ನಷ್ಟವಾಗಲಿದ್ದು, ಭಾರತೀಯ ಜನತಾ ಪಾರ್ಟಿ ಲಾಭವಾಗಲಿದೆ(BJP Party). ಬಹುತೇಕ ಎಕ್ಸಿಟ್ ಪೋಲ್‌ಗಳು ಇದೇ ಟ್ರೆಂಡ್ ಅನ್ನು ಗಮನಿಸಿವೆ(Exit Polls Result 2023).

ಬಹುತೇಕ ಚುನಾವಣೋತ್ಸ ಸಮೀಕ್ಷೆಗಳು ಭಾರತೀಯ ಜನತಾ ಪಾರ್ಟಿಗೆ ಅಧಿಕಾರವನ್ನು ನೀಡಿವೆ. ಆಡಳಿತಾರೂಢ ಕಾಂಗ್ರೆಸ್ ಅಧಿಕಾರ ವಂಚಿತವಾಗಲಿದೆ. ಇಟಿಜಿ ಸಮೀಕ್ಷೆಯ ಪ್ರಕಾರ, ಕಾಂಗ್ರೆಸ್: 56-72; ಬಿಜೆಪಿ: 108-128; ಇತರರು: 13-21 ಸ್ಥಾನಗಳನ್ನು ಗೆಲ್ಲಲಿದ್ದರೆ, ಪಿಎಂಎಆರ್​ಕ್ಯೂ ಪ್ರಕಾರ, ಕಾಂಗ್ರೆಸ್: 69-81 ಬಿಜೆಪಿ: 105-125; ಇತರರು: 5-15 ಹಾಗೂ ಟಿವಿ 9 ಭಾರತ್ ವರ್ಷ್​ -ಪೋಲ್ಸ್ಟ್ರಾಟ್ ಸಮೀಕ್ಷೆಯು ಬಿಜೆಪಿ 100-110 ಕಾಂಗ್ರೆಸ್ +: 90-110; ಇತರರು: 05-15 ಸ್ಥಾನಗಳನ್ನು ಗೆಲ್ಲಲಿದ್ದಾರೆಂದು ಹೇಳಿದೆ.

ಅದೇ ರೀತಿ ಜನ್ ಕಿ ಬಾತ್ ಸಮೀಕ್ಷೆಯು ಬಿಜೆಪಿ: 100-122 ಕಾಂಗ್ರೆಸ್: 62-85 ಇತರರು: 14-15 , ಸಿಎನ್​ಎನ್​​ 18 ಸಮೀಕ್ಷೆಯು, ಬಿಜೆಪಿ: 111, ಕಾಂಗ್ರೆಸ್: 74 ,ಇತರೆ: 14 ಹಾಗೂ ಸಟ್ಟಾ ಬಜಾರ್ ಬಿಜೆಪಿ- 115, ಕಾಂಗ್ರೆಸ್- 68 ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಹೇಳಿದೆ.

ಬಹುತೇಕ ಸಮೀಕ್ಷೆಗಳ ಪ್ರಕಾರ ಈ ಬಾರಿ ಮತ್ತೆ ಭಾರತೀಯ ಜನತಾ ಪಾರ್ಟಿ ಅಧಿಕಾರ ಪಡೆಯುವುದು ಖಚಿತ. ಆಡಳಿತಾರೂಢ ಕಾಂಗ್ರೆಸ್ ಸೋಲಲಿದೆ. ಹಾಲಿ ಸಿಎಂ ಅಶೋಕ್ ಗೆಹ್ಲೋಟ್ ಅವರು ಮರಳಿ ಅಧಿಕಾರ ಪಡೆಯುವುದಕ್ಕಾಗಿ ಸಾಕಷ್ಟು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಉಚಿತ ಕೊಡುಗೆಗಳು ಜನರನ್ನು ಸೆಳೆದಿದ್ದರೂ, ಕಾಂಗ್ರೆಸ್ ಪಕ್ಷದ ಬಹುತೇಕ ಶಾಸಕರ ವಿರುದ್ಧದ ಆಡಳಿತ ವಿರೋಧಿ ಅಲೆ ಕೆಲಸ ಮಾಡಿರುವುದನ್ನು ಸಮೀಕ್ಷೆಗಳು ಗಮನಿಸಿವೆ. ಹಾಗಾಗಿ, ಗೆಹ್ಲೋಟ್ ಅವರ ಬಗ್ಗೆ ಒಳ್ಳೆಯ ಭಾವನೆ ಇದ್ದರೂ, ಅದನ್ನು ಬಹುಮತವಾಗಿ ಪರಿವರ್ತಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂಬುದನ್ನು ಸಮೀಕ್ಷೆಗಳಲ್ಲಿ ಗಮನಿಸಬಹುದು.

199 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 5,25,38,105 ಮತದಾರರಲ್ಲಿ 1,88,27,294 ಮಹಿಳೆಯರು, 2,03,83,757 ಪುರುಷರು ಮತ್ತು 348 ತೃತೀಯ ಲಿಂಗಿ ಮತದಾರರು ಸೇರಿದಂತೆ 3,92,11,399 ಮತದಾರರು ಮತ ಚಲಾಯಿಸಿದ್ದಾರೆ. ಶಿಕ್ಷಣ, ಮಹಿಳಾ ಸುರಕ್ಷತೆ ರಾಜಸ್ಥಾನ ಚುನಾವಣೆಯ ಪ್ರಮುಖ ಕಾರ್ಯಸೂಚಿಗಳಾಗಿದ್ದವು.

‘ಕೈ’ನತ್ತ ವಾಲುತ್ತಿದ್ದ ಮತದಾರರನ್ನು ಸೆಳೆದ ಬಿಜೆಪಿ! ಎಕ್ಸಿಟ್ ಪೋಲ್ ಹೇಳೋದೇನು?

230 ಕ್ಷೇತ್ರಗಳನ್ನು ಹೊಂದಿರುವ ಮಧ್ಯ ಪ್ರದೇಶದಲ್ಲಿ (Madhya Pradesh Election) ಅಧಿಕಾರಕ್ಕೇರಲು 116 ಸ್ಥಾನ ಗೆಲ್ಲಬೇಕು. ಆದರೆ, ಈಗ ಪ್ರಕಟವಾಗಿರುವ ಮತಗಟ್ಟೆ ಸಮೀಕ್ಷೆಗಳ ಪ್ರಕಾರ(Exit Polls Result 2023) ಫೋಟೋ ಫಿನಿಷ್ (Photo Finish) ಆಗುವ ಸಾಧ್ಯತೆಗಳಿವೆ. ಚುನಾವಣೆ ಘೋಷಣೆ ಮುನ್ನ ಕಾಂಗ್ರೆಸ್ (Congress Party) ಎಲ್ಲ ರೀತಿಯಿಂದಲೂ ಮುಂದಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಭಾರತೀ ಜನತಾ ಪಾರ್ಟಿ (BJP Party) ಪ್ರಕಟಿಸಿದ ಕೆಲವು ಯೋಜನೆಗಳು ಆಚೆ ಹೋಗುತ್ತಿದ್ದ ಮತದಾರರನ್ನು ಸೆಳೆಯಲು ಯಶಸ್ವಿಯಾಗಿದೆ ಎಂಬುದು ವೇದ್ಯವಾಗುತ್ತಿದೆ(MP Exit Poll).

ದೈನಿಕ್ ಭಾಸ್ಕರ್ ಎಕ್ಸಿಕ್ಟ ಪೋಲ್ ಪ್ರಕಾರ, ಬಿಜೆಪಿ 95ರಿಂದ 115 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್‌ಗೆ 105ರಿಂದ 120 ದೊರೆಯಲಿವೆ. ಜನ್ ಕಿ ಬಾತ್ ಸಮೀಕ್ಷೆ ಪ್ರಕಾರ, ಕಾಂಗ್ರೆಸ್ 102ರಿಂದ 125 ಮತ್ತು ಬಿಜೆಪಿ100ರಿಂದ 123 ಹಾಗೂ ರಿಪಬ್ಲಿಕ್ ಟಿವಿಯ ಪ್ರಕಾರ, ಕಾಂಗ್ರೆಸ್ 97ರಿಂದ 107 ಮತ್ತು ಬಿಜೆಪಿ 118ರಿಂದ 130 ಸ್ಥಾನಗಳನ್ನು ಗೆಲ್ಲಲಿದೆ. ಟಿವಿ9 ಭರತವರ್ಷದ ಎಕ್ಸಿಟ್ ಪೋಲ್ ಪ್ರಕಾರ, ಬಿಜೆಪಿ 106ರಿಂದ 116 ಮತ್ತು ಕಾಂಗ್ರೆಸ್ 111ರಿಂದ 117ಕ್ಷೇತ್ರಗಳನ್ನು ಗೆಲ್ಲಲಿದೆ.

ಈವರೆಗೆ ಪ್ರಕಟವಾಗಿರುವ ಎಕ್ಸಿಟ್‌ ಪೋಲ್ಸ್, ಕಾಂಗ್ರೆಸ್ ಮತ್ತು ಬಿಜೆಪಿಯ ಮಧ್ಯೆ ತುರುಸಿನ ಸ್ಪರ್ಧೆಯನ್ನು ನಿರೀಕ್ಷಿಸಿವೆ. 15 ವರ್ಷಕ್ಕೂ ಹೆಚ್ಚು ಅವಧಿಗೆ ಅಧಿಕಾರದಲ್ಲಿರುವ ಭಾರತೀಯ ಜನತಾ ಪಾರ್ಟಿಗೆ ಈ ಬಾರಿ ಆಡಳಿತ ವಿರೋಧಿ ಅಲೆ ತಟ್ಟಿರುವ ಸಂಗತಿ ವ್ಯಕ್ತವಾಗಿದೆ. ಹಾಗಂತ, ಬಿಜೆಪಿಯ ವಿರುದ್ಧ ಮತದಾರರು ಸಂಪೂರ್ಣ ತಿರಾಸ್ಕಾರವನ್ನು ತೋರಿಲ್ಲ ಎಂಬುದು ಗೊತ್ತಾಗುತ್ತದೆ. ಮತದಾರರು ಗೊಂದಲದಲ್ಲಿರುವುದು ಪಕ್ಕಾ ಆಗಿದೆ. ಹಾಗಾಗಿ, ಭಾನುವಾರ ಫಲಿತಾಂಶದ ದಿನ ಒಂಚೂರು ಅಚ್ಚರಿಯನ್ನು ನಿರೀಕ್ಷಿಸಬಹುದಾಗಿದೆ.

ಮಧ್ಯ ಪ್ರದೇಶದಲ್ಲಿ ದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಈ ಬಾರಿ ತುಸು ಹಿನ್ನಡೆಗೆ ಸರಿಸಿದ್ದು, ಕೂಡ ಪ್ರಭಾವ ಬೀರಿರುವ ಸಾಧ್ಯತೆ ಇದೆ. ಚುನಾವಣೆ ನಡೆಯುವ ಆರು ತಿಂಗಳ ಮುಂಚೆ ಮತದಾರರು ಸಂಪೂರ್ಣ ಒಲವು ಕಾಂಗ್ರೆಸ್ ಪರವಾಗಿತ್ತು ಎನ್ನಲಾಗಿದೆ. ಕೊನೆ ಗಳಿಗೆಯಲ್ಲಿ ಎಂಪಿ ಸಿಎಂ ಪ್ರಕಟಿಸಿದ ಉಚಿತ ಕೊಡುಗೆಗಳು ಮತದಾರರನ್ನು ಬಿಜೆಪಿಯತ್ತ ಎಳೆದು ತಂದಿರುವ ಸಾಧ್ಯತೆ ಇದೆ. ಅದರಲ್ಲೂ ಮಹಿಳಾ ಮತದಾರರನ್ನು ಸೆಳೆಯಲು ಕಾರಣವಾಗಿದ್ದೇ, ಫೋಟೋ ಫಿನಿಶ್ ಫಲಿತಾಂಶಕ್ಕೆ ಕಾರಣವಾಗಬಹುದು.

ಈ ಸುದ್ದಿಯನ್ನೂ ಓದಿ: Exit Polls Result 2023: ಬಿಜೆಪಿಗೆ ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣದಲ್ಲಿ ಕೈ ಮೇಲುಗೈ; ಎಂಪಿಯಲ್ಲಿ ಟೈಟ್ ಫೈಟ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Terrorist Attack: “ಉಗ್ರರ ದಾಳಿ ಬಿಜೆಪಿ ಚುನಾವಣಾ ಪೂರ್ವ ಸ್ಟಂಟ್‌”; ನಾಲಿಗೆ ಹರಿಬಿಟ್ಟ ಪ್ರತಿಪಕ್ಷದ ಇಬ್ಬರು ನಾಯಕರು

Terrorist Attack: ಪೂಂಚ್‌ನಲ್ಲಿ ನಡೆದ ದಾಳಿ ಬಗ್ಗೆ ಜಲಂಧರ್‌ ಕ್ಷೇತ್ರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಚರಣ್‌ ಪ್ರಿತ್‌ ಸಿಂಗ್‌ ಚನ್ನಿ, ಚುನಾವಣೆ ಬಂದಾಗ ಬಿಜೆಪಿಯವರು ನಡೆಸುವ ಸ್ಟಂಟ್‌ ಇದು. ಇದು ಉದ್ದೇಶಪೂರ್ವವಾಗಿ ನಡೆಸುತ್ತಿರುವ ದಾಳಿ. ಬಿಜೆಪಿಯನ್ನು ಗೆಲ್ಲಿಸಲು ಮಾಡುತ್ತಿರುವ ಸ್ಟಂಟ್‌. ಇದರಲ್ಲಿ ಯಾವುದೇ ನಿಜಾಂಶ ಇಲ್ಲ. ಜನರ ಶವದ ಮೇಲೆ ಬಿಜೆಪಿ ಅಧಿಕಾರಕ್ಕೆ ಬರಲು ಬಿಜೆಪಿ ಯತ್ನಿಸುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮತ್ತೊಂದೆಡೆ ಬಿಹಾರದಲ್ಲಿ ಆರ್‌ಜೆಡಿ ಮುಖಂಡ ತೇಜ್‌ ಪ್ರತಾಪ್‌ ಯಾದವ್‌ ಕೂಡ ಇಂತಹದ್ದೇ ಹೇಳಿಕೆ ನೀಡಿದ್ದಾರೆ

VISTARANEWS.COM


on

Terrorist attack
Koo

ಚಂಡೀಗಡ: ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಪೂಂಚ್‌ನಲ್ಲಿ ಎರಡು ದಿನಗಳ ಹಿಂದೆ ಭಾರತೀಯ ವಾಯುಪಡೆ(IAF) ಯೋಧರ ಮೇಲೆ ನಡೆದಿದ್ದ ಭಯೋತ್ಪಾದನಾ ದಾಳಿ(Terrorist Attack)ಯನ್ನು ಪ್ರತಿಪಕ್ಷದ ಇಬ್ಬರು ನಾಯಕರು ಇದೊಂದು ಬಿಜೆಪಿಯ ಚುನಾವಣಾ ಪೂರ್ವ ಸ್ಟಂಟ್‌(Poll Stunt) ಎಂದು ಕರೆಯುವ ಮೂಲಕ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ಮುಖಂಡ ಚರಣ್‌ಪ್ರಿತ್‌ ಸಿಂಗ್‌ ಚನ್ನಿ(Charanprit Singh Channi) ಮತ್ತು ರಾಷ್ಟ್ರೀಯ ಜನತಾದಳದ ತೇಜ್‌ ಪ್ರತಾಪ್‌ ಯಾದವ್‌ ಈ ದಾಳಿ ಯನ್ನು 2019ರಲ್ಲಿ ನಡೆದಿದ್ದ ಪುಲ್ವಾಮಾ ಭಯೋತ್ಪಾದನಾ ದಾಳಿಯ ಜೊತೆ ಹೋಲಿಸಿ ಇದೊಂದು ಬಿಜೆಪಿ ನಡೆಸುತ್ತಿರುವ ಚುನಾವಣಾ ಪೂರ್ವ ಸ್ಟಂಟ್‌ ಆಗಿದ್ದು ಬಿಜೆಪಿ ಇದನ್ನು ತನ್ನ ಗೆಲುವಿಗಾಗಿ ಬಳಸಿಕೊಳ್ಳುತ್ತದೆ ಎಂದು ಟೀಕಿಸಿದ್ದಾರೆ.

ಪ್ರತಿಪಕ್ಷ ನಾಯಕರು ಹೇಳಿದ್ದೇನು?

ಪೂಂಚ್‌ನಲ್ಲಿ ನಡೆದ ದಾಳಿ ಬಗ್ಗೆ ಜಲಂಧರ್‌ ಕ್ಷೇತ್ರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಚರಣ್‌ ಪ್ರಿತ್‌ ಸಿಂಗ್‌ ಚನ್ನಿ, ಚುನಾವಣೆ ಬಂದಾಗ ಬಿಜೆಪಿಯವರು ನಡೆಸುವ ಸ್ಟಂಟ್‌ ಇದು. ಇದು ಉದ್ದೇಶಪೂರ್ವವಾಗಿ ನಡೆಸುತ್ತಿರುವ ದಾಳಿ. ಬಿಜೆಪಿಯನ್ನು ಗೆಲ್ಲಿಸಲು ಮಾಡುತ್ತಿರುವ ಸ್ಟಂಟ್‌. ಇದರಲ್ಲಿ ಯಾವುದೇ ನಿಜಾಂಶ ಇಲ್ಲ. ಜನರ ಶವದ ಮೇಲೆ ಬಿಜೆಪಿ ಅಧಿಕಾರಕ್ಕೆ ಬರಲು ಬಿಜೆಪಿ ಯತ್ನಿಸುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮತ್ತೊಂದೆಡೆ ಬಿಹಾರದಲ್ಲಿ ಆರ್‌ಜೆಡಿ ಮುಖಂಡ ತೇಜ್‌ ಪ್ರತಾಪ್‌ ಯಾದವ್‌ ಕೂಡ ಇಂತಹದ್ದೇ ಹೇಳಿಕೆ ನೀಡಿದ್ದು, ಪುಲ್ವಾಮಾ ದಾಳಿಯಯನ್ನೂ ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದೆ. ಚುನಾವಣೆ ಬಂದಾಗಲೆಲ್ಲಾ ಭಯೋತ್ಪಾದನಾ ದಾಳಿ ನಡೆದೇ ನಡೆಯುತ್ತದೆ

ಬಿಜೆಪಿ ನಾಯಕರು ಕಿಡಿ

ಪ್ರತಿಪಕ್ಷ ನಾಯಕರ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಬಿಜೆಪಿ ಕೆಂಡಾಮಂಡಲವಾಗಿದ್ದು, ವಾಗ್ದಾಳಿ ನಡೆಸಿದೆ. ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಪ್ರತಿಕ್ರಿಯಿಸಿದ್ದು, ಇದು ಕಾಂಗ್ರೆಸ್‌ ಮತ್ತು ಅದರ ಜೊತೆಗಿರುವ ಪಕ್ಷಗಳ ಮನಸ್ಥಿತಿಯನ್ನು ತೋರಿಸುತ್ತಿದೆ. ಕಳೆದ 70 ವರ್ಷಗಳಲ್ಲಿ ಸೇನೆಯನ್ನು ಬಲಪಡಿಸುವ ಬದಲು ಅದರ ಬಲವನ್ನು ಕುಗ್ಗಿಸುವ ಕೆಲಸವನ್ನೇ ಕಾಂಗ್ರೆಸ್‌ ಮಾಡಿತ್ತು. ನಾವು ಕಳೆದ 10ವರ್ಷಗಳಲ್ಲಿ ಸೇನೆಗೆ ಬಲ ತುಂಬಿದ್ದೇವೆ. ಪುಲ್ವಾಮಾದ ಬಳಿಕ ನಾವು ಸರ್ಜಿಕಲ್‌ ಸ್ಟ್ರೈಕ್‌ ಮಾಡಿದ್ದೇವೆ. ಆದರೆ ಇವರು ಸಂಸತ್‌ ದಾಳಿಕೋರನ ಗಲ್ಲುಶಿಕ್ಷೆಯನ್ನು ತಪ್ಪಿಸಲು ಹಲವು ರೀತಿಯಲ್ಲಿ ಪ್ರಯತ್ನಿಸಿದವರು ಜನ ಇದನ್ನು ಎಂದಿಗೂ ಮರೆಯಲ್ಲ ಎಂದು ಟಾಂಗ್‌ ಕೊಟ್ಟಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆ(IAF)ಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದರು.

Continue Reading

ದೇಶ

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

Narendra Modi: Narendra Modi: ರಾಮಲಲ್ಲಾ ದರ್ಶನ ಪಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್‌ ಶೋ ಕೈಗೊಳ್ಳುತ್ತಿದ್ದಾರೆ. ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಮೋದಿ ರೋಡ್‌ ಶೋ ಕೈಗೊಂಡರು. ನರೇಂದ್ರ ಮೋದಿ ಅವರು ಸಾಗುವ ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎಲ್ಲೆಡೆ ಜೈಶ್ರೀರಾಮ್‌ ಎಂಬ ಘೋಷಣೆಗಳು ಮೊಳಗಿದವು.

VISTARANEWS.COM


on

Narendra Modi
Koo

ಅಯೋಧ್ಯೆ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ದೇಶಾದ್ಯಂತ ಸಾಲು ರ‍್ಯಾಲಿಗಳ ಭರಾಟೆಯ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಗೆ ತೆರಳಿ, ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಕಳೆದ ಜನವರಿ 22ರಂದು ರಾಮಮಂದಿರದಲ್ಲಿ (Ram Mandir) ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದ್ದ ನರೇಂದ್ರ ಮೋದಿ ಅವರೀಗ ಮತ್ತೆ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಇದೇ ವೇಳೆ ಅವರು ರಾಮಲಲ್ಲಾನಿಗೆ ವಿಶೇಷ ಪೂಜೆ ಸಲ್ಲಿಸುವ ಜತೆಗೆ ದೀರ್ಘದಂಡ ನಮಸ್ಕಾರ ಹಾಕಿದರು.

ಕಳೆದ ಜನವರಿ 22ರಂದು ನರೇಂದ್ರ ಮೋದಿ ಅವರು ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ಮಾಡಿದ ಬಳಿಕ ಮಾಡಿದ ಬಳಿಕ ರಾಮಮಂದಿರಕ್ಕೆ ಮೊದಲ ಬಾರಿ ಭೇಟಿ ನೀಡಿದರು.

ರಾಮನಗರಿ ಅಯೋಧ್ಯೆಯಲ್ಲಿ ಭರ್ಜರಿ ರೋಡ್‌ ಶೋ ಕೈಗೊಳ್ಳುವ ಮೊದಲು ಮೋದಿ ಅವರು ರಾಮಲಲ್ಲಾನಿಗೆ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಿದರು. ಮೋದಿ ಭೇಟಿ ಹಿನ್ನೆಲೆಯಲ್ಲಿ ರಾಮಮಂದಿರದ ಸುತ್ತ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ಅಯೋಧ್ಯೆ ಭೇಟಿ ನೀಡುವ ಮೊದಲು ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ದೌರಾಹ್ರ ಲೋಕಸಭೆ ಕ್ಷೇತ್ರದಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡರು.

ರಾಮಲಲ್ಲಾ ದರ್ಶನದ ಬಳಿಕ ಮೋದಿ ಅವರು ಅಯೋಧ್ಯೆಯಲ್ಲಿ ಸುಮಾರು ಎರಡು ಕಿಲೋಮೀಟರ್‌ವರೆಗೆ ರೋಡ್‌ ಶೋ ನಡೆಸಿದರು. ಮಾರ್ಗದುದ್ದಕ್ಕೂ ನೆರೆದಿದ್ದ ಜನ ಹೂಮಳೆ ಸುರಿಸಿ ಅಭಿಮಾನ ಮೆರೆದರು.

ರೋಡ್‌ ಶೋಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಕೂಡ ಸಾಥ್‌ ನೀಡಿದ್ದಾರೆ. ಇನ್ನು, ರೋಡ್‌ ಶೋ ಉದ್ದಕ್ಕೂ ಜನ ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರು.

ಉತ್ತರ ಪ್ರದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, 10 ಲೋಕಸಭಾ ಕ್ಷೇತ್ರದಲ್ಲಿ ಮೇ 7 ಮತದಾನ ನಡೆಯಲಿದೆ. ಅಯೋಧ್ಯೆಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Continue Reading

ದೇಶ

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Narendra Modi: ಉತ್ತರ ಪ್ರದೇಶದ ದೌರಾಹ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರ‍್ಯಾಲಿ ನಡೆಸಿದರು. ಇದೇ ವೇಳೆ ಮಾತನಾಡಿದ ಅವರು, “ದೇಶದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಯಾವುದೇ ಜಾತಿ, ಧರ್ಮದ ತಾರತಮ್ಯ ಇಲ್ಲದೆ ಜನರಿಗೆ ತಲುಪುತ್ತಿವೆ. ಮುಸ್ಲಿಂ ಸಹೋದರ-ಸಹೋದರಿಯರು ಕೂಡ ನೋಡುತ್ತಿದ್ದಾರೆ. ಪಿಎಂ ಆವಾಸ್‌ ಯೋಜನೆ, ಉಜ್ವಲ ಯೋಜನೆ ಸೇರಿ ಎಲ್ಲ ಯೋಜನೆಗಳ ಸೌಲಭ್ಯಗಳು ಮುಸ್ಲಿಮರಿಗೂ ತಲುಪುತ್ತಿವೆ” ಎಂದು ತಿಳಿಸಿದರು.

VISTARANEWS.COM


on

Narendra Modi
Koo

ಲಖನೌ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ (ಮೇ 5) ಉತ್ತರ ಪ್ರದೇಶದಲ್ಲಿ (Uttar Pradesh) ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ದೌರಾಹ್ರದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಅದರಲ್ಲೂ, “ಮುಸ್ಲಿಮರು ಈಗ ಮತಬ್ಯಾಂಕ್‌ನ ಗುತ್ತಿಗೆದಾರರಿಂದ ಪ್ರತ್ಯೇಕವಾಗಿದ್ದಾರೆ. ಅವರು ಅಭಿವೃದ್ಧಿಯ ಪರವಾಗಿದ್ದಾರೆ” ಎಂದು ಕಾಂಗ್ರೆಸ್‌ಗೆ ಮೋದಿ ಟಾಂಗ್‌ ಕೊಟ್ಟರು.

“ದೇಶದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಯಾವುದೇ ಜಾತಿ, ಧರ್ಮದ ತಾರತಮ್ಯ ಇಲ್ಲದೆ ಜನರಿಗೆ ತಲುಪುತ್ತಿವೆ. ಮುಸ್ಲಿಂ ಸಹೋದರ-ಸಹೋದರಿಯರು ಕೂಡ ನೋಡುತ್ತಿದ್ದಾರೆ. ಪಿಎಂ ಆವಾಸ್‌ ಯೋಜನೆ, ಉಜ್ವಲ ಯೋಜನೆ ಸೇರಿ ಎಲ್ಲ ಯೋಜನೆಗಳ ಸೌಲಭ್ಯಗಳು ಮುಸ್ಲಿಮರಿಗೂ ತಲುಪುತ್ತಿವೆ. ಯಾವುದೇ ಭೇದ-ಭಾವ ಇಲ್ಲದೆ, ಪ್ರತಿಯೊಬ್ಬರಿಗೂ ಯೋಜನೆಗಳು ತಲುಪುತ್ತವೆ. ಹಾಗಾಗಿ, ಮುಸ್ಲಿಮರು ಕೂಡ ಮತಬ್ಯಾಂಕ್‌ನ ಗುತ್ತಿಗೆದಾರರ ಸಹವಾಸ ಬಿಟ್ಟಿದ್ದಾರೆ” ಎಂದು ಹೇಳಿದರು.

“ಮುಸ್ಲಿಮರನ್ನು ಕಾಂಗ್ರೆಸ್‌ ಸೇರಿ ಇಂಡಿಯಾ ಒಕ್ಕೂಟದ ಪಕ್ಷಗಳು ಮತಬ್ಯಾಂಕ್‌ಗಾಗಿ ಬಳಸಿಕೊಂಡವು. ಆದರೆ, ಈಗ ಮುಸ್ಲಿಮರು ಅಂತ ತುಷ್ಟೀಕರಣದ ಕುತಂತ್ರದಿಂದ ಹೊರಬಂದಿದ್ದಾರೆ. ಆದರೆ, ಕಾಂಗ್ರೆಸ್‌ ಸೇರಿ ಇಂಡಿಯಾ ಒಕ್ಕೂಟದ ಪಕ್ಷಗಳು ಮಾತ್ರ ಈಗಲೂ ಓಲೈಕೆಯಲ್ಲಿಯೇ ತೊಡಗಿವೆ. ಮುಸ್ಲಿಮರನ್ನು ಮತ ಬ್ಯಾಂಕ್‌ಗಾಗಿಯೇ ಬಳಸಿಕೊಳ್ಳಲು ಯತ್ನಿಸುತ್ತಿವೆ. ಇದೇ ಕಾರಣಕ್ಕಾಗಿಯೇ, ಮುಸ್ಲಿಂ ಲೀಗ್‌ನ ಪ್ರತಿರೂಪದಂತಿರುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ” ಎಂಬುದಾಗಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

“2014ಕ್ಕಿಂತ ಮೊದಲು ದೇಶದಲ್ಲಿ ತುಷ್ಟೀಕರಣದ ಆಡಳಿತ ನಡೆಯುತ್ತಿತ್ತು. ಉಗ್ರವಾದದ ವಿರುದ್ಧ ಕ್ರಮ ತೆಗೆದುಕೊಳ್ಳಲು ತನಿಖಾ ಸಂಸ್ಥೆಗಳಿಗೆ ಅಧಿಕಾರವೇ ಇರಲಿಲ್ಲ. ಇನ್ನು, ಸಮಾಜವಾದಿ ಪಕ್ಷವಂತೂ ಉಗ್ರರ ವಿರುದ್ಧದ ಪ್ರಕರಣಗಳನ್ನು ವಾಪಸ್‌ ಪಡೆಯುತ್ತಿತ್ತು. ಆದರೀಗ ಉಗ್ರರನ್ನು ಹೆಡೆಮುರಿ ಕಟ್ಟಲಾಗುತ್ತಿದೆ. ನನಗೆ ಕುಟುಂಬ ಇಲ್ಲ. ಆದರೆ, ದೇಶದ ಜನರೇ ನನ್ನ ಕುಟುಂಬ. ಜನರ ಏಳಿಗೆಗಾಗಿ, ವಿಕಸಿತ ಭಾರತದ ನಿರ್ಮಾಣಕ್ಕಾಗಿ ನಾನು ನಿರಂತರವಾಗಿ ಶ್ರಮಿಸುತ್ತೇನೆ” ಎಂದರು.

ಇದನ್ನೂ ಓದಿ: Pralhad Joshi: ಕಾಂಗ್ರೆಸ್‌ನಿಂದ ಮೋದಿ ಎಂಬ ಆಕಾಶಕ್ಕೆ ಉಗುಳೋ ಕೃತ್ಯ: ಪ್ರಲ್ಹಾದ್ ಜೋಶಿ

Continue Reading

ದೇಶ

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

ಪಿಒಕೆ ನಾಗರಿಕರೇ ಭಾರತದೊಂದಿಗೆ ವಿಲೀನವಾಗಲು ಬಯಸುತ್ತಿದ್ದಾರೆ. ಪಿಒಕೆ ಮೊದಲು ಕೂಡ ನಮ್ಮದಾಗಿತ್ತು. ಮುಂದೆಯೂ ನಮ್ಮದಾಗಿ ಇರಲಿದೆ. ಹಾಗಂತ, ಪಿಒಕೆಗೆ ಸೈನಿಕರನ್ನೇ ಕಳುಹಿಸಬೇಕಾಗಿಲ್ಲ. ಅಲ್ಲಿನ ಜನರೇ, ಭಾರತದೊಂದಿಗೆ ವಿಲೀನವಾಗಲು ಬಯಸುತ್ತಿದ್ದಾರೆ ಎಂದು ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಫಾರೂಕ್‌ ಅಬ್ದುಲ್ಲಾ, ಪಾಕಿಸ್ತಾನವೇನೂ ಬಳೆ ತೊಟ್ಟುಕೊಂಡು ಕೂತಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Farooq Abdullah
Koo

ಶ್ರೀನಗರ: ಲೋಕಸಭೆ ಚುನಾವಣೆ (Lok Sabha Election 2024) ಹೊತ್ತಿನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರ (PoK) ಕುರಿತು ಮಹತ್ವದ ಚರ್ಚೆಯೊಂದು ಶುರುವಾಗಿದೆ. “ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತ ವಶಪಡಿಸಿಕೊಳ್ಳುವುದು, ಸೇನೆಯನ್ನು ನುಗ್ಗಿಸಿ ವಾಪಸ್‌ ಪಡೆಯುವುದು ಬೇಕಾಗಿಲ್ಲ. ಅಲ್ಲಿನ ಜನರೇ ಭಾರತದ ಜತೆ ವಿಲೀನವಾಗಲು ಬಯಸುತ್ತಿದ್ದಾರೆ” ಎಂಬುದಾಗಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ಹೇಳಿದ್ದಾರೆ. ಇನ್ನು ಇದಕ್ಕೆ ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ (Farooq Abdullah) ಪ್ರತಿಕ್ರಿಯಿಸಿದ್ದು, “ಭಾರತ ಆಕ್ರಮಣ ಮಾಡುವುದು ಬೇಕಾಗಿಲ್ಲ. ಪಾಕಿಸ್ತಾನವೇನೂ ಬಳೆ ತೊಟ್ಟಿಲ್ಲ” ಎಂದು ಹೇಳಿದ್ದಾರೆ. ಇದು ಈಗ ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ.

ರಾಜನಾಥ್‌ ಸಿಂಗ್‌ ಹೇಳಿದ್ದೇನು?

ಪಿಟಿಐಗೆ ಸಂದರ್ಶನ ನೀಡುವ ವೇಳೆ ರಾಜನಾಥ್‌ ಸಿಂಗ್‌ ಹೇಳಿಕೆ ನೀಡಿದ್ದರು. “ಪಿಒಕೆ ವಿಚಾರದಲ್ಲಿ ಭಾರತ ಏನೂ ಮಾಡಬೇಕಿಲ್ಲ. ಜಮ್ಮು-ಕಾಶ್ಮೀರದ ಪರಿಸ್ಥಿತಿ ಬದಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸುವ ಜತೆಗೆ ಆರ್ಥಿಕ ಪ್ರಗತಿಯಾಗುತ್ತಿದೆ. ಇದರಿಂದಾಗಿ ನಾವು ಪಾಕ್‌ ಆಕ್ರಮಿತ ಕಾಶ್ಮೀರದ ಮೇಲೆ ದಾಳಿ ಮಾಡಬೇಕಿಲ್ಲ. ಪಿಒಕೆ ನಾಗರಿಕರೇ ಭಾರತದೊಂದಿಗೆ ವಿಲೀನವಾಗಲು ಬಯಸುತ್ತಿದ್ದಾರೆ. ಪಿಒಕೆ ಮೊದಲು ಕೂಡ ನಮ್ಮದಾಗಿತ್ತು. ಮುಂದೆಯೂ ನಮ್ಮದಾಗಿ ಇರಲಿದೆ. ಹಾಗಂತ, ಪಿಒಕೆಗೆ ಸೈನಿಕರನ್ನೇ ಕಳುಹಿಸಬೇಕಾಗಿಲ್ಲ. ಅಲ್ಲಿನ ಜನರೇ, ಭಾರತದೊಂದಿಗೆ ವಿಲೀನವಾಗಲು ಬಯಸುತ್ತಿದ್ದಾರೆ” ಎಂಬುದಾಗಿ ರಾಜನಾಥ್‌ ಸಿಂಗ್‌ ಹೇಳಿದ್ದರು.

ಫಾರೂಕ್‌ ಅಬ್ದುಲ್ಲಾ ಪ್ರತಿಕ್ರಿಯೆ ಏನು?

ಸುದ್ದಿಗೋಷ್ಠಿ ನಡೆಸಿದ ಜಮ್ಮು-ಕಾಶ್ಮೀರ ನ್ಯಾಷನಲ್‌ ಕಾನ್ಫರೆನ್ಸ್‌ ಮುಖ್ಯಸ್ಥ ಫಾರೂಕ್‌ ಅಬ್ದುಲ್ಲಾ, ರಾಜನಾಥ್‌ ಸಿಂಗ್‌ ಹೇಳಿಕೆಗೆ ಪ್ರತಿಕ್ರಿಯಿಸಿದರು. “ದೇಶದ ರಕ್ಷಣಾ ಸಚಿವರು ಪಿಒಕೆ ಮೇಲೆ ದಾಳಿ ಮಾಡಿ ಎಂಬುದಾಗಿ ಹೇಳಿದರೆ, ಅದನ್ನು ತಡೆಯಲು ನಾವು ಯಾರು? ಆದರೆ, ಒಂದು ನೆನಪಿರಲಿ. ಪಾಕಿಸ್ತಾನವೇನೂ ಬಳೆ ತೊಟ್ಟುಕೊಂಡು ಕೂತಿಲ್ಲ. ಅವರ ಬಳಿಯೂ ಪರಮಾಣು ಬಾಂಬ್‌ಗಳಿವೆ. ಆ ಪರಮಾಣು ಬಾಂಬ್‌ಗಳು ನಮ್ಮ ಮೇಲೆ ಬಂದು ಬೀಳುತ್ತವೆ” ಎಂಬುದಾಗಿ ಫಾರೂಕ್‌ ಅಬ್ದುಲ್ಲಾ ಎಚ್ಚರಿಸಿದ್ದಾರೆ.

ಜೈಶಂಕರ್‌ ಕೂಡ ಮಹತ್ವದ ಹೇಳಿಕೆ

ಪಿಒಕೆ ಕುರಿತು ವಿದೇಶಾಂಗ ಸಚಿವ ಎಸ್.ಜೈಶಂಕರ್‌ ಕೂಡ ಹೇಳಿಕೆ ನೀಡಿದ್ದಾರೆ. “ಪಿಒಕೆ ಭಾರತದ ಭಾಗವಾಗಿದೆ. ಪಿಒಕೆ ಭಾರತದ ಭಾಗ ಎಂಬುದಾಗಿ ಸಂಸತ್ತಿನಲ್ಲೂ ನಿರ್ಣಯ ತೆಗೆದುಕೊಳ್ಳಲಾಗಿದೆ. ಪಿಒಕೆ ಮೊದಲು ಕೂಡ ನಮ್ಮದಾಗಿತ್ತು. ಆದರೆ, ಅದನ್ನು ಅತಿಕ್ರಮಣ ಮಾಡಿಕೊಳ್ಳಲು ಕಾರಣರಾದವರು ಯಾರು? ಅದರ ಮೇಲೆ ಬೇರೆಯವರು ನಿಯಂತ್ರಣ ಸಾಧಿಸಲು ಯಾರು ಕಾರಣ” ಎಂಬುದಾಗಿ ಪರೋಕ್ಷವಾಗಿ ಕಾಂಗ್ರೆಸ್‌ಗೆ ಕುಟುಕಿದರು. ಇದಕ್ಕೂ ಮೊದಲು ಕೂಡ, ಅಮಿತ್‌ ಶಾ ಅವರು ಪಿಒಕೆ ನಮ್ಮದೇ ಎಂದು ಹೇಳಿದ್ದರು.

ಇದನ್ನೂ ಓದಿ: ಚೀನಾ ದಯೆಯಿಂದ ಮೊದಲ ಚಂದ್ರಯಾನ ಕೈಗೊಂಡ ಪಾಕಿಸ್ತಾನ; ಆದರೂ ಭಾರತಕ್ಕಿಂತ 16 ವರ್ಷ ಹಿಂದೆ!

Continue Reading
Advertisement
Samantha Ruth Prabhu Fake Viral Nude Pic
ಟಾಲಿವುಡ್6 mins ago

Samantha Ruth Prabhu: ಬೆತ್ತಲೆ ಫೋಟೊ ಅಪ್​ಲೋಡ್ ಮಾಡಿದ್ರಾ ಸಮಂತಾ?

Dr.Nagareddy Patil
ಕರ್ನಾಟಕ6 mins ago

Dr.Nagareddy Patil: ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

IPL 2024 Points Table
ಕ್ರೀಡೆ7 mins ago

IPL 2024 Points Table: ರಾಜಸ್ಥಾನ್​ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್​; ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Terrorist attack
ದೇಶ53 mins ago

Terrorist Attack: “ಉಗ್ರರ ದಾಳಿ ಬಿಜೆಪಿ ಚುನಾವಣಾ ಪೂರ್ವ ಸ್ಟಂಟ್‌”; ನಾಲಿಗೆ ಹರಿಬಿಟ್ಟ ಪ್ರತಿಪಕ್ಷದ ಇಬ್ಬರು ನಾಯಕರು

Prajwal Revanna Case
ಕರ್ನಾಟಕ58 mins ago

Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

Cooking Oils
ಆರೋಗ್ಯ2 hours ago

Cooking Oils: ಈ 5 ಅಡುಗೆ ಎಣ್ಣೆಗಳು ನಮ್ಮ ಆರೋಗ್ಯಕ್ಕೆ ಅಪಾಯಕಾರಿ!

karnataka Weather Forecast
ಮಳೆ2 hours ago

Karnataka Weather : ಇಂದು ಮಳೆ ಬರುತ್ತಾ? ಯಾವ ಜಿಲ್ಲೆಗಳಲ್ಲಿದೆ ಹೀಟ್‌ ವೇವ್‌?

Pain relievers
ಆರೋಗ್ಯ3 hours ago

Pain Relievers: ಸೈಡ್‌ ಎಫೆಕ್ಟ್‌ ಇಲ್ಲದ ಪ್ರಕೃತಿದತ್ತ ನೋವು ನಿವಾರಕಗಳಿವು

Dina bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Ramanagara News
ಕರ್ನಾಟಕ9 hours ago

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ13 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ14 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ15 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌