Army Assault Dog | ಉಗ್ರರ ಗುಂಡೇಟಿನಿಂದ ಗಂಭೀರ ಗಾಯಗೊಂಡಿದ್ದ ಸೇನಾ ಶ್ವಾನ ಜೂಮ್​ ಸಾವು - Vistara News

ದೇಶ

Army Assault Dog | ಉಗ್ರರ ಗುಂಡೇಟಿನಿಂದ ಗಂಭೀರ ಗಾಯಗೊಂಡಿದ್ದ ಸೇನಾ ಶ್ವಾನ ಜೂಮ್​ ಸಾವು

ಅನಂತ್​ನಾಗ್​ ಜಿಲ್ಲೆಯಲ್ಲಿ ನಡೆದಿದ್ದ ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ಜೂಮ್​ ಗಾಯಗೊಂಡಿತ್ತು. ಉಗ್ರರು ಅಡಗಿದ್ದ ಮನೆಯೊಳಗೆ ಅದು ನುಗ್ಗುವ ವೇಳೆಯಲ್ಲಿ ಅದರ ಮೇಲೆ ದಾಳಿ ನಡೆದಿತ್ತು.

VISTARANEWS.COM


on

Army assault dog Zoom Dies
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀನಗರ: ಕಳೆದ ಮೂರು ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ತಂಗ್​​ಪಾವಾ ಎಂಬಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದಿದ್ದ ಗುಂಡಿನಚಕಮಕಿಯಲ್ಲಿ, ಉಗ್ರರ ಗುಂಡಿನಿಂದ ತೀವ್ರ ಗಾಯಗೊಂಡಿದ್ದ ಸೇನಾ ಫೈಟರ್​ ಶ್ವಾನ ಜೂಮ್​ ಇಂದು ಮಧ್ಯಾಹ್ನ ಮೃತಪಟ್ಟಿದೆ. ಅಂದು ಎರಡು ಗುಂಡು ತಗುಲಿ, ತೀವ್ರವಾಗಿ ಗಾಯಗೊಂಡಿದ್ದ ಶ್ವಾನಕ್ಕೆ ಶ್ರೀನಗರದ 54 ಅಡ್ವಾನ್ಸ್ ಫೀಲ್ಡ್ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ತಂಗ್​ಪಾವಾದಲ್ಲಿ ಭಾನುವಾರ (ಅ.9)ರಾತ್ರಿಯಿಂದಲೇ ಭದ್ರತಾ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆ ಪ್ರಾರಂಭ ಮಾಡಿದ್ದವು. ಅಲ್ಲಿ ಭಯೋತ್ಪಾದಕರು ಅಡಗಿದ್ದಾರೆಂಬ ಖಚಿತ ಮಾಹಿತಿ ಪಡೆದೇ ಆ ಪ್ರದೇಶವನ್ನು ಸುತ್ತುವರಿದಿದ್ದರು. ಈ ಕಾರ್ಯಾಚರಣೆಯಲ್ಲಿ ಸೇನಾ ಶ್ವಾನ ಜೂಮ್​ ಕೂಡ ಪಾಲ್ಗೊಂಡಿತ್ತು. ಅದರ ದೇಹಕ್ಕೆ ಎರಡು ಗುಂಡುಗಳು ತಗುಲಿದ್ದವು. ಹಾಗಿದ್ದಾಗ್ಯೂ ಅದು ಹೋರಾಟ ಮುಂದುವರಿಸಿತ್ತು. ಇಂದು ಜೂಮ್​ ಮೃತಪಟ್ಟಿದ್ದನ್ನು ಸೇನಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ‘ಜೂಮ್​ ಇಂದು ಮಧ್ಯಾಹ್ನ 11.45ರ ಹೊತ್ತಿಗೆ ಜೋರಾಗಿ ಏದುಸಿರು ಬಿಡುತ್ತ ಕುಸಿದುಬಿದ್ದ. 12 ಗಂಟೆವರೆಗೂ ಚಿಕಿತ್ಸೆ ನೀಡಲಾಯಿತು. ಅಂತಿಮವಾಗಿ ಮಧ್ಯಾಹ್ನ 12ಗಂಟೆಗೆ ಅದರ ಜೀವ ಹೋಯಿತು’ ಎಂದು ತಿಳಿಸಿದ್ದಾರೆ.

ಗುಂಡು ಬಿದ್ದಿದ್ದು ಹೇಗೆ?
ತಂಗ್​ಪಾವಾದ ಮನೆಯೊಂದರಲ್ಲಿ ಭಯೋತ್ಪಾದಕರು ಅಡಗಿದ್ದರು. ಆ ಮನೆಗೆ ನುಗ್ಗಿ, ಅವರ ಮೇಲೆ ದಾಳಿ ಮಾಡುವಂತೆ ಸೇನಾಧಿಕಾರಿಗಳು ಜೂಮ್​​ಗೆ ಆದೇಶಿಸಿದರು. ಆಗ ಜೂಮ್​ ಮನೆಯೊಳಕ್ಕೆ ಓಡಿತ್ತು. ಅಷ್ಟರಲ್ಲಿ ಉಗ್ರರು ಶ್ವಾನಕ್ಕೆ ಗುಂಡು ಹೊಡೆದಿದ್ದರು. ಆದರೂ ಅದು ಮುನ್ನುಗ್ಗಲು ಪ್ರಯತ್ನ ಮಾಡುತ್ತಿತ್ತು. ಅಲ್ಲಿಂದ ಶ್ವಾನವನ್ನು ಶ್ರೀನಗರಕ್ಕೆ ಕರೆತರಲಾಗಿತ್ತು. ಇದೇ ಎನ್​ಕೌಂಟರ್​ನಲ್ಲಿ ಭದ್ರತಾಪಡೆ ಸಿಬ್ಬಂದಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಟಿಕ್‌ಟಾಕ್‌ ನಟಿಯನ್ನು ಕಾಶ್ಮೀರದಲ್ಲಿ ಹತ್ಯೆ ಮಾಡಿದ ಭಯೋತ್ಪಾದಕರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಲಬುರಗಿ

Road Accident : ಅಯೋಧ್ಯೆಯಲ್ಲಿ ಭೀಕರ ಅಪಘಾತ; ಕಲಬುರಗಿ ಮೂಲದ ಮೂವರು ದುರ್ಮರಣ, 19 ಮಂದಿಗೆ ಗಾಯ

Road Accident : ಲಾರಿ ಹಾಗೂ ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದೆ. ಅಯೋಧ್ಯೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಲಬುರಗಿ ಮೂಲದ ಮೂವರು ದುರ್ಮರಣ ಹೊಂದಿದ್ದಾರೆ

VISTARANEWS.COM


on

By

road Accident
ಸಾಂದರ್ಭಿಕ ಚಿತ್ರ
Koo

ಕಲಬುರಗಿ : ಅಯೋಧ್ಯೆಯಲ್ಲಿ ಲಾರಿ ಹಾಗೂ ಟಿಟಿ ವಾಹನದ ನಡುವೆ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ಟಿಟಿಯಲ್ಲಿದ್ದ ಕಲಬುರಗಿ ಮೂಲದ ಮೂವರು ದುರ್ಮರಣ ಹೊಂದಿದ್ದಾರೆ. ಶಿವರಾಜ್, ಕಾಶಿನಾಥ್, ತಂಗೆಮ್ಮ ಮೃತ ದುರ್ದೈವಿಗಳು.

ಕಲಬುರಗಿಯ 22 ಮಂದಿ ಕುಟುಂಬ ಸಮೇತರಾಗಿ ಯಾತ್ರೆಗೆ ತೆರಳಿದ್ದರು. ಕಾಶಿ ವಿಶ್ವನಾಥನ ದರ್ಶನ ಮುಗಿಸಿ ಟಿಟಿಯಲ್ಲಿ ಅಯೋಧ್ಯೆಗೆ ಹೊರಟಿದ್ದರು. ಈ ವೇಳೆ ಅಯೋಧ್ಯೆ ಸಮೀಪ ಕಳೆದ ರಾತ್ರಿ (ಮೇ 24) ಲಾರಿ ಹಾಗೂ ಟಿಟಿ ವಾಹನದ ನಡುವೆ ಡಿಕ್ಕಿಯಾಗಿದೆ.

ಡಿಕ್ಕಿ ರಭಸಕ್ಕೆ ಟಿಟಿಯಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಗಾಯಾಳುಗಳಿಗೆ ಅಯೋಧ್ಯೆಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಮುಂದುವರಿದಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

ಇಬ್ಬರ ಪ್ರಾಣ ತೆಗೆದ ಅಪರಿಚಿತ ವಾಹನ; ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

ಮೈಸೂರು/ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೈಸೂರಿನ ಹುಣಸೂರು ತಾಲೂಕಿನ ಮೈಸೂರು- ಬಂಟ್ವಳ ರಾಷ್ಟೀಯ ಹೆದ್ದಾರಿ 275ರ ಬನ್ನಿಕುಪ್ಪೆ ಬಳಿ ಅಪಘಾತ (Road Accident) ನಡೆದಿದೆ.

ಬನ್ನಿಕುಪ್ಪೆ ಬಳಿ ಮಹಿಳೆ ಮೈಸೂರು ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನವು ಗುದ್ದಿದೆ. ಗುದ್ದಿದ ರಭಸಕ್ಕೆ ಕೆಳಗೆ ಬಿದ್ದ ಮಹಿಳೆ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಮೃತಳ ಗುರುತು ಪತ್ತೆಯಾಗಿಲ್ಲ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಸ್ತೆಯಲ್ಲಿ ಬಿದ್ದಿದ್ದ ಮಹಿಳೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಣಸೂರು ಶವಗಾರಕ್ಕೆ ರವಾನೆ ಮಾಡಲಾಗಿದೆ. ಇನ್ನೂ ಮಹಿಳೆ ಬಗ್ಗೆ ಮಾಹಿತಿ ಸಿಕ್ಕವರು 9480805057 ನಂಬರ್ ತಿಳಿಸುವಂತೆ ಇನ್ಸ್‌ಪೆಕ್ಟರ್ ಲೋಲಾಕ್ಷಿ ಮನವಿ ಮಾಡಿದ್ದಾರೆ.

ಅಪಘಾತಕ್ಕೆ ತುಮಕೂರಲ್ಲಿ ಯುವಕ ಸಾವು

ಇತ್ತ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡ ಆಲದಮರದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕನೊರ್ವ ಮೃತಪಟ್ಟಿದ್ದಾನೆ. ಪವನ್ ಎಸ್‌. ಆರ್ (23) ಮೃತ ದುರ್ದೈವಿ.

ಶಿರಾ ನಿವಾಸಿಯಾಗಿರುವ ಪವನ್ ತುಮಕೂರಿನ ಐನಾಕ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಕೆಲಸ ಮುಗಿಸಿ ತುಮಕೂರಿನಿಂದ ಶಿರಾಗೆ ಬೈಕ್‌ನಲ್ಲಿ ತೆರಳುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಿಂದ ಹಾರಿ ಬಿದ್ದ ಪವನ್‌ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ‌

ಇದನ್ನೂ ಓದಿ: Traffic violation : ನಗೆಪಾಟಲಾದ ಟ್ರಾಫಿಕ್‌ ಪೊಲೀಸರು; ಹೆಲ್ಮೆಟ್ ಹಾಕಿಲ್ಲವೆಂದು ಟಿಪ್ಪರ್ ಲಾರಿ ಚಾಲಕನಿಗೆ 500 ರೂ. ದಂಡ

ಚಾಮರಾಜನಗರದಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅರೇಪುರ ಗೇಟ್ ಬಳಿ ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯ ಮಧ್ಯೆ ಹಾರಿ ಬಿದ್ದ ವ್ಯಕ್ತಿ ಮೇಲೆ ಮತ್ತೊಂದು ವಾಹನ ಹರಿದಿದೆ ಎನ್ನಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಠಾಣೆಗಳಿಗೆ ಮಾಹಿತಿ ರವಾನಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Road Accident

ಟೈಯರ್‌ ಸಿಡಿದು ಸುಟ್ಟು ಕರಕಲಾದ ಲಾರಿ

ಕಾಫಿ ತುಂಬಿದ ಲಾರಿ ಟೈಯರ್ ಸಿಡಿದು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್‌ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನ ನಂಜನಗೂಡು ತಾಲೂಕಿನ ಕಣೇನೂರು ಗ್ರಾಮದ ಬಳಿ ಘಟನೆ ನಡೆದಿದೆ. ಲಾರಿ ಚಾಮರಾಜನಗರದಿಂದ ಹುಲ್ಲಹಳ್ಳಿ ಮಾರ್ಗವಾಗಿ ಕುಶಾಲನಗರಕ್ಕೆ ತೆರಳುತ್ತಿತ್ತು.

ಈ ವೇಳೆ ಕಣೇನೂರು ಗ್ರಾಮಕ್ಕೆ ಬರುವಾಗ ಲಾರಿ ಮುಂಭಾಗದ ಚಕ್ರ ಸಿಡಿದು ಬೆಂಕಿ ಕಾಣಿಕೊಂಡಿದೆ. ನೋಡನೋಡುತ್ತಿದ್ದಂತೆ ಬೆಂಕಿ ಕೆನ್ನಾಲಿಗೆಗೆ ಲಾರಿ ಭಸ್ಮವಾಗಿತ್ತು. ಲಾರಿಯಲ್ಲಿದ್ದ ಕಾಫಿ ಬೀಜ ಸುಟ್ಟು ಕರಕಲಾಗಿತ್ತು. ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಲಾರಿಯಿಂದ ಜಿಗಿದು ಚಾಲಕ ಪ್ರಾಣ ಉಳಿಸಿಕೊಂಡಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಲಾರಿಯಿಂದ ಬಿದ್ದು ಅಸ್ವಸ್ಥಗೊಂಡಿದ್ದ ಲಾರಿ ಚಾಲಕನನ್ನು ಮೈಸೂರಿನ ಆಸ್ಪತ್ರೆಗೆ ದಾಖಲಾಗಿದೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

ಬೆಂಗಳೂರಿನ ದೊಡ್ಡಕಲ್ಲಸಂದ್ರ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಏಕಾಏಕಿ ಕಾರಿನ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿಯ ಜ್ವಾಲೆ ಹೆಚ್ಚಾಗಿ ಕಾರಿನ ಇಂಜಿನ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಿಂದ ಇಳಿದು ಪ್ರಯಾಣಿಕರು ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳೀಯರಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆರೋಗ್ಯ

Life Expectancy: ಕೊರೊನಾದಿಂದ ನಮ್ಮ ಆಯುಷ್ಯದಲ್ಲಿ 2 ವರ್ಷ ಕಡಿತ; WHO ಭೀಕರ ವರದಿ

Life Expectancy: ಕೊರೊನಾ ಸೋಂಕಿನ ಪರಿಣಾಮವು ಜಗತ್ತಿನಾದ್ಯಂತ ಒಂದೇ ರೀತಿಯಾಗಿ ಪರಿಣಾಮ ಬೀರಿಲ್ಲ. ಆಯಾ ದೇಶ, ಖಂಡಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ಪರಿಣಾಮ ಬೀರಿದೆ. ಅಮೆರಿಕ ಹಾಗೂ ಆಗ್ನೇಯ ಏಷ್ಯಾದ ಜನರ ಸರಾಸರಿ ಜೀವಿತಾವಧಿಯು 3 ವರ್ಷ ಕಡಿಮೆಯಾಗಿದೆ. ಆರೋಗ್ಯಯುತ ಜೀವನವು ಎರಡೂವರೆ ವರ್ಷ ಕಡಿಮೆಯಾಗಿದೆ ಎಂಬುದಾಗಿ ವಿಶ್ವ ಆರೋಗ್ಯ ಸಂಸ್ಥೆಯು ವರದಿ ನೀಡಿದೆ.

VISTARANEWS.COM


on

Life Expectancy
Koo

ನ್ಯೂಯಾರ್ಕ್‌: ಚೀನಾದಲ್ಲಿ ಹರಡಿ, ಜಗತ್ತಿನಾದ್ಯಂತ ಪಸರಿಸಿ, ಕೋಟ್ಯಂತರ ಜನರ ಸಾವಿಗೆ ಕಾರಣವಾದ ಕೊರೊನಾ (Covid 19) ಮಹಾಮಾರಿಯ ಹಾವಳಿ ಕಡಿಮೆಯಾದರೂ ಅದು ಜನರ ಜೀವನದ ಮೇಲೆ ಬೀರುವ ಪರಿಣಾಮವು ಇನ್ನೂ ನಿಂತಿಲ್ಲ. ಕೊರೊನಾ ಲಸಿಕೆ ಪಡೆದವರಿಗೆ ಅಡ್ಡ ಪರಿಣಾಮ, ರೆಮ್ಡಿಸಿವಿರ್‌ ಪಡೆದವರು, ಐಸಿಯುಗೆ ದಾಖಲಾಗಿ ಜೀವಂತವಾಗಿ ಹೊರಬಂದವರು ಒಂದಲ್ಲ ಒಂದು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ಬೆನ್ನಲ್ಲೇ, ವಿಶ್ವ ಆರೋಗ್ಯ ಸಂಸ್ಥೆಯು (WHO) ಭೀಕರ ವರದಿ ಬಿಡುಗಡೆ ಮಾಡಿದ್ದು, ಕೊರೊನಾದಿಂದ ಜಾಗತಿಕವಾಗಿ ಜನರ ಜೀವಿತಾವಧಿಯು (Life Expectancy) 2 ವರ್ಷ ಕಡಿಮೆಯಾಗಿದೆ ಎಂದು ತಿಳಿಸಿದೆ.

“2019ರಿಂದ 2021ರ ಅವಧಿಯಲ್ಲಿ ಕೊರೊನಾ ಮಹಾಮಾರಿಯು ಜಗತ್ತಿನಾದ್ಯಂತ ಭೀಕರ ಪರಿಣಾಮ ಉಂಟುಮಾಡಿತು. ಇದರಿಂದಾಗಿ 2019-21ರ ಅವಧಿಯಲ್ಲಿ ಜಗತ್ತಿನಾದ್ಯಂತ ಮನುಷ್ಯರ ಸರಾಸರಿ ಜೀವಿತಾವಧಿಯು 71.4 ವರ್ಷಕ್ಕೆ ಇಳಿದಿದೆ. ಜನರ ಸರಾಸರಿ ಜೀವಿತಾವಧಿಯು 1.8 ವರ್ಷ ಕಡಿಮೆಯಾಗಿದೆ. ಅಷ್ಟೇ ಅಲ್ಲ, ಇದೇ ಅವಧಿಯಲ್ಲಿ ಜನರ ಆರೋಗ್ಯಯುತ ಜೀವನ ಪ್ರಮಾಣದಲ್ಲೂ 1.5 ವರ್ಷ ಕಡಿಮೆಯಾಗಿದ್ದು, 61.9 ವರ್ಷಕ್ಕೆ ಕುಸಿದಿದೆ” ಎಂಬುದಾಗಿ ಡಬ್ಲ್ಯೂಎಚ್‌ಒ ವರದಿಯಿಂದ ತಿಳಿದುಬಂದಿದೆ.

ಏಷ್ಯಾ ಭಾಗಕ್ಕೇ ತೀವ್ರ ಪರಿಣಾಮ

“ಕೊರೊನಾ ಸೋಂಕಿನ ಪರಿಣಾಮವು ಜಗತ್ತಿನಾದ್ಯಂತ ಒಂದೇ ರೀತಿಯಾಗಿ ಪರಿಣಾಮ ಬೀರಿಲ್ಲ. ಆಯಾ ದೇಶ, ಖಂಡಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ಪರಿಣಾಮ ಬೀರಿದೆ. ಅಮೆರಿಕ ಹಾಗೂ ಆಗ್ನೇಯ ಏಷ್ಯಾದ ಜನರ ಸರಾಸರಿ ಜೀವಿತಾವಧಿಯು 3 ವರ್ಷ ಕಡಿಮೆಯಾಗಿದೆ. ಆರೋಗ್ಯಯುತ ಜೀವನವು ಎರಡೂವರೆ ವರ್ಷ ಕಡಿಮೆಯಾಗಿದೆ. ಇದು ಜಗತ್ತಿನಲ್ಲೇ ಕೊರೊನಾದಿಂದ ಅತಿ ಹೆಚ್ಚು ಪರಿಣಾಮ ಬೀರಿದ ಭಾಗಗಳಾಗಿವೆ. ವೆಸ್ಟರ್ನ್‌ ಪೆಸಿಫಿಕ್‌ ರೀಜನ್‌ನಲ್ಲಿ ಅತಿ ಕಡಿಮೆ ಪರಿಣಾಮ ಬೀರಿದೆ. ಈ ಭಾಗದಲ್ಲಿ ಜನರ ಸರಾಸರಿ ಜೀವಿತಾವಧಿಯು ಶೇ.0.1ರಷ್ಟು ಕಡಿಮೆಯಾಗಿದೆ” ಎಂಬುದಾಗಿ ವರದಿಯಿಂದ ತಿಳಿದುಬಂದಿದೆ.

ಮತ್ತೊಂದು ಸೋಂಕು ಸೃಷ್ಟಿಸಿದ ಚೀನಾ

ಕೊರೊನಾ ಮೂಲಕ ಕೋಟ್ಯಂತರ ಜನರ ಪ್ರಾಣಕ್ಕೆ ಕುತ್ತು ತಂದ ಚೀನಾ ಈಗ ಮತ್ತೊಂದು ಜೈವಿಕ ಯುದ್ಧಕ್ಕೆ ಮುಂದಾಗಿದೆ. ಮಾರಣಾಂತಿಕ ಎಬೋಲಾ ರೂಪಾಂತರಿ ಸೋಂಕನ್ನು (Ebola Mutant Virus) ಚೀನಾದ ವಿಜ್ಞಾನಿಗಳು ಸೃಷ್ಟಿಸಿದ್ದು, ಇದರಿಂದ ಜಗತ್ತಿಗೇ ಆತಂಕ ಎದುರಾಗಿದೆ. ಹೆಬೈ ಮೆಡಿಕಲ್‌ ಯುನಿವರ್ಸಿಟಿಯಲ್ಲಿ ವಿಜ್ಞಾನಿಗಳು ಎಬೋಲಾ ರೂಪಾಂತರಿ ವೈರಸ್‌ಅನ್ನು ಸೃಷ್ಟಿಸಿದ್ದಾರೆ. ಹ್ಯಾಮ್‌ಸ್ಟರ್‌ಗಳಿಗೆ (ಕಿರುಕಡಿಗ-ಇಲಿಯಂತ ಚಿಕ್ಕ ಪ್ರಾಣಿ) ವೈರಸ್‌ ಇಂಜೆಕ್ಟ್‌ ಮಾಡಿದರೆ, ಮೂರೇ ದಿನಗಳಲ್ಲಿ ಅವರು ಸಾಯುತ್ತವೆ ಎಂದು ಸೈನ್ಸ್‌ ಡೈರೆಕ್ಟ್‌ ಜರ್ನಲ್‌ನಲ್ಲಿ ವರದಿ ಪ್ರಕಟವಾಗಿದೆ.

ಇದನ್ನೂ ಓದಿ: Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

Continue Reading

ದೇಶ

Narendra Modi: 10 ವರ್ಷ ಬಲಿಷ್ಠ ಪ್ರತಿಪಕ್ಷ ಇರಲಿಲ್ಲ ಎಂಬುದೇ ನೋವು ತಂದಿದೆ; ಮೋದಿ ಬೇಸರ

Narendra Modi: 10 ವರ್ಷಗಳ ಆಡಳಿತದ ಅವಧಿಯಲ್ಲಿ ಕಾಂಗ್ರೆಸ್‌ನಿಂದ ಸಕಾರಾತ್ಮಕ ಸ್ಪಂದನೆ ದೊರೆಯಲಿಲ್ಲ. ಅವರು 60 ವರ್ಷ ದೇಶವನ್ನು ಆಳಿದ್ದರು. ನಾನು ಅವರ ಸಲಹೆ-ಸೂಚನೆಗಳನ್ನು ಕೇಳಲು ಬಯಸಿದ್ದೆ. ಪ್ರಣಬ್‌ ಮುಖರ್ಜಿ ಅವರು ಇರುವವರೆಗೆ ನನಗೆ ಅವರ ಅನುಭವದ ಉಪಯೋಗ ಆಯಿತು. ಅವರ ನಂತರ ಬೇರೆ ನಾಯಕರಿಂದ ಉತ್ತಮ ಸಹಕಾರ ಸಿಗಲಿಲ್ಲ ಎಂಬುದಾಗಿ ನರೇಂದ್ರ ಮೋದಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಾಲು ಸಾಲು ಸುದ್ದಿ ವಾಹಿನಿಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಇದೇ ರೀತಿ, ನ್ಯೂಸ್‌ 18ಗೆ ಸಂದರ್ಶನ ನೀಡಿದ ಮೋದಿ, “ಕಳೆದ 10 ವರ್ಷಗಳಲ್ಲಿ ಬಲಿಷ್ಠ ಪ್ರತಿಪಕ್ಷವೇ ಇರಲಿಲ್ಲ. ಕೇಂದ್ರ ಸರ್ಕಾರಕ್ಕೆ ಸರಿಯಾಗಿ ಸವಾಲು ಒಡ್ಡಲಿಲ್ಲ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಕೂಡ ಆಳುವ ಸರ್ಕಾರಕ್ಕೆ ಸವಾಲು ಹಾಕಲಿಲ್ಲ. ಇದು ನನಗೆ ಅಪಾರ ನೋವು ತಂದಿದೆ” ಎಂಬುದಾಗಿ ಹೇಳಿದ್ದಾರೆ.

“ಪ್ರಜಾಪ್ರಭುತ್ವದಲ್ಲಿ ಬಲಿಷ್ಠ ಪ್ರತಿಪಕ್ಷ ಇರುವುದು ಅತ್ಯವಶ್ಯಕ. ಪ್ರಬಲ ಪ್ರತಿಪಕ್ಷ ಇದರೆ ಸರ್ಕಾರವು ಎಚ್ಚರದಿಂದ, ಪ್ರತಿಪಕ್ಷಗಳ ತೂಗುಗತ್ತಿಯ ಭೀತಿಯಲ್ಲಿ ಸರಿಯಾದ ರೀತಿ ಕೆಲಸ ಮಾಡುತ್ತದೆ. ಹಾಗಂತ, ದೇಶದಲ್ಲಿ ಪ್ರಬಲ ಪ್ರತಿಪಕ್ಷ ನಾಯಕರಾಗುವ ಅರ್ಹತೆ ಇಲ್ಲ ಎಂದಲ್ಲ. ತುಂಬ ನಾಯಕರು ಅದಕ್ಕೆ ಅರ್ಹರಾಗಿದ್ದಾರೆ. 2014ರಿಂದ 2024ರ ಅವಧಿಯಲ್ಲಿ ನಮಗೆ ಬಲಿಷ್ಠ ಪ್ರತಿಪಕ್ಷ ಸಿಗಬೇಕಿತ್ತು. ಆದರೆ, ನನಗೆ ಅಂತಹ ಪ್ರತಿಪಕ್ಷ ಸಿಗಲಿಲ್ಲ. ಸರ್ಕಾರಕ್ಕೆ ಸವಾಲು ಒಡ್ಡಲಿಲ್ಲ ಎಂಬುದೇ ನನಗೆ ನೋವು ತಂದಿದೆ” ಎಂಬುದಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಸಹಕಾರ ನೀಡಲಿಲ್ಲ

“10 ವರ್ಷಗಳ ಆಡಳಿತದ ಅವಧಿಯಲ್ಲಿ ಕಾಂಗ್ರೆಸ್‌ನಿಂದ ಸಕಾರಾತ್ಮಕ ಸ್ಪಂದನೆ ದೊರೆಯಲಿಲ್ಲ. ಅವರು 60 ವರ್ಷ ದೇಶವನ್ನು ಆಳಿದ್ದರು. ನಾನು ಅವರ ಸಲಹೆ-ಸೂಚನೆಗಳನ್ನು ಕೇಳಲು ಬಯಸಿದ್ದೆ. ಪ್ರಣಬ್‌ ಮುಖರ್ಜಿ ಅವರು ಇರುವವರೆಗೆ ನನಗೆ ಅವರ ಅನುಭವದ ಉಪಯೋಗ ಆಯಿತು. ಆದರೆ, ಬೇರೆ ನಾಯಕರಿಂದ ನಮ್ಮ ಆಡಳಿತಕ್ಕೆ ಸಲಹೆ-ಸೂಚನೆ ಸಿಗಲಿಲ್ಲ. ನಾನು ಗುಜರಾತ್‌ ಮುಖ್ಯಮಂತ್ರಿ ಆಗಿದ್ದಾಗಿನ ಅನುಭವ ಹಾಗೂ ನನ್ನ ಪಕ್ಷದ ನಾಯಕರಿಂದ ಮಾತ್ರ ಸಲಹೆ ಸಿಕ್ಕಿತು” ಎಂದು ತಿಳಿಸಿದರು.

ಇದಕ್ಕೂ ಮೊದಲು ಎನ್‌ಡಿಟಿವಿಗೆ ನೀಡಿದ ಸಂದರ್ಶನದ ವೇಳೆ ಮಮತಾ ಬ್ಯಾನರ್ಜಿ ಹೇಳಿಕೆ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದ್ದರು. “ಮಮತಾ ಬ್ಯಾನರ್ಜಿ ಅವರು ಹೇಳಿದ್ದು ನಿಜ. ಜೂನ್‌ 4ರಂದು ಲೋಕಸಭೆ ಅವಧಿ ಮುಗಿಯಲಿದೆ. ಆದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಹೊಸ ಸರ್ಕಾರ ರಚಿಸಲಿದೆ. ನಾನು ಕಾಶಿಯವ (ಅವರ ಲೋಕಸಭೆ ಕ್ಷೇತ್ರ), ನಾನು ಅವಿನಾಶಿ. ಕಾಶಿಯನ್ನು ಹೇಗೆ ನಾಶಪಡಿಸಲು ಆಗುವುದಿಲ್ಲವೋ, ಹಾಗೆಯೇ, ನನ್ನನ್ನು ಕೂಡ ಯಾರಿಂದಲೂ ನಾಶಪಡಿಸಲು ಆಗುವುದಿಲ್ಲ” ಎಂಬುದಾಗಿ ಹೇಳಿದ್ದರು.

ಇದನ್ನೂ ಓದಿ: PM Narendra Modi: ಇಂಡಿಯಾ ಮೈತ್ರಿಕೂಟ ಮತ ಬ್ಯಾಂಕ್‌ಗಾಗಿ ಅಶ್ಲೀಲ ಡ್ಯಾನ್ಸ್‌ ಮಾಡುತ್ತಿದೆ: ಮೋದಿ

Continue Reading

ಪ್ರಮುಖ ಸುದ್ದಿ

PM Narendra Modi: ಇಂಡಿಯಾ ಮೈತ್ರಿಕೂಟ ಮತ ಬ್ಯಾಂಕ್‌ಗಾಗಿ ಅಶ್ಲೀಲ ಡ್ಯಾನ್ಸ್‌ ಮಾಡುತ್ತಿದೆ: ಮೋದಿ

ಯಾವುದೇ ಸಂದರ್ಭದಲ್ಲಿಯೂ ಭಾರತದ ಸಂವಿಧಾನ ಎಸ್‌ಸಿ/ಎಸ್ ಟಿ, ಒಬಿಸಿಗಳಿಗೆ ನೀಡಿರುವ ಮೀಸಲಾತಿ ಪ್ರಯೋಜನಗಳನ್ನು ಕಸಿದುಕೊಳ್ಳಲು ನಾನು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದ್ದಾರೆ.

VISTARANEWS.COM


on

pm Narendra Modi
Koo

ಹೊಸದಿಲ್ಲಿ: ಇಂಡಿಯಾ ಮೈತ್ರಿಕೂಟ (INDIA bloc) ತನ್ನ ಮತ ಬ್ಯಾಂಕ್‌ಗಾಗಿ ʼಮುಜ್ರಾʼ (ಒಂದು ಪ್ರಕಾರದ ನೃತ್ಯ) ಮಾಡುತ್ತಿದೆ ಎಂದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಟೀಕಿಸಿದ್ದಾರೆ.

ಬಿಹಾರದ (Bihar) ಪಾಟಲೀಪುತ್ರದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂಡಿಯಾ ಮೈತ್ರಿಕೂಟ ತನ್ನ ಮತ ಬ್ಯಾಂಕ್‌ನ ಗುಲಾಮಗಿರಿಯನ್ನು ಸ್ವೀಕರಿಸಲು ಬಯಸುತ್ತದೆ. ಆದರೆ ನಮಗೆ ಸಂವಿಧಾನವು ಸರ್ವೋಚ್ಚವಾಗಿದೆ ಎಂದು ಹೇಳಿದರು. ಯಾವುದೇ ಸಂದರ್ಭದಲ್ಲಿಯೂ ಭಾರತದ ಸಂವಿಧಾನ ಎಸ್‌ಸಿ/ಎಸ್ ಟಿ, ಒಬಿಸಿಗಳಿಗೆ ನೀಡಿರುವ ಮೀಸಲಾತಿ ಪ್ರಯೋಜನಗಳನ್ನು ಕಸಿದುಕೊಳ್ಳಲು ನಾನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಮುಜ್ರಾ ಎಂದರೆ ಮೊಗಲ್ ಆಡಳಿತದ ಕಾಲದಲ್ಲಿ ಬಂದ ನೃತ್ಯ ಪ್ರಕಾರ. ಇದನ್ನು ಮೊದಲು ಹೆಚ್ಚಾಗಿ ರಾಜರು ಮತ್ತು ಗಣ್ಯರ ಆಸ್ಥಾನಗಳಲ್ಲಿ ವೇಶ್ಯೆಯರು ಪ್ರದರ್ಶಿಸುತ್ತಿದ್ದರು. ಹಿಂದಿ ಸಿನಿಮಾಗಳಲ್ಲಿ ಇದು ವ್ಯಾಪಕವಾಗಿದೆ.

“ನಾನು ಬಿಹಾರ, ಎಸ್‌ಸಿ/ಎಸ್‌ಟಿ/ಒಬಿಸಿ ಸಮುದಾಯಗಳಿಗೆ ಭರವಸೆ ನೀಡುತ್ತಿದ್ದೇನೆ. ಮೋದಿ ಬದುಕಿರುವವರೆಗೆ ಅವರ ಹಕ್ಕುಗಳನ್ನು ಕಸಿದುಕೊಳ್ಳಲು ನಾನು ಬಿಡುವುದಿಲ್ಲ. ಮೋದಿಗೆ ಸಂವಿಧಾನ ಸರ್ವಶ್ರೇಷ್ಠ, ಮೋದಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವನೆಗಳು ಸರ್ವೋಚ್ಚ. ಇಂಡಿಯಾ ಮೈತ್ರಿಕೂಟ ತನ್ನ ಮತ ಬ್ಯಾಂಕ್‌ನ ಜೀತ ಸ್ವೀಕರಿಸಲು ಬಯಸುತ್ತದೆ, ಅವರು ಹಾಗೆ ಮಾಡಲು ಸ್ವತಂತ್ರರು. ಅವರು ಮುಜ್ರಾ (ನೃತ್ಯ) ಮಾಡಲು ಬಯಸಿದರೆ ಅವರು ಸ್ವತಂತ್ರರು. ನಾನು ಯಾವಾಗಲೂ ಎಸ್‌ಸಿ/ಎಸ್‌ಟಿ/ಒಬಿಸಿ ಮೀಸಲಾತಿ ಪರವಾಗಿ ನಿಂತಿದ್ದೇನೆ” ಎಂದು ಹೇಳಿದ್ದಾರೆ.

ತಮ್ಮ ವೋಟ್ ಬ್ಯಾಂಕ್ ಅನ್ನು ಸಂತೋಷಪಡಿಸಲು ಕಾಂಗ್ರೆಸ್ ಅಲ್ಪಸಂಖ್ಯಾತ ಸಂಸ್ಥೆಗಳಿಗೆ ಸಂಬಂಧಿಸಿದ ಕಾನೂನನ್ನು ಬದಲಾಯಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಈ ಮೊದಲು ಎಸ್‌ಸಿ/ಎಸ್‌ಟಿ/ಒಬಿಸಿಗಳು ಸಂಪೂರ್ಣ ಮೀಸಲಾತಿಯನ್ನು ಪಡೆಯುತ್ತಿದ್ದರು. ನಂತರ ಸಾವಿರಾರು ಸಂಸ್ಥೆಗಳನ್ನು ಅಲ್ಪಸಂಖ್ಯಾತ ಸಂಸ್ಥೆಗಳೆಂದು ಘೋಷಿಸಲಾಯಿತು ಎಂದು ಮೋದಿ ಹೇಳಿದರು.

“ಭಾರತದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ಇರುವುದಿಲ್ಲ ಎಂದು ನಮ್ಮ ಸಂವಿಧಾನ ಹೇಳುತ್ತದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಧರ್ಮದ ಆಧಾರದ ಮೇಲೆ ಮೀಸಲಾತಿ ಇರುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಆರ್​​ಜೆಡಿ-ಕಾಂಗ್ರೆಸ್ SC/ST/OBC ಕೋಟಾವನ್ನು ಕೊನೆಗೊಳಿಸುವ ಮೂಲಕ ತಮ್ಮ ಮತಬ್ಯಾಂಕ್‌ಗೆ ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ನೀಡಲು ಬಯಸುತ್ತಿವೆ” ಎಂದು ಮೋದಿ ನುಡಿದರು.

ಲಾಲೂ ಯಾದವ್ ಅವರ ಆರ್‌ಜೆಡಿಯ ಚುನಾವಣಾ ಚಿಹ್ನೆಯಾದ ಲಾಟೀನು ದೀಪವನ್ನೂ ಮೋದಿ ಗೇಲಿ ಮಾಡಿದ್ದಾರೆ. “ಇದು ಎಲ್‌ಇಡಿ ಬಲ್ಬ್‌ಗಳ ಯುಗ. ಅದರೆ ಬಿಹಾರದಲ್ಲಿ ಜನರು ಲಾಟೀನಿನೊಂದಿಗೆ ತಿರುಗಾಡುತ್ತಿದ್ದಾರೆ. ಇದು ಕೇವಲ ಒಂದು ಮನೆಯನ್ನು ಬೆಳಗಿಸುವ ಲಾಟೀನು. ಈ ಲಾಟೀನು ಬಿಹಾರದಾದ್ಯಂತ ಕತ್ತಲೆಯನ್ನು ಹರಡಿದೆ” ಎಂದಿದ್ದಾರೆ ಮೋದಿ.

ಕಳೆದ ತಿಂಗಳು, ಪ್ರಧಾನಿ ಮೋದಿ ಅವರು ಕಾಂಗ್ರೆಸ್ ದೇಶದ ಜನರ ಸಂಪತ್ತನ್ನು ಕಸಿದುಕೊಂಡು ಅನೇಕ ಮಕ್ಕಳನ್ನು ಹೊಂದಿರುವವರಿಗೆ ಹಂಚುತ್ತದೆ ಎಂದು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ನಂತರ ನೀಡಿದ ಸಂದರ್ಶನವೊಂದರಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಮೋದಿ, ನನ್ನ ಹೇಳಿಕೆಯು ನಿರ್ದಿಷ್ಟವಾಗಿ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿಲ್ಲ. ನಾನು ಎಂದಿಗೂ ಹಿಂದೂ-ಮುಸ್ಲಿಂ ರಾಜಕೀಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

Continue Reading
Advertisement
Hardik Pandya
ಕ್ರೀಡೆ2 mins ago

Hardik Pandya: ಪ್ರೇಯಸಿಯ ದೋಖಾದ ಸುಳಿವು ಮೊದಲೇ ಇತ್ತಾ? ಬಹುತೇಕ ಆಸ್ತಿಯನ್ನು ಪೋಷಕರ ಹೆಸರಲ್ಲಿಟ್ಟ ಚಾಲಾಕಿ ಹಾರ್ದಿಕ್!

ಕರ್ನಾಟಕ13 mins ago

Lockup Death: ಲಾಕಪ್‌ ಡೆತ್‌ ಅಲ್ಲ ಎಂದಿದ್ದ ಮೃತ ಯುವಕನ ತಂದೆ ಮತ್ತೆ ಉಲ್ಟಾ!

Actor Kiran Raj Ronny Movie Reels with Fans Song
ಸ್ಯಾಂಡಲ್ ವುಡ್13 mins ago

Actor Kiran Raj: ʻರಾನಿʼ ಸಿನಿಮಾ ಸಾಂಗ್‌ ಔಟ್‌; ಇದೇ ಭಾನುವಾರ ಕಿರಣ್ ರಾಜ್‌ ʻರೀಲ್ಸ್ with ಫ್ಯಾನ್ಸ್ʼ!

Speech Fasting
ಆರೋಗ್ಯ14 mins ago

Speech Fasting: ಸದಾ ವಟವಟ ಮಾತಾಡ್ತಾ ಇರ್ತೀರಾ? ʼಮೌನವ್ರತʼ ಮಾಡಿ, ಆರೋಗ್ಯ ಸುಧಾರಣೆ ನೋಡಿ!

Jawa Yezdi
ಆಟೋಮೊಬೈಲ್15 mins ago

Jawa Yezdi : ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ನ ಜಾವಾ 42 ಬಾಬರ್ ರೆಡ್ ಶೀನ್‌ ಬಿಡುಗಡೆ

road Accident
ಕಲಬುರಗಿ28 mins ago

Road Accident : ಅಯೋಧ್ಯೆಯಲ್ಲಿ ಭೀಕರ ಅಪಘಾತ; ಕಲಬುರಗಿ ಮೂಲದ ಮೂವರು ದುರ್ಮರಣ, 19 ಮಂದಿಗೆ ಗಾಯ

KKR vs SRH Final 2024
ಕ್ರೀಡೆ42 mins ago

KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

Life Expectancy
ಆರೋಗ್ಯ50 mins ago

Life Expectancy: ಕೊರೊನಾದಿಂದ ನಮ್ಮ ಆಯುಷ್ಯದಲ್ಲಿ 2 ವರ್ಷ ಕಡಿತ; WHO ಭೀಕರ ವರದಿ

Tiger Project PM Modi hotel bill in Karnataka dues Rs 6 crore and Centre vs state departments clash
ರಾಜಕೀಯ52 mins ago

PM Modi: ಮೋದಿ ಬಂಡೀಪುರ ಭೇಟಿ ಆತಿಥ್ಯಕ್ಕೆ 6 ಕೋಟಿ ರೂ. ಖರ್ಚು; ಬಿಲ್‌ ಬಾಕಿಗೆ ಕೇಂದ್ರ – ರಾಜ್ಯ ಇಲಾಖೆಗಳ ಜಟಾಪಟಿ

Karnataka Rain
ಮಳೆ55 mins ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ55 mins ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌