Site icon Vistara News

Delhi Liquor Policy: ಆಪ್​ ವಿರುದ್ಧ ಬಿಜೆಪಿ ತೀವ್ರ ಪ್ರತಿಭಟನೆ; ಅರವಿಂದ್​ ಕೇಜ್ರಿವಾಲ್​ ಕಳ್ಳ ಎಂದು ಘೋಷಣೆ

BJP Protest Against Arvind Kejriwal over Delhi Liquor Policy

#image_title

ನವ ದೆಹಲಿ: ಇಂದು ದೆಹಲಿಯಲ್ಲಿ ಬಿಜೆಪಿ ಕಾರ್ಯಕರ್ತರು ಅಲ್ಲಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಅಬಕಾರಿ ನೀತಿ (Delhi Liquor Policy)ಅಕ್ರಮದಲ್ಲಿ ಆಮ್​ ಆದ್ಮಿ ಪಕ್ಷ ಕೋಟ್ಯಂತರ ರೂಪಾಯಿ ಕೊಳ್ಳೆ ಹೊಡೆದಿದೆ ಎಂದು ಆರೋಪಿಸಿದ ಬಿಜೆಪಿ ಮುಖಂಡರು/ಕಾರ್ಯಕರ್ತರು, ಇಂದು ಆಪ್​ ಪ್ರಧಾನ ಕಚೇರಿ ಎದುರಲ್ಲೇ ‘ಅರವಿಂದ್ ಕೇಜ್ರಿವಾಲ್​ ಕಳ್ಳ’ ಎಂದು ದೊಡ್ಡದಾಗಿ ಕೂಗುತ್ತ ಪ್ರತಿಭಟನೆ ನಡೆಸಿದರು. ಪೊಲೀಸರು ಹಾಕಿದ್ದ ಬ್ಯಾರಿಕೇಡ್​​ಗಳನ್ನೆಲ್ಲ ಹಾರಿ ಅವ್ಯವಸ್ಥೆ ಸೃಷ್ಟಿಸಿದರು.

ದೆಹಲಿಯಲ್ಲಿ ಆಪ್​ ಸರ್ಕಾರ 2021-22ನೇ ಸಾಲಿನಲ್ಲಿ ನೂತನ ಅಬಕಾರಿ ನೀತಿಯನ್ನು ರಚಿಸಿತ್ತು. ಅದರಡಿಯಲ್ಲಿ ಸುಮಾರು 849 ಖಾಸಗಿ ವ್ಯಾಪಾರಿಗಳಿಗೆ ಪರವಾನಗಿ ನೀಡಲಾಗಿತ್ತು. ಹೀಗೆ ಪರವಾನಗಿ ನೀಡುವಾಗ ದೊಡ್ಡಮಟ್ಟದ ಅವ್ಯವಹಾರ ನಡೆದಿದೆ. ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಆಗಿದೆ ಎಂದು ದೆಹಲಿ ಲೆಫ್ಟಿನೆಂಟ್​ ಗವರ್ನರ್​ ವಿ.ಕೆ.ಸಕ್ಸೇನಾ ಅವರು ಆರೋಪಿಸಿದ್ದರು. ಹಾಗೇ, ಸಿಬಿಐ ತನಿಖೆಗೆ ವಹಿಸುವಂತೆ ಕೇಂದ್ರ ಗೃಹ ಇಲಾಖೆಗೆ ಪತ್ರವನ್ನೂ ಬರೆದಿದ್ದರು. ಅಬಕಾರಿ ಇಲಾಖೆ ಉಸ್ತುವಾರಿ ಹೊತ್ತಿದ್ದ ಮನೀಶ್​ ಸಿಸೋಡಿಯಾ ಮೇಲೆಯೇ ಅವರು ನೇರ ಆರೋಪ ಮಾಡಿದ್ದರು. ಅದರ ಬೆನ್ನಲ್ಲೇ ಈ ಕೇಸ್​​ನ್ನು ಇ.ಡಿ. ಮತ್ತು ಸಿಬಿಐಗಳು ತನಿಖೆಗೆ ಕೈಗೆತ್ತಿಕೊಂಡಿವೆ. ಮನೀಶ್​ ಸಿಸೋಡಿಯಾ ಮನೆ, ಕಚೇರಿಗಳ ಮೇಲೆ ತನಿಖಾದಳಗಳ ದಾಳಿಯಾಗಿದೆ. ಅವರ ಆಪ್ತರು, ಹಲವು ಮದ್ಯದ ವ್ಯಾಪಾರಿಗಳ ಬಂಧನವೂ ಆಗಿದೆ.

ಇದನ್ನೂ ಓದಿ: Kejriwal Government | ಅಬಕಾರಿ ನೀತಿ ಹಗರಣ: ವಕೀಲರಿಗೆಂದೇ 25 ಕೋಟಿಗೂ ಹೆಚ್ಚು ವೆಚ್ಚ ಮಾಡಿದ ಕೇಜ್ರಿವಾಲ್‌ ಸರ್ಕಾರ!

ದೆಹಲಿ ಅಬಕಾರಿ ನೀತಿ ಅನುಷ್ಠಾನದ ವೇಳೆ ಭ್ರಷ್ಟಾಚಾರ ಆಗಿದೆ ಎಂದು ಇ.ಡಿ. ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದೆ. ಹಾಗೇ, ಈ ಯೋಜನೆಯಿಂದ ಅಕ್ರಮವಾಗಿ ಸಂಗ್ರಹವಾಗಿದ್ದ ಸುಮಾರು 100 ಕೋಟಿ ರೂಪಾಯಿಯನ್ನು ಆಮ್ ಆದ್ಮಿ ಪಕ್ಷ ಗೋವಾ ವಿಧಾನಸಭೆ ಚುನಾವಣೆಗೆ ಬಳಸಿಕೊಂಡಿದೆ ಎಂದೂ ಹೇಳಿದೆ. ಇ.ಡಿ.ಯ ಈ ವರದಿ ಬಹಿರಂಗವಾದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಇಳಿದಿದ್ದಾರೆ. ಇಷ್ಟು ದೊಡ್ಡಮಟ್ಟದ ಭ್ರಷ್ಟಾಚಾರ ಎಸಗಿದ ಅರವಿಂದ್ ಕೇಜ್ರಿವಾಲ್​ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ಆಗ್ರಹಿಸುತ್ತಿದ್ದಾರೆ.

Exit mobile version