Anant Ambani Wedding: ಅನಂತ್‌ ಅಂಬಾನಿ ಜೊತೆ ಬಾಬಾ ರಾಮ್‌ದೇವ್‌ ಭರ್ಜರಿ ಸ್ಟೆಪ್‌; ವಿಡಿಯೋ ನೋಡಿದ ನೆಟ್ಟಿಗರು ಫುಲ್‌ ಫಿದಾ - Vistara News

ದೇಶ

Anant Ambani Wedding: ಅನಂತ್‌ ಅಂಬಾನಿ ಜೊತೆ ಬಾಬಾ ರಾಮ್‌ದೇವ್‌ ಭರ್ಜರಿ ಸ್ಟೆಪ್‌; ವಿಡಿಯೋ ನೋಡಿದ ನೆಟ್ಟಿಗರು ಫುಲ್‌ ಫಿದಾ

Anant Ambani Wedding: ನಿನ್ನೆ ರಾತ್ರಿ ಮುಂಬೈನಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಅದ್ದೂರಿ ವಿವಾಹ ಸಮಾರಂಭದಲ್ಲಿ ಬಾಬಾ ರಾಮ್‌ದೇವ್ ಭಾಗವಹಿಸಿದ್ದರು. ಇನ್ನು ಅನಂತ್‌ ಅಂಬಾನಿ ಬರಾತ್‌(ಮದುವೆ ಮಂಟಪಕ್ಕೆ ಪ್ರವೇಶಿಸುವ ವೇಳೆ)ನಲ್ಲಿ ರಾಮ್‌ದೇವ್‌ ಕೂಡ ಕುಣಿದು ಕುಪ್ಪಳಿಸಿದ್ದಾರೆ. ಅನಂತ್‌ ಅಂಬಾನಿಯ ಕೈ ಹಿಡಿದುಕೊಂಡು ಹಾಡೊಂದಕ್ಕೆ ಬಾಬಾ ರಾಮ್‌ದೇವ್‌ ಹೆಜ್ಜೆ ಹಾಕಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

VISTARANEWS.COM


on

Anant Ambani Wedding
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್‌ ಅವರ ಪುತ್ರಿ ರಾಧಿಕಾ ಮರ್ಚಂಟ್‌ (Radhika Merchant) ಅವರ ವಿವಾಹವು ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿದೆ (Anant Ambani Wedding). ಮುಂಬೈನಲ್ಲಿರುವ ಜಿಯೋ ವರ್ಲ್ಡ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ಶುಕ್ರವಾರ (ಜುಲೈ 12) ರಾತ್ರಿ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರು ಸಾವಿರಾರು ಗಣ್ಯರು, ಸೆಲೆಬ್ರಿಟಿಗಳ ಮಧ್ಯೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇನ್ನು ಅದ್ದೂರಿ ವಿವಾಹ ಸಮಾರಂಭದಲ್ಲಿ ಯೋಗ ಗುರು ಬಾಬಾ ರಾಮದೇವ್‌(Baba Ramdev) ಕೂಡ ಭಾಗಿಯಾಗಿ ಸಂಭ್ರಮಿಸಿದರು.

ನಿನ್ನೆ ರಾತ್ರಿ ಮುಂಬೈನಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಅದ್ದೂರಿ ವಿವಾಹ ಸಮಾರಂಭದಲ್ಲಿ ಬಾಬಾ ರಾಮ್‌ದೇವ್ ಭಾಗವಹಿಸಿದ್ದರು. ಇನ್ನು ಅನಂತ್‌ ಅಂಬಾನಿ ಬರಾತ್‌(ಮದುವೆ ಮಂಟಪಕ್ಕೆ ಪ್ರವೇಶಿಸುವ ವೇಳೆ)ನಲ್ಲಿ ರಾಮ್‌ದೇವ್‌ ಕೂಡ ಕುಣಿದು ಕುಪ್ಪಳಿಸಿದ್ದಾರೆ. ಅನಂತ್‌ ಅಂಬಾನಿಯ ಕೈ ಹಿಡಿದುಕೊಂಡು ಹಾಡೊಂದಕ್ಕೆ ಬಾಬಾ ರಾಮ್‌ದೇವ್‌ ಹೆಜ್ಜೆ ಹಾಕಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ನಟ ರಜನಿಕಾಂತ್​ ಅವರು ಕುಟುಂಬ ಸಮೇತರಾಗಿ ಅನಂತ್​ ಅಂಬಾನಿಯ ವಿವಾಹದಲ್ಲಿ ಪಾಲ್ಗೊಂಡಿದ್ದಾರೆ. ಅಷ್ಟೇ ಅಲ್ಲದೇ, ಅವರು ಭರ್ಜರಿಯಾಗಿ (Anant Ambani Wedding) ಡ್ಯಾನ್ಸ್​ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದ್ದು, ಸೋಶಿಯಲ್​ ಮೀಡಿಯಾದಲ್ಲಿ ರಜನಿಕಾಂತ್​ ಅವರ ಡ್ಯಾನ್ಸ್​ ಮತ್ತು ಉತ್ಸಾಹ ನೋಡಿ ಯುವಕರೂ ನಾಚುವಂತಿದೆ. ಹಾಲಿವುಡ್​ ಸೆಲೆಬ್ರಿಟಿಗಳು, ಬಾಲಿವುಡ್​ ತಾರೆಯರು, ದಕ್ಷಿಣ ಭಾರತದ ಸಿನಿಮಾ ಮಂದಿ ಸೇರಿದಂತೆ ನೂರಾರು ಗಣ್ಯರು ಮದುವೆಗೆ ಸಾಕ್ಷಿ ಆಗಿದ್ದಾರೆ. ಬಂದಿರುವ ಅತಿಥಿಗಳ ಜೊತೆ ಅಂಬಾನಿ ಕುಟುಂಬದವರು ಖುಷಿಯಿಂದ ಬೆರೆತಿದ್ದಾರೆ.ಜನಿಕಾಂತ್​ ಅವರು ಮಸ್ತ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ. ಈ ಸೂಪರ್​ ಸ್ಟಾರ್​ಗಳ ಜೊತೆ ಅನಂತ್​ ಅಂಬಾನಿ ಕೂಡ ಹೆಜ್ಜೆ ಹಾಕಿದ್ದಾರೆ. ಅವರ ಮದುವೆಯಲ್ಲಿ ತಾರಾ ಮೆರುಗು ತುಂಬಿದೆ.‘ತಲೈವಾ’ ರಜನಿಕಾಂತ್​ ಜೊತೆ ಅವರ ಪತ್ನಿ ಲತಾ, ಮಗಳು ಸೌಂದರ್ಯಾ ಕೂಡ ಅನಂತ್​ ಅಂಬಾನಿಯ ಮದುವೆಗೆ ಬಂದಿದ್ದಾರೆ ನಟ ರಜನಿಕಾಂತ್​ ಅವರು ಕುಟುಂಬ ಸಮೇತರಾಗಿ ಅನಂತ್​ ಅಂಬಾನಿಯ ವಿವಾಹದಲ್ಲಿ ಪಾಲ್ಗೊಂಡಿದ್ದಾರೆ. ಅಷ್ಟೇ ಅಲ್ಲದೇ, ಅವರು ಭರ್ಜರಿಯಾಗಿ ಡ್ಯಾನ್ಸ್​ ಮಾಡಿದ್ದಾರೆ.

ಈ ಸಂದರ್ಭದ ವಿಡಿಯೋ ವೈರಲ್​ ಆಗಿದ್ದು, ಸೋಶಿಯಲ್​ ಮೀಡಿಯಾದಲ್ಲಿ ರಜನಿಕಾಂತ್​ ಅವರ ಡ್ಯಾನ್ಸ್​ ಮತ್ತು ಉತ್ಸಾಹ ನೋಡಿ ಯುವಕರೂ ನಾಚುವಂತಿದೆ. ಬಂದಿರುವ ಅತಿಥಿಗಳ ಜೊತೆ ಅಂಬಾನಿ ಕುಟುಂಬದವರು ಖುಷಿಯಿಂದ ಬೆರೆತಿದ್ದಾರೆ. ರಜನಿಕಾಂತ್​ ಅವರು ಮಸ್ತ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ. ಈ ಸೂಪರ್​ ಸ್ಟಾರ್​ಗಳ ಜೊತೆ ಅನಂತ್​ ಅಂಬಾನಿ ಕೂಡ ಹೆಜ್ಜೆ ಹಾಕಿದ್ದಾರೆ. ರಜನಿಕಾಂತ್​ ಜೊತೆ ಅವರ ಪತ್ನಿ ಲತಾ, ಮಗಳು ಸೌಂದರ್ಯಾ ಕೂಡ ಅನಂತ್​ ಅಂಬಾನಿಯ ಮದುವೆಗೆ ಬಂದಿದ್ದಾರೆ.

ಇದನ್ನೂ ಓದಿ:MS Dhoni : ಅಂಬಾನಿ ಪುತ್ರನ ಮದುವೆಯಲ್ಲಿ ಬಿಂದಾಸ್​ ​ ಡಾನ್ಸ್ ಮಾಡಿದ ಮಹೇಂದ್ರ ಸಿಂಗ್ ಧೋನಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Stuck in Lift: ಫ್ಯಾನಿಲ್ಲ, ಲೈಟಿಲ್ಲ, ಆಹಾರವಿಲ್ಲ; 2 ದಿನ ಲಿಫ್ಟ್‌ನಲ್ಲಿ ಸಿಲುಕಿದ್ದವನ ಸ್ಥಿತಿ ಹೇಗಿರಬಹುದು ಊಹಿಸಿ!

Stuck in Lift: ಸ್ಥಳೀಯ ಸಿಪಿಐ ನಾಯಕ ಮತ್ತು ಸ್ಥಳೀಯ ಶಾಸಕರ ಹಾಸ್ಟೆಲ್‌ನ ಸಿಬ್ಬಂದಿ ರವೀಂದ್ರನ್ ಅವರು ಬೆನ್ನುನೋವಿನ ಚಿಕಿತ್ಸೆಗಾಗಿ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಹೋಗಿದ್ದರು. ಎಕ್ಸ್-ರೇ ನಂತರ ಅವರು ಲಿಫ್ಟ್ ಮೂಲಕ ವೈದ್ಯರ ಬಳಿಗೆ ಹೋಗುತ್ತಿದ್ದಾಗ ಅದು ಸಡನ್ ಆಗಿ ನಿಂತಿದೆ. ಆಗ ಅವರು ತಮ್ಮ ಫೋನ್ ಬಳಸಿ ಲಿಫ್ಟ್ ಒಳಗೆ ಬರೆದ ಹಲವಾರು (ಸಹಾಯವಾಣಿ) ಸಂಖ್ಯೆಗಳಿಗೆ ಕಾಲ್ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. 42 ಗಂಟೆಗಳ ಕಾಲ ಲಿಫ್ಟ್ ಒಳಗೆ ಸಿಲುಕಿಕೊಂಡಿದ್ದರು. ಅವರ ಕರಾಳ ಅನುಭವ ಇಲ್ಲಿದೆ ಓದಿ.

VISTARANEWS.COM


on

Stuck in Lift
Koo

ವ್ಯಕ್ತಿ ಲಿಫ್ಟ್‌ನೊಳಗೆ ಸಿಲುಕಿಕೊಂಡು ಒದ್ದಾಡುವಂತಹ ದೃಶ್ಯಗಳನ್ನು ನಾವು ಹೆಚ್ಚು ಸಿನಿಮಾಗಳಲ್ಲಿ ನೋಡಿರುತ್ತೇವೆ. ಆದರೆ ಆಸ್ಪತ್ರೆಯೊಂದರಲ್ಲಿ 59 ವರ್ಷದ ವ್ಯಕ್ತಿಯೊಬ್ಬರು ಭರ್ತಿ 42 ಗಂಟೆಗಳ ಕಾಲ ಲಿಫ್ಟ್ (Stuck in Lift) ಒಳಗೆ ಸಿಲುಕಿಕೊಂಡಿದ್ದು, ಸುಮಾರು ಎರಡು ದಿನಗಳ ಕಾಲ ಅವರು ಲಿಫ್ಟ್‌ನೊಳಗೆ ಪರದಾಡಿದ ರೀತಿ ಕೇಳಿದರೆ ಯಾರಿಗಾದರೂ ಗಾಬರಿಯಾಗುವುದು ಖಂಡಿತ.

ಸ್ಥಳೀಯ ಸಿಪಿಐ ನಾಯಕ ಮತ್ತು ಸ್ಥಳೀಯ ಶಾಸಕರ ಹಾಸ್ಟೆಲ್‍ನ ಸಿಬ್ಬಂದಿ ರವೀಂದ್ರನ್ ಅವರು ಬೆನ್ನುನೋವಿನ ಚಿಕಿತ್ಸೆಗಾಗಿ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿದರು. ಎಕ್ಸ್-ರೇ ನಂತರ, ಅವರು ಲಿಫ್ಟ್‌ ಮೂಲಕ ವೈದ್ಯರ ಬಳಿಗೆ ಹೋಗುತ್ತಿದ್ದಾಗ ಅದು ಸಡನ್ ಆಗಿ ನಿಂತಿದೆ. ಆಗ ಅವರು ತಮ್ಮ ಫೋನ್ ಬಳಸಿ ಲಿಫ್ಟ್ ಒಳಗೆ ಬರೆದ ಹಲವಾರು (ಸಹಾಯವಾಣಿ) ಸಂಖ್ಯೆಗಳಿಗೆ ಕಾಲ್ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನಂತರ ಅವರ ಫೋನ್ ಕೆಳಗೆ ಬಿದ್ದು ಹಾಳಾಗಿದೆ. ನಂತರ ಅವರು ಲಿಫ್ಟ್‌ನ ಒಂದು ಮೂಲೆಯಲ್ಲಿ ಕುಳಿತು ಯಾರಾದರೂ ಬರುತ್ತಾರೆ ಎಂದು ಕಾಯತೊಡಗಿದ್ದಾರೆ.

ಅನಿವಾರ್ಯವಾದಾಗ ಲಿಫ್ಟ್‌ನ ಒಂದು ಮೂಲೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾರೆ. ಅವರಿಗೆ ಬಾಯಾರಿಕೆ, ಹಸಿವು ಆದ ಕಾರಣ ನಿದ್ರೆ ಕೂಡ ಬರಲಿಲ್ಲ. ಅವರು ನಿಯಮಿತವಾಗಿ ಆಲರಂ ಬೆಲ್ ಅನ್ನು ಒತ್ತುತ್ತಲೇ ಇದ್ದರಂತೆ. ಲಿಫ್ಟ್ ಚೇಂಬರ್‌ನಲ್ಲಿ ಫ್ಯಾನ್ ಮತ್ತು ಬೆಳಕು ಎರಡೂ ಇರಲಿಲ್ಲ. ಸ್ವಲ್ಪ ಗಾಳಿ ಒಳಗೆ ಬರುತ್ತಿದ್ದರಿಂದ ಅವರ ಜೀವ ಉಳಿದಿದೆ. ಕೊನೆಗೆ ಅವರು ತಮ್ಮ ನೈತಿಕ ಸ್ಥೈರ್ಯವನ್ನು ಉಳಿಸಿಕೊಳ್ಳಲು, ತಮ್ಮ ಹೆಂಡತಿ ಬರೆದು ಪ್ರಕಟಿಸಿದ ಕವಿತೆಗಳನ್ನು ಮೆಲುಕು ಹಾಕಿದರಂತೆ. ಎರಡು ದಿನ ಲಿಫ್ಟ್‌ನಲ್ಲಿ ಸಿಕ್ಕಿ ಬಿದ್ದು ಹೊರ ಬಂದಿರುವ ರವೀಂದ್ರನ್ ಆ ಸಂಕಷ್ಟದ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ.

ಇತ್ತ ಅವರ ಪತ್ನಿ ಮತ್ತು ಮಕ್ಕಳು ಅವರು ಮನೆಗೆ ಬರದಿದ್ದರೂ ತಲೆಕೆಡಿಸಿಕೊಂಡಿರಲಿಲ್ಲ. ಯಾಕೆಂದರೆ ಅವರು ಆಗಾಗ ಕೆಲಸದ ನಿಮಿತ್ತ ಮನೆಗೇ ಬರುತ್ತಿರಲಿಲ್ಲವಂತೆ. ಆದರೆ ಭಾನುವಾರ ಅವರು ಮನೆಗೆ ಹಿಂತಿರುಗದಿದ್ದಾಗ ಮತ್ತು ಅವರ ಪೋನ್‌ಗೆ ಕರೆ ಮಾಡಿದರೂ ಅದು ಸಿಗದಿದ್ದಾಗ ಅವರಿಗೆ ಚಿಂತೆ ಶುರುವಾಗಿದೆ. ಹಾಗಾಗಿ ಶಾಸಕರ ಹಾಸ್ಟೆಲ್ ಮತ್ತು ಸಿಪಿಐ ಕಚೇರಿಗೆ ಕರೆ ಮಾಡಿದಾಗ ರವೀಂದ್ರನ್ ಶನಿವಾರ ಮಧ್ಯಾಹ್ನದಿಂದ ಕಾಣೆಯಾಗಿರುವುದು ತಿಳಿದುಬಂದಿದೆ.

ಇದನ್ನೂ ಓದಿ:  ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Stuck in Lift

ಭಾನುವಾರ ಮಧ್ಯಾಹ್ನದ ವೇಳೆಗೆ, ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ದೂರು ದಾಖಲಿಸಿದ್ದರು ಮತ್ತು ಹಾಗಾಗಿ ಅವರನ್ನು ಪೊಲೀಸರು ಹುಡುಕಾಡಿದ್ದಾರೆ. ಕೊನೆಯಲ್ಲಿ ಸೋಮವಾರ ಬೆಳಗ್ಗೆ ಲಿಫ್ಟ್ ಆಪರೇಟರ್ ನಿಧಾನವಾಗಿ ಕರ್ತವ್ಯಕ್ಕೆ ಹಾಜರಾದಾಗ ರವೀಂದ್ರನ್ ಲಿಫ್ಟ್‌ನಲ್ಲಿ ಸಿಕ್ಕಿ ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅವರನ್ನು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ತನಿಖೆಗೆ ಆದೇಶಿಸಿದ್ದು, ಲಿಫ್ಟ್ ಆಪರೇಟರ್‌ಗಳು ಸೇರಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ.

Continue Reading

ದೇಶ

Alcohol Delivery: ಎಣ್ಣೆ ಪ್ರಿಯರಿಗೆ ಗುಡ್‌ ನ್ಯೂಸ್;‌ ಇನ್ನು ಸ್ವಿಗ್ಗಿಯಲ್ಲಿ ಮನೆ ಬಾಗಿಲಿಗೆ ಬರಲಿದೆ ಆಲ್ಕೋಹಾಲ್!

Alcohol Delivery: ಆನ್‌ಲೈನ್‌ ಸರಬರಾಜು ಪ್ಲಾಟ್‌ಫಾರ್ಮ್‌ಗಳಾದ ಸ್ವಿಗ್ಗಿ, ಬಿಗ್‌ಬ್ಯಾಸ್ಕೆಟ್‌, ಜೊಮ್ಯಾಟೋ ಸೇರಿ ಹಲವು ಪ್ಲಾಟ್‌ಫಾರ್ಮ್‌ಗಳ ಮೂಲಕ ಶೀಘ್ರದಲ್ಲೇ ಮನೆಯ ಬಾಗಿಲಿಗೇ ಲಿಕ್ಕರ್‌ ಬಾಟಲಿಗಳನ್ನು ಪೂರೈಸಲಾಗುತ್ತದೆ ಎಂಬುದಾಗಿ ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ. ಕರ್ನಾಟಕದ ಬೆಂಗಳೂರು ಸೇರಿ ಹಲವು ನಗರಗಳಲ್ಲಿ ಈ ಸೌಲಭ್ಯ ಇರಲಿದೆ ಎಂಬುದು ಗಮನಾರ್ಹವಾಗಿದೆ.

VISTARANEWS.COM


on

Alcohol Delivery
Koo

ನವದೆಹಲಿ: ಪರಿಚಯದವರ ಕಣ್ಣುತಪ್ಪಿಸಿ ಬಾರ್‌ಗೆ ಹೋಗುವ ಗೋಜು, ಕೌಂಟರ್‌ನಲ್ಲಿ ಅವಸರದಲ್ಲಿಯೇ ಮದ್ಯವನ್ನು ಹೀರಿ, ಉಪ್ಪಿನಕಾಯಿ ನೆಕ್ಕಿ ಬರುವ ಗಡಿ ಬಿಡಿ ಇರಲ್ಲ, ಆಫೀಸಿನಿಂದ ಮನೆಗೆ ಬರುತ್ತಲೇ ಊಟ ಆರ್ಡರ್‌ ಮಾಡಿದಂತೆ, ಬಿಯರ್‌, ವೈನ್‌ ಸೇರಿ ಯಾವುದೇ ಮದ್ಯದ ಬಾಟಲಿಗಳನ್ನು ಇನ್ನು ಸ್ವಿಗ್ಗಿ (Swiggy), ಜೊಮ್ಯಾಟೋದಂತಹ ಆನ್‌ಲೈನ್‌ ಕಂಪನಿಗಳ ಮೂಲಕವೇ‌ ಮನೆಯ ಬಾಗಿಲಿಗೆ ತಂದು ಕೊಡುವಂತೆ (Alcohol Home Delivery) ಆರ್ಡರ್‌ ಮಾಡಬಹುದಾಗಿದೆ. ಹೌದು, ಎಣ್ಣೆ ಪ್ರಿಯರು ಓದಿರುವ ಸುದ್ದಿ, ವಾಕ್ಯಗಳು ಸರಿಯಾಗಿಯೇ ಇವೆ. ಶೀಘ್ರದಲ್ಲೇ ಕರ್ನಾಟಕ ಸೇರಿ ದೇಶಾದ್ಯಂತ ಮದ್ಯದ ಹೋಮ್‌ ಡೆಲಿವರಿ (Alcohol Delivery) ಆಗಲಿದೆ.

ಆನ್‌ಲೈನ್‌ ಸರಬರಾಜು ಪ್ಲಾಟ್‌ಫಾರ್ಮ್‌ಗಳಾದ ಸ್ವಿಗ್ಗಿ, ಬಿಗ್‌ಬ್ಯಾಸ್ಕೆಟ್‌, ಜೊಮ್ಯಾಟೋ ಸೇರಿ ಹಲವು ಪ್ಲಾಟ್‌ಫಾರ್ಮ್‌ಗಳ ಮೂಲಕ ಶೀಘ್ರದಲ್ಲೇ ಮನೆಯ ಬಾಗಿಲಿಗೇ ಲಿಕ್ಕರ್‌ ಬಾಟಲಿಗಳನ್ನು ಪೂರೈಸಲಾಗುತ್ತದೆ ಎಂಬುದಾಗಿ ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ. ಸದ್ಯ, ನವದೆಹಲಿ, ಕರ್ನಾಟಕ, ಹರಿಯಾಣ, ಪಂಜಾಬ್‌, ತಮಿಳುನಾಡು, ಗೋವಾ ಹಾಗೂ ಕೇರಳ ರಾಜ್ಯಗಳಲ್ಲಿ ಆನ್‌ಲೈನ್‌ ಪ್ಲಾಟ್‌ಫಾರ್ಮ್‌ಗಳು ಹೋಮ್‌ ಡೆಲಿವರಿ ಕುರಿತ ಪೈಲಟ್‌ ಪ್ರಾಜೆಕ್ಟ್‌ಅನ್ನು ಕೈಗೆತ್ತಿಕೊಂಡಿದ್ದು, ಶೀಘ್ರದಲ್ಲೇ ದೇಶಾದ್ಯಂತ ಹೋಮ್‌ ಡೆಲಿವರಿ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಆರಂಭಿಕ ಹಂತದಲ್ಲಿ ಮನೆ ಬಾಗಿಲಿಗೆ ಮದ್ಯ ಪೂರೈಸುವ ವ್ಯವಸ್ಥೆ ಜಾರಿಯಾದರೆ, ಹಂತ ಹಂತವಾಗಿ ದೇಶಾದ್ಯಂತ ನಗರ, ಪಟ್ಟಣಗಳಿಗೆ ಯೋಜನೆಯನ್ನು ವಿಸ್ತರಿಸಲಾಗುತ್ತದೆ. ಬಿಯರ್‌, ವೈನ್‌, ಕಡಿಮೆ ಬೆಲೆಯ ಲಿಕ್ಕರ್‌ಗಳನ್ನು ಮೊದಲಿಗೆ ಪೂರೈಕೆ ಮಾಡಲಾಗುತ್ತದೆ. ಗ್ರಾಹಕರು ಊಟ, ತಿಂಡಿ ಆರ್ಡರ್‌ ಮಾಡಿದಂತೆಯೇ, ಸ್ವಿಗ್ಗಿ, ಜೊಮ್ಯಾಟೋ, ಬಿಗ್‌ಬ್ಯಾಸ್ಕೆಟ್‌ ಅಪ್ಲಿಕೇಷನ್‌ಗಳ ಮೂಲಕ ಮನೆಯ ಬಾಗಿಲಿನವರೆಗೆ ಮದ್ಯವನ್ನು ಪೂರೈಸಲಾಗುತ್ತದೆ ಎಂದು ತಿಳಿದುಬಂದಿದೆ. ಇದರಿಂದ ಮದ್ಯ ಪ್ರಿಯರು ಆರಾಮವಾಗಿ ಮನೆಯಲ್ಲೇ ಕುಳಿತು ಮದ್ಯ ಸೇವನೆ ಮಾಡಬಹುದಾಗಿದೆ.

“ಭಾರತವು ಆಧುನಿಕತೆಗೆ ತೆರೆದುಕೊಂಡಿದ್ದು, ಮದ್ಯದ ಕುರಿತು ಇದ್ದ ಕಲ್ಪನೆಯೇ ಬದಲಾಗಿಹೋಗಿದೆ. ಮನೆಯಲ್ಲಿ ಟಿ.ವಿ ನೋಡುತ್ತ, ಊಟ ಮಾಡುತ್ತಲೇ ವೈನ್‌ ಹೀರುವ, ಹೆಣ್ಣುಮಕ್ಕಳು ಕೂಡ ಮದ್ಯ ಸೇವನೆ ಮಾಡುವ ಪ್ರಮಾಣ ಜಾಸ್ತಿಯಾಗಿದೆ. ಇನ್ನು, ಮಳೆ, ಚಂಡಮಾರುತ ಸೇರಿ ಯಾವುದೇ ತುರ್ತು ಸಂದರ್ಭಗಳಲ್ಲಿ ಜನ ಮದ್ಯವನ್ನು ಮಳಿಗೆಗಳಿಗೆ ಹೋಗಿ ಖರೀದಿ ಮಾಡಲು ಆಗುವುದಿಲ್ಲ. ಇದಕ್ಕೆ ಆನ್‌ಲೈನ್‌ ಡೆಲಿವರಿಯು ಪ್ರಮುಖ ಉಪಾಯವಾಗಿದೆ” ಎಂದು ಆನ್‌ಲೈನ್‌ ಪ್ಲಾಟ್‌ಫಾರ್ಮ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ಕೆಲವು ಕಡೆ ಆನ್‌ಲೈನ್‌ ಮೂಲಕ ಮದ್ಯದ ಪೂರೈಕೆ ವ್ಯವಸ್ಥೆ ಜಾರಿಗೆ ಬಂದಿತ್ತಾದರೂ ಅದು ದೇಶಾದ್ಯಂತ ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ಸದ್ಯ, ದೇಶದಲ್ಲಿ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಮಾತ್ರ ಮದ್ಯವನ್ನು ಆನ್‌ಲೈನ್‌ ಮೂಲಕ ಹೋಮ್‌ ಡೆಲಿವರಿ ಮಾಡಲಾಗುತ್ತಿದೆ. ಇನ್ನು ಕೆಲವೇ ತಿಂಗಳಲ್ಲಿ ದೇಶಾದ್ಯಂತ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Murder Case: ಮದ್ಯಪಾನ ಮಾಡಿ ಬಂದು ಅಜ್ಜಿಯನ್ನೇ ಕೊಂದ ಅಪ್ರಾಪ್ತ ಬಾಲಕ

Continue Reading

ದೇಶ

Doda Encounter: ಜಮ್ಮು- ಕಾಶ್ಮೀರದಲ್ಲಿ ಉಗ್ರರ ದಾಳಿ; ಬಿಜೆಪಿಯ ತಪ್ಪು ನೀತಿಯೇ ಕಾರಣ ಎಂದ ರಾಹುಲ್‌ ಗಾಂಧಿ

Doda Encounter: ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಉಗ್ರರೊಂದಿಗಿಗೆ ನಡೆದ ಗುಂಡಿನ ಚಕಮಕಿಯಲ್ಲಿಒಬ್ಬ ಅಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾರತದ ಸೈನಿಕರು ಮತ್ತು ಅವರ ಕುಟುಂಬಗಳು ಬಿಜೆಪಿಯ ತಪ್ಪು ನೀತಿಗಳಿಂದ ಬಳಲುತ್ತಿವೆ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Doda Encounter
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರರ ಉಪಟಳ ಮುಂದುವರಿದಿದೆ. ದೋಡಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ (Doda Encounterr) ಒಬ್ಬ ಅಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ಭಾರತದ ಸೈನಿಕರು ಮತ್ತು ಅವರ ಕುಟುಂಬಗಳು ಬಿಜೆಪಿಯ ತಪ್ಪು ನೀತಿಗಳಿಂದ ಬಳಲುತ್ತಿವೆ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ರಾಹುಲ್‌ ಗಾಂಧಿ, ಮೊದಲಿಗೆ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಬಳಿಕ ಬಿಜೆಪಿ ನಡೆಯನ್ನು ಕಟುವಾದ ಶಬ್ಧಗಳಲ್ಲಿ ಟೀಕಿಸಿದ್ದಾರೆ.

ರಾಹುಲ್‌ ಗಾಂಧಿ ಹೇಳಿದ್ದೇನು?

“ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ನಮ್ಮ ಸೈನಿಕರು ಹುತಾತ್ಮರಾಗಿದ್ದಾರೆ. ಹುತಾತ್ಮ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸುತ್ತೇನೆ. ಒಂದರ ನಂತರ ಒಂದರಂತೆ ಇಂತಹ ಭಯಾನಕ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುಃಖಕರ ಮತ್ತು ಆತಂಕಕಾರಿ. ಈ ನಿರಂತರ ಭಯೋತ್ಪಾದಕ ದಾಳಿಗಳು ಜಮ್ಮು ಮತ್ತು ಕಾಶ್ಮೀರದಲ್ಲಿನ ಅವ್ಯವಸ್ಥೆಯನ್ನು ಎತ್ತಿ ತೋರಿಸುತ್ತಿವೆ. ನಮ್ಮ ಸೈನಿಕರು ಮತ್ತು ಅವರ ಕುಟುಂಬ ಸದಸ್ಯರು ಬಿಜೆಪಿಯ ತಪ್ಪು ನೀತಿಗಳಿಂದ ಬಳಲುತ್ತಿದ್ದಾರೆʼʼ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಮುಂದುವರಿದು, ʼʼಈ ಪುನರಾವರ್ತಿತ ಭದ್ರತಾ ಲೋಪಗಳಿಗೆ ಕೇಂದ್ರ ಸರ್ಕಾರವು ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳಬೇಕು. ದೇಶದ್ರೋಹಿಗಳ ವಿರುದ್ಧ ಮತ್ತು ಸೈನಿಕರ ಮೇಲೆ ದಾಳಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎನ್ನುವುದು ಪ್ರತಿಯೊಬ್ಬ ದೇಶಭಕ್ತ ಭಾರತೀಯನ ಆಗ್ರಹ. ಈ ದುಃಖದ ಸಮಯದಲ್ಲಿ ಇಡೀ ದೇಶವು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ನಿಂತಿದೆ” ಎಂದು ಅವರು ಬರೆದುಕೊಂಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಈ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ. ಭದ್ರತಾ ಕಾರ್ಯತಂತ್ರವನ್ನು ಎಚ್ಚರಿಕೆಯಿಂದ ಮರುಪರಿಶೀಲಿಸುವಂತೆ ಆಗ್ರಹಿಸಿದ್ದಾರೆ. ಸುಳ್ಳು ಧೈರ್ಯ, ನಕಲಿ ನಿರೂಪಣೆಗಳ ಮೂಲಕ ರಾಷ್ಟ್ರೀಯ ಭದ್ರತೆ ಹೆಚ್ಚಿಸಲು ಸಾಧ್ಯವಿಲ್ಲ ಎಂದು ಖರ್ಗೆ ಹೇಳಿದ್ದಾರೆ. ಹೇಡಿ ಭಯೋತ್ಪಾದಕರು ನಡೆಸುತ್ತಿರುವ ಈ ಹಿಂಸಾಚಾರದ ಕೃತ್ಯಗಳಿಗೆ ಖಂಡನೆಯ ಪದಗಳು ಸಾಕಾಗುವುದಿಲ್ಲ, ಸೂಕ್ತ ಯೋಜನೆ ಅಗತ್ಯ ಎಂದು ಖರ್ಗೆ ತಿಳಿಸಿದ್ದಾರೆ.

“ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭಯೋತ್ಪದಕ ದಾಳಿ ನಡೆಯುತ್ತಿದೆ ಎನ್ನುವುದನ್ನು ಸರ್ಕಾರ ತಿಳಿದುಕೊಳ್ಳಬೇಕು. ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಸಾಮೂಹಿಕವಾಗಿ ಹೋರಾಡಬೇಕು. ಕಾಂಗ್ರೆಸ್ ನಮ್ಮ ಧೈರ್ಯಶಾಲಿ ಸಶಸ್ತ್ರ ಪಡೆಗಳ ಬೆಂಬಲಕ್ಕೆ ನಿಲ್ಲಲಿದೆʼʼ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kashmir Encounter: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ನಾಲ್ವರು ಯೋಧರು ಹುತಾತ್ಮ; ಮುಂದುವರಿದ ಕಾರ್ಯಾಚರಣೆ

ʼʼದೋಡಾದಲ್ಲಿ ಹುತಾತ್ಮರಾದ ಅಧಿಕಾರಿ ಸೇರಿದಂತೆ ನಾಲ್ವರು ಸೈನಿಕರ ಕುಟುಂಬಗಳಿಗೆ ತಮ್ಮ ಹೃದಯ ಮಿಡಿಯುತ್ತದೆ. ಭಾರತ ಮಾತೆಯ ಸೇವೆಯಲ್ಲಿ ಈ ನಾಲ್ವರು ಸರ್ವೋಚ್ಚ ತ್ಯಾಗ ಮಾಡಿದ್ದಾರೆ. ನಮ್ಮ ಪ್ರಾರ್ಥನೆಗಳು ಗಾಯಗೊಂಡವರೊಂದಿಗಿವೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿʼʼ ಎಂದು ಹೇಳಿದ್ದಾರೆ.

Continue Reading

ದೇಶ

Road Accident: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇಯಲ್ಲಿ ಭೀಕರ ಅಪಘಾತ; ಪಂಢರಪುರಕ್ಕೆ ತೆರಳುತ್ತಿದ್ದ ಐವರು ಭಕ್ತರ ಸಾವು

Road Accident: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇಯಲ್ಲಿ ಭೀಕರ ರಸ್ತೆ ಅಪಘಾತ ಸಂಭಿಸಿದ್ದು, ಐವರು ಭಕ್ತರು ಮೃತಪಟ್ಟಿದ್ದಾರೆ. ಬಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಮೃತರು ಆಷಾಢ ಏಕಾದಶಿ ಆಚರಣೆಗಾಗಿ ಮುಂಬೈ ಬಳಿಯ ತಮ್ಮ ಊರಾದ ಡೊಂಬಿವ್ಲಿಯಿಂದ ಪಂಢರಪುರಕ್ಕೆ ತೆರಳುತ್ತಿದ್ದರು.

VISTARANEWS.COM


on

Road Accident
Koo

ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇ (Mumbai-Pune Expressway)ಯಲ್ಲಿ ಭೀಕರ ರಸ್ತೆ ಅಪಘಾತ ಸಂಭಿಸಿದ್ದು, ಐವರು ಭಕ್ತರು ಮೃತಪಟ್ಟಿದ್ದಾರೆ. ಬಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ (Road Accident). ಘಟನೆಯಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರು ಆಷಾಢ ಏಕಾದಶಿ ಆಚರಣೆಗಾಗಿ ಮುಂಬೈ ಬಳಿಯ ತಮ್ಮ ಊರಾದ ಡೊಂಬಿವ್ಲಿಯಿಂದ ಪಂಢರಪುರಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಮಧ್ಯರಾತ್ರಿಯ ಸುಮಾರಿಗೆ ಬಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಕಮರಿಗೆ ಬಿದ್ದಿದೆ. ʼʼಡೊಂಬಿವ್ಲಿಯಿಂದ ಒಟ್ಟು 42 ಪ್ರಯಾಣಿಕರು ಪಂಢರಪುರಕ್ಕೆ ತೆರಳುತ್ತಿದ್ದಾಗ ಅಡ್ನೆ ಗ್ರಾಮದ ಬಳಿ ಈ ಅಪಘಾತ ನಡೆದಿದೆʼʼ ಎಂದು ಡಿಸಿಪಿ ವಿವೇಕ್ ಪನ್ಸಾರೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

“ಆಷಾಢ ಏಕಾದಶಿ ಹಿನ್ನಲೆಯಲ್ಲಿ ಭಕ್ತರು ಖಾಸಗಿ ಬಸ್ ಮೂಲಕ ಪಂಢರಪುರಕ್ಕೆ ಹೋಗುತ್ತಿದ್ದರು. ಬಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿದೆ. ಗಾಯಗೊಂಡ 42 ಜನರನ್ನು ಎಂಜಿಎಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಮೂವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 5 ಜನರು ಪ್ರಾಣ ಕಳೆದುಕೊಂಡಿರುವುದನ್ನು ವೈದ್ಯರು ದೃಢಪಡಿಸಿದ್ದಾರೆʼʼ ಎಂದು ವಿವೇಕ್ ಪನ್ಸಾರೆ ಮಾಹಿತಿ ನೀಡಿದ್ದಾರೆ.

ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘತಾಕ್ಕೆ 6 ಮಂದಿ ಬಲಿ

ಗಾಂಧಿನಗರ: ಇತ್ತ ಗುಜರಾತ್‌ನಲ್ಲಿಯೂ ಭೀಕರ ರಸ್ತೆ ಅಪಘಾತ ಸಂಭವಿಸಿ 6 ಮಂದಿ ಮೃತಪಟ್ಟಿದ್ದಾರೆ. ಗುಜರಾತ್‌ನ ಆನಂದ್ ಪಟ್ಟಣದ ಬಳಿ ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್‌ ವೇಯಲ್ಲಿ ಸೋಮವಾರ ಬೆಳಿಗ್ಗೆ ವೇಗವಾಗಿ ಚಲಿಸುತ್ತಿದ್ದ ಟ್ರಕ್ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟು ಮತ್ತು ಆರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಜಾನೆ 4.30ರ ಸುಮಾರಿಗೆ ಆನಂದ್ ಜಿಲ್ಲೆಯ ಚಿಖೋದ್ರಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಟೈರ್‌ ಬದಲಾಯಿಸಲು ಅಹಮದಾಬಾದ್ ಕಡೆಗೆ ತೆರಳುತ್ತಿದ್ದ ಖಾಸಗಿ ಐಷಾರಾಮಿ ಬಸ್ ಅನ್ನು ರಸ್ತೆ ಬದಿಗೆ ನಿಲ್ಲಿಸಲಾಗಿತ್ತು. ಬಸ್‌ನಿಂದ ಕೆಳಗೆ ಇಳಿದಿದ್ದ ಪ್ರಯಾಣಿಕರು ಅಲ್ಲೇ ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪೊಲೀಸರ ಪ್ರಕಾರ, ಮೃತರಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Road Accident : ಲಾಂಗ್‌ ಡ್ರೈವ್‌ ಹೋದ ಯುವಕರಿಬ್ಬರು ಹಿಟ್ ಆ್ಯಂಡ್ ರನ್‌ಗೆ ಬಲಿ; ನಿಲ್ಲದ ನಿಶಾಚರಿಗಳ ಕಾಟ

ನಿದ್ರೆ ಮಂಪರಿನಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ, ಇಬ್ಬರು ಸಾವು

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಚಿತ್ರದುರ್ಗದ ತಳಕು ಹೈವೆ ಬ್ರೀಡ್ಜ್ ಸಮೀಪದಲ್ಲಿ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಬಳ್ಳಾರಿ ಮೂಲದ ಗೋಪಿನಾಥ್ (52), ಲಲಿತಮ್ಮ (47) ಮೃತ ದುರ್ದೈವಿಗಳು. ಬೆಂಗಳೂರಿನಲ್ಲಿ ಉಪನಯನ ಕಾರ್ಯಕ್ರಮ ಮುಗಿಸಿ, ಬಳ್ಳಾರಿಗೆ ತೆರಳುವ ವೇಳೆ ಅಪಘಾತ ನಡೆದಿದೆ. ನಿದ್ರೆಯ ಮಂಪರಿನಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿದೆ ಎನ್ನಲಾಗಿದೆ. 

Continue Reading
Advertisement
Viral News
Latest5 mins ago

Viral News: ಬಾಸ್‌ ಜತೆ ಚಕ್ಕಂದವಾಡುತ್ತಿದ್ದ ಕಿಲಾಡಿ ಪತ್ನಿ; ಡ್ರೋನ್‌ ಬಳಸಿ ಪತ್ತೆ ಹಚ್ಚಿದ ಚಾಲಾಕಿ ಗಂಡ!

Rishabh Pant
ಕ್ರಿಕೆಟ್8 mins ago

Rishabh Pant: ಸಹ ಆಟಗಾರ ಖಲೀಲ್​ ಅಹ್ಮದ್​ರನ್ನು ಸ್ವಿಮ್ಮಿಂಗ್ ಪೂಲ್‌​ಗೆ ತಳ್ಳಿ ಹಾಕಿದ ಪಂತ್​; ವಿಡಿಯೊ ವೈರಲ್​

Karnataka Rain
ಮಳೆ9 mins ago

Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

2nd Puc Result
ಪ್ರಮುಖ ಸುದ್ದಿ14 mins ago

‌2nd PUC Exam Result: ದ್ವಿತೀಯ ಪಿಯುಸಿ ಪರೀಕ್ಷೆ- 3 ಫಲಿತಾಂಶ ಪ್ರಕಟ, 23.73% ವಿದ್ಯಾರ್ಥಿಗಳು ಪಾಸ್

Stuck in Lift
Latest20 mins ago

Stuck in Lift: ಫ್ಯಾನಿಲ್ಲ, ಲೈಟಿಲ್ಲ, ಆಹಾರವಿಲ್ಲ; 2 ದಿನ ಲಿಫ್ಟ್‌ನಲ್ಲಿ ಸಿಲುಕಿದ್ದವನ ಸ್ಥಿತಿ ಹೇಗಿರಬಹುದು ಊಹಿಸಿ!

7th Pay Commission
ಕರ್ನಾಟಕ36 mins ago

7th Pay Commission: ಸರ್ಕಾರಿ ನೌಕರರ ವೇತನ, ಪಿಂಚಣಿ 58% ಹೆಚ್ಚಳ; ಸಂಪೂರ್ಣ ಲೆಕ್ಕ ಕೊಟ್ಟ ಸಿದ್ದರಾಮಯ್ಯ

Viral Video
Latest39 mins ago

Viral Video: ಸ್ಟ್ರೆಚರ್‌ ಇಲ್ಲದ ಸರ್ಕಾರಿ ಆಸ್ಪತ್ರೆ; ಪತಿಯನ್ನು ಬೆನ್ನ ಮೇಲೆ ಹೊತ್ತು ನಡೆದ ಪತ್ನಿ! ಮನಮಿಡಿಯುವ ವಿಡಿಯೊ

7th Pay Commission
ಕರ್ನಾಟಕ50 mins ago

7th Pay Commission: ಆ.1ರಿಂದ ನೌಕರರ ವೇತನ ಹೆಚ್ಚಳ; ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ಹೆಚ್ಚುವರಿ ಹೊರೆ ಎಂದ ಸಿಎಂ

Sexual Abuse
Latest51 mins ago

Sexual Abuse: ಹೆಣ್ಣು ಮಕ್ಕಳಿಗೆ ಈಗ ಶಾಲೆ ಕೂಡ ಸುರಕ್ಷಿತವಲ್ಲ! ಶಾಲಾ ಶೌಚಾಲಯದಲ್ಲಿ ಬಾಲಕಿ ಮೇಲೆ ಬಾಲಕನಿಂದ ಅತ್ಯಾಚಾರ

MAX Teaser
ಸ್ಯಾಂಡಲ್ ವುಡ್57 mins ago

MAX Teaser: ಬಹುನಿರೀಕ್ಷಿತ ʼಮ್ಯಾಕ್ಸ್ʼ ಚಿತ್ರದ ಟೀಸರ್‌ ಔಟ್‌; ರೌಡಿಗಳ ಅಡ್ಡದಲ್ಲಿ ನಿಂತು ಲಾಂಗ್‌ ಬೀಸಿದ ಸುದೀಪ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ22 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌