Bypoll Results 2023: ತಮಿಳುನಾಡಿನ ಈರೋಡ್‌ ವೆಸ್ಟ್‌ನಲ್ಲಿ ಕಾಂಗ್ರೆಸ್, ಪುಣೆಯ ಚಿಂಚವಾಡದಲ್ಲಿ ಬಿಜೆಪಿಗೆ ಮುನ್ನಡೆ - Vistara News

ದೇಶ

Bypoll Results 2023: ತಮಿಳುನಾಡಿನ ಈರೋಡ್‌ ವೆಸ್ಟ್‌ನಲ್ಲಿ ಕಾಂಗ್ರೆಸ್, ಪುಣೆಯ ಚಿಂಚವಾಡದಲ್ಲಿ ಬಿಜೆಪಿಗೆ ಮುನ್ನಡೆ

Bypoll Results 2023: ಮಹಾರಾಷ್ಟ್ರ, ತಮಿಳುನಾಡು, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಬೈ ಎಲೆಕ್ಷನ್ ನಡೆದಿದ್ದು, ಫಲಿತಾಂಶವು ಪ್ರಕಟವಾಗುತ್ತಿದೆ.

VISTARANEWS.COM


on

Congress and Bjp
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಹಲವು ರಾಜ್ಯಗಳಲ್ಲಿ ನಡೆದ ಉಪ ಚುನಾವಣೆಯ ಫಲಿತಾಂಶವು ಗುರುವಾರ ಪ್ರಕಟವಾಗುತ್ತಿದೆ. ತಮಿಳುನಾಡಿನ ಈರೋಡ್ ವೆಸ್ಟ್‌ನಲ್ಲಿ ಡಿಎಂಕೆ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ, ಪಶ್ಚಿಮ ಬಂಗಾಳದ ಸಾಗರ್ದಿಘಿ ಕ್ಷೇತ್ರದಲ್ಲೂ ಕಾಂಗ್ರೆಸ್ ಮುನ್ನಡೆಯನ್ನು ಕಾಯ್ದುಕೊಂಡಿದೆ(Bypoll Results 2023).

ಮತ್ತೊಂದೆಡೆ ಪುಣೆಯ ಚಿಂಚವಾಡಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯು ಮುನ್ನಡೆಯಲ್ಲಿದ್ದಾರೆ. ಅದೇ ರೀತಿ ಕಸಬಾಪೇಟ್‌ನಲ್ಲಿ ಮಹಾ ವಿಕಾಸ್ ಅಘಾಡಿ ಅಭ್ಯರ್ಥಿ ಮುಂದಿದ್ದಾರೆ.

ಇದನ್ನೂ ಓದಿ: Northeast Assembly Election Result: ಮೇಘಾಲಯದಲ್ಲಿ ಮುನ್ನಡೆ ಸಾಧಿಸಿದ್ದರೂ, ಮ್ಯಾಜಿಕ್​ ನಂಬರ್​ ತಲುಪದ ಎನ್​ಪಿಪಿ

ತಿರುಮಹಾನ್ ಎವೆರಾ, ಜಂಬೆ ತಾಶಿ, ಸುಬ್ರತಾ ಸಹಾ ಅವರ ನಿಧನದ ನಂತರ ತೆರವಾದ ತಮಿಳುನಾಡಿನ ಈರೋಡ್ ಪೂರ್ವ ಕ್ಷೇತ್ರ, ಅರುಣಾಚಲ ಪ್ರದೇಶದ ಲುಮ್ಲಾ ಮತ್ತು ಪಶ್ಚಿಮ ಬಂಗಾಳದ ಸಾಗರ್ದಿಘಿ ಕ್ಷೇತ್ರಕ್ಕೆ ಫೆಬ್ರವರಿ 27 ರಂದು ಉಪಚುನಾವಣೆ ನಡೆದಿತ್ತು. ಜಾರ್ಖಂಡ್‌ನ ರಾಮಗಢಕ್ಕೆ ಸಂಬಂಧಿಸಿದಂತೆ, ಮಮತಾ ದೇವಿ ಅವರ ಅನರ್ಹತೆಯಿಂದಾಗಿ ಆ ಸ್ಥಾನವು ತೆರವಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Amit Shah: ಅಮಿತ್‌ ಶಾ ವಿಡಿಯೊ ತಿರುಚಿದ ಪ್ರಕರಣ; ಕಾಂಗ್ರೆಸ್ ಐಟಿ ಸೆಲ್‌ನ ಐವರು ಸದಸ್ಯರ ಬಂಧನ

Amit Shah: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಕಲಿ ವಿಡಿಯೊಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಗುರುವಾರ ರಾಜ್ಯ ಕಾಂಗ್ರೆಸ್ ಐಟಿ ಸೆಲ್‌ ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಈ ಹಿಂದೆ ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ ಅವರಿಗೆ ಸಮನ್ಸ್ ನೀಡಿದ್ದರು.

VISTARANEWS.COM


on

Amith Shah
Koo

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ನಕಲಿ ವಿಡಿಯೊಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಗುರುವಾರ ರಾಜ್ಯ ಕಾಂಗ್ರೆಸ್ ಐಟಿ ಸೆಲ್‌ (Congress IT Cell)ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ತಂಡವೂ ಈ ತೆಲಂಗಾಣದಲ್ಲಿದೆ. ಈ ಹಿಂದೆ ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ (Revanth Reddy) ಅವರಿಗೆ ಸಮನ್ಸ್ ನೀಡಿದ್ದರು.

ರೇವಂತ್ ರೆಡ್ಡಿ ಪರ ವಕೀಲರು ಬುಧವಾರ ದೆಹಲಿ ಪೊಲೀಸರ ಮುಂದೆ ಹಾಜರಾಗಿ, ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊ ರಚಿಸುವಲ್ಲಿ ಅಥವಾ ಪೋಸ್ಟ್ ಮಾಡುವುದರ ಹಿಂದೆ ರೇವಂತ್ ರೆಡ್ಡಿ ಅವರ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದರು. ವಿಡಿಯೊವನ್ನು ಹಂಚಿಕೊಂಡ ಆರೋಪದ ಮೇಲೆ ವಿವಿಧ ವಿರೋಧ ಪಕ್ಷಗಳ ಇನ್ನೂ ಐದು ಮಂದಿಗೂ ನೋಟಿಸ್ ನೀಡಲಾಗಿದೆ.

ರೇವಂತ್ ರೆಡ್ಡಿ ಮತ್ತು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ)ಯ ನಾಲ್ವರು ಸದಸ್ಯರಾದ ಶಿವಕುಮಾರ್ ಅಂಬಾಲಾ, ಅಸ್ಮಾ ತಸ್ಲೀಮ್, ಸತೀಶ್ ಮನ್ನೆ ಮತ್ತು ನವೀನ್ ಪೆಟ್ಟೆಮ್ ಅವರಿಗೆ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 91 ಮತ್ತು 160ರ ಅಡಿಯಲ್ಲಿ ಸಮನ್ಸ್ ನೀಡಲಾಗಿದೆ. ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರಿಗೂ ದೆಹಲಿ ಪೊಲೀಸರು ಮೇ 2ರಂದು ಸಮನ್ಸ್ ಜಾರಿ ಮಾಡಿದ್ದಾರೆ. “ನನಗೆ ಮಂಗಳವಾರ ದೆಹಲಿ ಪೊಲೀಸರಿಂದ ನೋಟಿಸ್ ಬಂದಿದೆ. ಆದರೆ ಏಕೆ ನೋಟಿಸ್ ನೀಡಲಾಯಿತು ಎಂಬುದು ನನಗೆ ಅರ್ಥವಾಗುತ್ತಿಲ್ಲ. ಇದು ಅರಾಜಕತೆಯಲ್ಲದೆ ಬೇರೇನೂ ಅಲ್ಲ” ಎಂದು ಠಾಕೂರ್ ಹೇಳಿದ್ದಾರೆ.

ಏನಿದು ಪ್ರಕರಣ?

ಮುಸ್ಲಿಮರಿಗೆ ನೀಡಲಾದ ಶೇ. 4ರಷ್ಟು ‘ಅಸಾಂವಿಧಾನಿಕ’ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಅಮಿತ್ ಶಾ ತೆಲಂಗಾಣದಲ್ಲಿ ಮಾತನಾಡುತ್ತಿರುವ ಹಳೆಯ ವಿಡಿಯೊವನ್ನು ಬಳಸಿಕೊಂಡು ಅವರು ಎಸ್​ಸಿ ಮತ್ತು ಎಸ್​ಟಿ ಮೀಸಲಾತಿ ತೆಗೆಯಬೇಕು ಎಂದು ಹೇಳಿದ್ದಾರೆ ಎನ್ನುವಂತೆ ಬದಲಾಯಿಸಲಾಗಿತ್ತು. ಇದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು. ಇದಾದ ಬಳಿಕ ಗೃಹ ಸಚಿವಾಲಯ ಮತ್ತು ಬಿಜೆಪಿ ದೂರು ನೀಡಿತ್ತು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ವಿಶೇಷ ಸೆಲ್ ಎಫ್ಐಆರ್ ದಾಖಲಿಸಿತ್ತು. ಸಮುದಾಯಗಳ ನಡುವೆ ಜಗಳ ಸೃಷ್ಟಿಸುವ ಉದ್ದೇಶದಿಂದ ಕೆಲವು ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಇದು ಸಾರ್ವಜನಿಕ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ʼʼತೆಲಂಗಾಣ ಕಾಂಗ್ರೆಸ್​​​ ಅಧಿಕೃತ ಎಕ್ಸ್ ಹ್ಯಾಂಡಲ್ ಈ ವೀಡಿಯೊವನ್ನು ಹಂಚಿಕೊಂಡಿದೆ. ತರುವಾಯ, ಪಕ್ಷದ ಹಲವಾರು ನಾಯಕರು ಅದನ್ನು ಮರು ಪೋಸ್ಟ್ ಮಾಡಿದ್ದಾರೆʼʼ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Continue Reading

ದೇಶ

Lok sabha Election 2024: ರಾಯ್‌ಬರೇಲಿಯಲ್ಲಿ ಕಣಕ್ಕಿಳಿದಿರುವ ದಿನೇಶ್‌ ಪ್ರತಾಪ್‌ ಸಿಂಗ್‌ ಹಿನ್ನೆಲೆ ಏನು?

Lok sabha Election 2024: 2004ರಲ್ಲಿ ಸಮಾಜವಾದಿ ಪಕ್ಷದ ತಾಲೂಕು ಮಟ್ಟದ ನಾಯರಾಗಿದ್ದ ದಿನೇಶ್‌ ಪ್ರತಾಪ್‌ ನಂತರ ದಿನಗಳಲ್ಲಿ ಬಹುಜನ ಸಮಾಜ ಪಾರ್ಟಿ(BSP)ಯಿಂದ ವಿಧಾನಪರಿಷತ್‌ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿದ್ದರು. 2019ರಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದು ಅವರ ರಾಜಕೀಯ ಬದುಕಿನ ಬಹುದೊಡ್ಡ ತಿರುವಾಗಿತ್ತು. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಯ್‌ಬರೇಲಿಯಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರೂ ಕ್ಷೇತ್ರದಲ್ಲಿ ಅಭೂತಪೂರ್ವ ಬೆಂಬಲ ಗಳಿಸಿದ್ದರು. ಅವರು ಆ ಚುನಾವಣೆಯಲ್ಲಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.

VISTARANEWS.COM


on

Lok sabha Election 2024
Koo

ಉತ್ತರಪ್ರದೇಶ: ದೇಶದಲ್ಲಿ ಲೋಕಸಭೆ ಚುನಾವಣೆ(Lok sabha Election 2024) ರಂಗೇರಿದೆ. ತನ್ನ ಭದ್ರಕೋಟೆಯಾಗಿರುವ ಉತ್ತರಪ್ರದೇಶದ ರಾಯ್‌ಬರೇಲಿ(Rae Bareli)ಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಘೋಷಿಸುವ ಮುನ್ನವೇ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಅವರ ವಿರುದ್ಧ ಸೋಲನುಭವಿಸಿದ್ದ ದಿನೇಶ್‌ ಪ್ರತಾಪ್‌ ಸಿಂಗ್‌(Dinesh Pratap Singh) ಅವರಿಗೆ ಬಿಜೆಪಿಯು ಮತ್ತೆ ಟಿಕೆಟ್‌ ನೀಡಿದೆ.

ಯಾರು ಈ ದಿನೇಶ್‌ ಪ್ರತಾಪ್‌?

2004ರಲ್ಲಿ ಸಮಾಜವಾದಿ ಪಕ್ಷದ ತಾಲೂಕು ಮಟ್ಟದ ನಾಯರಾಗಿದ್ದ ದಿನೇಶ್‌ ಪ್ರತಾಪ್‌ ನಂತರ ದಿನಗಳಲ್ಲಿ ಬಹುಜನ ಸಮಾಜ ಪಾರ್ಟಿ(BSP)ಯಿಂದ ವಿಧಾನಪರಿಷತ್‌ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿದ್ದರು. 2019ರಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದು ಅವರ ರಾಜಕೀಯ ಬದುಕಿನ ಬಹುದೊಡ್ಡ ತಿರುವಾಗಿತ್ತು. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಯ್‌ಬರೇಲಿಯಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರೂ ಕ್ಷೇತ್ರದಲ್ಲಿ ಅಭೂತಪೂರ್ವ ಬೆಂಬಲ ಗಳಿಸಿದ್ದರು. ಅವರು ಆ ಚುನಾವಣೆಯಲ್ಲಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಇನ್ನು ಮತ್ತೊಮ್ಮೆ ಬಿಜೆಪಿಯಿಂದ ಟಿಕೆಟ್‌ ಸಿಕ್ಕಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ದಿನೇಶ್‌ ಪ್ರತಾಪ್‌, ನನ್ನಂತಹ ಸಣ್ಣ ಮಟ್ಟದ ಕಾರ್ಯಕರ್ತನನ್ನು ಗುರುತಿಸಿ, ಮತ್ತೊಮ್ಮೆ ನಂಬಿಕೆ ಇಟ್ಟು ನನಗೆ ಟಿಕೆಟ್‌ ನೀಡಿರುವ ಪಕ್ಷಕ್ಕೆ ನಾನು ಆಭಾರಿಯಾಗಿದ್ದೇನೆ. ಪಕ್ಷದ ನಂಬಿಕೆಯನ್ನು ಯಾವುತ್ತೂ ಕಳೆದುಕೊಳ್ಳುವುದಿಲ್ಲ. ಒಂದು ಕಾಲದಲ್ಲಿ ರಾಯ್‌ಬರೇಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಆದರೆ ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಇಲ್ಲಿಯೂ ಬದಲಾವಣೆಯ ಗಾಳಿ ಬೀಸಿದೆ. ಇಲ್ಲಿಯ ಒಂದೇ ಒಂದು ಗ್ರಾಮ ಪಂಚಾಯತ್‌ಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಲು ಸಾಧ್ಯವಾಗಿಲ್ಲ. ಈ ರಾಯ್‌ಬರೇಲಿಯಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆದಿದೆ. ನಾವು ಅತಿ ಹೆಚ್ಚು ಮತಗಳಿಂದ ಗೆದ್ದೇ ಗೆಲ್ಲುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ

ಬಹಳ ಕುತೂಹಲಕ್ಕೆ ಕಾರಣವಾಗಿದ್ದ ರಾಯ್‌ ಬರೇಲಿ ಮತ್ತು ಅಮೇಠಿ ಕ್ಷೇತ್ರಗಳಿಗೆ ಕಾಂಗ್ರೆಸ್‌ ಕೊನೆಗೂ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ರಾಯ್‌ ಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಣಕ್ಕಿಳಿಯಲಿದ್ದು, ಇನ್ನು ಅಮೇಠಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ(Sonia Gandhi) ಆಪ್ತ ಕಿಶೋರಿ ಲಾಲ್‌ ಶರ್ಮಾ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ಮೇ 17ರಂದು ನಡೆಯುವ ಐದನೇ ಹಂತದ ಮತದಾನದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಕೊನೆಯ ಹಂತದಲ್ಲಿ ಕಾಂಗ್ರೆಸ್‌ ಬಾಕಿ ಇರಿಸಿದ್ದ ಅಮೇಠಿ ಮತ್ತು ರಾಯ್‌ ಬರೇಲಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್‌ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಿದೆ.

ಇದನ್ನೂ ಓದಿ: Lok Sabha Election 2024: ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ, ಅಮೇಠಿಯಿಂದ ಕಿಶೋರಿಲಾಲ್‌ ಸ್ಪರ್ಧೆ

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಖಾಲಿಯಾಗಿರುವ ರಾಯ್‌ ಬರೇಲಿ ಕ್ಷೇತ್ರದಿಂದ ಮೊದಲಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಹಾಗೂ ಅಮೇಠಿಯಿಂದ ರಾಹುಲ್‌ ಗಾಂಧಿ ಕಣಕ್ಕಿಳಿಯುತ್ತಾರೆ ಎಂಬ ವಿಚಾರ ಬಹಳ ಚರ್ಚೆಯಾಗಿತ್ತು. ರಾಹುಲ್‌ ಗಾಂಧಿ ಈಗಾಗಲೇ ಕೇರಳದ ವಯನಾಡು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಇದೀಗ ರಾಯ್‌ಬರೇಲಿಯಲ್ಲಿ ಬಿಜೆಪಿಯ ದಿನೇಶ್‌ ಪ್ರತಾಪ್‌ ವಿರುದ್ಧ ಮತಭೇಟೆಗೆ ಇಳಿದಿದ್ದಾರೆ.

Continue Reading

ದೇಶ

Lok Sabha Election 2024: ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ, ಅಮೇಠಿಯಿಂದ ಕಿಶೋರಿಲಾಲ್‌ ಸ್ಪರ್ಧೆ

Lok Sabha Election 2024: ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ರಾಯ್‌ ಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಣಕ್ಕಿಳಿಯುವುದು ಖಚಿತವಾಗಿದೆ. ಇನ್ನು ಅಮೇಠಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿಆಪ್ತ ಕಿಶೋರಿ ಲಾಲ್‌ ಶರ್ಮಾಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ಮೇ 17ರಂದು ನಡೆಯುವ ಐದನೇ ಹಂತದ ಮತದಾನದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಕೊನೆಯ ಹಂತದಲ್ಲಿ ಕಾಂಗ್ರೆಸ್‌ ಬಾಕಿ ಇರಿಸಿದ್ದ ಅಮೇಠಿ ಮತ್ತು ರಾಯ್‌ ಬರೇಲಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್‌ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಿದೆ.

VISTARANEWS.COM


on

Lok sabha Election
Koo

ನವದೆಹಲಿ:‌ ಲೋಕಸಭೆ ಚುನಾವಣೆ(Lok Sabha Election 2024)ಯ ಬಹಳ ಕುತೂಹಲಕ್ಕೆ ಕಾರಣವಾಗಿದ್ದ ರಾಯ್‌ ಬರೇಲಿ ಮತ್ತು ಅಮೇಠಿ ಕ್ಷೇತ್ರಗಳಿಗೆ ಕಾಂಗ್ರೆಸ್‌ ಕೊನೆಗೂ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ರಾಯ್‌ ಬರೇಲಿ(Rae Bareli) ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ಕಣಕ್ಕಿಳಿಯಲಿದ್ದು, ಇನ್ನು ಅಮೇಠಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ(Sonia Gandhi) ಆಪ್ತ ಕಿಶೋರಿ ಲಾಲ್‌ ಶರ್ಮಾ(Kishori Lal Sharma) ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ಮೇ 17ರಂದು ನಡೆಯುವ ಐದನೇ ಹಂತದ ಮತದಾನದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಕೊನೆಯ ಹಂತದಲ್ಲಿ ಕಾಂಗ್ರೆಸ್‌ ಬಾಕಿ ಇರಿಸಿದ್ದ ಅಮೇಠಿ ಮತ್ತು ರಾಯ್‌ ಬರೇಲಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್‌ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಿದೆ.

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಖಾಲಿಯಾಗಿರುವ ರಾಯ್‌ ಬರೇಲಿ ಕ್ಷೇತ್ರದಿಂದ ಮೊದಲಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಹಾಗೂ ಅಮೇಠಿಯಿಂದ ರಾಹುಲ್‌ ಗಾಂಧಿ ಕಣಕ್ಕಿಳಿಯುತ್ತಾರೆ ಎಂಬ ವಿಚಾರ ಬಹಳ ಚರ್ಚೆಯಾಗಿತ್ತು. ರಾಹುಲ್‌ ಗಾಂಧಿ ಈಗಾಗಲೇ ಕೇರಳದ ವಯನಾಡು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಇದೀಗ ರಾಯ್‌ಬರೇಲಿಯಲ್ಲಿ ಬಿಜೆಪಿಯ ದಿನೇಶ್‌ ಪ್ರತಾಪ್‌ ವಿರುದ್ಧ ಮತಭೇಟೆಗೆ ಇಳಿದಿದ್ದಾರೆ. ಇನ್ನು ದಿನೇಶ್‌ ಪ್ರತಾಪ್‌ ಕಳೆದ ಬಾರೀ ಸೋನಿಯಾ ಗಾಂದಿ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರು. ಅಮೇಠಿಯಲ್ಲಿ 2004, 2009, 2014ರವರೆಗೆ ರಾಹುಲ್‌ ಗಾಂಧಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2019ರಲ್ಲಿ ಬಿಜೆಪಿ ಸ್ಮೃತಿ ಇರಾನಿ ವಿರುದ್ಧ ಸೋಲನ್ನು ಅನುಭವಿಸಿದ್ದರು. ಈ ಬಾರಿ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್‌ ಅವರನ್ನು ಅಮೇಠಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಕಣಕ್ಕಿಳಿಸಿ ಪಕ್ಷ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.

ಇಂದೇ ನಾಮಪತ್ರ ಸಲ್ಲಿಕೆ

ಇನ್ನು ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿರುವುದರಿಂದ ಈ ಇಬ್ಬರೂ ನಾಯಕರೂ ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇನ್ನು ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಸೋನಿಯಾ ಗಾಂಧಿ ಸಾಥ್‌ ಕೊಡಲಿದ್ದಾರೆ. ಮತ್ತೊಂದೆಡೆ ಅಮೇಠಿಯಲ್ಲಿ ಕಿಶೋರಿಲಾಲ್‌ ಅವರಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಬೆಂಬಲ ಸೂಚಿಸಲಿದ್ದಾರೆ. ಈಗಾಗಲೇ ರಾಹುಲ್‌ ಮತ್ತು ಪ್ರಿಯಾಂಕಾ ಬೆಂಬಲಿಗರು ನಾಮಪತ್ರ ದಾಖಲೆಗಳನ್ನು ತಯಾರು ಮಾಡಿಟ್ಟಿದ್ದಾರೆ ಎನ್ನಲಾಗಿದೆ. ಬಿಜೆಪಿಯ ಸ್ಮೃತಿ ಇರಾನಿ ಕೂಡ ಇಂದೇ ಅಮೇಠಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶ್ರೀರಾಮನ ವಿರೋಧಿ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ರಾಮಮಂದಿರಕ್ಕೆ ಭೇಟಿ ನೀಡುವ ಮೂಲಕ ಕಾಂಗ್ರೆಸ್‌ ರಾಮಮಂದಿರ ವಿರೋಧಿ ಅಲ್ಲ ಎಂಬ ಸಂದೇಶ ರವಾನಿಸುವ ಉದ್ದೇಶವೂ ಇತ್ತು. ನಾಮಪತ್ರ ಸಲ್ಲಿಕೆಗೂ ಮುನ್ನ ರಾಮಮಂದಿರಕ್ಕೆ ಭೇಟಿ ನೀಡುವ ಯೋಜನೆ ಇತ್ತು. ಈಗ ಇದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಅಮೆರಿಕದ ಬುದ್ಧಿಗೇಡಿಗಳ ವರದಿಯಲ್ಲಿ ಭಾರತದ ಬಗ್ಗೆ ಹಸಿ ಸುಳ್ಳುಗಳು

ಅಲ್ಪಸಂಖ್ಯಾತರಿಗೆ ಇಲ್ಲಿ ರಕ್ಷಣೆಯಿಲ್ಲ ಎಂದು ಹುಯಿಲೆಬ್ಬಿಸುವುದನ್ನೇ ಕಾಯಕ ಮಾಡಿಕೊಂಡ ಕೆಲವರು ಭಾರತದಲ್ಲೂ ಅಮೆರಿಕದಲ್ಲೂ ಇದ್ದಾರೆ. ಇದು ಅವರ ಹೊಟ್ಟೆಪಾಡು ಎಂದು ಸುಮ್ಮನಾಗವಂತೆಯೂ ಇಲ್ಲ. ಯಾಕೆಂದರೆ ಇವರು ಅಂತಾರಾಷ್ಟ್ರೀಯವಾಗಿ ನಮ್ಮ ಮುಖಕ್ಕೆ ಮಸಿ ಬಳಿಯಬಲ್ಲರು. ಇವರನ್ನು ತರಾಟೆಗೆ ತೆಗೆದುಕೊಳ್ಳುವುದೇ ಸರಿಯಾದ ದಾರಿ.

VISTARANEWS.COM


on

Religious Freedom
Koo

ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಸರ್ಕಾರದ ಕಮಿಷನ್‌ ಆನ್‌ ಇಂಟರ್‌ನ್ಯಾಷನಲ್‌ ರಿಲಿಜಿಯಸ್‌ ಫ್ರೀಡಂ (USCIRF Report) ವರದಿ ಬಿಡುಗಡೆ ಮಾಡಿದೆ. ಭಾರತ ಸೇರಿ 17 ದೇಶಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ (Religious Freedom) ಕುರಿತು ಕಳವಳ ವ್ಯಕ್ತಪಡಿಸಿದೆ. “ಭಾರತ ಸೇರಿ 17 ದೇಶಗಳಲ್ಲಿ ಜನರು ತಮ್ಮ ಧರ್ಮವನ್ನು ಅನುಸರಿಸುವ, ಧಾರ್ಮಿಕ ವಿಚಾರಗಳ ಮೇಲೆ ನಂಬಿಕೆ ಇರಿಸುವ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತಿದೆ. ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಭಾರತದಲ್ಲಿ ರಾಷ್ಟ್ರೀಯವಾದಿ ನೀತಿಗಳ ಹೇರಿಕೆಯಿಂದಾಗಿ ಇತರ ಧರ್ಮಗಳಲ್ಲಿ ನಂಬಿಕೆ ಇಟ್ಟುಕೊಂಡವರಿಗೆ ಸಮಸ್ಯೆಯಾಗಿದೆ. ದ್ವೇಷ ಕಾರುವ ವಾಕ್ಚಾತುರ್ಯ, ಕೋಮುವಾದದಿಂದ ಕೂಡಿದ ಹಿಂಸಾಚಾರಗಳನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇದು ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದಕ್ಕೆ ಉದಾಹರಣೆಯಾಗಿದೆ” ಎಂದು ಹೇಳಿದೆ. ಇದಕ್ಕೆ ಭಾರತ ಸರ್ಕಾರ ತಿರುಗೇಟು ನೀಡಿದ್ದು, “ಯುಎಸ್‌ಸಿಐಆರ್‌ಎಫ್‌ ವರದಿಯು ಪಕ್ಷಪಾತ ಹಾಗೂ ರಾಜಕೀಯ ಪ್ರೇರಿತವಾಗಿ ತಯಾರಿಸಿದ್ದಾಗಿದೆ” ಎಂಬುದಾಗಿ ಅಸಮಾಧಾನ ವ್ಯಕ್ತಪಡಿಸಿದೆ. “ಇದಕ್ಕೂ ಮೊದಲು ಕೂಡ ಇಂತಹ ವರದಿಗಳನ್ನು ಅದು ಪ್ರಕಟಿಸಿತ್ತು. ಭಾರತದ ಕುರಿತು ಷಡ್ಯಂತ್ರದಿಂದ ಕೂಡಿದ ವರದಿ ಬಿಡುಗಡೆ ಮಾಡುವುದು ಅದಕ್ಕೆ ರೂಢಿಯೇ ಆಗಿದೆ. ಯುಎಸ್‌ಸಿಐಆರ್‌ಎಫ್‌ ವರದಿಯಲ್ಲಿ ಯಾವುದೇ ಹುರುಳಿಲ್ಲ” ಎಂದಿದೆ ಭಾರತ.

ಈ ವರದಿ ಯಾರೋ ಅಡ್ಡಕಸಬಿಗಳು ತಯಾರಿಸಿದ ವರದಿಯಂತೆ ಕಾಣಿಸುತ್ತಿದೆ. ಬಹುಶಃ ಅವರು ಭಾರತಕೆಕ ಬಂದು ಇಲ್ಲಿನ ಧಾರ್ಮಿಕ ಸಹಿಷ್ಣುತೆ, ಸಹಬಾಳ್ವೆ ಇತ್ಯಾದಿಗಳನ್ನು ನೋಡಿದ್ದರೆ ಇಂಥ ವರದಿ ತಯಾರಿಸುತ್ತಿರಲಿಲ್ಲ. ಭಾರತದಿಂದ ಆಚೆಗೆ ಕುಳಿತು ಭಾರತದ ವಿರುದ್ಧವೇ ಯುಟ್ಯೂಬ್‌ ವಿಡಿಯೋ ಮಾಡಿ ಬಿಡುವ ʼಬುದ್ಧಿವಂತʼರ ಮಾತುಗಳನ್ನು ಕೇಳಿಕೊಂಡು ಇದನ್ನು ತಯಾರಿಸಿದಂತೆ ಇದೆ. ಈ ವರದಿಯ ಅಕ್ಷರಕ್ಷರವೂ ಸುಳ್ಳು ಎಂಬುದಕ್ಕೆ ಸಾಕ್ಷಿಗಳನ್ನು ನೀಡಬಹುದು. ಸಿಪಿಎ (ಸೆಂಟರ್ ಫಾರ್ ಪಾಲಿಸಿ ಅನಾಲಿಸಿಸ್) ಎಂಬ ಜಾಗತಿಕ ಸಂಸ್ಥೆ ಕಳೆದ ವರ್ಷ ನೀಡಿರುವ ಜಾಗತಿಕ ವರದಿಯಲ್ಲಿ, ಜಗತ್ತಿನ ಇತರ ದೇಶಗಳಿಗೆ ಹೋಲಿಸಿದರೆ, ಅಲ್ಪಸಂಖ್ಯಾತರನ್ನು ಒಳಗೊಳ್ಳುವ ಕ್ರಮಗಳಲ್ಲಿ ಭಾರತ ನಂ.1 ಸ್ಥಾನದಲ್ಲಿದೆ ಎಂದು ಹೇಳಿದೆ. ಇದೊಂದು ಸ್ವತಂತ್ರ ಅಂತಾರಾಷ್ಟ್ರೀಯ ಸಂಸ್ಥೆ. 110 ರಾಷ್ಟ್ರಗಳಲ್ಲಿ ಸಮೀಕ್ಷೆ ನಡೆಸಿ ಆ ವರದಿ ನೀಡಿತ್ತು. ಭಾರತವೇ ಅಲ್ಪಸಂಖ್ಯಾತರಿಗೆ ಹೆಚ್ಚು ಸುರಕ್ಷಿತ ಜಾಗ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಯಾವುದೇ ನಿರ್ಬಂಧ ಇಲ್ಲ. ಭಾರತದ ಸಂವಿಧಾನವು ಸಂಸ್ಕೃತಿ ಮತ್ತು ಶಿಕ್ಷಣ ಎರಡರಲ್ಲೂ ಧಾರ್ಮಿಕ ಅಲ್ಪಸಂಖ್ಯಾತರನ್ನು ಪ್ರೋತ್ಸಾಹಿಸುವ ವಿಶಿಷ್ಟ, ವಿಶೇಷ ವಿಧಿಗಳನ್ನು ಹೊಂದಿದೆ ಎಂದೂ ಈ ವರದಿ ಉಲ್ಲೇಖಿಸಿದೆ. ಭಾರತದ ನಂತರದ 4 ಸ್ಥಾನಗಳಲ್ಲಿ ಪನಾಮಾ, ಜಪಾನ್, ದಕ್ಷಿಣ ಕೊರಿಯಾ ಮತ್ತು ನಂತರದ ಸ್ಥಾನದಲ್ಲಿ ಅಮೆರಿಕ ದೇಶ ಇದೆ. ಯುಎಸ್‌ಸಿಐಆರ್‌ಎಫ್‌ ಇದನ್ನು ಗಮನಿಸಿದಂತಿಲ್ಲ.

ನಮ್ಮ ದೇಶದಲ್ಲಿ ಆರು ಧರ್ಮಗಳ (ಮುಸ್ಲಿಂ, ಕ್ರೈಸ್ತ, ಸಿಖ್‌, ಜೈನ, ಬೌದ್ಧ, ಪಾರ್ಸಿ) ಅಲ್ಪಸಂಖ್ಯಾತರು ಒಟ್ಟಾಗಿ ಒಟ್ಟಾರೆ ಜನಸಂಖ್ಯೆಯ 19.3%ದಷ್ಟು ಇದ್ದಾರೆ. ಅಲ್ಪಸಂಖ್ಯಾತರ ಹಿತವನ್ನೂ ಬಹುಸಂಖ್ಯಾತರಂತೆಯೇ ಕಾಯಲು ನಮ್ಮ ಸಂವಿಧಾನದಲ್ಲೂ ʼಧರ್ಮನಿರಪೇಕ್ಷತೆʼಯನ್ನು ಸೇರಿಸಲಾಗಿದೆ. ಅಲ್ಪಸಂಖ್ಯಾತ ಹಿತಚಿಂತನೆ ನೋಡಿಕೊಳ್ಳುವುದಕ್ಕಾಗಿಯೇ ಕೇಂದ್ರದಲ್ಲಿ ʼಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯʼ ಇದೆ. ಈ ದೇಶದ ಮುಖ್ಯಮಂತ್ರಿ, ರಾಜ್ಯಪಾಲ, ರಾಷ್ಟ್ರಪತಿ ಹುದ್ದೆಯನ್ನೂ ಭಾರತೀಯ ಅಲ್ಪಸಂಖ್ಯಾತರು ಜನಮತದಿಂದಲೇ ಅಲಂಕರಿಸಿದ್ದಾರೆ. ಭಾರತದ ಜನಸಂಖ್ಯೆಯ ಸುಮಾರು 14%ದಷ್ಟು, ಅಂದರೆ 20 ಕೋಟಿ ಮಂದಿ ಮುಸ್ಲಿಮರು ಇಲ್ಲಿ ಇದ್ದಾರೆ. ಇದು ದೇಶದ ಎರಡನೇ ಅತಿ ದೊಡ್ಡ ಧಾರ್ಮಿಕ ಸಮುದಾಯ. ಇಂಡೋನೇಷ್ಯಾ ಹಾಗೂ ಪಾಕಿಸ್ತಾನದ ಬಳಿಕ ಅತಿ ಹೆಚ್ಚು ಮುಸ್ಲಿಮರು ಇರುವ ದೇಶ ಎಂದರೆ ಭಾರತ. ಇನ್ನುಳಿದ ಇಸ್ಲಾಮಿಕ್‌ ದೇಶಗಳೆನಿಸಿಕೊಂಡವು ಕೂಡ ಭಾರತದಷ್ಟು ಸಂಖ್ಯೆಯ ಮುಸ್ಲಿಮರನ್ನು ಹೊಂದಿಲ್ಲ. ಭಾರತದಲ್ಲಿ ಎರಡೂ ಧರ್ಮಗಳೂ ಸಾಕಷ್ಟು ಸಾಮರಸ್ಯದಿಂದ ಬಾಳುತ್ತಿವೆ. ಪಾಕಿಸ್ತಾನ, ಇರಾನ್ ಮುಂತಾದ ಅಪ್ಪಟ ಮುಸ್ಲಿಂ ದೇಶಗಳಿಗಿಂತ ಭಾರತೀಯ ಮುಸ್ಲಿಮರು ಹೆಚ್ಚು ಸ್ವಾತಂತ್ರ್ಯ ಮತ್ತು ಸೌಕರ್ಯ ಹೊಂದಿದ್ದಾರೆ. ಹಾಗೆ ನೋಡಿದರೆ ಮುಸ್ಲಿಂ ದೇಶಗಳಲ್ಲೇ ಮುಸ್ಲಿಮರು ಸುರಕ್ಷಿತವಾಗಿಲ್ಲ. ಪಾಕಿಸ್ತಾನ, ಆಫ್ಘಾನಿಸ್ತಾನದ ಮಸೀದಿಗಳಲ್ಲೇ ಬಾಂಬ್ ಇಟ್ಟು ಸ್ಫೋಟಿಸಲಾಗುತ್ತಿದೆ. ಅಲ್ಲಿಯ ಅಲ್ಪಸಂಖ್ಯಾತರು ನಿತ್ಯ ನರಕ ಯಾತನೆ ಅನುಭವಿಸುತ್ತಿದ್ದಾರೆ. ಈ ಸೋಗಲಾಡಿ ವರದಿ ಅದನ್ನೇನಾದರೂ ನೆನಪಿಸಿಕೊಂಡಿದೆಯೇ?

ಈ ವರದಿಯನ್ನು ಹೊರಡಿಸಿದ ಅಮೆರಿಕದ ಬುಡದಲ್ಲಿ ಏನಿದೆ ಎಂದು ಸ್ವಲ್ಪ ನೋಡೋಣ. ಅತಿ ಹಳೆಯ ಪ್ರಜಾಪ್ರಭುತ್ವ ದೇಶ ಎನಿಸಿಕೊಂಡ ಆ ದೇಶದಲ್ಲಿ ಇನ್ನೂವರೆಗೂ ಒಬ್ಬ ಮಹಿಳೆಯೂ ಅಧ್ಯಕ್ಷರಾಗಲು ಸಾಧ್ಯವಾಗಲಿಲ್ಲ. ಬರಾಕ್‌ ಒಬಾಮರಂಥ ಅಲ್ಪಸಂಖ್ಯಾತರು ಅಧ್ಯಕ್ಷರಾಗಲು ಹಲವು ಶತಮಾನಗಳೇ ಬೇಕಾಯಿತು. ಮಹಿಳೆಯರೂ ತಮ್ಮ ಮತದಾನದ ಹಕ್ಕನ್ನು ಪಡೆಯಲು ಬಡಿದಾಡಬೇಕಾಯಿತು. ಇನ್ನು ಅಲ್ಲಿನ ಆಫ್ರಿಕನ್‌ ಸಮುದಾಯ ಅನುಭವಿಸುತ್ತಿರುವ ಸಂಕಷ್ಟವನ್ನು ಹೇಳಬೇಕಾಗಿಯೇ ಇಲ್ಲ. ಇವರನ್ನು ಇಲ್ಲಿ ನೂರಾರು ವರ್ಷಗಳ ಕಾಲ ಜೀತದಾಳುಗಳಾಗಿ ದುಡಿಸಿಕೊಳ್ಳಲಾಗುತ್ತಿತ್ತು. ಇದನ್ನು ಹೋಗಲಾಡಿಸಲು ಲಿಂಕನ್‌ನಂಥ ಮುತ್ಸದ್ಧಿ ಬಲಿದಾನ ಮಾಡಬೇಕಾಯಿತು. ಈಗಲೂ ಅಲ್ಲಿ ಕರಿಯರ ಸಮುದಾಯದ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಇದನ್ನು ವಿರೋಧಿಸಿ ನಡೆಸಲಾಗುತ್ತಿರುವ ʼಬ್ಲ್ಯಾಕ್‌ ಲೈವ್ಸ್‌ ಮ್ಯಾಟರ್ʼ ಚಳವಳಿಯನ್ನೂ ಇಲ್ಲಿ ನೆನಪಿಸಿಕೊಳ್ಳಬಹುದು. ಇನ್ನು ಅಲ್ಲಿನ ಮೂಲವಾಸಿ ಅಮೆರಿಕನ್‌ ಸಮುದಾಯದವರನ್ನು ಯಾವ ರೀತಿ ನಿರ್ಮೂಲನ ಮಾಡಲಾಯಿತು ಎಂಬುದು ಚರಿತ್ರೆಯಲ್ಲಿ ಸೇರಿಹೋಗಿರುವ ಕರಾಳ ಅಧ್ಯಾಯಗಳಲ್ಲೊಂದು. ಇಂದು ಹುಡುಕಿದರೂ ಆ ಜನಾಂಗ ಅಲ್ಲಿ ಸಿಗುವುದಿಲ್ಲ. ಇನ್ನು ಮುಸ್ಲಿಮರ ವಿಷಯಕ್ಕೆ ಬಂದರೆ, 9/11 ಘಟನೆಯ ನಂತರ ಅಲ್ಲಿ ಪ್ರತಿಯೊಬ್ಬ ಮುಸ್ಲಿಮನನ್ನೂ ಶಂಕಿತ ಭಯೋತ್ಪಾದಕನಂತೆಯೇ ನೋಡಲಾಗುತ್ತದೆ. ಮುಸ್ಲಿಮರನ್ನು ಈ ಅನುಮಾನದಿಂದಾಗಿಯೇ ಅಲ್ಲಿನ ಸರ್ಕಾರಿ ಆಡಳಿತಾತ್ಮಕ ಹುದ್ದೆಗಳಲ್ಲಿ ಒಳಬಿಟ್ಟುಕೊಳ್ಳಲಾಗುತ್ತಿಲ್ಲ. ಇಂಥ ದೇಶ, ಭಾರತದಂಥ ʼವಸುಧೈವ ಕುಟುಂಬಕಂʼ ಮಂತ್ರವನ್ನು ಸಾರಿದ ಪುರಾತನ ಸಂಸ್ಕೃತಿಯ ದೇಶಕ್ಕೆ ಬುದ್ಧಿವಾದ ಹೇಳುವುದು ಒಂದು ಕೆಟ್ಟ ಜೋಕ್.‌

ಅಲ್ಪಸಂಖ್ಯಾತರಿಗೆ ಇಲ್ಲಿ ರಕ್ಷಣೆಯಿಲ್ಲ ಎಂದು ಹುಯಿಲೆಬ್ಬಿಸುವುದನ್ನೇ ಕಾಯಕ ಮಾಡಿಕೊಂಡ ಕೆಲವರು ಭಾರತದಲ್ಲೂ ಅಮೆರಿಕದಲ್ಲೂ ಇದ್ದಾರೆ. ಇದು ಅವರ ಹೊಟ್ಟೆಪಾಡು ಎಂದು ಸುಮ್ಮನಾಗವಂತೆಯೂ ಇಲ್ಲ. ಯಾಕೆಂದರೆ ಇವರು ಅಂತಾರಾಷ್ಟ್ರೀಯವಾಗಿ ನಮ್ಮ ಮುಖಕ್ಕೆ ಮಸಿ ಬಳಿಯಬಲ್ಲರು. ಇವರನ್ನು ಚೆನ್ನಾಗಿ ತರಾಟೆಗೆ ತೆಗೆದುಕೊಳ್ಳುವುದೇ ಸರಿಯಾದ ದಾರಿ. ಅಮೆರಿಕ ಇಂಥವರನ್ನು ಹತ್ತಿರಕ್ಕೂ ಬಿಟ್ಟುಕೊಳ್ಳಬಾರದು.

ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಕಳವಳ; ತಿರುಗೇಟು ಕೊಟ್ಟ ಕೇಂದ್ರ ಸರ್ಕಾರ

Continue Reading
Advertisement
T20 World Cup 2024
ಕ್ರೀಡೆ9 mins ago

T20 World Cup 2024: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟಿಸಲು ಹೆದರುತ್ತಿರುವುದಕ್ಕೆ ಇದುವೇ ಅಸಲಿ ಕಾರಣ

Actor Darshan React about Kaatera 2
ಸ್ಯಾಂಡಲ್ ವುಡ್11 mins ago

Actor Darshan: ಗೆದ್ದ ಎತ್ತಿನ ಬಾಲ ಹಿಡಿಯಬಾರದು ಎಂದ ದರ್ಶನ್‌! ಕಾಟೇರ 2 ಬರತ್ತಾ?

KSET Exam 2023 provisional score list
ಪ್ರಮುಖ ಸುದ್ದಿ29 mins ago

KSET Exam 2023: ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆಸೆಟ್‌- 2023ರ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

Amith Shah
Lok Sabha Election 202434 mins ago

Amit Shah: ಅಮಿತ್‌ ಶಾ ವಿಡಿಯೊ ತಿರುಚಿದ ಪ್ರಕರಣ; ಕಾಂಗ್ರೆಸ್ ಐಟಿ ಸೆಲ್‌ನ ಐವರು ಸದಸ್ಯರ ಬಂಧನ

IPL 2024 Points Table
ಕ್ರೀಡೆ35 mins ago

IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

Lok sabha Election 2024
ದೇಶ37 mins ago

Lok sabha Election 2024: ರಾಯ್‌ಬರೇಲಿಯಲ್ಲಿ ಕಣಕ್ಕಿಳಿದಿರುವ ದಿನೇಶ್‌ ಪ್ರತಾಪ್‌ ಸಿಂಗ್‌ ಹಿನ್ನೆಲೆ ಏನು?

Kaatera  Movie Rockline Venkatesh Gifts Car To Jadesh K Hampi Maasthi And Suraj
ಸ್ಯಾಂಡಲ್ ವುಡ್39 mins ago

Kaatera  Movie:  ಕಾಟೇರ ಗೆಲುವು: ಮೂವರಿಗೆ ಉಡುಗೊರೆಯಾಗಿ ಸಿಕ್ತು ಕಾರುಗಳು!

Lok sabha Election
ದೇಶ1 hour ago

Lok Sabha Election 2024: ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ, ಅಮೇಠಿಯಿಂದ ಕಿಶೋರಿಲಾಲ್‌ ಸ್ಪರ್ಧೆ

prajwal revanna case arrest
ಪ್ರಮುಖ ಸುದ್ದಿ1 hour ago

Prajwal Revanna Case: ಪ್ರಜ್ವಲ್ ರೇವಣ್ಣ ಮೇಲೆ ಮತ್ತೊಂದು ಟೈಟ್‌ ಎಫ್‌ಐಆರ್‌, ಇದರಲ್ಲಿ ಬಂಧನ ಖಚಿತ!

Kim Jong Un
ವಿದೇಶ1 hour ago

Kim Jong Un: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಸುಖಕ್ಕೆ ಬೇಕು ಪ್ರತಿ ವರ್ಷ 25 ಹುಡುಗಿಯರು! ಏನಿದು ಆಹ್ಲಾದ ತಂಡ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ14 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌