CAA: ಸಿಎಎ ಜಾರಿ; ಕೇರಳ, ತಮಿಳುನಾಡು ಮುಖ್ಯಮಂತ್ರಿಗಳ ನಿಲುವೇನು? - Vistara News

ದೇಶ

CAA: ಸಿಎಎ ಜಾರಿ; ಕೇರಳ, ತಮಿಳುನಾಡು ಮುಖ್ಯಮಂತ್ರಿಗಳ ನಿಲುವೇನು?

CAA: ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನವನ್ನು ಘೋಷಿಸಿದೆ. ಇದರ ಬೆನ್ನಿಗೆ ಕೇರಳ ಮತ್ತು ತಮಿಳುನಾಡು ಸರ್ಕಾರಗಳು ತಮ್ಮ ರಾಜ್ಯದಲ್ಲಿ ಇದನ್ನು ಜಾರಿಗೆ ತರುವುದಿಲ್ಲ ಎಂದು ಹೇಳಿವೆ.

VISTARANEWS.COM


on

pinrayi stalin
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೇಂದ್ರ ಸರ್ಕಾರ (Central Government) ಸೋಮವಾರ ಪೌರತ್ವ ತಿದ್ದುಪಡಿ ಕಾಯ್ದೆ (CAA) ಅನುಷ್ಠಾನವನ್ನು ಘೋಷಿಸಿದೆ. ಹಲವರು ಇದನ್ನು ಸ್ವಾಗತಿಸಿದ್ದಾರೆ. ಈ ಮಧ್ಯೆ ಕೇರಳ ಮತ್ತು ತಮಿಳುನಾಡು ಸರ್ಕಾರಗಳು ಈ ಕಾಯ್ದೆಯನ್ನು ತಮ್ಮ ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಘೋಷಿಸಿವೆ.

ಕೇರಳದ ನಿಲುವೇನು?

ಸಿಎಎಯನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಘೋಷಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ʼʼಅಲ್ಪಸಂಖ್ಯಾತ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ಪರಿಗಣಿಸುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದಿಲ್ಲ ಎಂದು ನಮ್ಮ ಸರ್ಕಾರ ಹಿಂದೆಯೂ ಹೇಳಿತ್ತು. ಈಗಲೂ ಅದನ್ನೇ ಹೇಳುತ್ತೇವೆʼʼ ಎಂದು ಅವರು ತಿಳಿಸಿದ್ದಾರೆ.

ʼʼಈ ಕೋಮುವಾದಿ ಕಾನೂನನ್ನು ವಿರೋಧಿಸಲು ಇಡೀ ಕೇರಳ ಒಂದಾಗಲಿದೆ. ದೇಶದ ಕೋಮು ಸೌಹಾರ್ದತೆಯನ್ನು ಕದಡಲು ಕೇಂದ್ರ ಸರ್ಕಾರವು ಚುನಾವಣೆಗೆ ಮುಂಚಿತವಾಗಿ ಪೌರತ್ವ ತಿದ್ದುಪಡಿ ಕಾಯ್ದೆಯ ನಿಬಂಧನೆಗಳನ್ನು ಅಧಿಸೂಚನೆ ಮಾಡಿದೆʼʼ ಎಂದು ಅವರು ಆರೋಪಿಸಿದ್ದಾರೆ.

ಇದನ್ನು ಸಂಘ ಪರಿವಾರದ ಕೋಮುವಾದಿ ಕಾರ್ಯಸೂಚಿಯ ಭಾಗ ಎಂದು ಕರೆದಿರುವ ಪಿಣರಾಯಿ ವಿಜಯನ್, ʼʼ2014ರ ಡಿಸೆಂಬರ್ 31ರಂದು ಅಥವಾ ಅದಕ್ಕೂ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ವಲಸೆ ಬಂದ ಮುಸ್ಲಿಮೇತರರಿಗೆ ಪೌರತ್ವ ನೀಡುವುದು ಮತ್ತು ಮುಸ್ಲಿಮರಿಗೆ ಪೌರತ್ವವನ್ನು ನಿರಾಕರಿಸುವುದು ಸಂವಿಧಾನದ ಸ್ಪಷ್ಟ ಉಲ್ಲಂಘನೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ. ʼʼಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ ಮೊದಲ ವಿಧಾನಸಭೆ ಕೇರಳʼʼ ಎಂದೂ ಅವರು ತಿಳಿಸಿದ್ದಾರೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಪ್ರಧಾನ ಕಾರ್ಯದರ್ಶಿ ಪಿ.ಕೆ.ಕುನ್ಹಾಲಿಕುಟ್ಟಿ ಮಾತನಾಡಿ, ʼʼಲೋಕಸಭಾ ಚುನಾವಣೆಗೆ ಮುಂಚಿತವಾಗಿ ಕೇಂದ್ರ ಸರ್ಕಾರ ವಿವಾದಾತ್ಮಕ ಸಿಎಎ ಅಧಿಸೂಚನೆ ಹೊರಡಿಸಿರುವುದು ಕಾನೂನುಬಾಹಿರʼʼ ಎಂದು ಕಿಡಿ ಕಾರಿದ್ದಾರೆ. “ಇದನ್ನು ನಾವು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ” ಎಂದು ಸವಾಲು ಹಾಕಿದ್ದಾರೆ.

ತಮಿಳುನಾಡು ಹೇಳೋದೇನು?

ಇತ್ತ ತಮಿಳು ನಾಡು ಸರದಕಾರ ಕೂಡ ಸಿಎಎ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ಈ ಕಾಯ್ದೆ ಭಾರತೀಯ ನಾಗರಿಕರನ್ನು ವಿಭಜಿಸುತ್ತದೆ. ಹೀಗಾಗಿ ಇದನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಹೇಳಿದ್ದಾರೆ. ʼʼಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗ ಸಿಎಎಯ ನಿಯಮಗಳನ್ನು ಅಧಿಸೂಚನೆಯಾಗಿ ಪ್ರಕಟಿಸಲಾಗಿದೆ. ಸಿಎಎ ಮತ್ತು ಅದರ ನಿಯಮಗಳು ಸಂವಿಧಾನದ ಮೂಲ ರಚನೆಗೆ ವಿರುದ್ಧʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: CAA: ಸಿಎಎ ಜಾರಿ; ಕೇಂದ್ರದ ನಿರ್ಧಾರ ಸ್ವಾಗತಿಸಿದ ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಹೇಳಿದ್ದೇನು?

“ಸಿಎಎಯಿಂದ ಯಾವುದೇ ಪ್ರಯೋಜನ ಇಲ್ಲ. ಈ ಕಾನೂನು ಸಂಪೂರ್ಣವಾಗಿ ಅನಗತ್ಯ ಎಂಬುದು ನಮ್ಮ ಸರ್ಕಾರದ ನಿಲುವು. ಅದನ್ನು ರದ್ದುಪಡಿಸಬೇಕುʼʼ ಎಂದು ಆಗ್ರಹಿಸಿದ್ದಾರೆ. ʼʼಸಿಎಎ ಬಹುತ್ವ, ಜಾತ್ಯಾತೀತತೆ, ಅಲ್ಪಸಂಖ್ಯಾತ ಸಮುದಾಯ ಮತ್ತು ಶ್ರೀಲಂಕಾದ ತಮಿಳು ನಿರಾಶ್ರಿತರಿಗೆ ವಿರುದ್ಧವಾಗಿದೆʼʼ ಎಂದು ಆಡಳಿತಾರೂಢ ಡಿಎಂಕೆ ಅಧ್ಯಕ್ಷರೂ ಆಗಿರುವ ಸ್ಟಾಲಿನ್ ಪುನರುಚ್ಚರಿಸಿದ್ದಾರೆ. ಸಿಎಎ ಕಾಯ್ದೆಯ ವಿರುದ್ಧ ದೇಶದ ವಿವಿಧ ಕಡೆಗಳಲ್ಲಿ ಪ್ರತಿಭಟನೆ ಆರಂಭವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi : 2019ರಲ್ಲಿ ಬಿಹಾರದ ಒಂದು ಕ್ಷೇತ್ರದಲ್ಲಿ ಸೋತಿದ್ದೆವು; ಈ ಬಾರಿ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದ ಮೋದಿ

Narendra Modi: ಭಾನುವಾರ ರೋಡ್ ಶೋ ಸಂದರ್ಭದಲ್ಲಿ ಮಾತನಾಡಿದ್ದ ಪ್ರಧಾನಿ, ಬಿಹಾರದಲ್ಲಿ ಮೈತ್ರಿಕೂಟವು ಕ್ಲೀನ್ ಸ್ವೀಪ್ ಸಾಧನೆ ಮಾಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ನಾನು ಬಿಹಾರದ ನಮ್ಮ ಮಿತ್ರಪಕ್ಷಗಳೊಂದಿಗೆ ಮಾತನಾಡಿದ್ದೇನೆ. ನಾವು (2019 ರಲ್ಲಿ) ಒಂದು ಸ್ಥಾನವನ್ನು ಕಳೆದುಕೊಂಡಿದ್ದೇವೆ ಮತ್ತು ಈ ಬಾರಿ ನಾವು ಒಂದು ಸ್ಥಾನವನ್ನು ಸಹ ಕಳೆದುಕೊಳ್ಳುವುದಿಲ್ಲ ಎಂದು ಅವರೆಲ್ಲರೂ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಮೋದಿ ಹೇಳಿಕೊಂಡರು.

VISTARANEWS.COM


on

Narendra modi
Koo

ಬೆಂಗಳೂರು: ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ 2019ರ ಲೋಕ ಸಭಾ ಚುನಾವಣೆಯಲ್ಲಿ (Lok Sabha Election) ಬಿಹಾರದಲ್ಲಿ ಒಂದು ಸ್ಥಾನ ಕಳೆದುಕೊಂಡಿತ್ತು. ಈ ಬಾರಿ ಈ ಬಾರಿ ನಾವು ಒಂದನ್ನೂ ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi ) ಹೇಳಿದ್ದಾರೆ. ಎನ್​ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಎಲ್ಲ ಸೀಟ್​ಗಳನ್ನು ಗೆಲ್ಲುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಮಿತ್ರಪಕ್ಷ ಜೆಡಿಯು ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪಾಟ್ನಾದಲ್ಲಿ ರೋಡ್ ಶೋ (Modi Patna Road Show) ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಆಡಳಿತಾರೂಢ ಮೈತ್ರಿಕೂಟವು 2019 ರ ಲೋಕಸಭಾ ಚುನಾವಣೆಗಿಂತ ರಾಜ್ಯದಲ್ಲಿ ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಕಳೆದ ಬಾರಿ ಕಳೆದುಕೊಂಡ ಏಕೈಕ ಕ್ಷೇತ್ರವನ್ನು ಸಹ ಗೆಲ್ಲುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಭಾನುವಾರ ರೋಡ್ ಶೋ ಸಂದರ್ಭದಲ್ಲಿ ಮಾತನಾಡಿದ್ದ ಪ್ರಧಾನಿ, ಬಿಹಾರದಲ್ಲಿ ಮೈತ್ರಿಕೂಟವು ಕ್ಲೀನ್ ಸ್ವೀಪ್ ಸಾಧನೆ ಮಾಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ನಾನು ಬಿಹಾರದ ನಮ್ಮ ಮಿತ್ರಪಕ್ಷಗಳೊಂದಿಗೆ ಮಾತನಾಡಿದ್ದೇನೆ. ನಾವು (2019 ರಲ್ಲಿ) ಒಂದು ಸ್ಥಾನವನ್ನು ಕಳೆದುಕೊಂಡಿದ್ದೇವೆ ಮತ್ತು ಈ ಬಾರಿ ನಾವು ಒಂದು ಸ್ಥಾನವನ್ನು ಸಹ ಕಳೆದುಕೊಳ್ಳುವುದಿಲ್ಲ ಎಂದು ಅವರೆಲ್ಲರೂ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಮೋದಿ ಹೇಳಿಕೊಂಡರು.

ರಾಜ್ಯ ಮತ್ತು ಅದರ ಜನರೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದೇನೆ. ನಾನು ಹಲವಾರು ಕೆಲಸಕ್ಕಾಗಿ ಆಗಾಗ್ಗೆ ಇಲ್ಲಿಗೆ ಬಂದಿದ್ದೇನೆ. ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದೇನೆ. ನನಗೆ ಇಲ್ಲಿ ಬಹಳ ಹಳೆಯ ಸಂಪರ್ಕಗಳಿವೆ ಎಂಬುದಾಗಿ ಅವರು ಹೇಳಿಕೊಂಡರು.

ಮುಂದುವರಿದ ಪ್ರಧಾನಿ ನರೇಂದ್ರ ಮೋದಿ, ಈ ಬಾರಿ ಪೂರ್ವ ಭಾರತದಲ್ಲಿ ಬಿಜೆಪಿ ತನ್ನ ಹೆಜ್ಜೆಗುರುತನ್ನು ಭಾರಿ ಪ್ರಮಾಣದಲ್ಲಿ ವಿಸ್ತರಿಸಲಿದೆ. ಇದು ಎನ್​ಡಿಎಯ 400 ಸ್ಥಾನಗಳ ಗಡಿ ಸುಲಭವಾಗಿ ತಲುಪಲು ನೆರವಾಗುತ್ತದೆ ಎಂದು ಹೇಳಿದರು. ಪೂರ್ವ ಭಾರತದಲ್ಲಿ ಬಿಜೆಪಿಯ ಏಳಿಗೆಯ ಬಗ್ಗೆ ಕೇಳಿದಾಗ, ವಲಯವನ್ನು ಬೆಳವಣಿಗೆಯ ಎಂಜಿನ್ ಆಗಿ ಅಭಿವೃದ್ಧಿಪಡಿಸಲು ವಿಶೇಷ ಗಮನ ಹರಿಸುವ ಬಗ್ಗೆ ಪ್ರಧಾನಿ ಮಾತನಾಡಿದರು.

ಇದನ್ನೂ ಓದಿ: Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

ನೀವು ನನ್ನ 2013 ರ ಭಾಷಣವನ್ನು ಆಲಿಸಿದ್ದರೆ ನೆನಪಿರಬಹುದು. ನಾನು ಪ್ರಧಾನಿ ಆಗಿದ್ದ ವೇಳೆ ಭಾರತವನ್ನು ಅಭಿವೃದ್ಧಿಪಡಿಸಲು ಬಯಸಿದ ವೇಳೆ ಪೂರ್ವ ಭಾರತವನ್ನು ಬೆಳವಣಿಗೆಯ ಎಂಜಿನ್ ಆಗಿ ಪರಿವರ್ತಿಸಿದ್ದೆನೆ ಎಂದು ನಾನು ಹೇಳಿದ್ದೆ” ಎಂದು ಅವರು ಪಾಟ್ನಾದಲ್ಲಿ ರೋಡ್ ಶೋ ನಡೆಸುವಾಗ ಹೇಳಿದರು.

ನಾವು ಮೂಲಸೌಕರ್ಯ, ಆರೋಗ್ಯ ಇತ್ಯಾದಿಗಳ ಮೇಲೆ ಗಮನ ಹರಿಸಿದ್ದೇವೆ. ಈ ಸಮೀಕ್ಷೆಯನ್ನು ಪರಿಗಣಿಸಿದರೆ, ಪೂರ್ವ ಭಾರತದ ಚುನಾವಣಾ ಫಲಿತಾಂಶಗಳು ಅದನ್ನು ಪ್ರತಿಬಿಂಬಿಸಲಿವೆ. ಜನರು ಆಶ್ಚರ್ಯಚಕಿತರಾಗಲಿದ್ದಾರೆ. ತೆಲಂಗಾಣ, ಒಡಿಶಾ, ಬಂಗಾಳ, ಬಿಹಾರ, ಜಾರ್ಖಂಡ್, ಅಸ್ಸಾಂನಲ್ಲಿ ಬಿಜೆಪಿ ಹೊಸ ಹುಟ್ಟುಪಡೆಯಲಿಎ ಎಂದು ಹೇಳಿದರು.

Continue Reading

ದೇಶ

Viral Video: ವಂದೇ ಭಾರತ್ ರೈಲಿನಡಿ ಸಿಲುಕಿದರೂ ಹಸು ಪ್ರಾಣಾಪಾಯದಿಂದ ಪಾರಾಗಿದ್ದು ಹೇಗೆ?

ಹಸುವೊಂದು ವಂದೇ ಭಾರತ್ ರೈಲಿನಡಿ ಸಿಲುಕಿಕೊಂಡರೂ ಲೋಕೋ ಪೈಲೆಟ್ ನ ಮುನ್ನೆಚ್ಚರಿಕೆ ಕ್ರಮವಾಗಿ ಬದುಕಿ ಉಳಿದಿದೆ. ಇದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

By

Viral Video
Koo

ಮುಂಬಯಿ: ರೈಲು ಅಪಘಾತದಿಂದ (rail accident) ಪ್ರಾಣಿಗಳು ಮಾತ್ರವಲ್ಲ ಮನುಷ್ಯರೂ ಸಾವನ್ನಪ್ಪುತ್ತಿರುವ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತದೆ. ಇತ್ತೀಚೆಗಂತೂ ದೇಶದಾದ್ಯಂತ ವೇಗವಾಗಿ ಬರುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ (Vande Bharat Express trains) ಹಸುಗಳು ಢಿಕ್ಕಿ ಹೊಡೆದು ಮೃತಪಡುತ್ತಿರುವ ಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ವೈರಲ್ (Viral Video) ಆಗುತ್ತಿರುತ್ತದೆ.

ವೇಗವಾಗಿ ಬರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಡಿಕ್ಕಿಯಾಗಿ ಹಲವು ಹಸುಗಳು ಸಾವನ್ನಪ್ಪಿವೆ. ಆದರೆ ಇದೀಗ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಲೋಕೋಮೋಟಿವ್ ಪೈಲಟ್ ತುರ್ತು ಬ್ರೇಕ್ ಹಾಕುವ ಮೂಲಕ ಹಸುವನ್ನು ರಕ್ಷಿಸಿದಘಟನೆ ನಡೆದಿದೆ. ಇದರ ದೃಶ್ಯ ಕೆಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಂದೇ ಭಾರತ್ ರೈಲಿನ ಕೆಳಗೆ ಹಸು ಸಿಲುಕಿಕೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಲೋಕೋ ಪೈಲಟ್ ರೈಲು ಹಳಿಯ ಮೇಲೆ ಹಸುವನ್ನು ಗುರುತಿಸಿ ಪ್ರಾಣಿಯನ್ನು ರಕ್ಷಿಸಲು ತುರ್ತು ಬ್ರೇಕ್ ಹಾಕಿದರು ಎನ್ನಲಾಗಿದೆ.


ರೈಲಿನಡಿ ಸಿಲುಕಿಕೊಂಡಿತ್ತು

ಲೋಕೋ ಪೈಲಟ್ ಬ್ರೇಕ್ ಹಾಕುವಷ್ಟರಲ್ಲಿ ಹಸುವಿನ ಅರ್ಧ ಭಾಗ ರೈಲಿನ ಕೆಳಗೆ ಸಿಲುಕಿಕೊಂಡಿತ್ತು. ರೈಲಿನ ಮುಂಭಾಗದ ಭಾಗವು ಹಸುವಿನ ಮೇಲೆ ಬಿದ್ದಾಗ ಹಸು ನೋವಿನಿಂದ ಕೂಗಿತ್ತು.

ಅನಂತರ ಚಾಲಕ ರೈಲನ್ನು ಹಿಮ್ಮುಖ ದಿಕ್ಕಿನಲ್ಲಿ ಚಲಿಸಿ ಹಸುವನ್ನು ರಕ್ಷಿಸಿದರು. ಬಳಿಕ ಹಸು ಎದ್ದು ಟ್ರ್ಯಾಕ್‌ನಿಂದ ಹೊರನಡೆದಿದೆ. ಹಸುವಿಗೆ ಯಾವುದೇ ಗಾಯವಾಗಿಲ್ಲ. ಸಕಾಲಕ್ಕೆ ಲೋಕೋ ಪೈಲೆಟ್ ಬ್ರೇಕ್ ಹಾಕಿದ್ದರಿಂದ ಹಸು ಪ್ರಾಣಾಪಾಯದಿಂದ ಪಾರಾಗಿದೆ.


ಚಾಲಕನ ಚಾಲಾಕಿತನಕ್ಕೆ ಶ್ಲಾಘನೆ

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಹಸು ಪ್ರಾಣಾಪಾಯದಿಂದ ಪಾರಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದ್ದು ಚಾಲಕನಿಗೆ ಸಾಕಷ್ಟು ಮೆಚ್ಚುಗೆಯ ಮಾತುಗಳು ಹರಿದು ಬರುತ್ತಿವೆ.

ಇದನ್ನೂ ಓದಿ: Viral Video: ಬಸ್‌, ರೈಲಿನಲ್ಲಿ ಮಾತ್ರ ಅಲ್ಲ.. ಫ್ಲೈಟ್‌ನಲ್ಲೂ ನಡೆಯುತ್ತೆ ಸೀಟಿಗಾಗಿ ಮಾರಾಮಾರಿ

ತಡವಾದ ರೈಲು, ಬಾಗಿಲುಗಳ ದೋಷಗಳು

ಅಹಮದಾಬಾದ್- ಮುಂಬಯಿ ವಂದೇ ಭಾರತ್‌ನ ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ರೈಲಿನಲ್ಲಿರುವ ಸಮಸ್ಯೆಗಳ ಬಗ್ಗೆಯೂ ಈ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ.

ಇತ್ತೀಚಿನ ಘಟನೆಯೊಂದರಲ್ಲಿ ಕಾನ್ಪುರದಿಂದ ದೆಹಲಿ ಕಡೆಗೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದು ಹಸು ಸಾವನ್ನಪ್ಪಿತ್ತು. ರೈಲಿನ ಚಾಲಕ ತುರ್ತು ಬ್ರೇಕ್‌ಗಳನ್ನು ಹಾಕಿದ್ದನು, ಆದರೆ, ಹಸುವಿನ ಮೃತ ದೇಹ ರೈಲಿನಲ್ಲಿ ಸಿಲುಕಿಕೊಂಡಿತು. ರೈಲಿನಿಂದ ಪ್ರಾಣಿಯ ಅವಶೇಷಗಳನ್ನು ತೆಗೆದುಹಾಕಲು ರೈಲನ್ನು ಹತ್ತು ನಿಮಿಷಗಳ ಕಾಲ ನಿಲ್ಲಿಸಬೇಕಾಯಿತು. ದೆಹಲಿ- ಹೌರಾ ಮಾರ್ಗದಲ್ಲಿ ಈ ಘಟನೆ ಸಂಭವಿಸಿದ್ದು, ರೈಲನ್ನು ಅಚಲ್ದಾ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು ಎಂದು ಪ್ರಯಾಣಿಕರೊಬ್ಬರು ಹೇಳಿಕೊಂಡಿದ್ದಾರೆ.

Continue Reading

ದೇಶ

Bomb Threat:  ಏರ್​ಪೋರ್ಟ್​ ಸೇರಿ ದೆಹಲಿಯ ಹತ್ತಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ

ದೆಹಲಿಯ ವಿಮಾನ ನಿಲ್ದಾಣ ಸೇರಿದಂತೆ ಹತ್ತಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಭಾನುವಾರ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶಗಳು ಬಂದಿದ್ದು, ಅಧಿಕಾರಿಗಳು ತೀವ್ರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

VISTARANEWS.COM


on

By

Bomb Threat
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಿಮಾನ ನಿಲ್ದಾಣ (delhi airport) ಮತ್ತು ಹಲವಾರು ಆಸ್ಪತ್ರೆಗಳಿಗೆ (hospital) ಭಾನುವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಸಂದೇಶಗಳು ಬಂದವು. ಇದರಿಂದಾಗಿ ಸ್ಥಳೀಯರು ಆತಂಕಕ್ಕೆ ಒಳಗಾದರು. ಅಧಿಕಾರಿಗಳು ಬಹು ಬಾಂಬ್ ನಿಷ್ಕ್ರಿಯ ದಳಗಳು ಮತ್ತು ಅಗ್ನಿಶಾಮಕ ಸಿಬ್ಬಂದಿ, ವಾಹನಗಳನ್ನು ನಿಯೋಜಿಸಿದರು. ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ಮೊದಲು ಬುರಾರಿ ಆಸ್ಪತ್ರೆಗೆ ಬಾಂಬ್ ಬೆದರಿಕೆ ಬಂದಿದ್ದು, ಅಪರಾಹ್ನ 3.15ರ ಸುಮಾರಿಗೆ ಸಂದೇಶ ಬಂದಿರುವುದಾಗಿ ವರದಿಯಾಗಿದೆ.


ಹಲವು ಆಸ್ಪತೆಗಳಿಗೆ ಬೆದರಿಕೆ

ಬಾಂಬ್ ಬೆದರಿಕೆಯ ಬಗ್ಗೆ ಬುರಾರಿ ಆಸ್ಪತ್ರೆಗೆ ಇ-ಮೇಲ್ ಬಂದಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು, ಬಾಂಬ್ ಸ್ಕ್ವಾಡ್, ಶ್ವಾನ ದಳಗಳು ಸ್ಥಳಕ್ಕೆ ಧಾವಿಸಿತ್ತು. ತಂಡಗಳು ಆಸ್ಪತ್ರೆಯನ್ನು ಪರಿಶೀಲಿಸುತ್ತಿವೆ. ಇನ್ನೂ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಎಂ.ಕೆ. ಮೀನಾ ತಿಳಿಸಿದ್ದಾರೆ.

ಸಂಜೆ 4.26ರ ಸುಮಾರಿಗೆ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಿಂದ ಎರಡನೇ ಕರೆ ಬಂದಿದ್ದು, ಬಳಿಕ ಹಿಂದೂ ರಾವ್ ಆಸ್ಪತ್ರೆ ಸೇರಿದಂತೆ ಎಂಟರಿಂದ 10 ಇತರ ಆಸ್ಪತ್ರೆಗಳಿಗೆ ಇದೇ ರೀತಿಯ ಬೆದರಿಕೆ ಇ-ಮೇಲ್‌ಗಳು ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಬೆದರಿಕೆ

ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಕುರಿತು ಸಂಜೆ 6.15 ರ ಸುಮಾರಿಗೆ ಕರೆ ಬಂದಿತ್ತು ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.

ಐಜಿಐ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆಯ ಕುರಿತು ಸಂಜೆ 6.15 ರ ಸುಮಾರಿಗೆ ನಮಗೆ ಕರೆ ಬಂದಿತ್ತು. ಅಗ್ನಿಶಾಮಕ ವಾಹನಗಳನ್ನು ಸಿಬ್ಬಂದಿ ಸಮೇತ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಗಾರ್ಗ್ ಹೇಳಿದರು.
ಶಾಲೆಗಳಿಗೆ ಹಿಂದೆ ಬೆದರಿಕೆ ಹಾಕಲಾಗಿತ್ತು.


ಇತ್ತೀಚೆಗೆ ಬೆಂಗಳೂರು, ದೆಹಲಿ ಮತ್ತು ಅಹಮದಾಬಾದ್‌ನಲ್ಲಿ ಇದೇ ರೀತಿಯ ಬೆದರಿಕೆಗಳನ್ನು ಹಾಕಲಾಗಿತ್ತು. ಕೆಲವೇ ದಿನಗಳ ಹಿಂದೆ ದೆಹಲಿ-ಎನ್‌ಸಿಆರ್‌ನಾದ್ಯಂತ 130 ಕ್ಕೂ ಹೆಚ್ಚು ಶಾಲೆಗಳು ತಮ್ಮ ಆವರಣದಲ್ಲಿ ಸ್ಫೋಟಕಗಳಿರುವುದಾಗಿ ಇ-ಮೇಲ್‌ ಸಂದೇಶಗಳನ್ನು ಸ್ವೀಕರಿಸಿದವು. ಬೆದರಿಕೆಗಳು ವ್ಯಾಪಕವಾದ ಭೀತಿಗೆ ಕಾರಣವಾಗಿತ್ತು. ಇದರ ಪರಿಣಾಮವಾಗಿ ತಕ್ಷಣದ ಸ್ಥಳಾಂತರಿಸುವಿಕೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಸಂಪೂರ್ಣ ಹುಡುಕಾಟಗಳನ್ನು ನಡೆಸಲಾಯಿತು.

ಇದನ್ನೂ ಓದಿ: Bomb Threat: ದೆಹಲಿ ಬಳಿಕ ಇದೀಗ ಅಹಮದಾಬಾದ್​ನ ಶಾಲೆಗಳಿಗೂ ಬಾಂಬ್​ ಬೆದರಿಕೆ

ದೂರು ದಾಖಲು

ಇ-ಮೇಲ್‌ಗಳ ನಿಖರವಾದ ಮೂಲವನ್ನು ಪತ್ತೆ ಹಚ್ಚಲು ದೆಹಲಿ ಪೊಲೀಸರು ಇಂಟರ್‌ಪೋಲ್ ಮೂಲಕ ರಷ್ಯಾದ ಮೇಲಿಂಗ್ ಸೇವಾ ಕಂಪೆನಿ Mail.ru ಅನ್ನು ಸಂಪರ್ಕಿಸಿದರು. ಬಾಂಬ್ ಹುಸಿ ಇ-ಮೇಲ್‌ಗಳ ಉದ್ದೇಶವು ಸಾಮೂಹಿಕ ಭೀತಿಯನ್ನು ಸೃಷ್ಟಿಸುವುದು ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದಾಗಿದೆ ಎಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಸುಳ್ಳು ಬಾಂಬ್ ಬೆದರಿಕೆಗಳ ಸಂದರ್ಭಗಳನ್ನು ಎದುರಿಸಲು ವಿವರವಾದ ಪ್ರೋಟೋಕಾಲ್ ಮತ್ತು ಸ್ಟ್ಯಾಂಡರ್ಡ್ ಆಪರೇಷನ್ ಪ್ರೊಸೀಜರ್ಸ್ (SOP) ಗಾಗಿ ಕೇಂದ್ರ ಗೃಹ ಸಚಿವಾಲಯ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ವಾರದ ಆರಂಭದಲ್ಲಿ, ಗೃಹ ಕಾರ್ಯದರ್ಶಿ ದೆಹಲಿ ಪೊಲೀಸರು ಮತ್ತು ಶಾಲೆಗಳಿಗೆ ತಪ್ಪು ಮಾಹಿತಿಯಿಂದಾಗಿ ಯಾವುದೇ ಅನಗತ್ಯ ಭಯವನ್ನುಉಂಟಾಗದಂತೆ ತಡೆಯಲು ವ್ಯವಸ್ಥೆಗೊಳಿಸುವಂತೆ ಕೇಳಿಕೊಂಡಿದ್ದರು.

ಭದ್ರತೆ ಹೆಚ್ಚಳಕ್ಕೆ ಸೂಚನೆ

ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಭದ್ರತೆ, ಸಿಸಿಟಿವಿ ಕೆಮರಾ ಮತ್ತು ಇಮೇಲ್‌ಗಳ ನಿಯಮಿತ ಮೇಲ್ವಿಚಾರಣೆಯನ್ನು ಹೆಚ್ಚಿಸುವ ಅಗತ್ಯವನ್ನು ಸಚಿವಾಲಯ ಒತ್ತಿಹೇಳಿದೆ.

ತಪ್ಪು ಮಾಹಿತಿಯು ಯಾವುದೇ ಅನಗತ್ಯ ಭೀತಿಯನ್ನು ಸೃಷ್ಟಿಸದಂತೆ ಪರಿಣಾಮಕಾರಿ ಪ್ರತಿಕ್ರಿಯೆ ಕಾರ್ಯವಿಧಾನಕ್ಕಾಗಿ ನಿಕಟ ಸಮನ್ವಯವನ್ನು ಹೊಂದಲು ದೆಹಲಿ ಪೊಲೀಸರು ಮತ್ತು ಶಾಲೆಗಳಿಗೆ ಗೃಹ ಕಾರ್ಯದರ್ಶಿ ತಿಳಿಸಿದ್ದಾರೆ. ಈ ಕುರಿತು ನಡೆದ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಮತ್ತು ದೆಹಲಿ ಪೊಲೀಸ್ ಕಮಿಷನರ್ ಭಾಗವಹಿಸಿದ್ದರು.

Continue Reading

ಮಹಿಳೆ

French Yoga Teacher: ಹಸಿರು ಸೀರೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ 101 ವರ್ಷದ ವಿದೇಶಿ ಯೋಗ ಶಿಕ್ಷಕಿ!

ಫ್ರಾನ್ಸ್ ನ 101 ವರ್ಷದ ಯೋಗ ಶಿಕ್ಷಕಿಯೊಬ್ಬರು (French Yoga Teacher) ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಶ್ರೀ ಪುರಸ್ಕಾರ ಪಡೆದಿದ್ದಾರೆ. ಈ ಕುರಿತು ರಾಷ್ಟ್ರಪತಿ ಭವನದಿಂದ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.

VISTARANEWS.COM


on

By

French Yoga Teacher
Koo

ನವದೆಹಲಿ: ವಯಸ್ಸು ಕೇವಲ ಒಂದು ಸಂಖ್ಯೆ ಮಾತ್ರ ಎಂಬುದನ್ನು ಇದೀಗ 101 ವರ್ಷದ ಫ್ರೆಂಚ್ ಯೋಗ ಶಿಕ್ಷಕಿ (French Yoga Teacher) ಸಾಬೀತು ಪಡಿಸಿದ್ದಾರೆ. ವಯಸ್ಸಿನ ಮಿತಿ ನಿಯಮಗಳನ್ನು ಮೀರಿ ಸುಮಾರು ನಾಲ್ಕು ದಶಕಗಳ ಕಾಲ ಯೋಗಕ್ಕೆ ಅವರು ನೀಡಿರುವ ಅಸಾಧಾರಣ ಕೊಡುಗೆಯನ್ನು ಗೌರವಿಸಿ ಶಾರ್ಲೆಟ್ ಚಾಪಿನ್ (Charlotte Chopin) ಅವರಿಗೆ ಭಾರತದ (India) ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ ( Padma Shri award) ಅನ್ನು ನೀಡಿ ಗೌರವಿಸಲಾಯಿತು.

ನವದೆಹಲಿಯ (new delhi) ರಾಷ್ಟ್ರಪತಿ ಭವನದಲ್ಲಿ ( Rashtrapati Bhawan) ಗುರುವಾರ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಹಸಿರು ಸೀರೆಯನ್ನು ಧರಿಸಿದ ಶಾರ್ಲೆಟ್ ಚಾಪಿನ್ ವೇದಿಕೆಯತ್ತ ನಡೆದು ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಯೋಗ ಕ್ಷೇತ್ರದಲ್ಲಿ ಶಾರ್ಲೆಟ್ ಚಾಪಿನ್ ಅವರ ಪ್ರಯತ್ನವನ್ನು ಶ್ಲಾಘಿಸಿ ರಾಷ್ಟ್ರಪತಿಯವರ ಕಚೇರಿಯು ಎಕ್ಸ್ ನಲ್ಲಿ ಟ್ವೀಟ್ ಮಾಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಯೋಗ ಕ್ಷೇತ್ರದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಶಾರ್ಲೆಟ್ ಚಾಪಿನ್ ಅವರಿಗೆ ಪ್ರದಾನ ಮಾಡಿದರು. ಅವರು ಪ್ರಸಿದ್ಧ ಫ್ರೆಂಚ್ ಯೋಗ ಶಿಕ್ಷಕಿಯಾಗಿದ್ದಾರೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯೋಗವನ್ನು ಕಲಿಸುತ್ತಿದ್ದಾರೆ ಮತ್ತು 101ನೇ ವಯಸ್ಸಿನಲ್ಲಿ ಯೋಗ ಶಿಕ್ಷಕರಾಗಿ ಸಕ್ರಿಯರಾಗಿದ್ದಾರೆ ಎಂದು ಟ್ವೀಟ್ ನಲ್ಲಿ ತಿಳಿಸಲಾಗಿದೆ.


ಶಾರ್ಲೆಟ್ ಚಾಪಿನ್ ಯಾರು?

ಚಾಪಿನ್ ಫ್ರಾನ್ಸ್ ಮೂಲದವರಾಗಿದ್ದು, ಪ್ರಸ್ತುತ ಯೋಗ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲಾ ವಯಸ್ಸಿನ ಮಿತಿಯ ಮಾನದಂಡಗಳನ್ನು ಮೀರಿ ಚಾಪಿನ್ ಅವರು 50 ವರ್ಷ ವಯಸ್ಸಿನ ಅನಂತರ ಯೋಗವನ್ನು ಕಲಿತರು. 1982 ರಲ್ಲಿ ಫ್ರಾನ್ಸ್ ನಲ್ಲಿ ಕಲಿಸಲು ಪ್ರಾರಂಭಿಸಿದರು. ಅವರು ದೇಶದಲ್ಲಿ ಯೋಗದ ಅಲೆಯನ್ನು ಸೃಷ್ಟಿಸಿದರು. ಇದು ಪ್ರಸಿದ್ಧ ಫಿಟ್ನೆಸ್ ಅಭ್ಯಾಸವನ್ನು ಮಾಡಿದರು. ಅವರು ಫ್ರೆಂಚ್ ಟಿವಿ ಶೋ, ‘ಫ್ರಾನ್ಸ್ ಗಾಟ್ ಇನ್‌ಕ್ರೆಡಿಬಲ್ ಟ್ಯಾಲೆಂಟ್’ ನಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

2023ರ ಜುಲೈನಲ್ಲಿ ಅವರು ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪಾಲ್ಗೊಳ್ಳಲು ಫ್ರೆಂಚ್ ಪ್ರವಾಸದಲ್ಲಿದ್ದಾಗ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೊದಲ ಬಾರಿಗೆ ಪ್ಯಾರಿಸ್‌ನಲ್ಲಿ ಭೇಟಿಯಾದರು. ಯೋಗ ಕ್ಷೇತ್ರದಲ್ಲಿ ಅವರ ಅಸಾಧಾರಣ ಕೆಲಸದಿಂದ ಪ್ರಭಾವಿತರಾದ ಪ್ರಧಾನಿ, ಯೋಗದಲ್ಲಿ ಚಾಪಿನ್ ಅವರ ಆಳವಾದ ನಂಬಿಕೆ ಮತ್ತು ಫ್ರಾನ್ಸ್‌ನಲ್ಲಿ ಯೋಗವನ್ನು ಉತ್ತೇಜಿಸಲು ಅವರ ಪ್ರಯತ್ನಗಳನ್ನು ಶ್ಲಾಘಿಸಿದರು.

ಯೋಗವು ಸಂತೋಷವನ್ನು ತರುತ್ತದೆ ಮತ್ತು ಸಮಗ್ರ ಯೋಗಕ್ಷೇಮವನ್ನು ಉತ್ತೇಜಿಸುತ್ತದೆ ಎಂದು ಜುಲೈನಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದಾಗ ಚಾಪಿನ್ ಹೇಳಿದ್ದರು.

Continue Reading
Advertisement
IPL 2024
Latest6 mins ago

IPL 2024 : ಸಿಎಸ್​ಕೆ ವರ್ಸಸ್​ ಅರ್​ಆರ್​ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಯಿತಾ? ಅಭಿಮಾನಿಗಳ ಅನುಮಾನ

Self Harming
ಕ್ರೈಂ14 mins ago

Self Harming: ಎರಡು ಸಬ್ಜೆಕ್ಟ್‌ ಫೇಲ್ ಆಗಿದ್ದಕ್ಕೆ ಕೆರೆಗೆ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Narendra modi
ದೇಶ25 mins ago

Narendra Modi : 2019ರಲ್ಲಿ ಬಿಹಾರದ ಒಂದು ಕ್ಷೇತ್ರದಲ್ಲಿ ಸೋತಿದ್ದೆವು; ಈ ಬಾರಿ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದ ಮೋದಿ

Viral Video
ದೇಶ47 mins ago

Viral Video: ವಂದೇ ಭಾರತ್ ರೈಲಿನಡಿ ಸಿಲುಕಿದರೂ ಹಸು ಪ್ರಾಣಾಪಾಯದಿಂದ ಪಾರಾಗಿದ್ದು ಹೇಗೆ?

Sean Williams
ಪ್ರಮುಖ ಸುದ್ದಿ48 mins ago

Sean Williams : ಜಿಂಬಾಬ್ವೆ ತಂಡದ ಹಿರಿಯ ಆಲ್​ರೌಂಡರ್​ ಟಿ20 ಕ್ರಿಕೆಟ್​ನಿಂದ ನಿವೃತ್ತಿ

Hoax bomb threat
ಕರ್ನಾಟಕ1 hour ago

Hoax Bomb Threat: ದೆಹಲಿ ಬೆನ್ನಲ್ಲೇ ಬೆಂಗಳೂರಿನ ಪ್ರಮುಖ‌ ಆಸ್ಪತ್ರೆಗೆ ಹುಸಿ ಬಾಂಬ್ ಬೆದರಿಕೆ‌; ಆತಂಕ ಸೃಷ್ಟಿ

IPL 2024
ಕ್ರೀಡೆ1 hour ago

IPL 2024 : ಕೆಕೆಆರ್ ತಂಡದ ಇನ್ನೊಬ್ಬ ಆಟಗಾರನಿಗೆ ದಂಡ ವಿಧಿಸಿದ ಬಿಸಿಸಿಐ

Prajwal Revanna Case Basavaraj Bommai says DK Shivakumar should be questioned
ಕರ್ನಾಟಕ1 hour ago

Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

Bomb Threat
ದೇಶ1 hour ago

Bomb Threat:  ಏರ್​ಪೋರ್ಟ್​ ಸೇರಿ ದೆಹಲಿಯ ಹತ್ತಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ

BDA Complex
ಕರ್ನಾಟಕ2 hours ago

BDA Complex: ವಿರೋಧದ ನಡುವೆ ಖಾಸಗಿ ಕಂಪನಿ ತೆಕ್ಕೆಗೆ 7 ಬಿಡಿಎ ಕಾಂಪ್ಲೆಕ್ಸ್; ಆದಾಯದಲ್ಲಿ 70:30 ಪಾಲು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case I was never kidnapped and son has made a false complaint Video of victim goes viral
ಕ್ರೈಂ3 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ3 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ4 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ7 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ9 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ16 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಟ್ರೆಂಡಿಂಗ್‌