Site icon Vistara News

Boat tragedy | ಗಂಗಾ ನದಿಯಲ್ಲಿ ದೋಣಿ ಮಗುಚಿ ದುರಂತ, 10 ಮಂದಿ ಕಾರ್ಮಿಕರು ನಾಪತ್ತೆ

ಪಟನಾ: ಪಟನಾ ಸಮೀಪದ ದಾನಾಪುರದಲ್ಲಿ ಗಂಗಾನದಿಯಲ್ಲಿ ದೋಣಿ ದುರಂತ ಸಂಭವಿಸಿದೆ. ೫೫ ಮಂದಿ ಪ್ರಯಾಣಿಸುತ್ತಿದ್ದ ದೋಣಿ ನಡು ನೀರಿನಲ್ಲಿ ಮಗುಚಿದ್ದು, ೧೦ ಮಂದಿ ನಾಪತ್ತೆಯಾಗಿದ್ದಾರೆ.

ದಾನಾಪುರದ ಶಾಪುರ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬರುವ ನದಿ ಭಾಗದಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸರ ಪ್ರಕಾರ, ದೋಣಿಯಲ್ಲಿ ೫೦-೫೪ ಮಂದಿ ಪ್ರಯಾಣಿಸುತ್ತಿದ್ದರು. ಇವರಲ್ಲಿ ೧೦ ಮಂದಿ ನೀರುಪಾಲಾಗಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ.

ಕಾರ್ಮಿಕರು ತಮ್ಮ ಕೆಲಸದ ಸ್ಥಳದಿಂದ ಮನೆಗೆ ಮರಳುತ್ತಿದ್ದ ವೇಳೆ ಈ ದುರಂತ ನಡೆದಿದೆ ಎನ್ನಲಾಗಿದೆ. ಹೆಚ್ಚುವರಿ ಬೋಟ್‌ಗಳು, ಎನ್‌ಡಿಆರ್‌ಎಫ್‌ ಟೀಮ್‌ಗಳನ್ನು ರಕ್ಷಣಾ ಕಾರ್ಯಾಚರಣೆಗೆ ಇಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ.

ಇದನ್ನೂ ಓದಿ| ಉತ್ತರ ಪ್ರದೇಶದಲ್ಲಿ ಯಮುನಾ ನದಿಯಲ್ಲಿ ಮುಳುಗಿದ ದೋಣಿ; 20 ಮಂದಿ ದುರ್ಮರಣ 

Exit mobile version