Arvind Kejriwal: "ಜೈಲಿನಲ್ಲಿ ಕೇಜ್ರಿವಾಲ್‌ ಹತ್ಯೆಗೆ ಸಂಚು"- ಸಂಚಲನ ಮೂಡಿಸ್ತಿದೆ ಆಪ್‌ ಆರೋಪ - Vistara News

ದೇಶ

Arvind Kejriwal: “ಜೈಲಿನಲ್ಲಿ ಕೇಜ್ರಿವಾಲ್‌ ಹತ್ಯೆಗೆ ಸಂಚು”- ಸಂಚಲನ ಮೂಡಿಸ್ತಿದೆ ಆಪ್‌ ಆರೋಪ

Arvind Kejriwal: ಮಾಧ್ಯಮಗೋಷ್ಠಿ ನಡೆಸಿದ ದಿಲ್ಲಿ ಸಚಿವೆ ಆತಿಷಿ, ಕೇಜ್ರಿವಾಲ್‌ ಅವರನ್ನು ಜೈಲಿಗೆ ತಳ್ಳುವುದು ಮಾತ್ರವಲ್ಲ, ಅವರನ್ನು ಅನಾರೋಗ್ಯಕ್ಕೀಡು ಮಾಡಿ ಕೊಲೆಗೈಯುವ ಸಂಚು ಬಿಜೆಪಿಗಿದೆ. ಸರ್ವಾಧಿಕಾರಿ ತಮ್ಮ ವಿರೋಧಿಗಳನ್ನು ಜೈಲಿಗೆ ತಳ್ಳಿ ಅವರ ಆರೋಗ್ಯ ಹದಗೆಡುವಂತೆ ಮಾಡುತ್ತಿದ್ದಾರೆ. ಕೇಜ್ರಿವಾಲ್‌ಗೆ ಏನಾದರೂ ಹೆಚ್ಚು ಕಡಿಮೆ ಆದರೆ ಅದಕ್ಕೆ ಬಿಜೆಪಿಯೇ ನೇರ ಜವಾಬ್ದಾರಿ ಎಂದು ಹೇಳಿದ್ದಾರೆ.

VISTARANEWS.COM


on

Arvind Kejriwal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣ(Delhi Excise policy)ದಲ್ಲಿ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್(Arvind Kejriwal) ಅವರಿಗೆ ಜೈಲಿನಲ್ಲಿ ಜೀವ ಬೆದರಿಕೆ ಇದೆ ಎಂದು ಆಪ್‌ ಆತಂಕ ವ್ಯಕ್ತಪಡಿಸಿದೆ. ತಿಹಾರ್‌ನಲ್ಲಿ ಕೇಜ್ರಿವಾಲ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡದೇ ಅವರ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ ಎಂದು ಆಪ್‌ ಗಂಭೀರ ಆರೋಪ ಮಾಡಿದೆ.

ಮಾಧ್ಯಮಗೋಷ್ಠಿ ನಡೆಸಿದ ದಿಲ್ಲಿ ಸಚಿವೆ ಆತಿಷಿ, ಕೇಜ್ರಿವಾಲ್‌ ಅವರನ್ನು ಜೈಲಿಗೆ ತಳ್ಳುವುದು ಮಾತ್ರವಲ್ಲ, ಅವರನ್ನು ಅನಾರೋಗ್ಯಕ್ಕೀಡು ಮಾಡಿ ಕೊಲೆಗೈಯುವ ಸಂಚು ಬಿಜೆಪಿಗಿದೆ. ಸರ್ವಾಧಿಕಾರಿ ತಮ್ಮ ವಿರೋಧಿಗಳನ್ನು ಜೈಲಿಗೆ ತಳ್ಳಿ ಅವರ ಆರೋಗ್ಯ ಹದಗೆಡುವಂತೆ ಮಾಡುತ್ತಿದ್ದಾರೆ. ಕೇಜ್ರಿವಾಲ್‌ಗೆ ಏನಾದರೂ ಹೆಚ್ಚು ಕಡಿಮೆ ಆದರೆ ಅದಕ್ಕೆ ಬಿಜೆಪಿಯೇ ನೇರ ಜವಾಬ್ದಾರಿ ಎಂದು ಹೇಳಿದ್ದಾರೆ.

ಕೇಜ್ರಿವಾಲ್‌ ಕಳೆದ 30 ವರ್ಷಗಳಿಂದ ಸಕ್ಕರೆ ಖಾಯಿಲೆ ಹೊಂದಿರುವ ರೋಗಿ. ಇನ್ಸುಲಿನ್‌ ತೆಗೆದುಕೊಳ್ಳಲು ಅಥವಾ ವೈದ್ಯರನ್ನು ಭೇಟಿ ಮಾಡಲೂ ಅವರಿಗೆ ಬಿಜೆಪಿ ನೇತೃತ್ವದ ಸರ್ಕಾರ ಅವಕಾಶ ನೀಡುತ್ತಿಲ್ಲ. ಕೇಜ್ರಿವಾಲ್‌ಗೆ ಏನಾದರೂ ಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆಯಾಗಲಿದೆ. ಸಿಎಂ ಕೇಜ್ರಿವಾಲ್ ಇಡಿ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ಜಾಮೀನು ಪಡೆದ ತಕ್ಷಣ, ಬಿಜೆಪಿ ಅವರ ಜಾಮೀನು ರದ್ದುಗೊಳಿಸುವಂತೆ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿತ್ತು ಮತ್ತು ನಂತರ ಅವರನ್ನು ಸಿಬಿಐ ಬಂಧಿಸಿತು. ಸಕ್ಕರೆ ಖಾಯಿಲೆಯಿಂದಾಗಿ ಕೇಜ್ರಿವಾಲ್ ಅವರ ಆರೋಗ್ಯ ದಿನೇ ದಿನೇ ಕುಸಿಯುತ್ತಿದೆ. ಅವರ ತೂಕವೂ ಕ್ಷೀಣಿಸುತ್ತಿದೆ ಎಂದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: World Record: ಒಂದೇ ದಿನ ಬರೋಬ್ಬರಿ 11 ಲಕ್ಷ ಗಿಡ ನೆಟ್ಟು ವಿಶ್ವ ದಾಖಲೆ ಬರೆದ ಇಂದೋರ್‌; ದೇಶದ ಸ್ವಚ್ಛ ನಗರಕ್ಕೆ ಇನ್ನೊಂದು ಗರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Anant Ambani Wedding: ಅನಂತ್‌ ಅಂಬಾನಿ ಅದ್ಧೂರಿ ಮದುವೆಗೆ ತೆರೆ; ಕೊನೆಯ ದಿನ ನಟ ಅಕ್ಷಯ್‌ ಕುಮಾರ್‌ ಭಾಗಿ

Anant Ambani Wedding: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ವಿವಾಹವು ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂಬಾನಿ ಕುಟುಂಬ 4 ದಿನಗಳ ಕಾಲ ವೈಭವದ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಸೋಮವಾರ ತೆರೆ ಬಿದ್ದಿದ್ದು, ಕೊನೆಯ ದಿನ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಪಾಲ್ಗೊಂಡಿದ್ದರು.

VISTARANEWS.COM


on

Anant Ambani Wedding
Koo

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani Wedding) ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್‌ ಅವರ ಪುತ್ರಿ ರಾಧಿಕಾ ಮರ್ಚಂಟ್‌ (Radhika Merchant) ಅವರ ವಿವಾಹವು ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂಬಾನಿ ಕುಟುಂಬ 4 ದಿನಗಳ ಕಾಲ ವೈಭವದ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಸೋಮವಾರ ತೆರೆ ಬಿದ್ದಿದೆ. ಕೊನೆಯ ದಿನವಾದ ಸೋಮವಾರ ಜಿಯೋ ವರ್ಲ್ಡ್ ಡ್ರೈವ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳು, ರಿಲಯನ್ಸ್ ಉದ್ಯೋಗಿಗಳು ಮತ್ತು ಅಂಬಾನಿ ಕುಟುಂಬದ ಸಿಬ್ಬಂದಿಗೆ ವಿಶೇಷ ಸಮಾರಂಭ ಆಯೋಜಿಸಲಾಗಿತ್ತು.

ಮಾಧ್ಯಮಗಳು ಮತ್ತು ರಿಲಯನ್ಸ್‌ ಸಿಬ್ಬಂದಿಗೆಂದು ವಿಶೇಷವಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಪಾಲ್ಗೊಂಡಿದ್ದರು. ಅಕ್ಷಯ್‌ ಕುಮಾರ್‌ ಅವರಿಗೆ ಕೋವಿಡ್ ಬಾಧಿಸಿದ್ದ ಹಿನ್ನೆಲೆಯಲ್ಲಿ ಅವರು ಮದುವೆಯಲ್ಲಿ ಪಾಲ್ಗೊಂಡಿರಲಿಲ್ಲ. ಹೀಗಾಗಿ ಸೋಮವಾರ ಅವರು ಸಮಾರಂಭದಕ್ಕೆ ಪತ್ನಿ ಟ್ವಿಂಕಲ್‌ ಖನ್ನಾ ಜತೆಗೆ ಆಗಮಿಸಿದ ವಧು-ವರರಿಗೆ ಶುಭಾಶಯ ತಿಳಿಸಿದ್ದರು.

ಯಾರೆಲ್ಲ ಭಾಗಿ?

ಅಂಬಾನಿ ಆಸ್ತಿಗಳ ಹೌಸ್ ಕೀಪಿಂಗ್, ಸೆಕ್ಯುರಿಟಿ, ಸೆಕ್ರೆಟರಿಯಲ್‌ ಮತ್ತು ನಿರ್ವಹಣಾ ವಿಭಾಗಗಳ ಉದ್ಯೋಗಿಗಳು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಸಾವಿರಾರು ಕಾರ್ಮಿಕರು ಮತ್ತು ಅವರ ಕುಟುಂಬಗಳ ಜತೆಗೆ ಮಾಧ್ಯಮ ಪ್ರತಿನಿಧಿಗಳೂ ಪಾಲ್ಗೊಂಡಿದ್ದರು. ಈ ಮೂಲಕ ಅನಂತ್‌-ರಾಧಿಕಾ ಮದುವೆಯ ಆಚರಣೆಗೆ ತೆರೆ ಎಳೆಯಲಾಗಿದೆ.

ಗಣ್ಯರ ದಂಡೇ ಉಪಸ್ಥಿತಿ

ಸಮಾರಂಭಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಕೂಡ ಆಗಮಿಸಿ ಮದುಮಕ್ಕಳನ್ನು ಆಶೀರ್ವದಿಸಿದ್ದರು. ಜತೆಗೆ ನಟ-ನಟಿಯರು, ಕ್ರಿಕೆಟಿಗರು, ಬೇರೆ ದೇಶಗಳ ನಾಯಕರಿಂದ ಹಿಡಿದು ಸಾವಿರಾರು ಗಣ್ಯರು, ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು. ಮಹೇಂದ್ರ ಸಿಂಗ್‌ ಧೋನಿ, ಅಮಿತಾಭ್‌ ಬಚ್ಚನ್‌, ಯಶ್‌, ದೀಪಿಕಾ ಪಡುಕೋಣೆ, ಆಲಿಯಾ ಭಟ್‌, ರಣವೀರ್‌ ಸಿಂಗ್‌, ರಣಬೀರ್‌ ಕಪೂರ್‌, ಅನನ್ಯಾ ಪಾಂಡೆ, ರಜನಿಕಾಂತ್‌, ಮಹೇಶ್‌ ಬಾಬು, ಹಾರ್ದಿಕ್‌ ಪಾಂಡ್ಯ, ಐಶ್ವರ್ಯಾ ರೈ, ದಿಶಾ ಪಟಾಣಿ, ನಯನತಾರಾ, ವಿಘ್ನೇಶ್‌ ಶಿವನ್‌, ಜೆನಿಲಿಯಾ, ರಿತೇಶ್‌ ದೇಶ್‌ಮುಖ್‌, ಮಾಧುರಿ ದೀಕ್ಷಿತ್‌, ಶಾರುಖ್‌ ಖಾನ್‌, ಸಲ್ಮಾನ್‌ ಖಾನ್‌, ಸೂರ್ಯ, ಜ್ಯೋತಿಕಾ, ರಶ್ಮಿಕಾ ಮಂದಣ್ಣ, ಪ್ರಿಯಾಂಕಾ ಚೋಪ್ರಾ, ಬ್ರಿಟನ್‌ ಮಾಜಿ ಪ್ರಧಾನಿಗಳಾದ ಬೋರಿಸ್‌ ಜಾನ್ಸನ್‌, ಟೋನಿ ಬ್ಲೇರ್‌ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಧೋನಿಯಿಂದ ರಜನಿಕಾಂತ್‌ವರೆಗೆ; ಅನಂತ್‌ ಅಂಬಾನಿ ಮದುವೆಯಲ್ಲಿ ಪಾಲ್ಗೊಂಡ ಗಣ್ಯರ ಫೋಟೊ, ವಿಡಿಯೊಗಳು ಇಲ್ಲಿವೆ

5 ಸಾವಿರ ಕೋಟಿ ರೂ. ಖರ್ಚು

ಅದ್ಧೂರಿ ವಿವಾಹ ಸಮಾರಂಭಕ್ಕೆ ಅಂದಾಜು ವೆಚ್ಚ 4,000ರಿಂದ 5000 ಕೋಟಿ ರೂ. ಎನ್ನಲಾಗಿದೆ. ಇದು ಅವರ ನಿವ್ವಳ ಆದಾಯದ ಶೇ. 0.5ರಷ್ಟು ಮಾತ್ರ! ವರದಿಗಳ ಪ್ರಕಾರ ಮುಖೇಶ್ ಅಂಬಾನಿ ಅವರ ನಿವ್ವಳ ಆದಾಯ ಮೌಲ್ಯವು 7.65 ಲಕ್ಷ ಕೋಟಿ ರೂ. ಮಾರ್ಚ್‌ನಲ್ಲಿ ಮದುವೆಯ ಪೂರ್ವಭಾವಿ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದಿತ್ತು. ಅಂಬಾನಿ ಕುಟುಂಬದ ವಿವಾಹ ಕಾರ್ಯಕ್ರಮದಲ್ಲಿ ಜಾಗತಿಕ ಗಾಯನ ಐಕಾನ್‌ಗಳಾದ ಜಸ್ಟಿನ್ ಬೀಬರ್, ರಿಹಾನ್ನಾ, ದಿಲ್ಜಿತ್ ದೋಸಾಂಜ್ ಸೇರಿದಂತೆ ಹಾಲಿವುಡ್‌-ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು.

Continue Reading

ದೇಶ

Formers MPs: ಚುನಾವಣೆಯಲ್ಲಿ ಸೋತರೂ ಸರ್ಕಾರಿ ಬಂಗಲೆ ಬಿಡದ 200 ಮಾಜಿ ಸಂಸದರು; ನೋಟಿಸ್‌ ಜಾರಿ

Formers MPs: ನಿಯಮಗಳ ಪ್ರಕಾರ, ಯಾವುದೇ ಲೋಕಸಭೆ ಸದಸ್ಯರು, ತಮ್ಮ ಸ್ಥಾನ ಕಳೆದುಕೊಂಡ ನಂತರದ ಒಂದು ತಿಂಗಳೊಳಗೆ ಸರ್ಕಾರದ ಬಂಗಲೆಯನ್ನು ತೊರೆಯಬೇಕು ಎಂಬ ನಿಯಮವಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋತವರು, ಚುನಾವಣೆ ವೇಳೆ ಟಿಕೆಟ್‌ ಸಿಗದವರು ಈಗ ಮಾಜಿಗಳಾಗಿದ್ದಾರೆ. ಆದರೂ ಅವರು ಬಂಗಲೆಗಳನ್ನು ಖಾಲಿ ಮಾಡದ ಕಾರಣ ನೋಟಿಸ್‌ ಜಾರಿಗೊಳಿಸಲಾಗಿದೆ.

VISTARANEWS.COM


on

Former MPs
Koo

ನವದೆಹಲಿ: ಕಳೆದ ಲೋಕಸಭೆ ಚುನಾವಣೆ (Lok Sabha Election 2024) ಸೋಲು ಸೇರಿ ಹಲವು ಕಾರಣಗಳಿಂದಾಗಿ ಮಾಜಿಗಳಾಗಿರುವ ಸಂಸದರಿಗೆ (Formers MPs) ಸರ್ಕಾರಿ ಬಂಗಲೆಗಳನ್ನು ತೊರೆಯಲು ಮನಸ್ಸೇ ಬರುತ್ತಿಲ್ಲ. ಹೌದು, ಲುಟಿಯೆನ್ಸ್‌ ದೆಹಲಿಯಲ್ಲಿರುವ (Lutyens’ Delhi) ಬಂಗಲೆಗಳನ್ನು ತೊರೆಯುವಂತೆ ಸುಮಾರು 200ಕ್ಕೂ ಅಧಿಕ ಲೋಕಸಭೆ ಮಾಜಿ ಸಂಸದರಿಗೆ ನೋಟಿಸ್‌ ಜಾರಿಗೊಳಿಸಲಾಗಿದೆ. ಶೀಘ್ರದಲ್ಲೇ ಬಂಗಲೆಗಳನ್ನು ತೊರೆಯಬೇಕು ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ.

“ಮಾಜಿ ಸಂಸದರಾದರೂ ಇದುವರೆಗೆ ಬಂಗಲೆಗಳನ್ನು ಖಾಲಿ ಮಾಡಿಲ್ಲ. ಹಾಗಾಗಿ, ಇದುವರೆಗೆ 200ಕ್ಕೂ ಅಧಿಕ ಮಾಜಿ ಸಂಸದರಿಗೆ ಎವಿಕ್ಷನ್‌ ನೋಟಿಸ್‌ಗಳನ್ನು ಜಾರಿಗೊಳಿಸಲಾಗಿದೆ. ಹಾಗೆಯೇ, ಇನ್ನೂ ಹೆಚ್ಚಿನ ಸಂಸದರು ಬಂಗಲೆಗಳನ್ನು ಖಾಲಿ ಮಾಡಿಲ್ಲ. ಅವರಿಗೂ ನೋಟಿಸ್‌ಗಳನ್ನು ಕಳುಹಿಸಲು ಸಿದ್ಧತೆ ನಡೆಸಲಾಗುತ್ತಿದೆ” ಎಂದು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಮೂಲಗಳು ತಿಳಿಸಿವೆ. ಮಾಜಿ ಸಂಸದರು ಬಂಗಲೆಗಳನ್ನು ಖಾಲಿ ಮಾಡದ ಕಾರಣ ನೂತನ ಸಂಸದರಿಗೆ ವಸತಿ ವ್ಯವಸ್ಥೆ ಮಾಡಲು ಕಷ್ಟವಾಗುತ್ತಿದೆ ಎಂದು ತಿಳಿದುಬಂದಿದೆ.

ಬಲವಂತದ ತೆರವಿಗೂ ಸಜ್ಜು

ಬಂಗಲೆ ತೊರೆಯುವಂತೆ ನೋಟಿಸ್‌ ಜಾರಿಗೊಳಿಸಿದರೂ ಮಾಜಿ ಸಂಸದರು ಮನೆಗಳನ್ನು ಖಾಲಿ ಮಾಡದಿದ್ದರೆ, ಬಲವಂತವಾಗಿ ಅಲ್ಲಿಂದ ತೆರವುಗೊಳಿಸಲು ಕೂಡ ಸಚಿವಾಲಯವು ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ. ನೂತನ ಸಂಸದರಿಗೆ ಮನೆಗಳನ್ನು ಹಂಚಿಕೆ ಮಾಡಲು ಆಗದ ಕಾರಣ, ಮಾಜಿ ಸಂಸದರು ಬಂಗಲೆಗಳನ್ನು ಖಾಲಿ ಮಾಡದಿದ್ದರೆ, ಅಧಿಕಾರಿಗಳನ್ನು ಕಳುಹಿಸಿ, ಬಂಗಲೆಗಳಲ್ಲಿರುವ ಪೀಠೋಪಕರಣಗಳನ್ನು ಹೊರಗೆ ಹಾಕಿ, ಬಲವಂತವಾಗಿ ಮಾಜಿ ಸಂಸದರನ್ನು ತೆರವುಗೊಳಿಸಲು ಚಿಂತನೆ ನಡೆದಿದೆ ಎಂದು ಸಚಿವಾಲಯದ ಮೂಲಗಳು ಮಾಹಿತಿ ನೀಡಿವೆ.

ನಿಯಮಗಳ ಪ್ರಕಾರ, ಯಾವುದೇ ಲೋಕಸಭೆ ಸದಸ್ಯರು, ತಮ್ಮ ಸ್ಥಾನ ಕಳೆದುಕೊಂಡ ನಂತರದ ಒಂದು ತಿಂಗಳೊಳಗೆ ಸರ್ಕಾರದ ಬಂಗಲೆಯನ್ನು ತೊರೆಯಬೇಕು ಎಂಬ ನಿಯಮವಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋತವರು, ಚುನಾವಣೆ ವೇಳೆ ಟಿಕೆಟ್‌ ಸಿಗದವರು ಈಗ ಮಾಜಿಗಳಾಗಿದ್ದಾರೆ. ಲೋಕಸಭೆ ಸಚಿವಾಲಯವು ಸಂಸದರಿಗೆ ಬಂಗಲೆಗಳನ್ನು ವಿನಿಯೋಗ ಮಾಡುತ್ತದೆ. ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯವು ಕೇಂದ್ರ ಸಚಿವರಿಗೆ ಲುಟಿಯೆನ್ಸ್‌ ದೆಹಲಿಯಲ್ಲಿ ಬಂಗಲೆಗಳನ್ನು ಹಂಚಿಕೆ ಮಾಡುತ್ತದೆ.

ಇದನ್ನೂ ಓದಿ: Amitabh Bachchan: ಹರಾಜಿಗಿದೆ ಅಮಿತಾಭ್ ಭವ್ಯ ಬಂಗಲೆ; ದರ ಎಷ್ಟು ನೋಡಿ!

Continue Reading

ದೇಶ

Kashmir Encounter: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ನಾಲ್ವರು ಯೋಧರು ಹುತಾತ್ಮ; ಮುಂದುವರಿದ ಕಾರ್ಯಾಚರಣೆ

Kashmir Encounter:

VISTARANEWS.COM


on

Kashmir encounter
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರರ ಉಪಟಳ ಮುಂದುವರಿದಿದೆ. ದೋಡಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ (Kashmir Encounter) ಒಬ್ಬ ಅಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ದಾಳಿಯ ವೇಳೆ ಜಮ್ಮು-ಕಾಶ್ಮೀರ ಪೊಲೀಸ್‌ ಅಧಿಕಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ದೋಡಾ ಜಿಲ್ಲೆಯ ದೇಸಾ ಎಂಬ ಪ್ರದೇಶದ ಅರಣ್ಯದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಸೋಮವಾರ (ಜುಲೈ 16) ರಾತ್ರಿಯೇ ಕಾರ್ಯಾಚರಣೆ ಆರಂಭಿಸಿದ್ದಾರೆ. ಉಗ್ರರಿಗಾಗಿ ನಡೆದ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಯೋಧರ ಮೇಲೆಯೇ ಗುಂಡಿನ ದಾಳಿ ನಡೆಸಿದ್ದಾರೆ. ಇದೇ ವೇಳೆ ಯೋಧರು ಕೂಡ ಗುಂಡಿನ ದಾಳಿ ಆರಂಭಿಸಿದ್ದಾರೆ. ರಾತ್ರೋರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ಉಪಟಳ ಜಾಸ್ತಿಯಾಗಿರುವ ಕಾರಣ ಭಾರತೀಯ ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು ಕಾರ್ಯಾಚರಣೆಗಳನ್ನು ಕೈಗೊಳ್ಳುತ್ತಲೇ ಇರುತ್ತಾರೆ. ಜುಲೈ 6 ಮತ್ತು 7 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಭದ್ರತಾ ಪಡೆಗಳು ಆರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದವು. ಇದಾದ ಕೇವಲ ಒಂದು ವಾರದ ನಂತರ ಈ ಕಾರ್ಯಾಚರಣೆಯು ನಡೆದಿದೆ. ಸೈನಿಕರು ಹಾಗೂ ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಉಗ್ರರು ಇತ್ತೀಚೆಗೆ ದಾಳಿ ನಡೆಸುತ್ತಿದ್ದಾರೆ.

ಕುಪ್ವಾರ ಜಿಲ್ಲೆಯಲ್ಲಿ ಸೋಮವಾರ (ಜುಲೈ 15) ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದರು. ಎಲ್‌ಒಸಿಯಲ್ಲಿ ಕುಪ್ವಾರದ ಕೆರಾನ್ ಸೆಕ್ಟರ್‌ನಲ್ಲಿ ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಲಾಯಿತು. “ಕೆರಾನ್ ಸೆಕ್ಟರ್‌ನಲ್ಲಿನ ಎಲ್‌ಒಸಿಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ-ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ. ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಚಿನಾರ್ ಕಾರ್ಪ್ಸ್ ಎಕ್ಸ್‌ನ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: Manipur Violence: ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಗುಂಡಿನ ದಾಳಿಗೆ ಒಬ್ಬ ಯೋಧ ಹುತಾತ್ಮ, ಮೂವರಿಗೆ ಗಾಯ

Continue Reading

ಪ್ರಮುಖ ಸುದ್ದಿ

BJP MLA: ಡಿಗ್ರಿ ಉಪಯೋಗಕ್ಕೆ ಬರಲ್ಲ, ಪಂಕ್ಚರ್‌ ಅಂಗಡಿ ತೆರೆಯಿರಿ; ವಿದ್ಯಾರ್ಥಿಗಳಿಗೆ ಬಿಜೆಪಿ ಶಾಸಕ ಕರೆ!

BJP MLA: ಕಾಲೇಜುಗಳಲ್ಲಿ ಪಡೆಯುವ ಡಿಗ್ರಿಗಳು ಉಪಯೋಗಕ್ಕೆ ಬರುವುದಿಲ್ಲ ಎಂಬುದಾಗಿ ಬಿಜೆಪಿ ಶಾಸಕ ಪನ್ನಾಲಾಲ್‌ ಶಾಕ್ಯಾ ಅವರು ನೀಡಿರುವ ಹೇಳಿಕೆಯು ಭಾರಿ ಟೀಕೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

VISTARANEWS.COM


on

BJP MLA
Koo

ಭೋಪಾಲ್:‌ ಶಾಸಕ, ಸಂಸದರಾದವರು ಹೇಗಿರಬೇಕು? ಜನರಿಗೆ ಅದರಲ್ಲೂ ಯುವಕರಿಗೆ, ಮಕ್ಕಳಿಗೆ ಶಿಕ್ಷಣದ ಮಹತ್ವದ ಸಾರಬೇಕು. ಓದಿ ವಿದ್ಯಾವಂತರಾಗಿ, ಕೈತುಂಬ ಸಂಬಳ ಬರುವ ಕೆಲಸ ಹಿಡಿದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂಬುದಾಗಿ ಕರೆ ನೀಡಬೇಕು. ಸಾಧ್ಯವಾದರೆ, ಬಡಮಕ್ಕಳ ಶಿಕ್ಷಣಕ್ಕೆ ನೆರವು ನೀಡಬೇಕು. ಆದರೆ, ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಿಜೆಪಿ ಶಾಸಕ (BJP MLA) ಪನ್ನಾಲಾಲ್‌ ಶಾಕ್ಯಾ (Pannalal Shakya) ಅವರು, “ಪದವಿ ಪ್ರಮಾಣಪತ್ರಗಳು (Degrees) ಯಾವುದೇ ಉಪಯೋಗಕ್ಕೆ ಬರಲ್ಲ, ಎಲ್ಲರೂ ಪಂಕ್ಚರ್‌ ಅಂಗಡಿ ತೆರೆಯಿರಿ” ಎಂಬುದಾಗಿ ವಿದ್ಯಾರ್ಥಿಗಳಿಗೆ ಕರೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ.

ಮಧ್ಯಪ್ರದೇಶದ ಗುಣ ವಿಧಾನಸಭೆ ಕ್ಷೇತ್ರದ ಶಾಸಕರಾಗಿರುವ ಇವರು, ತಮ್ಮ ಕ್ಷೇತ್ರದಲ್ಲಿ ನಿರ್ಮಿಸಲಾದ ಪಿಎಂ ಕಾಲೇಜ್‌ ಆಫ್‌ ಎಕ್ಸಲೆನ್ಸ್‌ ಎಂಬ ಕಾಲೇಜಿನ ಉದ್ಘಾಟನಾ ಸಮಾರಂಭದಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ. “ನಾವು ಪ್ರೈಮ್‌ ಮಿನಿಸ್ಟರ್‌ ಕಾಲೇಜ್‌ ಆಫ್‌ ಎಕ್ಸಲೆನ್ಸ್‌ಅನ್ನು ಉದ್ಘಾಟನೆ ಮಾಡಿದ್ದೇವೆ. ಆದರೆ, ನಿಮಗೆ ಒಂದು ಮಾತು ನೆನಪಿರಲಿ. ಕಾಲೇಜುಗಳಲ್ಲಿ ಪಡೆಯುವ ಡಿಗ್ರಿಗಳು ಯಾವುದೇ ಉಪಯೋಗಕ್ಕೆ ಬರಲ್ಲ. ನೀವೊಂದು ಸೈಕಲ್‌ ಪಂಕ್ಚರ್‌ ಅಂಗಡಿಯೋ, ರಿಪೇರಿ ಅಂಗಡಿಯೋ ಇಟ್ಟುಕೊಳ್ಳಿ, ಹಣ ಸಂಪಾದಿಸಿ” ಎಂದು ಬಿಜೆಪಿ ಶಾಸಕ ಕರೆ ನೀಡಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.

“ವಿದ್ಯಾರ್ಥಿಗಳು ಹಾಗೂ ಯುವಕರು ಜೀವನದಲ್ಲಿ ಒಂದೇ ಗುರಿಯನ್ನು ಇಟ್ಟುಕೊಳ್ಳಬೇಕು. ಕಾಲೇಜುಗಳಲ್ಲಿ ಪಡೆಯುವ ಪದವಿಗಳು ಜೀವನಕ್ಕೆ ದಾರಿಯಾಗುವುದಿಲ್ಲ ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ಪದವಿ ಪಡೆಯುವುದರ ಬದಲು ಪಂಕ್ಚರ್‌ ಅಂಗಡಿ ಇಟ್ಟುಕೊಂಡರೂ ನಿಮ್ಮ ಜೀವನ ಸಾಗುತ್ತದೆ” ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್‌ ಆಗುತ್ತಲೇ ಸಾರ್ವಜನಿಕರು ಬಿಜೆಪಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪನ್ನಾಲಾಲ್‌ ಶಾಕ್ಯಾ ಅವರು ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಮಧ್ಯಪ್ರದೇಶದಲ್ಲಿ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂಬ ಕಾರಣದಿಂದ ರಾಜ್ಯದ 55 ಕಡೆಗಳಲ್ಲಿ ಪಿಎಂ ಕಾಲೇಜ್‌ ಆಫ್‌ ಎಕ್ಸಲೆನ್ಸ್‌ ಎಂಬ ಕಾಲೇಜುಗಳನ್ನು ನಿರ್ಮಿಸಲಾಗಿದ್ದು, ಎಲ್ಲ ಕಾಲೇಜುಗಳನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ವರ್ಚ್ಯುವಲ್‌ ವೇದಿಕೆ ಮೂಲಕ ಉದ್ಘಾಟನೆ ಮಾಡಿದ್ದಾರೆ. ಹೀಗೆ ಸದುದ್ದೇಶದಿಂದ ನಿರ್ಮಿಸಿದ ಕಾಲೇಜಿನ ಉದ್ಘಾಟನೆಯ ವೇಳೆ ಪನ್ನಾಲಾಲ್‌ ಶಾಕ್ಯಾ ಅವರು ನೀಡಿರುವ ಹೇಳಿಕೆಯು ಭಾರಿ ಟೀಕೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: BSP President: ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಕೊಲೆ; ಹಂತಕನ ಎನ್‌ಕೌಂಟರ್‌- ಮತ್ತೊಂದೆಡೆ ಹತ್ಯೆಯ ಭೀಕರ ದೃಶ್ಯ ವೈರಲ್‌

Continue Reading
Advertisement
valmiki corporation scam culprits
ಪ್ರಮುಖ ಸುದ್ದಿ11 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮತ್ತೊಬ್ಬನ ಬಂಧನ; ಛತ್ತೀಸ್‌ಗಢದಲ್ಲೂ ವಂಚಿಸಿದ್ದ!

Anant Ambani Wedding
ದೇಶ15 mins ago

Anant Ambani Wedding: ಅನಂತ್‌ ಅಂಬಾನಿ ಅದ್ಧೂರಿ ಮದುವೆಗೆ ತೆರೆ; ಕೊನೆಯ ದಿನ ನಟ ಅಕ್ಷಯ್‌ ಕುಮಾರ್‌ ಭಾಗಿ

Former MPs
ದೇಶ15 mins ago

Formers MPs: ಚುನಾವಣೆಯಲ್ಲಿ ಸೋತರೂ ಸರ್ಕಾರಿ ಬಂಗಲೆ ಬಿಡದ 200 ಮಾಜಿ ಸಂಸದರು; ನೋಟಿಸ್‌ ಜಾರಿ

Hardik Pandya
ಕ್ರೀಡೆ19 mins ago

Hardik Pandya: ರೋಡ್​ ಶೋದಲ್ಲಿ ಚಕ್ ದೇ! ಇಂಡಿಯಾ ಹಾಡಿದ ಹಾರ್ದಿಕ್​ ಪಾಂಡ್ಯ; ವಿಡಿಯೊ ವೈರಲ್​

Monkey Attack
Latest53 mins ago

Monkey Attack: ಹುಡುಗಿಯ ಮೇಲೆ ಏಕಾಏಕಿ ದಾಳಿ ಮಾಡಿದ ಕೋತಿ; ವಿಡಿಯೊ ಇದೆ

Actor Yash
ಸಿನಿಮಾ55 mins ago

Actor Yash: ಯಶ್‌ ಅಭಿನಯದ ಈ ಸೂಪರ್‌ ಹಿಟ್‌ ಚಿತ್ರ ರಿ-ರಿಲೀಸ್‌; ಎರಡೂವರೆ ವರ್ಷಗಳ ಬಳಿಕ ರಾಕಿಂಗ್‌ ಸ್ಟಾರ್‌ ಥಿಯೇಟರ್‌ಗೆ ಎಂಟ್ರಿ

assault case viral video
ವೈರಲ್ ನ್ಯೂಸ್1 hour ago

Viral Video: ಬೆಂಗಳೂರಲ್ಲಿ ಹಾಡಹಗಲೇ‌‌ ಪುಂಡಾಟ, 15 ಮಂದಿಯಿಂದ ಯುವಕನ ಮೇಲೆ ಹಲ್ಲೆ

Kashmir encounter
ದೇಶ1 hour ago

Kashmir Encounter: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ನಾಲ್ವರು ಯೋಧರು ಹುತಾತ್ಮ; ಮುಂದುವರಿದ ಕಾರ್ಯಾಚರಣೆ

BJP MLA
ಪ್ರಮುಖ ಸುದ್ದಿ1 hour ago

BJP MLA: ಡಿಗ್ರಿ ಉಪಯೋಗಕ್ಕೆ ಬರಲ್ಲ, ಪಂಕ್ಚರ್‌ ಅಂಗಡಿ ತೆರೆಯಿರಿ; ವಿದ್ಯಾರ್ಥಿಗಳಿಗೆ ಬಿಜೆಪಿ ಶಾಸಕ ಕರೆ!

Pani Puri Machine
Latest2 hours ago

Pani Puri Machine: ಬೆಂಗಳೂರಿಗೆ ಬಂದಿದೆ ಪಾನಿಪುರಿ ನೀಡುವ ಮೆಷಿನ್! ಇದು ಹೇಗಿದೆ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ22 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌