ಸ್ವಾತಂತ್ರ್ಯ ಅಮೃತ ಮಹೋತ್ಸವ | ಪ್ರತಿದಿನ 1.5 ಲಕ್ಷ ಧ್ವಜ ತಯಾರಿಸುವ ʻಬಾವುಟದ ಮಾಮʼ - Vistara News

ದೇಶ

ಸ್ವಾತಂತ್ರ್ಯ ಅಮೃತ ಮಹೋತ್ಸವ | ಪ್ರತಿದಿನ 1.5 ಲಕ್ಷ ಧ್ವಜ ತಯಾರಿಸುವ ʻಬಾವುಟದ ಮಾಮʼ

ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರಣ ಈಗ ತ್ರಿವರ್ಣ ಧ್ವಜಗಳಿಗೆ ಎಲ್ಲಿಲ್ಲದ ಬೇಡಿಕೆ. ದಿಲ್ಲಿಯ ಅಬ್ದುಲ್‌ ಗಫಾರ್‌ ಅವರಿಗೆ ಎರಡು ಖುಷಿ- ದಾಖಲೆ ಸಂಖ್ಯೆಯ ಧ್ವಜ ತಯಾರಿ ಹಾಗೂ ಚೀನಾಗೆ ಸೆಡ್ಡು.

VISTARANEWS.COM


on

flag
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆಯಾ ಹಬ್ಬದ ಹೊತ್ತಿನಲ್ಲಿ ಅದಕ್ಕೆ ಸಂಬಂಧಿಸಿದ ವಸ್ತುಗಳಿಗೆ ಬೇಡಿಕೆ ಸಹಜವಾಗಿ ಹೆಚ್ಚು. ಚೌತಿಯ ಹೊತ್ತಿಗೆ ಗಣಪತಿ, ನವರಾತ್ರಿಯಲ್ಲಿ ದುರ್ಗೆ, ದೀಪಾವಳಿಯ ಹೊತ್ತಿಗೆ ಹಣತೆ… ಹೀಗೆ. ಅಂತೆಯೇ ಸ್ವಾತಂತ್ರ್ಯದ ಹಬ್ಬ ಬಂತೆಂದರೆ ತ್ರಿವರ್ಣ ಧ್ವಜಕ್ಕೂ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಈ ಬಾರಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವಂತೆ ಕೇಂದ್ರ ಸರಕಾರ ಕರೆ ನೀಡಿರುವ ಹಿನ್ನೆಲೆಯಲ್ಲಿ, ಧ್ವಜ ತಯಾರಿಕೆಯನ್ನೇ ವೃತ್ತಿ ಮಾಡಿಕೊಂಡವರು ಉಸಿರಾಡಲೂ ಸಮಯವಿಲ್ಲ ಎಂಬಷ್ಟು ವ್ಯಸ್ತ.

ದೆಹೆಲಿಯ ಸದರ್‌ ಬಜಾರ್‌ನ ಸಣ್ಣ ಕೋಣೆಯಲ್ಲಿ ಹೊಲಿಗೆ ಯಂತ್ರದ ಮುಂದೆ ಕುಳಿತಿರುವ, ʻಬಾವುಟದ ಮಾಮʼ ಎಂದೇ ಕರೆಸಿಕೊಳ್ಳುವ ಅಬ್ದುಲ್‌ ಗಫಾರ್‌ ಅವರ ಕತೆಯೂ ಇದಕ್ಕಿಂತ ಹೊರತಲ್ಲ. ೭೧ ವರ್ಷದ ಗಫಾರ್‌ ಕಳೆದ ೬೦ ವರ್ಷಗಳಿಂದ ತ್ರಿವರ್ಣ ಧ್ವಜ ತಯಾರಿಸುವ ಕಾಯಕದಲ್ಲೇ ತೊಡಗಿದವರು. ಸದ್ಯಕ್ಕೆ ದಿನವೊಂದಕ್ಕೆ ೧.೫ ಲಕ್ಷ ಧ್ವಜಗಳನ್ನು ಅವರ ʻಭಾರತ್‌ ಹ್ಯಾಂಡ್‌ಲೂಮ್ಸ್‌ʼ ಎನ್ನುವ ಸಣ್ಣ ಉದ್ದಿಮೆ ತಯಾರಿಸುತ್ತಿದೆಯಂತೆ. ಗಫಾರರ ಧ್ವಜಗಳು ದೇಶದ ಎಲ್ಲಾ ಸುಖ-ದುಃಖಗಳನ್ನೂ ಕಂಡಿವೆ. ತುರ್ತುಪರಿಸ್ಥಿತಿಯಿಂದ ಹಿಡಿದು, ವಾಜಪೇಯಿ ಸರಕಾರ, ಅಣ್ಣಾ ಹಜಾರೆಯವರ ಆಂದೋಲನ… ಹೀಗೆ ಬಹಳಷ್ಟನ್ನು ಕಂಡಿವೆ. ಭಾರತ್‌ ಹ್ಯಾಂಡ್‌ಲೂಮ್ಸ್‌ನ ನಾಲ್ಕೂ ಕೋಣೆಗಳು ಈಗ ತ್ರಿವರ್ಣ ಬಾವುಟಗಳಿಂದಲೇ ತುಂಬಿಹೋಗಿವೆ.

flag

ಆಗಸ್ಟ್‌ ೧೩ರಿಂದ ೧೫ರವರೆಗೆ ಮನೆಮನೆಯಲ್ಲಿ ತ್ರಿವರ್ಣ ಬಾವುಟ ಹಾರಿಸಬೇಕೆಂಬ ಕೇಂದ್ರ ಸರಕಾರದ ಕರೆಗೆ ಪೂರಕವಾಗಿ, ಅತಿ ಹೆಚ್ಚಿನ ಬೇಡಿಕೆ ಧ್ವಜಗಳಿಗೆ ಈಗಿದೆ ಎನ್ನುತ್ತಾರೆ ತಮ್ಮ ಕುಲಕಸುಬನ್ನೇ ಮುಂದುವರಿಸುತ್ತಿರುವ ಗಫಾರ್.‌ ʻʻ೧೯೭೫ ಮತ್ತು ಮುಂದಿನ ಹತ್ತು ವರ್ಷಗಳಲ್ಲಿ ಧ್ವಜಗಳಿಗೆ ಸಾಕಷ್ಟು ಬೇಡಿಕೆ ಕಂಡ ದಿನಗಳು. ಆದರೆ ಈಗಿನ ಬೇಡಿಕೆ ಕಂಡುಕೇಳರಿಯದ್ದು. ಸಾಮಾನ್ಯವಾಗಿ ಆಗಸ್ಟ್‌ ೧೫ರ ಹೊತ್ತಿಗೆ ದಿನವೊಂದಕ್ಕೆ ನಾಲ್ಕರಿಂದ ಐದು ಸಾವಿರ ಬಾವುಟಗಳಿಗೆ ಬೇಡಿಕೆ ಬರುತ್ತಿತ್ತು. ಆದರೆ ಈ ಬಾರಿ ದಿನಕ್ಕೆ ಒಂದೂವರೆ ಲಕ್ಷ ಬಾವುಟಗಳನ್ನು ತಯಾರಿಸುತ್ತಿದ್ದೇವೆ. ಬೇಡಿಕೆ ಎಷ್ಟಿದೆಯೆಂದರೆ ಎಲ್ಲಾ ತಯಾರಿಕಾ ಘಟಕಗಳು ಹಗಲಿರುಳು ದುಡಿಯುತ್ತಿವೆ. ನೌಕರರು ನಾಲ್ಕು ಪಾಳಿಗಳಲ್ಲಿ ಎಡೆಬಿಡದೆ ಶ್ರಮಿಸುತ್ತಿದ್ದಾರೆʼʼ ಎನ್ನುತ್ತಾರೆ ಗಫಾರ್‌.

ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ | ಇಂದಿನಿಂದ ಸಂಭ್ರಮ ಆರಂಭ, ಏನೇನು ನಡೆಯಲಿದೆ?

ಗಫಾರ್‌ ಅವರ ತಮ್ಮ ಅಬ್ದುಲ್‌ ಮಲಿಕ್‌ ಸದರ್‌ ಅವರ ಪ್ರಕಾರ, ತಮ್ಮ ಹಿರಿಯ ಸಹೋದರನಿಗೆ ದಿನಕ್ಕೆ ೫೦೦ರಂತೆ ಬೇಡಿಕೆಯ ಕರೆಗಳು ಬರುತ್ತಿವೆ. ಆರು ಸಹೋದರರ ಪೈಕಿ ಕಿರಿಯವನಾದ ಸದರ್‌ ಸಹ ತಮ್ಮ ಈ ಕುಲಕಸುಬನ್ನೇ ಮಾಡುತ್ತಿದ್ದಾರೆ. ದಿನವೊಂದಕ್ಕೆ ತಯಾರಾಗುವ ಬಾವುಟಗಳ ಸಂಖ್ಯೆ ಸದ್ಯದಲ್ಲೇ ಎರಡು ಲಕ್ಷ ತಲುಪಲಿದೆ ಎಂದು ಅಂದಾಜಿಸುವ ಗಫಾರ್‌, ಇದು ಈವರೆಗಿನ ದಾಖಲೆಯಾಗಲಿದೆ ಎಂದು ಕಣ್ಣರಳಿಸುತ್ತಾರೆ.

ʻʻಧ್ವಜ ತಯಾರಿಕೆ ಮತ್ತು ಮಾರಾಟದಲ್ಲಿ ತೊಡಗಿಕೊಂಡಿರುವ ಅತ್ಯಂತ ಹಳೆಯ ಅಂಗಡಿ ನಮ್ಮದಿರಬಹುದು. ಕಳೆದ ೬೦ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ಪ್ರಮಾಣದಲ್ಲಿ ಬಾವುಟಗಳ ತಯಾರಿಕೆ ಮತ್ತು ಮಾರಾಟ ನಡೆಯುತ್ತಿದೆ. ವ್ಯಾಪಾರ ಮತ್ತು ವಹಿವಾಟಿನ ದೃಷ್ಟಿಕೋನದ ಹೊರತಾಗಿ ಒಮ್ಮೆ ನೋಡಿದರೆ, ಹೆಚ್ಚಿನ ಜನರಿಗೆ ನೌಕರಿ ಕೊಟ್ಟು, ನೌಕರಿಯಲ್ಲಿರುವವರಿಗೆ ಹೆಚ್ಚಿನ ವೇತನವನ್ನೂ ನೀಡಲು ಸಾಧ್ಯವಾಗುತ್ತಿರುವ ಈ ದಿನಗಳು ಸ್ವರ್ಣಯುಗದಂತೆ ಅನಿಸುತ್ತಿವೆʼʼ ಎಂಬುದು ಗಫಾರ್‌ ಅವರ ಸಂಭ್ರಮಕ್ಕೆ ಕಾರಣ. ದಿನಕ್ಕೆ ಸುಮಾರು ೬೦೦ ನೌಕರರು ತಮ್ಮ ಉದ್ದಿಮೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನುವ ಇವರು, ʻʻಮೊದಲೆಲ್ಲಾ ದಿನಕ್ಕೆ ೨೦೦-೨೫೦ ವೇತನ ಪಡೆಯುತ್ತಿದ್ದ ನೌಕರರು, ಈಗ ೮೦೦-೧೦೦೦ವರೆಗೂ ಪಡೆಯುತ್ತಿದ್ದಾರೆ. ಕೆಲಸ ಮಾಡುವವರಲ್ಲಿ ಹೆಚ್ಚಿನವರು ಮಹಿಳೆಯರುʼʼ ಎಂದು ವಿವರಿಸುತ್ತಾರೆ.

ಭಾರತ್‌ ಹ್ಯಾಂಡ್‌ಲೂಮ್ಸ್‌ನಲ್ಲಿ ಕಳೆದ ೩೦ ವರ್ಷಗಳಿಂದ ರಾಷ್ಟ್ರ ಧ್ವಜಗಳ ತಯಾರಿಕೆಯಲ್ಲಿ ನಿರತರಾಗಿರುವ ಜಹೂರ್‌ ಅಹ್ಮದ್‌ ತಾವೇ ದಿನವೊಂದಕ್ಕೆ ೫೦೦-೭೦೦ ಧ್ವಜಗಳವರೆಗೂ ತಯಾರಿಸುವುದಾಗಿ ಹೇಳುತ್ತಾರೆ. ʻʻಮೊದಲೆಲ್ಲಾ ಚೀನಾದಿಂದ ಬರುತ್ತಿದ್ದ ಈ ವಸ್ತುಗಳು ಈಗ ಭಾರತದಲ್ಲಿ ಭಾರತೀಯರಿಂದಲೇ ತಯಾರಿಸಲ್ಪಡುತ್ತಿವೆʼʼ ಎಂಬುದು ಸಮೀಪದ ಮಸೀದಿಯ ಇಮಾಂ ಮೊಹಮ್ಮದ್‌ ರಹ್ಮತುಲ್ಲಾ ಅವರ ಖುಷಿಗೆ ಕಾರಣ. ವ್ಯಾಪಾರ, ವಹಿವಾಟಿಗಿಂತಲೂ ಮುಖ್ಯವಾಗಿ ದೇಶಕ್ಕಾಗಿ ಈ ಧ್ವಜಗಳನ್ನು ತಯಾರಿಸುವುದಾಗಿ ಅಬ್ದುಲ್ ಗಫಾರ್‌ ಹೇಳುತ್ತಾರೆ.

ಇದನ್ನೂ ಓದಿ: ಅಮೃತ ಮಹೋತ್ಸವ | 750 ಬಾಲಕಿಯರು ಸಿದ್ಧಪಡಿಸಿದ ಪೇಲೋಡ್‌‌, ತ್ರಿವರ್ಣಧ್ವಜ ಬಾಹ್ಯಾಕಾಶಕ್ಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Mobile Blast: ಬೈಕ್‌ ಚಲಾಯಿಸುತ್ತಿದ್ದಾಗ ಮೊಬೈಲ್‌ ಸ್ಫೋಟ, ಡಿವೈಡರ್‌ಗೆ ಗುದ್ದಿ ಮಹಿಳೆ ಸಾವು

Mobile Blast: ಬೈಕ್‌ ರಸ್ತೆಯಲ್ಲಿದ್ದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಮಹಿಳೆಯ ತಲೆಯ ಮೇಲೆ ಬೈಕ್ ಬಿದ್ದಿದ್ದು, ತೀವ್ರ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆಕೆ ಬದುಕುಳಿಯಲಿಲ್ಲ. ಅಪಘಾತದ ವೇಳೆ ಮಹಿಳೆ ಹೆಲ್ಮೆಟ್ ಧರಿಸಿರಲಿಲ್ಲ.

VISTARANEWS.COM


on

mobile blast woman death
Koo

ಕಾನ್ಪುರ: ಹೆಲ್ಮೆಟ್ (helmet) ಇಲ್ಲದೇ ಇಯರ್‌ಫೋನ್‌ (Earphone) ಹಾಕಿಕೊಂಡು ಸ್ಕೂಟರ್‌ ಚಲಾಯಿಸುತ್ತಿದ್ದ ಮಹಿಳೆಯೊಬ್ಬರು ಏಕಾಏಕಿ ಮೊಬೈಲ್‌ ಸ್ಫೋಟಗೊಂಡ (Mobile Blast) ಪರಿಣಾಮ ತಬ್ಬಿಬ್ಬಾಗಿ ಬೈಕ್‌ ಮೇಲಿನ ನಿಯಂತ್ರಣ ಕಳೆದುಕೊಂಡು (bike Accident) ಡಿವೈಡರ್‌ಗೆ ಗುದ್ದಿ ಮೃತ (woman death) ಪಟ್ಟಿದ್ದಾರೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವೇಳೆ ಮಹಿಳೆಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಜೇಬಿನಲ್ಲಿದ್ದ ಮೊಬೈಲ್ ಫೋನ್ ಸ್ಫೋಟಗೊಂಡಿದ್ದರಿಂದ ತಬ್ಬಿಬ್ಬಾದ ಆಕೆ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾರೆ. ಬೈಕ್‌ ರಸ್ತೆಯಲ್ಲಿದ್ದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಮಹಿಳೆಯ ತಲೆಯ ಮೇಲೆ ಬೈಕ್ ಬಿದ್ದಿದ್ದು, ತೀವ್ರ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆಕೆ ಬದುಕುಳಿಯಲಿಲ್ಲ. ಅಪಘಾತದ ವೇಳೆ ಮಹಿಳೆ ಹೆಲ್ಮೆಟ್ ಧರಿಸಿರಲಿಲ್ಲ.

ಮಹಿಳೆ ನೆಲಕ್ಕುರುಳುತ್ತಿದ್ದಂತೆ ಸ್ಥಳದ ಸುತ್ತ ಜನ ಜಮಾಯಿಸಿದರು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಗಾಯಾಳು ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಪಘಾತದಲ್ಲಿ ಉಂಟಾದ ತೀವ್ರ ರಕ್ತಸ್ರಾವದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆ.

ಬುಧವಾರ ಬೆಳಗ್ಗೆ 10 ಗಂಟೆಗೆ ಮಹಿಳೆ ತನ್ನ ಸ್ಕೂಟರ್‌ನಲ್ಲಿ ಕಾನ್ಪುರ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೃತ ಮಹಿಳೆಯನ್ನು ಫರೂಕಾಬಾದ್ ಜಿಲ್ಲೆಯ ನೆಹ್ರಾರಿಯಾ ಗ್ರಾಮದ ನಿವಾಸಿ ಪೂಜಾ (28) ಎಂದು ಗುರುತಿಸಲಾಗಿದೆ. ಕಾನ್ಪುರ ರೈಲು ನಿಲ್ದಾಣದಿಂದ ಮುಂಬೈಗೆ ರೈಲು ಹಿಡಿಯಲು ಮಹಿಳೆ ತೆರಳುತ್ತಿದ್ದರು.

ಚೌಬೆಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮನ್ಪುರ್ ಗ್ರಾಮದ ಬಳಿ ಕಾನ್ಪುರ-ಅಲಿಘರ್ ಹೆದ್ದಾರಿಯಲ್ಲಿರುವ ಪೆಟ್ರೋಲ್ ಪಂಪ್‌ನ ಮುಂಭಾಗದಲ್ಲಿ ಈ ದುರಂತ ಘಟನೆ ಸಂಭವಿಸಿದೆ. ಮಹಿಳೆ ಹೆಲ್ಮೆಟ್ ಧರಿಸಿರಲಿಲ್ಲ ಮತ್ತು ಆಕೆಯ ಕಿವಿಯಲ್ಲಿ ಇಯರ್ ಫೋನ್ ಇತ್ತು. ಜೊತೆಗೆ ಆಕೆ ಸ್ಕೂಟರ್ ಅನ್ನು ವೇಗದಲ್ಲಿ ಓಡಿಸುತ್ತಿದ್ದರು ಎಂದು ಗೊತ್ತಾಗಿದೆ. ಘಟನೆ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಮಹಿಳೆಯ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ವಾಹನ ಚಲಾಯಿಸುವ ಸಂದರ್ಭದಲ್ಲಿ ಮೊಬೈಲ್‌ ಬಳಸದಂತೆ ಪದೇ ಪದೆ ಸೂಚನೆ ನೀಡುತ್ತಿದ್ದರೂ ಅದನ್ನು ಬಹಳ ಮಂದಿ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ಅಪಘಾತಗಳಲ್ಲಿ ಶೇಕಡಾ ಇಪ್ಪತ್ತರಷ್ಟು ಮೊಬೈಲ್‌ ಕಾರಣದಿಂದ ಆಗುತ್ತಿವೆ ಎಂದು ವರದಿಗಳು ಸೂಚಿಸಿವೆ.

ಇದನ್ನೂ ಓದಿ: Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

Continue Reading

ದೇಶ

MDH, Everest Spices: ಭಾರತದ 527 ಆಹಾರ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಕೆಮಿಕಲ್‌ ಪತ್ತೆ

MDH, Everest Spices: ಎಂಡಿಎಚ್, ಎವರೆಸ್ಟ್ ಮಸಾಲೆ ಸೇರಿದಂತೆ 527 ಜನಪ್ರಿಯ ಕಂಪನಿಗಳ ಆಹಾರ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಹೆಚ್ಚಿನ ಮಟ್ಟದಲ್ಲಿರುವುದನ್ನು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

VISTARANEWS.COM


on

By

MDH, Everest Spices
Koo

ನವದೆಹಲಿ: ಎಂಡಿಎಚ್‌, ಎವರೆಸ್ಟ್‌ ಮಸಾಲೆ (MDH, Everest Spices) ಸೇರಿದಂತೆ ಭಾರತದ ಒಟ್ಟು 527 ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲಿನ್‌ ಆಕ್ಸೈಡ್‌ (Ethylene oxide) ಹೆಚ್ಚಿನ ಪ್ರಮಾಣದಲ್ಲಿದೆ ಎಂಬುದನ್ನು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಹೀಗಾಗಿ 572 ಉತ್ಪನ್ನಗಳ ಪೈಕಿ 87 ಉತ್ಪನ್ನಗಳ ರಫ್ತನ್ನು ಈಗಾಗಲೇ ಗಡಿಯಲ್ಲಿ ರದ್ದುಗೊಳಿಸಲಾಗಿದೆ. ಎಂಡಿಎಚ್, ಎವರೆಸ್ಟ್ ಮಸಾಲೆ ಸೇರಿದಂತೆ ಜನಪ್ರಿಯ ಕಂಪನಿಗಳ ಆಹಾರ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಹೆಚ್ಚಿನ ಮಟ್ಟದಲ್ಲಿರುವುದನ್ನು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಇದರ ಬೆನ್ನಲ್ಲೇ ಎರಡು ಕಂಪನಿಗಳ ಉತ್ಪನ್ನಗಳನ್ನು ಈಗಾಗಲೇ ಹಾಂಗ್ ಕಾಂಗ್ (Hong Kong) ಮತ್ತು ಸಿಂಗಾಪುರ (Singapore)ದಲ್ಲಿ ಸಂಪೂರ್ಣವಾಗಿ ಬ್ಯಾನ್‌ ಮಾಡಲಾಗಿದೆ.

ಇನ್ನು ಅಪಾಯಕಾರಿ ಕೆಮಿಕಲ್‌ಗಳು ಎಳ್ಳು ಬೀಜಗಳು, ಗಿಡಮೂಲಿಕೆಗಳು, ಮಸಾಲೆಗಳು ಮತ್ತು ಇತರ ಆಹಾರ ಪದಾರ್ಥಗಳಲ್ಲೂ ಕಂಡು ಬಂದಿವೆ. ಇನ್ನು ಎಥಿಲೀನ್ ಆಕ್ಸೈಡ್ ಅನ್ನು ಮೂಲತಃ ವೈದ್ಯಕೀಯ ಸಾಧನಗಳನ್ನು ಸ್ವಚ್ಛಗೊಳಿಸ ಬಳಸುವ ಕ್ರಿಮಿನಾಶಕವಾಗಿ ಬಳಸಲಾಗುತ್ತದೆ. ಈ ರಾಸಾಯನಿಕ ದೇಹಕ್ಕೆ ಸೇರಿದರೆ ಲಿಂಫೋಮಾ ಮತ್ತು ಲ್ಯುಕೇಮಿಯಾ ಸೇರಿದಂತೆ ವಿವಿಧ ಕ್ಯಾನ್ಸರ್‌ಗಳು ಬರು ಸಾಧ್ಯತೆ ಅತಿ ಹೆಚ್ಚಿದೆ.

ರಾಮಯ್ಯ ಅಡ್ವಾನ್ಸ್ಡ್ ಟೆಸ್ಟಿಂಗ್ ಲ್ಯಾಬ್ಸ್‌ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಜುಬಿನ್ ಜಾರ್ಜ್ ಜೋಸೆಫ್, ಎಥಿಲೀನ್ ಆಕ್ಸೈಡ್‌ನ ಉಪಉತ್ಪನ್ನವಾದ ಎಥಿಲೀನ್ ಗ್ಲೈಕೋಲ್‌ನಿಂದ ಉಂಟಾಗುವ ಅಪಾಯಗಳನ್ನು ಎತ್ತಿ ತೋರಿಸಿದ್ದರು. ಇದು ಈ ಹಿಂದೆ ಕೆಮ್ಮಿನ ಸಿರಪ್‌ಗಳಲ್ಲೂ ಪತ್ತೆಯಾಗಿತ್ತು. ಇದರಿಂದ ಆಫ್ರಿಕಾದಲ್ಲಿ ಸಾವಿಗೆ ಕಾರಣವಾಗಿತ್ತು.

ಸಿಂಗಾಪುರದಲ್ಲಿ ಭಾರತದ ಜನಪ್ರಿಯ ಉತ್ಪನ್ನವಾದ ಮಸಾಲೆ ತಯಾರಕ ಎಂಡಿಚ್‌ ಮತ್ತು ಎವರೆಸ್ಟ್‌ನ ಮಸಾಲಾ ಮಾರಾಟ ನಿಷೇಧಗೊಳಿಸಿದ ಬೆನ್ನಲ್ಲೇ, ಹಾಂಕಾಂಗ್‌ನಲ್ಲೂ ಭಾರತದ ಎಂಡಿಎಚ್‌ ಹಾಗೂ ಎವರೆಸ್ಟ್‌ ಮಸಾಲಾ ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿತ್ತು. ಹಾಗಾಗಿ, ಜಾಗತಿಕವಾಗಿ ಭಾರತದ ಎರಡು ಮಸಾಲಾ ಬ್ರ್ಯಾಂಡ್‌ಗಳು ನಕಾರಾತ್ಮಕ ಕಾರಣಕ್ಕಾಗಿ ಸುದ್ದಿಯಾಗಿವೆ. ಇದರ ಪರಿಣಾಮ ಭಾರತದ ಉತ್ಪನ್ನಗಳ ಮೇಲೂ ಉಂಟಾಗಲಿದೆ ಎಂದು ಹೇಳಲಾಗುತ್ತಿದೆ.

ಭಾರತ ಸೇರಿ ಜಗತ್ತಿನೆಲ್ಲೆಡೆ ಖ್ಯಾತಿ ಗಳಿಸಿರುವ ಎಂಡಿಎಚ್‌ನ ಮೂರು ಮಸಾಲಾ ಪದಾರ್ಥಗಳು ಹಾಗೂ ಎವರೆಸ್ಟ್‌ನ ಒಂದು ಮಸಾಲಾ ಪದಾರ್ಥದಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ ಕಾರ್ಸಿನೋಜೆನಿಕ್‌ ರಾಸಾಯನಿಕ ಇರುವ ಕಾರಣ ಹಾಂಕಾಂಗ್‌ ಆಹಾರ ನಿಯಂತ್ರಣ ಪ್ರಾಧಿಕಾರವು ನಾಲ್ಕೂ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ ಎಂದು ತಿಳಿದುಬಂದಿದೆ. ಎಂಡಿಎಚ್‌ನ ಕರಿ ಪೌಡರ್‌, ಮಿಕ್ಸ್ಡ್‌ ಮಸಾಲಾ ಪೌಡರ್‌ ಹಾಗೂ ಸಾಂಬಾರ್‌ ಮಸಾಲಾ ಮತ್ತು ಎವರೆಸ್ಟ್‌ನ ಫಿಶ್‌ ಕರಿ ಮಸಾಲಾವನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

ಎಂಡಿಎಚ್‌ನ ಮೂರು ಹಾಗೂ ಎವರೆಸ್ಟ್‌ನ ಒಂದು ಉತ್ಪನ್ನದ ಸ್ಯಾಂಪಲ್‌ ಪಡೆದು ಪರಿಶೀಲನೆ ನಡೆಸಲಾಗಿದೆ. ಇವುಗಳಲ್ಲಿ ಪೆಸ್ಟಿಸೈಡ್‌ ಎಥಿಲೀನ್‌ ಆಕ್ಸೈಡ್‌ ಪತ್ತೆಯಾಗಿದೆ. ಈ ಆಕ್ಸೈಡ್‌ ಮನುಷ್ಯನು ಸೇವಿಸಲು ಅಪಾಯಕಾರಿಯಾಗಿದೆ. ಕ್ಯಾನ್ಸರ್‌ ಕಾರಕ ಕಾರ್ಸಿನೋಜೆನಿಕ್‌ ರಾಸಾಯನಿಕವೂ ಪತ್ತೆಯಾಗಿತ್ತು. ಹಾಗಾಗಿ, ದೇಶದ ಮಾರಾಟಗಾರರಿಗೆ ಈ ಉತ್ಪನ್ನಗಳನ್ನು ಮಾರಾಟ ಮಾಡದಂತೆ, ಮಳಿಗೆಗಳಲ್ಲಿ ಇರಿಸದಂತೆ ಸೂಚಿಸಲಾಗಿದೆ ಎಂಬುದಾಗಿ ಹಾಂಕಾಂಗ್‌ನ ಸೆಂಟರ್‌ ಫಾರ್‌ ಫುಡ್‌ ಸೇಫ್ಟಿ ತಿಳಿಸಿದೆ. ಇವುಗಳನ್ನು ನಿಷೇಧಿಸಿ ಏಪ್ರಿಲ್‌ 5ರಂದೇ ಆದೇಶ ಹೊರಡಿಸಿದೆ.

Continue Reading

Lok Sabha Election 2024

Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

Lok Sabha Election 2024: ಜೈಲಿನಲ್ಲಿರುವ ಇಬ್ಬರು ಖೈದಿಗಳಲ್ಲಿ ಒಬ್ಬರಿಗೆ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತಿಲ್ಲ. ಏನಿದು ಚುನಾವಣೆ ಆಯೋಗದ ನಿಯಮ? ಇಲ್ಲಿದೆ ವಿಸ್ತೃತ ವಿವರಣೆ.

VISTARANEWS.COM


on

By

Lok Sabha Election-2024
Koo

ನವದೆಹಲಿ: ಪ್ರಪಂಚದಾದ್ಯಂತ ಚುನಾವಣೆಗಳಲ್ಲಿ (election) ವಿರೋಧಾಭಾಸಗಳು ಎದುರಾಗುತ್ತವೆ. ಇದರಲ್ಲಿ ಭಾರತವೂ ಹೊರತಾಗಿಲ್ಲ. ಇದೀಗ ಜೈಲಿನಲ್ಲಿರುವ (jail) ಇಬ್ಬರು ಕೈದಿಗಳಲ್ಲಿ (locked up) ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಸಿಕ್ಕಿದ್ದರೆ, ಇನ್ನೊಬ್ಬರಿಗೆ ಮತದಾನ (voting) ಮಾಡಲೂ ಅವಕಾಶ ನೀಡಲಾಗಿಲ್ಲ.

2024ರ ಲೋಕಸಭಾ ಚುನಾವಣೆಯ (Lok Sabha Election‌ 2024) ವೇಳೆ ಭಾರತದಲ್ಲಿ (india) ಅಂತಹ ಒಂದು ವಿರೋಧಾಭಾಸ ಕಾಣಿಸಿಕೊಂಡಿದೆ. 2,300 ಕಿ.ಮೀ. ದೂರದಲ್ಲಿರುವ ಎರಡು ವಿಭಿನ್ನ ಜೈಲುಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡಿದ್ದರೆ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ಸಿಕ್ಕಿಲ್ಲ.

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ (Amritpal Singh) ಅಸ್ಸಾಂನ ದಿಬ್ರುಗಢ್ ಜೈಲಿನಲ್ಲಿದ್ದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾನೂನು ಅನುಮತಿ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಂತಹ ಲಕ್ಷಾಂತರ ವಿಚಾರಣಾಧೀನ ಕೈದಿಗಳು ಮತ ಚಲಾಯಿಸಲು ಅನುಮತಿ ನೀಡಲಾಗಿಲ್ಲ. ಯಾಕೆಂದರೆ ಭಾರತ ಕಾನೂನು ಪ್ರಕಾರ ಭಾರತದಲ್ಲಿ ಜನರು ಜೈಲಿನಲ್ಲಿ ಇದ್ದು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಜೈಲಿನಿಂದ ಮತ ಚಲಾಯಿಸಲು ಸಾಧ್ಯವಿಲ್ಲ!


ಅಮೃತ್ ಪಾಲ್ ಸ್ಪರ್ಧೆ

2023ರ ಏಪ್ರಿಲ್ 23ರಿಂದ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರು ಪಂಜಾಬ್‌ನ ಖಾದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ದಿಬ್ರುಗಢ ಕೇಂದ್ರ ಕಾರಾಗೃಹದಲ್ಲಿ ಭಾಯಿ ಸಾಹೇಬ್ ಅಮೃತಪಾಲ್ ಅವರನ್ನು ನಾನು ಭೇಟಿ ಮಾಡಿದ್ದೇನೆ. ಖಾಲ್ಸಾ ಪಂಥ್‌ನ ಹಿತಾಸಕ್ತಿಯಿಂದ ಅವರು ಈ ಬಾರಿ ಸಂಸದರಾಗಲು ಖದೂರ್ ಸಾಹಿಬ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ನಾನು ಅವರಿಗೆ ವಿನಂತಿಸಿದೆ ಎಂದು ಅಮೃತಪಾಲ್ ಅವರ ವಕೀಲ ರಾಜದೇವ್ ಸಿಂಗ್ ಖಾಲ್ಸಾ ಈ ಹಿಂದೆ ಹೇಳಿದ್ದು, ಭಾಯಿ ಸಾಹೇಬ್ ಒಪ್ಪಿದ್ದಾರೆ ಮತ್ತು ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದರು.

ಬಂಧನಕ್ಕೆ ಒಳಗಾಗಿರುವುದು ಏಕೆ?

ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್‌ನ ಮೋಗಾ ಜಿಲ್ಲೆಯ ರೋಡ್ ಗ್ರಾಮದಲ್ಲಿ ವರ್ಷದ ಹಿಂದೆ ಬಂಧಿಸಲಾಗಿತ್ತು. ಅಮೃತ್‌ಪಾಲ್ ಸಿಂಗ್ ಅವರು ಬೆಂಬಲಿಗರೊಂದಿಗೆ ಬಂದೂಕು ಮತ್ತು ಕತ್ತಿಗಳನ್ನು ಹಿಡಿದುಕೊಂಡು ಅಮೃತಸರದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದರಿಂದ ಅವರನ್ನು ಬಂಧಿಸಲಾಯಿತು. ಪ್ರತ್ಯೇಕತಾವಾದಿ ಈತ.

ಜೈಲಿನಿಂದ ಸ್ಪರ್ಧಿಸಿದವರು, ಗೆದ್ದವರಿವರು

1996 ರಲ್ಲಿ, ಡಾನ್- ಟರ್ನ್ಡ್ ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರು ಜೈಲಿನಲ್ಲಿದ್ದಾಗ ಬಿಎಸ್ಪಿ ಟಿಕೆಟ್‌ನಲ್ಲಿ ಉತ್ತರ ಪ್ರದೇಶದ ಮೌ ಅಸೆಂಬ್ಲಿ ಸ್ಥಾನಕ್ಕೆ ಸ್ಪರ್ಧಿಸಿದರು. ಕಳೆದ ತಿಂಗಳು ನಿಧನರಾದ ಅನ್ಸಾರಿ ಅವರು ಜೈಲಿನಿಂದಲೇ ಚುನಾವಣೆಯಲ್ಲಿ ಗೆದ್ದಿದ್ದರು.

2005ರಲ್ಲಿ ಸೆರೆವಾಸದಲ್ಲಿದ್ದ ಮುಖ್ತಾರ್ ಅನ್ಸಾರಿ ಅವರು ಜೈಲಿನಿಂದ 2007, 2012 ಮತ್ತು ಮತ್ತೆ 2017 ರಲ್ಲಿ ಒಟ್ಟು ಮೂರು ಬಾರಿ ಮೌ ಅಸೆಂಬ್ಲಿ ಸ್ಥಾನವನ್ನು ಗೆದ್ದರು.

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ 1998ರ ಲೋಕಸಭೆ ಚುನಾವಣೆ ವೇಳೆ ಮೇವು ಹಗರಣದಲ್ಲಿ ಜೈಲು ಸೇರಿದ್ದರು. ಬಿಹಾರದ ಮಾಧೇಪುರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಜೈಲಿನಲ್ಲಿದ್ದೇ ಗೆದ್ದಿದ್ದರು.


ಕೇಜ್ರಿವಾಲ್ ಮತದಾನ ಸಾಧ್ಯವಿಲ್ಲ

ಅಪರಾಧಗಳ ಆರೋಪ ಹೊತ್ತಿರುವ ಜನರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ, ಅಪರಾಧಿಗಳೆಂದು ಸಾಬೀತಾಗದ ವಿಚಾರಣಾಧೀನ ಕೈದಿಗಳು ತಮ್ಮ ಮತವನ್ನು ಚಲಾಯಿಸಲು ಸಾಧ್ಯವಿಲ್ಲ.

ತಪ್ಪಿತಸ್ಥರೆಂದು ಸಾಬೀತಾಗದವರಿಗೂ ಭಾರತದಲ್ಲಿ ಜೈಲುಗಳಿಂದ ಮತದಾನ ಮಾಡಲು ಯಾವುದೇ ಅವಕಾಶವಿಲ್ಲ. 2019 ರ ಪ್ರವೀಣ್ ಕುಮಾರ್ ಚೌಧರಿ ವಿರುದ್ಧ ಭಾರತ ಚುನಾವಣಾ ಆಯೋಗದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಕೈದಿಗಳಿಗೆ ಮತದಾನದ ಹಕ್ಕನ್ನು ಹೊಂದಿಲ್ಲ ಎಂದು ಪುನರುಚ್ಚರಿಸಿದೆ.

ಮೇ 25ರಂದು ದೆಹಲಿ ಮತದಾನ ನಡೆಯಲಿದೆ. ಏಪ್ರಿಲ್ 29 ರಂದು ಸುಪ್ರೀಂ ಕೋರ್ಟ್‌ ನೀಡುವ ತೀರ್ಪಿನ ಮೇಲೆ ಕೇಜ್ರಿವಾಲ್ ಮತ ಚಲಾಯಿಸಬಹುದೇ ಅಥವಾ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.

ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಕೇಜ್ರಿವಾಲ್, ಬಹು ಕಸ್ಟಡಿ ವಿಸ್ತರಣೆಗಳು ಮತ್ತು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಅನಂತರ ಅವರನ್ನು ನವದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಿಡುಗಡೆಯಾಗದೆ ಇದ್ದರೆ ಹೇಮಂತ್ ಸೊರೆನ್ ಗೂ ಅವಕಾಶ ಇಲ್ಲ

ಭಾರತದಲ್ಲಿ ಐದು ಲಕ್ಷಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದು, ಅವರಿಗೂ ಮತ ಚಲಾಯಿಸಲು ಸಾಧ್ಯವಿಲ್ಲ. ಅಂತೆಯೇ, ಭೂ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶಿಸದಿದ್ದರೆ ಮತದಾನ ಮಾಡಲಾಗುವುದಿಲ್ಲ.

ತನ್ನ ಬಂಧನವನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಯಾಕೆ ಈ ತಾರತಮ್ಯ?

2021 ರ ರಾಷ್ಟ್ರೀಯ ಅಪರಾಧ ವರದಿಗಳ ಬ್ಯೂರೋ (NCRB) ವರದಿಯ ಪ್ರಕಾರ, ಭಾರತದಾದ್ಯಂತ ವಿವಿಧ ಜೈಲುಗಳಲ್ಲಿ ಒಟ್ಟು 5,54,034 ಕೈದಿಗಳನ್ನು ಬಂಧಿಸಲಾಗಿದೆ. ಅಮೃತಪಾಲ್ ಸಿಂಗ್ ಅವರಿಗೆ ಇನ್ನೂ ಶಿಕ್ಷೆಯಾಗದ ಕಾರಣ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಶಿಕ್ಷೆಗೊಳಗಾದವರು ಕೂಡ ಜೈಲು ಶಿಕ್ಷೆ ಮುಗಿದ ಆರು ವರ್ಷಗಳ ಬಳಿಕ ಚುನಾವಣೆಗೆ ಸ್ಪರ್ಧಿಸಬಹುದು.

ಅಮೃತಪಾಲ್ ಸಿಂಗ್ ಅವರಂತಹ ಜೈಲಿನಲ್ಲಿರುವ ವ್ಯಕ್ತಿಗಳು ತಮ್ಮ ಪ್ರತಿನಿಧಿಯ ಸಹಾಯದಿಂದ ಜೈಲಿನಿಂದಲೇ ನಾಮಪತ್ರ ಸಲ್ಲಿಸಬಹುದು. ಒಂದು ವೇಳೆ ಜೈಲಿನಲ್ಲಿರುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದರೆ, ತಜ್ಞರ ಪ್ರಕಾರ ಜೈಲಿನೊಳಗೆ ಪ್ರಮಾಣ ವಚನ ಬೋಧಿಸಲು ಅವಕಾಶವಿಲ್ಲದ ಕಾರಣ, ಪ್ರಮಾಣ ವಚನ ಸ್ವೀಕರಿಸಲು ಜೈಲಿನಿಂದ ಬಿಡುಗಡೆ ಮಾಡಬಹುದು.

ಆದರೆ ಜೈಲಿನಲ್ಲಿರುವ ವ್ಯಕ್ತಿಯ ಪರವಾಗಿ ಬೇರೆಯವರು ಮತವನ್ನು ಚಲಾಯಿಸಲು ಸಾಧ್ಯವಿಲ್ಲ. ಪತಿ ಅರವಿಂದ್ ಕೇಜ್ರಿವಾಲ್ ಬಂಧನದ ಅ ನಂತರ ಗಮನ ಸೆಳೆದಿರುವ ಸುನೀತಾ ಕೇಜ್ರಿವಾಲ್, ಎಎಪಿ ಪರ ಪ್ರಚಾರ ಮಾಡಲಿದ್ದಾರೆ.

ಪ್ರಜಾಪ್ರತಿನಿಧಿ ಕಾಯಿದೆ 1951ರ ಸೆಕ್ಷನ್ 62 (5) ಪ್ರಕಾರ ಯಾವುದೇ ವ್ಯಕ್ತಿ ಪೊಲೀಸರ ಕಾನೂನುಬದ್ಧ ವಶದಲ್ಲಿದ್ದರೆ ಅಥವಾ ಜೈಲಿನಲ್ಲಿ ಬಂಧಿಯಾಗಿದ್ದಲ್ಲಿ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ.

Continue Reading

ದೇಶ

Trinamool Congress: ಮಮತಾ ಬ್ಯಾನರ್ಜಿಯನ್ನು ಅರೆಸ್ಟ್‌ ಮಾಡಿ; ಟಿಎಂಸಿ ಉಗ್ರ ಸಂಘಟನೆ ಎಂದು ಘೋಷಿಸಿ-ಬಿಜೆಪಿ ಆಗ್ರಹ

Trinamool Congress: ಸಂದೇಶ್‌ಖಲಿಯಲ್ಲಿ ಶೇಖ್‌ ಶಹಜಾನ್‌ಗೆ ಸೇರಿದ ಎರಡು ಕಟ್ಟಡಗಳ ಮೇಲೆ ಶುಕ್ರವಾರ ಸಿಬಿಐ ದಾಳಿ ನಡೆಸಿತ್ತು. ದಾಳಿ ವೇಳೆ ಸಿಬಿಐ ಮೂರು ವಿದೇಶಿ ನಿರ್ಮಿತ ಬಂದೂಕು, ಒಂದು ಪಿಸ್ತೂಲ್‌, ಒಂದು ಸ್ವದೇಶಿ ನಿರ್ಮಿತ ಪಿಸ್ತೂಲ್‌, ಪೊಲೀಸ್‌ ಪಿಸ್ತೂಲ್‌, ಒಂದು ನಾಡ ಬಂದೂಕು, 120 ಬುಲೆಟ್ಸ್ ಸೇರದಂತೆ ಅನೇಕ ಆಕ್ರಮಣಕಾರಿ ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳು ಸೀಜ್‌ ಮಾಡಿದ್ದರು.

VISTARANEWS.COM


on

By

Koo

ಪಶ್ಚಿಮ ಬಂಗಾಳ: ಸಂದೇಶ್‌ಖಲಿಯಲ್ಲಿ ತೃಣಮೂಲ ಕಾಂಗ್ರೆಸ್‌(Trinamool Congress)ನ ಉಚ್ಛಾಟಿತ ನಾಯಕ ಶೇಖ್‌ ಶಹಜಾನ್‌ (Sheikh Shahajan) ನಿವಾಸದಲ್ಲಿ ವಿದೇಶಿ ನಿರ್ಮಿತ ಪಿಸ್ತೂಲ್‌ ಸೇರಿದಂತೆ ಅನೇಕ ಶಸ್ತ್ರಾಸ್ತ್ರ ಪತ್ತೆಯಾಗಿರುವ ಬೆನ್ನಲ್ಲೇ ಬಿಜೆಪಿ (BJP) ಇದೇ ವಿಚಾರವನ್ನಿಟ್ಟುಕೊಂಡು ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamatha Banarjee)ಯವರನ್ನು ತಕ್ಷಣ ಅರೆಸ್ಟ್‌ ಮಾಡಿ, ತೃಣಮೂಲ ಕಾಂಗ್ರೆಸ್‌ ಅನ್ನು ಉಗ್ರ ಸಂಘಟನೆ ಎಂದು ಘೋಷಿಸುವಂತೆ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ಮುಖಂಡ ಸುವೆಂದು ಅಧಿಕಾರಿ ಒತ್ತಾಯಿಸಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸ್ವಪಕ್ಷ ನಾಯಕರು ಸ್ಫೋಟಕ, ಶಸ್ತ್ರಾಸ್ತ್ರಗಳ ಹೊಂದಿದ್ದು, ದೇಶ ವಿರೋಧಿ ಚಟುವಟಿಕೆಗೆ ಕುಮ್ಮಕ್ಕೂ ನೀಡುತ್ತಿರುವುದು ಸಾಬೀತಾಗಿರುವಾಗ ಮಮತಾ ಬ್ಯಾನರ್ಜಿಯವರು ಸಿಎಂ ಆಗಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದಾರೆ. ಅಲ್ಲದೇ ಸ್ವತಃ ಮಮತಾ ಅವರೇ ಶೇಖ್‌ ನಂತಹ ಭಯೋತ್ಪಾದಕರಿಗೆ ಬೆಂಬಲವಾಗಿ ನಿಂತಿದ್ದಾರೆ. ಸಂದೇಶ್‌ಖಲಿಯಲ್ಲಿ ಸಿಕ್ಕಿರುವ ಎಲ್ಲಾ ಶಸ್ತ್ರಾಸ್ತ್ರಗಳು ವಿದೇಶಿ ನಿರ್ಮಿತ. ಅಲ್ಲದೇ ಇವೆಲ್ಲಾ ಅಂತಾರಾಷ್ಟ್ರೀಯ ಉಗ್ರರು ಬಳಸುವಂತ ಶಸ್ತ್ರಾಸ್ತ್ರಗಳಾಗಿವೆ. ಹೀಗಾಗಿ ಇಡೀ ತೃಣಮೂಲ ಕಾಂಗ್ರೆಸ್‌ ಪಕ್ಷವನ್ನೇ ಉರಗ ಸಂಘಟನೆ ಎಂದು ಘೋಷಿಸಬೇಕೆಂದು ಅವರು ಆಗ್ರಹಿಸಿದರು.

ಪಶ್ಚಿಮ ಬಂಗಾಳ ಉಗ್ರರಿಗೆ ಸ್ವರ್ಗತಾಣವಾಗಿದೆ. ಖಾದಿಕುಲ್‌, ಈಗ್ರಾಗಳಲ್ಲಿ ನಡೆದ ಹಿಂಸಾಚಾರದ ಮೂಲಕ ಜನ ಟ್ರೈಲರ್‌ ಅಷ್ಟೇ ನೋಡಿದ್ದರು. ಆದರೆ ಈ ಸಂದೇಶ್‌ಖಲಿಯಲ್ಲಿ ದೊರೆತಿರುವ ಆರ್‌ಡಿಎಕ್ಸ್‌ ಮತ್ತು ಮಾರಣಾಂತಿಕ ಸಾಧನಗಳನ್ನು ಪೂರ್ತಿ ಸಿನಿಮಾವನ್ನೇ ಜನರಿಗೆ ತೋರಿಸುತ್ತಿದೆ. ಈ ಘಟನೆಗೆ ಸಂಪೂರ್ಣವಾಗಿ ಮಮತಾ ಬ್ಯಾನರ್ಜಿಯವರೇ ಜವಾಬ್ದಾರರು. ಅವರನ್ನು ಮೊದಲು ಬಂಧಿಸಿ ನಂತರ ಅವರ ಪಕ್ಷವನ್ನು ಉಗ್ರ ಸಂಘಟನೆ ಎಂದು ಘೋಷಿಸಬೇಕು ಎಂದು ಅಧಿಕಾರಿ ಕಿಡಿ ಕಾರಿದರು.

ಸಿಬಿಐ ದಾಳಿ ಏನು ಸಿಕ್ಕಿತ್ತು?

ಸಂದೇಶ್‌ಖಲಿಯಲ್ಲಿ ಶೇಖ್‌ ಶಹಜಾನ್‌ಗೆ ಸೇರಿದ ಎರಡು ಕಟ್ಟಡಗಳ ಮೇಲೆ ಶುಕ್ರವಾರ ಸಿಬಿಐ ದಾಳಿ ನಡೆಸಿತ್ತು. ಕಳೆದ ಜನವರಿಯಲ್ಲಿ ಇಡಿ ಅಧಿಕಾರಿಗಳ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಹಿನ್ನೆಲೆ ಶಹಜಾನ್‌ ಮೇಲೆ ಈ ರೇಡ್‌ ನಡೆಸಲಾಗಿತ್ತು. ದಾಳಿ ವೇಳೆ ಸಿಬಿಐ ಮೂರು ವಿದೇಶಿ ನಿರ್ಮಿತ ಬಂದೂಕು, ಒಂದು ಪಿಸ್ತೂಲ್‌, ಒಂದು ಸ್ವದೇಶಿ ನಿರ್ಮಿತ ಪಿಸ್ತೂಲ್‌, ಪೊಲೀಸ್‌ ಪಿಸ್ತೂಲ್‌, ಒಂದು ನಾಡ ಬಂದೂಕು, 120 ಬುಲೆಟ್ಸ್ ಸೇರದಂತೆ ಅನೇಕ ಆಕ್ರಮಣಕಾರಿ ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳು ಸೀಜ್‌ ಮಾಡಿದ್ದರು.

ಇದನ್ನೂ ಓದಿ: Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!

ಟಿಎಂಸಿ ಏನು ಹೇಳಿತ್ತು?

ಶೇಖ್‌ ಶಹಜಾನ್‌ ನಿವಾಸದಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗುತ್ತಿದ್ದಂತೆ ಸ್ಪಷ್ಟನೆ ಕೊಟ್ಟಿರುವ ಟಿಎಂಸಿ ಮುಖಂಡ ಕುನಾಲ್‌ ಘೋಷ್‌, ಇದು ಪ್ರತಿಪಕ್ಷ ನಾಯಕರ ಸಂಚು. ಇದುವರೆಗೆ ಸಿಬಿಐ ದಾಳಿಯಲ್ಲಿ ಸೀಜ್‌ ಮಾಡಿರುವ ವಸ್ತುಗಳ ಬಗ್ಗೆ ಅಧಿಕೃತವಾಗಿ ಮಾಹಿತಿ ಕೊಟ್ಟಿಲ್ಲ. ಇದು ರಾಜಕೀಯ ಲಾಭಕ್ಕಾಗಿ ಪ್ರತಿಪಕ್ಷ ಮಾಡುತ್ತಿರುವ ಸುಳ್ಳು ಆರೋಪ ಎಂದಿದ್ದಾರೆ.

Continue Reading
Advertisement
mobile blast woman death
ಕ್ರೈಂ6 mins ago

Mobile Blast: ಬೈಕ್‌ ಚಲಾಯಿಸುತ್ತಿದ್ದಾಗ ಮೊಬೈಲ್‌ ಸ್ಫೋಟ, ಡಿವೈಡರ್‌ಗೆ ಗುದ್ದಿ ಮಹಿಳೆ ಸಾವು

Randeep Surjewala
ಕರ್ನಾಟಕ35 mins ago

Randeep Surjewala: ಕನ್ನಡಿಗರ ತೆರಿಗೆ ಹಣದಲ್ಲಿ ಸುರ್ಜೇವಾಲಾ ಟ್ರಿಪ್;‌ ಕೆರಳಿ ಕೆಂಡವಾದ ಬಿಜೆಪಿ!

Murder case in dharwad
ಕ್ರೈಂ41 mins ago

Murder case: ಹೆಂಡ್ತಿ ಮೇಲೆ ಸಂಶಯ; ಕುಡಿದು ಬಂದು ಕೊಡಲಿಯಿಂದ ಕೊಚ್ಚಿ ಕೊಂದ

miss universe Buenos Aires
ವಿದೇಶ46 mins ago

Miss Universe Buenos Aires: ಈಕೆ ಬ್ಯೂನಸ್‌ ಐರಿಸ್‌ ವಿಶ್ವ ಸುಂದರಿ; ಇವಳ ವಯಸ್ಸು ನೀವೇ ಊಹಿಸಿ!

Gurucharan Singh Taarak Mehta Ka Ooltah Chashmah actor missing
ಕಿರುತೆರೆ60 mins ago

Gurucharan Singh: ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಖ್ಯಾತಿಯ ನಟ ನಿಗೂಢ ನಾಪತ್ತೆ

snake bite
ಬೆಂಗಳೂರು ಗ್ರಾಮಾಂತರ1 hour ago

Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ

MDH, Everest Spices
ದೇಶ1 hour ago

MDH, Everest Spices: ಭಾರತದ 527 ಆಹಾರ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಕೆಮಿಕಲ್‌ ಪತ್ತೆ

Neha Murder Case neha And fayas
ಹುಬ್ಬಳ್ಳಿ2 hours ago

Neha Murder case : ನ್ಯಾಯಾಧೀಶರ ಎದುರೆ ನೇಹಾ ಕೊಲೆ ಆರೋಪಿ ಫಯಾಜ್‌ನ DNA ಮಾದರಿ ಸಂಗ್ರಹ!

Lok Sabha Election-2024
Lok Sabha Election 20242 hours ago

Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

gold rate today beauty
ಚಿನ್ನದ ದರ2 hours ago

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

road Accident in kolar evm
ಕೋಲಾರ2 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ9 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

ಟ್ರೆಂಡಿಂಗ್‌