ದೇಶ
BBC documentary: ಪುಣೆ FTIIನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ; ಫೋಟೋ ಶೇರ್ ಮಾಡಿದ ವಿದ್ಯಾರ್ಥಿಗಳು, ಗೊತ್ತೇ ಇಲ್ಲ ಎಂದ ಸೆಕ್ಯೂರಿಟಿ
ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಸಂಗತಿಗಳಿರುವ ಡಾಕ್ಯುಮೆಂಟರಿಯ ಲಿಂಕ್ಗಳನ್ನು ಯೂಟ್ಯೂಬ್, ಟ್ವಿಟರ್ ಮತ್ತಿತರ ಸೋಷಿಯಲ್ ಮೀಡಿಯಾಗಳಲ್ಲಿ ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಆದರೂ ವಿವಿಧ ಶಿಕ್ಷಣ ಸಂಸ್ಥೆಗಳು ಡಾಕ್ಯುಮೆಂಟರಿ ಪ್ರದರ್ಶನ ಏರ್ಪಡಿಸುತ್ತಿವೆ.
ನವ ದೆಹಲಿ: ಗೋದ್ರಾ ಹತ್ಯಾಕಾಂಡದಲ್ಲಿ ನರೇಂದ್ರ ಮೋದಿ ತಪ್ಪಿತಸ್ಥರು ಎಂಬಂತೆ ಬಿಂಬಿಸಿ, ಅವರನ್ನು ಆಕ್ಷೇಪಾರ್ಹವಾಗಿ ಚಿತ್ರಿಸಿರುವ ಬಿಬಿಸಿ ಡಾಕ್ಯುಮೆಂಟರಿ (BBC documentary)‘ಇಂಡಿಯಾ-ದಿ ಮೋದಿ ಕ್ವಶ್ಚನ್’ ಪ್ರದರ್ಶನವನ್ನು ಪುಣೆಯಲ್ಲಿರುವ ಫಿಲ್ಮ್ ಆ್ಯಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ನಲ್ಲಿ ಏರ್ಪಡಿಸಲಾಗಿತ್ತು. ಈ ಇನ್ಸ್ಟಿಟ್ಯೂಟ್ನ ಸ್ಟುಡೆಂಟ್ಸ್ ಅಸೋಸಿಯೇಷನ್ ಮುಂದಾಗಿ ಡಾಕ್ಯುಮೆಂಟರಿ ಪ್ರದರ್ಶನ ಏರ್ಪಡಿಸಿತ್ತು.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ವ್ಯಾಪ್ತಿಯಡಿ ಬರುವ ಫಿಲ್ಮ್ ಆ್ಯಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆವರಣದಲ್ಲಿ ಬಿಬಿಸಿ ಡಾಕ್ಯುಮೆಂಟರಿ ಪ್ರದರ್ಶನ ಏರ್ಪಡಿಸಿದ್ದೆವು ಎಂದು ಇನ್ಸ್ಟಿಟ್ಯೂಟ್ನ ವಿದ್ಯಾರ್ಥಿ ಸಂಘ ಇನ್ಸ್ಟಾಗ್ರಾಂ ಪೇಜ್ನಲ್ಲಿ ಫೋಟೋ ಸಹಿತ ಮಾಹಿತಿ ಹಂಚಿಕೊಂಡಿದೆ. ಸುಮಾರು 200-300 ವಿದ್ಯಾರ್ಥಿಗಳು ಒಟ್ಟಾಗಿ ಕುಳಿತು ಈ ಸಾಕ್ಷ್ಯಚಿತ್ರ ವೀಕ್ಷಿಸಿದ್ದಾರೆ ಎಂದು ಹೇಳಲಾಗಿದೆ. ಡಾಕ್ಯುಮೆಂಟರಿ ವೀಕ್ಷಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕೆಲವು ವಿದ್ಯಾರ್ಥಿಗಳು ‘ಸಾಕ್ಷ್ಯಚಿತ್ರ ನಿರ್ಮಾಪಕರು ತಮ್ಮ ದೃಷ್ಟಿಕೋನದಿಂದ ಈ ಡಾಕ್ಯುಮೆಂಟರಿ ನಿರ್ಮಿಸಿದ್ದಾರೆ. ಇದರಲ್ಲಿನ ಯಾವುದೇ ವಿಷಯವನ್ನೂ ನಿರ್ಬಂಧಿಸಬಾರದು’ ಎಂದೂ ಹೇಳಿದ್ದಾರೆ.
ಇದನ್ನೂ ಓದಿ: BBC Documentary On Modi: ಜೆಎನ್ಯುನಲ್ಲಿ ಬಿಬಿಸಿ ಡಾಕ್ಯುಮೆಂಟರಿ ವೀಕ್ಷಣೆ ವೇಳೆ ಪವರ್ ಕಟ್, ಕಲ್ಲು ತೂರಿ ಗಲಾಟೆ
FTIIನ ಸೆಕ್ಯೂರಿಟಿಯ ಬಳಿ ಈ ಬಗ್ಗೆ ಕೇಳಿದ್ದಕ್ಕೆ, ಈ ಸಂಸ್ಥೆಯಲ್ಲಿ ಬಿಬಿಸಿ ಡಾಕ್ಯುಮೆಂಟರಿ ಪ್ರದರ್ಶನವಾಗಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ ಎಂದು ಟೈಮ್ಸ್ ನೌ ವರದಿ ಮಾಡಿದೆ. ಆದರೆ ಇಲ್ಲಿನ ಸ್ಟುಡೆಂಟ್ಸ್ ಅಸೋಸಿಯೇಶನ್ನವರೇ ಫೋಟೋ ಹಂಚಿಕೊಂಡಿದ್ದರಿಂದ ಸ್ಕ್ರೀನಿಂಗ್ ನಡೆದಿದ್ದು ಪಕ್ಕಾ ಎಂಬುದೂ ಸಾಬೀತಾಗಿದೆ.
ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಸಂಗತಿಗಳಿರುವ ಡಾಕ್ಯುಮೆಂಟರಿಯ ಲಿಂಕ್ಗಳನ್ನು ಯೂಟ್ಯೂಬ್, ಟ್ವಿಟರ್ ಮತ್ತಿತರ ಸೋಷಿಯಲ್ ಮೀಡಿಯಾಗಳಲ್ಲಿ ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಆದರೂ ವಿವಿಧ ಶಿಕ್ಷಣ ಸಂಸ್ಥೆಗಳು ಡಾಕ್ಯುಮೆಂಟರಿ ಪ್ರದರ್ಶನ ಏರ್ಪಡಿಸುತ್ತಿವೆ. ಈಗಾಗಲೇ ಜೆಎನ್ಯು, ದೆಹಲಿ ಯೂನಿವರ್ಸಿಟಿಗಳೆಲ್ಲ ಡಾಕ್ಯುಮೆಂಟರಿ ಪ್ರದರ್ಶನ ನಡೆಸಲು ಪ್ರಯತ್ನಿಸಿದ್ದವು. ಆದರೆ ಪ್ರಯತ್ನಗಳು ವಿಫಲಗೊಂಡಿದ್ದವು.
ದೇಶ
Mohan Bhagwat: ಪಾಕ್ ಜನಕ್ಕೆ ನೆಮ್ಮದಿ ಇಲ್ಲ, ದೇಶ ವಿಭಜನೆ ಪ್ರಮಾದ ಎಂಬ ಭಾವನೆ ಇದೆ: ಮೋಹನ್ ಭಾಗವತ್
Mohan Bhagwat: ಭಾರತವು ಎಂದಿಗೂ ಬೇರೊಂದು ದೇಶದ ಮೇಲೆ ಆಕ್ರಮಣ ಮಾಡಿಲ್ಲ. ಹಾಗಂತ, ನಮ್ಮ ದೇಶದ ಮೇಲೆ ಬೇರೆಯವರು ದಾಳಿ ನಡೆಸಿದಾಗ ಸುಮ್ಮನೆ ಕುಳಿತಿಲ್ಲ. ಸರ್ಜಿಕಲ್ ಸ್ಟ್ರೈಕ್ ಇದಕ್ಕೆ ಉತ್ತಮ ಉದಾಹರಣೆ ಎಂದು ಮೋಹನ್ ಭಾಗವತ್ ಹೇಳಿದರು.
ಭೋಪಾಲ್: ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಆ ರಾಷ್ಟ್ರದ ಜನರು ಸಂತೋಷದಿಂದ ಇಲ್ಲ. ಅವರಿಗೆ ಈಗಲೂ ಭಾರತದಿಂದ ವಿಭಜನೆ ಆಗಿದ್ದು ಪ್ರಮಾದ ಎಂಬ ಭಾವನೆಯೇ ಇದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗೆಯೇ, ಭಾರತದ ಸಂಸ್ಕೃತಿ, ಬೇರೆಯವರ ಮೇಲೆ ದಾಳಿ ಮಾಡದಿರುವುದು, ಸ್ವಯಂ ರಕ್ಷಣೆ, ಸರ್ಜಿಕಲ್ ಸ್ಟ್ರೈಕ್ ಸೇರಿ ಹಲವು ವಿಷಯಗಳನ್ನು ಭಾಗವತ್ ಪ್ರಸ್ತಾಪಿಸಿದ್ದಾರೆ.
ಮಧ್ಯಪ್ರದೇಶದ ಭೋಪಾಲ್ನಲ್ಲಿ ಯುವ ಕ್ರಾಂತಿಕಾರಿ ಹೇಮು ಕಲಾನಿ ಜಯಂತಿ ಹಿನ್ನೆಲೆಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವತ್ ಮಾತನಾಡಿದರು. “1947ರಲ್ಲಿ ನಡೆದ ವಿಭಜನೆಗೂ ಮೊದಲು ಸಂಪೂರ್ಣ ಭಾರತ ಆಗಿತ್ತು. ಆದರೆ, ಭಾರತದಿಂದ ವಿಭಜನೆಗೊಂಡವರು ಈಗಲೂ ನೆಮ್ಮದಿಯಿಂದ ಇದ್ದಾರೆಯೇ? ಅವರಿಗೆ ಸಂತೋಷ ಎಂಬುದಿದೆಯೇ? ಈಗಲೂ ಅವರಿಗೆ ವಿಭಜನೆಯ ನೋವಿದೆ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ದೇಶದ ಹಲವೆಡೆಯಿಂದ ಆಗಮಿಸಿದ ಸಿಂಧಿಗಳು ಭಾಗವಹಿಸಿದ್ದರು.
ಆಕ್ರಮಣಕಾರಿ ಮನಸ್ಥಿತಿ ನಮ್ಮದಲ್ಲ
ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಬಂಧವು ಕೆಲ ವರ್ಷಗಳಿಂದ ಮತ್ತಷ್ಟು ಬಿಗಡಾಯಿಸಿರುವ ಕುರಿತು ಮಾತನಾಡಿದ ಅವರು, “ಭಾರತವು ಪಾಕಿಸ್ತಾನದ ಮೇಲೆ ದಾಳಿ ಮಾಡಬೇಕು ಎಂದು ಬಯಸುತ್ತಿಲ್ಲ. ಭಾರತವು ಇನ್ನೊಬ್ಬರ ಮೇಲೆ ದಾಳಿ ನಡೆಸುವ ಸಂಸ್ಕೃತಿಯನ್ನೇ ಹೊಂದಿಲ್ಲ. ನಮ್ಮ ಇತಿಹಾಸದಲ್ಲಿ ಎಲ್ಲಿಯೂ ನಾವು ದಾಳಿ ಮಾಡಿದ ನಿದರ್ಶನಗಳು ಇಲ್ಲ. ನಾವು ಯಾವಾಗಲೂ ನಮ್ಮ ರಕ್ಷಣೆಗೆ ಆದ್ಯತೆ ನೀಡಿದ್ದೇವೆಯೇ ಹೊರತು, ಆಕ್ರಮಣಕಾರಿ ನೀತಿ ನಮ್ಮದಾಗಿರಲಿಲ್ಲ” ಎಂದು ತಿಳಿಸಿದರು.
“ಪಾಕಿಸ್ತಾನದ ಜನರಿಗೆ ಈಗ ಅರ್ಥವಾಗುತ್ತಿದೆ. ಭಾರತದಿಂದ ಇಬ್ಭಾಗವಾಗಿರುವುದಕ್ಕೆ ಈಗ ಅವರಿಗೆ ಬೇಸರವಾಗಿರುತ್ತದೆ. ಭಾರತದಿಂದ ವಿಭಜನೆ ಆಗಿರುವುದು ತಪ್ಪು ಎಂಬುದು ಈಗ ಅವರಿಗೆ ಮನವರಿಕೆ ಆಗಿದೆ. ಹಾಗಾಗಿ ಪಾಕಿಸ್ತಾನದ ಜನ ಸಂತೋಷದಿಂದ ಇಲ್ಲ” ಎಂದರು. ಸರ್ಜಿಕಲ್ ಸ್ಟ್ರೈಕ್ ಕುರಿತು ಕೂಡ ಪ್ರಸ್ತಾಪಿಸಿದ ಅವರು, “ಭಾರತವು ಯಾವಾಗೂ ಸ್ವಯಂ ರಕ್ಷಣೆಗೆ ಆದ್ಯತೆ ನೀಡಿದೆ. ಹಾಗಂತ, ನಮ್ಮ ಮೇಲೆ ದಾಳಿ ನಡೆಸಿದರೆ ಸುಮ್ಮನಿರುವುದಿಲ್ಲ. ಇದಕ್ಕೆ ಸರ್ಜಿಕಲ್ ದಾಳಿಯೇ ಸಾಕ್ಷಿಯಾಗಿದೆ. ಮುಂದೆಯೂ ದೇಶದ ರಕ್ಷಣೆಗಾಗಿ ಇಂತಹ ದಾಳಿಗಳು ಮುಂದುವರಿಯುತ್ತವೆ” ಎಂದರು.
ಇತ್ತೀಚೆಗೆ ಮೋಹನ್ ಭಾಗವತ್ ಅವರು ಬ್ರಿಟಿಷ್ ಶಿಕ್ಷಣ ಪದ್ಧತಿ ಕುರಿತು ಮಾತನಾಡಿದ್ದರು. “ಭಾರತದಲ್ಲಿ ಬ್ರಿಟಿಷ್ ಆಳ್ವಿಕೆ ಶುರುವಾಗುವುದಕ್ಕೂ ಮೊದಲಿನ ಕಾಲದಲ್ಲಿ ಇಲ್ಲಿನ ಶೇ.70ರಷ್ಟು ಜನರು ಸುಶಿಕ್ಷಿತ (ವಿದ್ಯಾವಂತ)ರಾಗಿದ್ದರು. ಅದೇ ಸಮಯದಲ್ಲಿ ಇಂಗ್ಲೆಂಡ್ನಲ್ಲಿ ಶೇ.17ರಷ್ಟು ಜನರು ಮಾತ್ರ ವಿದ್ಯಾವಂತರಾಗಿದ್ದರು. ಆಗ ಭಾರತದಲ್ಲಿ ನಿರುದ್ಯೋಗ ಸಮಸ್ಯೆಯೇ ಇರಲಿಲ್ಲ. ನಮ್ಮ ದೇಶದ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಿದ್ದೇ ಬ್ರಿಟಿಷರು” ಎಂದು ತಿಳಿಸಿದ್ದರು.
“ಬ್ರಿಟಿಷರು ಇಲ್ಲಿಗೆ ಬರುವುದಕ್ಕೂ ಮೊದಲು ನಮ್ಮ ದೇಶದಲ್ಲಿ ಶೇ.70ರಷ್ಟು ಮಂದಿ ಸುಶಿಕ್ಷಿತರು ಇದ್ದರು. ಇಂಗ್ಲೆಂಡ್ನಲ್ಲಿ ಶಿಕ್ಷಣ ಪಡೆಯುವಿಕೆ ಪ್ರಮಾಣ ಶೇ.17ರಷ್ಟು ಇತ್ತು. ಇಲ್ಲಿಗೆ ಬಂದ ಬ್ರಿಟಿಷರು ನಮ್ಮಲ್ಲಿದ್ದ ಶಿಕ್ಷಣ ವ್ಯವಸ್ಥೆಯನ್ನು ತಮ್ಮ ದೇಶದಲ್ಲಿ ಅನುಷ್ಠಾನಕ್ಕೆ ತಂದರು. ಹಾಗೇ, ಅವರ ದೇಶದ ಶಿಕ್ಷಣ ವ್ಯವಸ್ಥೆಯನ್ನು ನಮ್ಮ ದೇಶದಲ್ಲಿ ಜಾರಿಗೊಳಿಸಿದರು. ಅದೇ ಕಾರಣಕ್ಕೆ ಭಾರತದ ಶಿಕ್ಷಣ ವ್ಯವಸ್ಥೆ ಹಾಳಾಯಿತು. ನಮ್ಮಲ್ಲಿ ಶಿಕ್ಷಣ ಪಡೆಯುವವರ ಸಂಖ್ಯೆ ಕಡಿಮೆಯಾಗಿ, ಅವರ ದೇಶದಲ್ಲಿ ಸುಶಿಕ್ಷಿತರ ಪ್ರಮಾಣ ಜಾಸ್ತಿಯಾಯಿತು” ಎಂದಿದ್ದರು.
ಕರ್ನಾಟಕ
ವಿಸ್ತಾರ TOP 10 NEWS: ಪಲ್ಸ್ ಆಫ್ ಕಿತ್ತೂರು, ಕಲ್ಯಾಣ ಕರ್ನಾಟಕದಿಂದ, ವರುಣದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲವರೆಗೆ ಪ್ರಮುಖ ಸುದ್ದಿಗಳಿವು
ಪಲ್ಸ್ ಆಫ್ ಕರ್ನಾಟಕದಲ್ಲಿ ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕದ ಜನರ ನಾಡಿಮಿಡಿತ, ವಿಜಯೇಂದ್ರ ವರುಣದಲ್ಲಿ ನಿಲ್ಲಬಾರದು ಎನ್ನುವುದು ಬಿಎಸ್ವೈ ಹಿಡಿತ.. ಹೀಗೆ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS
1. Pulse of Karnatana: ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕದಲ್ಲಿ ಯಾರ ಪರವಿದ್ದಾರೆ ಮತದಾರರು?ವಿಧಾನಸಭೆ ಚುನಾವಣೆಗೂ ಮುನ್ನ ಕರ್ನಾಟಕದ ಮತದಾರರ ನಾಡಿ ಮಿಡಿತ ಅರಿಯುವ ಪ್ರತಿಷ್ಠಿತ ಸಮೀಕ್ಷೆ ʼಪಲ್ಸ್ ಆಫ್ ಕರ್ನಾಟಕʼದ ಎರಡನೇ ಆವೃತ್ತಿ ಪ್ರಕಟವಾಗುತ್ತಿದೆ. ಇಂದು ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಹುಬ್ಬಳ್ಳಿ-ಧಾರವಾಡ, ಗದಗ ಜಿಲ್ಲೆಗಳನ್ನೊಳಗೊಂಡ ಕಿತ್ತೂರು ಕರ್ನಾಟಕ ಹಾಗೂ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳನ್ನು ಒಳಗೊಂಡು ಕಲ್ಯಾಣ ಕರ್ನಾಟಕದ ಮತದಾರರ ಮನದಾಳವನ್ನು ಪ್ರಕಟಿಸಲಾಗಿದೆ.
Pulse of Karnataka: ಕಿತ್ತೂರು ಕರ್ನಾಟಕ: ಹಿಂದುತ್ವ ಅಲೆಯ ಪ್ರದೇಶದಲ್ಲಿ ಬೊಮ್ಮಾಯಿ ಪರ ಒಲವು ಹೇಗಿದೆ?
Pulse of Karnataka: ಕಲ್ಯಾಣ ಕರ್ನಾಟಕ: ಮಲ್ಲಿಕಾರ್ಜುನ ಖರ್ಗೆ ತವರಿನಲ್ಲಿ ಯಾರಿಗೆ ವಿಜಯದ ಹಾರ?
2. ಯಾವುದೇ ಕಾರಣಕ್ಕೆ ವರುಣದಿಂದ ವಿಜಯೇಂದ್ರ ಸ್ಪರ್ಧಿಸಲ್ಲ: ಗೊಂದಲಕ್ಕೆ ತೆರೆಯೆಳೆದ ಯಡಿಯೂರಪ್ಪ
ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಯಾವುದೇ ಕಾರಣಕ್ಕೆ ವರುಣ ವಿಧಾನಸಭಾ ಕ್ಷೇತ್ರದಿಂಧ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಅತ್ತ ಮೈಸೂರಿಗೆ ವಿಜಯೇಂದ್ರ ಭೇಟಿ ನೀಡಿದ್ದು, ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಬಹುದು ಎಂಬ ನಿರೀಕ್ಷೆಗಳಿವೆ. ಅಲ್ಲಿನ ಕಾರ್ಯಕರ್ತರೂ ಇದಕ್ಕೆ ಒತ್ತಾಯ ಮಾಡುತ್ತಿರುವ ಬೆನ್ನಿಗೇ ಯಡಿಯೂರಪ್ಪ ಈ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ವರದಿ : ಹುಲಿ ಎದುರು ಹುಲಿಯೇ ಫೈಟ್ ಮಾಡ್ಬೇಕು; ವರುಣದಿಂದಲೇ ಸ್ಪರ್ಧಿಸಲು ವಿಜಯೇಂದ್ರಗೆ ಒತ್ತಡ
3. ಕಾಂಗ್ರೆಸ್ 2ನೇ ಪಟ್ಟಿ ಏ. 5ಕ್ಕೆ? ರಾಹುಲ್ ಗಾಂಧಿ ಕೋಲಾರ ಪ್ರತಿಭಟನೆ ಏಪ್ರಿಲ್ 5ರ ಬದಲು ಏ.9
ಮುಂದಿನ ವಿಧಾನಸಭಾ ಚುನಾವಣೆಗಾಗಿ (Karnataka Elections) 124 ಕ್ಷೇತ್ರಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ ಮುನ್ನಡೆಯಲ್ಲಿರುವ ಕಾಂಗ್ರೆಸ್ ತನ್ನ ಎರಡನೇ ಪಟ್ಟಿಯನ್ನು ಏಪ್ರಿಲ್ 5 ಅಥವಾ 6ರಂದು ಪ್ರಕಟಿಸುವ ಸಾಧ್ಯತೆ ಇದೆ. ಈ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕೋಲಾರ ಭೇಟಿ ಏಪ್ರಿಲ್ ಐದರ ಬದಲಾಗಿ ಏಪ್ರಿಲ್ 9ಕ್ಕೆ ಮರುನಿಗದಿಯಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
4. IPL 2023: ಐಪಿಎಲ್ ಕ್ರಿಕೆಟ್ ಹಬ್ಬಕ್ಕೆ ರಂಗು ತುಂಬಿದ ತಮನ್ನಾ, ರಶ್ಮಿಕಾ ಮಂದಣ್ಣ; ಅದ್ಧೂರಿ ಚಾಲನೆ
ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್(IPL 2023) 16ನೇ ಆವೃತ್ತಿಗೆ ಇಂದು (ಶುಕ್ರವಾರ ಮಾರ್ಚ್ 31) ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಮುಂದಿನ 2 ತಿಂಗಳು ದೇಶದಲ್ಲಿ ಈ ಕ್ರಿಕೆಟ್ ಹಬ್ಬದ ವಾತಾವರಣ ಇರಲಿದೆ. ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ಮಿಲ್ಕಿ ಬ್ಯೂಟಿ ಖ್ಯಾತಿಯ ತಮನ್ನಾ ಭಾಟಿಯ ಹಬ್ಬಕ್ಕೆ ರಂಗು ತುಂಬಿದರು. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
5. Banglore-Mysore Expressway: ದಶಪಥ ಹೆದ್ದಾರಿ ಮತ್ತೆ ದುಬಾರಿ; ನಾಳೆಯಿಂದಲೇ ಟೋಲ್ ದರ ಏರಿಕೆ
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ವಾಹನ ಸವಾರರಿಗೆ ಮತ್ತೆ ಬರೆ ಬೀಳುತ್ತಿದೆ. ಶನಿವಾರದಿಂದ (ಏ. 1) ದರ ಪರಿಷ್ಕರಣೆ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಬರೋಬ್ಬರಿ ಶೇಕಡಾ 22ರಷ್ಟು ದರ ಹೆಚ್ಚಳ ಮಾಡಲಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
6. ಸುಕನ್ಯಾ ಸಮೃದ್ಧಿ ಸೇರಿ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ 0.70% ತನಕ ಏರಿಕೆ
ನಿರೀಕ್ಷೆಯಂತೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು 2023ರ ಏಪ್ರಿಲ್-ಜೂನ್ ಅವಧಿಗೆ (small savings schemes) 0.70% ತನಕ ಏರಿಸಲಾಗಿದೆ. ಹಿರಿಯ ನಾಗರಿಕರ ಉಳಿತಾಯ ಯೋಜನೆ, ಮಾಸಿಕ ಆದಾಯ ಉಳಿತಾಯ ಯೋಜನೆ, ನ್ಯಾಶನಲ್ ಸೇವಿಂಗ್ಸ್ ಸರ್ಟಿಫಿಕೇಟ್, ಕಿಸಾನ್ ವಿಕಾಸ ಪತ್ರ, ಅಂಚೆ ಇಲಾಖೆಯ ಟೈಮ್ ಡಿಪಾಸಿಟ್, ಸುಕನ್ಯಾ ಸಮೃದ್ಧಿ ಖಾತೆಯ ಬಡ್ಡಿ ದರವನ್ನು ಶೇ.8ಕ್ಕೆ ಏರಿಸಲಾಗಿದೆ. ಇದಕ್ಕೂ ಹಿಂದಿನ ತ್ರೈಮಾಸಿಕದಲ್ಲಿ ಇದರ ಬಡ್ಡಿ ದರ 7.6% ಆಗಿತ್ತು. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
7. ನಾಳೆಯಿಂದ ಯಾವುದು ದುಬಾರಿ, ಯಾವುದು ಅಗ್ಗ, ಹೊಸ ಬದಲಾವಣೆ ಏನು?
ಕೇಂದ್ರ ಸರ್ಕಾರ 2023-24ರ ಬಜೆಟ್ನಲ್ಲಿ ಘೋಷಿಸಿರುವ ತೆರಿಗೆ ಬದಲಾವಣೆಗಳು ಏಪ್ರಿಲ್ 1ರಿಂದ ಜಾರಿಯಾಗು ತ್ತಿವೆ. ಇದರ ಪರಿಣಾಮ ಏಪ್ರಿಲ್ 1ರಿಂದ ಕೆಲವು ವಸ್ತುಗಳು ದುಬಾರಿ, ಮತ್ತೆ ಕೆಲವು ಅಗ್ಗವಾಗಲಿದೆ. ಸ್ಥಳೀಯ ಉತ್ಪಾದನೆ ಉತ್ತೇಜನಕ್ಕಾಗಿ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಆಮದು ಸುಂಕವನ್ನು 2023-24ರ ಬಜೆಟ್ನಲ್ಲಿ ಹೆಚ್ಚಿಸಿದೆ. ಜತೆಗೆ ಹೊಸ ನಿಯಮಾವಳಿಗಳೂ ಜಾರಿಯಾಗಲಿವೆ. ಪೂರ್ಣ ವಿವರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
8. ಮೋದಿ ಪದವಿ ಸರ್ಟಿಫಿಕೇಟ್ ಕೇಳಿದ್ದ ದಿಲ್ಲಿ ಸಿಎಂ ಕೇಜ್ರಿವಾಲ್ಗೆ 25 ಸಾವಿರ ರೂ. ದಂಡ!
ಪ್ರಧಾನಿ ನರೇಂದ್ರ ಮೋದಿ ಅವರ ಶಿಕ್ಷಣ ಅರ್ಹತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಗುಜರಾತ್ ಹೈಕೋರ್ಟ್ 25 ಸಾವಿರ ದಂಡ ವಿಧಿಸಿದೆ. ಪದವಿ ಮತ್ತು ಸ್ನಾತಕೋತ್ತರ ಪದವಿ ಸರ್ಟಿಫಿಕೇಟ್ಗಳನ್ನು ಪ್ರಧಾನಿ ಕಾರ್ಯಾಲಯವು(PMO) ಒದಗಿಸುವ ಅಗತ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಪೂರ್ಣ ವಿವರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
9. Bangalore horror : 19ರ ಯುವತಿಯನ್ನು ಎಳೆದೊಯ್ದು ಚಲಿಸುವ ಕಾರಿನಲ್ಲೇ 4 ಗಂಟೆ ಕಾಲ ಅತ್ಯಾಚಾರ ರಾಜಧಾನಿ ಬೆಂಗಳೂರಿನಲ್ಲಿ ಭಯ ಹುಟ್ಟಿಸುವ ಸಾಮೂಹಿಕ ಅತ್ಯಾಚಾರ ಪ್ರಕರಣವೊಂದು (Bangalore horror) ನಡೆದಿದೆ. 19 ವರ್ಷದ ಯುವತಿಯೊಬ್ಬಳನ್ನು ಅಪಹರಿಸಿದ ನಾಲ್ವರು ಯುವಕರು ಚಲಿಸುವ ಕಾರಿನಲ್ಲಿ ಆಕೆಯ ಮೇಲೆ ನಾಲ್ಕು ಗಂಟೆಗಳ ಹೊತ್ತು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ತನ್ನ ಗೆಳೆಯನ ಜತೆ ಪಾರ್ಕ್ನಲ್ಲಿ ಕುಳಿತಿದ್ದ ಯುವತಿಯನ್ನು ಎಳೆದುಕೊಂಡು ಹೋದ ಈ ದುಷ್ಟರು ಕಾರಿನೊಳಗೆ ಕೂಡಿ ಹಾಕಿ ರಾತ್ರಿ ಇಡೀ ಸುತ್ತಾಡಿಸಿ ದೌರ್ಜನ್ಯ ನಡೆಸಿ ರಾತ್ರಿ 3.30ರ ಹೊತ್ತಿಗೆ ರಸ್ತೆಯಲ್ಲಿ ಬಿಟ್ಟುಹೋಗಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
10. Viral News : ನೂಡಲ್ಸ್ನಿಂದಲೇ ರಸ್ತೆ ಗುಂಡಿ ಮುಚ್ಚುವ ವ್ಯಕ್ತಿ! ವೈರಲ್ ಆಗ್ತಿದೆ ಈತನ ಕೆಲಸ
ರಸ್ತೆ ಗುಂಡಿ ಸಮಸ್ಯೆ ನಮ್ಮ ಬೆಂಗಳೂರಿನ ಮಂದಿಗೆ ಚೆನ್ನಾಗಿ ಗೊತ್ತಿರುವಂತದ್ದು. ಕೇವಲ ಬೆಂಗಳೂರು ಮಾತ್ರವಲ್ಲ, ದೇಶ ವಿದೇಶದಲ್ಲೂ ಈ ರಸ್ತೆ ಗುಂಡಿ ದೊಡ್ಡ ಸಮಸ್ಯೆಯೇ. ಅಭಿವೃದ್ಧಿಹೊಂದಿರುವ ರಾಷ್ಟ್ರ ಎಂದು ಕರೆಸಿಕೊಳ್ಳುವ ಬ್ರಿಟನ್ನಲ್ಲೂ ಈ ಸಮಸ್ಯೆ ತಪ್ಪಿದ್ದಲ್ಲ. ಅಲ್ಲಿಯೂ ಕೂಡ ಈ ರಸ್ತೆ ಗುಂಡಿ ವಿಚಾರದಲ್ಲಿ ಸಾಕಷ್ಟು ಮಂದಿ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿ, ಸೋತಿದ್ದಾರೆ. ಇದೀಗ ಈ ವ್ಯಕ್ತಿಯೊಬ್ಬರು ವಿಶೇಷ ರೀತಿಯಲ್ಲಿ ಸರ್ಕಾರದ ಗಮನ ಸೆಳೆಯುತ್ತಿದ್ದು, ಈ ಸುದ್ದಿ ಎಲ್ಲೆಡೆ ವೈರಲ್ (Viral News) ಆಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಇನ್ನಷ್ಟು ಪ್ರಮುಖ ಸುದ್ದಿಗಳು
1. ಗುಜರಾತ್, ಬಂಗಾಳದಲ್ಲಿ ರಾಮನವಮಿ ಹಿಂಸಾಚಾರ; 60 ಜನರ ಬಂಧನ, ರಾಜಕೀಯ ಮೇಲಾಟ
2. Aadhaar Update: ಆನ್ಲೈನ್ನಲ್ಲಿ ಆಧಾರ್ ಅಪ್ಡೇಟ್ ಉಚಿತ; ಈ ಸೌಲಭ್ಯ ಜೂನ್ 14ರವರೆಗೆ ಮಾತ್ರ
3. 30 ಕೋಟಿ ರೂ. ಆಸ್ತಿ ಇದ್ದರೂ 3 ಹೊತ್ತು ಊಟ ಹಾಕದ ಮಗ, ಮಾತ್ರೆ ಸೇವಿಸಿ ತಂದೆ-ತಾಯಿ ಆತ್ಮಹತ್ಯೆ
4. ಒಂದೇ ಕುಟುಂಬದ 6 ಮಂದಿಯ ಪ್ರಾಣ ತೆಗೆದ ಸೊಳ್ಳೆ ಬತ್ತಿ; ಹಾಸಿಗೆ ಮೇಲೆ ಬಿದ್ದು ಭುಗಿಲೆದ್ದ ಹೊಗೆ, ಬೆಂಕಿ
5. New Virus: ಕೊರೊನಾ ಬೆನ್ನಲ್ಲೇ ಪತ್ತೆಯಾಯ್ತು ಮತ್ತೊಂಡು ಡೆಡ್ಲಿ ವೈರಸ್! ಭಾರತದಲ್ಲೇ ಮೊದಲ ಕೇಸ್!
ದೇಶ
Rahul Gandhi KE: ವಯನಾಡಿನಿಂದ ಸ್ಪರ್ಧಿಸಿದ್ದ ಮತ್ತೊಬ್ಬ ರಾಹುಲ್ ಗಾಂಧಿ ಅನರ್ಹ, ಅಷ್ಟಕ್ಕೂ ಯಾರಿವರು?
Rahul Gandhi KE: ಕೇರಳದ ವಯನಾಡು ಲೋಕಸಭೆ ಕ್ಷೇತ್ರದಿಂದಲೇ 2019ರಲ್ಲಿ
ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎಂಬ ಅಭ್ಯರ್ಥಿಯನ್ನು ಚುನಾವಣೆ ಆಯೋಗವು ಸ್ಪರ್ಧಿಸದಂತೆ ನಿಷೇಧ ಹೇರಿದೆ. ಇದಕ್ಕೇನು ಕಾರಣ ಎಂಬ ಮಾಹಿತಿ ಇಲ್ಲಿದೆ.
ತಿರುವನಂತಪುರಂ: “ಮೋದಿ ಉಪನಾಮ ಇರುವ ಎಲ್ಲರೂ ಕಳ್ಳರೇ” ಎಂಬ ಹೇಳಿಕೆ ನೀಡುವ ಮೂಲಕ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ, ಲೋಕಸಭೆಯಿಂದಲೇ ಅನರ್ಹಗೊಂಡಿದ್ದಾರೆ. ಇದರ ಕುರಿತು ಬಿಜೆಪಿ ಹಾಗೂ ಪ್ರತಿಪಕ್ಷಗಳ ಮಧ್ಯೆ ವಾಕ್ಸಮರ ಶುರುವಾಗಿದೆ. ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದೂ ಆರೋಪಿಸಲಾಗುತ್ತಿದೆ. ಈ ಪ್ರಕರಣಕ್ಕೆ ಬೇರೆ ದೇಶಗಳೂ ಪ್ರತಿಕ್ರಿಯಿಸುವಂತಾಗಿದೆ. ಇದರ ಬೆನ್ನಲ್ಲೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸಿದ್ದ ಕೇರಳದ ವಯನಾಡಿನಿಂದಲೇ ಚುನಾವಣೆಗೆ ನಿಂತಿದ್ದ ಮತ್ತೊಬ್ಬ ರಾಹುಲ್ ಗಾಂಧಿ (Rahul Gandhi KE) ಕೂಡ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಂಡಿದ್ದಾರೆ.
ಹೌದು, ಅಚ್ಚರಿ ಎನಿಸಿದರೂ ಈ ಸುದ್ದಿ ನಿಜ. 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಕೆ.ಇ ತಂದೆ ವಲ್ಸಮ್ಮ ಎಂಬುವರನ್ನು ಚುನಾವಣೆ ಆಯೋಗವು ಮೂರು ವರ್ಷ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಿದೆ. ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಿರುವ ಪಟ್ಟಿಯನ್ನು ಚುನಾವಣೆ ಆಯೋಗವು ಬಿಡುಗಡೆಗೊಳಿಸಿದ್ದು, ಇವರಲ್ಲಿ ರಾಹುಲ್ ಗಾಂಧಿ ಕೆ.ಇ ಅವರ ಹೆಸರು ಕೂಡ ಇದೆ ಎಂದು ತಿಳಿದುಬಂದಿದೆ. ಯಾವುದೇ ಪ್ರಮುಖ ನಾಯಕನ ವಿರುದ್ಧ ಅದೇ ಹೆಸರಿನವರು ಚುನಾವಣೆಯಲ್ಲಿ ಸ್ಪರ್ಧಿಸುವುದು ಸಾಮಾನ್ಯ. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಸುಮಲತಾ ಹೆಸರಿನ ಹಲವರು ಸ್ಪರ್ಧಿಸಿದ್ದರು.
ರಾಹುಲ್ ಗಾಂಧಿ ಕೆ.ಇಗೆ ನಿಷೇಧ ಏಕೆ?
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಕೆ.ಇ, ಒಟ್ಟು 2,196 ಮತಗಳನ್ನು ಪಡೆದಿದ್ದರು. ಇವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಚುನಾವಣೆ ಬಳಿಕ ಆಯೋಗಕ್ಕೆ ರಾಹುಲ್ ಗಾಂಧಿ ಕೆ.ಇ ಅವರು ಚುನಾವಣೆಯ ವೇಳೆ ಮಾಡಿದ ಖರ್ಚು-ವೆಚ್ಚದ ಮಾಹಿತಿ ನೀಡಿರಲಿಲ್ಲ. ಆದರೆ, ಚುನಾವಣೆ ಆಯೋಗದ ನಿಯಮಗಳು ಮತ್ತು ಪ್ರಜಾಪ್ರತಿನಿಧಿ ಕಾಯ್ದೆ ಪ್ರಕಾರ, ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ಅಭ್ಯರ್ಥಿಯು ಚುನಾವಣೆ ವೆಚ್ಚದ ಕುರಿತು ಮಾಹಿತಿ ನೀಡಬೇಕು. ಇಲ್ಲದಿದ್ದರೆ ಅವರು ಚುನಾವಣೆ ಸ್ಪರ್ಧೆಯಿಂದ ಅನರ್ಹರಾಗುತ್ತಾರೆ. ಇದೇ ನಿಯಮದ ಅನ್ವಯ, ಆಯೋಗವು ರಾಹುಲ್ ಗಾಂಧಿ ಕೆ.ಇ ಅವರನ್ನು ಮೂರು ವರ್ಷ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧ ಹೇರಿದೆ.
ಚುನಾವಣೆ ಆಯೋಗವು ಪ್ರಜಾಪ್ರತಿನಿಧಿ ಕಾಯ್ದೆ ಪ್ರಕಾರ ಅನರ್ಹಗೊಳಿಸಿರುವ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 29ರಂದು ಪ್ರಕಟ ಮಾಡಿದೆ. ಪಟ್ಟಿಯ ಪ್ರಕಾರ, 33 ವರ್ಷದ ರಾಹುಲ್ ಗಾಂಧಿ ಕೆ.ಇ ಅವರು 2021ರ ಸೆಪ್ಟೆಂಬರ್ 13ರಿಂದ 2024ರ ಸೆಪ್ಟೆಂಬರ್ 13ರವರೆಗೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಇವರು ಕೊಟ್ಟಾಯಂ ಜಿಲ್ಲೆಯವರಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇನ್ನು ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮಾರ್ಚ್ 23ರಂದು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿರುವ ಸೂರತ್ ನ್ಯಾಯಾಲಯವು, ಉನ್ನತ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು 30 ದಿನಗಳ ಅವಕಾಶ ನೀಡಿದೆ.
ಇದನ್ನೂ ಓದಿ: 2013ರಲ್ಲಿ ರಾಹುಲ್ ಗಾಂಧಿ ಸುಗ್ರೀವಾಜ್ಞೆ ಹರಿಯದಿದ್ದರೆ ಈಗ ಅನರ್ಹರಾಗುತ್ತಿರಲಿಲ್ಲ, ಏನದು ಸುಗ್ರೀವಾಜ್ಞೆ?
ದೇಶ
ಲಿಂಗಪರಿವರ್ತಿತ ಮಹಿಳೆಗೂ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅನ್ವಯ; ಪರಿಹಾರಕ್ಕೆ ಅರ್ಹಳು ಎಂದ ಕೋರ್ಟ್
ಶಸ್ತ್ರಚಿಕಿತ್ಸೆ ಮೂಲಕ ಲಿಂಗ ಪರಿವರ್ತನೆ ಮಾಡಿಸಿಕೊಂಡ ಮಹಿಳೆಯು ಕೂಡ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪರಿಹಾರ ಪಡೆಯಲು ಅರ್ಹಳು ಎಂದು ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಮುಂಬೈ: ಶಸ್ತ್ರಚಿಕಿತ್ಸೆಯ ಮೂಲಕ ಲಿಂಗ ಪರಿವರ್ತನೆಗೊಂಡ ಮಹಿಳೆಯೂ ಕೌಟುಂಬಿಕ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ರಕ್ಷಣೆ ಪಡೆಯಬಹುದು. ಹಾಗೆಯೇ, ಅವಳು ಇದೇ ಕಾಯ್ದೆ ಅಡಿಯಲ್ಲಿ ಜೀವನಾಂಶವನ್ನೂ ಪಡೆಯಬಹುದು ಎಂದು ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಹೈಕೋರ್ಟ್ ಆದೇಶದಿಂದಾಗಿ ಇನ್ನು ಮುಂದೆ ಲಿಂಗಪರಿವರ್ತಿತ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ರಕ್ಷಣೆ ಸಿಗಲಿದೆ.
ಶಸ್ತ್ರಚಿಕಿತ್ಸೆ ಮೂಲಕ ಲಿಂಗ ಪರಿವರ್ತನೆ ಮಾಡಿಕೊಂಡ ಮಹಿಳೆಯು ಕೂಡ ಜೀವನಾಂಶ ಪಡೆಯಬಹುದು ಎಂಬ ಕುರಿತು ಅಧೀನ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಅಮಿತ್ ಬೋರ್ಕರ್ ಅವರನ್ನು ಒಳಗೊಂಡ ಏಕಸದಸ್ಯ ಪೀಠವು, ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯು ಲಿಂಗ ಪರಿವರ್ತಿತ ಮಹಿಳೆಯರಿಗೆ ಅನ್ವಯವಾಗುತ್ತದೆ ಎಂದು ಹೇಳಿತು. ಮಾರ್ಚ್ 16ರಂದೇ ನ್ಯಾಯಾಲಯವು ಆದೇಶ ಹೊರಡಿಸಿದ್ದು, ಮಾರ್ಚ್ 31ರಂದು ಆದೇಶದ ಪ್ರತಿ ಲಭ್ಯವಾಗಿದೆ.
“ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 2 (A)ರಲ್ಲಿ ಮಹಿಳೆ ಎಂಬ ಪದದ ಉಲ್ಲೇಖವಿದೆ. ಅದರ ಪ್ರಕಾರ ಮಹಿಳೆ ಎಂತಾದರೆ, ಆಕೆ ನೊಂದವಳು, ದೌರ್ಜನ್ಯಕ್ಕೀಡಾದವಳು ಎಂಬ ಅರ್ಥವಿದೆ. ಆದರೆ, ಶಸ್ತ್ರಚಿಕಿತ್ಸೆ ಮೂಲಕ ಪುರುಷನು ಮಹಿಳೆಯಾಗಿ ಪರಿವರ್ತನೆಯಾದರೂ ಆಕೆ ಮಹಿಳೆಯೇ ಆಗಿರುವುದರಿಂದ ಆಕೆಗೂ ಕಾಯ್ದೆಯ ರಕ್ಷಣೆ ಸಿಗುತ್ತದೆ” ಎಂದ ನ್ಯಾಯಮೂರ್ತಿ ಆದೇಶಿಸಿದರು.
ಇದನ್ನೂ ಓದಿ: Trans Couple Pregnancy: ಮಗುವಿನ ನಿರೀಕ್ಷೆಯಲ್ಲಿ ಕೇರಳದ ತೃತೀಯ ಲಿಂಗಿ ಜೋಡಿ, ಇದು ದೇಶದಲ್ಲೇ ಮೊದಲು
ಕಾಯ್ದೆಯ ಸೆಕ್ಷನ್ 2 (F) ಉಲ್ಲೇಖದಂತೆ ದಾಂಪತ್ಯವು ಲಿಂಗ ತಟಸ್ಥವಾಗಿರುತ್ತದೆ. ಇಲ್ಲಿ ಲೈಂಗಿಕ ಆದ್ಯತೆಗಳಿಗಿಂತ ವ್ಯಕ್ತಿಗಳನ್ನು ಒಳಗೊಂಡಿರುತ್ತದೆ. ಯಾವುದೇ ವ್ಯಕ್ತಿಯು ಇಚ್ಛೆಯ ಮೇರೆಗೆ ಲಿಂಗ ಪರಿವರ್ತನೆ ಮಾಡಿಕೊಳ್ಳುವುದು ಅವರ ಹಕ್ಕು. ಅವರು ಆಯ್ಕೆಯ ಹಕ್ಕನ್ನು ಹೊಂದಿರುತ್ತಾರೆ. ಹಾಗಾಗಿ, ಪುರುಷನು ಶಸ್ತ್ರಚಿಕಿತ್ಸೆ ಮೂಲಕ ಲಿಂಗ ಪರಿವರ್ತನೆ ಮಾಡಿಕೊಂಡ ಬಳಿಕ ಆಕೆ ಎಂದರೆ, ಮಹಿಳೆಯಾಗಿ ಪರಿವರ್ತನೆಯಾಗುತ್ತಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿತು.
ಏನಿದು ಪ್ರಕರಣ?
2016ರಲ್ಲಿ ಮಹಾರಾಷ್ಟ್ರದ ಪುರುಷನೊಬ್ಬ ಶಸ್ತ್ರಚಿಕಿತ್ಸೆ ಮೂಲಕ ಲಿಂಗಪರಿವರ್ತನೆ ಮೂಲಕ ಮಹಿಳೆಯಾಗಿ ಬದಲಾಗಿದ್ದರು. ಇದೇ ವರ್ಷ ಮಹಿಳೆಯು ಬೇರೊಬ್ಬನ ಜತೆ ಮದುವೆಯಾಗಿದ್ದರು. ಆದರೆ, ಮದುವೆಯಾದ ಬಳಿಕ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯ ತಲೆದೋರಿದ ಕಾರಣ ದೂರವಾಗಿದ್ದರು. ಆದರೆ, ಲಿಂಗಪರಿವರ್ತನೆಗೊಂಡ ಮಹಿಳೆಯು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿ ಜೀವನಾಂಶ ಕೋರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜೀವನಾಂಶ ನೀಡುವಂತೆ ನ್ಯಾಯಾಲಯವು ಪತಿಗೆ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ವ್ಯಕ್ತಿಯು ಹೈಕೋರ್ಟ್ ಮೊರೆಹೋಗಿದ್ದ.
-
ದೇಶ21 hours ago
Chenab Bridge | ಐಫೆಲ್ ಟವರ್ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ
-
ಕರ್ನಾಟಕ21 hours ago
SSLC Exam 2023: ಇಂದಿನಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು
-
ಗ್ಯಾಜೆಟ್ಸ್11 hours ago
Aadhaar Update: ಆನ್ಲೈನ್ನಲ್ಲಿ ಆಧಾರ್ ಅಪ್ಡೇಟ್ ಉಚಿತ; ಈ ಸೌಲಭ್ಯ ಜೂನ್ 14ರವರೆಗೆ ಮಾತ್ರ
-
ಅಂಕಣ22 hours ago
ಗೋ ಸಂಪತ್ತು: ಆಹಾರವಾಗಿ ಮಾತ್ರವಲ್ಲ, ಔಷಧವಾಗಿಯೂ ಮಜ್ಜಿಗೆಗೆ ಮಹತ್ವವಿದೆ!
-
ಅಂಕಣ22 hours ago
Brand story : ಚೀನಾದ ಇ-ಕಾಮರ್ಸ್ ದಿಗ್ಗಜ ಅಲಿಬಾಬಾ, 6 ಕಂಪನಿಗಳಾಗಿ ವಿಭಜನೆಯಾಗುತ್ತಿರುವುದೇಕೆ?
-
ಕರ್ನಾಟಕ12 hours ago
B.Y. Vijayendra: ಯಾವುದೇ ಕಾರಣಕ್ಕೆ ವರುಣಾದಿಂದ ವಿಜಯೇಂದ್ರ ಸ್ಪರ್ಧಿಸಲ್ಲ: ಗೊಂದಲಕ್ಕೆ ತೆರೆಯೆಳೆದ ಯಡಿಯೂರಪ್ಪ
-
ದೇಶ13 hours ago
Gujarat High Court: ಪಿಎಂ ಮೋದಿ ಪದವಿ ಸರ್ಟಿಫಿಕೇಟ್ ಕೇಳಿದ್ದ ದಿಲ್ಲಿ ಸಿಎಂ ಕೇಜ್ರಿವಾಲ್ಗೆ 25 ಸಾವಿರ ರೂ. ದಂಡ!
-
ಕರ್ನಾಟಕ15 hours ago
SSLC Exam 2023: ಕಲಬುರಗಿಯಲ್ಲಿ ಎಸ್ಎಸ್ಎಲ್ಸಿ ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ; ವಾಟ್ಸಾಪ್ನಲ್ಲಿ ಹರಿದಾಡಿದ ಕನ್ನಡ ಪೇಪರ್