Pathaan Movie: ಬಾಯ್ಕಾಟ್ ಸಂಸ್ಕೃತಿಯಿಂದ ತಪ್ಪು ಸಂದೇಶ ರವಾನೆ: ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ - Vistara News

ದೇಶ

Pathaan Movie: ಬಾಯ್ಕಾಟ್ ಸಂಸ್ಕೃತಿಯಿಂದ ತಪ್ಪು ಸಂದೇಶ ರವಾನೆ: ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್

ಪಠಾಣ್ (Pathaan Movie) ಸಿನಿಮಾ ವಿರುದ್ಧ ಬಾಯ್ಕಾಟ್ ಟ್ರೆಂಡ್‌ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ (Anurag Thakur) ಅವರು, ಬಹಿಷ್ಕಾರದಂಥ ಚಟುವಟಿಕೆಗಳು ಜಗತ್ತಿಗೆ ತಪ್ಪು ಸಂದೇಶವನ್ನು ರವಾನಿಸುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

Boycott culture damages us and it sends wrong message says union minister
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬಾಯ್ಕಾಟ್ ಬಾಲಿವುಡ್ (Boycott Bollywood) ಟ್ರೆಂಡ್ ಬಗ್ಗೆ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು, ”ಜಗತ್ತಿನಾದ್ಯಂತ ಭಾರತೀಯ ಸಿನಿಮಾಗಳು ಹೆಸರು ಮಾಡುತ್ತಿರುವಾಗ ಇಂಥ(ಬಾಯ್ಕಾಟ್ ಬಾಲಿವುಡ್) ಚಟುವಟಿಕೆಗಳು ಋಣಾತ್ಮಕ ಪರಿಣಾಮ ಬೀರುತ್ತವೆ, ತಪ್ಪು ಸಂದೇಶವನ್ನು ರವಾನಿಸುತ್ತವೆ,” ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಂಬೈನಲ್ಲಿ ಆಯೋಜಿಸಲಾಗಿರುವ ಶಾಂಘೈ ಸಹಕಾರ ಸಂಘ ಸಿನಿಮಾ ಉತ್ಸವ(Shanghai Cooperation Organization Film Festival)ದ ಸಂದರ್ಭದಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಶಾರುಖ್ ಖಾನ್ ಅಭಿನಯದ ಪಠಾಣ್ (Pathaan Movie) ಸಿನಿಮಾದ ವಿರುದ್ಧವೂ ಬಾಯ್ಕಾಟ್ ಟ್ರೆಂಡ್ ಜಾರಿಯಲ್ಲಿದೆ.

ಭಾರತದಲ್ಲಿ ಸಿಬಿಎಫ್‌ಸಿ(CBFC) ಇದೆ. ಈ ಮಂಡಳಿಯಲ್ಲಿ ಸಾಕಷ್ಟು ಸದಸ್ಯರಿದ್ದಾರೆ. ಸಿಬಿಎಫ್‌ಸಿ ಅನುಮತಿ ನೀಡಿದರಷ್ಟೇ ಸಿನಿಮಾ ಭಾರತದಲ್ಲಿ ಪ್ರದರ್ಶನ ಕಾಣಲು ಸಾಧ್ಯ. ಸಿನಿಮಾ ಬಗ್ಗೆ ಯಾರಿಗಾದರೂ ಆಕ್ಷೇಪಗಳಿದ್ದರೆ, ನಮಗೆ ಮಾಹಿತಿ ನೀಡಬೇಕು. ನಾವದನ್ನು ಸೆನ್ಸಾರ್ ಮಂಡಳಿಗೆ ಕಳುಹಿಸಿ ಕೊಡುತ್ತೇವೆ ಎಂದು ಅನುರಾಗ್ ಸಿಂಗ್ ಠಾಕರೂ ಅವರು ಹೇಳಿದರು.

ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ತಿಳಿಸಿ

ಭಾರತದಂಥ ದೇಶದಲ್ಲಿ ನಾವು ನಮ್ಮ ಶಕ್ತಿಯನ್ನು ಎಲ್ಲೆಡೆ ವಿಸ್ತರಿಸುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತೇವೆ. ನಮ್ಮ ಸಿನಿಮಾಗಳು ಜಗತ್ತಿನಾದ್ಯಂತ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಳ್ಳುತ್ತೇವೆ. ಮತ್ತೊಂದೆಡೆ, ಬಾಯ್ಕಾಟ್‌ನಂಥ ಚಟುವಟಿಕೆಗಳು ನಡೆಯುತ್ತಿವೆ. ಇವು ನಮ್ಮ ಮೇಲೆ ಋಣಾತ್ಮಕ ಪರಿಣಾಮವನ್ನು ಬೀರುತ್ತವೆ. ಯಾವುದೇ ಸಿನಿಮಾ ಬಗ್ಗೆ ಆಕ್ಷೇಪಗಳಿದ್ದರೆ, ಮಾಹಿತಿ ಮತ್ತು ಪ್ರಸಾರ ಇಲಾಖೆಯ ಗಮನಕ್ಕೆ ತನ್ನಿ, ಆ ಬಗ್ಗೆ ನಾವು ನಿರ್ಮಾಪಕರು ಮತ್ತು ನಿರ್ದೇಶಕರಿಗೆ ಮಾಹಿತಿ ನೀಡುತ್ತೇವೆ. ಆದರೆ, ಬಹಳಷ್ಟು ಸಂದರ್ಭದಲ್ಲಿ ಸಂಪೂರ್ಣ ಮಾಹಿತಿ ಇಲ್ಲದೇ, ಇಡೀ ವಾತಾವರಣವನ್ನು ಹಾಳು ಮಾಡುವಂಥ ಘಟನೆಗಳು ನಡೆಯುತ್ತವೆ. ಇದು ತಪ್ಪು ಎಂದು ಅನುರಾಗ್ ಸಿಂಗ್ ಠಾಕೂರ್ ಅವರು ಹೇಳಿದ್ದಾರೆ.

ಇದನ್ನೂ ಓದಿ: Pathaan Movie: ವಿಶ್ವಾದ್ಯಂತ 400 ಕೋಟಿ ರೂ. ಕ್ಲಬ್‌ ಸೇರಿದ ʻಪಠಾಣ್‌ʼ

ಪ್ರತಿಭಾವಂತ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಘಟನೆ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಬಾಯ್ಕಾಟ್ ಬಾಲಿವುಡ್ ಟ್ರೆಂಡ್ ಶುರುವಾಯಿತು. ಬಳಿಕ, ಹಿಂದೂ ಧರ್ಮ ಅವಹೇಳನ ಮಾಡಲಾಗಿದೆ ಎಂದು ಅನೇಕ ಸಿನಿಮಾಗಳ ವಿರುದ್ಧ ಬಾಯ್ಕಾಟ್‌ಗೆ ಕರೆ ನೀಡಲಾಗಿತ್ತು. ಪಠಾಣ್ ಚಿತ್ರದಲ್ಲಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಪಠಾಣ್ ವಿರುದ್ಧ ಬಾಯ್ಕಾಟ್ ಮಾಡಲಾಗಿತ್ತು. ಆದರೆ, ಈ ಎಲ್ಲ ಬಹಿಷ್ಕಾರ್ ಮೀರಿ ಪಠಾಣ್ ಚಿತ್ರವೂ ಭಾರತವೂ ಸೇರಿದಂತೆ ಜಗತ್ತಿನಾದ್ಯಂತ ಸಕ್ಸೆಸ್ ಕಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Ram Navami: ನಾಳೆ ದೇಶಾದ್ಯಂತ ರಾಮ ನವಮಿ ಸಂಭ್ರಮ; ಈ ದಿನದ ಮಹತ್ವವೇನು ಗೊತ್ತೇ ?

Ram Navami: ಈಗ ಪ್ರತಿಯೊಬ್ಬರ ಮನದಲ್ಲೂ ರಾಮನಾಮ ಮೊಳಗುತ್ತಿದೆ. ಯಾಕೆಂದರೆ ರಾಮ ಜನ್ಮ ದಿನದ ಉತ್ಸವ ರಾಮ ನವಮಿ ಆಚರಣೆಗೆ ದೇಶವೇ ಸಜ್ಜಾಗಿದೆ. ದೇಶಾದ್ಯಂತ ಇರುವ ರಾಮ ಮಂದಿರಗಳು ಅಲಂಕಾರಗೊಂಡು ವೈಭವದಿಂದ ರಾಮನ ಹುಟ್ಟುಹಬ್ಬ ಆಚರಣೆಗೆ ಕಾಯುತ್ತಿದೆ.

VISTARANEWS.COM


on

By

Ram Navami
Koo

ಪ್ರತಿ ವರ್ಷದಂತೆ ಈ ಬಾರಿಯು ಭಗವಾನ್ ಶ್ರೀ ರಾಮನ (sriram) ಜನ್ಮ ದಿನವಾದ ರಾಮ ನವಮಿ (Ram Navami) ಮತ್ತೆ ಬಂದಿದೆ. ದೇಶಾದ್ಯಂತ ರಾಮ ನವಮಿ ಉತ್ಸವಕ್ಕೆ ರಾಮ ಭಕ್ತರು ಸಜ್ಜಾಗಿದ್ದಾರೆ. ರಾಮ ಮಂದಿರಗಳನ್ನೂ (ram mandir) ಸುಂದರವಾಗಿ ಅಲಂಕರಿಸಿ ಅತ್ಯಂತ ವೈಭವದಿಂದ ಉತ್ಸವವನ್ನು ಆಚರಿಸಲು ಸಿದ್ದತೆಗಳು ಭರದಿಂದ ಸಾಗುತ್ತಿದೆ.

ರಾಮ ನವಮಿಯಂದು ಸಾಮಾನ್ಯವಾಗಿ ರಾಮ ಭಕ್ತು (Ram Bhaktas) ದೇವಾಲಯಕ್ಕೆ ಭೇಟಿ ನೀಡುತ್ತಾರೆ. ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸುತ್ತಾರೆ. ಈ ಸಂದರ್ಭದಲ್ಲಿ ಹಲವಾರು ಮಂದಿ ಉಪವಾಸ (fasting) ವ್ರತವನ್ನು ಆಚರಿಸುತ್ತಾರೆ. ದೇವಾಲಯಗಳಲ್ಲಿ (temple) ಆಧ್ಯಾತ್ಮಕ ಪ್ರವಚನ, ಭಜನೆ, ಸಂಕೀರ್ತನೆಗಳನ್ನು ಆಯೋಜಿಸಲಾಗುತ್ತದೆ. ತೊಟ್ಟಿಲಲ್ಲಿ ಪುಟ್ಟ ರಾಮನನ್ನು ಇಟ್ಟು ತೂಗಿ ಪೂಜೆ ಸಲ್ಲಿಸಲಾಗುತ್ತದೆ. ಒಟ್ಟಿನಲ್ಲಿ ಈ ದಿನ ಎಲ್ಲರೂ ರಾಮನ ಭಕ್ತಿಯಲ್ಲಿ ಮಿಂದೇಳುತ್ತಾರೆ.

ರಾಮ ನವಮಿ ಆಚರಣೆ ಯಾವಾಗ?

ಶ್ರೀ ರಾಮನು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿಯಂದು ಜನಿಸಿದ್ದಾನೆ. ಹೀಗಾಗಿ ಹಿಂದೂ ಚಾಂದ್ರಮಾನ ಪಂಚಾಂಗದಲ್ಲಿ ಬರುವ ಏಪ್ರಿಲ್ 17 ಬುಧವಾರದಂದು ರಾಮನವಮಿಯನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: Ram Mandir : ರಾಮನವಮಿಯಂದು ವಿತರಿಸಲು ಅಯೋಧ್ಯೆಗೆ 1,11,111 ಕೆ.ಜಿ ಲಡ್ಡು ಕಳುಹಿಸಿದ ರಾಮಭಕ್ತರು

ರಾಮ ನವಮಿ ದಿನ ಮಧ್ಯಾಹ್ನ ಗಂಟೆ 11.03 ರಿಂದ 1.38 ವಿಶೇಷವೆಂದು ಪರಿಗಣಿಸಲಾಗಿದೆ. ರಾಮ ನವಮಿ ತಿಥಿಯು ಏಪ್ರಿಲ್ 16ರಂದು ಬೆಳಗ್ಗೆ 1.23ಕ್ಕೆ ಪ್ರಾರಂಭವಾಗಿ ಏಪ್ರಿಲ್ 17ರಂದು ರಾತ್ರಿ 3.14 ಕ್ಕೆ ಮುಕ್ತಾಯವಾಗುತ್ತದೆ.


ರಾಮ ನವಮಿಯ ಇತಿಹಾಸವೇನು?

ಹಿಂದೂ ಪುರಾಣಗಳಲ್ಲಿ ಅತ್ಯಂತ ಶ್ರೇಷ್ಠ ವ್ಯಕ್ತಿಯೆಂದೇ ಪರಿಗಣಿಸಲ್ಪಟ್ಟಿರುವ ಭಗವಾನ್ ರಾಮನ ರಾಮ ನವಮಿಯಂದು ಜನ್ಮ ತಾಳಿದ್ದನು. ಹಿಂದೂ ಕ್ಯಾಲೆಂಡರ್‌ನಲ್ಲಿ ಸಾಂಪ್ರದಾಯಿಕವಾಗಿ ಚೈತ್ರ ಮಾಸದ ಒಂಬತ್ತನೇ ದಿನದಂದು ರಾಮ ನವಮಿಯನ್ನು ಆಚರಿಸಲಾಗುತ್ತದೆ. ಶ್ರೀರಾಮನು ವಿಷ್ಣುವಿನ ಏಳನೇ ಅವತಾರವೆಂದು ನಂಬಲಾಗುತ್ತದೆ. ಸದಾಚಾರ ಮತ್ತು ಸದ್ಗುಣಗಳ ಪ್ರತಿಪಾದಕನೆಂದು ರಾಮನನ್ನು ಕರೆಯಲಾಗುತ್ತದೆ. ಅನೇಕ ಶತಮಾನಗಳಿಂದ ರಾಮ ನವಮಿಯನ್ನು ಅತ್ಯಂತ ವೈಭವಾಗಿ ಆಚರಿಸಲಾಗುತ್ತದೆ.

ರಾಮ ನವಮಿ ಆಚರಣೆ ಏಕೆ ?

ಪ್ರಪಂಚದಾದ್ಯಂತದ ಹಿಂದೂಗಳು ಅಪಾರ ಸಾಂಸ್ಕೃತಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದ್ದಾರೆ. ರಾಮ ನವಮಿಯು ಧರ್ಮ ಅಥವಾ ಸದಾಚಾರದ ನಿರಂತರ ಮೌಲ್ಯಗಳನ್ನು ಗೌರವಿಸುವ ಆಚರಣೆಯಾಗಿದೆ. ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಇದು ಸೂಚಿಸುತ್ತದೆ. ಭಗವಾನ್ ರಾಮನ ಕರ್ತವ್ಯ, ಗೌರವ ಮತ್ತು ತ್ಯಾಗದ ಉದಾಹರಣೆಯು ಜನರಲ್ಲಿ ನೈತಿಕ ತತ್ತ್ವ ಗಳನ್ನು ಸಂರಕ್ಷಿಸಲು ಮತ್ತು ಸದ್ಗುಣಶೀಲ ಜೀವನವನ್ನು ನಡೆಸಲು ಪ್ರೇರೇಪಿಸುತ್ತದೆ.


ಹೇಗೆ ಆಚರಣೆ ?

ರಾಮ ನವಮಿಯನ್ನು ಭಾರತದಲ್ಲಿ ಜನರು ಬಹಳ ಉತ್ಸಾಹ ಮತ್ತು ಆಸಕ್ತಿಯಿಂದ ಆಚರಿಸುತ್ತಾರೆ. ಭಗವಾನ್ ರಾಮನ ಸಣ್ಣ ವಿಗ್ರಹವನ್ನು ಪೀಠದ ಮೇಲೆ ಇರಿಸಲಾಗುತ್ತದೆ. ಮನೆಗಳನ್ನು ಸ್ವಚ್ಛಗೊಳಿಸುತ್ತಾರೆ ಮತ್ತು ಅಲಂಕರಿಸಲಾಗುತ್ತದೆ. ಮನೆ ಬಾಗಿಲಲ್ಲಿ ರಂಗೋಲಿಗಳನ್ನು ಬರೆಯಲಾಗುತ್ತದೆ. ಭಗವಾನ್ ರಾಮನಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಉಪವಾಸ, ಮೆರವಣಿಗೆ, ಮಹಾಕಾವ್ಯ ರಾಮಾಯಣ ಪಠಿಸುವುದು ಮತ್ತು ಕೇಳುವುದು, ಹವನಗಳಂತ ವಿವಿಧ ಆಚರಣೆಗಳಲ್ಲಿ ಭಕ್ತರು ಪಾಲ್ಗೊಳ್ಳುತ್ತಾರೆ. ರಾಮ ನವಮಿಯು ಒಂಬತ್ತು ದಿನಗಳ ಚೈತ್ರ ನವರಾತ್ರಿ ಉತ್ಸವದ ಅಂತ್ಯವನ್ನು ಸೂಚಿಸುತ್ತದೆ. ಈ ಸಂದರ್ಭದಲ್ಲಿ ಜಾತಿ, ಧರ್ಮ ಮತ್ತು ರಾಷ್ಟ್ರೀಯತೆಯನ್ನು ಮೀರಿ ಎಲ್ಲ ಸಮುದಾಯಗಳು ಏಕತೆ ಮತ್ತು ಸಾಮರಸ್ಯದಿಂದ ಹಬ್ಬದಲ್ಲಿ ಪಾಲ್ಗೊಳ್ಳುತ್ತದೆ.


ಅಯೋಧ್ಯೆಯತ್ತ ಎಲ್ಲರ ಚಿತ್ತ

ಉತ್ತರಪ್ರದೇಶದ ಅಯೋಧ್ಯೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಯಾಕೆಂದರೆ ರಾಮ ಜನ್ಮ ಭೂಮಿಯಲ್ಲಿ ರಾಮ ಮಂದಿರ ಉದ್ಘಾಟನೆಯಾದ ಬಳಿಕ ಮೊದಲ ಬಾರಿಗೆ ಹೊಸ ಮಂದಿರದಲ್ಲಿ ರಾಮನ ಜನ್ಮ ದಿನವನ್ನು ಆಚರಿಸಲಾಗುತ್ತದೆ. ಈಗಾಗಲೇ ಇಲ್ಲಿ ಸಾಕಷ್ಟು ತಯಾರಿಗಳು ನಡೆದಿದ್ದು, ವಿಶ್ವದ ಗಮನ ಸೆಳೆದಿದೆ. ಹೊರದೇಶಗಳಲ್ಲೂ ಆಚರಣೆ ರಾಮ ಜನ್ಮದಿನವನ್ನು ಭಾರತದಲ್ಲಿ ಮಾತ್ರವಲ್ಲ ನೇಪಾಳ, ಬಾಂಗ್ಲಾದೇಶದ ಹಿಂದೂಗಳೂ ಅತ್ಯಂತ ವೈಭವದಿಂದ ಆಚರಿಸುತ್ತಾರೆ. ಉತ್ತರ ಅಮೆರಿಕ ಮತ್ತು ಯುರೋಪ್ ನ ಕೆಲವು ರಾಷ್ಟ್ರಗಳಲ್ಲೂ ರಾಮನವಮಿಯನ್ನು ಆಚರಿಸಲಾಗುತ್ತದೆ.

Continue Reading

ವಾಣಿಜ್ಯ

Indian stock market: ಸೆನ್ಸೆಕ್ಸ್ ಕುಸಿತ: ಭಾರತೀಯ ಷೇರು ಮಾರುಕಟ್ಟೆಗೆ ಭಾರಿ ಹೊಡೆತ

Indian stock market: ನಿರಂತರ ಮೂರು ದಿನಗಳಿಂದ ಸೆನ್ಸೆಕ್ಸ್ ಕುಸಿಯುತ್ತಿದ್ದು, ಇಂದು ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟವಾಗಿದೆ. ನಿಫ್ಟಿ ಸೂಚ್ಯಂಕದಲ್ಲಿ ಸುಮಾರು 650 ಪಾಯಿಂಟ್‌ಗಳನ್ನು ಕಳೆದುಕೊಂಡಿದೆ.

VISTARANEWS.COM


on

By

Indian stock market
Koo

ಮುಂಬಯಿ: ಕಳೆದ ಮೂರು ದಿನಗಳಿಂದ ಭಾರತೀಯ ಷೇರು ಮಾರುಕಟ್ಟೆಯಲ್ಲಿ (Indian stock market) ತೀವ್ರ ಕುಸಿತವಾಗುತ್ತಿದ್ದು, ನಾಲ್ಕನೇ ದಿನದ ವೇಳೆಗೆ ನಿಫ್ಟಿ (Nifty) ಸೂಚ್ಯಂಕದಲ್ಲಿ (index) ಸುಮಾರು 650 ಪಾಯಿಂಟ್‌ಗಳನ್ನು ಕಳೆದುಕೊಂಡು ನೇರ ನಷ್ಟವನ್ನು ಅನುಭವಿಸಿದೆ. ಏಪ್ರಿಲ್ 16ರಂದು ನಿಫ್ಟಿ 50 ಸೂಚ್ಯಂಕವು 22,125 ಮಟ್ಟದಲ್ಲಿ ವಹಿವಾಟು ಆರಂಭಿಸಿ 22,103 ಅಂಕಗಳಿಗೆ ತಲುಪಿತು.

ಬಿಎಸ್‌ಇ (BSE) ಸಂವೇದಿ ಸೂಚ್ಯಂಕವು 72,892 ರಲ್ಲಿ ವಹಿವಾಟು ಪ್ರಾರಂಭಿಸಿ ಮೂರು ಸೆಷನ್‌ಗಳಲ್ಲಿ ಸುಮಾರು 2,184 ಪಾಯಿಂಟ್‌ಗಳನ್ನು ಕಳೆದುಕೊಂಡಿತ್ತು. ಬ್ಯಾಂಕ್ ನಿಫ್ಟಿ (bank nifty) 47,436 ಮಟ್ಟದಲ್ಲಿ ವಹಿವಾಟು ಪ್ರಾರಂಭಿಸಿ ಕನಿಷ್ಠ 47,316 ಅನ್ನು ತಲುಪಿದೆ.

ಎಷ್ಟು ನಷ್ಟ ?

ಕಳೆದ ಮೂರು ಅವಧಿಗಳಲ್ಲಿ ನಿಫ್ಟಿ 50 ಸೂಚ್ಯಂಕವು ಸುಮಾರು 650 ಪಾಯಿಂಟ್‌ಗಳನ್ನು ಕಳೆದುಕೊಂಡಿದೆ. ಬಿಎಸ್‌ಇ ಸೆನ್ಸೆಕ್ಸ್ ಸುಮಾರು 2,200 ಪಾಯಿಂಟ್‌ಗಳನ್ನು ಕಳೆದುಕೊಂಡಿದೆ ಮತ್ತು ಬ್ಯಾಂಕ್ ನಿಫ್ಟಿ ಸೂಚ್ಯಂಕ 2,700 ಪಾಯಿಂಟ್‌ಗಳಷ್ಟು ಕುಸಿತ ಕಂಡಿದೆ. ಈ ಮಧ್ಯೆ ಸ್ಮಾಲ್-ಕ್ಯಾಪ್ ಸೂಚ್ಯಂಕವು ಸುಮಾರು ಶೇಕಡಾ 1ರಷ್ಟು ಮತ್ತು ಮಿಡ್ ಕ್ಯಾಪ್ ಸೂಚ್ಯಂಕವು ಸುಮಾರು ಶೇ. 0.40 ರಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: Innova Hycross: ಇನ್ನೋವಾ ಹೈಕ್ರಾಸ್ ಪೆಟ್ರೋಲ್ GX (O) ಗ್ರೇಡ್ ಬಿಡುಗಡೆ; ದರ ಎಷ್ಟು?

ಸೆನ್ಸೆಕ್ಸ್ ಕುಸಿತಕ್ಕೆ ಕಾರಣ ?

ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯು ಸ್ಟಾಕ್ ಮಾರುಕಟ್ಟೆಯ ಕುಸಿತಕ್ಕೆ ಕಾರಣ ಎನ್ನಲಾಗಿದೆ. ಯುದ್ಧ ಪರಿಸ್ಥಿತಿಯು ಇಲ್ಲಿ ಭೌಗೋಳಿಕ ರಾಜಕೀಯ ಅನಿಶ್ಚಿತತೆಯನ್ನು ಉಂಟು ಮಾಡಿದೆ.

ಜಾಗತಿಕ ಮಾರುಕಟ್ಟೆ ಸ್ಥಿತಿ ?

ಯುಎಸ್ ಷೇರು ಮಾರುಕಟ್ಟೆಯು ಶುಕ್ರವಾರ ತೀವ್ರ ನಷ್ಟ ಅನುಭವಿಸಿದ್ದರಿಂದ ವಿಶ್ವ ಮಟ್ಟದಲ್ಲೇ ಷೇರುಗಳು ಹೆಚ್ಚಾಗಿ ಮಾರಾಟವಾಗಿವೆ. ಏಷ್ಯಾದ ಮಾರುಕಟ್ಟೆಗಳಾದ ನಿಕ್ಕಿ, ಹ್ಯಾಂಗ್ ಸೆಂಗ್, ಕೊಸ್ಪಿಯಲ್ಲಿ ಸೋಮವಾರ ಹೆಚ್ಚಿನ ಒತ್ತಡ ಕಂಡು ಬಂದಿದೆ.


ಕಚ್ಚಾ ತೈಲ ಬೆಲೆ ?

ಕಚ್ಚಾ ತೈಲ ಬೆಲೆಗಳು ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಳೆದ ಆರು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದೆ. ಮಾರ್ಚ್ 2024 ರಲ್ಲಿ ಸುಮಾರು ಶೇ. 6 ರಷ್ಟು ಹೆಚ್ಚಳವಾಗಿದ್ದು, ಏಪ್ರಿಲ್‌ನಲ್ಲಿ ಈಗಾಗಲೇ ಶೇ. 3 ರಷ್ಟು ಏರಿಕೆಯಾಗಿದೆ. ಹೀಗೆಯೇ ಕಚ್ಚಾ ತೈಲ ಬೆಲೆ ಏರಿಕೆಯಾದರೆ ಸ್ಥಳೀಯ ಕರೆನ್ಸಿ ಮತ್ತು ಹಣದುಬ್ಬರದ ಮೇಲೆ ಒತ್ತಡ ಉಂಟುಮಾಡುತ್ತದೆ.

ಯುಎಸ್ ಡಾಲರ್ ಮೌಲ್ಯ ?

ಯುಎಸ್ ಡಾಲರ್ ಮೌಲ್ಯ ನಿರಂತರವಾಗಿ ಏರುತ್ತಿದ್ದು, ಯುಎಸ್ ಡಾಲರ್ ಸೂಚ್ಯಂಕವು 106ಕ್ಕೆ ಸಮೀಪಿಸಿದೆ. ಜಪಾನಿನ ಯೆನ್ ವಿರುದ್ಧ 34 ವರ್ಷಗಳ ಗರಿಷ್ಠ ಮಟ್ಟವನ್ನು ಯುಎಸ್ ಡಾಲರ್ ತಲುಪಿದೆ. ಇದು ಭಾರತೀಯ ಷೇರು ಮಾರುಕಟ್ಟೆ ಸೇರಿದಂತೆ ಜಾಗತಿಕ ಇಕ್ವಿಟಿ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ.

Continue Reading

ದೇಶ

Air India: ಕ್ಷಿಪಣಿ ದಾಳಿಗೂ ಮುನ್ನ ಇರಾನ್ ವಾಯು ಪ್ರದೇಶದಲ್ಲಿ ಏರ್​ ಇಂಡಿಯಾ ವಿಮಾನಗಳ ಹಾರಾಟ; ಅಧಿಕಾರಿಗಳು ಹೇಳಿದ್ದೇನು?

Air India: ಇಸ್ರೇಲ್‌ ಮೇಲೆ ಇರಾನ್‌ 200ಕ್ಕೂ ಅಧಿಕ ಡ್ರೋನ್‌ಗಳು ಹಾಗೂ ಕ್ಷಿಪಣಿಗಳ ಮೂಲಕ ದಾಳಿ ನಡೆಸಿದೆ. ಅಚ್ಚರಿ ಎಂದರೆ ಇರಾನ್​ ಕ್ಷಿಪಣಿ ದಾಳಿ ನಡೆಸುವುದಕ್ಕೂ ಕೆಲವು ಗಂಟೆಗಳ ಮುನ್ನ ಎರಡು ಏರ್​ ಇಂಡಿಯಾ ವಿಮಾನಗಳು ಇರಾನ್​ ವಾಯುನೆಲೆಯಲ್ಲಿ ಹಾರಾಟ ನಡೆಸಿದ್ದವು ಎಂದು ಮೂಲಗಳು ತಿಳಿಸಿದೆ. ಈ ವಿಮಾನಗಳಲ್ಲಿ 116 ಹಾಗೂ 131 ಮಂದಿ ಪ್ರಯಾಣಿಕರಿದ್ದರು. ಈ ಪೈಕಿ ಒಂದು ವಿಮಾನವು ನ್ಯೂಯಾರ್ಕ್​ನಿಂದ ಮುಂಬೈಗೆ ಮತ್ತೊಂದು ಮುಂಬೈನಿಂದ ಲಂಡನ್​ಗೆ ಪ್ರಯಾಣ ಬೆಳಸಿದ್ದವು.

VISTARANEWS.COM


on

Air India
Koo

ನವದೆಹಲಿ: ಇಸ್ರೇಲ್‌ ಮೇಲೆ ಇರಾನ್‌ 200ಕ್ಕೂ ಅಧಿಕ ಡ್ರೋನ್‌ಗಳು ಹಾಗೂ ಕ್ಷಿಪಣಿಗಳ ಮೂಲಕ ದಾಳಿ (Israel Iran War) ನಡೆಸಿದ್ದು, ಮೂರನೇ ಮಹಾಯುದ್ಧದ ಭೀತಿ ಹೆಚ್ಚಾಗಿದೆ. ಈ ಮಧ್ಯೆ ಇಸ್ರೇಲ್ ಮೇಲೆ ಇರಾನ್​ ಕ್ಷಿಪಣಿ ದಾಳಿ ನಡೆಸುವುದಕ್ಕೂ ಕೆಲವು ಗಂಟೆಗಳ ಮುನ್ನ ಎರಡು ಏರ್​ ಇಂಡಿಯಾ(Air India) ವಿಮಾನಗಳು ಇರಾನ್​ ವಾಯುನೆಲೆಯಲ್ಲಿ ಹಾರಾಟ ನಡೆಸಿದ್ದವು ಎಂದು ಮೂಲಗಳು ತಿಳಿಸಿದೆ. ಈ ವಿಮಾನಗಳಲ್ಲಿ 116 ಹಾಗೂ 131 ಮಂದಿ ಪ್ರಯಾಣಿಕರಿದ್ದರು.

ಈ ಪೈಕಿ ಒಂದು ವಿಮಾನವು ನ್ಯೂಯಾರ್ಕ್​ನಿಂದ ಮುಂಬೈಗೆ ಮತ್ತೊಂದು ಮುಂಬೈನಿಂದ ಲಂಡನ್​ಗೆ ಪ್ರಯಾಣ ಬೆಳಸಿದ್ದವು. ಈ ವಿಮಾನಗಳು ಕ್ರಮವಾಗಿ ಏಪ್ರಿಲ್ 13 ಮತ್ತು ಏಪ್ರಿಲ್ 14ರಂದು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಕೊಲ್ಲಿಯ ಮೇಲೆ ಹಾರಾಟ ನಡೆಸಿದ್ದವು ಎಂದು ಮೂಲಗಳು ತಿಳಿಸಿವೆ. ಏಪ್ರಿಲ್​ 13ರಂದು ಇರಾನ್ ಕನಿಷ್ಠ 300 ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಇಸ್ರೇಲ್ ಮೇಲೆ ಹಾರಿಸಿತ್ತು.

ಏರ್‌ ಇಂಡಿಯಾ ಹೇಳಿದ್ದೇನು?

ಈ ಬಗ್ಗೆ ಏರ್‌ ಇಂಡಿಯಾ ಪ್ರತಿಕ್ರಿಯಿಸಿ, ಪ್ರಯಾಣಿಕರು, ಸಿಬ್ಬಂದಿ ಮತ್ತು ವಿಮಾನದ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದೆ. “ಏಪ್ರಿಲ್ 13ರಿಂದ ಇರಾನಿನ ವಾಯುಪ್ರದೇಶವು ಯಾವುದೇ ನಿರ್ಬಂಧಗಳಿಲ್ಲದೆ ನಾಗರಿಕ ವಿಮಾನ ಸಂಚಾರಕ್ಕೆ ಲಭ್ಯವಿದ್ದರೂ ಮತ್ತು ವಿಮಾನಯಾನ ಸಂಸ್ಥೆಗಳು ಆ ವಾಯುಪ್ರದೇಶದಲ್ಲಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಿದರೂ ಏರ್ ಇಂಡಿಯಾ ವಿವಿಧ ಸುರಕ್ಷತಾ ಸಂಸ್ಥೆಗಳು ಮತ್ತು ನಿಯಂತ್ರಕ ಸಂಸ್ಥೆಗಳೊಂದಿಗೆ ನಿಕಟ ಸಮಾಲೋಚನೆ ನಡೆಸುತ್ತಿದೆ. ಜತೆಗೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಪಶ್ಚಿಮ ದೇಶಗಳಿಗೆ ತೆರಳುವ ಕೆಲವು ವಿಮಾನಗಳಿಗೆ ಸುರಕ್ಷಿತ ಪರ್ಯಾಯ ಮಾರ್ಗಗಳನ್ನು ನಿರ್ದೇಶಿಸಲಾಗುತ್ತಿದೆʼʼ ಎಂದು ಅಧಿಕಾರಿಗಳು ಹೇಳಿದ್ದಾರೆ.

ಏರ್ ಇಂಡಿಯಾ ವಿಮಾನ ಮಾತ್ರವಲ್ಲ ಇತರ ವಿಮಾನಯಾನ ಸಂಸ್ಥೆಗಳ ವಿಮಾನಗಳೂ ಇದೇ ಮಾರ್ಗದಲ್ಲಿ ಏಪ್ರಿಲ್ 13ರಂದು ಹಾರಾಟ ನಡೆಸಿದ್ದವು. ಇರಾನ್ ವಾಯುಪ್ರದೇಶದ ಮೂಲಕ ಮಲೇಷ್ಯಾ ಏರ್‌ಲೈನ್ಸ್‌, ಎಮಿರೇಟ್ಸ್ ಮತ್ತು ಕತಾರ್ ಏರ್‌ವೇಸ್‌ನಂತಹ ವಿಮಾನಗಳು ಹಾದು ಹೋಗಿದ್ದವು ಎಂದು ವರದಿ ಹೇಳಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಏರ್ ಇಂಡಿಯಾ ಏಪ್ರಿಲ್ 13ರಂದು ಕೆಲವು ವಿಮಾನಗಳನ್ನು ಬೇರೆ ಮಾರ್ಗಗಳ ಮೂಲಕ ಹಾರಾಟ ನಡೆಸಿದೆ. ಕೊಚ್ಚಿಯಿಂದ ಲಂಡನ್ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಮತ್ತು ದೆಹಲಿಯಿಂದ ಫ್ರಾಂಕ್ಫರ್ಟ್‌ಗೆ ತೆರಳುವ ವಿಮಾನಗಳು ಅಫ್ಘಾನಿಸ್ತಾನದ ಮಾರ್ಗ ಆಯ್ಕೆ ಮಾಡಿಕೊಂಡಿದ್ದವು. ಹೀಗಿದ್ದೂ ಈ ಎರಡು ವಿಮಾನಗಳು ಇರಾನ್‌ ವಾಯು ಮಾರ್ಗವನ್ನು ಏಕೆ ಆರಿಸಿಕೊಂಡವು ಎನ್ನುವುದರ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ.

ಇದನ್ನೂ ಓದಿ: ಇಸ್ರೇಲ್‌-ಇರಾನ್‌ ಸಂಘರ್ಷದಿಂದ ಭಾರತದ ಮೇಲೆ ಪರಿಣಾಮ? ಪೆಟ್ರೋಲ್‌ ಬೆಲೆ ಏರಿಕೆ ನಿಶ್ಚಿತ?

ಅಮೆರಿಕಕ್ಕೆ ಇರಾನ್‌ ಎಚ್ಚರಿಕೆ

ಇಸ್ರೇಲ್‌ ಮೇಲೆ ಇರಾನ್‌ ದಾಳಿ ಮಾಡಿದರೆ, ನಾವು ಇಸ್ರೇಲ್‌ ಪರ ನಿಲ್ಲುತ್ತೇವೆ ಎಂದು ಅಮೆರಿಕ ತಿಳಿಸಿದ ಬೆನ್ನಲ್ಲೇ ಅಮೆರಿಕಕ್ಕೆ ಇರಾನ್‌ ಎಚ್ಚರಿಕೆ ನೀಡಿದೆ. “ಡಮಾಸ್ಕಸ್‌ನಲ್ಲಿರುವ ನಮ್ಮ ರಾಜತಾಂತ್ರಿಕ ಕಚೇರಿಗಳ ಮೇಲೆ ಯಹೂದಿಗಳು (ಇಸ್ರೇಲ್)‌ ಆಕ್ರಮಣಕಾರಿ ನೀತಿ ಅನುಸರಿಸುತ್ತಿರುವ ಕಾರಣ ಪ್ರತಿಕ್ರಿಯೆ ರೂಪದಲ್ಲಿ ಇರಾನ್‌ ಮಿಲಿಟರಿ ಪಡೆಗಳು ದಾಳಿ ನಡೆಸುತ್ತಿವೆ. ಇದಕ್ಕೆ ಇಸ್ರೇಲ್‌ ಕೂಡ ಪ್ರತಿದಾಳಿ ಮಾಡಬಹುದು. ಹಾಗಾಗಿ, ಮುಂದಿನ ದಿನಗಳಲ್ಲಿ ಪರಿಣಾಮಗಳು ಭೀಕರವಾಗಿರಲಿವೆ. ಇದು ಇಸ್ರೇಲ್‌ ಹಾಗೂ ಇರಾನ್‌ ನಡುವಿನ ಸಮರವಾಗಿದೆ. ಹಾಗಾಗಿ, ಇದರಿಂದ ಅಮೆರಿಕ ದೂರ ಉಳಿಯಲೇಬೇಕು” ಎಂದು ಇರಾನ್‌ ಎಚ್ಚರಿಸಿದೆ.

Continue Reading

ದೇಶ

UPSC Results 2023: ಕೋಚಿಂಗ್‌ ಇಲ್ಲದೆ ಓದಿದ ಅನನ್ಯಾ ರೆಡ್ಡಿಗೆ ಯುಪಿಎಸ್‌ಸಿಯಲ್ಲಿ 3ನೇ ರ‍್ಯಾಂಕ್!

UPSC Results 2023: ಹಣಕಾಸು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎಂಎನ್‌ಸಿಯಲ್ಲಿ ಕೆಲಸ ಮಾಡಿದ ಆದಿತ್ಯ ಶ್ರೀವಾಸ್ತವ್‌ ಅವರು ನಾಗರಿಕ ಸೇವೆಯ ಕಾರಣಕ್ಕಾಗಿ 2017ರಲ್ಲಿ ಉದ್ಯೋಗ ತೊರೆದು, ಐಎಎಸ್‌ಗೆ ತಯಾರಿ ನಡೆಸಿ ಯಶಸ್ಸು ಗಳಿಸಿದ್ದಾರೆ. ಇನ್ನು ತೆಲಂಗಾಣದ ಡೋನೂರು ಅನನ್ಯಾ ರೆಡ್ಡಿ ಅವರು ದೇಶಕ್ಕೇ ಮೂರನೇ ರ‍್ಯಾಂಕ್‌ ಪಡೆದಿದ್ದಾರೆ. ಇವರು ಯಾವುದೇ ಕೋಚಿಂಗ್‌ ತರಬೇತಿ ಇಲ್ಲದೆಯೇ ಸಾಧನೆ ಮಾಡಿದ್ದಾರೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

VISTARANEWS.COM


on

Donuru Ananya Reddy
Koo

ಹೈದರಾಬಾದ್‌: ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶ (UPSC Results 2023) ಪ್ರಕಟವಾಗಿದೆ. ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ್‌ (Aditya Srivastava) ಅವರು ಮೊದಲ ರ‍್ಯಾಂಕ್‌ ಗಳಿಸಿದ್ದಾರೆ. ಇನ್ನು, ತೆಲಂಗಾಣದ ಡೋನೂರು ಅನನ್ಯಾ ರೆಡ್ಡಿ (Donuru Ananya Reddy) ಅವರು ದೇಶಕ್ಕೇ ಮೂರನೇ ರ‍್ಯಾಂಕ್‌ ಪಡೆದಿದ್ದಾರೆ. ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯವರಾದ ಡೋನೂರು ಅನನ್ಯಾ ರೆಡ್ಡಿ ಅವರು ಕೋಚಿಂಗ್‌ ತರಬೇತಿ ಇಲ್ಲದೆಯೇ ಅಧ್ಯಯನ ಮಾಡಿ ಇಂತಹ ಸಾಧನೆಗೈದಿದ್ದಾರೆ. ಹಾಗಾದರೆ, ಇವು ಐಎಎಸ್‌ಗೆ ಹೇಗೆ ಅಧ್ಯಯನ ಮಾಡುತ್ತಿದ್ದರು? ಇವರ ಸ್ಟ್ರ್ಯಾಟಜಿ ಏನಾಗಿತ್ತು ಎಂಬುದರ ಮಾಹಿತಿ ಇಲ್ಲಿದೆ.

ಮೆಹಬೂಬ್‌ನಗರ ಜಿಲ್ಲೆಯವರಾದ ಅನನ್ಯಾ ರೆಡ್ಡಿ ಅವರು ದೆಹಲಿ ವಿಶ್ವವಿದ್ಯಾಲಯದ ಮಿರಿಂಡ ಹೌಸ್‌ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಕ್ರಿಕೆಟ್‌ನಲ್ಲಿ ಆಸಕ್ತಿ ಹೊಂದಿರುವ ಇವರು ಮಕ್ಕಳಿಗೆ ಕಲಿಸುವುದರಲ್ಲಿ ಖುಷಿ ಕಂಡವರು. ಪದವಿ ನಂತರ ಕಷ್ಟಪಟ್ಟು ಓದಿದ ಇವರು ಯಾವುದೇ ತರಬೇತಿ ಇಲ್ಲದೆಯೇ ಯುಪಿಎಸ್‌ಸಿಯಲ್ಲಿ ಮೂರನೇ ರ‍್ಯಾಂಕ್‌ ಪಡೆದಿದ್ದಾರೆ. ಮಾನವಶಾಸ್ತ್ರ ವಿಷಯದ ಕುರಿತು ಮಾತ್ರ ಇವರು ತರಬೇತಿ ಪಡೆದಿದ್ದು ಬಿಟ್ಟರೆ, ಉಳಿದ ತಯಾರಿಯನ್ನು ಅವರೇ ಮಾಡಿಕೊಂಡು, ಸತತ ಪರಿಶ್ರಮದ ಮೂಲಕ ಸಾಧನೆಯ ಮೆಟ್ಟಿಲು ಹತ್ತಿದ್ದಾರೆ.

ದೇಶಕ್ಕೇ ತೃತೀಯ ರ‍್ಯಾಂಕ್‌ ಪಡೆದ ಕುರಿತು ಅನನ್ಯಾ ರೆಡ್ಡಿ ಮಾಹಿತಿ ನೀಡಿದ್ದಾರೆ. “ನಾನು ಯಾವುದೇ ಕೋಚಿಂಗ್‌ ಸಂಸ್ಥೆಗಳಲ್ಲಿ ತರಬೇತಿ ಪಡೆದಿಲ್ಲ. ನಿತ್ಯ 12-14 ತಾಸು ಕಡ್ಡಾಯವಾಗಿ ಅಧ್ಯಯನ ಮಾಡುತ್ತಿದ್ದೆ. ನಾನು ಚಿಕ್ಕವಳಿದ್ದಾಗಲೇ ಸಮಾಜಕ್ಕೆ ನನ್ನಿಂದಾದ ಸೇವೆ ಮಾಡಬೇಕು ಎಂದು ಬಯಸಿದ್ದೆ. ಶಾಲೆಯಲ್ಲಿದ್ದಾಗಲೇ ಈ ದಿಸೆಯಲ್ಲಿ ಅಧ್ಯಯನ ಮಾಡುತ್ತಿದ್ದೆ. ಮುಖ್ಯ ಪರೀಕ್ಷೆ, ಸಂದರ್ಶನವನ್ನು ಆತ್ಮವಿಶ್ವಾಸದಿಂದ ಎದುರಿಸಿದ್ದೆ. ಆದರೆ, ಮೂರನೇ ರ‍್ಯಾಂಕ್‌ ಪಡೆಯುತ್ತೇನೆ ಎಂದುಕೊಂಡಿರಲಿಲ್ಲ” ಎಂಬುದಾಗಿ ಅನನ್ಯಾ ರೆಡ್ಡಿ ತಿಳಿಸಿದ್ದಾರೆ.

ದೇಶಕ್ಕೇ ಮೊದಲ ರ‍್ಯಾಂಕ್‌ ಪಡೆದ ಆದಿತ್ಯ ಶ್ರೀವಾಸ್ತವ್‌ ಅವರು ಉತ್ತರ ಪ್ರದೇಶದ ಲಖನೌ ಮೂಲದವರು. ಇವರು ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣವನ್ನು ಲಖನೌನಲ್ಲಿಯೇ ಮುಗಿಸಿದ್ದಾರೆ. ಐಐಟಿ ಕಾನ್ಪುರದಲ್ಲಿ ಎಂ.ಟೆಕ್‌ ಸ್ನಾತಕೋತ್ತರ ಪದವಿ ಪಡೆದ ಇವರು 15 ತಿಂಗಳು ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡಿದ್ದರು. ಆದರೆ, ಐಎಎಸ್‌ ಅಧಿಕಾರಿಯಾಗಬೇಕು ಎಂಬ ಕನಸು ಹೊತ್ತ ಇವರು ಎಲೆಕ್ಟ್ರಿಕಲ್‌ ಎಂಜಿನಿಯರ್ ಉದ್ಯೋಗ ಬಿಟ್ಟು ಐಎಎಸ್‌ಗೆ ಅಧ್ಯಯನ ಮಾಡಲು ಆರಂಭಿಸಿದರು. ಈಗ ಇವರು ಯಶಸ್ಸು ಸಾಧಿಸಿದ್ದಾರೆ.

ಇದನ್ನೂ ಓದಿ: UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

Continue Reading
Advertisement
Maddur MLA Uday election campaign in various places of Maddur taluk
ಮಂಡ್ಯ3 mins ago

Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಬೆಂಬಲ ನೀಡಿ: ಶಾಸಕ ಉದಯ್

Lok Sabha Election 2024 HD DeveGowda Congress cries out at HD DeveGowda Complaint to Election Commission
Lok Sabha Election 20247 mins ago

Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

jain monk
ಪ್ರಮುಖ ಸುದ್ದಿ14 mins ago

Viral Video: ಮೆರವಣಿಗೆಯಲ್ಲಿ ಸಾಗಿ 200 ಕೋಟಿ ರೂ. ಜನರ ಮೇಲೆ ಸುರಿದ ಜೈನ ದಂಪತಿ; ವಿಡಿಯೊ ವೈರಲ್​

Summer Fashion
ಫ್ಯಾಷನ್14 mins ago

Summer Fashion: ಸಮ್ಮರ್‌ ಫ್ಯಾಷನ್‌ನಲ್ಲಿ ಬಂತು ತಂಪೆರೆಯುವ ವಾಟರ್‌ಫಾಲ್‌ ಇಯರಿಂಗ್ಸ್‌

Ram Navami
ಧಾರ್ಮಿಕ38 mins ago

Ram Navami: ನಾಳೆ ದೇಶಾದ್ಯಂತ ರಾಮ ನವಮಿ ಸಂಭ್ರಮ; ಈ ದಿನದ ಮಹತ್ವವೇನು ಗೊತ್ತೇ ?

Indian stock market
ವಾಣಿಜ್ಯ42 mins ago

Indian stock market: ಸೆನ್ಸೆಕ್ಸ್ ಕುಸಿತ: ಭಾರತೀಯ ಷೇರು ಮಾರುಕಟ್ಟೆಗೆ ಭಾರಿ ಹೊಡೆತ

Air India
ದೇಶ47 mins ago

Air India: ಕ್ಷಿಪಣಿ ದಾಳಿಗೂ ಮುನ್ನ ಇರಾನ್ ವಾಯು ಪ್ರದೇಶದಲ್ಲಿ ಏರ್​ ಇಂಡಿಯಾ ವಿಮಾನಗಳ ಹಾರಾಟ; ಅಧಿಕಾರಿಗಳು ಹೇಳಿದ್ದೇನು?

Physical Abuse From husband
ಬೆಂಗಳೂರು48 mins ago

Physical Abuse : ಇವನೆಂಥ ಗಂಡ! ಕಾಲ್‌ ಗರ್ಲ್‌ ಕರೆಸಿ ಪತ್ನಿ ಮುಂದೆಯೇ ಅಸಭ್ಯ ವರ್ತನೆ

Actor Dwarakish
ಸ್ಯಾಂಡಲ್ ವುಡ್52 mins ago

Actor Dwarakish: ಪತ್ನಿ, ಮಕ್ಕಳಿದ್ದರೂ ಎರಡನೇ ಬಾರಿ ಪ್ರೀತಿಯಲ್ಲಿ ಬಿದ್ದು ಮದುವೆಯಾಗಿದ್ದರು ದ್ವಾರಕೀಶ್​​

Lok Sabha Election 2024 Dr Manjunath joins PM Narendra Modi team Ashwathnarayan reveals BJP vision
Lok Sabha Election 20241 hour ago

Lok Sabha Election 2024: ಮೋದಿ ಟೀಂಗೆ ಡಾ.ಮಂಜುನಾಥ್ ಸೇರ್ಪಡೆ; ಬಿಜೆಪಿ ವಿಷನ್‌ ಬಿಚ್ಚಿಟ್ಟ ಅಶ್ವತ್ಥನಾರಾಯಣ್

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ13 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌