Site icon Vistara News

Mayawati : ಸೋದರಳಿಯನನ್ನೇ ಉತ್ತರಾಧಿಕಾರಿಯಾಗಿ ಘೋಷಿಸಿದ ಬಿಎಸ್​ಪಿ ನಾಯಕಿ ಮಾಯಾವತಿ

Mayavathi

ಲಖನೌ : ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಹೊರತುಪಡಿಸಿ ಬಹುಜನ ಸಮಾಜ ಪಕ್ಷದ (BSP) ಉತ್ತರಾಧಿಕಾರಿಯಾಗಿ ಮಾಯಾವತಿ (Mayawati) ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಭಾನುವಾರ ಘೋಷಿಸಿದ್ದಾರೆ. ಮಾಯಾವತಿ ಅವರು ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಮೇಲ್ವಿಚಾರಣೆ ಮುಂದುವರಿಸಲಿದ್ದಾರೆ. ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಆಕಾಶ್ ಆನಂದ್ (ಮಾಯಾವತಿ ಅವರ ಸೋದರಳಿಯ) ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಘೋಷಿಸಿದ್ದಾರೆ” ಎಂದು ಪಕ್ಷದ ಮುಖಂಡ ಉದಯ್​ವೀರ್ ಸಿಂಗ್ ಸುದ್ದಿ ಸಂಸ್ಥೆ ಎಎನ್ಐಗೆ ಮಾಹಿತಿ ನೀಡಿದ್ದಾರೆ.

ಬಿಎಸ್ಪಿ ಅಧ್ಯಕ್ಷರ ಉತ್ತರಾಧಿಕಾರಿಯಾಗಿ ಆಕಾಶ್ ಆನಂದ್ ಆಯ್ಕೆಯಾಗಲಿದ್ದಾರೆ ಎಂದು ಹಿಂದೆಯೇ ಹೇಳಲಾಗಿತ್ತು. ಅವರು ಕಳೆದ ವರ್ಷದಿಂದ ಪಕ್ಷದ ವ್ಯವಹಾರಗಳ ಉಸ್ತುವಾರಿ ವಹಿಸಿದ್ದರು ಅವರು ಮಾಯಾವತಿ ಅವರ ಕಿರಿಯ ಸಹೋದರ ಆನಂದ್ ಕುಮಾರ್ ಅವರ ಪುತ್ರರಾಗಿದ್ದು, ಬಿಎಸ್ಪಿಯಲ್ಲಿ ಸದಾ ಮಾಯಾವತಿ ಅವರಿ ಅವರ ಪಕ್ಕದಲ್ಲಿಯೇ ಇರುತ್ತಿದ್ದರು.

2016 ರಲ್ಲಿ ಬಿಎಸ್ಪಿಗೆ ಸೇರಿದ ಆನಂದ್, 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ತಮ್ಮ ಪಕ್ಷದ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾಗಿದ್ದರು. ಇತ್ತೀಚೆಗೆ ನಡೆದ ನಾಲ್ಕು ಚುನಾವಣೆಗಳಲ್ಲಿ, ವಿಶೇಷವಾಗಿ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಆಕಾಶ್ ಆನಂದ್ ಪ್ರಮುಖ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದರು. ಚುನಾವಣೆಯಲ್ಲಿ ಬಿಎಸ್ಪಿ ತನ್ನ ಮತ ಬ್ಯಾಂಕ್ ಅನ್ನು ಗಣನೀಯ ಪ್ರಮಾಣದಲ್ಲಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಮತ್ತು ರಾಜಸ್ಥಾನದಲ್ಲಿ ಎರಡು ಸ್ಥಾನಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ : BJP Karnataka : ಕೊನೆಗೂ ಶಾಸಕಾಂಗ ಪಕ್ಷದ ಸಭೆ ಕರೆದ ರಾಜ್ಯ ಬಿಜೆಪಿ

ಮಾಯಾವತಿ ಅವರ ಪಕ್ಷದ ವಲಯದಲ್ಲಿ ಆನಂದ್ ಅವರ ಅಧಿಕೃತ ಘೋಷಣೆ. 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷದ ಕಾರ್ಯತಂತ್ರದ ಭಾಗವಾಗಿದೆ. 2022ರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು ಅಲ್ವಾರ್ನಲ್ಲಿ ನಡೆದ 13 ಕಿ.ಮೀ “ಸ್ವಾಭಿಮಾನ್ ಸಂಕಲ್ಪ ಯಾತ್ರೆ” ಯಲ್ಲಿ 28 ವರ್ಷದ ಆನಂದ್ ಭಾಗವಹಿಸಿದ್ದರು. 2019 ರಲ್ಲಿ ರಾಜಸ್ಥಾನದಲ್ಲಿ ಬಿಎಸ್ಪಿಯ ಚುನಾವಣಾ ಪ್ರಚಾರದಲ್ಲಿ ಅವರು ಕಾಣಿಸಿಕೊಂಡಿದ್ದರು. ಸಮಾಜವಾದಿ ಪಕ್ಷ-ಬಿಎಸ್ಪಿ-ರಾಷ್ಟ್ರೀಯ ಲೋಕದಳ ಮೈತ್ರಿಕೂಟಕ್ಕೆ ಬೆಂಬಲವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದರು. .

ಲಕ್ನೋದ ಪಕ್ಷದ ರಾಜ್ಯ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯ ಅಧ್ಯಕ್ಷತೆಯನ್ನು ಮಾಯಾವತಿ ವಹಿಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಶನಿವಾರ ಅಧಿಕೃತ ಹೇಳಿಕೆಯ ಪ್ರಕಾರ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್​ಗಢ ಸೇರಿದಂತೆ ಮೂರು ರಾಜ್ಯಗಳಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕ್ಷಮತೆ ಈ ಸಭೆಯಲ್ಲಿ ವಿಶ್ಲೇಷಣೆಗೆ ಒಳಪಡಲಿದೆ.

ಏತನ್ಮಧ್ಯೆ ಸಭೆಯಲ್ಲಿ 2024 ರ ಲೋಕಸಭಾ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಚರ್ಚೆಗಳು ನಡೆದವು. ಕಳೆದ 20 ವರ್ಷಗಳಲ್ಲಿ 18 ವರ್ಷಗಳ ಕಾಲ ರಾಜ್ಯವನ್ನು ಆಳಿದ ನಂತರ ಬಿಜೆಪಿ ಮಧ್ಯಪ್ರದೇಶದಲ್ಲಿ ದಾಖಲೆಯನ್ನು ಸೃಷ್ಟಿಸಿತ್ತು. ಇದು ರಾಜ್ಯದಲ್ಲಿ ಪಕ್ಷದ ಸಾಂಸ್ಥಿಕ ಹಿಡಿತ ಮತ್ತು ಅದರ ಯೋಜನೆಗಳು ಮತ್ತು ನಾಯಕತ್ವದ ಜನಪ್ರಿಯತೆಯ ಸ್ಪಷ್ಟ ಸೂಚನೆಯಾಗಿದೆ.

Exit mobile version