Site icon Vistara News

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ, ಬ್ಯಾಂಕ್ ಮ್ಯಾನೇಜರ್‌ ಬರ್ಬರ ಹತ್ಯೆ

terorist

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ‌ ಮುಂದುವರಿದಿದ್ದು, ಭಯೋತ್ಪಾದಕರು ಬ್ಯಾಂಕ್‌ ಮ್ಯಾನೇಜರ್‌ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಜಮ್ಮು ಕಾಶ್ಮೀರದ ಕುಲ್‌ಗಾಂವ್‌ ಜಿಲ್ಲೆಯಲ್ಲಿ ಈ ಹತ್ಯೆ ನಡೆದಿದೆ. ರಾಜಸ್ಥಾನ ಮೂಲದ ವಿಜಯ್‌ ಕುಮಾರ್‌ ಎಂಬುವರು ಉಗ್ರರ ದಾಳಿಗೆ ಪ್ರಾಣ ಕಳೆದುಕೊಂಡಿದ್ದಾರೆ.‌ ಉಗ್ರರು ಕಚೇರಿಯ ಆವರಣದಲ್ಲೇ ಅವರಿಗೆ ಗುಂಡಿಕ್ಕಿದ್ದಾರೆ.

ಗುಂಡೇಟಿನಿಂದ ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ದಾರಿ ಮಧ್ಯೆ ಕೊನೆಯುಸಿರೆಳೆದರು. ಇಲಾಕೆ ದೆಹಾತಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದ ವಿಜಯ್‌ ಕುಮಾರ್‌ ಅವರ ಹತ್ಯೆ ಸ್ಥಳೀಯರನ್ನು ಕಂಗೆಡಿಸಿದೆ.

ಕುಲ್‌ ಗಾಂವ್‌ನಲ್ಲಿ ಭಯೋತ್ಪಾದಕರ ಅಟ್ಟಹಾಸ ಜೋರಾಗಿದ್ದು, ಎರಡು ದಿನಗಳ ಹಿಂದೆ ಶಿಕ್ಷಕಿಯೊಬ್ಬರ ಹತ್ಯೆ ನಡೆದಿತ್ತು.

ಇದನ್ನೂ ಓದಿ: ಕಾಶ್ಮೀರದ PM Package ನೌಕರರನ್ನು ಜೂ. 6ರೊಳಗೆ ಸುರಕ್ಷಿತ ಸ್ಥಳಕ್ಕೆ ಶಿಫ್ಟ್‌ ಮಾಡಲು ಆದೇಶ

Exit mobile version