Manipur Violence: ಸರ್ಜಿಕಲ್ ಸ್ಟ್ರೈಕ್ ನೇತೃತ್ವ ವಹಿಸಿದ್ದ ಸೇನಾಧಿಕಾರಿಗೆ ಮಣಿಪುರ ಹಿಂಸಾಚಾರ ತಡೆಯುವ ಹೊಣೆ! - Vistara News

ದೇಶ

Manipur Violence: ಸರ್ಜಿಕಲ್ ಸ್ಟ್ರೈಕ್ ನೇತೃತ್ವ ವಹಿಸಿದ್ದ ಸೇನಾಧಿಕಾರಿಗೆ ಮಣಿಪುರ ಹಿಂಸಾಚಾರ ತಡೆಯುವ ಹೊಣೆ!

Manipur Voilence: ಕಳೆದ ಮೂರ್ನಾಲ್ಕು ತಿಂಗಳಿಂದ ಈಶಾನ್ಯ ಭಾರತದ ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ನಡೆಯುತ್ತಿದ್ದು, 170ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

VISTARANEWS.COM


on

army officer who led the surgical strike has to control Manipur Violence task
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂಫಾಲ್, ಮಣಿಪುರ: 2015ರ ಮಯನ್ಮಾರ್ ಸರ್ಜಿಕಲ್ ಸ್ಟ್ರೈಕ್ (Myanmar Surgical Strike) ನೇತೃತ್ವದ ವಹಿಸಿದ್ದ ಸೇನಾಧಿಕಾರಿ(ಈಗ ನಿವೃತ್ತ) ಅವರು(Army Officer) ಮಣಿಪುರ ಹಿಂಸಾಚಾರ (Manipur Violence) ತಡೆಗಟ್ಟಲು ರಾಜ್ಯ ಸರ್ಕಾರಕ್ಕೆ ನೆರವು ನೀಡಲಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳಿಂದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷದಲ್ಲಿ 170 ಅಧಿಕ ಮಂದಿ ಮೃತಪಟ್ಟಿದ್ದು, ಲಕ್ಷಾಂತರ ಜನರು ನಿರ್ಗತಿಕರಾಗಿದ್ದಾರೆ. ಮೈತೈ ಮತ್ತು ಕುಕಿ ಸಮುದಾಯಗಳ ನಡುವೆ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದೆ.

ಮಣಿಪುರ ಸರ್ಕಾರವು ಆಗಸ್ಟ್ 24 ರಂದು ಕರ್ನಲ್ (ನಿವೃತ್ತ) ನೆಕ್ಟರ್ ಸಂಜೆನ್ಬಮ್ ಅವರನ್ನು ಐದು ವರ್ಷಗಳ ಅಧಿಕಾರಾವಧಿಗೆ ಮಣಿಪುರ ಪೊಲೀಸ್ ಇಲಾಖೆಯಲ್ಲಿ ಹಿರಿಯ ಸೂಪರಿಂಟೆಂಡೆಂಟ್ (ಕಾರ್ಯಾಚರಣೆ) ಆಗಿ ನೇಮಿಸಿದೆ. ಸೇನೆಯ ಅಧಿಕಾರಿಯು 21 ಪ್ಯಾರಾ ವಿಶೇಷ ಪಡೆಯಲ್ಲಿ ಸೇವೆ ಸಲ್ಲಿಸಿದ್ದಾರೆ ಮತ್ತು ಶಾಂತಿ ಕಾಲದ ಎರಡನೇ ಅತ್ಯುನ್ನುತ ಕೀರ್ತಿ ಚಕ್ರ ಹಾಗೂ ಮೂರನೇ ಅತ್ಯುತನ್ನತ ಅವಾರ್ಡ್ ಶೌರ್ಯ ಚಕ್ರ ಪಡೆದುಕೊಂಡಿದ್ದಾರೆ.

ಮಣಿಪುರದ ಜಂಟಿ ಕಾರ್ಯದರ್ಶಿ ಆಗಸ್ಟ್ 28 ರಂದು ಹೊರಡಿಸಿದ ಆದೇಶದಲ್ಲಿ ಜೂನ್ 12 ರ ಕ್ಯಾಬಿನೆಟ್ ನಿರ್ಧಾರದ ನಂತರ ನೇಮಕಾತಿ ಮಾಡಲಾಗಿದೆ ಎಂದು ಹೇಳಲಾಗಿದೆ. ಮೂರ್ನಾಲ್ಕು ತಿಂಗಳಿಂದ ನಡೆಯುತ್ತಿರುವ ಹಿಂಸಾಚಾರ ತಡೆಯಲು ಮಣಿಪುರದ ಬಿರೇನ್ ಸಿಂಗ್ ಸರ್ಕಾರ ಕೇಂದ್ರ ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಅದರ ಭಾಗವಾಗಿಯೇ ಈಗ ನಿವೃತ್ತ ಸೇನಾಧಿಕಾರಿಯನ್ನು ನೇಮಕ ಮಾಡಲಾಗಿದೆ.

ಈ ಸುದ್ದಿಯನ್ನೂ ಓದಿ: ವಿಸ್ತಾರ ಸಂಪಾದಕೀಯ: ಮಣಿಪುರ ಹಿಂಸಾಚಾರ; ಸಂಸತ್‌ನಲ್ಲಿ ಸಮಗ್ರ ಚರ್ಚೆ ನಡೆಯಲಿ

ಇತ್ತೀಚೆಗೆ, ಕುಕಿ ಸಮುದಾಯದ ಮೂವರು ಯುವತಿಯನ್ನು ಬೆತ್ತಲೆ ಮೆರವಣಿಗೆ ಮಾಡಿ, ಒಬ್ಬಳನ್ನು ಗ್ಯಾಂಗ್ ರೇಪ್ ಮಾಡಿದ ಪ್ರಕರಣವು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಅವಿಶ್ವಾಸ ನಿರ್ಣಯವನ್ನು ಎದುರಿಸಬೇಕಾಯಿತು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು

Road Accident: ಜಮ್ಮು-ಕಾಶ್ಮೀರದ ದಕ್ಸುಮ್‌ ಪ್ರದೇಶದಿಂದ ಸುಮಾರು 20 ಕಿಲೋಮೀಟರ್‌ ದೂರದಲ್ಲಿರುವ ಆರ್ಶುನ್‌ ಹಟ್‌ ಎಂಬ ಪ್ರದೇಶದಲ್ಲಿ ಕಾರು ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಕಾರು ಕಣಿವೆಗೆ ಉರುಳುತ್ತಲೇ ಅವರ ರಕ್ಷಣೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ.

VISTARANEWS.COM


on

Road Accident
Koo

ಶ್ರೀನಗರ: ಜಮ್ಮು-ಕಾಶ್ಮೀರದ (Jammu Kashmir) ಅನಂತ್‌ನಾಗ್‌ ಜಿಲ್ಲೆಯಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಟಾಟಾ ಸುಮೋ ಕಾರೊಂದು ಕಣಿವೆಗೆ ಉರುಳಿದ್ದು, ಐವರು ಮಕ್ಕಳು ಸೇರಿ 8 ಮಂದಿ ದಾರುಣವಾಗಿ ಸಾವಿಗೀಡಾಗಿದ್ದಾರೆ. ಜಮ್ಮು-ಕಾಶ್ಮೀರದ ದಕ್ಸುಮ್‌ ಪ್ರದೇಶದಲ್ಲಿ ಕಾರು ನಿಯಂತ್ರಣ ತಪ್ಪಿ, ಕಣಿವೆಗೆ ಉರುಳಿದೆ ಎಂಬುದಾಗಿ ತಿಳಿದುಬಂದಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ದಕ್ಸುಮ್‌ ಪ್ರದೇಶದಿಂದ ಸುಮಾರು 20 ಕಿಲೋಮೀಟರ್‌ ದೂರದಲ್ಲಿರುವ ಆರ್ಶುನ್‌ ಹಟ್‌ ಎಂಬ ಪ್ರದೇಶದಲ್ಲಿ ಕಾರು ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಕಾರು ಕಣಿವೆಗೆ ಉರುಳುತ್ತಲೇ ಅವರ ರಕ್ಷಣೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ. ಇನ್ನೂ ಕಾರನ್ನು ಮೇಲಕ್ಕೆ ಎತ್ತಿಲ್ಲ. ಶವಗಳನ್ನು ಕೂಡ ಮೇಲೆ ಎತ್ತುವ ಕಾರ್ಯಾಚರಣೆ ನಡೆಯುತ್ತಿದೆ. ಮೃತರ ಕುರಿತು ಕೂಡ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಜಮ್ಮು-ಕಾಶ್ಮೀರವು ಕಣಿವೆ ಪ್ರದೇಶವಾದ ಕಾರಣ ವಾಹನಗಳು ಹೆಚ್ಚಾಗಿ ಕಣಿವೆಗೆ ಉರುಳುತ್ತವೆ. ರಾಜೌರಿ ಜಿಲ್ಲೆಯಲ್ಲಿ ಕಳೆದ ಜೂನ್‌ನಲ್ಲಿ ಸೇನೆಯ ವಾಹನವೊಂದು ಕಂದಕಕ್ಕೆ ಉರಳಿ ಒಬ್ಬ ಯೋಧ ಮೃತಪಟ್ಟಿದ್ದರು ಹಾಗೆಯೇ, ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಯೋಧರನ್ನು ಸೇನೆಯ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ನೀಡಲಾಗಿತ್ತು.

ನೌಶೇರಾ ಸೆಕ್ಟರ್‌ ಬಳಿಯ ಗಡಿ ನಿಯಂತ್ರಣ ರೇಖೆಗೆ ಸಮೀಪದಲ್ಲಿರುವ ಭವಾನಿ ಗ್ರಾಮದ ಮೂಲಕ ಸೇನಾ ವಾಹನವು ಸಂಜೆ ತೆರಳುತ್ತಿತ್ತು. ವಾಹದಲ್ಲಿ ಐವರು ಯೋಧರು ಇದ್ದರು. ಇದೇ ವೇಳೆ, ವಾಹನವು ಚಾಲಕನ ನಿಯಂತ್ರಣ ತಪ್ಪಿದ್ದು, ಕಂದಕಕ್ಕೆ ಉರುಳಿತ್ತು. ದುರಂತ ಸಂಭವಿಸುತ್ತಲೇ ಐವರೂ ಯೋಧರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಅಷ್ಟೊತ್ತಿಗಾಗಲೇ ಒಬ್ಬ ಯೋಧ ಮೃತಪಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಕಳೆದ ವರ್ಷ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸುಮಾರು 55 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್‌ ಒಂದು 300 ಅಡಿ ಆಳದ ಕಣಿವೆಗೆ ಬಿದ್ದು, 38 ಜನ ಮೃತಪಟ್ಟಿದ್ದರು. ಅಸ್ಸಾರ್‌ ಪ್ರದೇಶದ ತ್ರುಂಗಲ್‌ ಬಳಿ ಚಲಿಸುತ್ತಿದ್ದ ಬಸ್‌ ಕಂದಕಕ್ಕೆ ಉರುಳಿತ್ತು. ಕಿಶ್ತ್‌ವಾರ್‌ನಿಂದ ಜಮ್ಮುವಿಗೆ ತೆರಳುತ್ತಿದ್ದ ವೇಳೆ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿತ್ತು.

ಇದನ್ನೂ ಓದಿ: Viral Video: ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡ ಐಫೋನ್‌ಧಾರಿ! ದೊಡ್ಡವರ ಸಣ್ಣತನ ಎಂದ ನೆಟ್ಟಿಗರು

Continue Reading

ಕರ್ನಾಟಕ

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

Ghuspaithia Hindi movie: ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

VISTARANEWS.COM


on

Ghuspaithia Hindi movie release on August 9
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರಮೇಶ್ ರೆಡ್ಡಿ, ಜ್ಯೋತಿಕ ಶೆಣೈ ಹಾಗೂ ಮಂಜರಿ ಸುಸಿ ಗಣೇಶನ್ ನಿರ್ಮಿಸಿರುವ ಈ ಚಿತ್ರವನ್ನು ಸುಸಿ ಗಣೇಶನ್ ನಿರ್ದೇಶಿಸಿದ್ದಾರೆ.

ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ಮಾಪಕ ರಮೇಶ್ ರೆಡ್ಡಿ, ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ. ಮುಂದೆ ಕೂಡ ಹಿಂದಿ ಚಿತ್ರಗಳನ್ನು ನಿರ್ಮಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

ಆಗಸ್ಟ್ 9ರಂದು AA ಫಿಲಂಸ್ ಮೂಲಕ ಬಿಡುಗಡೆಯಾಗಲಿರುವ ಈ ಚಿತ್ರದ ತಾರಾಬಳಗದಲ್ಲಿ ವಿನೀತ್ ಕುಮಾರ್ ಸಿಂಗ್, ಊರ್ವಶಿ ರೌಟೇಲ, ಅಕ್ಷಯ್ ಒಬೆರಾಯ್ ಮುಂತಾದವರಿದ್ದಾರೆ.

Continue Reading

ದೇಶ

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು

Kanwar Yatra: ಸಂಭಾವ್ಯ ಗಲಭೆಗಳನ್ನು ತಪ್ಪಿಸಲು ಉತ್ತರಾಖಂಡದ ಹರಿದ್ವಾರದ ಕನ್ವರ್ ಯಾತ್ರೆ ಮಾರ್ಗದಲ್ಲಿನ ಎರಡು ಮಸೀದಿಗಳು ಮತ್ತು ಮಝಾರ್​​ (ಸಮಾಧಿ)ಗಳ ಮುಂಭಾಗಗಳನ್ನು ಶುಕ್ರವಾರ ಬಿಳಿ ಬಟ್ಟೆಯ ದೊಡ್ಡ ಹಾಳೆಗಳಿಂದ ಮುಚ್ಚಲಾಗಿತ್ತು. ಆದಾಗ್ಯೂ ಆಕ್ಷೇಪಣೆಗಳ ನಂತರ ಸಂಜೆಯ ವೇಳೆಗೆ ಹಾಳೆಗಳನ್ನು ತೆಗೆದು ಹಾಕಲಾಯಿತು. ಜ್ವಾಲಾಪುರ ಪ್ರದೇಶದಲ್ಲಿರುವ ಮಸೀದಿಗಳು ಮತ್ತು ಮಝಾರ್‌ಗ​ಳ ಮುಂದೆ ಬಿದಿರಿನ ಅಟ್ಟಣಿಗೆಗಳ ಮೇಲೆ ಹಾಳೆಗಳನ್ನು ನೇತು ಹಾಕಲಾಗಿತ್ತು.

VISTARANEWS.COM


on

Kanwar Yatra
Koo

ಡೆಹ್ರಾಡೂನ್‌: ಸಂಭಾವ್ಯ ಗಲಭೆಗಳನ್ನು ತಪ್ಪಿಸಲು ಉತ್ತರಾಖಂಡ (Uttarakhand)ದ ಹರಿದ್ವಾರ (Haridwar)ದ ಕನ್ವರ್ ಯಾತ್ರೆ (Kanwar Yatra) ಮಾರ್ಗದಲ್ಲಿನ ಎರಡು ಮಸೀದಿಗಳು ಮತ್ತು ಮಝಾರ್​​ (ಸಮಾಧಿ)ಗಳ ಮುಂಭಾಗಗಳನ್ನು ಶುಕ್ರವಾರ ಬಿಳಿ ಬಟ್ಟೆಯ ದೊಡ್ಡ ಹಾಳೆಗಳಿಂದ ಮುಚ್ಚಲಾಗಿತ್ತು. ಆದಾಗ್ಯೂ ಆಕ್ಷೇಪಣೆಗಳ ನಂತರ ಸಂಜೆಯ ವೇಳೆಗೆ ಹಾಳೆಗಳನ್ನು ತೆಗೆದು ಹಾಕಲಾಯಿತು.

ಜ್ವಾಲಾಪುರ ಪ್ರದೇಶದಲ್ಲಿರುವ ಮಸೀದಿಗಳು ಮತ್ತು ಮಝಾರ್‌ಗ​ಳ ಮುಂದೆ ಬಿದಿರಿನ ಅಟ್ಟಣಿಗೆಗಳ ಮೇಲೆ ಹಾಳೆಗಳನ್ನು ನೇತು ಹಾಕಲಾಗಿತ್ತು. ಈ ಕ್ರಮದ ಬಗ್ಗೆ ಪ್ರತಿಕ್ರಿಯಿಸಿದ್ದ ಮಸೀದಿಯ ಮೌಲಾನಾ ಮತ್ತು ಮಝಾರ್​​ನ ಉಸ್ತುವಾರಿಗಳು ಈ ಬಗ್ಗೆ ಯಾವುದೇ ಆಡಳಿತಾತ್ಮಕ ಆದೇಶದ ಬಗ್ಗೆ ನಮಗೆ ತಿಳಿದಿಲ್ಲ. ಕನ್ವರ್ ಯಾತ್ರೆಯ ಸಮಯದಲ್ಲಿ ಇಂತಹ ಕ್ರಮವನ್ನು ತೆಗೆದುಕೊಳ್ಳುತ್ತಿರುವುದು ಇದೇ ಮೊದಲು ಎಂದು ಹೇಳಿದ್ದರು.

ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರತಿಕ್ರಿಯೆಗೆ ಲಭಿಸಿಲ್ಲ. ಇತ್ತ ಕ್ಯಾಬಿನೆಟ್ ಸಚಿವ ಸತ್ಪಾಲ್ ಮಹಾರಾಜ್ ಈ ಬಗ್ಗೆ ಮಾತನಾಡಿ, ಶಾಂತಿ, ಸುವ್ಯವಸ್ಥೆ ಕಾಪಾಡಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದರು. “ಸಂಭಾವ್ಯ ತೊಂದರೆಯನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಇದು ಅಂತಹ ದೊಡ್ಡ ವಿಷಯವಲ್ಲ. ಕಟ್ಟಡಗಳು ನಿರ್ಮಾಣ ಹಂತದಲ್ಲಿದ್ದಾಗ ನಾವು ಅದನ್ನು ಮುಚ್ಚುತ್ತೇವೆʼʼ ಎಂದು ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ವ್ಯಾಪಕ ವಿರೋಧ

ಸ್ಥಳೀಯರು ಮತ್ತು ರಾಜಕಾರಣಿಗಳು ಸೇರಿದಂತೆ ಹಲವರು ಈ ಕ್ರಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಬಳಿಕ ಬಟ್ಟೆಯ ಹಾಳೆಗಳನ್ನು ತೆಗೆದು ಹಾಕಿತು. “ಪರದೆಗಳನ್ನು ತೆಗೆದುಹಾಕಲು ರೈಲ್ವೆ ಪೊಲೀಸ್ ಠಾಣೆಯಿಂದ ನಮಗೆ ಆದೇಶ ಬಂದಿದೆ. ಅದಕ್ಕಾಗಿಯೇ ನಾವು ಇವುಗಳನ್ನು ತೆಗೆದುಹಾಕಿದ್ದೇವೆ” ಎಂದು ವಿಶೇಷ ಪೊಲೀಸ್ ಅಧಿಕಾರಿ (SPO) ಡ್ಯಾನಿಶ್ ಅಲಿ ತಿಳಿಸಿದರು.

ನಾಯಕರು ಹೇಳಿದ್ದೇನು?

ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಚಿವ ನಯೀಮ್ ಖುರೇಷಿ ಅವರು ತಮ್ಮ ಜೀವನದಲ್ಲಿ ಇಂತಹ ಕ್ರಮ ನೋಡಿದ್ದು ಇದು ಮೊದಲ ಬಾರಿ ಎಂದು ವ್ಯಂಗ್ಯವಾಡಿದ್ದಾರೆ. “ನಾವು ಮುಸ್ಲಿಮರು ಯಾವಾಗಲೂ ಕನ್ವರ್ ಜಾತ್ರೆಗೆ ಶಿವಭಕ್ತರನ್ನು ಸ್ವಾಗತಿಸುತ್ತೇವೆ ಮತ್ತು ಅವರಿಗೆ ವಿವಿಧ ಸ್ಥಳಗಳಲ್ಲಿ ಉಪಹಾರವನ್ನು ವ್ಯವಸ್ಥೆ ಮಾಡುತ್ತೇವೆ. ಇದು ಹರಿದ್ವಾರದಲ್ಲಿ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಸಾಮರಸ್ಯಕ್ಕೆ ಉದಾಹರಣೆ. ಮಸೀದಿಯನ್ನು ಮುಚ್ಚುವ ಸಂಪ್ರದಾಯ ಎಂದಿಗೂ ಇರಲಿಲ್ಲ” ಎಂದು ಹೇಳಿದ್ದಾರೆ.

ʼʼಕನ್ವರ್ ಮೇಳ ಪ್ರಾರಂಭವಾಗುವ ಮೊದಲು ಆಡಳಿತವು ಸಭೆ ನಡೆಸಿದ್ದು, ಹಿಂದೂ ಮತ್ತು ಮುಸ್ಲಿಂ ಸಮುದಾಯದ ಸದಸ್ಯರನ್ನು ಎಸ್‌ಪಿಒಗಳನ್ನಾಗಿ ಮಾಡಲಾಗಿತ್ತು. ಆ ವೇಳೆ ಧಾರ್ಮಿಕ ಕಟ್ಟಡಗಳನ್ನು ಮುಚ್ಚುವ ಬಗ್ಗೆ ಯಾರೂ ಮಾತನಾಡಿಲ್ಲʼʼ ಎಂದು ಮಝಾರ್‌ನ ಉಸ್ತುವಾರಿ ಶಕೀಲ್ ಅಹ್ಮದ್ ಹೇಳಿದ್ದಾರೆ. ʼʼಕನ್ವರ್‌ ಯಾತ್ರಾರ್ಥಿಗಳು ವಿಶ್ರಾಂತಿ ಪಡೆಯಲು ಮಸೀದಿಗಳು ಮತ್ತು ಮಝಾರ್‌ನ ಹೊರಗಿನ ಮರಗಳ ನೆರಳಿನಲ್ಲಿ ನಿಲ್ಲುತ್ತಾರೆ. ಇದರಿಂದ ಯಾವುದೇ ಸಮಸ್ಯೆಯಾಗಿಲ್ಲʼʼ ಎಂದಿದ್ದಾರೆ.

ಇದನ್ನೂ ಓದಿ: Kanwar Yatra: ಕನ್ವರ್‌ ಯಾತ್ರೆ ವೇಳೆ ನಾಮ ಫಲಕ ಕಡ್ಡಾಯ; ಸುಪ್ರೀಂಕೋರ್ಟ್‌ನಿಂದ ಮತ್ತೊಂದು ಮಹತ್ವದ ಆದೇಶ

ಕಾಂಗ್ರೆಸ್ ಮುಖಂಡ ರಾವ್ ಅಫಾಕ್ ಅಲಿ ಮಾತನಾಡಿ, ʼʼಮಸೀದಿಗಳು ಮತ್ತು ಮಝಾರ್‌ ಮುಚ್ಚುವ ಆಡಳಿತದ ನಿರ್ಧಾರ ಆಶ್ಚರ್ಯಕರವಾಗಿತ್ತುʼʼ ಎಂದು ಹೇಳಿದ್ದಾರೆ.

Continue Reading

ದೇಶ

Mamata Banerjee: ಮಾತನಾಡಲು 5 ನಿಮಿಷ ಮಾತ್ರ ಅವಕಾಶ ನೀಡಿದರು: ನೀತಿ ಆಯೋಗದ ಸಭೆಯಿಂದ ಹೊರ ಬಂದ ಮಮತಾ ಬ್ಯಾನರ್ಜಿ ಕಿಡಿ

Mamata Banerjee: ನವದೆಹಲಿಯಲ್ಲಿ ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆಯಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೊರ ನಡೆದಿದ್ದಾರೆ. ʼʼನನಗೆ ಕೇವಲ ಐದು ನಿಮಿಷಗಳ ಕಾಲ ಮಾತನಾಡಲು ಅವಕಾಶ ನೀಡಲಾಯಿತು. ಕೆಲವರು ನನ್ನ ಮುಂದೆ 10-20 ನಿಮಿಷಗಳ ಕಾಲ ಮಾತನಾಡಿದರು” ಎಂದು ಮಮತಾ ಬ್ಯಾನರ್ಜಿ ಹೊರಬಂದ ನಂತರ ಆರೋಪಿಸಿದರು.

VISTARANEWS.COM


on

Mamata Banerjee
Koo

ನವದೆಹಲಿ: ಶನಿವಾರ (ಜುಲೈ 27) ನವದೆಹಲಿಯಲ್ಲಿ ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅಧ್ಯಕ್ಷತೆಯ ನೀತಿ ಆಯೋಗ (NITI Aayog)ದ 9ನೇ ಆಡಳಿತ ಮಂಡಳಿ ಸಭೆಯಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಹೊರ ನಡೆದಿದ್ದಾರೆ.

“ರಾಜ್ಯ ಸರ್ಕಾರಗಳ ವಿರುದ್ಧ ಕೇಂದ್ರ ಸರ್ಕಾರ ತಾರತಮ್ಯ ಮಾಡಬಾರದು ಎಂದು ಸಭೆಯಲ್ಲಿ ನಾನು ಹೇಳಿದೆ. ನಾನು ಮಾತನಾಡಲು ಬಯಸಿದ್ದೆ. ಆದರೆ ನನ್ನ ಮೈಕ್ ಮ್ಯೂಟ್ ಆಗಿತ್ತು. ನನಗೆ ಕೇವಲ ಐದು ನಿಮಿಷಗಳ ಕಾಲ ಮಾತನಾಡಲು ಅವಕಾಶ ನೀಡಲಾಯಿತು. ಕೆಲವರು ನನ್ನ ಮುಂದೆ 10-20 ನಿಮಿಷಗಳ ಕಾಲ ಮಾತನಾಡಿದರು” ಎಂದು ಮಮತಾ ಬ್ಯಾನರ್ಜಿ ಹೊರಬಂದ ನಂತರ ಸುದ್ದಿಗಾರರಿಗೆ ತಿಳಿಸಿದರು.

“ಪ್ರತಿಪಕ್ಷದಿಂದ ನಾನು ಮಾತ್ರ ಭಾಗವಹಿಸಿದ್ದೆ. ಆದರೆ ನನಗೆ ಮಾತನಾಡಲು ಅವಕಾಶ ನೀಡಲಿಲ್ಲ. ಇದು ಕೇಂದ್ರ ಮಾಡಿದ ಅವಮಾನ” ಎಂದು ಅವರು ದೂರಿದರು. ಪ್ರತಿಪಕ್ಷ ಆಡಳಿತದ ಹಲವು ರಾಜ್ಯಗಳು ಸಭೆಯನ್ನು ಬಹಿಷ್ಕರಿಸುವುದಾಗಿ ಈ ಹಿಂದೆಯೇ ಘೋಷಿಸಿದ್ದವು. ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಮತ್ತು ತೆಲಂಗಾಣದ ರೇವಂತ್ ರೆಡ್ಡಿ ಅವರು 2024ರ ಕೇಂದ್ರ ಬಜೆಟ್‌ನಲ್ಲಿ ತಮ್ಮ ರಾಜ್ಯಗಳ ವಿರುದ್ಧ ಪಕ್ಷಪಾತ ಧೋರಣೆ ತೋರಲಾಗಿದೆ ಎಂದು ಆರೋಪಿಸಿ ಸಭೆಯಲ್ಲಿ ಭಾಗವಹಿಸಲಿಲ್ಲ.

ಇನ್ನು ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್, ಕೇರಳ ಮುಖ್ಯಮಂತ್ರಿ, ಎಡಪಕ್ಷದ ನಾಯಕ ಪಿಣರಾಯಿ ವಿಜಯನ್ ಮತ್ತು ಆಮ್ ಆದ್ಮಿ ಪಕ್ಷ ನೇತೃತ್ವದ ಪಂಜಾಬ್ ಮತ್ತು ದೆಹಲಿ ಸರ್ಕಾರಗಳು ಸಹ ಸಭೆಯನ್ನು ಬಹಿಷ್ಕರಿಸಿವೆ. ತಮ್ಮ ಧ್ವನಿಯನ್ನು ಸಾಮಾನ್ಯ ವೇದಿಕೆಯಲ್ಲಿ ಎತ್ತಬೇಕು ಎನ್ನುವ ಕಾರಣಕ್ಕೆ ಸಭೆಯಲ್ಲಿ ಭಾಗವಹಿಸುತ್ತಿರುವುದಾಗಿ ಆರಂಭದಲ್ಲಿ ಮಮತಾ ಬ್ಯಾನರ್ಜಿ ತಿಳಿಸಿದ್ದರು. ಆದರೆ ಇದೀಗ ಮಾತನಾಡಲು ಅವಕಾಶವೇ ಸಿಕ್ಕಿಲ್ಲ ಎಂದು ಹೊರ ಬಂದಿದ್ದಾರೆ.

“ನೀತಿ ಆಯೋಗದ ಆಡಳಿತ ಮಂಡಳಿ ಸಭೆಯು ವಿಕಸಿತ್ ಭಾರತ್ @2047ರ ವಿಷನ್ ಡಾಕ್ಯುಮೆಂಟ್‌ನ ಅಪ್ರೋಚ್ ಪೇಪರ್ ಅನ್ನು ಚರ್ಚಿಸಲಿದೆ. ಸಭೆಯು ವಿಕಸಿತ್ ಭಾರತ್ @2047ರ ಗುರಿಯನ್ನು ಸಾಧಿಸುವಲ್ಲಿ ರಾಜ್ಯಗಳ ಪಾತ್ರದ ಕುರಿತು ವಿವರವಾದ ಚರ್ಚೆಗಳನ್ನು ಮಾಡಲಿದೆʼʼ ಎಂದು ಸಭೆಯ ಮುನ್ನ ಸರ್ಕಾರದ ಹೇಳಿಕೆ ನೀಡಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಮುಖ್ಯ ಕಾರ್ಯದರ್ಶಿಗಳ 3ನೇ ರಾಷ್ಟ್ರೀಯ ಸಮ್ಮೇಳನದ ಶಿಫಾರಸುಗಳ ಬಗ್ಗೆಯೂ ಸಭೆ ಗಮನಹರಿಸಲು ನಿರ್ಧರಿಸಲಾಗಿದೆ ಎಂದೂ ತಿಳಿಸಿತ್ತು.

ಇದನ್ನೂ ಓದಿ: DK Shivakumar: ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿ.ಕೆ. ಶಿವಕುಮಾರ್

ಸಮ್ಮೇಳನದಲ್ಲಿ ಐದು ಪ್ರಮುಖ ವಿಷಯಗಳ ಬಗ್ಗೆ ಗಮನ ಕೇಂದ್ರೀಕರಿಸಿದೆ- ಕುಡಿಯುವ ನೀರು: ಪ್ರಮಾಣ ಮತ್ತು ಗುಣಮಟ್ಟ, ವಿದ್ಯುತ್: ಗುಣಮಟ್ಟ ಮತ್ತು ವಿಶ್ವಾಸಾರ್ಹತೆ, ಆರೋಗ್ಯ: ಕೈಗೆಟಕುವಿಕೆ ಮತ್ತು ಆರೈಕೆಯ ಗುಣಮಟ್ಟ, ಶಾಲಾ ಶಿಕ್ಷಣ: ಕೈಗೆಟಕುವಿಕೆ ಮತ್ತು ಗುಣಮಟ್ಟ ಮತ್ತು ಭೂಮಿ ಮತ್ತು ಆಸ್ತಿ: ಪ್ರವೇಶ, ಡಿಜಿಟಲೀಕರಣ, ನೋಂದಣಿ. ಜತೆಗೆ ಸ್ವಾತಂತ್ರ್ಯದ 100ನೇ ವರ್ಷವಾದ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಸವನ್ನಾಗಿಸುವ ಗುರಿ ಹೊಂದಲಾಗಿದೆ.

Continue Reading
Advertisement
PARIS 2024 OLYMPICS
ಕ್ರೀಡೆ2 mins ago

PARIS 2024 OLYMPICS: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಸೋಲು

Road Accident
ದೇಶ8 mins ago

Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು

Ashwini Puneeth Rajkumar launched Appu Cup season 2
ಕ್ರಿಕೆಟ್13 mins ago

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Money Guide
ಮನಿ-ಗೈಡ್32 mins ago

Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

Womens Asia Cup Final
ಕ್ರೀಡೆ55 mins ago

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

dk shivakumar hd kumarswamy
ಪ್ರಮುಖ ಸುದ್ದಿ59 mins ago

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

karnataka high court
ಪ್ರಮುಖ ಸುದ್ದಿ1 hour ago

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Ghuspaithia Hindi movie release on August 9
ಕರ್ನಾಟಕ2 hours ago

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

2nd International Airport in Bengaluru Another round of discussion was held by Minister MB Patil
ಕರ್ನಾಟಕ2 hours ago

MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

Kanwar Yatra
ದೇಶ2 hours ago

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ2 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ21 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ22 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ23 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌