New Parliament Building: ಇವರೇ ನೋಡಿ ಹೊಸ ಸಂಸತ್ತಿನ ವಿನ್ಯಾಸದ ರೂವಾರಿ! ಇವರು ಪಡೆದ ಶುಲ್ಕ ಎಷ್ಟು? - Vistara News

ದೇಶ

New Parliament Building: ಇವರೇ ನೋಡಿ ಹೊಸ ಸಂಸತ್ತಿನ ವಿನ್ಯಾಸದ ರೂವಾರಿ! ಇವರು ಪಡೆದ ಶುಲ್ಕ ಎಷ್ಟು?

New Parliament Building: ಹೊಸ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಭಾನುವಾರ ಲೋಕಾರ್ಪಣೆ ಮಾಡಿದರು.

VISTARANEWS.COM


on

Bimal Patel
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಹೊಸ ಸಂಸತ್ ಭವನವನ್ನು (New Parliament Building) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಭಾನುವಾರ ಲೋಕಾರ್ಪಣೆ ಮಾಡಿದ್ದಾರೆ. ಪ್ರಾಚೀನ ಮತ್ತು ಆಧುನಿಕ ಮೌಲ್ಯಗಳನ್ನು ಒಳಗೊಂಡಿರುವ ಈ ಭವ್ಯ ನಿರ್ಮಾಣವು ಭಾರತದ ಹೆಮ್ಮೆಗಳಲ್ಲಿ ಒಂದಾಗಿದೆ. ಇಂಥ ಕಟ್ಟಡದ ಹಿಂದಿ ವಿನ್ಯಾಸಕಾರರು (Architect) ಎಂಬ ಕುತೂಹಲ ಸಹಜ. ಆ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ. ಬಿಮಲ್ ಹಸ್ಮುಖ್ ಪಟೇಲ್ (Bimal Patel). 64 ವರ್ಷದ ಈ ವ್ಯಕ್ತಿಯೇ ತ್ರಿಕೋನಾಕೃತಿಯ ಭವ್ಯ ನಿರ್ಮಾಣದ ಹಿಂದಿರುವ ವಿನ್ಯಾಸಕಾರ. ಅಂದ ಹಾಗೆ, ಬಿಮಲ್ ಅವರು ಸೆಂಟ್ರಲ್ ವಿಸ್ತಾರ ನವೀಕರಣ, ಕಾಶಿ ವಿಶ್ವನಾಥ ಕಾರಿಡಾರ್ ಮತ್ತು ಸಬರಮತಿ ರಿವರ್ ಫ್ರಂಟ್ ಪ್ರಾಜೆಕ್ಟ್‌ಗಳನ್ನೂ ಮುನ್ನಡೆಸಿದ್ದಾರೆ. ಬನ್ನಿ ಈ ಬಿಮಲ್ ಹಸ್ಮುಖ್ ಪಟೇಲ್ ಅವರು ಬಗ್ಗೆ ತಿಳಿದುಕೊಳ್ಳೋಣ….

ದೇಶದ ಪ್ರಮುಖ ವಾಸ್ತುಶಿಲ್ಪಿಗಳಲ್ಲಿ ಒಬ್ಬರಾಗಿರುವ ಪಟೇಲ್ ಸುಮಾರು 30 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ನಗರ ಯೋಜನೆ ಮತ್ತು ವಿನ್ಯಾಸದಲ್ಲಿ ಪಟೇಲ್ ಸಿದ್ಧಹಸ್ತರು. ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಸಿಇಪಿಟಿ ವಿವಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದರ ಜತೆಗೆ, ಎಚ್‌ಸಿಪಿ ಡಿಸೈನ್ ಪ್ಲ್ಯಾನಿಂಗ್ ಮತ್ತು ಮ್ಯಾನೇಜ್ಮೆಂಟ್ ಪ್ರೈ ಲಿ. ಕಂಪನಿಯನ್ನು ನಡೆಸುತ್ತಿದ್ದಾರೆ. ಇದೊಂದು ಆರ್ಕಿಟೆಕ್ಟ್, ಪ್ಲ್ಯಾನಿಂಗ್ ಮತ್ತು ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕಂಪನಿಯಾಗಿದೆ. 1960ರಲ್ಲಿ ಬಿಮಲ್ ಅವರ ತಂದೆ ಹಸ್ಮುಖ್ ಅವರು ಈ ಸಂಸ್ಥೆಯನ್ನು ಹುಟ್ಟುಹಾಕಿದರು. ಅದನ್ನೀಗ ಬಿಮಲ್ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ.

ಗುಜರಾತ್ ಮೂಲದ ಈ ವಾಸ್ತುಶಿಲ್ಪಿ ಸುಮಾರು 35 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಇವರು ದೇಶದ ಹೊಸ ಸಂಸತ್ ವಿನ್ಯಾಸ ಮಾಡಿದ್ದು ಮಾತ್ರವಲ್ಲದೇ, ಸಬರಮತಿ ರಿವರ್‌ಫ್ರಂಟ್ ಡೆವಲಪ್ಮೆಂಟ್ ಪ್ರಾಜೆಕ್ಟ್, ಹೈದ್ರಾಬಾದ್‌ನ ಅಘಾ ಖಾನ್ ಅಕಾಡೆಮಿ, ಹೈದ್ರಾಬಾದ್‌ನ ಐಐಎಂ, ಕಾಶಿ ವಿಶ್ವನಾಥ ಕಾರಿಡಾರ್, ಮುಂಬೈ ಪೋರ್ಟ್ ಟ್ರಸ್ಟ್ ಡೆವಲ್‌ಪ್ಮೆಂಟ್ ಸೇರಿದಂತೆ ಅನೇಕ ಗಣ್ಯ ಬಿಲ್ಡಿಂಗ್ ಪ್ರಾಜೆಕ್ಟ್‌ಗಳನ್ನು ನಿರ್ವಹಣೆ ಮಾಡಿದ್ದಾರೆ.

ಆರ್ಕಿಟೆಕ್ಚರ್‌ನಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ಬಿಮಲ್ ಅವರಿಗೆ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. 1992ರಲ್ಲಿ ಅಗಾ ಘಾನ್ ಅವಾರ್ಡ್, 1998ರಲ್ಲಿ ಯುನೈಡೆಟ್ ನೇಷನ್ಸ್ ಸೆಂಟರ್ ಫಾರ್ ಹ್ಯೂಮನ್ ಸೆಟಲ್‌ಮೆಂಟ್ಸ್ ಅವಾರ್ಡ್ ಆಫ್ ಎಕ್ಸ್‌ಲೆನ್ಸ್, 2001ರಲ್ಲಿ ವರ್ಲ್ಡ್ ಆರ್ಕಿಟೆಕ್ಚರ್ ಅವಾರ್ಡ್, 2006 ಅರ್ಬನ್ ಪ್ಲ್ಯಾನಿಂಗ್ ಮತ್ತು ವಿನ್ಯಾಸಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪುರಸ್ಕಾರ ಕೂಡ ಸಂದಿದೆ.

ಇದನ್ನೂ ಓದಿ: New Parliament Building: ಹೊಸ ಸಂಸತ್ ಭವನ ತ್ರಿಕೋನಾಕೃತಿಯಲ್ಲಿ ಯಾಕಿದೆ?

ಬಿಮಲ್ ಪಟೇಲ್ ಅವರ ಸಂಸ್ಥೆ, ಎಚ್‌ಸಿಪಿ ಡಿಸೈನ್ಸ್, ಸೆಂಟ್ರಲ್ ವಿಸ್ಟಾ ಪ್ರಾಜೆಕ್ಟ್‌ಗೆ ಸಲಹಾ ಬಿಡ್ ಅನ್ನು ಗೆದ್ದುಕೊಂಡಿತು, ಅದರ ಅಡಿಯಲ್ಲಿ ಹೊಸ ಸಂಸತ್ತಿನ ಕಟ್ಟಡವನ್ನು ನಿರ್ಮಿಸಲಾಗಿದೆ. ಕನ್ಸಲ್ಟನ್ಸಿ ಸರ್ವೀಸ್‌ಗೆ ಶುಲ್ಕವಾಗಿ 229.75 ಕೋಟಿ ರೂಪಾಯಿ ಪಡೆದುಕೊಳ್ಳಲಿದೆ ಎಂದು ಈ ಹಿಂದೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದರು. ಪ್ರಾಜೆಕ್ಟ್‌ನ ಮಾಸ್ಟರ್ ಪ್ಲ್ಯಾನ್, ಡಿಸೈನ್, ವೆಚ್ಚ ಅಂದಾಜು ಸೇರಿದಂತೆ ಇನ್ನಿತರ ಎಲ್ಲ ಸಲಹೆಗಳನ್ನು ಈ ಶುಲ್ಕಹೊಂದಿದೆ.

ದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Aircraft Crash: ಭಾರತೀಯ ವಾಯುಪಡೆಯ ವಿಮಾನ ಪತನ; ಭಾಗಗಳು ಸುಟ್ಟು ಭಸ್ಮ

Aircraft Crash: ರಾಜಸ್ಥಾನದ ಜೈಸಲ್ಮೇರ್‌ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ವಿಮಾನವೊಂದು ಪತನಗೊಂಡಿದೆ. ದೈನಂದಿನ ಹಾರಾಟದ ವೇಳೆ ವಿಮಾನ ಪತನಗೊಂಡಿದೆ. ಅವಘಡದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಉನ್ನತ ತನಿಖೆಗೆ ಆದೇಶಿಸಲಾಗಿದೆ.

VISTARANEWS.COM


on

Aircraft Crash
Koo

ಜೈಪುರ: ಭಾರತೀಯ ವಾಯಪಡೆಯ (Indian Air Force) ಕಣ್ಗಾವಲು ವಿಮಾನವೊಂದು ರಾಜಸ್ಥಾನದ (Rajasthan) ಜೈಸಲ್ಮೇರ್‌ ಜಿಲ್ಲೆಯಲ್ಲಿ ಗುರುವಾರ (ಏಪ್ರಿಲ್‌ 25) ಬೆಳಗ್ಗೆ ಪತನಗೊಂಡಿದೆ. ಇದು ಮಾನವರಹಿತ ವಿಮಾನವಾದ ಕಾರಣ ಯಾವುದೇ ಸಾವು-ನೋವು ಸಂಭವಿಸಿಲ್ಲ. ಆದಾಗ್ಯೂ, ವಿಮಾನವು ಜಮೀನಿನಲ್ಲಿ ಪತನಗೊಂಡ (Aircraft Crash) ಕಾರಣ ಯಾವುದೇ ಅವಘಡ ಸಂಭವಿಸಿಲ್ಲ. ಆದರೆ, ಇಡೀ ವಿಮಾನವು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.

ಜಿಲ್ಲಾ ಕೇಂದ್ರವಾದ ಜೈಸಲ್ಮೇರ್‌ನಿಂದ ಸುಮಾರು 25 ಕಿಲೋಮೀಟರ್‌ ದೂರದಲ್ಲಿರುವ ಪಿಥಾಲ ಗ್ರಾಮದ ಬಳಿಯ ಜಮೀನಿನಲ್ಲಿ ವಿಮಾನ ಪತನವಾಗಿದೆ. ಈ ಕುರಿತು ವಾಯುಪಡೆಯೇ ಮಾಹಿತಿ ನೀಡಿದೆ. “ಜೈಸಲ್ಮೇರ್‌ ಬಳಿಯಲ್ಲಿ ಭಾರತೀಯ ವಾಯುಪಡೆಯ ಮಾನವರಹಿತ ವಿಮಾನವು ಪತನಗೊಂಡಿದೆ. ದೈನಂದಿನ ಹಾರಾಟದ ವೇಳೆ ವಿಮಾನ ಪತನಗೊಂಡಿದೆ. ಅವಘಡದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಯಾರದ್ದೇ ವೈಯಕ್ತಿಕ ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ” ಎಂದು ತಿಳಿಸಿದೆ.

ವಿಮಾನ ಪತನದ ಸುದ್ದಿ ತಿಳಿಯುತ್ತಲೇ ಖುರಿ ಪೊಲೀಸ್‌ ಠಾಣೆ ಅಧಿಕಾರಿ ಮೇ ಜಾಬ್ತಾ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ವಾಯುಪಡೆ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿದ್ದು, ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿದೆ. ವಿಮಾನ ಪತನವಾಗುತ್ತಲೇ ಸುತ್ತಮುತ್ತಲಿನ ನೂರಾರು ಗ್ರಾಮಸ್ಥರು ಜಮಾಯಿಸಿದ್ದರು.

ಕಳೆದ ತಿಂಗಳಷ್ಟೇ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ವಾಯುಪಡೆಯ ತೇಜಸ್​ ಯುದ್ಧ ವಿಮಾನ ಪತನಗೊಂಡಿತ್ತು. ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (ಎಲ್‌ಸಿಎ) ತೇಜಸ್ ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಜೈಸಲ್ಮೇರ್ ಬಳಿ ಪತನಗೊಂಡಿದ್ದು, ಪೈಲಟ್​ಗಳು ಸುರಕ್ಷಿತವಾಗಿದ್ದರು.

ʼಭಾರತ್ ಶಕ್ತಿ 2024ʼ ತರಬೇತಿ ವೇಳೆ ಫೈಟರ್ ಜೆಟ್ ಜೈಸಲ್ಮೇರ್‌ನ ಜವಾಹರ್ ಕಾಲೋನಿ ಬಳಿ ಪತನವಾಗಿತ್ತು. ಮಧ್ಯಾಹ್ನ 2 ಗಂಟೆಗೆ ಫೈಟರ್ ಜೆಟ್ ಪತನವಾಗಿ ಬೆಂಕಿ ಹತ್ತಿಕೊಂಡಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು. ಹೇಗೋ ಇಬ್ಬರೂ ಪೈಲಟ್‌ಗಳು ಫೈಟರ್ ಜೆಟ್‌ನಿಂದ ಜಿಗಿದು ತಮ್ಮ ಪ್ರಾಣ ಉಳಿಸಿಕೊಂಡಿದ್ದರು.

ಇದನ್ನೂ ಓದಿ: Russian Military Plane: ರಕ್ಷಣಾ ಸಚಿವಾಲಯದ ವಿಮಾನ ಪತನ; 15 ಮಂದಿಯ ದಾರುಣ ಸಾವು

Continue Reading

ದೇಶ

Horlicks Label: ಹಾರ್ಲಿಕ್ಸ್‌ ಇನ್ನು ಹೆಲ್ತ್‌ ಡ್ರಿಂಕ್ಸ್‌ ಅಲ್ಲ ಎಂದ ಹಿಂದುಸ್ತಾನ್‌ ಯುನಿಲಿವರ್;‌ ಕಾರಣ ಏನು?

Horlicks Label: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯವು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಹಾರ್ಲಿಕ್ಸ್‌ ಸೇರಿ ಹಲವು ಮಾಲ್ಟ್‌ ಆಧಾರಿತ ಪಾನೀಯಗಳ ಮೇಲಿನ ಹೆಲ್ತ್‌ ಫುಡ್‌ ಡ್ರಿಂಕ್ಸ್‌ ಎಂಬ ಲೇಬಲ್‌ ತೆಗೆದುಹಾಕಲಾಗಿದೆ. ಇನ್ನು ಇವು ಕ್ರಿಯಾತ್ಮಕ ಪೌಷ್ಟಿಕ ಪಾನೀಯ ಎನಿಸಿಕೊಳ್ಳಲಿವೆ. ಇದರಿಂದ ಜನರ ದಾರಿ ತಪ್ಪಿಸುವ ಜಾಹೀರಾತು, ಗ್ರಾಹಕರ ಗೊಂದಲ ನಿವಾರಣೆಯಾಗಲಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Horlicks Label
Koo

ನವದೆಹಲಿ: ಭಾರತದಲ್ಲಿ ಹಾರ್ಲಿಕ್ಸ್‌ ಕುಡಿಯದವರೇ ಇರಲಿಕ್ಕಿಲ್ಲ. ಚಿಕ್ಕ ಮಕ್ಕಳಿಂದ ಹಿಡಿದು, ದೊಡ್ಡವರವರೆಗೆ ಕುಡಿಯುತ್ತಾರೆ. ಅದರಲ್ಲೂ, ಯಾರು ಬಾಲ್ಯದಲ್ಲಿ ಹಾರ್ಲಿಕ್ಸ್‌ ಕುಡಿದಿಲ್ಲವೋ, ಅಷ್ಟರಮಟ್ಟಿಗೆ ಅವರ ಬಾಲ್ಯ ‘ಸಪ್ಪೆ’ ಎಂದೇ ಹೇಳಲಾಗುತ್ತಿದೆ. ಇಂತಹ ನೆನಪುಗಳ ಹಿನ್ನೆಲೆ ಹೊಂದಿರುವ ಹಾರ್ಲಿಕ್ಸ್‌ ಬಾಟಲಿ ಮೇಲಿನ ಹೆಲ್ತ್‌ ಫುಡ್‌ ಡ್ರಿಂಕ್ಸ್‌ (Health Food Drinks) ಎಂಬ ಲೇಬಲ್‌ಅನ್ನು (Horlicks Label) ಹಿಂದುಸ್ತಾನ್‌ ಯುನಿಲಿವರ್‌ (HUL) ತೆಗೆದುಹಾಕಿದೆ. ಇತ್ತೀಚಿನ ನಿಯಮಗಳ ಬದಲಾವಣೆ ಭಾಗವಾಗಿ ಲೇಬಲ್‌ಅನ್ನು ತೆಗೆದುಹಾಕಿದೆ ಎಂದು ಹೇಳಲಾಗುತ್ತಿದೆ.

ಹಾರ್ಲಿಕ್ಸ್‌ ಬಾಟಲಿ ಮೇಲಿನ ಹೆಲ್ತ್‌ ಫುಡ್‌ ಡ್ರಿಂಕ್ಸ್‌ ಲೇಬೆಲ್‌ ತೆಗೆದುಹಾಕಲಾಗಿದ್ದು, ಈಗ ಹಾರ್ಲಿಕ್ಸ್‌ ಸೇರಿ ಹಲವು ರೀತಿಯ ಪಾನೀಯಗಳನ್ನು ಕ್ರಿಯಾತ್ಮಕ ಪೌಷ್ಟಿಕ ಪಾನೀಯ (Functional Nutritional Drinks) ಎಂಬ ಹೊಸ ಕೆಟಗರಿಗೆ ಸೇರಿಸಲಾಗಿದೆ. ಪಾನೀಯಗಳನ್ನು ಹೆಲ್ತ್‌ ಫುಡ್‌ ಡ್ರಿಂಕ್ಸ್‌ ಕೆಟಗರಿಯಿಂದ ತೆಗೆದು, ಕ್ರಿಯಾತ್ಮಕ ಪೌಷ್ಟಿಕ ಪಾನೀಯಗಳ ಪಟ್ಟಿಗೆ ಸೇರಿಸಬೇಕು. ವೆಬ್‌ಸೈಟ್‌ ಸೇರಿ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲೂ ಇದನ್ನೇ ನಮೂದಿಸಬೇಕು ಎಂಬುದಾಗಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯವು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಹಿಂದುಸ್ತಾನ್‌ ಯುನಿಲಿವರ್‌ ಈ ಕ್ರಮ ತೆಗೆದುಕೊಂಡಿದೆ.

“ಸಚಿವಾಲಯದ ಸೂಚನೆಯಂತೆ ನಾವು ಹೆಲ್ತ್‌ ಫುಡ್‌ ಡ್ರಿಂಕ್ಸ್‌ ಕೆಟಗರಿಯನ್ನು ಕ್ರಿಯಾತ್ಮಕ ಪೌಷ್ಟಿಕ ಪಾನೀಯ ಎಂಬುದಾಗಿ ಬದಲಾಯಿಸಿದ್ದೇವೆ. ಈ ಹೆಸರಿನಿಂದಲೇ ಕರೆಯುವುದು ಸಮಂಜಸ ಎಂಬ ನಿರ್ಧಾರಕ್ಕೆ ಬರಲಾಗಿದೆ. ಹಾಗೆಯೇ, ಹೊಸ ಹೆಸರು ಪಾರ್ದರ್ಶಕವಾಗಿಯೂ ಇದೆ. ಹಾಗಾಗಿ, ಹೊಸ ಹೆಸರನ್ನು ಇಡಲಾಗಿದೆ” ಎಂದು ಹಿಂದುಸ್ತಾನ್‌ ಯುನಿಲಿವರ್‌ನ ಚೀಫ್‌ ಫೈನಾನ್ಶಿಯಲ್‌ ಆಫೀಸರ್‌ ರಿತೇಶ್‌ ತಿವಾರಿ ಮಾಹಿತಿ ನೀಡಿದ್ದಾರೆ. ಇದರಿಂದ ದಾರಿತಪ್ಪಿಸುವ ಜಾಹೀರಾತುಗಳ ತಡೆಯಾಗುವುದರ ಜತೆಗೆ ಗ್ರಾಹಕರಿಗೂ ಗೊಂದಲ ಇರುವುದಿಲ್ಲ ಎಂಬುದು ಸಚಿವಾಲಯದ ಚಿಂತನೆಯಾಗಿದೆ ಎಂದು ತಿಳಿದುಬಂದಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟಗಳ ಕಾಯ್ದೆ ಅಡಿಯಲ್ಲಿ ಹೆಲ್ತ್‌ ಡ್ರಿಂಕ್ಸ್‌ ಎಂಬ ಪದಕ್ಕೆ ಸರಿಯಾದ ವ್ಯಾಖ್ಯಾನ ಸಿಗದ ಕಾರಣ ಹೊಸ ಹೆಸರು ಸೂಚಿಸಲಾಗಿದೆ. ಇದೇ ಕಾರಣಕ್ಕಾಗಿ ಇತ್ತೀಚೆಗೆ ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರವು (FSSAI) ಇತ್ತೀಚೆಗೆ ಎಲ್ಲ ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್‌ಗಳಿಗೆ ಹೆಲ್ತ್‌ ಡ್ರಿಂಕ್ಸ್‌ ಅಥವಾ ಎನರ್ಜಿ ಡ್ರಿಂಕ್ಸ್‌ ಎಂಬ ಕೆಟಗರಿಯನ್ನು ತೆಗೆದುಹಾಕಬೇಕು ಎಂದು ಸೂಚಿಸಿತ್ತು. ಡೇರಿ, ಸಿರೀಲ್‌ ಅಥವಾ ಮಾಲ್ಟ್‌ ಆಧಾರಿತ ಪಾನೀಯಗಳ ಮೇಲಿನ ಲೇಬೆಲ್‌ ತೆಗೆದುಹಾಕಲು ಸೂಚಿಸಿತ್ತು. ಅದರಂತೆ, ಕೆಟಗರಿಯನ್ನು ತೆಗೆದುಹಾಕಲಾಗಿದೆ.

ಇದನ್ನೂ ಓದಿ: MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಗುಣಮಟ್ಟ ತಪಾಸಣೆಗೆ ಸೂಚನೆ

Continue Reading

Lok Sabha Election 2024

Kompella Madhavi Latha: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಆಸ್ತಿ ಎಷ್ಟಿದೆ ನೋಡಿ!

Madhavi Latha: ಬಿಜೆಪಿಯ ಹೈದರಾಬಾದ್ ಅಭ್ಯರ್ಥಿ 221 ಕೋಟಿ ಆಸ್ತಿ ಹೊಂದಿದ್ದು, ತೆಲಂಗಾಣದ ಅತ್ಯಂತ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದಾರೆ. ವ್ಯಾಪಾರಿ ದಂಪತಿ ಮೂವರು ಮಕ್ಕಳನ್ನು ಹೊಂದಿದ್ದು, ಹೆಚ್ಚಿನ ಹಣವನ್ನು ಹೂಡಿಕೆ ಮಾಡಿರುವುದಾಗಿ ಅಫಿಡವಿಟ್ ನಲ್ಲಿ ಘೋಷಿಸಿದ್ದಾರೆ.

VISTARANEWS.COM


on

By

Madhavi Latha
Koo

ಹೈದರಾಬಾದ್: ತೆಲಂಗಾಣದ (Telangana) ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿರುವ ಹೈದರಾಬಾದ್ (Hyderabad) ಲೋಕಸಭಾ (lok sabha) ಕ್ಷೇತ್ರದ ಬಿಜೆಪಿ (bjp) ಅಭ್ಯರ್ಥಿ ಕೊಂಪೆಲ್ಲಾ ಮಾಧವಿ ಲತಾ (Kompella Madhavi Latha) ಅವರ ಕುಟುಂಬದ ಒಟ್ಟು ಆಸ್ತಿ ಮೌಲ್ಯ 221.37 ಕೋಟಿ ರೂ. ಎಂಬುದಾಗಿ ಬುಧವಾರ ನಾಮಪತ್ರ (nomination) ಸಲ್ಲಿಸುವ ವೇಳೆ ಚುನಾವಣಾ ಆಯೋಗಕ್ಕೆ ( Election Commission) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಮಾಧವಿ ಲತಾ ಮತ್ತು ಅವರ ಪತಿ ಕೊಂಪೆಲ್ಲಾ ವಿಶ್ವನಾಥ್ ಇಬ್ಬರೂ ವ್ಯಾಪಾರಿಗಳು. ಅವರ ಮೂವರು ಅವಲಂಬಿತ ಮಕ್ಕಳು, 165.46 ಕೋಟಿ ರೂಪಾಯಿಗಳ ಚರ ಆಸ್ತಿಯನ್ನು ಹೊಂದಿದ್ದಾರೆ ಮತ್ತು ಮಾಧವಿ ಲತಾ ದಂಪತಿ 55.91 ಕೋಟಿ ರೂಪಾಯಿಗಳ ಸ್ಥಿರ ಆಸ್ತಿಯನ್ನು ಹೊಂದಿದ್ದಾರೆ.

ತೆಲಂಗಾಣದ ಅವಳಿ ನಗರವಾದ ಸಿಕಂದರಾಬಾದ್‌ನಲ್ಲಿ ನೆಲೆಸಿರುವ 49 ವರ್ಷದ ಮಾಧವಿ ಲತಾ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡರು. ಮೊದಲ ಬಾರಿಗೆ ಚುನಾವಣೆಯ ಕಣಕ್ಕೆ ಇಳಿದಿದ್ದಾರೆ.

ಇದನ್ನೂ ಓದಿ: Rahul Gandhi: ಶೀಘ್ರವೇ ಅಯೋಧ್ಯೆಗೆ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ; ರಾಮಲಲ್ಲಾನ ದರ್ಶನ!

ಮಾಧವಿ ಲತಾ ಅವರು ಲಿಸ್ಟೆಡ್ ಮತ್ತು ಅನ್ ಲಿಸ್ಟೆಡ್ ಕಂಪನಿಗಳಲ್ಲಿ 25.20 ಕೋಟಿ ಹೂಡಿಕೆ ಸೇರಿದಂತೆ 31.31 ಕೋಟಿ ರೂ.ಗಳ ಚರ ಆಸ್ತಿಯನ್ನು ಹೊಂದಿದ್ದಾರೆ ಎಂದು ಅವರು ಘೋಷಿಸಿದರು.


ವಿರಿಂಚಿ ಲಿಮಿಟೆಡ್‌ನಲ್ಲಿ 7.80 ಕೋಟಿ ರೂಪಾಯಿ ಹೂಡಿಕೆಯನ್ನು ಹೊಂದಿರುವ ಅವರು 3.78 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಹೊಂದಿದ್ದಾರೆ.

ಮಾಧವಿ ಲತಾ ಅವರ ಪತಿ ವಿರಿಂಚಿ ಲಿಮಿಟೆಡ್‌ನಲ್ಲಿ 52.36 ಕೋಟಿ ರೂ. ಮೌಲ್ಯದ ಷೇರುಗಳನ್ನು ಒಳಗೊಂಡಂತೆ 88.31 ಕೋಟಿ ರೂ. ಚರ ಆಸ್ತಿಯನ್ನು ಹೊಂದಿದ್ದಾರೆ. ಅವರ ಮೂವರು ಅವಲಂಬಿತ ಮಕ್ಕಳು ಸಹ 45 ಕೋಟಿ ರೂ. ಗೂ ಹೆಚ್ಚು ಒಟ್ಟು ಚರ ಆಸ್ತಿ ಹೊಂದಿದ್ದಾರೆ. ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು 6.32 ಕೋಟಿ ಸ್ಥಿರಾಸ್ತಿ ಹೊಂದಿದ್ದು, ಪತಿಯ ಸ್ಥಿರಾಸ್ತಿ ಮೌಲ್ಯ 49.59 ಕೋಟಿ ರೂ. ಗಳಾಗಿದೆ.

ಆಸ್ತಿಗಳಲ್ಲಿ ಕೃಷಿಯೇತರ ಭೂಮಿ, ಹೈದರಾಬಾದ್ ಮತ್ತು ಸುತ್ತಮುತ್ತಲಿನ ವಾಣಿಜ್ಯ ಮತ್ತು ವಸತಿ ಕಟ್ಟಡಗಳು ಸೇರಿವೆ.
ಮಾಧವಿ ಲತಾ ಅವರು 90 ಲಕ್ಷ ರೂ., ಅವರ ಪತಿಯು 26.13 ಕೋಟಿ ರೂ. ಇಕ್ವಿಟಿ ಹೊಂದಿದ್ದಾರೆ. 2022-23ರಲ್ಲಿ ಅವರ ಆದಾಯ 3.76 ಲಕ್ಷ ರೂ.ಗಳಾಗಿದ್ದರೆ, 2021-22ರಲ್ಲಿ 1.22 ಕೋಟಿ ರೂ. ಗಳಾಗಿತ್ತು. 2022-23ರಲ್ಲಿ ವಿಶ್ವನಾಥ್ ಅವರ ಆದಾಯ 2.82 ಕೋಟಿ ರೂ. ಗಳಾಗಿದ್ದರೆ, 2021- 22ರಲ್ಲಿ 6.86 ಕೋಟಿ ರೂ.

ಒಂದು ಕ್ರಿಮಿನಲ್ ಕೇಸ್

ಬಿಜೆಪಿ ಅಭ್ಯರ್ಥಿ ಒಂದು ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ. ಕಳೆದ ವಾರ ಆಕೆಯ ವಿರುದ್ಧ ಬೇಗಂ ಬಜಾರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 295-ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದಿ ಅಂಬರ್ ಬಜಾರ್ ವೃತ್ತದಲ್ಲಿರುವ ಮಸೀದಿಯಲ್ಲಿ ಕಾಲ್ಪನಿಕ ಬಾಣದ ಚಿತ್ರ ಬಿಡಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

Continue Reading

ದೇಶ

Kotak Bank: ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಕೊಟಕ್‌ ಬ್ಯಾಂಕ್‌ ಷೇರು ಭಾರಿ ಕುಸಿತ; ಹೂಡಿಕೆದಾರರಿಗೆ ನಷ್ಟ!

Kotak Bank: ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ ವಿತರಿಸುವುದು, ಅವರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸುವುದಕ್ಕೆ ಆರ್‌ಬಿಐ ನಿರ್ಬಂಧ ಹೇರಿರುವ ಕಾರಣ ಹಳೆಯ ಗ್ರಾಹಕರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಆರ್‌ಬಿಐ ತಿಳಿಸಿದೆ. ಆದರೆ, ಆರ್‌ಬಿಐ ನಿರ್ಬಂಧದ ಹಿನ್ನೆಲೆಯಲ್ಲಿ ಗುರುವಾರ ಕೊಟಕ್‌ ಮಹೀಂದ್ರಾ ಬ್ಯಾಂಕ್‌ನ ಷೇರುಗಳ ಮೌಲ್ಯವು ಶೇ.10ರಷ್ಟು ಕುಸಿತ ಕಂಡಿದೆ.

VISTARANEWS.COM


on

Kotak Bank
Koo

ಮುಂಬೈ: ಸುರಕ್ಷತಾ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಹೊಸ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆ ಒದಗಿಸಬಾರದು ಎಂದು ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ (Kotak Mahindra Bank) ಆರ್‌ಬಿಐ ನಿರ್ಬಂಧ ವಿಧಿಸಿದೆ. ಇದರ ಬೆನ್ನಲ್ಲೇ, ಕೊಟಕ್‌ ಮಹೀಂದ್ರಾ ಬ್ಯಾಂಕ್‌ನ ಷೇರುಗಳ (Kotak Bank Shares) ಮೌಲ್ಯವು ಗುರುವಾರ (ಏಪ್ರಿಲ್‌ 25) ಶೇ.10ರಷ್ಟು ಕುಸಿತವಾಗಿದೆ. ಇದರಿಂದ ಹೂಡಿಕೆದಾರರಿಗೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಗುರುವಾರ ಷೇರುಪೇಟೆಯಲ್ಲಿ ವಹಿವಾಟು ಆರಂಭವಾಗುತ್ತಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಷೇರುಗಳ ಮೌಲ್ಯವು ಕುಸಿಯುತ್ತ ಹೋಯಿತು. ಒಟ್ಟು ಶೇ.10ರಷ್ಟು ಮೌಲ್ಯ ಕುಸಿತ ಕಂಡಿದ್ದು, ಬಿಎಸ್‌ಇಯಲ್ಲಿ ಕೊಟಕ್‌ ಬ್ಯಾಂಕ್‌ನ ಒಂದು ಷೇರಿನ ಮೌಲ್ಯವು 1,658.75 ರೂ.ಗೆ ಕುಸಿತವಾಗಿದೆ. ಅಷ್ಟೇ ಅಲ್ಲ, ಆರ್‌ಬಿಐ ನಿರ್ಬಂಧದಿಂದ ಕೊಟಕ್‌ ಮಹಿಂದ್ರಾ ಬ್ಯಾಂಕ್‌ಗೆ ಮುಂದಿನ ದಿನಗಳಲ್ಲಿ ಭಾರಿ ನಷ್ಟವಾಗಲಿದೆ. ಬ್ಯಾಂಕ್‌ ಏಳಿಗೆ, ಹೊಸ ಗ್ರಾಹಕರನ್ನು ಸೆಳೆಯುವಲ್ಲಿಯೂ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯ 35ಎ ಸೆಕ್ಷನ್‌ನ ಅಡಿಯಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ. ಆರ್‌ಬಿಐ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ ಎಂದು ತಿಳಿದುಬಂದಿದೆ. “ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು. ತತ್‌ಕ್ಷಣದಿಂದಲೇ ನಿರ್ಬಂಧಗಳು ಜಾರಿಗೆ ಬರಲಿವೆ” ಎಂದು ಆರ್‌ಬಿಐ ಆದೇಶಿಸಿದೆ.

ಆರ್‌ಬಿಐ ನಿರ್ಬಂಧಕ್ಕೆ ಕಾರಣ ಏನು?

ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯ 35ಎ ಸೆಕ್ಷನ್‌ನ ಅಡಿಯಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ. ಆರ್‌ಬಿಐ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ ಎಂದು ತಿಳಿದುಬಂದಿದೆ. “ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು. ತತ್‌ಕ್ಷಣದಿಂದಲೇ ನಿರ್ಬಂಧಗಳು ಜಾರಿಗೆ ಬರಲಿವೆ” ಎಂದು ಆರ್‌ಬಿಐ ಆದೇಶಿಸಿದೆ.

ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಗ್ರಾಹಕರು ಆನ್‌ಲೈನ್‌ ಮೂಲಕ ವಹಿವಾಟು ನಡೆಸಲು ಬ್ಯಾಂಕ್‌ ಸರಿಯಾದ ಸುರಕ್ಷತೆ ಒದಗಿಸಿಲ್ಲ. 2022 ಹಾಗೂ 2023ರಲ್ಲಿ ಐಟಿ ಪರಿಶೀಲನೆ ಕುರಿತು ಆರ್‌ಬಿಐ ಆತಂಕ ವ್ಯಕ್ತಪಡಿಸಿದರೂ ಸುರಕ್ಷತೆ ನೀಡುವಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ವಿಫಲವಾಗಿದೆ. ಬ್ಯಾಂಕ್‌ನ ಐಟಿ ಮೂಲ ಸೌಕರ್ಯ, ಐಟಿ ನಿರ್ವಹಣೆ, ಪ್ಯಾಚ್‌ ಮತ್ತು ಚೇಂಜ್‌ ಮ್ಯಾನೇಜ್‌ಮೆಂಟ್‌, ಬಳಕೆದಾರರ ಅನುಮತಿ ನಿರ್ವಹಣೆ, ವೆಂಡರ್‌ ರಿಸ್ಕ್‌ ಮ್ಯಾನೇಜ್‌ಮೆಂಟ್, ಡೇಟಾ ಸೆಕ್ಯುರಿಟಿ ಸೇರಿ ಹಲವು ಸುರಕ್ಷತೆಗಳನ್ನು ಒದಗಿಸುವಲ್ಲಿ ಬ್ಯಾಂಕ್‌ ವಿಫಲವಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಇದೇ ಕಾರಣಕ್ಕಾಗಿ ನಿರ್ಬಂಧಗಳನ್ನು ವಿಧಿಸಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Kotak Bank: ಕೊಟಕ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಷೇಧ; ಹಳೆಯ ಗ್ರಾಹಕರಿಗೆ ಏನು ತೊಂದರೆ? ಇಲ್ಲಿದೆ ಮಾಹಿತಿ

Continue Reading
Advertisement
Aircraft Crash
ದೇಶ5 mins ago

Aircraft Crash: ಭಾರತೀಯ ವಾಯುಪಡೆಯ ವಿಮಾನ ಪತನ; ಭಾಗಗಳು ಸುಟ್ಟು ಭಸ್ಮ

Lok Sabha Election 2024 vote for better future and 98 year old woman dies when returning officer arrives at home to cast her vote
ಪ್ರಮುಖ ಸುದ್ದಿ16 mins ago

Lok Sabha Election 2024: ಮತ ಹಾಕಿಸಿಕೊಳ್ಳಲು ಚುನಾವಣಾಧಿಕಾರಿಗಳು ಮನೆಗೆ ಬಂದಾಗಲೇ 98ರ ವೃದ್ಧೆ ಸಾವು!

Horlicks Label
ದೇಶ18 mins ago

Horlicks Label: ಹಾರ್ಲಿಕ್ಸ್‌ ಇನ್ನು ಹೆಲ್ತ್‌ ಡ್ರಿಂಕ್ಸ್‌ ಅಲ್ಲ ಎಂದ ಹಿಂದುಸ್ತಾನ್‌ ಯುನಿಲಿವರ್;‌ ಕಾರಣ ಏನು?

Salaar Movie In star suvarna
ಕಿರುತೆರೆ20 mins ago

Salaar Movie: ಕಿರುತೆರೆಗೆ ಬಂದೇ ಬಿಡ್ತು ಬ್ಲಾಕ್ ಬಸ್ಟರ್ ಸಿನಿಮಾ ‘ಸಲಾರ್’!

Ranbir Kapoor trainer shares transformation Of Ranbir
ಬಾಲಿವುಡ್21 mins ago

Ranbir Kapoor: ಸಖತ್ ಫಿಟ್ ಆ್ಯಂಡ್ ಫೈನ್​ ಆದ ರಣಬೀರ್! ಫೋಟೊ ಶೇರ್‌ ಮಾಡಿದ ಟ್ರೈನರ್‌!

Road Accident in Chamarajanagar
ಚಾಮರಾಜನಗರ31 mins ago

Road Accident : ಶಾಸಕ ಎಆರ್ ಕೃಷ್ಣಮೂರ್ತಿ ಕಾರು ಅಪಘಾತ; ಚಲಿಸುತ್ತಿದ್ದಾಗಲೇ ಕಾರ್‌ ಟೈರ್‌ ಸ್ಫೋಟ

IPL 2024
ಕ್ರೀಡೆ46 mins ago

IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

gold rate today 34
ಚಿನ್ನದ ದರ50 mins ago

Gold Rate Today: ಬಂಗಾರದ ಮಾರುಕಟ್ಟೆಯಲ್ಲಿ ದರ ಇಂದು ತುಸು ಇಳಿಕೆ; 24Kಗೆ ಎಷ್ಟಿದೆ ನೋಡಿ

Lok sabha election 2024
Lok Sabha Election 20241 hour ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

leopard Attack
ಕ್ರೀಡೆ1 hour ago

leopard Attack: ಚಿರತೆ ದಾಳಿ; ಜಿಂಬಾಬ್ವೆ ಮಾಜಿ ಕ್ರಿಕೆಟಿಗನಿಗೆ ತೀವ್ರ ಗಾಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌