Site icon Vistara News

39 ಐಟಿಬಿಪಿ ಸಿಬ್ಬಂದಿ ಪ್ರಯಾಣ ಮಾಡುತ್ತಿದ್ದ ಬಸ್​ ಅಪಘಾತ; 10 ಸೈನಿಕರ ದುರ್ಮರಣ

Bus

ಶ್ರೀನಗರ: 37 ಇಂಡೋ ಟಿಬೆಟಿಯನ್​ ಬಾರ್ಡರ್​ ಪೊಲೀಸ್ (ITBP jawans)​ ಮತ್ತು ಇಬ್ಬರು ಜಮ್ಮು-ಕಾಶ್ಮೀರ ಪೊಲೀಸರು, ಒಟ್ಟು 39 ಜನ ಪ್ರಯಾಣ ಮಾಡುತ್ತಿದ್ದ ಬಸ್​ವೊಂದು ಜಮ್ಮು-ಕಾಶ್ಮೀರದ ಪಹಲ್ಗಾಮ್​​ನಲ್ಲಿ ನದಿ ಕಣಿವೆಗೆ ಬಿದ್ದಿದೆ. ಈ ದುರಂತದಲ್ಲಿ ಐಟಿಬಿಪಿಯ 10 ಸಿಬ್ಬಂದಿ ದುರ್ಮರಣಕ್ಕೀಡಾಗಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿದೆ. ಅಮರನಾಥ ಯಾತ್ರೆ ಸಂಚರಿಸುವ ಮಾರ್ಗಗಳಲ್ಲಿ ಕರ್ತವ್ಯದಲ್ಲಿದ್ದ ಇವರು ಜಮ್ಮು-ಕಾಶ್ಮೀರ ಪೊಲೀಸ್​ ಡಿಪಾರ್ಟ್​ಮೆಂಟ್​ಗೆ ಸೇರಿದ ಬಸ್​ನಲ್ಲಿ ಚಂದನ್​ವಾರಿಯಿಂದ ಶ್ರೀನಗರ ಪೊಲೀಸ್ ಕಂಟ್ರೋಲ್​ ರೂಮ್​​​ಗೆ ತೆರಳುತ್ತಿದ್ದರು. ಬಸ್​ನ ಬ್ರೇಕ್​ ಫೇಲ್​ ಆಗಿ ಈ ದುರ್ಘಟನೆ ನಡೆದಿದೆ ಎಂದು ಐಟಿಬಿಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಬಗ್ಗೆ ಕಾಶ್ಮೀರ ವಲಯ ಪೊಲೀಸ್ ಟ್ವೀಟ್ ಮಾಡಿದ್ದು, ‘ಅನಂತ್​​ನಾಗ್​ ಜಿಲ್ಲೆಯ ಪಹಲ್ಗಾಮ್​ನಲ್ಲಿರುವ ಚಂದನ್​ವಾರಿ ಎಂಬಲ್ಲಿ ಪೊಲೀಸ್​ ವಾಹನ ಅಪಘಾತಕ್ಕೀಡಾಗಿದೆ. ಇದರಲ್ಲಿ ಐಟಿಬಿಪಿಯ ಆರು ಜವಾನರು ಮೃತಪಟ್ಟಿದ್ದಾರೆ. ಇನ್ನೂ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲ್ಲರನ್ನೂ ಬಸ್​​ನಿಂದ ಹೊರಗೆ ತೆಗೆದು, ಶ್ರೀನಗರದಲ್ಲಿರುವ ಸೇನಾ ಆಸ್ಪತ್ರೆಗೆ ಏರ್​ಲಿಫ್ಟ್ ಮಾಡಲಾಗಿದೆ. ತ್ವರಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ, ಬ್ಯಾಂಕ್ ಮ್ಯಾನೇಜರ್‌ ಬರ್ಬರ ಹತ್ಯೆ

Exit mobile version