Raghav-Parineeti: ಮತ್ತೆ ಒಟ್ಟಿಗೆ ಕಾಣಿಸಿದ ರಾಘವ್‌, ಪರಿಣೀತಿ; ವಾರದಲ್ಲಿ 3ನೇ ಭೇಟಿ, ಸ್ನೇಹಾನಾ? ಪ್ರೀತಿನಾ? - Vistara News

ದೇಶ

Raghav-Parineeti: ಮತ್ತೆ ಒಟ್ಟಿಗೆ ಕಾಣಿಸಿದ ರಾಘವ್‌, ಪರಿಣೀತಿ; ವಾರದಲ್ಲಿ 3ನೇ ಭೇಟಿ, ಸ್ನೇಹಾನಾ? ಪ್ರೀತಿನಾ?

Raghav-Parineeti: ಆಪ್‌ ನಾಯಕ ರಾಘವ್‌ ಚಡ್ಡಾ ಹಾಗೂ ಬಾಲಿವುಡ್‌ ನಟಿ ಪರಿಣೀತಿ ಚೋಪ್ರಾ ಅವರು ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಸುದ್ದಿಯಲ್ಲಿದ್ದಾರೆ. ಇವರಿಬ್ಬರೂ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಮಾತುಗಳಿಗೆ ವಾರದಲ್ಲಿಯೇ ನಡೆದ ಮೂರನೇ ಭೇಟಿಯು ಪುಷ್ಟಿ ನೀಡಿದೆ.

VISTARANEWS.COM


on

Amid wedding rumours, AAP MP Raghav Chadha picks up Parineeti Chopra from Delhi airport
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪಂಜಾಬ್‌ ಆಪ್‌ ನಾಯಕ, ರಾಜ್ಯಸಭೆ ಸದಸ್ಯ ರಾಘವ್‌ ಚಡ್ಡಾ ಹಾಗೂ ಬಾಲಿವುಡ್‌ ನಟಿ ಪರಿಣೀತಿ ಚೋಪ್ರಾ (Raghav-Parineeti) ಅವರು ಕೆಲ ದಿನಗಳ ಹಿಂದೆ ಒಟ್ಟಿಗೆ ಕಾಣಿಸಿಕೊಂಡಿದ್ದು ಭಾರಿ ಸುದ್ದಿಯಾಗಿತ್ತು. ಇಬ್ಬರೂ ಹೋಟೆಲ್‌ನಲ್ಲಿ ಕಾಣಿಸಿಕೊಂಡ ಕಾರಣ ಇಬ್ಬರೂ ವದಂತಿಗಳಿಗೆ ಆಹಾರವಾಗಿದ್ದರು. ಈ ಕುರಿತು ರಾಘವ್‌ ಚಡ್ಡಾ ಹಾಗೂ ಪರಿಣೀತಿ ಚೋಪ್ರಾ ಅವರಿಗೆ ಪತ್ರಕರ್ತರು ಪ್ರಶ್ನೆ ಕೇಳಿದ್ದರು. ಇಬ್ಬರೂ ಪ್ರೀತಿಸುತ್ತಿದ್ದಾರೆ, ಮದುವೆಯಾಗುತ್ತಿದ್ದಾರೆ ಎಂದೇ ಹೇಳಲಾಗುತ್ತಿತ್ತು. ಆದರೆ, ಈ ಕುರಿತು ರಾಘವ್‌ ಚಡ್ಡಾ ಹಾರಿಕೆಯ ಉತ್ತರ ನೀಡಿದ್ದರು. ಈಗ ಜೋಡಿಯು ದೆಹಲಿ ವಿಮಾನ ನಿಲ್ದಾಣದಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದು, ಇದು ವಾರದಲ್ಲಿ ಮೂರನೇ ಭೇಟಿಯಾಗಿದೆ. ಹಾಗಾಗಿ, ಇಬ್ಬರೂ ಜೋಡಿ ಹಕ್ಕಿಗಳಾಗಿದ್ದಾರೆ ಎಂಬ ಮಾತಿಗೆ ಹಚ್ಚಿನ ಪುಷ್ಟಿ ಬಂದಂತಾಗಿದೆ.

ಮಾರ್ಚ್‌ 29ರಂದು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪರಿಣೀತಿ ಚೋಪ್ರಾ ಅವರನ್ನು ಪಿಕ್‌ ಮಾಡಲು ಆಮ್‌ ಆದ್ಮಿ ಪಕ್ಷದ ನಾಯಕ ರಾಘವ್‌ ಚಡ್ಡಾ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ರಾಘವ್‌ ಚಡ್ಡಾ ಕಾರಿನಲ್ಲಿಯೇ ಪರಿಣೀತಿ ಚೋಪ್ರಾ ಅವರು ವಿಮಾನ ನಿಲ್ದಾಣದಿಂದ ತೆರಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇಬ್ಬರೂ ಕಾಣಿಸಿಕೊಂಡ ಫೋಟೊಗಳು ಪಾಪರಾಜಿಗಳಿಗೆ ಸಿಕ್ಕಿದ್ದು, ಫೋಟೊಗಳು ವೈರಲ್‌ ಆಗಿವೆ. ಅಲ್ಲದೆ, ಇಬ್ಬರೂ ಪ್ರೀತಿಸುತ್ತಿದ್ದಾರೆ ಎಂಬುದಾಗಿ ಜಾಲತಾಣಗಳಲ್ಲಿ ಮತ್ತೆ ಹೇಳಲು ಆರಂಭಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿಯೇ ಮಾಧ್ಯಮದವರು ಇಬ್ಬರನ್ನೂ ಮಾತನಾಡಿಸಲು ಯತ್ನಿಸಿದರಾದರೂ, ಜೋಡಿಯು ಪ್ರತಿಕ್ರಿಯಿಸದೆ ತೆರಳಿದೆ.

ಏರ್‌ಪೋರ್ಟ್‌ನಲ್ಲಿ ಜೋಡಿ ಹಕ್ಕಿ

ಒಟ್ಟಿಗೆ ಊಟ, ಒಂದೇ ಕಾರಿನಲ್ಲಿ ತಿರುಗಾಟ

ಕಳೆದ ಒಂದು ವಾರದಲ್ಲಿ ರಾಘವ್‌ ಚಡ್ಡಾ ಹಾಗೂ ಪರಿಣೀತಿ ಚೋಪ್ರಾ ಮೂರು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಮಾರ್ಚ್‌ 22ರಂದು ರಾಘವ್‌ ಹಾಗೂ ಪರಿಣೀತಿ ಅವರು ಮುಂಬೈನ ರೆಸ್ಟೋರೆಂಟ್‌ ಒಂದರಲ್ಲಿ ಒಟ್ಟಿಗೆ ಊಟಕ್ಕೆ ತೆರಳಿದ್ದರು. ಇಬ್ಬರೂ ಒಟ್ಟಿಗೆ ಹೋಟೆಲ್‌ ಪ್ರವೇಶಿಸುವ ಹಾಗೂ ಹೋಟೆಲ್‌ನಿಂದ ಹೊರಬರುವ ವಿಡಿಯೊ ಹಾಗೂ ಫೋಟೊಗಳು ಲಭ್ಯವಾಗಿವೆ. ಇದಾದ ಮರುದಿನವೇ (ಮಾರ್ಚ್‌ 23) ಇಬ್ಬರೂ ಮತ್ತೆ ಇನ್ನೊಂದು ರೆಸ್ಟೋರೆಂಟ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಹೀಗೆ ಪದೇಪದೆ ಒಟ್ಟಿಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡೇಟಿಂಗ್‌ ಕುರಿತು ಮಾತುಗಳು ಕೇಳಿಬರುತ್ತಿವೆ.

ಹಾರಿಕೆಯ ಉತ್ತರ ನೀಡಿದ್ದ ಚಡ್ಡಾ

ಪರಿಣೀತಿ ಜತೆಗಿನ ಡೇಟಂಗ್‌ ಕುರಿತು ಇತ್ತೀಚೆಗೆ ಸುದ್ದಿಗಾರರು ಪ್ರಶ್ನೆ ಕೇಳುತ್ತಲೇ ನಾಚಿ ನೀರಾಗಿದ್ದ ರಾಘವ್‌ ಚಡ್ಡಾ, “ನನಗೆ ಪರಿಣೀತಿ ಬಗ್ಗೆ ಅಲ್ಲ, ರಾಜನೀತಿ ಬಗ್ಗೆ ಪ್ರಶ್ನೆ ಕೇಳಿ” ಎಂದು ನಕ್ಕಿದ್ದರು. ಹಾಗೆಯೇ, ನೀವು ಮದುವೆ ಆಗುವುದು ಯಾವಾಗ ಎಂದು ಕೇಳಿದ ಪ್ರಶ್ನೆಗೆ, “ನಾನು ಮದುವೆಯಾಗುವಾಗ ನಿಮಗೆ ಖಂಡಿತವಾಗಿಯೂ ತಿಳಿಸುತ್ತೇನೆ” ಎಂದು ಹೇಳುವ ಮೂಲಕ ಜಾರಿಕೊಂಡಿದ್ದರು.

ಪಂಜಾಬ್‌ ಆಪ್‌ ನಾಯಕ, ರಾಜ್ಯಸಭೆಯ ಯುವ ಸದಸ್ಯರಾಗಿರುವ ಚಡ್ಡಾ ಹಾಗೂ ಪರಿಣೀತಿ ಚೋಪ್ರಾ ಅವರು ಲಂಡನ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ನಲ್ಲಿ ಒಟ್ಟಿಗೆ ಓದಿದ್ದಾರೆ. ಹಾಗಾಗಿ, ಇಬ್ಬರಿಗೂ ಮೊದಲಿನಿಂದಲೂ ಪರಿಚಯ ಇದೆ ಎಂದು ತಿಳಿದುಬಂದಿದೆ. ಆದರೆ, ಮೂಲಗಳ ಪ್ರಕಾರ, ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಇಬ್ಬರೂ ಆತ್ಮೀಯರಾಗಿದ್ದಾರೆ. ಹಾಗಾಗಿ, ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Raghav Chadha: ಆಪ್‌ ನಾಯಕ ರಾಘವ್‌ ಚಡ್ಡಾ, ಪರಿಣೀತಿ ಚೋಪ್ರಾ ಈಗ ಜೋಡಿ ಹಕ್ಕಿ? ಜತೆಗೇ ಸುತ್ತಿ ಚಡ್ಡಾ ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Sanjiv Bhatt: ಡ್ರಗ್ಸ್‌ ಕೇಸ್;‌ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ಗೆ 20 ವರ್ಷ ಜೈಲು!

Sanjiv Bhatt: ಮಾದಕವಸ್ತು ಪ್ರಕರಣದಲ್ಲಿ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಅವರಿಗೆ ಗುಜರಾತ್‌ ನ್ಯಾಯಾಲಯವೊಂದು 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಷ್ಟಕ್ಕೂ ಏನಿದು ಪ್ರಕರಣ?

VISTARANEWS.COM


on

Sanjiv Bhatt
Koo

ಗಾಂಧಿನಗರ: ನಕಲಿ ಮಾದಕವಸ್ತು ಪ್ರಕರಣ ದಾಖಲಿಸಿ, ವಕೀಲರೊಬ್ಬರ ವಿರುದ್ಧ ಪಿತೂರಿ ನಡೆಸಿದ ಆರೋಪದಲ್ಲಿ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ (Sanjiv Bhatt) ಅವರಿಗೆ ಗುಜರಾತ್‌ (Gujarat) ನ್ಯಾಯಾಲಯವೊಂದು 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. 1996ರ ನಕಲಿ ಡ್ರಗ್ಸ್‌ ಕೇಸ್‌ಗೆ ಸಂಬಂಧಿಸಿದಂತೆ ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಪಾಲನ್‌ಪುರದಲ್ಲಿರುವ ನ್ಯಾಯಾಲಯವು (Palanpur Court) ಮಾಜಿ ಐಪಿಎಸ್‌ ಅಧಿಕಾರಿಗೆ ಜೈಲು ಶಿಕ್ಷೆ ವಿಧಿಸಿದೆ. ಹಾಗೆಯೇ, 2 ಲಕ್ಷ ರೂ. ದಂಡ ವಿಧಿಸಿದ್ದು, ದಂಡ ಪಾವತಿಸಲು ಆಗದಿದ್ದರೆ ಒಂದು ವರ್ಷ ಹೆಚ್ಚುವರಿಯಾಗಿ ಜೈಲಿನಲ್ಲಿರಬೇಕು ಎಂದು ಸೂಚಿಸಿದೆ.

ಏನಿದು ಡ್ರಗ್ಸ್‌ ಕೇಸ್?‌

1996ರಲ್ಲಿ ರಾಜಸ್ಥಾನ ಮೂಲದ ವಕೀಲರೊಬ್ಬರು ಪಾಲನ್‌ಪುರ ಹೋಟೆಲ್‌ನಲ್ಲಿ ತಂಗಿದ್ದರು. ಅವರು ತಂಗಿರುವ ಹೋಟೆಲ್‌ ಕೋಣೆಯಲ್ಲಿ ಪೊಲೀಸರು ಡ್ರಗ್ಸ್‌ ವಶಪಡಿಸಿಕೊಂಡಿದ್ದರು. ಆದರೆ, ಇಡೀ ಪ್ರಕರಣವೇ ಸುಳ್ಳು ಎಂಬುದು ಬಳಿಕ ಸಾಬೀತಾಗಿದೆ. ಸಂಜೀವ್‌ ಭಟ್‌ ಅವರು ಆಗ ಬನಸ್ಕಾಂತದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದರು. ಈಗ ನ್ಯಾಯಾಲಯವು ನಕಲಿ ಮಾದಕವಸ್ತು ಪ್ರಕರಣದ ಪಿತೂರಿ ನಡೆಸಿದ ಹಿನ್ನೆಲೆಯಲ್ಲಿ ಸಂಜೀವ್‌ ಭಟ್‌ ಅವರಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.

2018ರಿಂದಲೂ ಜೈಲಿನಲ್ಲಿರುವ ಭಟ್‌

ಸಂಜೀವ್‌ ಭಟ್‌ ಅವರು ವಿವಾದಾತ್ಮಕ ಐಪಿಎಸ್‌ ಅಧಿಕಾರಿಯಾಗಿದ್ದು, ಇವರು ಮತ್ತೊಂದು ಪ್ರಕರಣದಲ್ಲಿ 2018ರಿಂದಲೂ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಜಾಮ್‌ನಗರದಲ್ಲಿ ಕಸ್ಟಡಿಯಲ್ಲಿರುವಾಗಲೇ ಆರೋಪಿಯೊಬ್ಬ ಮೃತಪಟ್ಟ ಪ್ರಕರಣದಲ್ಲಿ ನ್ಯಾಯಾಲಯವು ಸಂಜೀವ್‌ ಭಟ್‌ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇಂತಹ ಪ್ರಕರಣಗಳಿರುವ ಕಾರಣಗಳಿಂದಾಗಿಯೇ ಸಂಜೀವ್‌ ಭಟ್‌ ಅವರನ್ನು 2015ರಲ್ಲಿಯೇ ಕೆಲಸದಿಂದ ವಜಾಗೊಳಿಸಲಾಗಿದೆ.

ಇದನ್ನೂ ಓದಿ: Muhammad Yunus: ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞಗೆ ಜೈಲು ಶಿಕ್ಷೆ! ಕಾರ್ಮಿಕ ಕಾನೂನು ಉಲ್ಲಂಘನೆ ಆರೋಪ

ಪಾಲನ್‌ಪುರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಜೆ.ಎನ್‌.ಠಕ್ಕರ್‌ ಅವರು ಸಂಜೀವ್‌ ಭಟ್‌ ಅವರಿಗೆ ಶಿಕ್ಷೆ ವಿಧಿಸುವಾಗ ವಿಶೇಷ ಸೂಚನೆ ನೀಡಿದ್ದಾರೆ. ಸಂಜೀವ್‌ ಭಟ್‌ ಅವರು 20 ವರ್ಷ ಜೈಲು ಶಿಕ್ಷೆ ವಿಧಿಸಬೇಕು. ಈಗ ಸಂಜೀವ್‌ ಭಟ್‌ ಅವರು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದು, ಇದು ಮುಗಿದ ಬಳಿಕವೇ ಅವರಿಗೆ 20 ವರ್ಷ ಜೈಲು ಶಿಕ್ಷೆ ಆರಂಭವಾಗುತ್ತದೆ ಎಂದು ಸೂಚಿಸಿದ್ದಾರೆ. ಈಗ ಸಂಜೀವ್‌ ಭಟ್‌ ಅವರಿಗೆ 60 ವರ್ಷ ವಯಸ್ಸು. ಇವರ ವಿರುದ್ಧ ಎನ್‌ಡಿಪಿಎಸ್‌, ಐಪಿಸಿಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Narendra Modi: ಮೋದಿ ಜತೆ ಚಾಟ್; ಭಾರತದ ಡಿಜಿಟಲ್ ಕ್ರಾಂತಿಗೆ ಬಿಲ್ ಗೇಟ್ಸ್ ಶ್ಲಾಘನೆ

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ಮೈಕ್ರೋಸಾಫ್ಟ್‌ ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಅವರ ಮಾತುಕತೆಯ ಮುಖ್ಯಾಂಶಗಳು ಇಲ್ಲಿವೆ.

VISTARANEWS.COM


on

Narendra Modi And Bill Gates
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಸಿದ್ಧತೆ, ಪ್ರಚಾರದ ಭರಾಟೆಯ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೈಕ್ರೋಸಾಫ್ಟ್‌ ಸಂಸ್ಥಾಪಕ ಬಿಲ್‌ ಗೇಟ್ಸ್‌ (Bill Gates) ಅವರೊಂದಿಗೆ ಮಾತುಕತೆ ನಡೆಸಿದರು. ದೆಹಲಿಯಲ್ಲಿರುವ ಪ್ರಧಾನಿ ನಿವಾಸದಲ್ಲಿ ಇಬ್ಬರೂ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದು, ಭಾರತದ ಅಭಿವೃದ್ಧಿ, ಕೃತಕ ಬುದ್ಧಿಮತ್ತೆಯ ಬಳಕೆ, ತಂತ್ರಜ್ಞಾನದ ಬಳಕೆ ಸೇರಿ ಹಲವು ವಿಷಯಗಳ ಕುರಿತು ಮಾತನಾಡಿದರು. ಇದೇ ವೇಳೆ, ಬಿಲ್‌ ಗೇಟ್ಸ್‌ ಅವರು ಭಾರತದ ಡಿಜಿಟಲ್‌ ತಂತ್ರಜ್ಞಾನದ ಅಳವಡಿಕೆ, ಜಾರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಎಐ ಬಳಕೆಯ ಮಹತ್ವ ವಿವರಿಸಿದ ಮೋದಿ

ಭಾರತದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆ, ಪ್ರಾಮುಖ್ಯತೆ ಕುರಿತು ನರೇಂದ್ರ ಮೋದಿ ಅವರು ಬಿಲ್‌ ಗೇಟ್ಸ್‌ ಅವರಿಗೆ ವಿವರಿಸಿದರು. “ಭಾರತದಲ್ಲಿ ಜನಿಸುವ ಮಕ್ಕಳೀಗ ಆಯ್‌ (Aai) ಎಂದು ಹೇಳುವ ಜತೆಗೆ ಎಐ (AI) ಎಂದು ಕೂಡ ಹೇಳುತ್ತವೆ. ಇನ್ನು ಜಿ-20 ಶೃಂಗಸಭೆಯಲ್ಲಿ ಭಾಷಾಂತರಕ್ಕಾಗಿ ನಾವು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿದೆವು. ಇದರಿಂದ ಉತ್ತಮ ಸಂವಹನ ಸಾಧ್ಯವಾಯಿತು” ಎಂದು ತಿಳಿಸಿದರು.

ಭಾರತದ ಡಿಜಿಟಲ್‌ ಕ್ರಾಂತಿಗೆ ಬಿಲ್‌ ಗೇಟ್ಸ್‌ ಶ್ಲಾಘನೆ

ಭಾರತದಲ್ಲಿ ಡಿಜಿಟಲ್‌ ಮೂಲ ಸೌಕರ್ಯಗಳ ಹೆಚ್ಚಳದಿಂದ ಉಂಟಾಗಿರುವ ಡಿಜಿಟಲ್‌ ಕ್ರಾಂತಿಯ ಕುರಿತು ಬಿಲ್‌ ಗೇಟ್ಸ್‌ ಶ್ಲಾಘನೆ ವ್ಯಕ್ತಪಡಿಸಿದರು. “ಭಾರತವು ಡಿಜಿಟಲ್‌ ಮೂಲ ಸೌಕರ್ಯಗಳನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದೆ. ಮಹಿಳೆಯರು ಕೂಡ ಆನ್‌ಲೈನ್‌ ಪಾವತಿ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದಾರೆ. ತಂತ್ರಜ್ಞಾನದ ಅಳವಡಿಕೆಯಲ್ಲಿ ಭಾರತವು ಮುಂದಿದೆ” ಎಂದು ಹೇಳಿದರು. ಹಾಗೆಯೇ, ಕೃತಕ ಬುದ್ಧಿಮತ್ತೆಯಿಂದ ಎದುರಾಗುವ ಸವಾಲುಗಳ ಕುರಿತು ಕೂಡ ಬಿಲ್‌ ಗೇಟ್ಸ್‌ ಪ್ರಸ್ತಾಪಿಸಿದರು.

ನನಗೆ ತಂತ್ರಜ್ಞಾನದ ಗೀಳು ಎಂದ ಮೋದಿ

ಬಿಲ್‌ ಗೇಟ್ಸ್‌ ಜತೆಗಿನ ಮಾತುಕತೆ ವೇಳೆ ನರೇಂದ್ರ ಮೋದಿ ಅವರು ತಂತ್ರಜ್ಞಾನದ ಬಳಕೆ ಕುರಿತು ಮಾತನಾಡಿದರು. “ನನಗೆ ತಂತ್ರಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಇದೆ. ಗ್ಯಾಜೆಟ್‌ಗಳು ಸೇರಿ ಹಲವು ಡಿವೈಸ್‌ಗಳನ್ನು ಬಳಸುವುದು ನನಗೆ ರೂಢಿಯಾಗಿದೆ. ನಾನು ಅಮೆರಿಕಕ್ಕೆ ಹೋದಾಗ ಮಾಲ್‌ಗಳಿಗೆ ಹೋಗಿ ಗ್ಯಾಜೆಟ್‌ಗಳನ್ನು ಖರೀದಿಸುತ್ತಿದ್ದೆ. ಭಾರತದಲ್ಲೂ ಈ ತಂತ್ರಜ್ಞಾನ ಬರಬೇಕು ಎಂದು ಬಯಸುತ್ತಿದ್ದೆ. ಈಗ ಅದು ಸಾಕಾರವಾಗುತ್ತಿದೆ. ಹಾಗಂತ, ನಾನು ತಂತ್ರಜ್ಞಾನದ ಗುಲಾಮನಲ್ಲ. ಬಹೋಪಯೋಗಿ ಕಾರಣಗಳಿಗಾಗಿ ಟೆಕ್ನಾಲಜಿಯನ್ನು ಬಳಸುತ್ತೇನೆ” ಎಂದು ತಿಳಿಸಿದರು.

ಇದನ್ನೂ ಓದಿ: ಮೋದಿ ಅವರ ಡೀಸೆಲ್ ಚಾಲಿತ ವಿಶೇಷ ವಾಹನಗಳ ನೋಂದಣಿ ವಿಸ್ತರಣೆ ತಿರಸ್ಕರಿಸಿದ ಎನ್‌ಜಿಟಿ; ಕಾರಣವೇನು?

ಮೋದಿ ಪ್ರಸ್ತಾಪಿಸಿದ ಪ್ರಮುಖ ವಿಷಯಗಳು

ಬಿಲ್‌ ಗೇಟ್ಸ್‌ ಜತೆಗಿನ ಮಾತುಕತೆ ವೇಳೆ ನರೇಂದ್ರ ಮೋದಿ ಅವರು ಹತ್ತಾರು ವಿಷಯಗಳನ್ನು ಪ್ರಸ್ತಾಪಿಸಿದರು. ಭಾರತದಲ್ಲಿ ಮೂಲ ಸೌಕರ್ಯಗಳ ಹೆಚ್ಚಳ, ಕೃತಕ ಬುದ್ಧಿಮತ್ತೆ ಆಧಾರಿತ ಚಾಟ್‌ಜಿಪಿಟಿ ಬಳಕೆ, ಡಿಜಿಟಲ್‌ ಇಂಡಿಯಾ ಕಲ್ಪನೆಯ ಜಾರಿ, ಲಕ್‌ಪತಿ ದೀದಿ ಯೋಜನೆಯ ಯಶಸ್ಸು, ಡೀಪ್‌ಫೇಕ್‌ ತಂತ್ರಜ್ಞಾನದ ದುರ್ಬಳಕೆ, ಆಯುಷ್ಮಾನ್‌ ಭಾರತ್‌ ಯೋಜನೆ, ಪರಿಶ್ರಮ, ಹವ್ಯಾಸಗಳು ಸೇರಿ ಹಲವು ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

ಮುಖ್ತಾರ್‌ ಅನ್ಸಾರಿ ನಿಧನ; ಸ್ವಾತಂತ್ರ್ಯ ಹೋರಾಟಗಾರನ ಮೊಮ್ಮಗ ಗ್ಯಾಂಗ್‌ಸ್ಟರ್‌ ಆಗಿದ್ದು ಹೇಗೆ?

ಉತ್ತರ ಪ್ರದೇಶದ ಖ್ಯಾತ ಗ್ಯಾಂಗ್‌ಸ್ಟರ್‌ ಮುಖ್ತಾರ್‌ ಅನ್ಸಾರಿಯು ಜೈಲಿನಲ್ಲೇ ಮೃತಪಟ್ಟಿದ್ದಾನೆ. ಉತ್ತರ ಪ್ರದೇಶದ ತುಂಬ ಕ್ರಿಮಿನಲ್‌ ಚಟುವಟಿಕೆ ನಡೆಸಿದ್ದ ಈತನ ಅಜ್ಜ ಸ್ವಾತಂತ್ರ್ಯ ಹೋರಾಟಗಾರ ಎಂಬುದು ರೋಚಕ ಸಂಗತಿಯಾಗಿದೆ.

VISTARANEWS.COM


on

gangster mukhtar ansari
Koo

ನವದೆಹಲಿ: ಕ್ರಿಮಿನಲ್ ಪ್ರಕರಣಗಳಲ್ಲಿ ಜೈಲು ಸೇರಿದ್ದ ಗ್ಯಾಂಗ್​ಸ್ಟರ್​ (Gangster) ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ (Mukhtar Ansari) ಗುರುವಾರ (ಮಾರ್ಚ್‌ 28) ಹೃದಯಾಘಾತದಿಂದ (Cardiac Arrest) ನಿಧನ ಹೊಂದಿದ್ದಾನೆ. ಉತ್ತರ ಪ್ರದೇಶದ ಬಾಂಡಾ ಜೈಲಿನಲ್ಲಿದ್ದ ಅನ್ಸಾರಿಗೆ ಹೃದಯಾಘಾತವಾಗಿ ಬ್ಯಾರಕ್‌ನಲ್ಲಿ ಬಿದ್ದಿದ್ದ ಎಂದು ಮೂಲಗಳು ತಿಳಿಸಿವೆ. ಆತನನ್ನು ಅಲ್ಲಿಂದ ಬಾಂಡಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಾಗ್ಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇನ್ನು, ಮುಖ್ತಾರಿ ಅನ್ಸಾರಿಯ ಕುಟುಂಬವು ಸ್ವಾತಂತ್ರ್ಯ ಹೋರಾಟದ ಹಿನ್ನೆಲೆ ಹೊಂದಿದ್ದು, ಇಂತಹ ಹಿನ್ನೆಲೆಯುಳ್ಳವನು ಗ್ಯಾಂಗ್‌ಸ್ಟರ್‌ ಹೇಗಾದ ಎಂಬುದೇ ರೋಚಕವಾಗಿದೆ.

ಅನ್ಸಾರಿ ಅಜ್ಜ ಸ್ವಾತಂತ್ರ್ಯ ಹೋರಾಟಗಾರ

ಉತ್ತರ ಪ್ರದೇಶದ ಯೂಸುಫ್‌ಪುರದಲ್ಲಿ 1960ರಲ್ಲಿ ಜನಿಸಿದ ಮುಖ್ತಾರ್‌ ಅನ್ಸಾರಿಯ ಅಜ್ಜ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಇವರ ಅಜ್ಜ ಮುಖ್ತಾರ್‌ ಅಹ್ಮದ್‌ ಅನ್ಸಾರಿ ಅವರು ದೇಶದ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ ನಾಯಕರಾಗಿದ್ದ ಇವರು 1927ರವರೆಗೆ ಅದರ ಅಧ್ಯಕ್ಷರೂ ಆಗಿದ್ದರು. ಮುಸ್ಲಿಂ ಲೀಗ್‌ ಜತೆ ಗುರುತಿಸಿಕೊಂಡಿದ್ದ ಮುಖ್ತಾರ್‌ ಅಹ್ಮದ್‌ ಅನ್ಸಾರಿ ಅವರು ಪ್ರತ್ಯೇಕವಾದದ ಅಜೆಂಡಾ ಅರಿತು ಅಂತರ ಕಾಯ್ದುಕೊಂಡಿದ್ದರು. ಅಲ್ಲದೆ, ಇವರು ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾದ ಚಾನ್ಸಲರ್‌ ಕೂಡ ಆಗಿದ್ದರು.

Mukhtar Ansari

ಮುಖ್ತಾರ್‌ ಅನ್ಸಾರಿಯ ತಾಯಿಯ ತಂದೆ (ಅಜ್ಜ) ಮೊಹಮ್ಮದ್‌ ಉಸ್ಮಾನ್‌ ಅವರು ಭಾರತೀಯ ಸೇನೆಯಲ್ಲಿ ಬ್ರಿಗೇಡಿಯರ್‌ ಆಗಿದ್ದರು. ಇವರು ಪಾಕಿಸ್ತಾನದ ಜತೆಗಿನ ಯುದ್ಧದಲ್ಲಿ ಹುತಾತ್ಮರಾಗಿದ್ದರು. ಇವರಿಗೆ ಮರಣೋತ್ತರವಾಗಿ ಪರಮವೀರ ಚಕ್ರ ಪ್ರಶಸ್ತಿ ಘೋಷಿಸಲಾಗಿದೆ.

ಇಂತಹ ಕುಟುಂಬದಲ್ಲಿ ಜನಿಸಿದ ಮುಖ್ತಾರ್‌ ಅನ್ಸಾರಿ, 1980ರ ದಶಕದಲ್ಲಿ ಗ್ಯಾಂಗ್‌ಸ್ಟರ್‌ ಆಗಿ ಬದಲಾದ. ಈತ ಸರ್ಕಾರದ ಗುತ್ತಿಗೆ ಪಡೆಯುವ ಭರದಲ್ಲಿ ಗೂಂಡಾಗಿರಿ ಆರಂಭಿಸಿದ. ಕೊಲೆ, ದರೋಡೆ, ಸುಲಿಗೆ, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹದಿಂದ ಉತ್ತರ ಪ್ರದೇಶದಾದ್ಯಂತ ಸುದ್ದಿಯಾದ. ಹಣ, ದರ್ಪದ ಮದವೇರಿದ್ದ ಈತ ರಾಜಕೀಯವನ್ನೂ ಸೇರಿದ.

ಇದನ್ನೂ ಓದಿ: Mukhtar Ansari : ಗ್ಯಾಂಗ್​ಸ್ಟರ್​ ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ

ಮೌ ಸದರ್ ಕ್ಷೇತ್ರದಿಂದ ಐದು ಬಾರಿ ಶಾಸಕನಾಗಿದ್ದ ಮುಖ್ತಾರ್ ಅನ್ಸಾರಿ 2005ರಿಂದ ಉತ್ತರ ಪ್ರದೇಶ ಮತ್ತು ಪಂಜಾಬ್ ಜೈಲಿನಲ್ಲಿದ್ದ. ಆತನ ವಿರುದ್ಧ 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಸೆಪ್ಟೆಂಬರ್ 2022 ರಿಂದ ಉತ್ತರ ಪ್ರದೇಶದ ವಿವಿಧ ನ್ಯಾಯಾಲಯಗಳು ಎಂಟು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿದ್ದು, ಅವರನ್ನು ಬಾಂಡಾ ಜೈಲಿನಲ್ಲಿರಿಸಲಾಗಿತ್ತು. ಕಳೆದ ವರ್ಷ ಉತ್ತರ ಪ್ರದೇಶ ಪೊಲೀಸರು ಬಿಡುಗಡೆ ಮಾಡಿದ 66 ದರೋಡೆಕೋರರ ಪಟ್ಟಿಯಲ್ಲಿ ಅನ್ಸಾರಿ ಹೆಸರು ಇತ್ತು. ಮುಖ್ತಾರ್ ಅನ್ಸಾರಿಯನ್ನು ನಕಲಿ ಎನ್​ಕೌಂಟರ್ ಮೂಲಕ ಕೊಲ್ಲಬಹುದು ಎಂದು ಅವರ ಕುಟುಂಬ ಸದಸ್ಯರು ಈ ಹಿಂದೆ ಆತಂಕ ವ್ಯಕ್ತಪಡಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Arvind Kejriwal: ಕೇಜ್ರಿವಾಲ್‌ ವಿರುದ್ಧ ಹೊಸ ಆರೋಪ; ಏನಿದು ಲೈಂಗಿಕ ಕಿರುಕುಳ ಕೇಸ್?

Arvind Kejriwal: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಅವರು ಹೊಸ ಆರೋಪ ಮಾಡಿದ್ದಾರೆ. ಇದು ಕೂಡ ಈಗ ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

Aravind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಜಾರಿ ನಿರ್ದೇಶನಾಲಯದ (ED) ಕಸ್ಟಡಿಯಲ್ಲಿದ್ದಾರೆ. ಇದರ ಬೆನ್ನಲ್ಲೇ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಹೊಸ ಸಂಕಷ್ಟ ಎದುರಾಗಿದೆ. “ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲರೊಬ್ಬರ ವರ್ಗಾವಣೆ ಫೈಲ್‌ ಒಂದನ್ನು ಕಳೆದ 45 ದಿನಗಳಿಂದ ಅರವಿಂದ್‌ ಕೇಜ್ರಿವಾಲ್‌ ಅವರು ಪೆಂಡಿಂಗ್‌ನಲ್ಲಿ ಇಟ್ಟಿದ್ದಾರೆ” ಎಂದು ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ (VK Saxena) ಆರೋಪಿಸಿದ್ದಾರೆ.

“ದೆಹಲಿಯ ಬಾಬಾ ಸಾಹೇಬ್‌ ಅಂಬೇಡ್ಕರ್‌ ಮೆಡಿಕಲ್ ಕಾಲೇಜಿನಲ್ಲಿ ಪ್ರಾಂಶುಪಾಲರ ವಿರುದ್ಧವೇ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ದೆಹಲಿ ಆರೋಗ್ಯ ಸಚಿವ ಸೌರಭ್‌ ಭಾರದ್ವಾಜ್‌ ಅವರೇ ಕ್ರಮಕ್ಕೆ ಆಗ್ರಹಿಸಿದ್ದಾರೆ. ಹೀಗಿದ್ದರೂ, ಪ್ರಾಂಶುಪಾಲರ ವರ್ಗಾವಣೆಯ ದಾಖಲೆಯನ್ನು ಕಳೆದ 45 ದಿನಗಳಿಂದಲೂ ವಿಲೇವಾರಿ ಮಾಡಿಲ್ಲ. ಲೈಂಗಿಕ ಕಿರುಕುಳ ಪ್ರಕರಣದ ಕುರಿತು ಸೌರಭ್‌ ಭಾರದ್ವಾಜ್‌ ಅವರೇ ಆಕ್ರೋಶ ವ್ಯಕ್ತಪಡಿಸಿದರೂ, ಸರ್ಕಾರವು ವರ್ಗಾವಣೆಗೆ ಮೀನ ಮೇಷ ಎಣಿಸುತ್ತಿದೆ” ಎಂದು ವಿ.ಕೆ. ಸಕ್ಸೇನಾ ಆರೋಪಿಸಿದ್ದಾರೆ.

ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ

ಪ್ರಾಂಶುಪಾಲ ಈಶ್ವರ್‌ ಸಿಂಗ್‌ ಅವರನ್ನು ಕೂಡಲೇ ಹುದ್ದೆಯಿಂದ ಅಮಾನತುಗೊಳಿಸಬೇಕು ಎಂದು ಸೌರಭ್‌ ಭಾರದ್ವಾಜ್‌ ಅವರು 2024ರ ಮಾರ್ಚ್‌ 20ರಂದು ಆಗ್ರಹಿಸಿದ್ದರು. ಆದರೆ, ಇದುವರೆಗೆ ಪ್ರಾಂಶುಪಾಲರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಪ್ರಕರಣದ ಹಿಂದೆ ಆಮ್‌ ಆದ್ಮಿ ಪಕ್ಷದ ಕುಮ್ಕಕ್ಕು ಇರುವುದನ್ನು ಅಲ್ಲಗಳೆಯುವಂತಿಲ್ಲ ಎಂದು ವಿ.ಕೆ.ಸಕ್ಸೇನಾ ಆರೋಪಿಸಿದ್ದಾರೆ. ಇದು ಈಗ ಹೊಸ ಚರ್ಚೆಗೆ ಕಾರಣವಾಗಿದೆ. ಇದಕ್ಕೂ ಮೊದಲು ಕೂಡ ವಿ.ಕೆ.ಸಕ್ಸೇನಾ ಹಾಗೂ ದೆಹಲಿ ಸರ್ಕಾರದ ಮಧ್ಯೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಜಟಾಪಟಿ ನಡೆದಿವೆ.

ಇದನ್ನೂ ಓದಿ: Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ತಪ್ಪದ ಸಂಕಷ್ಟ; ಇನ್ನೂ 4 ದಿನ ಜೈಲೇ ಗತಿ!

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮಾರ್ಚ್‌ 21ರಂದು ಅರವಿಂದ್‌ ಕೇಜ್ರಿವಾಲ್‌ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದರು. ಇದಾದ ಬಳಿಕ ಮಾರ್ಚ್‌ 28ರವರೆಗೆ ನ್ಯಾಯಾಲಯವು ಅವರನ್ನು ಇ.ಡಿ ಕಸ್ಟಡಿಗೆ ನೀಡಿತ್ತು. ಇದಾದ ಬಳಿಕ ಮತ್ತೆ ನ್ಯಾಯಾಲಯವು ಅವರನ್ನು ಏಪ್ರಿಲ್‌ 1ರವರೆಗೆ ಇ.ಡಿ ಕಸ್ಟಡಿಗೆ ನೀಡಿದೆ. ಇನ್ನು, ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನ ಖಂಡಿಸಿ ಆಪ್‌ ಮುಖಂಡರು ಹಾಗೂ ಕಾರ್ಯಕರ್ತರ ಪ್ರತಿಭಟನೆ ಮುಂದುವರಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karimani Malika Ninalla play by violinist Aneesh Vidyashankar
ವೈರಲ್ ನ್ಯೂಸ್42 seconds ago

Karimani Malika Ninalla: ʻಕರಿಮಣಿ ಮಾಲೀಕʼ ರೀಲ್ಸ್‌ಗೆ ಇನ್ನಷ್ಟು ಮೆರುಗು ನೀಡಿದ ವಯೋಲಿನ್‌ ವಾದಕ!

Karnataka Weather
ಮಳೆ11 mins ago

Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

Sanjiv Bhatt
ದೇಶ14 mins ago

Sanjiv Bhatt: ಡ್ರಗ್ಸ್‌ ಕೇಸ್;‌ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ಗೆ 20 ವರ್ಷ ಜೈಲು!

Kaptaan KL is keeping
ಕ್ರೀಡೆ15 mins ago

LSG vs PBKS: ಗೆಲುವಿನ ಖಾತೆ ತೆರೆದೀತೇ ಕೆ.ಎಲ್​ ರಾಹುಲ್​ ಸಾರಥ್ಯದ ಲಕ್ನೋ ತಂಡ?

Lok Sabha Election 2024 Yathindra Siddaramaiah calls Amit Shah a goonda BJP says No maturity
Lok Sabha Election 202415 mins ago

Lok Sabha Election 2024: ಅಮಿತ್‌ ಗೂಂಡಾ ಎಂದ ಯತೀಂದ್ರ ಸಿದ್ದರಾಮಯ್ಯ; ಮೆಚ್ಯುರಿಟಿ, ಬುದ್ಧಿ ಇಲ್ಲವೆಂದ ಬಿಜೆಪಿ

Aadujeevitham box office
ಮಾಲಿವುಡ್38 mins ago

Aadujeevitham Box Office: ಮೊದಲ ದಿನವೇ ಒಳ್ಳೆಯ ಗಳಿಕೆ ಕಂಡ ‘ʻಆಡು ಜೀವಿತಂ’!

gold rate today
ಚಿನ್ನದ ದರ48 mins ago

Gold Rate Today: ಆಕಾಶಕ್ಕೇ ಏರಿದ ಚಿನ್ನದ ಬೆಲೆ! ಇಂದಿನ ಧಾರಣೆ ಹೀಗಿದೆ ನೋಡಿ

Attempt to murder case
ಬೆಂಗಳೂರು58 mins ago

Attempt To Murder : ಹಣದಾಸೆಗೆ ಚಿಕ್ಕಮ್ಮನ ಕೊಲ್ಲಲು ಮುಂದಾದ ಮಗಳು ಮತ್ತು ಅಳಿಯ

Alia Bhatt hosts Hope Gala
ಬಾಲಿವುಡ್1 hour ago

Alia Bhatt: ಲಂಡನ್‌ನಲ್ಲಿ `ಹೋಪ್ ಗಾಲಾ’ ಹೋಸ್ಟ್‌ ಮಾಡಿದ ಆಲಿಯಾ; ಏನಿದರ ಉದ್ದೇಶ?

RCB
ಕ್ರೀಡೆ1 hour ago

RCB vs KKR: ಕೆಕೆಆರ್​ ಸವಾಲು ಸುಲಭದ್ದಲ್ಲ; ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ದಾಖಲೆ ಹೇಗಿದೆ?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202423 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌