Anant Ambani Wedding: ಕೌಟುಂಬಿಕ ಮುನಿಸು ಮರೆತು ವರನೊಂದಿಗೆ ಜತೆಯಾಗಿ ಹೆಜ್ಜೆ ಹಾಕಿದ ಮುಖೇಶ್ ಅಂಬಾನಿ-ಅನಿಲ್ ಅಂಬಾನಿ - Vistara News

ದೇಶ

Anant Ambani Wedding: ಕೌಟುಂಬಿಕ ಮುನಿಸು ಮರೆತು ವರನೊಂದಿಗೆ ಜತೆಯಾಗಿ ಹೆಜ್ಜೆ ಹಾಕಿದ ಮುಖೇಶ್ ಅಂಬಾನಿ-ಅನಿಲ್ ಅಂಬಾನಿ

Anant Ambani Wedding: ಕೌಟುಂಬಿಕ ಮುನಿಸು ಮರೆತು ಅನಂತ್‌ ಅಂಬಾನಿ ವಿವಾಹ ಸಮಾರಂಭದಲ್ಲಿ ಅನಿಲ್‌ ಅಂಬಾನಿ ಪಾಲ್ಗೊಂಡಿದ್ದಾರೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ. ವಿಡಿಯೊದಲ್ಲಿ ಮದುಮಗ ಅನಂತ್‌ ಒಂದು ಕಡೆ ತಂದೆ ಮುಖೇಶ್ ಅಂಬಾನಿ ಮತ್ತು ಮತ್ತೊಂದೆಡೆ ಚಿಕ್ಕಪ್ಪ ಅನಿಲ್ ಅಂಬಾನಿಯೊಂದಿಗೆ ಮದುವೆಯ ಮಂಟಪಕ್ಕೆ ನಡೆದುಕೊಂಡು ಬರುವುದು ಕಂಡು ಬಂದಿದೆ.

VISTARANEWS.COM


on

Anant Ambani Wedding
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್‌ ಅವರ ಪುತ್ರಿ ರಾಧಿಕಾ ಮರ್ಚಂಟ್‌ (Radhika Merchant) ಅವರ ವಿವಾಹವು ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿದೆ (Anant Ambani Wedding). ಮುಂಬೈನಲ್ಲಿರುವ ಜಿಯೋ ವರ್ಲ್ಡ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ಶುಕ್ರವಾರ (ಜುಲೈ 12) ರಾತ್ರಿ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರು ಸಾವಿರಾರು ಗಣ್ಯರು, ಸೆಲೆಬ್ರಿಟಿಗಳ ಮಧ್ಯೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಸಮಾರಂಭದಲ್ಲಿ ಕೌಟುಂಬಿಕ ಮುನಿಸು ಮರೆತು ಅನಿಲ್‌ ಅಂಬಾನಿ (Anil Ambani) ಅವರೂ ಪಾಲ್ಗೊಂಡಿದ್ದು ವಿಶೇಷ.

ಸದ್ಯ ವರ ಅನಂತ್‌ ಜತೆ ಅನಿಲ್‌ ಅಂಬಾನಿ ಹೆಜ್ಜೆ ಹಾಕಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. “ವರ ಅನಂತ್ ಆಗಮಿಸುತ್ತಿದ್ದಾರೆ” ಎನ್ನುವ ಶೀರ್ಷಿಕೆ ನೀಡಿ ಈ ವಿಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾಗಿದೆ. ಈ ಚಿಕ್ಕ ವಿಡಿಯೊದಲ್ಲಿ ಮದುಮಗ ಅನಂತ್‌ ಒಂದು ಕಡೆ ತಂದೆ ಮುಖೇಶ್ ಅಂಬಾನಿ ಮತ್ತು ಮತ್ತೊಂದೆಡೆ ಚಿಕ್ಕಪ್ಪ ಅನಿಲ್ ಅಂಬಾನಿಯೊಂದಿಗೆ ಮದುವೆಯ ಮಂಟಪಕ್ಕೆ ನಡೆದುಕೊಂಡು ಬರುವುದು ಕಂಡು ಬಂದಿದೆ. ಅನಂತ್ ಅಂಬಾನಿ ಅವರನ್ನು ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಸೇರಿದಂತೆ ಅತಿಥಿಗಳು ಕೈ ಕುಲುಕುತ್ತಿರುವುದೂ ಕಾಣಬಹುದು.

ಗಣ್ಯರ ದಂಡೇ ಉಪಸ್ಥಿತಿ

ಅನಂತ್‌ ಅಂಬಾನಿ ಮದುವೆಯಲ್ಲಿ ನಟ-ನಟಿಯರು, ಕ್ರಿಕೆಟಿಗರು, ಬೇರೆ ದೇಶಗಳ ನಾಯಕರಿಂದ ಹಿಡಿದು ಸಾವಿರಾರು ಗಣ್ಯರು, ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು. ಮಹೇಂದ್ರ ಸಿಂಗ್‌ ಧೋನಿ, ಅಮಿತಾಭ್‌ ಬಚ್ಚನ್‌, ಆಲಿಯಾ ಭಟ್‌, ರಣವೀರ್‌ ಸಿಂಗ್‌, ರಣಬೀರ್‌ ಕಪೂರ್‌, ಅನನ್ಯಾ ಪಾಂಡೆ, ರಜನಿಕಾಂತ್‌, ಮಹೇಶ್‌ ಬಾಬು, ಹಾರ್ದಿಕ್‌ ಪಾಂಡ್ಯ, ಐಶ್ವರ್ಯಾ ರೈ, ದಿಶಾ ಪಟಾಣಿ, ಬ್ರಿಟನ್‌ ಮಾಜಿ ಪ್ರಧಾನಿಗಳಾದ ಬೋರಿಸ್‌ ಜಾನ್ಸನ್‌, ಟೋನಿ ಬ್ಲೇರ್‌ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು.

ಈ ವರ್ಷಾರಂಭದಲ್ಲಿ ವಿವಾಹ ಪೂರ್ವ ಕಾರ್ಯಕ್ರಮಗಳೂ ಅದ್ಧೂರಿಯಾಗಿ ನಡೆದಿದ್ದವು. ಗುಜರಾತ್‌ನ ಜಾಮ್‌ನಗರದಲ್ಲಿರುವ ಅಂಬಾನಿ ಎಸ್ಟೇಟ್‌ನಲ್ಲಿ ಮಾರ್ಚ್ 1ರಿಂದ 3 ರವರೆಗೆ ಮೊದಲ ವಿವಾಹ ಪೂರ್ವ ಆಚರಣೆಯು 1,200 ಅತಿಥಿಗಳೊಂದಿಗೆ ನಡೆದಿದ್ದವು. ಇದರಲ್ಲಿ ಬಿಲ್ ಗೇಟ್ಸ್, ಹಿಲರಿ ಕ್ಲಿಂಟನ್, ಜೇರೆಡ್ ಕುಶ್ನರ್, ಇವಾಂಕಾ ಟ್ರಂಪ್, ಕಾರ್ಲಿ ಕ್ಲೋಸ್ ಮತ್ತು ಮಾರ್ಕ್ ಜುಕರ್‌ಬರ್ಗ್ ಸೇರಿದಂತೆ ಹಲವು ಅತಿಥಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಧೋನಿಯಿಂದ ರಜನಿಕಾಂತ್‌ವರೆಗೆ; ಅನಂತ್‌ ಅಂಬಾನಿ ಮದುವೆಯಲ್ಲಿ ಪಾಲ್ಗೊಂಡ ಗಣ್ಯರ ಫೋಟೊ, ವಿಡಿಯೊಗಳು ಇಲ್ಲಿವೆ

ಅದ್ಧೂರಿ ವಿವಾಹ ಸಮಾರಂಭಕ್ಕೆ ಅಂದಾಜು ವೆಚ್ಚ 4,000ರಿಂದ 5000 ಕೋಟಿ ರೂ. ಎನ್ನಲಾಗಿದೆ. ಇದು ಅವರ ನಿವ್ವಳ ಆದಾಯದ ಶೇ. 0.5ರಷ್ಟು ಮಾತ್ರ! ವರದಿಗಳ ಪ್ರಕಾರ ಮುಖೇಶ್ ಅಂಬಾನಿ ಅವರ ನಿವ್ವಳ ಆದಾಯ ಮೌಲ್ಯವು 7.65 ಲಕ್ಷ ಕೋಟಿ ರೂ. ಆಗಿದೆ. ಇನ್ನು ಮದುವೆಯ ಕುರಿತಾದ ಫೋಟೊ, ವಿಡಿಯೊ ಎಲ್ಲಡೆ ಹರಿದಾಡುತ್ತಿದ್ದು, ವೈರಲ್‌ ಆಗುತ್ತಿವೆ. ಅಂಬಾನಿ ವೈಭವಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಶತಮಾನದ ಮದುವೆ ಎಂದು ಹಲವರು ಬಣ್ಣಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Jitan Sahani: ಬಿಹಾರದಲ್ಲಿ ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ; ಮನೆ ತುಂಬ ರಕ್ತ!

Jitan Sahani: ರಾಜಕೀಯ ಕಾರಣದಿಂದಾಗಿ ಮುಕೇಶ್‌ ಸಹಾನಿ ಅವರ ತಂದೆಯನ್ನು ಮನೆಯಲ್ಲಿಯೇ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಜಿತನ್‌ ಸಹಾನಿ ಅವರು ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

VISTARANEWS.COM


on

Jitan Sahani
Koo

ಬಿಹಾರ: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಅವರನ್ನು ಹತ್ಯೆ ಮಾಡಿದ ಕೆಲವೇ ದಿನಗಳಲ್ಲಿ ಬಿಹಾರದಲ್ಲೂ (Bihar) ರಾಜಕೀಯ ಪ್ರೇರಿತ ಹಿಂಸಾಚಾರ ನಡೆದಿದೆ. ವಿಕಾಸಶೀಲ ಇನ್ಸಾನ್‌ ಪಕ್ಷದ (VHP) ಮುಖ್ಯಸ್ಥ ಮುಕೇಶ್‌ ಸಹಾನಿ (Mukesh Sahani) ಅವರ ತಂದೆ ಜಿತನ್‌ ಸಹಾನಿ (Jitan Sahani) ಅವರನ್ನು ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ದರ್ಭಾಂಗದಲ್ಲಿರುವ ಜಿತನ್‌ ಸಹಾನಿ ಅವರ ಮನೆಗೆ ಸೋಮವಾರ (ಜುಲೈ 15) ರಾತ್ರಿ ನುಗ್ಗಿದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೊಚ್ಚಿ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮುಕೇಶ್‌ ಸಹಾನಿ ಅವರು ವಿಐಪಿ ಪಕ್ಷದ ಮುಖ್ಯಸ್ಥರಾಗಿದ್ದು, ಮಲ್ಲಾಹ್‌ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇವರು ಇದಕ್ಕೂ ಮೊದಲು ಬಿಹಾರದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಖಾತೆ ಸಚಿವರಾಗಿದ್ದರು. ಮಲ್ಲಾಹ್‌ ಸಮುದಾಯದವರ ಬೆಂಬಲವು ಮುಕೇಶ್‌ ಸಹಾನಿ ಅವರಿಗಿದೆ. ಇದೇ ರಾಜಕೀಯ ಕಾರಣದಿಂದಾಗಿ ಮುಕೇಶ್‌ ಸಹಾನಿ ಅವರ ತಂದೆಯನ್ನು ಮನೆಯಲ್ಲಿಯೇ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಜಿತನ್‌ ಸಹಾನಿ ಅವರು ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಚೆನ್ನೈನ ಪೆರಂಬೂರ್‌ನಲ್ಲಿರುವ ಸದಯಪ್ಪನ್‌ ಸ್ಟ್ರೀಟ್‌ನಲ್ಲಿರುವ ಅವರ ನಿವಾಸದ ಬಳಿ ಜುಲೈ 5ರಂದು ಸಂಜೆ 7.30ರ ವೇಳೆಗೆ ಸುಮಾರು 6 ಜನರ ಗ್ಯಾಂಗ್‌ ದಾಳಿ ಮಾಡಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಆರ್ಮ್‌ಸ್ಟ್ರಾಂಗ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಉಪಯೋಗ ಆಗಲಿಲ್ಲ. ದಾಳಿಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿತ್ತು.

ತಮಿಳುನಾಡು ಬಿಎಸ್‌ಪಿ ಘಟಕದ ಅಧ್ಯಕ್ಷರಾಗಿದ್ದ ಆರ್ಮ್‌ಸ್ಟ್ರಾಂಗ್‌ ಅವರು ಇದಕ್ಕೂ ಮೊದಲು ಗ್ರೇಟರ್‌ ಚೆನ್ನೈ ಕಾರ್ಪೊರೇಷನ್‌ನ ಕೌನ್ಸಿಲರ್‌ ಆಗಿದ್ದರು. ಚುನಾವಣಾ ರಾಜಕೀಯದಲ್ಲಿ ಹೆಚ್ಚು ತೊಡಗಿಸಿಕೊಳ್ಳದ ಆರ್ಮ್‌ಸ್ಟ್ರಾಂಗ್‌ ಅವರು ರಾಜ್ಯದಲ್ಲಿ ದಲಿತರ ಪರ ಚಿಂತಕ, ಅಂಬೇಡ್ಕರ್‌ವಾದಿ ಎಂಬುದಾಗಿಯೇ ಹೆಚ್ಚು ಗುರುತಿಸಿಕೊಂಡಿದ್ದರು. ಹಾಗಾಗಿ, ಆರ್ಮ್‌ಸ್ಟ್ರಾಂಗ್‌ ಅವರು ರಾಜಕೀಯದಲ್ಲಿ ಹೆಚ್ಚಿನ ಶತ್ರುಗಳನ್ನು ಹೊಂದಿರಲಿಲ್ಲ. ಪ್ರಕರಣದ ಕುರಿತು ಈಗಲೂ ತನಿಖೆ ನಡೆಯುತ್ತಿದ್ದು, ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ: Arvind Kejriwal: “ಜೈಲಿನಲ್ಲಿ ಕೇಜ್ರಿವಾಲ್‌ ಹತ್ಯೆಗೆ ಸಂಚು”- ಸಂಚಲನ ಮೂಡಿಸ್ತಿದೆ ಆಪ್‌ ಆರೋಪ

Continue Reading

ವಾಣಿಜ್ಯ

Anant Radhika Wedding: ನಮ್ಮಿಂದ ಏನಾದರು ತಪ್ಪಾಗಿದ್ದರೆ ದಯವಿಟ್ಟು ಕ್ಷಮಿಸಿ; ನೀತಾ ಅಂಬಾನಿ ವಿನಮ್ರ ಮನವಿ!

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆ (Anant Radhika Wedding) ಪ್ರಯುಕ್ತ ನೀತಾ ಅಂಬಾನಿಯವರು ಪಾಪರಾಜಿಗಳಿಗೆ ಧನ್ಯವಾದ ಹೇಳಲು ಮತ್ತು ಸೋಮವಾರದ ವಿಶೇಷ ಆಚರಣೆಗೆ ಅವರನ್ನು ಸ್ವಾಗತಿಸಿದ್ದು ಇದನ್ನು ಸಾಮಾಜಿಕ ಜಾಲತಾಣದಲ್ಲಿ ನೆಟಿಜನ್‌ಗಳು ಶ್ಲಾಘಿಸಿದ್ದಾರೆ. ನೀತಾ ಅಂಬಾನಿ ಅವರ ಹೇಳಿಕೆಯ ವಿಡಿಯೊ ಇಲ್ಲಿದೆ.

VISTARANEWS.COM


on

By

Anant Radhika Wedding
Koo

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೆ (Anant Radhika Wedding) ನೀತಾ ಅಂಬಾನಿ (nita ambani) ವೈಯಕ್ತಿಕವಾಗಿ (ಮಾಧ್ಯಮ ಛಾಯಾಗ್ರಾಹಕರು) ಪಾಪರಾಜಿಗಳನ್ನು (paparazzi) ಆಹ್ವಾನಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ. ಇದು ಈಗ ಸಾಕಷ್ಟು ಮಂದಿಯ ಗಮನ ಸೆಳೆದಿದೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆ ಪ್ರಯುಕ್ತ ನಡೆದ ಮಂಗಲ್ ಉತ್ಸವ ಅಥವಾ ಅದ್ಧೂರಿ ವಿವಾಹದ ಆರತಕ್ಷತೆಯಲ್ಲಿ ಸಾಕಷ್ಟು ಗಣ್ಯರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಎ.ಆರ್. ರೆಹಮಾನ್ ಮತ್ತು ಶ್ರೇಯಾ ಘೋಷಾಲ್ ಅವರಿಬ್ಬರ ಸಂಗೀತ ಕಛೇರಿಯನ್ನು ನಡೆಸಿಕೊಟ್ಟರು. ಧೀರೂಬಾಯಿ ಅಂಬಾನಿಯವರ ಜೀವನವನ್ನು ಆಧರಿಸಿದ ಸಂಗೀತ ಕಾರ್ಯಕ್ರಮದ ವಿಡಿಯೋಗಳನ್ನು ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಈ ನಡುವೆ ನೀತಾ ಅಂಬಾನಿಯವರು ಪಾಪರಾಜಿಗಳಿಗೆ ಧನ್ಯವಾದ ಹೇಳಲು ಮತ್ತು ಸೋಮವಾರದ ವಿಶೇಷ ಆಚರಣೆಗೆ ಅವರನ್ನು ಸ್ವಾಗತಿಸಿದ್ದು ಇದನ್ನು ಸಾಮಾಜಿಕ ಜಾಲತಾಣದಲ್ಲಿ ನೆಟಿಜನ್‌ಗಳು ಶ್ಲಾಘಿಸಿದ್ದಾರೆ.


ಈ ವಿಡಿಯೋದಲ್ಲಿ ನೀತಾ ಅಂಬಾನಿ, ನಿಮ್ಮ ತಾಳ್ಮೆ ಮತ್ತು ತಿಳುವಳಿಕೆಗೆ ಧನ್ಯವಾದಗಳು. ಯಾವುದಾದರೂ ತಪ್ಪಾಗಿದ್ದರೆ ದಯವಿಟ್ಟು ನಮ್ಮನ್ನು ಕ್ಷಮಿಸಿ. ಯಾಕೆಂದರೆ ನಮ್ಮದು ಈಗ ಮದುವೆ ನಡೆಯುತ್ತಿರುವ ಮನೆ. ನಾಳೆ ನಮ್ಮ ಅತಿಥಿಗಳಾಗಿ ಬನ್ನಿ, ನೀವೆಲ್ಲರೂ ಆಹ್ವಾನವನ್ನು ಸ್ವೀಕರಿಸಿದ್ದೀರಿ. ನಮ್ಮ ಅತಿಥಿಗಳಾಗಿ ನಾಳೆ ನಿಮ್ಮನ್ನು ಸ್ವಾಗತಿಸಲು ನಾವು ಎದುರು ನೋಡುತ್ತಿದ್ದೇವೆ. ದಯವಿಟ್ಟು ನಿಮ್ಮ ಕುಟುಂಬಗಳೊಂದಿಗೆ ಬನ್ನಿ ಎಂದು ಪಾಪರಾಜಿಗಳನ್ನು ಆಮಂತ್ರಿಸಿದರು.

ಇದನ್ನೂ ಓದಿ: Anant Ambani Wedding: ಕೌಟುಂಬಿಕ ಮುನಿಸು ಮರೆತು ವರನೊಂದಿಗೆ ಜತೆಯಾಗಿ ಹೆಜ್ಜೆ ಹಾಕಿದ ಮುಖೇಶ್ ಅಂಬಾನಿ-ಅನಿಲ್ ಅಂಬಾನಿ

ಈ ಕಾರ್ಯಕ್ರಮದ ಮೂಲಕ ಅವರು ಪಾಪರಾಜಿಗಳ ಮನ ಗೆದ್ದಿರುವುದು ಮಾತ್ರವಲ್ಲ ಅವರ ವಿನಮ್ರಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.

ಜುಲೈ 12 ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅದ್ಧೂರಿ ವಿವಾಹದ ವಿಧಿವಿಧಾನಗಳ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಸಮಾರಂಭಕ್ಕೆ ಸಾಕ್ಷಿಯಾಗಲು ಪ್ರಪಂಚದಾದ್ಯಂತದ ಹಲವಾರು ಅತಿಥಿಗಳು ಸಾಕ್ಷಿಯಾಗಿದ್ದರು. ಕಿಮ್, ಕ್ಲೋಯ್ ಕಾರ್ಡಶಿಯಾನ್, ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್, ಮತ್ತು ಜಾನ್ ಸೆನಾ ಸೇರಿದಂತೆ ಹಲವಾರು ಅಂತಾರಾಷ್ಟ್ರೀಯ ರಾಜಕಾರಣಿಗಳು ಹಾಗೂ ಖ್ಯಾತನಾಮರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಮುಂಬಯಿಗೆ ಆಗಮಿಸಿದ್ದರು.

Continue Reading

ದೇಶ

Anant Ambani Wedding: ಮಗನ ಮದುವೆಯಲ್ಲಿ ರಿಲಯನ್ಸ್ ಉದ್ಯೋಗಿಗಳಿಗೂ ಭರ್ಜರಿ ಔತಣ ನೀಡಿದ ಮುಖೇಶ್ ಅಂಬಾನಿ

Anant Ambani Wedding: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ವಿವಾಹವು ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂಬಾನಿ ಕುಟುಂಬ 4 ದಿನಗಳ ಕಾಲ ವೈಭವದ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಸೋಮವಾರ ತೆರೆ ಬಿದ್ದಿದ್ದು, ಕೊನೆಯ ದಿನ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಪಾಲ್ಗೊಂಡಿದ್ದರು.

VISTARANEWS.COM


on

Anant Ambani Wedding
Koo

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani Wedding) ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್‌ ಅವರ ಪುತ್ರಿ ರಾಧಿಕಾ ಮರ್ಚಂಟ್‌ (Radhika Merchant) ಅವರ ವಿವಾಹವು ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂಬಾನಿ ಕುಟುಂಬ 4 ದಿನಗಳ ಕಾಲ ವೈಭವದ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಸೋಮವಾರ ತೆರೆ ಬಿದ್ದಿದೆ. ಕೊನೆಯ ದಿನವಾದ ಸೋಮವಾರ ಜಿಯೋ ವರ್ಲ್ಡ್ ಡ್ರೈವ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳು, ರಿಲಯನ್ಸ್ ಉದ್ಯೋಗಿಗಳು ಮತ್ತು ಅಂಬಾನಿ ಕುಟುಂಬದ ಸಿಬ್ಬಂದಿಗೆ ವಿಶೇಷ ಸಮಾರಂಭ ಆಯೋಜಿಸಲಾಗಿತ್ತು.

ಮಾಧ್ಯಮಗಳು ಮತ್ತು ರಿಲಯನ್ಸ್‌ ಸಿಬ್ಬಂದಿಗೆಂದು ವಿಶೇಷವಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಪಾಲ್ಗೊಂಡಿದ್ದರು. ಅಕ್ಷಯ್‌ ಕುಮಾರ್‌ ಅವರಿಗೆ ಕೋವಿಡ್ ಬಾಧಿಸಿದ್ದ ಹಿನ್ನೆಲೆಯಲ್ಲಿ ಅವರು ಮದುವೆಯಲ್ಲಿ ಪಾಲ್ಗೊಂಡಿರಲಿಲ್ಲ. ಹೀಗಾಗಿ ಸೋಮವಾರ ಅವರು ಸಮಾರಂಭದಕ್ಕೆ ಪತ್ನಿ ಟ್ವಿಂಕಲ್‌ ಖನ್ನಾ ಜತೆಗೆ ಆಗಮಿಸಿದ ವಧು-ವರರಿಗೆ ಶುಭಾಶಯ ತಿಳಿಸಿದ್ದರು.

ಯಾರೆಲ್ಲ ಭಾಗಿ?

ಅಂಬಾನಿ ಆಸ್ತಿಗಳ ಹೌಸ್ ಕೀಪಿಂಗ್, ಸೆಕ್ಯುರಿಟಿ, ಸೆಕ್ರೆಟರಿಯಲ್‌ ಮತ್ತು ನಿರ್ವಹಣಾ ವಿಭಾಗಗಳ ಉದ್ಯೋಗಿಗಳು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಸಾವಿರಾರು ಕಾರ್ಮಿಕರು ಮತ್ತು ಅವರ ಕುಟುಂಬಗಳ ಜತೆಗೆ ಮಾಧ್ಯಮ ಪ್ರತಿನಿಧಿಗಳೂ ಪಾಲ್ಗೊಂಡಿದ್ದರು. ಈ ಮೂಲಕ ಅನಂತ್‌-ರಾಧಿಕಾ ಮದುವೆಯ ಆಚರಣೆಗೆ ತೆರೆ ಎಳೆಯಲಾಗಿದೆ.

ಗಣ್ಯರ ದಂಡೇ ಉಪಸ್ಥಿತಿ

ಸಮಾರಂಭಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಕೂಡ ಆಗಮಿಸಿ ಮದುಮಕ್ಕಳನ್ನು ಆಶೀರ್ವದಿಸಿದ್ದರು. ಜತೆಗೆ ನಟ-ನಟಿಯರು, ಕ್ರಿಕೆಟಿಗರು, ಬೇರೆ ದೇಶಗಳ ನಾಯಕರಿಂದ ಹಿಡಿದು ಸಾವಿರಾರು ಗಣ್ಯರು, ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು. ಮಹೇಂದ್ರ ಸಿಂಗ್‌ ಧೋನಿ, ಅಮಿತಾಭ್‌ ಬಚ್ಚನ್‌, ಯಶ್‌, ದೀಪಿಕಾ ಪಡುಕೋಣೆ, ಆಲಿಯಾ ಭಟ್‌, ರಣವೀರ್‌ ಸಿಂಗ್‌, ರಣಬೀರ್‌ ಕಪೂರ್‌, ಅನನ್ಯಾ ಪಾಂಡೆ, ರಜನಿಕಾಂತ್‌, ಮಹೇಶ್‌ ಬಾಬು, ಹಾರ್ದಿಕ್‌ ಪಾಂಡ್ಯ, ಐಶ್ವರ್ಯಾ ರೈ, ದಿಶಾ ಪಟಾಣಿ, ನಯನತಾರಾ, ವಿಘ್ನೇಶ್‌ ಶಿವನ್‌, ಜೆನಿಲಿಯಾ, ರಿತೇಶ್‌ ದೇಶ್‌ಮುಖ್‌, ಮಾಧುರಿ ದೀಕ್ಷಿತ್‌, ಶಾರುಖ್‌ ಖಾನ್‌, ಸಲ್ಮಾನ್‌ ಖಾನ್‌, ಸೂರ್ಯ, ಜ್ಯೋತಿಕಾ, ರಶ್ಮಿಕಾ ಮಂದಣ್ಣ, ಪ್ರಿಯಾಂಕಾ ಚೋಪ್ರಾ, ಬ್ರಿಟನ್‌ ಮಾಜಿ ಪ್ರಧಾನಿಗಳಾದ ಬೋರಿಸ್‌ ಜಾನ್ಸನ್‌, ಟೋನಿ ಬ್ಲೇರ್‌ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಧೋನಿಯಿಂದ ರಜನಿಕಾಂತ್‌ವರೆಗೆ; ಅನಂತ್‌ ಅಂಬಾನಿ ಮದುವೆಯಲ್ಲಿ ಪಾಲ್ಗೊಂಡ ಗಣ್ಯರ ಫೋಟೊ, ವಿಡಿಯೊಗಳು ಇಲ್ಲಿವೆ

5 ಸಾವಿರ ಕೋಟಿ ರೂ. ಖರ್ಚು

ಅದ್ಧೂರಿ ವಿವಾಹ ಸಮಾರಂಭಕ್ಕೆ ಅಂದಾಜು ವೆಚ್ಚ 4,000ರಿಂದ 5000 ಕೋಟಿ ರೂ. ಎನ್ನಲಾಗಿದೆ. ಇದು ಅವರ ನಿವ್ವಳ ಆದಾಯದ ಶೇ. 0.5ರಷ್ಟು ಮಾತ್ರ! ವರದಿಗಳ ಪ್ರಕಾರ ಮುಖೇಶ್ ಅಂಬಾನಿ ಅವರ ನಿವ್ವಳ ಆದಾಯ ಮೌಲ್ಯವು 7.65 ಲಕ್ಷ ಕೋಟಿ ರೂ. ಮಾರ್ಚ್‌ನಲ್ಲಿ ಮದುವೆಯ ಪೂರ್ವಭಾವಿ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದಿತ್ತು. ಅಂಬಾನಿ ಕುಟುಂಬದ ವಿವಾಹ ಕಾರ್ಯಕ್ರಮದಲ್ಲಿ ಜಾಗತಿಕ ಗಾಯನ ಐಕಾನ್‌ಗಳಾದ ಜಸ್ಟಿನ್ ಬೀಬರ್, ರಿಹಾನ್ನಾ, ದಿಲ್ಜಿತ್ ದೋಸಾಂಜ್ ಸೇರಿದಂತೆ ಹಾಲಿವುಡ್‌-ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು.

Continue Reading

ದೇಶ

Formers MPs: ಚುನಾವಣೆಯಲ್ಲಿ ಸೋತರೂ ಸರ್ಕಾರಿ ಬಂಗಲೆ ಬಿಡದ 200 ಮಾಜಿ ಸಂಸದರು; ನೋಟಿಸ್‌ ಜಾರಿ

Formers MPs: ನಿಯಮಗಳ ಪ್ರಕಾರ, ಯಾವುದೇ ಲೋಕಸಭೆ ಸದಸ್ಯರು, ತಮ್ಮ ಸ್ಥಾನ ಕಳೆದುಕೊಂಡ ನಂತರದ ಒಂದು ತಿಂಗಳೊಳಗೆ ಸರ್ಕಾರದ ಬಂಗಲೆಯನ್ನು ತೊರೆಯಬೇಕು ಎಂಬ ನಿಯಮವಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋತವರು, ಚುನಾವಣೆ ವೇಳೆ ಟಿಕೆಟ್‌ ಸಿಗದವರು ಈಗ ಮಾಜಿಗಳಾಗಿದ್ದಾರೆ. ಆದರೂ ಅವರು ಬಂಗಲೆಗಳನ್ನು ಖಾಲಿ ಮಾಡದ ಕಾರಣ ನೋಟಿಸ್‌ ಜಾರಿಗೊಳಿಸಲಾಗಿದೆ.

VISTARANEWS.COM


on

Former MPs
Koo

ನವದೆಹಲಿ: ಕಳೆದ ಲೋಕಸಭೆ ಚುನಾವಣೆ (Lok Sabha Election 2024) ಸೋಲು ಸೇರಿ ಹಲವು ಕಾರಣಗಳಿಂದಾಗಿ ಮಾಜಿಗಳಾಗಿರುವ ಸಂಸದರಿಗೆ (Formers MPs) ಸರ್ಕಾರಿ ಬಂಗಲೆಗಳನ್ನು ತೊರೆಯಲು ಮನಸ್ಸೇ ಬರುತ್ತಿಲ್ಲ. ಹೌದು, ಲುಟಿಯೆನ್ಸ್‌ ದೆಹಲಿಯಲ್ಲಿರುವ (Lutyens’ Delhi) ಬಂಗಲೆಗಳನ್ನು ತೊರೆಯುವಂತೆ ಸುಮಾರು 200ಕ್ಕೂ ಅಧಿಕ ಲೋಕಸಭೆ ಮಾಜಿ ಸಂಸದರಿಗೆ ನೋಟಿಸ್‌ ಜಾರಿಗೊಳಿಸಲಾಗಿದೆ. ಶೀಘ್ರದಲ್ಲೇ ಬಂಗಲೆಗಳನ್ನು ತೊರೆಯಬೇಕು ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ.

“ಮಾಜಿ ಸಂಸದರಾದರೂ ಇದುವರೆಗೆ ಬಂಗಲೆಗಳನ್ನು ಖಾಲಿ ಮಾಡಿಲ್ಲ. ಹಾಗಾಗಿ, ಇದುವರೆಗೆ 200ಕ್ಕೂ ಅಧಿಕ ಮಾಜಿ ಸಂಸದರಿಗೆ ಎವಿಕ್ಷನ್‌ ನೋಟಿಸ್‌ಗಳನ್ನು ಜಾರಿಗೊಳಿಸಲಾಗಿದೆ. ಹಾಗೆಯೇ, ಇನ್ನೂ ಹೆಚ್ಚಿನ ಸಂಸದರು ಬಂಗಲೆಗಳನ್ನು ಖಾಲಿ ಮಾಡಿಲ್ಲ. ಅವರಿಗೂ ನೋಟಿಸ್‌ಗಳನ್ನು ಕಳುಹಿಸಲು ಸಿದ್ಧತೆ ನಡೆಸಲಾಗುತ್ತಿದೆ” ಎಂದು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಮೂಲಗಳು ತಿಳಿಸಿವೆ. ಮಾಜಿ ಸಂಸದರು ಬಂಗಲೆಗಳನ್ನು ಖಾಲಿ ಮಾಡದ ಕಾರಣ ನೂತನ ಸಂಸದರಿಗೆ ವಸತಿ ವ್ಯವಸ್ಥೆ ಮಾಡಲು ಕಷ್ಟವಾಗುತ್ತಿದೆ ಎಂದು ತಿಳಿದುಬಂದಿದೆ.

ಬಲವಂತದ ತೆರವಿಗೂ ಸಜ್ಜು

ಬಂಗಲೆ ತೊರೆಯುವಂತೆ ನೋಟಿಸ್‌ ಜಾರಿಗೊಳಿಸಿದರೂ ಮಾಜಿ ಸಂಸದರು ಮನೆಗಳನ್ನು ಖಾಲಿ ಮಾಡದಿದ್ದರೆ, ಬಲವಂತವಾಗಿ ಅಲ್ಲಿಂದ ತೆರವುಗೊಳಿಸಲು ಕೂಡ ಸಚಿವಾಲಯವು ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ. ನೂತನ ಸಂಸದರಿಗೆ ಮನೆಗಳನ್ನು ಹಂಚಿಕೆ ಮಾಡಲು ಆಗದ ಕಾರಣ, ಮಾಜಿ ಸಂಸದರು ಬಂಗಲೆಗಳನ್ನು ಖಾಲಿ ಮಾಡದಿದ್ದರೆ, ಅಧಿಕಾರಿಗಳನ್ನು ಕಳುಹಿಸಿ, ಬಂಗಲೆಗಳಲ್ಲಿರುವ ಪೀಠೋಪಕರಣಗಳನ್ನು ಹೊರಗೆ ಹಾಕಿ, ಬಲವಂತವಾಗಿ ಮಾಜಿ ಸಂಸದರನ್ನು ತೆರವುಗೊಳಿಸಲು ಚಿಂತನೆ ನಡೆದಿದೆ ಎಂದು ಸಚಿವಾಲಯದ ಮೂಲಗಳು ಮಾಹಿತಿ ನೀಡಿವೆ.

ನಿಯಮಗಳ ಪ್ರಕಾರ, ಯಾವುದೇ ಲೋಕಸಭೆ ಸದಸ್ಯರು, ತಮ್ಮ ಸ್ಥಾನ ಕಳೆದುಕೊಂಡ ನಂತರದ ಒಂದು ತಿಂಗಳೊಳಗೆ ಸರ್ಕಾರದ ಬಂಗಲೆಯನ್ನು ತೊರೆಯಬೇಕು ಎಂಬ ನಿಯಮವಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋತವರು, ಚುನಾವಣೆ ವೇಳೆ ಟಿಕೆಟ್‌ ಸಿಗದವರು ಈಗ ಮಾಜಿಗಳಾಗಿದ್ದಾರೆ. ಲೋಕಸಭೆ ಸಚಿವಾಲಯವು ಸಂಸದರಿಗೆ ಬಂಗಲೆಗಳನ್ನು ವಿನಿಯೋಗ ಮಾಡುತ್ತದೆ. ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯವು ಕೇಂದ್ರ ಸಚಿವರಿಗೆ ಲುಟಿಯೆನ್ಸ್‌ ದೆಹಲಿಯಲ್ಲಿ ಬಂಗಲೆಗಳನ್ನು ಹಂಚಿಕೆ ಮಾಡುತ್ತದೆ.

ಇದನ್ನೂ ಓದಿ: Amitabh Bachchan: ಹರಾಜಿಗಿದೆ ಅಮಿತಾಭ್ ಭವ್ಯ ಬಂಗಲೆ; ದರ ಎಷ್ಟು ನೋಡಿ!

Continue Reading
Advertisement
Rishabh Pant
ಕ್ರೀಡೆ7 mins ago

Rishabh Pant: ಡೆಲ್ಲಿ ತೊರೆದು ಮುಂದಿನ ಐಪಿಎಲ್​ನಲ್ಲಿ ಈ ಫ್ರಾಂಚೈಸಿ ಪರ ಆಡಲಿದ್ದಾರೆ ರಿಷಭ್​ ಪಂತ್​

Job Alert
ಉದ್ಯೋಗ17 mins ago

Job Alert: ಅಂಚೆ ಇಲಾಖೆಯಿಂದ ಬೃಹತ್‌ ನೇಮಕಾತಿ; ಕರ್ನಾಟಕದಲ್ಲಿಯೂ ಇದೆ 1,940 ಹುದ್ದೆ: ಹೀಗೆ ಅಪ್ಲೈ ಮಾಡಿ

Viral Video
Latest32 mins ago

Viral Video: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Jitan Sahani
ದೇಶ40 mins ago

Jitan Sahani: ಬಿಹಾರದಲ್ಲಿ ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ; ಮನೆ ತುಂಬ ರಕ್ತ!

karnataka assembly live
ಪ್ರಮುಖ ಸುದ್ದಿ59 mins ago

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

David Warner
ಕ್ರೀಡೆ1 hour ago

David Warner: ​ಚಾಂಪಿಯನ್ಸ್ ಟ್ರೋಫಿಗೆ ವಾರ್ನರ್​ ಆಯ್ಕೆ ಇಲ್ಲ ಎಂದ ಜಾರ್ಜ್​ ಬೈಲಿ

Kannada New Movie
ಸ್ಯಾಂಡಲ್ ವುಡ್1 hour ago

Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

Kannada In Madrasa
ಕರ್ನಾಟಕ1 hour ago

Kannada In Madrasa: ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಕೆ ಕಡ್ಡಾಯ; ಶೀಘ್ರವೇ ಆದೇಶ!

murder case set fire bagalakote
ಕ್ರೈಂ1 hour ago

Horrible Murder Case: ಶೆಡ್‌ ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಇಟ್ಟ ದುಷ್ಟರು; ಇಬ್ಬರು ಸಜೀವ ದಹನ

Iti Acharya
ಸಿನಿಮಾ2 hours ago

Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ24 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌