AP Election results 2024 live: ಆಂಧ್ರ ಪ್ರದೇಶ ವಿಧಾನಸಭೆ: ಭರ್ಜರಿ ಗೆಲುವಿನತ್ತ ಟಿಡಿಪಿ - Vistara News

ದೇಶ

AP Election results 2024 live: ಆಂಧ್ರ ಪ್ರದೇಶ ವಿಧಾನಸಭೆ: ಭರ್ಜರಿ ಗೆಲುವಿನತ್ತ ಟಿಡಿಪಿ

AP Election results 2024 live: ಆಂಧ್ರ ಪ್ರದೇಶದ ವಿಧಾನಸಭಾ ಚುನಾವಣೆಯ ಬಹುತೇಕ ಚಿತ್ರಣ ಲಭಿಸಿದೆ. ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷ (YSRCP), ಕಾಂಗ್ರೆಸ್ ನೇತೃತ್ವದ ʼಇಂಡಿಯಾʼ ಒಕ್ಕೂಟ ಮತ್ತು ಬಿಜೆಪಿ, ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (TDP) ಮತ್ತು ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ (JSP) ಒಳಗೊಂಡ ಎನ್‌ಡಿಎ (NDA) ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಸದ್ಯ ಟಿಡಿಪಿ ಮುನ್ನಡೆ ಕಾಯ್ದುಕೊಂಡಿದೆ.

VISTARANEWS.COM


on

AP Election results 2024 live
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: ಆಂಧ್ರ ಪ್ರದೇಶದ ವಿಧಾನಸಭಾ ಚುನಾವಣೆಯ ಬಹುತೇಕ ಚಿತ್ರಣ ಲಭಿಸಿದೆ. ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷ (YSRCP), ಕಾಂಗ್ರೆಸ್ ನೇತೃತ್ವದ ʼಇಂಡಿಯಾʼ ಒಕ್ಕೂಟ ಮತ್ತು ಬಿಜೆಪಿ, ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (TDP) ಮತ್ತು ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ (JSP) ಒಳಗೊಂಡ ಎನ್‌ಡಿಎ (NDA) ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಸದ್ಯ ಟಿಡಿಪಿ ಮುನ್ನಡೆ ಕಾಯ್ದುಕೊಂಡಿದೆ (AP Election results 2024 live).

ಟಿಡಿಪಿ 125 ಕ್ಷೇತ್ರಗಳಲ್ಲಿ ಮುಂದಿದ್ದು, ವೈಎಸ್‌ಆರ್‌ಸಿ 20, ಜೆಎಸ್‌ಪಿ 17 ಮತ್ತು ಬಿಜೆಪಿ 7 ಕಡೆಗಳಲ್ಲಿ ಮುನ್ನಡೆ ಸಾಧಿಸಿದೆ. ಒಟ್ಟಿನಲ್ಲಿ ಎನ್‌ಡಿಯ 149 ಕಡೆ ಮುನ್ನಡೆ ಕಾಯ್ದುಕೊಂಡಿದೆ. ಆಂಧ್ರಪ್ರದೇಶದಲ್ಲಿ 175 ವಿಧಾನಸಭಾ ಸ್ಥಾನಗಳಿದ್ದು, ಬಹುಮತ ಪಡೆಯಲು 88 ಕ್ಷೇತ್ರಗಳಲ್ಲಿ ಜಯ ಗಳಿಸುವುದು ಅಗತ್ಯ.

ಪವನ್‌ ಕಲ್ಯಾಣ್‌ ಮುನ್ನಡೆ

ಆಂಧ್ರಪ್ರದೇಶದ ಪಿತಾಪುರಂ ವಿಧಾನಸಭಾ ಕ್ಷೇತ್ರದಲ್ಲಿ ನಟ ಮತ್ತು ಜನಸೇನಾ ಸಂಸ್ಥಾಪಕ ಪವನ್ ಕಲ್ಯಾಣ್ ಅವರು ಪ್ರಬಲ ಮುನ್ನಡೆಯೊಂದಿಗೆ ತಮ್ಮ ಮೊದಲ ಗೆಲುವಿನತ್ತ ಸಾಗುತ್ತಿದ್ದಾರೆ. ಪವನ್‌ ಕಲ್ಯಾಣ್ ವಿರುದ್ಧ ಜಗನ್ ಮೋಹನ್ ರೆಡ್ಡಿ ಅವರ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಪಿ) ವಂಗಾ ಗೀತಾ ವಿಶ್ವನಾಥಂ ಸ್ಪರ್ಧಿಸುತ್ತಿದ್ದಾರೆ.

ಪವನ್ ಕಲ್ಯಾಣ್ ಈ ಬಾರಿ ಲೋಕಸಭಾ ಮತ್ತು ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಎನ್‌ಡಿಎ ಜತೆಗಿನ ಸೀಟು ಹಂಚಿಕೆ ಒಪ್ಪಂದದ ಭಾಗವಾಗಿ, ಟಿಡಿಪಿಗೆ 144 ವಿಧಾನಸಭಾ ಮತ್ತು 17 ಲೋಕಸಭಾ ಕ್ಷೇತ್ರಗಳನ್ನು ನೀಡಲಾಗಿತ್ತು. ಬಿಜೆಪಿ 6 ಲೋಕಸಭಾ ಮತ್ತು 10 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಒಪ್ಪಂದದ ಪ್ರಕಾರ, ಜನಸೇನಾ 2 ಲೋಕಸಭಾ ಮತ್ತು 21 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿದೆ.

ವೈಎಸ್ಆರ್‌ಪಿಗೆ ತೀವ್ರ ಮುಖಭಂಗ

2019ರ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿ 151 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ಆಗ ಆಡಳಿತದಲ್ಲಿದ್ದ ಟಿಡಿಪಿ ಕೇವಲ 23 ಸ್ಥಾನಗಳನ್ನು ಗೆದ್ದು ಮುಖಭಂಗ ಅನುಭವಿಸಿತ್ತು. ಪವನ್‌ ಕಲ್ಯಾಣ್‌ ನೇತೃತ್ವದ ಜೆಎಸ್‌ಪಿ ಒಂದೇ ಒಂದು ಸ್ಥಾನವನ್ನು ಗೆದ್ದಿದ್ದರೆ, ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಖಾತೆ ತೆರೆದಿರಲಿಲ್ಲ. ಈ ಬಾರಿ ಚಿತ್ರಣ ಸಂಪೂರ್ಣ ಬದಲಾಗಿದೆ. ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರಿಗೆ ತೀವ್ರ ಹಿನ್ನಡೆಯಾಗಿದೆ.

ಪ್ರಮುಖ ಅಭ್ಯರ್ಥಿಗಳು

ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ (ವೈಎಸ್‌ಆರ್‌ಸಿಪಿ), ಎನ್. ಚಂದ್ರಬಾಬು ನಾಯ್ಡು (ಟಿಡಿಪಿ), ಪವನ್ ಕಲ್ಯಾಣ್ (ಜೆಎಸ್‌ಪಿ), ಕಿಲ್ಲಿ ಕೃಪಾರಾಣಿ (ಕಾಂಗ್ರೆಸ್), ಧರ್ಮನಾ ಪ್ರಸಾದ ರಾವ್ (ವೈಎಸ್‌ಆರ್‌ಸಿಪಿ), ಧರ್ಮನಾ ಕೃಷ್ಣ ದಾಸ್ (ವೈಎಸ್‌ಆರ್‌ಸಿಪಿ), ಪಾಮುಲಾ ಪುಷ್ಪ ಶ್ರೀವಾಣಿ ( ವೈಎಸ್‌ಆರ್‌ಸಿಪಿ), ನಲ್ಲಮಿಲ್ಲಿ ರಾಮಕೃಷ್ಣ ರೆಡ್ಡಿ (ಬಿಜೆಪಿ), ರಘು ರಾಮ ಕೃಷ್ಣರಾಜು (ಟಿಡಿಪಿ), ಚಿಂತಾಮನೇನಿ ಪ್ರಭಾಕರ್ (ಟಿಡಿಪಿ), ವೈಎಸ್ ಚೌಧರಿ (ಬಿಜೆಪಿ), ನಾದೆಂಡ್ಲ ಮನೋಹರ್ (ಜೆಎಸ್‌ಪಿ), ಕನ್ನಾ ಲಕ್ಷ್ಮೀನಾರಾಯಣ (ಟಿಡಿಪಿ), ಅದಾಲ ಪ್ರಭಾಕರ ರೆಡ್ಡಿ (ವೈಎಸ್‌ಆರ್‌ಸಿಪಿ), ಅಮ್ಜತ್ ಬಾಷಾ ಶೇಕ್ ಬೇಪಾರಿ (ವೈಎಸ್‌ಆರ್‌ಸಿಪಿ), ನಂದಮೂರಿ ಬಾಲಕೃಷ್ಣ (ಟಿಡಿಪಿ), ನಲ್ಲಾರಿ ಕಿಶೋರ್ ಕುಮಾರ್ ರೆಡ್ಡಿ (ಟಿಡಿಪಿ), ನಾರಾ ಲೋಕೇಶ್ (ಟಿಡಿಪಿ) ಮತ್ತಿತರರು ಆಂಧ್ರಪ್ರದೇಶದ ವಿಧಾನಸಭಾ ಕಣದಲ್ಲಿರುವ ಕೆಲವು ಪ್ರಮುಖ ಅಭ್ಯರ್ಥಿಗಳು.

ಇದನ್ನೂ ಓದಿ: Odisha Assembly Result 2024: ಅಸೆಂಬ್ಲಿ ಎಲೆಕ್ಷನ್‌; ಮತ ಎಣಿಕೆ ಶುರು-ಒಡಿಶಾದಲ್ಲಿ ಮತ್ತೆ ಗದ್ದುಗೆ ಏರುತ್ತಾ ಬಿಜೆಡಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

ಐಸಿಐಸಿಐ ಬ್ಯಾಂಕ್, ಎಸ್‌ಬಿಐ ಕ್ರೆಡಿಟ್ ಕಾರ್ಡ್ ಸೇವೆಗಳಲ್ಲಿ ಪರಿಷ್ಕರಣೆ, ಯೂನಿಯನ್ ಬಜೆಟ್‌ನ ಘೋಷಣೆ ಮತ್ತು ಆದಾಯ ತೆರಿಗೆ ರಿಟರ್ನ್ಸ್, ಡಿಜಿಟಲ್ ವ್ಯಾಲೆಟ್‌ಗಳಿಗೆ ಸಂಬಂಧಿಸಿ ಹೊಸ ನಿಯಮಗಳು (New Rules) ಜಾರಿ ಸೇರಿ ಈ ತಿಂಗಳಲ್ಲಿ ಹಲವು ಪ್ರಮುಖ ಬದಲಾವಣೆಗಳು ಆಗಲಿವೆ.

VISTARANEWS.COM


on

By

New Rules
Koo

ಜುಲೈ ತಿಂಗಳಿಗೆ ಹೆಜ್ಜೆ ಇಟ್ಟಿದ್ದೇವೆ. ಈ ಸಂದರ್ಭದಲ್ಲಿ ಕ್ರೆಡಿಟ್ ಕಾರ್ಡ್ (credit card) ಬಳಕೆದಾರರು, ತೆರಿಗೆದಾರರು (taxpayers) ಮತ್ತು ಡಿಜಿಟಲ್ ವ್ಯಾಲೆಟ್ (digital wallet) ಹೊಂದಿರುವವರು ಗಮನಿಸಬೇಕಾದ ಪ್ರಮುಖ ವಿಷಯಗಳಿವೆ. 2024ರ ಜುಲೈನಲ್ಲಿ ಹಲವು ಪ್ರಮುಖ (New Rules) ಬದಲಾವಣೆಗಳು ಆಗಲಿವೆ.

ಐಸಿಐಸಿಐ ಬ್ಯಾಂಕ್ (ICICI bank) ಮತ್ತು ಎಸ್‌ಬಿಐ (SBI) ಮೂಲಕ ಕ್ರೆಡಿಟ್ ಕಾರ್ಡ್ ಸೇವೆಗಳಲ್ಲಿ ಪರಿಷ್ಕರಣೆ, ಯೂನಿಯನ್ ಬಜೆಟ್‌ನ ಘೋಷಣೆ ಮತ್ತು ಆದಾಯ ತೆರಿಗೆ ರಿಟರ್ನ್ಸ್, ಡಿಜಿಟಲ್ ವ್ಯಾಲೆಟ್‌ಗಳಿಗೆ ಹೊಸ ನಿಯಮಗಳು ಸೇರಿವೆ.

ಯಾವುದೆಲ್ಲ ಪ್ರಮುಖ ಬದಲಾವಣೆ ?

ಆದಾಯ ತೆರಿಗೆ

2024-25ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್ (ITR) ಅನ್ನು 2024ರ ಜುಲೈ 31ರೊಳಗೆ ಸಲ್ಲಿಸಬೇಕು. ಸುಗಮ ಮತ್ತು ಸಮಯೋಚಿತ ಸಲ್ಲಿಕೆಯನ್ನು ಖಚಿತಪಡಿಸಿಕೊಳ್ಳಲು ತೆರಿಗೆದಾರರು ಫೈಲಿಂಗ್ ಪ್ರಕ್ರಿಯೆಯನ್ನು ಮೊದಲೇ ಪ್ರಾರಂಭಿಸುವುದು ಸೂಕ್ತ.

ಕ್ರೆಡಿಟ್ ಕಾರ್ಡ್

ಐಸಿಐಸಿಐ ಬ್ಯಾಂಕ್ ಚಾರ್ಜ್ ಸ್ಲಿಪ್ ವಿನಂತಿ, ಚೆಕ್/ನಗದು ಪಿಕ್ ಅಪ್, ಡಯಲ್-ಎ-ಡ್ರಾಫ್ಟ್ ವಹಿವಾಟು, ಔಟ್‌ಸ್ಟೇಷನ್ ಚೆಕ್ ಪ್ರಕ್ರಿಯೆ ಮತ್ತು ನಕಲಿ ಬ್ಯಾಂಕ್ ಸ್ಟೇಟ್‌ಮೆಂಟ್‌ಗಳಂತಹ ವಿವಿಧ ಸೇವೆಗಳಿಗೆ ಶುಲ್ಕವನ್ನು ನಿಲ್ಲಿಸಲಿದ್ದು, ಕಾರ್ಡ್ ಬದಲಾವಣೆಗೆ 200 ರೂ. ಶುಲ್ಕ ಜಾರಿ ಮಾಡಿದೆ.

ಎಸ್‌ಬಿಐ ಕಾರ್ಡ್‌ಗಳು ಜುಲೈ 15ರಿಂದ ಅನೇಕ ಕಾರ್ಡ್‌ಗಳಲ್ಲಿ ಸರ್ಕಾರಕ್ಕೆ ಸಂಬಂಧಿಸಿದ ವಹಿವಾಟುಗಳಿಗೆ ರಿವಾರ್ಡ್ ಪಾಯಿಂಟ್‌ಗಳನ್ನು ನೀಡುವುದನ್ನು ನಿಲ್ಲಿಸುತ್ತವೆ.

ಆಕ್ಸಿಸ್ ಬ್ಯಾಂಕ್‌ ಸಿಟಿ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳನ್ನು ಜುಲೈ 15ರೊಳಗೆ ನಿಲ್ಲಿಸಲಿದೆ. ಹೊಸ ಕಾರ್ಡ್ ಹೆಸರು ಮತ್ತು ರಿವಾರ್ಡ್ ಪಾಯಿಂಟ್‌ಗಳೊಂದಿಗೆ ಬರಲಿದೆ.

ಆರ್‌ಬಿಐ ಎಲ್ಲಾ ಕ್ರೆಡಿಟ್ ಕಾರ್ಡ್ ಪಾವತಿಗಳನ್ನು ಜುಲೈ 1ರಿಂದ ಭಾರತ್ ಬಿಲ್ ಪಾವತಿ ವ್ಯವಸ್ಥೆ (BBPS) ಮೂಲಕ ಪ್ರಕ್ರಿಯೆಗೊಳಿಸಬೇಕೆಂದು ಆದೇಶಿಸಿದೆ. ಇದು ಹಲವಾರು ಪ್ರಮುಖ ಬ್ಯಾಂಕ್‌ಗಳು ಮತ್ತು ಫಿನ್‌ಟೆಕ್ ಪ್ಲಾಟ್‌ಫಾರ್ಮ್‌ಗಳ ಮೇಲೆ ಪರಿಣಾಮ ಬೀರಲಿದೆ.

ಯೆಸ್ ಬ್ಯಾಂಕ್ ತನ್ನ ಲಾಂಜ್ ಪ್ರವೇಶ ನಿಯಮಗಳನ್ನು ಪರಿಷ್ಕರಿಸಿದೆ. ಪೂರಕ ಪ್ರವೇಶಕ್ಕಾಗಿ ಪ್ರತಿ ತ್ರೈಮಾಸಿಕಕ್ಕೆ ಕನಿಷ್ಠ 35,000 ರೂ. ಖರ್ಚು ಮಾಡಬೇಕಾಗುತ್ತದೆ.

2024ರ ಬಜೆಟ್ ಪರಿಣಾಮ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ತಿಂಗಳು ಕೇಂದ್ರ ಬಜೆಟ್ 2024 ಅನ್ನು ಪ್ರಕಟಿಸಲಿದ್ದಾರೆ. ಹಲವು ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ. ಆದಾಯ ತೆರಿಗೆಗಳಲ್ಲಿ ಹೊಂದಾಣಿಕೆ, ವೈದ್ಯಕೀಯ ವೆಚ್ಚ ಕಡಿತ, ಹೆಚ್ಚುವರಿ ತೆರಿಗೆ ರಿಯಾಯಿತಿ ಮತ್ತು ಪಿಂಚಣಿ ಪ್ರಯೋಜನಗಳನ್ನು ಇದು ಒಳಗೊಂಡಿರುವ ಸಾಧ್ಯತೆ ಇದೆ.

ಪೇಟಿಎಂ ವ್ಯಾಲೆಟ್‌ಗಳು

ಶೂನ್ಯ ಬ್ಯಾಲೆನ್ಸ್ ಹೊಂದಿರುವ, ಕಳೆದ ವರ್ಷ ಅಥವಾ ಹೆಚ್ಚಿನ ಅವಧಿಗೆ ಯಾವುದೇ ವಹಿವಾಟುಗಳಿಲ್ಲದ ಪೇಟಿಎಂ ನಿಷ್ಕ್ರಿಯ ವ್ಯಾಲೆಟ್‌ಗಳನ್ನು ಮುಚ್ಚಲಿದೆ. ಈ ಪ್ರಕ್ರಿಯೆ 2024ರ ಜುಲೈ 20ರಿಂದ ಪ್ರಾರಂಭವಾಗುತ್ತದೆ. ವ್ಯಾಲೆಟ್ ಮುಚ್ಚುವ ಮೊದಲು ಬಳಕೆದಾರರಿಗೆ ಸೂಚನೆಯನ್ನು ನೀಡಲಾಗುತ್ತದೆ.

ಇದನ್ನೂ ಓದಿ: Money Guide: ಸಾಲಕ್ಕೆ ಅಪ್ಲೈ ಮಾಡುವ ಮುನ್ನ ಈ ಅಂಶ ನಿಮಗೆ ತಿಳಿದಿರಲೇ ಬೇಕು

ಡೆಬಿಟ್ ಕಾರ್ಡ್

ಪಂಜಾಬ್ ನ್ಯಾಷನಲ್ ಬ್ಯಾಂಕ್ 2024ರ ಜುಲೈ 1ರಿಂದ ರುಪೇ ಪ್ಲಾಟಿನಂ ಡೆಬಿಟ್ ಕಾರ್ಡುದಾರರಿಗೆ ಪಿಎನ್‌ಬಿ ತನ್ನ ಲಾಂಜ್‌ ಪ್ರವೇಶ ಪ್ರೋಗ್ರಾಂ ಅನ್ನು ನವೀಕರಿಸಿದೆ. ಇದರಲ್ಲಿ ಹೊಸ ನಿಯಮಗಳು ಅನ್ವಯವಾಗಲಿದೆ. ಪ್ರತಿ ತ್ರೈಮಾಸಿಕಕ್ಕೆ ದೇಶೀಯ ವಿಮಾನ ನಿಲ್ದಾಣ ಅಥವಾ ರೈಲ್ವೇ ಲಾಂಜ್ ಪ್ರವೇಶ ವರ್ಷಕ್ಕೆ ಅನುಮತಿ ನೀಡುತ್ತದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕೋಣೆ ಪ್ರವೇಶ, ವಿಮಾನ ನಿಲ್ದಾಣದ ಲಾಂಜ್ ಪ್ರವೇಶಕ್ಕಾಗಿ 2 ರೂ. ಅಧಿಕೃತ ಶುಲ್ಕ ವಿಧಿಸಲಾಗುತ್ತದೆ.

Continue Reading

ದೇಶ

Amit Shah: ಹೊಸ ಕ್ರಿಮಿನಲ್ ಕಾನೂನಿನಲ್ಲಿ ಶಿಕ್ಷೆಯ ಬದಲು ನ್ಯಾಯಕ್ಕೆ ಪ್ರಾಧಾನ್ಯತೆ; ಅಮಿತ್ ಶಾ

Amit Shah: ಇಂದು ಜಾರಿಗೆ ಬಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಶಿಕ್ಷೆಯ ಬದಲಿಗೆ ನ್ಯಾಯವನ್ನು ಖಚಿತಪಡಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ವಸಾಹತುಶಾಹಿ ಯುಗದ ಅಪರಾಧ ಸಂಹಿತೆಯ ಕೂಲಂಕಷ ಪರಿಶೀಲನೆ ನಡೆಸಿ ನ್ಯಾಯ ವ್ಯವಸ್ಥೆಗೆ ʼಭಾರತೀಯ ಆತ್ಮʼವನ್ನು ಸೇರಿಸಲಾಗಿದೆ ಎಂದು ಹೇಳಿದ್ದಾರೆ.

VISTARANEWS.COM


on

Amith Shah
Koo

ನವದೆಹಲಿ: ಇಂದು (ಜುಲೈ 1) ಜಾರಿಗೆ ಬಂದ ಮೂರು ಹೊಸ ಕ್ರಿಮಿನಲ್ ಕಾನೂನು (New Criminal Laws)ಗಳು ಶಿಕ್ಷೆಯ ಬದಲಿಗೆ ನ್ಯಾಯವನ್ನು ಖಚಿತಪಡಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಸ್ವಾತಂತ್ರ್ಯ ಪಡೆದು 77 ವರ್ಷಗಳ ಬಳಿಕ ದೇಶವು ಸಂಪೂರ್ಣವಾಗಿ ‘ಸ್ವದೇಶಿ’ ಕಾನೂನು ವ್ಯವಸ್ಥೆಯನ್ನು ಹೊಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಸಾಹತುಶಾಹಿ ಯುಗದ ಅಪರಾಧ ಸಂಹಿತೆಯ ಕೂಲಂಕಷ ಪರಿಶೀಲನೆ ನಡೆಸಿ ನ್ಯಾಯ ವ್ಯವಸ್ಥೆಗೆ ʼಭಾರತೀಯ ಆತ್ಮʼವನ್ನು ಸೇರಿಸಲಾಗಿದೆ ಎಂದು ಹೇಳಿದ್ದಾರೆ. ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೆ ಒಳಪಡಿಸಲಾಗಿದೆ. ಇವುಗಳ ಬದಲಾಗಿ ಮೂರು ಹೊಸ ಕಾನೂನುಗಳು (New Laws) ಇಂದಿನಿಂದಲೇ (ಜುಲೈ 1) ದೇಶಾದ್ಯಂತ ಜಾರಿಗೆ ಬಂದಿವೆ.

ಅಮಿತ್‌ ಶಾ ಹೇಳಿದ್ದೇನು?

ಮಹಿಳೆಯರ ವಿರುದ್ಧದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ʼʼಹೊಸ ಕಾನೂನು ಸಂತ್ರಸ್ತೆಯ ಹೇಳಿಕೆಯನ್ನು ಅವರ ಮನೆಯಲ್ಲಿ ದಾಖಲಿಸಲು ಅವಕಾಶ ನೀಡುತ್ತದೆ ಮತ್ತು ಸಾಮಾಜಿಕ ಕಳಂಕದಿಂದ ಆಕೆಯನ್ನು ರಕ್ಷಿಸುವ ಉದ್ದೇಶದಿಂದ ಆನ್‌ಲೈನ್‌ ಎಫ್ಐಆರ್ ಸೌಲಭ್ಯವನ್ನೂ ಜಾರಿಗೆ ತರಲಾಗಿದೆ” ಎಂದು ತಿಳಿಸಿದ್ದಾರೆ.

“ಸಾಮಾಹಿಕ ಹತ್ಯೆ ಪ್ರಕರಣದ ಬಗ್ಗೆ ಈ ಹಿಂದೆ ಯಾವುದೇ ಪ್ರತ್ಯೇಕ ಕಾನೂನಿನ ಪ್ರಸ್ತಾವ ಇರಲಿಲ್ಲ. ಈಗ ಅದಕ್ಕೂ ಅವಕಾಶ ಕಲ್ಪಿಸಲಾಗಿದೆ. ಇದು ಬಹುದಿನಗಳ ಬೇಡಿಕೆಯಾಗಿತ್ತು. ಅಲ್ಲದೆ ನಾವು ದೇಶದ್ರೋಹದ ವಿಭಾಗವನ್ನು ಸಂಪೂರ್ಣವಾಗಿ ತೆಗೆದು ಹಾಕಿದ್ದೇವೆ ಮತ್ತು ರಾಷ್ಟ್ರ ವಿರೋಧಿ ಚಟುವಟಿಕೆಗಳಿಗಾಗಿ ಹೊಸ ವಿಭಾಗವನ್ನು ತಂದಿದ್ದೇವೆ. ಈ ಹಿಂದೆ ಸರ್ಕಾರದ ವಿರುದ್ಧ ಹೇಳಿಕೆ ನೀಡುವುದು ಅಪರಾಧವಾಗಿತ್ತು. ಈಗ ಭಾರತದ ಏಕತೆ ಮತ್ತು ಸಾರ್ವಭೌಮತ್ವಕ್ಕೆ ಹಾನಿ ಮಾಡುವ ಪ್ರಯತ್ನಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಅವಕಾಶ ನೀಡುತ್ತದೆ” ಎಂದು ಅಮಿತ್‌ ಶಾ ವಿವರಿಸಿದ್ದಾರೆ.

ಹೊಸ ಕ್ರಿಮಿನಲ್ ಕಾನೂನುಗಳು ಆಧುನಿಕ ಕಾನೂನು ವ್ಯವಸ್ಥೆಯನ್ನು ವ್ಯಾಖ್ಯಾನಿಸುತ್ತವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. “ನಾವು ಕೇವಲ ತಂತ್ರಜ್ಞಾನವನ್ನು ಅಳವಡಿಸಿಕೊಂಡಿಲ್ಲ, ಮುಂದಿನ 50 ವರ್ಷಗಳಲ್ಲಿ ಸಂಭವಿಸಬಹುದಾದ ತಾಂತ್ರಿಕ ಬದಲಾವಣೆಗಳನ್ನು ಊಹಿಸಿ ಅದಕ್ಕೆ ತಕ್ಕಂತೆ ಬದಲಾವಣೆ ತಂದಿದ್ದೇವೆ. ಇದು ವಿಶ್ವದ ಅತ್ಯಂತ ಆಧುನಿಕ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಾಗಲಿದೆ ಎನ್ನುವ ವಿಶ್ವಾಸವಿದೆʼʼ ಎಂದಿದ್ದಾರೆ.

ʼʼದಾಳಿ ಮತ್ತು ಶೋಧದ ವೇಳೆ ವಿಡಿಯೊಗ್ರಫಿ ಈಗ ಕಡ್ಡಾಯವಾಗಿದೆ. ಇದರಿಂದ ಯಾರನ್ನೂ ಮೋಸ ಮಾಡಲು ಸಾಧ್ಯವಿಲ್ಲ. ಅತ್ಯಾಚಾರ ಅಥವಾ ಲೈಂಗಿಕ ಕಿರುಕುಳದಿಂದ ಬದುಕುಳಿದವರ ಇ-ಸ್ಟೇಟ್‌ಮೆಂಟ್‌ಗೆ ಇನ್ನು ಕಾನೂನು ಮಾನ್ಯತೆ ಇರಲಿದೆʼʼ ಎಂದು ಅವರು ತಿಳಿಸಿದ್ದಾರೆ.

ಪ್ರತಿಪಕ್ಷಗಳ ನಡೆಗೆ ಟೀಕೆ

ಹೊಸ ಕಾನೂನುಗಳ ಬಗ್ಗೆ ಸರಿಯಾಗಿ ಚರ್ಚಿಸಲಾಗಿಲ್ಲ ಮತ್ತು 146 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ ನಂತರ ಸಂಸತ್ತಿನಲ್ಲಿ ಇದನ್ನು ಅಂಗೀಕರಿಸಲಾಗಿದೆ ಎಂದು ವಿರೋಧ ಪಕ್ಷ ಆರೋಪಕ್ಕೂ ಅಮಿತ್‌ ಶಾ ಉತ್ತರಿಸಿದ್ದಾರೆ. ʼʼಸಂಸದರನ್ನು ಸಾಮೂಹಿಕವಾಗಿ ಅಮಾನತುಗೊಳಿಸಿದ ನಂತರ ಮಸೂದೆಗಳನ್ನು ತರಲಾಗಿದೆ ಎಂಬುದು ಮತ್ತೊಂದು ಸುಳ್ಳು. ಹೊಸ ಕಾನೂನು ಜಾರಿಗೊಳಿಸುವ ಮುನ್ನ ನಮ್ಮ ಸಚಿವಾಲಯವು ಎಲ್ಲ ಸಂಸದರು, ಮುಖ್ಯಮಂತ್ರಿಗಳು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರು ಮತ್ತು ಅಧಿಕಾರಿಗಳಿಂದ ಸಲಹೆ ಪಡೆದುಕೊಂಡಿದೆ. ಈ ಎಲ್ಲ ಸಲಹೆಗಳನ್ನು ಅಧ್ಯಯನ ಮಾಡಲಾಗಿದೆ. ಈ ವಿಷಯದ ಬಗ್ಗೆ ಚರ್ಚಿಸಲು ನಾನು 158 ಸಭೆಗಳ ಅಧ್ಯಕ್ಷತೆ ವಹಿಸಿದ್ದೇನೆ. ಮಸೂದೆಯ ಚರ್ಚೆ ವೇಳೆ ಎಲ್ಲ ಪಕ್ಷಗಳ ಸದಸ್ಯರು ಭಾಗವಹಿಸಿದ್ದರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: New Criminal Laws : ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ; ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ!

ʼʼನಾಲ್ಕೈದು ರಾಜಕೀಯ ಶೈಲಿಯ ಸಲಹೆಗಳನ್ನು ಹೊರತುಪಡಿಸಿ, ಪ್ರತಿಯೊಂದು ಸಲಹೆಯನ್ನು ಅಳವಡಿಸಿಕೊಳ್ಳಲಾಗಿದೆ. ಜತೆಗೆ 93 ತಿದ್ದುಪಡಿಗಳನ್ನು ಮಾಡಲಾಗಿದೆ. ಮಸೂದೆಯನ್ನು ಮತ್ತೆ ಕ್ಯಾಬಿನೆಟ್ ಅನುಮೋದಿಸಿದ ಬಳಿಕ ಅದನ್ನು ಸಂಸತ್ತಿನಲ್ಲಿ ಮಂಡಿಸಲಾಯಿತು. ಶತಮಾನಗಳ ನಂತರ ನಡೆಯುತ್ತಿರುವ ಇಂತಹ ಬದಲಾವಣೆಗೆ ರಾಜಕೀಯ ಬಣ್ಣ ನೀಡುವುದು ಸರಿಯಲ್ಲ. ಏನಾದರೂ ಸಂದೇಹಗಳಿದ್ದರೆ ನೇರ ನನ್ನ ಬಳಿಗೆ ಬಂದರೆ ಚರ್ಚೆ ನಡೆಸಲು ಸಿದ್ಧʼʼ ಎಂದು ತಿಳಿಸಿದ್ದಾರೆ.

Continue Reading

ದೇಶ

Parliament Sessions: ಹಿಂದೂ ಹಿಂಸಾವಾದಿ ಹೇಳಿಕೆ; ಸಂಸತ್‌ನಲ್ಲಿ ರಾಹುಲ್‌-ಮೋದಿ ಜಟಾಪಟಿ

Parliament Sessions: ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ವಿರುದ್ಧ ವಾಗ್ದಾಳಿ ಆರಂಭಿಸಿದ ರಾಹುಲ್‌, ಹಿಂದೂ ಧರ್ಮ ಹಾಗೂ ನಮ್ಮ ಅನೇಕ ಹಿಂದೂ ಮಹಾಪುರುಷರು ಅಹಿಂಸೆಯನ್ನು ಪ್ರತಿಪಾದಿಸುತ್ತಾರೆ. ಜೀಸಸ್‌ ಕ್ರೈಸ್ಟ್‌ ಕೂಡ ಅಹಿಂಸೆಯನ್ನೇ ಪ್ರತಿಪಾದಿಸುತ್ತಾನೆ. ಸ್ವತಃ ಕೈಯಲ್ಲಿ ತ್ರಿಶೂಲ ಹಿಡಿದಿರುವ ಮಹಾಶಿವನೂ ಅಹಿಂಸೆಯನ್ನೇ ಹೇಳುತ್ತಾನೆ. ಆದರೆ ದಿನದ 24 ಹಿಂದೂಗಳೆಂದು ಹೇಳುತ್ತಾ ತಿರುಗಾಡುವವರು ಹಿಂಸೆ, ಶತ್ರುತ್ವ, ಅಸತ್ಯವನ್ನೇ ಹೇಳುತ್ತಿದ್ದಾರೆ. ನೀವು ಹಿಂದೂಗಳೇ ಅಲ್ಲ ಎಂದು ಕಿಡಿ ಕಾರಿದರು

VISTARANEWS.COM


on

Parliament Sessions
Koo

ಹೊಸದಿಲ್ಲಿ: ದಿನದ 24 ಗಂಟೆ ಹಿಂದೂಗಳೆಂದು ಹೇಳಿಕೊಂಡು ತಿರುಗುವವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಸಂಸತ್‌ ಅಧಿವೇಶನ(Parliament Sessions)ದಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi) ಹೇಳಿಕೆ ನೀಡಿದ್ದು, ಈ ವಿಚಾರ ಭಾರೀ ಕೋಲಾಹಲವನ್ನೇ ಸೃಷ್ಟಿಸಿತ್ತು. ರಾಹುಲ್‌ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸೇರಿದಂತೆ ಆಡಳಿತ ಪಕ್ಷ ನಾಯಕರು ಭಾರೀ ವಿರೋಧ ವ್ಯಕ್ತಪಡಿಸಿದ್ದು, ಮಾತ್ರವಲ್ಲದೇ ತಕ್ಷಣ ರಾಹುಲ್‌ ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದ ಘಟನೆಗೆ ಇಂದು ಲೋಕಸಭೆ ಸಾಕ್ಷಿಯಾಯ್ತು.

ರಾಹುಲ್‌ ಹೇಳಿದ್ದೇನು?

ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ವಿರುದ್ಧ ವಾಗ್ದಾಳಿ ಆರಂಭಿಸಿದ ರಾಹುಲ್‌, ಹಿಂದೂ ಧರ್ಮ ಹಾಗೂ ನಮ್ಮ ಅನೇಕ ಹಿಂದೂ ಮಹಾಪುರುಷರು ಅಹಿಂಸೆಯನ್ನು ಪ್ರತಿಪಾದಿಸುತ್ತಾರೆ. ಜೀಸಸ್‌ ಕ್ರೈಸ್ಟ್‌ ಕೂಡ ಅಹಿಂಸೆಯನ್ನೇ ಪ್ರತಿಪಾದಿಸುತ್ತಾನೆ. ಸ್ವತಃ ಕೈಯಲ್ಲಿ ತ್ರಿಶೂಲ ಹಿಡಿದಿರುವ ಮಹಾಶಿವನೂ ಅಹಿಂಸೆಯನ್ನೇ ಹೇಳುತ್ತಾನೆ. ಆದರೆ ದಿನದ 24 ಗಂಟೆ ಹಿಂದೂಗಳೆಂದು ಹೇಳುತ್ತಾ ತಿರುಗಾಡುವವರು ಹಿಂಸೆ, ಶತ್ರುತ್ವ, ಅಸತ್ಯವನ್ನೇ ಹೇಳುತ್ತಿದ್ದಾರೆ. ನೀವು ಹಿಂದೂಗಳೇ ಅಲ್ಲ ಎಂದು ಕಿಡಿ ಕಾರಿದರು.

ಪ್ರಧಾನಿ ಮೋದಿ ಆಕ್ಷೇಪ

ಇನ್ನು ರಾಹುಲ್‌ ಮಾತು ಪುರ್ಣಗೊಳ್ಳುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಆಡಳಿತ ಪಕ್ಷ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎಲ್ಲಾ ಹಿಂದೂಗಳನ್ನು ಹಿಂಸಾವಾದಿಗಳು ಹೇಳುತ್ತಿರುವುದು ತಪ್ಪು. ಹಿಂದೂಗ ಸಮುದಾಯವನ್ನು ಹಿಂಸಾವಾದಿಗಳೆಂದು ಕರೆಯುತ್ತಿರುವುದು ಗಂಭೀರವಾದ ಸಂಗತಿ ಎಂದಿದ್ದಾರೆ. ಇದಕ್ಕೆ ವಿರೋದ ವ್ಯಕ್ತಪಡಿಸಿದ ರಾಹುಲ್‌ ಕೇವಲ ಬಿಜೆಪಿ, ಆರ್‌ಎಸ್‌ಎಸ್‌ ನವರನ್ನು “ನಾನು ಉಲ್ಲೇಖಿಸಿ ಹೇಳಿರುವುದೇ ಹೊರತು ಪೂರ್ತಿ ಹಿಂದೂ ಸಮಾಜವನ್ನಲ್ಲ. ಪ್ರಧಾನಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುತ್ತಿದ್ದಾರೆʼʼ ಎಂದು ಹೇಳಿದರು.

ಇನ್ನು ರಾಹುಲ್‌ ಹೇಳಿಕೆಗೆ ಬಿಜೆಪಿ ನಾಯಕರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ತಕ್ಷಣ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

Continue Reading

ದೇಶ

Sheikh Abdul Rashid: ಸೆರೆಮನೆಯಿಂದ ನೇರ ಸಂಸತ್‌ಗೆ! ಜೈಲಿನಿಂದಲೇ ಸ್ಪರ್ಧಿಸಿ ಗೆದ್ದ ʼಉಗ್ರರ ಬೆಂಬಲಿಗʼನ ಪ್ರಮಾಣವಚನಕ್ಕೆ NIA ಅಸ್ತು

Sheikh Abdul Rashid: ಜೈಲಿನಲ್ಲಿರುವ ಕಾರಣ ಜೂ.24ರಂದು ನಡೆದ ಪ್ರಮಾಣವಚನ ಸ್ವೀಕಾರ ಸಭಾರಂಭದಲ್ಲಿ ರಶೀದ್‌ಗೆ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಪ್ರಮಾಣವಚನಕ್ಕೆ ಅವಕಾಶ ಕಲ್ಪಿಸುವಂತೆ ಆತ ಕೋರ್ಟ್‌ ಮೊರೆ ಹೋಗಿದ್ದು, ಇದಕ್ಕೆ ಪ್ರತಿಕ್ರಿಯಿಸುವಂತೆ ಕೋರ್ಟ್‌ ಹೇಳಿತ್ತು. 2017 ರ ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಬಂಧಿತರಾಗಿರುವ ಬಾರಾಮುಲ್ಲಾ ಸಂಸದ ರಶೀದ್ ಅವರು ಪ್ರಮಾಣ ವಚನ ಸ್ವೀಕರಿಸಲು ಮತ್ತು ಸಂಸತ್ತಿನ ಕಾರ್ಯಗಳನ್ನು ನಿರ್ವಹಿಸಲು ಮಧ್ಯಂತರ ಜಾಮೀನು ಅಥವಾ ಪರ್ಯಾಯವಾಗಿ ಕಸ್ಟಡಿ ಪೆರೋಲ್ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದ.

VISTARANEWS.COM


on

Sheikh Abdul Rashid
Koo

ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಜೈಲಿನಿಂದಲೇ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕಾಶ್ಮೀರಿ ನಾಯಕ ಶೇಖ್ ಅಬ್ದುಲ್ ರಶೀದ್ (Sheikh Abdul Rashid) ಸಂಸದನಾಗಿ ಪ್ರಮಾಣವಚನ ಸ್ವೀಕರಿಸಲು ಎನ್‌ಐಎ ಅನುಮತಿ ನೀಡಿದೆ. ಭಯೋತ್ಪಾದಕರಿಗೆ ಹಣಕಾಸಿನ ನೆರವು ಒದಗಿಸಿದ ಆರೋಪ ಎದುರಿಸುತ್ತಿರುವ ಎಂಜಿನಿಯರ್ ರಶೀದ್ ಎಂದೇ ಜನಪ್ರಿಯವಾಗಿರುವ ಶೇಖ್ ಅಬ್ದುಲ್ ರಶೀದ್ ಜು. 25ರಂದು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಬಗ್ಗೆ ದಿಲ್ಲಿ ಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶ ಚಂದರ್‌ ಜಿತ್‌ ಸಿಂಗ್‌(Chander Jit Singh) ಆದೇಶ ಹೊರಡಿಸಲಿದ್ದಾರೆ.

ಜೈಲಿನಲ್ಲಿರುವ ಕಾರಣ ಜೂ.24ರಂದು ನಡೆದ ಪ್ರಮಾಣವಚನ ಸ್ವೀಕಾರ ಸಭಾರಂಭದಲ್ಲಿ ರಶೀದ್‌ಗೆ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಪ್ರಮಾಣವಚನಕ್ಕೆ ಅವಕಾಶ ಕಲ್ಪಿಸುವಂತೆ ಆತ ಕೋರ್ಟ್‌ ಮೊರೆ ಹೋಗಿದ್ದು, ಇದಕ್ಕೆ ಪ್ರತಿಕ್ರಿಯಿಸುವಂತೆ ಕೋರ್ಟ್‌ ಹೇಳಿತ್ತು. 2017 ರ ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಬಂಧಿತರಾಗಿರುವ ಬಾರಾಮುಲ್ಲಾ ಸಂಸದ ರಶೀದ್ ಅವರು ಪ್ರಮಾಣ ವಚನ ಸ್ವೀಕರಿಸಲು ಮತ್ತು ಸಂಸತ್ತಿನ ಕಾರ್ಯಗಳನ್ನು ನಿರ್ವಹಿಸಲು ಮಧ್ಯಂತರ ಜಾಮೀನು ಅಥವಾ ಪರ್ಯಾಯವಾಗಿ ಕಸ್ಟಡಿ ಪೆರೋಲ್ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದ.

ಇದೀಗ ಎನ್‌ಐಎ ಅನುಮತಿ ನೀಡಿದ್ದು, ಸೋಮವಾರ, ಎನ್‌ಐಎ ಪರ ವಕೀಲರು ರಶೀದ್ ಪ್ರಮಾಣ ವಚನ ಸ್ವೀಕಾರವು ಮಾಧ್ಯಮಗಳೊಂದಿಗೆ ಮಾತನಾಡದಂತಹ ಕೆಲವು ಷರತ್ತುಗಳಿಗೆ ಒಳಪಟ್ಟಿರುತ್ತದೆ ಎಂದು ಹೇಳಿದರು. ಒಂದು ದಿನದೊಳಗೆ ರಶೀದ್ ಎಲ್ಲವನ್ನೂ ಪೂರ್ಣಗೊಳಿಸಬೇಕು ಎಂದು ಅವರು ತಿಳಿಸಿದ್ದಾರೆ.

ಯಾರು ಈ ಶೇಖ್ ಅಬ್ದುಲ್ ರಶೀದ್?

ಇಂಜಿನಿಯರ್ ರಶೀದ್ ಪ್ರಸ್ತುತ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾನೆ. ಅವಾಮಿ ಇತ್ತೆಹಾದ್ ಪಕ್ಷದ ಮುಖ್ಯಸ್ಥ, ಎರಡು ಬಾರಿ ಶಾಸಕನಾಗಿದ್ದ ರಶೀದ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) 2019 ರಲ್ಲಿ ಭಯೋತ್ಪಾದನೆ-ಧನಸಹಾಯ ಚಟುವಟಿಕೆಗಳ ಆರೋಪದ ಮೇಲೆ ಬಂಧಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಆತ ನ್ಯಾಷನಲ್‌ ಕಾನ್ಫರೆನ್ಸ್‌ನ ಓಮರ್‌ ಅಬ್ದುಲ್ಲಾ ವಿರುದ್ಧ ಸ್ಪರ್ಧಿಸಿ 4,7,2481 ಮತಗಳನ್ನು ಗಳಿಸಿದ್ದಾನೆ. ಒಮ್ಮೆಯೂ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡದ ರಶೀದ್ 2,04,142 ಮತಗಳ ಭಾರೀ ಅಂತರದಿಂದ ಗೆದ್ದಿದ್ದಾನೆ.

ಅಮೃತ್‌ ಸಿಂಗ್‌ ಪ್ರಮಾಣವಚನ ಸ್ವೀಕರಿಸಿಲ್ಲ

ಇನ್ನು ಜೈಲಿನಿಂದಲೇ ಸ್ಪರ್ಧಿಸಿ ಅಭೂತಪೂರ್ವ ಗೆಲುವು ಸಾಧಿಸಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್‌ ಸಿಂಗ್‌ ಕೂಡ ಪ್ರಮಾಣವಚನ ಸ್ವೀಕರಿಸಿಲ್ಲ. ಅಮೃತಸರದ ಜಲ್ಲುಪುರ್‌ ಖೇರಾ ಎಂಬ ಗ್ರಾಮದಲ್ಲಿ 1993ರಲ್ಲಿ ಜನಿಸಿದ ಅಮೃತ್‌ಪಾಲ್‌, 12ನೇ ತರಗತಿವರೆಗೆ ಓದಿದ್ದಾನೆ. 2012ರಲ್ಲಿ ಭಾರತ ತೊರೆದು, ದುಬೈಯಲ್ಲಿ ತನ್ನ ಚಿಕ್ಕಪ್ಪನ ಟ್ರಾನ್ಸ್‌ಪೋರ್ಟ್‌ ಕಂಪನಿಯಲ್ಲಿ ದುಡಿದ. ಈತ ಪಂಜಾಬ್‌ನ ಪೊಲೀಸರ ಹಾಗೂ ರಾಜಕಾರಣಿಗಳ ಗಮನಕ್ಕೆ ಬಂದುದೇ ಕೆಲವು ದಿನಗಳ ಹಿಂದೆ- ʼವಾರಿಸ್‌ ಪಂಜಾಬ್‌ ದೇʼ ಸಂಘಟನೆಯ ಮುಖ್ಯಸ್ಥನಾಗಿ ನಿಯುಕ್ತನಾದ ಸಂದರ್ಭದಲ್ಲಿ. ಈ ಸಂಘಟನೆಯನ್ನು ಸ್ಥಾಪಿಸಿದವನು ನಟ, ಚಳವಳಿಗಾರ ದೀಪ್‌ ಸಿಧು. ಇವನು 2022ರ ಫೆಬ್ರವರಿಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ. ಇವನನ್ನು ಸರ್ಕಾರ ಸಾಯಿಸಿದೆ ಎಂದು ಅಮೃತ್‌ಪಾಲ್‌ ಮತ್ತು ಬೆಂಬಲಿಗರು ಆರೋಪಿಸುತ್ತ ಬಂದಿದ್ದಾರೆ. ಅಮೃತ್‌ಪಾಲ್‌ ಯಾವತ್ತೂ ಸಿಧುವನ್ನು ಭೇಟಿ ಮಾಡಿದವನೇ ಅಲ್ಲ. ಆದರೆ ಆನ್‌ಲೈನ್‌ನಲ್ಲಿ ತನ್ನನ್ನು ಅತ್ಯಂತ ಪ್ರಭಾವಿಸಿದ್ದ ಎಂದು ಹೇಳಿಕೊಳ್ಳುತ್ತಾನೆ. ಸಿಧುವಿನ ಸಾವಿನ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಸಿಧುವಿನ ಸಲಹೆಯಂತೆ ತಾನು ಗಡ್ಡ ಟ್ರಿಮ್‌ ಮಾಡಿಕೊಳ್ಳುವುದು ಬಿಟ್ಟಿರುವುದಾಗಿ ಹೇಳಿದ್ದ.

ಹಲವು ಸಮಯದಿಂದ ಆತ ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಖಲಿಸ್ತಾನ್ ಪರ ಪೋಸ್ಟ್‌ಗಳನ್ನು ಹಾಕುತ್ತಿದ್ದ. 2021ರಲ್ಲಿ ಕೆಂಪು ಕೋಟೆಯ ಮೇಲೆ ನಡೆದ ಗುಂಪು ದಾಳಿಯ ವೇಳೆ ಅದರ ನೇತೃತ್ವ ವಹಿಸಿದ್ದ ದೀಪ್‌ ಸಿಧುವಿನ ಕೃತ್ಯವನ್ನು ಈತ ಸಮರ್ಥಿಸಿಕೊಂಡಿದ್ದ. 2022ರಲ್ಲಿ ಪಂಜಾಬ್‌ನಲ್ಲಿ ಅಮೃತ್‌ಪಾಲ್‌ನನ್ನು ಅರೆಸ್ಟ್‌ ಮಾಡಲಾಗಿತ್ತು.

ಇದನ್ನೂ ಓದಿ: Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

Continue Reading
Advertisement
Thalapathy Vijay
Latest19 mins ago

Thalapathy Vijay: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

The whole society should be very careful about fake news says CM Siddaramaiah
ಕರ್ನಾಟಕ21 mins ago

Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

Money Guide
ಮನಿ-ಗೈಡ್29 mins ago

Money Guide: ವಿದೇಶ ಪ್ರವಾಸಕ್ಕೆ ಮುಂದಾಗಿದ್ದೀರಾ? ಅತ್ಯುತ್ತಮ ಕೊಡುಗೆ ನೀಡುವ ಈ ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ ಬಗ್ಗೆ ತಿಳಿಯಿರಿ

Suraj Revanna Case
ಪ್ರಮುಖ ಸುದ್ದಿ45 mins ago

Suraj Revanna Case: ಸೂರಜ್ ರೇವಣ್ಣ ಮತ್ತೆ 2 ದಿನ ಸಿಐಡಿ ಕಸ್ಟಡಿಗೆ; ವಕೀಲ ದೇವರಾಜೇಗೌಡಗೆ ಜಾಮೀನು

Actor Yash to recreate the 50s and 70s era in Toxic
ಸಿನಿಮಾ51 mins ago

Actor Yash: ರಾಕಿಂಗ್‌ ಸ್ಟಾರ್‌ ಯಶ್‌ ʼಟಾಕ್ಸಿಕ್‌ʼ ಸಿನಿಮಾದಿಂದ ಹೊರ ಬಿತ್ತು ಬಿಗ್‌ ಅಪ್‌ಡೇಟ್‌!

New Rules
ವಾಣಿಜ್ಯ1 hour ago

New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

new criminal law
ಕ್ರೈಂ1 hour ago

New Criminal Law: ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ ಹಾಸನದಲ್ಲಿ ದಾಖಲು, ಯಾವ ಕೇಸ್?‌

tumkur News Assault Case
ತುಮಕೂರು2 hours ago

Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

Amith Shah
ದೇಶ2 hours ago

Amit Shah: ಹೊಸ ಕ್ರಿಮಿನಲ್ ಕಾನೂನಿನಲ್ಲಿ ಶಿಕ್ಷೆಯ ಬದಲು ನ್ಯಾಯಕ್ಕೆ ಪ್ರಾಧಾನ್ಯತೆ; ಅಮಿತ್ ಶಾ

Parliament Sessions
ದೇಶ2 hours ago

Parliament Sessions: ಹಿಂದೂ ಹಿಂಸಾವಾದಿ ಹೇಳಿಕೆ; ಸಂಸತ್‌ನಲ್ಲಿ ರಾಹುಲ್‌-ಮೋದಿ ಜಟಾಪಟಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ23 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌