Beating Retreat 2023: ತುಂತುರು ಮಳೆ ಮಧ್ಯೆ ಗಣರಾಜ್ಯೋತ್ಸವ ಸಮಾರೋಪ, ಇಲ್ಲಿವೆ ರಮಣೀಯ ಫೋಟೊಗಳು - Vistara News

ಗಣರಾಜ್ಯೋತ್ಸವ

Beating Retreat 2023: ತುಂತುರು ಮಳೆ ಮಧ್ಯೆ ಗಣರಾಜ್ಯೋತ್ಸವ ಸಮಾರೋಪ, ಇಲ್ಲಿವೆ ರಮಣೀಯ ಫೋಟೊಗಳು

Beating Retreat 2023: ಪ್ರಸಕ್ತ ಗಣರಾಜ್ಯೋತ್ಸವದ ಸಮಾರೋಪ ಸಮಾರಂಭವು ದೆಹಲಿ ವಿಜಯ ಚೌಕ್‌ನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಬೃಹತ್‌ ಡ್ರೋನ್‌ ಶೋ ಈ ಬಾರಿ ಗಮನ ಸೆಳೆಯಿತು.

VISTARANEWS.COM


on

Beating Retreat Ceremony
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಗಣರಾಜ್ಯೋತ್ಸವದಂತೆ ಗಣರಾಜ್ಯೋತ್ಸವದ ಸಮಾರೋಪ (Beating Retreat 2023) ಸಮಾರಂಭವೂ ಅದ್ಧೂರಿಯಾಗಿ ನೆರವೇರಿದೆ. ವಿಜಯ್‌ ಚೌಕ್‌ನಲ್ಲಿ ಸುಮಾರು 3,500ಕ್ಕೂ ಅಧಿಕ ಡ್ರೋನ್‌ಗಳ ಹಾರಾಟ, ಸಾಂಸ್ಕೃತಿಕ ಕಾರ್ಯಕ್ರಮ, ರಂಗಿನ ಬೆಳಕು ಸೇರಿ ಹಲವು ಚಟುವಟಿಕೆಗಳೊಂದಿಗೆ 2023ನೇ ಗಣರಾಜ್ಯೋತ್ಸವಕ್ಕೆ ಅದ್ಧೂರಿಯಾಗಿ ತೆರೆ ಎಳೆಯಲಾಯಿತು. ಕೊನೆಗೆ ಸಾರೇ ಜಹಾಂಸೆ ಅಚ್ಛಾ ಗೀತೆ ಹಾಡಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ತುಂತುರ ಮಳೆಯನ್ನೂ ಲೆಕ್ಕಿಸದೆ ಸಾರ್ವಜನಿಕರು ಸಮಾರೋಪ ಸಮಾರಂಭ ಕಣ್ತುಂಬಿಕೊಂಡರು. ಕಾರ್ಯಕ್ರಮದ ಕೆಲವು ಫೋಟೊಗಳು ಇಲ್ಲಿವೆ.

ದ್ರೌಪದಿ ಮುರ್ಮು.
ನರೇಂದ್ರ ಮೋದಿ, ರಾಜನಾಥ್‌ ಸಿಂಗ್‌ ಭಾಗಿ.
ರಂಗಿನ ರಾಷ್ಟ್ರಪತಿ ಭವನ.
ಬೆಳಕಿನ ಚಿತ್ತಾರ.
ಸಮಾರೋಪ ಸಮಾರಂಭದ ಬ್ಯಾಂಡ್‌ ನುಡಿಸಲಾಯಿತು.
ಮಳೆಯ ಮಧ್ಯೆ ಸಮಾರಂಭ ವೀಕ್ಷಿಸಿದ ಜನ.
ಸೇನೆಯ ಶಿಸ್ತು.
ಸೈನಿಕರ ಬ್ಯಾಂಡ್‌.

ಇದನ್ನೂ ಓದಿ: Republic Day : ಗಣರಾಜ್ಯೋತ್ಸವ ಹಿನ್ನೆಲೆ ಸಿಹಿ ಹಂಚಿಕೊಂಡ ಭಾರತ, ಪಾಕಿಸ್ತಾನದ ಸೈನಿಕರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಗಣರಾಜ್ಯೋತ್ಸವ

Republic Day: ಮಾಲ್ಡೀವ್ಸ್ ಮತ್ತು ಭಾರತದ್ದು ಶತಮಾನಗಳ ದೋಸ್ತಿ! ಮಾಲ್ಡೀವ್ಸ್ ಅಧ್ಯಕ್ಷನಿಗೆ ಬಂತಾ ಬುದ್ಧಿ?

Republic Day: ಪ್ರಧಾನಿ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ನಿಂದನಾತ್ಮಕ ಭಾಷೆ ಬಳಸಿದ ಹಿನ್ನೆಲೆಯಲ್ಲಿ ಭಾರತ ಮತ್ತು ಮಾಲ್ಡೀವ್ಸ್ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿದೆ.

VISTARANEWS.COM


on

Maldives Election
Koo

ನವದೆಹಲಿ: ಭಾರತ ವಿರೋಧಿ(Anti India), ಚೀನಾ ಸ್ನೇಹಿತ (Friend of China) ಅಧ್ಯಕ್ಷ ಎಂದು ಗುರುತಿಸಿಕೊಂಡಿರುವ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು (Maldives President Mohamed Muizzu)ಅವರು ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶುಭಾಶಯ ಕೋರಿದ್ದಾರೆ. ಮಾಲ್ಡೀವ್ಸ್ ಮತ್ತು ಭಾರತದ್ದು ಶತಮಾನಗಳ ಸ್ನೇಹ (Centuries of Friendship) ಎಂದು ಹೇಳಿದ್ದಾರೆ. ಪರಸ್ಪರ ಗೌರವ ಮತ್ತು ರಕ್ತಸಂಬಂಧದ ಆಳವಾದ ಅರ್ಥದಲ್ಲಿ ಸ್ಥಾಪಿಸಲಾದ ಎರಡು ರಾಷ್ಟ್ರಗಳ ನಡುವಿನ ಶತಮಾನಗಳ ಹಳೆಯ ಸ್ನೇಹ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ(Republic Day).

ಭಾರತದ 75 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿ ಮೊಹಮ್ಮದ್ ಮುಯಿಜ್ಜು ಅವರು ಭಾರತದ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳಿಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ. ಅಧ್ಯಕ್ಷ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತ್ಯೇಕ ಸಂದೇಶಗಳಲ್ಲಿ, ಅಧ್ಯಕ್ಷ ಮುಯಿಝು ಅವರು ಭಾರತದ 75 ನೇ ಗಣರಾಜ್ಯೋತ್ಸವವನ್ನು ಸ್ಮರಿಸಿದ್ದಾರೆ ಮತ್ತು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಮಾಲ್ಡೀವ್ಸ್ ಅಧ್ಯಕ್ಷ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಅಧ್ಯಕ್ಷ ಮುಯಿಜು ಅವರು ಸರ್ಕಾರ ಮತ್ತು ಮಾಲ್ಡೀವ್ಸ್ ಜನರಿಂದ ಭಾರತದ ಜನರಿಗೆ ಶುಭ ಹಾರೈಸಿದರು. ಅವರು ಶತಮಾನಗಳ ಸ್ನೇಹ, ಪರಸ್ಪರ ಗೌರವ ಮತ್ತು ರಕ್ತಸಂಬಂಧದ ಆಳವಾದ ಪ್ರಜ್ಞೆಯಿಂದ ಪೋಷಿಸಿದ ಮಾಲ್ಡೀವ್ಸ್-ಭಾರತದ ಬಾಂಧವ್ಯವನ್ನು ಒತ್ತಿಹೇಳಿದರು. ಮುಂಬರುವ ವರ್ಷಗಳಲ್ಲಿ ಭಾರತ ಸರ್ಕಾರ ಮತ್ತು ಜನರಿಗೆ ನಿರಂತರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಯ ದೊರೆಯಲಿದೆ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಮತ್ತು ಭಾರತದ ಸ್ನೇಹಪರ ಜನರಿಗೆ ಹಾರ್ದಿಕ ಶುಭಾಶಯಗಳು. ಮುಂದಿನ ವರ್ಷಗಳಲ್ಲಿ ಮಾಲ್ಡೀವ್ಸ್ ಮತ್ತು ಭಾರತದ ನಡುವಿನ ಸ್ನೇಹ ಮತ್ತು ಸಹಕಾರದ ನಿಕಟ ಬಂಧಗಳು ಪ್ರವರ್ಧಮಾನಕ್ಕೆ ಬರುತ್ತವೆ ಎಂದು ನನಗೆ ವಿಶ್ವಾಸವಿದೆ ಎಂದು ಜಮೀರ್ ಹೇಳಿದ್ದಾರೆ.

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿ, ಇದೊಂದು ಅತ್ಯುತ್ತಮ ಪ್ರವಾಸಿತಾಣವಾಗಲಿದೆ ಎಂದು ಹೇಳಿದ್ದರು. ಈ ಹೇಳಿಕೆ ಕುರಿತು ಮಾಲ್ಡೀವ್ಸ್ ಕೆಲವು ಸಚಿವರು ಮೋದಿ ಅವರು ವಿರುದ್ಧ ನಿಂದನಾತ್ಮಕ ಭಾಷೆ ಬಳಸಿ ಟೀಕಿಸಿದ್ದರು. ಇದರಿಂದಾಗಿ ಮಾಲ್ಡೀವ್ಸ್ ಮತ್ತು ಭಾರತದ ನಡುವೆ ರಾಜತಾಂತ್ರಿಕ ಸಂಘರ್ಷ ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಾಲ್ಡೀವ್ಸ್‌ನ ಈ ಶತಮಾನದ ದೋಸ್ತಿ ಎಂಬ ಹೇಳಿಕೆ ಮಹತ್ವದ ಪಡೆದುಕೊಂಡಿದೆ.

ಈ ಸುದ್ದಿಯನ್ನೂ ಓದಿ: ಭಾರತದ ವಿಮಾನ ಬಳಸಲು ಮಾಲ್ಡೀವ್ಸ್‌ ಅಧ್ಯಕ್ಷ ನಕಾರ; 13 ವರ್ಷದ ಬಾಲಕ ಸಾವು

Continue Reading

ವಿಜಯನಗರ

Vijayanagara News: ಕೊಟ್ಟೂರಿನಲ್ಲಿ 75ನೇ ಗಣರಾಜ್ಯೋತ್ಸವ ದಿನ ಆಚರಣೆ

Vijayanagara News: ಕೊಟ್ಟೂರು ಪಟ್ಟಣದ ಶ್ರೀ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

VISTARANEWS.COM


on

75th Republic Day celebrations in Kottur
ಕೊಟ್ಟೂರು ಪಟ್ಟಣದ ಶ್ರೀ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
Koo

ಕೊಟ್ಟೂರು: ಪಟ್ಟಣದ ಶ್ರೀ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು (75th Republic Day) ಆಚರಿಸಲಾಯಿತು.

ಗಣರಾಜ್ಯೋತ್ಸವದ ಅಂಗವಾಗಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಂ. ರವಿಕುಮಾರ್‌, ಧ್ವಜಾರೋಹಣ ನೆರವೇರಿಸಿ, ಬಳಿಕ ಮಾತನಾಡಿದರು.

ಇದನ್ನೂ ಓದಿ: Karnataka Weather: ಕಡಿಮೆ ಆಯಿತೇ ಚಳಿ? ಯಾವ ಜಿಲ್ಲೆಯಲ್ಲಿ ಹೇಗಿದೆ ವಾತಾವರಣ?

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸಿದ್ದರಾಮ ಕಲ್ಮಠ, ಸದಸ್ಯರಾದ ಕೆ.ಬಿ. ಮಲ್ಲಿಕಾರ್ಜುನ್, ಅಡಿಕೆ ಮಂಜುನಾಥಯ್ಯ, ಡಿ.ಎಸ್. ಶಿವಮೂರ್ತಿ, ಪಿಯು ಕಾಲೇಜಿನ ಪ್ರಾಚಾರ್ಯ ಎಂ.ಎಚ್. ಪ್ರಶಾಂತ್ ಕುಮಾರ್, ಹಿರಿಯ ಉಪನ್ಯಾಸಕರಾದ ಡಿ. ರವೀಂದ್ರ ಗೌಡ, ಕೃಷ್ಣಪ್ಪ, ಜೆ.ಬಿ. ಸಿದ್ದನಗೌಡ, ಪೃಥ್ವಿರಾಜ್, ಡಾ. ಶಿವಕುಮಾರ್, ವಿಜಯಲಕ್ಷ್ಮಿ ಸಜ್ಜನ್, ಬಸವರಾಜ ಬಣಕಾರ್ ಉಮೇಶ್ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕುಮಾರಿ ಚೈತ್ರ ಪ್ರಾರ್ಥಿಸಿದರು. ಕೆ.ಎಂ. ಪ್ರಭಾಕರ್ ನಿರೂಪಿಸಿದರು.

Continue Reading

ವಿಜಯನಗರ

Vijayanagara News: ಕೂಡ್ಲಿಗಿಯಲ್ಲಿ 75ನೇ ಗಣರಾಜ್ಯೋತ್ಸವ ದಿನ ಆಚರಣೆ

Vijayanagara News: ಕೂಡ್ಲಿಗಿ ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ತಹಸೀಲ್ದಾರ್ ಎಂ. ರೇಣುಕಾ ಧ್ವಜಾರೋಹಣ ನಡೆಸಿದರು.

VISTARANEWS.COM


on

75th Republic Day celebration in Kudligi
ಕೂಡ್ಲಿಗಿ ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ನಡೆದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ತಹಸೀಲ್ದಾರ್ ಎಂ. ರೇಣುಕಾ ಧ್ವಜಾರೋಹಣ ನಡೆಸಿದರು.
Koo

ಕೂಡ್ಲಿಗಿ: ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ಶುಕ್ರವಾರ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ (75th Republic Day) ತಹಸೀಲ್ದಾರ್ ಎಂ. ರೇಣುಕಾ ಧ್ವಜಾರೋಹಣ ನೆರವೇರಿಸಿದರು.

ಗಣರಾಜ್ಯೋತ್ಸವದಲ್ಲಿ ಧ್ವಜಾವಂದನೆ ಸ್ವೀಕರಿಸಿ ಮಾತನಾಡಿದ ಕೂಡ್ಲಿಗಿ ಶಾಸಕ ಡಾ.ಎನ್.ಟಿ. ಶ್ರೀನಿವಾಸ್, ಭಾರತದ ಇತಿಹಾಸದಲ್ಲೇ ಗಣರಾಜ್ಯೋತ್ಸವ ದಿನ ಮಹತ್ವದ ದಿನವಾಗಿದೆ ಎಂದು ತಿಳಿಸಿದರು.

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಈಗಾಗಲೇ ಸುಮಾರು 400 ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಮ್ಮತಿ ನೀಡಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಈಗಾಗಲೇ ಕ್ಷೇತ್ರದ ಕಟ್ಟಕಡೆಯ ಹಳ್ಳಿಗೂ ಭೇಟಿ ನೀಡಿ ಸಮಸ್ಯೆಗಳನ್ನು ಅರಿತಿದ್ದು,ಅವರಿಗೆ ಅವಶ್ಯವಾದ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Weather: ಕಡಿಮೆ ಆಯಿತೇ ಚಳಿ? ಯಾವ ಜಿಲ್ಲೆಯಲ್ಲಿ ಹೇಗಿದೆ ವಾತಾವರಣ?

ತುಂಗಭದ್ರಾ ನದಿಯಿಂದ ಪಾವಗಡಕ್ಕೆ ಕುಡಿಯುವ ನೀರಿನ ಬಹುಗ್ರಾಮ ಯೋಜನೆಯಿಂದ ಕೂಡ್ಲಿಗಿ ಪಟ್ಟಣ ಕೈಬಿಡಲಾಗಿತ್ತು, ಅದನ್ನ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಪಟ್ಟಣಕ್ಕೂ ಕುಡಿಯುವ ನೀರು ಒದಗಿಸಲು ಸುಮಾರು 68 ಕೋಟಿ ಅನುದಾನ ಈಗಾಗಲೇ ಬಿಡುಗಡೆ ಮಾಡಿ ಟೆಂಡರ್ ಮುಗಿದಿದೆ, ಶ್ರೀಘ್ರದಲ್ಲಿ ಕಾಮಾಗಾರಿ ಆರಂಭವಾಗಲಿದೆ ಎಂದರು.

ಇದೇ ಸಂಧರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ಶಾಸಕರು ಸನ್ಮಾನಿಸಿದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಇದನ್ನೂ ಓದಿ: Tea And Coffee With Meals: ಊಟ ತಿಂಡಿ ಜೊತೆಜೊತೆಗೆ ಚಹಾ ಕಾಫಿ ಹೀರುವ ಅಭ್ಯಾಸ ಒಳ್ಳೆಯದೇ, ಕೆಟ್ಟದ್ದೇ?

ಈ ವೇಳೆ ತಾಪಂ ಇಒ ವೈ. ರವಿಕುಮಾರ್, ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪೂರ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ್, ಪಪಂ ಸದಸ್ಯರಾದ ಕಾವಲಿ ಶಿವಪ್ಪನಾಯಕ, ಪಿ.ಚಂದ್ರು, ಸಚಿನ್ ಕುಮಾರ್, ಕೆ.ಈಶಪ್ಪ, ಸಿರಬಿ ಮಂಜುನಾಥ, ಲಕ್ಷ್ಮೀದೇವಿ, ಚೌಡಮ್ಮ, ಸರಸ್ವತಿ, ರೇಣುಕಾ ದುರುಗೇಶ್, ಲೀಲಾವತಿ ಪ್ರಭಾಕರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಇದ್ದರು.

Continue Reading

ಉತ್ತರ ಕನ್ನಡ

Uttara Kannada News: ಯಲ್ಲಾಪುರದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ

Uttara Kannada News: ಯಲ್ಲಾಪುರ ತಾಲೂಕಿನ ಕಾಳಮ್ಮ ನಗರದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣವನ್ನು ತಹಸೀಲ್ದಾರ್‌ ಗುರುರಾಜ್‌ ಎಂ. ನೆರವೇರಿಸಿದರು.

VISTARANEWS.COM


on

75th Republic Day celebration in Yallapur
ಯಲ್ಲಾಪುರ ತಾಲೂಕಿನ ಕಾಳಮ್ಮ ನಗರದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು.
Koo

ಯಲ್ಲಾಪುರ: ತಾಲೂಕಿನ ಕಾಳಮ್ಮ ನಗರದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ (75th Republic Day) ಅಂಗವಾಗಿ ಧ್ವಜಾರೋಹಣವನ್ನು ತಹಸೀಲ್ದಾರ್‌ ಗುರುರಾಜ್‌ ಎಂ. ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಶಿವರಾಮ ಹೆಬ್ಬಾರ್‌, ನಮ್ಮದು ಸಂಪೂರ್ಣ ವಿಶ್ವದಲ್ಲಿ ಅತ್ಯಂತ ಅಗ್ರಮಾನ್ಯದಲ್ಲಿರುವ ದೇಶವಾಗಿದೆ. ನಮ್ಮ ನೆಲ, ಜಲ, ಸಂಸ್ಕೃತಿಯನ್ನು ಗೌರವಿಸುವಂತ ಸಂಸ್ಕಾರ ನಮ್ಮ ದೇಶದ ಮಣ್ಣಿನ ಗುಣವಾಗಿದೆ. ಡಾ. ಬಿ.ಆರ್‌. ಅಂಬೇಡ್ಕರ್‌, ಮಹಾತ್ಮ ಗಾಂಧೀಜಿ ಅವರಂತಹ ಮಹನೀಯರ ಆದರ್ಶಗಳು ನಮಗೆ ಪ್ರೇರಣೆಯಾಗಲಿ ಎಂದು ತಿಳಿಸಿದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ತಹಸೀಲ್ದಾರ್‌ ಗುರುರಾಜ್‌ ಎಂ., ಜಗತ್ತಿನ ಅತ್ಯುನ್ನತ ಸಂವಿಧಾನವನ್ನು ನಮ್ಮ ದೇಶ ಹೊಂದಿದೆ. ಅನೇಕ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ, ಶ್ರೇಷ್ಠ ಗುಣಗಳನ್ನು ಅಳವಡಿಸಿ ನಮ್ಮ ಸಂವಿಧಾನವನ್ನು ರೂಪಿಸಿದ ಡಾ. ಅಂಬೇಡ್ಕರ್‌ ಅವರನ್ನು ನಾವೆಲ್ಲ ಇಂದು ನೆನೆಯಲೇಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Padma Shri: ಭತ್ತದ ತಳಿಯ ಸಂರಕ್ಷನನ್ನು ಅರಸಿ ಬಂತು ಪದ್ಮಶ್ರೀ ಗೌರವ

ಇದೇ ಸಂದರ್ಭದಲ್ಲಿ ತಾನ್‌ಸೇನ್‌ ಪ್ರಶಸ್ತಿ ಪುರಸ್ಕೃತ ಪಂಡಿತ್‌ ಗಣಪತಿ ಭಟ್‌ ಹಾಸಣಗಿ, ಗ್ರಾಮೀಣ ಭಾಗದಲ್ಲಿ ಸೇವೆಗಾಗಿ ಡಾ. ನಾಗರಾಜ್ ಬಿ.ಎಚ್‌. ಹಾಗೂ ನಾಟಿ ವೈದ್ಯ ನಾರಾಯಣ ಹೆಗಡೆ ಗವೇಗುಳಿ ಅವರಿಗೆ ನಾಗರಿಕ ಸನ್ಮಾನ ನೀಡಿ ಗೌರವಿಸಲಾಯಿತು. ಅಂತೆಯೇ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟು ಶ್ರೀದೇವಿ ಗಂಗಾ ನಾಯಕ ಹಾಗೂ ವಿಶೇಷ ಚೇತನರ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಜಯಶ್ರೀ ಮಂಜುನಾಥ ಮೈಲಾರ ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಂಕೇತಿಕವಾಗಿ ಲ್ಯಾಪ್‌ಟಾಪ್ ವಿತರಣೆ ಮಾಡಲಾಯಿತು.

ನಂತರ ನಡೆದ ಆಕರ್ಷಕ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

ವೇದಿಕೆಯಲ್ಲಿ ಪಂಚಾಯತ್‌ ರಾಜ್‌ ವಿಕೇಂದ್ರೀಕರಣ ಸಮಿತಿ ಉಪಾಧ್ಯಕ್ಷ ಪ್ರಮೋದ್ ಹೆಗಡೆ, ಸಿಪಿಐ ರಂಗನಾಥ ನೀಲಮ್ಮನವರ್, ಪಟ್ಟಣ ಪಂಚಾಯಿತಿ ಸದಸ್ಯರಾದ ಸುನಂದಾ ದಾಸ್ ಹಾಗೂ ಜ್ಯೋತಿ ನಾಯ್ಕ, ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Sachin Tendulkar: ಸಫಾರಿ ವೇಳೆ ಮೂರನೇ ತಲೆ ಮಾರಿನ ಹುಲಿಯನ್ನು ತೋರಿಸಿದ ಸಚಿನ್​ ತೆಂಡೂಲ್ಕರ್​

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್. ಹೆಗಡೆ ಸ್ವಾಗತಿಸಿದರು. ಸಂಜೀವ್ ಕುಮಾರ್ ಹೊಸ್ಕೇರಿ ನಿರ್ವಹಿಸಿದರು. ಶಿಕ್ಷಣ ಸಂಯೋಜಕ ಸಂತೋಷ ಜಿಗಳೂರು ವಂದಿಸಿದರು.

Continue Reading
Advertisement
Yogendra Yadav
Lok Sabha Election 20244 seconds ago

Yogendra Yadav: ಬಿಜೆಪಿಗೆ ಬಹುಮತ ಇಲ್ಲವೆಂದ ಯೋಗೇಂದ್ರ ಯಾದವ್; ಇವರ ಹಿಂದಿನ ಭವಿಷ್ಯ ಏನಾಗಿತ್ತು?

KEA Department of Technical Education Director Prasanna has been appointed as the Executive Director of KEA
ಬೆಂಗಳೂರು39 mins ago

KEA : ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದ; ಕೆಇಎ ಎಕ್ಸಿಕ್ಯುಟಿವ್‌ ಡೈರೆಕ್ಟರ್‌ ರಮ್ಯಾ ಎತ್ತಂಗಡಿ

Udupi
ಕರ್ನಾಟಕ41 mins ago

Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

UPI in Healthcare
ಆರೋಗ್ಯ43 mins ago

UPI in Healthcare: ಆರೋಗ್ಯ ಕ್ಷೇತ್ರದಲ್ಲೂ ಡಿಜಿಟಲ್ ಕ್ರಾಂತಿ!

Sri Vedavyasa Jayanti Madhva Raddhanta Samvardhak Sabha 81st session at Bengaluru
ಬೆಂಗಳೂರು48 mins ago

Bengaluru News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ; ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ

CAA
ದೇಶ1 hour ago

CAA: ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ ಸಿಎಎ ಅನ್ವಯ ಭಾರತದ ಪೌರತ್ವ; ದೆಹಲಿಯಲ್ಲಿ ಸಂಭ್ರಮ, Video ಇಲ್ಲಿದೆ

Single Screen Theaters
ಸಿನಿಮಾ1 hour ago

Single Screen Theaters: ಹತ್ತು ದಿನ ತೆಲಂಗಾಣದ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು ಬಂದ್; ಕಾರಣ ವಿಚಿತ್ರ!

Pushpa 2
ಪ್ರಮುಖ ಸುದ್ದಿ1 hour ago

Pushpa 2 : ಪುಷ್ಪಾ 2 ಬಿಡುಗಡೆ ದಿನ ಮುಂದೂಡಿಕೆಯಾಗುತ್ತದೆಯೇ? ಚಿತ್ರ ತಂಡದ ಸ್ಪಷ್ಟನೆಯೇನು?

HD Revanna case Revanna gets interim bail in Holenarasipura sexual assault case
ಕರ್ನಾಟಕ2 hours ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

Murder case in Belgavi
ಬೆಳಗಾವಿ2 hours ago

Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು8 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌