Bomb Threat: ಬೆಂಗಳೂರು ಸ್ಫೋಟ ಬೆನ್ನಲ್ಲೇ ಶಾಲೆಗಳಿಗೆ ಬಾಂಬ್‌ ಬೆದರಿಕೆ ಕರೆ - Vistara News

ದೇಶ

Bomb Threat: ಬೆಂಗಳೂರು ಸ್ಫೋಟ ಬೆನ್ನಲ್ಲೇ ಶಾಲೆಗಳಿಗೆ ಬಾಂಬ್‌ ಬೆದರಿಕೆ ಕರೆ

Bomb Threat: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದ ಕೆಲವೇ ದಿನಗಳಲ್ಲಿ ತಮಿಳುನಾಡಿನ ಎರಡು ಶಾಲೆಗಳಿಗೆ ಬಾಂಬ್‌ ಬೆದರಿಕೆ ಕರೆಗಳು ಬಂದಿದ್ದು ಆತಂಕ ಮೂಡಿಸಿದೆ.

VISTARANEWS.COM


on

threat call
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe)ಯಲ್ಲಿ ಬಾಂಬ್‌ ಸ್ಫೋಟ (Blast in Bengaluru) ಸಂಭವಿಸಿದ ಕೆಲವೇ ದಿನಗಳಲ್ಲಿ ತಮಿಳುನಾಡಿನ ಎರಡು ಶಾಲೆಗಳಿಗೆ ಬಾಂಬ್‌ ಬೆದರಿಕೆ ಕರೆಗಳು ಬಂದಿದ್ದು ಆತಂಕ ಮೂಡಿಸಿದೆ (Bomb Threat). ಕೊಯಮತ್ತೂರಿನ ಪಿಎಸ್ ಬಿಬಿ ಮಿಲೇನಿಯಮ್ (PSBB Millennium School) ಮತ್ತು ಕಾಂಚೀಪುರಂ ಜಿಲ್ಲೆಯ ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಪರಿಶೀಲನೆ ವೇಳೆ ಯಾವುದೇ ಸ್ಫೋಟಕ ವಸ್ತು ಕಂಡು ಬಂದಿಲ್ಲ.

ಘಟನೆಯ ವಿವರ

ಪಿಎಸ್ ಬಿಬಿ ಮಿಲೇನಿಯಂ ಶಾಲೆಗೆ ಭಾನುವಾರ (ಮಾರ್ಚ್‌ 3) ರಾತ್ರಿ ಬಾಂಬ್‌ ಬೆದರಿಕೆಯ ಇ ಮೇಲ್ ಬಂದಿದ್ದರೆ, ಸೋಮವಾರ (ಇಂದು) ಬೆಳಗ್ಗೆ ಎರಡನೇ ಶಾಲೆಗೆ ಬೆದರಿಕೆ ಕರೆ ಬಂದಿದೆ. ಕೂಡಲೇ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ಶಾಲೆಗಳಿಗೆ ತೆರಳಿ ತನಿಖೆ ಪ್ರಾರಂಭಿಸಿದರು. ಆದರೆ ಯಾವುದೇ ಸ್ಫೋಟಕ ಕಂಡು ಬಂದಿಲ್ಲ. ಹೀಗಾಗಿ ಇದೊಂದು ಹುಸಿ ಕರೆ ಎಂದು ಅಧಿಕಾರಿಗಳು ನಿರ್ಧರಿಸಿದ್ದು, ಇಮೇಲ್ ಕಳುಹಿಸಿದ ಮತ್ತು ಸುಳ್ಳು ಕರೆ ಮಾಡಿದವರನ್ನು ಪತ್ತೆ ಹಚ್ಚಲು ತನಿಖೆ ಪ್ರಾರಂಭಿಸಲಾಗಿದೆ.

ಸದ್ಯ 11ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಪೊಲೀಸರು ಶಾಲೆಗಳಿಗೆ ಹೆಚ್ಚಿನ ಭದ್ರತೆ ಒದಗಿಸಿದ್ದಾರೆ. ಕೂಲಂಕುಷವಾಗಿ ಪರಿಶೀಲಿಸದೆ ಯಾರನ್ನೂ ಆವರಣದೊಳಗೆ ಪ್ರವೇಶಿಸಲು ಅನುಮತಿ ನೀಡಿಲ್ಲ.

ಕಳೆದ ತಿಂಗಳೂ ಬಾಂಬ್‌ ಬೆದರಿಕೆ ಕರೆ ಬಂದಿತ್ತು

ತಿಂಗಳ ಅಂತರದಲ್ಲಿ ತಮಿಳುನಾಡಿನ ಶಾಲೆಗಳು ಬಾಂಬ್‌ ಬೆದರಿಕೆ ಕರೆ ಸ್ವೀಕರಿಸುವುದು ಇದು ಎರಡನೇ ಬಾರಿ. ಫೆಬ್ರವರಿ 8ರಂದು ಗ್ರೇಟರ್ ಚೆನ್ನೈ ಪೊಲೀಸ್ ವ್ಯಾಪ್ತಿಯ 13 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಲಾಗಿತ್ತು. ಪ್ಯಾರಿಸ್ ಕಾರ್ನರ್, ಅಣ್ಣಾ ನಗರ, ಗೋಪಾಲಪುರಂ, ರಾಜಾ ಅಣ್ಣಾಮಲೈಪುರಂ, ನಂದಂಬಕ್ಕಂ ಮತ್ತು ರಾಯಪೆಟ್ಟಾದ ಶಾಲೆಗಳಿಗೆ ಈ ಬೆದರಿಕೆ ಬಂದಿತ್ತು. ಕೂಡಲೇ ಕಾರ್ಯ ಪ್ರವೃತ್ತರಾಗಿದ್ದ ಪೊಲೀಸರು ಮತ್ತು ಬಾಂಬ್‌ ನಿಷ್ಕ್ರೀಯ ದಳದ ಸಿಬ್ಬಂದಿ ಎಲ್ಲ ಶಾಲೆಗಳಲ್ಲಿ ವ್ಯಾಪಕ ಶೋಧ ಕಾರ್ಯ ನಡೆಸಿದ್ದರು. ಯಾವುದೇ ಬಾಂಬ್ ಕಂಡು ಬಂದಿರಲಿಲ್ಲ. ನಂತರ ಪೊಲೀಸರು ಇವು ಹುಸಿ ಇಮೇಲ್‌ ಎಂದು ನಿರ್ಧರಿಸಿ ತನಿಖೆ ಆರಂಭಿಸಿದ್ದರು.

ಕುಕ್ಕರ್‌ ಬಾಂಬ್‌ ಸ್ಫೋಟಕ್ಕೆ ಸಾಮ್ಯತೆ ಇದೆಯೇ ?

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಸಂಭವಿಸಿ 70 ಗಂಟೆಗಳೇ ಕಳೆದಿವೆ. ರಾಜ್ಯ ಪೊಲೀಸರ ಹಲವಾರು ತಂಡಗಳು ಸಿಸಿಟಿವಿ ಫೂಟೇಜ್‌ ಸೇರಿದಂತೆ ಎಲ್ಲ ದಿಕ್ಕುಗಳಲ್ಲೂ ತನಿಖೆ ನಡೆಯುತ್ತಿದೆ. ಈ ನಡುವೆ ರಾಜ್ಯ ಸರ್ಕಾರ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ.

ಇದನ್ನೂ ಓದಿ: Blast In Bangalore : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಎನ್ಐಎಗೆ

ಇದರ ನಡುವೆ ಮಾರ್ಚ್‌ 1ರಂದು ಮಧ್ಯಾಹ್ನ 12.55ರ ಹೊತ್ತಿಗೆ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟಕ್ಕೂ 2022ರ ನವೆಂಬರ್‌ 19ರಂದು ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಏನಾದರೂ ಸ್ವಾಮ್ಯತೆ ಇದೆಯೇ ಎನ್ನುವ ಚರ್ಚೆ ನಡೆದಿದೆ. ರಾಜ್ಯ ಸರ್ಕಾರ ಅದಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದರೂ ಪೊಲೀಸರು ಈ ಸಂಬಂಧದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Amit Shah: ನಿಯಂತ್ರಣ ಕಳೆದುಕೊಂಡ ಅಮಿತ್‌ ಶಾ ಇದ್ದ ಹೆಲಿಕಾಪ್ಟರ್;‌ ಸ್ವಲ್ಪದರಲ್ಲೇ ಪಾರಾದ ವಿಡಿಯೊ ಇಲ್ಲಿದೆ

Amit Shah: ಬಿಹಾರದಲ್ಲಿ ಅಮಿತ್ ಶಾ ಅವರು ಚುನಾವಣಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಸಮಾವೇಶದ ಬಳಿಕ ಅವರು ತೆರಳುತ್ತಿದ್ದ ಹೆಲಿಕಾಪ್ಟರ್‌ ಟೇಕ್‌ಆಫ್‌ ಆಗುತ್ತಲೇ ನಿಯಂತ್ರಣ ಕಳೆದುಕೊಂಡಿತ್ತು. ಈ ವಿಡಿಯೊ ಭಾರಿ ವೈರಲ್‌ ಆಗುತ್ತಲೇ, ಯಾವುದೇ ತೊಂದರೆಯಾಗಿಲ್ಲ ಎಂಬುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

VISTARANEWS.COM


on

Amit Shah
Koo

ಪಟನಾ: ಬಿಹಾರದ ಬೆಗುಸರಾಯ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರಿದ್ದ ಹೆಲಿಕಾಪ್ಟರ್‌ ನಿಯಂತ್ರಣ ಕಳೆದುಕೊಂಡಿದ್ದು, ಅವರು ಸ್ವಲ್ಪದರಲ್ಲಿಯೇ ಪಾರಾಗಿದ್ದಾರೆ. ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಮಿತ್‌ ಶಾ ಅವರು ಬಿಹಾರದಲ್ಲಿ ರ‍್ಯಾಲಿ ನಡೆಸಿ, ಬೆಗುಸರಾಯ್‌ನಿಂದ ತೆರಳುವ ವೇಳೆ ಹೆಲಿಕಾಪ್ಟರ್‌ ನಿಯಂತ್ರಣ ಕಳೆದುಕೊಂಡಿದೆ. ಅಮಿತ್‌ ಶಾ ಅವರಿದ್ದ ಹೆಲಿಕಾಪ್ಟರ್‌ ಇನ್ನೇನು ಟೇಕ್ಆಫ್‌ ಆಗಬೇಕು ಎನ್ನುವಷ್ಟರಲ್ಲಿಯೇ ಅದು ನಿಯಂತ್ರಣ ಕಳೆದುಕೊಡಿದೆ ಎಂದು ತಿಳಿದುಬಂದಿದೆ.

ಅಮಿತ್‌ ಶಾ ಅವರಿದ್ದ ಹೆಲಿಕಾಪ್ಟರ್‌ ಮೊದಲು ಟೇಕ್‌ಆಫ್‌ ಆಗಿದೆ. ಭೂಮಿಯಿಂದ ಕೆಲವೇ ಅಡಿ ಮೇಲೆ ಹೋಗಿ, ಬಲಕ್ಕೆ ತಿರುಗುತ್ತಲೇ ನಿಯಂತ್ರಣ ಕಳೆದುಕೊಂಡಿದೆ. ಹೆಲಿಕಾಪ್ಟರ್‌ ಮೆಲ್ಲಗೆ ಅಲುಗಾಡಿದ ದೃಶ್ಯಗಳು ಕೂಡ ವಿಡಿಯೊದಲ್ಲಿ ಸೆರೆಯಾಗಿವೆ. ಇನ್ನೇನು ಹೆಲಿಕಾಪ್ಟರ್‌ ನಿಯಂತ್ರಣ ಕಳೆದುಕೊಂಡಿತು ಎನ್ನುವಷ್ಟರಲ್ಲೇ ಅದು ಸರಿಯಾದ ದಿಕ್ಕಿಗೆ ಹಾರಾಟ ಆರಂಭಿಸಿದೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಜನ ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ಅಮಿತ್‌ ಶಾ ಅವರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.

ಸರ್ಕಾರ ಹೇಳುವುದೇನು?

ಅಮಿತ್‌ ಶಾ ಅವರಿದ್ದ ಹೆಲಿಕಾಪ್ಟರ್‌ ನಿಯಂತ್ರಣ ತಪ್ಪಿರುವ ಕುರಿತ ವಿಡಿಯೊ ವೈರಲ್‌ ಆಗುತ್ತಲೇ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. “ಹೆಲಿಕಾಪ್ಟರ್‌ ಸುರಕ್ಷಿತವಾಗಿಯೇ ಹಾರಾಟ ನಡೆಸಿದೆ. ಯಾವುದೇ ತಾಂತ್ರಿಕ ದೋಷ ಕಾಣಿಸಿಕೊಂಡಿಲ್ಲ” ಎಂಬುದಾಗಿ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಆದರೂ, ಹೆಲಿಕಾಪ್ಟರ್‌ ಸುಗಮವಾಗಿ ಹಾರಾಟ ಆರಂಭಿಸದ ದೃಶ್ಯವು ಸೆರೆಯಾದ ಕಾರಣ ಜನ ಆತಂಕ ವ್ಯಕ್ತಪಡಿಸಿದ್ದರು.

ಬಿಹಾರದಲ್ಲಿ ಬಿಜೆಪಿ, ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಹಾಗೂ ಚಿರಾಗ್‌ ಪಾಸ್ವಾನ್‌ ನೇತೃತ್ವದ ಎಲ್‌ಜೆಪಿ (ರಾಮ್‌ ವಿಲಾಸ್‌ ಪಾಸ್ವಾನ್)‌ ಮೈತ್ರಿ ಮಾಡಿಕೊಂಡಿವೆ. ಬಿಹಾರದ ಒಟ್ಟು 40 ಕ್ಷೇತ್ರಗಳ ಪೈಕಿ ಬಿಜೆಪಿ 17, ಜೆಡಿಯು 16, ಎಲ್‌ಜೆಪಿ 5, ಎನ್‌ಡಿಎ ಮೈತ್ರಿಕೂಟದ ಹಿಂದುಸ್ತಾನಿ ಅವಾಮ್‌ ಮೋರ್ಚಾ ಹಾಗೂ ಆರ್‌ಎಲ್‌ಡಿ ತಲಾ 1 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಇಳಿದಿವೆ. ಮೊದಲ ಹಾಗೂ ಎರಡನೇ ಹಂತದಲ್ಲಿ 9 ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, ಉಳಿದ 31 ಕ್ಷೇತ್ರಗಳ ಮತದಾನ ಬಾಕಿ ಇದೆ. ಹಾಗಾಗಿ, ನರೇಂದ್ರ ಮೋದಿ, ಅಮಿತ್‌ ಶಾ ಸೇರಿ ಹಲವು ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ: Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Continue Reading

Latest

Politicians Scandals : ದೇಶದ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಲೈಂಗಿಕ ಹಗರಣಗಳಿವು!

Politicians Scandals: ರಾಜಕೀಯ ನಾಯಕರ ಮೇಲೆ ಆರೋಪಗಳು ಕೇಳಿ ಬರುವುದು ಸಾಮಾನ್ಯ. ಆದರೆ ಲೈಂಗಿಕ ಕಿರುಕುಳದ ಆರೋಪವು ಹಲವಾರು ಜನ ನಾಯಕರ ರಾಜಕೀಯ ಜೀವನವನ್ನು ತತ್ತರಿಸುವಂತೆ ಮಾಡಿತ್ತು. ಇದರಲ್ಲಿ ಪ್ರಮುಖ ಪ್ರಕರಣಗಳ ಹಿನ್ನೋಟ ಇಲ್ಲಿದೆ.

VISTARANEWS.COM


on

By

Politicians Scandals
Koo

ನವದೆಹಲಿ: ರಾಜಕಾರಣದಲ್ಲಿ (politics) ಆರೋಪ, ಪ್ರತ್ಯಾರೋಪಗಳು (Politicians Scandals) ಸಾಮಾನ್ಯ. ಕೆಲವೊಮ್ಮೆ ಈ ಆರೋಪಗಳು ಎಷ್ಟು ಗಂಭೀರವಾಗಿರುತ್ತದೆ ಎಂದರೆ ರಾಜಕಾರಣಿಗಳ ರಾಜಕೀಯ ಭವಿಷ್ಯವನ್ನೇ ಬುಡಮೇಲು ಮಾಡಿ ಬಿಡುತ್ತವೆ. ಇಂತಹ ಆರೋಪಗಳಲ್ಲಿ ಮುಖ್ಯವಾದದದ್ದು ಲೈಂಗಿಕ ಹಗರಣಗಳು.

ಆಕ್ಷೇಪಾರ್ಹ ಸಿಡಿಗಾಗಿ (CD case) ಆಪ್ ನ (AAP) ಸಚಿವ ಸಂಪುಟದಲ್ಲಿ ಮಕ್ಕಳ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯದ ಸಚಿವರಾಗಿದ್ದ ಸಂದೀಪ್ ಕುಮಾರ್ (sundeep kumar) ಅವರನ್ನು ದೆಹಲಿ (delhi) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 2016ರಲ್ಲಿ ಸಚಿವ ಸಂಪುಟದಿಂದ ವಜಾಗೊಳಿಸಿದ್ದರು. ಲೈಂಗಿಕ ಹಗರಣದಿಂದಾಗಿ ರಾಜಕೀಯ ಜೀವನ ತತ್ತರಿಸಿ ಹೋದ ದೊಡ್ಡ ರಾಜಕಾರಣಿ ಇವರು ಮೊದಲೇನಲ್ಲ. ಲೈಂಗಿಕ ಹಗರಣ ಅನೇಕ ರಾಜಕಾರಣಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು. ಭಾರತೀಯ ರಾಜಕೀಯವನ್ನು ಅಲುಗಾಡಿಸಿರುವ 15 ಪ್ರಮುಖ ಲೈಂಗಿಕ ಹಗರಣಗಳ ಪಟ್ಟಿ ಇಲ್ಲಿದೆ.

ಇದನ್ನೂ ಓದಿ: PM Narendra Modi: ಸಂಪತ್ತು ಮರುಹಂಚಿಕೆಯ ರಾಹುಲ್ ಗಾಂಧಿ ಐಡಿಯಾ ನಗರ ನಕ್ಸಲ್ ಚಿಂತನೆ: ಪಿಎಂ ಮೋದಿ


ರಾಘವಜಿ ಲಖಂಸಿ ಸವಲಾ

2013ರಲ್ಲಿ ಮಧ್ಯಪ್ರದೇಶದ ಹಣಕಾಸು ಸಚಿವ ರಾಘವಜಿ ಲಖಂಸಿ ಸವಾಲಾ ವಿರುದ್ಧ ಮನೆಕೆಲಸಗಾರನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿತ್ತು. ಕಾಯಂ ಸರ್ಕಾರಿ ನೌಕರಿ ಕೊಡಿಸುವ ಆಮಿಷವೊಡ್ಡಿ ಸಚಿವರು ತನಗೆ ಕಿರುಕುಳ ನೀಡಿರುವುದಾಗಿ ಸಂತ್ರಸ್ತ ವ್ಯಕ್ತಿ ಆರೋಪಿಸಿದ್ದ. ಆಗ ರಾಘವಜಿಗೆ 79 ವರ್ಷ. ಸಿಡಿ ಹೊರಬಿದ್ದ ಕೂಡಲೇ ರಾಘವಜಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.

ಬಾಬುಲಾಲ್ ನಗರ್

2013ರಲ್ಲಿ ಜೈಪುರದ ಮಹಿಳೆಯೊಬ್ಬರು ರಾಜಸ್ಥಾನದ ಮಾಜಿ ಸಚಿವ ಬಾಬುಲಾಲ್ ನಗರ್ ವಿರುದ್ಧ ಲೈಂಗಿಕವಾಗಿ ಶೋಷಣೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಸಚಿವರು ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಸಚಿವರ ವಿರುದ್ಧ ಬೆದರಿಕೆ ಆರೋಪವೂ ಕೇಳಿ ಬಂದಿತ್ತು. ಈ ಆರೋಪಗಳ ಹಿನ್ನೆಲೆಯಲ್ಲಿ ನಾಗರ್ ರಾಜೀನಾಮೆ ನೀಡಬೇಕಾಯಿತು.

ಗೋಪಾಲ್ ಕಾಂಡಾ

ಗಗನಸಖಿ ಗೀತಿಕಾ ಶರ್ಮಾ ಅವರು ಹರಿಯಾಣದ ಮಾಜಿ ಸಚಿವ ಗೋಪಾಲ್‌ ಕಾಂಡಾ ಅವರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಗೀತಿಕಾ MLDR ಏರ್‌ಲೈನ್ಸ್‌ನಲ್ಲಿ ಉದ್ಯೋಗಿಯಾಗಿದ್ದರು. ಆದರೆ ಕಾಂಡಾ ನೀಡಿದ ಲೈಂಗಿಕ ಕಿರುಕುಳದ ಅನಂತರ ಅವರು 2012ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಪತ್ರದಲ್ಲಿ ಗೀತಿಕಾ ಅವರು ತಮ್ಮ ಜೀವನ ಕೊನೆಯಾಗಲು ಕಾಂಡಾ ಅವರೇ ಕಾರಣ ಎಂದು ಆರೋಪಿಸಿದ್ದರು. ಬಳಿಕ ಕಾಂಡಾ ಅವರನ್ನು ಬಂಧಿಸಲಾಗಿದ್ದು, 2014ರಲ್ಲಿ ಅವರಿಗೆ ದೆಹಲಿ ಹೈಕೋರ್ಟ್‌ನಿಂದ ಜಾಮೀನು ನೀಡಲಾಯಿತು.

ಮಹಿಪಾಲ್ ಮಡೆರ್ನಾ

2011ರಲ್ಲಿ ಭನ್ವಾರಿ ದೇವಿ ಲೈಂಗಿಕ ಹಗರಣದಲ್ಲಿ ಆಗಿನ ರಾಜಸ್ಥಾನದ ಜಲಸಂಪನ್ಮೂಲ ಸಚಿವ ಮಹಿಪಾಲ್ ಮಡೆರ್ನಾ ಭಾಗಿಯಾಗಿದ್ದು, ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಅಲುಗಾಡಿಸಿತು. ಭನ್ವಾರಿ ದೇವಿ ಸಹಾಯಕ ನರ್ಸ್ ಆಗಿದ್ದರು. ಆಕೆ ನಾಪತ್ತೆಯಾಗಿದ್ದು, ಮಡೆರ್ನಾ ಆಕೆಯನ್ನು ಅಪಹರಿಸಿದ್ದಾರೆ ಎಂದು ಆಕೆಯ ಪತಿ ಆರೋಪಿಸಿದಾಗ ಪ್ರಕರಣ ಬೆಳಕಿಗೆ ಬಂದಿತು. ಭನ್ವಾರಿ ದೇವಿ ಅವರೊಂದಿಗೆ ಮಡೆರ್ನಾ ರಾಜಿ ಮಾಡಿಕೊಳ್ಳಲು ಪ್ರಯತ್ನಿಸಿದರು. ಅಂತಿಮವಾಗಿ, ಗೆಹ್ಲೋಟ್ ಸರ್ಕಾರದಿಂದ ಮಡೆರ್ನಾ ಅವರನ್ನು ವಜಾಗೊಳಿಸಲಾಯಿತು.


ಎನ್‌ ಡಿ ತಿವಾರಿ

ಹಿರಿಯ ಕಾಂಗ್ರೆಸ್ ನಾಯಕ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿಯಾಗಿದ್ದ ಎನ್ ಡಿ ತಿವಾರಿ ಅವರು 2009ರಲ್ಲಿ ಆಂಧ್ರಪ್ರದೇಶದ ರಾಜ್ಯಪಾಲರಾಗಿದ್ದರು. ಆಗ ಅವರಿಗೆ 85 ವರ್ಷ. ರಾಜಭವನದಲ್ಲಿ ಲೈಂಗಿಕ ಕಿರುಕುಳದಲ್ಲಿ ಭಾಗಿಯಾಗಿರುವ ಆರೋಪ ಕೇಳಿ ಬಂದ ಅನಂತರ ತಿವಾರಿ ರಾಜೀನಾಮೆ ನೀಡಿದ್ದರು.
2008ರಲ್ಲಿ ರೋಹಿತ್ ಶೇಖರ್ ತಿವಾರಿ ಅವರು ಎನ್ ಡಿ ತಿವಾರಿ ಅವರು ತಮ್ಮ ತಂದೆ ಎಂದು ಹೇಳಿಕೊಂಡು ಪಿತೃತ್ವ ಮೊಕದ್ದಮೆಯನ್ನು ಹೂಡಿದರು. ತಿವಾರಿ ಅವರ ಡಿಎನ್‌ಎ ಮ್ಯಾಪಿಂಗ್ ಮಾಡುವಂತೆ ಕೋರ್ಟ್ ಆದೇಶಿಸಿತ್ತು. 2012ರಲ್ಲಿ ಡಿಎನ್‌ಎ ಪರೀಕ್ಷೆಯಿಂದ ತಿವಾರಿ ರೋಹಿತ್ ಶೇಖರ್ ತಿವಾರಿಯ ಜೈವಿಕ ತಂದೆ ಎಂದು ದೃಢಪಡಿಸಿತು.


ಸಂಜಯ್ ಜೋಷಿ

2005ರಲ್ಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಆಗಿದ್ದ ಸಂಜಯ್ ಜೋಶಿ ಅವರಿಗೆ ಲೈಂಗಿಕ ಹಗರಣ ಆರೋಪ ವೈಯಕ್ತಿಕ ಮತ್ತು ಸಾರ್ವಜನಿಕ ಜೀವನದಲ್ಲಿ ಭಾರಿ ಹಿನ್ನಡೆ ಉಂಟು ಮಾಡಿತ್ತು. ಬಿಜೆಪಿಯಲ್ಲಿ ಅವರು ಆರ್‌ಎಸ್‌ಎಸ್‌ ಪ್ರತಿನಿಧಿಯಾಗಿದ್ದರು. ಆದರೆ ಲೈಂಗಿಕ ಹಗರಣದಿಂದಾಗಿ ಅವರು ತಮ್ಮ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಕಳೆದುಕೊಳ್ಳಬೇಕಾಯಿತು. ಅನಂತರ ಅವರನ್ನು ಪಕ್ಷಕ್ಕೆ ಮತ್ತೆ ಸೇರಿಸಿಕೊಳ್ಳಲಾಯಿತು. ಆದರೆ ಅವರ ಮೇಲಿನ ಆರೋಪದಿಂದ ಅವರಿಗೆ ಹಿಂದಿದ್ದ ಅಧಿಕಾರ ಮರಳಿ ಸಿಗಲಿಲ್ಲ. ಜೋಶಿ ಅವರು ಮಹಿಳೆಯೊಂದಿಗಿದ್ದ ಸಿಡಿ ಭಾರಿ ಸದ್ದು ಮಾಡಿತ್ತು. ಆ ಬಳಿಕ ತನಿಖೆ ನಡೆದು, ಅದು ನಕಲಿ ಸಿಡಿ ಎಂಬ ವರದಿ ಬಂದಿತ್ತು.

ಅಮರಮಣಿ ತ್ರಿಪಾಠಿ

ಉತ್ತರ ಪ್ರದೇಶದ ಮಾಜಿ ಸಚಿವ ಅಮರಮಣಿ ತ್ರಿಪಾಠಿ ಅವರು ಕವಯಿತ್ರಿ ಮಧುಮಿತಾ ಶುಕ್ಲಾ ಅವರನ್ನು ಕೊಂದಿದ್ದಕ್ಕಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಮಧುಮಿತಾರನ್ನು ತ್ರಿಪಾಠಿ ಪದೇಪದೇ ಬೆದರಿಕೆ ಹಾಕಿದ ಮತ್ತು ಗರ್ಭಪಾತ ಮಾಡಿಸಿಕೊಳ್ಳಲು ಬಲವಂತಪಡಿಸಿದ ಆರೋಪ ಕೇಳಿ ಬಂದಿತ್ತು. ಮಧುಮಿತಾ 2003ರಲ್ಲಿ ಗುಂಡೇಟಿಗೆ ಬಲಿಯಾಗಿದ್ದರು. ಈ ಹತ್ಯೆ ಉತ್ತರ ಪ್ರದೇಶದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ್ದು, ಮಾಯಾವತಿ ಸಂಪುಟದಿಂದ ತ್ರಿಪಾಠಿ ನಿರ್ಗಮನಕ್ಕೆ ಕಾರಣವಾಗಿತ್ತು.

ಹರಕ್ ಸಿಂಗ್ ರಾವತ್

ಉತ್ತರಾಖಂಡದ ಕಂದಾಯ ಸಚಿವರ ಮೇಲೆ 2003ರಲ್ಲಿ ಅಸ್ಸಾಮಿ ಮಹಿಳೆಯೊಬ್ಬರು ತನ್ನ ನವಜಾತ ಮಗುವಿನ ತಂದೆ ಎಂದು ಆರೋಪಿಸಿದರು. ಮಗುವಿನ ಡಿಎನ್‌ಎ ಕಾಂಗ್ರೆಸ್ ನಾಯಕನ ಡಿಎನ್‌ಎಗೆ ಹೊಂದಿಕೆಯಾಗುತ್ತಿಲ್ಲ ಎಂದು ಸಿಬಿಐ ತನ್ನ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರಿಂದ ಪ್ರಕರಣ ಆ ಬಳಿಕ ಮಹತ್ವ ಕಳೆದುಕೊಂಡಿತ್ತು.

ಸಾಧು ಯಾದವ್

ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಸೋದರ ಮಾವ ಸಾಧು ಯಾದವ್ ಅವರಿಗೆ ಸಂಬಂಧಿಸಿ 1999ರಲ್ಲಿ ಹೈ ಪ್ರೊಫೈಲ್ ಲೈಂಗಿಕ ಹಗರಣಕ್ಕೆ ಬಿಹಾರ ಸಾಕ್ಷಿಯಾಯಿತು. ಬಾಲಕಿ ಶಿಲ್ಪಿ ಜೈನ್ ಮತ್ತು ಆಕೆಯ ಸ್ನೇಹಿತ ಗೌತಮ್ ಅವರ ಕೊಲೆ ನಡೆದಿತ್ತು. ಶಿಲ್ಪಿ ಮತ್ತು ಗೌತಮ್ ಇಬ್ಬರೂ ಸಾಧುಗೆ ಸ್ನೇಹಿತರಾಗಿದ್ದರು. ಅವರ ದೇಹಗಳು ಅರೆ ನಗ್ನ ಸ್ಥಿತಿಯಲ್ಲಿ ಕಾರಿನೊಳಗೆ ಪತ್ತೆಯಾಗಿದ್ದವು. ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಬಿಐ ಅಂತಿಮವಾಗಿ ವರದಿ ನೀಡಿತು. ಆಕೆಯ ಮೇಲೆ ಅತ್ಯಾಚಾರವೆಸಗಲಾಗಿದೆ ಮತ್ತು ಗೌತಮ್ ಆಕೆಯ ರಕ್ಷಣೆಗೆ ಬಂದಾಗ ಅವರಿಬ್ಬರಿಗೆ ಬಲವಂತವಾಗಿ ವಿಷ ಕುಡಿಸಲಾಯಿತು ಎಂದು ಆರೋಪಿಸಲಾಗಿತ್ತು.


ಗೋಪಿನಾಥ್ ಮುಂಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಗೋಪಿನಾಥ್ ಮುಂಡೆ ಮತ್ತು ನೃತ್ಯಗಾರ್ತಿ ಬರ್ಖಾ ಪಾಟೀಲ್ ಅಕ್ರಮ ಸಂಬಂಧ 1997ರಲ್ಲಿ ಬಹಿರಂಗವಾಗಿತ್ತು. ಮುಂಡೆ ಈ ಆರೋಪಗಳನ್ನು ನಿರಾಕರಿಸಿದ್ದರು. ಆದರೆ ಆ ದಿನಗಳಲ್ಲಿ ಈ ಪ್ರಕರಣ ಭಾರಿ ಸದ್ದು ಮಾಡಿತ್ತು.

ಜಲಗಾಂವ್ ಅತ್ಯಾಚಾರ ಪ್ರಕರಣ

ಪ್ರಭಾವಿ ರಾಜಕಾರಣಿಗಳು, ಉದ್ಯಮಿಗಳು ಮತ್ತು ಅಧಿಕಾರಿಗಳು ಜಲಗಾಂವ್ ಪಟ್ಟಣದಲ್ಲಿ ಲೈಂಗಿಕ ದಂಧೆಯನ್ನು ನಡೆಸುತ್ತಿದ್ದ ಪ್ರಕರಣ ಭಾರಿ ಕೋಲಾಹಲ ಸೃಷ್ಟಿಸಿತ್ತು. ಇವರ ಗ್ಯಾಂಗ್‌ ಶಾಲಾ-ಕಾಲೇಜಿಗೆ ಹೋಗುವ ಹುಡುಗಿಯರನ್ನು ತಮ್ಮ ಬಲೆಗೆ ಬೀಳಿಸಿ, ಅವರ ಮೇಲೆ ಅತ್ಯಾಚಾರ ನಡೆಸಿ ಬಳಿಕ ಅವರನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಕಾಂಗ್ರೆಸ್ಸಿಗರನ್ನು ಬಂಧಿಸಲಾಯಿತು. ಆದರೆ ಸಾಕ್ಷ್ಯಾಧಾರದ ಕೊರತೆಯಿಂದ ಹಲವು ವರ್ಷಗಳ ಬಳಿಕ ಖುಲಾಸೆಗೊಳಿಸಲಾಯಿತು.

ಬಿಹಾರದಲ್ಲಿ ಬಾಬಿ ಕೊಲೆ

1980ರಲ್ಲಿ ನಡೆದ ಬಾಬಿ ಕೊಲೆ ಪ್ರಕರಣದಲ್ಲಿ ಮಾಜಿ ಸ್ಪೀಕರ್ ಪುತ್ರ ಸೇರಿದಂತೆ ಹಲವು ಯೂತ್ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು ಎನ್ನಲಾಗಿತ್ತು. ಬಾಬಿ ಸೆಕ್ರೆಟರಿಯೇಟ್‌ನಲ್ಲಿ ಟೆಲಿಫೋನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದಳು. ಆಕೆ ನಿಗೂಢವಾಗಿ ಕೊಲೆಯಾಗಿದ್ದಳು. ಇವರನ್ನು ಯುವ ಕಾಂಗ್ರೆಸ್‌ ಮುಖಂಡರು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆಪಾದಿಸಲಾಗಿತ್ತು.


ಪಿಕೆ ಕುನ್ಹಾಲಿಕುಟ್ಟಿ

1997ರಲ್ಲಿ ಐಸ್ ಕ್ರೀಮ್ ಪಾರ್ಲರ್ ಲೈಂಗಿಕ ಹಗರಣವು ಕೇರಳವನ್ನು ಬೆಚ್ಚಿಬೀಳಿಸಿತು. ಈ ಪ್ರಕರಣದಲ್ಲಿ ಐಯುಎಂಎಲ್‌ಗೆ ಸೇರಿದ ಸಚಿವ ಪಿ.ಕೆ.ಕುನ್ಹಾಲಿಕುಟ್ಟಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ಯುವತಿಯರನ್ನು ವೇಶ್ಯಾವಾಟಿಕೆಗೆ ಸೆಳೆಯಲು ಕೋಝಿಕ್ಕೋಡ್‌ನಲ್ಲಿರುವ ಐಸ್‌ಕ್ರೀಂ ಪಾರ್ಲರ್‌ ಅನ್ನು ಬಳಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಕುನ್ಹಾಲಿಕುಟ್ಟಿ ಕೈಗಾರಿಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಅವರು ಈ ಪ್ರಕರಣದಿಂದ ಖುಲಾಸೆಯಾಗಿದ್ದರು.

ಸುರೇಶ್ ರಾಮ್

1978ರಲ್ಲಿ ಜಗಜೀವನ್ ರಾಮ್ ಅವರ ಮಗ ಸುರೇಶ್ ರಾಮ್ ಲೈಂಗಿಕ ಹಗರಣದಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಇದರಿಂದಾಗಿ, ಸ್ವತಂತ್ರ ಭಾರತದ ಮೊದಲ ದಲಿತ ಪ್ರಧಾನಿ ಆಗುವ ಅವಕಾಶದಿಂದ ಜಗಜೀವನ್ ರಾಮ್ ವಂಚಿತರಾದರು ಎಂದು ವ್ಯಾಖ್ಯಾನಿಸಲಾಗುತ್ತದೆ. ಸುರೇಶ್ ಅವರ ನಗ್ನ ಚಿತ್ರಗಳನ್ನು ನಿಯತಕಾಲಿಕವೊಂದರಲ್ಲಿ ಪ್ರಕಟಿಸಲಾಯಿತು. ಈ ಹಗರಣವನ್ನು ಬಯಲು ಮಾಡುವಲ್ಲಿ ಇಂದಿರಾ ಗಾಂಧಿಯವರ ಸೊಸೆ ಮೇನಕಾ ಗಾಂಧಿ ಪ್ರಮುಖ ಪಾತ್ರ ವಹಿಸಿದ್ದರು.

Continue Reading

ದೇಶ

Cleric: ಮಸೀದಿಯಲ್ಲಿ ಮಲಗಿದ್ದ 30 ವರ್ಷದ ಮೌಲ್ವಿಯನ್ನು ಬಡಿದು ಕೊಂದರು; ಹತ್ಯೆಗೆ ಕಾರಣ?

Cleric: ರಾಜಸ್ಥಾನದ ಅಜ್ಮೇರ್‌ನಲ್ಲಿ ಮಲಗಿದ್ದ ಮೌಲ್ವಿಯನ್ನು ದುಷ್ಕರ್ಮಿಗಳು ಬಡಿದು ಕೊಂದಿದ್ದಾರೆ. ಶನಿವಾರ (ಏಪ್ರಿಲ್‌ 27) ರಾತ್ರಿ ಮಸೀದಿಯಲ್ಲಿ ಮಲಗಿದ್ದ ಆತನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Cleric
Koo

ಜೈಪುರ: ರಾಜಸ್ಥಾನದ ಅಜ್ಮೇರ್‌ನಲ್ಲಿರುವ (Ajmer) ಮಸೀದಿಯಲ್ಲಿ ಮಲಗಿದ್ದ 30 ವರ್ಷದ ಮೌಲ್ವಿಯನ್ನು (Cleric) ದುಷ್ಕರ್ಮಿಗಳು ಬಡಿದು ಕೊಂದಿದ್ದಾರೆ. ಶನಿವಾರ (ಏಪ್ರಿಲ್‌ 27) ರಾತ್ರಿ ರಾಮ್‌ಗಂಜ್‌ ವ್ಯಾಪ್ತಿಯ ಕಾಂಚನ್‌ ನಗರದಲ್ಲಿರುವ ಮಸೀದಿಯಲ್ಲಿ ಮೊಹಮ್ಮದ್‌ ಮಹೀರ್‌ (Moahammed Mahir) ಮಲಗಿದ್ದರು. ಇದೇ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ದೊಣ್ಣೆ ಸೇರಿ ಹಲವು ಮಾರಕಾಸ್ತ್ರಗಳಿಂದ ಬಡಿದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮೌಲ್ವಿಯಾಗಿದ್ದ ಮೊಹಮ್ಮದ್‌ ಮಹೀರ್‌, ಆರು ಮಕ್ಕಳೊಂದಿಗೆ ಮಸೀದಿಯಲ್ಲಿ ಮಲಗಿದ್ದರು. ಇದೇ ವೇಳೆ ಹಲವು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಸಹಾಯಕ್ಕಾಗಿ ಅವರು ಕೂಗಿದರೂ ಅಕ್ಕಪಕ್ಕದವರು ಯಾರೂ ಬಂದಿಲ್ಲ. ಮಕ್ಕಳಿಗೆ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಇದಾದ ಬಳಿಕ ಮೌಲ್ವಿಯು ಮಸೀದಿಯಲ್ಲೇ ಮೃತಪಟ್ಟಿದ್ದಾರೆ. ಮಕ್ಕಳು ಕಿರುಚಾಡುತ್ತ, ಅಕ್ಕಪಕ್ಕದವರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

“ಮೊಹಮ್ಮದ್‌ ಮಹೀರ್‌ ಅವರ ಹತ್ಯೆಗೆ ಇದುವರೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಎಷ್ಟು ಜನ ದಾಳಿ ನಡೆಸಿದ್ದರು, ದಾಳಿ ಮಾಡಿದವರು ಯಾರು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುತ್ತದೆ” ಎಂಬುದಾಗಿ ರಾಮ್‌ಗಂಜ್‌ ಪೊಲೀಸ್‌ ಠಾಣೆಯ ರವೀಂದ್ರ ಖಿಂಚಿ ಮಾಹಿತಿ ನೀಡಿದ್ದಾರೆ. ಮಸೀದಿಯಲ್ಲಿಯೇ ಮೌಲ್ವಿಯನ್ನು ಕೊಂದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಕೆಲ ತಿಂಗಳ ಹಿಂದಷ್ಟೇ, ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ‌ ಇಸ್ಲಾಂ ಧರ್ಮದ ಒಳಪಂಗಡಗಳ ಮಧ್ಯೆಯೇ ನಡೆದಿತ್ತು. ಧರ್ಮ ಪ್ರಚಾರಕ್ಕೆ ಆಗಮಿಸಿದ್ದ ಮೌಲ್ವಿ ಮೇಲೆ ಕೆಲ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಮೌಲ್ವಿಯೊಬ್ಬರು ಅಹಮದೀಯ ಪಂಗಡ ಪರ ಪ್ರಚಾರ ನಡೆಸಲು ಬಂದಿದ್ದರು. ಹೊಸಪೇಟೆಯಿಂದ ಆಗಮಿಸಿ ದೇವತ್ಕಲ್ ಗ್ರಾಮದಲ್ಲಿ ಹಿಂದೂ- ಮುಸ್ಲಿಂ ಭಾವೈಕ್ಯತೆ ಸಂದೇಶ ಸಾರುತ್ತಿದ್ದ ಅಹಮದೀಯ ಮೌಲ್ವಿ ಖಾಜಿ ಮೊಹಮ್ಮದ್ ರಫಿ ಎಂಬುವವರು ಪ್ರಚಾರ ಮಾಡುತ್ತಿದ್ದರು.‌ ಇದೇ ವೇಲೆ ಯುವಕರು ಅವರ ಮೇಲೆ ಹಲ್ಲೆ ಮಾಡಿದ್ದರು.

ಇದನ್ನೂ ಓದಿ: ಕುರಾನ್‌ ಕಲಿಯಲು ಹೋದ ಬಾಲಕನ ಮೇಲೆ ಮಸೀದಿಯಲ್ಲೇ ಅತ್ಯಾಚಾರ; ಇದೆಂಥ ಅನಾಚಾರ!

Continue Reading

ರಾಜಕೀಯ

Narendra Modi: ಪ್ರಧಾನಿ ಮೋದಿ ಅನರ್ಹತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

Narendra Modi: ಲೋಕಸಭೆ ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರ ಅನರ್ಹತೆಗೆ ಆಗ್ರಹಿಸಿ ಸಲ್ಲಿಸಲಾಗಿದ್ದ ಅರ್ಜಿ ವಜಾಗೊಂಡಿದೆ.

VISTARANEWS.COM


on

Congress fears defeat over EVMs Congress will not win a single seat in Karnataka says PM Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘನೆ(Code of conduct) ಮಾಡಿದ್ದಾರೆ ಅವರನ್ನು ಚುನಾವಣೆಯಿಂದ 6 ವರ್ಷ ಅನರ್ಹಗೊಳಿಸಬೇಕಂದು ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಕೋರ್ಟ್‌ ವಜಾ ಮಾಡಿದೆ. ಆನಂದ್‌ ಎಸ್‌. ಜೋಂದಲ್‌ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದಿಲ್ಲಿ ಕೋರ್ಟ್‌(Delhi court) ಅದನ್ನು ವಜಾಗೊಳಿಸಿದೆ. ಉತ್ತರಪ್ರದೇಶದ ಪಿಲಿಬಿತ್‌ನಲ್ಲಿ ಏ.6ರಂದು ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಸಿಖ್‌ ಮತ್ತು ಹಿಂದೂ ಭಕ್ತರ ಭಕ್ತ ಬಗ್ಗೆ ಉಲ್ಲೇಖಸಿದ್ದರು ಆ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದರು ಎಂದು ಅರ್ಜಿಯಲ್ಲಿ ತಿಳಿಸಿದ್ದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವುದನ್ನು ಇಂಡಿಯಾ ಒಕ್ಕೂಟ ಸದಾ ದ್ವೇಷಿಸಿತ್ತು. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ನೀಡಿದ್ದರೂ ಅದನ್ನು ತಿರಸ್ಕರಿಸಿ ರಾಮಲಲ್ಲಾಗೆ ಅವಮಾನ ಮಾಡಿದ್ದರು. ಅವರ ಪಕ್ಷಗಳಿಂದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಾಯಕರನ್ನು ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿತ್ತು. ʼಶಕ್ತಿʼಯನ್ನು ನಿರ್ಣಾಮ ಮಾಡಬೇಕೆಂದು ಇಂಡಿಯಾ ಪಣತೊಟ್ಟಿದೆ. ಇಡೀ ದೇಶವೇ ಪೂಜಿಸುವ ಶಕ್ತಿಯನ್ನು ಕಾಂಗ್ರೆಸ್‌ ಅವಮಾನಿಸಿದೆ. ಶಕ್ತಿಯನ್ನು ಪೂಜಿಸುವ ದೇಶದ ಜನ ಕಾಂಗ್ರೆಸ್‌ ಅನ್ನು ಎಂದೂ ಕ್ಷಮಿಸಲ್ಲ ಎಂದು ಪಿಲಿಬಿತ್‌ ಅಭ್ಯರ್ಥಿ ಜಿತಿನ್‌ ಪ್ರಸಾದ್‌ ಪರ ಪ್ರಚಾರದ ವೇಳೆ ಪ್ರಧಾನಿ ವಾಗ್ದಾಳಿ ನಡೆಸಿದ್ದರು.

ಲೋಕಸಭೆ ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕುರಿತಂತೆ ಚುನಾವಣೆ ಆಯೋಗವು ಪ್ರಧಾನಿ ನರೇಂದ್ರ ಮೋದಿಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಪ್ರತಿಕ್ರಿಯೆ ಕೇಳಿತ್ತು. ಏಪ್ರಿಲ್‌ 29ರ ಬೆಳಗ್ಗೆ 11 ಗಂಟೆಯೊಳಗೆ ಇಬ್ಬರೂ ನಾಯಕರು ಪ್ರತಿಕ್ರಿಯೆ ನೀಡಬೇಕು ಎಂಬುದಾಗಿ ಚುನಾವಣೆ ಆಯೋಗವು ಸೂಚನೆ ನೀಡಿತ್ತು. ನರೇಂದ್ರ ಮೋದಿ ಹಾಗೂ ರಾಹುಲ್‌ ಗಾಂಧಿ ಅವರು ಚುನಾವಣೆ ಪ್ರಚಾರದ ವೇಳೆ ಜಾತಿ, ಧರ್ಮ, ಸಮುದಾಯ ಹಾಗೂ ಭಾಷೆ ಆಧಾರದ ಮೇಲೆ ಮತಗಳನ್ನು ಕೇಳಿದ್ದಾರೆ. ದ್ವೇಷ ಹರಡುವ ರೀತಿಯಲ್ಲಿ ಇವರು ಮಾತನಾಡಿದ್ದಾರೆ ಎಂಬ ಕುರಿತು ಆರೋಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಚುನಾವಣೆ ಆಯೋಗವು ಇಬ್ಬರು ನಾಯಕರ ಪ್ರತಿಕ್ರಿಯೆ ಕೇಳಿತ್ತು.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಆಸ್ತಿ ಹಂಚಿಕೆ ವಿಷಯ ಪ್ರಸ್ತಾಪಿಸಿದ್ದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರವನ್ನು ಮುಸ್ಲಿಮರಿಗೆ ನೀಡುತ್ತದೆ ಎಂದಿದ್ದರು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಿಮ್ಮ ಆದಾಯ ಮತ್ತು ಆಸ್ತಿಯ ಮೇಲೆ ಕಣ್ಣಿಟ್ಟಿವೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಇದನ್ನು ಉಲ್ಲೇಖಿಸಿದೆ. ಮಹಿಳೆಯರು ಚಿನ್ನವನ್ನು ಆಭರಣಗಳ ರೂಪದಲ್ಲಿ ಧರಿಸಲು ಮಾತ್ರವಲ್ಲ, ಅದನ್ನು ರಸಕ್ಷಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಈಗ ಅವರ ಕಣ್ಣು ಮಹಿಳೆಯರ ಮಂಗಳಸೂತ್ರದ ಮೇಲೆ ನೆಟ್ಟಿದೆ. ತಾಯಿ ಮತ್ತು ಸಹೋದರಿಯರ ಚಿನ್ನವನ್ನು ದೋಚುವುದು ಇವರ ಉದ್ದೇಶ. ಹೀಗಾಗಿ ಅವರು ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರವೂ ಸುರಕ್ಷಿತವಲ್ಲ ಎಂದು ಮೋದಿ ಹೇಳಿದ್ದರು.

Continue Reading
Advertisement
Tears Of Joy
ಆರೋಗ್ಯ23 seconds ago

Tears Of Joy: ಕಣ್ಣೀರು ಸುರಿಸುವುದರಿಂದಲೂ ಲಾಭವಿದೆ!

Murugha Seer
ಕರ್ನಾಟಕ11 mins ago

Murugha Seer: ಸುಪ್ರೀಂ ಆದೇಶದಂತೆ ಕೋರ್ಟ್‌ಗೆ ಶರಣಾದ ಮುರುಘಾ ಶ್ರೀ; ಮತ್ತೆ 1 ತಿಂಗಳು ಜೈಲು

Season Hairstyle
ಫ್ಯಾಷನ್18 mins ago

Season Hairstyle: ವೆಸ್ಟರ್ನ್‌ ಲುಕ್‌ಗೆ ಎಂಟ್ರಿ ಕೊಟ್ಟ ಟ್ರೆಡಿಷನಲ್‌ ಲುಕ್‌ನ ಎರಡು ಜಡೆಯ 3 ರೂಪ ಹೇಗಿದೆ ನೋಡಿ!

Amit Shah
ದೇಶ22 mins ago

Amit Shah: ನಿಯಂತ್ರಣ ಕಳೆದುಕೊಂಡ ಅಮಿತ್‌ ಶಾ ಇದ್ದ ಹೆಲಿಕಾಪ್ಟರ್;‌ ಸ್ವಲ್ಪದರಲ್ಲೇ ಪಾರಾದ ವಿಡಿಯೊ ಇಲ್ಲಿದೆ

IPL 2024
ಕ್ರೀಡೆ55 mins ago

IPL 2024: ಆರ್​ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ; ಸದ್ಯದ​ ಲೆಕ್ಕಾಚಾರ ಹೇಗಿದೆ?

Hassan Pen Drive Case Where is Prajwal in Germany SIT is on lookout
ಕ್ರೈಂ59 mins ago

Hassan Pen Drive Case: ಜರ್ಮನಿಯಲ್ಲಿ ಪ್ರಜ್ವಲ್‌ ಎಲ್ಲಿದ್ದಾರೆ? ಪತ್ತೆ ಮಾಡುತ್ತಿದೆ ಎಸ್‌ಐಟಿ!

Hassan Pen Drive Case
ಕರ್ನಾಟಕ1 hour ago

Hassan Pen Drive Case: ಪ್ರಜ್ವಲ್ ರೇವಣ್ಣ ಉಚ್ಚಾಟನೆ ನಿರ್ಧಾರ ಆಗಿದೆ ಎಂದ ಎಚ್‌ಡಿಕೆ

Star Saree Fashion
ಫ್ಯಾಷನ್1 hour ago

Star Saree Fashion: ಪಾಸ್ಟೆಲ್‌ ಅರ್ಗಾನ್ಜಾ ಸೀರೆಯಲ್ಲಿ ಮಿಂಚಬೇಕೆ? ನಟಿ ಮೋಕ್ಷಿತಾ ಪೈ ನೀಡಿದ್ದಾರೆ 5 ಸಿಂಪಲ್‌ ಐಡಿಯಾ

Vinay Gowda Got three Film Offer
ಸ್ಯಾಂಡಲ್ ವುಡ್2 hours ago

Vinay Gowda: ಮೂರು ಸಿನಿಮಾಗಳಿಗೆ ಸಹಿ ಮಾಡಿದ ʻಬಿಗ್‌ ಬಾಸ್‌ʼ ಖ್ಯಾತಿಯ ವಿನಯ್‌ ಗೌಡ!

Hassan Pen Drive Case
ಕರ್ನಾಟಕ2 hours ago

ಪ್ರಜ್ವಲ್‌ ರೇವಣ್ಣ ವಿಡಿಯೊಗಳ ಕುರಿತು ಕೆಲ ತಿಂಗಳ ಮೊದಲೇ ಎಚ್ಚರಿಸಿದ್ದ ಬಿಜೆಪಿ ನಾಯಕ! ಯಾರವರು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20245 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20247 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌