ಸರ್ಕಾರ ನಮಗೆ ತಿಂಗಳಿಗೆ 6000 ರೂಪಾಯಿ ಪಿಂಚಣಿ ಕೊಡಲೇಬೇಕು ಎಂದು ಪಟ್ಟು ಹಿಡಿದ ಬೋಳುತಲೆಯ ಮಂದಿ! - Vistara News

ದೇಶ

ಸರ್ಕಾರ ನಮಗೆ ತಿಂಗಳಿಗೆ 6000 ರೂಪಾಯಿ ಪಿಂಚಣಿ ಕೊಡಲೇಬೇಕು ಎಂದು ಪಟ್ಟು ಹಿಡಿದ ಬೋಳುತಲೆಯ ಮಂದಿ!

ತಲೆ ಕೂದಲು ಉದುರುವ ಸಮಸ್ಯೆ ಬಹುತೇಕ ಪುರುಷರನ್ನು ಕಾಡುತ್ತದೆ. ಹೀಗೆ ತಲೆ ಬೋಳಾದವರು ಸೇರಿಕೊಂಡು ಈಗ ಪಿಂಚಣಿ ಕೊಡಿ ಎಂದು ಆಗ್ರಹಿಸುತ್ತಿದ್ದಾರೆ!

VISTARANEWS.COM


on

bald men Demand pension From Government in Telangana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್​: ತಲೆಯಲ್ಲಿ ಕೂದಲು ಇಲ್ಲದೆ ಬೋಳಾಗಿರುವವರನ್ನು, ಅರ್ಧ ತಲೆಗೆ ಮಾತ್ರ ಕೂದಲಿದ್ದು ಬಕ್ಕತಲೆ (Bald Men) ಆಗಿರುವವರನ್ನು ಅಪಹಾಸ್ಯ ಮಾಡುವ ಪರಿಪಾಠ ಅನೇಕರಲ್ಲಿ ಇದೆ. ತಲೆ ಮೇಲೆ ಸೊಂಪಾಗಿ ಕೂದಲಿರಬೇಕು, ಅದಕ್ಕೊಂದು ಒಪ್ಪಿತ ಸ್ಟೈಲ್​ ಇರಬೇಕು ಇದು ಪುರುಷ/ಮಹಿಳೆಯರ ಸಹಜ ಬಯಕೆ. ತಲೆ ಬೋಳಾಗುವ ಸಮಸ್ಯೆ ಮಹಿಳೆಯರಿಗೆ ಇರುವುದಿಲ್ಲ ಎಂದಲ್ಲ, ಆದರೆ ಪುರುಷರಿಗೆ ಹೋಲಿಸಿದರೆ ಮಹಿಳೆಯರಲ್ಲಿ ಸಮಸ್ಯೆ ಕಡಿಮೆ. ಈಗಂತೂ ಅನೇಕ ಪುರುಷರು ಸಣ್ಣ ವಯಸ್ಸಿನಲ್ಲಿಯೇ ತಲೆಕೂದಲು ಕಳೆದುಕೊಂಡು ಬೋಳಾಗುತ್ತಾರೆ. ಇಲ್ಲವೇ ಬಕ್ಕ ತಲೆ ಸಮಸ್ಯೆಗೆ ಒಳಗಾಗುತ್ತಾರೆ. ಅವರನ್ನು ನೋಡಿ ಹಲವರು ನಗುತ್ತಾರೆ.

ಹೀಗೆ ತಲೆ ಬೋಳಾಗಿರುವ ಕಾರಣಕ್ಕೆ ಅನೇಕರಿಂದ ಅಪಹಾಸ್ಯಕ್ಕೀಡಾದ ತೆಲಂಗಾಣದ ಒಂದಷ್ಟು ಪುರುಷರು ಗುಂಪುಗೂಡಿ, ‘ತಮಗೆ ತಿಂಗಳಿಗೆ 6000 ರೂಪಾಯಿ ಪಿಂಚಣಿ ಹಣ ನೀಡಬೇಕು’ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸಿದ್ದಿಪೇಟ್​​ನ ತಂಗಲ್ಲಪಲ್ಲಿ ಎಂಬ ಹಳ್ಳಿಯಲ್ಲಿರುವ ಒಂದಷ್ಟು ಮಂದಿ ಬೋಳರು-ಬಕ್ಕತಲೆಯವರೆಲ್ಲ ಸೇರಿಕೊಂಡು ಈ ಆಗ್ರಹ ಮಾಡಿದ್ದಾರೆ.

‘ನಮ್ಮ ತಲೆಯಲ್ಲಿ ಕೂದಲಿಲ್ಲ ಎಂಬ ಕಾರಣಕ್ಕೆ ನಮಗೆ ಅನೇಕರು ಅವಮಾನ ಮಾಡುತ್ತಿದ್ದಾರೆ. ಇದರಿಂದಾಗಿ ಮುಜುಗರ, ಅವಮಾನಕ್ಕೆ ಒಳಗಾಗುತ್ತಿದ್ದೇವೆ. ಹೀಗೆ ವ್ಯಂಗ್ಯ-ಅಣುಕಿಸುವ ಮಾತುಗಳನ್ನು ಕೇಳಿಕೇಳಿ ಮಾನಸಿಕವಾಗಿ ಕುಗ್ಗಿ ಹೋಗುತ್ತಿದ್ದೇವೆ. ಸರ್ಕಾರ ನಮ್ಮಂಥ ಬೋಳು ತಲೆ/ಬಕ್ಕತಲೆಯವರಿಗೆ ತಿಂಗಳಿಗೆ 6000 ರೂಪಾಯಿ ಪಿಂಚಣಿ ಘೋಷಿಸಿದರೆ, ನಮಗೂ ಆದ್ಯತೆ ಇದೆ ಎಂದಾಗುತ್ತದೆ. ನಮ್ಮನ್ನು ಅಪಹಾಸ್ಯ ಮಾಡುವುದನ್ನು ಜನ ನಿಲ್ಲಿಸುತ್ತಾರೆ. ನಮಗೆ ಈ ಸಂಕ್ರಾಂತಿಗೆ ಪಿಂಚಣಿ ಗಿಫ್ಟ್ ಘೋಷಿಸಿ’ ಎಂದು ಬೋಳರ ಗುಂಪು ಸರ್ಕಾರಕ್ಕೆ ಹೇಳಿದೆ.

ಅಂದಹಾಗೇ, ಇದೇ ಹಳ್ಳಿಯಲ್ಲಿ ಸುಮಾರು 30 ಮಂದಿ ಬೋಳು/ಬಕ್ಕ ತಲೆಯವರು ಇದ್ದಾರೆ. ಅವರಲ್ಲಿ ಕೆಲವರು ಇನ್ನೂ 20ರ ವಯಸ್ಸಿನ ಆಸುಪಾಸಿನವರು. ಇವರ ಗುಂಪಿನ ಅಧ್ಯಕ್ಷನ ಹೆಸರು ವೇಲ್ಡಿ ಬಾಲಯ್ಯ. ಪಿಂಚಣಿ ಹಣದಲ್ಲಿ ಏನು ಮಾಡುತ್ತೀರಿ ಎಂದು ಮಾಧ್ಯಮದವರು ಪ್ರಶ್ನಿಸಿದ್ದಕ್ಕೆ ಉತ್ತರಿಸಿದ ಅವರು ‘ಆ ಹಣದಲ್ಲಿ ನಾವು ಚಿಕಿತ್ಸೆ ಪಡೆಯುತ್ತೇವೆ. ಕೂದಲು ಉದುರಿ ಹೋಗಿದೆ ಎಂಬ ಕಾರಣಕ್ಕೆ ಜನರು ನಗುತ್ತಿದ್ದಾರೆ. ನಾವೂ ಅಗತ್ಯ ಟ್ರೀಟ್​​ಮೆಂಟ್ ಪಡೆಯುತ್ತೇವೆ. ಅದಕ್ಕಾಗಿ ಈ ಹಣ ಉಪಯೋಗಿಸಿಕೊಳ್ಳುತ್ತೇವೆ’ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ತಲೆ ಕೂದಲು ಉದುರಿದ್ದರಿಂದ ನೊಂದ ಯುವತಿ ನೇಣಿಗೆ ಶರಣು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

EXPLAINER

Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

Wayanad Landslide Explainer: ಕೇರಳದಲ್ಲಿ ತಜ್ಞರ ಎಚ್ಚರಿಕೆ, ವರದಿಗಳ ಹೊರತಾಗಿಯೂ ಪ್ರಕೃತಿ, ನಿಸರ್ಗದ ಮೇಲೆ ಮನುಷ್ಯ ವಿಕೃತಿ, ಕೈಗಾರೀಕರಣ, ಅರಣ್ಯ ನಾಶ, ಬೆಟ್ಟದಲ್ಲಿ ಕಲ್ಲುಗಳನ್ನು ತೆಗೆದು ಕೃಷಿ ಚಟುವಟಿಕೆಗಳನ್ನು ಕೈಗೊಂಡು ಪರಿಸರವನ್ನು, ಭೂಮಿಯನ್ನು ಹಾಳು ಮಾಡಲಾಗಿದೆ. ಇಂತಹ ಹಲವು ಕಾರಣಗಳಿಂದಾಗಿಯೇ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತಗಳಿಂದಾಗಿ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

VISTARANEWS.COM


on

Wayanad Landslide
Koo

ತಿರುವನಂತಪುರಂ: ಕೇರಳದ ವಯನಾಡು ಜಿಲ್ಲೆಯಲ್ಲಿ ಮಂಗಳವಾರ (ಜುಲೈ 30) ಸಂಭವಿಸಿದ ಭೀಕರ ಭೂಕುಸಿತಗಳಿಗೆ (Wayanad Landslide Explainer) ಜನ ನಲುಗಿ ಹೋಗಿದ್ದಾರೆ. ಸಾವಿನ ಸಂಖ್ಯೆ 100 ದಾಟಿದೆ. ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿದವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ. ಮೆಪ್ಪಾಡಿ (Meppadi) ವ್ಯಾಪ್ತಿಯ ಪ್ರದೇಶಗಳು ಮಸಣಗಳ ರೀತಿ ಭಾಸವಾಗುತ್ತಿವೆ. ಎಲ್ಲಿ ನೋಡಿದರೂ ನೀರು, ಕೆಸರು, ಭೂಮಿ ಕುಸಿದ ದೃಶ್ಯಗಳೇ ಕಣ್ಣಿಗೆ ರಾಚುತ್ತಿವೆ. ಮಕ್ಕಳು, ಮಹಿಳೆಯರ ಶವಗಳನ್ನು ನೋಡಿದಾಗ ಮನಸ್ಸು ಕಲ್ಲವಿಲಗೊಳ್ಳುತ್ತದೆ. ಆದರೆ, ಕೇರಳದಲ್ಲಿ (Kerala Rains) ಪ್ರತಿ ಭಾರಿ ಮಳೆಯಾದಾಗಲೂ ಭೂಮಿ ಕುಸಿಯುತ್ತದೆ. ಹೀಗೆ ಕುಸಿದಾಗಲೆಲ್ಲ, ದುರಂತ ಸಂಭವಿಸಿದಾಗಲೆಲ್ಲ ಮನುಷ್ಯನೇ, ಆತನ ದುರಾಸೆಯೇ ಇದಕ್ಕೆಲ್ಲ ಕಾರಣ ಎಂಬ ಕಟು ಸತ್ಯವು ಕಾಣಿಸುತ್ತದೆ.

ಹೌದು, ಕೇರಳದ ಭೂಮಿಯ ಕುರಿತು, ಅಲ್ಲಿನ ಪರಿಸರದ ಕುರಿತು, ಭೂಕುಸಿತದ ಸಾಧ್ಯತೆಗಳ ಕುರಿತು ತಜ್ಞರು ದಶಕಕ್ಕಿಂತ ಹೆಚ್ಚು ಅವಧಿಯಿಂದಲೂ ಎಚ್ಚರಿಸುತ್ತಲೇ ಇದ್ದಾರೆ. ಆದರೆ, ಪ್ರಕೃತಿ, ನಿಸರ್ಗದ ಮೇಲೆ ಮನುಷ್ಯ ವಿಕೃತಿ, ಕೈಗಾರೀಕರಣ, ಅರಣ್ಯ ನಾಶ, ಬೆಟ್ಟದಲ್ಲಿ ಕಲ್ಲುಗಳನ್ನು ತೆಗೆದು ಕೃಷಿ ಚಟುವಟಿಕೆಗಳನ್ನು ಕೈಗೊಂಡು ಪರಿಸರವನ್ನು, ಭೂಮಿಯನ್ನು ಹಾಳು ಮಾಡಲಾಗಿದೆ. ಇದೆಲ್ಲದರ ಪರಿಣಾಮವೇ, ಕೇರಳದಲ್ಲಿ ಒಂದು ದಿನ ಜೋರು ಮಳೆ ಬಂದರೂ ಭೂಮಿ ಕುಸಿಯುವಂತಾಗಿದೆ, ನೆಮ್ಮದಿ ಕಸಿಯುವಂತಾಗಿದೆ.

ವಯನಾಡು ಭೂಸಿತಕ್ಕೆ ಪ್ರಮುಖ ಕಾರಣಗಳು

  • ಗುಡ್ಡಗಾಡು ಪ್ರದೇಶಗಳಲ್ಲಿ ಸಣ್ಣ ಸಣ್ಣ ಚರಂಡಿಗಳನ್ನು ನಿರ್ಮಿಸಲಾಗಿದ್ದು, ಮಳೆಗಾಲದಲ್ಲಿ ಇವು ಬ್ಲಾಕ್‌ ಆಗಿ, ನೀರು ನಿಂತು, ಭೂಮಿಯನ್ನು ಮೆತ್ತಗಾಗಿಸುತ್ತಿದೆ.
  • ಭೂಮಿಯ ಫಲವತ್ತತೆ ಕಡಿಮೆಗೊಳಿಸಿ, ಗಟ್ಟಿತನವನ್ನು ಕುಂಠಿತಗೊಳಿಸುವ ಶುಂಠಿ ಬೆಳೆಯನ್ನು ಅಧಿಕವಾಗಿ ಬೆಳೆಯುವುದು
  • ಅರಣ್ಯ ನಾಶ, ಗುಡ್ಡಗಾಡು, ಅರಣ್ಯ ಪ್ರದೇಶಗಳಲ್ಲಿ ಕೈಗಾರಿಕಾ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವುದು
  • ಬೆಟ್ಟಗಳ ಕಲ್ಲುಗಳನ್ನು ತೆರವುಗೊಳಿಸಿ, ಭೂಮಿಯನ್ನು ಹದಗೊಳಿಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವುದು
  • ಗಿರಿ ಪ್ರದೇಶಗಳಲ್ಲಿ ಬೆಟ್ಟವನ್ನು ಅಗೆದು ಮನೆಗಳು ಹಾಗೂ ರೆಸಾರ್ಟ್‌ಗಳನ್ನು ನಿರ್ಮಿಸಿರುವುದು
  • ಪ್ರವಾಸೋದ್ಯಮ, ಸಂಪರ್ಕದ ದೃಷ್ಟಿಯಿಂದ ಗುಡ್ಡಗಾಡು ಪ್ರದೇಶಗಳಲ್ಲಿ ಕಿಲೋಮೀಟರ್‌ಗಟ್ಟಲೆ ರಸ್ತೆಗಳ ನಿರ್ಮಾಣ ಮಾಡಿರುವುದು
  • ನದಿಗಳ ಹರಿವು, ವ್ಯಾಪ್ತಿಯನ್ನು ಹೆಚ್ಚಿಸದಿರುವುದು, ಭಾರಿ ಮಳೆಯಾದರೆ ನೀರು ಸರಾಗವಾಗಿ ಹರಿಯಲು ಕ್ರಮ ತೆಗೆದುಕೊಳ್ಳದಿರುವುದು

13 ವರ್ಷಗಳ ಹಿಂದೆಯೇ ಗಾಡ್ಗೀಳ್‌ ವರದಿ ಎಚ್ಚರಿಕೆ

ಮಾಧವ ಗಾಡ್ಗೀಳ್‌ ವರದಿ 2011ರಲ್ಲಿಯೇ ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿಯು (WGEEP) ರಚಿಸಿದ ವರದಿಯಲ್ಲಿ ಕೇರಳದ ಇಡುಕ್ಕಿ ಹಾಗೂ ವಯನಾಡು ಕುರಿತು ಮಹತ್ವವದ ಎಚ್ಚರಿಕೆ ನೀಡಿತ್ತು. ಎರಡೂ ಜಿಲ್ಲೆಗಳು ಪರಿಸರ ಸೂಕ್ಷ್ಮ ವಲಯಗಳು ಎಂದು ಉಲ್ಲೇಖಿಸಿತ್ತು. ಎರಡೂ ಜಿಲ್ಲೆಗಳಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಅರಣ್ಯೇತರ ಚಟುವಟಿಕೆಗಳು, ಅರಣ್ಯ ನಾಶ, ಕಂಪನಿ, ಕಚೇರಿಗಳನ್ನು ನಿರ್ಮಾಣ ಮಾಡಬಾರದು ಎಂದು ಎಚ್ಚರಿಸಿತ್ತು.

ಕೇರಳದ ಶೇ.13ರಷ್ಟು ಭೂಮಿ ದುರ್ಬಲ

ಕೇರಳದ ಇಡುಕ್ಕಿ, ಪಾಲಕ್ಕಾಡ್‌, ಮಲಪ್ಪುರಂ, ಪಥಣಂತಿಟ್ಟ ಹಾಗೂ ವಯನಾಡು ಜಿಲ್ಲೆಗಳನ್ನು ಅತಿ ದುರ್ಬಲ ಪ್ರದೇಶಗಳು ಎಂಬುದಾಗಿ ಇತ್ತೀಚಿನ ವರದಿಗಳು ತಿಳಿಸಿವೆ. ಕೇರಳದ ಪಶು ಸಂಗೋಪನೆ ಹಾಗೂ ಸಮುದ್ರ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧ್ಯಯನದ ಪ್ರಕಾರ, ಕೇರಳದಲ್ಲಿ 2018ರ ಬಳಿಕ ಭೂಕುಸಿತಗಳ ಪ್ರಮಾಣವು ಶೇ.3.46ರಷ್ಟು ಹೆಚ್ಚಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹವಾಮಾನ ವೈಪರೀತ್ಯ, ಕೇರಳ ಮತ್ತು ಸಾವು

ಭಾರಿ ಮಳೆ, ಭೂಕುಸಿತ, ಪ್ರವಾಹ, ಸಿಡಿಲು ಸೇರಿ ಹವಾಮಾನ ವೈಪರೀತ್ಯದಿಂದ ಕೇರಳದಲ್ಲಿ ಸಾವಿರಾರು ಜನ ಮೃತಪಟ್ಟಿದ್ದಾರೆ. ಕೇರಳದಲ್ಲಿ 2018ರಲ್ಲಿ ಉಂಟಾದ ಪ್ರವಾಹದಲ್ಲಿ ಕೇವಲ 3 ದಿನಗಳಲ್ಲಿಯೇ 483 ಜನ ಮೃತಪಟ್ಟಿದ್ದರು. ದೇವರ ನಾಡಿನಲ್ಲಿ 1961ರಿಂದ 2016ರ ಅವಧಿಯಲ್ಲಿ ಭೂಕುಸಿತದಿಂದಾಗಿಯೇ 295 ಮಂದಿ ಮೃತಪಟ್ಟಿದ್ದರು. 2019 ಹಾಗೂ 2020ರಲ್ಲಿಯೇ ಹವಾಮಾನ ವೈಪರೀತ್ಯಕ್ಕೆ 100ಕ್ಕೂ ಅಧಿಕ ಜನ ಬಲಿಯಾಗಿದ್ದರು.

ಇದನ್ನೂ ಓದಿ: Shiradi Landslide: ಕೇರಳದ ಬೆನ್ನಿಗೇ ಶಿರಾಡಿ ಘಾಟಿಯಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ ಸಿಲುಕಿದ ಕಾರುಗಳು, ಟ್ಯಾಂಕರ್‌

Continue Reading

ದೇಶ

Pralhad Joshi: ಕಾಂಗ್ರೆಸ್‌ ಹಗರಣ, ಭ್ರಷ್ಟಾಚಾರದ ವಿರುದ್ಧ ಚಕ್ರವ್ಯೂಹ ರಚಿಸಲಾಗಿದೆ; ಪ್ರಲ್ಹಾದ್ ಜೋಶಿ

Pralhad Joshi: ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿಯ ಚಕ್ರವ್ಯೂಹ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಚಕ್ರವ್ಯೂಹ ರಚನೆಯಾಗುತ್ತಿದೆ ಆದರೆ ಕಾಂಗ್ರೆಸ್ ಹಗರಣಗಳು ಮತ್ತು ಭ್ರಷ್ಟಾಚಾರದ ವಿರುದ್ಧ ಎಂದು ಹೇಳಿದ್ದಾರೆ. 60 ವರ್ಷಗಳ ಮಾಡಿರುವ ಭ್ರಷ್ಟಾಚಾರ ಮತ್ತು ಹಗರಣವನ್ನು ಮುಚ್ಚಿಹಾಕಲು ಇದೆಲ್ಲವನ್ನೂ ಹೇಳುತ್ತಿದ್ದಾರೆ ಎಂದು ಸಚಿವರು ಆರೋಪಿಸಿದ್ದಾರೆ.

VISTARANEWS.COM


on

Union Minister Pralhad Joshi reaction about rahul gandhi statement
Koo

ನವದೆಹಲಿ: ಚಕ್ರವ್ಯೂಹ ರಚನೆಯಾಗುತ್ತಿದೆ. ಆದರೆ ಅದು ಕಾಂಗ್ರೆಸ್ ಹಗರಣಗಳು ಮತ್ತು ಭ್ರಷ್ಟಾಚಾರದ ವಿರುದ್ಧ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿಯ ಚಕ್ರವ್ಯೂಹ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಎಎನ್‌ಐ ಜತೆ ಮಾತನಾಡಿರುವ ಸಚಿವ ಪ್ರಲ್ಹಾದ್ ಜೋಶಿ, ಇದನ್ನು ಡ್ರಾಮಾಬಾಜಿ ಎಂದು ಕರೆದಿದ್ದಾರೆ. 60 ವರ್ಷಗಳ ಕಾಲ ಮಾಡಿರುವ ಭ್ರಷ್ಟಾಚಾರ ಮತ್ತು ಹಗರಣವನ್ನು ಮುಚ್ಚಿಹಾಕಲು ಇದೆಲ್ಲವನ್ನೂ ಹೇಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: Tata Motors: ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಟಾಟಾ ಮೋಟಾರ್ಸ್‌ನಿಂದ ‘ವಿದ್ಯಾಧನ’, ‘ಉತ್ಕರ್ಷ’ ಯೋಜನೆ

ರಾಹುಲ್ ಗಾಂಧಿ ಹಾಗೂ ಅವರ ತಾಯಿ ರಿಮೋಟ್ ಕಂಟ್ರೋಲ್ ಮೂಲಕ ಸರ್ಕಾರವನ್ನು ಏಕೆ ನಡೆಸುತ್ತಿದ್ದರು? ಈಗ ಏಕೆ ನಾಟಕವಾಡುತ್ತಿದ್ದಾರೆ? ತಮ್ಮ ಸರ್ಕಾರದಲ್ಲಿ ಮಾಡಿದ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ಇದು ಎಂದು ಅವರು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಏನು ಹೇಳಿದ್ದರು?

ಕಾಂಗ್ರೆಸ್‌ ನಾಯಕ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅದರಲ್ಲೂ, ಮಹಾಭಾರತದ ಚಕ್ರವ್ಯೂಹವನ್ನು ಉಲ್ಲೇಖಿಸಿದ ರಾಹುಲ್‌ ಗಾಂಧಿ ಅವರು ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ಬಾಣ ಪ್ರಯೋಗಿಸಿದ್ದರು. “ಮಹಾಭಾರತದ ಚಕ್ರವ್ಯೂಹದಂತೆ ಈಗಲೂ ಒಂದು ಚಕ್ರವ್ಯೂಹ ರಚಿಸಲಾಗಿದೆ. ದೇಶದ ಜನರು ಆ ಚಕ್ರವ್ಯೂಹಕ್ಕೆ ಸಿಲುಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿ 6 ಮಂದಿಯು ಈ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ” ಎಂದು ಹೇಳಿದ್ದರು.

“ಸಾವಿರಾರು ವರ್ಷಗಳ ಹಿಂದೆ, ಹರಿಯಾಣದಲ್ಲಿ ಕುರುಕ್ಷೇತ್ರ ನಡೆಯುವಾಗ 6 ಜನ ಸೇರಿ ಚಕ್ರವ್ಯೂಹವನ್ನು ರಚಿಸಿದ್ದರು. ಆರು ಜನ ಸೇರಿ ಆ ಚಕ್ರವ್ಯೂಹದಲ್ಲಿ ಅಭಿಮನ್ಯುವಿನನ್ನು ಸಿಲುಕಿಸಿ ಕೊಲೆ ಮಾಡಿದರು. ನಾನು ಚಕ್ರವ್ಯೂಹದ ಕುರಿತು ಸಣ್ಣದೊಂದು ಸಂಶೋಧನೆ ಮಾಡಿದ್ದೇನೆ. ಚಕ್ರವ್ಯೂಹವನ್ನು ಪದ್ಮವ್ಯೂಹ ಎಂದೂ ಕರೆಯಲಾಗುತ್ತದೆ. ಪದ್ಮವ್ಯೂಹ ಎಂದರೆ ಕಮಲದ ರಚನೆಯಾಗಿದೆ. ಚಕ್ರವ್ಯೂಹ ಕೂಡ ಕಮಲದ ಆಕಾರದಲ್ಲಿದೆ” ಎಂಬುದಾಗಿ ಬಿಜೆಪಿಯನ್ನು ಕುಟುಕಿದ್ದರು.

“21ನೇ ಶತಮಾನದಲ್ಲೂ ಚಕ್ರವ್ಯೂಹವನ್ನು ರಚಿಸಲಾಗಿದೆ ಹಾಗೂ ಅದು ಕಮಲದ ಆಕಾರದಲ್ಲಿದೆ. ಆ ಚಕ್ರವ್ಯೂಹದ ಚಿಹ್ನೆಯನ್ನು ನರೇಂದ್ರ ಮೋದಿ ಅವರು ಎದೆಯ ಮೇಲೆ ಧರಿಸಿಕೊಂಡು ತಿರುಗಾಡುತ್ತಿದ್ದಾರೆ. ಅಭಿಮನ್ಯುವಿಗೆ ಏನಾಯಿತೋ, ಅದರಂತೆ ಭಾರತದ ಜನರನ್ನು ಆ ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ. ಯುವಕರು, ರೈತರು, ಮಹಿಳೆಯರು, ಸಣ್ಣ ಹಾಗೂ ಮಧ್ಯಮ ಶ್ರೇಣಿ ಉದ್ಯಮಿಗಳು ಈಗ ಆ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ” ಎಂದು ರಾಹುಲ್‌ ಗಾಂಧಿ ಕುಹಕವಾಡಿದ್ದರು.

ಚಕ್ರವ್ಯೂಹದಲ್ಲಿರುವ 6 ಜನ ಯಾರು?

“ಚಕ್ರವ್ಯೂಹದಲ್ಲಿ ತುಂಬ ಜನ ಇರುತ್ತಾರೆ. ಆದರೆ, ಚಕ್ರವ್ಯೂಹದ ಮಧ್ಯದಲ್ಲಿ 6 ಜನ ಇರುತ್ತಾರೆ ಹಾಗೂ ಅವರು ಇಡೀ ಚಕ್ರವ್ಯೂಹವನ್ನು ನಿಯಂತ್ರಿಸುತ್ತಾರೆ. ಆಧುನಿಕ ಕಾಲದ ಚಕ್ರವ್ಯೂಹವನ್ನು ಕೂಡ ಆರು ಜನ ನಿಯಂತ್ರಿಸುತ್ತಿದ್ದಾರೆ. ನರೇಂದ್ರ ಮೋದಿ, ಅಮಿತ್‌ ಶಾ, ಮೋಹನ್‌ ಭಾಗವತ್‌, ಅಜಿತ್‌ ದೋವಲ್‌, ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿಯೇ ಈಗ ಕಮಲದ ಆಕಾರದ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ” ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದರು.

ಇದನ್ನೂ ಓದಿ: Paris Olympics 2024 : ಜುಲೈ 31ರಂದು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತೀಯ ಸ್ಪರ್ಧಿಗಳ ವೇಳಾಪಟ್ಟಿ ಇಂತಿದೆ

Continue Reading

ಪ್ರಮುಖ ಸುದ್ದಿ

LPG Price: ಎಲ್‌ಪಿಜಿ ಸಿಲಿಂಡರ್‌ ಬೆಲೆ ಇನ್ನು ಕೇವಲ 450 ರೂ.; ಉಳಿದ ಹಣ ಸರ್ಕಾರದಿಂದಲೇ ಪಾವತಿ!

LPG Price: ಅಡುಗೆ ಅನಿಲ ಸಿಲಿಂಡರ್‌ ಬೆಲೆ ಇಳಿಕೆ ಕುರಿತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್‌ ಯಾದವ್‌ ಅವರೇ ಮಾಹಿತಿ ನೀಡಿದ್ದಾರೆ. ಲಾಡ್ಲಿ ಬೆಹನಾ ಯೋಜನೆಗೆ ನೋಂದಣಿ ಮಾಡಿಕೊಂಡಿರುವ 40 ಲಕ್ಷ ಮಹಿಳೆಯರಿಗೆ ಇನ್ನು 450 ರೂ.ಗೆ ಅಡುಗೆ ಅನಿಲ ಸಿಲಿಂಡರ್‌ ನೀಡಲಾಗುತ್ತದೆ. ಉಳಿದ ಹಣವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

VISTARANEWS.COM


on

Madhya Pradesh Government Slashes LPG Prices For Ladli Sisters, Cylinders To Be Available At Rs 450
Koo

ಭೋಪಾಲ್‌: ಮಧ್ಯಪ್ರದೇಶದಲ್ಲಿ (Madhya Pradesh) ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ನೀಡಿದ್ದ ಭರವಸೆಯನ್ನು ಅಧಿಕಾರಕ್ಕೆ ಬಂದಮೇಲೆ ಉಳಿಸಿಕೊಂಡಿದೆ. ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನು (LPG Price) 450 ರೂ.ಗೆ ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಮೋಹನ್‌ ಯಾದವ್‌ (Mohan Yadav) ಅವರು ಘೋಷಣೆ ಮಾಡಿದ್ದಾರೆ. ಇದರಿಂದಾಗಿ ಮಧ್ಯಪ್ರದೇಶದ 40 ಲಕ್ಷ ಮಹಿಳೆಯರು ಇನ್ನು 450 ರೂ.ಗೆ 14.2 ಕೆ.ಜಿಯ ಸಿಲಿಂಡರ್‌ ಖರೀದಿಸಬಹುದಾಗಿದೆ.

ಅಡುಗೆ ಅನಿಲ ಸಿಲಿಂಡರ್‌ ಬೆಲೆ ಇಳಿಕೆ ಕುರಿತು ಮೋಹನ್‌ ಯಾದವ್‌ ಅವರೇ ಮಾಹಿತಿ ನೀಡಿದ್ದಾರೆ. “ಲಾಡ್ಲಿ ಬೆಹನಾ ಯೋಜನೆಗೆ ನೋಂದಣಿ ಮಾಡಿಕೊಂಡಿರುವ 40 ಲಕ್ಷ ಮಹಿಳೆಯರಿಗೆ ಇನ್ನು 450 ರೂ.ಗೆ ಅಡುಗೆ ಅನಿಲ ಸಿಲಿಂಡರ್‌ ನೀಡಲಾಗುತ್ತದೆ. ಪ್ರಧಾನಮಂತ್ರಿ ಉಜ್ವಲ ಯೋಜನೆ (PMUY) ಹಾಗೂ ಪಿಎಂಯುವೈ ಯೋಜನೆ ಅಲ್ಲದೆಯೂ ಲಾಡ್ಲಿ ಬೆಹನಾ ಯೋಜನೆ ಅಡಿಯಲ್ಲಿ 450 ರೂ.ಗೆ ಅಡುಗೆ ಅನಿಲ ಸಿಲಿಂಡರ್‌ ಖರೀದಿಸಬಹುದಾಗಿದೆ. ಸಾವನ್‌ ಹಾಗೂ ರಕ್ಷಾ ಬಂಧನದ ಪವಿತ್ರ ಹಬ್ಬಗಳ ಹೊತ್ತಿನಲ್ಲೇ ರಾಜ್ಯ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ” ಎಂದು ಮೋಹನ್‌ ಯಾದವ್‌ ತಿಳಿಸಿದ್ದಾರೆ.

“ನಮ್ಮ ಸರ್ಕಾರವು ಜನ ಕಲ್ಯಾಣ ಯೋಜನೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂಬುದಾಗಿ ಇದಕ್ಕೂ ಮೊದಲು ಹೇಳಿದ್ದೆ. ಈಗಲೂ ಇದನ್ನೇ ಹೇಳುತ್ತಿದ್ದೇನೆ. ಮುಂದಿನ ದಿನಗಳಲ್ಲೂ ಸಾರ್ವಜನಿಕರಿಗೆ ಅನುಕೂಲವಾಗುವ ಯೋಜನೆಗಳಿಗೆ ಹೆಚ್ಚು ಆದ್ಯತೆ ನೀಡುತ್ತಿವೆ. ಹಾಗೆಯೇ, ರಾಜ್ಯದ ಅಭಿವೃದ್ಧಿ, ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಗಳಿಗೂ ಪ್ರಾಮುಖ್ಯತೆ ಕೊಡುತ್ತೇವೆ” ಎಂದು ತಿಳಿಸಿದರು.

ಮೋಹನ್‌ ಯಾದವ್‌ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವ ಕೈಲಾಶ್‌ ವಿಜಯವರ್ಗೀಯ ಅವರು ಮುಖ್ಯಮಂತ್ರಿ ಲಾಡ್ಲಿ ಬೆಹನಾ (ಮಹಿಳೆಯರಿಗೆ ಹಣಕಾಸು ನೆರವು ನೀಡುವ ದಿಸೆಯಲ್ಲಿ 2023ರಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆ) ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 450 ರೂ.ಗೆ ಅಡುಗೆ ಅನಿಲ ನೀಡುವ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿತು.

ರಾಜ್ಯ ಸರ್ಕಾರದ ನಿರ್ಧಾರದ ಕುರಿತು ಕೈಲಾಶ್‌ ವಿಜಯವರ್ಗೀಯ ಮಾಹಿತಿ ನೀಡಿದರು. “ರಾಜ್ಯದಲ್ಲಿ ಈಗ ಒಂದು ಎಲ್‌ಪಿಜಿ ಸಿಲಿಂಡರ್‌ ಬೆಲೆ 848 ರೂ. ಇದೆ. ಲಾಡ್ಲಿ ಬೆಹನಾ ಯೋಜನೆಯ ಫಲಾನುಭವಿಗಳು 450 ರೂ. ಪಾವತಿಸಿದರೆ ಸಾಕು, ಅಡುಗೆ ಅನಿಲ ಸಿಲಿಂಡರ್‌ ಸಿಗುತ್ತದೆ. ಉಳಿದ 398 ರೂಪಾಯಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಇದಕ್ಕಾಗಿ 160 ಕೋಟಿ ರೂ. ವಿನಿಯೋಗಿಸಲಾಗಿದೆ” ಎಂಬುದಾಗಿ ತಿಳಿಸಿದರು.

ಇದನ್ನೂ ಓದಿ: LPG Price Cut: ತಿಂಗಳ ಆರಂಭದಲ್ಲೇ ಗುಡ್‌ನ್ಯೂಸ್‌; ಎಲ್‌ಪಿಜಿ ಬೆಲೆ 19 ರೂ. ಇಳಿಕೆ

Continue Reading

ದೇಶ

Love Jihad: ಲವ್‌ ಜಿಹಾದ್‌ ವಿರುದ್ಧ ಯೋಗಿ ದಿಟ್ಟ ಕ್ರಮ; ಇನ್ನು ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ಗ್ಯಾರಂಟಿ!

Love Jihad: ಬಲವಂತದ ಮತಾಂತರ, ಲವ್‌ ಜಿಹಾದ್‌ನಲ್ಲಿ ತೊಡಗುವವರಿಗೆ ಕಠಿಣ ಶಿಕ್ಷೆ ವಿಧಿಸುವ ವಿಧೇಯಕಕ್ಕೆ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಇದರೊಂದಿಗೆ ಲವ್‌ ಜಿಹಾದಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಯೋಗಿ ಸರ್ಕಾರದ ಉದ್ದೇಶಕ್ಕೆ ಬಲ ಬಂದಂತಾಗಿದೆ.

VISTARANEWS.COM


on

Love Jihad
Koo

ಲಖನೌ: ಲವ್‌ ಜಿಹಾದ್‌ ವಿರುದ್ಧ ಕ್ರಮ ತೆಗೆದುಕೊಳ್ಳುವ ದಿಸೆಯಲ್ಲಿ ಉತ್ತರ ಪ್ರದೇಶ ಸರ್ಕಾರವು (Uttar Pradesh Government) ಮಹತ್ವದ ಹೆಜ್ಜೆ ಇರಿಸಿದೆ. ಲವ್‌ ಜಿಹಾದ್‌ನಲ್ಲಿ (Love Jihad) ತೊಡಗುವವರಿಗೆ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸುವ ಉತ್ತರ ಪ್ರದೇಶ ಕಾನೂನು ಬಾಹಿರ ಧಾರ್ಮಿಕ ಮತಾಂತರ (ತಿದ್ದುಪಡಿ) ವಿಧೇಯಕಕ್ಕೆ ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ರಾಜ್ಯಪಾಲರ ಅಂಕಿತ ಸಿಕ್ಕರೆ ವಿಧೇಯಕವು ಕಾಯ್ದೆಯಾಗಿ ಜಾರಿಗೆ ಬರಲಿದೆ. ಕಾಯ್ದೆ ಜಾರಿಯಾದರೆ, ಲವ್‌ ಜಿಹಾದ್‌ನಲ್ಲಿ ತೊಡಗಿಸಿಕೊಂಡವರಿಗೆ ಗರಿಷ್ಠ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ.

ಉತ್ತರ ಪ್ರದೇಶದ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ 2021ರಲ್ಲಿ ಬಲವಂತದ ಮತಾಂತರಕ್ಕೆ 1ರಿಂದ 10 ವರ್ಷಗಳವರೆಗೆ ಶಿಕ್ಷೆ ವಿಧಿಸಲು ಅವಕಾಶವಿತ್ತು. ಹೊಸ ಮಸೂದೆಯಡಿ ಮೋಸ ಅಥವಾ ಸುಳ್ಳಿನ ಮೂಲಕ ನಡೆಸುವ ಮತಾಂತರಗಳನ್ನು ಸಹ ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲಾಗುತ್ತದೆ. ಸ್ವಯಂಪ್ರೇರಿತ ಮತಾಂತರಕ್ಕಾಗಿ ವ್ಯಕ್ತಿಗಳು ಎರಡು ತಿಂಗಳ ಮುಂಚಿತವಾಗಿ ಮ್ಯಾಜಿಸ್ಟ್ರೇಟ್‌ಗೆ ತಿಳಿಸಬೇಕು. ಇಲ್ಲದಿದ್ದರೆ 6 ತಿಂಗಳಿನಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 10,000 ರೂ. ವಿಧಿಸಲಾಗುತ್ತದೆ ಎಂದು ಮಸೂದೆ ವಿವರಿಸುತ್ತದೆ.

ಈ ಮಸೂದೆಯು ಪ್ರಕಾರ ಬಲವಂತದ ಅಥವಾ ಮೋಸದ ಮತಾಂತರಕ್ಕೆ 1ರಿಂದ 5 ವರ್ಷಗಳ ಜೈಲು ಶಿಕ್ಷೆ ಮತ್ತು 15,000 ರೂ. ದಂಡ ವಿಧಿಸಲು ಪ್ರಸ್ತಾವಿಸುತ್ತದೆ. ಅಪ್ರಾಪ್ತ ವಯಸ್ಕರು, ಮಹಿಳೆಯರು ಅಥವಾ ಎಸ್‌ಸಿ-ಎಸ್‌ಟಿ ಸಮುದಾಯದ ಸದಸ್ಯರನ್ನು ಮತಾಂತರ ಮಾಡಿದರೆ ಶಿಕ್ಷೆಯ ಪ್ರಮಾಣ ಹೆಚ್ಚಲಿದೆ. ಅಂತಹ ಸಂದರ್ಭದಲ್ಲಿ 3ರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸುವ ಸಾಧ್ಯತೆ ಇದೆ.

ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ಲವ್‌ ಜಿಹಾದ್‌ ವಿರುದ್ಧ ಹಿಂದಿನಿಂದಲೂ ಕಠಿಣ ನಿಲುವು ತಾಳಿದೆ. 2017ರ ವಿಧಾನಸಭಾ ಚುನಾವಣೆಯಲ್ಲಿ ಲವ್ ಜಿಹಾದ್ ಅನ್ನು ಪ್ರಮುಖ ವಿಷಯವಾಗಿ ಕೈಗೆತ್ತಿಕೊಂಡಿತ್ತು. ಅಂದಿನಿಂದ ಈ ಸಮಸ್ಯೆಯನ್ನು ಪರಿಹರಿಸಲು ಕಠಿಣ ಕಾನೂನುಗಳನ್ನು ರಚಿಸಲು ಸರ್ಕಾರ ಬದ್ಧವಾಗಿದೆ. ಹೊಸ ಮಸೂದೆಯು ಸಂತ್ರಸ್ತರ ವೈದ್ಯಕೀಯ ವೆಚ್ಚಗಳನ್ನು ಸರಿದೂಗಿಸಲು ಹಣಕಾಸಿನ ನೆರವು ನೀಡುವ ನಿಬಂಧನೆಗಳನ್ನೂ ಒಳಗೊಂಡಿದೆ.

ಇದಲ್ಲದೆ ಈ ಮಸೂದೆಯು ಲವ್ ಜಿಹಾದ್ ಪ್ರಕರಣಗಳನ್ನು ಯಾರು ವರದಿ ಮಾಡಬಹುದು ಎಂಬ ವ್ಯಾಪ್ತಿಯನ್ನೂ ವಿವರಿಸುತ್ತದೆ. ಈ ಹಿಂದೆ ಸಂತ್ರಸ್ತರು ಅವರ ಪೋಷಕರು ಅಥವಾ ಒಡಹುಟ್ಟಿದವರು ಮಾತ್ರ ದೂರುಗಳನ್ನು ಸಲ್ಲಿಸಬಹುದಿತ್ತು. ಹೊಸ ಮಸೂದೆಯಡಿ ಯಾರು ಬೇಕಾದರೂ ಪೊಲೀಸರಿಗೆ ಲಿಖಿತ ದೂರುಗಳನ್ನು ಸಲ್ಲಿಸಬಹುದು. ನಂತರ ಅವರು ತನಿಖೆ ನಡೆಸಲಿದ್ದಾರೆ.

ಇದನ್ನೂ ಓದಿ: ‌Love Jihad: ಲವ್‌ ಜಿಹಾದ್‌ಗೆ ಮತ್ತೊಂದು ಬಲಿ? ಹೋಟೆಲ್ ರೂಮ್ ನಲ್ಲಿ ಹಿಂದೂ ಯುವತಿ ಶವ ಪತ್ತೆ; ಮುಸ್ಲಿಂ ಯುವಕ ಎಸ್ಕೇಪ್‌

Continue Reading
Advertisement
Paris Olympics 2024
ಪ್ರಮುಖ ಸುದ್ದಿ14 mins ago

Paris Olympics 2024 : ಆರ್ಚರಿಯಲ್ಲಿ ಕ್ವಾರ್ಟರ್​ ಫೈನಲ್​ಗೇರಿದ 18 ವರ್ಷದ ಭಜನ್ ಕೌರ್​

Wayanad Landslide
EXPLAINER15 mins ago

Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

Union Minister Pralhad Joshi reaction about rahul gandhi statement
ದೇಶ24 mins ago

Pralhad Joshi: ಕಾಂಗ್ರೆಸ್‌ ಹಗರಣ, ಭ್ರಷ್ಟಾಚಾರದ ವಿರುದ್ಧ ಚಕ್ರವ್ಯೂಹ ರಚಿಸಲಾಗಿದೆ; ಪ್ರಲ್ಹಾದ್ ಜೋಶಿ

Raayan Movie
ಸಿನಿಮಾ28 mins ago

Raayan Movie: ಸೂಪರ್‌ ಹಿಟ್‌ ಚಿತ್ರಗಳನ್ನು ನಕಲಿಸಿ ಮಾರುವ ಕುಖ್ಯಾತ ಪೈರಸಿ ಗ್ಯಾಂಗ್‌ ರೂವಾರಿ ಬಂಧನ

Thyroid problem
ಆರೋಗ್ಯ41 mins ago

Thyroid Health Formulas: ನಿಮ್ಮ ಥೈರಾಯ್ಡ್‌ ನಿಮ್ಮ ಕೈಯಲ್ಲಿ! ಥೈರಾಯ್ಡ್‌ ಆರೋಗ್ಯಕ್ಕೆ ಇಲ್ಲಿವೆ ಆರು ಸೂತ್ರಗಳು

Physical abuse
ಕರ್ನಾಟಕ42 mins ago

Physical abuse: ಮಹಿಳೆ ಮೇಲೆ ಅತ್ಯಾಚಾರ; ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿ ಬಂಧನ

ಬೆಂಗಳೂರು1 hour ago

Sadhaka Ratna Award: ತೇಜೋಮಯಿ ಗದ್ದಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ

Wayanad Landslide
ಕರ್ನಾಟಕ1 hour ago

Wayanad Landslide: ಕೇರಳ ಭೂ ಕುಸಿತ; ಕನ್ನಡಿಗರಿಗೆ ನೆರವು ನೀಡಲು ಸಹಾಯವಾಣಿ

Monsoon Jacket Fashion
ಫ್ಯಾಷನ್2 hours ago

Monsoon Jacket Fashion: ಸ್ಟೈಲಿಶ್‌ ಜಾಕೆಟ್ ಸ್ಟೈಲಿಂಗ್‌ಗೆ ನಟ ದರ್ಶ್ ಚಂದ್ರಪ್ಪ ಸಿಂಪಲ್‌ ರೂಲ್ಸ್!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಜುಲೈ 31ರಂದು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತೀಯ ಸ್ಪರ್ಧಿಗಳ ವೇಳಾಪಟ್ಟಿ ಇಂತಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ8 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ9 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌