Site icon Vistara News

Budget 2024: ಇದು ‘ನಿರ್ಮಲ’ ಬಜೆಟ್! ತೆರಿಗೆ ಬದಲಾವಣೆಯೂ ಇಲ್ಲ, ಪುಕ್ಕಟೆ ಯೋಜನೆಯೂ ಇಲ್ಲ!

Vistara Editorial, Balanced budget by Central Government

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯ (Lok sabha Election 2024) ಹಿನ್ನೆಲೆಯಲ್ಲಿ ವಿತ್ತ ಸಚಿವೆ (Finance Minister) ನಿರ್ಮಲಾ ಸೀತಾರಾಮನ್ (Nirmala Seetharaman) ಇಂದು ಮಧ್ಯಂತರ ಬಜೆಟ್ 2024 (Budget 2024) ಅನ್ನು ಮಂಡಿಸಿದ್ದಾರೆ. ಇದು ನಿರ್ಮಲಾ ಸೀತಾರಾಮನ್ ಅವರ ಸತತ ಆರನೇ ಬಜೆಟ್ ಮಂಡನೆ. ಅವರು ಮಾಜಿ ಹಣಕಾಸು ಸಚಿವ ಮೊರಾರ್ಜಿ ದೇಸಾಯಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಬಜೆಟ್‌ನಲ್ಲಿ ಹಣಕಾಸು ಸಚಿವರು ಯಾವುದೇ ಜನಪ್ರಿಯ ಘೋಷಣೆಗಳನ್ನು ಮಾಡಿಲ್ಲ. ನೇರ ಮತ್ತು ಪರೋಕ್ಷ ತೆರಿಗೆಗಳ ತೆರಿಗೆ ದರಗಳನ್ನು ಬದಲಾಯಿಸಿಲ್ಲ.

ಮುಂದಿನ ಹಣಕಾಸು ವರ್ಷದಲ್ಲಿ ಸರ್ಕಾರವು 11.1 ಲಕ್ಷ ಕೋಟಿ ರೂಪಾಯಿಗಳನ್ನು ಬಂಡವಾಳ ವೆಚ್ಚವಾಗಿ ಖರ್ಚು ಮಾಡಲಿದೆ ಎಂದು ನಿರ್ಮಲಾ ಬಜೆಟ್‌ನಲ್ಲಿ (budget 2024) ಘೋಷಿಸಿದ್ದಾರೆ. ಇದು ಪ್ರಸಕ್ತ ಹಣಕಾಸು ವರ್ಷದ ಹಂಚಿಕೆಗಳಿಗೆ ಹೋಲಿಸಿದರೆ ಸುಮಾರು 11% ಹೆಚ್ಚು. ಸರ್ಕಾರವು ಮುಂದಿನ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆ ಗುರಿಯನ್ನು GDPಯ 5.1 ಪ್ರತಿಶತಕ್ಕೆ ಇಳಿಸಿದೆ. ಮತ್ತು 2026ರಲ್ಲಿ ಅದನ್ನು 4.5 ಪ್ರತಿಶತಕ್ಕೆ ಇಳಿಸಲು ಯೋಜಿಸಿದೆ.

ನೇರ ಮತ್ತು ಪರೋಕ್ಷ ತೆರಿಗೆ

ಪ್ರವಾಸೋದ್ಯಮ

ಹೂಡಿಕೆ ವೆಚ್ಚ 11.11 ಲಕ್ಷ ಕೋಟಿ ರೂ

ಕೃಷಿ ಕ್ಷೇತ್ರ

ಆರೋಗ್ಯ ರಕ್ಷಣೆ

ವಸತಿ ವಲಯ

ಪವನ ಶಕ್ತಿಗಾಗಿ ಕಾರ್ಯಸಾಧ್ಯತೆಯ ಅಂತರ ನಿಧಿ

ಭಾರತದ ಬೆಳವಣಿಗೆ

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ವಿನಾಯಿತಿ

ಹಲವು ವರ್ಷಗಳಿಂದ ಬಾಕಿ ಉಳಿದುಕೊಂಡಿರುವ ವಿವಾದಿತ ನೇರ ತೆರಿಗೆ ಪ್ರಕರಣಗಳಿಗೆ (disputed direct tax demand) ಗಣನೀಯ ವಿನಾಯಿತಿಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Seetharaman) ಅವರು ಮಧ್ಯಂತರ ಬಜೆಟ್‌ನಲ್ಲಿ (Budget 2024) ಒದಗಿಸಿದ್ದಾರೆ.

ಸಂಪ್ರದಾಯಕ್ಕೆ ಅನುಗುಣವಾಗಿ ತೆರಿಗೆ ಸ್ಲ್ಯಾಬ್‌ಗಳಲ್ಲಿ ಸಚಿವರು ಯಾವುದೇ ಬದಲಾವಣೆಗಳನ್ನು ಮಾಡದಿದ್ದರೂ, ಬಾಕಿ ಉಳಿದಿರುವ ತೆರಿಗೆ ವಿವಾದಗಳಿಗೆ ಪರಿಹಾರವನ್ನು ನೀಡಿದರು. 2010ರವರೆಗೆ 25,000 ರೂ. ಮತ್ತು 2011- 2015ರ ಅವಧಿಯಲ್ಲಿ 10,000 ರೂ. ವರೆಗೆ ನೇರ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೀಡಲಾದ ನೋಟೀಸ್‌ಗಳನ್ನು ಸರ್ಕಾರ ಹಿಂಪಡೆಯಲಿದೆ ಎಂದು ಹಣಕಾಸು ಸಚಿವರು ತಮ್ಮ ಬಜೆಟ್- 2024 (Budget 2024) ಭಾಷಣದಲ್ಲಿ ಹೇಳಿದರು. ಸುಮಾರು 1 ಕೋಟಿ ತೆರಿಗೆ ಗ್ರಾಹಕರು ಈ ವಿನಾಯಿತಿಯ ಲಾಭ ಪಡೆಯಲಿದ್ದಾರೆ ಎಂದು ನಿರ್ಮಲಾ ತಿಳಿಸಿದರು. ಕಳೆದೆರಡು ವರ್ಷಗಳ ಹಿಂದೆ ಈ ವಿವಾದಿತ ತೆರಿಗೆ ಪ್ರಕರಣಗಳ ಇತ್ಯರ್ಥಕ್ಕಾಗಿ ಕೇಂದ್ರ ಸರ್ಕಾರ ʼವಿವಾದ್‌ ಸೆ ವಿಶ್ವಾಸ್‌ʼ ಎಂಬ ಉಪಕ್ರಮವನ್ನು ಜಾರಿಗೆ ತಂದಿತ್ತು. ಇದು ರಾಜಿಸಂಧಾನದ ಮೂಲಕ ತೆರಿಗೆ ವಿವಾದಗಳನ್ನು ಪರಿಹರಿಸುವ ಉಪಕ್ರಮ ಆಗಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, 2023ರ ಮಾರ್ಚ್ 31ರವರೆಗೆ ಬಾಕಿ ಉಳಿದಿರುವ ತೆರಿಗೆ ಮೇಲ್ಮನವಿಗಳ ಸಂಖ್ಯೆ 5.16 ಲಕ್ಷಕ್ಕೂ ಅಧಿಕವಾಗಿದೆ.

ಬಜೆಟ್‌ನಲ್ಲಿ ಬಾಲಕಿಯರಿಗೆ ಲಸಿಕೆ ಕೊಡುಗೆ

ಗರ್ಭಕಂಠ ಕ್ಯಾನ್ಸರ್‌ ತಡೆಗಾಗಿ ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಮಹತ್ವದ ಘೋಷಣೆ ಮಾಡಿದೆ. ಗರ್ಭಕಂಠ ಕ್ಯಾನ್ಸರ್‌ ತಡೆಗಾಗಿ ದೇಶಾದ್ಯಂತ 9-14 ವರ್ಷದೊಳಗಿನ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು (Cervical Cancer Vaccine) ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ (Budget 2024) ಮಂಡಿಸುವ ವೇಳೆ ಘೋಷಣೆ ಮಾಡಿದ್ದಾರೆ.

ಈಗ ಗರ್ಭಕಂಠ ಕ್ಯಾನ್ಸರ್‌ ನಿರೋಧಕ ವ್ಯಾಕ್ಸಿನ್‌ಗೆ 3 ಸಾವಿರ ರೂ. ಇದೆ. ಇನ್ನುಮುಂದೆ ಶಾಲೆಗಳ ಮೂಲಕವೇ ಬಾಲಕಿಯರಿಗೆ ಉಚಿತವಾಗಿ ಕ್ಯಾನ್ಸರ್‌ ನಿರೋಧಕ ಲಸಿಕೆ ನೀಡಲಾಗುತ್ತದೆ ಎಂದು ಸರ್ಕಾರ ಘೋಷಿಸಿದೆ. ಕೇಂದ್ರ ಸರ್ಕಾರ ನೀಡುವ ಲಸಿಕೆಯು ಶೇ.70ರಷ್ಟು ಪರಿಣಾಮಕಾರಿಯಾಗಿದ್ದು, ಹೆಣ್ಣುಮಕ್ಕಳು ಗರ್ಭಕಂಠ ಕ್ಯಾನ್ಸರ್‌ಗೆ ತುತ್ತಾಗುವುದರಿಂದ ತಡೆಗಟ್ಟುತ್ತದೆ.

ಇವಿ ವಾಹನ ಕ್ಷೇತ್ರಕ್ಕೂ ಬಜೆಟ್​ನಲ್ಲಿ ಒತ್ತು

ನಿರ್ಮಲಾ ಸೀತಾರಾಮನ್ ಅವರು ಘೋಷಿಸಿರುವ ಮಧ್ಯಂತರ ಬಜೆಟ್​ನಲ್ಲಿ ಇವಿ ಕ್ಷೇತ್ರಕ್ಕೆ ಆದ್ಯತೆ ನೀಡಲಾಗಿದೆ. ಇವಿ ಪರಿಸರ ವ್ಯವಸ್ಥೆಯನ್ನು ವಿಸ್ತರಣೆ ಮಾಡುವ ಜತೆಗೆ ಚಾರ್ಜಿಂಗ್ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್​ ಅವರು ಹೇಳಿದ್ದಾರೆ. ಸರ್ಕಾರವು ಎಲೆಕ್ಟ್ರಿಕ್ ವಾಹನ ಪರಿಸರ ವ್ಯವಸ್ಥೆಯನ್ನು ವಿಸ್ತರಿಸಲಿದೆ ಎಂದು ಹಣಕಾಸು ಸಚಿವರು ಗುರುವಾರ ಮಧ್ಯಂತರ ಬಜೆಟ್ ಘೋಷಿಸುವಾಗ ಹೇಳಿದ್ದಾರೆ. ಸಾರ್ವಜನಿಕ ಸಂಪರ್ಕ ಸಾರಿಗೆಯಲ್ಲಿ ಇ- ಬಸ್​​ಗಳ ಹೆಚ್ಚಳಕ್ಕೆ ಪ್ರೋತ್ಸಾಹಿಸಲಾಗುವುದು ಎಂದು ಸೀತಾರಾಮನ್ ಹೇಳಿದ್ದಾರೆ.

ಉತ್ಪಾದನೆ ಮತ್ತು ಚಾರ್ಜಿಂಗ್ ಮೂಲಸೌಕರ್ಯವನ್ನು ಬೆಂಬಲಿಸುವ ಮೂಲಕ ನಮ್ಮ ಸರ್ಕಾರ ಇ-ವಾಹನ ಪರಿಸರ ವ್ಯವಸ್ಥೆ ವಿಸ್ತರಿಸುತ್ತದೆ. ಪೇಮೆಂಟ್ ಸೆಕ್ಯುರಿಟಿ ಮೆಕಾನಿಸಮ್​ ಮೂಲಕ ಸಾರ್ವಜನಿಕ ಸಾರಿಗೆ ಸಂಸ್ಥೆಗಳಿ ಇ-ಬಸ್​ಗಳ ಹೆಚ್ಚಿನ ಅಳವಡಿಕೆಯನ್ನು ಪ್ರೋತ್ಸಾಹಿಸಲಾಗುವುದು” ಎಂದು ಸೀತಾರಾಮನ್ ಬಜೆಟ್ ಮಂಡನೆ ವೇಳೆ ಹೇಳಿದರು.

ರೈಲ್ವೆಗೆ 2.4 ಲಕ್ಷ ಕೋಟಿ ರೂ.!

ಮೆಟ್ರೋ ರೈಲು (Metro Rail) ಮತ್ತು ನಮೋ ಭಾರತ್ ರೈಲು (Namo Bharat Rail) ಸೇವೆಯನ್ನು ಇತರ ಎಲ್ಲ ನಗರಗಳಿಗೂ ವಿಸ್ತರಿಸುವ ಬಗ್ಗೆ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ (Niramla Sitharaman) ಅವರು ಘೋಷಣೆ ಮಾಡಿದ್ದಾರೆ. ಹಾಗೆಯೇ, ವಂದೇ ಭಾರತ್ ಹಂತಕ್ಕೆ 40 ಸಾವಿರ ಬೋಗಿಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆಯೂ ವಾಗ್ದಾನ ಮಾಡಲಾಗಿದೆ. ಇದರ ಜೊತೆಗೆ, ಮೂರು ಪ್ರಮುಖ ಆರ್ಥಿಕ ರೈಲ್ವೇ ಕಾರಿಡಾರ್ ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗಿದೆ. ಅನುಷ್ಠಾನ-ಶಕ್ತಿ, ಬಂದರು ಸಂಪರ್ಕ, ಹೆಚ್ಚಿನ ಸಂಚಾರ ಸಾಂದ್ರತೆ ಮತ್ತು ಖನಿಜ ಮತ್ತು ಸಿಮೆಂಟ್ ಕಾರಿಡಾರ್ ಬಗ್ಗೆ ಪ್ರಕಟಿಸಲಾಗಿದೆ(budget 2024).

ದಾಖಲೆಯ ಮಟ್ಟದಲ್ಲಿ ಈ ಬಾರಿ ರೈಲ್ವೆಗೆ ಅನುದಾನವನ್ನು ಒದಗಿಸಲಾಗಿದೆ. 2024-25ನೇ ಸಾಲಿಗೆ ಕೇಂದ್ರ ಸರ್ಕಾರವು ರೈಲ್ವೆ ಇಲಾಖೆಗೆ 2.4 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ. ಈ ವರ್ಷ ರೈಲ್ವೆ ಇಲಾಖೆಯಿಂದ ಸಾಕಷ್ಟು ನಿರೀಕ್ಷೆ ಕೂಡ ಇಟ್ಟುಕೊಳ್ಳಲಾಗಿದೆ.

ಈ ಸುದ್ದಿಯನ್ನೂ ಓದಿ: Budget 2024: ಡಿ.ಕೆ. ಸುರೇಶ್ ‘ಭಾರತ ವಿಭಜನೆ’‌ ಹೇಳಿಕೆ; ಸಿಎಂ ಸಿದ್ದರಾಮಯ್ಯ ವಿರೋಧ

Exit mobile version