Arvind Kejriwal: ದಿನೇ ದಿನೆ ಕೇಜ್ರಿವಾಲ್‌ ಆರೋಗ್ಯ ಕ್ಷೀಣ; ಪ್ರತಿಪಕ್ಷಗಳಿಂದ ನಾಳೆ ಭಾರೀ ಪ್ರತಿಭಟನಾ ರ್‍ಯಾಲಿ - Vistara News

ದೇಶ

Arvind Kejriwal: ದಿನೇ ದಿನೆ ಕೇಜ್ರಿವಾಲ್‌ ಆರೋಗ್ಯ ಕ್ಷೀಣ; ಪ್ರತಿಪಕ್ಷಗಳಿಂದ ನಾಳೆ ಭಾರೀ ಪ್ರತಿಭಟನಾ ರ್‍ಯಾಲಿ

Arvind Kejriwal: ಈ ಬಗ್ಗೆ ಅಪ್‌ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ ಮಾಹಿತಿ ನೀಡಿದ್ದು, ಕಾಂಗ್ರೆಸ್‌, ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್‌, ಡಿಎಂಕೆ, ಸಿಪಿಐ, ಜಾರ್ಖಂಡ್ ಮುಕ್ತಿ ಮೋರ್ಚಾ, ಎನ್‌ಸಿಪಿ-ಎಸ್‌ಪಿ, ಶಿವಸೇನೆ (ಯುಬಿಟಿ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪಕ್ಷಗಳು ಪ್ರತಿಭಟನೆ ನಡೆಸಲಿವೆ. ಮತ್ತೆ ಮೂರು ಪಕ್ಷಗಳ ಜೊತೆ ನಾಳೆ ಪ್ರತಿಭಟನೆಗೆ ಸಾಥ್‌ ಕೊಡುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

VISTARANEWS.COM


on

Arvind Kejriwal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅಬಕಾರಿ ನೀತಿ ಪ್ರಕರಣ(Delhi Excise policy)ದಲ್ಲಿ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್(Arvind Kejriwal) ಅವರಿಗೆ ಜೈಲಿನಲ್ಲಿ ಜೀವ ಬೆದರಿಕೆ ಇದೆ ಎಂದು ಆಪ್‌ ಆತಂಕ ವ್ಯಕ್ತಪಡಿಸಿರುವ ಬೆನ್ನಲ್ಲೇ ನಾಳೆ ಇಂಡಿಯಾ ಒಕ್ಕೂಟ ರ್ಯಾಲಿ ನಡೆಸಲು ಮುಂದಾಗಿವೆ. ನ್ಯಾಯಾಂಗ ಬಂಧನದಲ್ಲಿ ದಿನೇ ದಿನೇ ಕೇಜ್ರಿವಾಲ್‌ ಅವರ ಆರೋಗ್ಯ ಹದಗೆಡುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿರುವ ಹಿನ್ನೆಲೆ ನಾಳೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಜಂತರ್‌ ಮಂಥರ್‌ನಲ್ಲಿ ರ್ಯಾಲಿ ನಡೆಸಿ ಪ್ರತಿಭಟನೆ ಮಾಡಲಿದೆ.

ಈ ಬಗ್ಗೆ ಅಪ್‌ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ ಮಾಹಿತಿ ನೀಡಿದ್ದು, ಕಾಂಗ್ರೆಸ್‌, ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್‌, ಡಿಎಂಕೆ, ಸಿಪಿಐ, ಜಾರ್ಖಂಡ್ ಮುಕ್ತಿ ಮೋರ್ಚಾ, ಎನ್‌ಸಿಪಿ-ಎಸ್‌ಪಿ, ಶಿವಸೇನೆ (ಯುಬಿಟಿ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪಕ್ಷಗಳು ಪ್ರತಿಭಟನೆ ನಡೆಸಲಿವೆ. ಮತ್ತೆ ಮೂರು ಪಕ್ಷಗಳ ಜೊತೆ ನಾಳೆ ಪ್ರತಿಭಟನೆಗೆ ಸಾಥ್‌ ಕೊಡುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

ಕೇಜ್ರಿವಾಲ್ಅವರಿಗೆ ಜೈಲಿನಲ್ಲಿ ಜೀವ ಬೆದರಿಕೆ ಇದೆ ಎಂದು ಆಪ್‌ ಆತಂಕ ವ್ಯಕ್ತಪಡಿಸಿದೆ. ತಿಹಾರ್‌ನಲ್ಲಿ ಕೇಜ್ರಿವಾಲ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡದೇ ಅವರ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ ಎಂದು ಆಪ್‌ ಗಂಭೀರ ಆರೋಪ ಮಾಡಿತ್ತು. ಕೆಲವು ದಿನಗಳ ಹಿಂದೆ ಮಾಧ್ಯಮಗೋಷ್ಠಿ ನಡೆಸಿದ ದಿಲ್ಲಿ ಸಚಿವೆ ಆತಿಷಿ, ಕೇಜ್ರಿವಾಲ್‌ ಅವರನ್ನು ಜೈಲಿಗೆ ತಳ್ಳುವುದು ಮಾತ್ರವಲ್ಲ, ಅವರನ್ನು ಅನಾರೋಗ್ಯಕ್ಕೀಡು ಮಾಡಿ ಕೊಲೆಗೈಯುವ ಸಂಚು ಬಿಜೆಪಿಗಿದೆ. ಸರ್ವಾಧಿಕಾರಿ ತಮ್ಮ ವಿರೋಧಿಗಳನ್ನು ಜೈಲಿಗೆ ತಳ್ಳಿ ಅವರ ಆರೋಗ್ಯ ಹದಗೆಡುವಂತೆ ಮಾಡುತ್ತಿದ್ದಾರೆ. ಕೇಜ್ರಿವಾಲ್‌ಗೆ ಏನಾದರೂ ಹೆಚ್ಚು ಕಡಿಮೆ ಆದರೆ ಅದಕ್ಕೆ ಬಿಜೆಪಿಯೇ ನೇರ ಜವಾಬ್ದಾರಿ ಎಂದು ಹೇಳಿದ್ದರು.

ಕೇಜ್ರಿವಾಲ್‌ ಕಳೆದ 30 ವರ್ಷಗಳಿಂದ ಸಕ್ಕರೆ ಖಾಯಿಲೆ ಹೊಂದಿರುವ ರೋಗಿ. ಇನ್ಸುಲಿನ್‌ ತೆಗೆದುಕೊಳ್ಳಲು ಅಥವಾ ವೈದ್ಯರನ್ನು ಭೇಟಿ ಮಾಡಲೂ ಅವರಿಗೆ ಬಿಜೆಪಿ ನೇತೃತ್ವದ ಸರ್ಕಾರ ಅವಕಾಶ ನೀಡುತ್ತಿಲ್ಲ. ಕೇಜ್ರಿವಾಲ್‌ಗೆ ಏನಾದರೂ ಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆಯಾಗಲಿದೆ. ಸಿಎಂ ಕೇಜ್ರಿವಾಲ್ ಇಡಿ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ಜಾಮೀನು ಪಡೆದ ತಕ್ಷಣ, ಬಿಜೆಪಿ ಅವರ ಜಾಮೀನು ರದ್ದುಗೊಳಿಸುವಂತೆ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿತ್ತು ಮತ್ತು ನಂತರ ಅವರನ್ನು ಸಿಬಿಐ ಬಂಧಿಸಿತು. ಸಕ್ಕರೆ ಖಾಯಿಲೆಯಿಂದಾಗಿ ಕೇಜ್ರಿವಾಲ್ ಅವರ ಆರೋಗ್ಯ ದಿನೇ ದಿನೇ ಕುಸಿಯುತ್ತಿದೆ. ಅವರ ತೂಕವೂ ಕ್ಷೀಣಿಸುತ್ತಿದೆ ಎಂದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಅವರ ವಿರುದ್ಧ ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಅಬಕಾರಿ ನೀತಿ ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎಂಬ ಆರೋಪದ ಕುರಿತು ಸಿಬಿಐ ಅಧಿಕಾರಿಗಳು ತನಿಖೆ ನಡೆಸಿದ ಭಾಗವಾಗಿ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಕೇಜ್ರಿವಾಲ್‌ ಅವರು ಪ್ರಮುಖ ಆರೋಪಿಯಾಗಿದ್ದು, ಹಣಕಾಸು ಅವ್ಯವಹಾರದ ಕುರಿತು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ ಸಿಬಿಐ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

NEET-UG : ಆಗಸ್ಟ್ 14ರಿಂದ ನೀಟ್-ಯುಜಿ ಕೌನ್ಸೆಲಿಂಗ್ ಆರಂಭ

NEET-UG : ಅಭ್ಯರ್ಥಿಗಳು ಇತ್ತೀಚಿನ ಸುದ್ದಿ ಮತ್ತು ವಿವರಣೆ ಮತ್ತು ಸೂಚನೆಗಳಿಗಾಗಿ ಎಂಸಿಸಿ ವೆಬ್​ಸೈಟ್​ಗೆ ಭೇಟಿ ನೀಡಲು ಸೂಚಿಸಲಾಗಿದೆ. ದೇಶಾದ್ಯಂತ ಸುಮಾರು 710 ವೈದ್ಯಕೀಯ ಕಾಲೇಜುಗಳಲ್ಲಿ ಸುಮಾರು 1.10 ಲಕ್ಷ ಎಂಬಿಬಿಎಸ್ ಸೀಟುಗಳ ಹಂಚಿಕೆಗೆ ಕೌನ್ಸೆಲಿಂಗ್ ನಡೆಯಲಿದೆ. ಅಲ್ಲದೆ, ಆಯುಷ್ ಮತ್ತು ನರ್ಸಿಂಗ್ ಸೀಟುಗಳಲ್ಲದೆ 21,000 ಬಿಡಿಎಸ್ ಸೀಟುಗಳಿಗೆ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಶ್ರೀನಿವಾಸ್ ಹೇಳಿದರು.

VISTARANEWS.COM


on

NEET-UG
Koo

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಪದವಿಪೂರ್ವ (NEET-UG) 2024 ರ ಕೌನ್ಸೆಲಿಂಗ್ ಆಗಸ್ಟ್ 14 ರಿಂದ ಪ್ರಾರಂಭವಾಗಲಿದೆ ಎಂದು ಎಂಸಿಸಿ ಸೋಮವಾರ ಹೊರಡಿಸಿದ ನೋಟಿಸ್​ನಲ್ಲಿ ತಿಳಿಸಿದೆ. ಆದಾಗ್ಯೂ ಕೌನ್ಸೆಲಿಂಗ್ ಪ್ರಕ್ರಿಯೆಗೆ ನೋಂದಣಿ ಆಗಸ್ಟ್ ಮೊದಲ ವಾರದಿಂದ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್ಎಂಸಿ) ಕಾರ್ಯದರ್ಶಿ ಡಾ.ಬಿ.ಶ್ರೀನಿವಾಸ್ ತಿಳಿಸಿದ್ದಾರೆ.

ಅಭ್ಯರ್ಥಿಗಳು ಇತ್ತೀಚಿನ ಸುದ್ದಿ ಮತ್ತು ವಿವರಣೆ ಮತ್ತು ಸೂಚನೆಗಳಿಗಾಗಿ ಎಂಸಿಸಿ ವೆಬ್​ಸೈಟ್​ಗೆ ಭೇಟಿ ನೀಡಲು ಸೂಚಿಸಲಾಗಿದೆ. ದೇಶಾದ್ಯಂತ ಸುಮಾರು 710 ವೈದ್ಯಕೀಯ ಕಾಲೇಜುಗಳಲ್ಲಿ ಸುಮಾರು 1.10 ಲಕ್ಷ ಎಂಬಿಬಿಎಸ್ ಸೀಟುಗಳ ಹಂಚಿಕೆಗೆ ಕೌನ್ಸೆಲಿಂಗ್ ನಡೆಯಲಿದೆ. ಅಲ್ಲದೆ, ಆಯುಷ್ ಮತ್ತು ನರ್ಸಿಂಗ್ ಸೀಟುಗಳಲ್ಲದೆ 21,000 ಬಿಡಿಎಸ್ ಸೀಟುಗಳಿಗೆ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಶ್ರೀನಿವಾಸ್ ಹೇಳಿದರು.

ಅಖಿಲ ಭಾರತ ಕೋಟಾದ ಶೇ.15ರಷ್ಟು ಸೀಟುಗಳು ಮತ್ತು ಎಲ್ಲ ಏಮ್ಸ್, ಜಿಪ್ಮರ್ ಪುದುಚೆರಿ, ಎಲ್ಲ ಕೇಂದ್ರೀಯ ವಿವಿ ಸೀಟುಗಳು ಮತ್ತು ಶೇ.100ರಷ್ಟು ಡೀಮ್ಡ್ ವಿವಿ ಸೀಟುಗಳಿಗೆ ಎಂಸಿಸಿ ಕೌನ್ಸೆಲಿಂಗ್ ನಡೆಸಲಿದೆ.

ಪರೀಕ್ಷೆಯ ನಿರ್ವಹಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಗಳು ಸೇರಿದಂತೆ ಹಲವಾರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಲೇವಾರಿ ಮಾಡಿದ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಶುಕ್ರವಾರ ವೈದ್ಯಕೀಯ ಪ್ರವೇಶ ಪರೀಕ್ಷೆಯ ಅಂತಿಮ ಫಲಿತಾಂಶಗಳನ್ನು ಪ್ರಕಟಿಸಿತ್ತು

Continue Reading

ವೈರಲ್ ನ್ಯೂಸ್

Viral Video: ಕಾರಿನಲ್ಲೇ ಸೆಕ್ಸ್‌.. ಡಿವೈಡರ್‌ಗೆ ಡಿಕ್ಕಿ; ನಗ್ನ ಸ್ಥಿತಿಯಲ್ಲಿದ್ದ ಇಬ್ಬರು ಯುವಕರು, ಯುವತಿಯನ್ನು ಕಂಡು ಜನ ಶಾಕ್‌-ವಿಡಿಯೋ ಇದೆ

Viral Video: ಮಕ್ಕಳನ್ನು ಕೂರಿಸಿಕೊಂಡು ಇಬ್ಬರು ಯುವಕರು ಮತ್ತು ಒಬ್ಬ ಮಹಿಳೆ ಕಾರಿನಲ್ಲೇ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸುತ್ತಾ, ಮಹಿಳೆಯ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಹೀಗಾಗಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ಘಟನೆಯಲ್ಲಿ ಮಹಿಳೆ ಮತ್ತು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Viral video
Koo

ಕಾನ್ಪುರ: ಜನನಿಬಿಡ ಪ್ರದೇಶದಲ್ಲಿ ಅತ್ಯಂತ ವೇಗವಾಗಿ ಬಂದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ಅಯ್ಯೋ ಕಾರು ಅಪಘಾತವಾಯಿತಲ್ಲಾ ಅಂತಾ ಅಲ್ಲಿದ್ದ ಜನ ಸಹಾಯಕ್ಕೆಂದು ಧಾವಿಸುತ್ತಾರೆ. ಹಾಗೆ ಬಂದ ಜನ ಕಾರಿನ ಬಳಿ ಬರುತ್ತಿದ್ದಂತೆ ಒಂದು ಕ್ಷಣಕ್ಕೆ ದಂಗಾಗಿ ಬಿಡ್ತಾರೆ. ಹಾಗಿದ್ದರೆ ಅಂತಹದ್ದೇನಿತ್ತು ಆ ಕಾರಿನಲ್ಲಿ ಅಂತ ನೋಡೋದಾದ್ರೆ ಅರೆಬೆತ್ತಲೆಯಾಗಿ ಇಬ್ಬರು ಯುವಕರು, ಪೂರ್ತಿ ನಗ್ನ ಸ್ಥಿತಿಯಲ್ಲಿ ಮಹಿಳೆಯೊಬ್ಬಳು ಕಾರಿನೊಳಗೆ ಇರುವುದನ್ನು ಕಂಡು ಜನ ಶಾಕ್‌ ಆಗಿದ್ದಾರೆ. ಸಾಲದೆನ್ನುವಂತೆ ನಾಲ್ಕು ಮಕ್ಕಳೂ ಕಾರಿನಲ್ಲಿದ್ದಾರೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌(Viral Video) ಆಗುತ್ತಿದೆ.

ಹೌದು.. ಇಂತಹದ್ದೊಂದು ಘಟನೆ ಕಾನ್ಪುರದಲ್ಲಿ ವರದಿಯಾಗಿದೆ. ಮಕ್ಕಳನ್ನು ಕೂರಿಸಿಕೊಂಡು ಇಬ್ಬರು ಯುವಕರು ಮತ್ತು ಒಬ್ಬ ಮಹಿಳೆ ಕಾರಿನಲ್ಲೇ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸುತ್ತಾ, ಮಹಿಳೆಯ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಹೀಗಾಗಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ಘಟನೆಯಲ್ಲಿ ಮಹಿಳೆ ಮತ್ತು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಜ್‌ಮೌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಜೆ ಕೆ ಚೌರಾ ಪ್ರದೇಶದಲ್ಲಿ ಜು.27ರಂದು ಈ ಘಟನೆ ನಡೆದಿದೆ. ಮಹಿಳೆ ಒಂದೇ ಸಮಯದಲ್ಲಿ ಇಬ್ಬರು ಯುವಕರ ಜೊತೆ ನಾಲ್ಕು ಮಕ್ಕಳ ಎದುರೇ ಲೈಂಗಿಕ ಕ್ರಿಯೆ ನಡೆಸುತ್ತಿದ್ದಳು. ಈ ವೇಳೆ ಕಾರು ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಸ್ಥಳೀಯರಿಗೆ ಕಾರಿನಲ್ಲಿ ಮದ್ಯದ ಬಾಟಲಿಗಳು, ಇತರೆ ವಸ್ತುಗಳು ಪತ್ತೆಯಾಗಿದೆ. ಸ್ಥಳೀಯರು ಪೊಲೀಸರು ದೂರು ನೀಡಿದ್ದು, ಇಬ್ಬರು ಯುವಕರನ್ನು ಅರೆಸ್ಟ್‌ ಮಾಡಿದ್ದಾರೆ. ಮಹಿಳೆ ಮತ್ತು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೀಡಾಗಿರುವ ಕಾರಿನ ಸಮೀಪ ಜನ ಜಮಾಯಿಸಿ ಯುವಕರನ್ನು ವಿಚಾರಿಸುತ್ತಿರುವುದನ್ನು, ಚಾಲಕ ಕಾರಿನಿಂದ ಕೆಳಗಿಳಿದು ಸ್ಥಳೀಯರೊಂದಿಗೆ ವಾಗ್ವಾದಕ್ಕಿಳಿದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ನಂತರ ಅವರು ಕಾರಿನೊಳಗೆ ಕುಳಿತುಕೊಳ್ಳುತ್ತಾರೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಶಾಂತಿ ಕದಡುವ ಆರೋಪ ಹೊರಿಸಿದ್ದಾರೆ. ಅವರಿಗೆ ದಂಡ ವಿಧಿಸಲಾಯಿತು ಮತ್ತು ನಂತರ ಹೋಗಲು ಅನುಮತಿಸಲಾಗಿದೆ ಎಂದು ವರದಿಯಾಗಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಮಹಿಳೆಯನ್ನು ಆಕೆಯ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎನ್ನಲಾಗಿದೆ. ಇನ್ನು ಕಾರಿನಲ್ಲಿದ್ದ ಮಕ್ಕಳು ಯಾರದ್ದು ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಇದನ್ನೂ ಓದಿ: Viral News: ಕಾಲಿಗೆ ಕಬ್ಬಿಣದ ಸರಪಳಿ.. ಕೈಯಲ್ಲಿ ಅಮೆರಿಕ ಪಾಸ್‌ಪೋರ್ಟ್‌..ದಟ್ಟ ಕಾಡಿನಲ್ಲಿ ಮಹಿಳೆ ಪತ್ತೆ-ವಿಡಿಯೋ ವೈರಲ್‌

Continue Reading

ದೇಶ

Parliament Session: ಅಗ್ನಿಪಥ್‌ ಯೋಜನೆ ಬಗ್ಗೆ ರಾಹುಲ್‌ ನಿಗಿ ನಿಗಿ ಕೆಂಡ; ರಾಜನಾಥ್‌ ಸಿಂಗ್‌ ಸಖತ್‌ ಟಾಂಗ್‌

Parliament Session: ಸದನದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಸೇನೆಯ ಸೈನಿಕರನ್ನು ಅಗ್ನಿವೀರ್ ಹೆಸರಿನ ಚಕ್ರವ್ಯೂಹದಲ್ಲಿ ಸಿಲುಕಿಸಲಾಯ್ತು. ಈ ಬಜೆಟ್‌ನಲ್ಲಿ ಅಗ್ನಿವೀರರ ಪಿಂಚಣಿಗಾಗಿ ಒಂದು ರೂಪಾಯಿಯನ್ನು ತೆಗೆದಿರಿಸಿಲ್ಲ. ನಿಮ್ಮನ್ನು ದೇಶಭಕ್ತರೆಂದು ಕರೆದುಕೊಳ್ಳುವ ನೀವು ಅಗ್ನಿವೀರರ ಪಿಂಚಣಿಗಾಗಿ ಅನುದಾನ ಘೋಷಣೆ ಮಾಡಿಲ್ಲ. ನಿಮ್ಮ ಚಕ್ರವ್ಯೂಹದಿಂದ ಹೊರಬರಲು ರೈತರು ಎಂಎಸ್‌ಪಿ ಲೀಗಲ್ ಗ್ಯಾರಂಟಿಯನ್ನು ಕೇಳಿದ್ದರು. ಆದ್ರೆ ನೀವು ರೈತರ ಜೊತೆ ಮಾತನಾಡಲು ಸಿದ್ಧವಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

VISTARANEWS.COM


on

Parliament session
Koo

ನವದೆಹಲಿ: ಕಾಂಗ್ರೆಸ್‌ ನಾಯಕ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi v/s Rajnath Singh) ಅವರು ಲೋಕಸಭೆ(Parliament Session)ಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅದರಲ್ಲೂ, ಮಹಾಭಾರತದ ಚಕ್ರವ್ಯೂಹವನ್ನು ಉಲ್ಲೇಖಿಸಿದ ರಾಹುಲ್‌ ಗಾಂಧಿ ಅವರು ನರೇಂದ್ರ ಮೋದಿ (Narendra Modi) ಹಾಗೂ ಬಿಜೆಪಿ ವಿರುದ್ಧ ವಾಗ್ಬಾಣ ಪ್ರಯೋಗಿಸಿದ್ದಾರೆ. ಇದೇ ವೇಳೆ ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ ಅಗ್ನಿಪಥ್ ಯೋಜನೆ ಇಂದು ಲೋಕಸಭೆಯಲ್ಲಿ ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವ ರಾಜನಾಥ್ ಸಿಂಗ್ ನಡುವೆ ವಾದ ಪ್ರತಿವಾದಕ್ಕೆ ವೇದಿಕೆ ಕಲ್ಪಿಸಿತ್ತು.

ಸದನದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಸೇನೆಯ ಸೈನಿಕರನ್ನು ಅಗ್ನಿವೀರ್ ಹೆಸರಿನ ಚಕ್ರವ್ಯೂಹದಲ್ಲಿ ಸಿಲುಕಿಸಲಾಯ್ತು. ಈ ಬಜೆಟ್‌ನಲ್ಲಿ ಅಗ್ನಿವೀರರ ಪಿಂಚಣಿಗಾಗಿ ಒಂದು ರೂಪಾಯಿಯನ್ನು ತೆಗೆದಿರಿಸಿಲ್ಲ. ನಿಮ್ಮನ್ನು ದೇಶಭಕ್ತರೆಂದು ಕರೆದುಕೊಳ್ಳುವ ನೀವು ಅಗ್ನಿವೀರರ ಪಿಂಚಣಿಗಾಗಿ ಅನುದಾನ ಘೋಷಣೆ ಮಾಡಿಲ್ಲ. ನಿಮ್ಮ ಚಕ್ರವ್ಯೂಹದಿಂದ ಹೊರಬರಲು ರೈತರು ಎಂಎಸ್‌ಪಿ ಲೀಗಲ್ ಗ್ಯಾರಂಟಿಯನ್ನು ಕೇಳಿದ್ದರು. ಆದ್ರೆ ನೀವು ರೈತರ ಜೊತೆ ಮಾತನಾಡಲು ಸಿದ್ಧವಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

ಇದಕ್ಕೆ ಟಾಂಗ್‌ ಕೊಡಲು ಮುಂದಾದ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅಗ್ನಿಪಥ್ ಯೋಜನೆಯ ವಿಚಾರದಲ್ಲಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು ಅಲ್ಲದೇ ಸದನದಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡುವುದಾಗಿ ತಿಳಿಸಿದರು. ರಾಷ್ಟ್ರೀಯ ಭದ್ರತೆಯ ವಿಷಯವು ಸೂಕ್ಷ್ಮವಾಗಿದೆ. ಅಗ್ನಿವೀರ್ ಸೈನಿಕರ ಬಗ್ಗೆ ದೇಶವಾಸಿಗಳನ್ನು ದಾರಿ ತಪ್ಪಿಸುವ ಪ್ರಯತ್ನಗಳು ನಡೆಯುತ್ತಿವೆ. ನೀವು ಕೇಳಿದಾಗ ಸದನದ ಮುಂದೆ ಅಗ್ನಿವೀರ್ ಸೈನಿಕರ ವಿಷಯದ ಬಗ್ಗೆ ನನ್ನ ಹೇಳಿಕೆ ನೀಡಲು ನಾನು ಸಿದ್ಧ” ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಅಗ್ನಿಪಥ್ ಯೋಜನೆಯು ದೇಶದ ಸೈನಿಕರು ಮತ್ತು ಅವರ ಕುಟುಂಬಗಳ ಆರ್ಥಿಕ ಭದ್ರತೆ ಮತ್ತು ಗೌರವವನ್ನು ಕಸಿದುಕೊಂಡಿದೆ ಎಂದು ಪ್ರತಿಪಾದಿಸಿದ್ದರು. ಈ ಯೋಜನೆಯು ಸರ್ಕಾರದ ಯುವಕರ ವಿರೋಧಿ ಮತ್ತು ರೈತ ವಿರೋಧಿ” ಧೋರಣೆಯನ್ನು ಬಹಿರಂಗಪಡಿಸುತ್ತದೆ ಎಂದು ಅವರು ಆರೋಪಿಸಿದ್ದರು. ತಮ್ಮ ಭಾಷಣದಲ್ಲಿ ರಾಹುಲ್ ಗಾಂಧಿ ಅಗ್ನಿವೀರ್ ಯೋಜನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಷ್ಟೇ ಅಲ್ಲದೆ, “ದೇಶದಲ್ಲಿ ಭಯದ ವಾತಾವರಣವಿದೆ. ಬಿಜೆಪಿ ಸಂಸದರು ಸಹ ಭಯಭೀತರಾಗಿದ್ದಾರೆ ಎಂದು ಹೇಳಿದ್ದಾರೆ. ಬಿಜೆಪಿಯ ಚಿಹ್ನೆಯನ್ನು ಉಲ್ಲೇಖಿಸಿ ದೇಶ ಈಗ ಕಮಲದ ಚಕ್ರವ್ಯೂಹದಲ್ಲಿ ಸಿಕ್ಕಿಹಾಕಿಕೊಂಡಿದೆ ಎಂದು ಟೀಕಿಸಿದ್ದಾರೆ. 21ನೇ ಶತಮಾನದಲ್ಲಿ ಹೊಸ ಚಕ್ರವ್ಯೂಹವನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ರಾಹುಲ್‌ ಮಾತಿಗೆ ಹಣೆ ಚಚ್ಚಿಕೊಂಡು, ಮುಖ ಮುಚ್ಚಿಕೊಂಡ ಸಚಿವೆ ನಿರ್ಮಲಾ: ಭಾರೀ ವೈರಲಾಗ್ತಿದೆ ಈ ವಿಡಿಯೋ

Continue Reading

ಕರ್ನಾಟಕ

Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

Pralhad Joshi: ಮಾರುಕಟ್ಟೆಯಲ್ಲಿ ಏರಿಳಿತ ಕಾಣುತ್ತಿರುವ ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ ಕೈಗೊಳ್ಳಲಾಗಿದ್ದು, ಕೆಜಿಗೆ 60 ರೂ. ದರ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

VISTARANEWS.COM


on

Union Minister Pralhad Joshi statement on tomato price
Koo

ನವದೆಹಲಿ: ಮಾರುಕಟ್ಟೆಯಲ್ಲಿ ಏರಿಳಿತ ಕಾಣುತ್ತಿರುವ ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ ಕೈಗೊಳ್ಳಲಾಗಿದ್ದು, ಕೆಜಿಗೆ 60 ರೂ. ದರ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

ದೆಹಲಿಯ ಕೃಷಿ ಭವನದಲ್ಲಿ ಇಂದು ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಟೊಮೆಟೊ ವ್ಯಾನ್‌ಗಳಿಗೆ ಚಾಲನೆ ನೀಡಿ ಬೆಲೆ ಸ್ಥಿರತೆ ಕುರಿತು ತಿಳಿಸಿದರು.

ದೆಹಲಿ, ಎನ್‌ಸಿಆರ್‌ನ ಚಿಲ್ಲರೆ ಮಾರುಕಟ್ಟೆಗಳಲ್ಲಿ ಟೊಮೆಟೊ ಬೆಲೆ ಏರಿಳಿತ ಕಾಣುತ್ತಿದ್ದು, ಸ್ಥಿರತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Natural Mosquito Repellents: ಸೊಳ್ಳೆಗಳು ನಿಮ್ಮ ಹತ್ತಿರ ಸುಳಿಯದಂತೆ ಮಾಡಲು ಇಲ್ಲಿವೆ ನೈಸರ್ಗಿಕ ಉಪಾಯಗಳು!

ಟೊಮೆಟೋಗೆ ಚಿಲ್ಲರೆ ಬೆಲೆ ಪ್ರತಿ ಕಿಜಿಗೆ 60 ರೂ. ನಿಗದಿಪಡಿಸಲಾಗಿದೆ. ಅಲ್ಲದೇ, ಪ್ರಮುಖ 18 ಸ್ಥಳಗಳಲ್ಲಿ ಮಾರಾಟ ಮಾಡಲಾಗುವುದು. ಗ್ರಾಹಕರ ಅನುಕೂಲ ಮತ್ತು ಬೇಡಿಕೆಗೆ ಅನುಗುಣವಾಗಿ ಮಾರಾಟ ಸ್ಥಳಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ ಎಂದು ಸಚಿವ ಜೋಶಿ ತಿಳಿಸಿದರು.

ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಟೊಮೆಟೊ ವ್ಯಾನ್‌ಗಳು ದೆಹಲಿ- ಎನ್‌ಸಿಆರ್ ಪ್ರದೇಶಗಳಲ್ಲಿ ಲಭ್ಯವಿರುತ್ತವೆ ಎಂದರು.

ದೆಹಲಿ, ಕೋಲಾರ ಮತ್ತು ರಾಜಸ್ಥಾನದ ಮಾರುಕಟ್ಟೆಗಳಿಂದ ಟೊಮೆಟೊ ಖರೀದಿಸಿ, ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಪ್ರತಿ ಕೆಜಿಗೆ 60 ರೂ. ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Rohit Sharma : ಏಕ ದಿನ ಸರಣಿಗಾಗಿ ಶ್ರೀಲಂಕಾ ತಲುಪಿದ ರೋಹಿತ್, ವಿರಾಟ್​ ಕೊಹ್ಲಿ

ಈ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸಚಿವ ಬಿ.ಎಲ್.ವರ್ಮಾ ಉಪಸ್ಥಿತರಿದ್ದರು.

Continue Reading
Advertisement
NEET-UG
ಪ್ರಮುಖ ಸುದ್ದಿ26 mins ago

NEET-UG : ಆಗಸ್ಟ್ 14ರಿಂದ ನೀಟ್-ಯುಜಿ ಕೌನ್ಸೆಲಿಂಗ್ ಆರಂಭ

ವೈರಲ್ ನ್ಯೂಸ್45 mins ago

Viral News: ಜಗಳವಾಡಿಕೊಂಡು ನಡುರಸ್ತೆಯಲ್ಲಿ ಬೆತ್ತಲೆ ಓಡಾಟ; ಜೋಡಿಯ ಹುಚ್ಚಾಟ ಮೊಬೈಲ್‌ನಲ್ಲಿ ಸೆರೆ; ಭಾರೀ ಆಕ್ರೋಶ ವ್ಯಕ್ತ

Paris Olympics 2024
ಕ್ರೀಡೆ51 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದ ಈಜುಪಟುವಿಗೆ ಕೊರೊನಾ ಸೋಂಕು!

Asia Cup cricket
ಪ್ರಮುಖ ಸುದ್ದಿ1 hour ago

Asia Cup Cricket : ಭಾರತದಲ್ಲಿ ನಡೆಯಲಿದೆ 2025ರ ಏಷ್ಯಾ ಕಪ್ ಕ್ರಿಕೆಟ್​, ಇಲ್ಲಿದೆ ಪೂರ್ಣ ವಿವರ

Viral video
ವೈರಲ್ ನ್ಯೂಸ್1 hour ago

Viral Video: ಕಾರಿನಲ್ಲೇ ಸೆಕ್ಸ್‌.. ಡಿವೈಡರ್‌ಗೆ ಡಿಕ್ಕಿ; ನಗ್ನ ಸ್ಥಿತಿಯಲ್ಲಿದ್ದ ಇಬ್ಬರು ಯುವಕರು, ಯುವತಿಯನ್ನು ಕಂಡು ಜನ ಶಾಕ್‌-ವಿಡಿಯೋ ಇದೆ

Rohan Bopanna
ಕ್ರೀಡೆ2 hours ago

Rohan Bopanna : ಅಂತಾರಾಷ್ಟ್ರೀಯ ಟೆನಿಸ್​ಗೆ ವಿದಾಯ ಘೋಷಿಸಿದ ಕನ್ನಡಿಗ ರೋಹನ್ ಬೋಪಣ್ಣ

CM Siddaramaiah demands to Pm for drop the Nirmala Sitharaman from the cabinet
ಕರ್ನಾಟಕ2 hours ago

CM Siddaramaiah: ಬಜೆಟ್ ಮೂಲಪಾಠವೇ ಗೊತ್ತಿಲ್ಲದ ನಿರ್ಮಲಾ ಸೀತಾರಾಮನ್; ಸಂಪುಟದಿಂದ ಕೈಬಿಡಲು ಸಿಎಂ ಒತ್ತಾಯ

Parliament session
ದೇಶ2 hours ago

Parliament Session: ಅಗ್ನಿಪಥ್‌ ಯೋಜನೆ ಬಗ್ಗೆ ರಾಹುಲ್‌ ನಿಗಿ ನಿಗಿ ಕೆಂಡ; ರಾಜನಾಥ್‌ ಸಿಂಗ್‌ ಸಖತ್‌ ಟಾಂಗ್‌

Minister Lakshmi Hebbalkar reviewed the flood situation and provided individual financial assistance to the victims
ಕರ್ನಾಟಕ2 hours ago

Lakshmi Hebbalkar: ಪ್ರವಾಹ ಸಂತ್ರಸ್ತರ ಕಣ್ಣೀರು ಒರೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Union Minister Pralhad Joshi statement on tomato price
ಕರ್ನಾಟಕ2 hours ago

Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ7 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ8 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ11 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ1 day ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ1 day ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ1 day ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌