ಸರ್ಕಾರಿ ಉದ್ಯೋಗಿಗಳು ಇನ್ನು ಮುಂದೆ 2ನೇ ಮದುವೆ ಆಗಬೇಕಾದರೆ ಅನುಮತಿ ಪಡೆಯಬೇಕು - Vistara News

ದೇಶ

ಸರ್ಕಾರಿ ಉದ್ಯೋಗಿಗಳು ಇನ್ನು ಮುಂದೆ 2ನೇ ಮದುವೆ ಆಗಬೇಕಾದರೆ ಅನುಮತಿ ಪಡೆಯಬೇಕು

ಎರಡನೇ ಮದುವೆಯಾಗಬಯಸುವ ಬಿಹಾರದ ಸರ್ಕಾರಿ ಉದ್ಯೋಗಿಗಳು ಮದುವೆಗೂ ಮೊದಲು ತಮ್ಮ ಇಲಾಖೆಗಳಿಗೆ ಸೂಚಿಸಬೇಕು, ಏನಿದು ಹೊಸ ನಿಯಮ?

VISTARANEWS.COM


on

marriage
ಸಾಂಧರ್ಬಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಟನಾ: ಇನ್ನು ಮುಂದೆ ಸರ್ಕಾರಿ ಉದ್ಯೋಗಿಗಳು ಎರಡನೇ ಮದುವೆ ಮಾಡಿಕೊಳ್ಳಬೇಕು ಎಂದರೆ ಸರಕಾರದ ಅನುಮತಿ ಪಡೆಯುವುದು ಕಡ್ಡಾಯ.- ಹೀಗೊಂದು ನಿಯಮವನ್ನು ಬಿಹಾರ ಸರಕಾರ ಜಾರಿಗೊಳಿಸಿದೆ.
ಈ ಬಗ್ಗೆ ಅಧಿಸೂಚನೆಯನ್ನೇ ಪ್ರಕಟಿಸಿದ್ದು, ಎಲ್ಲಾ ಸರಕಾರಿ ಅಧಿಕಾರಿಗಳು, ಉದ್ಯೋಗಿಗಳು ತಮ್ಮ ವೈವಾಹಿಕ ಸ್ಥಿತಿಯ ಬಗ್ಗೆ ತಮ್ಮ ತಮ್ಮ ಇಲಾಖೆಗಳಿಗೆ ತಿಳಿಸಬೇಕು ಮತ್ತು ಅಗತ್ಯ ಅನುಮತಿಯನ್ನು ಪಡೆದ ನಂತರವೇ ಅವರು ಎರಡನೇ ಮದುವೆಗೆ ಅರ್ಹತೆ ಪಡೆಯುತ್ತಾರೆ ಎಂದು ತಿಳಿಸಲಾಗಿದೆ.

ಯಾಕೆ ಈ ಹೊಸ ನಿಯಮ ಜಾರಿ?
ಎರಡನೇ ಬಾರಿಗೆ ಮದುವೆಯಾಗಲು ಯೋಚಿಸುವ ಯಾವುದೇ ಉದ್ಯೋಗಿ ಆಗಿದ್ದರು ಮೊದಲು ಅವನ ಅಥವಾ ಅವಳ ಸಂಗಾತಿಯಿಂದ ಕಾನೂನುಬದ್ಧ ವಿಚ್ಚೇದನವನ್ನು ಪಡೆದಿರಬೇಕು ಮತ್ತು ಸಂಬಂಧಿಸಿದ ಇಲಾಖೆಗೆ ಈ ಮಾಹಿತಿಯನ್ನು ನೀಡಬೇಕು. ಒಂದೊಮ್ಮೆ ಉದ್ಯೋಗಿಯ ಮೊದಲ ಪತ್ನಿ ಅಥವಾ ಪತಿ ಮದುವೆಗೆ ವಿರೋಧಿಸಿದರೆ, ಎರಡನೇ ಪತ್ನಿ ಅಥವಾ ಪತಿಗೆ ಸರ್ಕಾರಿ ಸೌಲಭ್ಯಗಳು ದೊರೆಯುವುದಿಲ್ಲ ಎಂದು ಹೊಸ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಒಂದುವೇಳೆ ಸರ್ಕಾರಿ ನೌಕರ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೆ ಎರಡನೇ ಮದುವೆಯಾಗಿ ಸೇವಾ ಅವಧಿಯಲ್ಲಿ ಮರಣ ಹೊಂದಿದರೆ, ಅವನ ಅಥವಾ ಅವಳ ಎರಡನೇ ಹೆಂಡತಿ / ಪತಿ ಮತ್ತು ಅವರ ಮಕ್ಕಳು ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ಅರ್ಹರಾಗಿರುವುದಿಲ್ಲ. ರಾಜ್ಯ ಸರ್ಕಾರ ಮೊದಲ ಪತ್ನಿಯ ಮಕ್ಕಳಿಗೆ ಆದ್ಯತೆ ನೀಡುತ್ತದೆ ಎಂದು ಇದರಲ್ಲಿ ಸ್ಪಷ್ಟಪಡಿಸಲಾಗಿದೆ.

ಈ ನಿಯಮ ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಡಿಜಿಪಿ ಹೋಮ್ ಗಾರ್ಡ್, ಡಿಜಿಪಿ ಕಾರಾಗೃಹ ಮತ್ತು ಸಂಬಂಧಪಟ್ಟ ಪ್ರತಿಯೊಬ್ಬ ಅಧಿಕಾರಿಗಳಿಗೂ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಜಾರಿಗೊಳಿಸಲು ರಾಜ್ಯ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: Film on Vajpayee | ಅಟಲ್ ಬಿಹಾರಿ ವಾಜಪೇಯಿ ಜೀವನ ಚರಿತ್ರೆ ತೆರೆಯ ಮೇಲೆ ಬರಲು ಸಜ್ಜು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

ಪ್ರಾಣಿಗಳಿಂದಾಗಿ ರಸ್ತೆ ಅಪಘಾತಗಳು ಭಾರತದಲ್ಲಿ ಸಾಕಷ್ಟು ಹೆಚ್ಚಾಗುತ್ತಿದೆ. ಪ್ರಾಣಿಗಳು ಓಡಾಡುವ ಸಾಧ್ಯತೆಗಳಿರುವ ರಸ್ತೆಗಳಲ್ಲಿ ನಾವು ಬಹಳ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಿದೆ. ಇದಕ್ಕಾಗಿ ಕೆಲವು ಸಲಹೆಗಳು (Driving Tips) ಇಲ್ಲಿವೆ.

VISTARANEWS.COM


on

By

Driving Tips
Koo

ತಮಿಳುನಾಡಿನಲ್ಲಿ (tamilnadu) ಇತ್ತೀಚೆಗೆ ನಡೆದ ಭೀಕರ ರಸ್ತೆ (Driving Tips) ಅಪಘಾತದಲ್ಲಿ (Road Accident) ಐದು ಮಂದಿ (five death) ಸಾವನ್ನಪ್ಪಿದ್ದರು. ರಸ್ತೆಯಲ್ಲಿದ್ದ ಜಾನುವಾರುಗಳಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರು (car) ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಕಾರಿನಲ್ಲಿದ್ದ ಐವರು ಪುದುಚೇರಿಯಿಂದ ಹಿಂತಿರುಗುತ್ತಿದ್ದಾಗ ಕಲಾಪಕ್ಕಂನಲ್ಲಿ ಈ ಅಪಘಾತ ಸಂಭವಿಸಿತ್ತು. ಗೋವಾದಲ್ಲಿ (goa) ನಡೆದ ಮತ್ತೊಂದು ಘಟನೆಯಲ್ಲಿ ಮುಖ್ಯರಸ್ತೆಯಲ್ಲಿ ಹಸು ಹಠಾತ್ ಕಾಣಿಸಿಕೊಂಡಿದ್ದರಿಂದ ಕಾರಿಗೆ ಭಾರಿ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಪ್ರಾಣಿಗಳಿಂದಾಗಿ ರಸ್ತೆ ಅಪಘಾತಗಳು ಭಾರತದಲ್ಲಿ ಸಾಕಷ್ಟು ಹೆಚ್ಚಾಗುತ್ತಿದೆ. ಪ್ರಾಣಿಗಳು ಓಡಾಡುವ ಸಾಧ್ಯತೆಗಳಿರುವ ರಸ್ತೆಗಳಲ್ಲಿ ನಾವು ಬಹಳ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಿದೆ. ನೀವು ಕಾರನ್ನು ಓಡಿಸುತ್ತಿದ್ದರೆ ಮತ್ತು ಇದ್ದಕ್ಕಿದ್ದಂತೆ ಪ್ರಾಣಿಯು ನಿಮ್ಮ ಮುಂದೆ ಬಂದರೆ ನೀವು ಈ ಕೆಳಗಿನ ಸಲಹೆಗಳನ್ನು ಅನುಸರಿಸಬಹುದು.


1. ವೇಗದ ಮಿತಿಯಲ್ಲಿ ಚಾಲನೆ

ಅತಿ ವೇಗವಾಗಿ ವಾಹನ ಓಡಿಸುವುದು ಸರಿಯಲ್ಲ. ಇದರಿಂದ ಅಪಘಾತ ಸಂಭವಿಸುವ ಅಪಾಯ ಹೆಚ್ಚಾಗಿರುತ್ತದೆ. ಹೀಗಾಗಿ ವೇಗದ ವಾಹನ ಚಾಲನೆಗೆ ನಿಯಂತ್ರಣ ಹೇರಿ. ವಿಶೇಷವಾಗಿ ರಸ್ತೆಗಳಲ್ಲಿ ಪ್ರಾಣಿಗಳ ಸಾಧ್ಯತೆಗಳಿರುವ ಪ್ರದೇಶಗಳಲ್ಲಿ ನಿಧಾನವಾಗಿ ವಾಹನ ಚಲಾಯಿಸಿ.

2. ಶಾಂತವಾಗಿರಿ

ಭಯಭೀತರಾಗಬೇಡಿ ಅಥವಾ ಹಠಾತ್ ಚಲನೆಯನ್ನು ಮಾಡಬೇಡಿ. ಅದು ಪ್ರಾಣಿಗಳನ್ನು ಗಾಬರಿಗೊಳಿಸಬಹುದು ಅಥವಾ ನಿಮ್ಮ ಕಾರಿನ ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡಬಹುದು.

3. ನಿಧಾನಗೊಳಿಸಿ

ಪ್ರಾಣಿಗಳು ಹಠಾತ್ ಎದುರು ಬಂದಾಗ ವೇಗವನ್ನು ತಕ್ಷಣವೇ ಆದರೆ ಕ್ರಮೇಣ ಕಡಿಮೆ ಮಾಡಿ. ಬ್ರೇಕ್‌ಗಳ ಮೇಲೆ ಸ್ಲ್ಯಾಮ್ ಮಾಡುವುದನ್ನು ತಪ್ಪಿಸಿ, ಇದು ನಿಮ್ಮ ಕಾರನ್ನು ಸ್ಕಿಡ್ ಮಾಡಲು ಕಾರಣವಾಗಬಹುದು.

4. ಹಾರ್ನ್ ಬಳಸಿ

ಪ್ರಾಣಿಗಳು ಮತ್ತು ನಿಮ್ಮ ವಾಹನ ಬರುತ್ತಿರುವುದನ್ನು ಇತರ ಚಾಲಕರು ಗಮನ ಹರಿಸುವಂತೆ ಎಚ್ಚರಿಸಲು ವಾಹನದಲ್ಲಿರುವ ಹಾರ್ನ್ ಅನ್ನು ಸದ್ದು ಮಾಡುತ್ತ ಚಲಾಯಿಸಿ.

5. ಏಕಾಏಕಿ ತಿರುಗಿಸಬೇಡಿ

ರಸ್ತೆಯಲ್ಲಿ ವಾಹನವನ್ನು ನೇರವಾಗಿ ಚಲಿಸಲು ಪ್ರಯತ್ನಿಸಿ ಮತ್ತು ಹಠಾತ್ ವಾಹನ ತಿರುಗಿಸಬೇಡಿ. ವಿಶೇಷವಾಗಿ ಹತ್ತಿರದಲ್ಲಿ ಇತರ ವಾಹನಗಳು ಇದ್ದಲ್ಲಿ ಸ್ಟೇರಿಂಗ್ ನಿಯಂತ್ರಣ ಕಷ್ಟವಾದಾಗ ಇತರ ವಸ್ತು ಅಥವಾ ವಾಹನಕ್ಕೆ ಡಿಕ್ಕಿಯಾಗಬಹುದು.

6. ವಾಹನದ ಲೈಟ್‌ಗಳನ್ನು ಫ್ಲ್ಯಾಶ್ ಮಾಡಿ

ಕತ್ತಲೆಯಾಗಿದ್ದರೆ ಅಥವಾ ಗೋಚರತೆ ಕಡಿಮೆಯಿದ್ದರೆ ಪ್ರಾಣಿಗಳು ಮತ್ತು ಇತರ ಚಾಲಕರಿಗೆ ನೀವು ಹೆಚ್ಚು ಗೋಚರಿಸುವಂತೆ ಮಾಡಲು ನಿಮ್ಮ ಕಾರಿನ ಹೆಡ್‌ಲೈಟ್‌ಗಳು ಮತ್ತು ಅಪಾಯದ ದೀಪಗಳನ್ನು ಬೆಳಗಿಸಿ.

ಇದನ್ನೂ ಓದಿ: Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

7. ಪ್ರಾಣಿಗಳು ಹೋಗಲು ಜಾಗ ಬಿಡಿ

ಸಾಧ್ಯವಾದರೆ ಪ್ರಾಣಿಗೆ ರಸ್ತೆಯಿಂದ ದೂರ ಸರಿಯಲು ಸಾಕಷ್ಟು ಜಾಗವನ್ನು ನೀಡಿ. ಅದನ್ನು ಬಲವಂತವಾಗಿ ಅಥವಾ ಹತ್ತಿರ ಹೋಗಲು ಪ್ರಯತ್ನಿಸಬೇಡಿ.

8. ಸಿದ್ಧರಾಗಿರಿ

ಪ್ರಯಾಣ ಮಾಡುವಾಗ ಯಾವಾಗಲೂ ಸುತ್ತಮುತ್ತಲಿನ ಬಗ್ಗೆ ತಿಳಿದುಕೊಂಡಿರಿ. ವಿಶೇಷವಾಗಿ ಪ್ರಾಣಿಗಳು ಮುಕ್ತವಾಗಿ ತಿರುಗಾಡಲು ತಿಳಿದಿರುವ ಪ್ರದೇಶಗಳಲ್ಲಿ ಚಾಲನೆ ಮಾಡುವಾಗ ಜಾನುವಾರುಗಳ ಉಪಸ್ಥಿತಿಯನ್ನು ಸೂಚಿಸುವ ಎಚ್ಚರಿಕೆ ಚಿಹ್ನೆಗಳು ಅಥವಾ ಸಂಕೇತಗಳನ್ನು ಗಮನಿಸಿ.

Continue Reading

ದೇಶ

Alamgir Alam: ಮನೆಗೆಲಸದವನ ಮನೆಯಲ್ಲಿ 35 ಕೋಟಿ ರೂ. ಪತ್ತೆ; ಜಾರ್ಖಂಡ್‌ ಸಚಿವ ಆಲಂ ಬಂಧನ

Alamgir Alam: ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಆಲಂಗೀರ್‌ ಆಲಂ ಅವರನ್ನು ಕರೆಯಲಾಗಿತ್ತು. ಸತತ ವಿಚಾರಣೆ ನಡೆಸಿದ ಬಳಿಕ ಇ.ಡಿ ಅಧಿಕಾರಿಗಳು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣದಲ್ಲಿಯೇ ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಅವರು ಜೈಲುಪಾಲಾಗಿದ್ದಾರೆ.

VISTARANEWS.COM


on

Alamgir Alam
Koo

ರಾಂಚಿ: ಜಾರ್ಖಂಡ್‌ ಗ್ರಾಮೀಣ ಅಭಿವೃದ್ಧಿ ಸಚಿವ, ಕಾಂಗ್ರೆಸ್‌ ನಾಯಕ ಆಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ (Sanjiv Lal) ಮನೆಗೆಲಸದವನ ಮನೆಯಲ್ಲಿ ಸುಮಾರು 35 ಕೋಟಿ ರೂ. ಪತ್ತೆಯಾದ ಬೆನ್ನಲ್ಲೇ ಇ.ಡಿ (ED) ಅಧಿಕಾರಿಗಳು ಆಲಂಗೀರ್‌ ಆಲಂ ಅವರನ್ನು ಬಂಧಿಸಿದ್ದಾರೆ. ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಸುಮಾರು 10 ಗಂಟೆ ವಿಚಾರಣೆ ನಡೆಸಿದ ಇ.ಡಿ ಅಧಿಕಾರಿಗಳು ಬಳಿಕ ಅವರನ್ನು ಬಂಧಿಸಿದರು.

ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ, ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಆರೋಪಗಳು ಕೇಳಿಬಂದಿದ್ದು, ಇ.ಡಿ ತನಿಖೆ ನಡೆಸುತ್ತಿದೆ. ಆಲಂಗೀರ್‌ ಆಲಂ ಆಪ್ತ ಕಾರ್ಯದರ್ಶಿ ಸಂಜೀವ್‌ ಲಾಲ್‌ ಹಾಗೂ ಆತನ ಮನೆಯಲ್ಲಿ ಕೆಲಸ ಮಾಡುವ ಜಹಾಂಗೀರ್‌ ಆಲಂ ಅವರನ್ನು ಈಗಾಗಲೇ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಮನೆಗೆಲಸದವನಾದ ಜಹಾಂಗೀರ್‌ ಆಲಂ ಮನೆಯಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿದಾಗ ಸುಮಾರು 35.23 ಕೋಟಿ ರೂ. ಸಿಕ್ಕಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಂಚಿಯ ಹಲವೆಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಜಹಾಂಗೀರ್‌ ಆಲಂ ಮನೆಗೆ ದಾಳಿ ಮಾಡಿದಾಗಂತೂ ನೋಟುಗಳ ರಾಶಿಯೇ ಕಂಡುಬಂದಿತ್ತು. 12ಕ್ಕೂ ಅಧಿಕ ಗಂಟೆಗಳವರೆಗೆ ಅಧಿಕಾರಿಗಳು ನೋಟುಗಳ ರಾಶಿಗಳನ್ನು ಮಷೀನ್‌ ಮೂಲಕ ಎಣಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಆಲಂಗೀರ್‌ ಆಲಂ ಅವರನ್ನು ಕರೆಯಲಾಗಿತ್ತು. ಸತತ ವಿಚಾರಣೆ ನಡೆಸಿದ ಬಳಿಕ ಇ.ಡಿ ಅಧಿಕಾರಿಗಳು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣದಲ್ಲಿಯೇ ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಅವರು ಜೈಲುಪಾಲಾಗಿದ್ದಾರೆ.

2023ರಲ್ಲಿ ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಇ.ಡಿಯು ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಎಂಜಿನಿಯರ್ ವೀರೇಂದ್ರ ರಾಮ್ ಎಂಬವರನ್ನು ಬಂಧಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆಯೂ ದಾಳಿ ಮಾಡಿದೆ. ಸದ್ಯ ನೋಟಿನ ಕಂತೆ ನೋಡಿ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ನಕಲಿ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Continue Reading

ವಾಣಿಜ್ಯ

SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

SBI Rates: 2023ರ ಡಿಸೆಂಬರ್‌ನಲ್ಲಿ ಎಸ್‌ಬಿಐ ಎಫ್‌ಡಿ ಮೇಲಿನ ಬಡ್ಡಿದರವನ್ನು ಹೆಚ್ಚಿಸಿತ್ತು. ಈಗ ಮತ್ತೆ 25ರಿಂದ 75 ಮೂಲಾಂಕಗಳವರೆಗೆ ಬಡ್ಡಿದರವನ್ನು ಏರಿಕೆ ಮಾಡಿದೆ. ಇದರಿಂದ ಸ್ಥಿರ ಠೇವಣಿದಾರರಿಗೆ ಭಾರಿ ಪ್ರಮಾಣದಲ್ಲಿ ಅನುಕೂಲವಾಗಲಿದೆ.

VISTARANEWS.COM


on

SBI Rates
Koo

ಮುಂಬೈ: ದೇಶದ ಅಗ್ರ ಸಾರ್ವಜನಿಕ ವಲಯದ ಬ್ಯಾಂಕ್‌ (SBI) ಆಗಿರುವ ಎಸ್‌ಬಿಐ ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಸ್ಥಿರ ಠೇವಣಿದಾರರು ಬ್ಯಾಂಕ್‌ನಲ್ಲಿ ಇಟ್ಟಿರುವ ಮೊತ್ತದ ಮೇಲಿನ ಬಡ್ಡಿಯನ್ನು ಆಯಾ ಯೋಜನೆಗಳಿಗೆ ಅನ್ವಯವಾಗುವಂತೆ ಶೇ.0.25ರಿಂದ (25 ಮೂಲಾಂಕ) ಶೇ.0.75ರ (75 ಮೂಲಾಂಕ)ವರೆಗೆ ಬಡ್ಡಿದರವನ್ನು (SBI FD Interest Rates) ಏರಿಕೆ ಮಾಡಿದ್ದು, ಇದರಿಂದ ಸ್ಥಿರ ಠೇವಣಿದಾರರಿಗೆ ಭಾರಿ ಅನುಕೂಲವಾಗಲಿದೆ. ನೂತನ ಬಡ್ಡಿದರವು ಮೇ 15ರಿಂದಲೇ ಅನ್ವಯವಾಗಲಿದ್ದು, ಇದು ಗ್ರಾಹಕರ ಸಂತಸವನ್ನು ಹೆಚ್ಚಿಸಿದೆ.

7ರಿಂದ 45 ದಿನಗಳವರೆಗೆ 2 ಕೋಟಿ ರೂ. ಠೇವಣಿ ಇರಿಸಿದರೆ, ಅದರ ಮೇಲಿನ ಬಡ್ಡಿದರವನ್ನು ಬದಲಾವಣೆ ಮಾಡಿಲ್ಲ. ಆದರೆ, 46ರಿಂದ 179 ದಿನ ಠೇವಣಿ ಇಟ್ಟರೆ ಶೇ.4.75ರ ಬದಲು ಶೇ.5.50ರಷ್ಟು ಬಡ್ಡಿದರ ಸಿಗಲಿದೆ. ಹಿರಿಯ ನಾಗರಿಕರಿಗೆ ಶೇ.5.25ರ ಬದಲು ಶೇ.6ರಷ್ಟು ಬಡ್ಡಿ ಸಿಗಲಿದೆ. ಇನ್ನು ಒಂದರಿಂದ ಎರಡು ವರ್ಷದವರೆಗೆ ಸ್ಥಿರ ಠೇವಣಿ ಇರಿಸುವ ಸಾಮಾನ್ಯ (2 ಕೋಟಿ ರೂ.ಗಿಂತ ಕಡಿಮೆ ಮೊತ್ತ ಠೇವಣಿ ಇರಿಸುವವರು) ಠೇವಣಿದಾರರಿಗೆ ಶೇ.6.8ರಷ್ಟು ಹಾಗೂ ಹಿರಿಯ ನಾಗರಿಕರಿಗೆ ಶೇ.7.3ರಷ್ಟು ಬಡ್ಡಿ ಸಿಗಲಿದೆ.

ಹೀಗಿದೆ ನೂತನ ಬಡ್ಡಿದರ (2 ಕೋಟಿ ರೂ.ಗಿಂತ ಕಡಿಮೆ ಠೇವಣಿ ಮಾಡಿದವರಿಗೆ)

ಎಫ್‌ಡಿ ಅವಧಿನೂತನ ಬಡ್ಡಿದರಹಿರಿಯ ನಾಗರಿಕರಿಗೆ
180-210 ದಿನ6%6.50%
211 ದಿನದಿಂದ 1 ವರ್ಷ6.25%6.75%
1-2 ವರ್ಷ6.80%7.30%
2-3 ವರ್ಷ7%7%
3-5 ವರ್ಷ6.75%7.25%
5-10 ವರ್ಷ6.50%7.50%

ಎಫ್‌ಡಿ ಬಡ್ಡಿದರ ಏರಿಸಲು ಕಾರಣವೇನು?

ಕೊರೊನಾ ಬಿಕ್ಕಟ್ಟಿನ ನಂತರದಲ್ಲಿ ಆರ್ಥಿಕತೆಯು ಏಳಿಗೆಯತ್ತ ಸಾಗುತ್ತಿದೆ. ಇದರಿಂದ ಬ್ಯಾಂಕ್‌ಗಳಲ್ಲಿ ವಾಹಿವಾಟು ಜಾಸ್ತಿಯಾಗಿದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮುಂದಿನ ದಿನಗಳಲ್ಲೂ ರೆಪೋ ದರದಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆ ಕಡಿಮೆ ಇದೆ. ಇದರಿಂದ ಗೃಹ ಸಾಲದ ಮೇಲೆ ಹೆಚ್ಚಿನ ಇಎಂಐ ಕಟ್ಟುವ ಹೊರೆಯು ಜನರಿಗೆ ಇರುವುದಿಲ್ಲ. ಹಾಗಾಗಿ, ಎಸ್‌ಬಿಐ ಸೇರಿ ಹಲವು ಬ್ಯಾಂಕ್‌ಗಳು ಜನರಿಂದ ಹೆಚ್ಚಿನ ಠೇವಣಿಯನ್ನು ಸೆಳೆಯಲು ಸ್ಥಿರ ಠೇವಣಿ ಮೇಲಿನ ಬಡ್ಡಿದರವನ್ನು ಏರಿಕೆ ಮಾಡುತ್ತಿವೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: RBI Monetary Policy: ಸಾಲಗಾರರಿಗೆ ಆರ್‌ಬಿಐ ಗುಡ್‌ ನ್ಯೂಸ್;‌ ರೆಪೋ ದರ ಯಥಾಸ್ಥಿತಿ

Continue Reading

ದೇಶ

Amit Shah: ಭಾರತದ ಜತೆ ಪಿಒಕೆ ವಿಲೀನ ಮಾಡುವುದೇ ನಮ್ಮ ಗುರಿ, ಬದ್ಧತೆ; ಅಮಿತ್‌ ಶಾ ಘೋಷಣೆ

Amit Shah: ಸ್ವಾತಂತ್ರ್ಯದ ಬಳಿಕ ಜಮ್ಮು-ಕಾಶ್ಮೀರವು ಭಾರತದ ಜತೆ ವಿಲೀನಗೊಂಡಿದೆ. ಹೀಗಿರುವಾಗ ಪಾಕ್‌ ಆಕ್ರಮಿತ ಕಾಶ್ಮೀರವು ನಮ್ಮದಾಗಿರದೆ ಇರಲು ಹೇಗೆ ಸಾಧ್ಯ? ಅದು ನಮ್ಮದೇ ಎಂದು ಎಎನ್‌ಐಗೆ ನೀಡಿದ ಸಂದರ್ಶನದ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

VISTARANEWS.COM


on

Amit Shah
Koo

ನವದೆಹಲಿ: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ (PoK) ಜನ ದಂಗೆ ಎದ್ದಿದ್ದಾರೆ. ಪಾಕಿಸ್ತಾನ ಸರ್ಕಾರದ ವಿರುದ್ಧವೇ ಜನ ಸಮರ ಸಾರಿದ್ದು, ಭಾರತದ ಜತೆ ವಿಲೀನಗೊಳಿಸಿ ಎಂದು ಒತ್ತಾಯಿಸುತ್ತಿದ್ದಾರೆ. ಇನ್ನು, ಪಾಕಿಸ್ತಾನದ ಬಳಿ ಅಣುಬಾಂಬ್‌ ಇದೆ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಹೇಳಿದ್ದಾರೆ. ಇದರ ಬೆನ್ನಲ್ಲೇ, “ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಎಂದಿಗೂ ಭಾರತದ್ದೇ. ಅದನ್ನು ಭಾರತದ ಜತೆ ವಿಲೀನಗೊಳಿಸುವುದು ನಮ್ಮ ಬದ್ಧತೆಯಾಗಿದೆ” ಎಂದು ಅಮಿತ್‌ ಶಾ (Amit Shah) ಪುನರುಚ್ಚರಿಸಿದ್ದಾರೆ.

ಎಎನ್‌ಐಗೆ ಅಮಿತ್‌ ಶಾ ಅವರು ಸಂದರ್ಶನ ನೀಡಿದ್ದು, ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಪಿಒಕೆ ಕುರಿತ ಪ್ರಶ್ನೆಗೆ ಅವರು, “ಪಾಕ್‌ ಆಕ್ರಮಿತ ಕಾಶ್ಮೀರವು ಭಾರತದ ಜತೆ ವಿಲೀನವಾಗಬೇಕು ಎಂಬುದು ಬಿಜೆಪಿ ಮಾತ್ರವಲ್ಲ, ಅದು ದೇಶದ, ಸಂವಿಧಾನದ ಬದ್ಧತೆಯಾಗಿದೆ. ಪಾಕ್‌ ಆಕ್ರಮಿತ ಕಾಶ್ಮೀರದ ಮೇಲೆ ಭಾರತದ ಹಕ್ಕಿದೆ. ಇದನ್ನು ಯಾರೂ ಅಲ್ಲಗಳೆಯುವಂತಿಲ್ಲ. ಅದನ್ನು ಹೇಗೆ ಭಾರತದ ಜತೆ ವಿಲೀನಗೊಳಿಸಬೇಕು ಎಂಬುದೇ ನಮ್ಮ ಮುಂದಿರುವ ಪ್ರಶ್ನೆಯಾಗಿದೆ” ಎಂದು ತಿಳಿಸಿದರು.

ಫಾರೂಕ್‌ ಅಬ್ದುಲ್ಲಾಗೆ ಚಾಟಿ

ಪಾಕಿಸ್ತಾನವನ್ನು ಗೌರವಿಸಬೇಕು ಎಂದು ಹೇಳಿದ ಫಾರೂಕ್‌ ಅಬ್ದುಲ್ಲಾ ಅವರಿಗೆ ಅಮಿತ್‌ ಶಾ ತಿರುಗೇಟು ನೀಡಿದ್ದಾರೆ. “ಪಾಕಿಸ್ತಾನ ಅಣುಬಾಂಬ್‌ ಹೊಂದಿದೆ. ಅದಕ್ಕೆ ಭಾರತ ಗೌರವ ನೀಡಬೇಕು ಎಂಬುದಾಗಿ ಫಾರೂಕ್‌ ಅಬ್ದುಲ್ಲಾ ಹಾಗೂ ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಅದರೆ, ಅಣ್ವಸ್ತ್ರ ಸಾಮರ್ಥ್ಯ ಹೊಂದಿರುವ, 130 ಕೋಟಿ ಜನಸಂಖ್ಯೆಯ ಭಾರತವು ತನ್ನ ಹಕ್ಕನ್ನು ಪ್ರತಿಪಾದಿಸಲು ಪಾಕಿಸ್ತಾನಕ್ಕೆ ಹೆದರಬೇಕೇ? ರಾಹುಲ್‌ ಗಾಂಧಿ ಅವರು ಇದಕ್ಕೆ ಉತ್ತರ ನೀಡಬೇಕು. ಪಾಕಿಸ್ತಾನವನ್ನು ಗೌರವಿಸಬೇಕಾ? ಪಾಕ್‌ ಆಕ್ರಮಿತ ಕಾಶ್ಮೀರವನ್ನು ಬಿಟ್ಟುಕೊಡಬೇಕಾ ಎಂಬುದರ ಕುರಿತು ರಾಹುಲ್‌ ಗಾಂಧಿ ಉತ್ತರಿಸಲಿ” ಎಂದರು.

ಮೋದಿಯೇ ಪ್ರಧಾನಿ

ನರೇಂದ್ರ ಮೋದಿ ಅವರು 75 ವರ್ಷ ದಾಟಿದ ಬಳಿಕ ಪ್ರಧಾನಿ ಸ್ಥಾನದಲ್ಲಿ ಮುಂದುವರಿಯಲ್ಲ ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನೀಡಿದ ಹೇಳಿಕೆಗೆ ಅಮಿತ್‌ ಶಾ ಪ್ರತಿಕ್ರಿಯಿಸಿದರು. “ಆಮ್‌ ಆದ್ಮಿ ಪಕ್ಷವು ದೇಶಾದ್ಯಂತ ಕೇವಲ 22 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಹಾಗಾಗಿ, ಅರವಿಂದ್‌ ಕೇಜ್ರಿವಾಲ್‌ ಅವರ ಮಾತನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ನರೇಂದ್ರ ಮೋದಿ ಅವರು 2029ರವರೆಗೂ ಪ್ರಧಾನಿಯಾಗಿ ಇರುತ್ತಾರೆ. ಅದರ ನಂತರವೂ ಅವರು ನಮ್ಮನ್ನು ಮುನ್ನಡೆಸಲಿದ್ದಾರೆ” ಎಂದು ಹೇಳಿದರು.

“ಕಳೆದ 10 ವರ್ಷಗಳಲ್ಲಿ ಮೋದಿ ಅವರು ದೇಶವನ್ನು ಏಳಿಗೆಯತ್ತ ಕೊಂಡೊಯ್ದಿದ್ದಾರೆ. ಇದೇ ಕಾರಣಕ್ಕಾಗಿ ಎನ್‌ಡಿಎ ಮೈತ್ರಿಕೂಟವು 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳುತ್ತಿದ್ದೇವೆ. ಪಶ್ಚಿಮ ಬಂಗಾಳದಲ್ಲಿಯೇ 24-30 ಕ್ಷೇತ್ರಗಳಲ್ಲಿ ಜಯ ನಮ್ಮದಾಗಲಿದೆ” ಎಂದರು. ಮೀಸಲಾತಿ ರದ್ದತಿ ಬಗ್ಗೆ ಮಾತನಾಡಿದ ಅವರು, “ಕಳೆದ 10 ವರ್ಷಗಳಿಂದ ನಮ್ಮ ಬಹುಮತದ ಸರ್ಕಾರ ಇದೆ. ಆದರೆ, ನಾವು ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

Continue Reading
Advertisement
Davanagere News
ಕರ್ನಾಟಕ38 mins ago

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Robert Fico
ವಿದೇಶ47 mins ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಮೇಲೆ ಗುಂಡಿನ ದಾಳಿ; ಭೀಕರ ವಿಡಿಯೊ ಇಲ್ಲಿದೆ

Federation Cup 2024
ಕ್ರೀಡೆ1 hour ago

Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

Tips For Healthy Skin
ಆರೋಗ್ಯ1 hour ago

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

Driving Tips
ಕ್ರೈಂ1 hour ago

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

Online scams
Latest1 hour ago

Online scams: ಹೆರಿಗೆ ರಜೆಯಲ್ಲಿದ್ದಾಗ ದುಡ್ಡು ಸಂಪಾದಿಸಲು ಹೋಗಿ 54 ಲಕ್ಷ ರೂ. ಕಳೆದುಕೊಂಡಳು!

Alamgir Alam
ದೇಶ2 hours ago

Alamgir Alam: ಮನೆಗೆಲಸದವನ ಮನೆಯಲ್ಲಿ 35 ಕೋಟಿ ರೂ. ಪತ್ತೆ; ಜಾರ್ಖಂಡ್‌ ಸಚಿವ ಆಲಂ ಬಂಧನ

IPL 2024
ಕ್ರೀಡೆ2 hours ago

IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

Prajwal Revanna Case Prajwal Revanna loses X recognition in Obscene Video case
ರಾಜಕೀಯ2 hours ago

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

SBI Rates
ವಾಣಿಜ್ಯ2 hours ago

SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ14 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ16 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌