Lokpal Chairperson : ಲೋಕಪಾಲ್​ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್​ ಮಾಜಿ ಜಡ್ಜ್​ ಖಾನ್ವಿಲ್ಕರ್​ ಅಧಿಕಾರ ಸ್ವೀಕಾರ - Vistara News

ದೇಶ

Lokpal Chairperson : ಲೋಕಪಾಲ್​ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್​ ಮಾಜಿ ಜಡ್ಜ್​ ಖಾನ್ವಿಲ್ಕರ್​ ಅಧಿಕಾರ ಸ್ವೀಕಾರ

Lokpal Chairperson: ರಾಷ್ಟ್ರಪತಿ ಭವನದಲ್ಲಿ ಭಾನುವಾರ ಸಂಜೆ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳು ಖಾನ್ವಿಲ್ಕರ್ ಅವರಿಗೆ ಲೋಕಪಾಲ್ ಅಧ್ಯಕ್ಷರಾಗಿ ಪ್ರಮಾಣ ವಚನ ಬೋಧಿಸಿದ್ದಾರೆ.

VISTARANEWS.COM


on

Lokpal President
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅಜಯ್ ಮಾಣಿಕ್ ರಾವ್ ಖಾನ್ವಿಲ್ಕರ್ ಅವರು ಲೋಕಪಾಲ್ ನೂತನ ಅಧ್ಯಕ್ಷರಾಗಿ (Lokpal Chairperson) ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಭಾನುವಾರ ಸಂಜೆ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳು ಖಾನ್ವಿಲ್ಕರ್ ಅವರಿಗೆ ಲೋಕಪಾಲ್ ಅಧ್ಯಕ್ಷರಾಗಿ ಪ್ರಮಾಣ ವಚನ ಬೋಧಿಸಿದರು ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

66 ವರ್ಷದ ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ಮೇ 13, 2016 ರಿಂದ ಜುಲೈ 29, 2022 ರವರೆಗೆ ಸುಪ್ರೀಂ ಕೋರ್ಟ್ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ : IT Department: ಪಾವತಿಸಿದ ತೆರಿಗೆ, ಹಣಕಾಸು ವಹಿವಾಟು ಮಧ್ಯೆ ಮಿಸ್‌ ಮ್ಯಾಚ್‌; ಐಟಿ ಇಲಾಖೆಯಿಂದ ಅಲರ್ಟ್‌ ಮೆಸೇಜ್‌

ಮೇ 27, 2022 ರಂದು ಪಿನಾಕಿ ಚಂದ್ರ ಘೋಷ್ ಅವರ ನಿವೃತ್ತಿಯ ನಂತರ ಲೋಕಪಾಲ ಅಧ್ಯಕ್ಷರ ಹುದ್ದೆ ಖಾಲಿಯಾಗಿತ್ತು. ಅಲ್ಲಿಮದ ಸುಮಾರು ಎರಡು ವರ್ಷಗಳ ನಂತರ ನ್ಯಾಯಮೂರ್ತಿ (ನಿವೃತ್ತ) ಖಾನ್ವಿಲ್ಕರ್ ಅವರನ್ನು ಕಳೆದ ತಿಂಗಳು ಭ್ರಷ್ಟಾಚಾರ ವಿರೋಧಿ ಲೋಕಪಾಲ್​​ ಅಧ್ಯಕ್ಷರಾಗಿ ನೇಮಿಸಲಾಯಿತು.

ಮಾ. 15ರೊಳಗೆ ನೂತನ ಚುನಾವಣಾ ಆಯುಕ್ತರ ನೇಮಕ

ನವದೆಹಲಿ: ಲೋಕಸಭಾ ಚುನಾವಣೆಗೆ (Lok sabha election) ಕೆಲವೇ ವಾರಗಳು ಬಾಕಿ ಇದ್ದು, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಶನಿವಾರ (ಮಾರ್ಚ್‌ 9) ಚುನಾವಣಾ ಆಯುಕ್ತರಲ್ಲಿ (Election Commission) ಒಬ್ಬರಾದ ಅರುಣ್ ಗೋಯೆಲ್ (Arun Goel) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಫೆಬ್ರವರಿ 14ರಂದು ಮತ್ತೊಬ್ಬ ಆಯುಕ್ತ ಅನೂಪ್ ಚಂದ್ರ ಪಾಂಡೆ ರಾಜೀನಾಮೆ ನೀಡಿದ್ದರು. ಹೀಗಾಗಿ ಖಾಲಿ ಹುದ್ದೆಗಳನ್ನು ತುಂಬಲು ಮಾರ್ಚ್ 15ರೊಳಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಇಬ್ಬರು ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಕೆಲವೇ ದಿನಗಳ ಮೊದಲು, ಗೋಯೆಲ್ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. ಈಗ ಚುನಾವಣಾ ಆಯೋಗದಲ್ಲಿ ಮುಖ್ಯ ಆಯುಕ್ತ ರಾಜೀವ್ ಕುಮಾರ್ (CEC Rajeev Kumar) ಒಬ್ಬರೇ ಇದ್ದಾರೆ.

  • ಆಯ್ಕೆ ಹೇಗೆ?

ಗೃಹ ಕಾರ್ಯದರ್ಶಿ, ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಕಾರ್ಯದರ್ಶಿಯನ್ನು ಒಳಗೊಂಡ, ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ನೇತೃತ್ವದ ಶೋಧನಾ ಸಮಿತಿ ಎರಡು ಹುದ್ದೆಗಳಿಗೆ ಐವರ ಹೆಸರುಗಳನ್ನು ಆಯ್ಕೆ ಸಮಿತಿಗೆ ಶಿಫಾರಸು ಮಾಡುತ್ತದೆ. ನಂತರ ಪ್ರಧಾನಿ, ಕೇಂದ್ರ ಸಚಿವ ಮತ್ತು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಒಳಗೊಂಡ ಆಯ್ಕೆ ಸಮಿತಿಯು ಚುನಾವಣಾ ಆಯುಕ್ತರಾಗಿ ಇಬ್ಬರನ್ನು ಅಂತಿಮಗೊಳಿಸುತ್ತದೆ. ಕೊನೆಗೆ ರಾಷ್ಟ್ರಪತಿ ಚುನಾವಣಾ ಆಯುಕ್ತರನ್ನು ನೇಮಕ ಮಾಡಿಕೊಳ್ಳುತ್ತಾರೆ.

ಸದಸ್ಯರ ಅನುಕೂಲಕ್ಕೆ ಅನುಗುಣವಾಗಿ ಆಯ್ಕೆ ಸಮಿತಿಯು ಮಾರ್ಚ್ 13 ಅಥವಾ 14ರಂದು ಸಭೆ ಸೇರಲಿದ್ದು, ಮಾರ್ಚ್ 15ರೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಚುನಾವಣಾ ಆಯುಕ್ತ (ಇಸಿ)ರ ನೇಮಕಾತಿಗೆ ಸಂಬಂಧಿಸಿದ ಹೊಸ ಕಾನೂನು ಜಾರಿಗೆ ಬರುವ ಮೊದಲು, ಚುನಾವಣಾ ಆಯುಕ್ತರನ್ನು ಸರ್ಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ನೇಮಿಸುತ್ತಿದ್ದರು. ಅಲ್ಲದೆ ಸಂಪ್ರದಾಯದ ಪ್ರಕಾರ ಹಿರಿಯರು ಸಿಇಸಿಯಾಗುತ್ತಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Chandrayaan 3: 2023ರ ಜುಲೈ 14ರಂದು ಚಂದ್ರಯಾನ 3 ಮಿಷನ್‌ ಉಡಾವಣೆಗೆ ಕೆಲವೇ ನಿಮಿಷಗಳು ಬಾಕಿ ಇರುವಾಗಲೇ ಇಸ್ರೋ ವಿಜ್ಞಾನಿಗಳಿಗೆ ಹೊಸ ಸಮಸ್ಯೆ ಎದುರಾಗಿತ್ತು. ಬಾಹ್ಯಾಕಾಶ ತ್ಯಾಜ್ಯವೊಂದು ಚಂದ್ರಯಾನ 3 ಮಿಷನ್‌ ಉಡಾವಣೆಗೆ ಅಡ್ಡಿಯಾಗಿತ್ತು. ಆದರೆ, ಇಸ್ರೋ ವಿಜ್ಞಾನಿಗಳು ಚಾಣಾಕ್ಷತನ ಮೆರೆದ ಕಾರಣ ಇಡೀ ಮಿಷನ್‌ ಯಶಸ್ವಿಯಾಗಿದೆ.

VISTARANEWS.COM


on

Chandrayaan 3
Koo

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಐತಿಹಾಸಿಕ ಚಂದ್ರಯಾನ 3 ಮಿಷನ್‌ಅನ್ನು ಯಶಸ್ವಿಯಾಗಿ ಕೈಗೊಳ್ಳುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಅದರಲ್ಲೂ, ಚಂದ್ರನ ದಕ್ಷಿಣ ಧ್ರುವದಲ್ಲಿ ಮಿಷನ್‌ಅನ್ನು ಸಾಫ್ಟ್‌ ಲ್ಯಾಂಡ್‌ ಮಾಡಿದ ಜಗತ್ತಿನ ಮೊದಲ ದೇಶ ಎನಿಸಿದೆ. ಇದಾದ ಬಳಿಕ ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಛಾಪು ಮೂಡಿಸಿದೆ. ಆದರೆ, ಉಡಾವಣೆಯಾದ ಕೆಲವೇ ಹೊತ್ತಿನಲ್ಲಿ ಚಂದ್ರಯಾನ 3 ಮಿಷನ್‌ (Chandrayaan 3) ಬಾಹ್ಯಾಕಾಶದಲ್ಲೇ ಛಿದ್ರವಾಗುತ್ತಿತ್ತು. ಆದರೆ, ಅದನ್ನು ಇಸ್ರೋ ವಿಜ್ಞಾನಿಗಳು ಕೇವಲ 4 ಸೆಕೆಂಡ್‌ಗಳಲ್ಲಿ ತಡೆದರು ಎಂಬ ಮಾಹಿತಿ ಲಭ್ಯವಾಗಿದೆ.

2023ರ ಜುಲೈ 14ರಂದು ಚಂದ್ರಯಾನ 3 ಮಿಷನ್‌ ಉಡಾವಣೆಗೆ ಕೆಲವೇ ನಿಮಿಷಗಳು ಬಾಕಿ ಇದ್ದವು. ಇನ್ನೇನು ಉಡಾವಣೆ ಮಾಡಬೇಕು ಎನ್ನುವಷ್ಟರಲ್ಲಿಯೇ ಚಂದ್ರಯಾನ 3 ರಾಕೆಟ್‌ ಸಾಗುವ ಮಾರ್ಗದಲ್ಲಿ ಬಾಹ್ಯಾಕಾಶ ತ್ಯಾಜ್ಯವೊಂದು ಇಸ್ರೋ ವಿಜ್ಞಾನಿಗಳಿಗೆ ಕಾಣಿಸಿದೆ. ಇದರಿಂದಾಗಿ ಇಸ್ರೋ ವಿಜ್ಞಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಇನ್ನೇನು ಕೆಲವೇ ನಿಮಿಷಗಳಲ್ಲಿ ಉಡಾವಣೆ ಮಾಡಬೇಕಿದೆ. ಉಡಾವಣೆ ಮಾಡಿದರೆ ಬಾಹ್ಯಾಕಾಶ ತ್ಯಾಜ್ಯಕ್ಕೆ ಚಂದ್ರಯಾನ 3 ರಾಕೆಟ್‌ ಡಿಕ್ಕಿಯಾಗಿ, ಇಡೀ ಮಿಷನ್‌ ಹಾಳಾಗುತ್ತಿತ್ತು.

ಇಸ್ರೋ ವಿಜ್ಞಾನಿಗಳ ಚಾಣಾಕ್ಷತನ

ಚಂದ್ರಯಾನ 3 ಉಡಾವಣೆ ಮಾಡಲೇಬೇಕಿತ್ತು. ಹಾಗಾಗಿ, ಇಸ್ರೋ ವಿಜ್ಞಾನಿಗಳು ಚಾಣಾಕ್ಷತನ ಮೆರೆದರು. ಕೊನೆಯ ಕ್ಷಣದಲ್ಲಿ ಉಡಾವಣೆಯನ್ನು 4 ಸೆಕೆಂಡ್‌ ವಿಳಂಬ ಮಾಡಿದರು. ಇದೇ ಅವಧಿಯಲ್ಲಿ ಬಾಹ್ಯಾಕಾಶ ತ್ಯಾಜ್ಯವು ಚಂದ್ರಯಾನ 3 ಮಿಷನ್‌ ಮಾರ್ಗದಿಂದ ಬೇರೆಡೆ ವಾಲಿತು. ಆಗ, ವಿಜ್ಞಾನಿಗಳು ಯಶಸ್ವಯಾಗಿ ಚಂದ್ರಯಾನ 3 ಮಿಷನ್‌ಅನ್ನು ಉಡಾವಣೆ ಮಾಡಿದರು. ನಿಗದಿತ ಸಮಯಕ್ಕೆ ಉಡಾವಣೆ ಮಾಡಿದ್ದರೆ ಇಡೀ ಮಿಷನ್‌ ವಿಫಲವಾಗುತ್ತಿತ್ತು ಎನ್ನಲಾಗಿದೆ.

2023ರ ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ LVM3 ರಾಕೆಟ್‌ನ ಮೂಲಕ ಉಡಾವಣೆಗೊಂಡ ಚಂದ್ರಯಾನ-3, ಒಂದು ತಿಂಗಳ ಕಾಲ ಬಾಹ್ಯಾಕಾಶ ಹಾರಾಟದ ನಂತರ ಆಗಸ್ಟ್ 23ರಂದು ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಇಳಿಯಿತು. ಆ ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್‌ ಲ್ಯಾಂಡ್‌ ಆದ ಜಗತ್ತಿನ ಮೊದಲ ಮಿಷನ್‌ ಎಂಬ ಖ್ಯಾತಿಗೆ ಭಾಜನವಾಯಿತು. ಇದರೊಂದಿಗೆ ಇಸ್ರೋ ಮೈಲುಗಲ್ಲು ಸ್ಥಾಪಿಸಿತು.

ಅಷ್ಟೇ ಅಲ್ಲ, ಚಂದ್ರಯಾನ 3 ಮಿಷನ್‌ ಲ್ಯಾಂಡ್‌ ಆದ ಪ್ರದೇಶವನ್ನು ಶಿವಶಕ್ತಿ ಎಂಬುದಾಗಿ ಕರೆಯಲು ಅಂತಾರಾಷ್ಟ್ರೀಯ ಖಗೋಳ ಒಕ್ಕೂಟವು (International Astronomical Union) ಮಾರ್ಚ್‌ 19ರಂದು ಅನುಮತಿ ನೀಡಿದೆ. ಇದರೊಂದಿಗೆ ಬಾಹ್ಯಾಕಾಶ ನೌಕೆ ಇಳಿದ ಪ್ರದೇಶವೀಗ ಅಧಿಕೃತವಾಗಿ ಶಿವಶಕ್ತಿ ಪಾಯಿಂಟ್‌ ಎನಿಸಿದೆ.

ಇದನ್ನೂ ಓದಿ: Chandrayaan-3 mission: ಇಸ್ರೋದ ಚಂದ್ರಯಾನ-3 ಟೀಮ್‌ಗೆ ಅಮೆರಿಕದ ಪ್ರಶಸ್ತಿ: ʼಸ್ಫೂರ್ತಿʼ ಎಂದ ಸ್ಪೇಸ್‌ ಫೌಂಡೇಶನ್

Continue Reading

ದೇಶ

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Lok Sabha Election 2024: ಮೂರನೇ ಹಂತದಲ್ಲಿ 1,352 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಇವರಲ್ಲಿ ಶೇ.18ರಷ್ಟು ಅಂದರೆ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. 172 ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. ಅತ್ಯಾಚಾರ ಸೇರಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಕುರಿತಂತೆ 38 ಜನರ ವಿರುದ್ಧ ಕೇಸ್‌ ದಾಖಲಾಗಿದೆ. ದ್ವೇಷ ಭಾಷಣಕ್ಕೆ ಕುರಿತಂತೆ 17 ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿವೆ ಎಂದು ಎಡಿಆರ್‌ ವರದಿ ತಿಳಿಸಿದೆ.

VISTARANEWS.COM


on

Lok Sabha Election
Koo

ನವದೆಹಲಿ: ದೇಶಾದ್ಯಂತ ಬೇಸಿಗೆಯ ಬಿಸಿಲಿನಷ್ಟೇ ಲೋಕಸಭೆ ಚುನಾವಣೆ (Lok Sabha Election 2024) ಕಾವು ಕೂಡ ಜೋರಾಗಿದೆ. ರಾಜಕೀಯ ನಾಯಕರ ಅಬ್ಬರದ ಸಮಾವೇಶಗಳು, ಪ್ರಚಾರದ ಭರಾಟೆ, ತೀಕ್ಷ್ಣ ಹೇಳಿಕೆಗಳು, ಪ್ರತಿಸ್ಪರ್ಧಿಗಳ ವಿರುದ್ಧ ಮಾಡುವ ಆರೋಪಗಳು ಸುದ್ದಿಯಾಗುತ್ತಿವೆ. ಇನ್ನು ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದ್ದು, ಇದಕ್ಕಾಗಿ ಅಭ್ಯರ್ಥಿಗಳು, ನಾಯಕರು ಇನ್ನಿಲ್ಲದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ, ಮೂರನೇ ಹಂತದಲ್ಲಿ 1,352 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಇವರಲ್ಲಿ ಶೇ.18ರಷ್ಟು ಅಂದರೆ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ (Criminal Case) ದಾಖಲಾಗಿವೆ ಎಂದು ತಿಳಿದುಬಂದಿದೆ.

ನ್ಯಾಷನಲ್‌ ಎಲೆಕ್ಷನ್‌ ವಾಚ್‌ ಹಾಗೂ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ (ADR) ಬಿಡುಗಡೆ ಮಾಡಿರುವ ವರದಿ ಪ್ರಕಾರ, ಮೂರನೇ ಹಂತದ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ ಎಂದು ತಿಳಿದುಬಂದಿದೆ. 172 ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. ಅತ್ಯಾಚಾರ ಸೇರಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಕುರಿತಂತೆ 38 ಜನರ ವಿರುದ್ಧ ಕೇಸ್‌ ದಾಖಲಾಗಿದೆ. ದ್ವೇಷ ಭಾಷಣಕ್ಕೆ ಕುರಿತಂತೆ 17 ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿವೆ. ಅಭ್ಯರ್ಥಿಗಳು ಚುನಾವಣೆ ಆಯೋಗಕ್ಕೆ ನೀಡಿರುವ ಮಾಹಿತಿ ಆಧರಿಸಿ ವರದಿ ತಯಾರಿಸಲಾಗಿದೆ.

Lok Sabha Election-2024

ಬಿಜೆಪಿಯಿಂದ ಸ್ಪರ್ಧಿಸಿದ 82 ಅಭ್ಯರ್ಥಿಗಳಲ್ಲಿ 22 ಮಂದಿ ವಿರುದ್ಧ ಕ್ರಿಮಿನಲ್‌ ಕೇಸ್‌ ಇವೆ. ಇನ್ನು ಕಾಂಗ್ರೆಸ್‌ನ 68 ಅಭ್ಯರ್ಥಿಗಳ ಪೈಕಿ 26, ಆರ್‌ಜೆಡಿಯ ಮೂರಕ್ಕೆ ಮೂವರ ವಿರುದ್ಧವೂ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. ಶಿವಸೇನೆ (ಉದ್ಧವ್‌ ಬಾಳಾಸಾಹೇಬ್‌ ಠಾಕ್ರೆ) ಶೇ.80, ಎನ್‌ಸಿಪಿ (ಶರದ್‌ ಪವಾರ್)‌ ಶೇ.67, ಸಮಾಜವಾದಿ ಪಾರ್ಟಿ ಶೇ.50, ಜೆಡಿಯು ಶೇ.33 ಹಾಗೂ ತೃಣಮೂಲ ಕಾಂಗ್ರೆಸ್‌ನ ಶೇ.17ರಷ್ಟು ಅಭ್ಯರ್ಥಿಗಳು ಕ್ರಿಮಿನಲ್‌ ಕೇಸ್‌ ಹೊಂದಿದ್ದಾರೆ ಎಂಬುದು ವರದಿ ಮೂಲಕ ಬಹಿರಂಗವಾಗಿದೆ.

ಇವರ ಆಸ್ತಿ-ಪಾಸ್ತಿ ಎಷ್ಟು?

ಮೂರನೇ ಹಂತದಲ್ಲಿ 1,352 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, ಇವರಲ್ಲಿ 292 ಅಭ್ಯರ್ಥಿಗಳು ಕೋಟ್ಯಧೀಶರಾಗಿದ್ದಾರೆ. ಇವರಲ್ಲಿ ಬಿಜೆಪಿಯ 77, ಕಾಂಗ್ರೆಸ್‌ನ 60 ಅಭ್ಯರ್ಥಿಗಳು ಕೋಟ್ಯಧೀಶರಾಗಿದ್ದಾರೆ. ಗೋವಾದ ಪಲ್ಲವಿ ಶ್ರೀನಿವಾಸ್‌ ಡೆಂಪೊ ಅವರ ಆಸ್ತಿಯ ಮೌಲ್ಯವು 1,361 ಕೋಟಿ ರೂ. ಆಗಿದ್ದು, ಇವರೇ ಶ್ರೀಮಂತ ಅಭ್ಯರ್ಥಿ ಎನಿಸಿದ್ದಾರೆ. ಇನ್ನು ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ ಅವರ ಆಸ್ತಿಯ ಮೌಲ್ಯವು 424 ಕೋಟಿ ರೂ. ಆಗಿದ್ದು, ಎರಡನೇ ಶ್ರೀಮಂತ ಅಭ್ಯರ್ಥಿ ಎನಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಶಾಹು ಶಹಾಜಿ ಅವರು ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದು, ಇವರ ಆಸ್ತಿ ಮೌಲ್ಯ 342 ಕೋಟಿ ರೂ. ಆಗಿದೆ. ಇವರು ಮೂರನೇ ಶ್ರೀಮಂತ ಅಭ್ಯರ್ಥಿ ಆಗಿದ್ದಾರೆ.

ಇದನ್ನೂ ಓದಿ: Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

Continue Reading

ದೇಶ

Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

Narendra Modi: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ 370ನೇ ವಿಧಿಯು ರಾಜ್ಯಗಳ ಪಟ್ಟಿಯಲ್ಲಿ ಬರುವುದಿಲ್ಲ. ಇದು ರಾಜ್ಯಗಳಿಗೆ ಸಂಬಂಧಿಸಿದ ವಿಷಯವಲ್ಲ. ಹಾಗಾಗಿ, ಯಾವುದೇ ರಾಜ್ಯ ಸರ್ಕಾರಗಳು ಸಿಎಎ ಜಾರಿಯನ್ನು ತಡೆಯುವ ಹಾಗೂ 370ನೇ ವಿಧಿಯನ್ನು ಮತ್ತೆ ಜಾರಿಗೆ ತರುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಕಾವು ದಿನೇದಿನೆ ಜಾಸ್ತಿಯಾಗುತ್ತಿದೆ. ರಾಜಕಾರಣಿಗಳ ಹೇಳಿಕೆಗಳು, ಅವರು ಮಾತನಾಡುವ ವಿಷಯಗಳು ಇನ್ನಷ್ಟು ಕಾವು ಪಡೆದುಕೊಳ್ಳುತ್ತಿವೆ. “ನಾವು ಅಧಿಕಾರಕ್ಕೆ ಬಂದರೆ ಕಾಶ್ಮೀರದಲ್ಲಿ 370ನೇ ವಿಧಿ ಮತ್ತೆ ಜಾರಿಗೆ ತರುತ್ತೇವೆ. ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯನ್ನು ತಡೆಯುತ್ತೇವೆ” ಎಂದು ಪ್ರತಿಪಕ್ಷಗಳು ಹೇಳುತ್ತಿವೆ. ಇದರ ಬೆನ್ನಲ್ಲೇ, ಪ್ರತಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸವಾಲು ಹಾಕಿದ್ದಾರೆ. “ತಾಕತ್ತಿದ್ದವರು 370ನೇ ವಿಧಿಯನ್ನು ಮತ್ತೆ ಜಾರಿಗೆ ತರಲಿ. ತಾಕತ್ತಿದ್ದವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಡೆಯಲಿ” ಎಂದು ನ್ಯೂಸ್‌ 18ಗೆ ನೀಡಿದ ಸಂದರ್ಶನದ ವೇಳೆ ನರೇಂದ್ರ ಮೋದಿ ಹೇಳಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ ಸಿಎಎ ಜಾರಿಯಾಗಲು ಬಿಡುವುದಿಲ್ಲ. ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ಮತ್ತೆ ಜಾರಿಗೆ ತರಲಾಗುವುದು” ಎಂಬುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿರುವ ಕುರಿತು ಸಂದರ್ಶನದ ವೇಳೆ ಪ್ರಶ್ನೆಗೆ ನರೇಂದ್ರ ಮೋದಿ ಉತ್ತರಿಸಿದರು. “ನಾನು ಕಾಂಗ್ರೆಸ್‌ ಸೇರಿ ಯಾವುದೇ ಪ್ರತಿಪಕ್ಷಗಳಿಗೆ ಸವಾಲು ಹಾಕುತ್ತೇನೆ. ತಾಕತ್ತಿದ್ದವರು 370ನೇ ವಿಧಿಯನ್ನು ಜಾರಿಗೆ ತರಲಿ. ಹಾಗೆಯೇ, ಸಿಎಎ ಜಾರಿಯನ್ನು ಯಾರಿಗೂ ತಡೆಯಲು ಆಗುವುದಿಲ್ಲ” ಎಂದು ಹೇಳಿದರು.

“ಯಾರು ಸಂವಿಧಾನವನ್ನು ಸರಿಯಾಗಿ ಓದಿರುತ್ತಾರೋ, ಯಾರು ಒಕ್ಕೂಟ ವ್ಯವಸ್ಥೆಯನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುತ್ತಾರೋ, ಅವರು ಇಂತಹ ಹೇಳಿಕೆ ನೀಡುವುದಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ 370ನೇ ವಿಧಿಯು ರಾಜ್ಯಗಳಿಗೆ ಸಂಬಂಧಿಸಿದ ವಿಷಯವಲ್ಲ. ರಾಜ್ಯಗಳ ಪಟ್ಟಿಯಲ್ಲಿ ಇವು ಬರುವುದಿಲ್ಲ. ನರೇಂದ್ರ ಮೋದಿ ಕೂಡ ಯಾವುದೇ ರಾಜ್ಯದ ಮುಖ್ಯಮಂತ್ರಿಯಾಗಿದ್ದರೂ, ಇಂತಹ ನಿರ್ಧಾರ ತೆಗೆದುಕೊಳ್ಳಲು ಬರುವುದಿಲ್ಲ. ಇದು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ವಿಷಯವಾಗಿದೆ” ಎಂದು ತಿಳಿಸಿದರು.

“ಯಾವುದೇ ರಾಜ್ಯಗಳಿಗೆ 370ನೇ ವಿಧಿ ಮರು ಜಾರಿಗೊಳಿಸಲು ಆಗುವುದಿಲ್ಲ. ಕಾಂಗ್ರೆಸ್‌ ಸೇರಿ, ಯಾವುದೇ ಪಕ್ಷಗಳಿಗೆ ನಾನು ಸವಾಲು ಹಾಕುತ್ತೇನೆ. ತಾಕತ್ತಿದ್ದರೆ, 370ನೇ ವಿಧಿಯನ್ನು ಮತ್ತೆ ಜಾರಿಗೊಳಿಸುತ್ತೇವೆ ಎಂದು ಘೋಷಿಸಲಿ ನೋಡೋಣ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೆಸರು ಹೇಳಿಕೊಂಡು ನಮ್ಮ ವಿರುದ್ಧ ಟೀಕೆ ಮಾಡುತ್ತಾರೆ. ಆದರೆ, ಸ್ವಾತಂತ್ರ್ಯದ ಬಳಿಕ ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನವು ಜಮ್ಮು-ಕಾಶ್ಮೀರದಲ್ಲಿ ಅನ್ವಯವಾಗಿರಲಿಲ್ಲ. 370ನೇ ವಿಧಿ ರದ್ದುಗೊಳಿಸಿ, ನಾವು ಅಂಬೇಡ್ಕರ್‌ ಸಂವಿಧಾನವು ಜಮ್ಮು-ಕಾಶ್ಮೀರದಲ್ಲೂ ಜಾರಿಯಾಗುವಂತೆ ಮಾಡಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: PM Narendra Modi: ಶಿರಸಿಗೆ ಬಂದಾಗ ಮೋದಿ ಭೇಟಿ ಮಾಡಿದ ನಾಲ್ವರು ವಿಶೇಷ ವ್ಯಕ್ತಿಗಳಿವರು! ಏನಿವರ ಸಾಧನೆ?

Continue Reading

ಉದ್ಯೋಗ

Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

Labour Day 2024: ದುಡಿಯುವ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ವಿಶ್ವದಾದ್ಯಂತ ಮೇ 1ರಂದು ಕಾರ್ಮಿಕರ ದಿನವನ್ನು ಆಚರಿಸಲಾಗುತ್ತದೆ. ಇದು ಸಮಾಜದಲ್ಲಿ ಕಾರ್ಮಿಕ ವರ್ಗದ ಪ್ರಮುಖ ಪಾತ್ರವನ್ನು ನೆನಪಿಸುತ್ತದೆ. ಈ ದಿನದ ಹಿನ್ನೆಲೆಯ ವಿವರ ಇಲ್ಲಿದೆ.

VISTARANEWS.COM


on

By

International Labor Day-2024
Koo

ಬದುಕಿನ ಬಹುಪಾಲು ದಿನಗಳನ್ನು ದುಡಿಮೆಯಲ್ಲೇ ಕಳೆಯುವವರು ಕಾರ್ಮಿಕರು (Labour Day 2024). ಇವರಲ್ಲಿ ಕೆಲವರು ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ಇದೆ. ಹೀಗಾಗಿ ಅವರ ಬದುಕು ನಿತ್ಯವೂ ಹೋರಾಟದಲ್ಲೇ ಕಳೆಯುತ್ತದೆ. ನಿತ್ಯದ ಕೆಲಸದ ಕೂಲಿಗಾಗಿ ಯಾವುದೇ ವಿಶೇಷ ಸವಲತ್ತುಗಳಿಲ್ಲದೆ ಹಗಲು, ರಾತ್ರಿ ಎನ್ನದೆ ದುಡಿಯುವ ಜೀವಗಳು ಲಕ್ಷಾಂತರ. ಇವರ ಹೋರಾಟ, ತ್ಯಾಗಗಳನ್ನು ಸ್ಮರಿಸಲು ಪ್ರತಿ ವರ್ಷ ಮೇ 1ರಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನವನ್ನು (International Labour Day-2024) ಆಚರಿಸಲಾಗುತ್ತದೆ. ಇದನ್ನು ಮೇ ದಿನ (may day) ಎಂದೂ ಕರೆಯಲಾಗುತ್ತದೆ.

ಕಾರ್ಮಿಕರ ದಿನಾಚರಣೆಯ ಮೂಲ 19ನೇ ಶತಮಾನದ ಉತ್ತರಾರ್ಧ ಎಂದು ಹೇಳಬಹುದು. ಈ ಸಂದರ್ಭದಲ್ಲಿ ಜಗತ್ತಿನಾದ್ಯಂತ ಕಾರ್ಮಿಕರು ಉತ್ತಮ ಕೆಲಸದ ಪರಿಸ್ಥಿತಿಗಳು, ನ್ಯಾಯಯುತ ವೇತನ ಮತ್ತು ಕಡಿಮೆ ಕೆಲಸದ ಸಮಯಕ್ಕಾಗಿ ಒತ್ತಾಯಿಸಲು ಪ್ರಾರಂಭಿಸಿದರು.

ಭಾರತ (india), ಕ್ಯೂಬಾ (cuba) ಮತ್ತು ಚೀನಾ (china) ಸೇರಿದಂತೆ 80ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಸ್ತುತ ಅಂತಾರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ದುಡಿಯುವ ವರ್ಗದ ಜನರ ಹಕ್ಕುಗಳನ್ನು ಉತ್ತೇಜಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ವಿಶ್ವದ ವಿವಿಧ ಭಾಗಗಳಲ್ಲಿನ ಜನರು ಈ ದಿನದಂದು ಮೆರವಣಿಗೆಗಳನ್ನು ನಡೆಸುತ್ತಾರೆ, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ನಿತ್ಯದ ಕೆಲಸದಲ್ಲಿ ಸಾಧನೆ ಮಾಡಿರುವ ಕೆಲವು ಕಾರ್ಮಿಕರನ್ನು ಗುರುತಿಸಿ ಸಮ್ಮಾನವನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

ಇದರ ಇತಿಹಾಸ ಹೀಗಿದೆ

19ನೇ ಶತಮಾನದಲ್ಲಿ ಕಾರ್ಮಿಕ ದಿನಾಚರಣೆಯ ಪ್ರಾರಂಭವಾಯಿತು. ಅಮೆರಿಕದ ಚಿಕಾಗೋದಲ್ಲಿ 1886ರ ಮೇ 1 ರಂದು ಕಾರ್ಮಿಕರು ಕೆಲಸದ ದಿನವನ್ನು ಎಂಟು ಗಂಟೆಗೆ ನಿಗದಿ ಪಡಿಸುವಂತೆ ಒತ್ತಾಯಿಸಿ ಮುಷ್ಕರವನ್ನು ಆಯೋಜಿಸಿದ್ದರು. ಹೇಮಾರ್ಕೆಟ್ ಸ್ಕ್ವೇರ್‌ನಲ್ಲಿ ನಡೆದ ಕಾರ್ಮಿಕ ರ್ಯಾಲಿಯ ವೇಳೆ ಬಾಂಬ್ ಸ್ಫೋಟಗೊಂಡ ಅನಂತರ ಅಮೆರಿಕದಾದ್ಯಂತ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಮತ್ತು ಉತ್ತಮ ಕೆಲಸದ ಪರಿಸ್ಥಿತಿಗಳಿಗಾಗಿ ಹೋರಾಡಲು ಒಗ್ಗೂಡಿದರು.

1889ರಲ್ಲಿ ಸಮಾಜವಾದಿ ಪಕ್ಷಗಳ ಅಂತಾರಾಷ್ಟ್ರೀಯ ಕಾಂಗ್ರೆಸ್ ಪ್ಯಾರಿಸ್ ನಲ್ಲಿ ಸಭೆ ಸೇರಿತು. ಮೇ 1ರಂದು ಕಾರ್ಮಿಕರ ದಿನ ಅಥವಾ ಕಾರ್ಮಿಕರ ದಿನವನ್ನು ಆಚರಿಸಲು ನಿರ್ಧಾರ ಕೈಗೊಂಡಿತು.


ಚೆನ್ನೈನಲ್ಲಿ ಮೊದಲ ಕಾರ್ಯಕ್ರಮ

ಭಾರತದಲ್ಲಿ ಮೊದಲ ಬಾರಿಗೆ ಕಾರ್ಮಿಕ ದಿನವನ್ನು 1923ರ ಮೇ 1ರಂದು ಚೆನ್ನೈನಲ್ಲಿ ಆಚರಿಸಲಾಯಿತು. ಮೊದಲ ಮೇ ದಿನಾಚರಣೆಯನ್ನು ಲೇಬರ್ ಕಿಸಾನ್ ಪಾರ್ಟಿ ಆಫ್ ಹಿಂದೂಸ್ತಾನ್ ಆಯೋಜಿಸಿತ್ತು. ಪಕ್ಷದ ನಾಯಕ ಕಾಮ್ರೇಡ್ ಸಿಂಗರವೇಲರ್ ಈ ಕಾರ್ಯಕ್ರಮವನ್ನು ಆಚರಿಸಲು ಎರಡು ಸಭೆಗಳನ್ನು ಆಯೋಜಿಸಿದ್ದರು.
ಕಾರ್ಮಿಕರ ದಿನವನ್ನು ವಿವಿಧ ಭಾರತೀಯ ರಾಜ್ಯಗಳಲ್ಲಿ ವಿವಿಧ ಹೆಸರುಗಳಿಂದ ಆಚರಿಸಲಾಗುತ್ತದೆ. ಅತ್ಯಂತ ಜನಪ್ರಿಯ ಹೆಸರು ಮೇ ದಿನವಾಗಿದೆ.

ಕಾರ್ಮಿಕರ ದಿನವನ್ನು ಹಿಂದಿಯಲ್ಲಿ ಕಾಮ್‌ಗರ್ ದಿನ್, ಕನ್ನಡದಲ್ಲಿ ಕಾರ್ಮಿಕ ದಿನಚರಣೆ, ತೆಲುಗಿನಲ್ಲಿ ಕಾರ್ಮಿಕ ದಿನೋತ್ಸವ, ಮರಾಠಿಯಲ್ಲಿ ಕಾಮ್‌ಗರ್ ದಿವಸ್, ತಮಿಳಿನಲ್ಲಿ ಉಜೈಪಾಲರ್ ದೀನಂ, ಮಲಯಾಳಂನಲ್ಲಿ ಥೋಝಿಲಾಲಿ ದಿನಂ ಮತ್ತು ಬಂಗಾಳಿಯಲ್ಲಿ ಶ್ರೋಮಿಕ್ ದಿಬೋಶ್ ಎಂದು ಕರೆಯಲಾಗುತ್ತದೆ.

ಈ ದಿನದ ಉದ್ದೇಶ ಏನು?

ದುಡಿಯುವ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ಕಾರ್ಮಿಕರ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಇದು ನಮ್ಮ ಸಮಾಜದಲ್ಲಿ ಕಾರ್ಮಿಕ ವರ್ಗದ ಪ್ರಮುಖ ಪಾತ್ರವನ್ನು ನೆನಪಿಸುತ್ತದೆ. ಕಾರ್ಮಿಕರ ಶ್ರಮವನ್ನು ಗೌರವಿಸುವುದು ಮತ್ತು ಅವರ ಘನತೆಯನ್ನು ಎತ್ತಿ ಹಿಡಿಯುವುದು ಈ ದಿನದ ವಿಶೇಷವಾಗಿದೆ.

Continue Reading
Advertisement
Chandrayaan 3
ದೇಶ10 mins ago

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Champions Trophy 2025
ಕ್ರೀಡೆ26 mins ago

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿಪಡಿಸಿದ ಪಾಕಿಸ್ತಾನ

Karnataka Weather
ಕರ್ನಾಟಕ1 hour ago

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Lok Sabha Election
ದೇಶ1 hour ago

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Thomas Cup 2024
ಕ್ರೀಡೆ2 hours ago

Thomas Cup 2024: ಕ್ವಾರ್ಟರ್‌ ಫೈನಲ್​ಗೆ ಲಗ್ಗೆಯಿಟ್ಟ ಹಾಲಿ ಚಾಂಪಿಯನ್​ ಭಾರತ

Rameshwaram Cafe blast
ಕರ್ನಾಟಕ2 hours ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

IPL 2024
ಕ್ರೀಡೆ2 hours ago

IPL 2024: ರಿಂಕು ಸಿಂಗ್​ಗೆ ಬೌಲಿಂಗ್​ ಮಾಡಿದ ಶಾರುಖ್‌ ಪುತ್ರ ಅಬ್ರಾಮ್; ವಿಡಿಯೊ ವೈರಲ್​

Narendra Modi
ದೇಶ2 hours ago

Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

International Labor Day-2024
ಉದ್ಯೋಗ3 hours ago

Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

car crossed the divider and collided with a lorry Driver death
ತುಮಕೂರು3 hours ago

Road Accident: ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20249 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202410 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ17 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌