BTS Army: ತಮಿಳುನಾಡಿನ ಬಾಲಕಿಯರಿಗೂ ದಕ್ಷಿಣ ಕೊರಿಯಾ ಬಿಟಿಎಸ್‌ ಗ್ರೂಪ್‌ಗೂ ಎತ್ತಣಿಂದೆತ್ತ ಸಂಬಂಧವಯ್ಯಾ? - Vistara News

ದೇಶ

BTS Army: ತಮಿಳುನಾಡಿನ ಬಾಲಕಿಯರಿಗೂ ದಕ್ಷಿಣ ಕೊರಿಯಾ ಬಿಟಿಎಸ್‌ ಗ್ರೂಪ್‌ಗೂ ಎತ್ತಣಿಂದೆತ್ತ ಸಂಬಂಧವಯ್ಯಾ?

BTS Army: ದಕ್ಷಿಣ ಕೊರಿಯಾಕ್ಕೆ ಹೊರಟಿದ್ದ ತಮಿಳುನಾಡಿನ ಮೂವರು ಹದಿಹರೆಯದ ಬಾಲಕಿಯರನ್ನು ರಕ್ಷಿಸಲಾಗಿದೆ. ಇದಕ್ಕೆ ಕಾರಣವೇನು? ಅವರು ಯಾಕೆ ದಕ್ಷಿಣ ಕೊರಿಯಾ ಹೊರಟಿದ್ದರು? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

bts
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ದಶಕದ ಹಿಂದೆ ದಕ್ಷಿಣ ಕೊರಿಯಾದಲ್ಲಿ ರೂಪುಗೊಂಡ ಬಿಟಿಎಸ್‌ ಬ್ಯಾಂಡ್‌ ಗ್ರೂಪ್‌ಗೆ (BTS Army) ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ವಯಸ್ಸಾದವರಿಂದ ಹಿಡಿದು ಮಕ್ಕಳವರೆಗೆ ಕೋಟ್ಯಂತರ ಮಂದಿ ಇವರ ತಾಳಕ್ಕೆ ಕುಣಿಯುತ್ತಾರೆ. ಇದಕ್ಕೆ ಭಾರತೀಯರೂ ಹೊರತಲ್ಲ. ಇದೀಗ ಬಿಟಿಎಸ್‌ ಗ್ರೂಪ್‌ ಅನ್ನು ಭೇಟಿಯಾಗಲೇಬೇಕು ಎಂದು ತಮಿಳುನಾಡಿನಿಂದ ದಕ್ಷಿಣ ಕೊರಿಯಾದ ಸಿಯೋಲ್‌ಗೆ ಹೊರಟ 13ರ ಹರೆಯದ ಮೂವರು ಹೆಣ್ಣು ಮಕ್ಕಳನ್ನು ರಕ್ಷಿಸಲಾಗಿದೆ. ಕೈಯಲ್ಲಿ 14 ಸಾವಿರ ರೂ. ಇಟ್ಟುಕೊಂಡು ಇವರು ದಕ್ಷಿಣ ಕೊರಿಯಾಕ್ಕೆ ಹೊರಟಿದ್ದರು. ಈ ಕುರಿತಾದ ವಿವರ ಇಲ್ಲಿದೆ.

ಬಿಟಿಎಸ್‌ ಬ್ಯಾಂಡ್‌ನ ಕಟ್ಟಾ ಅಭಿಮಾನಿಗಳು

ತಮಿಳುನಾಡಿನ ಕರೂರ್‌ ಜಿಲ್ಲೆಯ ಈ ಮೂವರು ಬಾಲಕಿಯರು ಬಿಟಿಎಸ್‌ ಬ್ಯಾಂಡ್‌ನ ಕಟ್ಟಾ ಅಭಿಮಾನಿಗಳು. ಮನೆಯಲ್ಲಿ ಯಾರಿಗೂ ತಿಳಿಸದೆ ಹೊರಟಿದ್ದ ಇವರು ವೆಲ್ಲೂರ್‌ನ ಕಟಪಾಡಿ ಜಂಕ್ಷನ್ ರೈಲು ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ಜನವರಿ 4ರಂದು ಈ ಬಾಲಕಿಯರು ಮನೆಯಿಂದ ಹೊರಟಿದ್ದರು. ವಿಶಾಖಪಟ್ಟಣಕ್ಕೆ ತೆರಳಿ ಅಲ್ಲಿಂದ ಹಡಗಿನ ಮೂಲಕ ಕೊರಿಯಾಕ್ಕೆ ತೆರಳುವುದು ಈ ಬಾಲಕಿಯರ ಯೋಜನೆಯಾಗಿತ್ತು. ಅದರಂತೆ ಅವರು ಈರೋಡ್‌ನಿಂದ ಚೆನ್ನೈಗೆ ತೆರಳುವ ರೈಲು ಹತ್ತಿದ್ದರು.‌ ಚಹಾ ಕುಡಿಯಲು ಕಟಪಾಡಿ ಸ್ಟೇಷನ್‌ನಲ್ಲಿ ಇಳಿದಾಗ ರೈಲು ಹೊರಟು ಹೋಗಿತ್ತು. ಬಳಿಕ ಇವರ ವರ್ತನೆಯ ಬಗ್ಗೆ ಅನುಮಾನಗೊಂಡ ರೈಲ್ವೆ ಪೊಲೀಸರು ವಿಚಾರಿಸಿದಾಗ ಬಾಲಕಿಯರು ಸತ್ಯ ಬಾಯಿ ಬಿಟ್ಟಿದ್ದಾರೆ. ಸದ್ಯ ಮೂವರನ್ನೂ ಕೌನ್ಸೆಲಿಂಗ್ ನಡೆಸಿ ಪಾಲಕರೊಂದಿಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಿಂಗಳ ಹಿಂದೆ ರೂಪುಗೊಂಡ ಯೋಜನೆ

ಕರೂರ್‌ ಜಿಲ್ಲೆಯ ಗ್ರಾಮೀಣ ಪ್ರದೇಶವೊಂದರ ಇಂಗ್ಲಿಷ್‌ ಮೀಡಿಯಂ ಶಾಲೆಯ ವಿದ್ಯಾರ್ಥಿನಿಗಳಾದ ಇವರು ಒಂದು ತಿಂಗಳ ಹಿಂದೆಯೇ ದಕ್ಷಿಣ ಕೊರಿಯಾಕ್ಕೆ ತೆರಳುವ ಪ್ಲ್ಯಾನ್‌ ರೂಪಿಸಿದ್ದರು. ʼʼಬಾಲಕಿಯರ ಪೈಕಿ ಓರ್ವಳ ತಂದೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇನ್ನೋರ್ವಳ ತಂದೆ-ತಾಯಿ ವಿಚ್ಛೇದನ ಪಡೆದುಕೊಂಡಿದ್ದಾರೆ. ಇವರಿಬ್ಬರ ತಾಯಂದಿರು ಕೃಷಿ ಕೆಲಸ ಮಾಡಿ ಮಕ್ಕಳನ್ನು ಸಾಕುತ್ತಿದ್ದಾರೆ. ಆದರೂ ಈ ಮಕ್ಕಳು ಸ್ಮಾರ್ಟ್‌ ಫೋನ್‌ ಬಳಸುತ್ತಿದ್ದರು. ಬಿಟಿಎಸ್‌ ಮೇಲಿನ ಅತಿಯಾದ ಅಭಿಮಾನದ ಜತೆಗೆ ಕೌಟಂಬಿಕ ಸಮಸ್ಯೆಗಳು ಅವರನ್ನು ಮನೆ ಬಿಡುವಂತೆ ಮಾಡಿತ್ತುʼʼ ಎಂದು ತಜ್ಞರು ತಿಳಿಸಿದ್ದಾರೆ.

ಅಚ್ಚರಿಯ ಸಂಗತಿ

ತಜ್ಞರು ಇನ್ನೊಂದು ಮುಖ್ಯ ಅಂಶವನ್ನು ಕಂಡುಕೊಂಡಿದ್ದಾರೆ. ಈ ಬಾಲಕಿಯರು ಮತ್ತು ಬ್ಯಾಂಡ್‌ ನಡುವೆ ಇಷ್ಟೊಂದು ಆತ್ಮೀಯ ಬಂಧ ಬೆಳೆಯಲಿರುವ ಕಾರಣವನ್ನೂ ಊಹಿಸಿದ್ದಾರೆ. ʼʼಈ ಬಿಟಿಎಸ್‌ ಬ್ಯಾಂಡ್‌ ಆರಂಭದಲ್ಲಿ ಆರ್ಥಿಕವಾಗಿ ಬಹಳಷ್ಟು ಸಮಸ್ಯೆ ಎದುರಿಸಿತ್ತು. ಅತೀ ಸವಾಲಿನ ಪರಿಸ್ಥಿತಿಗಳನ್ನು ಎದುರಿಸಿ ಬ್ಯಾಂಡ್‌ ಉನ್ನತ ಸ್ಥಾನಕ್ಕೆ ತಲುಪಿತ್ತು. ಈ ಬ್ಯಾಂಡ್‌ನ ಹಾಡುಗಳಲ್ಲಿನ ಸಾಹಿತ್ಯ ಹದಿಹರೆಯದವರ ಮನಸ್ಸಿನ ಭಾವನೆ, ತುಮುಲಗಳನ್ನು ಪ್ರತಿನಿಧಿಸುತ್ತವೆ. ಸಾಮಾಜಿಕ ಒತ್ತಡ, ಕನಸುಗಳನ್ನು ಬೆನ್ನಟ್ಟುವುದು ಮುಂತಾದ ವಿಷಯಗಳೇ ಈ ಬ್ಯಾಂಡ್‌ನ ಸಾಹಿತ್ಯದ ಮುಖ್ಯ ತಿರುಳು. ಇವು ಬಾಲಕಿಯರ ಮೇಲೆ ಗಾಢವಾದ ಪರಿಣಾಮ ಬೀರಿವೆʼʼ ಎಂದು ತಜ್ಞರು ವಿವರಿಸುತ್ತಾರೆ.

ʼʼಈ ಬಾಲಕಿಯರ ನೆರೆಮನೆಯ ಯುವಕನೊಬ್ಬ ಇವರಿಗೆ ಬ್ಯಾಂಡ್‌ ಬಗ್ಗೆ ತಿಳಿಸಿದ್ದ. ಅಲ್ಲದೆ ಈ ಬಾಲಕಿಯರು ಕೊರಿಯನ್‌ ಭಾಷೆಯನ್ನೂ ಕಲಿಯುತ್ತಿದ್ದಾರೆ. ಕೊರಿಯನ್‌ ಭಾಷೆಯ ಸಾಹಿತ್ಯವನ್ನು ಅರ್ಥೈಸಿಕೊಳ್ಳಲು ಅವರು ಗೂಗಲ್‌ ಟ್ರಾನ್ಸ್‌ಲೇಟ್‌ನ ಸಹಾಯ ಪಡೆಯುತ್ತಿದ್ದಾರೆ. ಬಿಟಿಎಸ್‌ ಬ್ಯಾಂಡ್‌ನ ಪ್ರತಿಯೊಬ್ಬ ಸದಸ್ಯನ ಹೆಸರು, ಅವರ ಹವ್ಯಾಸ, ಅವರ ನೆಚ್ಚಿನ ಉಡುಗೆ, ಆಹಾರ ಶೈಲಿ ಈ ವಿದ್ಯಾರ್ಥಿನಿಯರಿಗೆ ತಿಳಿದಿತ್ತು. ನಾಪತ್ತೆ ದೂರು ದಾಖಲಿಸಿದ ಬಳಿಕ ಪೊಲೀಸರು ಈ ಬಾಲಕಿಯರ ಬಗ್ಗೆ ಎಲ್ಲ ಕಡೆ ಮಾಹಿತಿ ನೀಡಿದ್ದರು. ಹೀಗಾಗಿ ಬಾಲಕಿಯರನ್ನು ರಕ್ಷಿಸಲು ಸಾಧ್ಯವಾಯಿತುʼʼ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Gyanvapi Case: ಜ್ಞಾನವಾಪಿ ಮಸೀದಿ ಸಮೀಕ್ಷೆ; ವರದಿ ಬಹಿರಂಗಪಡಿಸದಂತೆ ಕೋರ್ಟ್‌ ಆದೇಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

School Jobs: 25 ಸಾವಿರ ಶಿಕ್ಷಕರ ವಜಾ ಆದೇಶಕ್ಕೆ ಸುಪ್ರೀಂ ತಡೆ; ಮಮತಾ ಸರ್ಕಾರಕ್ಕೆ ಚಾಟಿ

School Jobs: 2016ರಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕ ಮಾಡಲಾಗಿತ್ತು. ಈ ಪ್ರಕ್ರಿಯೆಯನ್ನು ಕೋಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿತ್ತು. ನೇಮಕಗೊಂಡ 25,753 ಮಂದಿಯನ್ನು ವಜಾಗೊಳಿಸಬೇಕು ಹಾಗೂ ಅವರು ಇದುವರೆಗೆ ಪಡೆದ ವೇತನವನ್ನು ಶೇ.12ರಷ್ಟು ಬಡ್ಡಿಯೊಂದಿಗೆ ಹಂತಿರುಗಿಸಬೇಕು ಎಂದು ಆದೇಶ ಹೊರಡಿಸಲಾಗಿತ್ತು.

VISTARANEWS.COM


on

School Jobs
Koo

ನವದೆಹಲಿ: ಪಶ್ಚಿಮ ಬಂಗಾಳದ (West Bengal) ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು (School Jobs) ಕೆಲಸದಿಂದ ವಜಾಗೊಳಿಸಬೇಕು ಎಂದು ಕೋಲ್ಕೊತಾ ಹೈಕೋರ್ಟ್‌ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್‌ (Supreme Court) ತಡೆಯಾಜ್ಞೆ ನೀಡಿದೆ. ಹಾಗೆಯೇ, ನೇಮಕಾತಿ ವೇಳೆ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ಪಶ್ಚಿಮ ಬಂಗಾಳದಲ್ಲಿ ನೇಮಕಗೊಂಡ ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ 25,753 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ವಜಾಗೊಳಿಸಿ ಏಪ್ರಿಲ್‌ 22ರಂದು ಕೋಲ್ಕೊತಾ ಹೈಕೋರ್ಟ್‌ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿದರು. ಹಾಗೆಯೇ, “ನೇಮಕಾತಿ ಹಗರಣದ ಕುರಿತು ಸಿಬಿಐ ತನಿಖೆ ಮುಂದುವರಿಸಿ, ಅದನ್ನು ಪೂರ್ಣಗೊಳಿಸಬೇಕು. ಅಲ್ಲಿಯವರೆಗೆ ನೇಮಕಗೊಂಡವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬಾರದು” ಎಂದು ಸೂಚಿಸಿದರು.

“ಸರ್ಕಾರಿ ನೌಕರಿ ಸಿಗುವುದೇ ತುಂಬ ವಿರಳ. ಹಾಗಾಗಿ, ನೌಕರರನ್ನು ವಜಾಗೊಳಿಸಿದರೆ, ಸಾರ್ವಜನಿಕ ನಂಬಿಕೆ ಎಂಬುದೇ ಇರುವುದಿಲ್ಲ. ಇದು ವ್ಯವಸ್ಥಿತ ವಂಚನೆಯಾಗಿದೆ. ಸರ್ಕಾರಿ ಉದ್ಯೋಗವನ್ನು ಕಾನೂನು ಬಾಹಿರವಾಗಿ ಪಡೆದುಕೊಂಡರೆ, ಜನರಿಗೆ ವ್ಯವಸ್ಥೆ ಮೇಲೆ ನಂಬಿಕೆಯೇ ಇರುವುದಿಲ್ಲ. ಇನ್ನು ನೇಮಕಾತಿ ಪ್ರಕ್ರಿಯೆ ಸೇರಿ ಯಾವುದೇ ದಾಖಲೆಗಳು ಸರ್ಕಾರದ ಬಳಿ ಇಲ್ಲ. ಸರ್ಕಾರದ ಬಳಿ ದಾಖಲೆಯೇ ಇಲ್ಲ ಎಂದರೆ ಹೇಗೆ? ನೇಮಕಾತಿ ವೇಳೆ ಎಲ್ಲ ದಾಖಲೆಗಳನ್ನು ಕಂಪ್ಯೂಟರ್‌ನಲ್ಲಿ ದಾಖಲಿಸಿ ಇಡಬಹುದಿತ್ತಲ್ಲ” ಎಂದು ರಾಜ್ಯ ಸರ್ಕಾರಕ್ಕೆ ಕೋರ್ಟ್‌ ಚಾಟಿ ಬೀಸಿತು.

2016ರಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕ ಮಾಡಲಾಗಿತ್ತು. ಈ ಪ್ರಕ್ರಿಯೆಯನ್ನು ಕೋಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿತ್ತು. ನೇಮಕಗೊಂಡ 25,753 ಮಂದಿಯನ್ನು ವಜಾಗೊಳಿಸಬೇಕು ಹಾಗೂ ಅವರು ಇದುವರೆಗೆ ಪಡೆದ ವೇತನವನ್ನು ಶೇ.12ರಷ್ಟು ಬಡ್ಡಿಯೊಂದಿಗೆ ಹಂತಿರುಗಿಸಬೇಕು ಎಂದು ಆದೇಶ ಹೊರಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಖಾಲಿ OMR ಹಾಳೆಗಳನ್ನು ಸಲ್ಲಿಸಿ, ಕಾನೂನುಬಾಹಿರವಾಗಿ ನೇಮಕಗೊಂಡ ಆರೋಪದಲ್ಲಿ ವಜಾಗೊಂಡ ಶಾಲಾ ಶಿಕ್ಷಕರು ನಾಲ್ಕು ವಾರಗಳಲ್ಲಿ ತಮ್ಮ ವೇತನವನ್ನು ಹಿಂದಿರುಗಿಸಬೇಕು ಎಂದು ನ್ಯಾಯಮೂರ್ತಿಗಳಾದ ದೇಬಂಗ್ಸು ಬಸಾಕ್ ಮತ್ತು ಎಂಡಿ ಶಬ್ಬರ್ ರಶೀದಿ ಅವರ ವಿಭಾಗೀಯ ಪೀಠ ಹೇಳಿತ್ತು. ಈ ಶಿಕ್ಷಕರಿಂದ ಹಣ ವಸೂಲಿ ಮಾಡುವ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿತ್ತು.

ಇದನ್ನೂ ಓದಿ: Google Layoff: ಮತ್ತಷ್ಟು ಉದ್ಯೋಗ ಕಡಿತಗೊಳಿಸಿದ ಗೂಗಲ್‌; ಕಾರಣವೇನು?

Continue Reading

ದೇಶ

ಎಲ್ಲ ಮೀಸಲಾತಿಯನ್ನು ಮುಸ್ಲಿಮರಿಗೇ ಕೊಡಬೇಕು ಎಂದ ಲಾಲು ಪ್ರಸಾದ್‌ ಯಾದವ್;‌ ಕೆಂಡವಾದ ಮೋದಿ!

ಎಎನ್‌ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಲಾಲು ಪ್ರಸಾದ್‌ ಯಾದವ್‌, “ಮುಸ್ಲಿಮರಿಗೆ ಮೀಸಲಾತಿ ಸಿಗಬೇಕು. ಅದರಲ್ಲೂ, ಎಲ್ಲ ಮೀಸಲಾತಿಯೂ ಮುಸ್ಲಿಮರಿಗೆ ಸಿಗಬೇಕು” ಎಂದು ಹೇಳಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತಿರುಗೇಟು ನೀಡಿದ್ದಾರೆ. ಲಾಲು ಪ್ರಸಾದ್‌ ಯಾದವ್‌ ಹೇಳಿದ್ದೇನು? ಮೋದಿ ಕುಟುಕಿದ್ದು ಹೇಗೆ? ಇಲ್ಲಿದೆ ವಿವರ.

VISTARANEWS.COM


on

Lalu Prasad Yadav
Koo

ಪಟನಾ: ಲೋಕಸಭೆ ಚುನಾವಣೆ (Lok Sabha Election) ಪ್ರಚಾರದ ಭರಾಟೆಯ ಜತೆಗೆ ರಾಜಕೀಯ ನಾಯಕರು ಪ್ರಸ್ತಾಪಿಸುತ್ತಿರುವ ವಿಷಯಗಳು ಕೂಡ ಸಾರ್ವಜನಿಕವಾಗಿ ಭಾರಿ ಚರ್ಚೆ, ವಿವಾದ, ಟೀಕೆಗಳಿಗೆ ಗುರಿಯಾಗುತ್ತಿವೆ. ಅದರಲ್ಲೂ, ಮುಸ್ಲಿಂ ಮೀಸಲಾತಿಯು (Muslim Reservation) ಪ್ರಮುಖ ವಿಷಯವಾಗಿದ್ದು, ಒಬಿಸಿ ಮೀಸಲಾತಿಯನ್ನು ಮುಸ್ಲಿಮರಿಗೆ ಕೊಡುವುದಿಲ್ಲ ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಇದರ ಬೆನ್ನಲ್ಲೇ, “ಎಲ್ಲ ಮೀಸಲಾತಿಯನ್ನು ಮುಸ್ಲಿಮರಿಗೇ ನೀಡಬೇಕು” ಎಂದು ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್‌ ಯಾದವ್‌ (Lalu Prasad Yadav) ಹೇಳಿದ್ದಾರೆ. ಇದು ಈಗ ವಿವಾದಕ್ಕೆ ಕಾರಣವಾಗಿದೆ.

ಎಎನ್‌ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಲಾಲು ಪ್ರಸಾದ್‌ ಯಾದವ್‌, “ಮುಸ್ಲಿಮರಿಗೆ ಮೀಸಲಾತಿ ಸಿಗಬೇಕು. ಅದರಲ್ಲೂ, ಎಲ್ಲ ಮೀಸಲಾತಿಯೂ ಮುಸ್ಲಿಮರಿಗೆ ಸಿಗಬೇಕು” ಎಂದು ಹೇಳಿದ್ದಾರೆ. “ಬಿಹಾರದಲ್ಲಿ ಬಿಜೆಪಿಯನ್ನು ಜನ ದೂರ ಇಟ್ಟಿದ್ದಾರೆ. ಅವರ ಮತಗಳು ಕೂಡ ಆರ್‌ಜೆಡಿಗೇ ಬರುತ್ತವೆ. ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಜಂಗಲ್‌ ರಾಜ್‌ ಆಡಳಿತ ಜಾರಿಗೆ ತರುತ್ತಾರೆ. ಇದರಿಂದಾಗಿ ಅವರನ್ನು ಜನ ನಂಬುತ್ತಿಲ್ಲ” ಎಂದು ಕೂಡ ಲಾಲು ಪ್ರಸಾದ್‌ ಯಾದವ್‌ ಹೇಳಿದ್ದಾರೆ.

ಮೋದಿ ತಿರುಗೇಟು

ಎಲ್ಲ ಮೀಸಲಾತಿ ಮುಸ್ಲಿಮರಿಗೆ ಸಿಗಬೇಕು ಎಂದು ಲಾಲು ಪ್ರಸಾದ್‌ ಯಾದವ್‌ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ. “ಇಂಡಿಯಾ ಒಕ್ಕೂಟದ ನಾಯಕರೊಬ್ಬರು ಸಂಪೂರ್ಣ ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಬೇಕು ಎಂದಿದ್ದಾರೆ. ಇವರು ಮೇವು ಹಗರಣದಲ್ಲಿ ನ್ಯಾಯಾಲಯದಿಂದ ಜೈಲು ಶಿಕ್ಷೆಗೆ ಗುರಿಯಾಗಿದ್ದು, ಜಾಮೀನು ಪಡೆದು ಹೊರಬಂದಿದ್ದಾರೆ. ಇವರು ಇಂತಹ ಹೇಳಿಕೆ ನೀಡಿದರೂ ಕಾಂಗ್ರೆಸ್‌ ಸುಮ್ಮನಿದೆ ಎಂದರೆ ಇಂಡಿಯಾ ಒಕ್ಕೂಟದ ಆಶಯವೂ ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ದೇಶದ ಅತಿ ದೊಡ್ಡ ಅಲ್ಪಸಂಖ್ಯಾತ ಸಮುದಾಯದವರಿಗೆ (ಮುಸ್ಲಿಮರಿಗೆ) ನೀಡುವುದಾಗಿದೆ” ಎಂದು ಕುಟುಕಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ತೆಲಂಗಾಣದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ್ದ ಮೋದಿ, ಧರ್ಮದ ಆಧಾರದ ಮೇಲೆ ನೀಡುವ ಮೀಸಲಾತಿಯನ್ನು ವಿರೋಧಿಸಿದ್ದರು. “ನಾನು ಬದುಕಿರುವವರೆಗೂ ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಸಿಗುತ್ತಿರುವ ಮೀಸಲಾತಿಯ ಪಾಲನ್ನು ಧರ್ಮದ ಆಧಾರದಲ್ಲಿ ಮುಸ್ಲಿಮರಿಗೆ ಕೊಡಲು ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದರು. ಕಾಂಗ್ರೆಸ್​ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದನ್ನು ಪ್ರೇರೇಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: Narendra Modi : ನಾನು ಬದುಕಿರುವವರೆಗೂ ಮುಸ್ಲಿಮರಿಗೆ ಧರ್ಮದ ಆಧಾರದ ಮೀಸಲಾತಿ ಇಲ್ಲ ಎಂದ ಮೋದಿ

Continue Reading

ದೇಶ

West Bengal: ಬಂಗಾಳದಲ್ಲಿ ಮತದಾನದ ವೇಳೆ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ!

West Bengal: ಮುರ್ಷಿದಾಬಾದ್‌ನಲ್ಲಿ ಧನಂಜಯ್‌ ಘೋಷ್‌ ಅವರು ಮತದಾನ ಮಾಡಲು ಹೋದಾಗ ಅವರನ್ನು ಬೂತ್‌ ಏಜೆಂಟ್‌ ಒಬ್ಬರು ತಡೆದಿದ್ದಾರೆ. ಇದೇ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದು ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಗೆ ಕಾರಣವಾಗಿದೆ. ಮುರ್ಷಿದಾಬಾದ್ ಸೇರಿ ಹಲವೆಡೆಯೂ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ. ಬಂಗಾಳದ ನಾಲ್ಕು ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

VISTARANEWS.COM


on

West Bengal
Koo

ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಹಿಂಸಾಚಾರ, ಕೊಲೆ, ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ನಡವೆ ಗಲಾಟೆ ಸಾಮಾನ್ಯ ಎಂಬಂತಾಗಿದೆ. ಇದಕ್ಕೆ ನಿದರ್ಶನ ಎಂಬಂತೆ, ಮೂರನೇ ಹಂತದ ಮತದಾನದ (Lok Sabha Election 2024) ವೇಳೆಯೂ ಪಶ್ಚಿಮ ಬಂಗಾಳದಲ್ಲಿ (West Bengal) ಹಿಂಸಾಚಾರ ನಡೆದಿದೆ. ಮುರ್ಷಿದಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ್‌ ಘೋಷ್‌ (Dhananjay Ghosh) ಅವರು ಮತ ಚಲಾಯಿಸಲು ಹೋದಾಗ ಗಲಾಟೆ ನಡೆದಿದೆ.

ಮುರ್ಷಿದಾಬಾದ್‌ನಲ್ಲಿ ಧನಂಜಯ್‌ ಘೋಷ್‌ ಅವರು ಮತದಾನ ಮಾಡಲು ಹೋದಾಗ ಅವರನ್ನು ಬೂತ್‌ ಏಜೆಂಟ್‌ ಒಬ್ಬರು ತಡೆದಿದ್ದಾರೆ. ಇದೇ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದು ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಗೆ ಕಾರಣವಾಗಿದೆ. “ನಾನೊಬ್ಬ‌ ಬಿಜೆಪಿ ಅಭ್ಯರ್ಥಿ. ನನಗೇ ಚುನಾವಣೆ ಏಜೆಂಟ್‌ ಒಬ್ಬ ಬಂದು ಬೆದರಿಕೆ ಹಾಕುತ್ತಾನೆ ಎಂದರೆ, ಸಾಮಾನ್ಯ ಜನರ ಗತಿ ಏನು? ಆತನ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಲಾಗುವುದು” ಎಂದು ಧನಂಜಯ್‌ ಘೋಷ್‌ ತಿಳಿಸಿದ್ದಾರೆ.

ಮುರ್ಷಿದಾಬಾದ್‌ ಲೋಕಸಭೆ ಕ್ಷೇತ್ರದ ರಾಬಿನಗರದಲ್ಲೂ ಗಲಾಟೆ ನಡೆದಿದೆ. ಕಾಂಗ್ರೆಸ್‌-ಎಡಪಕ್ಷದ ಜಂಟಿ ಅಭ್ಯರ್ಥೀ ಮೊಹಮ್ಮದ್‌ ಸಲೀಂ ಎಂಬುವರು ನಕಲಿ ಬೂತ್‌ ಏಜೆಂಟ್‌ ಒಬ್ಬನನ್ನು ಹಿಡಿದು ಹಾಕಿದ್ದಾನೆ ಎಂದಿದ್ದಾರೆ. ಇದಾದ ಬಳಿಕ, ಸಲೀಂ ವಿರುದ್ಧ ಗೋ ಬ್ಯಾಕ್‌ ಎಂಬ ಘೋಷಣೆ ಕೂಗಿದ್ದು, ನಂತರ ಗಲಾಟೆ ನಡೆದಿದೆ. ಪಶ್ಚಿಮ ಬಂಗಾಳದಲ್ಲಿ 1 ಗಂಟೆ ಸುಮಾರಿಗೆ ಶೇ.49.27ರಷ್ಟು ಮತದಾನ ದಾಖಲಾಗಿದೆ. ಇನ್ನು, ಮಹಾರಾಷ್ಟ್ರದಲ್ಲಿ ಇದೇ ವೇಳೆಗೆ ಶೇ.31.55ರಷ್ಟು ಮತದಾನ ದಾಖಲಾಗಿದೆ. ಬಂಗಾಳದ 4 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಮುರ್ಷಿದಾಬಾದ್‌ ಸೇರಿ ನಾಲ್ಕರಲ್ಲೂ ಟಿಎಂಸಿಯೇ ಬಲಿಷ್ಠವಾಗಿದೆ.

ಮಂಗಳವಾರ ಬೆಳಗ್ಗೆ ಮತದಾನ ಆರಂಭವಾಗುತ್ತಲೇ ಹಕ್ಕು ಚಲಾಯಿಸಿದ ಮೋದಿ, ಎಲ್ಲರೂ ಮತ ಹಾಕುವಂತೆ ಕರೆ ನೀಡಿದರು. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋದಿ ಅವರು, ಈ ಮೂರನೇ ಹಂತದಲ್ಲಿ ಎಲ್ಲರೂ ಹಕ್ಕು ಚಲಾಯಿಸುವ ಮೂಲಕ ದಾಖಲೆ ಪ್ರಮಾಣದ ಮತದಾನಕ್ಕೆ ಕಾರಣವಾಗಬೇಕು ಎಂದು ಕರೆ ನೀಡಿದ್ದಾರೆ. ʼʼಚುನಾವಣೆಯ ಇಂದಿನ ಹಂತದಲ್ಲಿ ಮತದಾನ ಮಾಡುವ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕೆಂದು ಮನವಿ ಮಾಡುತ್ತೇನೆ. ಮತದಾರರ ಸಕ್ರಿಯ ಭಾಗವಹಿಸುವಿಕೆಯು ಖಂಡಿತವಾಗಿ ಚುನಾವಣೆಯನ್ನು ಮತ್ತಷ್ಟು ರೋಮಾಂಚಕಗೊಳಿಸುತ್ತದೆ” ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ರಾಜಕೀಯ ಹಿಂಸಾಚಾರ; ಸವದಿ ಆಪ್ತರೂ ಆದ ಕಾಂಗ್ರೆಸ್‌ ಮುಖಂಡನ ಹತ್ಯೆ

Continue Reading

ವೈರಲ್ ನ್ಯೂಸ್

Viral News: ತಮ್ಮನ ಬದಲು ನೀಟ್‌ ಪರೀಕ್ಷೆ ಬರೆದ ಅಣ್ಣ; ಕೊನೆಯ ಕ್ಷಣದಲ್ಲಿ ಸಹೋದರರ ಕಳ್ಳಾಟ ಬಯಲಾಗಿದ್ದು ಹೇಗೆ?

Viral News: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ ಆಕಾಂಕ್ಷಿಯ ಬದಲಾಗಿ ಆತನ ಸಹೋದರ ಪರೀಕ್ಷೆ ಬರೆದಿದ್ದಾನೆ. ಸದ್ಯ ಇವರ ಈ ಮೋಸದಾಟ ಬೆಳಕಿಗೆ ಬಂದಿದೆ. ಪರೀಕ್ಷೆಗೆ ಹಾಜರಾದ ನೀಟ್ ಆಕಾಂಕ್ಷಿಯ ಸಹೋದರ, ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಮತ್ತು ನೀಟ್ ಆಕಾಂಕ್ಷಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಿವುಡ್‌ ಚಿತ್ರ ʼಮುನ್ನಾಭಾಯಿ ಎಂಬಿಬಿಎಸ್‌ʼ ಸಿನಿಮಾದಿಂದ ಸ್ಫೂರ್ತಿಗೊಂಡು ಸಹೋದರರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

VISTARANEWS.COM


on

Viral News
Koo

ಜೈಪುರ: 2003ರಲ್ಲಿ ತೆರೆಕಂಡ ಬಾಲಿವುಡ್‌ನ ʼಮುನ್ನಾಭಾಯಿ ಎಂಬಿಬಿಎಸ್‌ʼ ಚಿತ್ರ ನಿಮಗೆಲ್ಲ ನೆನಪಿರಬಹುದು. ಎಂಬಿಬಿಎಸ್‌ ವಿದ್ಯಾರ್ಥಿಯಾಗಿರುವ ನಾಯಕ ಮುನ್ನಾ ಭಾಯಿ (ಸಂಜಯ್‌ ದತ್‌) ತನ್ನ ಪರವಾಗಿ ವೈದ್ಯನೊಬ್ಬನ ಮೂಲಕ ಪರೀಕ್ಷೆ ಬರೆಸುತ್ತಾನೆ. ಆ ವೇಳೆ ಈ ದೃಶ್ಯ ಜನಪ್ರಿಯವಾಗಿತ್ತು. ಅದೆಲ್ಲ ಸರಿ ಈಗ್ಯಾಕೆ ಈ ವಿಚಾರ ಎಂಬ ಸಂದೇಹ ನಿಮ್ಮನ್ನು ಕಾಡಬಹುದು. ಇದನ್ನೇ ಹೋಲುವ ಘಟನೆಯೊಂದು ವರದಿಯಾಗಿದೆ. ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET)ಯ ಆಕಾಂಕ್ಷಿಯ ಬದಲಾಗಿ ಆತನ ಸಹೋದರ ಪರೀಕ್ಷೆ ಬರೆದಿದ್ದಾನೆ. ಸದ್ಯ ಇವರ ಈ ಮೋಸದಾಟ ಬೆಳಕಿಗೆ ಬಂದಿದೆ (Viral News).

ರಾಜಸ್ಥಾನದ ಬಾರ್ಮರ್‌ನಲ್ಲಿ ಈ ಘಟನೆ ನಡೆದಿದೆ. ಪರೀಕ್ಷೆಗೆ ಹಾಜರಾದ ನೀಟ್ ಆಕಾಂಕ್ಷಿಯ ಸಹೋದರ, ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಮತ್ತು ನೀಟ್ ಆಕಾಂಕ್ಷಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಿವುಡ್‌ ಚಿತ್ರ ʼಮುನ್ನಾಭಾಯಿ ಎಂಬಿಬಿಎಸ್‌ʼ ಸಿನಿಮಾದಿಂದ ಸ್ಫೂರ್ತಿಗೊಂಡು ಸಹೋದರರು ಈ ಕೃತ್ಯ ಎಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾರ್ಮರ್‌ನ ಅಂತ್ರಿ ದೇವಿ ಸರ್ಕಾರಿ ಬಾಲಕಿಯರ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲೆ ಅನಿತಾ ಚೌಧರಿ ಭಾನುವಾರ ಗೋಪಾಲ ರಾಮ್ ಬದಲಿಗೆ ನಕಲಿ ಅಭ್ಯರ್ಥಿ ಪರೀಕ್ಷೆ ಬರೆಯುತ್ತಿದ್ದಾನೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆ ಮೂಲಕ ಪ್ರಕರಣ ಬೆಳಕಿಗೆ ಬಂದಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ನರೇಂದ್ರ ಸಿಂಗ್ ಮೀನಾ ತಿಳಿಸಿದ್ದಾರೆ.

ಅಧಿಕಾರಿಗಳಾದ ಲೇಖ್‌ರಾಜ್‌ ಸಿಯಾಗ್‌ ಮತ್ತು ಡಿಎಸ್‌ಟಿ ಇನ್‌ಚಾರ್ಜ್‌ ಮಹಿಪಾಲ್‌ ಸಿಂಗ್‌ ಕೂಡಲೇ ಸ್ಥಳಕ್ಕೆ ಧಾವಿಸಿ ಕೃಷ್ಣ ರಾಮ್ ಅವರ ಪುತ್ರ ಭಗೀರಥ ರಾಮ್ ವಿಷ್ಣೋಯ್ ಮತ್ತು ಆತನ ಕಿರಿಯ ಸಹೋದರ ಗೋಪಾಲ ರಾಮ್‌ನನ್ನು ಪರೀಕ್ಷಾ ಕೇಂದ್ರದಿಂದ ಬಂಧಿಸಿದ್ದಾರೆ. ಭಗೀರಥ ರಾಮ್ ವಿಷ್ಣೋಯ್ ಜೋಧಾಪುರ ಎಸ್‌.ಎನ್‌.ಮೆಡಿಕಲ್‌ ಕಾಲೇಜಿನಲ್ಲಿ ಎಂಬಿಬಿಎಸ್‌ನ ಮೊದಲ ಸೆಮಿಸ್ಟರ್‌ನಲ್ಲಿ ಓದುತ್ತಿದ್ದಾನೆ.

ಘಟನೆ ವಿವರ

ಭಗೀರಥ ರಾಮ್ ವಿಷ್ಣೋಯ್ ಆಧಾರ್‌ ಕಾರ್ಡ್‌ನಲ್ಲಿರುವ ತನ್ನ ಫೋಟೊವನ್ನು ಎಡಿಟ್‌ ಮಾಡಿ ಅದರ ಬದಲಿಗೆ ಸಹೋದರ ಗೋಪಾಲ ರಾಮ್ ಫೋಟೊ ಎಡಿಟ್‌ ಮಾಡಿ ನೀಟ್‌ ಪರೀಕ್ಷೆ ಬರೆಯಲು ತೆರಳಿದ್ದ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ಕಿಲಾಡಿ ಸಹೋದರರ ಕ್ರಿಮಿನಲ್‌ ಐಡಿಯಾ ಸಾಂಗವಾಗಿ ನೆರವೇರುತ್ತಿತ್ತು. ಆದರೆ ಕೊನೆ ಕ್ಷಣದಲ್ಲಿ ಇವರ ಅದೃಷ್ಟ ಕೈಕೊಟ್ಟಿತ್ತು. ಪ್ರಾಂಶುಪಾಲೆಯ ಕಣ್ಣಿಗೆ ಬಿದ್ದು ಇವರು ಸದ್ಯ ಪೊಲೀಸರ ಅತಿಥಿಗಳಾಗಿದ್ದಾರೆ. ಸದ್ಯ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Viral News : ನಿಜವಾದ ಪೊಲೀಸ್​ಗೆ ತಪ್ಪಾಗಿ ಸೆಲ್ಯೂಟ್​ ಹೊಡೆದು ಸಿಕ್ಕಿ ಬಿದ್ದ ನಕಲಿ ಪೊಲೀಸ್​!

ದಾಖಲೆ ಪ್ರಮಾಣದಲ್ಲಿ ನೋಂದಣಿ

ನೀಟ್‌ ಯುಜಿ 2024ಕ್ಕೆ ಈ ಬಾರಿ ದಾಖಲೆ ಪ್ರಮಾಣದ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿದ್ದರು. ಅತ್ಯಧಿಕ 23 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿದ್ದ ಇದರಲ್ಲಿ 10 ಲಕ್ಷ ಮಂದಿ ಪುರುಷರಾದರೆ 13 ಮಂದಿ ಸ್ತ್ರೀಯರು. ವಿಶೇಷ ಎಂದರೆ ಪುದುಚೇರಿ, ಜಮ್ಮು ಮತ್ತು ಕಾಶ್ಮೀರ ಮತ್ತಿತರ ಕಡೆಗಳಲ್ಲಿ ಅಭ್ಯರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ.

Continue Reading
Advertisement
t20 world cup
ಕ್ರೀಡೆ9 mins ago

T20 World Cup : ಕೊಹ್ಲಿಯನ್ನು ಎದುರಿಸಲು ಪ್ಲ್ಯಾನ್​ ರೆಡಿ ಇದೆ ಎಂದ ಬಾಬರ್ ಅಜಮ್​

Lok Sabha Election 2024
ಪ್ರಮುಖ ಸುದ್ದಿ17 mins ago

Lok Sabha Election 2024: ಸಂಜೆ 5ಗಂಟೆವರೆಗೆ ಶೇ.66.05 ವೋಟಿಂಗ್‌; ಚಿಕ್ಕೋಡಿಯಲ್ಲಿ ಅತಿ ಹೆಚ್ಚು

School Jobs
ಪ್ರಮುಖ ಸುದ್ದಿ22 mins ago

School Jobs: 25 ಸಾವಿರ ಶಿಕ್ಷಕರ ವಜಾ ಆದೇಶಕ್ಕೆ ಸುಪ್ರೀಂ ತಡೆ; ಮಮತಾ ಸರ್ಕಾರಕ್ಕೆ ಚಾಟಿ

Karnataka Weather Forecast
ಮಳೆ26 mins ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Akshaya Tritiya 2024
ಫ್ಯಾಷನ್27 mins ago

Akshaya Tritiya 2024: ಅಕ್ಷಯ ತೃತೀಯದಂದು ಬಂಗಾರ ಖರೀದಿಸುವವರಿಗೆ ಇಲ್ಲಿದೆ ಉಪಯುಕ್ತ ಟಿಪ್ಸ್‌

T20 world Cup
ಪ್ರಮುಖ ಸುದ್ದಿ35 mins ago

T20 World Cup : ಬುಮ್ರಾಗೆ ವಿಶ್ರಾಂತಿ ನೀಡಲು ನಿರಾಕರಿಸಿದ ಮುಂಬೈ ಇಂಡಿಯನ್ಸ್​; ವಿಶ್ವ ಕಪ್​ ಆಡಲು ಸಮಸ್ಯೆ

Lok Sabha Election 2024
ಬೀದರ್‌47 mins ago

Lok Sabha Election 2024: ಭಾಲ್ಕಿಯಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಮತದಾನ

lok sabha Election 2024 Actor Rishb Shetty
Lok Sabha Election 202448 mins ago

Lok Sabha Election 2024: ಓದಿದ ಶಾಲೆಯಲ್ಲಿ ಮತ ಹಾಕಿದ ನಟ ರಿಷಬ್‌ ಶೆಟ್ಟಿ; ಕಾಂತಾರ 2 ಸೀಕ್ರೆಟ್‌ ರಿವೀಲ್‌!

Prajwal Revanna Case Victim found at relative house Not in a farmhouse Sa Ra Mahesh Explosive Information
ರಾಜಕೀಯ57 mins ago

Prajwal Revanna Case: ಸಂತ್ರಸ್ತ ಮಹಿಳೆ ಸಿಕ್ಕಿದ್ದು ಸಂಬಂಧಿಕರ ಮನೆಯಲ್ಲಿ! ತೋಟದ ಮನೆಯಲ್ಲಲ್ಲ; ಸಾ.ರಾ. ಮಹೇಶ್‌ ಸ್ಫೋಟಕ ಮಾಹಿತಿ

MS Dhoni
ಪ್ರಮುಖ ಸುದ್ದಿ1 hour ago

MS Dhoni : ಮಹೇಂದ್ರ ಸಿಂಗ್​ ಧೋನಿಗೆ ಗಾಯ, ಆಂತರಿಕ ಮಾಹಿತಿ ಬಹಿರಂಗ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ26 mins ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ23 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

ಟ್ರೆಂಡಿಂಗ್‌