Bangladesh Protest: ಮುಸ್ಲಿಂ ದೇಶಗಳಲ್ಲಿ ಯಾರೂ ಸುರಕ್ಷಿತರಲ್ಲ; ಮತ್ತೊಂದು ಕಿಡಿ ಹೊತ್ತಿಸಿದ ಕಂಗನಾ ರಣಾವತ್ - Vistara News

ದೇಶ

Bangladesh Protest: ಮುಸ್ಲಿಂ ದೇಶಗಳಲ್ಲಿ ಯಾರೂ ಸುರಕ್ಷಿತರಲ್ಲ; ಮತ್ತೊಂದು ಕಿಡಿ ಹೊತ್ತಿಸಿದ ಕಂಗನಾ ರಣಾವತ್

Bangladesh Protest: ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪ ತಾಳಿದ್ದು, ಪ್ರಧಾನಿ ಶೇಖ್‌ ಹಸೀನಾ ಅವರು ರಾಜೀನಾಮೆ ನೀಡಿ ಪ್ರಾಣಭಯದಿಂದ ಭಾರತಕ್ಕೆ ಆಗಮಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್​, “ಮುಸ್ಲಿಂ ದೇಶಗಳಲ್ಲಿ ಯಾರೂ ಸುರಕ್ಷಿತರಲ್ಲ, ಸ್ವತಃ ಮುಸ್ಲಿಮರು ಕೂಡ. ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಬ್ರಿಟನ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆ ದುರದೃಷ್ಟಕರ. ರಾಮರಾಜ್ಯದಲ್ಲಿ ಬದುಕುತ್ತಿರುವುದು ನಮ್ಮ ಅದೃಷ್ಟ. ಜೈ ಶ್ರೀ ರಾಮ್ʼʼ ಎಂದು ಹೇಳಿದ್ದಾರೆ.

VISTARANEWS.COM


on

Bangladesh Protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪ ತಾಳಿದ್ದು, ಪ್ರಧಾನಿ ಶೇಖ್‌ ಹಸೀನಾ (Sheik Hasina) ಅವರು ರಾಜೀನಾಮೆ ನೀಡಿ ಪ್ರಾಣಭಯದಿಂದ ಭಾರತಕ್ಕೆ ಆಗಮಿಸಿ ಆಶ್ರಯ ಪಡೆದಿದ್ದಾರೆ (Bangladesh Protest). ಈ ಬಗ್ಗೆ ಪ್ರತಿಕ್ರಿಯಿಸಿರುವ ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್​ (Kangana Ranaut), ಯಾವ ಮುಸ್ಲಿಂ ರಾಷ್ಟ್ರವೂ ಸುರಕ್ಷಿತವಲ್ಲ ಎಂದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಂಗನಾ ಮತ್ತೊಂದು ಚರ್ಚೆಗೆ ನಾಂದಿ ಹಾಡಿದ್ದಾರೆ. “ಭಾರತವು ಸುತ್ತಲಿನ ಎಲ್ಲ ಇಸ್ಲಾಮಿಕ್ ಪ್ರಜಾಪ್ರಭುತ್ವ ದೇಶಗಳ ಮೂಲ ತಾಯ್ನಾಡು. ಬಾಂಗ್ಲಾದೇಶದ ಪ್ರಧಾನಿ ಭಾರತದಲ್ಲಿ ಸುರಕ್ಷಿತ ಎಂದು ಭಾವಿಸಿ ಇಲ್ಲಿಗೆ ಆಗಮಿಸಿದ್ದಾರೆ. ಆದರೆ ಭಾರತದಲ್ಲೇ ವಾಸಿಸುವವರು ಹಿಂದೂ ರಾಷ್ಟ್ರ ಯಾಕೆ? ಏಕೆ ರಾಮರಾಜ್ಯ? ಎಂದು ಕೇಳುತ್ತಲೇ ಇರುತ್ತಾರೆ. ಈ ಪ್ರಶ್ನೆಗೆ ಈಗ ಸೂಕ್ತ ಉತ್ತರ ಸಿಕ್ಕಿದೆʼʼ ಎಂದು ಅವರು ಹೇಳಿದ್ದಾರೆ.

ಮುಂದುವರಿದು, “ಮುಸ್ಲಿಂ ದೇಶಗಳಲ್ಲಿ ಯಾರೂ ಸುರಕ್ಷಿತರಲ್ಲ, ಸ್ವತಃ ಮುಸ್ಲಿಮರು ಕೂಡ. ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಬ್ರಿಟನ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆ ದುರದೃಷ್ಟಕರ. ರಾಮರಾಜ್ಯದಲ್ಲಿ ಬದುಕುತ್ತಿರುವುದು ನಮ್ಮ ಅದೃಷ್ಟ. ಜೈ ಶ್ರೀ ರಾಮ್ʼʼ ಎಂದು ಕಂಗನಾ ಅಭಿಪ್ರಾಯ ಪಟ್ಟಿದ್ದಾರೆ. ಸದ್ಯ ಈ ಹೇಳಿಕೆಗೆ ವಿರುದ್ಧ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಶೇಖ್ ಹಸೀನಾ ಭಾರತಕ್ಕೆ ಪರಾರಿಯಾಗಿದ್ದೇಕೆ? 

ಬಾಂಗ್ಲಾದೇಶದಲ್ಲಿ ಮೀಸಲಾತಿ ಕಾರಣಕ್ಕಾಗಿ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದೆ. 1971ರಲ್ಲಿ ನಡೆದ ಬಾಂಗ್ಲಾದೇಶ ಹೋರಾಟದಲ್ಲಿ ಭಾಗಿಯಾದವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ ಕಲ್ಪಿಸಲಾಗಿತ್ತು. ಮೀಸಲಾತಿ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದ್ದು, ಕೆಲ ದಿನಗಳ ಹಿಂದೆಯೂ ನಡೆದ ಹಿಂಸಾತ್ಮಕ ಹೋರಾಟದಲ್ಲಿ ನೂರಾರು ಜನ ಮೃತಪಟ್ಟಿದ್ದರು.

ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆ ಭುಗಿಲೇಳುತ್ತಲೇ ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್‌, ಶೇ. 30ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿತ್ತು. ಆದರೆ ಸಂಪೂರ್ಣವಾಗಿ ಮೀಸಲಾತಿಯನ್ನು ರದ್ದುಗೊಳಿಸುವ ಬದಲು ಶೇ.5ರಷ್ಟು ಮೀಸಲಾತಿ ಮುಂದುವರಿಸಿದೆ. ಸಂಪೂರ್ಣವಾಗಿ ಮೀಸಲಾತಿ ರದ್ದುಗೊಳಿಸಬೇಕು ಎಂದು ಜನರ ಆಗ್ರಹವಾಗಿದ್ದು, ಇದಕ್ಕಾಗಿ ಪ್ರತಿಭಟನೆ ಆರಂಭವಾಗಿದೆ. ಪ್ರತಿಭಟನೆಗೆ ಪ್ರತಿಪಕ್ಷಗಳೂ ಬೆಂಬಲ ನೀಡಿದ್ದು, ಶೇಖ್‌ ಹಸೀನಾ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಅದರಂತೆ ಶೇಖ್‌ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ.

ಭಾರತಕ್ಕೆ ಬಂದಿದ್ದೇಕೆ?

ಭಾರತವು ಬಾಂಗ್ಲಾದೇಶಕ್ಕೆ ಮಿತ್ರರಾಷ್ಟ್ರವಾಗಿದ್ದು, ನರೇಂದ್ರ ಮೋದಿ ಅವರಿಗೆ ಶೇಖ್‌ ಹಸೀನಾ ಆಪ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಪ್ರಾಣಭಯದಿಂದ ಭಾರತಕ್ಕೆ ಬಂದು ಆಶ್ರಯ ಪಡೆದಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ಅವರು ಇಂಗ್ಲೆಂಡ್‌ಗೆ ತೆರಳಿದ್ದಾರೆ ಎಂದೂ ಮೂಲಗಳು ತಿಳಿಸಿವೆ. ಶೇಖ್‌ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ, ಪಲಾಯನಗೈದ ಬೆನ್ನಲ್ಲೇ ಇತ್ತ ಬಾಂಗ್ಲಾದೇಶದಲ್ಲಿ ಮಧ್ಯಂತರ ಮಿಲಿಟರಿ ಆಡಳಿತ ಜಾರಿಗೆ ಬಂದಿದೆ. ದೇಶದ ಆಡಳಿತ ಈಗ ಸೇನೆಯ ವ್ಯಾಪ್ತಿಗೆ ಬಂದಿದೆ. 

ಇದನ್ನೂ ಓದಿ: Bangla Protest Explainer: ಬಾಂಗ್ಲಾದಲ್ಲಿ ಹಿಂಸೆ ಭುಗಿಲೆದ್ದಿದ್ದೇಕೆ? ಶೇಖ್ ಹಸೀನಾ ಭಾರತಕ್ಕೆ ಪರಾರಿಯಾಗಿದ್ದೇಕೆ? ಮುಂದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Muhammad Yunus : ನೊಬೆಲ್ ಪುರಸ್ಕೃತ ಮುಹಮ್ಮದ್ ಯೂನುಸ್​ ಬಾಂಗ್ಲಾ ಮಧ್ಯಂತರ ಸರ್ಕಾರದ ಸಲಹೆಗಾರ

Muhammad Yunus : ಮಧ್ಯಂತರ ಸರ್ಕಾರವನ್ನು ರಚಿಸಲು ನಾವು ನಿರ್ಧರಿಸಿದ್ದೇವೆ. ಇದರಲ್ಲಿ ದೇಶವಾಸಿಗಳ ವಿಶ್ವಾಸ ಹೊಂದಿರುವ ಅಂತರರಾಷ್ಟ್ರೀಯ ಖ್ಯಾತಿಯ ನೊಬೆಲ್ ಪ್ರಶಸ್ತಿ ವಿಜೇತ ಡಾ.ಮೊಹಮ್ಮದ್ ಯೂನುಸ್ ಮುಖ್ಯ ಸಲಹೆಗಾರರಾಗಿರುತ್ತಾರೆ ಎಂದು ನಹೀದ್ ಘೋಷಿಸಿದ್ದಾರೆ.

VISTARANEWS.COM


on

Muhammad Yunus
Koo

ನವದೆಹಲಿ: ಬಡತನದ ವಿರುದ್ಧದ ಹೋರಾಟಗಾರ ಹಾಗೂ ‘ಬಡವರ ಬ್ಯಾಂಕರ್’ ಎಂದೇ ಖ್ಯಾತಿ ಹೊಂದಿರುವ ನೊಬೆಲ್ ಪ್ರಶಸ್ತಿ ವಿಜೇತ ಡಾ.ಮುಹಮ್ಮದ್ ಯೂನುಸ್ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಲಿದ್ದಾರೆ. ಆ ದೇಶದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿದ್ಯಾರ್ಥಿ ಚಳವಳಿಯ ಸಂಯೋಜಕರು ತಿಳಿಸಿದ್ದಾರೆ ಈ ಮಾಹಿತಿ ಪ್ರಕಟಿಸಿದ್ದಾರೆ ಎಂಬುದಾಗಿ ಡೈಲಿ ಸ್ಟಾರ್ ವರದಿ ಮಾಡಿದೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊವೊಂದರಲ್ಲಿಯೂ ಈ ಮಾಹಿತಿ ನೀಡಲಾಗಿದೆ. ಶೇಖ್ ಹಸೀನಾ ಅವರ ಪದಚ್ಯುತಿಗೆ ಕಾರಣವಾದ ಆಂದೋಲನದ ಪ್ರಮುಖ ಸಂಯೋಜಕರಲ್ಲಿ ಒಬ್ಬರಾದ ನಹೀದ್ ಇಸ್ಲಾಂ ಈ ವಿವರಣೆ ನೀಡಿದ್ದರೆ. ದೇಶದ ಪರಿಸ್ಥಿತಿಯನ್ನು ಪರಿಗಣಿಸಿ ಪ್ರೊಫೆಸರ್ ಯೂನುಸ್ ಜವಾಬ್ದಾರಿ ತೆಗೆದುಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಮಧ್ಯಂತರ ಸರ್ಕಾರವನ್ನು ರಚಿಸಲು ನಾವು ನಿರ್ಧರಿಸಿದ್ದೇವೆ. ಇದರಲ್ಲಿ ದೇಶವಾಸಿಗಳ ವಿಶ್ವಾಸ ಹೊಂದಿರುವ ಅಂತರರಾಷ್ಟ್ರೀಯ ಖ್ಯಾತಿಯ ನೊಬೆಲ್ ಪ್ರಶಸ್ತಿ ವಿಜೇತ ಡಾ.ಮೊಹಮ್ಮದ್ ಯೂನುಸ್ ಮುಖ್ಯ ಸಲಹೆಗಾರರಾಗಿರುತ್ತಾರೆ ಎಂದು ನಹೀದ್ ಘೋಷಿಸಿದ್ದಾರೆ.

ಸರ್ಕಾರಿ ಉದ್ಯೋಗಗಳಲ್ಲಿ ವಿವಾದಾತ್ಮಕ ಕೋಟಾ ವ್ಯವಸ್ಥೆಯ ಬಗ್ಗೆ ವ್ಯಾಪಕ ವಿರೋಧ ವ್ಯಕ್ತಗೊಂಡಿತ್ತು. ಆ ಬಳಿಕ ಉಂಟಾದ ಅರಾಜಕತೆಯಿಂದಾಗಿ ಪ್ರಧಾನಿ ಹಸೀನಾ ಆಡಳಿತದ ಪತನಗೊಂಡಿತ್ತು. ಇನ್ನು ಮಧ್ಯಂತರ ಸರ್ಕಾರವನ್ನು ರಚಿಸಲಾಗುವುದು ಎಂದು ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಹೇಳಿದ ನಂತರ ಈ ಬೆಳವಣಿಗೆ ಸಂಭವಿಸಿದೆ. ಒಂದು ತಿಂಗಳ ಕಾಲ ನಡೆದ ಪ್ರತಿಭಟನೆಯಲ್ಲಿ 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದೇ ವೇಳೆ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನು ಬಿಡುಗಡೆ ಮಾಡುವಂತೆ ಅಧ್ಯಕ್ಷರು ಆದೇಶಿಸಿದ್ದಾರೆ.

ಯೂನುಸ್ ಅವರ ಸಾರ್ವಜನಿಕ ಪ್ರೊಫೈಲ್ ಮತ್ತು ಪಾಶ್ಚಿಮಾತ್ಯ ದೇಶಗಳೊಂದಿಗೆ ವಿಶೇಷವಾಗಿ ಅಮೆರಿಕದೊಂದಿಗೆ ಅವರ ನಿಕಟ ಸಂಪರ್ಕ ಹೊಂದಿದ್ದರು. ಹೀಗಾಗಿ 2008ರಲ್ಲಿ ಅಧಿಕಾರಕ್ಕೆ ಮರಳಿದಾಗಿನಿಂದ ಹಸೀನಾ ಅವರೊಂದಿಗೆ ಒಳ್ಳೆಯ ಸಂಬಂಧ ಹೊಂದಿರಲಿಲ್ಲಲ. 2011 ರಲ್ಲಿ,ಹಸೀನಾ ನೇತೃತ್ವದ ಸರ್ಕಾರವು ಯೂನಸ್​ ಅವರನ್ನು ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ಬಲವಂತವಾಗಿ ವಜಾ ಮಾಡಿತ್ತು. ಅವರು ಕಾನೂನಾತ್ಮಕ 60 ವರ್ಷ ಮೀರಿದವರು ಎಂದು ಕಾರಣಕ್ಕೆ ನೀಡಿತ್ತು. ಅದೇ ರೀತಿ ಅವರು ಸಲಿಂಗಕಾಮದ ಉತ್ತೇಜಕ ಎಂದು ಆರೋಪಿಸಲಾಗಿತ್ತು. ಯೂನುಸ್ ವಿರುದ್ಧ ಹಸೀನಾ ಸರ್ಕಾರ 190ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ.

ಮುಹಮ್ಮದ್ ಯೂನುಸ್ ಯಾರು?

ಬಾಂಗ್ಲಾದೇಶದಲ್ಲಿ ಲಕ್ಷಾಂತರ ಜನರನ್ನು ಬಡತನದಿಂದ ಹೊರತರುವಲ್ಲಿ ಮಾಡಿದ ಕೆಲಸಕ್ಕಾಗಿ 83 ವರ್ಷದ ಅವರಿಗೆ 2006 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿತ್ತು. ಅವರು ಸ್ಥಾಪಿಸಿದ ಮೈಕ್ರೋಫೈನಾನ್ಸ್ ಸಾಲದಾತ ಗ್ರಾಮೀಣ ಬ್ಯಾಂಕ್ ಬಾಂಗ್ಲಾದೇಶದ ಗ್ರಾಮೀಣ ಬಡವರಿಗೆ ಸಣ್ಣ ಸಾಲಗಳನ್ನು ನೀಡುತ್ತದೆ. ಇದು ದೇಶದ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಿದೆ.

ಇದನ್ನೂ ಓದಿ: Bangladesh Protest : ಬಾಂಗ್ಲಾದೇಶ ಬಿಕ್ಕಟ್ಟು; ಸರ್ವಪಕ್ಷ ಸಭೆ ಕರೆದ ವಿದೇಶಾಂಗ ಸಚಿವ ಜೈಶಂಕರ್

ಈ ವರ್ಷದ ಆರಂಭದಲ್ಲಿ, ದೇಶದ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಯೂನುಸ್​ಗೆ ಶಿಕ್ಷೆ ವಿಧಿಸಲಾಯಿತು. ದೇಶದ ಅತಿದೊಡ್ಡ ಮೊಬೈಲ್ ಫೋನ್ ಕಂಪನಿಯಾದ ಗ್ರಾಮೀಣ ಫೋನ್​ನಲ್ಲಿ ಪಾಲನ್ನು ಹೊಂದಿರುವ ಗ್ರಾಮೀಣ ಟೆಲಿಕಾಂನ ಕಾರ್ಮಿಕರ ಕಲ್ಯಾಣ ನಿಧಿಯಿಂದ 2 ಮಿಲಿಯನ್ ಡಾಲರ್ ದುರುಪಯೋಗಪಡಿಸಿದ ಆರೋಪದ ಮೇಲೆ ಬಾಂಗ್ಲಾದೇಶದ ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಘೋಷಿಸಿತ್ತು.

1940 ರಲ್ಲಿ ಚಿತ್ತಗಾಂಗ್​​ನಲ್ಲಿ ಜನಿಸಿದ ಮುಹಮ್ಮದ್ ಯೂನುಸ್, ಅಮೆರಿಕದಲ್ಲಿ ವಾಂಡರ್ಬಿಲ್ಟ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಅಧ್ಯಯನ ಮಾಡಿದ್ದರು. ಅದಕ್ಕೆ ಮೊದಲು ಢಾಕಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ್ದರು. ಯೂನುಸ್ ಬಾಂಗ್ಲಾದೇಶಕ್ಕೆ ಮರಳುವ ಮೊದಲು ಮಿಡಲ್ ಟೆನ್ನೆಸ್ಸೀ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದರು.

Continue Reading

ದೇಶ

Wayanad Landslide: ವಯನಾಡು ಭೂಕುಸಿತದಲ್ಲಿ ಮೃತರ ಸಂಖ್ಯೆ 402: ಸರ್ವಧರ್ಮ ಪ್ರಾರ್ಥನೆ ಮೂಲಕ ಸಾಮೂಹಿಕ ಶವ ಸಂಸ್ಕಾರ

Wayanad Landslide: ವಯನಾಡು ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 402ಕ್ಕೆ ಏರಿದ್ದು, ಇನ್ನೂ ನೂರಾರು ಮಂದಿ ಪತ್ತೆಯಾಗಬೇಕಿದೆ. ಇದಕ್ಕಾಗಿ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ ಗುರುತು ಸಿಗದ ಮೃತದೇಹಗಳಿಗೆ ಸರ್ವಧರ್ಮ ಪ್ರಾರ್ಥನೆ ಮೂಲಕ ಸಾಮೂಹಿಕವಾಗಿ ಅಂತಿಮ ವಿಧಿ ವಿಧಾನ ನಡೆಸಲಾಗುತ್ತಿದೆ. ಪುತ್ತುಮಲ ಎಂಬಲ್ಲಿ ಸೋಮವಾರ 29 ಮೃತದೇಹ ಮತ್ತು 154 ದೇಹದ ಭಾಗಗಳ ಅಂತಿಮ ಕ್ರಿಯೆಯನ್ನು ಹಿಂದು, ಕ್ರಿಶ್ಚಿಯನ್‌ ಮತ್ತು ಮುಸ್ಲಿಂ ಧರ್ಮದ ಪ್ರಾರ್ಥನೆ ಬಳಿಕ ನೆರವೇರಿಸಲಾಯಿತು.

VISTARANEWS.COM


on

Wayanad Landslide
Koo

ತಿರುವನಂತಪುರಂ: ಕೇರಳ ಮಾತ್ರವಲ್ಲ ದೇಶವನ್ನೇ ಬೆಚ್ಚಿಬೀಳಿಸಿದ್ದ ವಯನಾಡು ಭೂಕುಸಿತ (Wayanad Landslide) ಸಂಭವಿಸಿ ಇಂದಿಗೆ 1 ವಾರ. ಈಗಲೂ ಮೃತದೇಹ ಪತ್ತೆಯಾಗುತ್ತಲೇ ಇದೆ. ಸದ ಪ್ರವಾಸಿಗರಿಂದ ಗಿಜಿಗುಡುತ್ತಿದ್ದ ವಯನಾಡಿನ ಮೇಪ್ಪಾಡಿಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ ಮತ್ತು ಕಣ್ಣೀರಿನ ಕಥೆಗಳೇ ತುಂಬಿಕೊಂಡಿದೆ. ಕಂಡು ಕೇಳರಿಯದ ಈ ಭೀಕರ ದುರಂತದಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 402ಕ್ಕೆ ಏರಿದ್ದು, ಇನ್ನೂ ನೂರಾರು ಮಂದಿ ಪತ್ತೆಯಾಗಬೇಕಿದೆ. ಇದಕ್ಕಾಗಿ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ ಗುರುತು ಸಿಗದ ಮೃತದೇಹಗಳಿಗೆ ಸರ್ವಧರ್ಮ ಪ್ರಾರ್ಥನೆ ಮೂಲಕ ಸಾಮೂಹಿಕವಾಗಿ ಅಂತಿಮ ವಿಧಿ ವಿಧಾನ ನಡೆಸಲಾಗುತ್ತಿದೆ.

ಪುತ್ತುಮಲ ಎಂಬಲ್ಲಿ ಸೋಮವಾರ 29 ಮೃತದೇಹ ಮತ್ತು 154 ದೇಹದ ಭಾಗಗಳ ಅಂತಿಮ ಕ್ರಿಯೆಯನ್ನು ಹಿಂದು, ಕ್ರಿಶ್ಚಿಯನ್‌ ಮತ್ತು ಮುಸ್ಲಿಂ ಧರ್ಮದ ಪ್ರಾರ್ಥನೆ ಬಳಿಕ ನೆರವೇರಿಸಲಾಯಿತು. ಅಪರಾಹ್ನ ಆರಂಭವಾದ ಈ ಪ್ರಕ್ರಿಯೆ ಮಧ್ಯರಾತ್ರಿ ವೇಳೆ ಪೂರ್ತಿಯಾಯಿತು.

ಅವಶೇಷಗಳಡಿ ಸಿಕ್ಕ ಶರೀರದ ಭಾಗಗಳನ್ನೂ ಮೃತದೇಹವೆಂದು ಪರಿಗಣಿಸಿ ಅದಕ್ಕೆ ತಕ್ಕಂತೆ ವಿಧಿ ವಿಧಾನ ನಡೆಸಲಾಯಿತು. ಪ್ರತಿ ಮೃತದೇಹದ ಮುಂಭಾಗದಲ್ಲಿ ಮೊದಲಿಗೆ ಕ್ರಿಶ್ಚಿಯನ್‌ ಬಳಿಕ ಹಿಂದು ಮತ್ತು ಮುಸ್ಲಿಂ ಧರ್ಮದ ಪ್ರಾರ್ಥನೆ ನಡೆಸಿ ನಂತರ ಅಂತ್ಯ ಸಂಸ್ಕಾರ ನಡೆಸಿ ಮಣ್ಣು ಮಾಡಲಾಯಿತು.

ʼʼಮೃತದೇಹದ ಭಾಗಗಳ ಫೋಟೊ, ರಕ್ತದ ಮಾದರಿ, ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿ ಇಡಲಾಗುತ್ತಿದೆ. ಭವಿಷ್ಯದಲ್ಲಿ ವಾರಸುದಾರರಿಗೆ ಗುರುತು ಹಿಡಿಯಲು ಸಹಾಯವಾಗುವಂತೆ ಆಲ್ಬಂ ಮಾಡಿ ಇರಿಸಲಾಗುವುದುʼʼ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ʼʼಇದೊಂದು ಭಾವನಾತ್ಮಕ ಕ್ಷಣವಾಗಿತ್ತು. ಮೃತದೇಹದ ಕೆಲವೇ ಭಾಗಗಳು ದೊರೆತ ಹಿನ್ನಲೆಯಲ್ಲಿ ಸರ್ವಧರ್ಮ ಪ್ರಾರ್ಥನೆ ನಡೆಸಿ ಅವರ ಅಂತಿಮ ಸಂಸ್ಕಾರ ನಡೆಸಲಾಗಿದೆʼʼ ಎಂದು ಸ್ಥಳೀಯರು ತಿಳಿಸಿದ್ದಾರೆ. ಆ್ಯಂಬುಲೆನ್ಸ್‌ ಮೂಲಕ ಮೃತದೇಹ ಮತ್ತು ಮೃತದೇಹದ ಭಾಗಗಳನ್ನು ತಂದು ಇದಕ್ಕಾಗಿ ಸಜ್ಜುಗೊಳಿಸಿದ್ದ ಟೇಬಲ್‌ ಮೇಲಿರಿಸಿ ಪ್ರಾರ್ಥನೆ ಸಲ್ಲಿಸುವಾಗ ಸ್ಥಳದಲ್ಲಿದ್ದವರು ಭಾವುಕರಾದರು.

ಅವಘಡ ನಡೆದ ಸ್ಥಳಗಳ ಮಣ್ಣು, ಅವಶೇಷಗಳ ರಾಶಿ ಅಡಿಯಲ್ಲಿ ಸುಮಾರು 180 ಮೃತದೇಹದ ಭಾಗಗಳು ಕಂಡು ಬಂದಿವೆ. ಇನ್ನೂ ಸುಮಾರು 180 ಮಂದಿ ನಾಪತ್ತೆಯಾಗಿದ್ದು ಅವರಿಗಾಗಿ ಹುಡುಕಾಟ ಮುಂದುವರಿದಿದೆ. ಗಾಯಗೊಂಡ 91 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 16 ಕಾಳಜಿ ಕೇಂದ್ರಗಳಲ್ಲಿ 2,514 ಸಂತ್ರಸ್ತರು ಆಶ್ರಯ ಪಡೆದಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡಿಗಾಗಿ ಮಿಡಿಯಿತು ವಿದೇಶಿಗರ ಮನ; ಸಂತ್ರಸ್ತರ ನೆರವಿಗೆ ಧಾವಿಸಿದ ಇಂಗ್ಲೆಂಡ್‌ನ ವಿದ್ಯಾರ್ಥಿನಿಯರು

ಇಂದು ಸೂಜಿಪಾರದಲ್ಲಿ ಹುಡುಕಾಟ ನಡೆಯಲಿದೆ. ಈ ಹಿಂದೆ ಕಾರ್ಯಾಚರಣೆ ನಡೆಸಲು ಸಾಧ್ಯವಾಗದ ಭಾಗಗಳಿಗೆ ತೆರಳಿ ಸ್ವಯಂಸೇವಕರು ಕಾರ್ಯಾಚರಣೆ ನಡೆಸಲಿದ್ದಾರೆ. ಹೆಲಿಕಾಫ್ಟರ್‌ ಮೂಲಕ ರಕ್ಷಣಾ ಸಿಬ್ಬಂದಿ ಇಲ್ಲಿಗೆ ತೆರಳಲಿದ್ದಾರೆ. ತರಬೇತಿ ಪಡೆದ ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿ, ನಾಲ್ಕು ಮಂದಿ ಎಸ್‌ಒಜಿ, ಆರು ಮಂದಿ ಸೇನಾ ಸಿಬ್ಬಂದಿಯನ್ನು ಒಳಗೊಂಡ 12 ಮಂದಿಯ ತಂಡ ಪ್ರಯಾಣ ಬೆಳೆಸಲಿದೆ. ಸನ್‌ರೈಸ್‌ ವ್ಯಾಲಿಯ ಸುತ್ತಮುತ್ತ ಶೋಧ ಕಾರ್ಯ ನಡೆಯಲಿದೆ. ಮೃತದೇಹ ಕಂಡು ಬಂದರೆ ಅದನ್ನು ಸಾಗಿಸಲು ವಿಶೇಷ ಹೆಲಿಕಾಫ್ಟರ್‌ ಅನ್ನೂ ಸಜ್ಜುಗೊಳಿದಲಾಗಿದೆ ಎಂದು ಸಚಿವ ಕೆ.ರಾಜನ್‌ ತಿಳಿಸಿದ್ದಾರೆ. ಇದೇ ವೇಳೆ ದುರಂತ ನಡೆದ ಸ್ಥಳದಲ್ಲಿ ಸೇನೆ ತಿಳಿಸುವವರೆಗೆ ಹುಡುಕಾಟ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.

Continue Reading

ಪ್ರಮುಖ ಸುದ್ದಿ

NEET PG : ನೀಟ್​ ಪಿಜಿ ಪರೀಕ್ಷೆಯ ಗೌಪ್ಯ ಮಾಹಿತಿಗಳು ಸೋರಿಕೆ, ಅಭ್ಯರ್ಥಿಗಳಿಗೆ ಆತಂಕ

NEET PG : ಆಲ್ ಎಫ್ಎಂಜಿ ಅಸೋಸಿಯೇಷನ್ ಪ್ರಕಾರ, ನೀಟ್ ಪಿಜಿ ಪರೀಕ್ಷೆಗೆ ಕೆಲವು ದಿನಗಳ ಮೊದಲು ಎನ್​​ಬಿಇಎಂಎಸ್​ನಿ ನೀಡಲಾಗುವ ನಿರ್ಣಾಯಕ ನೋಟಿಸ್ ಸೋರಿಕೆಯಾಗಿದೆ. ವೈದ್ಯಕೀಯ ಪರೀಕ್ಷಾ ಸಂಸ್ಥೆ ಎನ್​​ಬಿಇಎಂಎಸ್ ತನ್ನ ಅಧಿಕೃತ ವೆಬೆ್​ಸೈಟ್​ನಲ್ಲಿ ನೀಟ್ ಪಿಜಿ ಪರೀಕ್ಷೆ ಬಗ್ಗೆ ಅಂತಹ ಯಾವುದೇ ಸೂಚನೆ ಬಿಡುಗಡೆ ಮಾಡದಿದ್ದರೂ ಈ ಹೊರಗೆ ಹೇಗೆ ಪ್ರಕಟಗೊಂಡಿತು ಎಂಬ ಕಳವಳ ವ್ಯಕ್ತವಾಗಿದೆ.

VISTARANEWS.COM


on

NEET PG
Koo

ನವದೆಹಲಿ: ದೇಶದಲ್ಲಿ ನಡೆಸಲಾಗುವ ನಾನಾ ಪ್ರವೇಶ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಂಚನೆ ಪ್ರಕರಣಗಳಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೆಟ್ಟು ಬೀಳುತ್ತಿದೆ. ಈ ನಡುವೆ ಫಾರಿಸ್ ಮೆಡಿಕಲ್​ ಗ್ರಾಜುವೇಟ್ಸ್​ ಅಸೋಸಿಯೇಷನ್, ಎಕ್ಸ್​ನಲ್ಲಿ ಮಾಡಿರುವ ಪೋಸ್ಟ್ ಪ್ರಕಾರ ಆಗಸ್ಟ್​​ 11ರಂದು ನಡೆಯಬೇಕಾಗಿರುವ ನೀಟ್​​ ಪಿಜಿ ಪರೀಕ್ಷೆಯ ಗೌಪ್ಯ ಮಾಹಿತಿ ಸೋರಿಕೆಯಾಗಿದೆ. ಇದು ಆಕಾಂಕ್ಷಿಗಳು ಮತ್ತು ಇತರ ಪಾಲುದಾರರ ಕಳವಳ ಉಂಟು ಮಾಡಿದೆ. ಪರೀಕ್ಷೆಯನ್ನು ಆಗಸ್ಟ್ 11 ರಂದು 169 ನಗರಗಳ 376 ಪರೀಕ್ಷಾ ಕೇಂದ್ರಗಳಲ್ಲಿ 2,28,542 ಅಭ್ಯರ್ಥಿಗಳಿಗೆ ಆಯೋಜಿಸಲಾಗುತ್ತದೆ.

ಆಲ್ ಎಫ್ಎಂಜಿ ಅಸೋಸಿಯೇಷನ್ ಪ್ರಕಾರ, ನೀಟ್ ಪಿಜಿ ಪರೀಕ್ಷೆಗೆ ಕೆಲವು ದಿನಗಳ ಮೊದಲು ಎನ್​​ಬಿಇಎಂಎಸ್​ನಿ ನೀಡಲಾಗುವ ನಿರ್ಣಾಯಕ ನೋಟಿಸ್ ಸೋರಿಕೆಯಾಗಿದೆ. ವೈದ್ಯಕೀಯ ಪರೀಕ್ಷಾ ಸಂಸ್ಥೆ ಎನ್​​ಬಿಇಎಂಎಸ್ ತನ್ನ ಅಧಿಕೃತ ವೆಬೆ್​ಸೈಟ್​ನಲ್ಲಿ ನೀಟ್ ಪಿಜಿ ಪರೀಕ್ಷೆ ಬಗ್ಗೆ ಅಂತಹ ಯಾವುದೇ ಸೂಚನೆ ಬಿಡುಗಡೆ ಮಾಡದಿದ್ದರೂ ಈ ಹೊರಗೆ ಹೇಗೆ ಪ್ರಕಟಗೊಂಡಿತು ಎಂಬ ಕಳವಳ ವ್ಯಕ್ತವಾಗಿದೆ.

ಪರೀಕ್ಷಾ ಶಿಫ್ಟ್ ಮತ್ತು ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆಯ ಬಗ್ಗೆ ಮಾಹಿತಿಯನ್ನು ಒಳಗೊಂಡಿರುವ ಎನ್​​ಬಿಇಎಂಎಸ್​ನ ಗೌಪ್ಯ ಪತ್ರವು ಸಾರ್ವಜನಿಕವಾಗಿ ಸೋರಿಕೆಯಾಗಿದೆ ಎಂದು ತೋರುತ್ತದೆ.
ಗೌಪ್ಯ ಪತ್ರ ಸೋರಿಕೆಯಾದರೆ, ನೀಟ್ ಪಿಜಿ ಪತ್ರಿಕೆಯ ಸುರಕ್ಷತೆಯ ಬಗ್ಗೆ ನಮಗೆ ವಿಶ್ವಾಸವಿದೆಯೇ? ಎಂದು ಪೋಸ್ಟ್​ನಲ್ಲಿ ಬರೆಯಲಾಗಿದೆ.

ಆಲ್ ಎಫ್ಎಂಜಿ ಅಸೋಸಿಯೇಷನ್ ವೆಬ್​​ಸೈಟ್​ನಲ್ಲಿ ಪೋಸ್ಟ್ ಮಾಡಿದ ಅಧಿಸೂಚನೆಯು ಪರೀಕ್ಷೆಯ ಸಮಯ, ಅಭ್ಯರ್ಥಿಗಳ ಪ್ರವೇಶದ ಸಮಯ, ಪರೀಕ್ಷೆಯ ವಿಧಾನ, ನೀಟ್ ಪಿಜಿ 2024 ತೆಗೆದುಕೊಳ್ಳುವ ಅಭ್ಯರ್ಥಿಗಳ ಸಂಖ್ಯೆ ಮತ್ತು ಪರೀಕ್ಷಾ ಕೇಂದ್ರಗಳ ಬಗ್ಗೆ ಮಾಹಿತಿ ಒಳಗೊಂಡಿದೆ. ಆಗಸ್ಟ್ 11, 2024 ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 12:30 ರವರೆಗೆ ಮತ್ತು ಮಧ್ಯಾಹ್ನ 3:30ರಿಂದ 7 ರವರೆಗೆ ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಬೆಳಗ್ಗೆ 7 ರಿಂದ ಮತ್ತು ಮಧ್ಯಾಹ್ನ 1:30ರಿಂದ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಬೇಕಾಗುತ್ತದೆ.

ಇದನ್ನೂ ಓದಿ: Bangladesh Protest : ಬಾಂಗ್ಲಾದೇಶ ಬಿಕ್ಕಟ್ಟು; ಸರ್ವಪಕ್ಷ ಸಭೆ ಕರೆದ ವಿದೇಶಾಂಗ ಸಚಿವ ಜೈಶಂಕರ್

ಹೆಚ್ಚಿನ ಸಂಖ್ಯೆಯ ವೈದ್ಯಕೀಯ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೃತ್ತಿಪರ ಭವಿಷ್ಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವ ಈ ಪರೀಕ್ಷೆಯ ನಿರ್ಣಾಯಕ ಸ್ವರೂಪವನ್ನು ಗಮನಿಸಿದರೆ, ಪ್ರಕ್ರಿಯೆಯನ್ನು ಸುರಕ್ಷಿತ ಮತ್ತು ತಡೆರಹಿತ ರೀತಿಯಲ್ಲಿ ನಡೆಸಲಾಗುತ್ತದೆ ಎಂದು ಖಚಿತಪಡಿಸಿಕೊಳ್ಳುವುದು ಕಡ್ಡಾಯ. ಈ ಪರೀಕ್ಷೆಯನ್ನು ಸುಗಮವಾಗಿ ಮತ್ತು ಸುರಕ್ಷಿತವಾಗಿ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಎನ್​​ಬಿಇಎಂಎಸ್ ಯಾವುದೇ ಪ್ರಯತ್ನವನ್ನು ಬಿಟ್ಟಿಲ್ಲ, ನಾವು ನಿಮ್ಮ ಸಹಾಯವನ್ನು ವಿನಂತಿಸುತ್ತೇವೆ ಎಂದು ಸೋರಿಕೆಯಾಗಿರುವ ನೋಟಿಸ್​ನಲ್ಲಿ ಬರೆಯಲಾಗಿದೆ.

Continue Reading

ಪ್ರಮುಖ ಸುದ್ದಿ

Bangalore 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 7 ಸ್ಥಳ ನಿಗದಿ, ಯಾವ್ಯಾವುದು?

Bangalore 2nd Airport: ಬೆಂಗಳೂರಿನಿಂದ ಸುಮಾರು 40-50 ಕಿ.ಮೀ ದೂರದಲ್ಲಿರುವ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಒತ್ತಾಯಿಸುತ್ತಿರುವ ನೆರೆಯ ತಮಿಳುನಾಡಿಗೆ (Tamil Nadu) ಮುಂಚಿತವಾಗಿ ಸರ್ಕಾರವು ಶೀಘ್ರದಲ್ಲೇ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಿಂದ (AAI) ಒಪ್ಪಿಗೆಯನ್ನು ಪಡೆಯಲು ಬಯಸಿದೆ.

VISTARANEWS.COM


on

bangalore 2nd airport
Koo

ಬೆಂಗಳೂರು: ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ (Bangalore 2nd Airport) ನಿರ್ಮಿಸಲು ಜಾಗ ನಿಗದಿಪಡಿಸಲು ಸರ್ಕಾರ ಚಿಂತಿಸುತ್ತಿದ್ದು, ಇದಕ್ಕಾಗಿ ಏಳು ಸ್ಥಳಗಳನ್ನು ಶಾರ್ಟ್‌ಲಿಸ್ಟ್‌ (Short List) ಮಾಡಲಾಗಿದೆ. ಬೆಂಗಳೂರಿನಿಂದ (Bengaluru 2nd Airport) ಸುಮಾರು 50-60 ಕಿಮೀ ದೂರದಲ್ಲಿರುವ ಸ್ಥಳಗಳನ್ನು ಆರಿಸಿಕೊಳ್ಳಲಾಗಿದೆ.

ಈ ಮೂಲಕ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣದ ಕನಸು ನನಸಾಗುವತ್ತ ಮುನ್ನಡೆಯುತ್ತಿದೆ. ಹಾರೋಹಳ್ಳಿ ಮತ್ತು ದಾಬಸ್‌ಪೇಟೆ ಎರಡು ಉಪನಗರಗಳು, ರಾಜ್ಯ ರಾಜಧಾನಿಗೆ ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಿಸಲು ಸರ್ಕಾರ ಸೋಮವಾರ ಶಾರ್ಟ್‌ಲಿಸ್ಟ್ ಮಾಡಿದ ಏಳು ಸ್ಥಳಗಳಲ್ಲಿ ಸೇರಿವೆ. ಇತರ ಐದು ಸ್ಥಳಗಳೆಂದರೆ ತುಮಕೂರು ಬಳಿ, ಕೊರಟಗೆರೆ ಬಳಿ, ಕುಣಿಗಲ್ ಬಳಿ, ಹುಲಿಯೂರುದುರ್ಗ ಮತ್ತು ಮಳವಳ್ಳಿ ಬಳಿ.

ಬೆಂಗಳೂರಿನಿಂದ ಸುಮಾರು 40-50 ಕಿ.ಮೀ ದೂರದಲ್ಲಿರುವ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಒತ್ತಾಯಿಸುತ್ತಿರುವ ನೆರೆಯ ತಮಿಳುನಾಡಿಗೆ (Tamil Nadu) ಮುಂಚಿತವಾಗಿ ಸರ್ಕಾರವು ಶೀಘ್ರದಲ್ಲೇ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಿಂದ (AAI) ಒಪ್ಪಿಗೆಯನ್ನು ಪಡೆಯಲು ಬಯಸಿದೆ. ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕರ್ನಾಟಕ) ಲಿಮಿಟೆಡ್ (iDeCK) ಮತ್ತು ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಪ್ರಸ್ತಾವಿತ ಸ್ಥಳಗಳ ಪ್ರಸ್ತುತಿಗಳನ್ನು ವೀಕ್ಷಿಸಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಸಮ್ಮುಖದಲ್ಲಿ ಸೋಮವಾರ ಸಭೆ ನಡೆದಿದೆ.

ಇತರ ರಾಜ್ಯಗಳು ಈ ಅವಕಾಶವನ್ನು ಪಡೆದುಕೊಳ್ಳದಂತೆ ನಾವು ಸ್ವಲ್ಪ ವೇಗವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಹೇಳಿದ್ದಾರೆ. ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ಎಲ್ಲಾ ಏಳು ಗುರುತಿಸಲಾದ ಸ್ಥಳಗಳನ್ನು ವಿವರಿಸುವ ಅರ್ಜಿಯನ್ನು ಸರ್ಕಾರವು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ (ಎಎಐ) ಸಲ್ಲಿಸಲಿದೆ. ವಿಮಾನ ನಿಲ್ದಾಣಗಳ ಪ್ರಾಧಿಕಾರ ಅಧಿಕಾರಿಗಳು ನಂತರ ಕಾರ್ಯಸಾಧ್ಯತೆಯನ್ನು ನಿರ್ಣಯಿಸಲು ಸೈಟ್‌ಗಳಿಗೆ ಭೇಟಿ ನೀಡುತ್ತಾರೆ. ಅಂತಿಮ ನಿರ್ಧಾರವು ಪ್ರಯಾಣಿಕರ ಸಾಂದ್ರತೆ, ಸಂಪರ್ಕ, ಕೈಗಾರಿಕಾ ಬೆಳವಣಿಗೆ, ಸರಕು ಸಾಮರ್ಥ್ಯ ಮತ್ತು ನದಿಗಳು, ಬೆಟ್ಟಗಳು ಮತ್ತು ಜೀವವೈವಿಧ್ಯಗಳ ಉಪಸ್ಥಿತಿಯಂತಹ ಪರಿಸರ ಪರಿಗಣನೆಯಂತಹ ಅಂಶಗಳನ್ನು ಆಧರಿಸಿದೆ ಎಂದು ಅವರು ಹೇಳಿದ್ದಾರೆ.

ಪಾಟೀಲ್ ಮತ್ತು ಶಿವಕುಮಾರ್ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡನೇ ವಿಮಾನ ನಿಲ್ದಾಣದ ಸ್ಥಳಗಳ ಕುರಿತು ಮಾಹಿತಿ ನೀಡುವ ನಿರೀಕ್ಷೆಯಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಂದಿಗೆ 25 ವರ್ಷಗಳ ಒಪ್ಪಂದದ ಪ್ರಕಾರ, 2033-34 ರವರೆಗೆ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣವನ್ನು ಪಡೆಯಲು ಸಾಧ್ಯವಿಲ್ಲ. 2035ರ ವೇಳೆಗೆ ಹೊಸ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆ. ಅದಕ್ಕಾಗಿ ಸಿದ್ಧತೆ ನಡೆಸುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಐಡೆಕ್‌ ನಡೆಸಿದ ಅಧ್ಯಯನದ ಆಧಾರದ ಮೇಲೆ ಏಳು ಸ್ಥಳಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ. ಎರಡು ಸ್ಥಳಗಳಿಗೆ ಒಮ್ಮತ ಬಂದಿದೆ. ಒಂದು ಹಾರೋಹಳ್ಳಿ ಮತ್ತೊಂದು ದಾಬಸ್‌ಪೇಟೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದಾಗ್ಯೂ, ಹೊಸ ಸ್ಥಳವನ್ನು ಅಂತಿಮಗೊಳಿಸುವ ಮೊದಲು ಕೆಐಎಯ ಮುಂದುವರಿದ ವಾಣಿಜ್ಯ ಕಾರ್ಯಸಾಧ್ಯತೆಯನ್ನು ಪರಿಗಣಿಸಬೇಕಾಗುತ್ತದೆ. ಅಲ್ಲದೆ, ವಾಯುಪ್ರದೇಶವು ಮತ್ತೊಂದು ಪರಿಗಣನೆಯಾಗುತ್ತದೆ. ಎಚ್‌ಎಎಲ್‌ ವಾಯುಪ್ರದೇಶವನ್ನು ತೆರವುಗೊಳಿಸಬೇಕಾಗಿದೆ, ಆದ್ದರಿಂದ ಅವು ಮುಖ್ಯವಾಗುತ್ತವೆ. ಗುರುತಿಸಲಾದ ಸ್ಥಳಗಳನ್ನು ಎಎಐನ ಸೈಟ್ ಕ್ಲಿಯರೆನ್ಸ್ ಸಮಿತಿಗೆ ಕಳುಹಿಸಲಾಗುತ್ತದೆ. ಎಚ್‌ಎಎಲ್‌ನೊಂದಿಗೆ ಸಮಾಲೋಚಿಸಿ ಮತ್ತು ಬಿಐಎಎಲ್‌ನ ಮುಂದುವರಿದ ವಾಣಿಜ್ಯ ಕಾರ್ಯಸಾಧ್ಯತೆಯನ್ನು ನೋಡುವ ಮೂಲಕ ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಅಧಿಕಾರಿ ಹೇಳಿದರು.

ಎರಡನೇ ವಿಮಾನ ನಿಲ್ದಾಣದ ಸ್ಥಳದ ನಿರ್ಧಾರವು ರಾಜಕೀಯ ಪರಿಗಣನೆಗಳನ್ನು ಆಧರಿಸಿಲ್ಲ. ಇದು ಎಎಐ ಮತ್ತು ಬೆಂಗಳೂರು ಸೇರಿದಂತೆ ಕರ್ನಾಟಕದ ಒಟ್ಟಾರೆ ಅಭಿವೃದ್ಧಿಯಿಂದ ಹೊಂದಿಸಲಾದ ಸರಿಸುಮಾರು 15 ನಿಯತಾಂಕಗಳಿಂದ ಮಾರ್ಗದರ್ಶನ ಪಡೆಯುತ್ತದೆ ಎಂದು ಸಚಿವ ಎಂ.ಬಿ ಪಾಟೀಲ್ (Minister MB Patil) ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

Continue Reading
Advertisement
Muhammad Yunus
ಪ್ರಮುಖ ಸುದ್ದಿ23 mins ago

Muhammad Yunus : ನೊಬೆಲ್ ಪುರಸ್ಕೃತ ಮುಹಮ್ಮದ್ ಯೂನುಸ್​ ಬಾಂಗ್ಲಾ ಮಧ್ಯಂತರ ಸರ್ಕಾರದ ಸಲಹೆಗಾರ

murder case
ರಾಮನಗರ28 mins ago

Murder case : ರಾಮನಗರದಲ್ಲಿ ಸಂಬಂಧಿಕರಿಂದಲೇ ಯುವಕನ ಬರ್ಬರ ಹತ್ಯೆ

Gold Rate Today
ಚಿನ್ನದ ದರ52 mins ago

Gold Rate Today: ಕೊನೆಗೂ ಇಳಿಯಿತು ಬಂಗಾರದ ದರ; ಇಂದು ಚಿನ್ನ ಇಷ್ಟು ಅಗ್ಗ

Sexual Abuse
Latest1 hour ago

Sexual Abuse : ಸಾಲ ತೀರಿಸಲಾಗದೆ ಅಪ್ರಾಪ್ತ ವಯಸ್ಸಿನ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಲು ಯತ್ನಿಸಿದ ತಾಯಿ!

Dinesh Karthik
ಪ್ರಮುಖ ಸುದ್ದಿ1 hour ago

Dinesh Karthik : ದಕ್ಷಿಣ ಆಫ್ರಿಕಾದ ಲೀಗ್​ನಲ್ಲಿ ಪಾರ್ಲ್​ ರಾಯಲ್ಸ್​ ತಂಡ ಸೇರಿದ ದಿನೇಶ್ ಕಾರ್ತಿಕ್​

actor yash 1
ಸಿನಿಮಾ1 hour ago

Actor Yash: ಧರ್ಮಸ್ಥಳದಲ್ಲಿ ರಾಕಿಂಗ್ ಸ್ಟಾರ್ ಯಶ್, ಟಾಕ್ಸಿಕ್‌ ಶೂಟಿಂಗ್‌ಗೂ ಮುನ್ನ ಟೆಂಪಲ್‌ ರನ್

Bengaluru News
ಬೆಂಗಳೂರು1 hour ago

Bengaluru News : ಪೊಲೀಸರಿಂದಲೇ ಹಣ ಸುಲಿಗೆ ಮಾಡುತ್ತಿದ್ದ ಚಲಾಕಿ ಕಳ್ಳ ಅರೆಸ್ಟ್‌

Wayanad Landslide
ದೇಶ1 hour ago

Wayanad Landslide: ವಯನಾಡು ಭೂಕುಸಿತದಲ್ಲಿ ಮೃತರ ಸಂಖ್ಯೆ 402: ಸರ್ವಧರ್ಮ ಪ್ರಾರ್ಥನೆ ಮೂಲಕ ಸಾಮೂಹಿಕ ಶವ ಸಂಸ್ಕಾರ

NEET PG
ಪ್ರಮುಖ ಸುದ್ದಿ2 hours ago

NEET PG : ನೀಟ್​ ಪಿಜಿ ಪರೀಕ್ಷೆಯ ಗೌಪ್ಯ ಮಾಹಿತಿಗಳು ಸೋರಿಕೆ, ಅಭ್ಯರ್ಥಿಗಳಿಗೆ ಆತಂಕ

Self Harming
ಬೆಂಗಳೂರು2 hours ago

Self Harming: ಅಪಾರ್ಟ್‌ಮೆಂಟ್‌ನ ಬಾಲ್ಕಿನಿಯಲ್ಲಿ ನೇಣು ಬಿಗಿದುಕೊಂಡ ಅಪರಿಚಿತ ಮಹಿಳೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ7 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌