Mumbai Accident : ನಿರ್ಮಾಣ ಹಂತದ ಕಟ್ಟದಿಂದ ಆಟೋ ಮೇಲೆ ಕಬ್ಬಿಣದ ರಾಡ್​ ಬಿದ್ದು ತಾಯಿ, ಮಗಳ ದುರ್ಮರಣ - Vistara News

ದೇಶ

Mumbai Accident : ನಿರ್ಮಾಣ ಹಂತದ ಕಟ್ಟದಿಂದ ಆಟೋ ಮೇಲೆ ಕಬ್ಬಿಣದ ರಾಡ್​ ಬಿದ್ದು ತಾಯಿ, ಮಗಳ ದುರ್ಮರಣ

ಮಗಳನ್ನು ಶಾಲೆಯಿಂದ ಕರೆದುಕೊಂಡು ಬರುತ್ತಿದ್ದ ವೇಳೆ ಆಟೋದ ಮೇಲೆ(Mumbai Accident) ಕಬ್ಬಿಣದ ಪೈಪ್​ ಬಿದ್ದಿತ್ತು.

VISTARANEWS.COM


on

An iron rod fell on the car from the construction stage and the mother and daughter died
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಕಟ್ಟಡಕ್ಕೆ ಸ್ಲ್ಯಾಬ್​ ಹಾಕಲು ಬಳಸುವ ಕಬ್ಬಿಣದ ಪೈಪ್​ ಆಟೊ ರಿಕ್ಷಾವೊಂದರ ಮೇಲೆ ಬಿದ್ದ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಹಾಗೂ ಮಗಳು ಮೃತಪಟ್ಟ ಘಟನೆ (Mumbai Accident) ಮುಂಬಯಿಯ ಜೋಗೇಶ್ವರಿಯಲ್ಲಿ ನಡೆದಿದೆ. ಮಗಳನ್ನು ಸಂಜೆಯ ವೇಳೆ ಶಾಲೆಯಿಂದ ಕರೆದುಕೊಂಡು ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರನ್ನು 28 ವರ್ಷದ ಶಮಾ ಬಾನೊ ಆಸಿಫ್​ ಶೇಖ್ ಹಾಗೂ ಅಯಾತ್​ ಎಂದು ಗುರುತಿಸಲಾಗಿದೆ.

ಸ್ಥಳೀಯ ಪೊಲೀಸರ ಪ್ರಕಾರ ಸಂಜೆ 4.15ಕ್ಕೆ ಘಟನೆ ನಡೆದಿದೆ. ಶಮಾ ಬಾನೊ ಅವರು ಫಾರೂಕ್​ ಹೈಸ್ಕೂಲ್​ನಲ್ಲಿ ಕಲಿಯುತ್ತಿರುವ ತಮ್ಮ ಪುತ್ರಿ ಆಯಾತ್​ಳನ್ನು ಕರೆದುಕೊಂಡು ಬರುತ್ತಿದ್ದ ವೇಳೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಐದನೇ ಮಹಡಿಯಿಂದ ಕಬ್ಬಿಣದ ಪೈಪ್​ ಬಿದ್ದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರಿಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದರೂ ಶಮಾ ಮಾರ್ಗಮಧ್ಯೆಯೇ ಮೃತಪಟ್ಟಿದ್ದರು. ಆಯಾತ್​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ : ದಿಗ್ವಿಜಯ್ ಸಿಂಗ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತ, ಬೈಕರ್‌ಗೆ ಚಿಕಿತ್ಸೆ ಕೊಡಿಸಿದ ಮಾಜಿ ಸಿಎಂ

ಮಹಿಳೆಯ ಪತಿಯು ಜೋಗೇಶ್ವರಿ ಪೂರ್ವದಲ್ಲಿ ಟೈಲರಿಂಗ್​ ವೃತ್ತಿ ಮಾಡುತ್ತಿದ್ದರು. ಸ್ಲಮ್​ ಪುನರ್ವಸತಿ ಪ್ರಾಧಿಕಾರದಿಂದ ಕಟ್ಟಡ ಕಾಮಗಾರಿ ನಡೆಯುತ್ತಿತ್ತು. ಘಟನೆಗೆ ಯಾರು ಜವಾಬ್ದಾರರು ಎಂಬುದನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Darshanam Mogulaiah: 2 ವರ್ಷದ ಹಿಂದೆ ಪದ್ಮಶ್ರೀ ಪಡೆದ ಸಾಧಕ ಈಗ ಹೊಟ್ಟೆಪಾಡಿಗಾಗಿ ಕೂಲಿ ಕಾರ್ಮಿಕ!

Darshanam Mogulaiah: ಸಂಗೀತ ವಾದನವಾದ ಕಿನ್ನೇರವನ್ನು ನುಡಿಸುವಲ್ಲಿ, ಆ ವಾದನಕ್ಕೆ ರಾಷ್ಟ್ರೀಯ ಗೌರವ ಸಿಗುವಲ್ಲಿ ದರ್ಶನಂ ಮೊಗುಳಯ್ಯ ಅವರ ಪಾತ್ರ ನಿರ್ಣಾಯಕವಾಗಿದೆ. ಇದೇ ಕಾರಣಕ್ಕಾಗಿ ಕೇಂದ್ರ ಸರ್ಕಾರವು 2022ರಲ್ಲಿ ಇವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಅದೇ ವರ್ಷ ದೇಶಾದ್ಯಂತ ಸುದ್ದಿಯಾದ ಇವರಿಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನವೂ ದೊರೆತಿತ್ತು. ಆದರೆ, ಈಗ ದರ್ಶನಂ ಮೊಗುಳಯ್ಯ ಅವರು ಕೂಲಿ ಕಾರ್ಮಿಕರಾಗಿ ದುಡಿಯುವ ಅನಿವಾರ್ಯತೆಗೆ ಸಿಲುಕಿದ್ದಾರೆ.

VISTARANEWS.COM


on

Darshanam Mogulaiah
Koo

ಹೈದರಾಬಾದ್: ಭಾರತದಲ್ಲಿ ಕಲಾವಿದರಿಗೆ, ಸಾಧಕರಿಗೆ ಒಂದೋ ಅತಿಯಾದ ಗೌರವ ಸಿಗುತ್ತದೆ. ಇಲ್ಲದಿದ್ದರೆ, ಅವರ ಜೀವನವೇ ಸಂಕಷ್ಟಕ್ಕೆ ಸಿಲುಕಿದರೂ ಅವರು ಮುಖ್ಯವಾಹಿನಿಯಲ್ಲಿ ಇರುವುದಿಲ್ಲ. ಅವರಿಗೆ ಸಹಾಯಹಸ್ತ ಚಾಚುವುದಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಎರಡು ವರ್ಷಗಳ ಹಿಂದಷ್ಟೇ ಪದ್ಮಶ್ರೀ ಪ್ರಶಸ್ತಿ (Padma Shri Award) ಪಡೆದ ತೆಲಂಗಾಣದ (Telangana) ಸಾಧಕ ದರ್ಶನಂ ಮೊಗುಳಯ್ಯ (Darshanam Mogulaiah) ಅವರು ಈಗ ಹೊಟ್ಟೆಪಾಡಿಗಾಗಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಈ ಫೋಟೊಗಳು ಹಾಗೂ ವಿಡಿಯೊಗಳು (Viral News) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಹೌದು, ಸಂಗೀತ ವಾದನವಾದ ಕಿನ್ನೇರವನ್ನು ನುಡಿಸುವಲ್ಲಿ, ಆ ವಾದನಕ್ಕೆ ರಾಷ್ಟ್ರೀಯ ಗೌರವ ಸಿಗುವಲ್ಲಿ ದರ್ಶನಂ ಮೊಗುಳಯ್ಯ ಅವರ ಪಾತ್ರ ನಿರ್ಣಾಯಕವಾಗಿದೆ. ಇದೇ ಕಾರಣಕ್ಕಾಗಿ ಕೇಂದ್ರ ಸರ್ಕಾರವು 2022ರಲ್ಲಿ ಇವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಆಗ ರಾಷ್ಟ್ರಪತಿಯಾಗಿದ್ದ ರಾಮನಾಥ್‌ ಕೋವಿಂದ್‌ ಅವರು ದರ್ಶನಂ ಮೊಗುಳಯ್ಯ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದರು. ಇದಾದ ಬಳಿಕ ಇವರು ಭಾರತದಾದ್ಯಂತ ಸುದ್ದಿಯಾಗಿದ್ದರು. ಜನರಿಂದಲೂ ಮೆಚ್ಚುಗೆಗಳ ಮಹಾಪೂರವೇ ಹರಿದುಬಂದಿತ್ತು.

ಈಗ ದಿನಗೂಲಿ ಕಾರ್ಮಿಕ

ಪದ್ಮಶ್ರೀ ಪ್ರಶಸ್ತಿ ಪಡೆದ ದರ್ಶನಂ ಮೊಗುಳಯ್ಯ ಅವರು ಈಗ ಅಂದರೆ 73ನೇ ವಯಸ್ಸಿನಲ್ಲಿ ಹೈದರಾಬಾದ್ ಬಳಿಯಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಕುಟುಂಬಕ್ಕೆ ಇವರೇ ಆಧಾರ ಸ್ತಂಭವಾಗಿದ್ದು, ಮೂರು ಹೊತ್ತಿನ ಊಟಕ್ಕಾಗಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಇವರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಫೋಟೊಗಳು ಹಾಗೂ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಲೇ, ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಬ್ಬ ಸಾಧಕ ಇಳಿ ವಯಸ್ಸಿನಲ್ಲಿ ಊಟಕ್ಕಾಗಿ ಕೂಲಿ ಕೆಲಸ ಮಾಡಬೇಕಾ ಎಂದು ಜನ ಪ್ರಶ್ನಿಸಿದ್ದಾರೆ.

ಸರ್ಕಾರ ಕೊಟ್ಟ ಕೋಟಿ ರೂ. ಏನಾಯ್ತು?

ದರ್ಶನಂ ಮೊಗುಳಯ್ಯ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡುತ್ತಲೇ ತೆಲಂಗಾಣ ಸರ್ಕಾರವು ಅವರಿಗೆ ಒಂದು ಕೋಟಿ ರೂ. ಪ್ರೋತ್ಸಾಹ ಧನ ನೀಡಿತ್ತು. ಆಗ ಸಿಎಂ ಆಗಿದ್ದ ಕೆ.ಚಂದ್ರಶೇಖರ್‌ ರಾವ್‌ ಅವರು ಇವರಿಗೆ ಒಂದು ನಿವೇಶನವನ್ನೂ ಮಂಜೂರು ಮಾಡಿದ್ದರು. ಆದರೆ, ಸರ್ಕಾರ ಕೊಟ್ಟ ಪ್ರೋತ್ಸಾಹಧನದಲ್ಲಿ ಒಂದಷ್ಟು ಹಣವನ್ನು ಮಗಳ ಮದುವೆಗೆ ಖರ್ಚು ಮಾಡಿದ ಅವರು, ಉಳಿದ ಹಣವನ್ನು ಸಾಲ ತೀರಿಸಲು, ಕುಟುಂಬದ ತುರ್ತು ಸಂದರ್ಭಗಳಿಗೆ ಬಳಸಿದ್ದಾರೆ. ಹಾಗಾಗಿ, ಅವರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಆದರೂ, ಇಂತಹ ಸಾಧಕನಿಗೆ ಸರ್ಕಾರವು ನೆರವು ನೀಡಬೇಕು ಎಂದು ಜನ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Lok Sabha Election: ತರಕಾರಿ ಮಾರಿ ಪದ್ಮಶ್ರೀ ಪುರಸ್ಕೃತ ಅಭ್ಯರ್ಥಿ ಚುನಾವಣೆ ಪ್ರಚಾರ! ಯಾರಿವರು?

Continue Reading

ದೇಶ

Rachita Taneja: ಭಾರತದ ಕಾರ್ಟೂನಿಸ್ಸ್ ರಚಿತಾ ತನೇಜಾಗೆ ಕೋಫಿ ಅನ್ನಾನ್‌ ಪ್ರಶಸ್ತಿ ಗರಿ

Rachita Taneja: ಅಂತಾರಾಷ್ಟ್ರೀಯ ಮಾಧ್ಯಮ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಭಾರತದ ರಚಿತಾ ತನೇಜಾ ಹಾಗೂ ಜುಂಜಿ ಅವರಿಗೆ ಕೋಫಿ ಅನ್ನಾನ್‌ ಕರೇಜ್‌ ಇನ್‌ ಕಾರ್ಟೂನಿಂಗ್‌ ಅವಾರ್ಡ್‌ ನೀಡಲಾಗಿದೆ. ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಪ್ರಶಸ್ತಿ ಪಡೆದವರು ಯಾರು, ಅವರ ಹಿನ್ನೆಲೆ ಏನು ಎಂಬುದು ಸೇರಿ ಹಲವು ಮಾಹಿತಿ ಇಲ್ಲಿದೆ.

VISTARANEWS.COM


on

Rachita Taneja
Koo

ನವದೆಹಲಿ: ಭಾರತದ ಖ್ಯಾತ ವ್ಯಂಗ್ಯ ಚಿತ್ರ ಕಲಾವಿದೆ, ಮೊನಚು ಕಾರ್ಟೂನ್‌ಗಳ ಮೂಲಕ ದೇಶಾದ್ಯಂತ ಗಮನ ಸೆಳೆದಿರುವ ರಚಿತಾ ತನೇಜಾ (Rachita Taneja) ಅವರಿಗೆ ಪ್ರತಿಷ್ಠಿತ ‘ಕೋಫಿ ಅನ್ನಾನ್‌ ಕರೇಜ್‌ ಇನ್‌ ಕಾರ್ಟೂನಿಂಗ್‌ ಅವಾರ್ಡ್‌’ (Kofi Annan Courage in Cartooning Award) ಲಭಿಸಿದೆ. ರಚಿತಾ ತನೇಜಾ ಹಾಗೂ ಹಾಂಕಾಂಗ್‌ನ ಜುಂಜಿ ಅವರಿಗೆ (Zunzi) ಅವರಿಗೆ ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಅಂತಾರಾಷ್ಟ್ರೀಯ ಮಾಧ್ಯಮ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಭಾರತದ ರಚಿತಾ ತನೇಜಾ ಹಾಗೂ ಜುಂಜಿ ಅವರಿಗೆ ಪ್ರಶಸ್ತಿ ನೀಡಲಾಗಿದೆ. ಮೊನಚು ಕಾರ್ಟೂನ್‌ಗಳ ಮೂಲಕವೇ ಮಾಧ್ಯಮ ಸ್ವಾತಂತ್ರ್ಯವನ್ನು ಎತ್ತಿಹಿಡಿದ, ಜನರಲ್ಲಿ ಅರಿವು ಮೂಡಿಸಿದ ಹಿನ್ನೆಲೆಯಲ್ಲಿ ಇವರಿಗೆ ಪ್ರಶಸ್ತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಮಾಧ್ಯಮ ಸ್ವಾತಂತ್ರ್ಯದ ಸೂಚ್ಯಂಕದಲ್ಲಿ ಭಾರತವು 180 ರಾಷ್ಟ್ರಗಳ ಪಟ್ಟಿಯಲ್ಲಿ 161ನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಹಾಂಕಾಂಗ್‌ 140ನೇ ಸ್ಥಾನದಲ್ಲಿದೆ.

ಯಾರಿವರು ರಚಿತಾ ತನೇಜಾ?

ರಚಿತಾ ತನೇಜಾ ಅವರು ಕಾರ್ಟೂನಿಸ್ಟ್‌ ಆಗಿದ್ದು, ಸ್ಯಾನಿಟರಿ ಪ್ಯಾನೆಲ್ಸ್‌ ಎಂಬ ವೆಬ್‌ಕಾಮಿಕ್‌ ಆನ್‌ಲೈನ್‌ ವೇದಿಕೆ ಮೂಲಕವೇ ವ್ಯಂಗ್ಯಚಿತ್ರಗಳನ್ನು ಪ್ರಕಟಿಸುತ್ತಾರೆ. ಕಿರುಕುಳ, ಹೆಣ್ಣುಮಕ್ಕಳ ಮುಟ್ಟು, ಸರ್ವಾಧಿಕಾರ ಸೇರಿ ಹಲವು ವಿಷಯಗಳ ಕುರಿತು ಇವರ ಕಾರ್ಟೂನ್‌ಗಳು ಚರ್ಚೆಯನ್ನು ಹುಟ್ಟುಹಾಕಿವೆ. ಇವರ ವಿರುದ್ಧ ಎಬಿವಿಪಿ ಕೇಸ್‌ ಕೂಡ ದಾಖಲಿಸಿದೆ. ನ್ಯಾಯಾಂಗ ನಿಂದನೆಯ ಪ್ರಕರಣದ ವಿಚಾರಣೆಯೂ ನಡೆಯುತ್ತಿದ್ದು, ಪ್ರಕರಣ ಸಾಬೀತಾದರೆ ಇವರನ್ನು ಜೈಲಿಗೆ ಕಳುಹಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

“ಮುಖ್ಯವಾಹಿನಿಯಲ್ಲಿರುವ ಪತ್ರಕರ್ತರು ಪಾರದರ್ಶಕವಾಗಿ ಕೆಲಸ ಮಾಡಲು ಆಗದಿದ್ದರೆ ಅಥವಾ ಅವರು ಆಡಳಿತ ಪಕ್ಷದಿಂದ ಪ್ರಭಾವಿತರಾಗಿದ್ದರೆ, ಅಂತಹ ಸಂದರ್ಭದಲ್ಲಿ ಕಾರ್ಟೂನಿಸ್ಟ್‌ಗಳು ಮಾಧ್ಯಮ ಸ್ವಾತಂತ್ರ್ಯವನ್ನು ಮುನ್ನಡೆಸಬೇಕು, ನಿಷ್ಪಕ್ಷಪಾತವಾಗಿ ವ್ಯಂಗ್ಯಚಿತ್ರಗಳನ್ನು ಪ್ರಕಟಿಸಬೇಕು” ಎಂಬುದಾಗಿ ಪ್ರಶಸ್ತಿ ಸ್ವೀಕರಿಸಿದ ಬಳಿಕ ರಚಿತಾ ತನೇಜಾ ಹೇಳಿದರು. ಹಾಂಕಾಂಗ್‌ನ ಜುಂಜಿ ಅವರು ಪತ್ರಿಕೆಯೊಂದರಲ್ಲಿ ಕಾರ್ಟೂನಿಸ್ಟ್‌ ಆಗಿ ಕೆಲಸ ಮಾಡುತ್ತಿದ್ದರು. ಆದರೆ, ಚೀನಾ ನೂತನ ಭದ್ರತಾ ಕಾನೂನುಗಳನ್ನು ಅಳವಡಿಸಿಕೊಂಡ ಬಳಿಕ ಪತ್ರಿಕೆಯು ಇವರನ್ನು ಕೆಲಸದಿಂದ ವಜಾಗೊಳಿಸಿತ್ತು.

ಇದನ್ನೂ ಓದಿ: Amitabh Bachchan: ಅಮಿತಾಭ್‌ ಬಚ್ಚನ್, ಎ ಆರ್ ರೆಹಮಾನ್‌ ಸೇರಿ ಹಲವರಿಗೆ ʻದೀನನಾಥ್ ಮಂಗೇಶ್ಕರ್ ಪ್ರಶಸ್ತಿʼ ಗೌರವ

Continue Reading

ಪ್ರಮುಖ ಸುದ್ದಿ

Rahul Gandhi : ಮಹಾತ್ಮ ರಾಹುಲ್​, ಕುತಂತ್ರಿ ಗಾಂಧೀಜಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Rahul Gandhi : ನೀವು ಬೇಕಾರೆ ನನ್ನ ಮಾತುಗಳನ್ನು ಬರೆದಿಟ್ಟುಕೊಳ್ಳಿ. ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ಮುಂದಿನ ಮಹಾತ್ಮ ಗಾಂಧಿಯಾಗಿ ಹೊರಹೊಮ್ಮಲಿದ್ದಾರೆ. ಗಾಂಧೀಜಿ ಸ್ವಲ್ಪ ಕುತಂತ್ರಿಯಾಗಿದ್ದರು. ಆದರೆ, ರಾಹುಲ್ ಸಂಪೂರ್ಣವಾಗಿ ಮುಕ್ತ ಮತ್ತು ಶುದ್ಧ ಹೃದಯದವರು” ಎಂದು ರಾಜ್​​ಗುರು ಮೇ 1 ರಂದು ರಾಜ್​ಕೋಟ್​ನಲ್ಲಿ ನಡೆದ ಕಾಂಗ್ರೆಸ್​​ ಸಭೆಯಲ್ಲಿ ಹೇಳಿದರು.

VISTARANEWS.COM


on

Rahul Gandhi
Koo

ನವದೆಹಲಿ: ರಾಹುಲ್ ಗಾಂಧಿ (Rahul Gandhi) ಭಾರತ ದೇಶದ ಮುಂದಿನ ‘ಮಹಾತ್ಮ’ ಆಗಲು ಸಜ್ಜಾಗಿದ್ದಾರೆ ಎಂದು ಗುಜರಾತ್ ಕಾಂಗ್ರೆಸ್ ಮುಖಂಡ ಇಂದ್ರನಿಲ್ ರಾಜ್​ಗುರು ನೀಡಿದ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ರಾಹುಲ್ ಮಹಾತ್ಮ ಗಾಂಧಿಗಿಂತಲೂ ಗುಣದಲ್ಲಿ ಒಂದು ಹೆಜ್ಜೆ ಮುಂದು. ರಾಹುಲ್ “ಮುಕ್ತ” ಮತ್ತು “ಶುದ್ಧ ಹೃದಯದವರು”. ಆದರೆ ಗಾಂಧೀಜಿ ಸ್ವಲ್ಪ “ಕುತಂತ್ರಿ” ಯಾಗಿದ್ದರು ಎಂದು ಹೇಳಿಕೆ ನೀಡಿದ್ದಾರೆ.

ನೀವು ಬೇಕಾದರೆ ನನ್ನ ಮಾತುಗಳನ್ನು ಬರೆದಿಟ್ಟುಕೊಳ್ಳಿ. ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ಮುಂದಿನ ಮಹಾತ್ಮ ನಾಗಿ ಹೊರಹೊಮ್ಮಲಿದ್ದಾರೆ. ಗಾಂಧೀಜಿ ಸ್ವಲ್ಪ ಕುತಂತ್ರಿಯಾಗಿದ್ದರು. ಆದರೆ, ರಾಹುಲ್ ಸಂಪೂರ್ಣವಾಗಿ ಮುಕ್ತ ಮತ್ತು ಶುದ್ಧ ಹೃದಯದವರಾಗಿದ್ದಾರೆ ಎಂದು ರಾಜ್​​ಗುರು ಮೇ 1 ರಂದು ರಾಜ್​ಕೋಟ್​ನಲ್ಲಿ ನಡೆದ ಕಾಂಗ್ರೆಸ್​​ ಸಭೆಯಲ್ಲಿ ಹೇಳಿದ್ದರೆ. ಮಾಜಿ ಶಾಸಕರಾಗಿರುವ ರಾಜ್​ಗುರ್​, ರಾಹುಲ್ ಗಾಂಧಿ ದೇಶದ ಮಹಾನ್​ “ನಾಯಕ” ಎಂಬುದಾಗಿ ಬಣ್ಣಿಸಿದ್ದಾರೆ.

ಕೆಲವು ಜನರು ಅವರನ್ನು ಪಪ್ಪು (ಪೆದ್ದ) ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ. ಆದರೆ ದೇಶವು ಈಗ ಅವರನ್ನು ತನ್ನ ನಾಯಕನಾಗಿ ಸ್ವೀಕರಿಸಿದೆ ಎಂದು ರಾಜ್​ಗುರು ಹೇಳಿದ್ದಾರೆ.

ಬಿಜೆಪಿ ಪ್ರತಿಕ್ರಿಯೆ ಏನು?

ಕಾಂಗ್ರೆಸ್ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ, ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸುವ ಮೂಲಕ ಜನರು ಮಹಾತ್ಮ ಗಾಂಧಿ ವಿರುದ್ಧದ ಹೇಳಿಕೆ ಪ್ರತಿಕಾರ ತೀರಿಸಬೇಕು ಎಂದು ಕರೆ ಕೊಟ್ಟಿದೆ.

ಇದನ್ನೂ ಓದಿ: 2026ರಲ್ಲಿ ಭಾರತ ಪೀಸ್‌ ಪೀಸ್‌ ಆಗುತ್ತದೆ ಎಂದ ಪಾಕ್‌ ಮಾಜಿ ಸಂಸದ; ಮೋದಿ ಹಿಂದುತ್ವವೂ ಪತನ ಎಂದು ಹೇಳಿಕೆ!

“ಗಾಂಧೀಜಿ ನಮ್ಮ ರಾಷ್ಟ್ರದ ಪಿತಾಮಹ ಮತ್ತು ನಮ್ಮನ್ನು ಸ್ವಾತಂತ್ರ್ಯದ ಕಡೆಗೆ ನಮ್ಮನ್ನು ಕರೆದೊಯ್ದವರು. ಇಂತಹ ಹೇಳಿಕೆಗಳಿಗಾಗಿ ಭಾರತ ಮತ್ತು ಗುಜರಾತ್ ಜನರು ಕಾಂಗ್ರೆಸ್ ಅನ್ನು ಕ್ಷಮಿಸುವುದಿಲ್ಲ. ಈ ಕೋಪವು ಚುನಾವಣಾ ಫಲಿತಾಂಶದಲ್ಲಿ ಪ್ರತಿಫಲಿಸುತ್ತದೆ” ಎಂದು ಗುಜರಾತ್ ಬಿಜೆಪಿ ಘಟಕದ ಉಪಾಧ್ಯಕ್ಷ ಭರತ್ ಬೋಘರಾ ಹೇಳಿದ್ದಾರೆ.

ರಾಜ್​ಗುರು ಸ್ಪಷ್ಟನೆ ಏನು?

ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಜ್​ಗುರು, ಅವರು ಇತಿಹಾಸ ಪುಸ್ತಕದಲ್ಲಿ “ಕುತಂತ್ರ” ಎಂಬ ಪದವನ್ನು ಮಹಾತ್ಮರಿಗೆ ಬಳಸಲಾಗಿದೆ ಎಂದು ಹೇಳಿದೆ. “ಕುತಂತ್ರ” ಎಂದರೆ ಅವರು ನಿಜವಾಗಿಯೂ “ಬುದ್ಧಿವಂತರು” ಎಂದು ನಾನು ಹೇಳಿಕೆ ನೀಡಿದ್ದೆ ಎಂಬುದಾಗಿ ರಾಜ್​ಗುರು ಹೇಳಿದ್ದಾರೆ.

ನಾನು ಗಾಂಧೀಜಿಗೆ ಸಂಬಂಧಿಸಿದ ಅನೇಕ ಇತಿಹಾಸ ಪುಸ್ತಕಗಳನ್ನು ಓದಿದ್ದೇನೆ ಮತ್ತು ಅಂತಹ ಒಂದು ಪುಸ್ತಕದಲ್ಲಿ ಕುತಂತ್ರ ಎಂಬ ಉಲ್ಲೇಖವಿದೆ. ನಾನು ನನ್ನ ಸ್ವಂತ ಪದಗಳನ್ನು ಸೇರಿಸಿಲ್ಲ. ನಾನು ರಾಹುಲ್ ಗಾಂಧಿಯನ್ನು ‘ಮುಂದಿನ ಮಹಾತ್ಮ’ ಎಂದು ಕರೆದಿದ್ದೇನೆ. ಏಕೆಂದರೆ ಇಂದು, ಮಹಾತ್ಮ ಗಾಂಧಿ ಬ್ರಿಟಿಷರ ವಿರುದ್ಧ ಹೋರಾಡಿದಂತೆಯೇ ಅವರು ಮಾತ್ರ ಬಿಜೆಪಿ ವಿರುದ್ಧ ಹೋರಾಡುತ್ತಿದ್ದಾರೆ. ಬಿಜೆಪಿ ಭಾರತದ ಪ್ರಜಾಪ್ರಭುತ್ವವನ್ನು ನಾಶಪಡಿಸಲು ಪ್ರಯತ್ನಿಸುತ್ತಿದೆ” ಎಂದು ಮಾಜಿ ಹೇಳಿದರು.

Continue Reading

ದೇಶ

2026ರಲ್ಲಿ ಭಾರತ ಪೀಸ್‌ ಪೀಸ್‌ ಆಗುತ್ತದೆ ಎಂದ ಪಾಕ್‌ ಮಾಜಿ ಸಂಸದ; ಮೋದಿ ಹಿಂದುತ್ವವೂ ಪತನ ಎಂದು ಹೇಳಿಕೆ!

ಫೈಸಲ್‌ ರಾಜಾ ಅಬಿದಿ ಎಂಬ ಪಾಕಿಸ್ತಾನದ ಮಾಜಿ ಸಂಸದನು ಭಾರತದ ಕುರಿತು ದುರಹಂಕಾರದ ಮಾತುಗಳನ್ನಾಡಿದ್ದಾನೆ. “ಭಾರತದ ಸಂಸತ್ತಿನಲ್ಲಿ ಅಖಂಡ ಭಾರತ ಕಲ್ಪನೆಯ ನಕ್ಷೆ ಹಾಕಲಾಗಿದೆ. ಈ ನಕ್ಷೆಯಲ್ಲಿ ನೇಪಾಳ, ಶ್ರೀಲಂಕಾ, ಭೂತಾನ್‌ ಹಾಗೂ ಪಾಕಿಸ್ತಾನವೂ ಸೇರಿದೆ. ಆದರೆ, ಒಂದು ಮಾತು ನೆನಪಿರಲಿ. 2026ರ ನವೆಂಬರ್‌ನಲ್ಲಿ ಭಾರತವು ಚೂರು ಚೂರಾಗುತ್ತದೆ” ಎಂದು ಟಿವಿ ಸಂದರ್ಶನದ ವೇಳೆ ಹೇಳಿದ್ದಾನೆ. ಈ ವಿಡಿಯೊ ಈಗ ವೈರಲ್‌ ಆಗಿದೆ.

VISTARANEWS.COM


on

Faisal Raza Abidi
Koo

ಇಸ್ಲಾಮಾಬಾದ್:‌ ಅಸಮರ್ಥ ನಾಯಕತ್ವ, ಉಗ್ರರ ಪೋಷಣೆ, ರಾಜಕೀಯ ಅರಾಜಕತೆ, ಧಾರ್ಮಿಕ ಮೂಲಭೂತವಾದ, ಸೇನೆಯ ಸರ್ವಾಡಳಿತ ಸೇರಿ ಹಲವು ಕಾರಣಗಳಿಂದಾಗಿ ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನವು ಹಣಕಾಸು ನೆರವಿಗಾಗಿ ಅಂತಾರಾಷ್ಟ್ರೀಯ ಸಂಸ್ಥೆಗಳ ಎದುರು ಭಿಕ್ಷಾ ಪಾತ್ರೆ ಹಿಡಿದು ನಿಂತಿದೆ. ಇಷ್ಟಿದ್ದರೂ ಅಲ್ಲಿನ ನಾಯಕರು ಮಾತ್ರ ಅಹಂಕಾರದ ಮಾತುಗಳನ್ನಾಡುವುದು, ಭಾರತದ ವಿರುದ್ಧ ಉದ್ಧಟತನದ ಹೇಳಿಕೆಗಳನ್ನು ಕೊಡುವುದು ನಿಲ್ಲಿಸಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, “2026ರ ನವೆಂಬರ್‌ನಲ್ಲಿ ಭಾರತವು (India) ತುಂಡು ತುಂಡಾಗುತ್ತದೆ” ಎಂಬುದಾಗಿ ಪಾಕಿಸ್ತಾನದ (Pakistan) ಮಾಜಿ ಸಂಸದನೊಬ್ಬ (Pakistan ex Senator) ನಾಲಗೆ ಹರಿಬಿಟ್ಟಿದ್ದಾನೆ.

ಸುದ್ದಿವಾಹಿನಿಯೊಂದರ ಜತೆ ಮಾತನಾಡುವ ವೇಳೆ ನಿರೂಪಕಿಯ ಪ್ರಶ್ನೆಗೆ ಉತ್ತರಿಸಿದ ಫೈಸಲ್‌ ರಾಜಾ ಅಬಿದಿ (Faisal Raza Abidi) ಎಂಬ ಮಾಜಿ ಸಂಸದನು ದುರಹಂಕಾರದ ಮಾತುಗಳನ್ನಾಡಿದ್ದಾನೆ. “ಭಾರತದ ಸಂಸತ್ತಿನಲ್ಲಿ ಅಖಂಡ ಭಾರತ ಕಲ್ಪನೆಯ ನಕ್ಷೆ ಹಾಕಲಾಗಿದೆ. ಈ ನಕ್ಷೆಯಲ್ಲಿ ನೇಪಾಳ, ಶ್ರೀಲಂಕಾ, ಭೂತಾನ್‌ ಹಾಗೂ ಪಾಕಿಸ್ತಾನವೂ ಸೇರಿದೆ. ಆದರೆ, ಒಂದು ಮಾತು ನೆನಪಿರಲಿ. 2026ರ ನವೆಂಬರ್‌ನಲ್ಲಿ ಭಾರತವು ಚೂರು ಚೂರಾಗುತ್ತದೆ. ನರೇಂದ್ರ ಮೋದಿ ಅವರ ಹಿಂದುತ್ವ ಅಜೆಂಡಾ ಕೂಡ ಪತನವಾಗುತ್ತದೆ” ಎಂದು ಹೇಳಿದ್ದಾನೆ.

“ಅಖಂಡ ಭಾರತ ಕಲ್ಪನೆಯ ಕುರಿತು ಪಾಕಿಸ್ತಾನ ಮಾತನಾಡಿದರೆ ತಮಾಷೆ ಮಾಡುತ್ತಾರೆ. ಆದರೆ, 2026ರ ನವೆಂಬರ್‌ 26ರಂದು ಅಲ್ಲಾ ಪಾಕಿಸ್ತಾನದ ಪರವಾಗಿರುತ್ತಾನೆ. ಅಂದು ನಡೆಯುವ ಘಟನೆಯು ನಿಮ್ಮನ್ನು ಅಚ್ಚರಿಯ ಮಡುವಿನಲ್ಲಿ ಬೀಳಿಸುತ್ತದೆ. ಮೋದಿ ಹಿಂದುತ್ವದಿಂದ ಹೊರಗೆ ಬರಲಿರುವ ಜನ, ಪ್ರಾಣ ಉಳಿದರೆ ಸಾಕು ಎಂದು ಹೇಳುತ್ತಾರೆ. ಪಾಕಿಸ್ತಾನದ ಶಸ್ತ್ರಾಸ್ತ್ರಗಳು ಹಾಗೂ ಮಾನವ ಸಂಪನ್ಮೂಲವು ಭಾರತದ ನಾಶಕ್ಕೆ ಸಿದ್ಧವಾಗಿದೆ. ನರೇಂದ್ರ ಮೋದಿ ಆಡಳಿತದಲ್ಲಿಯೇ ಭಾರತ ತುಂಡು ತುಂಡಾಗುವುದೇ ಮುಖ್ಯ” ಎಂಬುದಾಗಿ ಎಲುಬಿಲ್ಲದ ನಾಲಗೆ ಹರಿಬಿಟ್ಟಿದ್ದಾನೆ.

“ನರೇಂದ್ರ ಮೋದಿ ಅವರು ಚುನಾವಣೆ ಸಂದರ್ಭದಲ್ಲಿ ಹಿಂದುತ್ವವನ್ನು ಪ್ರತಿಪಾದಿಸುತ್ತಿದ್ದಾರೆ. ಅವರ ಪ್ರತಿಪಾದನೆಗೆ ಜನರಿಂದ ಅಪಾರ ಬೆಂಬಲವೂ ವ್ಯಕ್ತವಾಗುತ್ತಿದೆ. ಹಾಗಾಗಿ, ಭಾರತವು ಚೂರು ಚೂರು ಆಗುವುದು ಮುಖ್ಯ” ಎಂಬುದಾಗಿ ಅಬಿದಿ ಹೇಳಿದ್ದಾನೆ. ಆ ಮೂಲಕ ಭಾರತದ ಮೇಲೆ ಪಾಕಿಸ್ತಾನವು ಶಸ್ತ್ರಾಸ್ತ್ರಗಳ ಸಮೇತ ದಾಳಿ ಮಾಡುತ್ತದೆ ಎಂಬುದರ ಮುನ್ಸೂಚನೆ ನೀಡಿದ್ದಾನೆ. ಇದುವರೆಗೆ ಭಾರತದ ವಿರುದ್ಧ ನಾಲ್ಕು ಬಾರಿ ಯುದ್ಧಕ್ಕಿಳಿದಿರುವ ಪಾಕಿಸ್ತಾನವು, ನಾಲ್ಕಕ್ಕೆ ನಾಲ್ಕು ಬಾರಿಯೂ ಹೀನಾಯವಾಗಿ ಸೋಲುಂಡಿದೆ. ಇನ್ನು ಮೋದಿ ಆಡಳಿತದಲ್ಲಿ 2016ರಲ್ಲಿ ಉರಿ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, 2019ರ ಪುಲ್ವಾಮ ದಾಳಿಗೆ ಪ್ರತಿಯಾಗಿ ಬಾಲಾಕೋಟ್‌ ವಾಯುದಾಳಿ ಮೂಲಕ ಪಾಕಿಸ್ತಾನದ ಉಗ್ರರನ್ನು ಹಿಮ್ಮೆಟ್ಟಿಸಲಾಗಿದೆ. ಹೀಗಿದ್ದರೂ, ಪಾಕಿಸ್ತಾನದ ನಾಯಕರು ಭಾರತದ ವಿಚಾರದಲ್ಲಿ ಹಗುರವಾಗಿ ಮಾತನಾಡುವುದನ್ನು ಬಿಟ್ಟಿಲ್ಲ ಎಂಬುದಕ್ಕೆ ಇದೇ ನಿದರ್ಶನವಾಗಿದೆ.

ಇದನ್ನೂ ಓದಿ: Ram Mandir:ಪಾಕ್‌ನ 200 ಸಿಂಧಿ ಯಾತ್ರಿಕರು ಅಯೋಧ್ಯೆಗೆ ಭೇಟಿ; ಭರ್ಜರಿ ಸ್ವಾಗತ

Continue Reading
Advertisement
Health Tips Kannada
ಆರೋಗ್ಯ6 mins ago

Health Tips Kannada : ಉತ್ತಮ ಆರೋಗ್ಯಕ್ಕಾಗಿ ಎಷ್ಟು ಗಂಟೆ ಕುಳಿತುಕೊಳ್ಳಬೇಕು, ನಿಂತುಕೊಳ್ಳಬೇಕು, ಮಲಗಬೇಕು?

Meeting with representatives of various political parties about MLC election in Hosapete
ವಿಜಯನಗರ10 mins ago

Vijayanagara News: ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ; ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

Election campaign meeting for Kalaburgi Lok Sabha constituency BJP candidate Umesh Jadav at kalaburagi
ರಾಜಕೀಯ13 mins ago

Lok Sabha Election 2024: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರಗಾಲ ಗ್ಯಾರಂಟಿ: ಬಿ.ಎಲ್. ಸಂತೋಷ್

Jai Shri Ram Slogan
ಕರ್ನಾಟಕ37 mins ago

Jai Shri Ram Slogan: ಜೈ ಶ್ರೀರಾಮ್ ಎಂದು ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದ ಕಾಂಗ್ರೆಸ್‌ ಮುಖಂಡ

Ballari Lok Sabha constituency Congress candidate E Tukaram election campaign in Kuduthini
ಬಳ್ಳಾರಿ40 mins ago

Lok Sabha Election 2024: ಕುಡುತಿನಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತುಕಾರಾಂ ಭರ್ಜರಿ ರೋಡ್‌ ಶೋ

IPL 2024
ಕ್ರೀಡೆ41 mins ago

IPL 2024 : ರೋಹಿತ್​ ಶರ್ಮಾ ಬೆಂಚು ಕಾಯುವಂತೆ ಮಾಡಿದ ಹಾರ್ದಿಕ್ ಪಾಂಡ್ಯ

Darshanam Mogulaiah
ದೇಶ47 mins ago

Darshanam Mogulaiah: 2 ವರ್ಷದ ಹಿಂದೆ ಪದ್ಮಶ್ರೀ ಪಡೆದ ಸಾಧಕ ಈಗ ಹೊಟ್ಟೆಪಾಡಿಗಾಗಿ ಕೂಲಿ ಕಾರ್ಮಿಕ!

Prajwal Revanna Case Who is the kingpin of Prajwal video pen drive HDK team is on its way
ಕ್ರೈಂ51 mins ago

Prajwal Revanna Case: ಪ್ರಜ್ವಲ್‌ ವಿಡಿಯೊ ಪೆನ್‌ಡ್ರೈವ್ ಕಿಂಗ್‌ಪಿನ್ ಯಾರು? ಬೆನ್ನತ್ತಿ ಹೊರಟಿದೆ ಎಚ್‌ಡಿಕೆ ಟೀಂ!

KL Rahul
ಕ್ರೀಡೆ1 hour ago

KL Rahul : ವಿಶ್ವ ಕಪ್​ ತಂಡಕ್ಕೆ ಕೆ. ಎಲ್​ ರಾಹುಲ್​ ಬೇಡ ಅಂದಿದ್ದು ರೋಹಿತ್ ಶರ್ಮಾ; ಆಂತರಿಕ ಮಾಹಿತಿ ಬಹಿರಂಗ

Physical Abuse
ಕರ್ನಾಟಕ1 hour ago

Physical Abuse: ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಸದ್ದಾಂ ಹುಸೇನ್ ಅರೆಸ್ಟ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ6 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ17 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌