BYJU's Debt: ಹೆಚ್ಚಿದ ಸಾಲದ ಸುಳಿ; ಬೈಜೂಸ್‌ ಅಂಗಸಂಸ್ಥೆ ಈಗ ಸಾಲ ಕೊಟ್ಟವರ ಪಾಲು! - Vistara News

ದೇಶ

BYJU’s Debt: ಹೆಚ್ಚಿದ ಸಾಲದ ಸುಳಿ; ಬೈಜೂಸ್‌ ಅಂಗಸಂಸ್ಥೆ ಈಗ ಸಾಲ ಕೊಟ್ಟವರ ಪಾಲು!

BYJU’s Debt: ಕೊರೊನಾ ಬಿಕ್ಕಟ್ಟಿನ ಬಳಿಕ ಬೈಜೂಸ್‌ ಕಂಪನಿಯ ಸಾಲದ ಪ್ರಮಾಣವು ಜಾಸ್ತಿಯಾಗಿದೆ. ಸಾಲದ ಬಡ್ಡಿ ಕಟ್ಟಲು ಕೂಡ ಕಂಪನಿಗೆ ಕಷ್ಟವಾಗುತ್ತಿದೆ. ಇದರಿಂದಾಗಿ ಕಂಪನಿಯ ಘಟಕವೊಂದು ಸಾಲ ಕೊಟ್ಟವರ ಪಾಲಾಗಿದೆ.

VISTARANEWS.COM


on

Byjus CEO Raveendran
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶದ ಪ್ರಮುಖ ಎಡ್‌ಟೆಕ್‌ (EdTech) ಕಂಪನಿಯಾಗಿರುವ, ಒಂದು ಕಾಲದ ಬಹುಬೇಡಿಕೆಯ ಹಾಗೂ ಖ್ಯಾತಿಯ ಟೆಕ್ನಾಲಜಿ ಸ್ಟಾರ್ಟಪ್‌ ಆಗಿದ್ದ ಬೈಜೂಸ್‌ ಕಂಪನಿಯು ಸಾಲದ ಸುಳಿಗೆ (BYJU’s Debt) ಸಿಲುಕಿದೆ. ಇದೇ ಸಾಲದ ಸುಳಿಯಿಂದಾಗಿ ಬೈಜೂಸ್‌ ಕಂಪನಿ ಈಗ ತನ್ನ ಅಂಗಸಂಸ್ಥೆಯಾದ ಬೈಜೂಸ್‌ ಅಲ್ಫಾ ಕಂಪನಿಯನ್ನು ಸಾಲ ನೀಡಬೇಕಾಗಿದೆ. ಅಮೆರಿಕದ ಡೆಲಾವೇರ್‌ ಕೋರ್ಟ್‌ (Delaware Court) ಈ ಕುರಿತು ಆದೇಶ ಹೊರಡಿಸಿದೆ.

ಬೈಜೂಸ್‌ ಕಂಪನಿಯು 1.2 ಶತಕೋಟಿ ಡಾಲರ್‌ (ಸುಮಾರು 10 ಸಾವಿರ ಕೋಟಿ ರೂ.) ಸಾಲವನ್ನು ಹೊಂದಿದ್ದು, ಮೂರು ತಿಂಗಳಿಗೆ ಸುಮಾರು 33 ಕೋಟಿ ರೂ. ಬಡ್ಡಿಯನ್ನೇ ಕಟ್ಟಬೇಕಿದೆ. ಬಡ್ಡಿ ಕಟ್ಟಲು ಕೂಡ ಆಗದ ಪರಿಸ್ಥಿತಿ ಎದುರಾಗಿದೆ. ಇನ್ನು ಬೈಜೂಸ್‌ ಕಂಪನಿಗೆ ಸಾಲ ಕೊಟ್ಟಿರುವ ರೆಡ್‌ವುಡ್‌ ಇನ್ವೆಸ್ಟ್‌ಮೆಂಟ್ಸ್‌ ಎಲ್‌ಎಲ್‌ಸಿ ಹಾಗೂ ಸಿಲ್ವರ್‌ ಪಾಯಿಂಟ್‌ ಕ್ಯಾಪಿಎಲ್‌ ಎಲ್‌ಪಿ ಕಂಪನಿಗಳು ಕೋರ್ಟ್‌ ಮೊರೆ ಹೋಗಿದ್ದವು. ಈಗ ಅತಿಯಾದ ಸಾಲ ಇರುವ ಕಾರಣ ಬೈಜೂಸ್‌ ಅಲ್ಫಾ ಕಂಪನಿಯ ನಿಯಂತ್ರಣವನ್ನು ಸಾಲ ಕೊಟ್ಟವರಿಗೆ ನೀಡಿ ಡೆಲಾವೇರ್‌ ಚಾನ್ಸರಿ ಕೋರ್ಟ್‌ ನ್ಯಾಯಾಧೀಶ ಮಾರ್ಗನ್‌ ಜುರ್ನ್‌ ಆದೇಶ ಹೊರಡಿಸಿದ್ದಾರೆ.

byjus

ಬೈಜೂಸ್‌ ಸಂಸ್ಥಾಪಕ ಬೈಜು ರವೀಂದ್ರನ್‌ ಅವರ ಸಹೋದರ ರಿಜು ರವೀಂದ್ರನ್‌ ಅವರು ಬೈಜೂಸ್‌ ಅಲ್ಫಾ ಮಂಡಳಿ ಸದಸ್ಯರಾಗಿದ್ದರು. ಆದರೆ, ಸಾಲ ಕೊಟ್ಟಿರುವ ಕಂಪನಿಗಳು ರಿಜು ರವೀಂದ್ರನ್‌ ಬದಲಾಗಿ ಟಿಮೋಥಿ ಪೋಹ್ಲ್‌ ಎಂಬುವರನ್ನು ಮಂಡಳಿ ಸದಸ್ಯರಾಗಿದ್ದರು. ಇದನ್ನು ಪ್ರಶ್ನಿಸಿ ಬೈಜೂಸ್‌ ಸಲ್ಲಿಸಿದ್ದ ಅರ್ಜಿಯನ್ನು ಡೆಲಾವೇರ್‌ ಕೋರ್ಟ್‌ ನಿರಾಕರಿಸಿದೆ. ಹಾಗೆಯೇ, ಸಾಲದ ಹಿನ್ನೆಲೆಯಲ್ಲಿ ಟಿಮೋಥಿ ಪೋಹ್ಲ್‌ ಅವರೇ ಈಗ ಬೈಜೂಸ್‌ ಅಲ್ಫಾದ ಏಕೈಕ ನಿರ್ದೇಶಕರಾಗಿದ್ದಾರೆ ಎಂದು ಆದೇಶಿಸಿದೆ.

ಇದನ್ನೂ ಓದಿ: BYJU’s Layoffs: ಮತ್ತೆ 5500 ಉದ್ಯೋಗ ಕಡಿತಕ್ಕೆ ಮುಂದಾದ ಬೈಜೂಸ್ ಕಂಪನಿ

ಸಾವಿರಾರು ಕೋಟಿ ರೂ. ಸಾಲದ ಸುಳಿಗೆ ಸಿಲುಕಿರುವ ಬೆಂಗಳೂರು ಮೂಲದ ಬೈಜೂಸ್‌ ಕಂಪನಿಯು ಈಗಾಗಲೇ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದೆ. ಅಲ್ಲದೆ, ಬೆಂಗಳೂರಿನಲ್ಲಿದ್ದ ಕಚೇರಿಯನ್ನೂ ತೆರವುಗೊಳಿಸಿದೆ. ಬೈಜೂಸ್‌ ಬೆಂಗಳೂರಿನ ಕಲ್ಯಾಣಿ ಟೆಕ್‌ ಪಾರ್ಕ್‌ನಲ್ಲಿರುವ 5.58 ಲಕ್ಷ ಚದರ ಅಡಿ ಕಚೇರಿ ಸ್ಥಳವನ್ನು ತೆರವುಗೊಳಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉದ್ಯೋಗಿಗಳನ್ನು ಕಡಿತಗೊಳಿಸುವ ಚಿಂತನೆಯೂ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Equity Market: ಕಳೆದ 6 ತಿಂಗಳಲ್ಲಿ ಬಾಂಬ್‌ ಸ್ಟಾಕ್‌ ಎಕ್ಸ್‌ಚೇಂಜ್‌ (BSE) ಪಟ್ಟಿಯಲ್ಲಿರುವ ಕಂಪನಿಗಳು 1 ಲಕ್ಷ ಕೋಟಿ ಡಾಲರ್‌ ಗಳಿಸಿವೆ ಎಂಬುದಾಗಿ ತಿಳಿದುಬಂದಿದೆ. ಇದರೊಂದಿಗೆ ಭಾರತದ ಈಕ್ವಿಟಿ ಮಾರುಕಟ್ಟೆಯ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ದಾಟುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾದಂತಾಗಿದೆ. ಜೂನ್‌ 4ರ ಬಳಿಕ ದೇಶದ ಷೇರು ಮಾರುಕಟ್ಟೆಯನ್ನು ನಿಯಂತ್ರಿಸುವುದು ಕಷ್ಟ ಎಂಬುದಾಗಿ ಮೋದಿ ಹೇಳಿರುವ ಬೆನ್ನಲ್ಲೇ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿದೆ. ಇದು ಹೂಡಿಕೆದಾರರ ವಿಶ್ವಾಸ ಹೆಚ್ಚಿಸಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Equity Market
Koo

ಮುಂಬೈ: ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶ ಪ್ರಕಟವಾಗುವ ಜೂನ್‌ 4ರ ಬಳಿಕ ಭಾರತದ ಷೇರು ಮಾರುಕಟ್ಟೆಯನ್ನು ಹಿಡಿಯಲು ಆಗುವುದಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಜೂನ್‌ 4ರ ಬಳಿಕ ಹೂಡಿಕೆದಾರರಿಗೆ ಭಾರಿ ಲಾಭವಾಗಲಿದೆ ಎಂಬುದಾಗಿ ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ, ಕಳೆದ 6 ತಿಂಗಳಲ್ಲಿ ಬಾಂಬ್‌ ಸ್ಟಾಕ್‌ ಎಕ್ಸ್‌ಚೇಂಜ್‌ (BSE) ಪಟ್ಟಿಯಲ್ಲಿರುವ ಕಂಪನಿಗಳು 1 ಲಕ್ಷ ಕೋಟಿ ಡಾಲರ್‌ ಗಳಿಸಿವೆ ಎಂಬುದಾಗಿ ತಿಳಿದುಬಂದಿದೆ. ಇದರೊಂದಿಗೆ ಭಾರತದ ಈಕ್ವಿಟಿ ಮಾರುಕಟ್ಟೆಯ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ದಾಟುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾದಂತಾಗಿದೆ.

ಹೌದು, 2023ರ ನವೆಂಬರ್‌ನಲ್ಲಿ ಬಿಎಸ್‌ಇ ಒಟ್ಟು ಮಾರುಕಟ್ಟೆ ಮೊತ್ತವು 4 ಲಕ್ಷ ಕೋಟಿ ಡಾಲರ್‌ ಇತ್ತು. ಬಿಎಸ್‌ಇನಲ್ಲಿ ಲಿಸ್ಟ್‌ ಆಗಿರುವ ಕಂಪನಿಗಳ ಮಾರುಕಟ್ಟೆ ಬಂಡವಾಳವು ಕಳೆದ 6 ತಿಂಗಳಲ್ಲಿಯೇ 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ. ಬಿಎಸ್‌ಇ ಲಿಸ್ಟ್‌ ಆಗಿರುವ ಕಂಪನಿಯಗಳ ಮಾರುಕಟ್ಟೆ ಬಂಡವಾಳವು 2007ರ ಮೇ ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇದಾದ ಒಂದು ದಶಕದ ಬಳಿಕ ಅಂದರೆ, 2017ರ ಜುಲೈನಲ್ಲಿ 2 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇನ್ನು 2021ರ ಮೇ ತಿಂಗಳಲ್ಲಿ 4 ಲಕ್ಷ ಕೋಟಿ ಡಾಲರ್‌ ಆಗಿತ್ತು. ಈಗ ಆರೇ ತಿಂಗಳಲ್ಲಿ ಮಾರುಕಟ್ಟೆ ಬಂಡವಾಳವು 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ.

ಇದರೊಂದಿಗೆ ಮಾರುಕಟ್ಟೆ ಬಂಡವಾಳ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ತಲುಪಿರುವುದು ಐತಿಹಾಸಿಕ ಎಂದೇ ಹೇಳಲಾಗುತ್ತಿದೆ. ಇದರಿಂದ ಹೂಡಿಕೆದಾರರ ವಿಶ್ವಾಸವೂ ಹೆಚ್ಚಾಗಿದೆ ಎಂದು ವಿಶ್ಲೇಷಿಸಲಾಗಿದೆ. 5 ಲಕ್ಷ ಕೋಟಿ ಡಾಲರ್‌ ಎಂದರೆ ಭಾರತದ 414.75 ಲಕ್ಷ ಕೋಟಿ ರೂ. ಆಗಿದೆ. ಭಾರತದ ಈಕ್ವಿಟಿ ಮಾರುಕಟ್ಟೆಯಲ್ಲಿಯೇ ಮೊದಲ ಬಾರಿಗೆ ಇಷ್ಟೊಂದು ವೇಗದಲ್ಲಿ ಮಾರುಕಟ್ಟೆಯ ಬಂಡವಾಳವು ಏರಿಕೆಯಾಗಿದೆ ಎಂಬುದಾಗಿ ತಜ್ಞರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿ ನಿರೀಕ್ಷಿಸಲಾಗಿದೆ.

ಸದ್ಯ, ನಿಫ್ಟಿಯು ತನ್ನ ಗರಿಷ್ಠ ಪಾಯಿಂಟ್‌ಗಳಿಗಿಂತ 250 ಪಾಯಿಂಟ್‌ ಹಿಂದಿದೆ. ಆದರೂ, ಸಣ್ಣ ಹಾಗೂ ಮಧ್ಯಮ ಶ್ರೇಣಿಯ ಹೂಡಿಕೆಯು ಹೆಚ್ಚಾಗಿದೆ. ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಭಾರತದ ಷೇರುಪೇಟೆಯು ಮಹತ್ವದ ಸ್ಥಾನ ಪಡೆದಿದೆ. ಹಾಂಕಾಂಗ್‌, ಜಪಾನ್‌, ಚೀನಾ ಹಾಗೂ ಅಮೆರಿಕದ ನಂತರ ಭಾರತದ ಷೇರುಪೇಟೆಯು ಬೃಹತ್‌ ಷೇರು ಮಾರುಕಟ್ಟೆ ಎನಿಸಿದೆ. 2027ರ ವೇಳೆಗೆ ಭಾರತವು ವಿಶ್ವದಲ್ಲೇ ಮೂರನೇ ಬೃಹತ್‌ ಆರ್ಥಿಕತೆ ರಾಷ್ಟ್ರ ಎಂಬ ಖ್ಯಾತಿ ಗಳಿಸುವ ವಿಶ್ವಾಸ ಹೊಂದಿದೆ. 2030ರ ವೇಳೆಗೆ ಮಾರುಕಟ್ಟೆ ಬಂಡವಾಳವು 10 ಲಕ್ಷ ಡಾಲರ್‌ ತಲುಪಬೇಕು ಎಂಬ ಗುರಿ ಇದೆ. ಇದರ ದಿಸೆಯಲ್ಲಿ ಈಕ್ವಿಟಿ ಮೌಲ್ಯವು ಗಣನೀಯವಾಗಿ ಏರಿಕೆಯಾಗಿರುವುದು ಸಕಾರಾತ್ಮಕ ಸಂಗತಿಯಾಗಿದೆ.

ಇದನ್ನೂ ಓದಿ: LIC: ಎಲ್‌ಐಸಿಗೆ ಬಿಗ್‌ ರಿಲೀಫ್‌; ಸಾರ್ವಜನಿಕರ ಷೇರು ಪಾಲು ಶೇ. 10ಕ್ಕೆ ಹೆಚ್ಚಿಸಲು 3 ವರ್ಷ ಹೆಚ್ಚುವರಿ ಕಾಲಾವಕಾಶ

Continue Reading

ದೇಶ

India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

India Skills: ʼಇಂಡಿಯಾ ಸ್ಕಿಲ್ಸ್ ನ್ಯಾಷನಲ್ ಕಾಂಪಿಟೇಶನ್ 2024ʼ ಸ್ಪರ್ಧಾ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಭಾನುವಾರ ದ್ವಾರಕಾದ ಯಶೋಭೂಮಿಯಲ್ಲಿ ನಡೆದಿದ್ದು, ಫ್ರಾನ್ಸ್‌ನ ಲಿಯಾನ್‌ನಲ್ಲಿ ಇದೇ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿರುವ ವರ್ಲ್ಡ್ ಸ್ಕಿಲ್ಸ್‌ನಲ್ಲಿ 58 ವಿಜೇತರು ಭಾರತವನ್ನು ಪ್ರತಿನಿಧಿಸಲಿದ್ದಾರೆ. ವಾಲ್ ಮತ್ತು ಫ್ಲೋರ್ ಟೈಲಿಂಗ್, ಬ್ರಿಕ್ಲೇಯಿಂಗ್, ಕಾರ್ಪೆಂಟ್ರಿ, ಫ್ಯಾಶನ್ ಟೆಕ್ನಾಲಜಿ, 3ಡಿ ಡಿಜಿಟಲ್ ಗೇಮ್ ಆರ್ಟ್, ಕ್ಲೌಡ್ ಕಂಪ್ಯೂಟಿಂಗ್, ಮೊಬೈಲ್ ಅಪ್ಲಿಕೇಶನ್‌ಗಳ ಅಭಿವೃದ್ಧಿ, ಸ್ವಾಯತ್ತ ಮೊಬೈಲ್ ರೊಬೋಟಿಕ್ಸ್, ಆರೋಗ್ಯ ಮತ್ತು ಸಾಮಾಜಿಕ ಕಾಳಜಿ ಸೇರಿದಂತೆ 61ಕ್ಕೂ ಅಧಿಕ ಕೌಶಲ್ಯಗಳಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 400ಕ್ಕೂ ಹೆಚ್ಚು ಉದ್ಯಮ ತಜ್ಞರು ಪಾಲ್ಗೊಂಡಿದ್ದರು.

VISTARANEWS.COM


on

India Skills National Competition 2024 Grand Finale 58 Winners to Represent India at World Skills
Koo

ಬೆಂಗಳೂರು: ʼಇಂಡಿಯಾ ಸ್ಕಿಲ್ಸ್ ನ್ಯಾಷನಲ್ ಕಾಂಪಿಟೇಶನ್ 2024ʼ (India Skills National Competition 2024) ಸ್ಪರ್ಧಾ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಭಾನುವಾರ ದ್ವಾರಕಾದ ಯಶೋಭೂಮಿಯಲ್ಲಿ ನಡೆದಿದ್ದು, ಫ್ರಾನ್ಸ್‌ನ ಲಿಯಾನ್‌ನಲ್ಲಿ ಇದೇ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿರುವ ವರ್ಲ್ಡ್ ಸ್ಕಿಲ್ಸ್‌ನಲ್ಲಿ 58 ವಿಜೇತರು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ನಾಲ್ಕು ದಿನಗಳ ಕಾಲ ನಡೆದ ʼಇಂಡಿಯಾ ಸ್ಕಿಲ್ಸ್ ನ್ಯಾಷನಲ್ ಕಾಂಪಿಟೇಶನ್ 2024ʼ ಸ್ಪರ್ಧೆಯಲ್ಲಿ ವಾಲ್ ಮತ್ತು ಫ್ಲೋರ್ ಟೈಲಿಂಗ್, ಬ್ರಿಕ್ಲೇಯಿಂಗ್, ಕಾರ್ಪೆಂಟ್ರಿ, ಫ್ಯಾಶನ್ ಟೆಕ್ನಾಲಜಿ, 3ಡಿ ಡಿಜಿಟಲ್ ಗೇಮ್ ಆರ್ಟ್, ಕ್ಲೌಡ್ ಕಂಪ್ಯೂಟಿಂಗ್, ಮೊಬೈಲ್ ಅಪ್ಲಿಕೇಶನ್‌ಗಳ ಅಭಿವೃದ್ಧಿ, ಸ್ವಾಯತ್ತ ಮೊಬೈಲ್ ರೊಬೊಟಿಕ್ಸ್, ಆರೋಗ್ಯ ಮತ್ತು ಸಾಮಾಜಿಕ ಕಾಳಜಿ ಸೇರಿದಂತೆ 61ಕ್ಕೂ ಅಧಿಕ ಕೌಶಲ್ಯಗಳಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 900ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 400ಕ್ಕೂ ಹೆಚ್ಚು ಉದ್ಯಮ ತಜ್ಞರು ಪಾಲ್ಗೊಂಡಿದ್ದರು.

ಇದನ್ನೂ ಓದಿ: 2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಬಾಲಕಿಯರದೇ ಮೇಲುಗೈ

ʼಇಂಡಿಯಾ ಸ್ಕಿಲ್ಸ್ ನ್ಯಾಷನಲ್ ಕಾಂಪಿಟೇಶನ್ 2024ʼ ಸ್ಪರ್ಧಾ ಕಾರ್ಯಕ್ರಮದಲ್ಲಿ ಒಡಿಶಾ ಅತಿ ಹೆಚ್ಚು ವಿಜೇತರನ್ನು ಹೊಂದಿದ್ದು, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ನಂತರದ ಸ್ಥಾನದಲ್ಲಿವೆ. 17 ಚಿನ್ನ, 13 ಬೆಳ್ಳಿ, 9 ಕಂಚಿನ ಪದಕಗಳನ್ನು ಮತ್ತು 12 ಸ್ಪರ್ಧಾಳುಗಳು ಶ್ರೇಷ್ಠತಾ ಪ್ರಶಸ್ತಿ ಪಡೆಯುವುದರೊಂದಿಗೆ ಒಡಿಶಾ ಅತಿ ಹೆಚ್ಚು ವಿಜೇತರನ್ನು ಹೊಂದಿದೆ. ಕರ್ನಾಟಕ ರಾಜ್ಯವು 13 ಚಿನ್ನ, 12 ಬೆಳ್ಳಿ, 3 ಕಂಚಿನ ಪದಕ ಮತ್ತು 19 ಶ್ರೇಷ್ಠತಾ ಪ್ರಶಸ್ತಿ, ತಮಿಳುನಾಡು 6 ಚಿನ್ನ, 8 ಬೆಳ್ಳಿ, 9 ಕಂಚು ಮತ್ತು 17 ಸ್ಪರ್ಧಾಳುಗಳು ಶ್ರೇಷ್ಠತಾ ಪ್ರಶಸ್ತಿಯನ್ನು ಪಡೆದಿದ್ದಾರೆ.

ಮಹಾರಾಷ್ಟ್ರ 3 ಚಿನ್ನ, 5 ಬೆಳ್ಳಿ, 6 ಕಂಚಿನ ಪದಕ ಮತ್ತು 14 ಶ್ರೇಷ್ಠತಾ ಪ್ರಶಸ್ತಿ, ಉತ್ತರ ಪ್ರದೇಶ ರಾಜ್ಯವು 3 ಚಿನ್ನ, 3 ಬೆಳ್ಳಿ, 6 ಕಂಚಿನ ಪದಕಗಳು ಮತ್ತು 16 ಶ್ರೇಷ್ಠತಾ ಪ್ರಶಸ್ತಿ, ದೆಹಲಿ 5 ಚಿನ್ನ, 3 ಬೆಳ್ಳಿ, 2 ಕಂಚಿನ ಪದಕಗಳು ಮತ್ತು 10 ಶ್ರೇಷ್ಠತಾ ಪ್ರಶಸ್ತಿ, ರಾಜಸ್ಥಾನ ರಾಜ್ಯವು 2 ಚಿನ್ನ, 5 ಬೆಳ್ಳಿ, 3 ಕಂಚಿನ ಪದಕಗಳು, ಮತ್ತು 9 ಶ್ರೇಷ್ಠತಾ ಪ್ರಶಸ್ತಿ, ಹರಿಯಾಣ 2 ಚಿನ್ನ, 3 ಬೆಳ್ಳಿ, 3 ಕಂಚಿನ ಪದಕಗಳು ಮತ್ತು 13 ಶ್ರೇಷ್ಠತಾ ಪ್ರಶಸ್ತಿ, ಮಧ್ಯಪ್ರದೇಶ 1 ಚಿನ್ನ, 2 ಬೆಳ್ಳಿ, 4 ಕಂಚು, ಮತ್ತು 11 ಶ್ರೇಷ್ಠತಾ ಪ್ರಶಸ್ತಿ, ಬಿಹಾರ ರಾಜ್ಯವು 3 ಚಿನ್ನ, 1 ಬೆಳ್ಳಿ, 3 ಕಂಚು ಮತ್ತು 6 ಸ್ಪರ್ಧಾಳುಗಳು ಶ್ರೇಷ್ಠತಾ ಪ್ರಶಸ್ತಿಯನ್ನು ಪಡೆದಿದ್ದಾರೆ.

ಇದನ್ನೂ ಓದಿ: Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

47 ಕೌಶಲ್ಯ ಸ್ಪರ್ಧೆಗಳನ್ನು ಆನ್‌ಸೈಟ್‌ನಲ್ಲಿ ನಡೆಸಿದರೆ, ಕರ್ನಾಟಕ, ಹರಿಯಾಣ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ ಲಭ್ಯವಿರುವ ಅತ್ಯುತ್ತಮ ಮೂಲಸೌಕರ್ಯಗಳನ್ನು ಗಮನದಲ್ಲಿಟ್ಟುಕೊಂಡು ಆಫ್‌ಸೈಟ್‌ನಲ್ಲಿ 14 ಕೌಶಲ್ಯ ಸ್ಪರ್ಧೆಗಳನ್ನು ನಡೆಸಲಾಯಿತು. ಸ್ಪರ್ಧಾ ಕಾರ್ಯಕ್ರಮದಲ್ಲಿ 86 ಸ್ಪರ್ಧಿಗಳೊಂದಿಗೆ ತಮಿಳುನಾಡು ಗರಿಷ್ಠ ಭಾಗವಹಿಸುವಿಕೆಗೆ ಸಾಕ್ಷಿಯಾಗಿದೆ, ನಂತರ ಒಡಿಶಾ (64), ಕರ್ನಾಟಕ (61), ಪಂಜಾಬ್ (53), ಮತ್ತು ಹರಿಯಾಣದಿಂದ 47 ಸ್ಪರ್ಧಿಗಳು ಭಾಗವಹಿಸಿದ್ದರು.

ಈ ವೇಳೆ ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ಕಾರ್ಯದರ್ಶಿ ಅತುಲ್ ಕುಮಾರ್ ತಿವಾರಿ ಮಾತನಾಡಿ, ಸ್ಪರ್ಧೆಯ ವಿನ್ಯಾಸ ಮತ್ತು ಕಾರ್ಯಗತಗೊಳಿಸುವಿಕೆಯು ನಿಖರವಾಗಿತ್ತು ಮಾತ್ರವಲ್ಲದೆ ಭಾಗವಹಿಸುವವರು, ಮಾರ್ಗದರ್ಶಕರು, ಉದ್ಯಮದ ವೃತ್ತಿಪರರು, ಸಾರ್ವಜನಿಕರಿಂದ ಹೆಚ್ಚಿನ ಮೆಚ್ಚುಗೆ ಗಳಿಸಿದ್ದಾರೆ. ʼಇಂಡಿಯಾ ಸ್ಕಿಲ್ಸ್ ನ್ಯಾಷನಲ್ ಕಾಂಪಿಟೇಶನ್ 2024ʼ ಅಭೂತಪೂರ್ವ ಯಶಸ್ಸನ್ನು ಕಂಡಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

ಈ ಸಂದರ್ಭದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ಕಾರ್ಯದರ್ಶಿ ಅತುಲ್ ಕುಮಾರ್ ತಿವಾರಿ, ಖ್ಯಾತ ನಿರ್ಮಾಪಕ, ಪದ್ಮಶ್ರೀ ಪುರಸ್ಕೃತ ರಮೇಶ್ ಸಿಪ್ಪಿ, ವೃತ್ತಿಪರ ಶಿಕ್ಷಣ ಮತ್ತು ತರಬೇತಿ ರಾಷ್ಟ್ರೀಯ ಮಂಡಳಿ ಅಧ್ಯಕ್ಷ ಡಾ. ನಿರ್ಮಲಜೀತ್ ಸಿಂಗ್ ಕಲ್ಸಿ ವೇದ್ ಮಣಿ ತಿವಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ದೇಶ

Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Prashant Kishor: ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ಪ್ರಶಾಂತ್‌ ಕಿಶೋರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

Prashant Kishor
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ಐದು ಹಂತಗಳ ಮತದಾನ ಮುಕ್ತಾಯಗೊಂಡಿದೆ. ಐದು ಹಂತಗಳಲ್ಲಿಯೇ ಬಿಜೆಪಿಗೆ 300 ಸೀಟುಗಳು ಬರಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅತ್ತ, ಇಂಡಿಯಾ ಒಕ್ಕೂಟವೂ ಗೆಲುವು ನಮ್ಮದೇ ಎಂದು ಹೇಳುತ್ತಿದ್ದಾರೆ. ಇದರ ಬೆನ್ನಲ್ಲೇ, ಚುನಾವಣೆ ರಣತಂತ್ರಗಾರ ಪ್ರಶಾಂತ್‌ ಕಿಶೋರ್‌ (Prashant Kishor) ಅವರು ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮೇಲೆ ಜನ ಸಿಟ್ಟಾಗಿದ್ದಾರೆ ಎಂಬುದು ಎಲ್ಲೂ ಕೇಳಿಲ್ಲ, ನೋಡಿಲ್ಲ. ಹಾಗಾಗಿ, ಅವರೇ ಪ್ರಧಾನಿಯಾಗುವುದು ನಿಶ್ಚಿತ” ಎಂದಿದ್ದಾರೆ.

ಬರ್ಖಾ ದತ್‌ ಅವರೊಂದಿಗೆ ನಡೆದ ಮಾತುಕತೆ ವೇಳೆ ಪ್ರಶಾಂತ್‌ ಕಿಶೋರ್‌ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. “ಚುನಾವಣೆ ಫಲಿತಾಂಶದ ಕುರಿತು ನಾವು ಮಾತನಾಡುವಾಗ ಸಾಮಾನ್ಯ ಸಂಗತಿಗಳನ್ನು ಪರಿಗಣಿಸಿದರೆ ಸಾಕು ಒಂದು ಅಂದಾಜು ಸಿಗುತ್ತದೆ. ಕೇಂದ್ರ ಸರ್ಕಾರದ ವಿರುದ್ಧ ಅಂತಹ ಅಲೆ ಇಲ್ಲ. ನರೇಂದ್ರ ಮೋದಿ ಅವರ ಬಗ್ಗೆ ಜನರಿಗೆ ಈಗಲೂ ವಿಶ್ವಾಸವಿದೆ. ಜನರು ಮೋದಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರಬಹುದು, ಒಂದಷ್ಟು ಭರವಸೆಗಳು ಈಡೇರಿದೆ ಇರಬಹುದು. ಆದರೆ, ಮೋದಿ ಜನರಿಗೆ ಖಂಡಿತವಾಗಿಯೂ ಸಿಟ್ಟಿಲ್ಲ” ಎಂದಿದ್ದಾರೆ.

ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿಯ ಬಗ್ಗೆ ಈಗಲೂ ಜನರಲ್ಲಿ ಸಕಾರಾತ್ಮಕ ಭಾವನೆ ಇದೆ ಎಂದಿರುವ ಪ್ರಶಾಂತ್‌ ಕಿಶೋರ್‌, ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ. ಪ್ರಧಾನಿಯ ಪ್ರಭಾವ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ. ಇತ್ತ ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದಾರೆ.

ರಾಹುಲ್‌ ಗಾಂಧಿಗೆ ಸಲಹೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ ಪ್ರಶಾಂತ್‌ ಕಿಶೋರ್, ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿಲ್ಲದಿದ್ದರೆ ಐದು ವರ್ಷಗಳ ವಿರಾಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಮೂರನೇ ಅವಧಿಯಲ್ಲಿ ಬಿಜೆಪಿಗೆ ಅನೇಕ ಕಠಿಣ ಸವಾಲು ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಭೂ ಮಸೂದೆ ವಿರೋಧಿ ಪ್ರತಿಭಟನೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ರೈತರ ಹೋರಾಟವನ್ನು ಉಲ್ಲೇಖಿಸಿ ಅವರು ಸವಾಲುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲ ಸವಾಲುಗಳಿಂದ ಮೋದಿ ದುರ್ಬಲ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Lok Sabha Election 2024: ಪ್ರತಿಪಕ್ಷಗಳಿಗೆ ರೆಡ್‌ ಅಲರ್ಟ್‌ ನೀಡಿದ ಪ್ರಶಾಂತ್‌ ಕಿಶೋರ್‌; ಏನವರ ಚುನಾವಣಾ ಲೆಕ್ಕಾಚಾರ?

Continue Reading

ದೇಶ

Abhijit Gangopadhyay: ದೀದಿ ವಿರುದ್ಧ ಮಾಜಿ ಜಡ್ಜ್‌ ಅವಹೇಳನಕಾರಿ ಹೇಳಿಕೆ; 24 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ತಡೆ

Abhijit Gangopadhyay: ಅಭಿಜಿತ್ ಗಂಗೋಪಾಧ್ಯಾಯ ಅವರು ಮೇ 15 ರಂದು ಹಲ್ದಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ತೃಣಮೂಲ ಕಾಂಗ್ರೆಸ್ ನೀಡಿದ್ದ ದೂರಿನ ಆಧಾರದ ಗಂಗೋಪಾಧ್ಯಾಯ ವಿರುದ್ಧ ಚುನಾವಣಾ ಆಯೋಗ ಈ ಹಿಂದೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿತ್ತು. ಅಲ್ಲದೇ ಮೇ 20ರೊಳಗೆ ಪ್ರತಿಕ್ರಿಯಿಸುವಂತೆ ಸೂಚನೆ ನೀಡಿತ್ತು.

VISTARANEWS.COM


on

Abhijit Gangopadhyay
Koo

ನವದೆಹಲಿ:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಹೈಕೋರ್ಟ್ ನ್ಯಾಯಾಧೀಶ ಮತ್ತು ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ(Abhijit Gangopadhyay) ಅವರಿಗೆ 24 ಗಂಟೆಗಳ ಕಾಲ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಕ್ಕೆ ಚುನಾವಣಾ ಆಯೋಗ(Election Commission of India) ತಡೆಯೊಡ್ಡಿದೆ. ಒಬ್ಬ ವ್ಯಕ್ತಿಯ ವೈಯಕ್ತಿಕ ಬದುಕಿನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ಅಭಿಜಿತ್ ಗಂಗೋಪಾಧ್ಯಾಯ ಅವರು ಮೇ 15 ರಂದು ಹಲ್ದಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ತೃಣಮೂಲ ಕಾಂಗ್ರೆಸ್ ನೀಡಿದ್ದ ದೂರಿನ ಆಧಾರದ ಗಂಗೋಪಾಧ್ಯಾಯ ವಿರುದ್ಧ ಚುನಾವಣಾ ಆಯೋಗ ಈ ಹಿಂದೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿತ್ತು. ಅಲ್ಲದೇ ಮೇ 20ರೊಳಗೆ ಪ್ರತಿಕ್ರಿಯಿಸುವಂತೆ ಸೂಚನೆ ನೀಡಿತ್ತು.

ಇಸಿ ತನ್ನ ನೋಟಿಸ್‌ನಲ್ಲಿ ಗಂಗೋಪಾಧ್ಯಾಯ ಅವರ ಹೇಳಿಕೆಯು ಅಸಮರ್ಪಕ, ನ್ಯಾಯಸಮ್ಮತವಲ್ಲ. ಘನತೆಯನ್ನು ಮೀರಿ, ಕೆಟ್ಟ ಅಭಿರುಚಿಯಿಂದ ಹೇಳಿಕೆ ನೀಡಲಾಗಿದೆ ಮತ್ತು ಮೇಲ್ನೋಟಕ್ಕೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಇಸಿ ಹೇಳಿತ್ತು.

ಗಂಗೋಪಾಧ್ಯಾಯ ಅವರು ತಮ್ಮ ತೀರ್ಪುಗಳಿಂದ ಜನಪ್ರಿಯರಾದವರು. ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಮೇ 25 ರಂದು ಮತದಾನ ನಡೆಯಲಿರುವ ಪಶ್ಚಿಮ ಬಂಗಾಳದ ತಮ್ಲುಕ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗಂಗೋಪಾಧ್ಯಾಯ ಅವರನ್ನು ಕಣಕ್ಕಿಳಿಸಲಾಗಿದೆ.

ನಕಲಿ ವಿಡಿಯೋ ಎಂದ ಬಿಜೆಪಿ

ಇನ್ನು ಈ ತೃಣಮೂಲ ಕಾಂಗ್ರೆಸ್‌ ಆರೋಪಕ್ಕೆ ತಿರುಗೇಟು ಕೊಟ್ಟಿರುವ ಬಿಜೆಪಿ ಇದೊಂದು ನಕಲಿ ವಿಡಿಯೋ ಎಂದು ಹೇಳಿದೆ. ಪಕ್ಷದ ಘನತೆಗೆ ಚ್ಯುತಿ ತರುವ ಉದ್ದೇಶದಿಂದ ಟಿಎಂಸಿ ಈ ರೀತಿ ನಕಲಿ ವಿಡಿಯೋ ಬಿಡುಗಡೆ ಮಾಡಿದೆ. ಇದರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ವಕ್ತಾರ ಸಾಮಿಕ್‌ ಭಟ್ಟಾಚಾರ್ಯ ಹೇಳಿದ್ದಾರೆ.

ಇದನ್ನೂ ಓದಿ:Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!!

Continue Reading
Advertisement
Cauvery Dispute
ಕರ್ನಾಟಕ13 mins ago

Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

Brand Bangalore and BJP Slams DK Shivakumar and Congress Government
ರಾಜಕೀಯ15 mins ago

Brand Bangalore: ಬಯಲಾಯ್ತು ಮುಖವಾಡ, ಬೀದಿಗೆ ಬಂತು ಬಂಡವಾಳ; ಬ್ರ್ಯಾಂಡ್‌ ಬೆಂಗಳೂರು ಬಗ್ಗೆ ಕುಟುಕಿದ ಬಿಜೆಪಿ

Eye Care Tips
ಆರೋಗ್ಯ19 mins ago

Eye Care Tips: ಕಣ್ಣಿನ ಸುಸ್ತಿಗೆ ನೀವು ಇಷ್ಟಾದರೂ ಮಾಡಿ, ಕಣ್ಣಿಗೆ ಅಗತ್ಯ ವಿಶ್ರಾಂತಿ ನೀಡಿ!

Turbulence
ಪ್ರಮುಖ ಸುದ್ದಿ31 mins ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಒಬ್ಬ ಪ್ರಯಾಣಿಕ ಸಾವು, 30 ಮಂದಿಗೆ ಗಾಯ, ಇಲ್ಲಿದೆ ಭೀಕರ ವಿಡಿಯೊ

Used Car Sale
ಪ್ರಮುಖ ಸುದ್ದಿ42 mins ago

Used Car Sale : ನಿಮ್ಮ ಕಾರನ್ನು ಜಾಸ್ತಿ ಬೆಲೆಗೆ ಮಾರಬೇಕೇ? ಈ ಕೆಲವು ತಂತ್ರಗಳನ್ನು ಅನುಸರಿಸಿ

Summer Star Fashion
ಫ್ಯಾಷನ್49 mins ago

Summer Star Fashion: ಏನಿದು ನಟಿ ಅದಿತಿ ರಾವ್‌ ಹೈದರಿಯ ಕೋ-ಆರ್ಡ್ ಕೊಸ್ಟಾ ಪ್ಯಾಂಟ್‌ ಟ್ರೆಂಡ್‌?

Lok Sabha Elections 2024 7 celebs who didn’t vote in Lok Sabha Elections
ಬಾಲಿವುಡ್51 mins ago

Lok Sabha Elections 2024: ಈ ಬಾಲಿವುಡ್‌ ಸ್ಟಾರ್ಸ್‌ಗಳು ಈ ಬಾರಿ ವೋಟ್‌ ಹಾಕಲೇ ಇಲ್ಲ!

RR vs RCB
ಕ್ರೀಡೆ59 mins ago

RCB vs RR: ಆರ್​ಸಿಬಿ-ರಾಜಸ್ಥಾನ್​ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

Mangalore Tour
ಪ್ರವಾಸ1 hour ago

Mangalore Tour: ಮಂಗಳೂರಿಗೆ ಬಂದರೆ ಈ ಸ್ಥಳಗಳಿಗೆ ಭೇಟಿ ಕೊಡಲು ಮರೆಯದಿರಿ

2nd Pux Exam
ಬೆಂಗಳೂರು1 hour ago

2nd Puc Exam : ಆನ್‌ಲೈನ್‌ನಲ್ಲೆ ಸಿಗುತ್ತೆ ಪಿಯು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ; ಅರ್ಜಿ ಸಲ್ಲಿಸಲು ಹೀಗೆ ಮಾಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Love Case Father throws hot water on man who loved his daughter for coming home
ಕೊಡಗು5 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

ಟ್ರೆಂಡಿಂಗ್‌