ಇಬ್ಬರು ಮಕ್ಕಳನ್ನು ಕೊಂದ ಪ್ರಕರಣ; ಮತ್ತೊಬ್ಬ ಆರೋಪಿಯ ಎನ್‌ಕೌಂಟರ್‌ ಮಾಡಬೇಡಿ ಎಂದ ತಂದೆ - Vistara News

ದೇಶ

ಇಬ್ಬರು ಮಕ್ಕಳನ್ನು ಕೊಂದ ಪ್ರಕರಣ; ಮತ್ತೊಬ್ಬ ಆರೋಪಿಯ ಎನ್‌ಕೌಂಟರ್‌ ಮಾಡಬೇಡಿ ಎಂದ ತಂದೆ

ಉತ್ತರ ಪ್ರದೇಶದ ಬದೌನ್‌ನಲ್ಲಿ ನಡೆದ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಈತನು ಕೊಲೆಗಾರ ಸಾಜಿದ್‌ನ ತಮ್ಮ ಸಹೋದರ ಎಂದು ತಿಳಿದುಬಂದಿದೆ.

VISTARANEWS.COM


on

Javed
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಉತ್ತರ ಪ್ರದೇಶದ ಬದೌನ್‌ನಲ್ಲಿ (Badaun Murder Case) ಇಬ್ಬರು ಮಕ್ಕಳನ್ನು ಭೀಕರವಾಗಿ ಹತ್ಯೆಗೈದ ಕ್ಷೌರಿಕ ಸಾಜಿದ್‌ನನ್ನು ಪೊಲೀಸರು ಎನ್‌ಕೌಂಟರ್‌ ಮಾಡಿದ ಬೆನ್ನಲ್ಲೇ ಸಾಜಿದ್‌ನ (Sajid) ಸಹೋದರ ಮೊಹಮ್ಮದ್ ಜಾವೇದ್‌ನನ್ನು‌ (Mohammed Javed) ಕೂಡ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮೊಹಮ್ಮದ್‌ ಜಾವೇದ್‌ ಕೂಡ ಎರಡನೇ ಆರೋಪಿಯಾಗಿದ್ದು, ಈತನನ್ನು ಪೊಲೀಸರು ಎನ್‌ಕೌಂಟರ್‌ ಮಾಡಿಲ್ಲ. ಆರೋಪಿಯೇ ಪೊಲೀಸರಿಗೆ ಶರಣಾಗಿದ್ದು, ಭೀಕರ ಕೃತ್ಯ ಎಸಗಲು ಕಾರಣವೇನು ಎಂಬುದನ್ನು ತಿಳಿಯಲು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಈತನ್ನು ಎನ್‌ಕೌಂಟರ್‌ ಮಾಡಬೇಡಿ, ಜೀವಂತವಾಗಿ ಹಿಡಿದು ವಿಚಾರಣೆ ನಡೆಸಿ. ನನ್ನ ಮಕ್ಕಳನ್ನು ಕೊಂದಿದ್ದಕ್ಕೆ ಕಾರಣ ಪತ್ತೆ ಹಚ್ಚಿ ಎಂದು ಮೃತ ಮಕ್ಕಳ ತಂದೆ ಪೊಲೀಸರಿಗೆ ಮನವಿ ಮಾಡಿದ್ದರು.

11 ವರ್ಷದ ಆಯುಷ್‌ ಹಾಗೂ 6 ವರ್ಷದ ಅಹಾನ್‌ನನ್ನು ಕೊಂದ ಸಾಜಿದ್‌ನನ್ನು ಪೊಲೀಸರು ಎನ್‌ಕೌಂಟರ್‌ ಮಾಡಿದ ಬಳಿಕ ಮೊಹಮ್ಮದ್‌ ಜಾವೇದ್‌ ತಲೆಮರೆಸಿಕೊಂಡಿದ್ದ. ಆದರೆ, ನಿನ್ನನ್ನು ಎನ್‌ಕೌಂಟರ್‌ ಮಾಡುವುದಿಲ್ಲ, ಶರಣಾಗು ಎಂದು ಪೊಲೀಸರು ಮನವಿ ಮಾಡಿದ್ದರು. ಅದರಂತೆ, ಆರೋಪಿ ಮೊಹಮ್ಮದ್‌ ಜಾವೇದ್ ಬರೇಲಿಯ ಬರದಾರಿಯಲ್ಲಿರುವ ಸ್ಯಾಟಲೈಟ್‌ ಪೊಲೀಸ್‌ ಠಾಣೆಯಲ್ಲಿ ಶರಣಾಗಿದ್ದಾನೆ. “ಮೊಹಮ್ಮದ್‌ ಜಾವೇದ್‌ನನ್ನು ಬರೇಲಿಯಿಂದ ಬದೌನ್‌ಗೆ ಕರೆತರಲಾಗುತ್ತಿದೆ. ಭೀಕರ ಹತ್ಯೆಗೆ ಏನು ಕಾರಣ ಎಂಬ ಕುರಿತು ವಿಚಾರಣೆ ನಡೆಸಲಾಗುತ್ತದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಗಾರ ಸಾಜಿದ್, ಸಂತ್ರಸ್ತರ ಮನೆಯ ಎದುರು ಕ್ಷೌರದ ಅಂಗಡಿಯನ್ನು ನಡೆಸುತ್ತಿದ್ದ. ಮಕ್ಕಳ ತಂದೆ ವಿನೋದ್ ಅವರಿಗೆ ಆತನ ಪರಿಚಯವಿತ್ತು. ಮಂಗಳವಾರ (ಮಾರ್ಚ್‌ 19) ಸಂಜೆ ಸಾಜಿದ್, ವಿನೋದ್‌ ಮನೆಗೆ ಭೇಟಿ ನೀಡಿದ್ದ. ಆಗ ವಿನೋದ್ ಮನೆಯಲ್ಲಿ ಇರಲಿಲ್ಲ. ವಿನೋದ್ ಅವರ ಪತ್ನಿ ಸಂಗೀತಾ ಅವರಿಗೆ, ತನ್ನ ಗರ್ಭಿಣಿ ಪತ್ನಿ ಆಸ್ಪತ್ರೆಯಲ್ಲಿದ್ದು, ಆಕೆಯ ಚಿಕಿತ್ಸೆಗೆ ₹5,000 ಅಗತ್ಯವಿದೆ ಎಂದು ಸಾಜಿದ್‌ ಹೇಳಿದ್ದಾನೆ. ಸಂಗೀತಾ ಪತಿ ವಿನೋದ್‌ಗೆ ಫೋನ್ ಮಾಡಿದ್ದಾಳೆ. ಹಣ ಕೊಡುವಂತೆ ವಿನೋದ್‌ ಪತ್ನಿಗೆ ಸೂಚಿಸಿದ್ದಾರೆ.

ಸಂಗೀತಾ ಹಣವನ್ನು ಸಾಜಿದ್‌ಗೆ ಕೊಟ್ಟು, ಆತನಿಗೆ ಚಹಾ ಮಾಡಲೆಂದು ಕಿಚನ್‌ಗೆ ತೆರಳಿದ್ದರು. ಈ ಸಂದರ್ಭದಲ್ಲಿ ಆತ ಮೂವರು ಮಕ್ಕಳ ಮೇಲೆ ದಾಳಿ ನಡೆಸಿದ್ದ. ಮೊದಲು ಸಾಜಿದ್, ವಿನೋದ್‌ನ ಹಿರಿಯ ಮಗ 11 ವರ್ಷದ ಆಯುಷ್‌ಗೆ ಮೇಲಿನ ಮಹಡಿಯಲ್ಲಿರುವ ಆತನ ತಾಯಿಯ ಬ್ಯೂಟಿ ಸಲೂನ್ ಅನ್ನು ತೋರಿಸಲು ಕೇಳಿದ್ದಾನೆ. ಹುಡುಗ ಅವನನ್ನು ಎರಡನೇ ಮಹಡಿಗೆ ಕರೆದೊಯಿದ್ದ. ಎರಡನೇ ಮಹಡಿಯಲ್ಲಿ ಸಾಜಿದ್ ಲೈಟ್ ಆಫ್ ಮಾಡಿ ಆಯುಷ್ ಕುತ್ತಿಗೆಯನ್ನು ಚಾಕುವಿನಿಂದ ಸೀಳಿದ್ದಾನೆ.

ಅಷ್ಟರಲ್ಲಿ ಆಯುಷ್‌ನ ಕಿರಿಯ ಸಹೋದರ ಅಹಾನ್ (6) ಒಳಗೆ ಬಂದಿದ್ದು, ಅಹಾನ್‌ನನ್ನು ಕೂಡ ಸಾಜಿದ್ ಹಿಡಿದು ಅದೇ ರೀತಿಯಲ್ಲಿ ಕೊಂದಿದ್ದಾನೆ. ಅದನ್ನು ಇನ್ನೊಬ್ಬ ಸಹೋದರ ಪಿಯೂಷ್ ನೋಡಿದ್ದಾನೆ. ಪಿಯೂಷ್‌ ಮೇಲೆ ಸಾಜಿದ್‌ ದಾಳಿ ಮಾಡುವಷ್ಟರಲ್ಲಿ ಏಳು ವರ್ಷದ ಆ ಮಗು ಓಡಿಹೋಗಿ ಅಡಗಿಕೊಂಡಿದ್ದಾನೆ. ಆಯುಷ್ ಮತ್ತು ಅಹಾನ್ ಸಾವನ್ನಪ್ಪಿದ್ದಾರೆ. ಪಿಯೂಷ್ ಸಣ್ಣ ಗಾಯಗಳಾಗಿವೆ.

ಕೊಲೆಯಲ್ಲಿ ಜಾವೇದ್‌ ಪಾತ್ರವೇನು?

ಕೊಲೆಯ ನಂತರ ಹೊರಗೆ ಬೈಕ್‌ನೊಂದಿಗೆ ಕಾಯುತ್ತಿದ್ದ ತನ್ನ ಸಹೋದರ ಜಾವೇದ್‌ನೊಂದಿಗೆ ಸಾಜಿದ್ ಪರಾರಿಯಾಗಿದ್ದ. ಸಾಜಿದ್ ಮತ್ತು ಜಾವೇದ್ ಇಬ್ಬರೂ ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಪೊಲೀಸರು ಸಾಜಿದ್‌ನ ಬೆನ್ನು ಹತ್ತಿದ್ದು, ಆತ ಸಿಕ್ಕಿಬಿದ್ದಾಗ ಪೊಲೀಸರ ಗನ್‌ ಕಸಿದುಕೊಂಡು ಅವರ ಮೇಲೆ ಗುಂಡು ಹಾರಿಸಲು ಯತ್ನಿಸಿದ್ದ. ಪೊಲೀಸರು ಗುಂಡು ಹಾರಿಸಿ ಆತನನ್ನು ಕೊಂದುಹಾಕಿದ್ದಾರೆ. ಇನ್ಸ್‌ಪೆಕ್ಟರ್‌ಗೆ ಗುಂಡು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಜಾವೇದ್ ಇನ್ನೂ ನಾಪತ್ತೆಯಾಗಿದ್ದಾನೆ.

ಇದನ್ನೂ ಓದಿ: Double Murder: ಕೋಳಿ ಕತ್ತು ಕೊಯ್ದಂತೆ ಮಕ್ಕಳನ್ನು ಸಾಯಿಸಿದ ಕ್ಷೌರಿಕ ಸಾಜಿದ್;‌ ಪೊಲೀಸರಿಂದ ಎನ್‌ಕೌಂಟರ್‌

ಪೊಲೀಸರು ಬಂಧಿಸಿದ ಬಳಿಕ ಜಾವೇದ್‌ ಮಾತನಾಡಿರುವ ವಿಡಿಯೊ ಲಭ್ಯವಾಗಿದೆ. “ನಾನು ಯಾವ ತಪ್ಪನ್ನೂ ಮಾಡಿಲ್ಲ. ನನಗೆ ಬೇಕಾದರೆ ಹೊಡೆಯಿರಿ” ಎಂಬುದಾಗಿ ಹೇಳಿರುವ ವಿಡಿಯೊ ಈಗ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Rahul Gandhi: ರಾಹುಲ್‌ ಗಾಂಧಿಗೆ “ಮೊದಲು ರಾಯ್‌ಬರೇಲಿಯಿಂದ ಗೆಲ್ಲಿ…” ಎಂದ ಚೆಸ್‌ ದಂತಕಥೆ ಗ್ಯಾರಿ ಕಾಸ್ಪರೋವ್!

Rahul Gandhi: ಇತ್ತೀಚೆಗಷ್ಟೇ, ಲೋಕಸಭಾ ಚುನಾವಣಾ ಪ್ರಚಾರದ ವೇಳೆ ರಾಹುಲ್‌ ಗಾಂಧಿ ತಮ್ಮ ಮೊಬೈಲ್ ಫೋನ್‌ನಲ್ಲಿ ಚೆಸ್ ಆಡುತ್ತಿರುವ ವೀಡಿಯೊವನ್ನು ಕಾಂಗ್ರೆಸ್ ಪೋಸ್ಟ್ ಮಾಡಿತ್ತು. ಈ ವಿಡಿಯೋವನ್ನು ಬಳಕೆದಾರರೊಬ್ಬರು ಕಾಸ್ಪರೋವ್‌ಗೆ ಟ್ಯಾಗ್‌ ಮಾಡಿದ್ದರು. ವೀಡಿಯೊದಲ್ಲಿ ರಾಹುಲ್‌, ಕಾಸ್ಪರೋವ್ ಅವರನ್ನು ತಮ್ಮ ನೆಚ್ಚಿನ ಚೆಸ್ ಆಟಗಾರ ಎಂದು ಹೇಳಿದ್ದರು. ಚೆಸ್‌ ಆಟ ಮತ್ತು ರಾಜಕೀಯದ ನಡುವಿರುವ ಸಾಮ್ಯತೆಗಳ ಬಗ್ಗೆ ಮಾತಾಡಿದ್ದರು.

VISTARANEWS.COM


on

rahul gandhi gary Kasparov
Koo

ಹೊಸದಿಲ್ಲಿ: ಖ್ಯಾತ ಚೆಸ್ ಆಟಗಾರ (Chess legend) ಗ್ಯಾರಿ ಕಾಸ್ಪರೋವ್ (Gary Kasparov) ಅವರು “ಚೆಸ್‌ನಲ್ಲಿ ಅಗ್ರಸ್ಥಾನಕ್ಕೆ ಸವಾಲು ಹಾಕುವ ಮೊದಲು ರಾಯ್ ಬರೇಲಿಯನ್ನು *Rae Bareli) ಮೊದಲು ಗೆಲ್ಲಿರಿ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಹೇಳಿದ್ದಾರೆ. ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ (Social Media X) ಬಳಕೆದಾರರ ಜೊತೆ ನಡೆದ ಒಂದು ಚಾಟ್‌ ವೇಳೆ ಅವರ ಈ ಮಾತು ಬಂತು.

2005ರಲ್ಲಿ ಸ್ಪರ್ಧಾತ್ಮಕ ಚೆಸ್‌ನಿಂದ ನಿವೃತ್ತರಾದ ರಷ್ಯಾದ ಚೆಸ್‌ ದಂತಕಥೆ ಎನಿಸಿದ ಕಾಸ್ಪರೋವ್‌, ಶುಕ್ರವಾರ ಎಕ್ಸ್‌ನಲ್ಲಿ ಬಳಕೆದಾರರ ಪೋಸ್ಟ್‌ಗೆ ಪ್ರತಿಕ್ರಿಯಿಸುತ್ತಿದ್ದರು. ಕಾಸ್ಪರೋವ್‌ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಕಟು ವಿಮರ್ಶಕರಾಗಿದ್ದು, ಇದಕ್ಕಾಗಿ ಆಡಳಿತದ ಆಕ್ರೋಶ ಎದುರಿಸಿ ದೇಶದಿಂದ ಪಲಾಯನ ಮಾಡಿ ಕ್ರೊಯೇಷಿಯಾದಲ್ಲಿ ನೆಲೆಸಿದ್ದಾರೆ.

ಇತ್ತೀಚೆಗಷ್ಟೇ, ಲೋಕಸಭಾ ಚುನಾವಣಾ ಪ್ರಚಾರದ ವೇಳೆ ರಾಹುಲ್‌ ಗಾಂಧಿ ತಮ್ಮ ಮೊಬೈಲ್ ಫೋನ್‌ನಲ್ಲಿ ಚೆಸ್ ಆಡುತ್ತಿರುವ ವೀಡಿಯೊವನ್ನು ಕಾಂಗ್ರೆಸ್ ಪೋಸ್ಟ್ ಮಾಡಿತ್ತು. ಈ ವಿಡಿಯೋವನ್ನು ಬಳಕೆದಾರರೊಬ್ಬರು ಕಾಸ್ಪರೋವ್‌ಗೆ ಟ್ಯಾಗ್‌ ಮಾಡಿದ್ದರು. ವೀಡಿಯೊದಲ್ಲಿ ರಾಹುಲ್‌, ಕಾಸ್ಪರೋವ್ ಅವರನ್ನು ತಮ್ಮ ನೆಚ್ಚಿನ ಚೆಸ್ ಆಟಗಾರ ಎಂದು ಹೇಳಿದ್ದರು. ಚೆಸ್‌ ಆಟ ಮತ್ತು ರಾಜಕೀಯದ ನಡುವಿರುವ ಸಾಮ್ಯತೆಗಳ ಬಗ್ಗೆ ಮಾತಾಡಿದ್ದರು.

“…ಒಮ್ಮೆ ನೀವು ಆಟದಲ್ಲಿ ಸ್ವಲ್ಪ ಉತ್ತಮಗೊಂಡರೆ, ಎದುರಾಳಿಯ ಕಾಯಿಗಳು ವಾಸ್ತವವಾಗಿ ನಿಮ್ಮ ಇಚ್ಛೆಯಂತೆಯೇ ಕಾರ್ಯನಿರ್ವಹಿಸುತ್ತವೆ” ಎಂದು ರಾಹುಲ್‌ ಗಾಂಧಿ ಚದುರಂಗ ಮತ್ತು ರಾಜಕೀಯವನ್ನು ಹೋಲಿಸಿದ್ದರು.

ಈ ವಿಡಿಯೋಗೆ ಉತ್ತರಿಸಿದ ಕಾಸ್ಪರೋವ್, “ನೀವು ಅಗ್ರಸ್ಥಾನಕ್ಕಾಗಿ ಸವಾಲು ಹಾಕುವ ಮೊದಲು ಮೊದಲು ರಾಯ್‌ಬರೇಲಿಯಿಂದ ಗೆಲ್ಲಬೇಕು ಎಂದು ಸಾಂಪ್ರದಾಯಿಕವಾಗಿ ಅಪೇಕ್ಷಿಸಲಾಗುತ್ತದೆ” ಎಂದಿದ್ದರು. ನಂತರ ಮತ್ತೊಂದು ಪೋಸ್ಟ್‌ ಹಾಕಿ, ತಮ್ಮ ಸಣ್ಣ ಜೋಕ್‌ ರಾಜಕೀಯ ಪರಿಣತಿಯದ್ದಲ್ಲ ಎಂದಿದ್ದಾರೆ.

“ನನ್ನ ಈ ಚಿಕ್ಕ ಜೋಕ್‌, ಭಾರತೀಯ ರಾಜಕೀಯದಲ್ಲಿ ಪರಿಣತಿಯಿಂದ ಬಂದಿದ್ದಲ್ಲ. ಆದರೆ ಹಿಂದೊಮ್ಮೆ ನನ್ನನ್ನು “ಸಾವಿರ ಕಣ್ಣುಗಳ ದೈತ್ಯ” ಎಂದು ಹೆಸರಿಸಲಾಗಿತ್ತು. ಆ ಹಿನ್ನೆಲೆಯಲ್ಲಿ, ರಾಜಕಾರಣಿಯೊಬ್ಬರು ನನ್ನ ಪ್ರೀತಿಯ ಆಟದಲ್ಲಿ ತೊಡಗುವುದನ್ನು ನೋಡಲು ನನಗೆ ಸಂತೋಷವಾಗುತ್ತದೆ” ಎಂದಿದ್ದಾರೆ ಅವರು.

“@Kasparov63 ಮತ್ತು @vishy64theking ಅವರು ಬೇಗನೆ ನಿವೃತ್ತರಾದರು ಮತ್ತು ನಮ್ಮ ಕಾಲದ ಶ್ರೇಷ್ಠ ಚೆಸ್ ಪ್ರತಿಭೆಯನ್ನು ಎದುರಿಸಬೇಕಾಗಿಲ್ಲ” ಎಂದು X ಬಳಕೆದಾರರು ಋಾಹುಲ್‌ ಗಾಂಧಿಯವರ ಪೋಸ್ಟ್‌ಗೆ ಕಾಮೆಂಟ್‌ನಲ್ಲಿ ಹೇಳಿದ್ದರು.

ರಾಹುಲ್‌ ಗಾಂಧಿ ಶುಕ್ರವಾರ ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ನಾಮಪತ್ರ ಸಲ್ಲಿಸಿದರು. ಅವರು ಕೇರಳದ ವಯನಾಡಿನಿಂದಲೂ ಸ್ಪರ್ಧಿಸುತ್ತಿದ್ದಾರೆ. ಮಾಜಿ ವಿಶ್ವ ನಂಬರ್ ಒನ್ ಮತ್ತು ವಿಶ್ವ ಚಾಂಪಿಯನ್ ಚೆಸ್‌ ಆಟಗಾರ ಕಾಸ್ಪರೋವ್ 1985ರಲ್ಲಿ 22ನೇ ವಯಸ್ಸಿನಲ್ಲಿ ಅತ್ಯಂತ ಕಿರಿಯ ವಿಶ್ವ ಚಾಂಪಿಯನ್ ಆದರು. ಈಗ ರಾಜಕೀಯ ಕಾರ್ಯಕರ್ತರಾಗಿದ್ದಾರೆ.

ಅಪ್ರತಿಮ ಆಟಗಾರ, ಭಾರತೀಯ ಶ್ರೇಷ್ಠ ವಿಶ್ವನಾಥನ್ ಆನಂದ್ ಅವರ ಸಮಕಾಲೀನರು. ಇತ್ತೀಚೆಗೆ, 17 ವರ್ಷದ ಡಿ. ಗುಕೇಶ್ ಅವರು ವಿಶ್ವ ಪ್ರಶಸ್ತಿಗೆ ಅತಿ ಕಿರಿಯ ಚಾಲೆಂಜರ್ ಎಂಬ ಕಾಸ್ಪರೋವ್ ಅವರ ದಾಖಲೆಯನ್ನು ಮೀರಿಸಿದರು. ಆಗ ಕಾಸ್ಪರೋವ್‌ ಅವರು Xನಲ್ಲಿ ಗುಕೇಶ್‌ಗೆ ಅಭಿನಂದನಾ ಪೋಸ್ಟ್ ಹಾಕಿದ್ದರು. ಅವರು ಗುಕೇಶನನ್ನು “ಭಾರತೀಯ ಭೂಕಂಪ” ಎಂದು ಬಣ್ಣಿಸಿದ್ದರು.

ಇದನ್ನೂ ಓದಿ: Rahul Gandhi : ಮಹಾತ್ಮ ರಾಹುಲ್​, ಕುತಂತ್ರಿ ಗಾಂಧೀಜಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Continue Reading

Lok Sabha Election 2024

Lok Sabha Election 2024: ಚುನಾವಣಾ ಪ್ರಚಾರದ ವೇಳೆ ಮಹಿಳೆಯ ಕೆನ್ನೆಗೆ ಹೊಡೆದ ಕಾಂಗ್ರೆಸ್‌ ಅಭ್ಯರ್ಥಿ; ವಿಡಿಯೊ ಇಲ್ಲಿದೆ

Lok Sabha Election 2024: ದೇಶದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರಿದೆ. ಈ ಮಧ್ಯೆ ಪ್ರಚಾರದ ವೇಳೆ ನಾಯಕರು ಎಡವಟ್ಟು ಮಾಡಿಕೊಂಡು ವಿವಾದ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಇತ್ತೀಚಿನ ಉದಾಹರಣೆ ಕಾಂಗ್ರೆಸ್‌ ನಾಯಕ, ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಟಿ.ಜೀವನ್‌ ರೆಡ್ಡಿ. ಅರ್ಮೂರ್ ವಿಧಾನಸಭಾ ಕ್ಷೇತ್ರದ ಗ್ರಾಮವೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೀವನ್‌ ರೆಡ್ಡಿ ಇತರ ಕೆಲವು ನಾಯಕರೊಂದಿಗೆ ಪ್ರಚಾರ ನಡೆಸುತ್ತಿದ್ದಾಗ ಮಹಿಳೆಯ ಕೆನ್ನೆಗೆ ಹೊಡೆದಿದ್ದು, ವಿವಾದ ಹುಟ್ಟು ಹಾಕಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

VISTARANEWS.COM


on

Lok Sabha Election 2024
Koo

ಹೈದರಾಬಾದ್‌: ದೇಶದಲ್ಲಿ ಲೋಕಸಭಾ ಚುನಾವಣೆ (Lok Sabha Election 2024)ಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಎರಡು ಹಂತದ ಮತದಾನ ಮುಗಿದಿದ್ದು, ಮೂರನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಹೀಗಾಗಿ ರಾಜಕಾರಣಿಗಳು ಬಿರುಸಿನಿಂದ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಮಧ್ಯೆ ಕೆಲವು ನಾಯಕರು ವಿವಾದವನ್ನೂ ಮೈ ಮೇಲೆ ಎಳೆದುಕೊಳ್ಳುತ್ತಿದ್ದಾರೆ. ಅದಕ್ಕೆ ಉತ್ತಮ ಉದಾಹರಣೆ ತೆಲಂಗಾಣದ ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಟಿ.ಜೀವನ್‌ ರೆಡ್ಡಿ (T. Jeevan Reddy). ಚುನಾವಣಾ ಪ್ರಚಾರದ ಮೇಲೆ ಮಹಿಳೆಯ ಕೆನ್ನೆಗೆ ಅವರು ಹೊಡೆದಿದ್ದು, ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ (Viral Video). ಜತೆಗೆ ಅವರ ನಡೆಗೆ ವ್ಯಾಪಕ ಟೀಕೆಯೂ ವ್ಯಕ್ತವಾಗುತ್ತಿದೆ.

ಮಾಜಿ ಸಚಿವರೂ ಆದ ಜೀವನ್‌ ರೆಡ್ಡಿ ಪ್ರಚಾರದ ವೇಳೆ ಸಾರ್ವಜನಿಕವಾಗಿಯೇ ಮಹಿಳೆಯ ಕೆನ್ನೆಗೆ ಬಾರಿಸುವ ಮೂಲಕ ವಿವಾದ ಹುಟ್ಟು ಹಾಕಿದ್ದಾರೆ. ಅರ್ಮೂರ್ ವಿಧಾನಸಭಾ ಕ್ಷೇತ್ರದ ಗ್ರಾಮವೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೀವನ್‌ ರೆಡ್ಡಿ ಇತರ ಕೆಲವು ನಾಯಕರೊಂದಿಗೆ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ವಿಡಿಯೊದಲ್ಲಿ ಏನಿದೆ?

ಜೀವನ್‌ ರೆಡ್ಡಿ ಮತ್ತು ಕಾಂಗ್ರೆಸ್‌ ನಾಯಕರು ಪ್ರಚಾರ ನಡೆಸುತ್ತ ಅರ್ಮೂರ್‌ನ ಗ್ರಾಮೀಣ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಬಳಿ, ಮೇ 13ರಂದು ನಡೆಯಲಿರುವ ಚುನಾವಣೆಯಲ್ಲಿ ತಮಗೆ ಮತ ಹಾಕಬೇಕೆಂದು ಜೀವನ್‌ ರೆಡ್ಡಿ ಹೇಳಿದ್ದರು. ಆದರೆ ಆ ಮಹಿಳೆ ತಾನು ‘ಹೂವು’ ಚಿಹ್ನೆಗೆ ವೋಟು ಮಾಡುವುದಾಗಿ ತಿಳಿಸಿದ್ದರು. ಇದರಿಂದ ಸಿಟ್ಟಿಗೆದ್ದ ಜೀವನ್‌ ರೆಡ್ಡಿ ಎಲ್ಲರೆದುರೆ ಮಹಿಳೆಗೆ ಕೆನ್ನೆಗೆ ಹೊಡೆದಿದ್ದಾರೆ. ಕಾಂಗ್ರೆಸ್‌ ಮುಖಂಡರು ನೋಡುತ್ತಿರುವಂತೆಯೇ ಈ ಘಟನೆ ನಡೆದಿದ್ದು, ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮಹಿಳೆ ಹೇಳಿದ್ದೇನು?

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ್ದೆ. ಆದರೆ ಪಿಂಚಣಿ ಸಿಗುತ್ತಿಲ್ಲ ಎಂದು ಮಹಿಳೆ ಕಾರಣ ನೀಡಿ ಈ ಬಾರಿ ಬಿಜೆಪಿಗೆ ವೋಟು ಹಾಕಲಿದ್ದೇನೆ ಎಂದು ಹೇಳಿದ್ದರೆಂದು ಮೂಲಗಳು ತಿಳಿಸಿವೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಿ.ವಿನಯ್ ಕುಮಾರ್ ರೆಡ್ಡಿ ಅವರು ಅರ್ಮೂರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ನಿಜಾಮಾಬಾದ್‌ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಅರ್ಮೂರ್ ಕೂಡ ಒಂದು. ಪ್ರಸ್ತು ಇಲ್ಲಿ ಬಿಜೆಪಿಯ ಡಿ.ಅರವಿಂದ್‌ ಸಂಸದರಾಗಿದ್ದು, ಅವರ ವಿರುದ್ಧ ಜೀವನ್‌ ರೆಡ್ಡಿ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ: Narendra Modi: ಅಮೇಥಿ ಬದಲು ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ; ಓಡಬೇಡಿ ಎಂದು ವ್ಯಂಗ್ಯವಾಡಿದ ಮೋದಿ

ನೆಟ್ಟಿಗರಿಂದ ತರಾಟೆ

ಜೀವನ್‌ ರೆಡ್ಡಿ ಅವರ ನಡೆಗೆ ನೆಟ್ಟಿಗರು ಕೆಂಡ ಕಾರಿದ್ದಾರೆ. ʼʼನಾಚಿಕೆ ಇಲ್ಲದ ವ್ಯಕ್ತಿ. ಈ ಬಾರಿ ಹೀನಾಯವಾಗಿ ಸೋಲುತ್ತಾರೆʼʼ ಎಂದು ಒಬ್ಬರು ಹೇಳಿದ್ದಾರೆ. ʼʼಏನು ನಡೆಯುತ್ತಿದೆ?ʼʼ ಎಂದು ಇನ್ನೊಬ್ಬರು ಆಘಾತ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಕೆಲವರು ಜೀವನ್‌ ರೆಡ್ಡಿ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅವರು ತಮಾಷೆಗಾಗಿ ಮಾಡಿದ್ದಾರೆ. ನಿಜವಾಗಿಯೂ ಅವರು ಹೊಡೆದಿಲ್ಲ ಎಂದು ಹೇಳಿದ್ದಾರೆ. ಏನೇ ಇರಲಿ ಸಾರ್ವಜನಿಕವಾಗಿ ಹೀಗೆ ವರ್ತಿಸಿದ್ದು ತಪ್ಪು ಎನ್ನವುದು ಇನ್ನು ಹಲವರ ವಾದ. ಒಟ್ಟಿನಲ್ಲಿ ಈ ಘಟನೆ ಭಾರೀ ಸದ್ದು ಮಾಡುತ್ತಿದೆ.

Continue Reading

ವಿದೇಶ

Nijjar Killing: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಕೆನಡಾ ಪೊಲೀಸರು; ಯಾರಿವರು?

Nijjar Killing: 2023ರ ಜೂನ್‌ 18ರಂದು ಕೆನಡಾದಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೀಡಾಗಿದ್ದಾನೆ. ಇದರ ಹಿಂದೆ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಆರೋಪ ಕೂಡ ಮಾಡಿದ್ದಾರೆ. ಇದರ ಬೆನ್ನಲ್ಲೇ, ಹತ್ಯೆ ಮಾಡಿದ ಆರೋಪಿಗಳನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

VISTARANEWS.COM


on

Nijjar Killing
Koo

ಒಟ್ಟಾವ: ಖಲಿಸ್ತಾನಿ ಉಗ್ರರ ಪರವಾಗಿರುವ ಕೆನಡಾ ಸರ್ಕಾರವೀಗ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ (Hardeep Singh Nijjar) ಹತ್ಯೆಯ (Nijjar Killing) ಆರೋಪಿಗಳನ್ನು ಬಂಧಿಸಿದೆ ಎಂದು ಮಾಧ್ಯಮಗಳ ವರದಿಗಳು ತಿಳಿಸಿವೆ. ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ತಂಡದಲ್ಲಿದ್ದ ಕೆಲವು ಆರೋಪಿಗಳನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಆದರೆ, ಯಾರನ್ನು ಬಂಧಿಸಲಾಗಿದೆ ಎಂಬುದರ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ.

ಕೆನಡಾ ಸರ‍್ರೆಯಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ಹತ್ಯೆ ಮಾಡಿದವರು ಭಾರತದ ಏಜೆಂಟ್‌ಗಳು ನೇಮಿಸಿದವರೇ ಆಗಿದ್ದಾರೆ ಎಂಬುದಾಗ ಕೆನಡಾ ಆರೋಪಿಸಿದೆ. ಆದರೆ, ಹತ್ಯೆ ಮಾಡಿದ ತಂಡದ ಸದಸ್ಯರನ್ನೇ ಕೆನಡಾ ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿರುವುದು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಂತಾಗಿದೆ. ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ಕೊಂದವರು ಯಾರು? ಅವರು ಭಾರತದ ಮೂಲದವರಾ? ಅವರು ನೀಡಿದ ಮಾಹಿತಿ ಏನು ಎಂಬ ಮಾಹಿತಿಯು ಕೆನಡಾ ಪೊಲೀಸರಿಂದಲೇ ಹೊರಬರಬೇಕಿದೆ. ಹತ್ಯೆ ಮಾಡಿದ ತಂಡದವರು ಎನ್ನಲಾದ ಮೂವರನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗುತ್ತಿದೆ.

2023ರ ಜೂನ್‌ 18ರಂದು ಕೆನಡಾದಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೀಡಾಗಿದ್ದಾನೆ. ಇದರ ಹಿಂದೆ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಆರೋಪ ಕೂಡ ಮಾಡಿದ್ದಾರೆ. ಹೀಗೆ, ಕೆನಡಾವನ್ನು ಭಾರತದ ವಿರುದ್ಧ ಎತ್ತಿಕಟ್ಟಲು ಪಾಕಿಸ್ತಾನದ ಐಎಸ್‌ಐ ಇಂತಹ ಕುತಂತ್ರ ಮಾಡಿದೆ. ಆದರೆ, ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಆರೋಪವನ್ನು ತಿರಸ್ಕರಿಸುವ ಭಾರತ, ಆರೋಪಗಳಿಗೆ ಸಾಕ್ಷ್ಯ ಕೊಡಿ ಎಂದು ತಿರುಗೇಟು ನೀಡಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈಗ ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿದೆ.

“ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಕುರಿತು ನಾನು ಭಾರತದ ಜತೆ ಮಾತನಾಡಿದ್ದೇನೆ. ಆದರೆ, ಆತನ ಹತ್ಯೆಯ ಕುರಿತು ಭಾರತಕ್ಕೆ ತುಂಬ ವಾರಗಳ ಹಿಂದೆಯೇ ನಂಬಲರ್ಹ ಆರೋಪಗಳ ಕುರಿತು ಮಾಹಿತಿಯನ್ನು ಒದಗಿಸಲಾಗಿದೆ. ತುಂಬ ಗಂಭೀರವಾದ ವಿಚಾರದ ಕುರಿತು ಭಾರತ ಹಾಗೂ ಕೆನಡಾ ಒಗ್ಗೂಡಿ ಕಾರ್ಯನಿರ್ವಹಿಸುವ ಕುರಿತು ಕೂಡ ಮನವರಿಕೆ ಮಾಡಲಾಗಿದೆ. ಗಂಭೀರ ಹತ್ಯೆಯ ವಿಚಾರದಲ್ಲಿ ಭಾರತವು ನಮ್ಮ ಜತೆ ಕೈಗೂಡಿಸುತ್ತದೆ ಎಂಬ ಆಶಾಭಾವನೆಯಲ್ಲಿ ಇದ್ದೇವೆ” ಎಂದು ಜಸ್ಟಿನ್‌ ಟ್ರುಡೋ ಹೇಳಿದ್ದರು. ಆದರೆ, ಭಾರತ ಮಾತ್ರ ಸರಿಯಾದ ಸಾಕ್ಷ್ಯ ಕೊಡಿ ಎಂದು ಹೇಳಿದೆ.

ಇದನ್ನೂ ಓದಿ: Khalistan terrorist: ʼನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡವಿಲ್ಲʼ ಎಂದ ನ್ಯೂಜಿಲ್ಯಾಂಡ್‌ ಉಪಪ್ರಧಾನಿಗೇ ಬೆದರಿಕೆ ಹಾಕಿದ ಪನ್ನುನ್!‌

Continue Reading

ದೇಶ

Rohith Vemula: ರೋಹಿತ್‌ ವೇಮುಲ ದಲಿತನಲ್ಲ ಎಂದ ಪೊಲೀಸರು; ಮರು ತನಿಖೆಗೆ ‘ಕೈ’ ಸರ್ಕಾರ ಆದೇಶ!

Rohith Vemula: 2016ರ ಜನವರಿಯಲ್ಲಿ ರೋಹಿತ್‌ ವೇಮುಲ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿತ್ತು. ಆದರೆ, ಈ ಪ್ರಕರಣವನ್ನು ತೆಲಂಗಾಣ ಪೊಲೀಸರು ಈಗ ಕ್ಲೋಸ್‌ ಮಾಡಿದ್ದಾರೆ. ಈ ಕುರಿತು ಹೈಕೋರ್ಟ್‌ಗೆ ವರದಿಯನ್ನು ಸಲ್ಲಿಸಿದ್ದಾರೆ. ಆದರೆ, ರಾಜ್ಯ ಸರ್ಕಾರವು ಪ್ರಕರಣದ ಕುರಿತು ಮರು ತನಿಖೆಗೆ ಆದೇಶಿಸಿದೆ.

VISTARANEWS.COM


on

Rohith Vemula
Koo

ಹೈದರಾಬಾದ್:‌ ತೆಲಂಗಾಣದ ಹೈದರಾಬಾದ್‌ನಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ (Central University) ಹಾಸ್ಟೆಲ್‌ನಲ್ಲಿ ಪಿಎಚ್‌.ಡಿ ವಿದ್ಯಾರ್ಥಿ ರೋಹಿತ್‌ ವೇಮುಲ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವು ಈಗ ಮತ್ತೆ ಮುನ್ನೆಲೆಗೆ ಬಂದಿದೆ. ರೋಹಿತ್‌ ವೇಮುಲ (Rohith Vemula) ದಲಿತನಲ್ಲ, ಆತನ ನಿಜವಾದ ಜಾತಿ ಬಯಲಾಗುತ್ತದೆ ಎಂಬ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದಾಗಿ ಪ್ರಕರಣವನ್ನು ಕ್ಲೋಸ್‌ ಮಾಡಿರುವ ತೆಲಂಗಾಣ ಪೊಲೀಸರು ಹೈಕೋರ್ಟ್‌ಗೆ ಅಂತಿಮ ವರದಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ, ರೋಹಿತ್‌ ವೇಮುಲ ಸಾವಿನ ಪ್ರಕರಣವು ತೆಲಂಗಾಣ ಸರ್ಕಾರವು (Telangana Government) ಮರು ತನಿಖೆಗೆ ಆದೇಶಿಸಿದೆ.

2016ರ ಜನವರಿಯಲ್ಲಿ ರೋಹಿತ್‌ ವೇಮುಲ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿತ್ತು. ಆದರೆ, ಈ ಪ್ರಕರಣವನ್ನು ತೆಲಂಗಾಣ ಪೊಲೀಸರು ಈಗ ಕ್ಲೋಸ್‌ ಮಾಡಿದ್ದಾರೆ. ಈ ಕುರಿತು ಹೈಕೋರ್ಟ್‌ಗೆ ವರದಿಯನ್ನು ಸಲ್ಲಿಸಿದ್ದಾರೆ. ಆಗ ಸಿಕಂದರಾಬಾದ್‌ ಸಂಸದರಾಗಿದ್ದ ಬಂಡಾರು ದತ್ತಾತ್ರೇಯ, ವಿಧಾನ ಪರಿಷತ್‌ ಸದಸ್ಯ ಎನ್‌. ರಾಮಚಂದರ್‌ ರಾವ್‌, ವಿವಿ ಕುಲಪತಿ ಅಪ್ಪಾ ರಾವ್‌, ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಹಲವು ಎಬಿವಿಪಿ ನಾಯಕರಿಗೂ ತೆಲಂಗಾಣ ಪೊಲೀಸರು ಕ್ಲೀನ್‌ಚಿಟ್‌ ನೀಡಿದ್ದಾರೆ.

ರೋಹಿತ್‌ ವೇಮುಲ ಸಾವಿನ ಕುರಿತು ಮತ್ತೆ ತನಿಖೆ ನಡೆಸಲು ತೆಲಂಗಾಣ ಪೊಲೀಸ್‌ ಮಹಾ ನಿರ್ದೇಶಕ (DGP) ರವಿ ಗುಪ್ತಾ ಆದೇಶಿಸಿದ್ದಾರೆ. ಕೇಸ್‌ ಕ್ಲೋಸ್‌ ಮಾಡಿರುವ ಕುರಿತು ಪೊಲೀಸರು ಸಲ್ಲಿಸಿದ ವರದಿ ಕುರಿತು ರೋಹಿತ್‌ ವೇಮುಲನ ತಾಯಿ ಹಾಗೂ ಸಹೋದರನು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮರು ತನಿಖೆಗೆ ಆದೇಶಿಸಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ. ಅಲ್ಲದೆ, ಪ್ರಕರಣದ ಕುರಿತು ಮತ್ತೆ ತನಿಖೆ ನಡೆಸಲು ಮ್ಯಾಜಿಸ್ಟ್ರೇಟ್‌ ಅನುಮತಿಗೆ ಮನವಿಯನ್ನೂ ಸಲ್ಲಿಸಲಾಗಿದೆ.

ವರದಿಯಲ್ಲಿ ಏನಿದೆ?

“ರೋಹಿತ್‌ ವೇಮುಲ ಆತ್ಮಹತ್ಯೆ ಮಾಡಿಕೊಳ್ಳಲು ಹಲವು ಕಾರಣಗಳಿವೆ. ವಿವಿ ಕ್ಯಾಂಪಸ್‌ನಲ್ಲಿ ಆತನ ರಾಜಕೀಯ ಚಟುವಟಿಕೆಗಳು, ಅಧ್ಯಯನದಲ್ಲಿ ಹಿನ್ನಡೆ ಸೇರಿ ಹಲವು ಕಾರಣಗಳಿಂದಾಗಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಒಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದರೆ ಆತ ಓದಿನಲ್ಲಿ ಹಿಂದಿರುತ್ತಾನೆ. ಇಲ್ಲವೇ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ರಾಜಕೀಯ ಚಟುವಟಿಕೆಗಳು ಕಾರಣವಾಗಿರುತ್ತವೆ. ಇನ್ನು ರೋಹಿತ್‌ ವೇಮುಲ ಪಿಎಚ್‌.ಡಿಯನ್ನು ಅರ್ಧಕ್ಕೇ ಮೊಟಕುಗೊಳಿಸಿ, ಎರಡು ವರ್ಷದ ಬಳಿಕ ಮತ್ತೊಂದು ಪಿಎಚ್‌.ಡಿ ಮಾಡಲು ಮುಂದಾಗಿದ್ದ. ಏಕೆಂದರೆ, ಆತ ಶಿಕ್ಷಣಕ್ಕಿಂತ ಬೇರೆ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆತ ದಲಿತನಲ್ಲ

“ರೋಹಿತ್‌ ವೇಮುಲ ದಲಿತನಲ್ಲ” ಎಂಬುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. “ರೋಹಿತ್‌ ವೇಮುಲ ಪ್ರಮಾಣಪತ್ರಗಳು ನಕಲಿ ಆಗಿವೆ. ಆತನಿಗೆ ತಾಯಿಯು ನಕಲಿ ಪರಿಶಿಷ್ಟ ಜಾತಿ (SC) ಪ್ರಮಾಣಪತ್ರ ತಯಾರಿಸಿ ಕೊಟ್ಟಿದ್ದಾರೆ ಎಂಬುದು ಗೊತಿತ್ತು. ಇದಾದ ಬಳಿಕ ಆತನು ತನ್ನ ಘನತೆಗೆ ಧಕ್ಕೆ ಬರುತ್ತದೆ ಎಂಬುದರ ಚಿಂತೆಯಲ್ಲಿದ್ದ. ನಕಲಿ ಪ್ರಮಾಣಪತ್ರದ ಭೀತಿಯಲ್ಲಿದ್ದ ಆತನು, ಇದುವರೆಗೆ ತಾನು ಗಳಿಸಿದ ಪದವಿಗಳೆಲ್ಲ ಹಾಳಾಗುತ್ತವೆ ಎಂಬ ಚಿಂತೆ ಕಾಡುತ್ತಿತ್ತು. ಇದರಿಂದಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು” ಎಂಬುದಾಗಿ ವರದಿಯಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ.

ಏನಿದು ಪ್ರಕರಣ?

ಹೈದರಾಬಾದ್‌ನಲ್ಲಿರುವ ಸೆಂಟ್ರಲ್‌ ಯುನಿವರ್ಸಿಟಿಯ ಹಾಸ್ಟೆಲ್‌ ಕೋಣೆಯಲ್ಲಿ ರೋಹಿತ್‌ ವೇಮುಲ 2016ರ ಜನವರಿ 17ರಂದು ಆತ್ಮಹತ್ಯೆ ಮಾಡಿಕೊಂಡಿದ್ದ. ಈತನು ದಲಿತನೆಂದು, ವಿಶ್ವವಿದ್ಯಾಲಯದಲ್ಲಿ ದಲಿತ ವಿರೋಧಿ ನೀತಿಗಳು ಇವೆ ಎಂದು, ಕೇಂದ್ರದ ಮೋದಿ ಸರ್ಕಾರವು ದಲಿತ ವಿರೋಧಿ ಎಂದೂ ಪ್ರತಿಭಟನೆ ನಡೆಸಲಾಗಿತ್ತು. ದೆಹಲಿ ಸೇರಿ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ರೋಹಿತ್‌ ವೇಮುಲ ಆತ್ಮಹತ್ಯೆಗೂ ಮುನ್ನ ಆತನ ಮೇಲೆ ಎಬಿವಿಪಿ ಸದಸ್ಯರು ದಾಳಿ ಮಾಡಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು. ದೇಶದಲ್ಲಿ ಅಸಹಿಷ್ಣುತೆ ಇದೆ, ಬಿಜೆಪಿ ಸರ್ಕಾರದ ಬಂದ ಬಳಿಕ ಹೀಗೆಲ್ಲ ಆಗುತ್ತಿದೆ, ದಲಿತ ವಿರೋಧಿ ನೀತಿಗಳನ್ನು ಅನುಸರಿಸಲಾಗುತ್ತಿದೆ ಎಂದೆಲ್ಲ ಹೇಳಲಾಗುತ್ತಿತ್ತು.

ಇದನ್ನೂ ಓದಿ: Rohith Vemula: ರೋಹಿತ್‌ ವೇಮುಲ ದಲಿತನೇ ಅಲ್ಲ ಎಂದ ಪೊಲೀಸರು; ಕೇಸ್‌ ಕ್ಲೋಸ್‌, ಸ್ಮೃತಿ ಇರಾನಿ ಸೇರಿ ಹಲವರಿಗೆ ಕ್ಲೀನ್‌ ಚಿಟ್

Continue Reading
Advertisement
rahul gandhi gary Kasparov
ವೈರಲ್ ನ್ಯೂಸ್2 mins ago

Rahul Gandhi: ರಾಹುಲ್‌ ಗಾಂಧಿಗೆ “ಮೊದಲು ರಾಯ್‌ಬರೇಲಿಯಿಂದ ಗೆಲ್ಲಿ…” ಎಂದ ಚೆಸ್‌ ದಂತಕಥೆ ಗ್ಯಾರಿ ಕಾಸ್ಪರೋವ್!

Lok Sabha Election 2024
Lok Sabha Election 202430 mins ago

Lok Sabha Election 2024: ಚುನಾವಣಾ ಪ್ರಚಾರದ ವೇಳೆ ಮಹಿಳೆಯ ಕೆನ್ನೆಗೆ ಹೊಡೆದ ಕಾಂಗ್ರೆಸ್‌ ಅಭ್ಯರ್ಥಿ; ವಿಡಿಯೊ ಇಲ್ಲಿದೆ

Viral News
ವೈರಲ್ ನ್ಯೂಸ್37 mins ago

Viral News: ಹೆರಿಗೆಯಾದ ಮೂರು ಗಂಟೆಗಳಲ್ಲೇ ಅಪಾರ್ಟ್‌ಮೆಂಟ್‌ ಮೇಲಿಂದ ಮಗುವನ್ನೇ ಎಸೆದ್ಳಾ?

king dasharatha kaikeyi dhavala dharini column
ಅಂಕಣ60 mins ago

ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕ ಭಂಗ

Weight Loss Tips
ಆರೋಗ್ಯ1 hour ago

Weight Loss Tips: ಸುಸ್ಥಿರವಾಗಿ ತೂಕ ಇಳಿಸಬೇಕೆ?; ಇಲ್ಲಿದೆ ದಾರಿ!

saddam hussain pocso case culprit hubli
ಕ್ರೈಂ1 hour ago

Physical Abuse: ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸದ್ದಾಂ ಹುಸೇನ್‌ ಕಾಲಿಗೆ ಗುಂಡೇಟು

Karnataka Weather Forecast
ಮಳೆ2 hours ago

Karnataka Weather: ಯೆಲ್ಲೋ ಅಲರ್ಟ್‌; ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Pakistan PM
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಪಾಕಿಸ್ತಾನ ಮೊದಲು ತನ್ನ ತಟ್ಟೆಯಲ್ಲಿ ಬಿದ್ದಿರುವ ನೊಣ ತೆಗೆಯಲಿ, ಪಾಠ ಕಲಿಯಲಿ

Tips For Healthy Skin
ಆರೋಗ್ಯ2 hours ago

Tips For Healthy Skin: ಕಡಲೆಹಿಟ್ಟೆಂಬ ಶತಮಾನಗಳ ಹಳೆಯ ಸೌಂದರ್ಯವರ್ಧಕ!

Dina Bhavishya
ಭವಿಷ್ಯ3 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ16 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌