Site icon Vistara News

Love Jihad | ಗೆಳೆತನ ಮಾಡದಿದ್ದರೆ ಕಿಡ್ನ್ಯಾಪ್, ಜಾರ್ಖಂಡ್‌ನಲ್ಲಿ ಹಿಂದೂ ವಿದ್ಯಾರ್ಥಿನಿಯರಿಗೆ ಬೆದರಿಕೆ!

School

ರಾಂಚಿ: ಜಾರ್ಖಂಡ್‌ನ ಸರ್ಕಾರಿ ಶಾಲೆಯೊಂದಕ್ಕೆ ನುಗ್ಗಿದ ಮುಸ್ಲಿಂ ಗೂಂಡಾಗಳು ಹಿಂದೂ ಹಾಗೂ ಬುಡಕಟ್ಟು ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಿದ್ದಾರೆ. “ನೀವು ನಮ್ಮ ಜತೆ ಸ್ನೇಹದಿಂದ ಇರಬೇಕು. ಇಲ್ಲದಿದ್ದರೆ ನಿಮಗೆ ಹೊಡೆಯುವ ಜತೆಗೆ ಅಪಹರಣ ಮಾಡಲಾಗುತ್ತದೆ” ಎಂಬುದಾಗಿ ಬೆದರಿಕೆ (Love Jihad) ಹಾಕಿದ್ದಾರೆ. ಇದು ಮೂಲಭೂತವಾದಿಗಳ ಕೃತ್ಯ ಎಂಬ ಆರೋಪವೂ ಕೇಳಿಬಂದಿದೆ.

ಕಳೆದ ಒಂದು ವಾರದಿಂದ ಸತತವಾಗಿ ಬುಡಕಟ್ಟು ಸೇರಿ ಹಿಂದೂ ಬಾಲಕಿಯರಿಗೆ ಮುಸ್ಲಿಂ ಗೂಂಡಾಗಳು ಬೆದರಿಕೆ ಹಾಕುತ್ತಿದ್ದಾರೆ. ಈ ಕುರಿತು ಬಾಲಕಿಯರು ಹಾಗೂ ಶಾಲೆಯ ಆಡಳಿತ ಮಂಡಳಿಯು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣದ ಕುರಿತು ತನಿಖೆ ನಡೆಸಲು ಐವರು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ.

ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

“ರಾಂಚಿಯಲ್ಲಿ ಕೆಲ ಮುಸ್ಲಿಮರಿಂದ ಲವ್‌ ಜಿಹಾದ್‌ ಕುತಂತ್ರ ನಡೆಯುತ್ತಿದೆ. ಹೀಗಿದ್ದರೂ ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಅವರು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ” ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಆದರೆ, ಪ್ರಕರಣಕ್ಕೆ ಕೋಮು ಬಣ್ಣ ಬಳಿಯುವುದು ಬೇಡ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ | LOVE JIHAD| ಲವ್‌ ಜಿಹಾದ್‌ಗೆ ಕುಂದಾಪುರದ ಹಿಂದೂ ಯುವತಿ ಬಲಿ

Exit mobile version