Legal Abortion | ವಿವಾಹಿತರಿಗೂ ಸುರಕ್ಷಿತ ಗರ್ಭಪಾತಕ್ಕೆ ಅವಕಾಶ: ಸುಪ್ರೀಂ ಕೋರ್ಟ್‌ ಐತಿಹಾಸಿಕ ಆದೇಶ - Vistara News

ಕೋರ್ಟ್

Legal Abortion | ವಿವಾಹಿತರಿಗೂ ಸುರಕ್ಷಿತ ಗರ್ಭಪಾತಕ್ಕೆ ಅವಕಾಶ: ಸುಪ್ರೀಂ ಕೋರ್ಟ್‌ ಐತಿಹಾಸಿಕ ಆದೇಶ

ಮದುವೆಯಾದವರು ಪತಿಯಿಂದ ಒತ್ತಾಯಪೂರ್ವಕವಾಗಿ ಗರ್ಭ ಧರಿಸಿದರೂ‌ (Legal Abortion) ಅದು ಅತ್ಯಾಚಾರವಾಗುತ್ತದೆ. ಕಾನೂನುಬದ್ಧ ಗರ್ಭಪಾತ ಕಾಯಿದೆ (MTP Act) ಅಡಿಯಲ್ಲಿ ಇದನ್ನೇ ನಾವು ಅರ್ಥ ಮಾಡಿಕೊಳ್ಳಬೇಕಿದೆ.

VISTARANEWS.COM


on

Pregnant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಗರ್ಭಪಾತದ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದೆ. ವಿವಾಹಿತೆಯರು ಮಾತ್ರವಲ್ಲ, ಎಲ್ಲ ಅವಿವಾಹಿತೆಯರು ಸಹ ಸುರಕ್ಷತೆ ಹಾಗೂ ಕಾನೂನಿನ ಅಡಿಯಲ್ಲಿ (Legal Abortion) ಗರ್ಭಪಾತ ಮಾಡಿಸಿಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಮಹಿಳೆಯ ಗರ್ಭಪಾತಕ್ಕೆ ಆಕೆಯು ವಿವಾಹಿತೆಯೋ, ಅಲ್ಲವೋ ಎಂಬುದು ಅಡ್ಡಿಯಾಗಬಾರದು ಎಂದೂ ಆದೇಶ ಹೊರಡಿಸಿದೆ.

“ಹೆಣ್ಣುಮಕ್ಕಳ ಒಪ್ಪಿಗೆ ಇಲ್ಲದೆ ನಡೆಸುವ ಸಂಭೋಗವೇ ಅತ್ಯಾಚಾರವಾಗಿದೆ. ಇಂತಹ ಸಂದರ್ಭಗಳಲ್ಲಿ ಹೆಣ್ಣುಮಕ್ಕಳು ಬಲವಂತವಾಗಿ ಗರ್ಭ ಧರಿಸುತ್ತಾರೆ. ಮದುವೆಯಾದವರು ಒತ್ತಾಯಪೂರ್ವಕವಾಗಿ ಗರ್ಭ ಧರಿಸಿದರೂ ಅದು ಅತ್ಯಾಚಾರವಾಗುತ್ತದೆ. ಕಾನೂನುಬದ್ಧ ಗರ್ಭಪಾತ ಕಾಯಿದೆ (MTP Act) ಅಡಿಯಲ್ಲಿ ಇದನ್ನೇ ನಾವು ಅರ್ಥ ಮಾಡಿಕೊಳ್ಳಬೇಕಿದೆ. ಹಾಗಾಗಿ, ವಿವಾಹಿತೆಯರ ಜತೆಗೆ ಅವಿವಾಹಿತೆಯರೂ ಕಾನೂನುಬದ್ಧವಾಗಿ ಗರ್ಭಪಾತ ಮಾಡಿಸಿಕೊಳ್ಳಬಹುದು” ಎಂದು ನ್ಯಾ.ಚಂದ್ರಚೂಡ್‌ ಹೇಳಿದ್ದಾರೆ.

ಅತ್ಯಾಚಾರಕ್ಕೀಡಾಗಿ ಗರ್ಭ ಧರಿಸಿದವರು, ಪತಿಯ ಒತ್ತಾಯದಿಂದಲೋ, ಮಕ್ಕಳು ಬೇಕು ಎಂಬ ಅತಿಯಾದ ಆಸೆಯಿಂದಲೋ ಗರ್ಭ ಧರಿಸಿದವರು ಕೂಡ ಕೋರ್ಟ್‌ ಆದೇಶದಿಂದಾಗಿ ಇನ್ನುಮುಂದೆ ಗರ್ಭಪಾತ ಮಾಡಿಸಿಕೊಳ್ಳಬಹುದಾಗಿದೆ. ಎಂಟಿಪಿ ಕಾಯಿದೆ ಅಡಿಯಲ್ಲಿ ಗರ್ಭ ಧರಿಸಿದ 24 ವಾರದೊಳಗೆ ಗರ್ಭಪಾತ ಮಾಡಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ | 24ನೇ ವಾರದಲ್ಲಿ ಗರ್ಭಪಾತಕ್ಕೆ ಅವಕಾಶ ನಿರಾಕರಿಸಿದ ಹೈಕೋರ್ಟ್‌, ಸುಪ್ರೀಂ ಮೆಟ್ಟಿಲು ಹತ್ತಿದ ಮಹಿಳೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Laila Khan Case: ನಟಿ ಲೈಲಾ ಖಾನ್‌ ಸೇರಿ 6 ಜನರ ಹತ್ಯೆ;‌ ನಟಿಯ ತಂದೆ ಪರ್ವೇಜ್‌ ತಕ್‌ಗೆ ಗಲ್ಲು ಶಿಕ್ಷೆ!

Laila Khan Case: ಸೆಲಿನಾ ಅವರಿಗೆ ಪರ್ವೇಜ್‌ ತಕ್‌ ಮೂರನೇ ಪತಿಯಾಗಿದ್ದ. ಸೆಲಿನಾ ತಕ್‌ ಅವರು ಶ್ರೀಮಂತರಾಗಿದ್ದ ಕಾರಣ, ಅವರಿಗೆ ಸಂಬಂಧಿಸಿದ ಎಲ್ಲ ಆಸ್ತಿಯನ್ನು ಹೊಡೆಯಲು ಪರ್ವೇಜ್‌ ತಕ್‌ ಕುತಂತ್ರ ಮಾಡುತ್ತಿದ್ದ. ಇದಕ್ಕಾಗಿ, ಅವರ ಜತೆ ಜಗಳವಾಡುತ್ತಿದ್ದ. ಎಲ್ಲ ಆಸ್ತಿಯನ್ನು ತನ್ನ ಹೆಸರಿಗೆ ಬರೆದುಕೊಡುವಂತೆ ಒತ್ತಾಯಿಸುತ್ತಿದ್ದ. ಆಸ್ತಿಗಾಗಿ ಜಗಳ ಕಾಯುತ್ತಿದ್ದ. ಕೊನೆಗೊಂದು ದಿನ ಲೈಲಾ ಖಾನ್‌ ಸೇರಿ ಆರು ಮಂದಿಯನ್ನು ಕೊಲೆ ಮಾಡಿದ್ದ. ಈಗ ಈತನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

VISTARANEWS.COM


on

Laila Khan Case
Koo

ಮುಂಬೈ: ಬಾಲಿವುಡ್‌ ನಟಿ, ವಫಾ, ಫರಾರ್‌ ಸಿನಿಮಾಗಳ ಖ್ಯಾತಿಯ ಲೈಲಾ ಖಾನ್‌ (Laila Khan Case) ಹಾಗೂ ಅವರ ಐವರು ಸಂಬಂಧಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ನ್ಯಾಯಾಲಯವು (Mumbai Court) ನಟಿಯ ಮಲ ತಂದೆ ಪರ್ವೇಜ್‌ ತಕ್‌ಗೆ (Parvez Tak) ಗಲ್ಲು ಶಿಕ್ಷೆ ವಿಧಿಸಿದೆ. ಆ ಮೂಲಕ 13 ವರ್ಷಗಳ ಪ್ರಕರಣಕ್ಕೆ ಮುಂಬೈ ನ್ಯಾಯಾಲಯವು ಅಂತ್ಯ ಹಾಡಿದೆ. ಆರೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಸಚಿನ್‌ ಪವಾರ್‌ ಅವರು ಆದೇಶ ಹೊರಡಿಸಿದ್ದಾರೆ. ಇವರು ಮೇ 9ರಂದು ವಿಚಾರಣೆ ಅಂತ್ಯಗೊಳಿಸಿ, ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿದ್ದರು.

ಏನಿದು ಪ್ರಕರಣ?

2011ರ ಫೆಬ್ರವರಿಯಲ್ಲಿ ಮಹಾರಾಷ್ಟ್ರದ ನಾಶಿಕ್‌ ಜಿಲ್ಲೆಯ ಇಗಟ್‌ಪುರಿಯಲ್ಲಿರುವ ನಿವಾಸದಲ್ಲಿ ನಟಿ ಲೈಲಾ ಖಾನ್‌, ಲೈಲಾ ಖಾನ್‌ ತಾಯಿ ಸೆಲಿನಾ ಸೇರಿ ಆರು ಜನರನ್ನು ಪರ್ವೇಜ್‌ ತಕ್‌ ಸೇರಿ ಹಲವರು ಕೊಲೆ ಮಾಡಿದ್ದರು. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಲಿನಾ ಸೇರಿ ಆರು ಮಂದಿಯನ್ನು ಹತ್ಯೆಗೈದು, ಫಾರ್ಮ್‌ಹೌಸ್‌ನಲ್ಲಿಯೇ ಸಮಾಧಿ ಮಾಡಲಾಗಿತ್ತು. ಜಮ್ಮು-ಕಾಶ್ಮೀರ ಪೊಲೀಸರು ಪರ್ವೇಜ್‌ ತಕ್‌ನನ್ನು ಬಂಧಿಸಿದ ಬಳಿಕವೇ ಫಾರ್ಮ್‌ಹೌಸ್‌ನಲ್ಲಿ ಲೈಲಾ ಖಾನ್‌ ಸೇರಿ ಎಲ್ಲರ ಶವಗಳು ಪತ್ತೆಯಾಗಿದ್ದವು.

Court Order

ಕೊಲೆ ಮಾಡಲು ಏನು ಕಾರಣ?

ಸೆಲಿನಾ ಅವರಿಗೆ ಪರ್ವೇಜ್‌ ತಕ್‌ ಮೂರನೇ ಪತಿಯಾಗಿದ್ದ. ಸೆಲಿನಾ ತಕ್‌ ಅವರು ಶ್ರೀಮಂತರಾಗಿದ್ದ ಕಾರಣ, ಅವರಿಗೆ ಸಂಬಂಧಿಸಿದ ಎಲ್ಲ ಆಸ್ತಿಯನ್ನು ಹೊಡೆಯಲು ಪರ್ವೇಜ್‌ ತಕ್‌ ಕುತಂತ್ರ ಮಾಡುತ್ತಿದ್ದ. ಇದಕ್ಕಾಗಿ, ಅವರ ಜತೆ ಜಗಳವಾಡುತ್ತಿದ್ದ. ಎಲ್ಲ ಆಸ್ತಿಯನ್ನು ತನ್ನ ಹೆಸರಿಗೆ ಬರೆದುಕೊಡುವಂತೆ ಒತ್ತಾಯಿಸುತ್ತಿದ್ದ. ಆಸ್ತಿಗಾಗಿ ಜಗಳ ಕಾಯುತ್ತಿದ್ದ ಕಾರಣ ಪರ್ವೇಜ್‌ ತಕ್‌ನನ್ನು ಸೆಲಿನಾ ಅವರು ಮನೆಗೆಲಸದವನ ರೀತಿ ನೋಡುತ್ತಿದ್ದರು. ಮನೆಯಿಂದ ಈತನನ್ನು ದೂರವೇ ಇಟ್ಟಿದ್ದರು ಎಂದು ತಿಳಿದುಬಂದಿತ್ತು.

2011ರ ಫೆಬ್ರವರಿಯಲ್ಲಿ ಸೆಲಿನಾ ಸೇರಿ ಎಲ್ಲರನ್ನೂ ಕೊಲೆ ಮಾಡಲು ಪ್ಲಾನ್‌ ರೂಪಿಸಿದ್ದ. ಇದಕ್ಕಾಗಿ ಆತ ಹಲವರಿಗೆ ಹಣವನ್ನೂ ಕೊಟ್ಟು ಕರೆದುಕೊಂಡು ಹೋಗಿದ್ದ. ಮನೆಗೆ ಹೋದವನೇ, ಸೆಲಿನಾ ಅವರ ಜತೆ ಜಗಳವಾಡಿದ್ದಾನೆ. ಮೊದಲು ಸೆಲಿನಾ ಅವರನ್ನು ಕೊಂದ ಪರ್ವೇಜ್‌ ತಕ್‌, ಬಳಿಕ ಲೈಲಾ ಖಾನ್‌ ಸೇರಿ ಆರು ಮಂದಿಯನ್ನು ಕೊಂದು, ಅದೇ ಫಾರ್ಮ್‌ಹೌಸ್‌ನಲ್ಲಿ ಹೂತು ಹಾಕಿದ್ದ. ಕೆಲ ತಿಂಗಳ ಬಳಿಕ ಈತನನ್ನು ಕಾಶ್ಮೀರ ಪೊಲೀಸರು ಬಂಧಿಸಿದ್ದರು. ಫಾರ್ಮ್‌ಹೌಸ್‌ನಲ್ಲಿ ಪರಿಶೀಲನೆ ನಡೆಸಿದ್ದಾಗ ಆರೂ ಮಂದಿಯ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದವು.

ಇದನ್ನೂ ಓದಿ: Murder Case: ನಟಿ, ಕಾಂಗ್ರೆಸ್ ನಾಯಕಿ ವಿದ್ಯಾ ಹತ್ಯೆ ಆರೋಪಿ ಪತಿಯ ಬಂಧನ

Continue Reading

ಪ್ರಮುಖ ಸುದ್ದಿ

Other Backward Classes: 2011ರ ನಂತರ ನೀಡಿದ್ದ ಒಬಿಸಿ ಪ್ರಮಾಣಪತ್ರಗಳನ್ನು ರದ್ದು ಮಾಡಿದ ಕೋಲ್ಕೊತಾ ಹೈಕೋರ್ಟ್​​

Other Backward Classes : 2012 ರಲ್ಲಿ ಅಂಗೀಕರಿಸಿದ ರಾಜ್ಯ ಸರ್ಕಾರದ ಹೊಸ ಕಾನೂನಿನ ಅಡಿಯಲ್ಲಿ ಹಲವಾರು ಸಮುದಾಯಗಳಿಗೆ ಇತರ ಹಿಂದುಳಿದ ವರ್ಗಗಳ ಮೀಸಲಾತಿ ನೀಡಲಾಗಿತ್ತು. ಅದನ್ನು ನ್ಯಾಯಾಲಯ ರದ್ದುಗೊಳಿಸಿದೆ. ಆದಾಗ್ಯೂ, ನ್ಯಾಯಮೂರ್ತಿಗಳಾದ ತಪಬ್ರತಾ ಚಕ್ರವರ್ತಿ ಮತ್ತು ರಾಜಶೇಖರ್ ಮಂಥಾ ಅವರು, 2010 ಕ್ಕಿಂತ ಮೊದಲು ವರ್ಗೀಕರಿಸಿದ ಒಬಿಸಿಯ 66 ವರ್ಗಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ.

VISTARANEWS.COM


on

Calcutta High Court
Koo

ಕೋಲ್ಕತಾ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಆಡಳಿತದಲ್ಲಿ 2011ರಿಂದ ಪಶ್ಚಿಮ ಬಂಗಾಳದಲ್ಲಿ ನೀಡಲಾಗುತ್ತಿರುವ ಇತರ ಹಿಂದುಳಿದ ವರ್ಗಗಳ (Other Backward Classes) ಎಲ್ಲಾ ಪ್ರಮಾಣಪತ್ರಗಳನ್ನು ಕೋಲ್ಕೊತಾ ಹೈಕೋರ್ಟ್ ರದ್ದುಗೊಳಿಸಿದೆ. ಅದು ಹೊಸದಾಗಿ ಪಟ್ಟಿಗೆ ಸೇರ್ಪಡೆ ಮಾಡಲಾಗಿರುವ ಜಾತಿಗಳಿಗೆ ಅನ್ವಯ. ಅಂತೆಯೇ ಇದು ಹಾಲಿ ಈ ಸಮುದಾಯದ ಜನರು ಹೊಂದಿರುವ ಉದ್ಯೋಗಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಆದೇಶವನ್ನು ಸ್ವೀಕರಿಸಿವುದಿಲ್ಲ ಎಂದು ಹೇಳಿದ್ದಾರೆ. ತಪಶಿಲಿ ಸಮುದಾಯಕ್ಕೆ ನೀಡಲಾದ ಹಕ್ಕುಗಳನ್ನು ಕಸಿದುಕೊಳ್ಳುವ ಆದೇಶವನ್ನು ತಾವು ಒಪ್ಪುವುದಿಲ್ಲ ಎಂಬುದಾಗಿ ಹೇಳಿಕೊಂಡಿದ್ದಾರೆ.

2012ರಲ್ಲಿ ಅಂಗೀಕರಿಸಿದ ರಾಜ್ಯ ಸರ್ಕಾರದ ಹೊಸ ಕಾನೂನಿನ ಅಡಿಯಲ್ಲಿ ಹಲವಾರು ಸಮುದಾಯಗಳಿಗೆ ಇತರ ಹಿಂದುಳಿದ ವರ್ಗಗಳ ಮೀಸಲಾತಿ ನೀಡಲಾಗಿತ್ತು. ಅದನ್ನು ನ್ಯಾಯಾಲಯ ರದ್ದುಗೊಳಿಸಿದೆ. ಆದಾಗ್ಯೂ, ನ್ಯಾಯಮೂರ್ತಿಗಳಾದ ತಪಬ್ರತಾ ಚಕ್ರವರ್ತಿ ಮತ್ತು ರಾಜಶೇಖರ್ ಮಂಥಾ ಅವರು, 2010 ಕ್ಕಿಂತ ಮೊದಲು ವರ್ಗೀಕರಿಸಿದ ಒಬಿಸಿಯ 66 ವರ್ಗಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಈ ವರ್ಗಗಳ ಕುರಿತು ಕೋರ್ಟ್​ಗೆ ಸಲ್ಲಿಸಲಾಗಿದ್ದ ಅರ್ಜಿಗಳಲ್ಲಿ ಪ್ರಶ್ನಿಸಲಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅರ್ಜಿಯಲ್ಲಿ ಏನಿತ್ತು?

“2010 ರ ನಂತರ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳು 1993 (ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳ ಆಯೋಗ) ಕಾಯ್ದೆಯನ್ನು ಕಡೆಗಣಿಸಿವೆ ಎಂದು 2011 ರಲ್ಲಿ ಸಲ್ಲಿಸಲಾದ ಪಿಐಎಲ್​ನಲ್ಲಿ ಪ್ರಶ್ನಿಸಲಾಗಿತ್ತು . ವಾಸ್ತವವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಿಗೆ ಅವರ ಸರಿಯಾದ ಪ್ರಮಾಣಪತ್ರಗಳನ್ನು ನೀಡಲಾಗಿಲ್ಲ. 2010ರ ನಂತರ ನೀಡಲಾದ ಎಲ್ಲ ಒಬಿಸಿ ಪ್ರಮಾಣಪತ್ರಗಳನ್ನು ವಿಭಾಗೀಯ ಪೀಠ ರದ್ದುಪಡಿಸಿದೆ. 2010ಕ್ಕಿಂತ ಮೊದಲು ಒಬಿಸಿ ಪ್ರಮಾಣಪತ್ರ ಹೊಂದಿರುವವರು ಕೋಲ್ಕೊತಾ ಹೈಕೋರ್ಟ್ ವಿಚಾರಣೆಯ ಭಾರವನ್ನು ಹೊರುವುದಿಲ್ಲ” ಎಂದು ವಕೀಲ ಸುದೀಪ್ತಾ ದಾಸ್ ಗುಪ್ತಾ ವಾದಿಸಿದ್ದರು.

ಆದಾಗ್ಯೂ, ಈ ಆದೇಶವು ಈಗಾಗಲೇ ಸೇವೆಯಲ್ಲಿರುವ ಅಥವಾ ಮೀಸಲಾತಿಯಿಂದ ಪ್ರಯೋಜನ ಪಡೆದ ಅಥವಾ ರಾಜ್ಯದ ಯಾವುದೇ ಆಯ್ಕೆ ಪ್ರಕ್ರಿಯೆಯಲ್ಲಿ ಯಶಸ್ವಿಯಾದ ಹೊರಹಾಕಲ್ಪಟ್ಟ ವರ್ಗಗಳ ನಾಗರಿಕರ ಸೇವೆಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಮಮತಾ ವಿರೋಧ

ಪಶ್ಚಿಮ ಬಂಗಾಳ ಸರ್ಕಾರ ಪರಿಚಯಿಸಿದ ಒಬಿಸಿ ಮೀಸಲಾತಿ ಕೋಟಾ ಮುಂದುವರಿಯುತ್ತದೆ. ಮನೆ-ಮನೆ ಸಮೀಕ್ಷೆ ನಡೆಸಿದ ನಂತರ ನಾವು ಮಸೂದೆ ಸಿದ್ಧಪಡಿಸಿದ್ದೇವೆ. ಅದನ್ನು ಕ್ಯಾಬಿನೆಟ್ ಮತ್ತು ವಿಧಾನಸಭೆ ಅಂಗೀಕರಿಸಿದೆ ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: Bomb Threat : ಗೃಹ ಸಚಿವಾಲಯಕ್ಕೆ ಬಾಂಬ್ ಬೆದರಿಕೆ; ದೆಹಲಿಯಲ್ಲಿ ಆತಂಕ

ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ಜನರಿಗೆ ನೀಡುವ ಸೌಲಭ್ಯಗಳನ್ನು ತಡೆಯಲು ಬಿಜೆಪಿ ಪಿತೂರಿ ನಡೆಸಿದೆ. ಅಂತಹ ಧೈರ್ಯವನ್ನು ಅವರು ಹೇಗೆ ತೋರಿಸುತ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ. ನ್ಯಾಯಾಲಯದ ತೀರ್ಪು ತಪಶಿಲಿ ಸಮುದಾಯಕ್ಕೆ ಮೀಸಲಾತಿಯನ್ನು ರದ್ದುಗೊಳಿಸುವ ಬಿಜೆಪಿಯ ಪ್ರಯತ್ನಗಳ ಭಾಗವಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಮತ್ತು ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.

ಒಬ್ಬ ನ್ಯಾಯಾಧೀಶರು ‘ನಾನು ಆರ್‌ಎಸ್‌ಎಸ್‌ ವ್ಯಕ್ತಿ’ ಎಂದು ಹೇಳುತ್ತಿದ್ದಾರೆ/ ಇನ್ನೊಬ್ಬರು ಬಿಜೆಪಿಗೆ ಸೇರುತ್ತಾರೆ… ತಪಶಿಲಿಗಳಿಗೆ ಮೀಸಲಾತಿಯನ್ನು ರದ್ದುಗೊಳಿಸಲು ಮೋದಿ ಬಯಸಿದ್ದಾರೆ. ನಾನು ಅದಕ್ಕೆ ಅವಕಾಶ ನೀಡುವುದಿಲ್ಲ. ಅವರು ಆದಿವಾಸಿಗಳ ಹಕ್ಕುಗಳನ್ನು ಕಸಿದುಕೊಳ್ಳಲು ಬಯಸುತ್ತಾರೆ ಎಂದು ಅವರು ಅಭಿಷೇಕ್ ಹೇಳಿದ್ದಾರೆ.

Continue Reading

ಕರ್ನಾಟಕ

Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

Cauvery Dispute: ತಮಿಳುನಾಡಿಗೆ ಮೇ ತಿಂಗಳ ಪಾಲಿನ 2.5 ಟಿಎಂಸಿ ಹರಿಸುವಂತೆ ಕರ್ನಾಟಕಕ್ಕೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿರ್ದೇಶನ ನೀಡಿದೆ.

VISTARANEWS.COM


on

Cauvery Dispute
Koo

ಬೆಂಗಳೂರು: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು (Cauvery Dispute) ಹರಿಸುವಂತೆ ಕರ್ನಾಟಕಕ್ಕೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೂಚನೆ ನೀಡಿದೆ. ಮೇ ತಿಂಗಳ ಪಾಲಿನ 2.5 ಟಿಎಂಸಿ ಹರಿಸಲು ರಾಜ್ಯಕ್ಕೆ ಸಿಡಬ್ಲ್ಯುಎಂಎ ನಿರ್ದೇಶನ ನೀಡಿದೆ.

ಇತ್ತೀಚೆಗೆ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸಮಿತಿ ಸಭೆಯಲ್ಲಿ ಕರ್ನಾಟಕದಲ್ಲಿ ಬರಗಾಲದ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ಸಮಿತಿಯು ತಮಿಳುನಾಡಿಗೆ ಸೂಚಿಸಿತ್ತು. ಆದರೆ, ಇದೀಗ ಮಂಗಳವಾರ ನಡೆದ ಸಭೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಯಲ್ಲಿ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ.

ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು. ಆದರೆ, ಮೇ ಅಂತ್ಯದವರೆಗೂ ನೀರು ಬಿಡಬೇಕು ಎಂಬುದು ತಮಿಳುನಾಡಿನ ವಾದವಾಗಿತ್ತು. ಇದನ್ನು ಸಿಡಬ್ಲ್ಯೂಆರ್‌ಸಿ ನಿರಾಕರಿಸಿತ್ತು. ಆದರೆ, ಈಗ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.

ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ಮೇ 21ರಂದು ಚದುರಿದಂತೆ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಎಚ್ಚರಿಕೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಧಾರವಾಡ ಜಿಲ್ಲೆಯಲ್ಲಿ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ ಸುಮಾರು 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

ಬಿರುಗಾಳಿ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಧಾರವಾಡ, ಗದಗ ಮತ್ತು ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Arvind Kejriwal: ಜೂನ್‌ 1ರವರೆಗೆ ಕೇಜ್ರಿವಾಲ್‌ಗೆ ಜಾಮೀನು, ಮತದಾನ ಮುಗಿಯುವವರೆಗೆ ರಿಲೀಫ್‌

ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ (Illegal money transaction) ವರ್ಗಾವಣೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ. ಜೂನ್‌ 1ರವರೆಗೆ ಅವರಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ.

VISTARANEWS.COM


on

Aravind Kejriwal
Koo

ನವದೆಹಲಿ: ಏಳು ಹಂತದ ಲೋಕಸಭೆ ಚುನಾವಣೆಯ (Lok Sabha Election 2024) ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸುಪ್ರೀಂ ಕೋರ್ಟ್ (Supreme court) ಮಧ್ಯಂತರ ಜಾಮೀನು ನೀಡಿದೆ. ದೆಹಲಿ ಅಬಕಾರಿ ನೀತಿ (Delhi Excise policy) ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ (ED) ಬಂಧಿಸಲ್ಪಟ್ಟಿರುವ ಆಮ್ ಆದ್ಮಿ ಪಕ್ಷದ (Aam Admi Party) ನಾಯಕ ಜೂನ್ 2ರೊಳಗೆ ಜೈಲು ಅಧಿಕಾರಿಗಳಿಗೆ ಶರಣಾಗಬೇಕಿದೆ.

ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ (Illegal money transaction) ವರ್ಗಾವಣೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌(Supreme Court)ನಲ್ಲಿ ನಡೆಯಿತು. ಸದ್ಯ ತಿಹಾರ್‌ ಜೈಲಿನಲ್ಲಿರುವ ಕೇಜ್ರಿವಾಲ್‌ ಲೋಕಸಭೆ ಚುನಾವಣೆ ಹಿನ್ನೆಲೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಕೇಜ್ರಿವಾಲ್ ಅವರ ಬಂಧನದ ವಿರುದ್ಧ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೀಠವು ಎರಡು ಭಾಗಗಳಾಗಿ ವಿಂಗಡಿಸಿದೆ. ಅವರ ಪ್ರಮುಖ ಅರ್ಜಿಯು ಕೇಂದ್ರ ತನಿಖಾ ಸಂಸ್ಥೆಯಿಂದ ತನ್ನ ಬಂಧನವನ್ನು ಪ್ರಶ್ನಿಸಿದೆ ಮತ್ತು ಅದನ್ನು “ಕಾನೂನುಬಾಹಿರ” ಎಂದು ಘೋಷಿಸುವಂತೆ ಕೋರಿದೆ. ಎರಡನೇ ಅಂಶವು ನಡೆಯುತ್ತಿರುವ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಜಾಮೀನು ಮಂಜೂರು ಮಾಡಲು ಸಂಬಂಧಿಸಿದೆ. ಎರಡನೇ ಭಾಗಕ್ಕೆ ಸಂಬಂಧಿಸಿ ಇಂದು ಕೋರ್ಟ್‌ ತೀರ್ಪು ನೀಡಿದೆ.

ನ್ಯಾಯಮೂರ್ತಿ ಸಂಜೀವ್‌ ಖನ್ನಾ ನೇತೃತ್ವದ ಪೀಠ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಿದೆ. ED ಪರ ವಕೀಲ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಅರವಿಂದ ಕೇಜ್ರಿವಾಲ್‌ ಅವರಿಗೆ ಚುನಾವಣೆ ದೃಷ್ಟಿಯಿಂದ ಜಾಮೀನು ನೀಡಿದರೆ ಜನರಿಗೆ ತಪ್ಪು ಸಂದೇಶ ಹೋದಂತಾಗುತ್ತದೆ. ರಾಜಕಾರಣಿಗಳಿಗೊಂದು ನ್ಯಾಯ, ಜನರಿಗೊಂದು ನ್ಯಾಯ ಎಂದು ಜನ ಭಾವಿಸುತ್ತಾರೆ ಎಂದು ಈಗಾಗಲೇ ವಾದ ಮಂಡಿಸಿದ್ದರು. ಇದಾದ ಬಳಿಕ ಈ ಪ್ರಕರಣವನ್ನು ನ್ಯಾಯಪೀಠ ಎರಡು ಭಾಗವನ್ನಾಗಿ ವಿಭಜಿಸಿತ್ತು. ಒಂದು ಇಡಿ ಬಂಧನ ಪ್ರಶ್ನಿಸಿ ಕೇಜ್ರಿವಾಲ್‌ ಸಲ್ಲಿಸಿದ ಅರ್ಜಿ. ಮತ್ತೊಂದು ಮಧ್ಯಂತರ ಜಾಮೀನು ಅರ್ಜಿ. ಮಂಗಳವಾರ ವಿಚಾರಣೆ ನಡೆಸಿದ ಕೋರ್ಟ್‌ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನವನ್ನು ಮೇ 20ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು ಮತ್ತು ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ನಡೆಸುವುದಾಗಿ ಹೇಳಿತ್ತು.

ಏ.9ರಂದು ಇದೇ ಪ್ರಕರಣ ವಿಚಾರಣೆ ನಡೆಸಿದ್ದ ದಿಲ್ಲಿ ಹೈಕೋರ್ಟ್‌, ಅಕ್ರಮ ಹಣ ವರ್ಗಾವಣೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಹಾಜರಾಗುವಂತೆ ಪದೇ ಪದೇ ಸಮನ್ಸ್‌ ನೀಡಿದರೂ ಅವರು ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಇಡಿ ಕೊನೆಗೆ ಅವರನ್ನು ಅರೆಸ್ಟ್‌ ಮಾಡಲೇಬೇಕಾಗಿತ್ತು. ಅದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಹೇಳಿತ್ತು. ಹೀಗಾಗಿ ಕೇಜ್ರಿವಾಲ್‌ ಕೊನೆಗೆ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ಅಬಕಾರಿ ನೀತಿ ಪ್ರಕರಣವೇನು?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಇದನ್ನೂ ಓದಿ:Char Dham Yatra: ಇಂದಿನಿಂದ ಪವಿತ್ರ ಚಾರ್‌ಧಾಮ್‌ ಯಾತ್ರೆ ಆರಂಭ

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಜೊತೆಗೆ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ. ಕವಿತಾ ಮತ್ತು ಆಮ್ ಆದ್ಮಿ ಪಕ್ಷದ ಗೋವಾ ಚುನಾವಣೆ ನಿಧಿ ವ್ಯವಸ್ಥಾಪಕ ಚನ್‌ಪ್ರೀತ್ ಸಿಂಗ್ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ ಜಾಮೀನು ಅರ್ಜಿ ಇಂದು ವಿಚಾರಣೆ; ದಿಲ್ಲಿ ಸಿಎಂಗೆ ಜೈಲಾ…? ಬೇಲಾ?

Continue Reading
Advertisement
Cylinder Blast at Belgavi
ಬೆಳಗಾವಿ16 mins ago

Cylinder Blast : ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ವೃದ್ಧ ದಂಪತಿ ವಾರದ ನಂತರ ಸಾವು

lok sabha election 2024 jaishankar rahul sonia murmu
ಪ್ರಮುಖ ಸುದ್ದಿ39 mins ago

Lok Sabha Election: ಮತ ಚಲಾಯಿಸಿದ ರಾಷ್ಟ್ರಪತಿ ಮುರ್ಮು, ಸೋನಿಯಾ, ರಾಹುಲ್;‌ ಮತಕ್ಕಾಗಿ ಸರ್ಟಿಫಿಕೇಟ್ ಪಡೆದ ಜೈಶಂಕರ್‌!

Konark Tourist Destination
ಪ್ರವಾಸ40 mins ago

Konark Tourist Destination: ರಜೆಯಲ್ಲಿ ಕೋನಾರ್ಕ್‌ಗೆ ಹೋದಾಗ ಈ ಅದ್ಭುತ ಸ್ಥಳಗಳಿಗೆ ಭೇಟಿ ನೀಡಲು ಮರೆಯಬೇಡಿ

Karthi next film Suriya to produce Meiyazhagan
ಕಾಲಿವುಡ್49 mins ago

Karthi next film: ಇಂದು ನಟ ಕಾರ್ತಿ ಬರ್ತ್‌ಡೇ: ತಮ್ಮನ ಚಿತ್ರಕ್ಕೆ ಅಣ್ಣ ಸೂರ್ಯ ಬಂಡವಾಳ!

IPL 2024
ಕ್ರೀಡೆ49 mins ago

IPL 2024: ಐಪಿಎಲ್​ ಟ್ರೋಫಿಯಲ್ಲಿರುವ ಸಂಸ್ಕೃತ ಶ್ಲೋಕದ ಮೂಲ ಸಾರವೇನು?

Best Tourist Places In Tamilnadu
ಪ್ರವಾಸ1 hour ago

Best Tourist Places In Tamilnadu: ಈ ಸುಂದರ ದೇವಾಲಯಗಳ ದರ್ಶನಕ್ಕಾದರೂ ತಮಿಳುನಾಡಿಗೆ ಹೋಗಲೇಬೇಕು!

rave party culprit with jagan mohan reddy
ಪ್ರಮುಖ ಸುದ್ದಿ1 hour ago

Rave Party: ರೇವ್‌ ಪಾರ್ಟಿ ಆರೋಪಿಗೆ ಆಂಧ್ರ ಸಿಎಂ ಜಗನ್‌ ಜೊತೆ ಸ್ನೇಹ!

IPL 2024 Prize money
ಕ್ರೀಡೆ1 hour ago

IPL 2024 Prize money: ಐಪಿಎಲ್​ ವಿನ್ನರ್​ಗೆ ಸಿಗುವ ಬಹುಮಾನ ಮೊತ್ತವೆಷ್ಟು? 4ನೇ ಸ್ಥಾನಿ ಆರ್​ಸಿಬಿಗೆ ಸಿಕ್ಕ ಹಣವೆಷ್ಟು?

South Indian Monsoon Destinations
ಪ್ರವಾಸ2 hours ago

South Indian Monsoon Destinations: ದಕ್ಷಿಣ ಭಾರತದ ಈ 6 ಸ್ಥಳಗಳಲ್ಲಿ ಮಳೆಗಾಲದಲ್ಲಿ ಚಾರಣ ಮಾಡಲೇಬೇಕು!

Kiccha Sudeep Max cinema Pre climax Photo leak
ಸ್ಯಾಂಡಲ್ ವುಡ್2 hours ago

Kiccha Sudeep: ʻಮ್ಯಾಕ್ಸ್ʼ ಪ್ರಿ- ಕ್ಲೈಮ್ಯಾಕ್ಸ್ ಫೋಟೊ ಲೀಕ್‌? ಬೆಂಕಿ ಬಿರುಗಾಳಿ ಅಂದ್ರು ಫ್ಯಾನ್ಸ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌