Boycott Maldives: `ಭಾರತವೇ ನಮ್ಮ 911' ಎಂದ ಮಾಲ್ಡೀವ್ಸ್ ಮಾಜಿ ಸಚಿವೆ - Vistara News

ದೇಶ

Boycott Maldives: `ಭಾರತವೇ ನಮ್ಮ 911′ ಎಂದ ಮಾಲ್ಡೀವ್ಸ್ ಮಾಜಿ ಸಚಿವೆ

ಮಾಲ್ದೀವ್ಸ್‌ನ ಮಾಜಿ ರಕ್ಷಣಾ ಸಚಿವೆ ಮರಿಯಾ ಅಹ್ಮದ್ ದೀದಿ (Maria Ahmed Didi), ಉಭಯ ದೇಶಗಳ ನಡುವಿನ ದೀರ್ಘಕಾಲಿಕ ಸಂಬಂಧವನ್ನು ಹಾಳುಮಾಡುವ ಯಾವುದೇ ಪ್ರಯತ್ನವನ್ನು ಟೀಕಿಸಿದ್ದಾರೆ.

VISTARANEWS.COM


on

maria ahmed didi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಸಾಮಾಜಿಕ ಮಾಧ್ಯಮಗಳಲ್ಲಿ ʼಬಾಯ್ಕಾಟ್‌ ಮಾಲ್ದೀವ್ಸ್‌ʼ (Boycott Maldives) ಕರೆ ಜೋರಾಗುತ್ತಿರುವಂತೆ, ಡ್ಯಾಮೇಜ್‌ ಕಂಟ್ರೋಲ್‌ ಮಾಡುವ ಮಾಲ್ದೀವ್ಸ್‌ನ ಪ್ರಯತ್ನವೂ ಹೆಚ್ಚುತ್ತಿದೆ. ಇದೀಗ ಮಾಲ್ದೀವ್ಸ್‌ನ ಮಾಜಿ ಸಚಿವೆಯೊಬ್ಬರು, “ಭಾರತವೇ ನಮ್ಮ 911 (ತುರ್ತು ಸಹಾಯವಾಣಿ)ʼʼ ಎಂದು ಹೇಳಿದ್ದಾರೆ.

ಮಾಲ್ಡೀವ್ಸ್ ಅಧ್ಯಕ್ಷ (Maldives president) ಮೊಹಮ್ಮದ್ ಮುಯಿಜ್ಜು (Mohamed Muizzu) ಅವರ ಸರ್ಕಾರದ ಕೆಲವು ಸಚಿವರು ಭಾರತದ ಪ್ರಧಾನಿ ಮೋದಿ (PM Narendra Modi) ವಿರುದ್ಧ ನೀಡಿದ ಅಗೌರವದ ಟೀಕೆಗಳಿಂದ ಉಂಟಾಗಿರುವ ಹಾನಿಯನ್ನು ಸರಿಪಡಿಸಲು ಹಲವು ಮಾಜಿ ಸಚಿವರು, ಮಾಲ್ದೀವ್ಸ್‌ ಪ್ರವಾಸೋದ್ಯಮ ಸಂಘಟನೆ ಇತ್ಯಾದಿಗಳು ಮುಂದಾಗಿವೆ.

“ಭಾರತದ ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗಳು ಮಾಲ್ದೀವ್ಸ್ ಸರ್ಕಾರಕ್ಕೆ ದೂರದೃಷ್ಟಿ ಇಲ್ಲದಿರುವುದನ್ನು ಪ್ರದರ್ಶಿಸುತ್ತವೆ. ಭಾರತವು ನಮಗೆ ವಿಶ್ವಾಸಾರ್ಹ ಮಿತ್ರರಾಷ್ಟ್ರ. ರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸದಾ ನೆರವು ನೀಡುತ್ತ ಬಂದಿದೆ” ಎಂದು ಮಾಲ್ದೀವ್ಸ್‌ನ ಮಾಜಿ ರಕ್ಷಣಾ ಸಚಿವೆ ಮರಿಯಾ ಅಹ್ಮದ್ ದೀದಿ (Maria Ahmed Didi) ಹೇಳಿದ್ದು, ಉಭಯ ದೇಶಗಳ ನಡುವಿನ ದೀರ್ಘಕಾಲಿಕ ಸಂಬಂಧವನ್ನು ಹಾಳುಮಾಡುವ ಯಾವುದೇ ಪ್ರಯತ್ನವನ್ನು ಟೀಕಿಸಿದ್ದಾರೆ.

ಸಚಿವರ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ದೀದಿ ನಿರಾಶೆ ವ್ಯಕ್ತಪಡಿಸಿದ್ದು, ಭಾರತವನ್ನು ಮಾಲ್ಡೀವ್ಸ್‌ನ ʼ911 ಸಹಾಯವಾಣಿʼ ಎಂದಿದ್ದಾರೆ. “ಇದು ಪ್ರಸ್ತುತ ಆಡಳಿತದ ಕಡೆಯಿಂದ ಘಟಿಸಿರುವ ಪ್ರಮಾದವಾಗಿದೆ. ನಾವು ಎಲ್ಲರೊಂದಿಗೆ ಸ್ನೇಹ ಹೊಂದಿರುವ ಒಂದು ಸಣ್ಣ ದೇಶ. ನಾವು ಭಾರತದೊಂದಿಗೆ ಗಡಿಗಳನ್ನು ಹಂಚಿಕೊಳ್ಳುತ್ತೇವೆ ಎಂಬುದನ್ನು ನಾವು ಅಲ್ಲಗಳೆಯುವಂತಿಲ್ಲ. ನಾವು ಇದೇ ರೀತಿಯ ಭದ್ರತಾ ಕಾಳಜಿಗಳನ್ನೂ ಹಂಚಿಕೊಳ್ಳುತ್ತೇವೆ. ಭಾರತ ಯಾವಾಗಲೂ ನಮಗೆ ಸಹಾಯ ಮಾಡಿದೆ. ರಕ್ಷಣಾ ವಲಯದಲ್ಲಿಯೂ ಸಹ ಸಾಮರ್ಥ್ಯ ವೃದ್ಧಿ, ಸಲಕರಣೆಗಳನ್ನು ಒದಗಿಸಿ ನಮ್ಮನ್ನು ಹೆಚ್ಚು ಸ್ವಾವಲಂಬಿಗಳನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ” ಎಂದು ಮರಿಯಾ ಅಹ್ಮದ್ ದೀದಿ ಹೇಳಿದ್ದಾರೆ.

“ಮಾಲ್ಡೀವ್ಸ್ ಮತ್ತು ಭಾರತಗಳು ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ತಮ್ಮ ಅನ್ವೇಷಣೆಯಲ್ಲಿ ಸಮಾನ ಮನಸ್ಕ ದೇಶಗಳಾಗಿವೆ. ಭಾರತದೊಂದಿಗೆ ನಾವು ಯಾವಾಗಲೂ ಹೊಂದಿರುವ ಹಳೆಯ ಸಂಬಂಧವನ್ನು ಕಳಚಿಕೊಳ್ಳಲು ನಾವು ಪ್ರಯತ್ನಿಸಬಹುದು ಎಂದು ಯೋಚಿಸುವುದು ಪ್ರಸ್ತುತ ಸರ್ಕಾರದ ಬಹಳ ತಪ್ಪು ನಡೆಯಾಗಿದೆ” ಎಂದು ಅವರು ಟೀಕಿಸಿದ್ದಾರೆ.

modi in lakshadweep

ಒಂದು ದಿನದ ಹಿಂದೆ, ಮಾಲ್ಡೀವ್ಸ್ ವಿದೇಶಾಂಗ ವ್ಯವಹಾರಗಳ ಸಚಿವ ಮೂಸಾ ಜಮೀರ್ ಅವರು ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದರು. “ಭಾರತದ ನಾಯಕರ ವಿರುದ್ಧದ ಈ ಟೀಕೆಗಳು ಸ್ವೀಕಾರಾರ್ಹವಲ್ಲ ಮತ್ತು ಇವು ಮಾಲ್ಡೀವ್ಸ್ ಸರ್ಕಾರದ ಅಧಿಕೃತ ಹೇಳಿಕೆಗಳಲ್ಲ. ಮಾಲ್ಡೀವ್ಸ್ ತನ್ನ ಎಲ್ಲಾ ಪಾಲುದಾರರೊಂದಿಗೆ, ವಿಶೇಷವಾಗಿ ನೆರೆಹೊರೆಯವರೊಂದಿಗೆ ಧನಾತ್ಮಕ ಮತ್ತು ರಚನಾತ್ಮಕ ಸಂವಾದವನ್ನು ಬೆಳೆಸಲು ಬದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

ಜನವರಿ 2ರಂದು ಪಿಎಂ ನರೇಂದ್ರ ಮೋದಿ ಅವರು ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರು. ತಮ್ಮ ಸ್ನಾರ್ಕೆಲಿಂಗ್‌ನ ʼಉಲ್ಲಾಸದಾಯಕ ಅನುಭವ’ ಸೇರಿದಂತೆ ಹಲವಾರು ಚಿತ್ರಗಳನ್ನು ಹಂಚಿಕೊಂಡಿದ್ದರು. ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ಬಗ್ಗೆ ಮಾತನಾಡಿದ್ದರು. ಆದರೆ ಮಾಲ್ದೀವ್ಸ್‌ ಬಗ್ಗೆ ಯಾವುದೇ ಚಕಾರ ಎತ್ತಿರಲಿಲ್ಲ.

ಆದರೆ ಇದನ್ನು ಸಹಿಸದ ಮಾಲ್ಡೀವ್ಸ್‌ನ ಮೂವರು ಸಚಿವರು, ಪ್ರಧಾನಿ ಮೋದಿಯವರ ಲಕ್ಷದ್ವೀಪ ಭೇಟಿಯ ಬಗ್ಗೆ ಅವಹೇಳನಕಾರಿ, ಅಪಹಾಸ್ಯದ ಉಲ್ಲೇಖಗಳನ್ನು ಮಾಡಿದ್ದರು. ಇದರಿಂದ ಭಾರತದಲ್ಲಿ ಭಾರಿ ಕೋಲಾಹಲ ಭುಗಿಲೆದ್ದಿದೆ. ವಿಐಪಿಗಳು ಕೂಡ ಬಾಯ್ಕಾಟ್‌ ಮಾಲ್ದೀವ್ಸ್‌ (Boycott Maldeves) ಅಭಿಯಾನದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: Boycott Maldives: ಮಾಲ್ಡೀವ್ಸ್‌ ಸರ್ಕಾರದ ವಿರುದ್ಧವೇ ತಿರುಗಿ ಬಿದ್ದ ಅಲ್ಲಿನ ಪ್ರವಾಸೋದ್ಯಮ ಸಂಘ ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Padma Awards 2024 : ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

Padma Awards 2024: 90 ವರ್ಷದ ಬಾಲಿ ಮತ್ತು ಚಿರಂಜೀವಿ ಅವರಿಗೆ ಪದ್ಮವಿಭೂಷಣ, ಬೀವಿ, ಕಾಮಾ, ರಾಜಗೋಪಾಲ್, ವಿಜಯಕಾಂತ್, ರಿಂಪೋಚೆ ಮತ್ತು ವ್ಯಾಸ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಯಿತು. ಬೀವಿ, ವಿಜಯಕಾಂತ್ ಮತ್ತು ರಿಂಪೋಚೆ ಅವರ ಕುಟುಂಬ ಸದಸ್ಯರು ಪ್ರಶಸ್ತಿಗಳನ್ನು ಸ್ವೀಕರಿಸಿದರು.

VISTARANEWS.COM


on

Padma Awards 2024
Koo

ಬೆಂಗಳೂರು: ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ತೆಲುಗು ತಾರೆ ಕೊನಿಡೆಲಾ ಚಿರಂಜೀವಿ, ಸುಪ್ರೀಂ ಕೋರ್ಟ್ ನ ಮೊದಲ ಮಹಿಳಾ ನ್ಯಾಯಾಧೀಶೆ ದಿವಂಗತ ಎಂ ಫಾತಿಮಾ ಬೀವಿ ಮತ್ತು ‘ಬಾಂಬೆ ಸಮಾಚಾರ್’ ಮಾಲೀಕ ಹಾರ್ಮುಸ್ಜಿ ಎನ್ ಕಾಮಾ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಪದ್ಮ ಪ್ರಶಸ್ತಿಗಳನ್ನು (Padma Awards 2024) ಪ್ರದಾನ ಮಾಡಿದರು. ಕನ್ನಡಿಗ ಶ್ರೀಧರ್ ಕೃಷ್ಣ ಮೂರ್ತಿ ಅವರಿಗೂ ಇದೇ ವೇಳೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬಿಜೆಪಿ ನಾಯಕ ಒ.ರಾಜಗೋಪಾಲ್, ಲಡಾಕ್​ನ ಆಧ್ಯಾತ್ಮಿಕ ನಾಯಕ ತೊಗ್ಡಾನ್ ರಿಂಪೋಚೆ, ತಮಿಳು ನಟ ದಿವಂಗತ ಕ್ಯಾಪ್ಟನ್ ವಿಜಯಕಾಂತ್ (ಇಬ್ಬರೂ ಮರಣೋತ್ತರ), ಗುಜರಾತಿ ಪತ್ರಿಕೆ ‘ಜನ್ಮಭೂಮಿ’ ಸಮೂಹ ಸಂಪಾದಕ ಮತ್ತು ಸಿಇಒ ಕುಂದನ್ ವ್ಯಾಸ್ ಅವರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

90 ವರ್ಷದ ಬಾಲಿ ಮತ್ತು ಚಿರಂಜೀವಿ ಅವರಿಗೆ ಪದ್ಮವಿಭೂಷಣ, ಬೀವಿ, ಕಾಮಾ, ರಾಜಗೋಪಾಲ್, ವಿಜಯಕಾಂತ್, ರಿಂಪೋಚೆ ಮತ್ತು ವ್ಯಾಸ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಯಿತು. ಬೀವಿ, ವಿಜಯಕಾಂತ್ ಮತ್ತು ರಿಂಪೋಚೆ ಅವರ ಕುಟುಂಬ ಸದಸ್ಯರು ಪ್ರಶಸ್ತಿಗಳನ್ನು ಸ್ವೀಕರಿಸಿದರು.

ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ.

Continue Reading

Latest

Ranveer Singh: 2 ಕೋಟಿ ರೂ. ಮೌಲ್ಯದ ವಜ್ರದ ನೆಕ್ಲೇಸ್ ಧರಿಸಿ ಗಮನ ಸೆಳೆದ ರಣವೀರ್ ಸಿಂಗ್

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ಮುಂಬಯಿನಲ್ಲಿ ಬುಧವಾರ ನಡೆದ ಕ್ಲಾಸಿ ಗಾಲಾದಲ್ಲಿ ಭಾಗವಹಿಸಿದ್ದು ಬಿಳಿ ಬಣ್ಣದ ಧಿರಿಸಿಗೆ ಮ್ಯಾಚಿಂಗ್ ಆಗಿ ಹೈ ಹೀಲ್ಸ್ ಧರಿಸಿದ್ದರು. ಜೊತೆಗೆ ಅವರು ಹಾಕಿದ್ದ ದಪ್ಪನಾದ ವಜ್ರದ ನೆಕ್ಲೇಸ್ ಎಲ್ಲರ ಗಮನ ಅವರತ್ತ ಸೆಳೆಯುವಂತೆ ಮಾಡಿತ್ತು.

VISTARANEWS.COM


on

By

Ranveer Singh
Koo

ಬಹು ದಿನಗಳ ಬಳಿಕ ಮುಂಬಯಿಯ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ದುಬಾರಿ ಮೌಲ್ಯದ ವಜ್ರದ ನೆಕ್ಲೆಸ್ (diamond necklace), ಹೈ ಹೀಲ್ಸ್ ನೊಂದಿಗೆ (high heels) ಬಿಳಿ ಬಣ್ಣದ ದಿರಸಿನಲ್ಲಿ ಜನಮನ ಸೆಳೆದರು. ಬಿಳಿ ಸ್ಯಾಟಿನ್ ಶರ್ಟ್ (white satin shirt) ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ (matching trousers) ರಣವೀರ್ ಸ್ಟೈಲಿಶ್ ಆಗಿ ಕಾಣುತ್ತಿದ್ದರು.

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರು ಮುಂಬಯಿನಲ್ಲಿ ಬುಧವಾರ ನಡೆದ ಕ್ಲಾಸಿ ಗಾಲಾದಲ್ಲಿ ಭಾಗವಹಿಸಿದ್ದರು. ಕೆಲವು ದಿನಗಳ ಬಳಿಕ ನಗರದಲ್ಲಿ ಕಾಣಿಸಿಕೊಂಡ ಅವರು, ಬಿಳಿ ಬಣ್ಣದ ಹೈ ಹೀಲ್ಸ್ ಧರಿಸಿದ್ದು, ಅವರ ದಿರಸಿಗೆ ಮ್ಯಾಚಿಂಗ್ ಆಗಿ ಹೊಳೆಯುತ್ತಿತ್ತು. ದಪ್ಪನಾದ ವಜ್ರದ ನೆಕ್ಲೇಸ್ ಅನ್ನು ಧರಿಸಿದ್ಧ ಅವರು ನಡೆಯುತ್ತಿದ್ದಾಗ ಎಲ್ಲರ ದೃಷ್ಟಿ ಅವರತ್ತ ನೆಟ್ಟಿತ್ತು.

ರಣವೀರ್ ಬಿಳಿ ಸ್ಯಾಟಿನ್ ಶರ್ಟ್ ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ ಕೊಂಚ ಕಪ್ಪಾಗಿ ಕಾಣುತ್ತಿದ್ದರು. ಆದರೆ ಉಬರ್-ಸ್ಟೈಲಿಶ್ ವೈಟ್ ಬೆಲ್ಟ್‌ನೊಂದಿಗೆ ತಮ್ಮ ಧಿರಿಸನ್ನು ಪೂರ್ಣಗೊಳಿಸಿದ ಅವರು ನೀಲಿ ಬಣ್ಣದ ಸನ್ ಗ್ಲಾಸ್ ಧರಿಸಿದ್ದರು. ಆದರೆ ಈ ಸಂದರ್ಭದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿದ್ದು ಅವರು ಧರಿಸಿದ್ದ ಡೈಮಂಡ್ ನೆಕ್ಲೇಸ್.

ಎಷ್ಟು ಮೌಲ್ಯ?

ರಣವೀರ್ ಅವರು ಆಭರಣ ಸಂಗ್ರಹವನ್ನು ಇಷ್ಟಪಡುತ್ತಾರೆ. ಅವರಲ್ಲಿ ಸಾಕಷ್ಟು ಸಂಗ್ರಹವೂ ಇದೆ. ಬಿಳಿ ಬಣ್ಣದ ಸೂಟ್ ನೊಂದಿಗೆ ಅವರು 2 ಕೋಟಿ ರೂಪಾಯಿ ಮೌಲ್ಯದ ಬೆಸ್ಪೋಕ್ ಟಿಫಾನಿ ನೆಕ್ಲೇಸ್ ಅನ್ನು ಧರಿಸಿರುವುದು ಅವರ ಲುಕ್ ಗೆ ಹೆಚ್ಚಿನ ಮೆರುಗು ನೀಡಿತ್ತು. ದಪ್ಪನಾದ ಹೀಲ್ಸ್‌ಗಳನ್ನು ಧರಿಸಿ ಫೋಟೋಗಳಿಗೆ ಪೋಸ್ ನೀಡಿದ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿದೆ.

ತಮ್ಮ ಆಭರಣ ಪ್ರೀತಿಯ ಬಗ್ಗೆ ಮಾತನಾಡಿದ ರಣವೀರ್ ಸಿಂಗ್, ವೈಯಕ್ತಿಕ, ಭಾವನಾತ್ಮಕ ಮೌಲ್ಯವನ್ನು ಹೊಂದಿರುವ ಆಭರಣಗಳು ನನ್ನ ನೆಚ್ಚಿನ, ಅತ್ಯಂತ ಪ್ರಿಯವಾದ ತುಣುಕುಗಳಾಗಿವೆ. ಇದರಲ್ಲಿ ಮದುವೆಯ ಉಂಗುರವೂ ಒಂದು. ಇದು ನನ್ನ ಹೆಂಡತಿ ದೀಪಿಕಾ ಪಡುಕೋಣೆ ನನಗೆ ಉಡುಗೊರೆಯಾಗಿ ನೀಡಿರುವುದು. ಇನ್ನೊಂದು ಪ್ಲಾಟಿನಂ ಎಂಗೇಜ್‌ಮೆಂಟ್ ರಿಂಗ್ ಆಗಿದೆ. ತದನಂತರ ಸಹಜವಾಗಿ ನನ್ನ ತಾಯಿಯ ವಜ್ರದ ಕಿವಿಯೋಲೆಗಳು ಮತ್ತು ನನ್ನ ಅಜ್ಜಿಯ ಮುತ್ತುಗಳು ಎಂದು ತಿಳಿಸಿದರು.


ಮೊದಲ ಮಗುವಿನ ನಿರೀಕ್ಷೆ

ಪತ್ನಿ ದೀಪಿಕಾ ಪಡುಕೋಣೆ ಅವರೊಂದಿಗೆ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ರಣವೀರ್ ದೀರ್ಘ ಸಮಯದ ಬಳಿಕ ಬುಧವಾರ ಮುಂಬಯಿಗೆ ಮರಳಿದ್ದಾರೆ. ಗರ್ಭಧಾರಣೆಯ ಘೋಷಣೆಯ ಅನಂತರ ದಂಪತಿ ತಮ್ಮ ಸಂಪೂರ್ಣ ಗಮನವನ್ನು ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಕೇಂದ್ರೀಕರಿಸಿದ್ದಾರೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಅವರು ತಮ್ಮ ಮೊದಲ ಮಗುವನ್ನು ಸ್ವಾಗತಿಸಲಿದ್ದಾರೆ.

ಇದನ್ನೂ ಓದಿ: Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

ಚಿತ್ರೀಕರಣದಲ್ಲೂ ಬ್ಯುಸಿ

ಸದ್ಯ ರಣವೀರ್ ಫರ್ಹಾನ್ ಅಖ್ತರ್ ಅವರ ಡಾನ್ ಫ್ರ್ಯಾಂಚೈಸ್‌ನಲ್ಲಿ ಹೊಸ ಡಾನ್ ಆಗಲು ಸಿದ್ಧರಾಗಿದ್ದಾರೆ. ಇದನ್ನು ಮೊದಲು ಶಾರುಖ್ ಖಾನ್ ಗಾಗಿ ನಿರ್ಮಿಸಲಾಗಿತ್ತು. ಇದಲ್ಲದೇ ರಣವೀರ್ ಹನುಮಾನ್ ನಿರ್ದೇಶಕ ಪ್ರಶಾಂತ್ ವರ್ಮಾ ಅವರ ಮುಂದಿನ ಚಿತ್ರಕ್ಕೆ ಸಹಿ ಹಾಕಿದ್ದಾರೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Racist Comment : ಭಾರತದಲ್ಲಿ ನೀಗ್ರೊಗಳಿದ್ದಾರೆ…; ಇದೀಗ ಬಂಗಾಳ ಕಾಂಗ್ರೆಸ್​​ ಅಧ್ಯಕ್ಷರ ಸರದಿ

Racist Comment: ಭಾರತದಲ್ಲಿ ಹಲವಾರು ಜನಾಂಗಗಳು ಇರುವುದನ್ನು ನಮಗೆ ಶಾಲೆಗಳಲ್ಲಿ ಕಲಿಸಲಾಗಿದೆ. ಎಲ್ಲರೂ ಒಂದೇ ರೀತಿ ಕಾಣುವುದಿಲ್ಲ. ಕೆಲವರು ಕಪ್ಪು ಹಾಗೂ ಇನ್ನುಳಿದವರು ಬಿಳಿ ಬಣ್ಣದವರು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಗಳ ಹಿನ್ನೆಲೆಯಲ್ಲಿ ಪಿತ್ರೋಡಾ ಹೇಳಿಕೆ ನೀಡಿದ ಬಳಿಕ ಸಾಗರೋತ್ತರ ಕಾಂಗ್ರೆಸ್​್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

VISTARANEWS.COM


on

Racial Comments
Koo

ನವದೆಹಲಿ: ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಗುರುವಾರ ಸ್ಯಾಮ್ ಪಿತ್ರೋಡಾ (Sam Pitroda) ಅವರ “ಜನಾಂಗೀಯ” ಹೇಳಿಕೆಯನ್ನು (Racist Comment) ಸಮರ್ಥಿಸಿಕೊಂಡಿದ್ದು, ಭಾರತದಲ್ಲೂ ಕಪ್ಪು ಚರ್ಮದವರನ್ನು (ನಿಗ್ರೊಗಳು) ಹೋಲುವ ಜನರಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ವಿವಾದಕ್ಕೆ ಇನ್ನಷ್ಟು ತುಪ್ಪ ಸುರಿದಿದೆ. ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಕಾಣುತ್ತಾರೆ ಎಂಬ ಸ್ಯಾಮ್​ ಪಿತ್ರೊಡಾ ಹೇಳಿಕೆಯು ಬಿಜೆಪಿಯಿಂದ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಚರ್ಮದ ಬಣ್ಣವನ್ನು ಆಧರಿಸಿ ಭಾರತೀಯರಿಗೆ ಅಗೌರವ ತೋರಿದೆ ಎಂಬ ಆರೋಪ ಮಾಡಿತ್ತು. ಅದರ ಬೆನ್ನಲ್ಲೇ ಚೌಧರಿ ತನ್ನ ಹೇಳಿಕೆ ನೀಡಿದ್ದಾರೆ.

“ನಮ್ಮಲ್ಲಿ ಪ್ರೋಟೋ ಆಸ್ಟ್ರಲಾಯ್ಡ್ಗಳು, ಮಂಗೋಲಾಯ್ಡ್ಗಳು ಮತ್ತು ನೆಗ್ರಿಟೊ ವರ್ಗದ ಜನರಿದ್ದಾರೆ. ನಮ್ಮ ದೇಶದ ಜನರ ಪ್ರಾದೇಶಿಕ ಲಕ್ಷಣಗಳು ವಿಭಿನ್ನವಾಗಿವೆ. ಪಿತ್ರೋಡಾ ಅವರು ನೀಡಿರುವುದು ವೈಯಕ್ತಿಕ ಅಭಿಪ್ರಾಯ. ಅದರ ಬಗ್ಗೆ ಹೆಚ್ಚು ಮಾತನಾಡುವ ಅಗತ್ಯವಿಲ್ಲ” ಎಂದು ಚೌಧರಿ ಪಕ್ಷದ ಕಚೇರಿಯಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಭಾರತದಲ್ಲಿ ಹಲವಾರು ಜನಾಂಗಗಳು ಇರುವುದನ್ನು ನಮಗೆ ಶಾಲೆಗಳಲ್ಲಿ ಕಲಿಸಲಾಗಿದೆ. ಎಲ್ಲರೂ ಒಂದೇ ರೀತಿ ಕಾಣುವುದಿಲ್ಲ. ಕೆಲವರು ಕಪ್ಪು ಹಾಗೂ ಇನ್ನುಳಿದವರು ಬಿಳಿ ಬಣ್ಣದವರು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಗಳ ಹಿನ್ನೆಲೆಯಲ್ಲಿ ಪಿತ್ರೋಡಾ ಹೇಳಿಕೆ ನೀಡಿದ ಬಳಿಕ ಸಾಗರೋತ್ತರ ಕಾಂಗ್ರೆಸ್​್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಚೌಧರಿ ಹೇಳಿಕೆಗೆ ಕಾಂಗ್ರೆಸ್ ಇನ್ನೂ ಪ್ರತಿಕ್ರಿಯಿಸಿಲ್ಲ.

ದಿ ಸ್ಟೇಟ್ಸ್​ಮನ್​​ಗೆ ಪಿತ್ರೋಡಾ ನೀಡಿದ್ದ ಸಂದರ್ಶನದ ಆಯ್ದ ಭಾಗವನ್ನು ಬುಧವಾರ ಪ್ರಸಾರ ಮಾಡಲಾಗಿತ್ತು. ಅದರಲ್ಲಿ ಅವರು ಭಾರತವನ್ನು ವೈವಿಧ್ಯಮಯ ದೇಶ. ಪೂರ್ವದ ಜನರು ಚೀನೀಯರಂತೆ ಕಾಣುತ್ತಾರೆ. ಉತ್ತರದ ಜನರು ಬಿಳಿಯರಂತೆ ಕಾಣುತ್ತಾರೆ ಮತ್ತು ದಕ್ಷಿಣದ ಜನರು ಆಫ್ರಿಕನ್ನರಂತೆ ಕಾಣುತ್ತಾರೆ ಎಂದು ಹೇಳಿಕೆ ನೀಡಿದ್ದರು. ಪಿತ್ರೊಡಾ ಅವರ ವಿವಾದಾತ್ಮಕ ಹೇಳಿಕೆಯ ನಂತರ ಕಾಂಗ್ರೆಸ್ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿತ್ತು, ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಚರ್ಮದ ಬಣ್ಣದ ಆಧಾರದ ಮೇಲೆ ಅಗೌರವವನ್ನು ಸಹಿಸುವುದಿಲ್ಲ ಎಂದು ಟೀಕಿಸಿದ್ದರು.

ಈ ಹೇಳಿಕೆಯ ಕೆಲವೇ ಗಂಟೆಗಳ ನಂತರ ಪಿತ್ರೋಡಾ ಅವರು ಕಾಂಗ್ರೆಸ್ ನ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಪಿತ್ರೋಡಾ ಅವರ ಸ್ವಂತ ಇಚ್ಛೆಯಿಂದ ರಾಜೀನಾಮೆ ನೀಡಲಾಗಿದೆ ಎಂದು ಪಕ್ಷದ ಮುಖ್ಯಸ್ಥ ಜೈರಾಮ್ ರಮೇಶ್ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Maldives anti-India stance: ಭಾರತ ವಿರೋಧಿ ಹೇಳಿಕೆಗಳು ನಮ್ಮ ಸರ್ಕಾರದ ನಿಲುವಲ್ಲ ಎಂದು ನಾವು ಆರಂಭದಲ್ಲಿಯೇ ಹೇಳಿದ್ದೇವೆ. ಅದನ್ನು ಮಾಡಬಾರದಿತ್ತು ಎಂಬುದನ್ನೂ ಅರಿತುಕೊಂಡಿದ್ದೇವೆ. ಇದು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ನಾವು ಸರಿಯಾದ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಸೋಷಿಯಲ್ ಮೀಡಿಯಾದಲ್ಲಿ ತಪ್ಪು ತಿಳುವಳಿಕೆ ಸೃಷ್ಟಿಯಾಗಿದೆ. ಏನಾಯಿತು ಎಂದು ಮಾಲ್ಡೀವ್ಸ್ ಮತ್ತು ಭಾರತದ ಸರ್ಕಾರಗಳು ಅರ್ಥಮಾಡಿಕೊಂಡಿವೆ” ಎಂದು ಮಾಲ್ಡೀವ್ಸ್ ಸಚಿವರು ಹೇಳಿಕೆ ನೀಡಿದ್ದಾರೆ.

VISTARANEWS.COM


on

Maldives anti-India stance
Koo

ನವ ದೆಹಲಿ: ಭಾರತದ ವಿರುದ್ಧ ನೀಡಿರುವ ಹೇಳಿಕೆ ಬಗ್ಗೆ ಮಾಲ್ಡೀವ್ಸ್ ಪಶ್ಚಾತಾಪ ವ್ಯಕ್ತಪಡಿಸಿದೆ. ಅವಹೇಳನಕಾರಿ ಹೇಳಿಕೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದಾಗಿ ದ್ವೀಪ ರಾಷ್ಟ್ರ ವಿದೇಶಾಂಗ ಸಚಿವ ಮೂಸಾ ಜಮೀರ್ ಗುರುವಾರ ಭರವಸೆ ನೀಡಿದ್ದಾರೆ. ಭಾರತ ಭೇಟಿಯಲ್ಲಿರುವ ಜಮೀರ್, ಮಾಲ್ಡೀವ್ಸ್ ಮತ್ತು ಭಾರತ ಸರ್ಕಾರಗಳು ಆಗಿರುವ ವಿಷಯಗಳನ್ನು ಅರ್ಥಮಾಡಿಕೊಂಡಿವೆ. ಆ ಹಂತವನ್ನು ದಾಟಿದ್ದೇವೆ. ಇದು ಪುನರಾವರ್ತನೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

“ಭಾರತ ವಿರೋಧಿ ಹೇಳಿಕೆಗಳು ನಮ್ಮ ಸರ್ಕಾರದ ನಿಲುವಲ್ಲ ಎಂದು ನಾವು ಆರಂಭದಲ್ಲಿಯೇ ಹೇಳಿದ್ದೇವೆ. ಅದನ್ನು ಮಾಡಬಾರದಿತ್ತು ಎಂಬುದನ್ನೂ ಅರಿತುಕೊಂಡಿದ್ದೇವೆ. ಇದು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ನಾವು ಸರಿಯಾದ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಸೋಷಿಯಲ್ ಮೀಡಿಯಾದಲ್ಲಿ ತಪ್ಪು ತಿಳುವಳಿಕೆ ಸೃಷ್ಟಿಯಾಗಿದೆ. ಏನಾಯಿತು ಎಂದು ಮಾಲ್ಡೀವ್ಸ್ ಮತ್ತು ಭಾರತದ ಸರ್ಕಾರಗಳು ಅರ್ಥಮಾಡಿಕೊಂಡಿವೆ” ಎಂದು ಮಾಲ್ಡೀವ್ಸ್ ಸಚಿವರು ಹೇಳಿಕೆ ನೀಡಿದ್ದಾರೆ.

ಮಾಜಿ ಸಚಿವರಾದ ಮರಿಯಮ್ ಶಿಯುನಾ, ಮಲ್ಶಾ ಮತ್ತು ಹಸನ್ ಜಿಹಾನ್ ಅವರು ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಮೋದಿ ಲಕ್ಷ್ಮ ದ್ವೀಪಕ್ಕೆ ಭೇಟಿ ನೀಡಿದ್ದ ಬಳಿಕ ಅವರು ಈ ಅನಪೇಕ್ಷಿತ ಹೇಳಿಕೆಗಳನ್ನು ಕೊಟ್ಟಿದ್ದರು. ನಂತರ ಉಭಯ ದೇಶಗಳ ನಡುವಿನ ಸಂಬಂಧದ ಹದಗೆಟ್ಟಿತ್ತು.

ಭಾರತೀಯ ಮಿಲಿಟರಿ ಸಿಬ್ಬಂದಿ ಮಾಲ್ಡೀವ್ಸ್ ತೊರೆಯಲು ಮೊಹಮ್ಮದ್ ಮುಯಿಝು ಮೇ 10 ರ ಗಡುವನ್ನು ನಿಗದಿಪಡಿಸಿದ ನಂತರ ಸಂಬಂಧಗಳು ಮತ್ತಷ್ಟು ಹಾಳಾಗಿದ್ದವು. ಏತನ್ಮಧ್ಯೆ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಮೂಸಾ ಜಮೀರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಭಾರತ-ಮಾಲ್ಡೀವ್ಸ್ ಸಂಬಂಧಗಳ ಅಭಿವೃದ್ಧಿಯು “ಪರಸ್ಪರ ಹಿತಾಸಕ್ತಿಗಳನ್ನು” ಆಧರಿಸಿದೆ ಎಂದು ಒಪ್ಪಿಕೊಂಡಿದ್ದಾರೆ.

ಮಾಲ್ಡೀವ್ಸ್ ಮತ್ತು ಭಾರತದ ನಡುವೆ ದ್ವಿಪಕ್ಷೀಯ ಮತ್ತು ಅಂತರರಾಷ್ಟ್ರೀಯ ಸಂಬಂಧ ವೃದ್ಧಿಸುವ ಮತ್ತು ಪರಸ್ಪರ ವಿನಿಮಯ ಹೆಚ್ಚಿಸುವ ಬಗ್ಗೆ ನಾವು ನಮ್ಮ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ ಎಂದು ಜಮೀರ್ ಸಭೆಯ ನಂತರ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

ಪ್ರವಾಸೋದ್ಯಮ ಕುಸಿತದ ಬಗ್ಗೆ ಪ್ರತಿಕ್ರಿಯೆ

ಮಾಲ್ಡೀವ್ಸ್ ಗೆ ಪ್ರಯಾಣಿಸಲು ಬಯಸುವ ಎಲ್ಲಾ ಭಾರತೀಯರಿಗೆ ವೈಯಕ್ತಿಕವಾಗಿ ಮತ್ತು ಮಾಲ್ಡೀವ್ಸ್ ಜನರ ಪರವಾಗಿ ಆತ್ಮೀಯ ಸ್ವಾಗತ ನೀಡಲು ಬಯಸುತ್ತೇನೆ ಎಂದು ಪ್ರವಾಸೋದ್ಯಮ ಸಚಿವರು ಸ್ಪಷ್ಟವಾಗಿ ಹೇಳಿದ್ದಾರೆ. ಮಾಲ್ಡೀವ್ಸ್​ಗೆ ಭೇಟಿ ನೀಡುವುದನ್ನು ಮುಂದುವರಿಸಲು ನಾವು ಎಲ್ಲಾ ಭಾರತೀಯ ಪ್ರವಾಸಿಗರನ್ನು ಪ್ರೋತ್ಸಾಹಿಸಲು ಬಯಸುತ್ತೇವೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ, ಭಾರತೀಯ ಪ್ರಯಾಣಿಕರು ನಿಜವಾಗಿಯೂ ಮಾಲ್ಡೀವ್ಸ್​​​ಗೆ ಗಮನಾರ್ಹ ಸಂಖ್ಯೆಯಲ್ಲಿ ಆಗಮಿಸಿದರು. ಆ ಪ್ರವೃತ್ತಿ ಮುಂದುವರೆದಿದೆ. ಕಳೆದ ಎರಡು ತಿಂಗಳುಗಳಲ್ಲಿ, ನಾವು 16 ರಿಂದ 17% ಹೆಚ್ಚಳ ಕಂಡಿದ್ದೇವೆ. ಭಾರತೀಯ ಮಾರುಕಟ್ಟೆಗಳಲ್ಲಿ ಇಳಿಕೆ ಕಂಡುಬಂದಿದ್ದರೂ, ಮುಂದಿನ ದಿನಗಳಲ್ಲಿ ಇದು ಹೆಚ್ಚಾಗುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

Continue Reading
Advertisement
Actor Prabhas
ಸಿನಿಮಾ3 mins ago

Actor Prabhas: ʼಕಣ್ಣಪ್ಪʼ ಚಿತ್ರಕ್ಕೆ ಎಂಟ್ರಿಕೊಟ್ಟ ಪ್ರಭಾಸ್‌; ಹೊಸ ಪೋಸ್ಟರ್‌ ರಿಲೀಸ್‌

Prajwal Revanna Case
ಕ್ರೈಂ6 mins ago

Prajwal Revanna case: ಪ್ರಜ್ವಲ್‌ ರೇವಣ್ಣ ಮೇಲೆ ಸುಳ್ಳು ಆರೋಪ ನೀಡಲು ಒತ್ತಡ: ಮಹಿಳೆ ದೂರು

karnataka SSLC result 2024
ಸಂಪಾದಕೀಯ25 mins ago

ವಿಸ್ತಾರ ಸಂಪಾದಕೀಯ: SSLC Result 2024: ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತದ ಜೊತೆಗೆ ಸಿಹಿ ಸುದ್ದಿಯೂ ಇದೆ

Digestion Tips
ಆರೋಗ್ಯ42 mins ago

Digestion Tips: ಜೀರ್ಣಾಂಗಗಳ ಕ್ಷಮತೆ ಹೆಚ್ಚಿಸುವುದು ಹೇಗೆ?

Karnataka Weather Forecast
ಮಳೆ1 hour ago

Karnataka Weather : 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆಗೆ ಯೆಲ್ಲೋ ಅಲರ್ಟ್‌ ಘೋಷಣೆ

Which Sweetener Is Better
ಆರೋಗ್ಯ2 hours ago

Which Sweetener Is Better: ಸಕ್ಕರೆ, ಬೆಲ್ಲ, ಕಲ್ಲುಸಕ್ಕರೆ- ಯಾವುದು ಒಳ್ಳೆಯದು?

Basavanna jayanti
ಧಾರ್ಮಿಕ2 hours ago

Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

Akshaya Tritiya 2024
ಪ್ರಮುಖ ಸುದ್ದಿ3 hours ago

Akshaya Tritiya 2024: ಸಕಲ ಸಮೃದ್ಧಿಗಳು ಕ್ಷಯಿಸದಂತೆ ಕಾಪಾಡುವ ಅಕ್ಷಯ ತೃತೀಯ

Dina Bhavishya
ಭವಿಷ್ಯ3 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Mureder Case
ಪ್ರಮುಖ ಸುದ್ದಿ5 hours ago

Murder Case : ಕೊಡಗಿನಲ್ಲಿ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ರುಂಡ ಕತ್ತರಿಸಿ ಕೊಂದ ಪ್ರೇಮಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ10 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ11 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ12 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ18 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ18 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ19 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು19 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ19 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು21 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಟ್ರೆಂಡಿಂಗ್‌