Buddhadeb Bhattacharjee: ಸರಳತೆಯಿಂದಲೇ ರಾಜಕಾರಣಿಗಳಿಗೆ ಮಾದರಿಯಾಗಿದ್ದ ಬುದ್ಧದೇವ್ ಭಟ್ಟಾಚಾರ್ಯ - Vistara News

ದೇಶ

Buddhadeb Bhattacharjee: ಸರಳತೆಯಿಂದಲೇ ರಾಜಕಾರಣಿಗಳಿಗೆ ಮಾದರಿಯಾಗಿದ್ದ ಬುದ್ಧದೇವ್ ಭಟ್ಟಾಚಾರ್ಯ

Buddhadeb Bhattacharjee: ಎಡಪಂಥೀಯ ನಾಯಕ, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಕೋಲ್ಕತ್ತಾದ ಸ್ವಗೃಹದಲ್ಲಿ ಗುರುವಾರ ನಿಧನರಾದರು. ತಮ್ಮ ಸರಳ ಜೀವನ ಶೈಲಿಯಿಂದಲೇ ರಾಜಕಾರಣಿಗಳಿಗೆ ಮಾದರಿಯಾಗಿದ್ದ ಅವರ ಪರಿಚಯ ಇಲ್ಲಿದೆ.

VISTARANEWS.COM


on

Buddhadeb Bhattacharjee
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತಾ: ಎಡಪಂಥೀಯ ನಾಯಕ, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ (Buddhadeb Bhattacharjee) ಇಂದು (ಆಗಸ್ಟ್‌ 8) ಬೆಳಿಗ್ಗೆ ತಮ್ಮ 80ನೇ ವಯಸ್ಸಿನಲ್ಲಿ ಕೋಲ್ಕತ್ತಾದ ಸ್ವಗೃಹದಲ್ಲಿ ನಿಧನರಾದರು. ಭಾರತೀಯ ರಾಜಕೀಯದಲ್ಲಿ ಪ್ರಮುಖ ನಾಯಕರಾಗಿದ್ದ ಅವರು, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) (Communist Party of India (Marxist)ದ ಪೊಲಿಟ್ ಬ್ಯೂರೋದ ಸದಸ್ಯರಾಗಿಯೂ ಗುರುತಿಸಿಕೊಂಡಿದ್ದರು. 2000ರಿಂದ 2011ರವರೆಗೆ ಅಂದರೆ 11 ವರ್ಷಗಳ ದೀರ್ಘ ಕಾಲ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದರು.

1944ರ ಮಾರ್ಚ್ 1ರಂದು ಬುದ್ಧದೇವ್ ಭಟ್ಟಾಚಾರ್ಯ ಅವರು ಉತ್ತರ ಕೋಲ್ಕತ್ತಾದಲ್ಲಿ ಜನಿಸಿದರು. ಪಶ್ಚಿಮ ಬಂಗಾಳದ ಶೈಲೇಂದ್ರ ಸರ್ಕಾರ್ ವಿದ್ಯಾಲಯದಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿ ಪ್ರೆಸಿಡೆನ್ಸಿಯಿಂದ ಬಂಗಾಳಿಯಲ್ಲಿ ಬಿಎ ಆನರ್ಸ್ ಪಡೆದರು. ಅವರಲ್ಲಿನ ಕ್ರಾಂತಿಕಾರಿ ಚಿಂತನೆಯು 1966ರಲ್ಲಿ ಸಿಪಿಎಂಗೆ ಸೇರುವಂತೆ ಮಾಡಿತು. ಅಲ್ಲಿಂದ ಬಳಿಕ ಅವರು ಪ್ರಬಲ ಎಡ ಪಂಥೀಯ ನಾಯಕರಾಗಿ ಬೆಳೆದರು.

ರಾಜಕೀಯ ಹಾದಿ

22ನೇ ವಯಸ್ಸಿನಲ್ಲಿ ಸಕ್ರಿಯ ರಾಜಕೀಯಕ್ಕೆ ಧುಮಿಕಿದ ಬುದ್ಧದೇವ್ ಭಟ್ಟಾಚಾರ್ಯ ಅವರು 1977ರಲ್ಲಿ ಜ್ಯೋತಿ ಬಸು ಅವರ ನಾಯಕತ್ವದಲ್ಲಿ ಸಿಪಿಎಂ ಅಧಿಕಾರಕ್ಕೆ ಬಂದಾಗ ಉತ್ತರ ಕೋಲ್ಕತ್ತಾದ ಕಾಸಿಪೋರ್‌ನಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 1982ರಲ್ಲಿ ಮತ್ತೆ ಸ್ಪರ್ಧಿಸಿದ್ದ ಅವರು ಕಾಂಗ್ರೆಸ್‌ನ ಪ್ರಫುಲ್ಲ ಕಾಂತಿ ಘೋಷ್ ವಿರುದ್ಧ ಸೋತರೂ 1987ರಲ್ಲಿ ಜಾದವ್‌ಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸಿದರು.

ಮುಖ್ಯಮಂತ್ರಿಯಾಗಿ…

ಬುದ್ಧದೇವ್ ಭಟ್ಟಾಚಾರ್ಯ ಅವರು 1987 ಮತ್ತು 1996ರ ನಡುವೆ ಮಾಹಿತಿ ಮತ್ತು ಸಂಸ್ಕೃತಿ ಸಚಿವರಾದರು. 1996ರಿಂದ 1999ರವರೆಗೆ ಗೃಹ ವ್ಯವಹಾರಗಳ ಸಚಿವರಾಗಿ ಗಮನ ಸೆಳೆದರು. ಆರೋಗ್ಯ ಕಾರಣಗಳಿಂದಾಗಿ 2000ರ ನವೆಂಬರ್ 6ರಂದು ಜ್ಯೋತಿಬಸು ಮುಖ್ಯಮಂತ್ರಿ ಪಟ್ಟದಿಂದ ಕೆಳಗೆ ಕೆಳಗೆ ಇಳಿದ ನಂತರ ಬುದ್ಧದೇವ್ ಭಟ್ಟಾಚಾರ್ಯ ಅಧಿಕಾರ ವಹಿಸಿಕೊಂಡರು. ಪಶ್ಚಿಮ ಬಂಗಾಳದಲ್ಲಿ ಎಡಪಕ್ಷದ 34 ವರ್ಷಗಳ ಆಡಳಿತದಲ್ಲಿ ಭಟ್ಟಾಚಾರ್ಯ ಅವರು ಅಧಿಕಾರದಲ್ಲಿದ್ದ ಎರಡನೇ ಮತ್ತು ಕೊನೆಯ ಸಿಪಿಎಂ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ.

ಸವಾಲುಗಳು

ಮುಖ್ಯಮಂತ್ರಿ ಪಟ್ಟಕ್ಕೇರಿದ ಭಟ್ಟಾಚಾರ್ಯ ಅವರ ಹಾದಿ ಸವಾಲುಗಳಿಂದ ಕೂಡಿತ್ತು. ಮುಖ್ಯಮಂತ್ರಿಯಾಗಿದ್ದ ಮೊದಲ ಅಧಿಕಾರಾವಧಿಯಲ್ಲಿ ಅವರು ಪಶ್ಚಿಮ ಬಂಗಾಳದಾದ್ಯಂತ ಕೈಗಾರಿಕಾ ಬೆಳವಣಿಗೆ ಮತ್ತು ಐಟಿ ಸೇವೆಗಳನ್ನು ಉತ್ತೇಜಿಸುವ ಹಲವು ಕ್ರಮಗಳನ್ನು ಪರಿಚಯಿಸಿದರು. ಅವರ ನಾಯಕತ್ವದಲ್ಲಿ ಪಶ್ಚಿಮ ಬಂಗಾಳದ ಐಟಿ ಉದ್ಯಮವು 2001 ಮತ್ತು 2005ರ ನಡುವೆ ಶೇ. 70ರಷ್ಟು ಬೆಳೆವಣಿಕೆ ಕಂಡಿದೆ ಎಂದು ಅಂದು ವಿಪ್ರೋ ಅಧ್ಯಕ್ಷ ಅಜೀಂ ಪ್ರೇಮ್‌ಜಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅಲ್ಲದೆ ಭಾರತದ ಅತ್ಯುತ್ತಮ ಮುಖ್ಯಮಂತ್ರಿ ಎಂದು ಶ್ಲಾಘಿಸಿದ್ದರು.

ಆದಾಗ್ಯೂ ಭಟ್ಟಾಚಾರ್ಯ ಅವರು ತಮ್ಮ ಎರಡನೇ ಅವಧಿಯಲ್ಲಿ ಹಲವು ಸವಾಲುಗಳನ್ನು ಎದುರಿಸಬೇಕಾಯಿತು. ಕೈಗಾರಿಕೀಕರಣಕ್ಕೆ ನೀಡಿದ ಒತ್ತು ಒತ್ತಡವನ್ನು ತಂದೊಡ್ಡಿತು. ನಂದಿಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಸಾಯನಿಕ ಕೇಂದ್ರದ ವಿರುದ್ಧ 2007ರಲ್ಲಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದರು. 2007ರ ಮಾರ್ಚ್ 14ರಂದು ಪೊಲೀಸ್ ಗುಂಡಿನ ದಾಳಿಯಲ್ಲಿ 14 ಮಂದಿ ಪ್ರತಿಭಟನಾಕಾರರು ಮೃತಪಟ್ಟಾಗ ಪರಿಸ್ಥಿತಿ ಇನ್ನಷ್ಟು ಉಲ್ಬಣಗೊಂಡಿತು.

ಬಳಿಕ ಭೂಸ್ವಾಧೀನ ಸಮಸ್ಯೆಗಳಿಂದಾಗಿ ಸಿಂಗೂರಿನಲ್ಲಿ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ನ್ಯಾನೋ ಕಾರು ಯೋಜನೆ ವಿಫಲವಾಯಿತು. ಈ ಎಲ್ಲ ಘಟನೆಗಳು ಪಶ್ಚಿಮ ಬಂಗಾಳದಲ್ಲಿ ಸಿಪಿಎಂ ಪ್ರಾಬಲ್ಯದ ಕುಸಿತಕ್ಕೆ ಕಾರಣವಾದವು. 2011ರ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ 184 ಸ್ಥಾನಗಳನ್ನು ಗಳಿಸಿ ಅಧಿಕಾರಕ್ಕೆ ಬಂದರೆ, ಸಿಪಿಎಂನ ಕೇವಲ 40 ಸ್ಥಾನಗಳಿಗೆ ಸೀಮಿತವಾಯಿತು. ಅಲ್ಲಿಂದ ಬಳಿಕ ಪಶ್ಚಿಮ ಬಂಗಾಳದಲ್ಲಿ ಎಡಪಕ್ಷದ ಜನಪ್ರಿಯತೆ ಪಾತಾಳಕ್ಕೆ ಇಳಿಯಲಾರಂಭಿಸಿತು.

ಸರಳ ಜೀವನ

ಈ ಸವಾಲುಗಳ ಹೊರತಾಗಿಯೂ ಅವರು ಅಭಿವೃದ್ಧಿ ಮತ್ತು ಸುಧಾರಣೆಯ ಪ್ರಯತ್ನಗಳ ಮೂಲಕ ಪಶ್ಚಿಮ ಬಂಗಾಳದ ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಅವರ ಸರಳ ಜೀವನ ಶೈಲಿ ಇತರ ರಾಜಕಾರಣಿಗಳಿಗೆ ಮಾದರಿ ಎಂದೇ ಹೇಳಲಾಗುತ್ತಿದೆ. 2011ರಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಅವರು ಸ್ವಂತ ಮನೆ ಅಥವಾ ಕಾರನ್ನು ಹೊಂದಿಲ್ಲ ಎನ್ನುವ ವಿಚಾರ ಬಹಿರಂಗಗೊಂಡಿತ್ತು. ಅವರು ತಮ್ಮ ಪತ್ನಿ ಮತ್ತು ಮಗಳೊಂದಿಗೆ ಬ್ಯಾಲಿಗಂಜ್‌ನ ಪಾಮ್ ಅವೆನ್ಯೂದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರ ಬ್ಯಾಂಕ್ ಖಾತೆಯಲ್ಲಿ ಇದ್ದುದು ಕೇವಲ 5,000 ರೂ.

ಇದನ್ನೂ ಓದಿ: Buddhadeb Bhattacharjee: ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ವಿಧಿವಶ

ರಾಜಕೀಯದಲ್ಲಿ ಐದು ದಶಕಗಳ ಸಕ್ರಿಯ ಪಾಲ್ಗೊಳ್ಳುವಿಕೆ ಬಳಿಕ, ಭಟ್ಟಾಚಾರ್ಯ ಅವರು 2015ರಲ್ಲಿ ಪಕ್ಷದೊಳಗಿನ ಎಲ್ಲ ಪ್ರಮುಖ ಜವಾಬ್ದಾರಿಗಳಿಂದ ಕೆಳಗಿಳಿದರು. ಕೆಲವು ತಿಂಗಳಿಂದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಪತ್ನಿ ಮೀರಾ ಭಟ್ಟಾಚಾರ್ಯ ಮತ್ತು ಪುತ್ರಿ ಸುಚೇತನಾ ಭಟ್ಟಾಚಾರ್ಯ ಅವರನ್ನು ಅಗಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Shobha Karandlaje: ತಮಿಳಿಗರಿಗೆ ಅವಮಾನ- ಕ್ಷಮೆಯಾಚಿಸಿದರೆ ಕೇಸ್‌ ರದ್ದು; ಹೈಕೋರ್ಟ್‌ನಲ್ಲಿ ಎಜಿ ಮಾಹಿತಿ

Shobha Karandlaje: ಪ್ರತಿಭಟನೆಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ಅವರು ʻʻನಮ್ಮ ಬೆಂಗಳೂರಿನ ಕೆಫೆಗೆ ತಮಿಳುನಾಡಿನ ಯಾರು ಯಾರೋ ಬಂದು ಬಾಂಬ್ ಹಾಕುತ್ತಾರೆ ಎಂಬ ಹೇಳಿಕೆ ನೀಡಿದ್ದರು. ʻʻಒಬ್ಬ ವ್ಯಕ್ತಿ ತಮಿಳುನಾಡಿನಿಂದ ಬಂದು ಕೆಫೆಯಲ್ಲಿ ಬಾಂಬ್ ಇಟ್ಟಿದ್ದಾನೆ. ಮತ್ತೊಬ್ಬ ದೆಹಲಿಯಿಂದ ಬಂದು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತಾನೆ. ಇನ್ನೊಬ್ಬ ಕೇರಳದಿಂದ ಬಂದು ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎರಚುತ್ತಾನೆ. ಯಾರಿಗೂ ಕರ್ನಾಟಕದ ಬಗ್ಗೆ ಸಣ್ಣ ಭಯವೂ ಇಲ್ಲʼʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

VISTARANEWS.COM


on

Shobha Karandlaje
Koo

ನವದೆಹಲಿ: ಕೆಲವು ತಿಂಗಳ ಹಿಂದೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಬ್ಲಾಸ್ಟ್‌(Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿ ಕಾನೂನು ಸಂಕಷ್ಟ ಎದುರಿಸುತ್ತಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ(Shobha Karandlaje) ಕ್ಷಮೆಯಾಚಿಸಿದರೆ ಅವರ ವಿರುದ್ಧದ ಪ್ರಕರಣ ರದ್ದುಗೊಳಿಸಲಾಗುತ್ತದೆ ಎಂಂದು ಅಡ್ವೊಕೇಟ್‌ ಜನರಲ್‌ ಮದ್ರಾಸ್‌ ಹೈಕೋರ್ಟ್‌(Madras Highcourt)ಗೆ ತಿಳಿಸಿದ್ದಾರೆ.

ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೂ ತಮಿಳುನಾಡಿಗೂ ಸಂಬಂಧ ಕಲ್ಪಿಸಿ ಹೇಳಿಕೆ ನೀಡಿದ್ದ ಕರಂದ್ಲಾಜೆ ವಿರುದ್ಧ ತಮಿಳುನಾಡಿನಲ್ಲಿ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇಂದು ಮದ್ರಾಸ್‌ ಹೈಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯಿತು. ಈ ವೇಳೆ ತಮಿಳುನಾಡು ಅಡ್ವೊಕೇಟ್ ಜನರಲ್ ಪಿ.ಎಸ್. ರಾಮನ್ ಅವರು, ಸಚಿವೆ ಶೋಭಾ ಕರಂದ್ಲಾಜೆ ತಮ್ಮ ಹೇಳಿಕೆ ಕುರಿತು ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ಕೊಟ್ಟು ಕ್ಷಮೆಯಾಚಿಸಿದರೆ ಪ್ರಕರಣ ರದ್ದುಗೊಳಿಸಬಹುದು ಎಂದು ಹೈಕೋರ್ಟ್‌ಗೆ ತಿಳಿಸಿದರು.

ಒಂದು ವೇಳೆ ತಮ್ಮ ಹೇಳಿಕೆ ಕುರಿತು ಕ್ಷಮಾಪಣೆ ಕೇಳದಿದ್ದರೆ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸುವ ಕುರಿತು ನ್ಯಾಯಪೀಠವನ್ನು ಕೇಳಿದರು. ಅಲ್ಲದೇ ನಮಗೆ ಉನ್ನತ ಮಟ್ಟದಿಂದ ಅನುಮತಿ ದೊರೆತಿದ್ದು, ಒಂದು ವೇಳೆ ಸಚಿವರು ಪತ್ರಿಕಾಗೋಷ್ಠಿಯನ್ನು ಕರೆದು ಕ್ಷಮೆಯಾಚಿಸಿದರೆ ಪ್ರಕರಣವನ್ನು ಕೈಬಿಡಬಹುದಾಗಿದೆ. ಈ ಸಂಬಂಧ ಅಡ್ವೊಕೇಟ್ ಜನರಲ್ ತಾವು ಕರಡು ಕ್ಷಮಾಪಣೆ ಸಿದ್ಧಪಡಿಸಿರುವುದಾಗಿ ಕೋರ್ಟ್‌ ಗೆ ತಿಳಿಸಿದರು.

ಏನಿದು ಪ್ರಕರಣ?

ನಗರದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟಕ್ಕೂ ತಮಿಳುನಾಡಿಗೂ ಸಂಬಂಧ ಕಲ್ಪಿಸಿದ್ದೇ ಅವರು ವಿವಾದಕ್ಕೆ ಸಿಲುಕಲು ಕಾರಣ. ಬೆಂಗಳೂರಿನ ನಗರ್ತ ಪೇಟೆಯಲ್ಲಿ ಮೊಬೈಲ್‌ ಅಂಗಡಿ ಇಟ್ಟುಕೊಂಡಿದ್ದ ಮುಕೇಶ್‌ ಅವರು ಹನುಮಾನ್‌ ಚಾಲೀಸಾ ಹಾಕಿದ್ದನ್ನು ಪ್ರಶ್ನಿಸಿ ಮುಸ್ಲಿಂ ಯುವಕರೇ ಹೆಚ್ಚಾಗಿರುವ ತಂಡವೊಂದು ಆವರ ಮೇಲೆ ಹಲ್ಲೆ ಮಾಡಿತ್ತು. ಇದರ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಂಗಳವಾರ ಶೋಭಾ ಕರಂದ್ಲಾಜೆ ಭಾಗಿಯಾಗಿದ್ದರು.

ಪ್ರತಿಭಟನೆಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ಅವರು ʻʻನಮ್ಮ ಬೆಂಗಳೂರಿನ ಕೆಫೆಗೆ ತಮಿಳುನಾಡಿನ ಯಾರು ಯಾರೋ ಬಂದು ಬಾಂಬ್ ಹಾಕುತ್ತಾರೆ ಎಂಬ ಹೇಳಿಕೆ ನೀಡಿದ್ದರು. ʻʻಒಬ್ಬ ವ್ಯಕ್ತಿ ತಮಿಳುನಾಡಿನಿಂದ ಬಂದು ಕೆಫೆಯಲ್ಲಿ ಬಾಂಬ್ ಇಟ್ಟಿದ್ದಾನೆ. ಮತ್ತೊಬ್ಬ ದೆಹಲಿಯಿಂದ ಬಂದು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತಾನೆ. ಇನ್ನೊಬ್ಬ ಕೇರಳದಿಂದ ಬಂದು ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎರಚುತ್ತಾನೆ. ಯಾರಿಗೂ ಕರ್ನಾಟಕದ ಬಗ್ಗೆ ಸಣ್ಣ ಭಯವೂ ಇಲ್ಲʼʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟಿದ್ದ ತಮಿಳಿಗ ಎಂಬರ್ಥದಲ್ಲಿ ಶೋಭಾ ಕರಂದ್ಲಾಜೆ ಅವರು ಹೇಳಿಕೆ ನೀಡಿದ್ದು ತಮಿಳುನಾಡಿನವರನ್ನು ಕೆರಳಿಸಿತ್ತು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಸೇರಿ ಹಲವು ಇದಕ್ಕೆ ಪ್ರತಿಕ್ರಿಯೆ ನೀಡಿದರು. ಸಾಮಾಜಿಕ ಜಾಲತಾಣಗಳಲ್ಲೂ ತೀವ್ರ ವಿರೋಧ ವ್ಯಕ್ತವಾಗಿತ್ತು.

ಭಾಷಿಗರ ನಡುವೆ ದ್ವೇಷ ಹಚ್ಚುವ ರೀತಿಯಲ್ಲಿ ಭಾಷಣ ಮಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಂ.ಕೆ. ಸ್ಟಾಲಿನ್ ಅವರು ಚುನಾವಣಾ ಆಯೋಗವನ್ನೂ ಆಗ್ರಹಿಸಿದ್ದರು. ಇದನ್ನೂ ಮೀರಿ ಕೆಲವರು ಶೋಭಾ ಕರಂದ್ಲಾಜೆಯ ಹೇಳಿಕೆಗೆ ಪ್ರಧಾನಿ ಮೋದಿ ಅವರೇ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: Parliament Session 2024: ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಎಚ್‌ಡಿಕೆ, ಶೋಭಾ ಕರಂದ್ಲಾಜೆ; Video ಇಲ್ಲಿದೆ

Continue Reading

ದೇಶ

Vinesh Phogat: ವಿನೇಶ್‌ ಪೋಗಟ್‌ ಅನರ್ಹತೆ ಬಗ್ಗೆ ಹಗುರವಾಗಿ ಮಾತ್ನಾಡಿದ್ರಾ ಸುಧಾ ಮೂರ್ತಿ?

Paris Olympics 2024: ದೇಶದ ಗಮನ ಸೆಳೆದಿರುವ ವಿನೇಶ್‌ ಪೋಗಟ್‌ ಅನರ್ಹತೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಧಾ, ಇಂತಹದ್ದ ವಿಚಾರಗಳು ನಡೆಯುತ್ತಿರುತ್ತವೆ. ಏನು ಮಾಡೋಕೆ ಆಗುತ್ತದೆ? ಇದು ಆಟದ ಒಂದು ಭಾಗ. ಈ ಬಗ್ಗೆ ಬೇಸರವಿದೆ. ಅಷ್ಟು ಮಾತ್ರ ಹೇಳಲು ಸಾಧ್ಯ ಎಂದು ಹೇಳಿದ್ದಾರೆ. ಸುಧಾಮೂರ್ತಿಯವರ ಈ ಪ್ರತಿಕ್ರಿಯೆ ಬಗ್ಗೆ ಹಲವರಿಂದ ಆಕ್ಷೇಪ ವ್ಯಕ್ತವಾಗಿದೆ. ಸುಧಾ ಮೂರ್ತಿಯವರು ಇಷ್ಟು ದೊಡ್ಡ ವಿಚಾರದ ಬಗ್ಗೆ ಹಗುರವಾಗಿ ಪ್ರತಿಕ್ರಿಯಿಸಿರುವುದು ಸರಿಯಲ್ಲ ಎಂದು ಕೆಲವರು ಟೀಕಿಸಿದ್ದಾರೆ.

VISTARANEWS.COM


on

vinesh phogat
Koo

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌(Paris Olympics 2024)ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅನರ್ಹಗೊಂಡಿರುವ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಬಗ್ಗೆ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ(Sudha Murthy) ನೀಡಿರುವ ಪ್ರತಿಕ್ರಿಯೆ ಇದೀಗ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ.

ದೇಶದ ಗಮನ ಸೆಳೆದಿರುವ ವಿನೇಶ್‌ ಪೋಗಟ್‌ ಅನರ್ಹತೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಧಾ, ಇಂತಹದ್ದ ವಿಚಾರಗಳು ನಡೆಯುತ್ತಿರುತ್ತವೆ. ಏನು ಮಾಡೋಕೆ ಆಗುತ್ತದೆ? ಇದು ಆಟದ ಒಂದು ಭಾಗ. ಈ ಬಗ್ಗೆ ಬೇಸರವಿದೆ. ಅಷ್ಟು ಮಾತ್ರ ಹೇಳಲು ಸಾಧ್ಯ ಎಂದು ಹೇಳಿದ್ದಾರೆ. ಸುಧಾಮೂರ್ತಿಯವರ ಈ ಪ್ರತಿಕ್ರಿಯೆ ಬಗ್ಗೆ ಹಲವರಿಂದ ಆಕ್ಷೇಪ ವ್ಯಕ್ತವಾಗಿದೆ. ಸುಧಾ ಮೂರ್ತಿಯವರು ಇಷ್ಟು ದೊಡ್ಡ ವಿಚಾರದ ಬಗ್ಗೆ ಹಗುರವಾಗಿ ಪ್ರತಿಕ್ರಿಯಿಸಿರುವುದು ಸರಿಯಲ್ಲ ಎಂದು ಕೆಲವರು ಟೀಕಿಸಿದ್ದಾರೆ.

ಸರಳತೆಯ ಪರಮಾವಧಿ ಇದು ಎಂದು ಒಬ್ಬ ನೆಟ್ಟಿಗ ಪ್ರತಿಕ್ರಿಯಿಸಿದ್ದು, ವಿನೇಶ್‌ ಅನರ್ಹತೆ ವಿಚಾರ ತಿಳಿದು ಕೋಟ್ಯಂತರ ಭಾರತೀಯರ ಹೃದಯ ಒಡೆದು ನುಚ್ಚುನೂರಾಗಿದೆ. ಇದೀಗ ಸುಧಾ ಮೂರ್ತಿಯವರು ಆ ಗಾಯ ಮೇಲೆ ಉಪ್ಪು ಸವರುತ್ತಿದ್ದಾರೆ ಎಂದು ಮತ್ತೊರ್ವ ಕಿಡಿಕಾರಿದ್ದಾನೆ. ಸುಧಾ ಮೂರ್ತಿಯವರ ಹೇಳಿಕೆ ಸರಿಯಾಗಿದೆ. ಬಹಳ ಪ್ರ್ಯಾಕ್ಟಿಕಲ್‌ ರೀತಿಯಲ್ಲಿ ಸತ್ಯ ಹೇಳುತ್ತಿದ್ದಾರೆ ಎಂದು ಇನ್ನೊರ್ವ ನೆಟ್ಟಿಗ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಯಿತು.ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಯಿತು.

ಒಲಿಂಪಿಕ್ಸ್‌ನಲ್ಲಿ 50 ಕಿಲೋ ತೂಕದ ವಿಭಾಗದಲ್ಲಿ ಸ್ಪರ್ಧಿಸಲು ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್‌ ಫೋಗಟ್‌ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯ ಮ ಎಕ್ಸ್‌ನಲ್ಲಿ ಪೋಸ್ಟ್ ಮೂಲಕ ಅವರು ಕುಸ್ತಿಯಿಂದ ನಿವೃತ್ತಿ (retirement) ಘೋಷಿಸಿದರು. “ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿದೆ. ನಾನು ಸೋತೆ.. ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ:Vinesh Phogat: ವಿನೇಶ್​ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸರ್ಕಾರ

Continue Reading

ದೇಶ

Parliament Session: ವಕ್ಫ್ ಮಸೂದೆ ಮಂಡನೆ: ಸಂಸತ್ತಿನಲ್ಲಿ ಪ್ರತಿಪಕ್ಷಗಳಿಂದ ಭಾರೀ ಕೋಲಾಹಲ

Parliament Session:ಕಾಂಗ್ರೆಸ್‌ ಸಂಸದ ಕೆ.ಸಿ. ವೇಣುಗೋಪಾಲ್‌ ಮಾತನಾಡಿ, ನಾವು ಹಿಂದೂಗಳು. ಆದರೆ ನಮ್ಮ ಧರ್ಮದ ಜೊತೆಗೆ ನಾವು ಇತರ ಧರ್ಮಗಳ ನಂಬಿಕೆಯನ್ನು ಗೌರವಿಸುತ್ತೇವೆ. ಈ ಮಸೂದೆಯು ಮಹಾರಾಷ್ಟ್ರ, ಹರಿಯಾಣ ಚುನಾವಣೆಗಳ ದೃಷ್ಟಿಯಿಂದ ಮಂಡನೆ ಮಾಡಲಾಗಿದೆ. ಕಳೆದ ಬಾರಿ ಭಾರತದ ಜನತೆ ನಿಮಗೆ ಪಾಠ ಕಲಿಸಿದ್ದು ನಿಮಗೆ ಅರ್ಥವಾಗುತ್ತಿಲ್ಲ. ಇದು ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ ಎಂದರು

VISTARANEWS.COM


on

Parliament Session
Koo

ನವದೆಹಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ(Union Minister of Minority Affairs) ಕಿರಣ್‌ ರಿಜಿಜು(Kiren Rijiju) ಬಹುಚರ್ಚಿತ ವಕ್ಫ್‌ ತಿದ್ದುಪಡಿ ಮಸೂದೆಯನ್ನು(Waqf Amendment) Bill) ಸಂಸತ್‌(Parliament Session)ನಲ್ಲಿ ಇಂದು ಮಂಡಿಸಿದ್ದಾರೆ. ನಿರೀಕ್ಷೆಯಂತೆ ಮಸೂದೆ ಮಂಡನೆಯಾಗುತ್ತಿದ್ದಂತೆ ಪ್ರತಿಪಕ್ಷಗಳು ಗದ್ದಲವೆಬ್ಬಿಸಿ, ಭಾರೀ ವಿರೋಧ ವ್ಯಕ್ತಪಡಿಸಿವೆ.

ವಕ್ಫ್ ಕಾಯ್ದೆ 1995ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಹಾಗೂ ವಕ್ಫ್ ಕಾಯಿದೆ, 1995 ಅನ್ನು ʼಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯಿದೆ-1995ʼ ಎಂದು ಮರುನಾಮಕರಣ ಮಾಡುವ ಗುರಿಯೊಂದಿಗೆ ಇಂದು ಕೇಂದ್ರ ಸರ್ಕಾರ ಮಸೂದೆ ಮಂಡನೆ ಮಾಡಿದೆ.

ಪ್ರತಿಪಕ್ಷಗಳ ವಿರೋಧ

ಇನ್ನು ಈ ಮಸೂದೆಗೆ ವಿರೋಧ ಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದು, ತಕ್ಷಣ ಇದನ್ನು ಹಿಂಪಡೆಯುವಂತೆ ಆಗ್ರಹಿಸಿವೆ. ಕಾಂಗ್ರೆಸ್‌ ಸಂಸದ ಕೆ.ಸಿ. ವೇಣುಗೋಪಾಲ್‌ ಮಾತನಾಡಿ, ನಾವು ಹಿಂದೂಗಳು. ಆದರೆ ನಮ್ಮ ಧರ್ಮದ ಜೊತೆಗೆ ನಾವು ಇತರ ಧರ್ಮಗಳ ನಂಬಿಕೆಯನ್ನು ಗೌರವಿಸುತ್ತೇವೆ. ಈ ಮಸೂದೆಯು ಮಹಾರಾಷ್ಟ್ರ, ಹರಿಯಾಣ ಚುನಾವಣೆಗಳ ದೃಷ್ಟಿಯಿಂದ ಮಂಡನೆ ಮಾಡಲಾಗಿದೆ. ಕಳೆದ ಬಾರಿ ಭಾರತದ ಜನತೆ ನಿಮಗೆ ಪಾಠ ಕಲಿಸಿದ್ದು ನಿಮಗೆ ಅರ್ಥವಾಗುತ್ತಿಲ್ಲ. ಇದು ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ. ಈ ಮಸೂದೆಯು ಸಂವಿಧಾನದ ಮೇಲಿನ ಮೂಲಭೂತ ದಾಳಿಯಾಗಿದೆ…ಈ ಮಸೂದೆಯ ಮೂಲಕ, ಅವರು ಮುಸ್ಲಿಮೇತರರೂ ವಕ್ಫ್ ಆಡಳಿತ ಮಂಡಳಿಯ ಸದಸ್ಯರಾಗಬೇಕೆಂಬ ನಿಬಂಧನೆಯನ್ನು ಹಾಕುತ್ತಿದ್ದಾರೆ. ಇದು ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ನೇರ ದಾಳಿಯಾಗಿದೆ ಎಂದು ಕಿಡಿ ಕಾರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರಾಜೀವ್‌ ರಂಜನ್‌, ಇದು ಮುಸ್ಲಿಮರ ವಿರುದ್ಧ ಹೇಗೆ? ಪಾರದರ್ಶಕತೆ ತರಲು ಈ ಕಾನೂನನ್ನು ಮಾಡಲಾಗುತ್ತಿದೆ. ಪ್ರತಿಪಕ್ಷಗಳು ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ತಿರುಗೇಟು ಕೊಟ್ಟರು.

ಏನೆಲ್ಲ ತಿದ್ದುಪಡಿ?

ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಮಂಡಳಿಗೆ ಸೇರಿಸಲು ಪಾರದರ್ಶಕ ನಿಯಮಗಳ ಪಾಲನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಲ್ಲೂ, ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಿಸುವ ಪರಮಾಧಿಕಾರ ತೆಗೆಯಲಿದೆ. ಇನ್ನು, ವಕ್ಫ್‌ ಆಸ್ತಿಗಳ ಮೇಲೆ ನಿಗಾ ಇರಿಸುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಇದುವರೆಗೆ ವಕ್ಫ್‌ ಮಂಡಳಿಯಲ್ಲಿ ಹೆಣ್ಣುಮಕ್ಕಳ ಸಹಭಾಗಿತ್ವವೇ ಇರಲಿಲ್ಲ. ಹಾಗಾಗಿ, ಪ್ರತಿಯೊಂದು ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಹೆಣ್ಣುಮಕ್ಕಳಿಗೂ ಸ್ಥಾನ ನೀಡುವುದು. ರಾಜ್ಯಗಳ ಮಂಡಳಿಗಳಲ್ಲಿ ಕನಿಷ್ಠ ಇಬ್ಬರು ಮಹಿಳೆಯರಿಗೆ ಸ್ಥಾನ ನೀಡುವುದು. ಕೇಂದ್ರ ಸಮಿತಿಗಳಲ್ಲೂ ಇಬ್ಬರೂ ಹೆಣ್ಣುಮಕ್ಕಳು ಇರಬೇಕು ಎಂಬ ನಿಯಮ ಜಾರಿಗೆ ತರುವುದು. ಮುಸ್ಲಿಮರು ಕೂಡ ವಕ್ಫ್‌ ಆಸ್ತಿಯನ್ನು ಸೃಷ್ಟಿಸಬಹುದು ಎಂಬ ನಿಯಮ ಜಾರಿಗೊಳಿಸುವುದು ಸೇರಿ ಹಲವು ತಿದ್ದುಪಡಿಗಳಿಗೆ ಪ್ರಸ್ತಾವನೆ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Parliament Session: ವಿನೇಶ್‌ ಫೋಗಟ್‌ ಅನರ್ಹತೆಯ ವಿಚಾರ ಚರ್ಚೆಗೆ ಆಗ್ರಹಿಸಿ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ, ಸಭಾತ್ಯಾಗ

Continue Reading

ವಾಣಿಜ್ಯ

UPI Transaction Limit: ಯುಪಿಐ ಟ್ಯಾಕ್ಸ್ ಪೇಮೆಂಟ್ ಮಿತಿ 5 ಲಕ್ಷ ರೂ.ಗೆ ಏರಿಕೆ

UPI Transaction Limit: ಯುಪಿಐ ಟ್ಯಾಕ್ಸ್ ಪೇಮೆಂಟ್ ಮಿತಿಯನ್ನು 1 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸುವುದಾಗಿ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ. ಮಿತಿಯ ಹೆಚ್ಚಳವು ಗ್ರಾಹಕರಿಗೆ ಹೆಚ್ಚಿನ ಮೌಲ್ಯದ ತೆರಿಗೆ ವಹಿವಾಟುಗಳನ್ನು ಸರಳಗೊಳಿಸುವ ಮತ್ತು ಸುಗಮಗೊಳಿಸುವ ಗುರಿಯನ್ನು ಹೊಂದಿದೆ. ʼʼಸದ್ಯಕ್ಕೆ ಯುಪಿಐ ಮೂಲಕ 1 ಲಕ್ಷ ರೂ.ವರೆಗೆ ಹಣ ಕಳುಹಿಸಬಹುದು. ಇನ್ನು ಮುಂದೆ ತೆರಿಗೆ ಪಾವತಿಗಾಗಿ ಯುಪಿಐ ಮೂಲಕ 5 ಲಕ್ಷ ರೂ.ವರೆಗೆ ಹಣ ಕಳುಹಿಸಲು ಸಾಧ್ಯ. ಅಂದರೆ ಒಂದು ವಹಿವಾಟಿನಲ್ಲಿ ನೀವು 5 ಲಕ್ಷ ರೂ.ವರೆಗೆ ತೆರಿಗೆ ಪಾವತಿ ಮಾಡಲು ಸಾಧ್ಯವಾಗಲಿದೆʼʼ ಎಂದು ಅವರು ಹೇಳಿದ್ದಾರೆ. ಆದರೆ ಇದು ತೆರಿಗೆ ಪಾವತಿಗೆ ಮಾತ್ರ ಅನ್ವಯವಾಗುತ್ತದೆ.

VISTARANEWS.COM


on

UPI Transaction Limit
Koo

ನವದೆಹಲಿ: ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಮೂಲಕ ತೆರಿಗೆ ಪಾವತಿಸುವವರಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಗುಡ್‌ನ್ಯೂಸ್‌ ನೀಡಿದೆ. ಯುಪಿಐ ಟ್ಯಾಕ್ಸ್ ಪೇಮೆಂಟ್ ಮಿತಿಯನ್ನು 1 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸುವುದಾಗಿ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ತಿಳಿಸಿದ್ದಾರೆ (UPI Transaction Limit).

ಮಿತಿಯ ಹೆಚ್ಚಳವು ಗ್ರಾಹಕರಿಗೆ ಹೆಚ್ಚಿನ ಮೌಲ್ಯದ ತೆರಿಗೆ ವಹಿವಾಟುಗಳನ್ನು ಸರಳಗೊಳಿಸುವ ಮತ್ತು ಸುಗಮಗೊಳಿಸುವ ಗುರಿಯನ್ನು ಹೊಂದಿದೆ. ʼʼಸದ್ಯಕ್ಕೆ ಯುಪಿಐ ಮೂಲಕ 1 ಲಕ್ಷ ರೂ.ವರೆಗೆ ಹಣ ಕಳುಹಿಸಬಹುದು. ಇನ್ನು ಮುಂದೆ ತೆರಿಗೆ ಪಾವತಿಗಾಗಿ ಯುಪಿಐ ಮೂಲಕ 5 ಲಕ್ಷ ರೂ.ವರೆಗೆ ಹಣ ಕಳುಹಿಸಲು ಸಾಧ್ಯ. ಅಂದರೆ ಒಂದು ವಹಿವಾಟಿನಲ್ಲಿ ನೀವು 5 ಲಕ್ಷ ರೂ.ವರೆಗೆ ತೆರಿಗೆ ಪಾವತಿ ಮಾಡಲು ಸಾಧ್ಯವಾಗಲಿದೆʼʼ ಎಂದು ಅವರು ಹೇಳಿದ್ದಾರೆ. ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ)ನ ದ್ವೈಮಾಸಿಕ ಹಣಕಾಸು ನೀತಿ ಸಮಿತಿ (MPC)ಯ ಸಭೆಯ ಬಳಿಕ ಅವರು ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ್ದಾರೆ. ಆದರೆ ಇದು ತೆರಿಗೆ ಪಾವತಿಗೆ ಮಾತ್ರ ಅನ್ವಯವಾಗುತ್ತದೆ.

“ಪ್ರಸ್ತುತ ಕೆಲವೊಂದು (ಉದಾಹರಣೆಗೆ ಆಸ್ಪತ್ರೆ, ಶಿಕ್ಷಣ ಸಂಸ್ಥೆ) ಕ್ಷೇತ್ರಗಳಿಗೆ ಹೊರತುಪಡಿಸಿ ಯುಪಿಐ ವಹಿವಾಟು 1 ಲಕ್ಷ ರೂ. ಮಿತಿಯನ್ನು ಹೊಂದಿದೆ. ಇದೀಗ ಯುಪಿಐ ಮೂಲಕ ತೆರಿಗೆ ಪಾವತಿಯ ಮಿತಿಯನ್ನು ಪ್ರತಿ ವಹಿವಾಟಿಗೆ 5 ಲಕ್ಷ ರೂ.ಗೆ ಹೆಚ್ಚಿಸಲು ನಾವು ನಿರ್ಧರಿಸಿದ್ದೇವೆ. ಇದರಿಂದ ಯುಪಿಐ ಬಳಸಿ ತೆರಿಗೆ ಪಾವತಿಸುವ ಗ್ರಾಹಕರಿಗೆ ಅನುಕೂಲವಾಗುತ್ತದೆʼʼ ಎಂದು ಅವರು ವಿವರಿಸಿದ್ದಾರೆ.

ಡೆಲಿಗೇಟೆಡ್ ಪೇಮೆಂಟ್ಸ್ ವಿಧಾನ

ಇದರ ಜತೆಗೆ ಆರ್‌ಬಿಐ ‘ಡೆಲಿಗೇಟೆಡ್ ಪೇಮೆಂಟ್ಸ್’ ಎಂಬ ಹೊಸ ಯುಪಿಐ ವೈಶಿಷ್ಟ್ಯವನ್ನು ಪರಿಚಯಿಸಿದೆ. ಒಬ್ಬ ವ್ಯಕ್ತಿಯ ಬ್ಯಾಂಕ್ ಖಾತೆಯನ್ನು ಮತ್ತೊಬ್ಬ ವ್ಯಕ್ತಿ ಬಳಸಲು ಅನುವು ಮಾಡಿಕೊಡುವ ಫೀಚರ್ ಇದಾಗಿದೆ. ಇದರಲ್ಲಿ ಪ್ರಾಥಮಿಕ ಬಳಕೆದಾರರ ಬ್ಯಾಂಕ್ ಖಾತೆಯಿಂದ ನಿರ್ದಿಷ್ಟ ಮಿತಿಯವರೆಗೆ ಯುಪಿಐ ವಹಿವಾಟುಗಳನ್ನು ನಡೆಸಲು ದ್ವಿತೀಯ ಬಳಕೆದಾರನಿಗೆ ಅನುಮತಿ ನೀಡಲಾಗುತ್ತದೆ. ಇದಕ್ಕಾಗಿ ದ್ವಿತೀಯ ಬಳಕೆದಾರರಿಗೆ ಪ್ರತ್ಯೇಕ ಯುಪಿಐ-ಲಿಂಕ್ ಮಾಡಿದ ಬ್ಯಾಂಕ್ ಖಾತೆಯ ಅಗತ್ಯವಿಲ್ಲ. ಈ ವೈಶಿಷ್ಟ್ಯವು ಡಿಜಿಟಲ್ ಪಾವತಿಗಳನ್ನು ಇನ್ನಷ್ಟು ಸುಗಮಗೊಳಿಸಲಿದೆ.

ರೆಪೋ ದರಲ್ಲಿ ಯಾವುದೇ ಬದಲಾವಣೆ ಇಲ್ಲ

ಇದೇ ವೇಳೆ ರೆಪೋ ದರವನ್ನೂ ಪ್ರಕಟಿಸಲಾಗಿದೆ. ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ರೆಪೋ ದರ ಸತತ 9ನೇ ಬಾರಿಯೂ ಶೇ. 6.50ರಲ್ಲಿಯೇ ಮುಂದುವರಿಯಲಿದೆ. ಜತೆಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಪ್ರಗತಿ ದರವನ್ನು ಶೇ. 7.2 ಎಂದು ಆರ್‌ಬಿಐ ಅಂದಾಜಿಸಿದೆ. ಮಾತ್ರವಲ್ಲ ಕೆಲವೇ ಗಂಟೆಗಳಲ್ಲಿ ಚೆಕ್‌ ವಿಲೇವಾರಿ ಆಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಶಕ್ತಿಕಾಂತ ದಾಸ್ ತಿಳಿಸಿದ್ದಾರೆ. ಪ್ರಸ್ತುತ ಚೆಕ್‌ ಹಾಕಿದರೆ ಕ್ಲಿಯರ್‌ ಆಗಲು ಎರಡು ದಿನಗಳು ಬೇಕಾಗುತ್ತವೆ. ಅದನ್ನು ಕೆಲವೇ ಗಂಟೆಗಳಿಗೆ ಇಳಿಯಲಿದೆ.

ಇದನ್ನೂ ಓದಿ: Indian Currency: 2000 ರೂ. ನೋಟು ತಯಾರಿಸಲು 4 ರೂ. ಖರ್ಚು; 10 ರೂ. ನೋಟು ಮುದ್ರಿಸಲು 96 ಪೈಸೆ ಬೇಕು!

Continue Reading
Advertisement
Paris Olympics
ಕ್ರೀಡೆ2 mins ago

Paris Olympics: ಭರ್ಜರಿ ಗೆಲುವಿನೊಂದಿಗೆ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಅಮನ್ ಸೆಹ್ರಾವತ್

Shobha Karandlaje
ದೇಶ15 mins ago

Shobha Karandlaje: ತಮಿಳಿಗರಿಗೆ ಅವಮಾನ- ಕ್ಷಮೆಯಾಚಿಸಿದರೆ ಕೇಸ್‌ ರದ್ದು; ಹೈಕೋರ್ಟ್‌ನಲ್ಲಿ ಎಜಿ ಮಾಹಿತಿ

Dog bite
ಬೆಂಗಳೂರು17 mins ago

Dog Bite : ಬೀದಿ ನಾಯಿಗಳ ಕಾಟಕ್ಕೆ ಮನೆ ಮಾರಾಟಕ್ಕೆ ಮುಂದಾದ ಜನ್ರು!

International Cat Day
ಪರಿಸರ32 mins ago

International Cat Day: ಇಂದು ಬೆಕ್ಕಿನ ದಿನ; ಇದರ ಆಯುಷ್ಯ, ನಿದ್ದೆ, ಶೃಂಗಾರ ಇತ್ಯಾದಿ ಸಂಗತಿಗಳು ಕುತೂಹಲಕರ!

Gautam Gambhir
ಕ್ರೀಡೆ44 mins ago

Gautam Gambhir: 27 ವರ್ಷದ ಬಳಿಕ ಲಂಕಾ ವಿರುದ್ಧ ಸೋಲು; ಗಂಭೀರ್​ ಫುಲ್​ ಟ್ರೋಲ್​

rave party telugu actress hema
ಕ್ರೈಂ48 mins ago

Rave Party: ರೇವ್‌ ಪಾರ್ಟಿಯಲ್ಲಿ ಭಾಗವಹಿಸಿದ 85 ಜನರ ಮೇಲೆ ಚಾರ್ಜ್‌ಶೀಟ್, ಸುಳ್ಳು ಹೇಳಿದ ನಟಿ ಹೇಮಾ ಮೇಲೂ ಚಾರ್ಜ್

Divorce Case
Latest53 mins ago

Divorce Case: ಪ್ರತಿ ಬಾರಿ ʼಸರಸʼ ಆಡಿದಾಗಲೂ ಕಾಸು ಕೊಡಲೇಬೇಕು! ಹೆಂಡತಿಯ ಡಿಮ್ಯಾಂಡ್‌ ಕೇಳಿ ಡಿವೋರ್ಸ್‌ ಪಡೆದ ಗಂಡ!

Maravoor bridge in danger Vehicular traffic suspended
ದಕ್ಷಿಣ ಕನ್ನಡ57 mins ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Naga Chaitanya Sobhita Love Story REVEALED age gap
ಟಾಲಿವುಡ್1 hour ago

Naga Chaitanya: ನಾಗ ಚೈತನ್ಯ- ಶೋಭಿತಾ ಲವ್ ಸ್ಟೋರಿ ಶುರುವಾಗಿದ್ದು ಹೇಗೆ? ಇಬ್ಬರ ನಡುವಿನ ಏಜ್ ಗ್ಯಾಪ್ ಎಷ್ಟು?

Murder Case
Latest1 hour ago

Murder Case: ಒಂದೇ ಹುಡುಗಿಯನ್ನು ಪ್ರೀತಿಸಿದ ಸಹೋದರರು; ಈ ತ್ರಿಕೋನ ಪ್ರೇಮ ಕಥೆ ಕೊಲೆಯಲ್ಲಿ ಅಂತ್ಯ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌