Boycott Cadbury | ಮೋದಿ ತಂದೆಗೆ ಅವಮಾನ, ಗೋಮಾಂಸ ಆರೋಪ, ಕ್ಯಾಡ್ಬರಿ ಬಾಯ್ಕಾಟ್‌ಗೆ ಅಭಿಯಾನ - Vistara News

ದೇಶ

Boycott Cadbury | ಮೋದಿ ತಂದೆಗೆ ಅವಮಾನ, ಗೋಮಾಂಸ ಆರೋಪ, ಕ್ಯಾಡ್ಬರಿ ಬಾಯ್ಕಾಟ್‌ಗೆ ಅಭಿಯಾನ

ಪ್ರಧಾನಿ ನರೇಂದ್ರ ಮೋದಿ ಅವರ ತಂದೆಗೆ ಅವಮಾನ ಹಾಗೂ ಚಾಕೊಲೇಟ್‌ನಲ್ಲಿ ಗೋಮಾಂಸವಿದೆ ಎಂಬ ಆರೋಪ ಕೇಳಿಬಂದ ಕಾರಣ ಟ್ವಿಟರ್‌ನಲ್ಲಿ Boycott Cadbury ಟ್ರೆಂಡ್‌ ಆಗಿದೆ.

VISTARANEWS.COM


on

Cadbury
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸಿಹಿತಿನಿಸುಗಳ ದೈತ್ಯ ಕಂಪನಿ “ಕ್ಯಾಡ್ಬರಿ” ಬಹಿಷ್ಕಾರಕ್ಕೆ ಟ್ವಿಟರ್‌ನಲ್ಲಿ ಭಾರಿ ಅಭಿಯಾನ ಆರಂಭವಾಗಿದೆ. ಕ್ಯಾಡ್ಬರಿಯನ್ನು ನಿಷೇಧಿಸಬೇಕು, ಅದನ್ನು ಬಹಿಷ್ಕರಿಸಬೇಕು ಎಂದು ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಟ್ವಿಟರ್‌ನಲ್ಲಿ ಬಾಯ್ಕಾಟ್‌ ಕ್ಯಾಡ್ಬರಿ (Boycott Cadbury) ಎಂಬುದು ನಂಬರ್‌ 1 ಟ್ರೆಂಡ್‌ ಆಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ತಂದೆ ದಾಮೋದರ್‌ ದಾಸ್‌ ಅವರಿಗೆ ಅವಮಾನ ಮಾಡಿರುವುದು ಹಾಗೂ ಕ್ಯಾಡ್ಬರಿ ಚಾಕೊಲೇಟ್‌ನಲ್ಲಿ ಗೋಮಾಂಸ ಇದೆ ಎಂಬ ಆರೋಪ ಕೇಳಿಬಂದಿರುವುದೇ ಕಾರಣವಾಗಿದೆ.

ಮೋದಿ ತಂದೆಗೆ ಅವಮಾನ?

ದೀಪಾವಳಿ ವೇಳೆ ಕ್ಯಾಡ್ಬರಿ ಚಾಕೊಲೇಟ್‌ಗಳ ಮಾರಾಟ ಹೆಚ್ಚಿಸುವ ದಿಸೆಯಲ್ಲಿ ಇತ್ತೀಚೆಗೆ ಕ್ಯಾಡ್ಬರಿ ಚಾಕೊಲೇಟ್‌ ಜಾಹೀರಾತು ನೀಡಲಾಗಿದೆ. ಜಾಹೀರಾತಿನಲ್ಲಿ ದಾಮೋದರ್‌ ಎಂಬ ಹೆಸರು ಬಳಕೆ ಮಾಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ತಂದೆ ದಾಮೋದರ ದಾಸ್‌ ಅವರಿಗೆ ಅವಮಾನ ಮಾಡಲೆಂದೇ ಕಂಪನಿಯು ವ್ಯಕ್ತಿಯೊಬ್ಬರಿಗೆ ಈ ಹೆಸರಿಟ್ಟಿದೆ ಎಂದು ವಿಶ್ವ ಹಿಂದೂ ಪರಿಷತ್‌ (VHP) ನಾಯಕಿ ಡಾ.ಪ್ರಾಚಿ ಸಾಧ್ವಿ ಟ್ವೀಟ್‌ ಮಾಡಿದ್ದಾರೆ. ಹಾಗಾಗಿ, ಹೆಚ್ಚಿನ ಜನ ಕ್ಯಾಡ್ಬರಿ ಬಹಿಷ್ಕಾರಕ್ಕೆ ಅಭಿಯಾನ ಆರಂಭಿಸಿದ್ದಾರೆ.

ಗೋಮಾಂಸದ ಆರೋಪವೇನು?

ಕ್ಯಾಡ್ಬರಿ ಚಾಕೊಲೇಟ್‌ನಲ್ಲಿ ಹಲಾಲ್‌ ಪ್ರಮಾಣೀಕೃತ ಗೋಮಾಂಸ ಇದೆ ಎಂಬ ಚಿತ್ರವೂ ವೈರಲ್‌ ಆಗಿದೆ. ಇದರಿಂದಾಗಿಯೂ ಕ್ಯಾಡ್ಬರಿ ಬಹಿಷ್ಕಾರಕ್ಕೆ ಒತ್ತಾಯ ಕೇಳಿಬರುತ್ತಿದೆ. ಕ್ಯಾಡ್ಬರಿ ಚಾಕೊಲೇಟ್‌ನಲ್ಲಿ ಗೋಮಾಂಸ ಮಿಶ್ರಣ ಮಾಡುವ ಮೂಲಕ ಚಾಕೊಲೇಟ್‌ ಕಂಪನಿಯು ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಲಾಗಿದೆ. ಆದರೆ, ವೈರಲ್‌ ಆದ ಚಿತ್ರವು ನಕಲಿ ಎಂದು ತಿಳಿದುಬಂದಿದೆ. 2021ರಲ್ಲಿಯೇ ಕ್ಯಾಡ್ಬರಿ ಬಹಿಷ್ಕಾರಕ್ಕೆ ಅಭಿಯಾನ ಆರಂಭಿಸಲಾಗಿತ್ತು.

ಇದನ್ನೂ ಓದಿ | ಹಲಾಲ್ ಬಾಯ್ಕಾಟ್ ಮಾಡಿ ಬೆಳಕಿನ ಹಬ್ಬ ಆಚರಿಸಿ: ಚಿಂತಕ ಚಕ್ರವರ್ತಿ ಸೂಲಿಬೆಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಮತದಾನಕ್ಕೆ ಮೊದಲು ಏನು ಮಾಡಬೇಕು, ಏನು ಮಾಡಬಾರದು?

Lok Sabha Election 2024: ಕರ್ನಾಟಕ ಸೇರಿದಂತೆ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 89 ಕ್ಷೇತ್ರಗಳಲ್ಲಿ ಶುಕ್ರವಾರ ಲೋಕಸಭಾ ಚುನಾವಣೆ- 2024ರ ಎರಡನೇ ಹಂತದ ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಮತಗಟ್ಟೆ ಆವರಣದಲ್ಲಿ ಮತದಾರರು ಮಾಡಬಹುದಾದ, ಮಾಡಬಾರದ ಕೆಲಸಗಳ ಪಟ್ಟಿ ಇಲ್ಲಿದೆ. ಮತ ಚಲಾವಣೆಯ ನಿಯಮಗಳನ್ನು ತಪ್ಪದೇ ಪಾಲಿಸಿ.

VISTARANEWS.COM


on

By

Lok Sabha Election-2024
Koo

ಬೆಂಗಳೂರು: ಲೋಕಸಭಾ ಚುನಾವಣೆ 2024ರ (Lok Sabha Election 2024) ಎರಡನೇ ಹಂತದ (second phase) ಮತದಾನ (voting) ಕರ್ನಾಟಕದಲ್ಲಿ (karnataka) ಮೊದಲ ಹಂತದ ಮತದಾನ ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಗಲಿದೆ. ಮತದಾನ ಪ್ರಕ್ರಿಯೆಗೆ ಈಗಾಗಲೇ ಸಿದ್ಧತೆಗಳು ಪೂರ್ಣಗೊಂಡಿದ್ದು, ಮತದಾರರೂ ತಮ್ಮ ಹಕ್ಕು ಚಲಾವಣೆಗೆ ಕಾತರರಾಗಿದ್ದಾರೆ.

ಎರಡನೇ ಹಂತದ ಚುನಾವಣಾ ಪ್ರಚಾರವು ಏಪ್ರಿಲ್ 24ರಂದು ಕೊನೆಯಾಗಿದ್ದು, ಮತದಾನವು ಶುಕ್ರವಾರ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 89 ಕ್ಷೇತ್ರಗಳಲ್ಲಿ ನಡೆಯಲಿದೆ.

ಎರಡನೇ ಹಂತದಲ್ಲಿ ಕೇರಳದ 20 ಸ್ಥಾನಗಳು, ಕರ್ನಾಟಕದ 28 ಸ್ಥಾನಗಳಲ್ಲಿ 14, ರಾಜಸ್ಥಾನದ 13 ಸ್ಥಾನಗಳು, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ತಲಾ 8 ಸ್ಥಾನಗಳು, ಮಧ್ಯಪ್ರದೇಶದ ಏಳು ಸ್ಥಾನಗಳು, ಅಸ್ಸಾಂನಲ್ಲಿ ತಲಾ 5 ಸ್ಥಾನಗಳಿಗೆ ಮತದಾನ ನಡೆಯಲಿದೆ. ಬಿಹಾರ, ಛತ್ತೀಸ್‌ಗಢ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಮೂರು ಸ್ಥಾನಗಳು ಮತ್ತು ಮಣಿಪುರ, ತ್ರಿಪುರಾ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ ಒಂದು ಸ್ಥಾನಗಳಿಗೆ ಶುಕ್ರವಾರ ಮತದಾನ ನಡೆಯಲಿದೆ.

ಇದನ್ನೂ ಓದಿ: Lok Sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರುವ ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ಐವರು!

ಮತದಾನ ಮಾಡಲಿರುವ ಮತದಾರರಿಗೆ ಕೆಲವೊಂದು ಜವಾಬ್ದಾರಿಗಳಿವೆ. ಮತದಾನದ ವೇಳೆ ಮತದಾರ ಮಾಡಬೇಕಾದ ಮತ್ತು ಮಾಡಬಾರದ ನಿಯಮಗಳು ಇಂತಿವೆ.


ಮತದಾನದಕ್ಕೂ ಮೊದಲು ಹೀಗೆ ಮಾಡಿ…

1. ಮತದಾನಕ್ಕೆ ಹೋಗುವ ಮುನ್ನ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಮತ್ತು ಮತಗಟ್ಟೆಯನ್ನು ದೃಢೀಕರಿಸಿ.

2. ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಇದನ್ನು ಮಾಡಬಹುದು.

3. ನಿರ್ಣಾಯಕ ಲೋಕಸಭಾ ಚುನಾವಣೆ 2024ಕ್ಕೆ ನಿಮ್ಮ ಮತವನ್ನು ಚಲಾಯಿಸುವ ಮೊದಲು ನಿಮ್ಮ ಆಯಾ ಮತಗಟ್ಟೆಯಲ್ಲಿ ಮತದಾನದ ಸಮಯವನ್ನು ಪರಿಶೀಲಿಸಿ.

4. ಮತದಾರರು ತಮ್ಮ ಗುರುತು ಚೀಟಿ, ಆಧಾರ್, ಡ್ರೈವಿಂಗ್ ಲೈಸೆನ್ಸ್‌ನಂತಹ ಇತರ ಹೆಚ್ಚುವರಿ ಗುರುತಿನ ಚೀಟಿಗಳನ್ನು ತೆಗೆದುಕೊಂಡು ಹೋಗಿ.

5. ಮತ ಚಲಾಯಿಸಲು ಹೊರಡುವ ಮೊದಲು ಸರಿಯಾದ ಆಯ್ಕೆ ಮಾಡಲು ನಿಮ್ಮ ಕ್ಷೇತ್ರದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಬಗ್ಗೆ ತಿಳಿದುಕೊಳ್ಳಿ.

6. ನಿಮ್ಮ ಮತವನ್ನು ಚಲಾಯಿಸಿದ ಅನಂತರ EVMಗೆ ಲಿಂಕ್ ಮಾಡಲಾದ VVPAT ಯಂತ್ರದ ಔಟ್‌ಪುಟ್ ಅನ್ನು ಪರಿಶೀಲಿಸಿ. ಯಾವುದೇ ಸಂಶಯ ಕಂಡು ಬಂದರೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿ.

ಮತ ಹಾಕಲು ಹೋದಾಗ ಹೀಗೆ ಮಾಡಬೇಡಿ:

1. ಮತಗಟ್ಟೆಯಲ್ಲಿ ಮೊಬೈಲ್ ಬಳಸಬೇಡಿ.

2. ನಿಮ್ಮ ಮತವನ್ನು ಚಲಾಯಿಸುವಾಗ ಚಿತ್ರ ಅಥವಾ ಸೆಲ್ಫಿಗಳನ್ನು ತೆಗೆದುಕೊಳ್ಳಬೇಡಿ.

3. ಮತ್ತೊಬ್ಬ ಮತದಾರರ ಹೆಸರಿನಲ್ಲಿ ಹೋಗಿ ಮತ ಹಾಕುವುದು ಗಂಭೀರ ಅಪರಾಧವಾಗಿದ್ದು, ಬೇರೆಯವರ ಹೆಸರಿನಲ್ಲಿ ಮತ ಚಲಾಯಿಸಬಾರದು.

4. ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಯ ಚಿಹ್ನೆಯನ್ನು ಉತ್ತೇಜಿಸುವ ಯಾವುದನ್ನೂ ಮತಗಟ್ಟೆಗೆ ತರಬೇಡಿ.
ಮತದಾನ ಮಾಡುವಾಗ ಒಂದಕ್ಕಿಂತ ಹೆಚ್ಚು ಬಟನ್‌ಗಳನ್ನು ಒತ್ತಬೇಡಿ.

5. ಒಬ್ಬ ಮತದಾರರಾಗಿ ನೀವು ಯಾರ ಪರವಾಗಿ ಮತ ಹಾಕಿದ್ದೀರಿ ಎಂಬುದನ್ನು ಒಬ್ಬ ಅಭ್ಯರ್ಥಿ/ ಪಕ್ಷವನ್ನು ಬಹಿರಂಗಪಡಿಸಬಾರದು.

Continue Reading

Latest

Gyanvapi Mosque: ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಆದೇಶ ನೀಡಿದ್ದ ಜಡ್ಜ್‌ಗೆ ವಿದೇಶದಿಂದ ಜೀವ ಬೆದರಿಕೆ

ವಾರಾಣಸಿಯ ಜ್ಞಾನವಾಪಿ ಮಸೀದಿ (Gyanvapi Mosque complex) ಯ ವೀಡಿಯೋಗ್ರಾಫಿಕ್‌ ಸಮೀಕ್ಷೆಗೆ (Videographic survey) ಮಾಡುವಂತೆ ಆದೇಶ ನೀಡುವ ಮೂಲಕ ದೇಶ ಮಾತ್ರವಲ್ಲದೇ ವಿದೇಶದಲ್ಲೂ ಗಮನ ಸೆಳೆದಿದ್ದ ಹೆಚ್ಚುವರಿ ಸೆಶನ್ಸ್‌ ಜಡ್ಜ್‌ ರವಿ ಕುಮಾರ್‌ ದಿವಾಕರ್‌ (Ravi kumar Diwakar) ಅವರಿಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದೆ.

VISTARANEWS.COM


on

Gyanvapi Mosque
Koo

ಬರೇಲಿ(ಉತ್ತರ ಪ್ರದೇಶ): ವಾರಾಣಸಿಯ ಜ್ಞಾನವಾಪಿ ಮಸೀದಿ (Gyanvapi Mosque complex) ಯ ವೀಡಿಯೋಗ್ರಾಫಿಕ್‌ ಸಮೀಕ್ಷೆಗೆ (Videographic survey) ಮಾಡುವಂತೆ ಆದೇಶ ನೀಡುವ ಮೂಲಕ ದೇಶ ಮಾತ್ರವಲ್ಲದೇ ವಿದೇಶದಲ್ಲೂ ಗಮನ ಸೆಳೆದಿದ್ದ ಹೆಚ್ಚುವರಿ ಸೆಶನ್ಸ್‌ ಜಡ್ಜ್‌ ರವಿ ಕುಮಾರ್‌ ದಿವಾಕರ್‌ (Ravi kumar Diwakar) ಅವರಿಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದೆ. ವಿದೇಶಿ ಫೋನ್‌ ನಂಬರ್‌ಗಳಿಂದ ನಿರಂತರವಾಗಿ ಬೆದರಿಕೆ ಕರೆಗಳು (International threat calls) ಬರುತ್ತಿರುವ ನ್ಯಾಯಾಧೀಶ ದಿವಾಕರ್‌ ಪೊಲೀರಿಗೆ ದೂರು ನೀಡಿದ್ದಾರೆ. ಏ. 15 ರಂದು ಅಂತಾರಾಷ್ಟ್ರೀಯ ನಂಬರ್‌ನಿಂದ ಕರೆ ಬಂದಿದ್ದು, ಅನಾಮಧೇಯ ವ್ಯಕ್ತಿಯೊಬ್ಬ ಜೀವ ಬೆದರಿಕೆಯೊಡ್ಡಿದ್ದ. ಇದಾದ ಕೆಲವು ದಿನಗಳ ನಂತರ ಅಂತಹದ್ದೇ ಮತ್ತೊಂದು ಕರೆ ಬಂದಿದೆ ಎಂದು ದಿವಾಕರ್‌ ದೂರಿನಲ್ಲಿ ತಿಳಿಸಿದ್ದಾರೆ.

2022ರಲ್ಲಿ ಕಾಶಿ ವಿಶ್ವನಾಥ ದೇಗುಲ (Kashi Vishwanath temple) ಕ್ಕೆ ಹೊಂದಿಕೊಂಡಿರುವ ಜ್ಞಾನವಾಪಿ ಮಸೀದಿಯ ವಿಡಿಯೋಗ್ರಾಫಿಕ್‌ ಸಮೀಕ್ಷೆಗೆ ದಿವಾಕರ್‌ ಆದೇಶಿದ್ದರು. ಅಲ್ಲದೇ ಶುದ್ಧೀಕರಣ ಪ್ರದೇಶವನ್ನು ಸೀಲ್‌ ಮಾಡುವಂತೆಯೂ ತಮ್ಮ ತೀರ್ಪಿನಲ್ಲಿ ಆದೇಶಿಸಿದ್ದರು. . ಮಸೀದಿಯ ಪಶ್ಚಿಮ ಗೋಡೆಯ ಮೇಲಿರುವ ಕೆಲವು ದೇವತೆಗಳ ವಿಗ್ರಹಗಳಿಗೆ ಪ್ರತಿನಿತ್ಯ ಪೂಜೆ ಸಲ್ಲಿಸಲು ನ್ಯಾಯಾಲಯದ ಅನುಮತಿ ಕೋರಿ ಐವರು ಮಹಿಳೆಯರು ಸಲ್ಲಿಸಿದ ಅರ್ಜಿಯ ಮೇರೆಗೆ ನ್ಯಾಯಾಲಯವು ಈ ಹಿಂದೆ ಸಮೀಕ್ಷೆಗೆ ಆದೇಶಿಸಲಾಗಿತ್ತು. ಇದಾದ ಬಳಿಕ ಅವರಿಗೆ ಆಗಾಗ ಬೆದರಿಕೆ ಕರೆಗಳು ಬರಲು ಶುರುವಾಗಿತ್ತು.

ಇತ್ತೀಚೆಗಷ್ಟೇ ಬರೇಲಿಗೆ ವರ್ಗಾವಣೆಗೊಂಡಿದ್ದ ದಿವಾಕರ್‌, ಈ ಹಿಂದೆಯೂ ತಮಗೆ ಹಾಗೂ ತಮ್ಮ ಕುಟುಂಬಸ್ಥರಿಗೆ ಜೀವ ಬೆದರಿಕೆ ಕರೆ ಬಂದಿರುವ ಬಗ್ಗೆ ದೂರು ನೀಡಿ ಈ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದ್ದರು. ಇದಾದ ಬಳಿಕ ಅವರು ಬರೇಲಿಗೆ ವರ್ಗಾವಣೆಗೊಂಡಿದ್ದರು. ಬರೇಲಿಯಲ್ಲಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ 2018ರಲ್ಲಿ ನಡೆದಿದ್ದ ಬರೇಲಿ ಗಲಭೆ ಪ್ರಕರಣ ಕೈಗೆತ್ತಿಕೊಂಡಿದ್ದರು. ಗಲಭೆಯ ಮಾಸ್ಟರ್‌ಮೈಂಡ್‌ ಮೌಲಾನಾ ತೌಖೀರ್‌ ರಾಝಾ ವಿಚಾರಣೆಗೆ ಹಾಜರಾಗುವಂತೆ ಆದೇಶ ಹೊರಡಿಸಿದ್ದರು. ಈ ಗಲಭೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪಾಸ್ತಿಗಳು ನಾಶವಾಗಿದ್ದವು. ಅಲ್ಲದೇ ಬರೇಲಿಯಲ್ಲಿ ಬರೋಬ್ಬರಿ 27 ದಿನಗಳ ಕಾಲ ನಿಷೇದಾಜ್ಞೆ ಹೊರಡಿಸಲಾಗಿತ್ತು.

ಇದನ್ನೂ ಓದಿ: Lok Sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರುವ ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ಐವರು!

ನ್ಯಾಯಾಧೀಶ ದಿವಾಕರ್‌ ಹಾಗೂ ಅವರ ಕುಟುಂಬಕ್ಕೆ ಬೆದರಿಕೆ ಕರೆ ಬಂದಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದ ಅಲಹಾಬಾದ್‌ ಹೈಕೋರ್ಟ್‌ ಅವರಿಗೆ ವೈ ಕೆಟಗರಿ ಭದ್ರತೆ ನೀಡುವಂತೆ ಆದೇಶ ಹೊರಿಡಿಸಿತ್ತು. ಬಳಿಕ ಅದನ್ನು ಎಕ್ಸ್‌ ಕೆಟಗೆರಿ ಭದ್ರತೆಗೆ ಇಳಿಸಲಾಯಿತು. ಪ್ರಸ್ತುತ ದಿವಾಕರ್‌ ಅವರ ಭದ್ರತೆಗೆ ಇಬ್ಬರು ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಆದರೆ ಅವರ ಸಹೋದ್ಯೋಗಿಗಳ ಪ್ರಕಾರ ಭದ್ರತಾ ಸಿಬ್ಬಂದಿಗಳಿಗೆ ಯಾವುದೇ ಬಂದೂಕುಗಳನ್ನು ನೀಡಿಲ್ಲ. ಹೀಗಾಗಿ ಜೀವ ಬೆದರಿಕೆ ಕರೆಗಳು ಆಗಾಗ ಬರುತ್ತಿದ್ದರೂ ನ್ಯಾಯಾಧೀಶರಿಗೆ ಕನಿಷ್ಠ ಭದ್ರತೆ ಸಿಗದಿರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Narendra Modi : ತಮ್ಮನ್ನು ನಿಂದಿಸಿದ ರಾಹುಲ್​ಗೆ ಪ್ರತ್ಯುತ್ತರ ಕೊಟ್ಟ ಮೋದಿ; ಇಲ್ಲಿದೆ ವಿಡಿಯೊ

Narendra Modi: “ನನ್ನ ವಿರುದ್ಧ ರಾಹುಲ್ ಗಾಂಧಿ “ಶೆಹಜಾದಾ” ಎಂದು ಹೇಳಿಕೆ ನೀಡಿರುವ ಬಗ್ಗೆ ಅಭಿಮಾನಿಗಳು ಅಸಮಾಧಾನಗೊಳ್ಳಬಾರದು ಮತ್ತು ಕೋಪಗೊಳ್ಳಬಾರದು ಎಂದು ನಾನು ಕೈಮುಗಿದು ವಿನಂತಿಸುತ್ತೇನೆ. ನಾವು “ಕಾಮ್ ದಾರ್” ಗಳು ಮತ್ತು ರಾಹುಲ್ ಮತ್ತು ಅವರ ಪಕ್ಷದವರು “ನಾಮ್ ದಾರ್”ಗಳು. ಈ ”ನಾಮ್ ದಾರ್” ಗಳು ಹಲವಾರು ವರ್ಷಗಳಿಂದ “ಕಾಮ್ ದಾರ್” ಗಳನ್ನು ಅವಮಾನಿಸುತ್ತಲೇ ಇದ್ದಾರೆ ಎಂದು ಹೇಳಿದರು.

VISTARANEWS.COM


on

Lok sabaha election
Koo

ನವದೆಹಲಿ: ತಮ್ಮನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ಷೇಪಾರ್ಹ ಪದಗಳಿಂದ ನಿಂದಿಸುತ್ತಿರುವುದರ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಗುರುವಾರ (ಏಪ್ರಿಲ್ 25) ಮಾತನಾಡಿದ್ದಾರೆ. ಮಧ್ಯಪ್ರದೇಶದ ಮೊರೆನಾದಲ್ಲಿ ವಿಜಯ ಸಂಕಲ್ಪ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ರಾಹುಲ್ ಗಾಂಧಿ ಅವರ ಅವಹೇಳನಕಾರಿ ಹೇಳಿಕೆಗಳಿಂದ ಜನರು ವಿಚಲಿತರಾಗಬಾರದು ಎಂದು ಮನವಿ ಮಾಡಿದ್ದಾರೆ . ಬಿಜೆಪಿಯ “ಕಾಮ್ದಾರ್” (ಕಾರ್ಯಕರ್ತ) ಮತ್ತು ಕಾಂಗ್ರೆಸ್ ನ “ನಾಮ್ದಾರ್” (ರಾಜವಂಶ) ನಡುವೆ ವ್ಯತ್ಯಾಸವಿದೆ ಎಂದು ಹೇಳಿದ ಮೋದಿ, ವಿನಮ್ರ ಹಿನ್ನೆಲೆಯಿಂದ ಬಂದ ತಮ್ಮಂತವರಿಗೆ ಅವಮಾನಗಳು ಹೊಸತೇನಲ್ಲ ಎಂದು ಪ್ರತಿಪಾದಿಸಿದರು.

ನನ್ನ ವಿರುದ್ಧ ರಾಹುಲ್ ಗಾಂಧಿ “ಶೆಹಜಾದಾ” (ಚಕ್ರವರ್ತಿಯ ಮಗ) ಎಂದು ಹೇಳಿಕೆ ನೀಡಿರುವ ಬಗ್ಗೆ ಅಭಿಮಾನಿಗಳು ಅಸಮಾಧಾನಗೊಳ್ಳಬಾರದು ಮತ್ತು ಕೋಪಗೊಳ್ಳಬಾರದು ಎಂದು ನಾನು ಕೈಮುಗಿದು ವಿನಂತಿಸುತ್ತೇನೆ. ನಾವು “ಕಾಮ್ ದಾರ್” ಗಳು ಮತ್ತು ರಾಹುಲ್ ಮತ್ತು ಅವರ ಪಕ್ಷದವರು “ನಾಮ್ ದಾರ್”ಗಳು. ಈ ”ನಾಮ್ ದಾರ್” ಗಳು ಹಲವಾರು ವರ್ಷಗಳಿಂದ “ಕಾಮ್ ದಾರ್” ಗಳನ್ನು ಅವಮಾನಿಸುತ್ತಲೇ ಇದ್ದಾರೆ ಎಂದು ಹೇಳಿದರು.

ಜನರು ಅವರ ಹೇಳಿಕೆಗಳನ್ನು ಕೇಳಿಸಿಕೊಂಡು ಸಮಯ ವ್ಯರ್ಥ ಮಾಡಬಾರದು ಹಾಗೂ ನಮ್ಮ ಗುರಿಯತ್ತ ಮುಂದುವರಿಯಬೇಕು. ಅವರು (ರಾಹುಲ್ ಗಾಂಧಿ) ತುಂಬಾ ಅಸಮಾಧಾನಗೊಂಡಿದ್ದಾರೆ ಮತ್ತು ಸಂಕಷ್ಟದಲ್ಲಿದ್ದಾರೆ. ಅವರು ಮುಂದಿನ ದಿನಗಳಲ್ಲಿ ನಮ್ಮನ್ನು ಇನ್ನಷ್ಟು ಅವಮಾನಿಸುತ್ತಾರೆ. ನಾನು ಸಾಮಾನ್ಯ ವ್ಯಕ್ತಿ , ನಾನು ಬಡ ಹಿನ್ನೆಲೆಯಿಂದ ಬಂದಿರುವವನು. ಆದ್ದರಿಂದ ಇಂತಹ ಅವಮಾನಗಳು ನನಗೆ ಹೊಸತಲ್ಲ” ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: Lok Sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರುವ ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ಐವರು!

ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಮಾದರಿ ನೀತಿ ಸಂಹಿತೆಯನ್ನು (ಎಂಸಿಸಿ) ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಭಾರತದ ಚುನಾವಣಾ ಆಯೋಗ (ಇಸಿಐ) ಕ್ರಮ ಕೈಗೊಳ್ಳಲು ಮುಂದಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಧರ್ಮ, ಜಾತಿ, ಸಮುದಾಯ ಅಥವಾ ಭಾಷೆಯ ಆಧಾರದ ಮೇಲೆ ದ್ವೇಷ ಮತ್ತು ವಿಭಜನೆಯನ್ನು ಪ್ರಚೋದಿಸುತ್ತಿವೆ ಎಂಬ ದೂರುಗಳು ದಾಖಲಾಗಿವೆ.

ಪ್ರಕರಣದ ದಾಖಲಿಸಿದ ಚುನಾವಣಾ ಆಯೋಗ

ಈ ಆರೋಪಗಳಿಗೆ ಪ್ರತಿಕ್ರಿಯೆಯಾಗಿ, ಚುನಾವಣಾ ಆಯೋಗವು ಜನ ಪ್ರತಿನಿಧ್ಯ ಕಾಯ್ದೆಯ ಸೆಕ್ಷನ್ 77 ಅನ್ನು ಅನ್ವಯಿಸಿದೆ. ಪಕ್ಷದ ಅಧ್ಯಕ್ಷರು ತಮ್ಮ ಸ್ಟಾರ್ ಪ್ರಚಾರಕರ ನಡವಳಿಕೆಗಳ ಮೇಲೆ ಕಣ್ಗಾವಲು ಇಟ್ಟಿದೆ.

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಮತ್ತು ರಾಹುಲ್ ಗಾಂಧಿ ವಿರುದ್ಧದ ಎಂಸಿಸಿ ಆರೋಪಗಳಿಗೆ ಸಂಬಂಧಿಸಿದಂತೆ ಉತ್ತರ ನೀಡಬೇಕಾಗಿದೆ. ಏಪ್ರಿಲ್ 29 ರಂದು ಬೆಳಗ್ಗೆ 11 ಗಂಟೆಯೊಳಗೆ ಪ್ರತಿಕ್ರಿಯೆ ನೀಡಲು ಚುನಾವಣಾ ಆಯೋಗ ಅವರಿಬ್ಬರಿಗೆ ಗಡುವು ನಿಗದಿಪಡಿಸಿದೆ.

ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆಯಲಿದ್ದು ಮೊದಲ ಹಂತ ಏಪ್ರಿಲ್ 19 ರಂದು ಮುಕ್ತಾಯಗೊಂಡಿದೆ. ಎರಡನೇ ಹಂತವು ಏಪ್ರಿಲ್ 26 ರಂದು ನಡೆಯಲಿದೆ. ಮುಂದಿನ ಹಂತಗಳು ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1 ರಂದು ನಡೆಯಲಿವೆ. 543 ಲೋಕಸಭಾ ಕ್ಷೇತ್ರಗಳ ಫಲಿತಾಂಶ ಜೂನ್ 4ರಂದು ಹೊರಬೀಳಲಿದೆ.

Continue Reading

Latest

Lok Sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರುವ ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ಐವರು!

Lok Sabha Election 2024: ಲೋಕಸಭಾ ಚುನಾವಣೆ-2024ರ ಎರಡನೇ ಹಂತದ ಮತದಾನ ಶುಕ್ರವಾರ ನಡೆಯಲಿದ್ದು, ಕಣಕ್ಕೆ ಇಳಿದಿರುವ 1,120 ಮಂದಿ ಅಭ್ಯರ್ಥಿಗಳಲ್ಲಿ 10 ಮಂದಿ ಕೋಟ್ಯಾಧಿಪತಿಗಳಲ್ಲಿ ಐವರು ಕರ್ನಾಟಕದವರಾಗಿದ್ದಾರೆ.

VISTARANEWS.COM


on

By

Lok Sabha Election-2024
Koo

ಲೋಕಸಭಾ ಚುನಾವಣೆ-2024ರಲ್ಲಿ (Lok Sabha Election 2024) ಶುಕ್ರವಾರ ನಡೆಯುವ ಮತದಾನ (voting) ಪ್ರಕ್ರಿಯೆಯಲ್ಲಿ ಒಟ್ಟು 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 1,120 ಮಂದಿ ತಮ್ಮ ಅದೃಷ್ಟವನ್ನು ಪರೀಕ್ಷೆಯನ್ನು ಮಾಡಲಿದ್ದಾರೆ. ಈ ಬಾರಿ ಹಲವು ಪ್ರಮುಖ ಅಭ್ಯರ್ಥಿಗಳು ಕಣದಲ್ಲಿ ಇದ್ದು, ಇವರಲ್ಲಿ ಹೆಚ್ಚು ಶ್ರೀಮಂತ (richest) ಅಭ್ಯರ್ಥಿಗಳೂ (candidate) ಸೇರಿದ್ದಾರೆ.

ಶುಕ್ರವಾರ ನಡೆಯುವ ಎರಡನೇ ಹಂತದ ಚುನಾವಣೆಯ ಕಣದಲ್ಲಿರುವ ಕೆಲವು ಶ್ರೀಮಂತ ಅಭ್ಯರ್ಥಿಗಳ ಪಟ್ಟಿಯನ್ನು ಅಸೋಸಿಯೇಷನ್ ​​​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿದೆ.

ಎರಡನೇ ಹಂತದ ಚುನಾವಣೆಯಲ್ಲಿ ಭಾಗವಹಿಸುತ್ತಿರುವ 1,210 ಅಭ್ಯರ್ಥಿಗಳ ಅಫಿಡವಿಟ್‌ಗಳನ್ನು ವಿಶ್ಲೇಷಿಸಿದ್ದು, 390 ಅಭ್ಯರ್ಥಿಗಳು ‘ಕೋಟ್ಯಧಿಪತಿಗಳು’ ಎಂದು ಹೇಳಿದೆ. ಇವರಲ್ಲಿ ಶೇ. 21ರಷ್ಟು ಅಭ್ಯರ್ಥಿಗಳ ವಿರುದ್ಧವೂ ಕ್ರಿಮಿನಲ್ ಪ್ರಕರಣಗಳಿವೆ.

ಇದನ್ನೂ ಓದಿ: Lok Sabha Election 2024: ವೋಟರ್‌ ಲಿಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳ ಹೆಸರೇ ಇಲ್ಲ; ಮತಗಟ್ಟೆ ಮುಂದೆಯೇ ಪ್ರೊಟೆಸ್ಟ್!


1. ವೆಂಕಟರಮಣ ಗೌಡ

ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್‌ನ ವೆಂಕಟರಮಣೇಗೌಡ ಅಲಿಯಾಸ್‌ ಸ್ಟಾರ್‌ ಚಂದ್ರು ಈ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. 622 ಕೋಟಿ ರೂ. ಗೂ ಅಧಿಕ ಆಸ್ತಿ ಹೊಂದಿದ್ದಾರೆ.


2. ಡಿ.ಕೆ. ಸುರೇಶ್

ಎರಡನೇ ಸ್ಥಾನವು ಕಾಂಗ್ರೆಸ್‌ನ ಅಭ್ಯರ್ಥಿ ಡಿ.ಕೆ. ಸುರೇಶ್‌ಗೆ ಸೇರಿದೆ. ಅವರು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರರಾಗಿದ್ದಾರೆ. ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸಿರುವ ಸುರೇಶ್ ಅವರ ಒಟ್ಟು ಆಸ್ತಿ ಮೌಲ್ಯ 593 ಕೋಟಿ ರೂ.


3. ಹೇಮಾ ಮಾಲಿನಿ

ಖ್ಯಾತ ನಟಿ ಹೇಮಾ ಮಾಲಿನಿ ಮೂರನೇ ಸ್ಥಾನ ಪಡೆದಿದ್ದು, ಉತ್ತರ ಪ್ರದೇಶದ ಮಥುರಾದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ. ಇವರು 278.9 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ.


4. ಸಂಜಯ್ ಶರ್ಮಾ

ಮಧ್ಯಪ್ರದೇಶದ ಹೋಶಂಗಾಬಾದ್‌ನಿಂದ ಸ್ಪರ್ಧಿಸಿರುವ ಕಾಂಗ್ರೆಸ್‌ನ ಸಂಜಯ್ ಶರ್ಮಾ ಅವರ ಆಸ್ತಿ 232 ಕೋಟಿ ರೂ.


5. ಎಚ್.ಡಿ. ಕುಮಾರಸ್ವಾಮಿ

ಬಿಜೆಪಿಯೊಂದಿಗೆ ಸಮ್ಮಿಶ್ರವಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಮುಖಂಡ ಹಾಗೂ ಮಂಡ್ಯ ಅಭ್ಯರ್ಥಿ ಎಚ್ .ಡಿ. ಕುಮಾರಸ್ವಾಮಿ ಅವರ ಆಸ್ತಿ 217 ಕೋಟಿ ರೂ.


6. ಕನ್ವರ್ ಸಿಂಗ್ ತನ್ವಾರ್

ಉತ್ತರ ಪ್ರದೇಶದ ಅಮ್ರೋಹಾ ಕ್ಷೇತ್ರದಿಂದ ಬಿಜೆಪಿಯ ಕನ್ವರ್ ಸಿಂಗ್ ತನ್ವಾರ್ ಕಣಕ್ಕಿಳಿದಿದ್ದು, 214 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ.


7. ಎಂ ಎಸ್ ರಕ್ಷಾ ರಾಮಯ್ಯ

ಕರ್ನಾಟಕದ ಚಿಕ್ಕಬಳ್ಳಾಪುರದಿಂದ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಎಂ.ಎಸ್. ರಕ್ಷಾ ರಾಮಯ್ಯ ಸ್ಪರ್ಧಿಸುತ್ತಿದ್ದು, 169 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ.


8. ಸುಖಬೀರ್ ಸಿಂಗ್

ಬಿಜೆಪಿಯಿಂದ ಬಂದಿರುವ ಸುಖಬೀರ್ ಸಿಂಗ್ ಜೌನಪುರಿಯಾ ಅವರು ರಾಜಸ್ಥಾನದ ಟೊಂಕ್-ಸವಾಯಿ ಮಾಧೋಪುರದಿಂದ ಸ್ಪರ್ಧಿಸುತ್ತಿದ್ದು, 142 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ.


9. ಪ್ರೊ. ಎಂ ವಿ ರಾಜೀವ್ ಗೌಡ

ಪ್ರೊಫೆಸರ್ ಎಂ.ವಿ. ರಾಜೀವ್ ಗೌಡ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ಕರ್ನಾಟಕದ ಬೆಂಗಳೂರು ಉತ್ತರದಿಂದ ಕಣಕ್ಕಿಳಿದಿರುವ ಅವರು 134 ಕೋಟಿಗೂ ಅಧಿಕ ಆಸ್ತಿ ಹೊಂದಿದ್ದಾರೆ.


10, ಉದೈಲಾಲ್ ಅಂಜನಾ

ಟಾಪ್‌ 10ನೇ ಸ್ಥಾನದಲ್ಲಿ ಕಾಂಗ್ರೆಸ್‌ನ ಉದಯಲಾಲ್ ಅಂಜನಾ ಅವರು ರಾಜಸ್ಥಾನದ ಚಿತ್ತೋರ್‌ಗಢದಿಂದ ಸ್ಪರ್ಧಿಸುತ್ತಿದ್ದಾರೆ. ಆಕೆಯ ಆಸ್ತಿ 118 ಕೋಟಿ ರೂ.

Continue Reading
Advertisement
Lok Sabha Election-2024
Lok Sabha Election 202425 seconds ago

Lok Sabha Election 2024: ಮತದಾನಕ್ಕೆ ಮೊದಲು ಏನು ಮಾಡಬೇಕು, ಏನು ಮಾಡಬಾರದು?

Gyanvapi Mosque
Latest38 seconds ago

Gyanvapi Mosque: ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಆದೇಶ ನೀಡಿದ್ದ ಜಡ್ಜ್‌ಗೆ ವಿದೇಶದಿಂದ ಜೀವ ಬೆದರಿಕೆ

Case of luring apartment dwellers Relief for DK Shivakumar
Lok Sabha Election 202411 mins ago

DK Shivakumar: ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಆಮಿಷ ಪ್ರಕರಣ; ಡಿ.ಕೆ. ಶಿವಕುಮಾರ್‌ಗೆ ರಿಲೀಫ್

ಫ್ಯಾಷನ್29 mins ago

Summer Nail Art : ಸಮ್ಮರ್ ಸೀಸನ್​ನಲ್ಲಿ ಟ್ರೆಂಡಿಯಾದ ಕಲ್ಲಂಗಡಿ ಹಣ್ಣಿನ ನೇಲ್ಆರ್ಟ್

Lok sabaha election
ಪ್ರಮುಖ ಸುದ್ದಿ44 mins ago

Narendra Modi : ತಮ್ಮನ್ನು ನಿಂದಿಸಿದ ರಾಹುಲ್​ಗೆ ಪ್ರತ್ಯುತ್ತರ ಕೊಟ್ಟ ಮೋದಿ; ಇಲ್ಲಿದೆ ವಿಡಿಯೊ

Ballari Lok Sabha Constituency Congress candidate E Tukaram election campaign in Ballari
ರಾಜಕೀಯ55 mins ago

Lok Sabha Election 2024: ಸಂವಿಧಾನ ಉಳಿಸಲು ಕಾಂಗ್ರೆಸ್‌ ಗೆಲ್ಲಿಸಿ; ಈ. ತುಕಾರಾಂ

Lok Sabha Election-2024
Latest60 mins ago

Lok Sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರುವ ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ಐವರು!

Viral Video
ವೈರಲ್ ನ್ಯೂಸ್1 hour ago

Viral Video: ವಿಷ ಸೇವಿಸಿ ವಿಡಿಯೊ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ; ಸಾವಿಗೆ ಕಾರಣವೇನು?

deadly murder
Latest1 hour ago

Deadly Murder: ಬರ್ಗರ್‌ ತಿಂದನೆಂದು ಸ್ನೇಹಿತನನ್ನೇ ಗುಂಡಿಟ್ಟು ಕೊಂದ!

Chemistry paper leak case
ಕೋರ್ಟ್2 hours ago

Chemistry paper leak : ದ್ವಿತೀಯ ಪಿಯು ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; 17 ಆರೋಪಿಗಳು ಖುಲಾಸೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ3 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ3 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ6 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20248 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET 2024 Exam
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌