Amitabh, Jaya Bachchan: ಐಷಾರಾಮಿ ಕಾರು, ಚಿನ್ನಾಭರಣ, ಬ್ಯಾಂಕ್‌ ಠೇವಣಿ: ಜಯಾ, ಅಮಿತಾಭ್‌ ಬಚ್ಚನ್‌ ಆಸ್ತಿ ಮೌಲ್ಯ ಇಷ್ಟೊಂದಾ? - Vistara News

ದೇಶ

Amitabh, Jaya Bachchan: ಐಷಾರಾಮಿ ಕಾರು, ಚಿನ್ನಾಭರಣ, ಬ್ಯಾಂಕ್‌ ಠೇವಣಿ: ಜಯಾ, ಅಮಿತಾಭ್‌ ಬಚ್ಚನ್‌ ಆಸ್ತಿ ಮೌಲ್ಯ ಇಷ್ಟೊಂದಾ?

Amitabh, Jaya Bachchan: ಬಾಲಿವುಡ್‌ ಹಿರಿಯ ನಟಿ ಜಯಾ ಬಚ್ಚನ್‌ ತಮ್ಮ ಪತಿ ಅಮಿತಾಭ್‌ ಬಚ್ಚನ್‌ ಅವರೊಂದಿಗೆ 1,578 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ

VISTARANEWS.COM


on

amithabh jaya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಬಾಲಿವುಡ್‌ ಹಿರಿಯ ನಟಿ ಜಯಾ ಬಚ್ಚನ್‌ ತಮ್ಮ ಪತಿ ಅಮಿತಾಭ್‌ ಬಚ್ಚನ್‌ ಅವರೊಂದಿಗೆ 1,578 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ (Amitabh, Jaya Bachchan). ಈ ತಾರಾ ಜೋಡಿ ಬಳಿ 17 ಐಷಾರಾಮಿ ಕಾರುಗಳು, 130 ಕೋಟಿ ರೂ.ಗೂ ಅಧಿಕ ಬ್ಯಾಂಕ್‌ ಠೇವಣಿ ಮತ್ತು ಚಿನ್ನಾಭರಣ ಇದೆ. ಜಯಾ ಬಚ್ಚನ್‌ 5ನೇ ಬಾರಿಗೆ ಉತ್ತರ ಪ್ರದೇಶದಿಂದ ಸಮಾಜವಾದಿ ಪಾರ್ಟಿಯ ಅಭ್ಯರ್ಥಿಯಾಗಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ.

ಆಸ್ತಿ ವಿವರ

ನಾಮ ನಿರ್ದೇಶನದ ವೇಳೆ ನೀಡಿರುವ ಆಸ್ತಿಯ ವಿವರಗಳ ಪ್ರಕಾರ ಜಯಾ ಬಚ್ಚನ್‌ 2022-23ರಲ್ಲಿ 1.63 ಕೋಟಿ ರೂ. ಸಂಪಾದಿಸಿದ್ದಾರೆ. ಈ ವೇಳೆ ಅಮಿತಾಭ್‌ ಅವರ ಸಂಪಾದನೆ 273.74 ಕೋಟಿ ರೂ. ಎಂದು ತಿಳಿಸಲಾಗಿದೆ. ಜಯಾ ಬಚ್ಚನ್‌ ಅವರ ಹೆಸರಿನಲ್ಲಿ 10.11 ಕೋಟಿ ರೂ. ಬ್ಯಾಂಕ್‌ನಲ್ಲಿ ಠೇವಣಿ ಇರಿಸಲಾಗಿದೆ. ಅಮಿತಾಭ್‌ ಅವರ ಬ್ಯಾಂಕ್‌ ಬ್ಯಾಲನ್ಸ್‌ 120.45 ಕೋಟಿ ರೂ. ಜಯಾ ಬಚ್ಚನ್‌ 40.97 ಕೋಟಿ ರೂ. ಮೌಲ್ಯದ ಆಭರಣ ಮತ್ತು 9.82 ಲಕ್ಷ ರೂ. ಮೌಲ್ಯದ ಕಾರು ಹೊಂದಿದ್ದಾರೆ. ಇತ್ತ ಬಿಗ್‌ ಬಿ ಬಳಿ 54.77 ಕೋಟಿ ರೂ. ಮೌಲ್ಯದ ಆಭರಣ ಮತ್ತು ಎರಡು ಮರ್ಸಿಡೀಸ್‌ ಮತ್ತು ರೇಂಜ್‌ ರೋವರ್‌ ಸೇರಿದಂತೆ 16 ಕಾರುಗಳಿವೆ.

ಕಳೆದ ವರ್ಷ ಅಮಿತಾಭ್‌ ತಮ್ಮ ನೆಚ್ಚಿನ ʼಪ್ರತೀಕ್ಷಾʼ ಬಂಗಲೆಯನ್ನು ಪುತ್ರಿ ಶ್ವೇತಾ ಬಚ್ಚನ್‌ ನಂದ ಅವರಿಗೆ ಉಡುಗೊರೆಯಾಗಿ ನೀಡಿದ್ದರು. ಇತ್ತೀಚೆಗೆ ಅಮಿತಾಭ್‌ ಬಚ್ಚನ್‌ ಅಯೋಧ್ಯೆಯಲ್ಲಿ ಆಸ್ತಿಯೊಂದನ್ನು ಖರೀದಿಸಿದ್ದರು. ಜನವರಿ 22ರಂದು ನಡೆದ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು ಮತ್ತೊಮ್ಮೆ ಅಯೋಧ್ಯೆಗೆ ಭೇಟಿ ನೀಡಿ ಆಸ್ತಿ ಪರಿಶೀಲಿಸಿ ಬಂದಿದ್ದರು.

ಜಯಾ ಬಚ್ಚನ್ ಅವರಿಗೆ ಬೇರೆ ಬೇರೆ ಮೂಲಗಳಿಂದ ಆದಾಯ ಹರಿದು ಬರುತ್ತದೆ. ಬ್ರ್ಯಾಂಡ್​ಗಳ ಪ್ರಚಾರ, ಎಂ.ಪಿ. ವೇತನ ಹಾಗೂ ಸಿನಿಮಾಗಳಿಂದ ಹಣ ಗಳಿಸುತ್ತಾರೆ. ಅವರು ಕಳೆದ ವರ್ಷ ತೆರೆಕಂಡ ʼರಾಕಿ ಔರ್‌ ರಾಣಿ ಕಿ ಪ್ರೇಮ್‌ ಕಹಾನಿʼ ಬಾಲಿವುಡ್‌ ಚಿತ್ರದಲ್ಲಿ ನಟಿಸಿದ್ದರು. ಕರಣ್‌ ಜೋಹರ್‌ ನಿರ್ದೇಶನದ ಈ ಚಿತ್ರದಲ್ಲಿ ರಣವೀರ್‌ ಸಿಂಗ್‌ ಮತ್ತು ಆಲಿಯಾ ಭಟ್‌ ನಾಯಕ-ನಾಯಕಿಯಾಗಿ ಅಭಿನಯಿಸಿದ್ದರೆ, ಹಿರಿಯ ಕಲಾವಿದರಾದ ಧರ್ಮೇಂದ್ರ, ಶಬಾನಾ ಆಜ್ಮಿ ಮತ್ತಿತರರು ಮುಖ್ಯ ಪಾತ್ರ ನಿರ್ವಹಿಸಿದ್ದರು.

ಇದನ್ನೂ ಓದಿ: ISPL : ಮುಂಬೈ ತಂಡವನ್ನು ಖರೀದಿಸಿದ ಅಮಿತಾಭ್​ ಬಚ್ಚನ್​

ಇನ್ನು ಅಮಿತಾಭ್‌ ಜಾಹೀರಾತು, ಸಿನಿಮಾ, ಕಿರುತೆರೆ ಹೀಗೆ ಎಲ್ಲ ಕಡೆ ಸಕ್ರಿಯರಾಗಿದ್ದಾರೆ. ಸದ್ಯ ಅವರು ಭಾರತದ ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿರುವ ʼಕಲ್ಕಿ 2898 ಎಡಿʼ ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಟಾಲಿವುಡ್‌ ನಿರ್ದೇಶಕ ನಾಗ್‌ ಅಶ್ವಿನ್‌ ಅವರ ಈ ಪ್ಯಾನ್‌ ಇಂಡಿಯಾ ಚಿತ್ರದಲ್ಲಿ ಮೊದಲ ಬಾರಿಗೆ ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಕಮಲ್‌ ಹಾಸನ್‌ ಕೂಡ ಈ ಸಿನಿಮಾದಲ್ಲಿದ್ದಾರೆ. ಇದರ ಜತೆಗೆ ಬಿಗ್‌ ಬಿ ಅನೇಕ ವರ್ಷಗಳ ಬಳಿಕ ಕಾಲಿವುಡ್‌ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರೊಂದಿಗೆ ʼವೆಟ್ಟೈಯನ್‌ʼ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಭಾನುವಾರ ಸಂಜೆ 7.15ಕ್ಕೆ ಮೋದಿ ಪ್ರಮಾಣವಚನ‌; ಹಲವು ಸಂಸದರಿಗೂ ಮಂತ್ರಿ ಭಾಗ್ಯ!

Narendra Modi: ನರೇಂದ್ರ ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸುವ ಸಂಸದರು ಯಾರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇನ್ನು, ನರೇಂದ್ರ ಮೋದಿ ಮಾತ್ರವಲ್ಲ, ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಕೂಡ ರಾಷ್ಟ್ರಪತಿ ಅವರನ್ನು ಭೇಟಿಯಾದರು. ಬಿಹಾರ ಸಿಎಂ ನಿತೀಶ್‌ ಕುಮಾರ್‌, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಕೂಡ ಇದ್ದರು.

VISTARANEWS.COM


on

Narendra Modi
Koo

ನವದೆಹಲಿ: ನರೇಂದ್ರ ಮೋದಿ ಅವರು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದು, ಇದಕ್ಕೆ ಎನ್‌ಡಿಎ ಮೈತ್ರಿಕೂಟದ ಎಲ್ಲ ಪಕ್ಷಗಳು ಸಮ್ಮತಿ ಸೂಚಿಸಿವೆ. ಇದಾದ ಬಳಿಕ ನರೇಂದ್ರ ಮೋದಿ (Narendra Modi) ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾಗಿ, ಸರ್ಕಾರ ರಚನೆ ಕುರಿತು ಹಕ್ಕು ಮಂಡಿಸಿದ್ದಾರೆ. ಇನ್ನು, ಜೂನ್‌ 9ರಂದು (ಭಾನುವಾರ) ಸಂಜೆ 7.15ಕ್ಕೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಪ್ರಮಾಣವಚನ (Oath) ಸ್ವೀಕರಿಸಲಿದ್ದಾರೆ.

ಹೌದು, ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಅಧಿಕೃತ ಮಾಹಿತಿ ನೀಡಿದ್ದಾರೆ. “ನರೇಂದ್ರ ಮೋದಿ ಅವರು ಪ್ರಧಾನಿಯಾಗಿ, ಹಲವು ಸಂಸದರು ಸಚಿವರಾಗಿ ಜೂನ್‌ 9ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ” ಎಂದು ರಾಷ್ಟ್ರಪತಿಯವರ ಕಚೇರಿಯು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ.

ನರೇಂದ್ರ ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸುವ ಸಂಸದರು ಯಾರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇನ್ನು, ನರೇಂದ್ರ ಮೋದಿ ಮಾತ್ರವಲ್ಲ, ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಕೂಡ ರಾಷ್ಟ್ರಪತಿ ಅವರನ್ನು ಭೇಟಿಯಾದರು. ಬಿಹಾರ ಸಿಎಂ ನಿತೀಶ್‌ ಕುಮಾರ್‌, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನೂತನ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಸೇರಿ ಹಲವು ನಾಯಕರು ಇದ್ದರು.

ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಮುನ್ನ ನಡೆದ ಎನ್‌ಡಿಎ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ನಿತೀಶ್‌ ಕುಮಾರ್‌ ಅವರು ಹೊಗಳಿದರು. “ಮುಂದಿನ ಸಲವೂ ನೀವೇ ಸ್ಪರ್ಧೆಗೆ ನಿಂತರೆ, ಈಗ ಅಲ್ಲಲ್ಲಿ ಗೆಲುವು ಸಾಧಿಸಿರುವ ಇಂಡಿಯಾ ಒಕ್ಕೂಟದ ಯಾವೊಬ್ಬರೂ ಗೆಲ್ಲುವುದಿಲ್ಲ. ಎಲ್ಲರೂ ನಿಮ್ಮೆದುರು ಸೋತು ಹೋಗುತ್ತಾರೆ. ಅವರು ಎಂದಿಗೂ ದೇಶಕ್ಕಾಗಿ ಕೆಲಸ ಮಾಡಿಲ್ಲ. ಅವರಿಂದ ದೇಶಕ್ಕೆ ಯಾವ ಸೇವೆಯೂ ಸಿಕ್ಕಿಲ್ಲ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿಯೇ ದೇಶ ಏಳಿಗೆ ಹೊಂದುತ್ತಿದೆ” ಎಂಬುದಾಗಿ ನಿತೀಶ್‌ ಕುಮಾರ್‌ ಹೇಳಿದರು. ಆಗ ನರೇಂದ್ರ ಮೋದಿ ಅವರು ಗಹಗಹಿಸಿ ನಕ್ಕರು. ಸಭೆಯಲ್ಲಿದ್ದ ಎಲ್ಲರೂ ನಗೆಗಡಲಲ್ಲಿ ತೇಲಾಡಿದರು.

ಇದನ್ನೂ ಓದಿ: Nitish Kumar: ಮುಂದಿನ ಸಲ ನಿಮ್ಮೆದುರು ಪ್ರತಿಪಕ್ಷಗಳ ಎಲ್ಲರಿಗೂ ಸೋಲು; ನಿತೀಶ್‌ ಮಾತಿಗೆ ನಕ್ಕ ಮೋದಿ!

Continue Reading

ಸಿನಿಮಾ

Hamare Baarah: ಮುಸ್ಲಿಂ ಮಹಿಳೆಯರ ಕುರಿತ ಹಮಾರೆ ಬಾರಾ ಸಿನಿಮಾ ರಿಲೀಸ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್!

Hamare Baarah: ಹಮಾರೆ ಬಾರಾ ಸಿನಿಮಾ ಬಿಡುಗಡೆ ಮಾಡಬಹುದು ಎಂದು ಬಾಂಬೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ಅದರಂತೆ, ಜೂನ್‌ 7ರಂದು ಸಿನಿಮಾ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಮಾತ್ರ ಸಿನಿಮಾ ಬಿಡುಗಡೆಯನ್ನು 15 ದಿನಗಳವರೆಗೆ ನಿಷೇಧಿಸಲಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆ ಬರುವ ಸಾಧ್ಯತೆ ಇರುವ ಕಾರಣ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

VISTARANEWS.COM


on

Hamare Baarah
Koo

ಮುಂಬೈ: ಇಸ್ಲಾಂ, ಮುಸ್ಲಿಂ ಮಹಿಳೆಯರು, ಮುಸ್ಲಿಂ ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತ ಕಥಾಹಂದರ ಹೊಂದಿರುವ, ಆದರೆ, ಬಿಡುಗಡೆಗೆ ಮುನ್ನವೇ ವಿವಾದಕ್ಕೆ ಕಾರಣವಾಗಿದ್ದ ಹಮಾರೆ ದೋ (Hamare Baarah) ಸಿನಿಮಾವನ್ನು ಬಿಡುಗಡೆಗೊಳಿಸಲು ಕೊನೆಗೂ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಹಮಾರೆ ದೋ ಸಿನಿಮಾವನ್ನು ಬಿಡುಗಡೆ ಮಾಡಲು ಬಾಂಬೆ ಹೈಕೋರ್ಟ್‌ (Bombay High Court) ಅನುಮತಿ ನೀಡಿದ್ದು, ಅದರಂತೆ ಶುಕ್ರವಾರ (ಜೂನ್‌ 6) ಸಿನಿಮಾ ಬಿಡುಗಡೆಯಾಗಿದೆ.

ಸಿನಿಮಾದಲ್ಲಿ ಒಂದಷ್ಟು ದೃಶ್ಯಗಳನ್ನು, ಸಂಭಾಷಣೆಯನ್ನು ತೆಗೆಯಬೇಕು. ಒಬ್ಬ ಮುಸ್ಲಿಂ ಸದಸ್ಯ ಸೇರಿ ಮೂವರು ಇರುವ ಒಂದು ಸಮಿತಿ ರಚಿಸಲಾಗುತ್ತದೆ. ಆ ಸಮಿತಿಯ ಅಭಿಪ್ರಾಯದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಅಲ್ಲಿಯವರೆಗೆ ಸಿನಿಮಾವನ್ನು ಬಿಡುಗಡೆ ಮಾಡಬಹುದು ಎಂಬುದಾಗಿ ಬಾಂಬೆ ಹೈಕೋರ್ಟ್‌ ತಿಳಿಸಿತು. ಅದರಂತೆ, ಜೂನ್‌ 7ರಂದು ಸಿನಿಮಾ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಮಾತ್ರ ಸಿನಿಮಾ ಬಿಡುಗಡೆಯನ್ನು 15 ದಿನಗಳವರೆಗೆ ನಿಷೇಧಿಸಲಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆ ಬರುವ ಸಾಧ್ಯತೆ ಇರುವ ಕಾರಣ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಿನಿಮಾದ ಕತೆ ಏನು?

ಮನ್ಸೂರ್‌ ಅಲಿ ಖಾನ್‌ ಸಂಜಾರಿ ಎಂಬ ಮುಸ್ಲಿಂ ವ್ಯಕ್ತಿಯ ಸುತ್ತಲೂ ನಡೆಯುವ ಕತೆಯನ್ನು ಹೆಣೆಯಲಾಗಿದೆ. ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲ ಪತ್ನಿಯು ಹೆರಿಗೆ ವೇಳೆಯೇ ನಿಧನರಾಗುತ್ತಾರೆ. ಆದರೆ, ಮಕ್ಕಳು ಬೇಕು ಎಂಬ ಕಾರಣಕ್ಕಾಗಿ ಎರಡನೇ ಮದುವೆಯಾಗುವ ಆತನು, ಎರಡನೇ ಪತ್ನಿಯೊಂದಿಗೆ 5 ಮಕ್ಕಳೊಂದಿಗೆ ಪಡೆಯುವ ಆತನು, ಪತ್ನಿಯು 6ನೇ ಬಾರಿ ಗರ್ಭಿಣಿಯಾಗುತ್ತಾರೆ. ಆಗ ವೈದ್ಯರು, ಮಹಿಳೆ ಜೀವಕ್ಕೆ ಕುತ್ತಿದೆ, ಗರ್ಭಪಾತ ಮಾಡಿಸಬೇಕು ಎಂದು ಹೇಳುತ್ತಾರೆ. ಆದರೆ, ಗರ್ಭಪಾತಕ್ಕೆ ಮನ್ಸೂರ್‌ ಅಲಿ ಖಾನ್‌ ಸಂಜಾರಿ ನಿರಾಕರಿಸುತ್ತಾನೆ.

ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲನೇ ಪತ್ನಿಯ ಮಗಳು ಮಲತಾಯಿಯ ಹಕ್ಕುಗಳಿಗಾಗಿ ಹೋರಾಡಲು ಕೋರ್ಟ್‌ ಮೊರೆ ಹೋಗುತ್ತಾಳೆ. ಕೋರ್ಟ್‌ನಲ್ಲಿ ಆಕೆಯ ವಾದ ಏನಿರುತ್ತದೆ? ಪುರುಷ ಪ್ರಧಾನ ಸಮಾಜದ ಕಟ್ಟುಪಾಡುಗಳೇನು? ಮುಸ್ಲಿಂ ಮಹಿಳೆಯರ ಮೇಲೆ ಹೇಗೆ ದೌರ್ಜನ್ಯ ನಡೆಯುತ್ತಿದೆ ಎಂಬುದನ್ನು ಕೋರ್ಟ್‌ಗೆ ಮನವರಿಕೆ ಮಾಡುತ್ತಾಳೆ. ಕತೆಯಲ್ಲಿ ಮುಂದೇನಾಗುತ್ತದೆ ಎಂಬುದೇ ಕುತೂಹಲವಾಗಿದೆ. ಆದರೆ, ಸಿನಿಮಾಗೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಮುಸ್ಲಿಂ ಸಂಘಟನೆಗಳು ಕೋರ್ಟ್‌ ಮೊರೆ ಹೋಗಿದ್ದವು.

ಇದನ್ನೂ ಓದಿ: Hamare Baarah: ಮುಸ್ಲಿಂ ಮಹಿಳೆಯರ ಕುರಿತಾದ ‘ಹಮಾರೆ ಬಾರಾ’ ಸಿನಿಮಾ ಬ್ಯಾನ್‌ ಮಾಡಿದ ಕರ್ನಾಟಕ ಸರ್ಕಾರ

Continue Reading

ದೇಶ

Akasa Air: ಗೋರಖ್​ಪುರದಿಂದ ದೆಹಲಿ ಮತ್ತು ಬೆಂಗಳೂರಿಗೆ ಆಕಾಶ ಏರ್ ನೇರ ವಿಮಾನ

Akasa Air: ಗೋರಖಪುರದಿಂದ ದೆಹಲಿ ಮತ್ತು ಬೆಂಗಳೂರಿಗೆ ಪ್ರತಿನಿತ್ಯ ಹಾರಾಟ ಮಾಡುವಂತಹ ವಿಮಾನ ಸಂಪರ್ಕವನ್ನು ಕಲ್ಪಿಸಿದ ಆಕಾಶ ಏರ್ ಪ್ರಯಾಣಿಕರಿಗೆ ಅನೇಕ ಗುಣಮಟ್ಟದ ಉತ್ಪನ್ನಗಳು ಹಾಗೂ ವಿಭಿನ್ನ ಸೇವೆಗಳನ್ನು ಪರಿಚಯಿಸಿದೆ. ಪ್ರಯಾಣಿಕರಿಗೆ ಕೈಗೆಟಕುವ ದರಗಳಲ್ಲಿ ಎಲ್ಲವನ್ನು ಒಳಗೊಂಡ ಮತ್ತು ಅಗತ್ಯಕ್ಕೆ ತಕ್ಕಂತೆ ಬದಲಾಯಿಸಬಹುದಾದಂತಹ ರಜಾ ಪ್ಯಾಕೇಜ್ ಅನ್ನು ಕೂಡ ಆಯ್ಕೆ ಮಾಡಿಕೊಳ್ಳಬಹುದಾಗಿದೆ.

VISTARANEWS.COM


on

Akasa Air
Koo

ದೆಹಲಿ: ಭಾರತದ ಪ್ರಸಿದ್ಧ ವಿಮಾನಸಂಸ್ಥೆಯಾದ ಆಕಾಶ ಏರ್ (Akasa Air) ಗೋರಖ್​ಪುರದಿಂದ ದೆಹಲಿ ಮತ್ತು ಬೆಂಗಳೂರಿಗೆ ಪ್ರತಿನಿತ್ಯ ವಿಮಾನ ಸಂಪರ್ಕವನ್ನು ಕಲ್ಪಿಸಿದೆ. 2024 ಮೇ 29 ರಂದು ಸೇವೆ ಆರಂಭಗೊಂಡಿದ್ದು  ಮೊದಲ ವಿಮಾನ ಹಾರಾಟವು ಮಹಾಯೋಗಿ ಗೋರಖ್​ನಾಥ್ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 2:45 ಗಂಟೆಗೆ ಹೊರಟು, ಸಂಜೆ 4 ಗಂಟೆಗೆ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ತಲುಪಲಿದೆ.

ಇದು  ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ಜನರ ಬೇಡಿಕೆಯನ್ನು ಪೂರೈಸುವ ಮೂಲಕ ಆಕಾಶ ಏರ್ ತನ್ನ  ಖ್ಯಾತಿಯನ್ನು ಹೆಚ್ಚಿಸಿಕೊಂಡಿದೆ. ಅಲ್ಲದೇ ಗೋರಖಪುರ ಹಾಗೂ ಬೆಂಗಳೂರ ನಡುವೆ ನೇರ ವಿಮಾನ ಸಂಪರ್ಕವನ್ನು ಕಲ್ಪಸಿದ ಏಕೈಕ ಸಂಸ್ಥೆ ಆಕಾಶ ಏರ್ ಎನಿಸಿಕೊಂಡಿದೆ. ದೇಶದಾದ್ಯಂತ ಮೆಟ್ರೋ ಹಾಗೂ ಮೆಟ್ರೋ ಇಲ್ಲದ ನಗರಗಳಿಗೆ ತಡೆರಹಿತ ಸಂಪರ್ಕ ಒದಗಿಸಬೇಕೆನ್ನುವ ವಿಮಾನ ಸಂಸ್ಥೆಯ ಧೋರಣೆಯನ್ನು ಎತ್ತಿ ಹಿಡಿದಿದೆ.

ಇತಿಹಾಸ ಮತ್ತು ಸಂಸ್ಕೃತಿಯ ಭಂಡಾರವಾದ ಗೋರಖಪುರ ನಗರ ಅತಿ ಶೀಘ್ರದಲ್ಲಿಯೇ ಆರ್ಥಿಕ ಕೇಂದ್ರವಾಗಿ ಪರಿವರ್ತನೆಗೊಳ್ಳುವುದರಲ್ಲಿ ಅನುಮಾನವಿಲ್ಲ. ಹಾಗೇ ಈ ನಗರ ತಮ್ಮ ಮೂಲ ಸೌಕರ್ಯಗಳ ಮೂಲಕ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಮೆಟ್ರೋ ನಗರಗಳಾದ ಬೆಂಗಳೂರು ಮತ್ತು ದೆಹಲಿಯಲ್ಲಿ ಪ್ರತಿನಿತ್ಯದ ವಿಮಾನ ಹಾರಾಟ ಮತ್ತು ವಿಮಾನ ಪ್ರಯಾಣದಲ್ಲಿ ಕೈಗೆಟಕ್ಕುವ ಆಯ್ಕೆಗಳನ್ನು ಒದಗಿಸಿ ಈ ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ಇದು ಕಾರಣವಾಗಿದೆ.

ಈ ಸಂಸ್ಥೆಯ ವತಿಯಿಂದ ವಿಮಾನ ಹಾರಾಟ ಪ್ರಾರಂಭವಾದಾಗಿನಿಂದಲೂ ಉತ್ತರ ಪ್ರದೇಶದಲ್ಲಿ ಪ್ರಗತಿ ಹೆಚ್ಚುತ್ತಿದೆ. ಮತ್ತು  ಈ ಪ್ರದೇಶದಲ್ಲಿ ಇದು ತನ್ನ ಅಸ್ತಿತ್ವವನ್ನು ಬಲವಾಗಿ ನೆಲೆಯೂರಲಿದೆ ಎನ್ನಲಾಗಿದೆ. ಈಗ ಈ ರಾಜ್ಯದಲ್ಲಿ ಲಕ್ನೌ, ವಾರಣಾಸಿ, ಅಯೋಧ್ಯ, ಪ್ರಯಾಗ ಹಾಗೂ ಗೋರಖಪುರ ಸೇರಿದಂತೆ 5 ಮೆಟ್ರೋ ನಗರಗಳನ್ನು ದೇಶದಾದ್ಯಂತ ಇರುವ ಇತರ ಮೆಟ್ರೋಗಳೊಂದಿಗೆ ತಡೆರಹಿತವಾಗಿ ಸಂಪರ್ಕಿಸುತ್ತಿದೆ.

ಪ್ರಯಾಣಿಕರು ಆರಾಮದಾಯಕವಾದ ಪ್ರಯಾಣದ ಅನುಭವವನ್ನು ಪಡೆಯುತ್ತಿದ್ದಾರೆಯೇ ಎಂಬುದನ್ನು ತಿಳಿಯಲು ಆಕಾಶ ಏರ್ ಅನೇಕ ಗುಣಮಟ್ಟದ ಉತ್ಪನ್ನಗಳು ಹಾಗೂ ವಿಭಿನ್ನ ಸೇವೆಗಳನ್ನು ಪರಿಚಯಿಸಿದೆ. ಇದರಲ್ಲಿ ಕಾಲನ್ನು ಆರಾಮದಾಯಕವಾಗಿ ಇರಿಸಿಕೊಳ್ಳುವಂತೆ ಹೆಚ್ಚು ಸ್ಥಳಾವಕಾಶವಿರುವ ಸೀಟ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಹಾಗೇ ಇದರಲ್ಲಿ ಯುಎಸ್ ಬಿ ಪೋರ್ಟ್ಸ್ ಅಳವಡಿಸಿದ್ದು, ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸುವಾಗಲೇ ತಮ್ಮ ಮೊಬೈಲ್ , ಇತರ ಸಾಧನಗಳನ್ನು ಚಾರ್ಜ್ ಮಾಡಬಹುದಾಗಿದೆ. ಇಲ್ಲಿ ‘café akasa’ ದ ಮೂಲಕ ಆಹಾರ ಸೇವೆಯನ್ನು ಒದಗಿಸಲಾಗುತ್ತದೆ. ಇದರಲ್ಲಿ ಹಬ್ಬದ ಮೆನುಗಳು, ಹಾಗೂ ಕೊಂಬುಚಾದಂತಹ ಆಯ್ಕೆಗಳಿವೆ. ಒಟ್ಟಾರೆ ಇಲ್ಲಿ ಆರೋಗ್ಯಕರವಾದ ಸ್ವಾದಿಷ್ಟ ಭೋಜನವನ್ನು ಪ್ರಯಾಣಿಕರಿಗೆ ಒದಗಿಸುತ್ತದೆ. ಹಾಗೇ ಪ್ರಯಾಣಿಕರು ತಮ್ಮ ಜೊತೆ ತಮ್ಮ ಸಾಕು ಪ್ರಾಣಿಗಳನ್ನು ಅವುಗಳ ತೂಕದ ಆಧಾರದ ಮೇಲೆ ಕ್ಯಾಬಿನ್ ಒಳಗೆ ಅಥವಾ ಕಾರ್ಗೋದಲ್ಲಿ ಕರೆದೊಯ್ಯಲು ಅವಕಾಶವಿದೆ. ಹಾಗೇಆಕಾಶಏರ್ ದೃಷ್ಟಿಮಾಂದ್ಯತೆಯಿರುವವರಿಗಾಗಿ ಬ್ರೇಲ್ ನಲ್ಲಿ ತನ್ನ ಸುರಕ್ಷತಾ ಸೂಚನಾಕಾರ್ಡ್ ಮತ್ತು ಆನ್ ಬೋರ್ಡ್ ಮೆನು ಕಾರ್ಡ್ ಪರಿಚಯಿಸಿದೆ. ಪ್ರಯಾಣಿಕರಿಗೆ ಕೈಗೆಟಕುವ ದರಗಳಲ್ಲಿ ಎಲ್ಲವನ್ನು ಒಳಗೊಂಡ ಮತ್ತು ಅಗತ್ಯಕ್ಕೆ ತಕ್ಕಂತೆ ಬದಲಾಯಿಸಬಹುದಾದಂತಹ ರಜಾ ಪ್ಯಾಕೇಜ್ಅನ್ನು ಕೂಡ ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: Air India Flight: ಏರ್ ಇಂಡಿಯಾ ವಿಮಾನ 20 ಗಂಟೆ ವಿಳಂಬ; ಎಸಿ ಇಲ್ಲದೆ ಪ್ರಜ್ಞೆ ತಪ್ಪಿ ಬಿದ್ದ ಪ್ರಯಾಣಿಕರು

ಆಕಾಶ ಏರ್ ನ ನಿರಂತರವಾದ ಕಾರ್ಯ ಚರಣೆ ಸಾಮರ್ಥ್ಯಗಳು ಹಾಗೂ ಪ್ರಯಾಣಿಕರ ಮೆಚ್ಚುಗೆಯ ಮೂಲಕ ಅದು ಭಾರತದ ನಂಬರ್ ಒನ್ ಆಗಿದೆ ಮತ್ತು  ಕಳೆದ 12 ತಿಂಗಳುಗಳಿಂದ 85%ಗಿಂತ ಹೆಚ್ಚಿನ ಸರಾಸರಿ ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಿದ್ದಾರೆ ಎನ್ನಲಾಗಿದೆ.

Continue Reading

ದೇಶ

Nitish Kumar: ಮುಂದಿನ ಸಲ ನಿಮ್ಮೆದುರು ಪ್ರತಿಪಕ್ಷಗಳ ಎಲ್ಲರಿಗೂ ಸೋಲು; ನಿತೀಶ್‌ ಮಾತಿಗೆ ನಕ್ಕ ಮೋದಿ!

Nitish Kumar: ಎನ್‌ಡಿಎ ಮಿತ್ರಪಕ್ಷಗಳ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದರು. ಮೋದಿ ನೇತೃತ್ವದಲ್ಲಿ ಮಾತ್ರ ದೇಶವು ಅಭಿವೃದ್ಧಿ ಹೊಂದಲಿದೆ ಎಂಬುದಾಗಿ ತಿಳಿಸಿದರು. ಇದೇ ವೇಳೆ ಇಂಡಿಯಾ ಒಕ್ಕೂಟಕ್ಕೆ ಟಾಂಗ್‌ ಕೊಟ್ಟ ಅವರು, “ಮುಂದಿನ ಬಾರಿಯೂ ಮೋದಿ ಅವರು ಚುನಾವಣೆಗೆ ನಿಂತರೆ, ಪ್ರತಿಪಕ್ಷಗಳ ಎಲ್ಲರೂ ಸೋಲುತ್ತಾರೆ” ಎಂದರು. ಆಗ ಮೋದಿ ಅವರು ಗಹಗಹಿಸಿ ನಕ್ಕರು.

VISTARANEWS.COM


on

Nitish Kumar
Koo

ನವದೆಹಲಿ: ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾಗಿದ್ದು, ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಇದಕ್ಕೂ ಮೊದಲು ಎನ್‌ಡಿಎ ಪಕ್ಷಗಳ ಸಭೆ ನಡೆದಿದ್ದು, ನರೇಂದ್ರ ಮೋದಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಘೋಷಣೆ ಮಾಡಲಾಯಿತು. ಇನ್ನು ಸಭೆಯ ವೇಳೆ, ನಿತೀಶ್‌ ಕುಮಾರ್‌ ಅವರು ಆಡಿದ ಮಾತಿಗೆ ನರೇಂದ್ರ ಮೋದಿ ಅವರು ಗಹಗಹಿಸಿ ನಕ್ಕಿದ್ದಾರೆ.

“ಮುಂದಿನ ಸಲವೂ ನೀವೇ ಸ್ಪರ್ಧೆಗೆ ನಿಂತರೆ, ಈಗ ಅಲ್ಲಲ್ಲಿ ಗೆಲುವು ಸಾಧಿಸಿರುವ ಇಂಡಿಯಾ ಒಕ್ಕೂಟದ ಯಾವೊಬ್ಬರೂ ಗೆಲ್ಲುವುದಿಲ್ಲ. ಎಲ್ಲರೂ ನಿಮ್ಮೆದುರು ಸೋತು ಹೋಗುತ್ತಾರೆ. ಅವರು ಎಂದಿಗೂ ದೇಶಕ್ಕಾಗಿ ಕೆಲಸ ಮಾಡಿಲ್ಲ. ಅವರಿಂದ ದೇಶಕ್ಕೆ ಯಾವ ಸೇವೆಯೂ ಸಿಕ್ಕಿಲ್ಲ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿಯೇ ದೇಶ ಏಳಿಗೆ ಹೊಂದುತ್ತಿದೆ” ಎಂಬುದಾಗಿ ನಿತೀಶ್‌ ಕುಮಾರ್‌ ಹೇಳಿದರು. ಆಗ ನರೇಂದ್ರ ಮೋದಿ ಅವರು ಗಹಗಹಿಸಿ ನಕ್ಕರು. ಸಭೆಯಲ್ಲಿದ್ದ ಎಲ್ಲರೂ ನಗೆಗಡಲಲ್ಲಿ ತೇಲಾಡಿದರು.

ಮೋದಿಯ ಪಾದ ಮುಟ್ಟಿ, ನಮಸ್ಕರಿಸಲು ಮುಂದಾದ ನಿತೀಶ್

ಸಂಸದೀಯ ಪಕ್ಷದ ಸಭೆಯಲ್ಲಿ ರಾಜನಾಥ್‌ ಸಿಂಗ್‌ ಅವರು ನರೇಂದ್ರ ಮೋದಿ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕ ಎಂಬುದಾಗಿ ಪ್ರಸ್ತಾಪಿಸಿದರು. ಇದಕ್ಕೆ, ಎನ್‌ಡಿಎ ಮೈತ್ರಿಕೂಟದ ಸದಸ್ಯರೆಲ್ಲರೂ ಚಪ್ಪಾಳೆ ತಟ್ಟಿ ಬೆಂಬಲ ವ್ಯಕ್ತಪಡಿಸಿದರು. ಇದಾದ ಬಳಿಕ ನಿತೀಶ್‌ ಕುಮಾರ್‌ ಅವರು ನರೇಂದ್ರ ಮೋದಿ ಅವರ ಪಾದ ಮುಟ್ಟಿ ನಮಸ್ಕರಿಸಲು ಮುಂದಾದರು. ಆಗ ಮೋದಿ ಅವರು ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ನರೇಂದ್ರ ಮೋದಿ ಅವರಿಗೆ 73 ವರ್ಷ ವಯಸ್ಸಾಗಿದ್ದರೆ, ನಿತೀಶ್‌ ಕುಮಾರ್‌ ಅವರು ವಯಸ್ಸು ಕೂಡ 73 ವರ್ಷವಾಗಿದೆ. ಇಬ್ಬರೂ ಸಮಕಾಲೀನ ನಾಯಕರಾಗಿದ್ದಾರೆ.‌

ಸಭೆಯಲ್ಲಿ ಮಾತನಾಡಿದ ನರೇಂದ್ರ ಮೋದಿ ಅವರು ನಿತೀಶ್‌ ಕುಮಾರ್‌, ಪವನ್‌ ಕಲ್ಯಾಣ್‌ ಸೇರಿ ಹಲವರನ್ನು ಹೊಗಳಿದರು. ಯೋಗಿ ಆದಿತ್ಯನಾಥ್‌ ಅವರ ಬೆನ್ನನ್ನೂ ತಟ್ಟಿದರು. ಇದೇ ವೇಳೆ, ದಕ್ಷಿಣ ಭಾರತದ ಫಲಿತಾಂಶದ ಕುರಿತು ಕೂಡ ಮೋದಿ ಪ್ರಸ್ತಾಪಿಸಿದರು.

“ದಕ್ಷಿಣ ಭಾರತದಲ್ಲಿ ಎನ್‌ಡಿಎ ಬುನಾದಿ ಭದ್ರವಾಗಿದ್ದು, ಹೊಸ ರಾಜಕೀಯಕ್ಕೆ ಇದು ನಾಂದಿಯಾಗಿದೆ. ಕರ್ನಾಟಕ ಹಾಗೂ ತೆಲಂಗಾಣವನ್ನೇ ತೆಗೆದುಕೊಳ್ಳಿ, ಇತ್ತೀಚೆಗೆ ಬೇರೆ ಪಕ್ಷಗಳ ಸರ್ಕಾರಗಳು ಅಲ್ಲಿ ಆಡಳಿತಕ್ಕೆ ಬಂದಿವೆ. ಆದರೆ, ಜನರು ಭ್ರಮೆಯಿಂದ ಹೊರಬಂದು ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿದ್ದಾರೆ. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಜನ ಎನ್‌ಡಿಎ ಮೈತ್ರಿಕೂಟವನ್ನು ಸ್ವೀಕರಿಸಿದ್ದಾರೆ. ಇದು ಎನ್‌ಡಿಎ ಮೇಲೆ ಜನ ಇಟ್ಟಿರುವ ವಿಶ್ವಾಸಕ್ಕೆ ಸಾಕ್ಷಿಯಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: Narendra Modi: ರಾಷ್ಟ್ರಪತಿಯನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ; ಈಗ ಹಂಗಾಮಿ ಪ್ರಧಾನಿ!

Continue Reading
Advertisement
assault case
ಕ್ರೈಂ5 mins ago

Assault Case: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ; ಯುವಕನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ

Narendra Modi
ದೇಶ39 mins ago

Narendra Modi: ಭಾನುವಾರ ಸಂಜೆ 7.15ಕ್ಕೆ ಮೋದಿ ಪ್ರಮಾಣವಚನ‌; ಹಲವು ಸಂಸದರಿಗೂ ಮಂತ್ರಿ ಭಾಗ್ಯ!

Niveditha Gowda
ಸಿನಿಮಾ45 mins ago

Niveditha Gowda : ಇನ್​ಸ್ಟಾಗ್ರಾಮ್​ನಲ್ಲಿ ಚಂದನ್ ಶೆಟ್ಟಿ ಅನ್​ಫಾಲೋ ಮಾಡಿದ ನಿವೇದಿತ ಗೌಡ

UG Neet 2024
ಕರ್ನಾಟಕ47 mins ago

NEET UG 2024: ಯುಜಿ ನೀಟ್: ರೋಲ್ ನಂಬರ್ ದಾಖಲಿಸಲು ಸದ್ಯದಲ್ಲೇ ಅವಕಾಶ

Niveditha Gowda
ಪ್ರಮುಖ ಸುದ್ದಿ1 hour ago

Niveditha Gowda : ಡಿವೋರ್ಸ್​ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ನಿವೇದಿತಾ ಗೌಡ, ಅವರ ಇನ್​ಸ್ಟಾಗ್ರಾಮ್ ಸಂದೇಶ ಇಲ್ಲಿದೆ

Hamare Baarah
ಸಿನಿಮಾ1 hour ago

Hamare Baarah: ಮುಸ್ಲಿಂ ಮಹಿಳೆಯರ ಕುರಿತ ಹಮಾರೆ ಬಾರಾ ಸಿನಿಮಾ ರಿಲೀಸ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್!

Job News
ಕರ್ನಾಟಕ1 hour ago

Job News: ನಿಗಮ-ಮಂಡಳಿ ನೇಮಕಾತಿ; 684 ಹುದ್ದೆವಾರು ಪರಿಷ್ಕೃತ ಅಂಕಪಟ್ಟಿ ಪ್ರಕಟ

T20 World Cup
ಪ್ರಮುಖ ಸುದ್ದಿ2 hours ago

T20 World Cup : ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ ಅಮೆರಿಕ ತಂಡ

All achievements in life are easy if there is Guru's grace says Sri Satyatmatirtha Swamiji
ಮೈಸೂರು2 hours ago

Mysore News: ಗುರುಗಳ ಅನುಗ್ರಹವಿದ್ದರೆ ಜೀವನದಲ್ಲಿ ಎಲ್ಲ ಸಾಧನೆಗಳು ಸುಲಭ; ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

Akasa Air
ದೇಶ2 hours ago

Akasa Air: ಗೋರಖ್​ಪುರದಿಂದ ದೆಹಲಿ ಮತ್ತು ಬೆಂಗಳೂರಿಗೆ ಆಕಾಶ ಏರ್ ನೇರ ವಿಮಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌