India Bloc: ಜಾತಿ ಗಣತಿ ಹಿಂದೆ ಬಿದ್ದ 'ಇಂಡಿಯಾ', ಭೋಪಾಲ್‌ನಲ್ಲಿ ಕೂಟದ ಮೊದಲ ಎಲೆಕ್ಷನ್ ರ‍್ಯಾಲಿ - Vistara News

ದೇಶ

India Bloc: ಜಾತಿ ಗಣತಿ ಹಿಂದೆ ಬಿದ್ದ ‘ಇಂಡಿಯಾ’, ಭೋಪಾಲ್‌ನಲ್ಲಿ ಕೂಟದ ಮೊದಲ ಎಲೆಕ್ಷನ್ ರ‍್ಯಾಲಿ

India Bloc: ಪ್ರತಿಪಕ್ಷಗಳ ಮೈತ್ರಿ ಕೂಟ ಇಂಡಿಯಾದ ಸಮನ್ವಯ ಸಮಿತಿ ತನ್ನ ಮೊದಲ ಸಭೆಯನ್ನು ಬುಧವಾರ ನಡೆಸಿತು. ಸೀಟ್ ಷೇರಿಂಗ್ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಿತು.

VISTARANEWS.COM


on

India bloc Leaders
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಎನ್‌ಸಿಪಿಯ ನಾಯಕ ಶರದ್ ಪವಾರ್ (NCP Leader Sharad Pawar) ಮನೆಯಲ್ಲಿ ಇಂಡಿಯಾ ಕೂಟದ (India Bloc) ಸಮನ್ವಯ ಸಮಿತಿಯ ಮೊದಲ ಸಭೆ ಬುಧವಾರ ನಡೆಯಿತು. ಇಂಡಿಯಾ ವಿರೋಧ ಪಕ್ಷದ ಮೈತ್ರಿಕೂಟವು ಜಾತಿ ಗಣತಿ ವಿಷಯವನ್ನು (Caste Census) ಕೈಗೆತ್ತಿಕೊಳ್ಳಲು ಒಪ್ಪಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ (Congress Leader KC Venugopal) ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು. ಸಮಿತಿಯು, ಸೀಟು ಹಂಚಿಕೆಯನ್ನು ನಿರ್ಧರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ ಎಂದು ಇದೇ ವೇಳೆ ತಿಳಿಸಿದರು. ಅಲ್ಲದೇ, ಕೂಟದ ಮೊದಲ ರ‍್ಯಾಲಿ (Election Rally) ಅಕ್ಟೋಬರ್ ಮೊದಲ ವಾರದಲ್ಲಿ ಭೋಪಾಲ್‌ನಲ್ಲಿ (Bhopal) ನಡೆಯಲಿದೆ.

ದಿಲ್ಲಿಯ ಶರದ್ ಪವಾರ್ ಅವರ ಮನೆಯಲ್ಲಿ ಇಂಡಿಯೂ ಕೂಟದ 14 ಸದಸ್ಯರ ಸಮನ್ವಯ ಸಮಿತಿ ಸಭೆಯ ಮೊದಲ ಬಾರಿಗೆ ಸಭೆ ನಡೆಸಿದೆ. ಮುಂಬೈ ಸಭೆಯಲ್ಲಿ ಸಮನ್ವಯ ಸಮಿತಿ ಘೋಷಿಸಲಾಗಿತ್ತು. ದೇಶಾದ್ಯಂತ ರ್ಯಾಲಿಗಳು ಮತ್ತು ಪ್ರಚಾರದ ಬಗ್ಗೆ ಚರ್ಚೆ ನಡೆಸಲಾಗಿದೆ. ಜತೆಗೆ, ಜೊತೆಗೆ ಇನ್ನು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ.

ಭೋಪಾಲ್‌ನಲ್ಲಿ ಮೊದಲ ಇಂಡಿಯಾ ಎಲೆಕ್ಷನ್ ರ‍್ಯಾಲಿ

ಇಂಡಿಯಾ ಕೂಟವು ತನ್ನ ಮೊದಲ ಚುನಾವಣಾ ರ‍್ಯಾಲಿಯನ್ನು ಮಧ್ಯ ಪ್ರದೇಶದ ಭೋಪಾಲ್‌ನಲ್ಲಿ ನಡೆಸಲು ಮುಂದಾಗಿದೆ. ವರ್ಷಾಂತ್ಯಕ್ಕೆ ಮಧ್ಯಪ್ರದೇಶದ ವಿಧಾನಸಭೆಗೂ ಚುನಾವಣೆ ನಡೆಯಲಿದೆ. ಹಾಗಾಗಿ, ಈ ರ‍್ಯಾಲಿ ಮಹತ್ವದ್ದಾಗಲಿದೆ ಎನ್ನಲಾಗಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಜಂಟಿಯಾಗಿ ಈ ರ‍್ಯಾಲಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಬುಧವಾರ ನಡೆದ ಇಂಡಿಯಾ ಕೂಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಭೋಪಾಲ್‌ನಲ್ಲಿ ನಡೆಯಲಿರುವ ಮೊದಲ ರ‍್ಯಾಲಿಗೆ ಇಂಡಿಯಾ ಕೂಟದ ಎಲ್ಲ ನಾಯಕರು ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಪರವಾಗಿ ಮತ ಯಾಚನೆ ಮಾಡಲಿದ್ದಾರೆ.

ಈ ಸುದ್ದಿಯನ್ನೂ ಓದಿ: ಇಂಡಿಯಾ ಅಲ್ಲ ಭಾರತ! ವಿಶೇಷ ಅಧಿವೇಶನದಲ್ಲಿ ದೇಶ ಮರುನಾಮಕರಣಕ್ಕೆ ವಿಧೇಯಕ! INDIA blocಗೆ ಕೇಂದ್ರ ಟಕ್ಕರ್

ಸೀಟು ಹಂಚಿಕೆ ಶೀಘ್ರ ತೀರ್ಮಾನ

ಸೀಟು ಹಂಚಿಕೆಯ ವಿಚಾರ ಸದ್ಯದಲ್ಲೆ ತೀರ್ಮಾನ ಕೈಗೊಳ್ಳಲು ಯೋಜಿಸಲಾಗಿದೆ. ಆಯಾ ರಾಜ್ಯಗಳಲ್ಲೇ ಸೀಟು ಹಂಚಿಕೆಯ ಬಗ್ಗೆ ತೀರ್ಮಾನ ಮಾಡಲು ಚಿಂತನೆ ನಡೆದಿದೆ. ಸಮನ್ವಯ ಸಮಿತಿಯ ಮೊದಲ ಸಭೆಯಲ್ಲೆ ಹಲವು ವಿಚಾರಗಳು ಚರ್ಚೆಗಳಾಗಿವೆ. ಲೋಕಸಭೆ ಚುನಾವಣೆಗಾಗಿ ಆಯಾ ರಾಜ್ಯಗಳಲ್ಲೇ ಸೀಟು ಹಂಚಿಕೆಗಾಗಿ ಸಮಿತಿಗಳ ರಚನೆ ಮಾಡಲಾಗುತ್ತದೆ. ಬಳಿಕ ಅಂತಿಮವಾಗಿ ಇಂಡಿಯಾ ಒಕ್ಕೂಟದ ನಾಯಕರು ದೆಹಲಿಯಲ್ಲಿ ತೀರ್ಮಾನ ಮಾಡಲಿದ್ದಾರೆ. ಪಂಜಾಬ್ ಸೇರಿ ಏಳು ರಾಜ್ಯಗಳಲ್ಲಿ ಈ ಕುರಿತು ಸಮಿತಿಗಳನ್ನು ರಚನೆ ಮಾಡುವ ಕುರಿತು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

ಮಹಾರಾಷ್ಟ್ರದಲ್ಲಿ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಾ ಮಾಲೀಕ ಸಂತೋಷ್‌ ಶೆರೆಕರ್‌ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ತನಿಖೆ ನಡೆಸಿ ಬಂಧಿಸಿದ್ದಾರೆ. ಇನ್ನಿಬ್ಬರನ್ನು ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಬುಧವಾರ ಬೆಳಗಿನ ಜಾವ ಮುಂಬೈನ ವೊರ್ಲಿಯಲ್ಲಿರುವ ಸಾಫ್ಟ್‌ ಟಚ್‌ ಸ್ಪಾದಲ್ಲಿ 48 ವರ್ಷದ ಗುರು ವಾಘ್ಮರೆಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Mumbai Spa
Koo

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ (Mumbai) ವೊರ್ಲಿ ಪ್ರದೇಶದ ಸ್ಪಾ (Spa) ಒಂದರಲ್ಲಿ ಕೊಲೆಯಾದ ವ್ಯಕ್ತಿಯ ಮೈಮೇಲೆ ಇದ್ದ ಟ್ಯಾಟೂ, ಟ್ಯಾಟೂ ಹಾಕಿಸಿಕೊಂಡ ಹೆಸರುಗಳು ಕೊಲೆ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿದೆ. ಟ್ಯಾಟೂ (Tattoo) ಹೆಸರುಗಳೇ ಹಿಸ್ಟರಿ ಶೀಟರ್‌ ಗುರು ವಾಘ್ಮರೆಯ ಕೊಲೆ ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ತನಿಖೆ ನಡೆಸಿ, ಇದುವರೆಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣವೀಗ ದೇಶಾದ್ಯಂತ ಸುದ್ದಿಯಾಗಿದೆ.

ಗುರು ವಾಘ್ಮರೆಯನ್ನು ಜುಲೈ 24ರಂದು ಸ್ಪಾನಲ್ಲಿ ಕೊಲೆ ಮಾಡಲಾಗಿದೆ. ಸ್ಪಾ ಮಾಲೀಕ ಸಂತೋಷ್‌ ಶೆರೆಕರ್‌ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ತನಿಖೆ ನಡೆಸಿ ಬಂಧಿಸಿದ್ದಾರೆ. ಇನ್ನಿಬ್ಬರನ್ನು ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಬುಧವಾರ ಬೆಳಗಿನ ಜಾವ ಮುಂಬೈನ ವೊರ್ಲಿಯಲ್ಲಿರುವ ಸಾಫ್ಟ್‌ ಟಚ್‌ ಸ್ಪಾದಲ್ಲಿ 48 ವರ್ಷದ ಗುರು ವಾಘ್ಮರೆಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Mumbai Spa
Mumbai Spa

ಟ್ಯಾಟೂ ಹೆಸರುಗಳೇ ಕೇಸ್‌ ಭೇದಿಸಲು ಕಾರಣ

ಗುರು ವಾಘ್ಮರೆಯು ಆರ್‌ಟಿಇ ಕಾರ್ಯಕರ್ತನೂ ಆಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಈತನು ಹಿಸ್ಟರಿ ಶೀಟರ್‌ ಕೂಡ ಆಗಿದ್ದಾನೆ. ಆದರೆ, ಹತ್ಯೆಗೀಡಾಗುವ ಮುನ್ನ ಅಪಾಯದ ಮುನ್ಸೂಚನೆ ಅರಿತಿದ್ದ ಗುರು ವಾಘ್ಮರೆಯು ತನಗಿದ್ದ 22 ವೈರಿಗಳ ಹೆಸರುಗಳನ್ನು ತೊಡೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದ. ಪೋಸ್ಟ್‌ ಮಾರ್ಟಮ್‌ ಮಾಡುವ ವೇಳೆ ತೊಡೆಯ ಮೇಲೆ ಕಾಣಿಸಿದ ಹೆಸರುಗಳ ಜಾಡು ಹಿಡಿದು ಹೊರಟ ಪೊಲೀಸರಿಗೆ ಕೊಲೆ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಗುರು ವಾಘ್ಮರೆಯು ಸ್ಪಾ ಮಾಲೀಕ ಸಂತೋಷ್‌ ಶೆರೆಕರ್‌ಗೆ ಹಣಕ್ಕಾಗಿ ಪೀಡಿಸುವುದು, ಬೆದರಿಕೆ ಹಾಕುವುದು ಸೇರಿ ಹಲವು ರೀತಿಯಲ್ಲಿ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತಿದ್ದ ಸಂತೋಷ್‌, ಗುರು ವಾಘ್ಮರೆಯ ಹತ್ಯೆಗೆ ಸುಪಾರಿ ನೀಡಿದ್ದ ಎಂದು ತಿಳಿದುಬಂದಿದೆ. ಗುರು ವಾಘ್ಮರೆಯನ್ನು ಕೊಲ್ಲಲು ಮೊಹಮ್ಮದ್‌ ಫಿರೋಜ್‌ ಅನ್ಸಾರಿಗೆ ಸಂತೋಷ್‌ 6 ಲಕ್ಷ ರೂ. ನೀಡಿದ್ದ ಎನ್ನಲಾಗಿದೆ.

ಮೊಹಮ್ಮದ್‌ ಫಿರೋಜ್‌ ಅನ್ಸಾರಿಗೂ ಗುರು ಮೇಲೆ ಸೇಡಿತ್ತು. ಕಳೆದ ವರ್ಷ ಮುಂಬೈನ ನಲ್ಲಾಸೋಪರ ಬಳಿಯಲ್ಲಿದ್ದ ಮೊಹಮ್ಮದ್‌ ಫಿರೋಜ್‌ ಅನ್ಸಾರಿ ಒಡೆತನದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ, ಅದನ್ನು ಸ್ಥಗಿತಗೊಳಿಸಿದ್ದರು. ಗುರು ವಾಘ್ಮರೆ ನೀಡಿದ ದೂರಿನಿಂದಾಗಿಯೇ ಸ್ಪಾ ಸ್ಥಗಿತಗೊಂಡಿತ್ತು. ಹಾಗಾಗಿ, ಅನ್ಸಾರಿಯು ಕೆಲವರೊಂದಿಗೆ ಸೇರಿ ಗುರು ವಾಘ್ಮರೆಯನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Murder in PG: ಗೆಳತಿಗಾಗಿ ಕೊಲೆಯಾಗಿ ಹೋದ ಕೃತಿ ಕುಮಾರಿ; ಪ್ರೇಯಸಿಯನ್ನು ಬಂಧನದಲ್ಲಿಟ್ಟು ಕ್ರೌರ್ಯ ಮೆರೆದ ಪಾತಕಿ

Continue Reading

ದೇಶ

Vijay Mallya: ವಿಜಯ್‌ ಮಲ್ಯಗೆ ಸೆಬಿ ಶಾಕ್;‌ 3 ವರ್ಷ ಸೆಕ್ಯುರಿಟೀಸ್‌ ಟ್ರೇಡಿಂಗ್‌ನಿಂದ ನಿಷೇಧ

Vijay Mallya: ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ.

VISTARANEWS.COM


on

Vijay Mallya
Koo

ನವದೆಹಲಿ: ಭಾರತದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್‌ ಮಲ್ಯ (Vijay Mallya) ಅವರಿಗೆ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿಯು (SEBI) ಶಾಕ್‌ ನೀಡಿದೆ. ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಿಂದ ವಿಜಯ್‌ ಮಲ್ಯ ಅವರನ್ನು ಸೆಬಿ ನಿರ್ಬಂಧಿಸಿದೆ. ಇದರಿಂದಾಗಿ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ವಿಜಯ್‌ ಮಲ್ಯ ಯಾವುದೇ ವಹಿವಾಟು ಮಾಡದಂತೆ ತಡೆಹಿಡಿಯಲಾಗಿದೆ.

ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ. ವಿಜಯ್‌ ಮಲ್ಯ ಅವರು ಇದುವರೆಗೆ ಫಾರಿನ್‌ ಇನ್‌ಸ್ಟಿಟ್ಯೂಷನಲ್‌ ಇನ್ವೆಸ್ಟರ್‌ (FII) ವ್ಯವಸ್ಥೆ ಮೂಲಕ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ಹಣ ಹೂಡಿಕೆ, ಸ್ಟಾಕ್‌ಗಳ ಮಾರಾಟ ಸೇರಿ ಹಲವು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.

ಏನಿದು ಸೆಕ್ಯುರಿಟೀಸ್‌ ಮಾರುಕಟ್ಟೆ?

ಸೆಕ್ಯುರಿಟೀಸ್‌ ಮಾರುಕಟ್ಟೆಯು ವ್ಯಕ್ತಿಗಳು ಅಥವಾ ಕಂಪನಿಗಳು ಷೇರುಗಳು, ಬಾಂಡ್‌ಗಳು ಮತ್ತು ಉತ್ಪನ್ನಗಳಂತಹ ಸೆಕ್ಯುರಿಟೀಸ್‌ಅನ್ನು ಖರೀದಿಸುವ ಮತ್ತು ಮಾರಾಟ ಮಾಡುವ ಹಣಕಾಸು ಮಾರುಕಟ್ಟೆಯಾಗಿದೆ. ಸ್ಟಾಕ್‌ಗಳು, ಬಾಂಡ್‌ಗಳು, ಮ್ಯೂಚುವಲ್‌ ಫಂಡ್‌ಗಳು, ಎಕ್ಸ್‌ಚೇಂಜ್‌-ಟ್ರೇಡೆಡ್‌ ಫಂಡ್‌ಗಳ ಖರೀದಿ ಹಾಗೂ ಮಾರಾಟ ಮಾಡುವ ಮಾರುಕಟ್ಟೆಯಾಗಿದೆ.

ಭಾರತದ ಬ್ಯಾಂಕ್‌ಗಳಿಗೆ ಸುಮಾರು 9 ಸಾವಿರ ಕೋಟಿ ರೂ. ವಂಚನೆ ಪ್ರಕರಣದಲ್ಲಿ ವಿಜಯ್‌ ಮಲ್ಯ ಲಂಡನ್‌ಗೆ ಹಾರಿದ್ದಾರೆ. ಇವರನ್ನು 2019ರಲ್ಲಿ ದೇಶ ಭ್ರಷ್ಟ ಆರ್ಥಿಕ ಅರಪಾಧಿ ಎಂದು ಘೋಷಿಸಲಾಗಿದೆ. 2016ರ ಮಾರ್ಚ್‌ನಲ್ಲಿ ವಿಜಯ್‌ ಮಲ್ಯ ಭಾರತದಿಂದ ಪರಾರಿಯಾಗಿದ್ದು, ಈಗ ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಇತ್ತೀಚೆಗೆ, ವಿಜಯ್‌ ಮಲ್ಯ ಪುತ್ರ ಸಿದ್ಧಾರ್ಥ್‌ ಮಲ್ಯ ಅವರ ಮದುವೆಯು ಅದ್ಧೂರಿಯಾಗಿ ನೆರವೇರಿತ್ತು. ವಿಜಯ್‌ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದ್ದು, ಪ್ರಕರಣವು ಕೋರ್ಟ್‌ನಲ್ಲಿದೆ.

ವಿಜಯ್‌ ಮಲ್ಯ ಈಗಲೂ ಕಿಂಗ್‌ಫಿಶರ್‌ ಬಿಯರ್‌ ಉತ್ಪಾದನೆ ಮಾಡುವ ಯುನೈಟ್‌ ಬ್ರೆವರೀಸ್‌ನಲ್ಲಿ ಶೇ.8.1ರಷ್ಟು ಷೇರುಗಳನ್ನು ಹೊಂದಿದ್ದಾರೆ. ಅಷ್ಟೇ ಅಲ್ಲ, ಸ್ಮಿರ್ನಾಫ್‌ ವೋಡ್ಕಾ ತಯಾರಿಯಾ ಸಂಸ್ಥೆಯಾದ ಯುನೈಟೆಡ್‌ ಸ್ಪರಿಟ್ಸ್‌ನಲ್ಲಿ 0.01ರಷ್ಟು ಷೇರುಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Continue Reading

Latest

Teacher Suspended: ಮಹಿಳೆಯರು ಸಿಂಧೂರ, ಮಂಗಳಸೂತ್ರ ಧರಿಸಬಾರದು ಎಂದ ಶಿಕ್ಷಕಿ ಅಮಾನತು!

Teacher Suspended: ರಾಜಸ್ಥಾನದಲ್ಲಿ ಶಿಕ್ಷಕಿ ದಾಮೋರ್ ಎಂಬುವರು ಬುಡಕಟ್ಟು ಮಹಿಳೆಯರನ್ನು ಉದ್ದೇಶಿಸಿ ಮಾತನಾಡುತ್ತಾ, ಕೆಲವು ಸಾಂಪ್ರದಾಯಿಕ ಹಿಂದೂ ಆಚರಣೆಗಳನ್ನು ತಿರಸ್ಕರಿಸುವಂತೆ ಸಲಹೆ ನೀಡಿದ್ದರು. ಇಂದಿನಿಂದ ಎಲ್ಲಾ ಉಪವಾಸ ಆಚರಿಸುವುದನ್ನು ನಿಲ್ಲಿಸಿ, ನಾವು ಹಿಂದೂಗಳಲ್ಲ ಎಂದು ಹೇಳಿದ್ದರು. ಅವರ ಹೇಳಿಕೆಗೆ ಬುಡಕಟ್ಟು ಸಮುದಾಯದ ಮಹಿಳೆಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕಿಯನ್ನು ಅಮಾನತು ಮಾಡಿದ್ದಾರೆ.

VISTARANEWS.COM


on

Teacher Suspended
Koo


ಹಿಂದೂ ಧರ್ಮದಲ್ಲಿ ಸಿಂಧೂರ ಮತ್ತು ಮಂಗಳಸೂತ್ರವನ್ನು ಮದುವೆಯಾದ ಹೆಣ್ಣುಮಕ್ಕಳು ಧರಿಸಬೇಕು ಎಂಬ ಸಂಪ್ರದಾಯವಿದೆ. ಇದು ಬಹಳ ಹಿಂದಿನ ಕಾಲದಿಂದಲೂ ಬಂದಂತಹ ಸಂಪ್ರದಾಯ. ಇಂದಿಗೂ ಬಹುತೇಕ ಸಂಪ್ರದಾಯಸ್ಥ ಕುಟುಂಬದ ಹೆಣ್ಣುಮಕ್ಕಳು ಈ ನಿಯಮವನ್ನು ಪಾಲಿಸುತ್ತಾ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳು ಪಾಶ್ಚಿಮಾತ್ಯರ ಜೀವನಶೈಲಿಯನ್ನು ಅನುಸರಿಸುತ್ತಾ ಈ ಸಂಪ್ರದಾಯವನ್ನು ಮರೆಯುತ್ತಿದ್ದಾರೆ. ಇಂತಹ ಪರಿಸ್ಥಿತಿಯ ನಡುವೆ ಇಂತಹ ಸಂಪ್ರದಾಯವನ್ನು ಪಾಲಿಸದಂತೆ ಶಿಕ್ಷಕಿಯೊಬ್ಬರು ಜನರಿಗೆ ಸಲಹೆ ನೀಡಿದ್ದಾರೆ. ರಾಜಸ್ಥಾನದ ಮಹಿಳಾ ಶಿಕ್ಷಕಿ ಬುಡಕಟ್ಟು ಮಹಿಳೆಯರಿಗೆ ಸಿಂಧೂರ ಮತ್ತು ಮಂಗಳಸೂತ್ರವನ್ನು ಧರಿಸದಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ರಾಜಸ್ಥಾನ ಶಿಕ್ಷಣ ಇಲಾಖೆ ಅವರನ್ನು ಕೆಲಸದಿಂದ ಅಮಾನತು( Teacher Suspended)ಗೊಳಿಸಿದೆ ಎಂದು ವರದಿಯಾಗಿದೆ.

ಜುಲೈ 19ರಂದು ಬನ್ಸ್ವಾರಾದ ಮಂಗರ್ ಧಾಮ್‍ನಲ್ಲಿ ನಡೆದ ಬೃಹತ್ ರ‍್ಯಾಲಿಯಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಶಿಕ್ಷಕಿ ದಾಮೋರ್ ಬುಡಕಟ್ಟು ಮಹಿಳೆಯರನ್ನು ಉದ್ದೇಶಿಸಿ ಮಾತನಾಡುತ್ತಾ, ಕೆಲವು ಸಾಂಪ್ರದಾಯಿಕ ಹಿಂದೂ ಆಚರಣೆಗಳನ್ನು ತಿರಸ್ಕರಿಸುವಂತೆ ಸಲಹೆ ನೀಡಿದರು. ಶಿಕ್ಷಕಿ ಮೇನಕಾ ದಾಮೋರ್ ತಮ್ಮ ಭಾಷಣದಲ್ಲಿ, “ಬುಡಕಟ್ಟು ಕುಟುಂಬಗಳು ಸಿಂಧೂರವನ್ನು ಹಚ್ಚುವುದಿಲ್ಲ, ಅವರು ಮಂಗಳಸೂತ್ರವನ್ನು ಧರಿಸುವುದಿಲ್ಲ. ಬುಡಕಟ್ಟು ಸಮಾಜದಲ್ಲಿ ಮಹಿಳೆಯರು ಮತ್ತು ಹುಡುಗಿಯರು ಶಿಕ್ಷಣದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇಂದಿನಿಂದ, ಎಲ್ಲಾ ಉಪವಾಸಗಳನ್ನು ಆಚರಿಸುವುದನ್ನು ನಿಲ್ಲಿಸಿ. ನಾವು ಹಿಂದೂಗಳಲ್ಲ” ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ಬುಡಕಟ್ಟು ಸಮುದಾಯದ ಮಹಿಳೆಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಿಕ್ಷಕಿಯ ಹೇಳಿಕೆ ವ್ಯಾಪಕ ಟೀಕೆಗೆ ಕಾರಣವಾಗಿದೆ.

Teacher Suspended
Teacher Suspended

ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಶಿಕ್ಷಕಿ ದಾಮೋರ್ ಅವರನ್ನು ಅಮಾನತುಗೊಳಿಸಿದ್ದಾರೆ. ರಾಜಸ್ಥಾನ ನೀತಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ಶಿಕ್ಷಣ ಇಲಾಖೆಯ ಪ್ರತಿಷ್ಠೆಗೆ ಕಳಂಕ ತಂದ ಆರೋಪದ ಮೇಲೆ ದಾಮೋರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಶಿಕ್ಷಕಿ ಮೇನಕಾ ದಾಮೋರ್ ಅವರು ಆದಿವಾಸಿ ಪರಿವಾರ ಸಂಸ್ಥೆಯ (Adivasi Parivar Sanstha )ಸ್ಥಾಪಕಿಯಾಗಿ ಹೆಸರುವಾಸಿಯಾಗಿದ್ದಾರೆ ಮತ್ತು ಘಟನೆಯ ಸಮಯದಲ್ಲಿ ಸಾದಾದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ:ಜೂನಿಯರ್ ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ ಸೀನಿಯರ್‌ಗಳು! ತಲ್ಲಣ ಮೂಡಿಸುವ ವಿಡಿಯೊ

ಮಂಗರ್ ಧಾಮ್‍ನಲ್ಲಿ ನಡೆದ ರ್ಯಾಲಿ ವಿಶಾಲವಾದ ಸಾಮಾಜಿಕ-ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸಲು ವೇದಿಕೆಯಾಯಿತು. ಇದು ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದ ಬುಡಕಟ್ಟು ಸಮುದಾಯಗಳಿಂದ ಸಾವಿರಾರು ಜನರು ಇದರಲ್ಲಿ ಭಾಗವಹಿಸುತ್ತಾರೆ. ದಾಮೋರ್ ಅವರ ವಿವಾದಾತ್ಮಕ ಭಾಷಣದ ಜೊತೆಗೆ, ಭಿಲ್ ರಾಜ್ಯವನ್ನು ರಚಿಸಬೇಕೆಂದು ಪ್ರತಿಪಾದಿಸುವ ರಾಜಕೀಯ ನಿರ್ಣಯವನ್ನು ಸಹ ಈ ಸಂದರ್ಭದಲ್ಲಿ ಅಂಗೀಕರಿಸಲಾಯಿತು ಎನ್ನಲಾಗಿದೆ.

Continue Reading

ದೇಶ

Rahul Gandhi: ಚಮ್ಮಾರನ ಅಂಗಡಿಗೆ ದಿಢೀರ್‌ ಭೇಟಿ ನೀಡಿ, ಚಪ್ಪಲಿ ಹೊಲಿದ ರಾಹುಲ್‌ ಗಾಂಧಿ; Video ಇಲ್ಲಿದೆ

Rahul Gandhi: ಉತ್ತರ ಪ್ರದೇಶದ ವಿಧಾಯಕ ನಗರದಲ್ಲಿರುವ ಚಮ್ಮಾರನ ಅಂಗಡಿಯೊಂದಕ್ಕೆ ರಾಹುಲ್‌ ಗಾಂಧಿ ಅವರು ಭೇಟಿ ನೀಡಿದರು. ಇದೇ ವೇಳೆ, ಚಮ್ಮಾರರ ಸಮಸ್ಯೆಗಳನ್ನು ಆಲಿಸಿದ ಅವರು, ಚಪ್ಪಲಿಯನ್ನೂ ಹೊಲಿದರು. ಚಪ್ಪಲಿ ಹೊಲಿಯುವುದು ಹೇಗೆ ಎಂಬುದನ್ನು ಅಂಗಡಿ ಮಾಲೀಕ ಹೇಳಿಕೊಟ್ಟರು.

VISTARANEWS.COM


on

Rahul Gandhi
Koo

ಲಖನೌ: ದೇಶಾದ್ಯಂತ ಸಂಚರಿಸುವ ಭಾರತ್‌ ಜೋಡೋ ಯಾತ್ರೆಯ (Bharat Jodo Yatra) ಹೊರತಾಗಿಯೂ ಕಾಂಗ್ರೆಸ್‌ ನಾಯಕರೂ ಆಗಿರುವ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಸಾಮಾನ್ಯ ಜನರೊಂದಿಗೆ ಬೆರೆಯುತ್ತಿದ್ದಾರೆ. ರೈತರು, ಕುಶಲಕರ್ಮಿಗಳು, ಯುವಕರೊಂದಿಗೆ ಬೆರೆಯುವ ಮೂಲಕ ಅವರ ಸಮಸ್ಯೆಗಳಿಗೆ ಕಿವಿಯಾಗುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ರಾಹುಲ್‌ ಗಾಂಧಿ ಅವರು ಶುಕ್ರವಾರ (ಜುಲೈ 26) ಉತ್ತರ ಪ್ರದೇಶದಲ್ಲಿ ಚಪ್ಪಲಿ ಅಂಗಡಿಯೊಂದಕ್ಕೆ (Cobbler Shop) ದಿಢೀರನೆ ಭೇಟಿ ನೀಡಿ, ಅಲ್ಲಿ ಚಪ್ಪಲಿ ಹೊಲಿಯುವ ಮೂಲಗ ಗಮನ ಸೆಳೆದಿದ್ದಾರೆ.

ರಾಹುಲ್‌ ಗಾಂಧಿ ಅವರು ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿರುವ ಸಂಸದರು ಮತ್ತು ಶಾಸಕರ ನ್ಯಾಯಾಲಯಕ್ಕೆ ಹಾಜರಾದರು. ಕೋರ್ಟ್‌ಗೆ ಹಾಜರಾದ ಬಳಿಕ ಲಖನೌಗೆ ವಾಪಸಾಗುವ ವೇಳೆ ವಿಧಾಯಕ ನಗರದಲ್ಲಿರುವ ಚಮ್ಮಾರನ ಅಂಗಡಿಗೆ ತೆರಳಿದ ಅವರು, ಮಾತುಕತೆ ನಡೆಸುವ ಜತೆಗೆ ಚಪ್ಪಲಿ ಹೊಲಿದರು. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ.

2023ರ ಸೆಪ್ಟೆಂಬರ್‌ನಲ್ಲಿ ರಾಹುಲ್‌ ಗಾಂಧಿ ಅವರು ದೆಹಲಿಯ ಕೀರ್ತಿ ನಗರ ಫರ್ನಿಚರ್‌ ಮಾರುಕಟ್ಟೆಗೆ ತೆರಳಿದ್ದರು. ಆಗ ಅವರು ಹಲವು ಮೇಜುಗಳನ್ನು ತಯಾರಿಸಿದ್ದರು. ಕಾರ್ಪೆಂಟರ್‌ಗಳ ಜತೆಗೂಡಿ ರಾಹುಲ್‌ ಗಾಂಧಿ ಅವರು ಮೇಜುಗಳನ್ನು ತಯಾರಿಸಿದ್ದರು. ಈ ಮೇಜುಗಳನ್ನು ದೆಹಲಿ ಕಾಂಗ್ರೆಸ್‌ ಅಧ್ಯಕ್ಷ ಅರವಿಂದರ್‌ ಸಿಂಗ್‌ ಲವ್ಲಿ ಹಾಗೂ ಕಾರ್ಪೆಂಟರ್‌ಗಳು ಜತೆಗೂಡಿ ಪ್ರಮೀಳಾ ಬಾಯಿ ಚವ್ಹಾಣ್ ಶಾಲೆಗೆ ದೇಣಿಗೆಯಾಗಿ ನೀಡಿದ್ದರು. ಕಾರ್ಕರ್‌ಡೂಮಾದಲ್ಲಿರುವ ಶಾಲೆಗೆ ಮೇಜುಗಳನ್ನು ದೇಣಿಗೆ ನೀಡಲಾಗಿದೆ ಎಂದು ಕಾಂಗ್ರೆಸ್‌ ಮಾಹಿತಿ ನೀಡಿತ್ತು.

ಬೈಕ್‌ ರಿಪೇರಿ ಮಾಡಿದ್ದ ರಾಹುಲ್‌ ಗಾಂಧಿ

2023ರ ಜೂನ್‌ನಲ್ಲಿ ರಾಹುಲ್‌ ಗಾಂಧಿ ಅವರು ದೆಹಲಿಯ ಕಾಜೋಲ್‌ಬಾಗ್‌ನಲ್ಲಿರುವ ಬೈಕ್‌ ರಿಪೇರಿ ಅಂಗಡಿಗಳಿಗೆ ತೆರಳಿ ಬೈಕ್‌ ರಿಪೇರಿ ಮಾಡಿದ್ದರು. “ಬೈಕ್‌ ರಿಪೇರಿ ಅಂಗಡಿಗಳಿಗೆ ತೆರಳಿ, ನಾನೂ ವ್ರೆಂಚ್‌ಗಳನ್ನು ತಿರುಗಿಸಿದೆ. ಅವರಿಂದ ಬೈಕ್‌ ರಿಪೇರಿ ಮಾಡುವುದನ್ನು ಕಲಿತೆ. ಬೈಕ್‌ ರಿಪೇರಿ ಮಾಡುವ ಇಂತಹ ಕೈಗಳೇ ಭಾರತವನ್ನು ನಿರ್ಮಿಸಿವೆ. ಇಲ್ಲಿಗೆ ಭೇಟಿ ನೀಡುವ ಮೂಲಕ ನಾನು ಮತ್ತೆ ಭಾರತ್‌ ಜೋಡೋ ಯಾತ್ರೆಯನ್ನು ಮುಂದುವರಿಸಿದ್ದೇನೆ” ಎಂದು ರಾಹುಲ್‌ ಗಾಂಧಿ ಪೋಸ್ಟ್‌ ಮಾಡಿದ್ದರು.

ಇದನ್ನೂ ಓದಿ: Acharya Pramod Krishnam: ರಾಹುಲ್‌ ಗಾಂಧಿಯನ್ನು ‘ರಾಷ್ಟ್ರೀಯ ಸಮಸ್ಯೆ’ ಎಂದ ಆಚಾರ್ಯ ಪ್ರಮೋದ್‌ ಕೃಷ್ಣಂ!

Continue Reading
Advertisement
Health Tips Kannada
ಆರೋಗ್ಯ13 mins ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ58 mins ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ1 hour ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ1 hour ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ1 hour ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Paris Olympics 2024
ಪ್ರಮುಖ ಸುದ್ದಿ6 hours ago

Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Mumbai Spa
ಪ್ರಮುಖ ಸುದ್ದಿ7 hours ago

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾಗಿಯಾಗಿರುವ ಭಾರತದ ಅಥ್ಲೀಟ್​ಗಳಿಗೆ ಶುಭ ಕೋರಿದ ಪ್ರಧಾನಿ ಮೋದಿ

Vijay Mallya
ದೇಶ7 hours ago

Vijay Mallya: ವಿಜಯ್‌ ಮಲ್ಯಗೆ ಸೆಬಿ ಶಾಕ್;‌ 3 ವರ್ಷ ಸೆಕ್ಯುರಿಟೀಸ್‌ ಟ್ರೇಡಿಂಗ್‌ನಿಂದ ನಿಷೇಧ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ12 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ13 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ14 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ15 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌