British Journalist: "ನವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು"- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ - Vistara News

ದೇಶ

British Journalist: “ನವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು”- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ

British Journalist:ಇಂಗ್ಲೆಂಡ್‌ ಮೂಲಕ ಪತ್ರಿಕೆ ಡೈಲಿ ಎಕ್ಸ್‌ಪ್ರೆಸ್‌ನ ಸಹಾಯಕ ಸಂಪಾದಕರಾಗಿರುವ ಸ್ಯಾಮ್‌ ಸ್ಟೀವನ್‌ಸನ್‌ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಭಾರತದ ಬಗ್ಗೆ ಹೇಳಲು ಸಾಕಷ್ಟು ವಿಚಾರಗಳಿವೆ. ಭಾರತ ವಿರೋಧಿ ಎಂಬ ಬಕ್ವಾಸ್‌ ಚಿಂತನೆ ಮೂಲಕ ಭಾರತದ ಬಗ್ಗೆ ತಪ್ಪು ಮಾಹಿತಿ ಹಂಚುವ ಪ್ರಯತ್ನಗಳು ನಡೆಯುತ್ತಿದೆ. ನಾವು ಭಾರತದ ಬಗ್ಗೆ ಸತ್ಯವನ್ನು ಹೇಳಬೇಕಿದೆ. ಅಲ್ಲದೇ ನವ ಭಾರತದ ಧನಾತ್ಮಕವಾದ ವಿಚಾರಗಳನ್ನು ಪ್ರಪಂಚಕ್ಕೆ ತಿಳಿಸಬೇಕಿದೆ ಎಂದು ಹೇಳಿದ್ದಾರೆ.

VISTARANEWS.COM


on

British Journalist
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಹಾವು ಆಡಿಸುವವರ ದೇಶ ಎಂದು ಭಾರತವನ್ನು ಜರಿಯುತ್ತಿದ್ದ ಪ್ರಪಂಚದ ದೊಡ್ಡ ದೊಡ್ಡ ರಾಷ್ಟ್ರಗಳು ಇತ್ತೀಚಿನ ಕೆಲವು ವರ್ಷಗಳಿಂದ ಭಾರತದ ಎದುರು ಮಂಡಿಯೂರಿದೆ ಎಂದರೆ ತಪ್ಪಾಗಲಾರದು. ಶತ್ರು ರಾಷ್ಟ್ರ ಪಾಕಿಸ್ತಾನ(Pakistan)ವೂ ಸೇರಿದಂತೆ ವಿವಿಧ ರಾಷ್ಟ್ರಗಳು ನಿರಂತರವಾಗಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಭಾರತವನ್ನು ಹಾಡಿ ಹೊಗಳುತ್ತಿವೆ. ಇದೀಗ ಇಂಗ್ಲೆಂಡ್‌ನ ಪತ್ರಕರ್ತ(British Journalist)ನೋರ್ವ ಭಾರತ(India)ದ ಬಗ್ಗೆ ಬಹಳ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.

ಇಂಗ್ಲೆಂಡ್‌ ಮೂಲಕ ಪತ್ರಿಕೆ ಡೈಲಿ ಎಕ್ಸ್‌ಪ್ರೆಸ್‌ನ ಸಹಾಯಕ ಸಂಪಾದಕರಾಗಿರುವ ಸ್ಯಾಮ್‌ ಸ್ಟೀವನ್‌ಸನ್‌ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಭಾರತದ ಬಗ್ಗೆ ಹೇಳಲು ಸಾಕಷ್ಟು ವಿಚಾರಗಳಿವೆ. ಭಾರತ ವಿರೋಧಿ ಎಂಬ ಬಕ್ವಾಸ್‌ ಚಿಂತನೆ ಮೂಲಕ ಭಾರತದ ಬಗ್ಗೆ ತಪ್ಪು ಮಾಹಿತಿ ಹಂಚುವ ಪ್ರಯತ್ನಗಳು ನಡೆಯುತ್ತಿದೆ. ನಾವು ಭಾರತದ ಬಗ್ಗೆ ಸತ್ಯವನ್ನು ಹೇಳಬೇಕಿದೆ. ಅಲ್ಲದೇ ನವ ಭಾರತದ ಧನಾತ್ಮಕವಾದ ವಿಚಾರಗಳನ್ನು ಪ್ರಪಂಚಕ್ಕೆ ತಿಳಿಸಬೇಕಿದೆ ಎಂದು ಹೇಳಿದ್ದಾರೆ.

ಭಾರತದ ಬಗ್ಗೆ ಇಂಗ್ಲೆಂಡ್‌ನಲ್ಲಿ ಕೆಲವೊಂದು ನಕಾರಾತ್ಮಕ ವಿಚಾರಗಳನ್ನು ತುಂಬಲಾಗುತ್ತಿದೆ. ಅದೂ ಅಲ್ಲದೇ ಇಡೀ ಯೂರೋಪ್‌ನಲ್ಲಿ ಭಾರತದ ಬಗ್ಗೆ ಇಲ್ಲ ಸಲ್ಲದ ಕಥೆಗಳನ್ನು ಹುಟ್ಟಿಸಿ ಹೇಳಲಾಗುತ್ತಿದೆ. ನಮಗೆ ಭಾರತದಲ್ಲಿ ಧಾರ್ಮಿಕ ಸಂಘರ್ಘ ಇರುವುದನ್ನೇ ಎತ್ತಿ ತೋರಿಸಲಾಗುತ್ತಿದೆ. ಆದರೆ ಭಾರತಕ್ಕೆ ಬಂದು ನೋಡದಾಗಲೇ ಕೇಳಿವ ವಿಚಾರಕ್ಕೂ ವಾಸ್ತವಕತೆಗೂ ಬಹಳಷ್ಟು ವ್ಯತ್ಯಾಸವಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರ್ಯಾಲಿಗೆ ಸಂಪೂರ್ಣವಾಗಿ ಬುರ್ಖಾ ಧರಿಸಿ ಮುಸ್ಲಿಂ ಮಹಿಳೆಯರು ಭಾಗಿಯಾಗುವುದನ್ನು ನಾನು ನೋಡಿದ್ದೇನೆ. ವಿವಿಧತೆಯಲ್ಲಿ ಏಕತೆ ಎಂಬ ವಿಚಾರವನ್ನು ನಾವು ಇಲ್ಲಿ ಮಾತ್ರ ಕಾಣಬಹುದಾಗಿದೆ. ನಾವು ಇಲ್ಲಿ ಭಾರತದ ಬಗ್ಗೆ ಸುದ್ದಿ ಕವರೇಜ್‌ಗಾಗಿ ಬಂದಿದ್ದೇವೆ. ನಾವು ಇಲ್ಲಿ ಭಾರತದ ಬಗ್ಗೆ ಹಲವು ನಿಜಾಂಶವನ್ನು ಕಂಡುಕೊಂಡಿದ್ದು, ಅವುಗಳನ್ನು ಲಂಡನ್‌ಗೆ ಮರಳಿ ಕೊಂಡೊಯ್ಯವುದೇ ನಮ್ಮ ಗುರಿ. ವಿದೇಶಿ ಮಾಧ್ಯಮಗಳಲ್ಲಿ ಭಾರತ ಬಗೆಗಿನ ನಕಾರಾತ್ಮಕ ಸುದ್ದಿಗಳ ಬಿತ್ತರದಿಂದ ನಾವು ಬೇಸತ್ತಿದ್ದೇವೆ. ಇದು ನಿಜಕ್ಕೂ ನಾಚಿಗೇಡಿನ ವಿಚಾರ. ನಿಜಕ್ಕೂ ಜನ ಇಲ್ಲಿ ಬಂದು ಕಣ್ಣಾರೆ ನೋಡಬೇಕು, ಇಲ್ಲಿ ಕೆಲ ಕಾಲ ಜನರೊಡನೆ ಬೆರೆಯಬೇಕು. ಆಗ ಮಾತ್ರ ಭಾರತ ಏನು ಎಂಬ ವಿಚಾರ ಅರ್ಥವಾಗಲು ಸಾಧ್ಯ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Vikram Misri: ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ; ಚೀನಾ ವಿಷಯದಲ್ಲಿ ಇವರು ಎಕ್ಸ್‌ಪರ್ಟ್!

Vikram Misri: ಹಾಲಿ ವಿದೇಶಾಂಗ ಕಾರ್ಯದರ್ಶಿ ವಿನಯ್‌ ಕ್ವಾಟ್ರಾ ಅವರ ಅವಧಿಯು ಜುಲೈ 14ರಂದು ಮುಗಿಯುವ ಕಾರಣ ವಿಕ್ರಮ್‌ ಮಿಸ್ರಿ ಅವರನ್ನು ನೇಮಿಸಲಾಗಿದೆ. ಜುಲೈ 15ರಂದು ವಿಕ್ರಮ್‌ ಮಿಸ್ರಿ ಅವರು ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಚೀನಾಗೆ ಸಂಬಂಧಿಸಿದ ವಿಷಯಗಳಲ್ಲಿ ವಿಕ್ರಮ್‌ ಮಿಸ್ರಿ ಅವರು ಪರಿಣತ ಎಂದೇ ಖ್ಯಾತರಾಗಿದ್ದಾರೆ. ಇವರು ಮೂವರು ಪ್ರಧಾನಿಗಳಿಗೆ ಖಾಸಗಿ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.

VISTARANEWS.COM


on

Vikram Misri
Koo

ನವದೆಹಲಿ: 1989ರ ಐಎಫ್‌ಎಸ್‌ ಬ್ಯಾಚ್‌ ಅಧಿಕಾರಿ, ಚೀನಾಗೆ ಸಂಬಂಧಿಸಿದ ವಿಷಯಗಳಲ್ಲಿ ತಜ್ಞ ಎಂದೇ ಖ್ಯಾತರಾಗಿರುವ ವಿಕ್ರಮ್‌ ಮಿಸ್ರಿ (Vikram Misri) ಅವರು ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ (Foreign Secretary) ಆಯ್ಕೆ ಮಾಡಲಾಗಿದೆ. ಹಾಲಿ ವಿದೇಶಾಂಗ ಕಾರ್ಯದರ್ಶಿ ವಿನಯ್‌ ಕ್ವಾಟ್ರಾ ಅವರ ಅವಧಿಯು ಜುಲೈ 14ರಂದು ಮುಗಿಯುವ ಕಾರಣ ವಿಕ್ರಮ್‌ ಮಿಸ್ರಿ ಅವರನ್ನು ನೇಮಿಸಲಾಗಿದೆ. ಜುಲೈ 15ರಂದು ವಿಕ್ರಮ್‌ ಮಿಸ್ರಿ ಅವರು ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ವಿನಯ್‌ ಕ್ವಾಟ್ರಾ ಅವರ ಅಧಿಕಾರದ ಅವಧಿಯನ್ನು ಆರು ತಿಂಗಳು ವಿಸ್ತರಣೆ ಮಾಡಲಾಗಿತ್ತು. ಅವರ ಅವಧಿಯು ಜುಲೈ 14ಕ್ಕೆ ಮುಗಿಯಲಿರುವ ಕಾರಣ ಕೇಂದ್ರ ಸರ್ಕಾರವು ನೂತನ ಕಾರ್ಯದರ್ಶಿಯನ್ನು ನೇಮಿಸಿದೆ. ವಿನಯ್‌ ಕ್ವಾಟ್ರಾ ಅವರನ್ನು ಅಮೆರಿಕಕ್ಕೆ ಭಾರತದ ರಾಯಭಾರಿಯನ್ನಾಗಿ ನೇಮಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಯಾರಿವರು ವಿಕ್ರಮ್‌ ಮಿಸ್ರಿ?

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ 1964ರ ನವೆಂಬರ್‌ 7ರಂದು ಜನಿಸಿದ ವಿಕ್ರಮ್‌ ಮಿಸ್ರಿ ಅವರು ಇತಿಹಾಸ ವಿಷಯದಲ್ಲಿ ಪದವಿ ಪಡೆದಿದ್ದಾರೆ. ಜಮ್‌ಶೆಡ್‌ಪುರದಲ್ಲಿ ಎಂಬಿಎ ಅಧ್ಯಯನ ಮಾಡಿರುವ ಇವರು ಮೂವರು ಪ್ರಧಾನಿಗಳಿಗೆ ಖಾಸಗಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ನರೇಂದ್ರ ಮೋದಿ, ಮನಮೋಹನ್‌ ಸಿಂಗ್‌ ಹಾಗೂ ಐ.ಕೆ. ಗುಜ್ರಾಲ್‌ ಅವರಿಗೆ ಕಾರ್ಯದರ್ಶಿಯಾಗಿದ್ದರು.

ಚೀನಾ ವಿಷಯದಲ್ಲಿ ಪರಿಣತ

ಚೀನಾದ ಬೀಜಿಂಗ್‌ನಲ್ಲಿ ದೂತಾವಾಸ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅನುಭವ ಇರುವ ವಿಕ್ರಮ್‌ ಮಿಸ್ರಿ ಅವರು ಚೀನಾ ವಿಷಯಕ್ಕೆ ಸಂಬಂಧಿಸಿದಂತೆ ಪರಿಣತ ಎನಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿಯೇ ಚೀನಾ ಬಗ್ಗೆ ಹೆಚ್ಚು ಗೊತ್ತಿರುವ, ಸಮಸ್ಯೆಗಳನ್ನು ನಿರ್ವಹಿಸುವ ಸಾಮರ್ಥ್ಯ ಇರುವ ಕೆಲವೇ ಅಧಿಕಾರಿಗಳಲ್ಲಿ ಇವರು ಕೂಡ ಒಬ್ಬರಾಗಿದ್ದಾರೆ.

ಭಾರತದ ಮಟ್ಟಿಗೆ ವಿದೇಶಾಂಗ ನೀತಿಯಲ್ಲಿ ಎದುರಾಗುವ ಪ್ರಮುಖ ಸವಾಲುಗಳಲ್ಲಿ ಚೀನಾದ ವಿಷಯವು ಒಂದಾಗಿದೆ. ಲಡಾಕ್‌ ಗಡಿಯಲ್ಲಿ ಯೋಧರು ಚೀನಾ ಸೈನಿಕರನ್ನು ಎದುರಿಸುವ ಜತೆಗೆ ರಾಜತಾಂತ್ರಿಕವಾಗಿಯೂ ಚೀನಾವನ್ನು ನಿಯಂತ್ರಿಸುವುದು, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದು ಪ್ರಮುಖ ಸಂಗತಿಯಾಗಿದೆ. ಹಾಗಾಗಿಯೇ, ವಿಕ್ರಮ್‌ ಮಿಸ್ರಿ ಅವರನ್ನು ವಿದೇಶಾಂಗ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Sam Pitroda: ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮತ್ತೆ ನೇಮಕ; ದಕ್ಷಿಣ ಭಾರತೀಯರನ್ನು ಆಫ್ರಿಕನ್ನರಿಗೆ ಹೋಲಿಸಿದ್ದ ನಾಯಕ

Continue Reading

ಪ್ರಮುಖ ಸುದ್ದಿ

Petrol Price : ಮುಂಬೈನಲ್ಲಿ ಪೆಟ್ರೋಲ್​ ಬೆಲೆ ಇಳಿಸಿದ ಮಹಾರಾಷ್ಟ್ರ ಸರ್ಕಾರ

Petrol Price:ಮುಂಬೈ ಪ್ರದೇಶದಲ್ಲಿ ಡೀಸೆಲ್ ಮೇಲಿನ ತೆರಿಗೆಯನ್ನು ಶೇಕಡಾ 24 ರಿಂದ 21 ಕ್ಕೆ ಇಳಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಪ್ರಕಟಿಸಿದೆ. ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇಕಡಾ 26 ರಿಂದ 25 ಕ್ಕೆ ಇಳಿಸಲಾಗುವುದು ಎಂದಿದೆ. ಇದು ಮುಂಬೈ, ನವೀ ಮುಂಬೈ ಮತ್ತು ಥಾಣೆ ಸೇರಿದಂತೆ ಮುಂಬೈ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ 65 ಪೈಸೆ ಇಳಿಕೆಯಾಗಿದೆ ಹಾಗೂ ಡೀಸೆಲ್​ ಬೆಲೆ 2 ರೂಪಾಯಿ ಕಡಿಮೆಯಾಗಿದೆ.

VISTARANEWS.COM


on

petrol Price
Koo

ಬೆಂಗಳೂರು: ಕರ್ನಾಟಕದಲ್ಲಿ ಪೆಟ್ರೋಲ್​ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿರುವ ಕಾರಣ ಜನಾಕ್ರೋಶ ಉಂಟಾಗಿದೆ. ಪೆಟ್ರೋಲ್​ಗೆ 3 ರೂಪಾಯಿ ಹಾಗೂ ಡಿಸೆಲ್​ಗೆ 3.50 ರೂಪಾಯಿ ಏರಿಕೆಯಾಗಿರುವ ಕಾರಣ ಬೇರೆಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ವಿರೋಧ ಪಕ್ಷ ಬಿಜೆಪಿ ಇದರ ವಿರುದ್ದ ಆಂದೋಲನ ಶುರು ಮಾಡಿದೆ. ಈ ಎಲ್ಲ ಬೆಳವಣಿಗೆ ನಡುವೆ ನೆರೆಯ ಮಹಾರಾಷ್ಟ್ರ ಸರ್ಕಾರ ಮುಂಬಯಿ ನಗರದ ಪ್ರದೇಶಧಲ್ಲಿ ಪೆಟ್ರೋಲ್​ ಬೆಲೆಯನ್ನು (Petrol Price) ಇಳಿಕೆ ಮಾಡಿದೆ. ಆದಾಗ್ಯೂ ಆ ರಾಜ್ಯದಲ್ಲಿ ಇಂಧನ ಬೆಲೆ ಕರ್ನಾಟಕಕ್ಕಿಂತ ಹೆಚ್ಚಾಗಿದೆ.

ಮುಂಬೈ ಪ್ರದೇಶದಲ್ಲಿ ಡೀಸೆಲ್ ಮೇಲಿನ ತೆರಿಗೆಯನ್ನು ಶೇಕಡಾ 24 ರಿಂದ 21 ಕ್ಕೆ ಇಳಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಪ್ರಕಟಿಸಿದೆ. ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇಕಡಾ 26 ರಿಂದ 25 ಕ್ಕೆ ಇಳಿಸಲಾಗುವುದು ಎಂದಿದೆ. ಇದು ಮುಂಬೈ, ನವೀ ಮುಂಬೈ ಮತ್ತು ಥಾಣೆ ಸೇರಿದಂತೆ ಮುಂಬೈ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ 65 ಪೈಸೆ ಇಳಿಕೆಯಾಗಿದೆ ಹಾಗೂ ಡೀಸೆಲ್​ ಬೆಲೆ 2 ರೂಪಾಯಿ ಕಡಿಮೆಯಾಗಿದೆ.

ಮಹಾರಾಷ್ಟ್ರ ಬಜೆಟ್ ಮಂಡಿಸಿದ ಉಪಮುಖ್ಯಮಂತ್ರಿ ಅಜಿತ್ ಪವಾರ್, “ಮುಂಬೈ ಪ್ರದೇಶದಲ್ಲಿ ಡೀಸೆಲ್ ಮೇಲಿನ ತೆರಿಗೆಯನ್ನು ಶೇಕಡಾ 24 ರಿಂದ 21 ಕ್ಕೆ ಇಳಿಸಲಾಗಿದೆ. ಮುಂಬೈ ವಲಯದಲ್ಲಿ ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇ.26ರಿಂದ ಶೇ.25ಕ್ಕೆ ಇಳಿಸಲಾಗಿದ್ದು, ಇದರಿಂದ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 65 ಪೈಸೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

ಜೂನ್ 28 ರಂದು ಮುಂಬೈನಲ್ಲಿ ಪೆಟ್ರೋಲ್ 104.21 ರೂ.ಗೆ ತಲುಪಿದ್ದರೆ, ಡೀಸೆಲ್ ಬೆಲೆ ಲೀಟರ್​ಗೆ 92.15 ರೂಪಾಯಿ ಇದೆ. ಕರ್ನಾಟಕದಲ್ಲಿ 102. 86 ರೂಪಾಯಿ ಆದರೆ ಬೆಂಗಳೂರು 88. 94 ರೂಪಾಯಿ ನಡೆದಿದೆ.

ಮಹಾರಾಷ್ಟ್ರ ಬಜೆಟ್

2024-25ರ ರಾಜ್ಯ ಬಜೆಟ್​ನಲ್ಲಿ 21 ರಿಂದ 60 ವರ್ಷ ವಯಸ್ಸಿನ ಅರ್ಹ ಮಹಿಳೆಯರಿಗೆ ಮಾಸಿಕ 1,500 ರೂ.ಗಳ ಭತ್ಯೆ ಒಳಗೊಂಡ ಆರ್ಥಿಕ ನೆರವು ಯೋಜನೆಯನ್ನು ಹಣಕಾಸು ಖಾತೆಯನ್ನು ಹೊಂದಿರುವ ಪವಾರ್ ಬಜೆಟ್​ನಲ್ಲಿ ಮಂಡಿಸಿದ್ದಾರೆ. ವಿಧಾನಸಭೆಯಲ್ಲಿ ತಮ್ಮ ಬಜೆಟ್ ಭಾಷಣದಲ್ಲಿ ಪವಾರ್ ಅವರು ‘ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್ ಯೋಜನೆ’ ಎಂಬ ಯೋಜನೆಯನ್ನು ಜುಲೈನಿಂದ ಜಾರಿಗೆ ತರಲಾಗುವುದು ಎಂದು ಹೇಳಿದರು.

ಈ ಯೋಜನೆಗಾಗಿ ವಾರ್ಷಿಕ ಬಜೆಟ್ ನಲ್ಲಿ 46,000 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು ಎಂದು ಅವರು ಹೇಳಿದರು. ಮತ್ತೊಂದು ಕಲ್ಯಾಣ ಯೋಜನೆಯನ್ನು ಘೋಷಿಸಿದ ಹಣಕಾಸು ಸಚಿವರು, ಐದು ಸದಸ್ಯರ ಅರ್ಹ ಕುಟುಂಬಕ್ಕೆ ‘ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆ’ ಅಡಿ ಪ್ರತಿ ವರ್ಷ ಮೂರು ಅಡುಗೆ ಅನಿಲ ಸಿಲಿಂಡರ್​ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಹೇಳಿದರು.

Continue Reading

ದೇಶ

Rahul Gandhi: ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್;‌ ಸ್ಪೀಕರ್‌ ಮಾಡಿದ್ರಾ?

Rahul Gandhi: ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಸಂಸತ್ತಿನಲ್ಲಿ ದೇಶದ ವಿದ್ಯಾರ್ಥಿಗಳ ಭವಿಷ್ಯದ ಕುರಿತು ಮಾತನಾಡುವಾಗ ಸ್ಪೀಕರ್‌ ಓಂ ಬಿರ್ಲಾ ಅವರು ಏಕೆ ಮೈಕ್‌ಅನ್ನು ಆಫ್‌ ಮಾಡಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ವಿಡಿಯೊವನ್ನು ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Rahul Gandhi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಬಳಿಕ ಎನ್‌ಡಿಎ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಸಂಸತ್ತಿನ ಮೊದಲ ವಿಶೇಷ ಅಧಿವೇಶನ ನಡೆಯುತ್ತಿದೆ. ಆಡಳಿತ ಪಕ್ಷಕ್ಕೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಸವಾಲೊಡ್ಡುತ್ತಿದ್ದಾರೆ. ಇದರ ಬೆನ್ನಲ್ಲೇ, ಲೋಕಸಭೆಯಲ್ಲಿ ರಾಹುಲ್‌ ಗಾಂಧಿ ಅವರು ನೀಟ್‌ ಅಕ್ರಮದ ಕುರಿತು ಮಾತನಾಡುವಾಗ ಅವರ ಮೈಕ್‌ ಆಫ್‌ ಆಗಿದ್ದು, ಸ್ಪೀಕರ್‌ ಓಂ ಬಿರ್ಲಾ (Om Birla) ಅವರೇ ಮೈಕ್‌ ಆಫ್‌ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ರಾಹುಲ್‌ ಗಾಂಧಿ ಅವರು ಲೋಕಸಭೆಯಲ್ಲಿ ಮಾತನಾಡುವಾಗ ಸ್ಪೀಕರ್‌ ಸರ್‌, ನನಗೆ ಮೈಕ್‌ ಕೊಡಿ ಎಂದಿದ್ದಾರೆ. ಆಗ ಸ್ಪೀಕರ್‌, “ನನ್ನ ಬಳಿ ಯಾವುದೇ ಬಟನ್‌ ಇಲ್ಲ” ಎಂದಿದ್ದಾರೆ. ಇದಕ್ಕೂ ಮೊದಲು ರಾಹುಲ್‌ ಗಾಂಧಿ ಅವರು ಮಾತನಾಡಿದರು. “ದೇಶದ ವಿದ್ಯಾರ್ಥಿಗಳಿಗೆ ಸರ್ಕಾರ ಹಾಗೂ ಪ್ರತಿಪಕ್ಷಗಳ ಕಡೆಯಿಂದ ಜಂಟಿ ಸಂದೇಶ ನೀಡಲು ಬಯಸುತ್ತೇವೆ. ಹಾಗೆಯೇ, ವಿದ್ಯಾರ್ಥಿಗಳಿಗೆ ಗೌರವ ನೀಡುವ ದಿಸೆಯಲ್ಲಿ ಸಂಸತ್ತಿನಲ್ಲಿ ನಾವು ನೀಟ್‌ ಕುರಿತು ಗಂಭೀರವಾಗಿ ಚರ್ಚಿಸೋಣ” ಎಂದರು. ಇದೇ ವೇಳೆ ರಾಹುಲ್‌ ಗಾಂಧಿ ಅವರ ಮೈಕ್‌ ಆಫ್‌ ಆಗಿದ್ದು, ಪ್ರತಿಪಕ್ಷಗಳು ಗಲಾಟೆ ಮಾಡಿವೆ. ಆಗ ಸ್ಪೀಕರ್‌ ಅವರು ನನ್ನ ಬಳಿ ಬಟನ್‌ ಇಲ್ಲ ಎಂದಿದ್ದಾರೆ.

ಕಾಂಗ್ರೆಸ್‌ ಆಕ್ರೋಶ

“ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಸಂಸತ್ತಿನಲ್ಲಿ ದೇಶದ ವಿದ್ಯಾರ್ಥಿಗಳ ಭವಿಷ್ಯದ ಕುರಿತು ಮಾತನಾಡುವಾಗ ಸ್ಪೀಕರ್‌ ಓಂ ಬಿರ್ಲಾ ಅವರು ಏಕೆ ಮೈಕ್‌ಅನ್ನು ಆಫ್‌ ಮಾಡಿದ್ದಾರೆ” ಎಂದು ಕೇರಳ ಕಾಂಗ್ರೆಸ್‌ ಘಟಕದ ಎಕ್ಸ್‌ ಖಾತೆಯಿಂದ ಪೋಸ್ಟ್‌ ಮಾಡಲಾಗಿದೆ. ಅಲ್ಲದೆ, ರಾಹುಲ್‌ ಗಾಂಧಿ ಅವರು ಮಾತನಾಡುವಾಗಲೇ ಮೈಕ್‌ ಆಫ್‌ ಆಗುವ ವಿಡಿಯೊವನ್ನು ಕೂಡ ಹಲವು ಕಾಂಗ್ರೆಸ್‌ ನಾಯಕರು ಹಂಚಿಕೊಂಡಿದ್ದಾರೆ. ಹಾಗೆಯೇ, ಸ್ಪೀಕರ್‌ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ನಾಯಕ ದೀಪೆಂದರ್‌ ಸಿಂಗ್‌ ಹೂಡಾ ಅವರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಾವು ಕ್ಷಿಪ್ರವಾಗಿ ನೀಟ್‌ ವಿಷಯದ ಕುರಿತು ಚರ್ಚೆ ಮಾಡೋಣ ಎಂದು ಬೇಡಿಕೆ ಇಟ್ಟೆವು. ಇದೇ ವೇಳೆ ರಾಹುಲ್‌ ಗಾಂಧಿ ಅವರು ಮಾತನಾಡುತ್ತಿದ್ದರು. ಆಗ ಮೈಕ್‌ ಆಫ್‌ ಆಗಿದೆ. ಇದು ನಮ್ಮ ಆಕ್ರೋಶವನ್ನು ಕೆರಳಿಸಿತು” ಎಂದಿದ್ದಾರೆ. ಜುಲೈ 24 ರಂದು ಸಂಸತ್‌ ವಿಶೇಷ ಅಧಿವೇಶನ ಆರಂಭವಾಗಿದ್ದು, ಜುಲೈ 3ರವರೆಗೆ ನಡೆಯಲಿದೆ.

ಇದನ್ನೂ ಓದಿ: ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

Continue Reading

ದೇಶ

Hemant Soren: ಜಾಮೀನು ಮಂಜೂರು; ಹೇಮಂತ್‌ ಸೊರೆನ್‌ಗೆ ಬಿಗ್‌ ರಿಲೀಫ್‌

Hemant Soren: ಸೊರೆನ್‌ ಪರ ವಾದ ಮಂಡಿಸಿದ್ದ ಅರುಣಾಭ್‌ ಚೌಧರಿ ಪ್ರತಿಕ್ರಿಯಿಸಿದ್ದು, ಸೊರೇನ್‌ಗೆ ಜಾಮೀನು ಮಂಜೂರಾಗಿದೆ. ಮೇಲ್ನೋಟಕ್ಕೆ ಅವರು ಅಪರಾಧದಲ್ಲಿ ತಪ್ಪಿತಸ್ಥರಲ್ಲ ಮತ್ತು ಜಾಮೀನಿನ ಮೇಲೆ ಅರ್ಜಿದಾರರು ಅಪರಾಧ ಮಾಡುವ ಸಾಧ್ಯತೆಯಿಲ್ಲ ಎಂದು ನ್ಯಾಯಾಲಯ ಹೇಳಿದೆ ಅಂತಾ ಹೇಳಿದ್ದಾರೆ. ತಮ್ಮ ಬಂಧನವನ್ನು ಪ್ರಶ್ನಿಸಿ ಜೂ.13ರಂದು ಸೊರೆನ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ತೀರ್ಪನ್ನು ಕಾಯ್ದಿರಿಸಿತ್ತು.

VISTARANEWS.COM


on

Hemant Soren
Koo

ಜಾರ್ಖಂಡ್‌: ಅಕ್ರಮ ಹಣ ವರ್ಗಾವಣೆ(Money laundering Case) ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳಿಂದ ಬಂಧಿತರಾಗಿರುವ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ, ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಸ್ಥ ಹೇಮಂತ್‌ ಸೊರೆನ್‌ (Hemant Soren) ಜಾರ್ಖಂಡ್‌ ಹೈಕೋರ್ಟ್‌(Jharkhand High Court) ಜಾಮೀನು ನೀಡಿದೆ. ಜ.31ರಂದು ಸೊರೆನ್‌ ಅವರನ್ನು ಇಡಿ ಅರೆಸ್ಟ್‌ ಮಾಡಿದ್ದು, ಪ್ರಸ್ತುತ ಅವರು ಬಿರ್ಸಾ ಮುಂಡಾ ಸೆಂಟ್ರಲ್‌ ಜೈಲಿನಲ್ಲಿದ್ದಾರೆ.

ಈ ಕುರಿತು ಅವರ ಪರ ವಾದ ಮಂಡಿಸಿದ್ದ ಅರುಣಾಭ್‌ ಚೌಧರಿ ಪ್ರತಿಕ್ರಿಯಿಸಿದ್ದು, ಸೊರೇನ್‌ಗೆ ಜಾಮೀನು ಮಂಜೂರಾಗಿದೆ. ಮೇಲ್ನೋಟಕ್ಕೆ ಅವರು ಅಪರಾಧದಲ್ಲಿ ತಪ್ಪಿತಸ್ಥರಲ್ಲ ಮತ್ತು ಜಾಮೀನಿನ ಮೇಲೆ ಅರ್ಜಿದಾರರು ಅಪರಾಧ ಮಾಡುವ ಸಾಧ್ಯತೆಯಿಲ್ಲ ಎಂದು ನ್ಯಾಯಾಲಯ ಹೇಳಿದೆ ಅಂತಾ ಹೇಳಿದ್ದಾರೆ. ತಮ್ಮ ಬಂಧನವನ್ನು ಪ್ರಶ್ನಿಸಿ ಜೂ.13ರಂದು ಸೊರೆನ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ತೀರ್ಪನ್ನು ಕಾಯ್ದಿರಿಸಿತ್ತು.

ಅಕ್ರಮವಾಗಿ ಹಣ ವರ್ಗಾವಣೆ, ಭೂ ಅವ್ಯವಹಾರ ಪ್ರಕರಣ ಕೇಳಿಬಂದ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಹೇಮಂತ್‌ ಸೊರೆನ್‌ ಅವರಿಗೆ 9 ಬಾರಿ ಸಮನ್ಸ್‌ ಜಾರಿಗೊಳಿಸಿದ್ದರು. ಆದರೆ ಹೇಮಂತ್‌ ಸೊರೆನ್‌ ಅವರು ಪ್ರತಿ ಬಾರಿ ಸಮನ್ಸ್‌ ನೀಡಿದಾಗಲೂ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಇ.ಡಿ ಅಧಿಕಾರಿಗಳು ಮನೆಗೆ ಲಗ್ಗೆ ಇಡುತ್ತಾರೆ ಎಂಬುದನ್ನು ಅರಿತಿದ್ದ ಅವರು ದೆಹಲಿಗೆ ತೆರಳಿ, ಗೌಪ್ಯ ಸ್ಥಳದಲ್ಲಿದ್ದರು. ಆದರೆ ಇ.ಡಿ ಅಧಿಕಾರಿಗಳು ಕೊನೆಗೂ ಹೇಮಂತ್‌ ಸೊರೆನ್‌ ಅವರನ್ನು ಈ ವರ್ಷದ ಜನವರಿ 31ರಂದು ಬಂಧಿಸಿದ್ದರು. ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್‌ ಸೊರೆನ್‌ ಅವರು ರಾಜೀನಾಮೆ ನೀಡಿದ್ದರು.

ಬಂಧನವನ್ನು ಪ್ರಶ್ನಿಸಿ ಹಾಗೂ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿತ್ತು. ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವ ಉದ್ದೇಶದಿಂದ ಹೇಮಂತ್‌ ಸೊರೆನ್‌ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಹೇಮಂತ್ ಸೊರೆನ್ ಅವರು ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿತು. ನ್ಯಾಯಾಲಯ ಎಚ್ಚರಿಕೆ ನೀಡಿದ ನಂತರ ಸೊರೆನ್ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡರು. ಇದರಿಂದ ಸೊರೆನ್‌ ಅವರಿಗೆ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Continue Reading
Advertisement
Vikram Misri
ಪ್ರಮುಖ ಸುದ್ದಿ44 seconds ago

Vikram Misri: ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ; ಚೀನಾ ವಿಷಯದಲ್ಲಿ ಇವರು ಎಕ್ಸ್‌ಪರ್ಟ್!

Prajwal Revanna Case
ಕರ್ನಾಟಕ6 mins ago

Prajwal Revanna Case: ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

Vasavi Condiments owner attempts suicide by consuming sleeping pills
ಬೆಂಗಳೂರು10 mins ago

vasavi condiments : ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ; ನಿದ್ರೆ ಮಾತ್ರೆ ಸೇವಿಸಿ ಮಾಲಕಿ ಗೀತಾ ಆತ್ಮಹತ್ಯೆಗೆ ಯತ್ನ

Dengue Prevention
ಆರೋಗ್ಯ17 mins ago

Dengue Prevention: ರಾಜ್ಯದಲ್ಲಿ 6000ಕ್ಕೂ ಡೆಂಗ್ಯೂ ಪ್ರಕರಣ; ಇದರಿಂದ ಪಾರಾಗಲು ಹೀಗೆ ಮಾಡಿ

ಕ್ರೀಡೆ29 mins ago

IND vs SA: ಗೆದ್ದು ಬಾ ಭಾರತ; ನಾಳೆ ಟಿ20 ವಿಶ್ವಕಪ್​ ಫೈನಲ್​

CM Siddaramaiah
ಕರ್ನಾಟಕ41 mins ago

CM Siddaramaiah: ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

Dhanya Ramkumar heroine in choukidaar cinema
ಸ್ಯಾಂಡಲ್ ವುಡ್51 mins ago

Dhanya Ramkumar: ʻದಿಯಾʼ ಹೀರೊಗೆ ಜೋಡಿಯಾದ ದೊಡ್ಮನೆ ಬ್ಯೂಟಿ!

Road Accident A huge tree fell on the bike Riders are serious
ಉತ್ತರ ಕನ್ನಡ53 mins ago

Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

Viral Video
Latest59 mins ago

Viral Video: ಸಲಿಂಗ ಪ್ರೇಮ ಪ್ರಕರಣ; ಯುವತಿಯನ್ನು ಮೆಚ್ಚಿ ಮದುವೆಯಾದ ಟಿವಿ ನಟಿ!

US Presidential Election
ವಿದೇಶ59 mins ago

US Presidential Election: ನೀಲಿ ಚಿತ್ರ ತಾರೆ ಜತೆ ಡೊನಾಲ್ಡ್‌ ಟ್ರಂಪ್‌ ಸೆಕ್ಸ್;‌ ಚರ್ಚೆ ವೇಳೆ ಬೈಡೆನ್‌ ಆರೋಪ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ23 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌