Building Collapsed: ಭಾರೀ ಮಳೆಗೆ ನಾಲ್ಕು ಅಂತಸ್ತಿಗೆ ಕಟ್ಟಡ ಧರಾಶಾಹಿ; ಮಹಿಳೆ ಬಲಿ - Vistara News

ದೇಶ

Building Collapsed: ಭಾರೀ ಮಳೆಗೆ ನಾಲ್ಕು ಅಂತಸ್ತಿಗೆ ಕಟ್ಟಡ ಧರಾಶಾಹಿ; ಮಹಿಳೆ ಬಲಿ

Building Collapsed: ನಾಲ್ಕು ಅಂತಸ್ತಿನ ರುಬಿನಿಸಾ ಮಂಜಿಲ್ ಕಟ್ಟಡದ ಎರಡು ಮತ್ತು ಮೂರನೇ ಮಹಡಿಯ ಭಾಗಗಳು ಬಾಲ್ಕನಿಯೊಂದಿಗೆ ಬೆಳಗ್ಗೆ ಕುಸಿದು ಬಿದ್ದಿವೆ. ಕಟ್ಟಡ ಕುಸಿತದ ವೇಳೆ ಸುಮಾರು 35-40 ಮಂದಿ ಕಟ್ಟಡದಲ್ಲಿದ್ದರು. ಅವರೆಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಅವಶೇಷಗಳಡಿಯಲ್ಲಿ ಕಾಲು ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ರಕ್ಷಿಸಲು ಸ್ಥಳೀಯರು ಕಾಂಕ್ರೀಟ್ ಚಪ್ಪಡಿಗಳನ್ನು ಎತ್ತುತ್ತಿರುವ ದೃಶ್ಯಗಳು ಸ್ಥಳದಿಂದ ಕಂಡುಬಂದಿವೆ.

VISTARANEWS.COM


on

Building Collapsed
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ನಾಲ್ಕು ಅಂತಸ್ತಿನ ಕಟ್ಟಡ(Building Collapsed) ವೊಂದು ಏಕಾಏಕಿ ಕುಸಿದು ಬಿದ್ದಿದು, ಮಹಿಳೆಯೊಬ್ಬಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮುಂಬೈ(Mumbai) ನಲ್ಲಿ ನಡೆದಿದೆ. ಮುಂಬೈನ ಗ್ರಾಂಟ್ ರಸ್ತೆಯಲ್ಲಿರುವ ಕಟ್ಟಡವೊಂದರ ಮುಂಭಾಗದ ಭಾಗ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ನಾಲ್ಕು ಅಂತಸ್ತಿನ ರುಬಿನಿಸಾ ಮಂಜಿಲ್ ಕಟ್ಟಡದ ಎರಡು ಮತ್ತು ಮೂರನೇ ಮಹಡಿಯ ಭಾಗಗಳು ಬಾಲ್ಕನಿಯೊಂದಿಗೆ ಬೆಳಗ್ಗೆ ಕುಸಿದು ಬಿದ್ದಿವೆ. ಕಟ್ಟಡ ಕುಸಿತದ ವೇಳೆ ಸುಮಾರು 35-40 ಮಂದಿ ಕಟ್ಟಡದಲ್ಲಿದ್ದರು. ಅವರೆಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಅವಶೇಷಗಳಡಿಯಲ್ಲಿ ಕಾಲು ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ರಕ್ಷಿಸಲು ಸ್ಥಳೀಯರು ಕಾಂಕ್ರೀಟ್ ಚಪ್ಪಡಿಗಳನ್ನು ಎತ್ತುತ್ತಿರುವ ದೃಶ್ಯಗಳು ಸ್ಥಳದಿಂದ ಕಂಡುಬಂದಿವೆ.

ಕಟ್ಟಡದ ಮುಂಭಾಗದ ಭಾಗವು ಇನ್ನೂ ಅಸ್ಥಿರವಾಗಿ ನೇತಾಡುತ್ತಿದೆ. ಪೊಲೀಸರು ಮತ್ತು ಆಂಬ್ಯುಲೆನ್ಸ್‌ಗಳೊಂದಿಗೆ ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಕಳೆದ ಮೂರು ದಿನಗಳಿಂದ ಮುಂಬೈ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಈ ಕಟ್ಟಡ ಕುಸಿದಿದೆ ಎನ್ನಲಾಗಿದೆ.

ಇನ್ನು ಅವಶೇಷದಡಿಯಲ್ಲಿ ಇನ್ನಷ್ಟು ಜನ ಸಿಲುಕಿರುವ ಬಗ್ಗೆ ಮಾಹಿತಿ ದೊರೆತಿದ್ದು, ಅವರ ರಕ್ಷಣೆಗೆ ಕಾರ್ಯಾಚರಣೆ ಮುಂದುರವರಿದಿದೆ. ಕಟ್ಟಡದಲ್ಲಿದ್ದ ಅನೇಕ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿದೆ. ಇನ್ನು ಈ ಕಟ್ಟಡ ಅತ್ಯಂತ ಹಳೆಯ ಕಟ್ಟಡವಾಗಿರುವ ಕಾರಣ ಅದನ್ನು ಸಂಪೂರ್ಣವಾಗಿ ತೆರವು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ಮುಂಬೈನಲ್ಲಿ ಕಳೆದ ಹಲವು ವಾರಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯವಸ್ತವಾಗಿದೆ. ತಗ್ಗು ಪ್ರದೇಶಗಳಿಗೆ ಶುಕ್ರವಾರ ನೀರು ಹರಿದು ವಾಹನ ಸಂಚಾರಕ್ಕೆ ಭಾರೀ ಅಡ್ಡಿಯಾಗಿತ್ತು.

ಇದನ್ನೂ ಓದಿ: Vinod Dondale: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Manoj Soni: ಅಕ್ರಮ ಆರೋಪದ ಬೆನ್ನಲ್ಲೇ ಯುಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಮನೋಜ್‌ ಸೋನಿ ರಾಜೀನಾಮೆ

Manoj Soni: ಮನೋಜ್‌ ಸೋನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತರೂ ಆಗಿದ್ದಾರೆ. ಮೋದಿ ಅವರು ಗುಜರಾತ್‌ ಸಿಎಂ ಆಗಿದ್ದಾಗ ವಡೋದರಾದಲ್ಲಿರುವ ಎಂಎಸ್‌ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಮನೋಜ್‌ ಸೋನಿ ಅವರನ್ನು ನೇಮಿಸಲಾಗಿತ್ತು. ಕಳೆದ ಜೂನ್‌ನಲ್ಲಿಯೇ ಮನೋಜ್‌ ಸೋನಿ ಅವರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Manoj Soni
Koo

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ನೀಟ್‌ ಯುಜಿ (NEET UG 2024) ಪರೀಕ್ಷೆಯ ಅಕ್ರಮ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿರುವ ಬೆನ್ನಲ್ಲೇ, ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ಅವರು ನಕಲಿ ದಾಖಲೆ ಸೃಷ್ಟಿಸಿ, ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು ಕೂಡ ಅಷ್ಟೇ ಸದ್ದು ಮಾಡುತ್ತಿದೆ. ಇದರಿಂದಾಗಿ ಕೇಂದ್ರ ಲೋಕಸೇವಾ ಆಯೋಗದ (UPSC) ವಿರುದ್ಧ ಆರೋಪಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಯುಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಮನೋಜ್‌ ಸೋನಿ (Manoj Soni) ರಾಜೀನಾಮೆ ನೀಡಿದ್ದಾರೆ.

ಮನೋಜ್‌ ಸೋನಿ ಅವರು ರಾಜೀನಾಮೆ ಸಲ್ಲಿಸಿದ್ದು, ಇದುವರೆಗೆ ಅವರ ರಾಜೀನಾಮೆಯನ್ನು ಅಂಗೀಕಾರ ಆಗಿಲ್ಲ ಎಂಬುದಾಗಿ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಮೂಲಗಳು ತಿಳಿಸಿವೆ ಎಂಬುದಾಗಿ ಎಎನ್‌ಐ ಸುದ್ದಿಸಂಸ್ಥೆಯು ತಿಳಿಸಿದೆ. 2023ರ ಮೇ 16ರಂದು ಯುಪಿಎಸ್‌ಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಮನೋಜ್‌ ಸೋನಿ ಅವರ ಅಧಿಕಾರದ ಅವಧಿಯು 2029ರವರೆಗೆ ಇದೆ. 2017ರಿಂದಲೂ ಇವರು ಯುಪಿಎಸ್‌ಸಿ ಸದಸ್ಯರೂ ಆಗಿದ್ದರು. ಈಗ ವೈಯಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ನೀಡಿದ್ದಾರೆ.

ಮನೋಜ್‌ ಸೋನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತರೂ ಆಗಿದ್ದಾರೆ. ಮೋದಿ ಅವರು ಗುಜರಾತ್‌ ಸಿಎಂ ಆಗಿದ್ದಾಗ ವಡೋದರಾದಲ್ಲಿರುವ ಎಂಎಸ್‌ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಮನೋಜ್‌ ಸೋನಿ ಅವರನ್ನು ನೇಮಿಸಲಾಗಿತ್ತು. ಆಗ ಮನೋಜ್‌ ಸೋನಿ ಅವರಿಗೆ 40 ವರ್ಷ ವಯಸ್ಸು. ಆ ಮೂಲಕ ಅವರು ದೇಶದ ಅತಿ ಕಿರಿಯ ವಯಸ್ಸಿನ ಕುಲಪತಿ ಎಂಬ ಖ್ಯಾತಿಗೂ ಭಾಜನರಾಗಿದ್ದರು. ಕಳೆದ ತಿಂಗಳೇ ಮನೋಜ್‌ ಸೋನಿ ಅವರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ಅವರ ಕಳ್ಳಾಟಗಳು ಬಗೆದಷ್ಟೂ ಹೊರ ಬರುತ್ತಿವೆ. ಅವರು ಅಂಗವೈಕಲ್ಯ ಪ್ರಮಾಣಪತ್ರ ವನ್ನು ಪಡೆಯಲು ಸುಳ್ಳು ವಿಳಾಸ ಮತ್ತು ನಕಲಿ ಪಡಿತರ ಚೀಟಿಯನ್ನು ಬಳಸಿದ್ದಾರೆ ಎನ್ನುವ ಮಾಹಿತಿ ಬಹಿರಂಗಗೊಂಡಿದೆ. ಯಪಿಎಸ್‌ಸಿಯು ಇವರ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ. ಆದರೆ, ಯುಪಿಎಸ್‌ಸಿ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದರ ಹಿನ್ನೆಲೆಯಲ್ಲಿಯೇ ಮನೋಜ್‌ ಸೋನಿ ಅವರು ರಾಜೀನಾಮೆ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: NEET UG 2024 Result: ಕ್ಷೇತ್ರವಾರು ನೀಟ್‌ ಪರೀಕ್ಷಾ ಫಲಿತಾಂಶ ಪ್ರಕಟ

Continue Reading

ದೇಶ

UP Minister Resigns: ಯೋಗಿ ಸರ್ಕಾರದಿಂದ ಒಂದು ವಿಕೆಟ್‌ ಪತನ; ಸಚಿವೆ ಸೋನಮ್‌ ಚಿಶ್ಟಿ ರಾಜೀನಾಮೆ

UP Minister Resigns: ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಸೋನಂ ಕಿನ್ನರ್ ಎಂದೇ ಖ್ಯಾತರಾಗಿರುವ ಚಿಶ್ಟಿ ಅವರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿನ ಹೊಣೆಯನ್ನು ಹೊತ್ತುಕೊಂಡು ತಮ್ಮ ಆತ್ಮಸಾಕ್ಷಿಗೆ ಘಾಸಿಯಾಗಿರುವ ಕಾರಣ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

VISTARANEWS.COM


on

UP Minister Resigns
Koo

ಲಖನೌ:ಲೋಕಸಭೆ ಚುನಾವಣೆ(Lok Sabha Election)ಯಲ್ಲಿ ಹೀನಾಯ ಸೋಲಿನ ಬಳಿಕ ಉತ್ತರಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ದಿನೇ ದಿನೇ ಹೆಚ್ಚಾಗುತ್ತಿದೆ. ಸಿಎಂ ಯೋಗಿ ಆದಿತ್ಯಾನಾಥ್‌(Yogi Adityanath) ಮತ್ತು ಡಿಸಿಎಂ ಕೇಶವ್‌ ಪ್ರಸಾದ್‌ ಮೌರ್ಯ(Keshav Prasad Mourya) ನಡುವಿನ ಭಿನ್ನಮತದ ಬೆನ್ನಲ್ಲೇ ಉತ್ತರಪ್ರದೇಶ ಮಂಗಳಮುಖಿಯರ ಕಲ್ಯಾಣ ಮಂಡಳಿಯ ಉಪಾಧ್ಯಕ್ಷೆ, ಯೋಗಿ ಸರ್ಕಾರದ ಸಚಿವೆ(UP Minister Resigns) ಸೋನಮ್‌ ಚಿಶ್ಟಿ (Sonam Chishti) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ಇಲಾಖೆಯಲ್ಲಿ ಎಗ್ಗಿಲ್ಲದೇ ಭ್ರಷ್ಟಾಚಾರ ನಡೆಯುತ್ತಿದೆ ಮತ್ತು ಅಧಿಕಾರಿಗಳು ತಮ್ಮ ಮಾತು ಕೇಳುತ್ತಿಲ್ಲ ಹೀಗಾಗಿ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಹೇಳಿದ್ದಾರೆ.

ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಸೋನಂ ಕಿನ್ನರ್ ಎಂದೇ ಖ್ಯಾತರಾಗಿರುವ ಚಿಶ್ಟಿ ಅವರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿನ ಹೊಣೆಯನ್ನು ಹೊತ್ತುಕೊಂಡು ತಮ್ಮ ಆತ್ಮಸಾಕ್ಷಿಗೆ ಘಾಸಿಯಾಗಿರುವ ಕಾರಣ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

“ವಿವಿಧ ಜಿಲ್ಲೆಗಳು/ಲೋಕಸಭಾ ಸ್ಥಾನಗಳಲ್ಲಿ ಭಾರತೀಯ ಜನತಾ ಪಕ್ಷದ ಸೋಲು ಮತ್ತು ಕಾರ್ಯಕ್ಷಮತೆಯ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ ಮತ್ತು ನಾನು MoS ಆಗಿ ಪಕ್ಷವನ್ನು ಬಲಪಡಿಸುವಲ್ಲಿ ವಿಫಲಳಾಗಿದ್ದೇನೆ. ನಾನು ರಾಜೀನಾಮೆ ನೀಡುತ್ತಿದ್ದೇನೆ. ಇದರ ನಂತರ, ನಾನು ಬಿಜೆಪಿಯ ಸಂಘಟನೆಯನ್ನು ಬಲಪಡಿಸಲು ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ಮತ್ತು ಯುಪಿ ಬಿಜೆಪಿ ನನಗೆ ನೀಡುವ ಯಾವುದೇ ಜವಾಬ್ದಾರಿಯನ್ನು ಪೂರೈಸುತ್ತೇನೆ ಎಂದು ಬರೆದಿದ್ದಾರೆ.

ನನ್ನ ಇಲಾಖೆಯಲ್ಲಿ ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆದಿರುವ ಕಾರಣ ನಾನು ರಾಜೀನಾಮೆ ನೀಡಿದ್ದೇನೆ. ನನ್ನ ಇಲಾಖೆಗೆ ಬಜೆಟ್ ಮಂಜೂರು ಮಾಡಿದಾಗ, ನನ್ನ ಒಪ್ಪಿಗೆಯಿಲ್ಲದೆ ಕೆಲವು ಕಾರ್ಯಗಳು ನಡೆದಿವೆ. ನನ್ನ ಆಡಳಿತ ಮಂಡಳಿಯಲ್ಲಿ ಸಿಬ್ಬಂದಿ ಇಲ್ಲ,’’ ಎಂದು ಹೇಳಿದರು.

“ಅಖಿಲೇಶ್ ಯಾದವ್ ಆಡಳಿತದಲ್ಲಿ ನನಗೆ ಮನೆ ಮಂಜೂರು ಮಾಡಲಾಗಿತ್ತು ಆದರೆ ಅದರ ನಿರ್ವಹಣೆಗೆ ತಗಲುವ ವೆಚ್ಚಕ್ಕೆ ಭಾರಿ ಬಿಲ್ ನೀಡಲಾಯಿತು. ನನಗೆ ಸರ್ಕಾರದಿಂದ ಮನೆ ಮಂಜೂರು ಮಾಡುವಾಗ, ಅದರ ನಿರ್ವಹಣೆಗೆ ಸರ್ಕಾರವೇ ವೆಚ್ಚವನ್ನು ಭರಿಸಬೇಕು ಎಂದು ಹೇಳಲಾಗಿತ್ತು. ಸರ್ಕಾರದ ಎಸ್ಟೇಟ್ ಇಲಾಖೆಯು ಸಮಾಜ ಕಲ್ಯಾಣ ಇಲಾಖೆ ವೆಚ್ಚವನ್ನು ಭರಿಸುವುದಾಗಿ ಹೇಳುತ್ತಿದೆ ಆದರೆ ಸಮಾಜ ಕಲ್ಯಾಣ ಇಲಾಖೆಯು ಯೋಗಿಜಿ (ಯೋಗಿ ಆದಿತ್ಯನಾಥ್ ಅವರ ಮುಖ್ಯಮಂತ್ರಿ ಕಚೇರಿ ಭರಿಸಲಿದೆ ಎಂದು ಹೇಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ:Vinod Dondale: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣು

Continue Reading

ದೇಶ

Sonu Sood : ಸೋನು ಸೂದ್​, ಕಂಗನಾ ರಣಾವತ್​ ‘ಎಂಜಲು ರೊಟ್ಟಿಯ’ ಗಲಾಟೆ

Sonu Sood : ಕನ್ವರ್ ಯಾತ್ರೆಯ ವಾರ್ಷಿಕ ತೀರ್ಥಯಾತ್ರೆಯನ್ನು ಶಿವನ ಭಕ್ತರು ಭಕ್ತಿಯಿಂದ ಆಚರಿಸುತ್ತಾರೆ. ಯಾತ್ರಾ ಮಾರ್ಗದಲ್ಲಿರುವ ಆಹಾರ ಮಳಿಗೆಯರುವ ತಮ್ಮ ಹೆಸರುಗಳನ್ನು ಪ್ರದರ್ಶಿಸುವಂತೆ ಯುಪಿ ಸರ್ಕಾರ ಆದೇಶ ನೀಡಿತ್ತು. ಮೊದಲಿಗೆ, ಈ ಆದೇಶವು ಮುಜಾಫರ್ ನಗರ ಪ್ರದೇಶಕ್ಕೆ ಮಾತ್ರ ಅನ್ವಯಿಸುತ್ತಿತ್ತು, ಈಗ ಇಡೀ ಯುಪಿ ಮತ್ತು ಉತ್ತರಾಖಂಡ ರಾಜ್ಯವು ಅಂಗಡಿ ಮಾಲೀಕರು ಮತ್ತು ಮಾರಾಟಗಾರರಿಗೆ ನಿಜವಾದ ಹೆಸರುಗಳು ಮತ್ತು ಪರವಾನಗಿಗಳ ಪ್ರದರ್ಶನ ಮಾಡುವಂತೆ ಹೇಳಿದೆ.

VISTARANEWS.COM


on

Sonu Sood
Koo

ಬೆಂಗಳೂರು: ಉತ್ತರಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್​ ಕನ್ವರ್ ಯಾತ್ರೆ ಸಾಗುವ ದಾರಿಯಲ್ಲಿರುವ ಅಂಗಡಿಗಳ ಹೆಸರನ್ನು ಪ್ರದರ್ಶನ ಮಾಡಬೇಕು ಎಂದು ಆದೇಶ ಮಾಡಿರುವ ವಿಚಾರದ ಬಗ್ಗೆ ನಟ ಸೋನು ಸೂದ್ (Sonu Sood) ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರದಲ್ಲಿ ನಟಿ ಹಾಗೂ ಸಂಸದೆ ಕಂಗನಾ ರಣಾವತ್​ ಹಾಗೂ ಸೋನು ಸೂದ್​​ ಸೋಶಿಯಲ್ ಮೀಡಿಯಾದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ.

ಕನ್ವರ್ ಯಾತ್ರೆಯ ವಾರ್ಷಿಕ ತೀರ್ಥಯಾತ್ರೆಯನ್ನು ಶಿವನ ಭಕ್ತರು ಭಕ್ತಿಯಿಂದ ಆಚರಿಸುತ್ತಾರೆ. ಯಾತ್ರಾ ಮಾರ್ಗದಲ್ಲಿರುವ ಆಹಾರ ಮಳಿಗೆಯರುವ ತಮ್ಮ ಹೆಸರುಗಳನ್ನು ಪ್ರದರ್ಶಿಸುವಂತೆ ಯುಪಿ ಸರ್ಕಾರ ಆದೇಶ ನೀಡಿತ್ತು. ಮೊದಲಿಗೆ, ಈ ಆದೇಶವು ಮುಜಾಫರ್ ನಗರ ಪ್ರದೇಶಕ್ಕೆ ಮಾತ್ರ ಅನ್ವಯಿಸುತ್ತಿತ್ತು, ಈಗ ಇಡೀ ಯುಪಿ ಮತ್ತು ಉತ್ತರಾಖಂಡ ರಾಜ್ಯವು ಅಂಗಡಿ ಮಾಲೀಕರು ಮತ್ತು ಮಾರಾಟಗಾರರಿಗೆ ನಿಜವಾದ ಹೆಸರುಗಳು ಮತ್ತು ಪರವಾನಗಿಗಳ ಪ್ರದರ್ಶನ ಮಾಡುವಂತೆ ಹೇಳಿದೆ.

ಈ ಬಗ್ಗೆ ನಟ ಸೋನು ಸೂದ್ ಅವರ ಕಾಮೆಂಟ್​ಗಳು ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳನ್ನು ಕೆರಳಿಸಿತು. ಈ ಚರ್ಚೆಯು ಧರ್ಮ, ಸಾರ್ವಜನಿಕ ಆರೋಗ್ಯ ಮತ್ತು ಜಾತ್ಯತೀತತೆ ಕುರಿತು ಚರ್ಚೆಗೆ ಕಾರಣವಾಯಿತು.

ಧರ್ಮದ ಮೇಲೆ ಮಾನವೀಯತೆ: ಸೋನು ಸೂದ್

ನಟ ಸೋನು ಸೂದ್ ಕನ್ವರ್ ಯಾತ್ರೆ ಕುರಿತ ನಿರ್ದೇಶನದ ಬಗ್ಗೆ ಹೇಳಿಕೆ ನೀಡಿ ಮೊದಲ ವಿವಾದ ಹುಟ್ಟುಹಾಕಿದರು. ಭಾರತೀಯರು ಮಾನವೀಯತೆಯೊಂದಿಗೆ ಮಾತ್ರ ಗುರುತಿಸಿಕೊಳ್ಳಬೇಕು ಎಂದು ಅವರು ಎಕ್ಸ್​ನಲ್ಲಿ ಸಲಹೆ ನೀಡಿದರು. ಪ್ರತಿ ಅಂಗಡಿಯ ಮುಂದೆ “ಮಾನವೀಯತೆ” ಎಂದು ನಾಮಫಲಕ ಹಾಕಬೇಕು. ಆಹಾರ ಮಾರಾಟಗಾರರು ತಮ್ಮ ಹೆಸರುಗಳನ್ನು ಪ್ರದರ್ಶಿಸುವ ಸರ್ಕಾರದ ನಿರ್ಧಾರವು ಅನಗತ್ಯ ಮತ್ತು ಸಮಾಜ ವಿಭಜಕ ಎಂದು ಹೇಳಿದ್ದರು.

ಸೋನು ಸೂದ್ ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಕೆಲವರು ಅವರನ್ನು “ಜಾತ್ಯತೀತ” ಭಾವನೆಯನ್ನು ಶ್ಲಾಘಿಸಿದರೆ, ಇನ್ನುಳಿದವರು ಅವರನ್ನು ಖಂಡಿಸಿದರು. ಮಾನವೀಯ ಕೆಲಸವನ್ನು ಮಾತ್ರ ಮಾಡಿ. ಧರ್ಮದ ವಿಚಾರದಲ್ಲ ಮೂಗು ತೂರಿಸಬೇಡಿ ಎಂದು ಬೈದರು. ದೇಶದ ನಾನಾ ಭಾಗಗಳಲ್ಲಿ ಆಹಾರ ಮಾರಾಟಗಾರರು ನಡೆಸುವ ಕುಕೃತ್ಯಗಳನ್ನು ವಿಡಿಯೊ ಸಮೇತ ನೀಡಿ ಸೋನು ಅವರನ್ನು ತರಾಟೆಗೆ ತೆಗೆದುಕೊಂಡರು.

ಕಂಗಾನಾ ಪ್ರತಿಕ್ರಿಯೆ ಏನು?

ಸೋನು ಸೂದ್ ಹೇಳಿಕೆಗೆ ನಟಿ ಕಂಗನಾ ರಣಾವತ್​ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಮಾನವೀಯತೆ” ಏಕೈಕ ಆಧಾರವಾಗಿದ್ದರೆ, ಯಾವುದೇ ಅಂಗಡಿಗೆ “ಹಲಾಲ್” ಮಾರಾಟ ಮಾಡಲು ಅನುಮತಿಸಬಾರದು . ಹಲಾಲ್​ ಬೋರ್ಡ್​ ಬದಲು ಮಾನವೀಯತೆ ಬೋರ್ಡ್​ ಇರಲಿ ಎಂದು ಹೇಳಿಕೆ ಕೊಟ್ಟರು. ಧಾರ್ಮಿಕ ಆಧಾರದ ಮೇಲೆ ತಾರತಮ್ಯ ಮಾಡಲು ತಮ್ಮ ಆಹಾರವನ್ನು ಹಲಾಲ್​ ಎಂದು ಲೇಬಲ್ ಮಾಡುತ್ತವೆ ಎಂದು ಕಂಗನಾ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ: Harbhajan Singh: ಧೋನಿ-ರಿಜ್ವಾನ್ ನಡುವೆ ಹೋಲಿಕೆ ಮಾಡಿದ ಪಾಕ್ ಪತ್ರಕರ್ತನಿಗೆ ಚಳಿ ಬಿಡಿಸಿದ ಹರ್ಭಜನ್

ಸೋನು ಸೂದ್ ಅವರ ಮೊದಲ ಕಾಮೆಂಟ್ ಆನ್ ಲೈನ್ ನಲ್ಲಿ ಬಿರುಗಾಳಿ ಎಬ್ಬಿಸಿತು. ಆಹಾರ ಮಾರಾಟಗಾರರು ಉಗುಳುವಂತಹ ಅಶುದ್ಧ ಅಭ್ಯಾಸಗಳಲ್ಲಿ ತೊಡಗಿರುವುದನ್ನು ತೋರಿಸುವ ವಿವಿಧ ವಿಡಿಯೊಗಳನ್ನು ಸೋನು ಸೂದ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ಕನ್ವರ್ ಯಾತ್ರಾರ್ಥಿಗಳು ಸೇವಿಸುವ ಆಹಾರದ ಶುದ್ಧತೆ ಕಾಪಾಡಿಕೊಳ್ಳುವುದು ಅಗತ್ಯ ಎಂದು ಹೇಳಿದ್ದಾರೆ.

ಅನಗತ್ಯವಾಗಿ ರಾಮನನ್ನು ಎಳೆದು ತಂದ ಸೋನು ಸೂದ್

ತಮ್ಮ ನಿಲುವನ್ನು ಸಮರ್ಥಿಸಿಕೊಳ್ಳುವ ಪ್ರಯತ್ನದಲ್ಲಿ ಸೋನು ಸೂದ್ ಎರಡನೇ ಕಾಮೆಂಟ್ ಕಳುಹಿಸಿದ್ದಾರೆ. ಭಗವಾನ್ ರಾಮ ತಮ್ಮ ಭಕ್ತಿ ಶಬರಿಯಿಂದ ಹಣ್ಣನ್ನು ಸ್ವೀಕರಿಸಿದ ಉದಾಹರಣೆಯನ್ನು ಅವರು ಉಲ್ಲೇಖಿಸಿದ್ದಾರೆ. ಭಗವಾನ್ ರಾಮನಿಗೆ ಶಬರಿ ಹಣ್ಣುಗಳನ್ನು ನೀಡುವ ವೇಳೆ ಕಚ್ಚಿ ನೋಡಿದ್ದರು ಎಂದು ಕಾಮೆಂಟ್ ಮಾಡುವ ಮೂಲಕ ಆಹಾರದ ಮೇಲೆ ಉಗುಳುವ ಕುಕೃತ್ಯವನ್ನು ಸಮರ್ಥಿಸಿಕೊಂಡಿದ್ದರು. ಅಲ್ಲದೇ ಆಹಾರದ ವಿಚಾರದಲ್ಲಿ ಸಹಿಷ್ಣುಗಳಾಗಬೇಕು ಎಂದು ಸಲಹೆ ನೀಡಿದರು.

ಶ್ರೀರಾಮನ ಹೆಸರನ್ನು ಅನಗತ್ಯವಾಗಿ ಎಳೆದು ತಂದ ಬಗ್ಗೆ ಸೋನು ಸೂದ್​ಗೆ ಮತ್ತೆ ನೆಟ್ಟಿಗರು ತಪರಾಕಿ ಕೊಟ್ಟರು. ಮುಂದೆ ಸೋನು ಜಿ ಅವರು ದೇವರು ಮತ್ತು ಧರ್ಮದ ಬಗ್ಗೆ ತಮ್ಮ ವೈಯಕ್ತಿಕ ಸಂಶೋಧನೆಗಳ ಆಧಾರದ ಮೇಲೆ ತಮ್ಮದೇ ಆದ ರಾಮಾಯಣವನ್ನು ನಿರ್ದೇಶಿಸಲಿದ್ದಾರೆ. ಬಾಲಿವುಡ್​ನಲ್ಲಿ ಮತ್ತೊಂದು ರಾಮಾಯಣ ಬರಲಿದೆ ಎಂದು ಕಂಗಾನಾ ರಣಾವತ್​ ಮತ್ತೊಂದು ಬಾರಿ ಹೇಳಿದರು.

Continue Reading

ದೇಶ

Union Budget 2024: ಸ್ಟಾಂಡರ್ಡ್‌ ಡಿಡಕ್ಷನ್‌, 80 ಸಿ ಮೊತ್ತ ಹೆಚ್ಚಳ; ಬಜೆಟ್‌ನಲ್ಲಿ ಏನೆಲ್ಲ ತರಿಗೆ ರಿಲೀಫ್?

Union Budget 2024: ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಜುಲೈ 23ರಂದು ದಿನಗಳಲ್ಲಿ ಬಜೆಟ್‌ ಮಂಡನೆ ಮಾಡಲಿದ್ದಾರೆ. ಇನ್ನು, ಬಜೆಟ್‌ನಲ್ಲಿ ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಹೊಸ ತೆರಿಗೆ ಸ್ಲ್ಯಾಬ್‌ಅನ್ನು ಪರಿಚಯಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇದರ ಜತೆಗೆ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನೂ ಏರಿಕೆ ಮಾಡುವ ನಿರೀಕ್ಷೆ ಇದೆ. ಬಜೆಟ್‌ನಲ್ಲಿ ತೆರಿಗೆ ಕುರಿತ ನಿರೀಕ್ಷೆಗಳ ಮಾಹಿತಿ ಇಲ್ಲಿದೆ.

VISTARANEWS.COM


on

Union Budget 2024
Koo

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು 2024-2025ನೇ ಸಾಲಿನ ಬಜೆಟ್‌ ಮಂಡಿಸಲು ಕ್ಷಣಗಣನೆ ಆರಂಭವಾಗಿದೆ. ಜುಲೈ 23ರಂದು ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡನೆ (Union Budget 2024) ಮಾಡಲಿದ್ದು, ಶ್ರೀಮಂತರಿಂದ ಹಿಡಿದು ಬಡವರವರೆಗೆ ಎಲ್ಲ ವರ್ಗದವರ ನಿರೀಕ್ಷೆಗಳು ಹೆಚ್ಚಾಗಿವೆ. ಅದರಲ್ಲೂ, ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಹೊಸ ತೆರಿಗೆ (Income Tax) ಸ್ಲ್ಯಾಬ್‌ಅನ್ನು ಪರಿಚಯಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇದರ ಜತೆಗೆ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನೂ ಏರಿಕೆ ಮಾಡುವ ನಿರೀಕ್ಷೆ ಇದೆ. ಬಜೆಟ್‌ನಲ್ಲಿ ತೆರಿಗೆ ವಿಚಾರಕ್ಕೆ ಸಂಬಂಧಿಸಿದ ನಿರೀಕ್ಷೆಗಳು ಏನು ಎಂಬುದರ ಮಾಹಿತಿ ಇಲ್ಲಿದೆ.

ಸೆಕ್ಷನ್‌ 80 ಸಿ ಅಡಿಯಲ್ಲಿ ವಿನಾಯಿತಿ ಮೊತ್ತ ಹೆಚ್ಚಳ

ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್‌ 80 ಸಿ ಅಡಿಯಲ್ಲಿ ಸಂಬಳದಾರರು ಹೂಡಿಕೆ ಹಾಗೂ ವೆಚ್ಚಗಳ ಮೇಲೆ ವಾರ್ಷಿಕವಾಗಿ 1.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಪಡೆಯುತ್ತಾರೆ. ಗೃಹ ಸಾಲದ ಅಸಲು, ಬಡ್ಡಿ, ಆರೋಗ್ಯ ವಿಮೆಯ ಪ್ರೀಮಿಯಂ ಮೊತ್ತ, ಪಿಪಿಎಫ್‌ ಹೂಡಿಕೆ ಸೇರಿ ಹಲವು ರೀತಿಯ ಹೂಡಿಕೆಗಳು ಹಾಗೂ ವೆಚ್ಚಗಳ ಮೂಲಕ 1.5 ಲಕ್ಷರೂ.ಗೆ ತೆರಿಗೆ ವಿನಾಯಿತಿ ಪಡೆಯಬಹುದಾಗಿದೆ. ಈ ಮೊತ್ತವನ್ನು ಕೇಂದ್ರ ಸರ್ಕಾರವು 1.5 ಲಕ್ಷ ರೂ.ನಿಂದ 2 ಲಕ್ಷ ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಇದರಿಂದ ಮಧ್ಯಮ ವರ್ಗದವರಿಗೆ ಭಾರಿ ಅನುಕೂಲವಾಗಲಿದೆ.

ಹೊಸ ತೆರಿಗೆಯ ಸ್ಲ್ಯಾ ಬ್‌ ಹೀಗಿದೆ

ಆದಾಯವಿಧಿಸುವ ತೆರಿಗೆ
0-3 ಲಕ್ಷ ರೂ.ತೆರಿಗೆ ಇರಲ್ಲ
3-6 ಲಕ್ಷ ರೂ.5%
6-9 ಲಕ್ಷ ರೂ.10%
9-12 ಲಕ್ಷ ರೂ.15%
12-15 ಲಕ್ಷ ರೂ.20%
15 ಲಕ್ಷ ರೂ.ಗಿಂತ ಹೆಚ್ಚು30%

ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತದ ಹೆಚ್ಚಳ

ಸಂಬಳ ಪಡೆಯುವ ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನು 70 ಸಾವಿರ ರೂ. ಅಥವಾ ಒಂದು ಲಕ್ಷ ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸದ್ಯ, ಹೊಸ ಹಾಗೂ ಹಳೆಯ ತೆರಿಗೆ ಪದ್ಧತಿಯಲ್ಲೂ 50 ಸಾವಿರ ರೂ. ಸ್ಟಾಂಡರ್ಡ್‌ ಡಿಡಕ್ಷನ್‌ ಇದೆ. ಇದನ್ನು, 1 ಲಕ್ಷ ರೂ.ಗೆ ಏರಿಕೆ ಮಾಡಿದರೆ, ಸಂಬಳದಾರರು ಹೆಚ್ಚಿನ ತೆರಿಗೆ ಹಣವನ್ನು ಉಳಿತಾಯ ಮಾಡಬಹುದಾಗಿದೆ. ಹಣದುಬ್ಬರ ಏರಿಕೆ ಸೇರಿ ಹಲವು ಕಾರಣಗಳಿಂದಾಗಿ ಸ್ಟಾಂಡರ್ಡ್‌ ಡಿಡಕ್ಷನ್‌ ಅಥವಾ ತೆರಿಗೆ ವಿನಾಯಿತಿ ಮೊತ್ತವನ್ನು ಏರಿಕೆ ಮಾಡಬೇಕು ಎಂಬುದು ಬೇಡಿಕೆಯಾಗಿದೆ. ಹಾಗಾಗಿ, ಮೊತ್ತವನ್ನು ಏರಿಕೆ ಮಾಡಲು ನಿರ್ಮಲಾ ಸೀತಾರಾಮನ್‌ ಅವರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಸ್ಟಾಂಡರ್ಡ್‌ ಡಿಡಕ್ಷನ್‌ ಎಂಬುದು ತೆರಿಗೆ ವಿನಾಯಿತಿ ಆಗಿದ್ದು, ಇದಕ್ಕಾಗಿ ನೌಕರರು ಹೂಡಿಕೆ ಮಾಡಬೇಕಿಲ್ಲ. ತೆರಿಗೆ ಪಾವತಿಸಲು ಅರ್ಹವಿರುವವರು ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತದ ಅಡಿಯಲ್ಲಿ ವಿನಾಯಿತಿ ಪಡೆಯಲಿದ್ದಾರೆ.

ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಸಾಧ್ಯತೆ

“ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಹಳೆಯ ತೆರಿಗೆ ಪದ್ಧತಿಯಲ್ಲಿ 2.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಇದ್ದು, ಈ ಮೊತ್ತವನ್ನು 5 ಲಕ್ಷ ರೂ.ಗೆ ಏರಿಕೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ. ಇವುಗಳ ಜತೆಗೆ ನೌಕರರ ಮನೆ ಬಾಡಿಗೆ ಭತ್ಯೆ (HRA) ಹಾಗೂ 80 ಟಿಟಿಎ ಅಡಿಯಲ್ಲಿ ಮೊತ್ತವನ್ನು 10 ಸಾವಿರ ರೂ.ನಿಂದ 50 ಸಾವಿರ ರೂ.ಗೆ ಏರಿಕೆ ಮಾಡುವುದು ಸೇರಿ ಹಲವು ನಿರೀಕ್ಷೆಗಳಿವೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ: Union Budget 2024: ಬಜೆಟ್‌ಗೂ ಮೊದಲು, ನಂತರ ಹೂಡಿಕೆ ಮಾಡುವುದು ಲಾಭವೇ? ತಜ್ಞರು ಹೇಳೋದಿಷ್ಟು

Continue Reading
Advertisement
Viral Video
ಕ್ರೈಂ11 mins ago

Viral Video: ಅತೀ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ; ಮೇಲೆ ಹಾರಿ ನೆಲಕ್ಕೆ ಅಪ್ಪಳಿಸಿದ ದಂಪತಿ

CM Siddaramaiah
ರಾಜಕೀಯ35 mins ago

CM Siddaramaiah: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ

Monsoon Fashion
ಫ್ಯಾಷನ್41 mins ago

Monsoon Fashion: ಮಾನ್ಸೂನ್‌ಗೆ ತಕ್ಕಂತೆ ಬದಲಾದ ಸೂಪರ್‌ ಮಾಡೆಲ್‌ ಸಂತೋಷ್‌ ರೆಡ್ಡಿ ಫ್ಯಾಷನ್‌!

karnataka rain
ಮಳೆ44 mins ago

Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

Paris Olympic 2024:
ಕ್ರೀಡೆ47 mins ago

Paris Olympic 2024 : ಒಲಿಂಪಿಕ್ ಪದಕ ಗೆದ್ದ ಭಾರತದ ಮೊದಲ ಮಹಿಳಾ ಅಥ್ಲೀಟ್​ ಕರ್ಣಂ ಮಲ್ಲೇಶ್ವರಿ ಸಾಧನೆಯ ವಿವರ ಇಲ್ಲಿದೆ

Manoj Soni
ದೇಶ1 hour ago

Manoj Soni: ಅಕ್ರಮ ಆರೋಪದ ಬೆನ್ನಲ್ಲೇ ಯುಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಮನೋಜ್‌ ಸೋನಿ ರಾಜೀನಾಮೆ

ಕರ್ನಾಟಕ1 hour ago

CM Siddaramaiah: ಅಧಿಕಾರ ದುರುಪಯೋಗ ಆರೋಪ; ಸಿಎಂ ವಿರುದ್ಧ ಲೋಕಾಯುಕ್ತಕ್ಕೆ ದೂರು

UP Minister Resigns
ದೇಶ1 hour ago

UP Minister Resigns: ಯೋಗಿ ಸರ್ಕಾರದಿಂದ ಒಂದು ವಿಕೆಟ್‌ ಪತನ; ಸಚಿವೆ ಸೋನಮ್‌ ಚಿಶ್ಟಿ ರಾಜೀನಾಮೆ

Belgavi News
ಬೆಳಗಾವಿ1 hour ago

Belgavi News : ಬೆಳಗಾವಿಯಲ್ಲಿ ಮದ್ದು ಕುಟ್ಟುವಾಗ ಭಾರಿ ಸ್ಫೋಟ; ವ್ಯಕ್ತಿ ಸಜೀವ ದಹನ

Sonu Sood
ದೇಶ2 hours ago

Sonu Sood : ಸೋನು ಸೂದ್​, ಕಂಗನಾ ರಣಾವತ್​ ‘ಎಂಜಲು ರೊಟ್ಟಿಯ’ ಗಲಾಟೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ7 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌