Arvind Kejriwal: ಕೇಜ್ರಿವಾಲ್‌ಗೆ ಜೈಲೂಟವೇ ಗತಿ; ತುರ್ತು ವಿಚಾರಣೆಗೆ ಸುಪ್ರೀಂ ನಕಾರ - Vistara News

ದೇಶ

Arvind Kejriwal: ಕೇಜ್ರಿವಾಲ್‌ಗೆ ಜೈಲೂಟವೇ ಗತಿ; ತುರ್ತು ವಿಚಾರಣೆಗೆ ಸುಪ್ರೀಂ ನಕಾರ

Aravind Kejriwal ಮದ್ಯ ನೀತಿ ಹಗರಣ ಆರೋಪಿಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ತಿಹಾರ ​ಜೈಲು ಸೇರಿದ್ದಾರೆ. ಅವರನ್ನು ಜೈಲು ಸಂಖ್ಯೆ 2 ರಲ್ಲಿ ಇರಿಸಲು ನಿರ್ಧರಿಸಲಾಗಿದೆ. ಅಂದ ಹಾಗೆ ಇದೇ ಪ್ರಕರಣದ ಮತ್ತೊಬ್ಬ ಆರೋಪಿ ದೆಹಲಿ ಸರ್ಕಾರದ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಇದೇ ಜೈಲಿನ ಸಂಖ್ಯೆ 1 ರಲ್ಲಿ ಇರಿಸಲಾಗಿದೆ. ಕೇಜ್ರಿವಾಲ್‌ ಅವರು ಇ.ಡಿ ಬಂಧನದ ಕ್ರಮ ಪ್ರಶ್ನಿಸಿ ಈಗ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲೂ ಅವರಿಗೆ ಹಿನ್ನಡೆಯಾಗಿದೆ.

VISTARANEWS.COM


on

Arvind Kejriwal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಮತ್ತೆ ಜೈಲೂಟವೇ ಗತಿಯಾಗಿದೆ. ಇ.ಡಿ ಅಧಿಕಾರಿಗಳಿಂದ ಬಂಧನ ಪ್ರಶ್ನಿಸಿ ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಅಲ್ಲೂ ಅವರಿಗೆ ಹಿನ್ನಡೆಯಾಗಿದೆ. ಅರವಿಂದ್‌ ಕೇಜ್ರಿವಾಲ್‌ ಅವರ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ (Supreme Court) ನಕಾರ ವ್ಯಕ್ತಪಡಿಸಿದೆ.

“ಅರವಿಂದ್‌ ಕೇಜ್ರಿವಾಲ್‌ ಅವರ ಅರ್ಜಿಯನ್ನು ಸೋಮವಾರದೊಳಗೆ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಅವರ ಅರ್ಜಿಯ ವಿಚಾರಣೆಗೆ ಯಾವುದೇ ವಿಶೇಷ ಪೀಠದ ಲಭ್ಯತೆ ಇಲ್ಲ. ಹಾಗಾಗಿ, ಸೋಮವಾರದೊಳಗೆ ಅರ್ಜಿಯನ್ನು ವಿಚಾರಣೆ ನಡೆಸಲು ಆಗುವುದಿಲ್ಲ” ಎಂದು ಕೋರ್ಟ್‌ ತಿಳಿಸಿತು. ಇ.ಡಿ ಬಂಧನ ಪ್ರಶ್ನಿಸಿ ಅರವಿಂದ್‌ ಕೇಜ್ರಿವಾಲ್‌ ಅವರು ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಮಂಗಳವಾರ (ಏಪ್ರಿಲ್‌ 9) ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಕೇಜ್ರಿವಾಲ್‌ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಇದರಿಂದಾಗಿ ಕೇಜ್ರಿವಾಲ್‌ ಅವರೀಗ ಏಪ್ರಿಲ್‌ 15ರವರೆಗೆ ತಿಹಾರ ಜೈಲಿನಲ್ಲೇ ಕಾಲ ಕಳೆಯಬೇಕಾಗಿದೆ.

Supreme Court

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಕೆ. ಕವಿತಾ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಕೂಡ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಜಾರಿ ನಿರ್ದೇಶನಾಲಯವು ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ. ಮತ್ತೊಂದೆಡೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಸಲ್ಲಿಸಿದ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ತಾತ್ಕಾಲಿಕವಾಗಿ ರಿಲೀಫ್‌ ಪಡೆದಿದ್ದರು. ಆದರೆ, ಈಗ ಬಂಧನದಿಂದ ರಕ್ಷಣೆಗೆ ನೀಡದ ಕಾರಣ ಅವರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ: Arvind Kejriwal: ತಿಹಾರ್‌ ಜೈಲಿನಲ್ಲಿ ಅರವಿಂದ ಕೇಜ್ರಿವಾಲ್‌ ಫಸ್ಟ್‌ ನೈಟ್‌ ಹೇಗಿತ್ತು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

ಉಗ್ರರು 2025ರ ವೇಳೆಗೆ ಪ್ರತಿಯೊಂದು ಜಿಲ್ಲೆಯಲ್ಲಿ ಸ್ಲೀಪರ್‌ಸೆಲ್‌ಗಳನ್ನು ನೇಮಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರುವ ಉದ್ದೇಶ ಹೊಂದಿದ್ದರು. ಧಾರ್ಮಿಕ ಮುಖಂಡರು, ದೇಶದ ಯೋಧರು, ಪೊಲೀಸರು ಸೇರಿ ಹಲವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ. ಎಲ್ಲ ಚಟುವಟಿಕೆಗಳಿಗೂ ಉಗ್ರರು ಬಳ್ಳಾರಿಯನ್ನೇ ಪ್ರಮುಖ ಕೇಂದ್ರವನ್ನಾಗಿಸಿಕೊಂಡಿದ್ದರು ಎಂದು ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ.

VISTARANEWS.COM


on

ISIS Terrorists
Koo

ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಕುಳಿತು ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಐಸಿಸ್‌ ಉಗ್ರರ ಜಾಲ (Bellary ISIS Module) ರೂಪಿಸಬೇಕು ಎಂದು ಸಂಚು ಹೆಣೆದಿದ್ದ ಏಳು ಶಂಕಿತ ಉಗ್ರರನ್ನು ಬಂಧಿಸಿದ ಎನ್‌ಐಎ ಅಧಿಕಾರಿಗಳು (NIA Officials) ಅವರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಪ್ರಸ್ತಾಪವಾಗಿರುವ ವಿಷಯಗಳು ಜನರನ್ನು ಬೆಚ್ಚಿಬೀಳಿಸಿವೆ. ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಯುವಕರನ್ನು ಐಸಿಸ್‌ ಉಗ್ರ ಸಂಘಟನೆಗೆ ನೇಮಿಸಬೇಕು ಎಂಬುದು ಉಗ್ರರ ಉದ್ದೇಶವಾಗಿತ್ತು ಅಂಶವು ಚಾರ್ಜ್‌ಶೀಟ್‌ನಿಂದ (NIA Chargesheet) ಬಯಲಾಗಿದೆ.

ಕರ್ನಾಟಕದಲ್ಲಿ ಬಂಧಿತರಾಗಿದ್ದ ಮೊಹಮ್ಮದ್‌ ಮುನಿರುದ್ದೀನ್‌, ಸೈಯದ್‌ ಅಮೀರ್‌, ಎಂ.ಡಿ.ಮುಜಮಿಲ್‌ ಹಾಗೂ ಮಹಾರಾಷ್ಟ್ರದ ನಾಲ್ವರು ಉಗ್ರರ ವಿರುದ್ಧ ನ್ಯಾಯಾಲಯಕ್ಕೆ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಸಿದೆ. ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ 50 ಯುವಕರನ್ನು ಸ್ಲೀಪರ್‌ಸೆಲ್‌ಗಳನ್ನಾಗಿ ನೇಮಕ ಮಾಡಿಕೊಂಡು, ದೇಶಾದ್ಯಂತ ಐಸಿಸ್‌ ಉಗ್ರ ಸಂಘಟನೆಯ ಜಾಲವನ್ನು ವಿಸ್ತರಣೆ ಮಾಡಬೇಕು ಎಂಬುದು ಇವರ ಉದ್ದೇಶವಾಗಿತ್ತು. ಬಳ್ಳಾರಿಯ ಮೂವರು ಹಾಗೂ ಮಹಾರಾಷ್ಟ್ರದ ನಾಲ್ವರು ಶಂಕಿತರು ಇಂತಹ ಸಂಚು ರೂಪಿಸಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

Manipur violence

ಐಸಿಸ್‌ ಉಗ್ರ ಸಂಘಟನೆಯ ಸುಲೇಮಾನ್‌ ಅಲಿಯಾಸ್‌ ಮಿನಾಜ್‌ ಎಂಬಾತನಿಂದ ಏಳು ಉಗ್ರರು ಪ್ರತಿಜ್ಞೆ ಪಡೆದುಕೊಂಡಿದ್ದರು. ಭಾರತದಾದ್ಯಂತ ಐಸಿಸ್‌ ಜಾಲವನ್ನು ವಿಸ್ತರಿಸುವುದಾಗಿ ಇವರು ಪ್ರತಿಜ್ಞೆ ಸ್ವೀಕರಿಸಿದ್ದರು. ಐಸಿಸ್‌ ಉಗ್ರ ಸಂಘಟನೆಯ ಜತೆ ನಿರಂತರವಾಗಿ ಇವರು ಸಂಪರ್ಕದಲ್ಲಿದ್ದರು. ಜಿಲ್ಲೆಗಳಲ್ಲಿ ಸ್ಲೀಪರ್ ಸೆಲ್‌ಗಳನ್ನು ಬಳಸಿ ಗೆರಿಲ್ಲಾ ಮಾದರಿಯ ದಾಳಿಗೆ ಷಡ್ಯಂತ್ರ ಮಾಡಿದ್ದರು. ಸುಧಾರಿತ ಸ್ಫೋಟಕ ಸಾಧನಗಳ (IED) ಮೂಲಕ ದಾಳಿ ನಡೆಸುವುದು, ಬಳ್ಳಾರಿಯನ್ನು ಉಗ್ರ ಸಂಘಟನೆಯ ಜಾಲದ ಪ್ರಮುಖ ಕೇಂದ್ರವನ್ನಾಗಿ ರೂಪಿಸುವುದು, ಇಲ್ಲಿಯೇ ಪ್ರಾಯೋಗಿಕವಾಗಿ ಸ್ಫೋಟಿಸುವುದು ಸೇರಿ ಹಲವು ಕುತಂತ್ರಗಳನ್ನು ಹೆಣೆದಿದ್ದರು ಎಂದು ಎನ್‌ಐಎ ಅಧಿಕಾರಿಗಳು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಬಂಧಿತ ಉಗ್ರರು 2025ರ ವೇಳೆಗೆ ಪ್ರತಿಯೊಂದು ಜಿಲ್ಲೆಯಲ್ಲಿ ಸ್ಲೀಪರ್‌ಸೆಲ್‌ಗಳನ್ನು ನೇಮಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರುವ ಉದ್ದೇಶ ಹೊಂದಿದ್ದರು. ಧಾರ್ಮಿಕ ಮುಖಂಡರು, ದೇಶದ ಯೋಧರು, ಪೊಲೀಸರು ಸೇರಿ ಹಲವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ. ಇವರ ಬಳಿಯಿಂದ ಹಲವು ಡಿವೈಸ್‌ಗಳ ಜತೆಗೆ ಜಿಹಾದ್‌ ಕುರಿತ ಪುಸ್ತಕಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: NIA Raid: ಮಧ್ಯಪ್ರದೇಶದಲ್ಲಿ ಐಸಿಸ್‌ ಉಗ್ರರ ಜಾಲ ಬಯಲು; ಮಸೀದಿಗಳಲ್ಲೇ ಸಂಚು ರೂಪಿಸುತ್ತಿದ್ದ ಮೂವರ ಬಂಧನ

Continue Reading

ದೇಶ

Reliance Retail: ಚರ್ಮ ರಕ್ಷಣೆಯ ʼಅಕೈಂಡ್ʼ ಬ್ರಾಂಡ್‌ನ ಕ್ರೀಮ್‌ ಬಿಡುಗಡೆ

Reliance Retail: ರಿಲಯನ್ಸ್ ರೀಟೇಲ್‌ಗೆ ಸೇರಿದ ಸೌಂದರ್ಯ ರೀಟೇಲ್ ಪ್ಲಾಟ್‌ಫಾರ್ಮ್ ಟಿರಾ ಬುಧವಾರ ತನ್ನ ಚರ್ಮರಕ್ಷಣೆ ಬ್ರಾಂಡ್‌ ಆದ “ಅಕೈಂಡ್” (Akind) ಬಿಡುಗಡೆ ಘೋಷಣೆ ಮಾಡಿದೆ. ಮುಂಬೈನ ಜಿಯೋ ವರ್ಲ್ಡ್‌ ಡ್ರೈವ್‌ನಲ್ಲಿರುವ ಟಿರಾ ಮಳಿಗೆಯಲ್ಲಿ ಅಕೈಂಡ್ ಸಹ ಸಂಸ್ಥಾಪಕಿ ಮೀರಾ ಕಪೂರ್ ಅವರು ಅಕೈಂಡ್ ಅನ್ನು ಅನಾವರಣ ಮಾಡಿದರು.

VISTARANEWS.COM


on

Reliance Retail Tira unveils skin care brand Akind
Koo

ಮುಂಬೈ: ರಿಲಯನ್ಸ್ ರೀಟೇಲ್‌ಗೆ (Reliance Retail) ಸೇರಿದ ಸೌಂದರ್ಯ ರೀಟೇಲ್ ಪ್ಲಾಟ್‌ಫಾರ್ಮ್ ಟಿರಾ (Tira) ಬುಧವಾರ ತನ್ನ ಚರ್ಮರಕ್ಷಣೆ ಬ್ರಾಂಡ್ ಆದ “ಅಕೈಂಡ್” (Akind) ಬಿಡುಗಡೆ ಬಗ್ಗೆ ಘೋಷಣೆ ಮಾಡಿದೆ. ಮುಂಬೈನ ಜಿಯೋ ವರ್ಲ್ಡ್‌ ಡ್ರೈವ್‌ನಲ್ಲಿರುವ ಟಿರಾ ಮಳಿಗೆಯಲ್ಲಿ ಅಕೈಂಡ್ ಸಹ ಸಂಸ್ಥಾಪಕಿ ಮೀರಾ ಕಪೂರ್, ಅಕೈಂಡ್ ಅನ್ನು ಅನಾವರಣ ಮಾಡಿದರು.

ಚರ್ಮದ ಆರೈಕೆಗೆ ಅಕೈಂಡ್

ಪ್ರತಿ ವ್ಯಕ್ತಿಯೂ ತನ್ನ ಚರ್ಮದ ಆರೈಕೆ ಬಗ್ಗೆ ವಿಶೇಷ ಕಾಳಜಿ ತೆಗೆದುಕೊಳ್ಳಲೇಬೇಕಾಗುತ್ತದೆ. ಏಕೆಂದರೆ ವ್ಯಕ್ತಿಯಿಂದ ವ್ಯಕ್ತಿಗೆ ಚರ್ಮವು ವಿಭಿನ್ನ ಹಾಗೂ ವಿಶಿಷ್ಟವಾಗಿರುತ್ತದೆ. ವೈಯಕ್ತಿಕವಾಗಿ ಪ್ರತ್ಯೇಕ ಆರೈಕೆ ಮಾಡಬೇಕಾಗುತ್ತದೆ. ಈ ಸಂಗತಿ “ಅಕೈಂಡ್” ಅರ್ಥ ಮಾಡಿಕೊಳ್ಳುತ್ತದೆ. ಇನ್ನು ಪ್ರತಿ ವ್ಯಕ್ತಿಯ ಚರ್ಮದ ಅಗತ್ಯಗಳನ್ನು ಅರಿತು, ಆರೈಕೆಯನ್ನು ಸರಳಗೊಳಿಸಲಾಗುತ್ತದೆ. ಈ ನಿಶ್ಚಿತ ಗುರಿಯ ವಿಧಾನದ ಮೂಲಕವಾಗಿ ಈ ಬ್ರ್ಯಾಂಡ್ ಪ್ರತಿ ವ್ಯಕ್ತಿಯ ಚರ್ಮ ಕಾಳಜಿಯ ಗುರಿಯನ್ನು ಸಾಧಿಸಲು ಬಲ ತುಂಬುತ್ತದೆ. ಅಕೈಂಡ್‌ನಲ್ಲಿ ಇರುವಂಥ ಪ್ರತಿ ಸೂತ್ರವು ವಿಶಿಷ್ಟ ಉದ್ದೇಶವನ್ನು ಈಡೇರಿಸಿ, ಚರ್ಮದ ಆರೋಗ್ಯಕ್ಕೆ ಇರುವ ಅಡೆತಡೆಗಳನ್ನು ನಿವಾರಿಸುತ್ತದೆ ಮತ್ತು ಅದು ಮೂರು ವರ್ಗಗಳ ಅಡಿಯಲ್ಲಿ ಬರುತ್ತದೆ.

3 ಹಂತಗಳಲ್ಲಿ ಚರ್ಮದ ರಕ್ಷಣೆ

ಬಿಲ್ಡ್, ಬ್ಯಾಲೆನ್ಸ್ ಹಾಗೂ ಡಿಫೆನ್ಸ್ ಹೀಗೆ ಮೂರು ಶ್ರೇಣಿಗಳಿವೆ. ಅದರಲ್ಲಿ ಮೊದಲನೆಯ ಶ್ರೇಣಿಯಾದ ಬಿಲ್ಡ್ ಚರ್ಮದ ಅಡೆತಡೆಗಳನ್ನು ನಿವಾರಿಸಿ, ಅದರ ಸಹಜ ಸ್ಥಿತಿಗೆ ತರುವ ಕಡೆಗೆ ಗಮನ ಕೇಂದ್ರೀಕರಿಸುತ್ತದೆ. ಇನ್ನು ಎರಡನೆಯ ಶ್ರೇಣಿ ಚರ್ಮದ ಅಡೆತಡೆಗಳನ್ನು ನಯವಾಗಿ ನಿರ್ವಹಿಸುತ್ತದೆ, ಯಥಾ ಸ್ಥಿತಿಯಲ್ಲಿ ಇರಿಸುತ್ತದೆ, ಅದರ ಫಲಿತವಾಗಿ ಆರೋಗ್ಯಪೂರ್ಣವಾಗಿ, ಹೊಳೆಯುವಂಥ ಚರ್ಮವನ್ನು ಕಾಪಾಡುತ್ತದೆ. ಇನ್ನು ಮೂರನೆಯ ಶ್ರೇಣಿಯು ಮಾಲಿನ್ಯ, ಜೀವನಶೈಲಿ ಸಂಗತಿಗಳು ಹಾಗೂ ಸೂರ್ಯನ ಕಿರಣದಿಂದ ಆಗುವಂಥ ಹಾನಿಯಿಂದ ತಡೆಯಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Glasses or Lenses?: ಕನ್ನಡಕವೋ ಕಾಂಟ್ಯಾಕ್ಟ್‌ ಲೆನ್ಸ್‌ ಬೇಕೋ? ಇದನ್ನು ಓದಿ, ನೀವೇ ನಿರ್ಧರಿಸಿ!

ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ನಿರ್ದೇಶಕಿ ಇಶಾ ಅಂಬಾನಿ ಈ ಕುರಿತು ಮಾತನಾಡಿ, “ಟಿರಾದ ಮೊದಲ ಚರ್ಮ ಆರೈಕೆ ಬ್ರ್ಯಾಂಡ್ ಆದ ಅಕೈಂಡ್ ಅನ್ನು ಸ್ವಂತ ಬ್ರಾಂಡ್‌ಗಳ ಪೋರ್ಟ್‌ಫೋಲಿಯೊದಲ್ಲಿ ಪರಿಚಯಿಸಲು ನಾವು ಉತ್ಸುಕರಾಗಿದ್ದೇವೆ. ಈಗ ಮಾಡಿರುವ ಉತ್ಪನ್ನದ ಬಿಡುಗಡೆಯು ಟಿರಾದ ಪಯಣದಲ್ಲಿ ಮಹತ್ವದ ಮೈಲುಗಲ್ಲು ಎನಿಸುತ್ತದೆ. ನಾವು ವಿಸ್ತರಿಸುವುದನ್ನು ಮತ್ತು ವಿಕಸನಗೊಳ್ಳುವುದನ್ನು ಮುಂದುವರಿಸಿದಂತೆ, ನಾವೀನ್ಯತೆ ಮತ್ತು ಉತ್ಕೃಷ್ಟತೆಗೆ ಬದ್ಧರಾಗಿರುತ್ತೇವೆ. ಪ್ರತಿ ಕೊಡುಗೆಯು ನಮ್ಮ ಗ್ರಾಹಕರ ಸೌಂದರ್ಯದ ಅನುಭವವನ್ನು ಹೆಚ್ಚಿಸುತ್ತದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ.

ಅಕೈಂಡ್ ಸಹ-ಸಂಸ್ಥಾಪಕಿ ಮೀರಾ ಕಪೂರ್ ಮಾತನಾಡಿ, ಬಹಳ ಹಿಂದೆಯೇನೂ ಅಲ್ಲ, ನನ್ನದೇ ಚರ್ಮ ರಕ್ಷಣೆಯ ಬಗ್ಗೆ ಪ್ರಶ್ನೆ ಕೇಳಿಕೊಳ್ಳುತ್ತಾ ಚರ್ಮದ ರಕ್ಷಣೆಯ ಈ ಪ್ರಯಾಣವು ನಿಜವಾಗಿಯೂ ಪ್ರಾರಂಭವಾಯಿತು. ಅಕೈಂಡ್ ಶ್ರೇಣಿಯು ಎಚ್ಚರಿಕೆಯಿಂದ, ಪ್ರಯೋಗಗಳಿಂದ ಮತ್ತು ತಪ್ಪುಗಳಿಂದ ಹಾಗೂ ನಿರ್ದಿಷ್ಟ ಸಮಸ್ಯೆಗಳಿಗೆ ಉದ್ದೇಶಿತ ಪರಿಹಾರವಾಗಿ ಕಾರ್ಯನಿರ್ವಹಿಸುವ ಉನ್ನತ-ಪರಿಣಾಮಕಾರಿ ಪದಾರ್ಥಗಳ ಬಗ್ಗೆ ವ್ಯಾಪಕವಾದ ಸಂಶೋಧನೆಯೊಂದಿಗೆ ನಿಖರವಾಗಿ ರೂಪಿಸಲಾಗಿದೆ ಮತ್ತು ಕ್ಯುರೇಟೆಡ್‌ ಬ್ರ್ಯಾಂಡ್‌ಗಳ ಪಾಲಿ ಅಂತಿಮ ತಾಣದಂತೆ ಇರುವ ಟಿರಾ ಮೂಲಕ ನಾವು ತಲುಪುವುದಕ್ಕಿಂತ ಉತ್ತಮವಾದ ಮಾರ್ಗ ಯಾವುದಿದೆ. ಇದರಿಂದ ನಮ್ಮ ದೃಷ್ಟಿ ಹೆಚ್ಚು ವ್ಯಾಪಿಸುತ್ತದೆ ಹಾಗೂ ಉದ್ದೇಶವನ್ನು ಜೀವಂತ ಇರಿಸುತ್ತದೆ. ಅಕೈಂಡ್ ಜತೆಗೆ, ಹೇಗೆ ನನಗೆ ಅತ್ಯುತ್ತಮ ಚರ್ಮ ರಕ್ಷಣೆಯ ಮಾರ್ಗ ದೊರೆಯಿತೋ ಅದು ಎಲ್ಲರ ಜತೆಗೂ ಈ ಚರ್ಮರಕ್ಷಣೆ ಸಂತೋಷವನ್ನು ಹಂಚಿಕೊಳ್ಳಲು ನಾನು ಬಯಸುತ್ತೇನೆ ಎಂದು ತಿಳಿಸಿದ್ದಾರೆ.

ಟಿರಾ ಟೂಲ್ಸ್ (Tira Tools) ಯಶಸ್ವಿ ಬಿಡುಗಡೆಯ ನಂತರ, ಖಾಸಗಿ ಲೇಬಲ್ ಅಡಿಯಲ್ಲಿ ಪ್ರೀಮಿಯಂ ಕ್ಯುರೇಟೆಡ್ ಸೌಂದರ್ಯ ಪರಿಕರಗಳು ಮತ್ತು ನೈಲ್ಸ್ ಅವರ್ ವೇ, ರೋಮಾಂಚಕ ಉಗುರು ಬಣ್ಣಗಳು ಮತ್ತು ಕಿಟ್‌ಗಳ ವಿಶೇಷ ಶ್ರೇಣಿಯ ಮೂಲಕವಾಗಿ ರಿಲಯನ್ಸ್ ರಿಟೇಲ್ ಲಿಮಿಟೆಡ್ (RRL) ತನ್ನ ನವೀನ ಕೊಡುಗೆಗಳನ್ನು ವಿಸ್ತರಿಸುವುದನ್ನು ಮುಂದುವರಿಸಿದೆ.

ಇದನ್ನೂ ಓದಿ: SSLC Examination 2 : 700ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಶುರು

ಅದರ ಮೊದಲ ಚರ್ಮರಕ್ಷಣೆ ಬ್ರಾಂಡ್‌ನ ಸೇರ್ಪಡೆ, ಅಕೈಂಡ್ ಸೌಂದರ್ಯ ಮತ್ತು ವೈಯಕ್ತಿಕ ಆರೈಕೆ ವಿಭಾಗಗಳಾದ್ಯಂತ ಗ್ರಾಹಕರಿಗೆ ಉತ್ತಮ-ಗುಣಮಟ್ಟದ, ವೈವಿಧ್ಯಮಯ ಮತ್ತು ಟ್ರೆಂಡ್-ಸೆಟ್ಟಿಂಗ್ ಉತ್ಪನ್ನಗಳನ್ನು ಒದಗಿಸುವ ಟಿರಾ ಬದ್ಧತೆಯನ್ನು ಒತ್ತಿ‌ ಹೇಳುತ್ತದೆ.

Continue Reading

ದೇಶ

Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

Union Budget 2024: ಜೂನ್‌ 24ರಿಂದ ಜುಲೈ 3ರವರೆಗೆ ಸಂಸತ್‌ ಅಧಿವೇಶನ ನಡೆಯಲಿದ್ದು, ಲೋಕಸಭೆ ಸ್ಪೀಕರ್‌ ಆಯ್ಕೆ, ನೂತನ ಸಂಸದರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಇದಾದ ನಂತರ ಅಂದರೆ, ಜುಲೈ ಮೂರನೇ ವಾರದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ ಮಂಡನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Union Budget 2024
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸ್ಪಷ್ಟ ಬಹುಮತ ಸಾಧಿಸಿದ್ದು, ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು, ನೂತನ ಸರ್ಕಾರ ರಚನೆಯಾಗುತ್ತಲೇ ಮೊದಲ ಬಜೆಟ್‌ ಮಂಡನೆ (Union Budget 2024) ಮಾಡಲಾಗುತ್ತದೆ. ಅದರಂತೆ, ಜುಲೈ 15-21ರ ಅವಧಿಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಒಂದು ವಾರದಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವಾಲಯದ ಅಧಿಕಾರಿಗಳು ಸೇರಿ ಹಲವರೊಂದಿಗೆ ಸಭೆ, ಸಮಾಲೋಚನೆ ನಡೆಸುವ ಮೂಲಕ ಬಜೆಟ್‌ ಸಿದ್ಧಪಡಿಸುವ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸಲಿದ್ದಾರೆ. ಅಷ್ಟೇ ಅಲ್ಲ, ಜೂನ್‌ 22ರಂದು ನಿರ್ಮಲಾ ಸೀತಾರಾಮನ್‌ ನೇತೃತ್ವದಲ್ಲಿ 53ನೇ ಜಿಎಸ್‌ಟಿ ಸಮಿತಿ ಸಭೆ ನಡೆಯಲಿದ್ದು, ಅಧಿಕಾರಿಗಳ ಸಲಹೆ-ಸೂಚನೆಗಳನ್ನೂ ಸಚಿವೆ ಪಡೆಯಲಿದ್ದಾರೆ. ಬಜೆಟ್‌ ಮಂಡನೆ ದೃಷ್ಟಿಯಿಂದ ಜಿಎಸ್‌ಟಿ ಸಮಿತಿ ಸಭೆಯು ಕೂಡ ಪ್ರಾಮುಖ್ಯತೆ ಪಡೆದಿದೆ.

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಜುಲೈನಲ್ಲಿ ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ: G7 Summit: ಮೂರನೇ ಬಾರಿ ಪ್ರಧಾನಿಯಾದ ಬಳಿಕ ಮೋದಿ ಮೊದಲ ವಿದೇಶ ಪ್ರವಾಸ; ಇಟಲಿಯ ಜಿ7 ಶೃಂಗಸಭೆಯಲ್ಲಿ ಭಾಗಿ

Continue Reading

ದೇಶ

Joshimath Teshil Now Jyotirmath: ಉತ್ತರಾಖಂಡದ ಜೋಶಿಮಠ ಈಗ ಜ್ಯೋತಿರ್ಮಠ!

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಕಳೆದ ವರ್ಷ ನಡೆದ ಕಾರ್ಯಕ್ರಮವೊಂದರಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಅವರು ಜೋಶಿಮಠ ತಹಸಿಲ್ (Joshimath Teshil Now Jyotirmath) ಅನ್ನು ಮರುನಾಮಕರಣ ಮಾಡುವುದಾಗಿ ಭರವಸೆ ನೀಡಿದ್ದರು. ಆ ಮಾತನ್ನು ಅವರು ಈಗ ಪೂರ್ಣಗೊಳಿಸಿದ್ದಾರೆ.

VISTARANEWS.COM


on

By

Joshimath Teshil Now Jyotirmath
Koo

ಉತ್ತರಾಖಂಡದ (Uttarakhand) ಚಮೋಲಿ (Chamoli) ಜಿಲ್ಲೆಯಲ್ಲಿರುವ ಜೋಶಿಮಠ ತಾಲೂಕು (Joshimath tehsil) ಅನ್ನು ‘ಜ್ಯೋತಿರ್ಮಠ’ (Joshimath Teshil Now Jyotirmath) ಎಂಬ ಹೊಸ ಹೆಸರಿನಿಂದ ಕರೆಯಲಾಗುವುದು ಎಂದು ಮುಖ್ಯಮಂತ್ರಿ (Chief Minister) ಪುಷ್ಕರ್ ಸಿಂಗ್ ಧಮಿ (Pushkar Singh Dhami) ಘೋಷಣೆ ಮಾಡಿದ್ದಾರೆ. ಜ್ಯೋತಿರ್ಮಠವು ಜೋಶಿಮಠದ ಪ್ರಾಚೀನ ಹೆಸರಾಗಿದೆ.

ತಹಸಿಲ್‌ನ ಹೆಸರು ಬದಲಾವಣೆ ಕುರಿತು ಉತ್ತರಾಖಂಡ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಯನ್ನು ಕೇಂದ್ರವು ಅನುಮೋದಿಸಿದೆ.

ಸ್ಥಳೀಯರಿಂದ ಸ್ವಾಗತ

ಜೋಶಿಮಠ ತಹಸಿಲ್ ಅನ್ನು ‘ಜ್ಯೋತಿರ್ಮಠ’ ಎಂದು ಹೆಸರು ಬದಲಾವಣೆ ಮಾಡಿರುವುದನ್ನು ಜೋಶಿಮಠದ ನಿವಾಸಿಗಳು ಸ್ವಾಗತಿಸಿದ್ದಾರೆ. ಯಾಕೆಂದರೆ ತಹಸಿಲ್ ಅನ್ನು ಅದರ ಮೂಲ ಹೆಸರಿಗೆ ಹಿಂತಿರುಗಿಸುವುದರಿಂದ ಅದರ ಪ್ರಾಚೀನ ಮೂಲವನ್ನು ಎತ್ತಿ ತೋರಿಸುತ್ತದೆ. ಮಾತ್ರವಲ್ಲದೆ ಅದರ ವಿಶಾಲವಾದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಗೆ ಗೌರವ ಸಲ್ಲಿಸುತ್ತದೆ ಎಂದಿದ್ದಾರೆ.

ಕಳೆದ ವರ್ಷ ಚಮೋಲಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತಹಸಿಲ್ ಅನ್ನು ಮರುನಾಮಕರಣ ಮಾಡುವ ಸರ್ಕಾರದ ನಿರ್ಣಯದ ಬಗ್ಗೆ ಸಾರ್ವಜನಿಕ ಪ್ರಕಟಣೆಯನ್ನು ಮಾಡಿದರು. ಆ ಮೂಲಕ ಅದರ ಐತಿಹಾಸಿಕ ವೈಭವವನ್ನು ಮರುಸ್ಥಾಪನೆಗೆ ಯೋಚಿಸಿರುವುದಾಗಿ ಹೇಳಿದ್ದರು.

ಬಹುಕಾಲದ ಬೇಡಿಕೆ

ಜೋಶಿ ಮಠದ ಸ್ಥಳೀಯರು ಬಹಳ ಹಿಂದಿನಿಂದಲೂ ಹೆಸರು ಬದಲಾವಣೆಗೆ ಒತ್ತಾಯಿಸುತ್ತಿದ್ದರು. ಜನರ ಭಾವನೆಗಳಿಗೆ ಸ್ಪಂದಿಸಿ ಧಾಮಿ ಸರ್ಕಾರ ತಹಸಿಲ್ ಹೆಸರನ್ನು ಮರುನಾಮಕರಣ ಮಾಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಬುಧವಾರ ಅನುಮೋದನೆ ಪಡೆದಿದೆ.

ಇದನ್ನೂ ಓದಿ: Jagannath Temple: 4 ವರ್ಷದ ಬಳಿಕ ಜಗನ್ನಾಥ ದೇಗುಲದ ಬಾಗಿಲು ಓಪನ್;‌ ಇದಕ್ಕೂ ಬಿಜೆಪಿ ಪ್ರಣಾಳಿಕೆಗೂ ಇದೆ ಸಂಬಂಧ!


ಶಂಕರಾಚಾರ್ಯರಿಗೂ ಇದೆ ನಂಟು

8ನೇ ಶತಮಾನದಲ್ಲಿ ಆದಿ ಗುರು ಶಂಕರಾಚಾರ್ಯರು ಈ ಕ್ಷೇತ್ರಕ್ಕೆ ಬಂದಿದ್ದರು ಎಂಬುದು ಸ್ಥಳೀಯರ ನಂಬಿಕೆ. ಅವರು ಅಮ6ರ ಕಲ್ಪ ವೃಕ್ಷದ ಕೆಳಗೆ ತಪಸ್ಸು ಕೈಗೊಂಡರು ಎಂದು ಹೇಳಲಾಗುತ್ತದೆ. ಇದರಿಂದಾಗಿ ದೈವಿಕ ಜ್ಞಾನೋದಯ ಮತ್ತು ಜ್ಞಾನವನ್ನು ಸಾಧಿಸಿದರು. ಈ ಸ್ಥಳವನ್ನು ಮೂಲತಃ ಜ್ಯೋತಿರ್ಮಠ ಎಂದು ಕರೆಯಲಾಗುತ್ತಿತ್ತು. ಆದರೆ ಕಾಲಾನಂತರದಲ್ಲಿ ಇದು ಜೋಶಿಮಠ ಎಂಬ ಬೇರೆ ಹೆಸರಿನಲ್ಲಿ ಜನಪ್ರಿಯತೆಯನ್ನು ಗಳಿಸಿತು.

ಜ್ಯೋತಿರ್ಮಠವು 6,150 ಅಡಿ ಅಂದರೆ ಸರಿಸುಮಾರು 1,875 ಮೀಟರ್ ಎತ್ತರದಲ್ಲಿದೆ. ಹಲವಾರು ಹಿಮಾಲಯ ಪರ್ವತಾರೋಹಣ, ಚಾರಣ ಮತ್ತು ಬದರಿನಾಥದಂತಹ ಯಾತ್ರಾ ಕೇಂದ್ರಗಳಿಗೆ ಇದು ಹೆಬ್ಬಾಗಿಲಾಗಿದೆ.

Continue Reading
Advertisement
ISIS Terrorists
ಕರ್ನಾಟಕ36 mins ago

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

Actress Ramya
ಕರ್ನಾಟಕ1 hour ago

Actress Ramya: ಕಾನೂನಿಗಿಂತ ಯಾರೂ ದೊಡ್ಡೋರಲ್ಲ; ದರ್ಶನ್‌ಗೆ ಮತ್ತೆ ನಟಿ ರಮ್ಯಾ ಕ್ಲಾಸ್!

Namma Clinic
ಕರ್ನಾಟಕ1 hour ago

Namma Clinic: ಬಸ್‌ ನಿಲ್ದಾಣ ಸೇರಿದಂತೆ 254 ಕಡೆ ʼನಮ್ಮ ಕ್ಲಿನಿಕ್‌ʼ ಸ್ಥಾಪನೆ

Maruti Suzuki
ಆಟೋಮೊಬೈಲ್2 hours ago

Maruti Suzuki: ಮಾರುತಿ ಸುಜುಕಿ ಸಿಎನ್‌ಜಿ ವಾಹನದ ಟೀಸರ್ ಔಟ್‌; ಹಲವು ವೈಶಿಷ್ಟ್ಯಗಳ ನಿರೀಕ್ಷೆ

Reliance Retail Tira unveils skin care brand Akind
ದೇಶ3 hours ago

Reliance Retail: ಚರ್ಮ ರಕ್ಷಣೆಯ ʼಅಕೈಂಡ್ʼ ಬ್ರಾಂಡ್‌ನ ಕ್ರೀಮ್‌ ಬಿಡುಗಡೆ

Union Budget 2024
ದೇಶ3 hours ago

Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

AIDSO protest demanding investigation into corruption in NEET entrance exam
ರಾಯಚೂರು3 hours ago

Raichur News: ನೀಟ್ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಮಾನ್ವಿಯಲ್ಲಿ ಎಐಡಿಎಸ್ಒ ಪ್ರತಿಭಟನೆ

Joshimath Teshil Now Jyotirmath
ದೇಶ3 hours ago

Joshimath Teshil Now Jyotirmath: ಉತ್ತರಾಖಂಡದ ಜೋಶಿಮಠ ಈಗ ಜ್ಯೋತಿರ್ಮಠ!

ATM Cash Withdrawal Fee
ವಾಣಿಜ್ಯ3 hours ago

ATM Cash Withdrawal Fee: ಎಟಿಎಂ ನಗದು ಹಿಂಪಡೆಯುವಿಕೆ ಶುಲ್ಕ 21 ರೂ.ಗೆ ಏರಿಕೆ?

Siddaramaiah
ಕರ್ನಾಟಕ4 hours ago

ಸರ್ಕಾರಿ ನೌಕರರಿಗೆ ನಿರಾಸೆ; ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಬಗ್ಗೆ ಯಾವುದೇ ನಿರ್ಣಯ ಇಲ್ಲ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌