Site icon Vistara News

Lok Sabha Pre Poll Survey: ಕರ್ನಾಟಕದಲ್ಲಿ ಮೋದಿ ಮ್ಯಾಜಿಕ್, ಬಿಜೆಪಿಗೆ 24 ಸೀಟ್ ಲಕ್! ಕಾಂಗ್ರೆಸ್‌ಗೆ ನಾಲ್ಕೇ ಸ್ಥಾನ!

BJP will won 24 Seats in Karnataka Says Lok Sabha Pre Poll Survey

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ (Lok Sabha Election) ದಿನಗಣನೆ ಶುರುವಾಗಿರುವ ಹೊತ್ತಿನಲ್ಲೇ ಚುನಾವಣಾ ಪೂರ್ವ ಸಮೀಕ್ಷೆಗಳ ಫಲಿತಾಂಶವು (Lok Sabha Pre Poll Survey) ಹೊರ ಬಿದ್ದಿದ್ದು, ಬಿಜೆಪಿ (BJP Party) ನೇತೃತ್ವದ ಎನ್‌ಡಿಎ (NDA) ಮೂರನೇ ಬಾರಿಗೆ ಅಧಿಕಾರಕ್ಕೇರುವುದು ಪಕ್ಕಾ ಆಗಿದೆ. ಇನ್ನು ಕಾಂಗ್ರೆಸ್ (Congress Party) ನೇತೃತ್ವದ ಇಂಡಿಯಾ ಕೂಟಕ್ಕೆ ಭಾರೀ ಸೋಲಾಗಲಿದೆ(India Bloc). ಮೂಡ್ ಆಫ್ ದಿ ನೇಷನ್ ಒಪಿನಿಯನ್ ಪೋಲ್ ಸಮೀಕ್ಷೆಯ ಪ್ರಕಾರ, ಕರ್ನಾಟಕ (Karnataka) 28 ಲೋಕಸಭೆ ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟವು ಕೇವಲ 4 ಸ್ಥಾನಗಳಿಗೆ ತೃಪ್ತಿ ಪಡಲಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಶೇ.51 ಮತಗಳೊಂದಿಗೆ 25 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಈ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ತಲಾ ಒಂದು ಸ್ಥಾನವನ್ನು ಪಡೆದುಕೊಂಡಿವೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಕಳೆದುಕೊಳ್ಳಲಿರುವ ಬಿಜೆಪಿ 24 ಸ್ಥಾನವನ್ನು ಉಳಿಸಿಕೊಳ್ಳಲಿದೆ.

ವಿಶೇಷ ಎಂದರೆ, ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಹಳೆ ಮೈಸೂರು ಕರ್ನಾಟಕದಲ್ಲಿ ಸಾಕಷ್ಟು ಪ್ರಾಬಲ್ಯವನ್ನು ಹೊಂದಿರುವ ಜೆಡಿಎಸ್ ನಾಲ್ಕೈದು ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆಯಾದರೂ, ಇನ್ನೂ ಸೀಟು ಹಂಚಿಕೆಯಾಗಿಲ್ಲ. ಹಾಗಾಗಿ, ಯಾವ ಸ್ಥಾನಗಳಲ್ಲಿ ಜೆಡಿಎಸ್ ಗೆಲ್ಲಬಹುದು ಎಂಬ ನಿಖರ ಮಾಹಿತಿ ಇಲ್ಲ.

ವಿಧಾನಸಭೆ ಗೆದ್ದಿದ್ದ ಕಾಂಗ್ರೆಸ್‌ಗೆ ಹಿನ್ನಡೆ

2023ರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದಿದ್ದ ಕಾಂಗ್ರೆಸ್ ಪಕ್ಷಕ್ಕೆ 2024ರ ಲೋಕಸಭೆ ಚುನಾವಣೆಯು ನಿರಾಸೆ ಮೂಡಲಿದೆ ಎಂಬುದು ಸಮೀಕ್ಷೆಗಳ ಸಾರವಾಗಿದೆ. 2019ರ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನವನ್ನು ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 15ರಿಂದ 20 ಸ್ಥಾನಗಳನ್ನು ಗೆಲ್ಲುವ ಪಣ ತೊಟ್ಟಿದೆ. ಆದರೆ, ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್‌ಗೆ ಕೇವಲ ನಾಲ್ಕು ಸ್ಥಾನಗಳು ಸಿಗುವ ಸಾಧ್ಯತೆ ಇದೆ.

ಎನ್‌ಡಿಎ ಪರ ಜನರ ಒಲವೇಕೆ?

1)ಪ್ರಧಾನಿ ನರೇಂದ್ರ ಮೋದಿ ಪ್ರಬಲ ನಾಯಕತ್ವ
2) ಭ್ರಷ್ಟಾಚಾರ ರಹಿತ 10 ವರ್ಷಗಳ ಆಡಳಿತ
3) ರಾಹುಲ್‌ಗಾಂಧಿ ವಿಫಲ ನಾಯಕತ್ವಕ್ಕೆ ಕಾಂಗ್ರೆಸ್‌ ಮನ್ನಣೆ
4) 28 ಪಕ್ಷಗಳ I.N.D.I.A ಮೈತ್ರಿಕೂಟ ಛಿದ್ರವಾಗಿದ್ದು
5) ದೇಶದಲ್ಲಿ ಪ್ರಬಲ ವಿರೋಧ ಪಕ್ಷದ ಕೊರತೆ
6) ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ
7) ಭಾರಿ ವೇಗದಲ್ಲಿ ರಸ್ತೆ, ರೈಲ್ವೆ ಸೌಕರ್ಯ ಅಭಿವೃದ್ದಿ
8) ವಿಶ್ವದಲ್ಲೇ ಅತಿ ವೇಗವಾಗಿ ಆರ್ಥಿಕ ಬೆಳವಣಿಗೆ
9) ಮೋದಿ ಬಗ್ಗೆ ವಿಶ್ವದ ನಾಯಕರಿಂದ ಪ್ರಶಂಸೆ
10) ಭಾರತದ ಬಗ್ಗೆ ವಿಶ್ವ ನೋಡುವ ನೋಟ ಬದಲಾವಣೆ
11) ಮೇಕ್‌ ಇನ್‌ ಇಂಡಿಯಾ, ಆತ್ಮನಿರ್ಭರ ಭಾರತದಂತಹ ಯೋಜನೆಗಳು
12) ರೈತರಿಗೆ, ಮಹಿಳೆಯರಿಗೆ, ವೃದ್ದರಿಗೆ ಕೇಂದ್ರ ಯೋಜನೆಗಳ ನೇರ ಲಾಭ
13) ಬಿಜೆಪಿ ಬಹುಸಂಖ್ಯಾತ ಹಿಂದುತ್ವದ ಪರ, ಕಾಂಗ್ರೆಸ್‌ ಅಲ್ಪಸಂಖ್ಯಾತರ ಓಲೈಕೆ
13) 2047ರಲ್ಲಿ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಬದಲಾವಣೆ ಭರವಸೆ

ಈ ಸುದ್ದಿಯನ್ನೂ ಓದಿ: INDIA Bloc: ನಿತೀಶ್ ಕುಮಾರ್ ಇಂಡಿಯಾ ಕೂಟ ತೊರೆಯಲು ಅಸಲಿ ಕಾರಣ ಇದು!

Exit mobile version