Bangladesh Unrest: ಶೇಖ್ ಹಸೀನಾ ಬೆಂಬಲಿಗನ ಫೈವ್‌ ಸ್ಟಾರ್‌ ಹೊಟೇಲ್‌ಗೆ ಬೆಂಕಿ; 24 ಜನ ಸಜೀವ ದಹನ - Vistara News

ದೇಶ

Bangladesh Unrest: ಶೇಖ್ ಹಸೀನಾ ಬೆಂಬಲಿಗನ ಫೈವ್‌ ಸ್ಟಾರ್‌ ಹೊಟೇಲ್‌ಗೆ ಬೆಂಕಿ; 24 ಜನ ಸಜೀವ ದಹನ

Bangladesh Unrest: ಜೋಶೋರ್ ಜಿಲ್ಲೆಯ ಜಿಲ್ಲಾ ಅವಾಮಿ ಲೀಗ್ ಪ್ರಧಾನ ಕಾರ್ಯದರ್ಶಿ ಶಾಹಿನ್ ಚಕ್ಲಾದಾರ್ ಒಡೆತನದ ಜಬೀರ್ ಇಂಟರ್ನ್ಯಾಷನಲ್ ಹೋಟೆಲ್‌ಗೆ ಉದ್ರಿಕ್ಯ ಗುಂಪು ಬೆಂಕಿ ಇಟ್ಟಿದ್ದಾರೆ. ಆಗ ಹೊಟೇಲ್‌ ಒಳಗಿದ್ದ ಅನೇಕ ಗಣ್ಯರು ಸುಟ್ಟು ಕರಕಲಾಗಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಭಾರತೀಯ ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

VISTARANEWS.COM


on

Bangladesh unrest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ನೆರೆಯ ರಾಷ್ಟ್ರ ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರ(Bangladesh Unrest)ಕ್ಕೆ ಮಿತಿಯೇ ಇಲ್ಲ ಎನಿಸುತ್ತಿದೆ. ನಿನ್ನೆಯಷ್ಟೇ ಪ್ರಧಾನಿ ಶೇಖ್‌ ಹಸೀನಾ(Sheikh Hasina) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಬೆನ್ನಲ್ಲೇ ಬಾಂಗ್ಲಾದೇಶದ ಅವಾಮಿ ಲೀಗ್ ಪಕ್ಷದ ನಾಯಕರೊಬ್ಬರ ಒಡೆತನದ ಹೋಟೆಲ್‌ಗೆ ಉದ್ರಿಕ್ತ ಪ್ರತಿಭಟನಾಕಾರರು ಬೆಂಕಿ ಇಟ್ಟಿದ್ದಾರೆ. ಪರಿಣಾಮವಾಗಿ ಇಂಡೋನೇಷ್ಯಾ ಪ್ರಜೆ ಸೇರಿದಂತೆ ಕನಿಷ್ಠ 24 ಜನರನ್ನು ಗುಂಪು ಸಜೀವ ದಹನಗೊಂಡಿದೆ.

ಇನ್ನು ಈ ಬಗ್ಗೆ ಸ್ಥಳೀಯ ಪತ್ರಕರ್ತರು ಮತ್ತು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದ್ದು, ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ನಂತರ ಸೋಮವಾರ ತಡರಾತ್ರಿ ಈ ದುರಂತ ಘಟನೆ ನಡೆದಿದೆ ಎನ್ನಲಾಗಿದೆ. ಜೋಶೋರ್ ಜಿಲ್ಲೆಯ ಜಿಲ್ಲಾ ಅವಾಮಿ ಲೀಗ್ ಪ್ರಧಾನ ಕಾರ್ಯದರ್ಶಿ ಶಾಹಿನ್ ಚಕ್ಲಾದಾರ್ ಒಡೆತನದ ಜಬೀರ್ ಇಂಟರ್ನ್ಯಾಷನಲ್ ಹೋಟೆಲ್‌ಗೆ ಉದ್ರಿಕ್ಯ ಗುಂಪು ಬೆಂಕಿ ಇಟ್ಟಿದ್ದಾರೆ. ಆಗ ಹೊಟೇಲ್‌ ಒಳಗಿದ್ದ ಅನೇಕ ಗಣ್ಯರು ಸುಟ್ಟು ಕರಕಲಾಗಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಭಾರತೀಯ ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರಲ್ಲಿ ಇಂಡೋನೇಷ್ಯಾ ಪ್ರಜೆಯೂ ಸೇರಿದ್ದಾರೆ ಎಂದು ಸ್ಥಳೀಯ ಪತ್ರಕರ್ತರೊಬ್ಬರು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಜೋಶೋರ್ ಜನರಲ್ ಆಸ್ಪತ್ರೆಯ ವೈದ್ಯರು 24 ಶವಗಳು ಸಿಕ್ಕಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನು ಅದರಲ್ಲಿ ಹೊಟೇಲ್‌ ಸಿಬ್ಬಂದಿಯ ಮೃತದೇಹವೂ ಸೇರಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಅವಾಮಿ ಲೀಗ್ (ಎಎಲ್) ಆಡಳಿತವನ್ನು ವಿರೋಧಿಸುವ ಅಪರಿಚಿತ ಗುಂಪು ಹೋಟೆಲ್‌ನ ನೆಲಮಹಡಿಗೆ ಬೆಂಕಿ ಹಚ್ಚಿದೆ, ಅದು ಶೀಘ್ರದಲ್ಲೇ ಮೇಲಿನ ಮಹಡಿಗಳಿಗೆ ಹರಡಿತು ಎಂದು ಮಾಧ್ಯಮ ವರದಿಗಳು ಸೂಚಿಸಿವೆ.

ಇದನ್ನೂ ಓದಿ: Bangladesh Chronology: 1971ರ ದೇಶ ಉದಯದಿಂದ ಹಿಡಿದು 2024ರ ದಂಗೆಯವರೆಗೆ; ಇಲ್ಲಿದೆ ಬಾಂಗ್ಲಾದೇಶದ ಸಂಪೂರ್ಣ ರಕ್ತ ಚರಿತ್ರೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rekha Sharma: ರಾಷ್ಟ್ರೀಯ ಮಹಿಳಾ ಆಯೋಗ ಅಧ್ಯಕ್ಷೆ ರೇಖಾ ಶರ್ಮಾ ಅಧಿಕಾರಾವಧಿ ಪೂರ್ಣ

Rekha Sharma: ಈ ಒಂಬತ್ತು ವರ್ಷಗಳು ನನಗೆ ಸುಲಭದ ಹಾದಿಯಾಗಿರಲಿಲ್ಲ. ಏರಿಳಿತಗಳು ಇದ್ದೇ ಇದ್ದವು. ಸಾಮಾನ್ಯ ಹಿನ್ನೆಲೆಯುಳ್ಳಂತಹ ನನ್ನಂತಹ ಒಬ್ಬ ವ್ಯಕ್ತಿ ಮೂರು ಭಾರಿ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವುದು ಸುಲಭದ ಮಾತಲ್ಲ. ಅಥವಾ ಸಾಮಾನ್ಯವಾದ ವಿಚಾರವೂ ಅಲ್ಲ. ಈ ಮಹತ್ವದ ಹುದ್ದೆಯ ಪ್ರಯಾಣ ಅತ್ಯಂತ ಖುಷಿ ತಂದಿದೆ. ಬದುಕಿನ ಪುಟಗಳಲ್ಲಿ ಇದನ್ನುಸೆರೆ ಹಿಡಿಯಲೇಬೇಕಾದ ಅನುಭವಾಗಿದೆ ಎಂದು ಹೇಳಿದ್ದಾರೆ.

VISTARANEWS.COM


on

Rekha Sharma
Koo

ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗದ (NCW) ಅಧ್ಯಕ್ಷೆ ರೇಖಾ ಶರ್ಮಾ(Rekha Sharma) ಅವರ ಅಧಿಕಾರಾವಧಿ ಮಂಗಳವಾರ ಕೊನೆಗೊಂಡಿದ್ದು, ಇಂದು ಅವರು ಅಧಿಕಾರದಿಂದ ಕೆಳಗಿಳಿದಿದ್ದಾರೆ. ಈ ಕುರಿತು ಸ್ವತಃ ರೇಖಾ ಶರ್ಮಾ ಪ್ರತಿಕ್ರಿಯಿಸಿದ್ದು, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ನನ್ನ ಒಂಬತ್ತು ವರ್ಷಗಳ ಅಧಿಕಾರಾವಧಿಯ ಕೊನೆಯ ದಿನ ಇಂದು ಎಂದು ಹೇಳಿದ್ದಾರೆ.

ಈ ಒಂಬತ್ತು ವರ್ಷಗಳು ನನಗೆ ಸುಲಭದ ಹಾದಿಯಾಗಿರಲಿಲ್ಲ. ಏರಿಳಿತಗಳು ಇದ್ದೇ ಇದ್ದವು. ಸಾಮಾನ್ಯ ಹಿನ್ನೆಲೆಯುಳ್ಳಂತಹ ನನ್ನಂತಹ ಒಬ್ಬ ವ್ಯಕ್ತಿ ಮೂರು ಭಾರಿ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವುದು ಸುಲಭದ ಮಾತಲ್ಲ. ಅಥವಾ ಸಾಮಾನ್ಯವಾದ ವಿಚಾರವೂ ಅಲ್ಲ. ಈ ಮಹತ್ವದ ಹುದ್ದೆಯ ಪ್ರಯಾಣ ಅತ್ಯಂತ ಖುಷಿ ತಂದಿದೆ. ಬದುಕಿನ ಪುಟಗಳಲ್ಲಿ ಇದನ್ನುಸೆರೆ ಹಿಡಿಯಲೇಬೇಕಾದ ಅನುಭವಾಗಿದೆ ಎಂದು ಹೇಳಿದ್ದಾರೆ.

ದಾರಿಯುದ್ದಕ್ಕೂ, ನಾನು ಪ್ರೀತಿಯನ್ನು ಹೇರಳವಾಗಿ ಸ್ವೀಕರಿಸಿದ್ದೇನೆ ಮತ್ತು ಟೀಕೆಗಳನ್ನು ಹೇಗೆ ನಿರ್ವಹಿಸಬೇಕೆಂದು ನಾನು ಕಲಿತಿದ್ದೇನೆ, ಇದು ಯಾವುದೇ ಕೆಲಸದ ಅನಿವಾರ್ಯ ಭಾಗವಾಗಿದೆ. ಸಾಮಾಜಿಕ ಮಾಧ್ಯಮ, ಅದರ ಸ್ವಾತಂತ್ರ್ಯದೊಂದಿಗೆ, ಕೆಲವೊಮ್ಮೆ ನಿರ್ದಯವಾಗಿರಬಹುದು, ಜನರು ನಿಮ್ಮನ್ನು ಅಥವಾ ನಿಮ್ಮ ಕೆಲಸವನ್ನು ನಿಜವಾಗಿಯೂ ತಿಳಿಯದೆ ತೀರ್ಪು ನೀಡುತ್ತಾರೆ. ನನ್ನ ಪ್ರಯತ್ನಗಳು ಮತ್ತು ಉದ್ದೇಶಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಅವರು ಸಮಯ ತೆಗೆದುಕೊಂಡಿದ್ದರೆಂದು ನಾನು ಯೋಚಿಸುತ್ತೇನೆ ಎಂದು ಅವರು ಹೇಳಿದರು.

ಹೊಸ ನಾಯಕತ್ವದಲ್ಲಿ ಮಹಿಳಾ ಆಯೋಗವು ಅಭಿವೃದ್ಧಿ ಹೊಂದಲಿ ಮತ್ತು ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಲಿ ಎಂದು ಅವರು ಆಶಿಸಿದರು.

“ನಾನು ಈ ಹುದ್ದೆಯಿಂದ ಕೆಳಗಿಳಿಯುತ್ತಿದ್ದಂತೆ, ನನ್ನೊಂದಿಗೆ ಅಪಾರ ನೆನಪುಗಳು ಮತ್ತು ಆಳವಾದ ನೆರವೇರಿಕೆಯನ್ನು ನಾನು ಒಯ್ಯುತ್ತೇನೆ. ಹೊಸ ನಾಯಕತ್ವದಲ್ಲಿ ಎನ್‌ಸಿಡಬ್ಲ್ಯು ಅಭಿವೃದ್ಧಿ ಹೊಂದುತ್ತದೆ ಮತ್ತು ಇನ್ನೂ ಹೆಚ್ಚಿನ ಪ್ರಗತಿಯನ್ನು ಸಾಧಿಸುತ್ತದೆ ಎಂದು ನನಗೆ ವಿಶ್ವಾಸವಿದೆ, ”ಎಂದು ಅವರು ಹೇಳಿದರು.

ರೇಖಾ ಶರ್ಮಾ ಅವರು ಆಗಸ್ಟ್ 7, 2018 ರಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಹಿಂದೆ ಅವರು ಸೆಪ್ಟೆಂಬರ್ 29, 2017 ರಿಂದ ಜಾರಿಗೆ ಬರುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರ (I/C) ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿದ್ದರು. ಶರ್ಮಾ ಅವರು ಆಗಸ್ಟ್, 2015 ರಿಂದ ಆಯೋಗದ ಸದಸ್ಯರಾಗಿದ್ದಾರೆ.

ಇನ್ನು ಆಯೋಗಕ್ಕೆ ಸೇರುವ ಮೊದಲು, ಶರ್ಮಾ ಅವರು ವಿವಿಧ ಸಾಮರ್ಥ್ಯಗಳಲ್ಲಿ ನಾಗರಿಕ ಸಮಾಜ ಸಂಸ್ಥೆಗಳೊಂದಿಗೆ ಸಕ್ರಿಯವಾಗಿ ಸಂಬಂಧ ಹೊಂದಿದ್ದರು. ಶ್ರೀಮತಿ. ಶರ್ಮಾ ಅವರು ಮಹಿಳೆಯರ ಜೀವನದ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬಗ್ಗೆ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ. ಮಹಿಳೆಯರ ಹಕ್ಕುಗಳು ಮತ್ತು ಸ್ವಾತಂತ್ರ್ಯದ ಹರಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಅವರು 50 ಕ್ಕೂ ಹೆಚ್ಚು ವಿಚಾರಣೆಗಳನ್ನು ನಡೆಸಿದ್ದಾರೆ.

ಇದನ್ನೂ ಓದಿ: Mahua Moitra: ಹೊಸ ಕಾನೂನಿನಂತೆ ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್;‌ ಕಾರಣ ಇಲ್ಲಿದೆ

Continue Reading

ದೇಶ

Bangladesh Unrest: ಶೇಖ್‌ ಹಸೀನಾಗೆ 8 ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದ ಭಾರತದ ಜ್ಯೋತಿಷಿ; ಆತನ ಭವಿಷ್ಯವಾಣಿ ಏನು?

Bangladesh Unrest: ಖ್ಯಾತ ಜ್ಯೋತಿಷಿ ಪ್ರಶಾಂತ್‌ ಕಿಣಿಯವರು ಕಳೆದ ವರ್ಷವೇ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿ, ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರು 2024ರ ಮೇ, ಜೂನ್‌, ಜುಲೈ ಮತ್ತು ಆಗಸ್ಟ್‌ನಲ್ಲಿ ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಅವರ ಹತ್ಯೆಗೂ ಯತ್ನ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದ್ದರು ಇಂದು ಮತ್ತೆ ಅದೇ ಟ್ವೀಟನ್ನು ಉಲ್ಲೇಖಿಸಿ ಮತ್ತೊಂದು ಟ್ವೀಟನ್ನು ಕಿಣಿ ಅವರು ಮಾಡಿದ್ದಾರೆ.

VISTARANEWS.COM


on

Bangladesh unrest
Koo

ಢಾಕಾ: ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಭಾರೀ ದಂಗೆ(Bangladesh Unrest) ನಿಯಂತ್ರಣಕ್ಕೆ ಬಾರದೇ ಇರುವ ಹಿನ್ನೆಲೆ ರಾಜೀನಾಮೆ ನೀಡಿರುವ ಅಲ್ಲಿನ ಪ್ರಧಾನಿ ಶೇಖ್‌ ಹಸೀನಾ(Sheikh Hasina) ದೇಶವನ್ನು ತೊರೆದು ಭಾರತಕ್ಕೆ ಪಲಾಯಣ ಮಾಡಿದ್ದಾರೆ. ಇನ್ನು ಅಲ್ಲಿ ಪ್ರಧಾನಿ ಅಧಿಕೃತ ನಿವಾಸಕ್ಕೆ ನುಗ್ಗಿ ಜನ ಕೈಗೆ ಸಿಕ್ಕ ವಸ್ತುಗಳನ್ನು ಲೂಟಿ ಮಾಡಿದ್ದಾರೆ. ಇದರ ನಡುವೆ ಬಾಂಗ್ಲಾದಲ್ಲಿ ಇಂತಹ ದಂಗೆ ನಡೆಯುವ ಬಗ್ಗೆ ಮೊದಲೇ ಭವಿಷ್ಯ ನುಡಿದಿದ್ದೆ ಎಂದು ಭಾರತದ ಜ್ಯೋತಿಷಿಯೊಬ್ಬರು ಹೇಳಿದ್ದಾರೆ.

ಖ್ಯಾತ ಜ್ಯೋತಿಷಿ ಪ್ರಶಾಂತ್‌ ಕಿಣಿಯವರು ಕಳೆದ ವರ್ಷವೇ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿ, ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರು 2024ರ ಮೇ, ಜೂನ್‌, ಜುಲೈ ಮತ್ತು ಆಗಸ್ಟ್‌ನಲ್ಲಿ ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಅವರ ಹತ್ಯೆಗೂ ಯತ್ನ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದ್ದರು ಇಂದು ಮತ್ತೆ ಅದೇ ಟ್ವೀಟನ್ನು ಉಲ್ಲೇಖಿಸಿ ಮತ್ತೊಂದು ಟ್ವೀಟನ್ನು ಕಿಣಿ ಅವರು ಮಾಡಿದ್ದಾರೆ.

ನಾನು ಈ ಹಿಂದೆಯೇ ಬಾಂಗ್ಲಾದ ಸ್ಥಿತಿಯ ಬಗ್ಗೆ ಭವಿಷ್ಯ ನುಡಿದಿದ್ದೆ. ಶೇಖ್‌ ಹಸೀನಾ ಅವರು 2024ರ ಆಗಸ್ಟ್‌ನಲ್ಲಿ ತೊಂದರೆ ಅನುಭವಿಸಲಿದ್ದಾರೆ ಎಂದು ಹೇಳಿದ್ದೆ. ಈ ಅವರು ತಮ್ಮದೇ ದೇಶದಿದಂ ಓಡಿ ಪಲಾಯಣ ಮಾಡಿದ್ದಾರೆಯೇ ಎಂದು ಪೋಸ್ಟ್‌ ಮಾಡಿದ್ದಾರೆ. ಕಿಣಿಯವರ ಪೋಸ್ಟ್‌ 2.6 ಮಿಲಿಯನ್‌ಗೂ ಅಧಿಕ ವ್ಯೂಸ್‌ ಪಡೆದುಕೊಂಡಿದ್ದು, ಅನೇಕರು ಲೈಕ್‌, ಶೇರ್‌ ಮತ್ತು ಕಮೆಂಟ್‌ ಮಾಡಿದ್ದಾರೆ.

ಕಿಣಿಯವರ ಪೋಸ್ಟ್‌ಗೆ ಅನೇಕ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಬ್ಬಾ… ಎಂಥಾ ಭವಿಷ್ಯ? ನಮ್ಮ ಭವಿಷ್ಯವನ್ನೂ ಹೇಳಿ ಎಂದು ಕೇಳಿದ್ದಾರೆ. ಮತ್ತೊರ್ವ ಬಾಂಗ್ಲಾದೇಶಕ್ಕಿಂತ ನನ್ನ ಜೀವನ ಬಹಳ ಮುಖ್ಯ. ಅದರ ಬಗ್ಗೆ ಭವಿಷ್ಯ ನುಡಿಯಿರಿ ಎಂದು ತಮಾಶೆ ಮಾಡಿದ್ದಾನೆ.

ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶವನ್ನು ತೊರೆದಿರುವ ಬೆನ್ನಲ್ಲೇ ಬಾಂಗ್ಲಾದೇಶ ರಾಷ್ಟ್ರಪತಿ ಮೊಹಮ್ಮದ್‌ ಶಹಬುದ್ದೀನ್‌ ಇಂದು ಸಂಸತ್ತನ್ನು ವಿಸರ್ಜಿಸಿದ್ದಾರೆ. ಮೂರು ಸೇನೆಯ ಮುಖ್ಯಸ್ಥರು, ವಿವಿಧ ಪಕ್ಷಗಳ ಮುಖಂಡರು, ನಾಗರಿಕ ಸಮಾಜದ ಮುಖಂಡರು ಹಾಗೂ ತಾರತಮ್ಯ ವಿರೋಧಿ ವಿದ್ಯಾರ್ಥಿಗಳ ಸಂಘಟನೆ ಮುಖಂಡರ ಜೊತೆ ಚರ್ಚೆ ನಡೆಸಿದ ಬಳಿಕ ರಾಷ್ಟ್ರಪತಿಯವರು ಈ ನಿರ್ಧಾರವನ್ನು ಘೋಷಿಸಿದ್ದಾರೆ. ಈ ಬಗ್ಗೆ ಅಧಿಕೃತ ಪ್ರಕಟಣೆಯನ್ನೂ ಹೊರಹಾಕಿದ್ದಾರೆ.

ಮತ್ತೊಂದೆಡೆ ಶೇಖ್‌ ಹಸೀನಾ ಅವರ ಬದ್ಧ ವಿರೋಧಿ ಜೈಲಿನಲ್ಲಿದ್ದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನೂ ಇಂದು ಬಿಡುಗಡೆಗೊಳಿಸಲಾಗಿದೆ. ಜಿಯಾರನ್ನು 2018ರಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಅರೆಸ್ಟ್‌ ಮಾಡಲಾಗಿತ್ತು. ಶಹಾಬುದ್ದೀನ್ ನೇತೃತ್ವದ ಸಭೆಯಲ್ಲಿ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಅವರನ್ನು ತಕ್ಷಣವೇ ಬಿಡುಗಡೆ ಮಾಡಲು ಸರ್ವಾನುಮತದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅಧ್ಯಕ್ಷರ ಪತ್ರಿಕಾ ತಂಡವು ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Bangladesh Unrest: ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌; ರಫಾ.. ರಫಾ.. ಎಂದು ಬೊಬ್ಬಿಡುತ್ತಿದ್ದ ಸೆಲೆಬ್ರಿಟಿಗಳು ಈಗೇಕೆ ಸೈಲೆಂಟ್‌?

Continue Reading

ದೇಶ

Pralhad Joshi: 2030ರಲ್ಲೂ ನಾವಿಲ್ಲೇ ಇರುತ್ತೇವೆ, ನೀವಲ್ಲೇ ಇರುತ್ತೀರಿ; ಸಂಸತ್‌ನಲ್ಲಿ ಪ್ರತಿಪಕ್ಷಗಳಿಗೆ ಜೋಶಿ ಟಾಂಗ್

Pralhad Joshi: ನೀವು ಕಳೆದ ಹತ್ತು ವರ್ಷದಿಂದ ಹತಾಶರಾಗಿದ್ದೀರಿ. ಆದರೆ, ನಾವು ಆಶಯ ಹೊಂದಿದ್ದೇವೆ. ಈ ಐದು ವರ್ಷ ಮಾತ್ರವಲ್ಲ, 2030ರಲ್ಲೂ ನಾವು ಅಧಿಕಾರಕ್ಕೆ ಬರುತ್ತೇವೆ. ನಾವು ಮಂತ್ರಿಯಾಗಿ ಸದನಕ್ಕೆ ಮಾಹಿತಿ ಕೊಡುತ್ತಲೇ ಇರುತ್ತೇವೆ. ನೀವು ಅಲ್ಲಿ ಕೇಳಿಸಿಕೊಳ್ಳುತ್ತಲೇ ಇರುತ್ತೀರಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ವಿಪಕ್ಷ ಸದಸ್ಯರನ್ನು ಕುಟುಕಿದರು.

VISTARANEWS.COM


on

Pralhad Joshi
Koo

ನವದೆಹಲಿ: 2030ರಲ್ಲೂ ನಾವು ಇಲ್ಲೇ ಇರುತ್ತೇವೆ. ನೀವು ಅಲ್ಲೇ ಇರುತ್ತೀರಿ ಎಂದು ಸಂಸತ್ ಅಧಿವೇಶನದಲ್ಲಿ ಇಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಪ್ರತಿಪಕ್ಷಗಳಿಗೆ ಟಾಂಗ್ ಕೊಟ್ಟರು. ಸದನದಲ್ಲಿ ಇಲಾಖೆ ಕಾರ್ಯ ಯೋಜನೆ ಸಾಧನೆ ಬಗ್ಗೆ ಪ್ರಸ್ತಾಪಿಸುತ್ತಿದ್ದ ವೇಳೆ ಪ್ರತಿಪಕ್ಷ ಸದಸ್ಯರ ಮಾತಿಗೆ ಹೀಗೆ ಪ್ರತಿಕ್ರಿಯಿಸಿದರು.

ನೀವು ಕಳೆದ ಹತ್ತು ವರ್ಷದಿಂದ ಹತಾಶರಾಗಿದ್ದೀರಿ. ಆದರೆ, ನಾವು ಆಶಯ ಹೊಂದಿದ್ದೇವೆ. ಈ ಐದು ವರ್ಷ ಮಾತ್ರವಲ್ಲ, 2030ರಲ್ಲೂ ನಾವು ಅಧಿಕಾರಕ್ಕೆ ಬರುತ್ತೇವೆ. ನಾವು ಮಂತ್ರಿಯಾಗಿ ಸದನಕ್ಕೆ ಮಾಹಿತಿ ಕೊಡುತ್ತಲೇ ಇರುತ್ತೇವೆ. ನೀವು ಅಲ್ಲಿ ಕೇಳಿಸಿಕೊಳ್ಳುತ್ತಲೇ ಇರುತ್ತೀರಿ ಎಂದು ವಿಪಕ್ಷ ಸದಸ್ಯರನ್ನು ಕುಟುಕಿದರು.

ಇದನ್ನೂ ಓದಿ: DCET 2024: ಡಿಸಿಇಟಿ 2ನೇ ಸುತ್ತಿನ ಸೀಟು ಹಂಚಿಕೆ ಸದ್ಯಕ್ಕೆ ಸ್ಥಗಿತ; ಚಾಯ್ಸ್ ಆಯ್ಕೆಗೆ ಆ.8ರವರೆಗೆ ಅವಕಾಶ

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 500GW ಸಾಮರ್ಥ್ಯವನ್ನು ಸಾಧಿಸಿದ ವಿಚಾರವನ್ನು ಹಂಚಿಕೊಳ್ಳಲು ನಮಗೆ ಹೆಮ್ಮೆಯಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಯುಪಿಎ ಅವಧಿಯಲ್ಲಿ ಹಗರಣದ್ದೇ ಸಾಧನೆ

ನವೀಕರಿಸಬಹುದಾದ ಇಂಧನಕ್ಕೆ ಸಂಬಂಧಿಸಿದ ಯೋಜನೆಗಳ ಒಟ್ಟು ಮೊತ್ತ ರೂ. 1,60,000 ಕೋಟಿ ಆಗಿದೆ. ಆದರೆ, ಯುಪಿಎ ಆಡಳಿತದ ಅವಧಿಯಲ್ಲಿ ಇಷ್ಟು ಮೊತ್ತದ ಹಗರಣಗಳೇ ನಡೆದಿವೆ ಎಂದು ಜೋಶಿ ತಿರುಗೇಟು ಕೊಟ್ಟರು.

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತೀಯರ ಕಲ್ಯಾಣಕ್ಕಾಗಿ ಪ್ರತಿ ಯೋಜನೆಯೂ ಹೀಗೆ ಬೃಹತ್ ಮೊತ್ತದ್ದಾಗಿದೆ ಎಂದರು.

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತದಲ್ಲಿ ಸ್ಥಾಪಿಸಲಾದ ನವೀಕರಿಸಬಹುದಾದ ಇಂಧನ ಉತ್ಪಾದನಾ ಸಾಮರ್ಥ್ಯ ಶೇ.165ರಷ್ಟು ಏರಿಕೆ ಕಂಡಿದೆ ಎಂದು ಅವರು ಸಮರ್ಥಿಸಿಕೊಂಡರು.

ಇದನ್ನೂ ಓದಿ: Fortis Hospital: ಅಪಘಾತದಲ್ಲಿ ತಲೆಗೆ ತೀವ್ರ ಏಟು; ಕ್ಲಿಷ್ಟ ಶಸ್ತ್ರಚಿಕಿತ್ಸೆಯಿಂದ ಯುವಕನಿಗೆ ಜೀವ ದಾನ

2014ರಲ್ಲಿ ಕೇವಲ 76.38 GW ಉತ್ಪಾದನಾ ಸಾಮರ್ಥ್ಯ ಇತ್ತು. ಕಳೆದ 10 ವರ್ಷಗಳಲ್ಲಿ ಶೇ.165 ರಷ್ಟು ವೃದ್ಧಿಸಿದ್ದು, ಪ್ರಸ್ತುತ 2003.1 GW ತಲುಪಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದರು.

Continue Reading

ವಾಣಿಜ್ಯ

Mukesh Ambani Mobile: ಮುಕೇಶ್ ಅಂಬಾನಿ, ನೀತಾ ಅಂಬಾನಿ ಯಾವ ಮೊಬೈಲ್‌ ಬಳಸುತ್ತಾರೆ? ಅವುಗಳ ವೈಶಿಷ್ಟ್ಯ ಏನೇನು?

Mukesh Ambani Mobile: ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಪತ್ನಿ ನೀತಾ ಅಂಬಾನಿ ಅವರೊಂದಿಗೆ ಆಗಮಿಸಿದ್ದ ರಿಲಯನ್ ಇಂಡಸ್ಟ್ರೀಸ್ ಮಾಲೀಕ ಮುಕೇಶ್ ಅಂಬಾನಿ ಅವರು ಬಳಸುತ್ತಿರುವ ಫೋನ್ ಎಲ್ಲರ ಗಮನ ಸೆಳೆಯಿತು. ಮುಕೇಶ್ ಅಂಬಾನಿ (Mukesh Ambani) ಬಳಸುತ್ತಿದ್ದ ಈ ಫೋನ್ ಅತ್ಯಂತ ದುಬಾರಿಯಾಗಿದೆ. ಇದಕ್ಕೆ ಕಾರಣವೂ ಇದೆ. ಅದು ಏನು ಎಂಬ ಮಾಹಿತಿ ಇಲ್ಲಿದೆ. ವಿಶೇಷ ಏನೆಂದರೆ, ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಒಂದೇ ಮಾಡೆಲ್‌ನ ಮೊಬೈಲ್‌ ಫೋನ್‌ ಬಳಸುತ್ತಾರೆ.

VISTARANEWS.COM


on

By

Mukesh Ambani Mobile
Koo

ರಿಲಾಯನ್ಸ್ ಇಂಡಸ್ಟ್ರೀಸ್ (Reliance Industries) ಮಾಲೀಕ ಮತ್ತು ಭಾರತದ ಶ್ರೀಮಂತ ವ್ಯಕ್ತಿ (India’s richest man) ಮುಕೇಶ್ ಅಂಬಾನಿ (Mukesh Ambani) ಅವರು ಧರಿಸುವ, ಬಳಸುವ ಪ್ರತಿಯೊಂದು ವಸ್ತುವಿನ ಬಗ್ಗೆಯೂ ತಿಳಿದುಕೊಳ್ಳುವ ಕುತೂಹಲ ಎಲ್ಲರಿಗೂ ಇರುತ್ತದೆ. ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ಪತ್ನಿ ನೀತಾ ಅಂಬಾನಿ (nita ambani) ಅವರೊಂದಿಗೆ ಪಾಲ್ಗೊಂಡಿದ್ದ ಮುಕೇಶ್ ಅಂಬಾನಿ ಅವರ ಕೈಯಲ್ಲಿದ್ದ ಫೋನ್ (Mukesh Ambani Mobile) ಎಲ್ಲರ ಗಮನ ಸೆಳೆದಿತ್ತು.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಾಗಿ ಸುಮಾರು ಎಂಟು ತಿಂಗಳಾಗುತ್ತ ಬಂದರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಲೆಬ್ರಿಟಿಗಳು, ವಿಐಪಿಗಳು ಎಲ್ಲರ ಗಮನ ಸೆಳೆದಿರುವುದು ಇನ್ನೂ ಚರ್ಚೆಯಾಗುತ್ತಲೇ ಇದೆ. ಮುಕೇಶ್ ಅಂಬಾನಿ ಕೂಡ ತಮ್ಮ ಕುಟುಂಬದೊಂದಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಎಲ್ಲರ ಗಮನ ಸೆಳೆದಿದ್ದು ಅವರು ಬಳಸುತ್ತಿದ್ದ ಫೋನ್.

ಅದ್ಧೂರಿ ಸಮಾರಂಭದಲ್ಲಿ ಮುಖೇಶ್ ಅಂಬಾನಿ ತಮ್ಮ ಪತ್ನಿ ನೀತಾ ಅಂಬಾನಿ ಅವರೊಂದಿಗೆ ಕಾಣಿಸಿಕೊಂಡರು. ಅವರ ಕೈಯಲ್ಲಿದ್ದ ಸ್ಮಾರ್ಟ್ ಫೋನ್ ಎಲ್ಲರ ಗಮನ ಸೆಳೆಯಲು ಹಲವು ಕಾರಣಗಳಿವೆ. ಮುಕೇಶ್ ಅಂಬಾನಿ ಇತ್ತೀಚಿನ ಆಪಲ್ ಐಫೋನ್ ಅನ್ನು ಬಳಸುತ್ತಿದ್ದಾರೆ. ಐಫೋನ್ 15 ಪ್ರೊ ಮ್ಯಾಕ್ಸ್ ಕೇವಲ ಸಾಮಾನ್ಯ ಐಫೋನ್ ಅಲ್ಲ. ಇದು ಐಫೋನ್ 15 ಸರಣಿಯ ಅತ್ಯಂತ ದುಬಾರಿ ಮಾದರಿಯಾಗಿದೆ. ಈ ಫೋನ್‌ನ 256 GB ಮಾದರಿಯು ಸುಮಾರು 1.50 ಲಕ್ಷ ರೂ. ನದ್ದಾಗಿದೆ. 1 ಟಿಬಿ ಸ್ಟೋರೇಜ್ ರೂಪಾಂತರದ ಬೆಲೆ ಅಂದಾಜು 2 ಲಕ್ಷ ರೂ.

Mukesh Ambani
Mukesh Ambani


ನೀತಾ ಅಂಬಾನಿ ಫೋನ್

ನೀತಾ ಅಂಬಾನಿ ಕೂಡ ಅದೇ ಮಾದರಿಯ ಐಫೋನ್ ಅನ್ನು ಬಳಸುತ್ತಿದ್ದಾರೆ. ಅನೇಕ ಇತರ ಪ್ರಮುಖ ವ್ಯಕ್ತಿಗಳು ಮತ್ತು ಸೆಲೆಬ್ರಿಟಿಗಳು ಈ ಫೋನ್ ಅನ್ನು ಅದರ ಅಸಾಧಾರಣ ವೈಶಿಷ್ಟ್ಯಗಳಿಗಾಗಿ ಆದ್ಯತೆ ನೀಡುತ್ತಾರೆ. ಐಫೋನ್ 15 ಪ್ರೊ ಮ್ಯಾಕ್ಸ್ ಅತ್ಯುತ್ತಮ ಕೆಮರಾ, ನೀರಿನ ಪ್ರತಿರೋಧ ಮತ್ತು ಅತ್ಯಂತ ಗಟ್ಟಿಮುಟ್ಟಾದ ವಿನ್ಯಾಸವನ್ನು ಹೊಂದಿದೆ. ಇದರ ವಿನ್ಯಾಸ ಮತ್ತು ವೈಶಿಷ್ಟ್ಯಗಳು ಉನ್ನತ ದರ್ಜೆಯದ್ದಾಗಿದ್ದು, ಪ್ರೀಮಿಯಂ ನೋಟ ಮತ್ತು ಅತ್ಯುತ್ತಮ ಕಾರ್ಯಕ್ಷಮತೆಯನ್ನು ನೀಡುತ್ತದೆ. ಪ್ರತಿಯೊಂದು ಅಂಶದಲ್ಲೂ ಈ ಫೋನ್ ಮಾರುಕಟ್ಟೆಯಲ್ಲಿನ ಇತರ ಸ್ಮಾರ್ಟ್‌ಫೋನ್‌ಗಳನ್ನು ಮೀರಿಸುತ್ತದೆ.

Mukesh Ambani
Mukesh Ambani


ಐಫೋನ್ 15 ಪ್ರೊ ಮ್ಯಾಕ್ಸ್ ನ ವೈಶಿಷ್ಟ್ಯಗಳು ಏನೇನು?

ಐಫೋನ್ 15 ಪ್ರೊ ಮ್ಯಾಕ್ಸ್ ಅಸಾಧಾರಣವಾದ ಫೋಟೋ ಮತ್ತು ವಿಡಿಯೋ ಗುಣಮಟ್ಟವನ್ನು ನೀಡುವ ಉನ್ನತ ಆಫ್ ಲೈನ್ ಕೆಮೆರಾವನ್ನು ಒಳಗೊಂಡಿದೆ.

ಇದನ್ನೂ ಓದಿ: Indian Currency: 2000 ರೂ. ನೋಟು ತಯಾರಿಸಲು 4 ರೂ. ಖರ್ಚು; 10 ರೂ. ನೋಟು ಮುದ್ರಿಸಲು 96 ಪೈಸೆ ಬೇಕು!

ಈ ಫೋನ್ ಜಲ ನಿರೋಧಕವಾಗಿದೆ (ವಾಟರ್‌ ಪ್ರೂಫ್‌) ಮತ್ತು ಬಲಿಷ್ಠ ಸಾಮಗ್ರಿಗಳಿಂದ ನಿರ್ಮಿಸಲಾಗಿದೆ. ಇದು ಯಾವುದೇ ಕಠಿಣ ಪರಿಸ್ಥಿತಿಗಳನ್ನು ತಡೆದುಕೊಳ್ಳುತ್ತದೆ.

ಐಫೋನ್ 15 ಪ್ರೊ ಮ್ಯಾಕ್ಸ್ ನ ನಯವಾದ ಮತ್ತು ಪ್ರೀಮಿಯಂ ವಿನ್ಯಾಸವು ಅದನ್ನು ಸೊಗಸಾದ ಆಯ್ಕೆಯನ್ನಾಗಿ ಮಾಡುತ್ತದೆ. ಹಲವು ಸುಧಾರಿತ ವೈಶಿಷ್ಟ್ಯಗಳು ಮತ್ತು ಶಕ್ತಿಯುತ ಕಾರ್ಯಕ್ಷಮತೆಯನ್ನು ಒಳಗೊಂಡಿದೆ. 256ಜಿಬಿ ಮತ್ತು 1 ಟಿಬಿ ಸೇರಿದಂತೆ ಮಲ್ಟಿ ಸ್ಟೋರೇಜ್‌ ರೂಪಾಂತರಗಳಲ್ಲಿ ಇದು ಲಭ್ಯವಿದೆ.

Continue Reading
Advertisement
ಕ್ರೀಡೆ1 hour ago

Paris Olympics 2024 : ಸೆಮಿಫೈನಲ್​​​​ನಲ್ಲಿ ಭಾರತ ಹಾಕಿ ತಂಡಕ್ಕೆ ಆಘಾತಕಾರಿ ಸೋಲು, ಇನ್ನೂ ಇದೆ ಪದಕ ಗೆಲ್ಲುವ ಅವಕಾಶ

Shira News
ತುಮಕೂರು2 hours ago

Shira News: ವರ್ಗಾವಣೆಗೊಂಡ ಶಿರಾ ತಾ.ಪಂ ಇಓ ಅನಂತ್‌ರಾಜ್‌ಗೆ ಬೀಳ್ಕೊಡುಗೆ

Rekha Sharma
ದೇಶ2 hours ago

Rekha Sharma: ರಾಷ್ಟ್ರೀಯ ಮಹಿಳಾ ಆಯೋಗ ಅಧ್ಯಕ್ಷೆ ರೇಖಾ ಶರ್ಮಾ ಅಧಿಕಾರಾವಧಿ ಪೂರ್ಣ

Bangladesh unrest
ದೇಶ2 hours ago

Bangladesh Unrest: ಶೇಖ್ ಹಸೀನಾ ಬೆಂಬಲಿಗನ ಫೈವ್‌ ಸ್ಟಾರ್‌ ಹೊಟೇಲ್‌ಗೆ ಬೆಂಕಿ; 24 ಜನ ಸಜೀವ ದಹನ

Paris Olympics
ಕ್ರೀಡೆ3 hours ago

Paris Olympics: ಫೈನಲ್​ ಪ್ರವೇಶಿಸಿ ಐತಿಹಾಸಿಕ ಪದಕ ಖಾತ್ರಿಪಡಿಸಿದ ಕುಸ್ತಿಪಟು ವಿನೇಶ್ ಫೋಗಟ್

Bangladesh unrest
ದೇಶ3 hours ago

Bangladesh Unrest: ಶೇಖ್‌ ಹಸೀನಾಗೆ 8 ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದ ಭಾರತದ ಜ್ಯೋತಿಷಿ; ಆತನ ಭವಿಷ್ಯವಾಣಿ ಏನು?

Pralhad Joshi
ದೇಶ3 hours ago

Pralhad Joshi: 2030ರಲ್ಲೂ ನಾವಿಲ್ಲೇ ಇರುತ್ತೇವೆ, ನೀವಲ್ಲೇ ಇರುತ್ತೀರಿ; ಸಂಸತ್‌ನಲ್ಲಿ ಪ್ರತಿಪಕ್ಷಗಳಿಗೆ ಜೋಶಿ ಟಾಂಗ್

Bangladesh Protest
ವಿದೇಶ3 hours ago

Bangladesh Chronology: 1971ರ ದೇಶ ಉದಯದಿಂದ ಹಿಡಿದು 2024ರ ದಂಗೆಯವರೆಗೆ; ಇಲ್ಲಿದೆ ಬಾಂಗ್ಲಾದೇಶದ ಸಂಪೂರ್ಣ ರಕ್ತ ಚರಿತ್ರೆ!

Reliance Foundation
ಕರ್ನಾಟಕ3 hours ago

Reliance Foundation: ವಯನಾಡಿನ ಭೂಕುಸಿತ ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ನೆರವು

B.Ed Exam Scam
ಕರ್ನಾಟಕ3 hours ago

B.Ed Exam Scam: ಬಿ.ಇಡಿ ಪರೀಕ್ಷೆ ಅಕ್ರಮ; ಗುಲ್ಬರ್ಗಾ ವಿವಿ ಕುಲಸಚಿವೆ ಸೇರಿ ಐವರ ವಿರುದ್ಧ ಎಫ್‌ಐಆರ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು8 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ8 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌