Amit Shah: ವೋಟ್ ಬ್ಯಾಂಕ್ ಕಾರಣಕ್ಕಾಗಿ ಕಾಂಗ್ರೆಸ್‌ ಸಿಎಎಯನ್ನು ವಿರೋಧಿಸುತ್ತಿದೆ; ಅಮಿತ್‌ ಶಾ ವಾಗ್ದಾಳಿ - Vistara News

ದೇಶ

Amit Shah: ವೋಟ್ ಬ್ಯಾಂಕ್ ಕಾರಣಕ್ಕಾಗಿ ಕಾಂಗ್ರೆಸ್‌ ಸಿಎಎಯನ್ನು ವಿರೋಧಿಸುತ್ತಿದೆ; ಅಮಿತ್‌ ಶಾ ವಾಗ್ದಾಳಿ

Amit Shah: ಕೇಂದ್ರ ಸರ್ಕಾರ ಘೋಷಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನವನ್ನು ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ಕಾರಣಕ್ಕಾಗಿ ವಿರೋಧಿಸುತ್ತಿದೆ ಎಂದು  ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆರೋಪಿಸಿದ್ದಾರೆ.

VISTARANEWS.COM


on

Amit Shah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೇಂದ್ರ ಸರ್ಕಾರ (Central Government) ಸೋಮವಾರ ಘೋಷಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ (CAA) ಅನುಷ್ಠಾನವನ್ನು ವಿರೋಧಿಸುತ್ತಿರುವ ಕಾಂಗ್ರೆಸ್‌ ವಿರುದ್ಧ ಕೇಂದ್ರ ಗೃಹ ಸಚಿವ (Union home minister) ಅಮಿತ್‌ ಶಾ (Amit Shah) ಕಿಡಿ ಕಾರಿದ್ದಾರೆ. ಸಿಎಎ ಕಾಯ್ದೆ ವಿರುದ್ಧದ ಕಾಂಗ್ರೆಸ್‌ನ ನಿಲುವು ʼತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯʼದಿಂದ ಹುಟ್ಟಿಕೊಂಡಿವೆ ಎಂದು ಅವರು ಆರೋಪಿಸಿದ್ದಾರೆ.

“ನಾವು ಸಿಎಎ ಜಾರಿಗೆ ತರುತ್ತೇವೆ ಎಂದಾಗಲೇ ಕಾಂಗ್ರೆಸ್ ಇದನ್ನು ವಿರೋಧಿಸಿದೆ. ಸ್ವಾತಂತ್ರ್ಯದ ನಂತರ ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿ ಧಾರ್ಮಿಕತೆಯ ಆಧಾರದ ಮೇಲೆ ಕಿರುಕುಳಕ್ಕೊಳಗಾದವರಿಗೆ ಭಾರತದ ಪೌರತ್ವ ನೀಡಲಾಗುವುದು ಎಂದು ಕಾಂಗ್ರೆಸ್ ಮತ್ತು ನಮ್ಮ ಸಂವಿಧಾನದ ನಿರ್ಮಾತೃಗಳು ಭರವಸೆ ನೀಡಿದ್ದರು. ಆದರೆ ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯದಿಂದಾಗಿ ಕಾಂಗ್ರೆಸ್ ಸಿಎಎಯನ್ನು ವಿರೋಧಿಸಿದೆ” ಎಂದು ಅವರು ಹೈದರಾಬಾದ್‌ನ ಸಿಕಂದರಾಬಾದ್‌ನಲ್ಲಿ ನಡೆದ ಸಭೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಮೋದಿಯನ್ನು ಹೊಗಳಿದ ಅಮಿತ್‌ ಶಾ

ಈ ವೇಳೆ ಗೃಹ ಸಚಿವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ʼʼಸಿಎಎ ಮೂಲಕ ಪ್ರಧಾನಿ ಮೋದಿ ಅವರು ಹಿಂದೂ, ಸಿಖ್, ಬೌದ್ಧ ಮತ್ತು ಜೈನ ನಿರಾಶ್ರಿತರಿಗೆ ಆಶ್ರಯ ಒದಗಿಸುವ ಭರವಸೆ ನೀಡಿದ್ದಾರೆ. ತಮ್ಮ ನಂಬಿಕೆ ಮತ್ತು ಗೌರವವನ್ನು ಉಳಿಸಿಕೊಳ್ಳಲು ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಲಕ್ಷಾಂತರ ಮಂದಿ ಭಾರತಕ್ಕೆ ಬಂದಿದ್ದಾರೆ. ಆದರೆ ಕಾಂಗ್ರೆಸ್‌ ಅವರಿಗೆ ಪೌರತ್ವ ನೀಡಲಿಲ್ಲ” ಎಂದು ಅವರು ಹೇಳಿದ್ದಾರೆ.

ವಿಪಕ್ಷಗಳಿಂದ ವಿರೋಧ

ಸಿಎಎ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಸೋಮವಾರ ಪ್ರಕಟಿಸಿದೆ. ಈ ಕ್ರಮದ ವಿರುದ್ಧ ಕಾಂಗ್ರೆಸ್ ಧ್ವನಿ ಎತ್ತಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, “ಸಿಎಎ ನಿಯಮಗಳನ್ನು ಚುನಾವಣೆ ಸಮಯದಲ್ಲಿಯೇ ಘೋಷಿಸಲಾಗಿದೆ. ಇದು ಪ್ರಧಾನಿ ಮಂತ್ರಿಯ ಕಪಟ ಸುಳ್ಳುಗಳ ಮತ್ತೊಂದು ಪ್ರದರ್ಶನ” ಎಂದು ದೂರಿದ್ದಾರೆ.

ಪ್ರತಿಭಟನೆ

ಅಸ್ಸಾಂ ವಿಧಾನಸಭೆಯ ವಿಪಕ್ಷ ನಾಯಕ ದೇಬಬ್ರತಾ ಸೈಕಿಯಾ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಗುವಾಹಟಿಯ ರಾಜ್ಯ ಪ್ರಧಾನ ಕಚೇರಿಯ ಮುಂದೆ ಸಿಎಎ ಅನುಷ್ಠಾನದ ವಿರುದ್ಧ ಪ್ರತಿಭಟನೆ ನಡೆಸಿದರು. ಕೆಲವರು ಅಧಿಸೂಚನೆಯ ಪ್ರತಿಗಳನ್ನು ಸುಟ್ಟು ಹಾಕಿದರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: CAA: ಸಿಎಎ ಜಾರಿ; ಕೇರಳ, ತಮಿಳುನಾಡು ಮುಖ್ಯಮಂತ್ರಿಗಳ ನಿಲುವೇನು?

ಕಾಂಗ್ರೆಸ್‌ ಜತೆಗೆ ಇತರ ವಿಪಕ್ಷಗಳೂ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿವೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಧಿಸೂಚನೆ ಹೊರಡಿಸಿದ ನಿಯಮಗಳು “ಅಸಂವಿಧಾನಿಕ ಮತ್ತು ತಾರತಮ್ಯ” ಎಂದು ಹೇಳಿದ್ದಾರೆ ಮತ್ತು ಪೌರತ್ವಕ್ಕೆ ಅರ್ಜಿ ಸಲ್ಲಿಸುವ ಮೊದಲು ʼಹಲವಾರು ಬಾರಿ ಯೋಚಿಸಿʼ ಎಂದೂ ಕರೆ ನೀಡಿದ್ದಾರೆ. ಇನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸಿಎಎಯನ್ನು ತಮ್ಮ ರಾಜ್ಯಗಳಲ್ಲಿ ಅನುಷ್ಠಾನಗೊಳಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಈ ಕಾಯ್ದೆ ಕಾನೂನುಬಾಹಿರ ಎಂದೂ ಟೀಕಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election: 5ನೇ ಹಂತದಲ್ಲಿ ಕೇವಲ ಶೇ.56ರಷ್ಟು ಮತದಾನ; ಯಾವ ರಾಜ್ಯದಲ್ಲಿ ಹೆಚ್ಚು?

Lok Sabha Election: ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆ ಶಾಂತಿಯುತವಾಗಿ ಮತದಾನ ನಡೆದಿದೆ. ಪಶ್ಚಿಮ ಬಂಗಾಳದ ಕೆಲವೆಡೆ ಮಾತ್ರ ಗಲಾಟೆ ನಡೆದಿವೆ ಎಂದು ತಿಳಿದುಬಂದಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನವು ಸೋಮವಾರ (ಮೇ 20) ಶಾಂತಿಯುತವಾಗಿ ನಡೆದಿದೆ. ಸಂಜೆ 5 ಗಂಟೆ ಸುಮಾರಿಗೆ ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಶೇ.56.68ರಷ್ಟು ಮತದಾನ ದಾಖಲಾಗಿದೆ. ಸಂಜೆ 5 ಗಂಟೆ ವೇಳೆಗೆ ಕಳೆದ ನಾಲ್ಕು ಹಂತದ ಮತದಾನದ ವೇಳೆ ಹೆಚ್ಚಿನ ಮತದಾನ ದಾಖಲಾಗಿತ್ತು. ಆದರೆ, ಐದನೇ ಹಂತದಲ್ಲಿ ಮತದಾನ ಪ್ರಮಾಣ ಭಾರಿ ಇಳಿಕೆಯಾಗಿದೆ. ಈ ಕುರಿತು ಚುನಾವಣೆ ಆಯೋಗ ಅಂಕಿ-ಅಂಶ ಬಿಡುಗಡೆ ಮಾಡಿದಾಗಲೇ ನಿಖರ ಮಾಹಿತಿ ಲಭ್ಯವಾಗಲಿದೆ.

ಪಶ್ಚಿಮ ಬಂಗಾಳದಲ್ಲಿ ಹೆಚ್ಚು

ಪಶ್ಚಿಮ ಬಂಗಾಳದಲ್ಲಿ ಐದನೇ ಹಂತದಲ್ಲಿ ಹೆಚ್ಚಿನ ಮತದಾನ ದಾಖಲಾಗಿದೆ. ರಾಜ್ಯದಲ್ಲಿ ಕೆಲವೆಡೆ ಹಿಂಸಾಚಾರ ಪ್ರಕರಣಗಳು ಸುದ್ದಿಯಾಗಿದ್ದರೂ ಶೇ.73ರಷ್ಟು ಮತದಾನ ದಾಖಲಾಗಿದೆ. ಇನ್ನು ಲಡಾಕ್‌ನಲ್ಲಿ ಶೇ.67.15, ಜಾರ್ಖಂಡ್‌ನಲ್ಲಿ ಶೇ.61.90ರಷ್ಟು ಮತದಾನ ನಡೆದಿದೆ. ಇನ್ನು ಮಹಾರಾಷ್ಟ್ರದಲ್ಲಿ ಕೇವಲ ಶೇ.48.66ರಷ್ಟು ಮತದಾನ ದಾಖಲಾಗಿದ್ದು, ಐದನೇ ಹಂತದಲ್ಲಿ ಕನಿಷ್ಠ ಮತದಾನ ನಡೆದ ರಾಜ್ಯ ಎನಿಸಿದೆ. ನಾಲ್ಕನೇ ಹಂತದಲ್ಲೂ ಮಹಾರಾಷ್ಟ್ರದಲ್ಲಿ ಕನಿಷ್ಠ ಮತದಾನ ದಾಖಲಾಗಿತ್ತು.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಿದೆ.

ನಾಲ್ಕನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿತ್ತು. ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಮೂರೂ ಹಂತಗಳಲ್ಲಿ 2019ಕ್ಕಿಂತ ಕಡಿಮೆ ಮತದಾನ ದಾಖಲಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಆದರೀಗ, 4ನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಬಾರಿಗಿಂತ ಕೇವಲ 0.40ರಷ್ಟು ಕಡಿಮೆಯಾಗಿದೆ. ಹಾಗಾಗಿ, ನಾಲ್ಕನೇ ಹಂತದ ಮತದಾನವು ಸಕಾರಾತ್ಮಕ ಬೆಳವಣಿಗೆ ಎಂದು ಹೇಳಲಾಗುತ್ತಿದೆ.

ಐದನೇ ಹಂತದ ಮತದಾನದೊಂದಿಗೆ ದೇಶಾದ್ಯಂತ ಇದುವರೆಗೆ ಒಟ್ಟು 428 ಕ್ಷೇತ್ರಗಳಲ್ಲಿ ಚುನಾವಣೆ ನಡೆದಂತಾಗಿದೆ. ಉಳಿದ ಕ್ಷೇತ್ರಗಳಲ್ಲಿ ಐದು ಹಾಗೂ ಆರನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್‌ 1ರಂದು ಚುನಾವಣೆ ಮುಗಿಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯೂ ನಡೆದಿದ್ದು, ಜೂನ್‌ 4ರಂದೇ ಫಲಿತಾಂಶ ತಿಳಿಯಲಿದೆ.

ಇದನ್ನೂ ಓದಿ: Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

Continue Reading

ವಿದೇಶ

Air Crashes: ವಿಮಾನ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ 10 ಪ್ರಭಾವಿ ರಾಜಕಾರಣಿಗಳಿವರು

ಇರಾನ್ ಅಧ್ಯಕ್ಷರ ಸಾವು ವಿಶ್ವದಲ್ಲೇ ರಾಜಕೀಯ ನಾಯಕರ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಮಾಡುವಂತೆ ಮಾಡಿದೆ. ವಿಮಾನ, ಹೆಲಿಕಾಪ್ಟರ್ ಅಪಘಾತದಲ್ಲಿ (Air Crashes) ರಾಜಕೀಯ ನಾಯಕರ ಸಾವು ಇದೇ ಮೊದಲಲ್ಲ. ವಿಶ್ವದ ಹತ್ತು ಪ್ರಮುಖ ನಾಯಕರು ಈ ರೀತಿಯ ದುರಂತದಲ್ಲಿ ಮೃತಪಟ್ಟಿದ್ದಾರೆ.

VISTARANEWS.COM


on

By

Air Crashes
Koo

ಇರಾನ್ ಅಧ್ಯಕ್ಷ (Iran President) ಇಬ್ರಾಹಿಂ ರೈಸಿ (Ebrahim Raisi) ಅವರು ಭಾನುವಾರ ರಾತ್ರಿ ದೇಶದ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ (Air Crashes) ಸಾವನ್ನಪ್ಪಿದ್ದಾರೆ. ರೈಸಿ ಅವರ ದಣಿವರಿಯದ ಸ್ಫೂರ್ತಿಯ ಸೇವೆಯ ಮಾರ್ಗದಲ್ಲಿ ಮುಂದುವರಿಯುವುದಾಗಿ ಇರಾನ್‌ ಆಡಳಿತ ರಾಷ್ಟ್ರದ ಜನರಿಗೆ ಭರವಸೆ ನೀಡಿದೆ. ವಿಮಾನ ದುರಂತಗಳಲ್ಲಿ ರಾಜಕೀಯ ನಾಯಕರು ಸಾವನ್ನಪ್ಪಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಬೇರೆಬೇರೆ ರಾಷ್ಟ್ರಗಳಲ್ಲಿ ಇಂತಹ ಘಟನೆಗಳು ನಡೆದಿವೆ. ಆ ಕುರಿತ ಹಿನ್ನೋಟ ಇಲ್ಲಿದೆ.


ಸ್ವೀಡನ್ ಪ್ರಧಾನಿ ಅರ್ವಿಡ್ ಲಿಂಡ್‌ಮನ್ (1936)

ಸ್ವೀಡನ್‌ನ ಹಿಂದಿನ ಅಡ್ಮಿರಲ್ ಮತ್ತು ಎರಡು ಬಾರಿ ಸ್ವೀಡನ್‌ನ ಪ್ರಧಾನಮಂತ್ರಿ ಆಗಿದ್ದ ಸಾಲೋಮನ್ ಅರ್ವಿಡ್ ಅಚಾಟೆಸ್ ಲಿಂಡ್‌ಮನ್ ಪ್ರಭಾವಿ ಸಂಪ್ರದಾಯವಾದಿ ರಾಜಕಾರಣಿಯಾಗಿದ್ದರು. 1936ರ ಡಿಸೆಂಬರ್ 9ರಂದು ಲಿಂಡ್‌ಮನ್ ಅವರು ಪ್ರಯಾಣಿಸುತ್ತಿದ್ದ ಡಗ್ಲಾಸ್ ಡಿಸಿ-2 ಯುನೈಟೆಡ್ ಕಿಂಗ್‌ಡಂನ ಕ್ರೊಯ್ಡಾನ್ ವಿಮಾನವು ನಿಲ್ದಾಣದ ಬಳಿ ದಟ್ಟವಾದ ಮಂಜಿನಿಂದ ಟೇಕಾಫ್ ಆದ ಸ್ವಲ್ಪ ಸಮಯದ ಅನಂತರ ಮನೆಗಳಿಗೆ ಅಪ್ಪಳಿಸಿದಾಗ ಮೃತಪಟ್ಟರು.

ಫಿಲಿಪೈನ್ಸ್ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ (1957)

ಫಿಲಿಪೈನ್ಸ್‌ನ ಏಳನೇ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ ಅವರು ತಮ್ಮ ಬಲವಾದ ಭ್ರಷ್ಟಾಚಾರ ವಿರೋಧಿ ನಿಲುವು ಮತ್ತು ಜನಪ್ರಿಯ ಕಾರ್ಯಕ್ಕೆ ಹೆಸರುವಾಸಿಯಾಗಿದ್ದರು. ಅವರ ಅಧ್ಯಕ್ಷತೆಯು 1957ರ ಮಾರ್ಚ್ 17ರಂದು ಥಟ್ಟನೆ ಕೊನೆಗೊಂಡಿತು. “ಮೌಂಟ್ ಪಿನಾಟುಬೊ” ಎಂದು ಕರೆಯಲ್ಪಡುವ ಅವರ ಸಿ-47 ವಿಮಾನವು ಸೆಬು ನಗರದ ಮನುಂಗಲ್ ಪರ್ವತಕ್ಕೆ ಅಪ್ಪಳಿಸಿತು. ಆಗ ಮ್ಯಾಗ್ಸೆಸೆ ಮೃತಪಟ್ಟರು. 25 ಪ್ರಯಾಣಿಕರ ಪೈಕಿ ಒಬ್ಬರು ಮಾತ್ರ ಬದುಕುಳಿದಿದ್ದರು.


ಬ್ರೆಜಿಲ್ ಅಧ್ಯಕ್ಷ ನೆರೆಯು ರಾಮೋಸ್ (1958)

ಬ್ರೆಜಿಲ್‌ನ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನೆರೆಯು ರಾಮೋಸ್ ಅವರು 1958ರ ಜೂನ್ 16ರಂದು ನಿಧನರಾದರು. ರಾಮೋಸ್ ಅವರು ಕ್ರೂಝೈರೊ ಡೊ ಸುಲ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಪರಾನಾ ರಾಜ್ಯದ ಕುರಿಟಿಬಾ ಅಫೊನ್ಸೊ ಪೆನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿ ಮೃತಪಟ್ಟರು.

ಇರಾಕ್ ಅಧ್ಯಕ್ಷ ಅಬ್ದುಲ್ ಸಲಾಂ ಆರಿಫ್ (1966)

ಇರಾಕ್‌ನ ಎರಡನೇ ಅಧ್ಯಕ್ಷರಾದ ಅಬ್ದುಲ್ ಸಲಾಂ ಆರಿಫ್ ರಾಜಪ್ರಭುತ್ವವನ್ನು ಉರುಳಿಸಿದ 1958ರ ಕ್ರಾಂತಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. 1966ರ ಏಪ್ರಿಲ್ 13ರಂದು ಆರಿಫ್ ಅವರ ಇರಾಕಿ ಏರ್ ಫೋರ್ಸ್ ವಿಮಾನ, ಡಿ ಹ್ಯಾವಿಲ್ಯಾಂಡ್ ಡಿಹೆಚ್ 104 ಡೋವ್, ಬಸ್ರಾ ಬಳಿ ಅಪಘಾತಕ್ಕೀಡಾದಾಗ ನಿಧನರಾದರು. ಅವರ ಸಹೋದರ ಅಬ್ದುಲ್ ರಹಮಾನ್ ಆರಿಫ್ ಅವರ ಅನಂತರ ಅಧ್ಯಕ್ಷರಾದರು.


ಬ್ರೆಜಿಲ್ ಅಧ್ಯಕ್ಷ ಹಂಬರ್ಟೊ ಡಿ ಅಲೆಂಕಾರ್ ಕ್ಯಾಸ್ಟೆಲೊ ಬ್ರಾಂಕೊ (1967)

ಬ್ರೆಜಿಲ್‌ನ 26ನೇ ಅಧ್ಯಕ್ಷ ಮತ್ತು ಮಾಜಿ ಮಿಲಿಟರಿ ಸರ್ವಾಧಿಕಾರದ ಪ್ರಮುಖ ವ್ಯಕ್ತಿಯಾಗಿದ್ದ ಹಂಬರ್ಟೊ ಡಿ ಅಲೆಂಕಾರ್ ಕ್ಯಾಸ್ಟೆಲೊ ಬ್ರಾಂಕೊ 1967ರ ಜುಲೈ 18ರಂದು ನಿಧನರಾದರು. ಅವರ ಅಧ್ಯಕ್ಷೀಯ ಅವಧಿ ಮುಗಿದ ಸ್ವಲ್ಪ ಸಮಯದ ಅನಂತರ ಕ್ಯಾಸ್ಟೆಲೊ ಬ್ರಾಂಕೋ ಅವರ ಪೈಪರ್ ಪಿಎ -23 ಅಜ್ಟೆಕ್ ವಿಮಾನ ಬ್ರೆಜಿಲಿಯನ್ ವಾಯುಪಡೆ ವಿಮಾನಕ್ಕೆ ಡಿಕ್ಕಿ ಹೊಡೆದು ದುರಂತ ಸಂಭವಿಸಿತು. ಅವರ ಸಾವು ಭಾರಿ ಚರ್ಚೆಗೆ ಕಾರಣವಾಗಿತ್ತು.

ಇಂದಿರಾ ಗಾಂಧಿ ಮಗ ಸಂಜಯ್ ಗಾಂಧಿ (1980)

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುತ್ರ ಸಂಜಯ್ ಗಾಂಧಿ 1980ರ ಜೂನ್ 23ರಂದು ವಿಮಾನ ಅಪಘಾತದಲ್ಲಿ ನಿಧನರಾದರು. ದೆಹಲಿಯ ಸಫ್ದರ್‌ಜಂಗ್ ವಿಮಾನ ನಿಲ್ದಾಣದಲ್ಲಿ ತಾವು ಚಲಾಯಿಸುತ್ತಿದ್ದ ವಿಮಾನದ ನಿಯಂತ್ರಣವನ್ನು ಕಳೆದುಕೊಂಡು ದುರಂತ ಸಾವು ಕಂಡರು.


ಲೆಬನಾನ್ ಪ್ರಧಾನಿ ರಶೀದ್ ಕರಾಮಿ (1987)

ಲೆಬನಾನ್‌ನ ಅತಿ ಹೆಚ್ಚು ಬಾರಿ ಚುನಾಯಿತರಾದ ಪ್ರಧಾನಮಂತ್ರಿ ರಶೀದ್ ಕರಾಮಿ ಅವರು ಲೆಬನಾನಿನ ಅಂತರ್ಯುದ್ಧದ ಸಮಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು. 1987ರ ಜೂನ್ 1ರಂದು, ಬೈರುತ್‌ಗೆ ಹೋಗುವ ಮಾರ್ಗದಲ್ಲಿ ಅವರ ಹೆಲಿಕಾಪ್ಟರ್‌ನಲ್ಲಿ ಬಾಂಬ್ ಸ್ಫೋಟಗೊಂಡು ಕರಾಮಿ ಕೊಲ್ಲಲ್ಪಟ್ಟರು.

ಪಾಕಿಸ್ತಾನದ ಅಧ್ಯಕ್ಷ ಮುಹಮ್ಮದ್ ಜಿಯಾ-ಉಲ್-ಹಕ್ (1988)

ಪಾಕಿಸ್ತಾನದ ಆರನೇ ಅಧ್ಯಕ್ಷರಾದ ಜನರಲ್ ಮುಹಮ್ಮದ್ ಜಿಯಾ-ಉಲ್-ಹಕ್ ಅವರು 1988ರ ಆಗಸ್ಟ್ 17ರಂದು ನಿಧನರಾದರು. ಅವರು ಪ್ರಯಾಣಿಸುತ್ತಿದ್ದ ಸಿ-130 ಹರ್ಕ್ಯುಲಸ್ ವಿಮಾನವು ಬಹವಾಲ್‌ಪುರದಿಂದ ಟೇಕಾಫ್ ಆದ ಸ್ವಲ್ಪ ಸಮಯದ ಅನಂತರ ಅಪಘಾತಕ್ಕೀಡಾಯಿತು. ಅಪಘಾತದ ಕಾರಣವು ಇನ್ನೂ ನಿಗೂಢವಾಗಿಯೇ ಉಳಿದಿದೆ.

ಇದನ್ನೂ ಓದಿ: Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?


ಕಾಂಗ್ರೆಸ್‌ ನಾಯಕ ಮಾಧವರಾವ್ ಸಿಂಧಿಯಾ (2001)

ಮಾಧವರಾವ್ ಸಿಂಧಿಯಾ ಭಾರತದ ಪ್ರಮುಖ ರಾಜಕಾರಣಿ ಮತ್ತು ಕಾಂಗ್ರೆಸ್ ನಾಯಕರಾಗಿದ್ದರು. 2001ರ ಸೆಪ್ಟೆಂಬರ್ 30ರಂದು ವಿಮಾನ ಅಪಘಾತದಲ್ಲಿ ದಾರುಣ ಅಂತ್ಯ ಕಂಡರು. ಉತ್ತರ ಪ್ರದೇಶದ ಮೈನ್‌ಪುರಿ ಬಳಿ ಅವರ ಖಾಸಗಿ ಬೀಚ್‌ಕ್ರಾಫ್ಟ್ ಕಿಂಗ್ ಏರ್ ಸಿ 90 ಗಾಳಿಯಲ್ಲಿ ಬೆಂಕಿ ಹೊತ್ತಿಕೊಂಡು ಅಪಘಾತ ಸಂಭವಿಸಿತ್ತು.

ಚಿಲಿಯ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ (2024)

ಚಿಲಿಯ ಮಾಜಿ ಅಧ್ಯಕ್ಷರಾದ ಸೆಬಾಸ್ಟಿಯನ್ ಪಿಮೆರಾ ಅವರು ಫೆಬ್ರವರಿ 2024ರಲ್ಲಿ ನಿಧನರಾದರು. ಪಿನೆರಾ ಅವರ ಹೆಲಿಕಾಪ್ಟರ್ ದಕ್ಷಿಣ ಚಿಲಿಯ ಸರೋವರಕ್ಕೆ ಅಪ್ಪಳಿಸಿತು. ಈ ದುರಂತದಲ್ಲಿ ಅವರು ಪ್ರಾಣ ಕಳೆದುಕೊಂಡರು. ಅವರು ಸತತ ಎರಡು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿದ್ದ ವೈ ಎಸ್‌ ರಾಜಶೇಖರ್‌ ರೆಡ್ಡಿ ಅವರೂ ಹೆಲಿಕಾಪ್ಟರ್‌ ಅಪಘಾತದಲ್ಲಿ ಮೃತಪಟ್ಟಿದ್ದರು.

Continue Reading

ದೇಶ

Covaxin Safety: ಕೊವ್ಯಾಕ್ಸಿನ್‌ನಿಂದ ಅಡ್ಡ ಪರಿಣಾಮ ಎಂದು ಬನಾರಸ್‌ ವಿವಿ ವರದಿ; ವೈದ್ಯ ಸಂಶೋಧನಾ ಸಂಸ್ಥೆ ಆಕ್ಷೇಪ

Covaxin Safety: ಬಿಎಚ್‌ಯು ಸಂಶೋಧನೆ ಮಾಡುವ ಮುನ್ನ ಸರಿಯಾದ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿಲ್ಲ. ಸಂಶೋಧನೆಗೆ ಬಳಸಿರುವ ಜನಸಂಖ್ಯೆ ಪ್ರಮಾಣಕ್ಕೂ, ಸ್ಟಡಿ ವರದಿಗೂ ತುಂಬ ವ್ಯತ್ಯಾಸವಿದೆ. ಅಡ್ಡ ಪರಿಣಾಮ ಉಂಟಾಗಿದೆ ಎಂಬುದಾಗಿ ಹೇಳಿದವರನ್ನು ವರದಿ ತಯಾರಿಸಲು ಟೆಲಿಫೋನ್‌ ಮೂಲಕ ಸಂಪರ್ಕಿಸಲಾಗಿದೆಯೇ ಹೊರತು, ಅವರ ಅಭಿಪ್ರಾಯವನ್ನು ನೇರವಾಗಿ ಪಡೆದುಕೊಂಡಿಲ್ಲ ಎಂದು ಐಸಿಎಂಆರ್‌ ಅಸಮಾಧಾನ ವ್ಯಕ್ತಪಡಿಸಿದೆ.

VISTARANEWS.COM


on

Covaxin Safety
Koo

ನವದೆಹಲಿ: ಬ್ರಿಟನ್‌ನಲ್ಲಿ ಅಸ್ಟ್ರಾಜೆನಿನಾ ಕೊರೊನಾ ನಿರೋಧಕ ಕೋವಿಶೀಲ್ಡ್‌ ಲಸಿಕೆ ಪಡೆದವರಿಗೆ ಅಡ್ಡ ಪರಿಣಾಮ ಉಂಟಾಗಿದೆ ಎಂಬುದಾಗಿ ಸ್ವತಃ ಕಂಪನಿಯೇ ಒಪ್ಪಿಕೊಂಡ ಬಳಿಕ ಭಾರತದಲ್ಲೂ ಕೊರೊನಾ ನಿರೋಧಕ ಲಸಿಕೆಯ ಸುರಕ್ಷತೆಗೆ ಬಗ್ಗೆ ಚರ್ಚೆಯಾಗುತ್ತಿದೆ. ಅದರಲ್ಲೂ, ದೇಶೀಯವಾಗಿ ಭಾರತ್‌ ಬಯೋಟೆಕ್‌ (Bharat Biotech) ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್‌ ಅಡ್ಡಪರಿಣಾಮಗಳ ಕುರಿತು ಬನಾರಸ್‌ ಹಿಂದು ವಿವಿ (BHU) ವರದಿ ಬಿಡುಗಡೆ ಮಾಡಿದೆ. ಕೊವ್ಯಾಕ್ಸಿನ್‌ ಪಡೆದ ಮೂವರಲ್ಲಿ ಒಬ್ಬರಿಗೆ ಅಡ್ಡ ಪರಿಣಾಮ ಉಂಟಾಗಿದೆ ಎಂಬುದಾಗಿ ಬಿಎಚ್‌ಯು ಪ್ರಕಟಿಸಿದ ವರದಿಗೆ ಈಗ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ICMR) ಆಕ್ರೋಶ ವ್ಯಕ್ತಪಡಿಸಿದೆ.

ಐಸಿಎಂಆರ್‌ ಮಹಾ ನಿರ್ದೇಶಕ ರಾಜೀವ್‌ ಬಾಹ್ಲ್‌ ಅವರು ಬಿಎಚ್‌ಯು ಅಧ್ಯಯನ ವರದಿಯನ್ನು ನಿರಾಕರಿಸಿದ್ದಾರೆ. “ಬಿಎಚ್‌ಯು ಸಂಶೋಧನೆ ಮಾಡುವ ಮುನ್ನ ಸರಿಯಾದ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿಲ್ಲ. ಸಂಶೋಧನೆಗೆ ಬಳಸಿರುವ ಜನಸಂಖ್ಯೆ ಪ್ರಮಾಣಕ್ಕೂ, ಸ್ಟಡಿ ವರದಿಗೂ ತುಂಬ ವ್ಯತ್ಯಾಸವಿದೆ. ಅಡ್ಡ ಪರಿಣಾಮ ಉಂಟಾಗಿದೆ ಎಂಬುದಾಗಿ ಹೇಳಿದವರನ್ನು ವರದಿ ತಯಾರಿಸಲು ಟೆಲಿಫೋನ್‌ ಮೂಲಕ ಸಂಪರ್ಕಿಸಲಾಗಿದೆಯೇ ಹೊರತು, ಅವರ ಅಭಿಪ್ರಾಯವನ್ನು ನೇರವಾಗಿ ಪಡೆದುಕೊಂಡಿಲ್ಲ. ಸಂಶೋಧನೆಗೆ ಬಳಸಿರುವ ಅಂಕಿ-ಅಂಶಗಳನ್ನು ಸರಿಯಾಗಿ ಅವಲೋಕನ ಮಾಡಿಲ್ಲ” ಎಂಬುದಾಗಿ ರಾಜೀವ್‌ ಬಾಹ್ಲ್‌ ಹೇಳಿದ್ದಾರೆ.

“ಲಸಿಕೆಯ ಅಡ್ಡ ಪರಿಣಾಮ, ಲಸಿಕೆಯ ಸುರಕ್ಷತೆ ಬಗ್ಗೆ ಅಧ್ಯಯನ ಮಾಡಲು ತುಂಬ ಮಾನದಂಡಗಳನ್ನು ಅನುಸರಿಸಬೇಕಾಗುತ್ತದೆ. ಬಿಎಚ್‌ಯು ಇಂತಹ ಮಾನದಂಡಗಳನ್ನು ಅನುಸರಿಸುವುದು ಬಿಡಿ, ಅಧ್ಯಯನ ಮಾಡುವ ತಜ್ಞರಿಗೆ ತಾಂತ್ರಿಕ ಹಾಗೂ ಹಣಕಾಸು ನೆರವು ಕೂಡ ಒದಗಿಸಿಲ್ಲ. ಹಾಗಾಗಿ, ಲಸಿಕೆಯ ಸುರಕ್ಷತೆಯ ಬಗ್ಗೆ ಬನಾರಸ್‌ ಹಿಂದು ವಿವಿ ಮಾಡಿದ ಸಂಶೋಧನಾ ವರದಿಯು ವೈಜ್ಞಾನಿಕತೆಯ ಆಧಾರದ ಮೇಲಿಲ್ಲ” ಎಂದು ಹೇಳಿದ್ದಾರೆ.

ಕೊವ್ಯಾಕ್ಸಿನ್‌ ಲಸಿಕೆ ಪಡೆದ ಸುಮಾರು 926 ಜನರನ್ನು ಸಂಪರ್ಕಿಸಿ ಲಸಿಕೆಯ ಸುರಕ್ಷತೆ, ಅಡ್ಡ ಪರಿಣಾಮಗಳ ಕುರಿತು ಅಧ್ಯಯನ ವರದಿ ತಯಾರಿಸಿದೆ. ಲಸಿಕೆ ಪಡೆದ ಮೂವರಲ್ಲಿ ಒಬ್ಬರಿಗೆ ಅಡ್ಡ ಪರಿಣಾಮ ಉಂಟಾಗಿದೆ. ಲಸಿಕೆ ಪಡೆದವರಿಗೆ ಪಾರ್ಶ್ವವಾಯು, ನರಗಳಿಗೆ ಸಂಬಂಧಿಸಿದ ಕಾಯಿಲೆ, ಕೆಮ್ಮು, ಮೂಗು ಸೋರುವಿಕೆ, ಗಂಟಲು ಕೆರೆತ, ಉಸಿರಾಟ ಸಮಸ್ಯೆ ಸೇರಿ ಹಲವು ಅಡ್ಡ ಪರಿಣಾಮಗಳು ಕಾಣಿಸಿಕೊಂಡಿವೆ” ಎಂಬುದಾಗಿ ವರದಿ ತಿಳಿಸಿತ್ತು.

ಭಾರತ್‌ ಬಯೋಟೆಕ್‌ ಹೇಳುವುದೇನು?

“ಸುರಕ್ಷತೆ ಹಾಗೂ ದಕ್ಷತೆಯೇ ಮೊದಲು ಎಂಬ ದೃಷ್ಟಿಕೋನದಿಂದ ಹಲವು ಮಾನದಂಡಗಳನ್ನು ಇಟ್ಟುಕೊಂಡು ಲಸಿಕೆಯನ್ನು ಉತ್ಪಾದಿಸಲಾಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರದ ಲಸಿಕಾಕರಣ ಯೋಜನೆಯ ವೇಳೆ ಅತಿ ಹೆಚ್ಚು ಪ್ರಯೋಗಕ್ಕೀಡಾದ ಲಸಿಕೆ ಎಂದರೆ ಅದು ಕೊವ್ಯಾಕ್ಸಿನ್‌ ಮಾತ್ರ. ಪರವಾನಗಿ ಪ್ರಕ್ರಿಯೆಯ ವೇಳೆ ಸುಮಾರು 27 ಸಾವಿರ ಅಂಶಗಳ ಕುರಿತು ಅಧ್ಯಯನ, ಪರಿಶೀಲನೆ ನಡೆಸಲಾಗಿದೆ. ವೈದ್ಯಕೀಯ ಪ್ರಯೋಗಕ್ಕೂ ಲಸಿಕೆಯನ್ನು ಒಳಪಡಿಸಲಾಗಿದೆ. ಹಾಗಾಗಿ, ಲಸಿಕೆಯು ಸಂಪೂರ್ಣವಾಗಿ ಸುರಕ್ಷಿತವಾಗಿದೆ” ಎಂಬುದಾಗಿ ಭಾರತ್‌ ಬಯೋಟೆಕ್‌ ಕಂಪನಿ ತಿಳಿಸಿದೆ.

ಇದನ್ನೂ ಓದಿ: Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

Continue Reading

ಪ್ರವಾಸ

Trichy Tour: ದಾಂಪತ್ಯದ ಲವಲವಿಕೆಯನ್ನು ಮತ್ತೆ ಜೀವಂತಗೊಳಿಸಲು ತಿರುಚಿರಾಪಳ್ಳಿಗೆ ಹೋಗಿ ಬನ್ನಿ!

ನಿತ್ಯದ ಬದುಕಿನ ಒತ್ತಡದಲ್ಲಿ ದಂಪತಿಗೆ ಪರಸ್ಪರ ಸಮಯ ಕೊಡಲು ಅವಕಾಶವೇ ಸಿಗುವುದಿಲ್ಲ. ಇಂತವರು ಬಿಡುವು ಮಾಡಿಕೊಂಡು ಒಮ್ಮೆ ತಿರುಚಿರಾಪಳ್ಳಿಗೆ (Trichy Tour) ಬಂದರೆ ಬದುಕಿನಲ್ಲಿ ಮತ್ತೆ ಪ್ರೀತಿ ಹುಟ್ಟದೇ ಇರಲು ಸಾಧ್ಯವೇ ಇಲ್ಲ. ಅಂತಹ ರೊಮ್ಯಾಂಟಿಕ್ ಸ್ಥಳಗಳು ಇಲ್ಲಿವೆ.

VISTARANEWS.COM


on

By

Trichy Tour
Koo

ಒಟ್ಟಿಗೆ ಇದ್ದರೂ ಕೆಲಸದ ಒತ್ತಡವನ್ನೆಲ್ಲ ಬದಿಗೊತ್ತಿ ವರ್ಷದಲ್ಲೊಮ್ಮೆಯಾದರೂ ಪತಿ – ಪತ್ನಿ (Couple) ಏಕಾಂತವಾಗಿ ಸಮಯ ಕಳೆಯಬೇಕು ಎಂದು ಬಯಸುವುದು ಸಹಜ. ಇಂಥವರಿಗೆ ಸೂಕ್ತವೆನಿಸುವ ಹಲವಾರು ತಾಣಗಳು ಭಾರತದಲ್ಲಿ (india) ಇದೆ. ಅದರಲ್ಲಿ ತಿರುಚಿರಾಪಳ್ಳಿ (Trichy Tour) ಕೂಡ ಒಂದು.

ತಿರುಚಿರಾಪಳ್ಳಿ ಅಥವಾ ತಿರುಚಿ ಗಡಿಬಿಡಿಯ ಜೀವನದಿಂದ ದೂರವಿರಲು ಬಯಸುವ ದಂಪತಿ ಖಂಡಿತವಾಗಿಯೂ ಭೇಟಿ ನೀಡಬೇಕಾದ ಸ್ಥಳ. ಇಲ್ಲಿನ ಪುರಾತನ ದೇವಾಲಯಗಳು, ಶಾಂತವಾದ ನದಿ, ರುಚಿಕರವಾದ ಆಹಾರ, ಆಳವಾದ ಸಂಸ್ಕೃತಿ ಮತ್ತು ಸಂಪ್ರದಾಯಗಳ ಜೊತೆಗೆ ಸುಂದರವಾದ ನೈಸರ್ಗಿಕ ದೃಶ್ಯಾವಳಿಗಳನ್ನು ಕಣ್ತುಂಬಿಕೊಳ್ಳಬಹುದು. ರೋಮ್ಯಾಂಟಿಕ್ ಮತ್ತು ಸಾಹಸಮಯ ಪ್ರವಾಸಗಳಿಗೆ ಸೂಕ್ತವಾಗಿರುವ ತಿರುಚಿಯಲ್ಲಿ ಯಾವುದಾದರೂ ಹಳೆಯ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಕೈ ಹಿಡಿದುಕೊಂಡು ಹೋಗುತ್ತಿರುವಾಗ ಅಥವಾ ನದಿಯ ದಡದಲ್ಲಿ ಒಟ್ಟಿಗೆ ವಿವಿಧ ಭಕ್ಷ್ಯಗಳನ್ನು ಸವಿಯುತ್ತಿರುವಾಗ ನಿಮ್ಮ ಪ್ರೇಮ ಕಥೆಯ ಪ್ರಾರಂಭದ ದಿನಗಳ ನೆನಪು ಚಿಗುರೊಡೆಯದೆ ಇರಲಾರದು.

ತಿರುಚಿ ಎಂದೂ ಕರೆಯಲ್ಪಡುವ ತಿರುಚಿರಾಪಳ್ಳಿಯು ಇತಿಹಾಸ, ಸಂಸ್ಕೃತಿ ಮತ್ತು ಸೌಂದರ್ಯದ ನಗರವಾಗಿದೆ. ಇದು ಭಾರತದ ಅತ್ಯುತ್ತಮ ಪ್ರಣಯ ವಿಹಾರ ತಾಣಗಳಲ್ಲಿ ಒಂದಾಗಿದೆ. ತಮಿಳುನಾಡಿನ ದಕ್ಷಿಣ ರಾಜ್ಯದಲ್ಲಿರುವ ಪ್ರಾಚೀನ ವಾಸ್ತುಶೈಲಿಯು ಶಾಂತವಾದ ನೈಸರ್ಗಿಕ ಭೂದೃಶ್ಯಗಳು ಮತ್ತು ರುಚಿಕರವಾದ ಆಹಾರದೊಂದಿಗೆ ಬೆರೆತಿರುವ ಕೆಲವು ಕ್ಷಣಗಳನ್ನು ಜೀವಂತಗೊಳಿಸುತ್ತದೆ.

ಪ್ರಾಚೀನ ದೇವಾಲಯಗಳು

ಸ್ಥಳದ ಸುತ್ತಲೂ ಹರಡಿರುವ ಹಲವಾರು ದೇವಾಲಯಗಳಿಗಿಂತ ಹೆಚ್ಚು ಆಕರ್ಷಕವಾದದ್ದು ಯಾವುದು? ತಿರುಚ್ಚಿಯು ಅನೇಕ ಪವಿತ್ರ ದೇವಾಲಯಗಳೊಂದಿಗೆ ಅಗಾಧವಾದ ಧಾರ್ಮಿಕ ಹಿನ್ನೆಲೆಯನ್ನು ಹೊಂದಿದೆ. ಅವುಗಳಲ್ಲಿ ದೈವಿಕ ವೈಭವ ಮತ್ತು ವಾಸ್ತುಶಿಲ್ಪದ ಅದ್ಭುತಗಳ ಸಾರಾಂಶವಾಗಿರುವ ಶ್ರೀ ರಂಗನಾಥಸ್ವಾಮಿ ದೇವಾಲಯವೂ ಒಂದು. ಭಗವಾನ್ ವಿಷ್ಣುವಿನ ರಂಗನಾಥ ಅವತಾರದಲ್ಲಿ ನಿರ್ಮಿಸಲಾದ ಈ ದೇವಾಲಯದ ಸಂಕೀರ್ಣವು ತನ್ನ ಸಂಕೀರ್ಣವಾದ ಕೆತ್ತನೆಗಳು, ಎತ್ತರದ ಗೋಪುರಗಳು ಮತ್ತು ಪವಿತ್ರ ತೊಟ್ಟಿಗಳಿಂದ ಭಕ್ತರನ್ನು ಮೋಡಿಮಾಡುತ್ತದೆ. ಇಲ್ಲಿನ ವಿಸ್ಮಯಕಾರಿ ರಚನೆಗಳ ಮಧ್ಯೆ ದಂಪತಿ ಆಧ್ಯಾತ್ಮಿಕ ವಾತಾವರಣದಲ್ಲಿ ತಮ್ಮನ್ನು ತಾವು ನೆನೆಯಬಹುದು.


ರಾಕ್‌ಫೋರ್ಟ್ ಟೆಂಪಲ್

ತಪ್ಪಿಸಿಕೊಳ್ಳಬಾರದ ಮತ್ತೊಂದು ದೇವಾಲಯ ರಾಕ್‌ಫೋರ್ಟ್ ಟೆಂಪಲ್. ನಗರದ ಮೇಲೆ ಪಕ್ಷಿನೋಟವನ್ನು ನೀಡುವ ಬೃಹತ್ ಬಂಡೆಯ ಮೇಲೆ ಕುಳಿತಿರುವ ಈ ದೇಗುಲ 437 ಕಲ್ಲು ಮೆಟ್ಟಿಲುಗಳನ್ನು ಒಟ್ಟಿಗೆ ಹತ್ತುವುದು ಪ್ರೀತಿಯ ಸಂಬಂಧವನ್ನು ಪರೀಕ್ಷಿಸುತ್ತದೆ; ಅಕ್ಕಪಕ್ಕದಲ್ಲಿ ಸವಾಲುಗಳನ್ನು ಎದುರಿಸುವ ಮೂಲಕ ದಂಪತಿ ತಮ್ಮ ಸಂಬಂಧವನ್ನು ಬಲಪಡಿಸಲು ಇದು ಒಂದು ಉತ್ತಮ ಮಾರ್ಗವಾಗಿದೆ. ಅವರ ಉತ್ತುಂಗದಲ್ಲಿ ಗಣಪತಿ ಮತ್ತು ನಟರಾಜನಿಗೆ ಸಮರ್ಪಿತವಾದ ಪ್ರಾಚೀನ ಪಲ್ಲವ-ಯುಗದ ದೇವಾಲಯಗಳಿವೆ. ಅಲ್ಲಿ ಪ್ರೇಮಿಗಳು ತಮ್ಮ ಪ್ರೀತಿಯ ಜೀವನದಲ್ಲಿ ಶಾಂತಿಗಾಗಿ ಪ್ರಾರ್ಥಿಸಬಹುದು.

ಕಾವೇರಿ ನದಿ ತೀರ

ಕಾವೇರಿ ನದಿಯ ದಡವು ರಮಣೀಯ ಸೌಂದರ್ಯದೊಂದಿಗೆ ಶಾಂತಿಯನ್ನು ನೀಡುತ್ತದೆ. ಗದ್ದಲದ ಸ್ಥಳಗಳಿಂದ ಸ್ವಲ್ಪ ದೂರವಾಗಿ ಶಾಂತತೆವಾಗಿ ಪ್ರಕೃತಿಯ ಮಧ್ಯೆ ಸುತ್ತಲು ಬಯಸಿದರೆ ಈ ತೀರದಲ್ಲಿ ನಿಧಾನವಾಗಿ ನಡೆಯಿರಿ. ದಂಪತಿ ಮೌನವಾಗಿ ದೋಣಿ ವಿಹಾರಕ್ಕೆ ಹೋಗಬಹುದು ಅಥವಾ ನದಿಯ ಪಕ್ಕದಲ್ಲಿ ಹಾಕಲಾದ ಬೆಂಚುಗಳ ಮೇಲೆ ಕುಳಿತುಕೊಳ್ಳಬಹುದು. ದೂರದ ಪರ್ವತಗಳ ಹಿಂದೆ ಸೂರ್ಯ ಮುಳುಗಿದ ಅನಂತರ ಕಿತ್ತಳೆ ಬಣ್ಣದ ಆಕಾಶವನ್ನು ವೀಕ್ಷಿಸಬಹುದು.


ಪಾಕಶಾಲೆ

ರೊಮ್ಯಾಂಟಿಕ್ ಗೆಟ್‌ವೇಗಳ ವಿಷಯಕ್ಕೆ ಬಂದಾಗ ಸ್ಥಳೀಯ ಆಹಾರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳದಿರುವುದು ಹೇಗೆ? ತಿರುಚಿ ನಿಮಗೆ ಅದಕ್ಕಿಂತ ಹೆಚ್ಚಿನದನ್ನು ನೀಡುತ್ತದೆ. ಸಾಂಪ್ರದಾಯಿಕ ತಮಿಳುನಾಡಿನ ತಿನಿಸುಗಳಿಂದ ಹಿಡಿದು ಅಂತಾರಾಷ್ಟ್ರೀಯ ಪಾಕಪದ್ಧತಿಗಳವರೆಗೆ ರೆಸ್ಟೋರೆಂಟ್‌ಗಳು ಇಲ್ಲಿ ವಿಭಿನ್ನ ರುಚಿ ಮೊಗ್ಗುಗಳನ್ನು ಪೂರೈಸುತ್ತವೆ. ದಂಪತಿಗಳು ಸ್ಥಳೀಯ ತಿನಿಸುಗಳಲ್ಲಿ ದೋಸೆ, ಇಡ್ಲಿ ಮತ್ತು ಬಿರಿಯಾನಿಯನ್ನು ಪ್ರಯತ್ನಿಸಬೇಕು ಅಥವಾ ನದಿಯ ನೋಟವನ್ನು ಆನಂದಿಸುತ್ತಿರುವಾಗ ಉನ್ನತ ಮಟ್ಟದ ರೆಸ್ಟೋರೆಂಟ್‌ನಲ್ಲಿ ಕ್ಯಾಂಡಲ್‌ಲೈಟ್ ಡಿನ್ನರ್ ಮಾಡಬಹುದು.

ಸಾಂಸ್ಕೃತಿಕ ಪ್ರದರ್ಶನ

ಸಂಸ್ಕೃತಿಗೆ ಹತ್ತಿರವಾಗುವುದು ನಿಮ್ಮ ಪ್ರೀತಿಪಾತ್ರರೊಂದಿಗಿನ ಯಾವುದೇ ಪ್ರವಾಸದ ಪ್ರಮುಖ ಭಾಗವಾಗಿದೆ ಮತ್ತು ಈ ನಿಟ್ಟಿನಲ್ಲಿ ತಿರುಚಿಯು ಸಾಕಷ್ಟು ಕೊಡುಗೆಗಳನ್ನು ಹೊಂದಿದೆ. ಪ್ರದೇಶದ ಶ್ರೀಮಂತ ಕಲಾತ್ಮಕ ಸಂಪ್ರದಾಯಗಳನ್ನು ಪ್ರದರ್ಶಿಸುವ ಶಾಸ್ತ್ರೀಯ ಸಂಗೀತ ಕಛೇರಿಗಳು ಮತ್ತು ನೃತ್ಯ ಕಾರ್ಯಕ್ರಮಗಳಿಗೆ ಹಾಜರಾಗಿ ಅಥವಾ ಪ್ರದೇಶದ ವಿಶಿಷ್ಟವಾದ ಕರಕುಶಲ ವಸ್ತುಗಳನ್ನು ಮಾರಾಟ ಮಾಡುವ ರೋಮಾಂಚಕ ಮಾರುಕಟ್ಟೆಗಳಿಗೆ ಭೇಟಿ ನೀಡಿ. ಯಾಕೆಂದರೆ ಮನೆಗೆ ಮರಳಿದ ಸ್ಮಾರಕಗಳು ಶಾಶ್ವತವಾಗಿ ಹತ್ತಿರದಲ್ಲಿ ಉಳಿಯುತ್ತವೆ. ಮಸಾಲೆಯುಕ್ತ ಗಾಳಿಯ ನಡುವೆ ಕೈ- ಕೈ ಹಿಡಿದು ಬಿಡುವಿಲ್ಲದ ಬೀದಿಗಳಲ್ಲಿ ನಡೆಯುವುದು ದಂಪತಿ ಹೃದಯದಲ್ಲಿ ದೀರ್ಘಕಾಲ ಬದುಕುವ ನೆನಪುಗಳನ್ನು ಸೃಷ್ಟಿಸುತ್ತದೆ.

ಇದನ್ನೂ ಓದಿ: Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

ಪ್ರಕೃತಿಯ ನಡುವೆ ಒಂದಷ್ಟು ಹೊತ್ತು

ನಮ್ಮ ರಜಾದಿನಗಳಲ್ಲಿ ಬೇಕಾಗಿರುವುದು ಶಾಂತಿ. ನಗರಗಳು ಕೆಲವೊಮ್ಮೆ ನಮ್ಮನ್ನು ಬ್ಯುಸಿಯಾಗಿರುವಂತೆ ಮಾಡುತ್ತದೆ. ಆದ್ದರಿಂದ ತಿರುಚ್ಚಿಗೆ ಬಂದರೆ ಹೊರವಲಯವನ್ನು ನೋಡಬೇಡಿ. ಸುತ್ತಮುತ್ತಲಿನ ಹಚ್ಚ ಹಸಿರಿನಿಂದಾಗಿ ಪ್ರಶಾಂತ ವಾತಾವರಣವನ್ನು ನೋಡಿ. ಜಲಪಾತಗಳ ಶಬ್ದಗಳನ್ನು ಕಿವಿಕೊಟ್ಟು ಆಲಿಸಿ. ದಂಪತಿಗಳು ಪರಸ್ಪರ ಜೊತೆಯಾಗಿ ಪ್ರಕೃತಿಯೊಂದಿಗೆ ಇರಲು ಇದಕ್ಕಿಂತ ಹೆಚ್ಚು ನೆಮ್ಮದಿಯ ತಾಣ ಬೇರೆ ಇರಲಾರದು ಎಂದೆನಿಸಿದರೆ ತಪ್ಪಿಲ್ಲ.

Continue Reading
Advertisement
Karnataka weather Forecast
ಮಳೆ11 mins ago

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಯಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

MLC N Ravikumar Spoke in North East Graduate Constituency Election Preliminary meeting in hosapete
ವಿಜಯನಗರ14 mins ago

MLC Election: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಎನ್. ರವಿಕುಮಾರ್

Lok Sabha Election
ದೇಶ20 mins ago

Lok Sabha Election: 5ನೇ ಹಂತದಲ್ಲಿ ಕೇವಲ ಶೇ.56ರಷ್ಟು ಮತದಾನ; ಯಾವ ರಾಜ್ಯದಲ್ಲಿ ಹೆಚ್ಚು?

Public Exam Good news for students of classes 5 and 8 and 9 Important decision of Karnataka government
ಶಿಕ್ಷಣ24 mins ago

Public Exam: 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ರಾಜ್ಯ ಸರ್ಕಾರದ ಮಹತ್ವ ನಿರ್ಧಾರ

KKR vs SRH
ಕ್ರೀಡೆ35 mins ago

KKR vs SRH: ನಾಳೆ ಮೊದಲ ಕ್ವಾಲಿಫೈಯರ್‌ ಪಂದ್ಯ; ಗೆದ್ದವರಿಗೆ ನೇರ ಫೈನಲ್‌ ಸೋತವರಿಗೆ ಇನ್ನೊಂದು ಅವಕಾಶ

Air Crashes
ವಿದೇಶ37 mins ago

Air Crashes: ವಿಮಾನ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ 10 ಪ್ರಭಾವಿ ರಾಜಕಾರಣಿಗಳಿವರು

Phone Tapping
ಕರ್ನಾಟಕ47 mins ago

Phone Tapping: ಎಚ್‌ಡಿಕೆ ಫೋನ್‌ ಟ್ಯಾಪ್‌ ಮಾಡೋಕೆ, ಅವರೇನು ಟೆರರಿಸ್ಟಾ? ಎಂದ ಡಿಕೆಶಿ

Star Fashion
ಫ್ಯಾಷನ್49 mins ago

Star Fashion: ಮಾಲಾಶ್ರೀ ಮಗಳ ಬಿಗ್‌ ಬ್ಲ್ಯಾಕ್‌ ಜುಮ್ಕಾ ಲವ್‌!

Benjamin Netanyhu
ವಿದೇಶ50 mins ago

ಇಸ್ರೇಲ್‌ ಪಿಎಂ ಬೆಂಜಮಿನ್‌ ನೆತನ್ಯಾಹು, ಹಮಾಸ್‌ ಉಗ್ರರಿಗೆ ಜಾಗತಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್! ಶೀಘ್ರ ಬಂಧನ?

Legislative Council Election dates fixedVoting on June 13
ರಾಜಕೀಯ54 mins ago

Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌