Bharat Jodo Yatra: ನಾಳೆ ಭಾರತ್​ ಜೋಡೋ ಯಾತ್ರೆ ಕೊನೇ ದಿನ; ಸಮಾರೋಪ ಸಮಾರಂಭದಲ್ಲಿ 12 ಪಕ್ಷಗಳು ಭಾಗಿ - Vistara News

ದೇಶ

Bharat Jodo Yatra: ನಾಳೆ ಭಾರತ್​ ಜೋಡೋ ಯಾತ್ರೆ ಕೊನೇ ದಿನ; ಸಮಾರೋಪ ಸಮಾರಂಭದಲ್ಲಿ 12 ಪಕ್ಷಗಳು ಭಾಗಿ

ರಾಹುಲ್​ ಗಾಂಧಿಯವರು ಶನಿವಾರ ಭಾರತ್​ ಜೋಡೋ ಯಾತ್ರೆ ಶುರುವಾದ ಕೆಲವೇ ಹೊತ್ತಲ್ಲಿ, ಪುಲ್ವಾಮಾ ಉಗ್ರದಾಳಿಯಲ್ಲಿ ಮೃತಪಟ್ಟಿರುವ ಯೋಧರ ಸಮಾಧಿಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು.

VISTARANEWS.COM


on

Rahul Gandhi Bharat Jodo Yatra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ರಾಹುಲ್​ ಗಾಂಧಿಯವರ ಭಾರತ್​ ಜೋಡೋ ಯಾತ್ರೆ (Bharat Jodo Yatra) ಅಂತಿಮ ಹಂತ ತಲುಪಿದೆ. ಈ ಯಾತ್ರೆ ಸೋಮವಾರ (ಜನವರಿ 30)ದಂದು ಮುಕ್ತಾಯಗೊಳ್ಳಲಿದ್ದು, ಶ್ರೀನಗರದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ 12 ಪ್ರತಿಪಕ್ಷಗಳ ನಾಯಕರು ಪಾಲ್ಗೊಳ್ಳಲಿದ್ದಾರೆ. ಭಾರತ್​ ಜೋಡೋ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಕಾಂಗ್ರೆಸ್​​ನಿಂದ​​ ಒಟ್ಟು 21 ಪಕ್ಷಗಳಿಗೆ ಆಹ್ವಾನ ನೀಡಿದ್ದರು. ಆದರೆ ತೃಣಮೂಲ ಕಾಂಗ್ರೆಸ್​, ಸಮಾಜವಾದಿ ಪಕ್ಷ, ಟಿಡಿಪಿ ಸೇರಿ 9 ಪಕ್ಷಗಳು ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ.

ಇನ್ನುಳಿದಂತೆ ಎಂ.ಕೆ.ಸ್ಟಾಲಿನ್​ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗ, ಶರದ್​ ಪವಾರ್​ ಅವರ ರಾಷ್ಟ್ರೀಯ ಕಾಂಗ್ರೆಸ್​ ಪಾರ್ಟಿ (NCP), ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ್​ (RJD), ನಿತೀಶ್​ ಕುಮಾರ್ ನೇತೃತ್ವದ ಜನತಾ ದಳ (ಯುನೈಟೆಡ್​), ಶಿವಸೇನೆ ಉದ್ಧವ್ ಠಾಕ್ರೆ ಬಣ, ಸಿಪಿಐ (ಎಂ), ಸಿಪಿಐ, ಜಮ್ಮು-ಕಾಶ್ಮೀರ ನ್ಯಾಶನಲ್​ ಕಾನ್ಫರೆನ್ಸ್​, ಜಮ್ಮು-ಕಾಶ್ಮೀರ್​ ಪೀಪಲ್ಸ್​ ಡೆಮಾಕ್ರಟಿಕ್​ ಪಾರ್ಟಿ, ಶಿಬು ಸೊರೆನ್​ ಅವರ ಜಾರ್ಖಂಡ ಮುಕ್ತಿ ಮೋರ್ಚಾ ಸೇರಿ ಒಟ್ಟು 12 ಪಕ್ಷಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಪುಲ್ವಾಮಾ ಹುತಾತ್ಮ ಯೋಧರಿಗೆ ರಾಹುಲ್ ಗಾಂಧಿ ನಮನ
ಶುಕ್ರವಾರ ಭದ್ರತೆ ಲೋಪ ಕಾರಣಕ್ಕೆ ಅರ್ಧಕ್ಕೆ ನಿಂತಿದ್ದ ಭಾರತ್ ಜೋಡೋ ಯಾತ್ರೆ ಶನಿವಾರ ಮತ್ತೆ ಮುಂದುವರಿಯಿತು. ಶನಿವಾರ ಯಾತ್ರೆ ಪ್ರಾರಂಭವಾಗುತ್ತಿದ್ದಂತೆ ರಾಹುಲ್​ ಗಾಂಧಿಯವರು ಪುಲ್ವಾಮಾ ಉಗ್ರದಾಳಿಯಲ್ಲಿ ಮೃತಪಟ್ಟಿರುವ ಯೋಧರ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. 2019ರ ಫೆಬ್ರವರಿ 14ರಂದು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF)ಯ ಯೋಧರು ಬಸ್​​ನಲ್ಲಿ ಹೋಗುತ್ತಿದ್ದಾಗ, ಜೈಷೆ ಮೊಹಮ್ಮದ್​ ಸಂಘಟನೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದರು. ಯೋಧರಿದ್ದ ಬಸ್​ಗೆ ಉಗ್ರ ತನ್ನ ಕಾರು ಡಿಕ್ಕಿ ಹೊಡೆಸಿ, ಸ್ಫೋಟಿಸಿದ್ದ. ತತ್ಪರಿಣಾಮ 40 ಯೋಧರು ಮೃತಪಟ್ಟಿದ್ದರು. ಆ ಯೋಧರಿಗೆ ಈಗ ರಾಹುಲ್ ಗಾಂಧಿ ಗೌರವ ಸಮರ್ಪಿಸಿದರು.

ಇತ್ತೀಚೆಗೆ ಕಾಂಗ್ರೆಸ್​ ಹಿರಿಯ ನಾಯಕ ದಿಗ್ವಿಜಯ ಸಿಂಗ್​ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ‘2016ರಲ್ಲಿ ಭಾರತೀಯ ಸೇನೆ ನಡೆಸಿದ್ದ ಬಾಲಾಕೋಟ್​ ಸರ್ಜಿಕಲ್​ ಸ್ಟ್ರೈಕ್​​ಗೆ ಪುರಾವೆ ಕೇಳಿದ್ದರು. ದಾಳಿ ಬಗ್ಗೆ ಕೇಂದ್ರ ಸರ್ಕಾರ ಮಾತನಾಡುತ್ತದೆ. ಭಾರತದ ಯೋಧರು ಉಗ್ರರನ್ನು ಹತ್ಯೆ ಮಾಡಿದರು ಎಂಬುದಾಗಿ ಪ್ರಸ್ತಾಪಿಸುತ್ತದೆ. ಆದರೆ, ಇದುವರೆಗೆ ಸರ್ಜಿಕಲ್‌ ಸ್ಟ್ರೈಕ್‌ ಸಾಕ್ಷ್ಯ ಒದಗಿಸಿಲ್ಲ. ಹಾಗೆಯೇ, ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಲೇ 2019ರಲ್ಲಿ ಪುಲ್ವಾಮದಲ್ಲಿ ಸಿಆರ್‌ಪಿಎಫ್‌ ಯೋಧರ ಮೇಲೆ ದಾಳಿ ನಡೆಯಿತು ಎಂದು ಹೇಳಿದ್ದರು. ದಿಗ್ವಿಜಯ ಸಿಂಗ್​ ಮಾತನ್ನು ಬಿಜೆಪಿ ನಾಯಕರು ತೀವ್ರವಾಗಿ ವಿರೋಧಿಸಿದ್ದಷ್ಟೇ ಅಲ್ಲ, ರಾಹುಲ್​ ಗಾಂಧಿಯವರೂ ಸೂಕ್ಷ್ಮವಾಗಿಯೇ ತಿರುಗೇಟು ನೀಡಿ, ಸೇನೆ ಯಾವುದಕ್ಕೂ ಸಾಕ್ಷಿ ಕೊಡಬೇಕಿಲ್ಲ ಅಂದಿದ್ದರು. ಅದರ ಬೆನ್ನಲ್ಲೇ ಈಗ ಪುಲ್ವಾಮಾ ಹುತಾತ್ಮ ಯೋಧರಿಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದ್ದು, ಮಹತ್ವ ಪಡೆದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mohan Bhagwat: ಆರ್‌ಎಸ್‌ಎಸ್‌ ಮೀಸಲಾತಿ ಪರ; ಮೋಹನ್‌ ಭಾಗವತ್‌ ದಿಢೀರನೆ ಹೀಗೆ ಹೇಳಿದ್ದೇಕೆ?

Mohan Bhagwat: ಸಾಂವಿಧಾನಿಕವಾಗಿ ನೀಡಿರುವ ಎಲ್ಲ ಮೀಸಲಾತಿಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘವು ಬೆಂಬಲಿಸುತ್ತಿದೆ. ಮೊದಲು ಕೂಡ ಬೆಂಬಲಿಸಿದೆ. ಈಗಲೂ ಬೆಂಬಲ ನೀಡುತ್ತದೆ ಎಂಬುದಾಗಿ ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. ಮೀಸಲಾತಿ ಕುರಿತು ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ತಿಕ್ಕಾಟ ಶುರುವಾಗಿರುವ ಮಧ್ಯೆಯೇ ಮೋಹನ್‌ ಭಾಗವತ್‌ ಹೇಳಿಕೆ ಪ್ರಾಮುಖ್ಯ ಪಡೆದಿದೆ.

VISTARANEWS.COM


on

Mohan Bhagwat
Koo

ಹೈದರಾಬಾದ್: ಕರ್ನಾಟಕದಲ್ಲಿ ಇತರೆ ಹಿಂದುಳಿದ ವರ್ಗಗಳ (OBC) ಮೀಸಲಾತಿಯನ್ನು ರಾಜ್ಯ ಸರ್ಕಾರವು ಮುಸ್ಲಿಮರಿಗೆ ನೀಡಿರುವುದು ದೇಶ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಇದು ಲೋಕಸಭೆ ಚುನಾವಣೆಯ (Lok Sabha Election 2024) ಪ್ರಮುಖ ಚರ್ಚೆಯ ವಿಷಯವಾಗಿದೆ. ಮೀಸಲಾತಿ ಕುರಿತು ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ಮಧ್ಯೆ ತೀವ್ರ ವಾಗ್ವಾದ ನಡೆಯುತ್ತಿದೆ. ಇದರ ಬೆನ್ನಲ್ಲೇ, “ರಾಷ್ಟ್ರೀಯ ಸ್ವಯಂಸೇವಕ ಸಂಘವು (RSS) ಮೀಸಲಾತಿಯನ್ನು (Reservation) ಬೆಂಬಲಿಸುತ್ತದೆ” ಎಂಬುದಾಗಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ (Mohan Bhagwat) ಹೇಳಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಆರ್‌ಎಸ್‌ಎಸ್‌ ಮೀಸಲಾತಿಯನ್ನು ವಿರೋಧಿಸುತ್ತದೆ ಎಂದು ಹೇಳಿರುವ ವಿಡಿಯೊ ಹರಿದಾಡುತ್ತಿದೆ. ಆದರೆ, ಸಂಘ ಪರಿವಾರವು ಮೊದಲಿನಿಂದಲೂ ಮೀಸಲಾತಿಯನ್ನು ಬೆಂಬಲಿಸುತ್ತಲೇ ಬಂದಿದೆ. ಮುಂದಿನ ದಿನಗಳಲ್ಲೂ ಆರ್‌ಎಸ್‌ಎಸ್‌ ಮೀಸಲಾತಿಯನ್ನು ಬೆಂಬಲಿಸುತ್ತದೆ. ಸಮುದಾಯಗಳಿಗೆ ಎಲ್ಲಿಯವರೆಗೆ ಮೀಸಲಾತಿಯ ಅವಶ್ಯಕತೆ ಇದೆಯೋ, ಅಲ್ಲಿಯವರೆಗೆ ಮೀಸಲಾತಿಯನ್ನು ಮುಂದುವರಿಸಬೇಕು” ಎಂದು ಹೇಳಿದ್ದಾರೆ.

“ಆರ್‌ಎಸ್‌ಎಸ್‌ ಕುರಿತು ಜನರಿಗೆ ತಪ್ಪು ಕಲ್ಪನೆಗಳಿವೆ. ಆರ್‌ಎಸ್‌ಎಸ್‌ ಮೀಸಲಾತಿಯನ್ನು ವಿರೋಧಿಸುತ್ತದೆ. ಆದರೆ, ಹೊರಗಡೆ ಆ ಕುರಿತು ಹೇಳುವುದಿಲ್ಲ ಅಷ್ಟೆ ಎಂಬಂತೆ ಬಿಂಬಿಸಲಾಗುತ್ತಿದೆ. ಸಾಂವಿಧಾನಿಕವಾಗಿ ನೀಡಲಾಗಿರುವ ಮೀಸಲಾತಿಯನ್ನು ನಾವು ಬೆಂಬಲಿಸುತ್ತೇವೆ. ಇದರಿಂದ ಸಮುದಾಯಗಳಿಗೆ ಅಗತ್ಯ ಸೌಕರ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಹಾಗಾಗಿ, ಯಾರೂ ಆರ್‌ಎಸ್‌ಎಸ್‌ ಕುರಿತು ತಪ್ಪು ಮಾಹಿತಿಯನ್ನು ಹರಡಬಾರದು” ಎಂಬುದಾಗಿ ಮೋಹನ್‌ ಭಾಗವತ್‌ ಮನವಿ ಮಾಡಿದರು.

ಕೆಲ ದಿನಗಳ ಹಿಂದಷ್ಟೇ ರಾಹುಲ್‌ ಗಾಂಧಿ ಅವರು ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. “ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ದೇಶದ ವೈವಿಧ್ಯತೆಯನ್ನು ಹಾಳು ಮಾಡುತ್ತವೆ. ಸಂವಿಧಾನವನ್ನು ಬದಲಾಯಿಸುವುದು ಬಿಜೆಪಿಯ ಕುತಂತ್ರವಾಗಿದೆ. ಜನ ಧರ್ಮ, ಸಮುದಾಯಗಳ ಆಚರಣೆಗಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುವ ಮೂಲಕ ಸಮಾಜದಲ್ಲಿ ಸಂಘರ್ಷ ಉಂಟುಮಾಡಿದೆ” ಎಂದು ವಯನಾಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: Lok Sabha Election 2024 ಮುಸ್ಲಿಮರಿಗೆ ಒಬಿಸಿ ಮೀಸಲಾತಿ ಸತ್ಯ; ನಮ್ಮ ಬಳಿ ದಾಖಲೆ ಇದೆ ಎಂದ ಪ್ರಲ್ಹಾದ್‌ ಜೋಶಿ

Continue Reading

ದೇಶ

Election Commission: ಎಎಪಿಯ ಪ್ರಚಾರ ಗೀತೆಗೆ ಬದಲಾವಣೆ ಸೂಚಿಸಿದ ಚುನಾವಣಾ ಆಯೋಗ; ಕಾರಣವೇನು?

Election Commission: ಲೋಕಸಭಾ ಚುನಾವಣೆಯ ಪ್ರಚಾರದ ಹಾಡಿನ ವಿಷಯವನ್ನು ಬದಲಾಯಿಸುವಂತೆ ಭಾರತದ ಚುನಾವಣಾ ಆಯೋಗವು ಆಮ್ ಆದ್ಮಿ ಪಕ್ಷಕ್ಕೆ ಸೂಚಿಸಿದೆ. ಪಕ್ಷದ ಪ್ರಚಾರ ಗೀತೆಯು ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ ನಿಯಮಗಳು 1994ರ ಅಡಿಯಲ್ಲಿ ಸೂಚಿಸಲಾದ ಜಾಹೀರಾತು ಸಂಹಿತೆಗಳು ಮತ್ತು ಚುನಾವಣಾ ಆಯೋಗದ ಮಾರ್ಗಸೂಚಿಗಳಿಗೆ ಅನುಗುಣವಾಗಿರಬೇಕು ಎಂದು ಅದು ಹೇಳಿದೆ. ಈತನ್ಮಧ್ಯೆ ಎಎಪಿಯ ಪ್ರಚಾರ ಗೀತೆಯನ್ನು ಚುನಾವಣಾ ಆಯೋಗ ನಿಷೇಧಿಸಿದೆ ಎಂದು ಹಿರಿಯ ನಾಯಕಿ, ಸಚಿವೆ ಅತಿಶಿ ಆರೋಪಿಸಿದ್ದಾರೆ.

VISTARANEWS.COM


on

Election Commission
Koo

ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರದ ಹಾಡಿನ ವಿಷಯವನ್ನು ಬದಲಾಯಿಸುವಂತೆ ಭಾರತದ ಚುನಾವಣಾ ಆಯೋಗ (Election Commission)ವು ಆಮ್ ಆದ್ಮಿ ಪಕ್ಷ (Aam Aadmi Party)ಕ್ಕೆ ಸೂಚಿಸಿದೆ. ಪಕ್ಷದ ಪ್ರಚಾರ ಗೀತೆಯು ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ ನಿಯಮಗಳು 1994ರ ಅಡಿಯಲ್ಲಿ ಸೂಚಿಸಲಾದ ಜಾಹೀರಾತು ಸಂಹಿತೆಗಳು ಮತ್ತು ಚುನಾವಣಾ ಆಯೋಗದ ಮಾರ್ಗಸೂಚಿಗಳಿಗೆ ಅನುಗುಣವಾಗಿರಬೇಕು ಎಂದು ಚುನಾವಣಾ ಆಯೋಗ ಹೇಳಿದೆ.

ಅಗತ್ಯ ಬದಲಾವಣೆಗಳನ್ನು ಮಾಡಿದ ನಂತರ ಪ್ರಚಾರದ ಹಾಡನ್ನು ಮತ್ತೆ ಸಲ್ಲಿಸುವಂತೆ ಚುನಾವಣಾ ಆಯೋಗವು ದೆಹಲಿಯ ಆಡಳಿತ ಪಕ್ಷವಾದ ಆಪ್‌ಗೆ ತಿಳಿಸಿದೆ. ಚುನಾವಣಾ ಆಯೋಗದ ಮಾರ್ಗಸೂಚಿಗಳು ಮತ್ತು ಜಾಹೀರಾತು ಸಂಹಿತೆಗಳ ನಿಬಂಧನೆಗಳನ್ನು ಉಲ್ಲಂಘಿಸುವ ಈ ಪ್ರಚಾರ ಹಾಡಿನ ವಿಷಯವು ನ್ಯಾಯಾಂಗದ ಮೇಲೆ ಅನುಮಾನವನ್ನು ಉಂಟು ಮಾಡುತ್ತದೆ ಎಂದು ಚುನಾವಣಾ ಆಯೋಗ ತನ್ನ ನೋಟಿಸ್‌ನಲ್ಲಿ ತಿಳಿಸಿದೆ.

ʼಹಾಡಿನ ನಿಷೇಧಕ್ಕೆ ಸಂಚುʼ

ಆಪ್‌ನ ಜಾಹೀರಾತಿನಲ್ಲಿರುವ ‘ಜೈಲ್ ಕೆ ಜವಾಬ್ ಮೇ ಹಮ್ ವೋಟ್ ಡೆಂಗೆ’ ಎಂಬ ವಾಕ್ಯವನ್ನು ಚುನಾವಣಾ ಆಯೋಗ ಬದಲಾಯಿಸುವಂತೆ ಸೂಚಿಸಿದೆ. ಈತನ್ಮಧ್ಯೆ ಎಎಪಿಯ ಪ್ರಚಾರ ಗೀತೆಯನ್ನು ಚುನಾವಣಾ ಆಯೋಗ ನಿಷೇಧಿಸಿದೆ ಎಂದು ಹಿರಿಯ ನಾಯಕಿ, ಸಚಿವೆ ಅತಿಶಿ ಆರೋಪಿಸಿದ್ದಾರೆ. ಅಲ್ಲದೆ ಚುನಾವಣಾ ಆಯೋಗದ ಕ್ರಮವು ಎಎಪಿ ವಿರುದ್ಧ ಬಿಜೆಪಿ ಎಸೆದ ರಾಜಕೀಯ ಅಸ್ತ್ರ ಎಂದು ಅವರು ಹೇಳಿದ್ದಾರೆ. ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಚುನಾವಣಾ ಆಯೋಗ ಪಕ್ಷವೊಂದರ ಪ್ರಚಾರ ಗೀತೆಯನ್ನು ನಿಷೇಧಿಸಿದೆ ಎಂದು ದೂರಿದ್ದಾರೆ.

“ಬಿಜೆಪಿಯ ಮತ್ತೊಂದು ರಾಜಕೀಯ ಅಸ್ತ್ರವಾದ ಚುನಾವಣಾ ಆಯೋಗವು ಎಎಪಿಯ ಪ್ರಚಾರ ಗೀತೆಯನ್ನು ನಿಷೇಧಿಸಿದೆ. ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಆಯೋಗವು ರಾಜಕೀಯ ಪಕ್ಷದ ಚುನಾವಣಾ ಹಾಡಿಗೆ ನಿಷೇಧ ಹೇರಿದೆʼʼ ಎಂದು ಅತಿಶಿ ಹೇಳಿದ್ದಾರೆ. ಬಿಜೆಪಿಯ ನಾಯಕರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದರೆ ಚುನಾವಣಾ ಆಯೋಗ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ʼʼಆಪ್‌ನ ಪ್ರಚಾರದ ಹಾಡು ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ನಿರ್ದೇಶಕರನ್ನು ಕೆಟ್ಟದಾಗಿ ಬಿಂಬಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆʼʼ ಎಂದು ಅವರು ಹೇಳಿದ್ದಾರೆ. “ರಾಜಕೀಯ ನಾಯಕರು ಬಿಜೆಪಿಗೆ ಸೇರಿದ ಕೂಡಲೇ ಇ.ಡಿ, ಸಿಬಿಐ ಅವರ ಪ್ರಕರಣ ಮುಚ್ಚಿ ಹಾಕುತ್ತದೆ. ಇದಕ್ಕೆ ಚುನಾವಣಾ ಆಯೋಗವು ಆಕ್ಷೇಪಿಸುವುದಿಲ್ಲ. ಆದರೆ ನಮ್ಮ ಪ್ರಚಾರ ಹಾಡಿನಲ್ಲಿ ನಾವು ಅದನ್ನು ಉಲ್ಲೇಖಿಸಿದಾಗ ಚುನಾವಣಾ ಆಯೋಗವು ಮೂಗು ತೂರಿಸುತ್ತದೆ” ಎಂದು ಅವರು ಆರೋಪ ಹೊರಿಸಿದ್ದಾರೆ.

ಇದನ್ನೂ ಓದಿ: Arvind Kejriwal: ದೆಹಲಿ ಹೈಕೋರ್ಟ್‌ನಿಂದ ಸಿಕ್ಕಿಲ್ಲ ರಿಲೀಫ್‌; ಸುಪ್ರೀಂ ಕೋರ್ಟ್‌ ಕದ ತಟ್ಟಿದ ಅರವಿಂದ್ ಕೇಜ್ರಿವಾಲ್

ವಾಕಥಾನ್‌

ಈ ಮಧ್ಯೆ ಬಂಧಿತ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಬೆಂಬಲ ಸೂಚಿಸಿ ಆಪ್‌ನಿಂದ ಇಂದು (ಏಪ್ರಿಲ್‌ 28) ʼವಾಕ್‌ ಫಾರ್‌ ಕೇಜ್ರಿವಾಲ್‌ʼ ವಾಕಥಾನ್‌ ನಡೆಯಿತು. ಎಎಪಿಯ ಯುವ ಘಟಕ ಮತ್ತು ಲೋಕಸಭಾ ಅಭ್ಯರ್ಥಿಗಳು ಜಂಟಿಯಾಗಿ ವಾಕಥಾನ್‌ ಆಯೋಜಿಸಿತ್ತು. ದಕ್ಷಿಣ ದೆಹಲಿಯಿಂದ ನವದೆಹಲಿವರೆಗೆ ಈ ವಾಕಥಾನ್‌ ಆಯೋಜಿಸಲಾಯಿತು.

Continue Reading

ದೇಶ

Vitamin D: ಎಚ್ಚರ..ಎಚ್ಚರ! ಕ್ಯಾನ್ಸರ್‌ಗೂ ಕಾರಣವಾಗುತ್ತೆ ವಿಟಮಿನ್‌ ಡಿ ಕೊರತೆ

Vitamin D:ವಿಟಮಿನ್‌ ಡಿ ಕೊರತೆ ಕ್ಯಾನ್ಸರ್‌ಗೆ ಕಾರಣವಾಗಲಿದೆ ಎಂಬ ಶಾಕಿಂಗ್‌ ವರದಿಯೊಂದು ಹೊರ ಬಿದ್ದಿದೆ. ವಿವಿಧ ಅಧ್ಯಯನಗಳ ವರದಿ ಪ್ರಕಾರ ವಿಟಮಿನ್‌ ಡಿ ಕೊರತೆಯಿಂದ ಓವರಿಯನ್‌, ಸ್ತನ ಸೇರಿದಂತೆ ವಿವಿಧ ಕ್ಯಾನ್ಸರ್‌ಗೆ ತುತ್ತಾಗುವ ಸಾಧ್ಯತೆ ಇದೆ.

VISTARANEWS.COM


on

Foods rich in vitamin D
Koo

ನವದೆಹಲಿ:ವಿಟಮಿನ್‌ ಡಿ(Vitamin D) ಕೊರತೆ ಎಂಬುದು ಪ್ರಪಂಚಾದ್ಯಂತ ಹೆಚ್ಚಿನ ಜನರಲ್ಲಿ ಅತ್ಯಂತ ಸಾಮಾನ್ಯವಾಗಿ ಕಂಡು ಬರುವ ಪೌಷ್ಟಿಕಾಂಶ ಕೊರತೆ(Nutrient shortages)ಯಾಗಿದೆ. ಇದು ಸಾಮಾನ್ಯವಾಗಿ 65 ವರ್ಷ ಮೇಲ್ಪಟ್ಟ ಜನರಲ್ಲಿ ಕಂಡು ಬರುವ ಪೌಷ್ಠಿಕಾಂಶ ಕೊರತೆ. ಪ್ರಪಂಚದ ಶೇ.13ರಷ್ಟು ಜನರಲ್ಲಿ ವಿಟಮಿನ್‌ ಡಿ ಕೊರತೆ ಕಂಡು ಬರುತ್ತದೆ. ವಿಟಮಿನ್‌ ಡಿ ಕೊರತೆಯಿಂದ ಎಲುಬು, ಗಂಟು ನೋವು, ಸಂಧು ನೋವು, ಮೂಡ್‌ ಚೇಂಜ್‌ ಹೀಗೆ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಆದರೆ ಇದೀಗ ವಿಟಮಿನ್‌ ಡಿ ಕೊರತೆ ಕ್ಯಾನ್ಸರ್‌(Cancer)ಗೆ ಕಾರಣವಾಗಲಿದೆ ಎಂಬ ಶಾಕಿಂಗ್‌ ವರದಿಯೊಂದು ಹೊರ ಬಿದ್ದಿದೆ. ವಿವಿಧ ಅಧ್ಯಯನಗಳ ವರದಿ ಪ್ರಕಾರ ವಿಟಮಿನ್‌ ಡಿ ಕೊರತೆಯಿಂದ ಓವರಿಯನ್‌, ಸ್ತನ ಸೇರಿದಂತೆ ವಿವಿಧ ಕ್ಯಾನ್ಸರ್‌ಗೆ ತುತ್ತಾಗುವ ಸಾಧ್ಯತೆ ಇದೆ.

ವಿಟಮಿನ್‌ ಡಿ ಕೊರತೆ ಹೇಗೆ ಕ್ಯಾನ್ಸರ್‌ಗೆ ಕಾರಣವಾಗುತ್ತದೆ?

ವಿಟಮಿನ್‌ ಡಿ 3 ಮತ್ತು ಕ್ಯಾಲ್ಸಿಯಂ ಮಾತ್ರೆ ಸೇವನೆಯಿಂದ ಕ್ಯಾನ್ಸರ್‌ ತಡೆಯಲು ಸಾಧ್ಯವಿಲ್ಲ ಎಂದು ಅಧ್ಯಯನ ವರದಿ ಹೇಳಿದೆ. ವಿಟಮಿನ್‌ ಡಿ ಕ್ಯಾನ್ಸರ್‌ ಸೆಲ್‌ಗಳ ವಿಡಿಜನ್‌ ಮತ್ತು ಅವುಗಳ ಬೆಳವಣಿಗೆಯನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೇ . ಅದರ ಕೊರತೆ ಆದಲ್ಲಿ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರ್‌ಗೆ ತುತ್ತಾಗು ಸಾಧ್ಯತೆ ಹೆಚ್ಚಿರುತ್ತದೆ. ವೈದ್ಯರ ಹೇಳುವ ಪ್ರಕಾರ ವಿಟಮಿನ್‌ ಡಿ ಮನುಷ್ಯನ ಎಲುಬುಗಳ ಆರೋಗ್ಯ ಕಾಪಾಡುವುದು ಮಾತ್ರವಲ್ಲದೇ ದೇಹದಲ್ಲಿರುವ ದೋಷಯುಕ್ತ ಜೀನ್‌ಗಳನ್ನು ಸರಿಪಡಿಸುವ ಪ್ರಕ್ರಿಯೆಯಲ್ಲೂ ಪ್ರಮುಖ ಪಾತ್ರ ವಹಿಸುತ್ತದೆ. ಈ ಪ್ರಕ್ರಿಯೆಗೆ MMR ಎಂದು ಕರೆಯಲಾಗಿದ್ದು, ಇದಕ್ಕೆ ವಿಟಮಿನ್‌ ಡಿ ಅಗತ್ಯ ಹೆಚ್ಚಾಗಿದೆ. ಇನ್ನು ವಿಟಮಿನ್‌ ಡಿ ಕೊರತೆ ಕ್ಯಾನ್ಸರ್‌ ಗೆ ಕಾರಣವಾಗುತ್ತದೇಯೇ ಎಂಬ ವಿಷಯದ ಬಗ್ಗೆ ಮತ್ತಷ್ಟು ಅಧ್ಯಯನ ಮುಂದುವರೆದಿದೆ.

ವಿಟಮಿನ್ ಡಿ ಕೊರತೆ ಉಂಟಾಗದಿರಲು ಏನು ಮಾಡಬೇಕು?

1. ವಿಟಮಿನ್ ಡಿ ಕೊರತೆಗೆ ಪ್ರಮುಖ ಮದ್ದು ಎಂದರೆ ಬೆಳಗ್ಗೆ ಸ್ವಲ್ಪ ಹೊತ್ತು ಬಿಸಿಲಿನಲ್ಲಿ ನಿಲ್ಲುವುದು. ತ್ವಚೆಯ ಮೇಲೆ ಯುವಿ-ಬಿ ಕಿರಣಗಳು ಬಿದ್ದಾಗ ಕೊಲೆಸ್ಟ್ರಾಲ್ ವಿಟಮಿನ್ ಡಿ ಆಗಿ ಪರಿವರ್ತನೆ ಆಗುವುದು. ನಿಮ್ಮ ತ್ವಚೆಯ ಬಣ್ಣದ ಮೇಲೆ ನೀವು ಬಿಸಿಲಿನಲ್ಲಿ ನಿಲ್ಲುವ ಸಮಯಲ್ಲಿ ವ್ಯತ್ಯಾಸವಿರುತ್ತದೆ. ಕಪ್ಪು ಬಣ್ಣದ ತ್ವಚೆಯವರು ಬಿಳಿ ಬಣ್ಣದ ತ್ವಚೆಯವರಿಗಿಂತ ಹೆಚ್ಚು ಹೊತ್ತು ಬಿಸಿಲಿನಲ್ಲಿ ನಿಲ್ಲಬೇಕು. ಇನ್ನು ವಯಸ್ಸು ಹೆಚ್ಚಾದಂತೆ ಬಿಸಿಲಿನಲ್ಲಿ ಹೆಚ್ಚು ಹೊತ್ತು ನಿಂತರೆ ಒಳ್ಳೆಯದು.

ಇದನ್ನೂ ಓದಿ:IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

2. ಮೀನು ಹಾಗೂ ಸಮುದ್ರ ಆಹಾರಗಳಲ್ಲಿ ವಿಟಮಿನ್ ಡಿ ಇರುತ್ತದೆ. ಬೂತಾಯಿ, ಮೃದ್ವಂಗಿಗಳು, ಸಿಗಡಿ, ಬಂಗುಡೆ ಈ ಮೀನುಗಳಲ್ಲಿ ವಿಟಮಿನ್ ಡಿ ಅಂಶವಿರುತ್ತದೆ.

3. ಬೆಳಸುವ ಅಣಬೆಗಳಿಗಿಂತ ನೈಸರ್ಗಿಕವಾಗಿ ಸಿಗುವ ಅಣಬೆಗಳಲ್ಲಿ ವಿಟಮಿನ್ ಡಿ ಅಧಿಕವಿರುತ್ತದೆ.

4. ಮೀನು ತಿನ್ನದವರು ಮೊಟ್ಟೆಯನ್ನು ತಿಂದರೆ ಅದರಲ್ಲಿ ಸ್ವಲ್ಪ ಪ್ರಮಾಣದ ವಿಟಮಿನ್ ಡಿ ದೊರೆಯುವುದು. ಮೊಟ್ಟೆಯ ಬಿಳಿ ಜತೆಗೆ ಅರಿಶಿಣ ಕೂಡ ತಿನ್ನಿ.

5. ಇನ್ನು ದನದ ಹಾಲು ಕುಡಿಯುವುದು, ಸೋಯಾ ಹಾಲು, ಕಿತ್ತಳೆ ಜ್ಯೂಸ್‌ ಇವುಗಳನ್ನು ಕೂಡ ಡಯಟ್‌ನಲ್ಲಿ ಸೇರಿಸಿ.
ಓಟ್‌ಮೀಲ್ ಹಾಗೂ ಧಾನ್ಯಗಳಲ್ಲಿ ಕೂಡ ಸ್ವಲ್ಪ ಪ್ರಮಾಣದಲ್ಲಿ ವಿಟಮಿನ್ ಡಿ ಇರುತ್ತದೆ.

Continue Reading

ದೇಶ

Lok Sabha Election: ಮತದಾನ ಪ್ರಮಾಣ ಕುಸಿತ; ಬಿಜೆಪಿಗೆ ಆತಂಕ!

Lok Sabah Election: ಮುಂದಿನ ಐದು ಹಂತಗಳಲ್ಲಿ ಕಡಿಮೆ ಮತದಾನದ ಪ್ರವೃತ್ತಿ ಮುಂದುವರಿಯದಂತೆ ನೋಡಿಕೊಳ್ಳುವಂತೆ ಪಕ್ಷದ ವರಿಷ್ಠರು ರಾಜ್ಯ ಉಸ್ತುವಾರಿಗಳಿಗೆ ಸೂಚನೆ ನೀಡಿದ್ದಾರೆ. ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ 543 ಸ್ಥಾನಗಳಲ್ಲಿ 400 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಒಟ್ಟು ಚಲಾವಣೆಯಾದ ಮತಗಳಲ್ಲಿ 50% ಅನ್ನು ಗೆಲ್ಲುವ ಗುರಿಯೂ ಇದೆ.

VISTARANEWS.COM


on

Lok sabaha election
Koo

ನವದೆಹಲಿ: ಲೋಕಸಭಾ ಚುನಾವಣೆಯ (Lok Sabha Election) ಮೊದಲ ಎರಡು ಹಂತಗಳಲ್ಲಿ ಮತದಾನದ ಪ್ರಮಾಣವು ಕುಸಿದಿರುವುದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿಗೆ) ಆತಂಕಕಾರಿ ಬೆಳವಣಿಗೆಯಾಗಿದೆ. ಮತದಾರರ ನಿರಾಸಕ್ತಿಯ ಹಿನ್ನೆಲೆಯಲ್ಲಿ ಪಕ್ಷದ ಬಾಹುಳ್ಯವನ್ನು ದ್ವಿಗುಣಗೊಳಿಸಲು ಮತ್ತು ಅದರ ಮತ ಹಂಚಿಕೆ ಕಡಿಮೆಯಾಗದಂತೆ ನೋಡಿಕೊಳ್ಳಲು ತನ್ನ ಕಾರ್ಯಕರ್ತರಿಗೆ ಸೂಚನೆ ನೀಡಿದೆ.

ಹಿರಿಯ ನಾಯಕರ ಪ್ರಕಾರ ಬಿಹಾರ, ಮಧ್ಯಪ್ರದೇಶ ಮತ್ತು ರಾಜಸ್ಥಾನದಂತಹ ರಾಜ್ಯಗಳಲ್ಲಿನ ಮತದಾನದ ಪ್ರಮಾಣವು ಕೇಂದ್ರ ನಾಯಕತ್ವವು ರಾಜ್ಯ ಘಟಕಗಳ ಸಾಮರ್ಥ್ಯವನ್ನು ಪ್ರಶ್ನಿಸಿದೆ. ಚುನಾವಣೆಯ ಮೇಲ್ವಿಚಾರಣೆ ನಡೆಸುತ್ತಿರುವ ರಾಜ್ಯ ಉಸ್ತುವಾರಿಗಳಿಂದ ವಿವರ ವಿವರಣೆಯನ್ನು ಕೋರಿದೆ. ಆದರೆ ಕಡಿಮೆ ಮತದಾನ ಆಡಳಿತ ಪಕ್ಷದ ಬಗ್ಗೆ ಕೋಪ ಅಥವಾ ನಿರಾಸಕ್ತಿಯ ಸೂಚಕವಾಗಿ ಎಂದು ಹೇಳಲಾಗುವುದಿಲ್ಲ ಎಂಬ ಉತ್ತರವನ್ನು ಕೇಂದ್ರದ ನಾಯಕರು ಪಡೆದುಕೊಂಡಿದ್ದಾರೆ.

ಕಡಿಮೆ ಮತದಾನವು ಪ್ರತಿಪಕ್ಷಗಳು ಮತ್ತು ಅದರ ನಾಯಕತ್ವದ ಕೊರತೆಯ ಪ್ರತಿಫಲ ಎನ್ನಲಾಗಿದೆ. ಭ್ರಮ ನಿರಸನಗೊಂಡಿರುವ ಮತದಾರರು ಮತ ಚಲಾಯಿಸಲು ಹೊರಬರುತ್ತಿಲ್ಲ ಎಂದು ಬಿಜೆಪಿ ನಾಯಕರು ವಾದಿಸಿದ್ದಾರೆ.

ಈ ಹೇಳಿಕೆ ಹೊರತಾಗಿಯೂ, ಮುಂದಿನ ಐದು ಹಂತಗಳಲ್ಲಿ ಕಡಿಮೆ ಮತದಾನದ ಪ್ರವೃತ್ತಿ ಮುಂದುವರಿಯದಂತೆ ನೋಡಿಕೊಳ್ಳುವಂತೆ ಪಕ್ಷದ ವರಿಷ್ಠರು ರಾಜ್ಯ ಉಸ್ತುವಾರಿಗಳಿಗೆ ಸೂಚನೆ ನೀಡಿದ್ದಾರೆ. ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ 543 ಸ್ಥಾನಗಳಲ್ಲಿ 400 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಒಟ್ಟು ಚಲಾವಣೆಯಾದ ಮತಗಳಲ್ಲಿ 50% ಅನ್ನು ಗೆಲ್ಲುವ ಗುರಿಯೂ ಇದೆ.

ವಾರಾಂತ್ಯ ಕಾರಣವೇ?

ವಾರಾಂತ್ಯದಲ್ಲಿ ಮತದಾನದ ದಿನವನ್ನು ನಿಗದಿಪಡಿಸಿದ್ದರಿಂದ ಹೀಗಾಗಿದೆ ಎಂದೂ ಹೇಳಲಾಗುತ್ತಿದೆ. ಬೇಸಿಗೆಯ ತಾಪ ಹಾಗೂ ನಗರ ಮತದಾರರ ಉದಾಸಿನ ಪ್ರವೃತ್ತಿಯೂ ಇದಕ್ಕೆ ಕಾರಣ ಎನ್ನಲಾಗಿದೆ. ಆದರೆ ಮೋದಿಯನ್ನೇ ನೆಚ್ಚಿಕೊಂಡಿರುವುದು ಕೂಡ ಪ್ರಭಾವ ಬೀರಿದೆ ಎನ್ನಲಾಗಿದೆ. “ಕೆಲವು ಪ್ರದೇಶಗಳಲ್ಲಿ ಸಂಸದರು ಮತ್ತು ಶಾಸಕರು ನಿರೀಕ್ಷೆಯಂತೆ ಪ್ರಚಾರ ಮಾಡಲಿಲ್ಲ. ಮೇಲಿನಿಂದ ಉತ್ಸಾಹದ ಕೊರತೆಯು ನಮ್ಮ ಚುನಾವಣಾ ಪ್ರಚಾರದ ಪ್ರಮುಖ ಕೇಂದ್ರಗಳಾಗಿರುವ ಬೂತ್ ಕಾರ್ಯಕರ್ತರ ಮೇಲೆ ಪರಿಣಾಮ ಬೀರಿದೆ. ಈ ಸಮಸ್ಯೆಯನ್ನು ಪರಿಹರಿಸಲಾಗುತ್ತಿದೆ ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Pralhad Joshi : ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್​ನಿಂದ ನಾಟಕ; ಪ್ರಲ್ಹಾದ್ ಜೋಶಿ ಲೇವಡಿ

ಎರಡನೇ ಹಂತದಲ್ಲಿ ಶೇ.63.5ರಷ್ಟು ಮತದಾನವಾಗಿದ್ದರೆ ಮಧ್ಯಪ್ರದೇಶದಲ್ಲಿ 2019ರಲ್ಲಿ ಶೇ.67.7ರಷ್ಟು ಮತದಾನಕ್ಕೆ ಹೋಲಿಸಿದರೆ ಮಧ್ಯ ಪ್ರದೇಶದಲ್ಲಿ ಈ ಬಾರಿ ಶೇ.58.3ರಷ್ಟು ಮತದಾನವಾಗಿದೆ. 2019ರಲ್ಲಿ 62.8% ರಿಂದ 58.99% ರಷ್ಟು ಮತದಾನವಾಗಿದೆ ಮತ್ತು ಬಿಹಾರದಲ್ಲಿ ಮತದಾನವು 2019 ರಲ್ಲಿ 62.93% ರಿಂದ 58.5% ಕ್ಕೆ ಇಳಿದಿದೆ.

ರಾಜಸ್ಥಾನದ ಎಲ್ಲಾ 25 ಸ್ಥಾನಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಮತದಾನವು 61.60% ಆಗಿದ್ದು, ಇದು 2019 ರಲ್ಲಿ ದಾಖಲಾದ 66.07% ಕ್ಕಿಂತ ಕಡಿಮೆ.

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಏಪ್ರಿಲ್ 19 ರಂದು ನಡೆದ ಮೊದಲ ಹಂತದ ಮತದಾನದ ಕೊನೆಯಲ್ಲಿ 102 ಲೋಕಸಭಾ ಸ್ಥಾನಗಳಲ್ಲಿ 65.5% ರಷ್ಟು ಮತದಾನವಾಗಿತ್ತು. ಇದು 2019 ರಲ್ಲಿ ಇದೇ ಹಂತದಲ್ಲಿ ದಾಖಲಾದ 69.9% ಕ್ಕೆ ಹೋಲಿಸಿದರೆ ಕಡಿಮೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ, ಈ ಕುಸಿತವು ಇಬ್ಬರು ಹೊಸ ಮುಖ್ಯಮಂತ್ರಿಗಳಾದ ಭಜನ್ ಲಾಲ್ ಶರ್ಮಾ ಮತ್ತು ಮನೋಜ್ ಯಾದವ್ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದೂ ಹೇಳಲಾಗಿದೆ.

Continue Reading
Advertisement
IPL 2024
ಕ್ರೀಡೆ4 mins ago

IPL 2024: 41ನೇ ವಯಸ್ಸಿನಲ್ಲೂ ದಾಖಲೆ ಬರೆದ ಅಮಿತ್ ಮಿಶ್ರಾ

Mohan Bhagwat
ದೇಶ29 mins ago

Mohan Bhagwat: ಆರ್‌ಎಸ್‌ಎಸ್‌ ಮೀಸಲಾತಿ ಪರ; ಮೋಹನ್‌ ಭಾಗವತ್‌ ದಿಢೀರನೆ ಹೀಗೆ ಹೇಳಿದ್ದೇಕೆ?

Congress instigates bombers We are crushing traitors through NIA PM Narendra Modi
Lok Sabha Election 202432 mins ago

PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

Election Commission
ದೇಶ33 mins ago

Election Commission: ಎಎಪಿಯ ಪ್ರಚಾರ ಗೀತೆಗೆ ಬದಲಾವಣೆ ಸೂಚಿಸಿದ ಚುನಾವಣಾ ಆಯೋಗ; ಕಾರಣವೇನು?

T20 World Cup 2024
ಕ್ರೀಡೆ36 mins ago

T20 World Cup 2024: ಸಭೆ ನಡೆಸಿದ ರೋಹಿತ್​, ಅಗರ್ಕರ್​; ಈ ಆಟಗಾರನಿಗೆ ಅವಕಾಶವಿಲ್ಲ!

Foods rich in vitamin D
ದೇಶ42 mins ago

Vitamin D: ಎಚ್ಚರ..ಎಚ್ಚರ! ಕ್ಯಾನ್ಸರ್‌ಗೂ ಕಾರಣವಾಗುತ್ತೆ ವಿಟಮಿನ್‌ ಡಿ ಕೊರತೆ

TCS World 10K
ಕ್ರೀಡೆ50 mins ago

TCS World 10K : ಲಿಲಿಯನ್ ಕಸಾಯಿತ್, ಪೀಟರ್ ಮ್ವಾನಿಕಿ ಚಾಂಪಿಯನ್​

IPL 2024 Points Table
ಕ್ರೀಡೆ1 hour ago

IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

PM Narendra Modi proposing arecanut millets and fisheries
Lok Sabha Election 20241 hour ago

PM Narendra Modi: ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

PM Narendra Modi in Sirsi
Lok Sabha Election 20242 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra Modi in Sirsi
Lok Sabha Election 20242 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ7 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202423 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಟ್ರೆಂಡಿಂಗ್‌